Category Archives: Blog

Your blog category

ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್​​ ಚುಚ್ಚಿ ಹೋದ ಮುಸುಕುಧಾರಿಗಳು: ಗ್ರಾಮದಲ್ಲಿ ಆತಂಕ – Kannada News | Masked men came to the house and injected a boy: Fear in the village

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada

ಹುಬ್ಬಳ್ಳಿ, ಮೇ 22: ಮನೆಯಲ್ಲಿ ಆಟವಾಡಿಕೊಂಡಿದ್ದ ಬಾಲಕನಿಗೆ (Boy) ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ (injection) ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಧಾರವಾಡ (dharwad) ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಣಿಕಂಠ ಗಾಣಿಗೇರ (11) ಎಂಬ ಬಾಲಕನಿಗೆ ಇಂಜೆಕ್ಷನ್ ಚುಚ್ಚಲಾಗಿದ್ದು, ಇದು ಸಹಜವಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿದೆ. ಸದ್ಯ ಬಾಲಕನನ್ನು ಹುಬ್ಬಳ್ಳಿ ಕಿಮ್ಸ್​​ಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುಖ್ಯಾಂಶಗಳು

  • ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಮುಸುಕುಧಾರಿಗಳು ಎಸ್ಕೇಪ್​​
  • ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಆತಂಕ
  • ಕುಂದಗೋಳ ಪೊಲೀಸರಿಂದ ತನಿಖೆ ಆರಂಭ

ನಡೆದಿದ್ದೇನು?

ಬೈಕ್​​ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ಮುಸುಕುಧಾರಿಗಳು ಮಣಿಕಂಠ ಗಾಣಿಗೇರಗೆ ಇಂಜೆಕ್ಷನ್ ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಸ್ವತಃ ಬಾಲಕ ಹೇಳುವ ಪ್ರಕಾರ, ‘ನಾನು ಮನೆಯಲ್ಲಿ ಆಟವಾಡುತ್ತಿದ್ದೆ. ಹೆತ್ತವರು ಕೆಲಸಕ್ಕೆ ಹೊಲಕ್ಕೆ ಹೋಗಿದ್ದರು. ಮಧ್ಯಾಹ್ನ ಊಟ ಮಾಡಿ ಮನೆಯಲ್ಲಿದ್ದಾಗ, ಇಬ್ಬರು ಮುಸುಕು ಹಾಕಿಕೊಂಡು ಬೈಕ್ ಮೇಲೆ ಬಂದಿದ್ದರು. ನಿಮ್ಮ ತಂದೆ-ತಾಯಿ ಎಲ್ಲಿ ಅಂತ ಕೇಳಿದರು. ನಾನು ಹೊಲಕ್ಕೆ ಹೋಗಿದ್ದಾರೆ ಅಂತ ಹೇಳಿದೆ. ಅವರಿಬ್ಬರು ಏಕಾಏಕಿ ನನ್ನ ಗಟ್ಟಿಯಾಗಿ ಹಿಡಿದರು. ನಾನು ಕಚ್ಚಲು ಮುಂದಾದೆ, ಆಗ ಬಾಯಿಯನ್ನು ಕೂಡ ಗಟ್ಟಿಯಾಗಿ ಹಿಡಿದು ನನ್ನ ಎಡಗೈಗೆ ಇಂಜೆಕ್ಷನ್ ಮಾಡಿ ಹೋದರು. ನಾನು ಸ್ವಲ್ಪ ಹೊತ್ತು ಮೂರ್ಛೆ ಹೋಗಿದ್ದೆ. ಸಂಜೆ ತಂದೆ-ತಾಯಿ ಮನೆಗೆ ಬರುತ್ತಿದ್ದಂತೆ ನಡೆದಿರುವ ಘಟನೆ ಬಗ್ಗೆ ಹೇಳಿದ್ದೇನೆ’ ಎಂದಿದ್ದಾನೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲೊಂದು ಕರುಳು ಹಿಂಡುವ ಘಟನೆ: ಮಗನ ಜೀವ ಉಳಿಸಲು ಕಿವಿಯೋಲೆ ಮಾರಿದ ತಾಯಿ

ಇನ್ನು ಪೋಷಕರು ಗ್ರಾಮದಲ್ಲಿ ಮಕ್ಕಳಿಗೆ ಯಾರಾದರೂ ಇಂಜೆಕ್ಷನ್ ಮಾಡಿದ್ದಾರಾ ಅಂತ ವಿಚಾರಿಸಿದ್ದಾರೆ. ಗ್ರಾಮದ ಬೇರೆ ಯಾವ ಮಕ್ಕಳಿಗೂ ಯಾರು ಇಂಜೆಕ್ಷನ್ ಮಾಡಿಲ್ಲ. ಇಂಜೆಕ್ಷನ್ ಮಾಡಲು ಯಾರು ಕೂಡ ಬಂದಿಲ್ಲ ಅಂತ ಗೊತ್ತಾಗಿದೆ. ಹೀಗಾಗಿ ಕೂಡಲೇ ಬಾಲಕನನ್ನು ಕುಂದಗೋಳ ಸರ್ಕಾರಿ ಆಸ್ಪತ್ರೆಗೆ ಹೆತ್ತವರು ಕರೆದುಕೊಂಡು ಹೋಗಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ಗೆ ಕರೆದುಕೊಂಡು ಬಂದು ದಾಖಲಿಸಿದ್ದಾರೆ.

ಬಾಲಕನಿಗೆ ಯಾರೋ ಅಪರಿಚಿತರು ಬಂದು ಇಂಜೆಕ್ಷನ್ ಮಾಡಿ ಹೋಗಿದ್ದಾರೆ ಅನ್ನೋ ಸುದ್ದಿ ನೆಲಗುಡ್ಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಹೆತ್ತವರು ತಮ್ಮ ಮಕ್ಕಳನ್ನು ಮನೆ ಹೊರಗಡೆ ಬಿಡಲು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಬಾಲಕನ ಮಾತುಗಳಲ್ಲಿ ಅನೇಕ ಅನುಮಾನಗಳು ಮೂಡಿವೆ. ಬಾಲಕ ಮಣಿಕಂಠ, ತನಗೆ ಇಂಜೆಕ್ಷನ್ ಮಾಡಿದ್ದಾರೆ ಅಂತ ಸ್ಪಷ್ಟವಾಗಿ ಹೇಳುತ್ತಿದ್ದಾನೆ. ಆದರೆ ಗ್ರಾಮದಲ್ಲಿ ಇಬ್ಬರು ಬೈಕ್ ಮೇಲೆ ಬಂದು ಬಾಲಕನಿಗೆ ಇಂಜೆಕ್ಷನ್ ಮಾಡಿದ್ದನ್ನು ಬೇರೆಯವರು ನೋಡಿಲ್ಲ. ಜೊತೆಗೆ ಬೇರೆ ಯಾವ ಮಕ್ಕಳಿಗೂ ಇಂಜೆಕ್ಷನ್ ಮಾಡಿಲ್ಲ. ಬಾಲಕನ ಕೈ ಮೇಲೆ ಇಂಜೆಕ್ಷನ್ ಮಾಡಿರುವ ಯಾವುದೇ ಗುರುತುಗಳು ಕೂಡ ಸ್ಪಷ್ಟವಾಗಿ ಕಾಣುತ್ತಿಲ್ಲ. ಈ ಬಗ್ಗೆ ಆತನ ಹೆತ್ತವರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ.

ಹೆತ್ತವರು ಹೇಳಿದ್ದಿಷ್ಟು

‘ನಮ್ಮ ಮಗ ನನಗೆ ಇಂಜೆಕ್ಷನ್ ಮಾಡಿದ್ದಾನೆ ಅಂತ ಹೇಳಿದ್ದಾನೆ. ನಾವು ಆತನಿಗೆ ಅನೇಕ ಬಾರಿ ಕೇಳಿದರು ಅದನ್ನೇ ಹೇಳಿದ್ದಾನೆ. ಹೀಗಾಗಿ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದೇವೆ’ ಎಂದು ಮಣಿಕಂಠ ತಾಯಿ ಸುಜಾತಾ ಹೇಳಿದ್ದಾರೆ. ಇನ್ನು ಹುಬ್ಬಳ್ಳಿ ಕಿಮ್ಸ್ ವೈದ್ಯರು, ಬಾಲಕನ ಆರೋಗ್ಯದಲ್ಲಿ ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ. ಯಾವುದೇ ಇಂಜೆಕ್ಷನ್ ಮಾಡಿರುವ ಗುರುತುಗಳು ಸ್ಪಷ್ಟವಾಗಿ ಕಂಡಿಲ್ಲ. ಹೀಗಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು!

ಇನ್ನು ಬಾಲಕನಿಗೆ ಇಂಜೆಕ್ಷನ್ ಮಾಡಿರುವ ಬಗ್ಗೆ ಅಸಲಿಯತ್ತು ತಿಳಿಯುವ ನಿಟ್ಟಿನಲ್ಲಿ ಕುಂದಗೋಳ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತೊಂದಡೆ ಹುಬ್ಬಳ್ಳಿ ಕಿಮ್ಸ್​ನಲ್ಲಿ ಬಾಲಕನ ಬ್ಲಡ್ ಟೆಸ್ಟ್, ಎಕ್ಸ್ ರೇ ಕೂಡ ಮಾಡಲಾಗುತ್ತಿದೆ. ವೈದ್ಯಕೀಯ ವರದಿ ಮತ್ತು ಪೊಲೀಸರ ತನಿಖೆ ನಂತರವೇ, ಬಾಲಕನಿಗೆ ಯಾರಾದರು ಇಂಜೆಕ್ಷನ್ ಮಾಡಿದರಾ ಅಥವಾ ಈ ಘಟನೆ ಹಿಂದೆ ಬೇರೆ ಏನಾದರೂ ಉದ್ದೇಶ ಇದೆಯಾ ಅನ್ನೋದು ಗೊತ್ತಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಥಿಯೇಟರ್​​​ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು? – Kannada News | Dhurandhar 2 Box Office: 50 Days of Dominance and Record Breaking Global Collection

ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರ ಯಶಸ್ವಿಯಾಗಿ 65 ದಿನಗಳನ್ನು ಪೂರೈಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡ ಈ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರಮಂದಿರಗಳಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಮುನ್ನುಗ್ಗಿದೆ.

‘ಧುರಂಧರ್ 2’ ಈವರೆಗೆ ದೇಶಾದ್ಯಂತ ಒಟ್ಟು 5,24,278 ಶೋಗಳು ಪ್ರದರ್ಶನ ಕಂಡಿವೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ವಿಶ್ವಾದ್ಯಂತ ಬರೋಬ್ಬರಿ 1,799.09 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದು ಭಾರತ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ. ಭಾರತೀಯ ಚಿತ್ರಮಂದಿರಗಳಿಂದಲೇ ಈ ಸಿನಿಮಾ 1,372 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದ್ದು, ಭಾರತದಲ್ಲಿ ಸಿನಿಮಾದ ಒಟ್ಟು ನೆಟ್ ಕಲೆಕ್ಷನ್ 1,146 ಕೋಟಿ ರೂಪಾಯಿ ಆಗಿದೆ.

ಕೇವಲ ದೇಶದಲ್ಲಷ್ಟೇ ಅಲ್ಲದೆ, ವಿದೇಶಗಳಲ್ಲೂ ಈ ಚಿತ್ರದ ಹವಾ ಜೋರಾಗಿದ್ದು, ಬರೋಬ್ಬರಿ 426 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಅನಿವಾಸಿ ಭಾರತೀಯರ ಮನ ಗೆದ್ದಿದೆ. ವಿಶೇಷ ಎಂದರೆ, ಪಾಕಿಸ್ತಾನ, ಸೌದಿ ರಾಷ್ಟ್ರಗಳಲ್ಲಿ ಈ ಸಿನಿಮಾ ಬ್ಯಾನ್ ಆಗಿತ್ತು. ಆದಾಗ್ಯೂ ಈ ಸಿನಿಮಾ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ.

ಇದನ್ನೂ ಓದಿ: ‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರದ ಒಟಿಟಿ (OTT) ಬಿಡುಗಡೆ ದಿನಾಂಕ ಈಗ ಅಧಿಕೃತವಾಗಿ ಹೊರಬಿದ್ದಿದೆ. ಇದೇ ಜೂನ್ 4 ರಂದು ‘ಧುರಂಧರ್ 2’ ಹಾಟ್​ಸ್ಟಾರ್ ಮೂಲಕ ಪ್ರಸಾರ ಕಾಣಲಿದೆ. ಚಿತ್ರಮಂದಿರಗಳಲ್ಲಿ ಮಿಸ್ ಮಾಡಿಕೊಂಡವರು ಹಾಗೂ ಮತ್ತೊಮ್ಮೆ ಈ ಹೈ-ವೋಲ್ಟೇಜ್ ಸಿನಿಮಾವನ್ನು ಮನೆಯಲ್ಲೇ ಕುಳಿತು ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಸುದ್ದಿ ಸಂಭ್ರಮ ತಂದಿದೆ. ದೃಶ್ಯ ವೈಭವ ಹಾಗೂ ತಾರಾಗಣದ ಅದ್ಭುತ ನಟನೆಯಿಂದಾಗಿ ಈ ಚಿತ್ರವು 2026ರ ಅತ್ಯಂತ ಯಶಸ್ವಿ ಬ್ಲಾಕ್‌ಬಸ್ಟರ್ ಸಿನಿಮಾಗಳ ಸಾಲಿಗೆ ಸೇರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಧೋನಿ ಮುಂದಿನ ಸೀಸನ್ ಆಡ್ತಾರಾ? ಅಡ್ಡ ಗೋಡೆ ಮೇಲೆ ದೀಪವಿಟ್ಟ ರುತುರಾಜ್ – Kannada News | CSK’s IPL 2026 Debacle: Dhoni’s Injury Impact and Gaikwad’s Hint on His Return

2026 ರ ಐಪಿಎಲ್‌ನಲ್ಲಿ (IPL 2026) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪ್ರಯಾಣ ಲೀಗ್ ಹಂತದಲ್ಲೇ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಸೀಸನ್‌ನಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಕಾರಣಗಳು ಒಂದಲ್ಲ, ಎರಡಲ್ಲ, ಹಲವು. ಆದರೆ ಆ ಕಾರಣಗಳಲ್ಲಿ ಪ್ರಮುಖವಾದದ್ದು, ಎಂಎಸ್ ಧೋನಿ (MS Dhoni) ಇಡೀ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವನ್ನು ಆಡದಿರುವುದು. ಇದೀಗ ಧೋನಿ ಮುಂದಿನ ಸೀಸನ್‌ನಲ್ಲಿ ತಂಡದ ಪರ ಆಡುತ್ತಾರೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಕೊನೆಯ ಲೀಗ್ ಪಂದ್ಯದಲ್ಲಿ ಸೋತ ಬಳಿಕ ಈ ಬಗ್ಗೆ ಮಾತನಾಡಿದ ನಾಯಕ ರುತುರಾಜ್ ಗಾಯಕ್ವಾಡ್ ಯಾವುದನ್ನು ಖಚಿತವಾಗಿ ಹೇಳದೆ ಅಡ್ಡ ಗೋಡೆ ಮೇಲೆ ದೀಪವಿಟ್ಟರು.

ಧೋನಿ ಬಗ್ಗೆ ಗಾಯಕ್ವಾಡ್ ಹೇಳಿದ್ದೇನು?

ಪಂದ್ಯದ ನಂತರ, ಪ್ರಸ್ತುತಿ ಸಮಾರಂಭಕ್ಕೂ ಮುನ್ನ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಪ್ರಸಾರಕರು ಮುಂದಿನ ಆವೃತ್ತಿಯಲ್ಲಿ ಧೋನಿಯ ಲಭ್ಯತೆಯ ಪ್ರಶ್ನಿಸಿದರು. ರುತುರಾಜ್ ಗಾಯಕ್ವಾಡ್ ಈ ಪ್ರಶ್ನೆಗೆ ಸ್ಪಷ್ಟವಾಗಿ ಯಾವುದೇ ಭರವಸೆಗಳನ್ನು ನೀಡಲಿಲ್ಲ. ಆದರೆ ಪ್ರಸ್ತುತ ತಂಡದಲ್ಲಿರುವ ಆಟಗಾರರ ಬಗ್ಗೆ ನನಗೆ ಹೆಮ್ಮೆ ಇದೆ ಧೋನಿ ಮುಂದಿನ ಸೀಸನ್ ಆಡುತ್ತಾರಾ ಅಥವಾ ಇಲ್ಲವಾ ಎಂಬುದು ನಿಮಗೆ ಮುಂದಿನ ವರ್ಷ ತಿಳಿಯಲಿದೆ. ಆದರೆ ಈ ಸೀಸನ್​ನಲ್ಲಿ ನಾವು ಅವರನ್ನು ತುಂಬಾ ಮಿಸ್ ಮಾಡಿಕೊಂಡೆವು. ಕೊನೆಯ ಓವರ್‌ಗಳಲ್ಲಿ ಬಂದು ಕ್ರೀಸ್‌ನಲ್ಲಿ ಉಳಿಯುವ ಮೂಲಕ ಅವರು ಆಟವನ್ನು ಬದಲಾಯಿಸುತ್ತಿದ್ದರು. ಆದರೆ ಮುಂದಿನ ಸೀಸನ್ ಬಗ್ಗೆ ನಾನು ಏನನ್ನೂ ಹೇಳಲಾರೆ ಎಂದಿದ್ದಾರೆ.

ಒಂದು ಪಂದ್ಯವನ್ನು ಆಡದ ಧೋನಿ

ಸೀಸನ್ ಆರಂಭಕ್ಕೆ ಎರಡು ದಿನಗಳ ಮೊದಲು ಧೋನಿ ಗಾಯಗೊಂಡರು, ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಬಹಳ ಸಮಯ ಹಿಡಿಯಿತು. ಪರಿಣಾಮವಾಗಿ, ಅವರು ತಂಡದೊಂದಿಗೆ ಎಲ್ಲಿಗೂ ಪ್ರಯಾಣಿಸದೆ ಚೆನ್ನೈನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದರು. ಲೀಗ್ ಹಂತ ಮುಗಿಯುವುದಕ್ಕೂ ಮುನ್ನ ಧೋನಿ ಸಿಎಸ್​ಕೆ ತವರು ನೆಲದಲ್ಲಿ ಪಂದ್ಯವನ್ನು ಆಡಲಿದ್ದಾರೆ ಎಂದು ವರದಿಯಾಗಿತ್ತು.

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

ಆದರೆ ಆ ಪಂದ್ಯಕ್ಕೂ ಮುನ್ನವೇ ಧೋನಿ ಹೆಬ್ಬೆರಳಿಗೆ ಗಾಯ ಮಾಡಿಕೊಂಡರು. ಹೀಗಾಗಿ ಧೋನಿ ಚೆನ್ನೈನ ತವರು ಮೈದಾನದಲ್ಲಿ ನಡೆದ ತಂಡದ ಅಂತಿಮ ಪಂದ್ಯದಲ್ಲಿ ಕ್ರೀಡಾಂಗಣದಲ್ಲಿ ಹಾಜರಾದರೂ, ಆ ಪಂದ್ಯದಲ್ಲೂ ಆಡಲು ಸಾಧ್ಯವಾಗಲಿಲ್ಲ. ಇನ್ನು ಗುಜರಾತ್ ವಿರುದ್ಧದ ಸೀಸನ್​ನ ಕೊನೆಯ ಪಂದ್ಯಕ್ಕೂ ಮೊದಲೇ ಧೋನಿ ಮನೆಗೆ ವಾಪಸ್ಸಾಗಿದ್ದರು. ಹೀಗಾಗಿ ಧೋನಿ ಕೊನೆಯ ಲೀಗ್ ಪಂದ್ಯದಲ್ಲೂ ತಂಡದೊಂದಿಗೆ ಕಾಣಿಸಿಕೊಳ್ಳಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ – Kannada News | A Bidar Farmer Cultivates World’s Costliest Mango Miyazaki, That’s Worth Rs 2.5 Lakh Per KG

ಬೀದರ್, (ಮೇ 22): ಜಪಾನ್ ಮೂಲದ ಮಿಯಾಜಾಕಿ ಮಾವಿನಹಣ್ಣು (Miyazaki Mango) ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣಿನ ತಳಿಗಳಲ್ಲಿ ಒಂದಾಗಿದೆ. ಇದರ ಬೆಲೆ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿಗಳವರೆಗೆ ತಲುಪುತ್ತದೆ. ಇಂತಹ ದುಬಾರಿ ದರದ ಮಾವು ತಳಿಯನ್ನು ಬೀದರ್ ನ (Bidar) ರೈತ ಬೆಳೆದು ಗಮನಸೆಳೆದಿದ್ದಾರೆ. ಹೌದು…ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತ ಹಣಮಂತರಾವ್ ಶ್ರೀಮಾಳೆ ಅವರು ವಿಶ್ವದ ದುಬಾರಿ ಬೆಲೆಯ ಮಾವನ್ನ ಬೀದರ್ ನ ರೈತ ಬೆಳೆಸಿ ಸೈ ಎಣಿಸಿಕೊಂಡಿದ್ದಾರೆ. ವಿದೇಶಿ ತಳಿ ನಮ್ಮ ನೆಲದಲ್ಲಿ ಬೆಳೆಯುತ್ತಾ ಎಂದು ಹಣಮಂತರಾವ್ ಶ್ರೀಮಾಳೆ ಅವರಯ ತೋಟದಲ್ಲಿ ಪ್ರಾಯೋಗಿಕವಾಗಿ ಮಿಯಾಜಾಕಿ ಮಾವು ಬೆಳೆದಿದ್ದು, ಅದು ಇದೀಗ ಉತ್ತಮ ಫಲ ಕೊಟ್ಟಿದೆ.

ಈ ಯಶಸ್ಸಿನಿಂದ ಪ್ರೇರಿತರಾಗಿ ಮುಂದಿನ ದಿನಗಳಲ್ಲಿ ಎರಡು ಎಕರೆ ಪ್ರದೇಶದಲ್ಲಿ ಮಿಯಾಜಾಕಿ ಮಾವು ಬೆಳೆಸಲು ರೈತ ನಿರ್ಧರಿಸಿದ್ದಾರೆ. ಜಪಾನ್ ದೇಶದಲ್ಲಿ ಹೆಚ್ಚಾಗಿ ಬೆಳೆಯುವ ಈ ಮಿಯಾಜಾಕಿ ಮಾವು ತನ್ನ ವಿಶಿಷ್ಟ ರುಚಿ ಮತ್ತು ಗುಣಮಟ್ಟದಿಂದ ವಿಶ್ವದ ಗಮನ ಸೆಳೆದಿದೆ. ಈ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್‌ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಹಣ್ಣಿಗೆ ಭಾರೀ ಬೇಡಿಕೆ ಇದ್ದು, ಕೆಲವೆಡೆ ಕೆಜಿಗೆ ಲಕ್ಷಾಂತರ ರೂಪಾಯಿ ಬೆಲೆ ಸಿಗುತ್ತಿದೆ. ಸಾಂಪ್ರದಾಯಿಕ ಬೆಳೆಗಳ ಜೊತೆಗೆ ಹೊಸ ತಳಿಗಳ ಬೆಳೆಗಳತ್ತ ರೈತರು ಆಸಕ್ತಿ ತೋರುತ್ತಿರುವುದು ಕೃಷಿಯಲ್ಲಿ ಹೊಸ ಆಶಾಭರವನ್ನ ಮೂಡಿಸಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸುರೇಶ್ ನಾಯಕ ಕೊಟ್ಟಿರುವ ಪ್ರತ್ಯೇಕ್ಷ ವರದಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾರತದಲ್ಲಿ ಟ್ರೋಲ್‌ ಆದ ಬೆನ್ನಲ್ಲೇ ನಟ ವರುಣ್ ಧವನ್‌ಗೆ ಹಾಲಿವುಡ್ ಆಫರ್? – Kannada News | Varun Dhawan reportedly gets Hollywood offer after trolled online in India

ಬಾಲಿವುಡ್ ನಟ ವರುಣ್ ಧವನ್ (Varun Dhawan) ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್​ಗೆ ಒಳಗಾಗಿದ್ದರು. ಅವರ ನಗು ಚೆನ್ನಾಗಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದರು. ಅಲ್ಲದೇ, ‘ಬಾರ್ಡರ್ 2’ ಸಿನಿಮಾದಲ್ಲಿ ಅವರ ನಟನೆ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದರು. ಸೈನಿಕನ ಪಾತ್ರಕ್ಕೆ ವರುಣ್ ಧವನ್ ಹೊಂದಿಕೆ ಆಗುವುದಿಲ್ಲ ಎಂದು ಅನೇಕರು ಲೇವಡಿ ಮಾಡಿದ್ದರು. ಆದರೆ, ಈ ಎಲ್ಲಾ ಟ್ರೋಲ್‌ಗಳ ಬೆನ್ನಲ್ಲೇ ವರುಣ್ ಧವನ್ ಅವರು ತಮ್ಮ ವೃತ್ತಿಜೀವನದಲ್ಲಿ ಭಾರಿ ದೊಡ್ಡ ಹೆಜ್ಜೆಯನ್ನಿಡಲು ಸಜ್ಜಾಗಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ. ಹೌದು, ವರುಣ್ ಧವನ್ ಶೀಘ್ರದಲ್ಲೇ ಹಾಲಿವುಡ್‌ಗೆ (Hollywood) ಪದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ನಟನ ಕಡೆಯಿಂದಾಗಲಿ ಅಥವಾ ಅವರ ತಂಡದಿಂದಾಗಲಿ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲವಾದರೂ, ಅಂತಾರಾಷ್ಟ್ರೀಯ ಪ್ರಾಜೆಕ್ಟ್ ಕುರಿತಾದ ಈ ಸುದ್ದಿ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ‘ಪಿಂಕ್‌ವಿಲ್ಲಾ’ ವರದಿಯ ಪ್ರಕಾರ, ಈ ಹಾಲಿವುಡ್ ಚಿತ್ರಕ್ಕೆ ಸಂಬಂಧಿಸಿದ ಮಾತುಕತೆಗಳು ಕಳೆದ ಕೆಲವು ವಾರಗಳಿಂದ ಸರಾಗವಾಗಿ ಮುನ್ನಡೆಯುತ್ತಿವೆ.

‘ವರುಣ್ ಧವನ್‌ಗೆ ಹಾಲಿವುಡ್ ಪ್ರಾಜೆಕ್ಟ್ ಒಂದರ ಆಫರ್ ಬಂದಿದ್ದು, ಅವರು ಇತ್ತೀಚೆಗೆ ಪ್ರಸಿದ್ಧ ಹಾಲಿವುಡ್ ನಿರ್ಮಾಪಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸದ್ಯ ಎರಡೂ ಕಡೆಯಿಂದಲೂ ಮಾತುಕತೆ ಅಂತಿಮ ಹಂತ ತಲುಪಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಈ ಪ್ರಾಜೆಕ್ಟ್ ವರುಣ್ ವೃತ್ತಿಜೀವನದಲ್ಲಿ ಜಾಗತಿಕ ಮಟ್ಟದ ದೊಡ್ಡ ಮೈಲಿಗಲ್ಲಾಗಲಿದೆ’ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಆಗಿದೆ.

ಈ ಹಿಂದೆ ವರುಣ್ ಧವನ್ ಅವರು ತಮಗೆ ಹಾಲಿವುಡ್‌ನಲ್ಲಿ ನಟಿಸುವ ಆಸೆಯಿದೆ ಎಂದು ಹೇಳಿಕೊಂಡಿದ್ದರಿಂದ ಈ ಸುದ್ದಿ ಈಗ ಮತ್ತಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದೇ ವರ್ಷ ಮಾರ್ಚ್ ತಿಂಗಳಲ್ಲಿ ನಡೆದ ‘ಬಿ ಎ ಮ್ಯಾನ್, ಯಾರ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ್ದ ವರುಣ್, ತಮ್ಮ ಆರಂಭದ ದಿನಗಳ ಆಸೆಗಳ ಬಗ್ಗೆ ಬಿಚ್ಚಿಟ್ಟಿದ್ದರು.

‘ನಾನು ಹಲವು ನಟನಾ ತರಗತಿಗಳಿಗೆ ಸೇರಿಕೊಂಡಿದ್ದೆ. ನನ್ನ ತಂದೆಗೆ ಶಾಕ್ ನೀಡಬೇಕು ಎಂಬ ಕಾರಣಕ್ಕೆ ಹಾಲಿವುಡ್ ಮೂಲಕವೇ ಚಿತ್ರರಂಗಕ್ಕೆ ಪದಾರ್ಪಣೆ ಮಾಡಬೇಕು ಎಂಬುದು ನನ್ನ ಯೋಜನೆಯಾಗಿತ್ತು. ನನ್ನನ್ನು ಸ್ಟೀವನ್ ಸ್ಪೀಲ್ಬರ್ಗ್ ಅಥವಾ ಅನುರಾಗ್ ಕಶ್ಯಪ್ ಲಾಂಚ್ ಮಾಡಬೇಕೆಂದು ಬಯಸಿದ್ದೆ. ಈ ಇಬ್ಬರಲ್ಲಿ ಒಬ್ಬರು ನನ್ನನ್ನು ಲಾಂಚ್ ಮಾಡಿದರೆ ಮಾತ್ರ ನನ್ನ ತಂದೆಗೆ ಭಾರಿ ಆಶ್ಚರ್ಯವಾಗುತ್ತದೆ ಎಂದುಕೊಂಡಿದ್ದೆ. ಆದರೆ, ಕರಣ್ ಜೋಹರ್ ನನ್ನನ್ನು ಬಾಲಿವುಡ್‌ಗೆ ಪರಿಚಯಿಸಿದಾಗಲೂ ನನ್ನ ತಂದೆ ಅಷ್ಟೇ ಆಶ್ಚರ್ಯಪಟ್ಟಿದ್ದರು’ ಎಂದು ವರುಣ್ ಧವನ್ ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

ವರುಣ್ ಧವನ್ ಅವರ ಈಗ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ಸಂಪೂರ್ಣ ರೊಮ್ಯಾಂಟಿಕ್ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಡೇವಿಡ್ ಧವನ್ ನಿರ್ದೇಶನದ ಈ ಸಿನಿಮಾ ಜೂನ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ನಿಯಂತ್ರಣ ತಪ್ಪಿದ ಬೈಕ್‌; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸೆರೆ!

ಮೇ 19ರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮನೆಯೊಂದರ ಕಬ್ಬಿಣದ ಗೇಟ್‌ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಗೇಟ್ ಸಂಪೂರ್ಣವಾಗಿ ಮುರಿದು ಕೆಳಗೆ ಬಿದ್ದಿದ್ದು, ಬೈಕ್ ಮತ್ತು ಸವಾರ ಇಬ್ಬರೂ ನೆಲಕ್ಕುರುಳಿರುವುದು ಕಂಡುಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲೆಲ್ಲಾ ದಟ್ಟವಾದ ಹೊಗೆ ಮತ್ತು ಧೂಳು ಆವರಿಸಿಕೊಂಡಿದ್ದು, ತೀವ್ರವಾಗಿ ಗಾಯಗೊಂಡ ಸವಾರನು ಆಘಾತದಿಂದ ಎದ್ದು ನಿಲ್ಲಲಾರದೆ ಗೇಟ್‌ನ ಭಾಗವನ್ನು ಬದಿಗೆ ಸರಿಸಲು ಯತ್ನಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು? – Kannada News | High command Collects leaders opinion about Karnataka BJP Chief

ಬೆಂಗಳೂರು, (ಮೇ 22): ಕರ್ನಾಟಕ ಬಿಜೆಪಿಯಲ್ಲಿನ (Karnataka BJP) ನಾಯಕತ್ವ ಗೊಂದಲ ನಿವಾರಿಸಲು ಹೈಕಮಾಂಡ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಷ್ಟ್ರೀಯ ನಾಯಕರಾದ ಶಿವಪ್ರಕಾಶ್ ಮತ್ತು ಬೈಜಯಂತ್ ಪಾಂಡಾ ಅವರು ಕೋರ್ ಸಮಿತಿ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಂಸದರನ್ನು ಒಳಗೊಂಡ 31 ಆಯ್ದ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಅಲ್ಲದೇ ನಾಯಕರ ಒನ್​ ಟು ಒನ್ ಅಭಿಪ್ರಾಯ ಸಂಗ್ರಹಿಸಿದ್ದಅರೆ. ರಾಜ್ಯ ನಾಯಕತ್ವದ ಕುರಿತು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸುವ ಈ ಪ್ರಕ್ರಿಯೆ, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಅನುಸರಿಸುವ ಸಾಮಾನ್ಯ ಕ್ರಮ ಎಂದು ಹೇಳಲಾಗಿದೆ.

ವಿಜಯೇಂದ್ರ ಪರ ಮತ್ತು ವಿರುದ್ಧವಾಗಿದ್ದ ಮುಖಂಡರಿಂದಲೂ ಅಭಿಪ್ರಾಯ ಸಂಗ್ರಹಿಸಿದ್ದು, ಅಭಿಪ್ರಾಯ ಸಂಗ್ರಹ ವೇಳೆ ರಾಜ್ಯ ನಾಯಕರು ವಿವಿಧ ರೀತಿ ಸಲಹೆಗಳನ್ನ ನೀಡಿದ್ದಾರೆ. ಕೆಲವರಿಂದ ಬಿ.ವೈ.ವಿಜಯೇಂದ್ರ ಮುಂದುವರಿಕೆ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ, ಇನ್ನೂ ಕೆಲವರು ಪಕ್ಷದ ನಿರ್ಧಾರಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಲವರಿಂದ ರಾಜ್ಯಾಧ್ಯಕ್ಷರನ್ನು ಬದಲಿಸುವುದು ಸೂಕ್ತ ಎಂಬ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ

Source link

ಡಾಲರ್ ಎದುರು ರುಪಾಯಿ ಹೇಗೆ ಬೇಕಾದರೂ ಕುಸಿಯಲಿ ಬಿಡಿ, ಚಿಂತೆ ಬೇಡ: ಹಣಕಾಸು ಆಯೋಗ ಅಧ್ಯಕ್ಷ ಪನಗರಿಯಾ – Kannada News | Indias rupee value economist panagariya advises rbi against intervention

ನವದೆಹಲಿ, ಮೇ 22: ಡಾಲರ್ ಎದುರು ರುಪಾಯಿ ಮೌಲ್ಯ (Dollar vs Rupee) ಕಳೆದ ಎರಡು ದಿನದಿಂದ ಸ್ವಲ್ಪ ಚೇತರಿಸಿಕೊಂಡಿದೆ. ಆದರೂ ಕೂಡ ಇತ್ತೀಚಿನ ವರ್ಷಗಳಿಂದ ರುಪಾಯಿ ಮೌಲ್ಯ ಸಿಕ್ಕಾಪಟ್ಟೆ ಕುಸಿದಿದೆ. ಇನ್ನೂ ಕೂಡ ಪ್ರತೀ ಡಾಲರ್​ಗೆ ರುಪಾಯಿ ಮೌಲ್ಯ 96ರ ಗಡಿ ಮೇಲೆಯೇ ಇದೆ. ಬಹಳಷ್ಟು ಜನರು ರುಪಾಯಿ ಮೌಲ್ಯ ಕುಸಿತದ ವಿಚಾರದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದೇ ವೇಳೆ, ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ (Arvind Panagariya) ಅವರು ರುಪಾಯಿ ಮೌಲ್ಯ ಏರಿಳಿತದ ಬಗ್ಗೆ ಸದ್ಯ ಹೆಚ್ಚು ಚಿಂತೆ ಮಾಡುವ ಪ್ರಮೇಯ ಇಲ್ಲ ಎಂದಿದ್ದಾರೆ. ರುಪಾಯಿ ಕುಸಿತ ತಡೆಯಲು ಆರ್​ಬಿಐ ತನ್ನ ಫಾರೆಕ್ಸ್ ನಿಧಿಯನ್ನು ವ್ಯಯಿಸಲು ಹೋಗಬಾರದು. ರುಪಾಯಿ ಸಹಜವಾಗಿ ಕುಸಿಯಲು ಬಿಡಬೇಕು ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷರೂ ಆದ ಅವರು ಸಲಹೆ ನೀಡಿದ್ದಾರೆ.

‘100 ಎಂಬುದು ಕೇವಲ ಒಂದು ಸಂಖ್ಯೆ’

ಸಾಮಾಜಿಕ ಮಾಧ್ಯಮ ಎಕ್ಸ್ (X) ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಪನಗರಿಯಾ, “ಪ್ರತಿ ಡಾಲರ್‌ಗೆ 100 ರೂಪಾಯಿ ಆಗುತ್ತದೆ ಎಂಬ ಮಾನಸಿಕ ಆತಂಕ ನಿಮ್ಮ (ಆರ್​ಬಿಐ) ನೀತಿ ನಿರ್ಧಾರಗಳನ್ನು ನಿಯಂತ್ರಿಸಲು ಬಿಡಬೇಡಿ. 99 ಮತ್ತು 101 ರಂತೆ 100 ಸಹ ಕೇವಲ ಒಂದು ಸಂಖ್ಯೆಯಷ್ಟೇ. ಪ್ರಸ್ತುತ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಬಿಕ್ಕಟ್ಟು ತಾತ್ಕಾಲಿಕವಾಗಿರಲಿ ಅಥವಾ ದೀರ್ಘಕಾಲದ್ದಾಗಿರಲಿ, ಈ ಕ್ಷಣದಲ್ಲಿ ರೂಪಾಯಿ ಅಪಮೌಲ್ಯಗೊಳ್ಳಲು (Depreciate) ಬಿಡುವುದೇ ಸರಿಯಾದ ಕ್ರಮ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕೆಳಗಿನ ಶೇ. 50 ಮಂದಿಗೆ ಆದಾಯ ತೆರಿಗೆ ‘3% ಅಲ್ಲ, 0% ಆಗಬೇಕು’- ಜೆಫ್ ಬೆಜೋಸ್

ಜಾಗತಿಕ ಇಂಧನ ಮಾರುಕಟ್ಟೆಯ ಏರಿಳಿತಗಳಿಗೆ ಭಾರತೀಯ ಆರ್ಥಿಕತೆ ಹೇಗೆ ಹೊಂದಿಕೊಳ್ಳುತ್ತದೆ ಎಂಬುದನ್ನು ಅವರು ಈ ಸಂದರ್ಭದಲ್ಲಿ ಹೀಗೆ ವಿವರಿಸಿದ್ದಾರೆ:

ತಾತ್ಕಾಲಿಕ ಬಿಕ್ಕಟ್ಟಾಗಿದ್ದರೆ (3 ತಿಂಗಳಿಂದ 1 ವರ್ಷ) ರೂಪಾಯಿ ಮೌಲ್ಯ ಈಗ ಕುಸಿದರೂ, ತೈಲ ಆಮದು ವೆಚ್ಚ ಕಡಿಮೆಯಾದ ತಕ್ಷಣ ಮತ್ತು ವಿದೇಶಿ ಹೂಡಿಕೆದಾರರು ‘ಅಗ್ಗದ ರೂಪಾಯಿ’ಯ ಲಾಭ ಪಡೆಯಲು ಭಾರತದತ್ತ ಮುಖ ಮಾಡಿದಾಗ ರೂಪಾಯಿ ಮೌಲ್ಯ ಮತ್ತೆ ಗಣನೀಯವಾಗಿ ಚೇತರಿಸಿಕೊಳ್ಳುತ್ತದೆ.

ದೀರ್ಘಕಾಲದ ಬಿಕ್ಕಟ್ಟಾಗಿದ್ದ (ಒಂದು ವರ್ಷಕ್ಕಿಂತ ಹೆಚ್ಚು) ಪರಿಸ್ಥಿತಿಯಲ್ಲಿ, ರೂಪಾಯಿ ಕುಸಿತವನ್ನು ತಡೆಯಲು ಪ್ರಯತ್ನಿಸುವುದು ತಪ್ಪು ನಿರ್ಧಾರವಾಗುತ್ತದೆ. ಕೃತಕವಾಗಿ ರೂಪಾಯಿಯನ್ನು ರಕ್ಷಿಸಲು ಹೋದರೆ ದೇಶದ ವಿದೇಶಿ ವಿನಿಮಯ ಮೀಸಲು ನಿಧಿ (Forex Reserves) ಸಂಪೂರ್ಣವಾಗಿ ಖಾಲಿಯಾಗುವವರೆಗೂ ರಕ್ತಸ್ರಾವ ಮುಂದುವರಿಯುತ್ತದೆ.

ತಾತ್ಕಾಲಿಕ ಪರಿಹಾರಗಳು ಅನಗತ್ಯ: ಅರವಿಂದ್ ಪನಗರಿಯಾ

ಆರ್‌ಬಿಐ ರೂಪಾಯಿ ರಕ್ಷಣೆಗಾಗಿ ಡಾಲರ್ ಬಾಂಡ್‌ಗಳನ್ನು ಬಿಡುಗಡೆ ಮಾಡುವುದು ಅಥವಾ ಅನಿವಾಸಿ ಭಾರತೀಯರ (NRI) ಠೇವಣಿಗಳ ಮೇಲೆ ಹೆಚ್ಚಿನ ಬಡ್ಡಿ ನೀಡುವುದನ್ನು ಪರಿಗಣಿಸುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಇವು ಕೇವಲ ತಾತ್ಕಾಲಿಕ ಮುಲಾಮುಗಳಷ್ಟೇ (Band-aid) ಹೊರತು ಶಾಶ್ವತ ಪರಿಹಾರವಲ್ಲ. ಇವುಗಳಿಂದ ವಿದೇಶಿ ಶ್ರೀಮಂತ ಹೂಡಿಕೆದಾರರಿಗೆ ಮಾತ್ರ ಲಾಭವಾಗುತ್ತದೆ. ಅಂತಿಮವಾಗಿ ರುಪಾಯಿ ಮೌಲ್ಯ 100 ರ ಗಡಿಯನ್ನು ದಾಟಲೇಬೇಕಾಗುತ್ತದೆ ಎಂದು ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷರೂ ಆದ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎರಡನೇ ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅವಧಿ 5 ವರ್ಷ ಅಲ್ಲ 12 ವರ್ಷ; ಯಾಕಿದು ಮಹತ್ವ ಗೊತ್ತಾ?

2013ರ ಕರೆನ್ಸಿ ಬಿಕ್ಕಟ್ಟಿಗೆ ಹೋಲಿಸಿದರೆ ಪ್ರಸ್ತುತ ಭಾರತದ ಸ್ಥಿತಿ ಅತ್ಯಂತ ಸದೃಢವಾಗಿದೆ. ಅಂದು ದೇಶದಲ್ಲಿ ಹಣದುಬ್ಬರ (Inflation) ಎರಡಂಕಿ ದಾಟಿತ್ತು, ಆದರೆ ಪ್ರಸ್ತುತ ಹಣದುಬ್ಬರ ನಿಯಂತ್ರಣದಲ್ಲಿದೆ. ಆದ್ದರಿಂದ ರೂಪಾಯಿ ಅಪಮೌಲ್ಯದಿಂದ ಎದುರಾಗಬಹುದಾದ ಸಾಧಾರಣ ಹಣದುಬ್ಬರದ ಒತ್ತಡವನ್ನು ತಡೆದುಕೊಳ್ಳುವ ಶಕ್ತಿ ಭಾರತದ ಆರ್ಥಿಕತೆಗೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಾಗತಿಕ ಉದ್ವಿಗ್ನತೆ ಹಾಗೂ ತೈಲ ಬೆಲೆ ಏರಿಕೆಯ ಒತ್ತಡದಿಂದಾಗಿ ಇತ್ತೀಚೆಗೆ ರೂಪಾಯಿ ಮೌಲ್ಯವು ಪ್ರತಿ ಡಾಲರ್‌ಗೆ ದಾಖಲೆಯ 97 ರೂಪಾಯಿಗಳ ಸಮೀಪಕ್ಕೆ ತಲುಪಿತ್ತು. ಆರ್‌ಬಿಐ ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ಮಾಡಿ ರೂಪಾಯಿ ಮತ್ತಷ್ಟು ಕುಸಿಯದಂತೆ ತಡೆದಿತ್ತು. ಆದರೆ, ವಾರ್ಷಿಕ ಮುಂಗಡ ಮಾರುಕಟ್ಟೆಯಲ್ಲಿ (Forward Market) ಡಾಲರ್ ಮೌಲ್ಯ ಈಗಾಗಲೇ 100 ರ ಗಡಿಯನ್ನು ದಾಟಿರುವುದನ್ನು ತಜ್ಞರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪನಗರಿಯಾ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸುಡು ಬೇಸಿಗೆಯಲ್ಲಿ ನೀರಿನ ಟ್ಯಾಂಕ್​ಗೆ ಅಲ್ಯೂಮಿನಿಯಂ ಫಾಯಿಲ್ ಸುದ್ದಿದರೆ ಏನು ಲಾಭ?

Source link

ಸ್ವಿಚ್ ಆಫ್ ಮಾಡಿದ್ರೂ ಕರೆಂಟ್ ಎಳೆಯುವ ಈ 6 ಉಪಕರಣಗಳು, ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್

Source link