Category Archives: Blog

Your blog category

Karnataka Weather Forecast: ಉತ್ತರ ಕರ್ನಾಟಕಕ್ಕೆ ಆರೆಂಜ್ ಅಲರ್ಟ್​, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ – Kannada News | Heavy Rain Alert Karnataka: Bengaluru and 14 Districts on Yellow, North Receives Orange for Monsoon 2026

ಬೆಂಗಳೂರು, ಮೇ 23: ಕರ್ನಾಟಕದ ಅಲ್ಲಲ್ಲಿ ಈಗಾಗಲೇ ಮಳೆ(Rain) ಶುರುವಾಗಿದೆ. ಬೆಂಗಳೂರಿನಲ್ಲಿ ಮಳೆ ಇಲ್ಲದಿದ್ದರೂ ಮೋಡಕವಿದ ವಾತಾವರಣವಿದೆ. ಮುಂದಿನ ಎರಡು ದಿನ ಬೆಂಗಳೂರು ಸೇರಿ ಕರ್ನಾಟಕ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ, ಇನ್ನೂ ಎಷ್ಟು ಕಡೆ ಮಳೆಯಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಹಾಸನ, ಕೋಲಾರ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ತುಮಕೂರಿನ ವೈಎನ್ ಹೊಸಕೋಟೆಯಲ್ಲಿ ಭಾರಿ ಮಳೆಯಾಗಿದೆ, ದಾವಣಗೆರೆ, ಜಗಳೂರು, ಚಾಮರಾಜನಗರ, ನಾಯಕನಹಟ್ಟಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮದ್ದೂರು, ಸಿಂದಗಿ, ಮನಿರಾಬಾದ್, ಚಿತ್ರದುರ್ಗ, ಎಂಎಂ ಹಿಲ್ಸ್​, ಭರಮಸಾಗರ, ಶಕ್ತಿನಗರ, ಶಿರಾ, ಕುರ್ಡಿ, ಕಂಪ್ಲಿ, ಮಧುಗಿರಿ, ಪರಶುರಾಂಪುರ, ಹಿರಿಯೂರು, ಮುದ್ದೇಬಿಹಾಳ, ಗಂಗಾವತಿ, ಹೊಸಕೋಟೆ, ವಿಜಯಪುರ, ಮಂಗಳೂರು ಹಾಗೂ ಕೋಟದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ?

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 42.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಸಂಕಟದ ಅನಾವರಣ, ಅಲ್ಪ ಸ್ಪಂದನೆ – Kannada News | Horoscope Today, May 23, 2026: Saturday Dina Rashi Bhavishya; Check Your Zodiac Predictions Here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮಘಾ, ಯೋಗ : ವೃದ್ಧಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:09 – 10:45, ಯಮಗಂಡ ಕಾಲ 13:57 – 16:33, ಗುಳಿಕ ಕಾಲ 05:57 – 07:33.

ಮೇಷ ರಾಶಿ: ನಿಮಗೆ ಭರವಸೆ ಕೊಟ್ಟಷ್ಟೂ ತೃಪ್ತಿ ಇರದು. ಸ್ನೇಹಭಾವದಿಂದ ಎಲ್ಲರೊಂದಿಗೆ ವರ್ತಿಸಬಹುದು. ನಿಃಸ್ವಾರ್ಥ ಸೇವೆಗೆ ಅವಕಾಶ ಸಿಗಬಹುದು. ನಿಮ್ಮ ಧೈರ್ಯದಿಂದ ಹೊಸ ಉದ್ದಿಮೆ ಪ್ರಾರಂಭಿಸಬಹುದು. ಮನಸ್ಸು ಸ್ಥಿರವಾಗಿರಲು ವಿಶ್ರಾಂತಿ ಸಹಾಯ ಮಾಡುತ್ತದೆ. ಆಗದ ಕಾರ್ಯವನ್ನು ಮಾಡಿಕೊಡುವ ಆಶ್ವಾಸನೆ ಬೇಡ. ನಿಮ್ಮ‌ ನೀವು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳಲು ಇಷ್ಟಪಡುವಿರಿ. ಇಂದಿನ ಕಾರ್ಯಕ್ಕೆ ಸಮಯ ಸಾಲದೇ ಅರ್ಧಕ್ಕೇ ನಿಲ್ಲಿಸುವಿರಿ.

ವೃಷಭ ರಾಶಿ: ಸೃಜನಶೀಲತೆ ನಿಮ್ಮನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ಎಲ್ಲರ ಪ್ರೋತ್ಸಾಹ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇತ್ತೀಚೆಗೆ ನೀವು ಎದುರಿಸಿದ ಸಂಕಷ್ಟಗಳಿಂದ ಹೊರಬರಲು ಸಮಯ ಸಿಕ್ಕಿದೆ. ಸ್ನೇಹಿತರ ಬೆಂಬಲ ನಿಮಗೆ ಮುಖ್ಯವಾಗಿದೆ. ನಿಮ್ಮೆದುರು ಸ್ಪರ್ಧಿಸಲು ಸಮರ್ಥರು ಬಂದಾರು. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ಅತ್ಯುತ್ಸಾಹವು ನಿಮಗೆ ಹಾನಿಯನ್ನು ಉಂಟುಮಾಡೀತು.

ಮಿಥುನ ರಾಶಿ: ಅನ್ಯರು ಮಾಡಿದ ತಪ್ಪಿನಿಂದ ನಿಮಗೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಸಮಯಕ್ಕಿಂತ ಮುಂಚೆ ಯೋಜನೆಗಳನ್ನು ಮುಗಿಸಲು ಸಾಧ್ಯವಾಗುತ್ತದೆ. ಇತರರ ಸಲಹೆಗಳನ್ನು ಗೌರವದಿಂದ ಸ್ವೀಕರಿಸಿದರೆ ಅದು ನಿಮ್ಮ ಬಲವಾಗುತ್ತದೆ. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಅಧಿಕಪ್ರಸಂಗಿತನ ಬೇಡ. ಇನ್ನೊಬ್ಬರಿಂದ ಕೊಂಬೆ ನೋವಾಗುವುದು. ನಿಮ್ಮ ಪ್ರೀತಿಯು ಕೆಲವು ಗೊಂದಲವನ್ನು ಸೃಷ್ಟಿಸೀತು.

ಕರ್ಕಾಟಕ ರಾಶಿ: ನಿಮ್ಮ ವಸ್ತುಗಳನ್ನು ನವೀಕರಣ ಮಾಡಿಸಿಕೊಳ್ಳುವಿರಿ. ಪ್ರಕ್ಷುಬ್ದವಾಗಿದ್ದ ಮನಸ್ಸು ಸಮಾಧಾನಕ್ಕೆ ಬರಲಿದೆ. ನಿರ್ಧಾರಣಾ ಶಕ್ತಿ ಬೇರೆಯವರ ಸಲಹೆ ಕೇಳಲು ಅವಕಾಶವಿಲ್ಲದಂತೆ ಬೆಳೆಯಲಿ. ಇತರರ ಮೇಲೆ ನಿಮ್ಮ ಅಭಿಪ್ರಾಯ ಹೇರಬೇಡಿ. ಪ್ರೀತಿಯಲ್ಲಿ ನಿಮ್ಮ ಧೈರ್ಯ ಫಲ ಕೊಡಬಹುದು. ನೈಜ ಅಭಿಪ್ರಾಯ ಹೇಳಿದರೆ ಉತ್ತಮ ಪ್ರತಿಕ್ರಿಯೆ ಸಿಗುತ್ತದೆ. ಹಿರಿಯರಿಗೆ ಕೊಡುವ ಅಗೌರವವು ನಿಮಗೂ ಮುಳುವಾಗಬಹುದು ಎಂಬ ಆಲೋಚನೆ ಮನಸ್ಸಿನಲ್ಲಿ ಇರಬೇಕಾದೀತು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು.

ಸಿಂಹ ರಾಶಿ: ನಿಮಗೆ ಸಲ್ಲದ ಮಾತುಗಳು ನಿಮ್ಮೆದುರು ಬರಬಹುದು. ಏರುದನಿಯಲ್ಲಿ ಮಾತನಾಡುವುದು ಬೇಡ.‌ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ನಿಮಗೆ ಸಹಾಯ ಮಾಡುತ್ತದೆ. ಇತರರ ಆಸೂಯೆಯಿಂದ ದೂರವಿರಿ. ನಿಮ್ಮ ಹವ್ಯಾಸಗಳು ನಿಮಗೆ ಆತ್ಮಸಂತೃಪ್ತಿಯನ್ನು ನೀಡುತ್ತವೆ. ಮನಸ್ಸು ಸ್ಥಿರವಾಗಿರಲು ಈ ದಾರಿಯು ಸಹಾಯವಾಗಬಹುದು. ದಾಂಪತ್ಯದಲ್ಲಿ ಬಿರುಸಿನ ಮಾತುಗಳು ಕೇಳಿಬರಬಹುದು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನಿಮ್ಮ ನೇರವಾದ ಮಾತು ನಿಮಗಷ್ಟೇ ಚೆನ್ನಾಗಿದೆ ಎನ್ನಿಸಬಹುದು.

ಕನ್ಯಾ ರಾಶಿ: ದುಶ್ಚಟಗಳನ್ನು ಸ್ನೇಹಿತರು ನಿಮಗೆ ಗೊತ್ತಾಗದಂತೆ ಹಿಡಿಸಬಹುದು. ಸಣ್ಣ ತಪ್ಪಿಗೆ ಹೆಚ್ಚು ನಿಂದನೆ ಸಿಗಲಿದೆ. ನಿಮ್ಮ ಯೋಜನೆಗಳು ಸಮಯಕ್ಕೆ ಮುಕ್ತಾಯಗೊಳ್ಳುತ್ತವೆ. ಇತರರ ಅಭಿಪ್ರಾಯಗಳಿಗೆ ಸ್ಪಂದಿಸಿದರೆ ಪ್ರಗತಿ ಸಾಧ್ಯ. ಹೊಸ ಯೋಜನೆಗಳನ್ನು ಆರಂಭಿಸಲು ಇನ್ನೂ ಸಮಯ ಬಂದಿಲ್ಲ. ಕಾಲಹರಣ ಮಾಡಲು ಅನವಶ್ಯಕ ಮಾತುಗಳನ್ನು ಆಡುವಿರಿ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಳ್ಳಿ. ಸಾಮಾಜಿಕ ಕೆಲಸದಲ್ಲಿ ನೀವು ಕಳೆದುಹೋಗಬಹುದು.

ತುಲಾ ರಾಶಿ: ಯಾವುದಕ್ಕೂ ಕೂಡಲೇ ಫಲವು ಸಿಗದು. ಅದು ಸಿಗುವ ತನಕ ಪ್ರಯತ್ನವನ್ನು ಬಿಡಬೇಡಿ. ಅಮೂಲ್ಯ ವಸ್ತುಗಳ ಮೇಲೆ ಹೂಡಿಕೆ ಮಾಡುವಿರಿ. ವಿದ್ಯಾರ್ಥಿಗಳು ಶಿಕ್ಷಕರಿಂದ ಉಪದೇಶವನ್ನು ಪಡೆಯುವರು. ನಿಮ್ಮ ಶಕ್ತಿಯನ್ನು ಸಕಾರಾತ್ಮಕವಾಗಿ ಬಳಸಿದರೆ ಉತ್ತಮ ಫಲ ಸಿಗುತ್ತದೆ. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಧಾರ್ಮಿಕ ಭಾವವು ನಿಮ್ಮಲ್ಲಿ ಜಾಗರೂಕವಾಗಬಹುದು.

ವೃಶ್ಚಿಕ ರಾಶಿ: ಮೇಲಧಿಕಾರಿಗಳು ನಿಮ್ಮ ಕೆಲಸವನ್ನು ಮನಸಾರೆ ಮೆಚ್ಚುವರು. ಸಂಗಾತಿಯೊಂದಿಗೆ ಸಮಯ ಕಳೆಯುವ ಮೂಲಕ ಸಂತೋಷ ಸಿಗುತ್ತದೆ. ವೃತ್ತಿ ಮತ್ತು ಕುಟುಂಬ ನಡುವೆ ಸಮತೋಲನ ಕಾಯ್ದುಕೊಳ್ಳಿ. ಹಣವು ಖರ್ಚಾಗುವುದೆಂಬ ಆತಂಕ ಬೇಡ. ಅಧಿಕಾರವು ಕ್ಷಣಿಕ ಎಂಬ ಭಾವವು ನಿಮ್ಮೊಳಗೆ ಇರಲಿ. ಚಿಕ್ಕ ಕೆಲಸವನ್ನಾದರೂ ಬಹಳ ಅಚ್ಚುಕಟ್ಟಿನಿಂದ ಮಾಡಿಕೊಳ್ಳುವಿರಿ. ಕುಟುಂಬದ ಕಾರ್ಯದಿಂದ ಆಯಾಸವು ಬರಲಿದೆ. ಕೆಲವರ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟವಾದೀತು.

ಧನು ರಾಶಿ: ಮಕ್ಕಳಲ್ಲಿ ಹೊಂದಾಣಿಕೆ ಸ್ವಭಾವವನ್ನು ಬೆಳೆಸಬೇಕಾಗುವುದು. ನಿಮಗಾಗದವರು ನಿರ್ಮಿಸಿದ ಜಾಲಕ್ಕೆ ಬೀಳುವಿರಿ. ಭಾವನೆಗಳನ್ನು ಪ್ರೀತಿಪಾತ್ರರಿಗೆ ಮುಕ್ತವಾಗಿ ಹಂಚಿಕೊಳ್ಳಿ. ದೇಹಕ್ಕೆ ಉಂಟಾದ ಸಂಕಟಗಳನ್ನು ನಿವಾರಿಸಿ ವಿಶ್ರಾಂತಿ ಪಡೆಯಿರಿ. ಪ್ರೀತಿಯಲ್ಲಿ ಯಶಸ್ಸು ದೊರೆಯುವ ದಿನ ಇದಾಗಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ಆಗುತ್ತಿರುವ ಕೆಲಸಕ್ಕೆ ಅಡ್ಡಗಾಲು ಹಾಕಿ ದಿಕ್ಕು ತಪ್ಪಿಸುವುದು ಬೇಡ.

ಮಕರ ರಾಶಿ: ನಿಮ್ಮ ಮಕ್ಕಳ ನಿರೀಕ್ಷೆಗಳನ್ನು ಹುಸಿಗೊಳಿಸದೇ ಸಮಾಧಾನ ಮಾಡಿ. ದೊಡ್ಡ ವ್ಯಕ್ತಿಗಳೆಂದು ಯಾರಾದರೂ ಹೇಳಿ ನಿಮಗೆ ವಂಚಿಸಬಹುದು. ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ನಿಮ್ಮ ಶಕ್ತಿ ಇಂದು ಸಹಾನುಭೂತಿಯನ್ನೆ ನೀಡುತ್ತದೆ. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಉತ್ತಮ ಉದ್ಯೋಗವನ್ನು ಕಳೆದುಕೊಳ್ಳಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು.

ಕುಂಭ ರಾಶಿ: ನೀವು ಹೇಳದೇ ಇರುವ ರಹಸ್ಯವು ಇಂದು ನಿಮ್ಮಿಂದ ತಿಳಿಯಲಿದೆ. ಕೊಟ್ಟ ಹಣವು ಮತ್ತೆ ಬರುವ ನಿರೀಕ್ಷೆಯಲ್ಲಿ ಇರುವಿರಿ. ಆಹ್ವಾನವಿಲ್ಲದ ಕಡೆ ಹೋಗುವುದು ಬೇಡ. ಗುರಿಗಳನ್ನು ತಲುಪಲು ತಾಳ್ಮೆ ಮತ್ತು ಸೂಕ್ತ ಯೋಜನೆ ಅಗತ್ಯ. ವಿವಾಹದ ಮಾತುಕತೆಗೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಹಳೆಯ ಪರಿಚಯವು ನಿಮಗೆ ಹೊಸತಾಗಿ ಕಾಣಿಸುವುಸುದು.

ಮೀನ ರಾಶಿ: ಕಛೇರಿಯಲ್ಲಿ ಯಾರ ಜೊತೆಗಾದರೂ ಅನುಚಿತವಾಗಿ ವರ್ತಿಸಿದರೆ ಕಷ್ಟ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಗೊಂದಲಗಳು ಬರಬಹುದು. ಹೆಚ್ಚು ಪರಿಶ್ರಮ ಬೇಕಾದ ದಿನವಾಗಿದ್ದು, ಗುರಿ ತಲುಪಲು ದೃಢ ನಿಲುವು ಅಗತ್ಯ. ವಿದ್ಯಾಭ್ಯಾಸ ಪೂರ್ಣವಾದ ಸಂತಸದಲ್ಲಿ ಇರುವಿರಿ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ.

ಲೋಹಿತ ಹೆಬ್ಬಾರ್-8762924271 (what’s app only)

Source link

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ? – Kannada News | RCB vs GT Qualifier 1 IPL 2026: Date, Venue, Live Stream – All You Need to Know

ಐಪಿಎಲ್ 2026 (IPL 2026) ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್​ಗಳಿಂದ ಸೋತ ಆರ್​ಸಿಬಿ (SRH vs RCB) ಸೋಲಿನೊಂದಿಗೆ ಲೀಗ್ ಹಂತವನ್ನು ಮುಗಿಸಿತು. ಈ ಸೋಲಿನ ಹೊರತಾಗಿಯೂ ರಜತ್ ಪಾಟಿದರ್ ಪಡೆ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್​ಸಿಬಿ ಕ್ವಾಲಿಫೈಯರ್ 1 ಆಡುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿತು. ಈ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ಆರ್​ಸಿಬಿ ಕ್ವಾಲಿಫೈಯರ್ 1 ಆಡಲಿದೆ. ಕಳೆದ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕ್ವಾಲಿಫೈಯರ್ 1ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಆರ್​ಸಿಬಿ ಫೈನಲ್​ಗೇರಿತ್ತು. ಈ ಬಾರಿ ಆರ್​ಸಿಬಿಗೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಎದುರಾಗಲಿದೆ.

ಅಂಕಪಟ್ಟಿಯಲ್ಲಿ ಸ್ಥಾನ

ಲೀಗ್ ಹಂತದಲ್ಲಿ ಆರ್​ಸಿಬಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿತು. +0.783 ನೆಟ್ ರನ್​ರೇಟ್ ಹೊಂದಿರುವ ಆರ್​ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಅಂದರೆ +0.695 ಆಗಿರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿತು.

ಮೂರನೇ ಪಂದ್ಯದಲ್ಲಿ ಯಾರಿಗೆ ಗೆಲುವು?

ಇನ್ನು ಲೀಗ್ ಹಂತದಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆದ್ದರೆ, ಎರಡನೇ ಮುಖಾಮುಖಿಯಲ್ಲಿ ಗುಜರಾತ್ ಗೆಲುವು ಸಾಧಿಸಿತ್ತು. ಹೀಗಾಗಿ ಮೂರನೇ ಮುಖಾಮುಖಿಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಉಭಯ ತಂಡಗಳು ಕ್ವಾಲಿಫೈಯರ್ 1 ಗೆ ಅರ್ಹತೆ ಪಡೆದಿರುವ ಕಾರಣ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೇರಿದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಲಿದೆ. ಅಂದರೆ ಸೋತ ತಂಡಕ್ಕೆ ಫೈನಲ್​ಗೇರಲು ಮತ್ತೊಂದು ಅವಕಾಶ ಸಿಗಲಿದೆ.

SRH vs RCB IPL 2026 Highlights: ಸನ್​ರೈಸರ್ಸ್​ ವಿರುದ್ಧ 55 ರನ್​ಗಳಿಂದ ಸೋತ ಆರ್​ಸಿಬಿ

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಮೇ 26 ರ ಮಂಗಳವಾರದಂದು ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣ, ಧರ್ಮಶಾಲಾದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಎಷ್ಟು ಗಂಟೆಗೆ ಆರಂಭ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ 6:30ಕ್ಕೆ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯವನ್ನು ವೀಕ್ಷಿಸುವುದು ಹೇಗೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:49 pm, Fri, 22 May 26

Source link

SRH vs RCB: ಸನ್‌ರೈಸರ್ಸ್ ವಿರುದ್ಧ ಸೋತರೂ ಅಗ್ರಸ್ಥಾನದಲ್ಲೇ ಉಳಿದ ಆರ್​ಸಿಬಿ

ಐಪಿಎಲ್ 2026 ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಪಾಯಿಂಟ್ ಪಟ್ಟಿಯಲ್ಲಿ ಅಗ್ರ 2ರಲ್ಲಿ ಸ್ಥಾನ ಪಡೆಯಲು ಈ ಪಂದ್ಯದಲ್ಲಿ ಗೆಲ್ಲುವುದು ಉಭಯ ತಂಡಗಳಿಗೆ ಅತ್ಯಂತ ಮುಖ್ಯವಾಗಿತ್ತು. ಅದರಲ್ಲೂ ಸನ್‌ರೈಸರ್ಸ್ ಅಗ್ರಸ್ಥಾನಕ್ಕೇರಬೇಕೆಂದರೆ ಆರ್​ಸಿಬಿ ವಿರುದ್ಧ ಭಾರೀ ಅಂತರದ ಗೆಲುವು ದಾಖಲಿಸಬೇಕಿತ್ತು. ಆದರೆ ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿತ್ತಾದರೂ ಅಗ್ರ 2ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ 256 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಆರ್​ಸಿಬಿ ಕೊನೆಯ ಲೀಗ್ ಪಂದ್ಯದಲ್ಲಿ ಸೋಲಿಗೆ ಕೊರಳೊಡ್ಡಬೇಕಾಯಿತು.

Source link

ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ – Kannada News | KFCC President Jayamala announces Chandanavana Andu Indu Mundu Seminar to solve Kannada Cinema issues

ಕನ್ನಡ ಚಿತ್ರರಂಗಕ್ಕೆ (Kannada Film Industry) ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಂಡಳಿ ಅಧ್ಯಕ್ಷೆ ಜಯಮಾಲಾ (Jayamala) ಅವರು ಮಾಹಿತಿ ನೀಡಿದ್ದಾರೆ. ‘ಸಬ್ಸಿಡಿ, ಪ್ರಶಸ್ತಿ, ಪೈರಸಿ, ಒಟಿಟಿ, ಕಿರುತೆರೆ ಹಕ್ಕು ಮಾರಾಟ, ಚಿತ್ರಮಂದಿರಗಳು ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇವೆ. ಪ್ಯಾನ್ ಇಂಡಿಯಾ, ಎಐ ಕುರಿತ ಸಮಸ್ಯೆಗಳು ಸಹ ಎದುರಾಗಿವೆ. ಹಳೇ ನಿರ್ಮಾಪಕರು ಸಿನಿಮಾ ಮಾಡುತ್ತಿಲ್ಲ. ಆ ಬಗ್ಗೆ ಚಿಂತನ ಮಂಥನ ಆಗಬೇಕಿದೆ. ಹಾಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ’ ಎಂದು ಜಯಮಾಲಾ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಧಿಕ ಮಾಸದ ಎಫೆಕ್ಟ್: ಶುಭ ಸಮಾರಂಭಗಳಿಗೆ ಬ್ರೇಕ್; ಚಿಕ್ಕಬಳ್ಳಾಪುರದಲ್ಲಿ ತರಕಾರಿ ಬೆಲೆ ದಿಢೀರ್ ಕುಸಿತ – Kannada News | Adhika Masa Impact: Vegetable Prices Crash, Farmers Suffer Losses

ಎಪಿಎಂಸಿ ತರಕಾರಿ ಮಾರುಕಟ್ಟೆImage Credit source: tv9 kannada

ಚಿಕ್ಕಬಳ್ಳಾಪುರ, ಮೇ 22: ಅಧಿಕ ಮಾಸ (adhika masa) ಹಿನ್ನೆಲೆ ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾಗಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರದ (chikkaballapur) ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ (Vegetable Prices Down). ಯಾಕಾದರೂ ಈ ಅಧಿಕ ಮಾಸ ಬಂತೋ ಎಂದು ರೈತರು ಕಣ್ಣೀರಿಡುವಂತಾಗಿದೆ.

ಮುಖ್ಯಾಂಶಗಳು

  • ಅಧಿಕ ಮಾಸದ ಪರಿಣಾಮ ಚಿಕ್ಕಬಳ್ಳಾಪುರ ಮಾರುಕಟ್ಟೆ ಮೇಲೆ ಪ್ರಭಾವ
  • ತರಕಾರಿ ಬೆಲೆ ಕುಸಿತ: ರೈತರಿಗೆ ಭಾರೀ ನಷ್ಟ
  • ಗ್ರಾಹಕರಿಗೆ ಸಂತಸ, ರೈತರಿಗೆ ಕಣ್ಣೀರು

ಅಧಿಕ ಮಾಸ ಹಿನ್ನೆಲೆ ರಾಜ್ಯದ ಹಲವೆಡೆ ಮದುವೆ, ಗೃಹಪ್ರವೇಶ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಸ್ಥಗಿತಗೊಂಡಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಚಿಕ್ಕಬಳ್ಳಾಪುರದಿಂದ ರಾಜ್ಯ ಮಾತ್ರವಲ್ಲದೇ ದೇಶದ ವಿವಿಧ ಭಾಗಗಳಿಗೆ ಪ್ರತಿದಿನ ತರಕಾರಿಗಳ ರವಾನೆ ಆಗುತ್ತಿತ್ತು. ಆದರೆ ಇದೀಗ ಬೇಡಿಕೆ ಕಡಿಮೆಯಾದ ಕಾರಣ ತರಕಾರಿಗಳ ಬೆಲೆ ಇಳಿಕೆಯಾಗಿದೆ.

ತರಕಾರಿಗಳ ಇಂದಿನ ದರ ಸರಣಿ (ಕುಸಿತದ ವಿವರ)

  • ಸೌತೆಕಾಯಿ: ವಾರದ ಹಿಂದೆ ಒಂದು ಮೂಟೆಗೆ 600 ಇದ್ದ ಬೆಲೆ, ಈಗ ನೇರವಾಗಿ 300 ರೂ ಕ್ಕೆ ಕುಸಿದಿದೆ.
  • ಟೊಮ್ಯಾಟೊ: 14 ಕೆಜಿಯ ಒಂದು ಬಾಕ್ಸ್ ಬೆಲೆ 600 ರಿಂದ 500 ರೂ.ಕ್ಕೆ ಇಳಿಕೆಯಾಗಿದೆ.
  • ಉರುಳಿಕಾಯಿ (ಬೀನ್ಸ್): ಕೆಜಿಗೆ 120 ರಷ್ಟಿದ್ದ ಬಂಗಾರದಂತಹ ಬೆಲೆ, ಈಗ ದಿಢೀರನೆ 70 ರೂ. ಕ್ಕೆ ಇಳಿದಿದೆ.
  • ಕ್ಯಾರೆಟ್: ಪ್ರತಿ ಕೆಜಿಗೆ 30 ರಿಂದ 25 ರೂ. ಕ್ಕೆ ಕುಸಿತ ಕಂಡಿದೆ.
  • ಬೀಟ್‌ರೂಟ್: ಕೆಜಿಗೆ 25 ರಷ್ಟಿದ್ದ ಬೆಲೆ, ಸದ್ಯ 17 ರೂ.ಕ್ಕೆ ತಲುಪಿದೆ.

ಗ್ರಾಹಕರಿಗೆ ಖುಷಿ: ರೈತರಿಗೆ ಕಣ್ಣೀರು

ತರಕಾರಿ ಬೆಲೆ ಕುಸಿತದಿಂದ ಗ್ರಾಹಕರಿಗೆ ಸ್ವಲ್ಪ ನೆಮ್ಮದಿ ಸಿಕ್ಕಿದೆ. ಆದರೆ ರೈತರಿಗೆ ಮಾತ್ರ ಸಂಕಷ್ಟ ಎದುರಾಗಿದೆ. ಬೆಳೆ ಬೆಳೆಸಲು ಮಾಡಿದ ಖರ್ಚು ಕೂಡ ವಾಪಸ್ ಬರುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಸಾಗಾಟ ವೆಚ್ಚ, ಕೂಲಿ ಕಾರ್ಮಿಕರ ಖರ್ಚು ವೆಚ್ಚ ಹೆಚ್ಚಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ

ಒಟ್ಟಾರೆ ಅಧಿಕ ಮಾಸದ ಪರಿಣಾಮ ಇದೀಗ ತರಕಾರಿ ಮಾರುಕಟ್ಟೆಯ ಮೇಲೂ ಬೀರಿದೆ. ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿರುವ ಕಾರಣ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಾವು ಕಚ್ಚಿದರೆ ಜೀವ ಉಳಿಸಲು ಮೊದಲು ಏನು ಮಾಡಬೇಕು? ಏನು ಮಾಡಬಾರದು? – Kannada News | What is the first thing to do to save a life if a snake bites? What should not be done?

ನವದೆಹಲಿ, ಮೇ 22: ನಮ್ಮ ದೇಶದಲ್ಲಿ, ವಿಶೇಷವಾಗಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಹಾವು ಕಡಿತದ (Snake Bite) ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಹಾವುಗಳ ವಿಷಯಕ್ಕೆ ಬಂದರೆ, ಹಲವರಿಗೆ ಮೊದಲು ನೆನಪಿಗೆ ಬರುವುದು ವಿಪರೀತ ಭಯ. ಆದರೆ, ಎಲ್ಲಾ ಹಾವುಗಳು ವಿಷಕಾರಿಯಲ್ಲ. ಹೆಚ್ಚಿನ ಜನರು ಅರಿವಿನ ಕೊರತೆ ಮತ್ತು ಸರಿಯಾದ ಸಮಯದಲ್ಲಿ ಪ್ರಥಮ ಚಿಕಿತ್ಸೆ ಪಡೆಯದ ಕಾರಣ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹಾವು ಕಚ್ಚಿದರೆ ತಕ್ಷಣ ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು ಏನು ಮಾಡಬಾರದು? ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಆ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.

ಹಾವು ಕಚ್ಚಿದಾಗ ಗಾಬರಿಯಾಗದೆ ತಕ್ಷಣವೇ ಸರಿಯಾದ ಪ್ರಥಮ ಚಿಕಿತ್ಸೆ ನೀಡುವುದು ಮತ್ತು ವ್ಯಕ್ತಿಯನ್ನು ಆಸ್ಪತ್ರೆಗೆ ತಲುಪಿಸುವುದು ಅತ್ಯಂತ ಮುಖ್ಯ. ಹಾವು ಕಚ್ಚಿದ ತಕ್ಷಣ ಮಾಡಬೇಕಾದ ಮತ್ತು ಮಾಡಬಾರದ ಪ್ರಮುಖ ವಿಷಯಗಳು ಇಲ್ಲಿವೆ…

ತಕ್ಷಣ ಮಾಡಬೇಕಾದ ಪ್ರಥಮ ಚಿಕಿತ್ಸೆಗಳು:

ಗಾಬರಿಯಾಗಬೇಡಿ:

ಹಾವು ಕಚ್ಚಿದರೆ ಹೆದರಬೇಡಿ. ಆತಂಕಗೊಂಡರೆ ಹೃದಯಬಡಿತ ಜಾಸ್ತಿಯಾಗಿ, ರಕ್ತದ ಮೂಲಕ ಹಾವಿನ ವಿಷ ಇಡೀ ದೇಹಕ್ಕೆ ವೇಗವಾಗಿ ಹರಡುತ್ತದೆ. ಆದ್ದರಿಂದ ರೋಗಿ ಧೈರ್ಯವಾಗಿರುವಂತೆ ನೋಡಿಕೊಳ್ಳಿ.

ಚಲನವಲನ ನಿಲ್ಲಿಸಿ:

ಹಾವು ಕಚ್ಚಿದ ಭಾಗವನ್ನು (ಕೈ ಅಥವಾ ಕಾಲು) ಅತಿಯಾಗಿ ಆಡಿಸಬೇಡಿ. ಪೆಟ್ಟಾದ ಕೈ-ಕಾಲಿಗೆ ಪಟ್ಟಿ ಕಟ್ಟುವಂತೆ ಒಂದು ಕೋಲನ್ನು ಇಟ್ಟು ಬಟ್ಟೆಯಿಂದ ಸಡಿಲವಾಗಿ ಕಟ್ಟಿ, ಆ ಅಂಗದ ಚಲನೆಯನ್ನು ನಿಲ್ಲಿಸಿ.

ಹೃದಯದ ಮಟ್ಟಕ್ಕಿಂತ ಕೆಳಗಿರಲಿ:

ಹಾವು ಕಚ್ಚಿದ ಭಾಗವು ಯಾವಾಗಲೂ ಹೃದಯದ ಮಟ್ಟಕ್ಕಿಂತ ಕೆಳಗಿರಬೇಕು. ಇದರಿಂದ ವಿಷ ಹೃದಯದ ಕಡೆಗೆ ವೇಗವಾಗಿ ಹರಿಯುವುದು ತಡೆಯಲ್ಪಡುತ್ತದೆ.

ಆಭರಣಗಳನ್ನು ತೆಗೆಯಿರಿ:

ಹಾವು ಕಚ್ಚಿದ ಜಾಗದಲ್ಲಿ ಬಾವು (ಊತ) ಬರುವ ಸಾಧ್ಯತೆ ಇರುವುದರಿಂದ, ತಕ್ಷಣವೇ ಆ ಕೈ ಅಥವಾ ಕಾಲಿನಲ್ಲಿರುವ ಉಂಗುರ, ಬಳೆ, ಕಾಲುಗೆಜ್ಜೆ ಅಥವಾ ಗಡಿಯಾರಗಳನ್ನು ತೆಗೆದುಬಿಡಿ.

ಗಾಯವನ್ನು ಸ್ವಚ್ಛಗೊಳಿಸಿ:

ಗಾಯದ ಮೇಲಿರುವ ಹಾವಿನ ಲಾಲಾರಸವನ್ನು ಸ್ವಚ್ಛವಾದ ಒದ್ದೆ ಬಟ್ಟೆಯಿಂದ ಒರೆಸಿ. ಆದರೆ, ಗಾಯವನ್ನು ಅತಿಯಾಗಿ ಉಜ್ಜಬೇಡಿ.

ಹಾವು ಕಚ್ಚಿದಾಗ ಏನು ಮಾಡಬಾರದು?

ಗಾಯವನ್ನು ಬಾಯಿಯಿಂದ ಕಚ್ಚಬೇಡಿ ಅಥವಾ ನೆಕ್ಕಬೇಡಿ:

ಸಿನಿಮಾಗಳಲ್ಲಿ ತೋರಿಸುವಂತೆ ಗಾಯದಿಂದ ವಿಷವನ್ನು ಬಾಯಿಯಿಂದ ಹೀರಿ ಉಗುಳಲು ಪ್ರಯತ್ನಿಸಬೇಡಿ. ಇದರಿಂದ ಹೀರುವ ವ್ಯಕ್ತಿಗೂ ವಿಷ ತಗಲಬಹುದು.

ಕಟ್ಟುಗಳನ್ನು ಗಟ್ಟಿಯಾಗಿ ಕಟ್ಟಬೇಡಿ:

ರಕ್ತಸಂಚಾರ ಸಂಪೂರ್ಣ ನಿಲ್ಲುವಂತೆ ಹಗ್ಗ ಅಥವಾ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಬೇಡಿ. ಇದರಿಂದ ಆ ಅಂಗಕ್ಕೆ ರಕ್ತಸಂಚಾರ ನಿಂತು, ಗ್ಯಾಂಗ್ರಿನ್ ಆಗಿ ಆ ಕೈ ಅಥವಾ ಕಾಲನ್ನೇ ಕತ್ತರಿಸಬೇಕಾದ ಪರಿಸ್ಥಿತಿ ಬರಬಹುದು.

ಬ್ಲೇಡ್‌ನಿಂದ ಕಟ್ ಮಾಡಬೇಡಿ:

ವಿಷ ಹೊರಬರಲಿ ಎಂದು ಗಾಯದ ಜಾಗವನ್ನು ಬ್ಲೇಡ್ ಅಥವಾ ಚಾಕುವಿನಿಂದ ಕತ್ತರಿಸಬೇಡಿ. ಇದರಿಂದ ರಕ್ತಸ್ರಾವ ಹೆಚ್ಚಾಗಬಹುದು ಮತ್ತು ಇನ್ಫೆಕ್ಷನ್ ಆಗಬಹುದು.

ನಾಟಿ ವೈದ್ಯರ ಬಳಿ ಹೋಗಬೇಡಿ:

ಹಾವು ಕಚ್ಚಿದಾಗ ಮಂತ್ರ ಹಾಕುವುದು, ಬೇರು-ಎಲೆಗಳ ರಸ ಹಾಕುವುದು ಮುಂತಾದ ಮೂಢನಂಬಿಕೆಗಳಿಗೆ ಬಿದ್ದು ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಬೇಡಿ. ನಾಟಿ ವೈದ್ಯರ ಬಳಿ ಹೋಗುವ ಬದಲು ಆಸ್ಪತ್ರೆಗೆ ಹೋಗಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೋಜ್​ಗಾರ್ ಮೇಳದಡಿ ನಾಳೆ ಪ್ರಧಾನಿ ಮೋದಿಯಿಂದ 51,000ಕ್ಕೂ ಅಧಿಕ ಯುವಕರಿಗೆ ನೇಮಕಾತಿ ದಾಖಲೆ ಹಸ್ತಾಂತರ – Kannada News | Under Rozgar Mela PM Modi To Virtually Distribute more than 51,000 Job Letters on May 23

ನವದೆಹಲಿ, ಮೇ 22: ದೇಶಾದ್ಯಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ದ (Rozgar Mela) ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿ (PM Modi) ಮೇ 23ರಂದು ದೇಶಾದ್ಯಂತ ಹೊಸದಾಗಿ ಆಯ್ಕೆಯಾದ 51,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ದಾಖಲೆಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದುವರೆಗೂ ದೇಶಾದ್ಯಂತ ಆಯೋಜಿಸಲಾದ 18 ರೋಜ್‌ಗಾರ್ ಮೇಳಗಳ ಮೂಲಕ ಸುಮಾರು 12 ಲಕ್ಷ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ನಾಳೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶದಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಯುವ ಈ ಮೇಳವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಭಾರೀ ಪ್ರಮಾಣದಲ್ಲಿ ಉದ್ಯೋಗಗಳಿಗೆ ಕತ್ತರಿ ಹಾಕಲು ಟಿಸಿಎಸ್​ನಿಂದ ಬ್ಯಾಂಡ್ ಡಿ ಪ್ಲಾನ್? 29,000ಕ್ಕೂ ಹೆಚ್ಚು ಮಂದಿಗೆ ಲೇ ಆಫ್ ಭೀತಿ?

ಯಾವೆಲ್ಲಾ ಇಲಾಖೆಗಳಲ್ಲಿ ನೇಮಕಾತಿ?:

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF): ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಿಆರ್‌ಪಿಎಫ್ (CRPF), ಬಿಎಸ್‌ಎಫ್ (BSF), ಎಸ್‌ಎಸ್‌ಬಿ (SSB), ಸಿಐಎಸ್‌ಎಫ್ (CISF) ಮುಂತಾದ ಭದ್ರತಾ ಪಡೆಗಳು.

ರೈಲ್ವೆ ಇಲಾಖೆ (Railways): ಭಾರತೀಯ ರೈಲ್ವೆಯ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗಗಳು.

ಟಪಾಲು ಇಲಾಖೆ (Posts): ಅಂಚೆ ಇಲಾಖೆಯ ವಿವಿಧ ಹುದ್ದೆಗಳು.

ಬ್ಯಾಂಕಿಂಗ್ ಮತ್ತು ಕಂದಾಯ: ಕೇಂದ್ರ ಸಾರ್ವಜನಿಕ ವಲಯದ ಬ್ಯಾಂಕುಗಳು, ಆದಾಯ ತೆರಿಗೆ ಇಲಾಖೆ ಮತ್ತು ಕಸ್ಟಮ್ಸ್ ಇಲಾಖೆಗಳು.

ಇದನ್ನೂ ಓದಿ: UPSSSC Recruitment 2026: UPSSSC ಇಲಾಖೆಯಲ್ಲಿ ಉದ್ಯೋಗಾವಕಾಶ; 1,182 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಮೇಳದ ಮೂಲಕ ನೇಮಕಗೊಳ್ಳುವ ಎಲ್ಲಾ ಹೊಸ ಅಭ್ಯರ್ಥಿಗಳಿಗೆ ‘ಐಗಾಟ್ ಕರ್ಮಯೋಗಿ’ (iGOT Karmayogi) ಪೋರ್ಟಲ್‌ನಲ್ಲಿ ಲಭ್ಯವಿರುವ ‘ಕರ್ಮಯೋಗಿ ಪ್ರಾರಂಭ್’ ಎಂಬ ಆನ್‌ಲೈನ್ ತರಬೇತಿ ಕೋರ್ಸ್ ಅನ್ನು ಪಡೆಯಲು ಅವಕಾಶ ನೀಡಲಾಗುತ್ತದೆ. ಇದು ಸರ್ಕಾರಿ ನೌಕರರಿಗೆ ಅಗತ್ಯವಿರುವ ನೀತಿ ಸಂಹಿತೆ, ವೃತ್ತಿಪರತೆ ಮತ್ತು ಸಾರ್ವಜನಿಕ ಸೇವಾ ಮನೋಭಾವನೆಯನ್ನು ಕಲಿಸಿಕೊಡುವ ಡಿಜಿಟಲ್ ತರಬೇತಿ ವೇದಿಕೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು? ಏನಿದು CJP? ಅಮೆರಿಕದಲ್ಲಿದ್ದು ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?

ಬೆಂಗಳೂರು, ಮೇ 22): ಕಾಕ್ರೋಚ್‌ ಜನತಾ ಪಾರ್ಟಿ (cockroach Janata party) ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಒಂದು ವಿಡಂಬನಾತ್ಮಕ ಅಭಿಯಾನ. ಇದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ರಾಜಕೀಯ ಪಕ್ಷಗಳನ್ನು ಹಿಂದಿಕ್ಕುತ್ತಿದೆ. ಅಭಿಜೀತ್‌ ದಿಪ್ಕೆ (abhijeet dipke)  ಎಂಬ ಯುವಕ ಆರಂಭಿಸಿದ ಈ ಅಭಿಯಾನ ಈಗ Gen-Z ಸಂಘಟನೆಯಾಗಿ ಬದಲಾಗುತ್ತಿದೆ. ಭಾರತದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರು ಭಾರತದ ಯುವಕರ ಬಗ್ಗೆ ಹೇಳಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಯಾಗಿ, ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಲು ಮತ್ತು ವ್ಯಂಗ್ಯದ ಬಾಣಗಳನ್ನು ಬಿಡಲು, ಕಾಕ್ರೋಚ್‌ ಜನತಾ ಪಾರ್ಟಿ ಹೆಸರಿನ ಅಭಿಯಾನವನ್ನು ಆರಂಭಿಸಲಾಗಿತ್ತು. ಹಾಗಾದ್ರೆ, ಯಾರು ಈ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ? : ಏನಿದು CJP? ಅಮೆರಿಕದಲ್ಲಿದ್ದು ಭಾರತದ ಬಗ್ಗೆ ಅಭಿಜಿತ್ ಧ್ವನಿ ಎತ್ತಿದ್ದೇಕೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಇದನ್ನೂ ಓದಿ: ಕಾಕ್ರೋಚ್ ಜನತಾ ಪಾರ್ಟಿಗೆ ‘ಲಕ್ಷ್ಮಣರೇಖೆ’ ಎಳೆದ ಬೆಂಗಳೂರು ಪೊಲೀಸರು, ಆಗಿದ್ದೇನು?

Source link

ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು

ಜಬಲ್ಪುರ, ಮೇ 22: ರೂಪದರ್ಶಿ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಸಾವಿನ ಬಳಿಕ ಅವರ ಗಂಡ ಸಮರ್ಥ್ ಸಿಂಗ್ ತಲೆಮರೆಸಿಕೊಂಡಿದ್ದರು. 10 ದಿನಗಳ ಬಳಿಕ ಇಂದು ಅವರು ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹಾಗೇ, ಅವರ ಬಾರ್ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಲು ಅನುಮತಿ ಕೋರಿ ಸಮರ್ಥ್ ಸಿಂಗ್ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಮರ್ಥ್ ಸಿಂಗ್ ಅವರನ್ನು ವಿವಾಹವಾಗಿದ್ದ ತ್ವಿಶಾ ಶರ್ಮಾ ಮೇ 12ರಂದು ಭೋಪಾಲ್‌ನಲ್ಲಿರುವ ಗಂಡನ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಆಕೆಯ ಗಂಡನ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link