Headlines

ಡಿಕೆಶಿಗೆ ನಿಂದನೆ ಆರೋಪ: ‘ಕೈ’ ಕಾರ್ಯಕರ್ತರಿಂದ ಜನಾರ್ದನ ರೆಡ್ಡಿ ಮನೆಗೆ ಮುತ್ತಿಗೆ ಯತ್ನ – Kannada News | Congress Workers Protest at Janardhan Reddys Bengaluru Residence Following Remarks Against DCM DK Shivakumar

ಬೆಂಗಳೂರು, ಜನವರಿ 18: ಡಿಸಿಎಂ ಡಿ.ಕೆ.ಶಿವಕುಮಾರ್​​ಗೆ ಗಾಲಿ ಜನಾರ್ದನರೆಡ್ಡಿ ನಿಂದನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ರೇಸ್​ಕೋರ್ಸ್​ ರಸ್ತೆಯಲ್ಲಿರುವ ಶಾಸಕರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ನಡೆದಿದೆ. ಮನೋಹರ್ ನೇತೃತ್ವದಲ್ಲಿ ಜನಾರ್ದನರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ದಿಢೀರ್ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ರಕ್ಷಣೆ ನೀಡಲಾಗಿಲ್ಲ ಅಂದ್ರೆ ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ಬಳ್ಳಾರಿ ಸಮಾವೇಶದಲ್ಲಿ ಡಿಕೆಶಿ ಬಗ್ಗೆ ಜನಾರ್ದನರೆಡ್ಡಿ ಟೀಕೆ ಮಾಡಿದ್ದರು….

Read More

ಮುಂಬೈನಲ್ಲಿ ವಿಜಯ, ಕಾಜಿರಂಗದಲ್ಲಿ ಸಂಭ್ರಮ, ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ ಎಂದ ಪ್ರಧಾನಿ ಮೋದಿ – Kannada News | Victory in Mumbai, Message From Kaziranga: PM Modi Takes Aim at Congress

ಅಸ್ಸಾಂ, ಜನವರಿ 18: ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನಭಾನುವಾರ ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ದೇಶವು ಕಾಂಗ್ರೆಸ್ ಪಕ್ಷದ ನಕಾರಾತ್ಮಕ ರಾಜಕೀಯವನ್ನು ತಿರಸ್ಕರಿಸುತ್ತಿದೆ ಎಂದರು. ಮುಂಬೈನಲ್ಲಿ ಕಾಂಗ್ರೆಸ್​ ಈಗ ನಾಲ್ಕನೇ ಅಥವಾ ಐದನೇ ಸ್ಥಾನದಲ್ಲಿರುವ ಪಕ್ಷವಾಗಿದೆ. ಕಾಂಗ್ರೆಸ್ ವರ್ಷಗಳ ಕಾಲ…

Read More

Mouni Amavasya: ಇಂದು ಮೌನಿ ಅಮಾವಾಸ್ಯೆ; ಮಹಿಳೆಯರು ತಪ್ಪದೇ ಈ ನಿಯಮ ಪಾಲಿಸಿ – Kannada News | Mouni Amavasya: House Purity, Positive Energy and Women’s Spiritual Practices

ಮೌನಿ ಅಮಾವಾಸ್ಯೆಯಂದು ಮನೆಯನ್ನು ಶುದ್ಧ ಮತ್ತು ಪವಿತ್ರವಾಗಿಡುವುದು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ. ಪೂಜಾ ಸ್ಥಳ, ಅಂಗಳ, ಅಡುಗೆಮನೆ ಮತ್ತು ಎಲ್ಲಾ ಸಾಮಾನ್ಯ ಪ್ರದೇಶಗಳನ್ನು ಒಳಗೊಂಡಂತೆ ಈ ದಿನ ಇಡೀ ಮನೆಯನ್ನು ವಿಶೇಷವಾಗಿ ಸ್ವಚ್ಛಗೊಳಿಸಬೇಕು. ಇದು ಬಾಹ್ಯ ಶುಚಿತ್ವವನ್ನು ಮಾತ್ರವಲ್ಲದೆ, ಆಂತರಿಕ ಶುದ್ಧೀಕರಣ ಮತ್ತು ಮಾನಸಿಕ ಸ್ಥಿರತೆಯನ್ನು ಸಂಕೇತಿಸುತ್ತದೆ. ದೀಪಗಳನ್ನು ಬೆಳಗಿಸಿ, ಧೂಪದ್ರವ್ಯ ಮತ್ತು ಅಗರಬತ್ತಿಗಳನ್ನು ಬಳಸಿ, ಮತ್ತು ಎಲ್ಲಾ ಕುಟುಂಬ ಸದಸ್ಯರು ಸಾಮೂಹಿಕ ಧ್ಯಾನ ಮತ್ತು ಜಪದಲ್ಲಿ ಭಾಗವಹಿಸುವಂತೆ ಮಾಡಿ. ವಿಶೇಷವಾಗಿ ಮಹಿಳೆಯರು ಸಾತ್ವಿಕ ಆಹಾರವನ್ನು ಸೇವಿಸಬೇಕು…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 18: ಈ ವಾರ ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆ (Gold Rate), ವಾರಾಂತ್ಯದಲ್ಲಿ ಗ್ರಾಮ್​ಗೆ 35 ರೂ ಹೆಚ್ಚಿದೆ. ವಿದೇಶಗಳಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯೂ ತುಸು ಏರಿದೆ. ಗ್ರಾಮ್​ಗೆ 3 ರೂ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ….

Read More

4 ತಿಂಗಳು ಹೇಗೆ ಕಳೆಯಿತೋ ಗೊತ್ತಿಲ್ಲ; ಗಿಲ್ಲಿ ಕಾಮಿಡಿ ನೋಡಿ ಬಿಗ್ ಬಾಸ್ ವೀಕ್ಷಕರ ಮನದ ಮಾತು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ (BBK 12) ಅಂತಿಮ ಹಂತಕ್ಕೆ ಬಂದಿದೆ. ಇಂದು (ಜನವರಿ 18) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟ ಅವರು ವಿನ್ ಆಗುತ್ತಾರೆ ಎಂದು ಅವರ ಅಭಿಮಾನಿಗಳಿಗೆ ಶೇಕಡ 100ರಷ್ಟು ಭರವಸೆ ಇದೆ. ಮಂಡ್ಯದಲ್ಲಿ ಗಿಲ್ಲಿ ನಟ (Gilli Nata) ಅವರ ಬ್ಯಾನರ್​​ಗೆ ಎಳನೀರಿನ ಅಭಿಷೇಕ ಮಾಡಲಾಗಿದೆ. ‘ಡಮಾಲ್ ಡಿಮೀಲ್ ಡಕ್ಕಾ, ಗಿಲ್ಲಿ ಗೆಲ್ಲೋದು ಪಕ್ಕಾ’ ಎಂಬ ಸ್ಲೋಗನ್ ಎಲ್ಲ ಕಡೆಗಳಲ್ಲಿ ಕೇಳಿಬರುತ್ತಿದೆ. ‘ನಾವು ಪ್ರತಿ ದಿನ ಬಿಗ್ ಬಾಸ್…

Read More

16 ಭರ್ಜರಿ ಸಿಕ್ಸ್​: ಎಬಿಡಿಯ ವಿಶ್ವ ದಾಖಲೆಯ ಶತಕ – Kannada News | On This Day AB de Villiers Smashed 149 runs off 44 Balls

ಅಬ್ರಹಾಂ ಬೆಂಜಮಿನ್ ಡಿ ವಿಲಿಯರ್ಸ್ ಅಲಿಯಾಸ್ ಎಬಿಡಿ… ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ವಿಸ್ಫೋಟಕ ಸೆಂಚುರಿ ಸಿಡಿಸಿ ಇಂದಿಗೆ ಬರೋಬ್ಬರಿ 11 ವರ್ಷಗಳಾಗಿವೆ. ಜನವರಿ 18, 2015 ರಂದು ಜೋಹಾನ್ಸ್​ಬರ್ಗ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಎಬಿಡಿ ಕೇವಲ 31 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಷ್ಟೇ ಅಲ್ಲದೆ ಕೇವಲ 44 ಎಸೆತಗಳಲ್ಲಿ 16 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 149 ರನ್ ಬಾರಿಸಿ…

Read More

Hindu Rituals: ಭಾನುವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಕಷ್ಟ ತಪ್ಪಿದ್ದಲ್ಲ! – Kannada News | Sunday Blessings: Hindu Rituals and Prohibitions for Surya Dev Worship

ಹಿಂದೂ ಧರ್ಮದಲ್ಲಿ, ವಾರದ ಪ್ರತಿಯೊಂದು ದಿನವೂ ಒಂದಲ್ಲ ಒಂದು ದೇವತೆಗೆ ಮೀಸಲಾಗಿರುತ್ತದೆ. ಅದರಂತೆ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನದಂದು ಸೂರ್ಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಈ ತಿಂಗಳಲ್ಲಿ ಸೂರ್ಯ ಪೂಜೆಯನ್ನು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷಿಗಳ ಪ್ರಕಾರ, ಭಾನುವಾರ ಬೆಳಿಗ್ಗೆ ಸ್ನಾನ ಮಾಡಿದ ನಂತರ ಸೂರ್ಯನನ್ನು ಆರಾಧಿಸುವುದು ಮತ್ತು ಉಪವಾಸ ಮಾಡುವುದರಿಂದ ದೇವರ ಆಶೀರ್ವಾದ ಸಿಗುತ್ತದೆ. ಜೀವನದ ಎಲ್ಲಾ ದುಃಖಗಳು ದೂರವಾಗುತ್ತವೆ. ಹಿಂದೂ ಧರ್ಮಗ್ರಂಥಗಳು ಸೂರ್ಯ ನಾರಾಯಣನಿಗೆ ಮೀಸಲಾಗಿರುವ ಭಾನುವಾರದ ಕೆಲವು ನಿಯಮಗಳನ್ನು…

Read More

ಮಧ್ಯರಾತ್ರಿ ಊಟ ಆರ್ಡರ್, ಕೆಳಗೆ ಬನ್ನಿ ಅಂದ್ರೂ ಬಾರದ ಗ್ರಾಹಕ, ತಾನೇ ತಿಂದ ಜೊಮ್ಯಾಟೊ ಏಜೆಂಟ್ – Kannada News | Late Night Food Order Ends in Drama as Delivery Agent Eats Meal

ಗ್ರಾಹಕರೊಬ್ಬರು  ತಡರಾತ್ರಿ ಊಟ ಆರ್ಡರ್ ಮಾಡಿದ್ದರು, ಮನೆಯ ಬಳಿ ಹೋಗಿ ಕೆಳಗೆ ಬನ್ನಿ ಎಂದರೆ ಗ್ರಾಹಕರು ಬಾರದಿದ್ದಕ್ಕೆ ಬೇಸರಗೊಂಡು ಜೊಮ್ಯಾಟೊ ಡೆಲಿವರಿ ಏಜೆಂಟ್ ಆ ಊಟವನ್ನು ತಾವೇ ತಿಂದಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ಖುದ್ದಾಗಿ ಅಂಕುರ್ ಠಾಕೂರ್ ಎಂಬ ಡೆಲಿವರಿ ಏಜೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಮಧ್ಯರಾತ್ರಿ 2.30ರ ವೇಳೆಗೆ ಆಹಾರ ಆರ್ಡರ್ ಮಾಡಿದ್ದರು, ರಾತ್ರಿ ಹೊತ್ತು ಬೈಕ್​ ಹೊರಗೆ ನಿಲ್ಲಿಸಿ ಮೇಲಿನ ಮಹಡಿವರೆಗೆ ನಡೆದುಕೊಂಡು ಹೋದರೆ ವಾಪಸ್ ಬರುವಷ್ಟರಲ್ಲಿ ಬೈಕ್ ಅಲ್ಲೇ ಇರುತ್ತೆ…

Read More

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಸಿಬ್ಬಂದಿಯ ಮೇಲೇ ಹಲ್ಲೆ – Kannada News | Bengaluru: Parappana Agrahara Jailer Assaulted Despite Strict Measures

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಬೆಂಗಳೂರು, ಜನವರಿ 18: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟಕ್ಕೆ ಮಿತಿಯಿಲ್ಲದಂತಾಗಿದೆ. ಇತ್ತೀಚೆಗಷ್ಟೇ  ಕೈದಿಗಳ ಐಷಾರಾಇ ಜೀವನದ ವೀಡಿಯೋಗಳು ವೈರಲ್ ಆಗಿದ್ದವು.  ಅದಲ್ಲದೇ  ಕೈದಿಗಳು ಜೈಲಿನಲ್ಲೇ ಮದ್ಯ ತಯಾರಿಸಿ, ಕುಡಿದಿದ್ದಕ್ಕೆ ಸಾಕ್ಷಿಯೂ ದೊರೆತಿತ್ತು.  ಈ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅದಲ್ಲದೆ ಹೊಸ ಡಿಜಿಪಿಯಾಗಿ ಅಲೋಕ್ ಕುಮಾರ್ (Alok kumar) ನೇಮಕಗೊಂಡ ಮೇಲೆ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿತ್ತು. ಹೀಗಿದ್ದರೂ ಕ್ಷುಲ್ಲಕ ಕಾರಣಕ್ಕೆ ಅಪರಾಧಿಗಳು ಜೈಲರ್…

Read More

ಜಿ.ಟಿ. ದೇವೇಗೌಡರಿಗೆ ಭರ್ಜರಿ ಶಾಕ್​​ ಕೊಡುತ್ತಾ ಜೆಡಿಎಸ್​​? ವರಿಷ್ಠರ ನಡೆಯೇನು? – Kannada News | GT Devegowda Shocked as JDS Prepares SR Mahesh for Chamundeshwari Election

ಜಿ.ಟಿ. ದೇವೇಗೌಡ ಮೈಸೂರು, ಜನವರಿ 18: ಜೆಡಿಎಸ್​​​ನಿಂದ ಈಗಾಗಲೇ ಸಾಕಷ್ಟು ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ. ದೇವೇಗೌಡಗೆ ಮತ್ತಷ್ಟು ಶಾಕ್​​ ಕೊಡಲು ಜಾತ್ಯತೀತ ಜನತಾದಳ ನಾಯಕರು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ JDSನಿಂದ ಸಾ.ರಾ.ಮಹೇಶ್ ಸ್ಪರ್ಧಿಸ್ತಾರೆ ಎಂದು ಮೈಸೂರಿನಲ್ಲಿ ಪರಿಷತ್​ನ ಜೆಡಿಎಸ್​ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಹೆಚ್​​.ಡಿ. ದೇವೇಗೌಡರ ನೇತೃತ್ವದಲ್ಲಿ ಸಭೆ ಇದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಾ.ರಾ.ಮಹೇಶ್​ ಒಪ್ಪಿದ್ದಾರೆ ಎಂದವರು ತಿಳಿಸಿದ್ದಾರೆ. ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ…

Read More