Headlines

Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ, ಇಂದು ಪ್ರಧಾನಿ ಜತೆ ಮಾತುಕತೆ – Kannada News | Marco Rubio Lands in Kolkata Ahead of Key Meeting With Narendra Modi

ಕೋಲ್ಕತ್ತಾ, ಮೇ 23: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಶನಿವಾರ ಕೋಲ್ಕತ್ತಾಗೆ ಆಗಮಿಸುವ ಮೂಲಕ ತಮ್ಮ ನಾಲ್ಕು ದಿನಗಳ ಮೊದಲ ಅಧಿಕೃತ ಭಾರತ ಪ್ರವಾಸವನ್ನು ಆರಂಭಿಸಿದ್ದಾರೆ. ಮೇ 23 ರಿಂದ 26 ರವರೆಗೆ ನಡೆಯಲಿರುವ ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ, ಇಂಧನ ಮತ್ತು ಇಂಡೋ-ಪೆಸಿಫಿಕ್ ಸಹಕಾರದ ಕುರಿತು ಕಾರ್ಯತಂತ್ರದ ಮಾತುಕತೆಗಳ ಮಧ್ಯೆ ಅತ್ಯಂತ ಮಹತ್ವ ಪಡೆದಿದೆ. ವಿಶೇಷವೆಂದರೆ, ಬರೋಬ್ಬರಿ 14 ವರ್ಷಗಳ ದೀರ್ಘ ಅವಧಿಯ ನಂತರ ಅಮೆರಿಕದ ವಿದೇಶಾಂಗ…

Read More

Video: ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ, ಸುಮಾರು ಅಂಗಡಿಗಳು ಭಸ್ಮ

ನವದೆಹಲಿ, ಮೇ 23: ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಶಾರುಖ್ ಸಹೋದರಿ ಯಾರು? ವಿವಾಹ ಆಗದೆ ಉಳಿಯಲು ಕಾರಣವಾಯ್ತು ಆ ಘಟನೆ – Kannada News | Shah Rukh Khan’s Pillar: Shahnaz Lalarukh Khan’s Untold Story and Private Life

ಸಹೋದರಿ ಹಾಗೂ ಕುಟುಂಬದ ಜೊತೆ ಶಾರುಖ್ ಖಾನ್ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ (Shah Rukh Khan) ಯಶಸ್ಸಿನ ಹಿಂದೆ ಅವರ ಕುಟುಂಬ ಇದೆ. ವಿಶೇಷವಾಗಿ ಅವರ ಅಕ್ಕ ಶಹನಾಜ್ ಖಾನ್, ಇಡೀ ಖಾನ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದಾರೆ. ಆದರೆ, ಅವರು ಯಾವಾಗಲೂ ಮಾಧ್ಯಮದ ಬೆಳಕಿನಿಂದ ಮತ್ತು ಜನಮನದಿಂದ ದೂರವಿರಲು ಬಯಸುತ್ತಾರೆ. ಅವರು ಈವರೆಗೆ ಮದುವೆ ಆಗಿಲ್ಲ. 1960 ರಲ್ಲಿ ಜನಿಸಿದ ಶಹನಾಜ್, ಶಾರುಖ್ ಖಾನ್ ಅವರಿಗಿಂತ ಸುಮಾರು ಐದರಿಂದ ಆರು ವರ್ಷ ದೊಡ್ಡವರು. ಶಹನಾಜ್…

Read More

Tv9 Kannada news live: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಅದ್ಧೂರಿ ಸ್ವಾಗತಕ್ಕೆ ಬ್ರೇಕ್​! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Tv9 Kannada news live: Nitin Nabin Karnataka Visit, Fuel Price Hike and PM Modi’s Rozgar Mela Updates

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಅದ್ಧೂರಿ ಸ್ವಾಗತಕ್ಕೆ ಬ್ರೇಕ್​! ಬೆಂಗಳೂರು, ಮೇ 23: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin nabin) ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಅವರ ಅದ್ಧೂರಿ ಸ್ವಾಗತಕ್ಕೆ ಬ್ರೇಕ್ ಹಾಕಲಾಗಿದೆ. ದೇಶಾದ್ಯಂತ ಇಂಧನ ದರಗಳ ಸತತ ಏರಿಕೆಯ ಬಿಸಿ ಹೆಚ್ಚಾಗಿದ್ದು, ಇಂದು ಸತತ ಮೂರನೇ ಬಾರಿಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಇಂದು ‘ರೋಜ್‌ಗಾರ್ ಮೇಳ’ದ ಮೂಲಕ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ…

Read More

Kalaburagi Accident: ಕಲಬುರಗಿಯ ಚಿತ್ತಾಪುರದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ಐವರ ದುರ್ಮರಣ – Kannada News | Kalaburagi Fatal Accident: 5 Family Members Dead in Chittapur Car Lorry Collision

ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತ(Accident)ದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಕುಟುಂಬದ ಸದಸ್ಯರೆಲ್ಲರೂ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಇವರ…

Read More

ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು – Kannada News | Jana Nayagan Release Nightmare: Vijay’s Last Film Faces Censorship, Piracy and Delay

ಕಾಲಿವುಡ್ ನಟ ದಳಪತಿ ವಿಜಯ್ ಅವರು (Thalapathy Vijay)  ತಮಿಳುನಾಡು ಸಿಎಂ ಆದ ಬೆನ್ನಲ್ಲೇ, ಅವರ ಕೊನೆಯ ಸಿನಿಮಾ ಎನ್ನಲಾದ ‘ಜನ ನಾಯಗನ್’ ಸಾಕಷ್ಟು ಕುತೂಹಲ ಮೂಡಿಸಿತ್ತು. ‘ಎರಡೇ ವಾರದಲ್ಲಿ ಸಿನಿಮಾ ಬರಲಿದೆ’ ಎಂದು ವಿಜಯ್ ಸಿಎಂ ಆದಾಗ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಘೋಷಣೆ ಮಾಡಿದ್ದರು. ಸಾಲು ಸಾಲು ವಿವಾದಗಳು ಮತ್ತು ಕಾನೂನು ಹೋರಾಟಗಳ ನಡುವೆಯೂ ಸಿನಿಮಾ ರಿಲೀಸ್ ದಿನಾಂಕ ಸ್ಪಷ್ಟವಾಗಿಲ್ಲ. ತಂಡ ಗೋಲ್ಡನ್ ಅವರ್​​ನ ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ ಬಾಕ್ಸ್ ಆಫೀಸ್ ಇತಿಹಾಸ…

Read More

IPL 2026: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ…

Read More

Bengaluru Air Quality: ಮಾಲಿನ್ಯ ಮುಕ್ತವಾಯ್ತು ಕರ್ನಾಟಕ! ಬೆಂಗಳೂರು, ಮೈಸೂರು, ಮಂಗಳೂರಿನ ಇಂದಿನ AQI ಎಷ್ಟು ಗೊತ್ತಾ? – Kannada News | Bengaluru AQI Today: Air Quality Levels in Karnataka Cities on May 23

ಬೆಂಗಳೂರು, ಮೇ 23: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ(AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ತೃಪ್ತಿಕರ ಮಟ್ಟದಲ್ಲಿ ದಾಖಲಾಗಿದೆ. ಮಳೆಯ ಕಾರಣದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮೈಸೂರು ಮತ್ತು ಮಂಗಳೂರು ನಗರಗಳಲ್ಲಿ ಅತ್ಯುತ್ತಮ ಶುದ್ಧ ಗಾಳಿ ವಾತಾವರಣವಿದೆ. ಬೆಂಗಳೂರಿನ ಇಂದಿನ…

Read More

Petrol Diesel Price Hike: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿಎಷ್ಟಿದೆ? – Kannada News | Petrol Diesel Price Hike: India Sees Third Increase in 10 Days, Bengaluru Rates Soar

ನವದೆಹಲಿ, ಮೇ 23: ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ಇದೇ ತಿಂಗಳು ಮೂರನೇ ಬಾರಿ ಏರಿಕೆ: ಇತ್ತೀಚಿನ ದಿನಗಳಲ್ಲಿ ತೈಲ ಕಂಪನಿಗಳು ಗ್ರಾಹಕರ ಮೇಲೆ ಸತತವಾಗಿ ಇಂಧನ ಹೊರೆಯನ್ನು ಹಾಕುತ್ತಿವೆ. ಈ ವಾರದ ಆರಂಭದಲ್ಲಷ್ಟೇ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ತೈಲ…

Read More

‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್​​ಲಾಲ್ ಚಿತ್ರ – Kannada News | Drishyam 3 Box Office: Mohanlal’s Thriller Hits 76 Cr in 2 Days, Nears 100 Cr Mark

ಮಲಯಾಳಂ ಚಿತ್ರರಂಗದ ಇತಿಹಾಸದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ಎಂದರೆ ಅದು ‘ದೃಶ್ಯಂ’. ಈಗ ಈ ಸರಣಿಯಲ್ಲಿ ಮೂರನೇ ಭಾಗ ರಿಲೀಸ್ ಆಗಿ,ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಮ್ಯಾಜಿಕಲ್ ಕಾಂಬಿನೇಷನ್ ಮತ್ತೊಮ್ಮೆ ಕಮಾಲ್ ಮಾಡಿದೆ. ‘ದೃಶ್ಯಂ 3’ ಸಿನಿಮಾ (Drishaym 3 Movie) ಕೇವಲ ಎರಡೇ ದಿನಗಳಲ್ಲಿ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಕಲೆಕ್ಷನ್ ಮಾಡಿದೆ. ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರ, ಕೇವಲ…

Read More