Category Archives: Blog

Your blog category

ಶತಕಗಳ ಮೇಲೆ ಶತಕ… ಬಿಗ್ ಬ್ಯಾಷ್​ನಲ್ಲಿ ಹೊಸ ದಾಖಲೆ ನಿರ್ಮಾಣ

Source link

ಬಿಜೆಪಿ ಸಂಸದ ಮನೋಜ್ ತಿವಾರಿ ಮನೆಯಲ್ಲಿ ಕಳ್ಳತನ – Kannada News | BJP MP Manoj Tiwari’s Mumbai Home Theft, former worker Arrested, Rs 5.4 Lakh Stolen

ಮುಂಬೈ, ಜನವರಿ 18: ಬಿಜೆಪಿ ಸಂಸದ ಮನೋಜ್ ತಿವಾರಿ(Manoj Tiwari) ಮನೆಯಲ್ಲಿ ಕಳ್ಳತನ(Theft) ನಡೆದಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ದೆಹಲಿಯ ಈಶಾನ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಪ್ರಸಿದ್ಧ ಗಾಯಕ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿದೆ. ಅಂಧೇರಿ ಪಶ್ಚಿಮದ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ಸುಂದರ್‌ಬನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಈ ಕಳ್ಳತನದಲ್ಲಿ ಕಳ್ಳರು 5.40 ಲಕ್ಷ ರೂ. ದೋಚಿದ್ದಾರೆ ಎಂಬುದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಅವರ ಮಾಜಿ ಕೆಲಸಗಾರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮನೋಜ್ ತಿವಾರಿ ಅವರ ಮ್ಯಾನೇಜರ್ ಪ್ರಮೋದ್ ಜೋಗೇಂದ್ರ ಪಾಂಡೆ ಈ ಸಂಬಂಧ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸುರೇಂದ್ರ ಕುಮಾರ್ ದೀನನಾಥ್ ಶರ್ಮಾ ಅವರನ್ನು ಬಂಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ಕೆಲಸದಿಂದ ವಜಾಗೊಳಿಸಲಾಗಿತ್ತು.

ಪೊಲೀಸರ ಪ್ರಕಾರ, ಸಿಸಿಟಿವಿ ದೃಶ್ಯಗಳ ಮೂಲಕ ಆರೋಪಿಯನ್ನು ಗುರುತಿಸಲಾಗಿದೆ. ತನಿಖೆಯಲ್ಲಿ ಆರೋಪಿಗಳು ಕಳ್ಳತನಕ್ಕೆ ನಕಲಿ ಕೀಲಿಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಮೋದ್ ಪಾಂಡೆ ಕಳೆದ 20 ವರ್ಷಗಳಿಂದ ಮನೋಜ್ ತಿವಾರಿ ಅವರ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು ಎಂದು ಅಂಬೋಲಿ ಪೊಲೀಸರು ತಿಳಿಸಿದ್ದಾರೆ. ಮನೆಯ ಒಂದು ಕೋಣೆಯಲ್ಲಿ ಇರಿಸಲಾಗಿದ್ದ ಒಟ್ಟು 5.40 ಲಕ್ಷ ರೂ. ನಗದು ಕಳವಾಗಿದೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗದಲ್ಲಿ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ಮಾಜಿ ಪೊಲೀಸರ ಮನೆಯೇ ಈ ಕಳ್ಳರಿಗೆ ಟಾರ್ಗೆಟ್

ಇದರಲ್ಲಿ 4.40 ಲಕ್ಷ ರೂ. ಜೂನ್ 2025 ರಲ್ಲಿ ಕಪಾಟಿನಿಂದ ಕಣ್ಮರೆಯಾಗಿತ್ತು, ಆದರೆ ಆ ಸಮಯದಲ್ಲಿ ಕಳ್ಳನನ್ನು ಗುರುತಿಸಲಾಗಿರಲಿಲ್ಲ. ಕಳ್ಳತನವನ್ನು ಭೇದಿಸಲು, ಡಿಸೆಂಬರ್ 2025 ರಲ್ಲಿ ಮನೆಯೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಯಿತು. ಜನವರಿ 15, 2026 ರಂದು ರಾತ್ರಿ 9 ಗಂಟೆ ಸುಮಾರಿಗೆ ದಾಖಲಾದ ದೃಶ್ಯಗಳಲ್ಲಿ, ಮಾಜಿ ಉದ್ಯೋಗಿ ಸುರೇಂದ್ರ ಕುಮಾರ್ ಶರ್ಮಾ ಕಳ್ಳತನ ಮಾಡುತ್ತಿರುವುದು ಸೆರೆಯಾಗಿದೆ.

ಮನೆ, ಮಲಗುವ ಕೋಣೆ ಮತ್ತು ಕ್ಲೋಸೆಟ್‌ನ ನಕಲಿ ಕೀಲಿಗಳನ್ನು ಅವನ ಬಳಿ ಇದ್ದಿದ್ದನ್ನು ದೃಶ್ಯಗಳಲ್ಲಿ ತೋರಿಸಲಾಗಿದೆ. ಆರೋಪಿಯು ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರಿಗೆ ಮಾಹಿತಿ ನೀಡಲಾಯಿತು ಮತ್ತು ಅಂಬೋಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಬಂಧಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Optical Illusion: ಜೀಬ್ರಾಗಳ ನಡುವೆ ಅಡಗಿರುವ ಸಿಂಹವನ್ನು ನೀವು ಗುರುತಿಸಬಲ್ಲಿರಾ – Kannada News | Optical Illusion: If you are a genius, spot the lion hiding among the zebras

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಈ ಒಗಟಿನ ಚಿತ್ರಗಳು ನೋಡಲು ಸುಲಭದಾಯಕವಾಗಿ ಕಂಡರೂ ಅಷ್ಟೇ ಕಷ್ಟಕರವಾಗಿರುತ್ತದೆ. ಇದೀಗ ನಿಮ್ಮ ಯೋಚನಾ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸುವ ಸಮಯ. ಜೀಬ್ರಾಗಳ ನಡುವೆ ಅಡಗಿ ಕುಳಿತಿರುವ ಸಿಂಹವನ್ನು 8 ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ.

ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡುವುದು ಸಹಜ. ಈ ಚಿತ್ರ ಕೂಡ ಹಾಗೆಯೇ ಇದ್ದು, ಈ ಕಾಡಿನಲ್ಲಿ ಜೀಬ್ರಾಗಳ ಗುಂಪೊಂದಿದೆ. ಆದರೆ ಈ ಚಿತ್ರದಲ್ಲೇ ಸಿಂಹವು ಜಾಣತನದಿಂದ ಅಡಗಿ ಕುಳಿತಿದೆ. ನೀವು ಕೇವಲ 8 ಸೆಕೆಂಡುಗಳಲ್ಲಿ ಆ ಸಿಂಹವನ್ನು ಪತ್ತೆ ಹಚ್ಚಿ ಬುದ್ಧಿವಂತರು ಎನಿಸಿಕೊಳ್ಳಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕೋಳಿ ಮರಿಯನ್ನು ಹುಡುಕಬಲ್ಲಿರಾ

ಸಿಂಹವನ್ನು ಗುರುತಿಸಲು ಸಾಧ್ಯವಾಯಿತೇ?

ಈ ಒಗಟಿನ ಆಟಗಳು ಟೈಮ್‌ ಪಾಸ್‌ ಮಾಡುವ ಜೊತೆಗೆ ಮೆದುಳಿಗೆ ಕೆಲಸ ನೀಡುತ್ತದೆ. ನೀವು ಈ ಒಗಟು ಬಿಡಿಸುವ ಸವಾಲು ಸ್ವೀಕರಿಸಿ ಸೋತಿದ್ದೀರಬಹುದು. ಆದರೆ ಹೆಚ್ಚು ಚಿಂತಿಸಬೇಡಿ, ನಾವು ನಿಮಗೆ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಸಿಂಹ ಎಲ್ಲಿದೆ ಎಂದು ನಾವು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್​: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ! – Kannada News | Elderly Couple Left on the Street After Home Locked by Private Finance in Hassan

ಹಾಸನ, ಜನವರಿ 18: ರಾಜ್ಯದಲ್ಲಿ ಖಾಸಗಿ ಫೈನಾನ್ಸ್​​ಗಳ ಹಾವಳಿ ಮಿತಿ ಮೀರುತ್ತಿದ್ದು, ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಂದ ಅಮಾನವೀಯ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ. ಸಾಲ ಕಟ್ಟಿಲ್ಲ ಎಂದು ವೃದ್ಧ ದಂಪತಿ ಸಣ್ಣಯ್ಯ(80), ಜಯಮ್ಮ(75)ರನ್ನ ಫೈನಾನ್ಸ್​​ ಸಿಬಂದಿ ಹೊರಹಾಕಿದ್ದು, ಕೊರೆಯುವ ಚಳಿಯಲ್ಲೇ ಬೀದಿಯಲ್ಲಿ ವಾಸಮಾಡಬೇಕಾದ ಸ್ಥಿತಿ ಉದ್ಭವಿಸಿದೆ. ಕೋರ್ಟ್ ಆದೇಶ ಎಂದು ಮನೆ ಹಾಗೂ ಕೊಟ್ಟಿಗೆಗೂ ಬೀಗ ಹಾಕಿರುವ ಆರೋಪ ಕೇಳಿಬಂದಿದೆ.

2023ರಲ್ಲಿ ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಮನೆ ಅಡಮಾನ ಇಟ್ಟು ಖಾಸಗಿ ಫೈನಾನ್ಸ್​ ಬಳಿ 2 ಲಕ್ಷ ರೂ. ಸಾಲವನ್ನು ವೃದ್ಧ ದಂಪತಿ ಪಡೆದಿದ್ದರು. ಒಂದು ವರ್ಷ ಸಾಲದ ಕಂತುಕೂಡ ಕಟ್ಟಿದ್ದರು ಎನ್ನಲಾಗಿದ್ದು, ಫೈನಾನ್ಸ್ ಕಂಪನಿಯ ಅಮಾನವೀಯ ಕೃತ್ಯಕ್ಕೆ ಜನರ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದಿಂದ ಮನೆಯ ಹೊರಗೇ ವಾಸ ಮಾಡ್ತಿರೋ ದಂಪತಿ, ನಾವು ಸಾಲ ಕಟ್ಟುತ್ತೇವೆ ಸಮಯ ಕೊಡಿ ಎಂದು ಕೈ ಮುಗಿದು ಅಂಗಲಾಚುತ್ತಿದ್ದಾರೆ. ಜೊತೆಗೆ ಸಾಲ ತೀರಿಸಲು ತಮಗೆ ಯಾರಾದರೂ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು!

ಸಾಲ ನೀಡಿದ್ದ ಹಣ ವಾಪಸ್ಸು ಕೇಳಿದಕ್ಕೆ ಹಲ್ಲೆ ಆರೋಪ

ಸಾಲ ನೀಡಿದ್ದ ಹಣ ವಾಪಸ್ಸು ಕೇಳಿದಕ್ಕೆ ಸಂಬಂಧಿಕರಿಂದ ಮಹಿಳೆ ಮೇಲೆ ಹಲ್ಲೆ ಆರೋಪ ಹುಣಸೂರು ತಾಲೂಕಿನ ಹಳೆ ವಾರಂಚಿ ಗ್ರಾಮದಲ್ಲಿ ಕೇಳಿಬಂದಿದೆ. ನೀಲಮ್ಮ ಎಂಬ ಮಹಿಳೆ ಮೇಲೆ ಹಲ್ಲೆ ರವಿ, ಅಂಕಿತ, ರೋಷನ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಹಲ್ಲೆಗೊಳಗಾದ ನೀಲಮ್ಮ ಪತಿ ಶಿವರಾಜ್ ಭಾರತೀಯ ಸೇನೆಯಲ್ಲಿದ್ದು, ತಮ್ಮ ಸಂಬಂಧಿ ರವಿ ಪತ್ನಿ ಲೀಲಾವತಿಗೆ 10 ಸಾವಿರ ಹಣವನ್ನು ನೀಡಿದ್ದರು. ಹೀಗಾಗಿ ಪತಿ ನೀಡಿರುವ ಹಣ ಹಿಂತಿರುಗಿ ನೀಡುವಂತೆ ನೀಲಮ್ಮ ಕೇಳಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಏಕಾಏಕಿ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ನೀಲಮ್ಮ ತಲೆಗೆ ಪೆಟ್ಟಾಗಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Mouni Amavasya: ಇಂದು ಮೌನಿ ಅಮಾವಾಸ್ಯೆ; ಈ ದಿನದ ಮಹತ್ವ, ಪೂಜಾ ವಿಧಾನ ಹಾಗೂ ಶುಭ ಫಲಗಳ ಬಗ್ಗೆ ತಿಳಿಯಿರಿ – Kannada News | Mouni Amavasya: Significance, Rituals, and Benefits for Ancestral Blessings

ವರ್ಷದಲ್ಲಿ ಬರುವ ಅಮಾವಾಸ್ಯೆಗಳಲ್ಲಿ ಕೆಲವು ವಿಶೇಷ ಪ್ರಾಮುಖ್ಯತೆ ಪಡೆದಿರುತ್ತವೆ. ಅಂತಹ ಒಂದು ಅಮಾವಾಸ್ಯೆಯೇ ಮೌನಿ ಅಮಾವಾಸ್ಯೆ. ಇದನ್ನು ಮಾಘ ಮಾಸದಲ್ಲಿ ಬರುವುದರಿಂದ ಮಾಘ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಈ ಅಮಾವಾಸ್ಯೆಯು ಭಾನುವಾರ ಬಂದರೆ ಅದರ ಪ್ರಾಶಸ್ತ್ಯ ಮತ್ತಷ್ಟು ಹೆಚ್ಚುತ್ತದೆ. ಇಂದು(ಜ.18) ರ ಭಾನುವಾರದಂದು ಬಂದಿರುವುದರಿಂದ ಇದು ಇನ್ನಷ್ಟು ವಿಶೇಷವಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಮೌನಿ ಅಮಾವಾಸ್ಯೆಯನ್ನು ಪೂರ್ವಿಕರಿಗೆ ಸಮರ್ಪಿತವಾದ ದಿನವೆಂದು ಪರಿಗಣಿಸಲಾಗುತ್ತದೆ. ಮಹಾಲಯ ಅಮಾವಾಸ್ಯೆಯಂದು ನಾವು ಪೂರ್ವಿಕರಿಗೆ ಶ್ರಾದ್ಧ, ತರ್ಪಣಗಳನ್ನು ಅರ್ಪಿಸಿದರೆ, ಮೌನಿ ಅಮಾವಾಸ್ಯೆಯಂದು ಪೂರ್ವಿಕರು ಸಾಕ್ಷಾತ್ ನಮ್ಮನ್ನು ನೋಡಲು, ಕನಸುಗಳಲ್ಲಿ ಬರಲು ಮತ್ತು ನಮಗೆ ಮಾರ್ಗದರ್ಶನ ನೀಡಲು ಬರುತ್ತಾರೆ ಎಂದು ನಂಬಲಾಗಿದೆ. ನಮ್ಮ ಹಿರಿಯರು, ಅಥವಾ ಅಗಲಿದ ಆತ್ಮಗಳು ಈ ದಿನ ನಮ್ಮ ಸುತ್ತಲೂ ಇರಬಹುದು. ಅವರು ನಮ್ಮ ಜೀವನದಲ್ಲಿನ ಲೋಪದೋಷಗಳನ್ನು ಸರಿಪಡಿಸಲು, ಆಯುರಾರೋಗ್ಯ ನೀಡಲು ಮತ್ತು ದುಷ್ಟ ಶಕ್ತಿಗಳನ್ನು ಹೋಗಲಾಡಿಸಲು ಸಹಕರಿಸುತ್ತಾರೆ.

ಪೂರ್ವಿಕರನ್ನು ತೃಪ್ತಿಪಡಿಸಲು ಹಲವಾರು ಮಾರ್ಗಗಳಿವೆ. ಈ ದಿನ ನಾವು ದಾನ ಮಾಡುವ ಮೂಲಕ ಬೇರೆಯವರ ಮನಸ್ಸನ್ನು ಸಂತೃಪ್ತಿಪಡಿಸಿದರೆ, ನಮ್ಮ ಪೂರ್ವಿಕರು ಕೂಡ ಸಂತೃಪ್ತರಾಗುತ್ತಾರೆ. ಅನಾಥರು, ಅಶಕ್ತರು, ಪುಟ್ಟ ಮಕ್ಕಳು, ದೀನದಲಿತರು, ರೋಗಿಗಳು, ವೃದ್ಧರಿಗೆ ಕೈಲಾದ ಸಹಾಯ ಅಥವಾ ಮಾರ್ಗದರ್ಶನ ಮಾಡುವುದು ಅತ್ಯಂತ ಪುಣ್ಯದ ಕಾರ್ಯ. ಇಂತಹ ದಾನ ಕಾರ್ಯಗಳು ನಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತವೆ.

ಈ ಮಾಘ ಅಮಾವಾಸ್ಯೆಯಂದು ಸ್ನಾನಕ್ಕೆ ವಿಶೇಷ ಪ್ರಾಶಸ್ತ್ಯವಿದೆ. “ಗಂಗೇ ಚ ಯಮುನೇ ಚೈವ ಗೋದಾವರಿ ಸರಸ್ವತಿ. ನರ್ಮದೇ ಸಿಂಧು ಕಾವೇರಿ ಜಲಸ್ಮಿನ್ ಸನ್ನಿಧಿಂ ಕುರು” ಎಂಬ ಮಂತ್ರವನ್ನು ಪಠಿಸುತ್ತಾ ಸಪ್ತ ನದಿಗಳನ್ನು ಸ್ಮರಿಸಿ ಸ್ನಾನ ಮಾಡಬೇಕು. ಸ್ನಾನ ಮಾಡುವ ನೀರಿನಲ್ಲಿ ಸ್ವಲ್ಪ ಅರಿಶಿಣ ಮತ್ತು ಉಪ್ಪನ್ನು ಸೇರಿಸಿದರೆ ಬಹಳಷ್ಟು ಶುಭ ಫಲಗಳು ಲಭಿಸುತ್ತವೆ. ಈ ಸ್ನಾನವು ಹಲವು ಕಂಟಕಗಳಿಂದ ಮುಕ್ತಿ ನೀಡಿ, ಪಾಪಗಳ ಭಾರವನ್ನು ಕಡಿಮೆ ಮಾಡುತ್ತದೆ. ಮರಣಾನಂತರ ಮೋಕ್ಷ ಪಡೆಯಲು ಮೌನಿ ಅಮಾವಾಸ್ಯೆಯನ್ನು ಸಕ್ರಮವಾಗಿ ಆಚರಿಸುವುದು ಅಗತ್ಯ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಇದೇ ದಿನ ಭಗವದಾರಾಧನೆ, ದೇವರ ಪ್ರಾರ್ಥನೆ ಮತ್ತು ದೇವರ ಸ್ಮರಣೆ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಲಕ್ಷ್ಮೀ ಅಷ್ಟೋತ್ತರವನ್ನು ಕೇಳುವುದರಿಂದ ಸಾಕಷ್ಟು ಶುಭ ಫಲಗಳು ಮತ್ತು ಪೂರ್ವಿಕರ ಸಂಪೂರ್ಣ ಆಶೀರ್ವಾದ ಲಭಿಸುತ್ತದೆ. ಯಥಾವಿಧಿಯಾಗಿ ತರ್ಪಣ, ಶ್ರಾದ್ಧಗಳನ್ನು ಮಾಡುವುದರ ಜೊತೆಗೆ, ಪೂರ್ವಿಕರ ಆತ್ಮಗಳನ್ನು ತೃಪ್ತಿಪಡಿಸಲು ಹಣ್ಣುಗಳು, ತರಕಾರಿಗಳು, ಆಹಾರ ಪದಾರ್ಥಗಳು, ದವಸ ಧಾನ್ಯಗಳು, ಔಷಧಿಗಳು, ಹಾಲು, ಮೊಸರನ್ನು ವಿಪ್ರರು, ಬ್ರಾಹ್ಮಣರು ಅಥವಾ ಅರ್ಚಕರಿಗೆ ದಾನ ಮಾಡಬಹುದು. ಬೆಲ್ಲದ ಅನ್ನವನ್ನು ದಾನ ಮಾಡುವುದರಿಂದಲೂ ಒಳ್ಳೆಯದಾಗುತ್ತದೆ.

ಸಂಜೆ ಸಮಯದಲ್ಲಿ, ನಿಮ್ಮ ಪ್ರದೇಶದ ಮನೆಯ ಸಿಂಹದ್ವಾರದ ಎರಡು ಕಡೆಗಳಲ್ಲಿ ಪ್ಲಾಸ್ಟಿಕ್ ಬೌಲ್‌ನಲ್ಲಿ ಉಪ್ಪು ಹಾಕಿ, ಅದರ ಮೇಲೆ ಮೆಣಸನ್ನು ಇಡುವುದರಿಂದ ಮನೆಯಲ್ಲಿ ಶುಭ ವಾತಾವರಣ ಉಂಟಾಗುತ್ತದೆ. ಈ ಮೌನಿ ಅಮಾವಾಸ್ಯೆ ಪ್ರಾರ್ಥನೆ ಮತ್ತು ಪೂಜೆಗೆ ಅತ್ಯಂತ ಪ್ರಾಶಸ್ತ್ಯವಾದ ದಿನವಾಗಿದೆ. ಈ ದಿನ “ಓಂ ಶ್ರೀ ಲಕ್ಷ್ಮೀ ಗಣಪತಯೇ ನಮಃ” ಎಂಬ ಮಂತ್ರವನ್ನು ಜಪಿಸುವುದರಿಂದ ಎಲ್ಲವೂ ಉತ್ತಮವಾಗಿ ಆಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವಕಪ್ ಕ್ಯಾಚ್ ನೆನಪಿಸಿದ ವೈಭವ್ ಸೂರ್ಯವಂಶಿ

2024 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ಅನ್ನು ಯಾರು ತಾನೆ ಮರೆಯಲು ಸಾಧ್ಯ. ಅಂತಹದ್ದೇ ಕ್ಯಾಚ್ ಹಿಡಿಯುವ ಮೂಲಕ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದಿದ್ದಾರೆ. ಝಿಂಬಾಬ್ವೆಯಲ್ಲಿ ನಡೆದ ಅಂಡರ್-19 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದ್ದವು.

ಮೊದಲು ಬ್ಯಾಟ್ ಮಾಡಿದ ಭಾರತ ಅಂಡರ್-19 ತಂಡವು 48.5 ಓವರ್​ಗಳಲ್ಲಿ 238 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಬ್ಯಾಟಿಂಗ್​ಗೆ ಮಳೆ ಅಡ್ಡಿಪಡಿಸಿತು.

ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಬಾಂಗ್ಲಾದೇಶ್ ತಂಡಕ್ಕೆ 29 ಓವರ್​ಗಳಲ್ಲಿ 165 ರನ್​ಗಳ ಗುರಿ ನೀಡಲಾಯಿತು. ಈ ಗುರಿ ಬೆನ್ನತ್ತಿದ ಬಾಂಗ್ಲಾ ಪರ ಸಮ್ಯುನ್ ಬಸೀರ್ ಲಾಂಗ್ ಆಫ್​ನತ್ತ ಸಿಕ್ಸ್ ಬಾರಿಸಲು ಯತ್ನಿಸಿದ್ದರು.

ಈ ವೇಳೆ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ವೈಭವ್ ಸೂರ್ಯವಂಶಿ ಅತ್ಯುತ್ತಮವಾಗಿ ಚೆಂಡನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಇದೀಗ ಈ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ 165 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 28.3 ಓವರ್​ಗಳಲ್ಲಿ 146 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 18 ರನ್​ಗಳ ಭರ್ಜರಿ ಜಯ ಸಾಧಿಸಿದೆ.

 

Source link

ಕೊನೆಗೂ ನಿಜವಾಯ್ತಾ ನಂಬಿಕೆ?: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಬೃಹತ್​​ ಹಾವು ಪ್ರತ್ಯಕ್ಷ! – Kannada News | Snake Sighted in Lakkundi Village on the Third Day of Excavation

ಲಕ್ಕುಂಡಿಯಲ್ಲಿ ಉತ್ಖನನImage Credit source: Google

ಗದಗ, ಜನವರಿ 18: ಮನೆಗಾಗಿ ಅಡಿಪಾಯ ಮಾಡುವ ವೇಳೆ ಗದಗ ತಾಲೂಕಿನ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಹತ್ತಾರು ಬೆಳವಣಿಗೆಗಳು ನಡೆದು ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಲಾಗಿತ್ತು. ಅದರ ಭಾಗವಾಗಿ ಇಂದು ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿಯ ಆವರಣದಲ್ಲಿ ಮೂರನೇ ದಿನದ ಉತ್ಖನನದ ವೇಳೆ ಕಾರ್ಮಿಕರು ಬೆಚ್ಚಿಬೀಳುವಂತೆ ಘಟನೆಯೊಂದು ನಡೆದಿದೆ. ನಿಧಿಯನ್ನು ಸರ್ಪ ಕಾಯುತ್ತದೆ ಎಂಬ ನಂಬಿಕೆಗೆ ಕಾಕತಾಳೀಯವೆಂಬಂತೆ ಹಾವೊಂದು ಸ್ಥಳದಲ್ಲಿ ಪ್ರತ್ಯಕ್ಷವಾಗಿರೋದು ಕೆಲಸಗಾರರನ್ನು ಭೀತಿಗೊಳಿಸಿದೆ.

ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು. ಇಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಗ್ರಾಮಸ್ಥರು ಈ ಹಿಂದೆ ಹೇಳಿದ್ದರು. ನಿಧಿಯನ್ನು ಸರ್ಪ ಕಾಯುತ್ತೆ. ಹೀಗಾಗಿ ಅದರ ತಂಟೆಗೆ ಯಾರೂ ಹೋಗಬಾರದು ಎಂಬ ಅಭಿಪ್ರಾಯಗಳು ಕೆಳಿಬಂದಿದ್ದವು. ಈ ನಡುವೆ ಈಗ ಉತ್ಖನನದ ವೇಳೆ ಹಾವು ಪ್ರತ್ಯಕ್ಷವಾಗಿರೋದು ಗ್ರಾಮಸ್ಥರ ಆತಂಕ ಹೆಚ್ಚಿಸಿದೆ. ಹಾವು ನೋಡಿ ಜೆಸಿಬಿ ಚಾಲಕ ಗಾಬರಿ ಆಗಿದ್ದಾನೆ. ಹೀಗಾಗಿ ಲಕ್ಕುಂಡಿ ಗ್ರಾಮಕ್ಕೆ ಏನು ಕಂಟಕ ಕಾದಿದೆಯೋ ಎನ್ನುವ ಹೆದರಿಕೆ ಶುರುವಾಗಿರೋದಾಗಿ ಗ್ರಾಮಸ್ಥರು ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ

‘ಎಲ್ಲವೂ ಬರೀ ನಂಬಿಕೆ’

ಇನ್ನು ನಿಧಿಯನ್ನು ಸರ್ಪ, ಕಾಡೆಮ್ಮೆ ಕಾಯುತ್ತದೆ ಎನ್ನುವುದು ಬರೀ ನಂಬಿಕೆ. ವೈಜ್ಞಾನಿಕವಾಗಿ ಇದು ಸಾಬೀತಾಗಿಲ್ಲ. ಉತ್ಖನನ ಮಾಡುವ ಅಧಿಕಾರಿಗಳಿಗೂ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಟಿವಿ9ಗೆ ಇತಿಹಾಸ ತಜ್ಞ ಡಾ. ಶೆಲ್ವಪಿಳೈ ಅಯ್ಯಂಗಾರ್ ತಿಳಿಸಿದ್ದಾರೆ. ರಕ್ತ ಕಾರಿಕೊಂಡು ಸಾಯುತ್ತಾರೆ, ಕೆಟ್ಟದಾಗುತ್ತದೆ ಇದೆಲ್ಲವೂ ನಂಬಿಕೆ ಅಷ್ಟೇ. ಕೇರಳದ ಅನಂತ ಪದ್ಮನಾಭ ದೇಗುಲದ ನಿಧಿ ವಿಚಾರದಲ್ಲೂ ದಿಗ್ಬಂಧನ ಎಂದು ಏನೂ ಇಲ್ಲ. ಬಾಕಿ ಇರುವ ಬಾಗಿಲು ತೆಗೆಯುವ ವಿಧಾನ ಗೊತ್ತಾಗಿಲ್ಲ ಅಷ್ಟೇ. ಎಲ್ಲವೂ ಕೇಳಿರುವುದು, ನಾವು ಯಾರೂ ನೋಡಿಲ್ಲ. ಹಿಂದೆ ನಿಧಿ ಹಾಗೂ ಟಂಕ ಶಾಲೆಯನ್ನು ಊರಿನ ಹೊರಗೆ ಇಡುತ್ತಿದ್ದರು. ರಾಜ್ಯದ ಮೇಲೆ ದಾಳಿಯಾದರೂ ಅವುಗಳ ರಕ್ಷಣೆಗೆ ಈ ಕ್ರಮ ಅನುಸರಿಸಲಾಗುತ್ತಿತ್ತು ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗಿಲ್ಲಿ ನಟ ಏನ್ ಮಾಡಿದ್ದಾನೆ? ಅಶ್ವಿನಿ ಗೌಡ ಪ್ರಶ್ನೆಗೆ ಉತ್ತರ ಕೊಟ್ಟ ಪಳಾರ್ ಫ್ಯಾನ್ಸ್ – Kannada News | Bigg Boss Kannada Season 12: Gilli Nata fans from Mysore gives counter reaction to Ashwini Gowda

ಈವರೆಗೂ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋನ 12 ಸೀಸನ್​​ಗಳು ನಡೆದಿವೆ. ಇಷ್ಟು ಸೀಸನ್​​ಗಳ ಪೈಕಿ ಅತಿ ಹೆಚ್ಚು ಕ್ರೇಜ್ ಸೃಷ್ಟಿಸಿದ ಸ್ಪರ್ಧಿ ಎಂದರೆ ಅದು ಗಿಲ್ಲಿ ನಟ. ಕಾಮಿಡಿ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಗಿಲ್ಲಿ ನಟ (Gilli Nata) ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ನಟ ಬಿಗ್ ಬಾಸ್ ಮನೆಯಲ್ಲಿ ಏನು ಮಾಡಿದ್ದಾನೆ ಎಂದು ಅಶ್ವಿನಿ ಗೌಡ (Ashwini Gowda) ಅವರು ಪ್ರಶ್ನೆ ಮಾಡಿದ್ದರು. ಅವರಿಗೆ ಈಗ ಅಭಿಮಾನಿಗಳೇ ಈ ವಿಡಿಯೋ ಮೂಲಕ ಉತ್ತರ ನೀಡಿದ್ದಾರೆ. ದಿನದಿಂದ ದಿನಕ್ಕೆ ಗಿಲ್ಲಿ ನಟ ಅವರ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವೇತನ ಹಿಂಬಾಕಿಗೆ ಡಿಮ್ಯಾಂಡ್​​: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ – Kannada News | Karnataka KSRTC Workers to Protest on Jan 29 Over 38 Months Salary Arrears

ಬೆಂಗಳೂರು, ಜನವರಿ 18: ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದು, ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಂಗಳೂರು ಚಲೋಗೆ ಕರೆನೀಡಿದ್ದಾರೆ. ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದ್ದು, ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಂಟಿಕ್ರಿಯಾ ಸಮಿತಿ ಪತ್ರ ಬರೆದಿದೆ. 38 ತಿಂಗಳ ವೇತನ ಹಿಂಬಾಕಿ ನೀಡುವಂತೆ ಹಾಗೂ 01.01.2024ರಿಂದ 4 ವರ್ಷಗಳ ವೇತನಕ್ಕೆ ಬೇಡಿಕೆ ಇಡಲಾಗಿದ್ದು, ಪ್ರತಿಭಟನೆಯಲ್ಲಿ 4 ಸಾರಿಗೆ ನಿಗಮಗಳ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.ನೌಕರರ ಈ ಪ್ರತಿಭಟನೆ ಎಚ್ಚರಿಕೆಗೆ ಸಾರಿಗೆ ಇಲಾಖೆ ಯಾವ ರೀತಿಯಾಗಿ ಸ್ಪಂದಿಸುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ. ಪ್ರತಿಭಟನೆಯ ಮುನ್ನವೇ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡುತ್ತದೆಯೇ ಎಂದು ಕಾದು ನೋಡಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು! – Kannada News | Davangere Temple Robbery: Father Son Duo Arrested for Theft at Duggalli Anjaneya Temple

ಜಪ್ತಿ ಮಾಡಲಾದ ವಸ್ತುಗಳ ಜೊತೆ ಪೊಲೀಸರು

ದಾವಣಗೆರೆ, ಜನವರಿ 18: ಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆ ಪೈಕಿ ಇಬ್ಬರು ತಂದೆ ಮತ್ತು ಮಗ ಎಂಬುದು ಗೊತ್ತಾಗಿದ್ದು, ತಮಗೆ ಸಹಾಯಕನೋರ್ವನನ್ನು ಇವರು ನೇಮಿಸಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ.

ಶನಿವಾರ ಆಂಜನೇಯ ದೇಗುಲದಲ್ಲಿ ಕೈಚಳಕ ತೋರಿಸಿದ್ದ ಆಸಾಮಿಗಳು, ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಮತ್ತು ಚಿನ್ನದ ಆಭರಣ ಎತ್ತಿಕೊಂಡು ಪರಾರಿಯಾಗಿದ್ದರು. ಘಟನೆ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಆರೋಪಿಗಳು ತಗಲಾಕಿಕೊಂಡಿದ್ದಾರೆ. ವೀರೇಶ್​​ (64), ಶಿವಕುಮಾರ್​​ (26) ಮತ್ತು ಮಂಜುನಾಥ್ (40) ಬಂಧಿತರಾಗಿದ್ದು, ಆರೋಪಿಗಳಿಂದ 10.90 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ದೇಗುಲಗಳನ್ನೇ ಟಾರ್ಗೆಟ್​​ ಮಾಡಿ ಕದಿಯುತ್ತಿದ್ದರು ಎನ್ನಲಾಗಿದ್ದು, ಮಲೇಬೆನ್ನೂರಿನ ಶ್ರೀರಾಮ ದೇವಸ್ಥಾನ ಸೇರಿದಂತೆ ಹತ್ತಾರು ದೇವಸ್ಥಾನ ಗಳಲ್ಲಿ ಕಳ್ಳತನ ಮಾಡಿದ್ದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.

ಇದನ್ನೂ ಓದಿ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು

ಇನ್ನು ಆರೋಪಿಗಳು ಕಳ್ಳತನ ಮಾಡಿದ ಬೆಳ್ಳಿಯನ್ನು ಕರಗಿಸಲು ಪ್ರಯತ್ನಿಸಿದ್ದು, ಈ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಪ್ರಕರಣ ಸಂಬಂಧ ಮಂಜುನಾಥ್​​ನನ್ನು ಮೊದಲು ಲಾಕ್​​ ಮಾಡಿದ್ದ ಪೊಲೀಸರು, ಆತನನ್ನು ತಮ್ಮದೇ ಸ್ಟೈಲ್​​ನಲ್ಲಿ ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದ. ಹಬ್ಬ ಅಥವಾ ಜಾತ್ರೆಗಳ ಮರುದಿನ ದೇಗುಲಗಳಲ್ಲಿ ದರೋಡೆ ಮಾಡೋದು ಇವರ ಕಾಯಕವಾಗಿದ್ದು, ಇವರ ಪ್ರಕಾರ ದೇವಸ್ಥಾನ ಕಳ್ಳತನ ಸ್ವಲ್ಪ ಸರಳ. ಭಕ್ತರ ವೇಷದಲ್ಲಿ ಹೋದರೆ ಆಯಿತು. ಯಾವುದನ್ನೂ ಹುಡುಕುವ ಅಗತ್ಯ ಇಲ್ಲ. ಆಭರಣಗಳು ದೇವರ ಮೈಮೇಲೆಯೇ ಇದ್ದರೆ, ಹುಂಡಿಯೂ ಕಣ್ಣಿಗೆ ಕಾಣುವ ರೀತಿ ಇರುತ್ತೆ ಎಂಬುದು ಆರೋಪಿಗಳ ಲೆಕ್ಕಾಚಾರವಾಗಿತ್ತು ಎನ್ನಲಾಗಿದೆ. ಆರೋಪಿಗಳು ಮೂಲತಃ ಹರಿಹರ ತಾಲೂಕಿನ ಶಂಷಿಪುರ ಗ್ರಾಮದವರಾಗಿದ್ದು, ಹಾಲಿ ದಾವಣಗೆರೆಯಲ್ಲಿ ವಾಸವಿದ್ದರು ಎಂಬುದು ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link