Category Archives: Blog

Your blog category

ಅಸ್ಸಾಂನ ಸಾಂಪ್ರದಾಯಿಕ ಸೆರ್ಜಾ ವಾದ್ಯ ನುಡಿಸಿದ ಪ್ರಧಾನಿ ಮೋದಿ – Kannada News | PM Narendra Modi tries his hand at the Serja a traditional musical instrument of the Bodo community

ಗುವಾಹಟಿ, ಜನವರಿ 17: ಅಸ್ಸಾಂನ ಗುವಾಹಟಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂ ಸಂಸ್ಕೃತಿಗೆ ಜಾಗತಿಕ ಮನ್ನಣೆ ನೀಡುವುದಾಗಿ ಪ್ರತಿಜ್ಞೆ ಮಾಡಿದರು. ಈ ವೇಳೆ ಅಸ್ಸಾಂ ಜನರಿಗೆ ಪ್ರಧಾನಿ ಮೋದಿಗೆ (PM Modi in Guwahati) ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಅಸ್ಸಾಂನ ಬಗುರುಂಬಾ ದ್ವೌ 2026 ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿಗೆ ಬೋಡೋ ಸಮುದಾಯದ ಸಾಂಪ್ರದಾಯಿಕ ಸಂಗೀತ ವಾದ್ಯವಾದ ಸೆರ್ಜಾವನ್ನು ನೀಡಲಾಯಿತು. ಈ ವೇಳೆ ಅದನ್ನು ಹೇಗೆ ನುಡಿಸುವುದೆಂದು ಕೇಳಿ ತಿಳಿದುಕೊಂಡ ಪ್ರಧಾನಿ ಮೋದಿ ಆ ವಾದ್ಯವನ್ನು ನುಡಿಸಿದರು. ಇದಕ್ಕೆ ಸಾವಿರಾರು ಕಲಾವಿದರಿಂದ ಭಾರೀ ಚಪ್ಪಾಳೆ ದೊರಕಿತು.

“2020ರ ಬೋರೋ ಶಾಂತಿ ಒಪ್ಪಂದವು ಶಾಶ್ವತ ಶಾಂತಿಯನ್ನು ತರುವಲ್ಲಿ ಸಹಾಯ ಮಾಡಿದೆ ಮತ್ತು ಅಸ್ಸಾಂನಲ್ಲಿ ಸಂಗೀತ ವಾದ್ಯಗಳ ಶಬ್ದವನ್ನು ಗುಂಡಿನ ಶಬ್ದವು ಬದಲಾಯಿಸಿದೆ. ನಾನು ಅಸ್ಸಾಮಿ ಸಂಸ್ಕೃತಿಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿದರೆ ಅಥವಾ ನನ್ನೊಂದಿಗೆ ಗಮೋಚಾ ಹೊಂದಿದ್ದರೆ, ಕಾಂಗ್ರೆಸ್ ನನ್ನನ್ನು ಗೇಲಿ ಮಾಡುತ್ತದೆ. ಅಸ್ಸಾಂಗೆ ಆಗಾಗ ಭೇಟಿ ನೀಡುವ, ರಾಜ್ಯದ ಅಭಿವೃದ್ಧಿಗೆ ಬದ್ಧತೆಯನ್ನು ತೋರಿಸುವ ಏಕೈಕ ಪ್ರಧಾನಿ ನಾನು ಎಂದು ಪ್ರಧಾನಿ ಮೋದಿ ಹೇಳಿದರು.

“ನಾನು ಅಸ್ಸಾಂಗೆ ಭೇಟಿ ನೀಡಿದಷ್ಟು ಬೇರೆ ಯಾವುದೇ ಪ್ರಧಾನಿ ಭೇಟಿ ನೀಡಿಲ್ಲ. ಅಸ್ಸಾಂನ ಸಂಸ್ಕೃತಿಯನ್ನು ಜಾಗತಿಕವಾಗಿ ಗುರುತಿಸಬೇಕೆಂದು ನಾನು ಬಯಸುತ್ತೇನೆ ಮತ್ತು ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದ ಮೋದಿ ಬಾಗೂರುಂಬಾ ನೃತ್ಯದ ಅಪಾರ ಸಾಂಸ್ಕೃತಿಕ ಮಹತ್ವವನ್ನು ಶ್ಲಾಘಿಸಿದರು. ಈ ಪ್ರದರ್ಶನವು ಬೋಡೋ ಸಮುದಾಯದ ಸಂಪ್ರದಾಯಗಳು, ಮೌಲ್ಯಗಳು ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ: ಸಿಎಂ, ಡಿಸಿಎಂ ಭಾಗಿ – Kannada News | Veteran congress leader Dr Bhimanna Khandre funeral with full government honours: CM, DCM attend

ಬೀದರ್, ಜನವರಿ 17: ಜಿಲ್ಲೆ ಭಾಲ್ಕಿಯ ಚಿಕಲ್ ಚೆಂದ‌ ರಸ್ತೆಯ ಜಮೀನಿನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ತಂದೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಪಂಚಭೂತಗಳಲ್ಲಿ ಲೀನರಾದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಉನ್ನತ ರಾಜಕೀಯ ಗಣ್ಯರು, ಮುಖಂಡರು ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

PM Modi in Assam: ಗುವಾಹಟಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Modi leads roadshow in Guwahati during Assam visit

ಗುವಾಹಟಿ, ಜನವರಿ 17: ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಸಂಜೆ ಗುವಾಹಟಿಯಲ್ಲಿ ವರ್ಣರಂಜಿತ ರೋಡ್ ಶೋನಲ್ಲಿ ಭಾಗವಹಿಸಿದರು. ಎರಡು ದಿನಗಳ ಅಸ್ಸಾಂ ಪ್ರವಾಸದ ಮೊದಲ ದಿನವಾದ ಇಂದು ಅಸ್ಸಾಂನ ವೈವಿಧ್ಯಮಯ ಸಾಂಸ್ಕೃತಿಕ ನೃತ್ಯಗಳನ್ನು ಮೋದಿ ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಅಸ್ಸಾಂ ರಾಜಧಾನಿ ಗುವಾಹಟಿಗೆ ಆಗಮಿಸಿದರು. ತಮ್ಮ 2 ದಿನಗಳ ಪ್ರವಾಸದಲ್ಲಿ ಅವರು ಸುಮಾರು 7,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಎಲ್‌ಜಿಬಿಐಎ) ಹೊರಗಿನ ರಾಷ್ಟ್ರೀಯ ಹೆದ್ದಾರಿ-17 ರ ಸುತ್ತಿನಿಂದ ರೋಡ್ ಶೋ ಪ್ರಾರಂಭವಾಗಿ ಸುಮಾರು 4 ಕಿಲೋಮೀಟರ್ ದೂರ ನಡೆಯಿತು. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ರೋಡ್ ಶೋ ಸಮಯದಲ್ಲಿ ಮೋದಿ ಅವರೊಂದಿಗೆ ಇದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಅಸ್ಸಾಂ ಜನರಿಗೆ ಗೌರವ ಕೊಡಲಿಲ್ಲ, ವಲಸಿಗರಿಗೆ ಮಣೆ ಹಾಕಿತು; ಗುವಾಹಟಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Congress dislikes people of Assam likes foreign infiltrators PM Modi attacks opposition in Guwahati

ಗುವಾಹಟಿ, ಜನವರಿ 17: ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಗುವಾಹಟಿಗೆ ಭೇಟಿ ನೀಡಿದ್ದಾರೆ. ಬೋಡೋಲ್ಯಾಂಡ್ ಅನ್ನು ನಿರ್ಲಕ್ಷಿಸುವಲ್ಲಿ ಮತ್ತು ರಾಜಕೀಯ ಲಾಭಕ್ಕಾಗಿ ಅಕ್ರಮ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುವಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಗಳ ಪಾತ್ರ ದೊಡ್ಡದು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಬೋಡೋಲ್ಯಾಂಡ್ ಸಂಪರ್ಕವನ್ನು ಮುಖ್ಯವಾಹಿನಿಯಿಂದ ಕಡಿತಗೊಳಿಸಿತು. ಇದರಿಂದಾಗಿ ಒಳನುಸುಳುವವರು ಮತ ಬ್ಯಾಂಕ್ ರಾಜಕೀಯಕ್ಕಾಗಿ ಈ ಪ್ರದೇಶವನ್ನು ಬಳಸಿಕೊಳ್ಳಲು ಸುಲಭವಾಯಿತು ಎಂದು ಮೋದಿ ಹೇಳಿದ್ದಾರೆ.

ಅಸ್ಸಾಂ ರಾಜ್ಯದಲ್ಲಿ ಒಂದು ಕಾಲದಲ್ಲಿ ಹತ್ಯೆಗಳು ನಿಯಮಿತವಾಗಿತ್ತು. ಇಂದು, ಅಸ್ಸಾಂ ರಾಜ್ಯವು ಅದರ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಣ್ಣಗಳಿಂದ ತುಂಬಿದೆ. ಬಿಜೆಪಿಯ ಆಡಳಿತದಲ್ಲಿ ಅಸ್ಸಾಂನ ರೂಪಾಂತರವಾಗಿದೆ. ಭೂತಕಾಲದ ಹಿಂಸಾತ್ಮಕತೆಯನ್ನು ಈಗ ನಡೆಯುತ್ತಿರುವ ಸಾಂಸ್ಕೃತಿಕ ಪುನರುಜ್ಜೀವನದೊಂದಿಗೆ ಹೋಲಿಸಿ ನೋಡಿದರೆ ಆ ಬದಲಾವಣೆ ತಿಳಿಯುತ್ತದೆ. ಅಸ್ಸಾಂನಲ್ಲಿ ಪ್ರತಿಧ್ವನಿಸುತ್ತಿದ್ದ ಗುಂಡೇಟಿನ ಶಬ್ದಗಳ ಬದಲಾಗಿ ಈಗ ಶಾಂತಿ ಮತ್ತು ಸ್ಥಿರತೆಯನ್ನು ಸಂಕೇತಿಸುವ ಸಂಗೀತ ವಾದ್ಯಗಳ ಶಬ್ದಗಳು ಕೇಳಿಬರುತ್ತಿವೆ ಎಂದು ಮೋದಿ ಬಣ್ಣಿಸಿದರು.

ಇದನ್ನೂ ಓದಿ: Vande Bharat Sleeper Train: ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಭೂಪೇನ್ ಹಜಾರಿಕಾ ಅವರಿಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿದ್ದು ಕಾಂಗ್ರೆಸ್ ಪಕ್ಷ. ಅಸ್ಸಾಂನಲ್ಲಿ ಸೆಮಿಕಂಡಕ್ಟರ್ ಸೌಲಭ್ಯವನ್ನು ಸ್ಥಾಪಿಸುವುದನ್ನು ಕಾಂಗ್ರೆಸ್ ಪಕ್ಷವು ವಿರೋಧಿಸಿತು. ಕಾಂಗ್ರೆಸ್ ಪಕ್ಷವು ಅಸ್ಸಾಂ ಜನರನ್ನು ಇಷ್ಟಪಡುವುದಿಲ್ಲ. ಅವರು ವಿದೇಶಿ ನುಸುಳುಕೋರರನ್ನು ಪ್ರೀತಿಸುತ್ತಾರೆ. ಏಕೆಂದರೆ ಅವರು ಇಲ್ಲಿಗೆ ಬಂದು ಕಾಂಗ್ರೆಸ್ ಪಕ್ಷದ ಕಟ್ಟಾ ಬೆಂಬಲಿಗರಾಗುತ್ತಾರೆ. ಅದಕ್ಕಾಗಿಯೇ ಕಾಂಗ್ರೆಸ್ ನುಸುಳುಕೋರರನ್ನು ಪ್ರೋತ್ಸಾಹಿಸಿತು. ಆದರೆ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಪ್ರಸ್ತುತ ಬಿಜೆಪಿ ಸರ್ಕಾರವು ಲಕ್ಷಾಂತರ ಬಿಘಾ ಅತಿಕ್ರಮಣಗೊಂಡ ಭೂಮಿಯನ್ನು ಮುಕ್ತಗೊಳಿಸುತ್ತಿದೆ ಎಂದು ಮೋದಿ ಹೇಳಿದರು.

ಬೋಡೋ ಸಮುದಾಯದ ಸಾಂಪ್ರದಾಯಿಕ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಅಸ್ಸಾಂಗೆ ಆಗಾಗ ಭೇಟಿ ನೀಡುವುದು ಅಸ್ಸಾಂ ರಾಜ್ಯದ ಅಭಿವೃದ್ಧಿಗೆ ತಮ್ಮ ಬದ್ಧತೆಯ ಸಂಕೇತವೆಂದು ಹೇಳಿದರು. ಕಾಂಗ್ರೆಸ್ ಬೋಡೋಲ್ಯಾಂಡ್ ಅನ್ನು ನಿರ್ಲಕ್ಷಿಸುತ್ತಿದೆ ಮತ್ತು ಒಳನುಸುಳುವಿಕೆ ಸಮಸ್ಯೆಗಳೊಂದಿಗೆ ರಾಜಕೀಯ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.

ಇದನ್ನೂ ಓದಿ: PM Modi in Assam: ಗುವಾಹಟಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲು, ಪ್ರಧಾನಿ ಮೋದಿ ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ನಡೆದ ಭವ್ಯ ರೋಡ್ ಶೋನಲ್ಲಿ ಭಾಗವಹಿಸಿದರು. ಸಾವಿರಾರು ಉತ್ಸಾಹಿ ಬೆಂಬಲಿಗರು ಬೀದಿಗಳಲ್ಲಿ ನೆರೆದು, ಜೋರಾಗಿ ಘೋಷಣೆಗಳು ಮತ್ತು ಧ್ವಜಗಳನ್ನು ಬೀಸುವ ಮೂಲಕ ಪ್ರಧಾನಿಯನ್ನು ಸ್ವಾಗತಿಸಿದರು. ರೋಡ್ ಶೋ ಸಮಯದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಧಾನಿ ಮೋದಿ ಅವರೊಂದಿಗೆ ಇದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ – Kannada News | India Women’s Cricket Squad for Australia Tour Announced: Kaur Leads, shreyank Patil in T20Is

ಪ್ರಸ್ತುತ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ನಡುವೆ ಭಾರತ ಮಹಿಳಾ ತಂಡದ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ವನಿತಾ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಎರಡೂ ತಂಡಗಳನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಎಂದಿನಂತೆ ಸ್ಮೃತಿ ಮಂಧಾನ ತಂಡದ ಉಪನಾಯಕತ್ವವಹಿಸಿಕೊಂಡಿದ್ದಾರೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್​ 1 ರಂದು ನಡೆಯಲಿರುವ ಏಕದಿನ ಸರಣಿಯ ಕೊನೆಯ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಎರಡೂ ಸರಣಿಗಳಿಗೆ ಭಾಗಶಃ ಒಂದೇ ತಂಡವನ್ನು ಆಯ್ಕೆ ಮಾಡಲಾಗಿದೆ. ಖುಷಿಯ ಸಂಗತಿಯೆಂದರೆ ಟಿ20 ಸರಣಿಗೆ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

Published On – 10:00 pm, Sat, 17 January 26

Source link

ನಾಯಿ – ನಾಗರ ಹಾವಿನ ಮಧ್ಯೆ ಬಿಗ್​ ಫೈಟ್​​​​​​​​​​​​​​​: ಸಾವನ್ನಪ್ಪಿದ ಹಾವು, ನಾಯಿ ಸ್ಥಿತಿ ಏನಾಯಿತು ನೋಡಿ? – Kannada News | Ittige Village Shock: Rottweiler Cobra Battle Leads to Both Deaths, Public Mourns

ಚಿಕ್ಕಮಗಳೂರು, ಜ.17: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಾಕು ನಾಯಿ ಹಾಗೂ ನಾಗರಹಾವಿನ ನಡುವೆ ಬಿಗ್​​ ಫೈಟ್​​ ನಡೆದಿದೆ. ರಾಟ್ ವಿಲರ್ ನಾಯಿ ನಾಗರಹಾವಿನ ಜೊತೆ ಒಂದು ಗಂಟೆ ಫೈಟ್​ ಮಾಡಿದೆ. ಆದರೆ ಈ ಜಗಳದಲ್ಲಿ ನಾಗರಹಾವು ಹಾಗೂ ರಾಟ್ ವಿಲರ್ ಶ್ವಾನ ಸಾವನ್ನಪ್ಪಿದೆ. ಈ ಶ್ವಾನ ಮೊದಲು ನಾಗರ ಹಾವನ್ನು ಸಾಯಿಸಿ, ನಂತರ ತನ್ನ ಗೂಡಿಗೆ ಹೋಗಿ ಸಾವನ್ನಪ್ಪಿದೆ. ನಾಗರಹಾವು ಕಚ್ಚಿದರಿಂದ ಶ್ವಾನ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಸಾಕಿದ ಶ್ವಾನ ಹಾಗೂ ನಾಗರಹಾವು ಸಾವನ್ನಪ್ಪಿದ್ದರಿಂದ ಸ್ಥಳೀಯರಿಗೆ ಬೇಸರ ಉಂಟಾಗಿದೆ. ಗ್ರಾಮಸ್ಥರು ನಾಗಹಾವಿಗೆ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಲಸಿಗರ ಶೆಡ್​ಗೆ ನುಗ್ಗಿ ಬೆದರಿಕೆ: ಪುನೀತ್​ ಕೆರೆಹಳ್ಳಿಗೆ ಜಾಮೀನು; ಹೋರಾಟ ಆರಂಭವೆಂದ ಹಿಂದೂ ಕಾರ್ಯಕರ್ತ – Kannada News | Puneeth Kerehalli Gets Conditional Bail in Anekal; Vows to Continue Anti Immigrant Fight

ಆನೇಕಲ್, ಜನವರಿ 17: ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಪೌರತ್ವ ದಾಖಲೆಗಳನ್ನು ಪಡೆದು ಪರಿಶೀಲಿಸಿ ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಆರೋಪದ ಹಿನ್ನೆಲೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನ (Puneeth Kerehalli) ಪೊಲೀಸರು ಬಂಧಿಸಿದ್ದರು. ಕೆರೆಹಳ್ಳಿ ಬಂಧನದ ಬಳಿಕ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಇದೀಗ ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮತ್ತವರ ತಂಡ ಕಳೆದ ಕೆಲ ದಿನಗಳಿಂದ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಬಿಂಗೀಪುರ ಗ್ರಾಮದಲ್ಲಿ ಶಂಕಿತ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಪುನೀತ್ ಕೆರೆಹಳ್ಳಿ ತಂಡ ತೆರಳಿದ್ದರು. ಅಲ್ಲಿದ್ದ ವಲಸೆ ಕಾರ್ಮಿಕರ ದಾಖಲೆಗಳನ್ನ ಪರಿಶೀಲನೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ

ಇದಾದ ಬಳಿಕ ಜಾಗದ ಮಾಲೀಕ ಸಿದ್ದೇಶ್ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ ಇತರರ ವಿರುದ್ಧ ವಲಸೆ ಕಾರ್ಮಿಕರ ಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಬನ್ನೇರುಘಟ್ಟ ಪೊಲೀಸರು ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ಠಾಣೆ ಬಳಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಬಾಂಗ್ಲಾ ವಲಸಿಗರಿಗೆ ಇರಲು ಸ್ಥಳ ನೀಡಿದ ಜಾಗದ ಮಾಲೀಕನ ಮೇಲೆ ಕ್ರಮವಾಗಬೇಕೆಂದು ಒತ್ತಾಯಿಸಿದರು.

ಇನ್ನು ಪುನೀತ್ ಕೆರೆಹಳ್ಳಿಯನ್ನ ವಿಚಾರಣೆ ನಡೆಸಿದ ಬನ್ನೇರುಘಟ್ಟ ಪೊಲೀಸರು ತದನಂತರ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸದ್ಯ ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು ತಲಾ 10 ಸಾವಿರ ರೂ ನಗದು ಶ್ಯೂರಿಟಿ ಹಾಗೂ ಪರ್ಸನಲ್ ಬಾಂಡ್ ಷರತ್ತು ವಿಧಿಸಲಾಗಿದೆ.

ಬಾಂಗ್ಲಾ ವಲಸಿಗರ ವಿರುದ್ಧ ನಮ್ಮ ಹೋರಾಟ ಹೋರಾಟ: ಪುನೀತ್ ಕೆರೆಹಳ್ಳಿ

ಜಾಮೀನು ಪಡೆದು ಕೋರ್ಟ್​​ನಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಇನ್ನೂ ಜಾಮೀನು ಸಿಕ್ಕ ಬಳಿಕ ಮಾತನಾಡಿದ ಪುನೀತ್ ಕೆರೆಹಳ್ಳಿ, ಬಾಂಗ್ಲಾ ವಲಸಿಗರ ವಿರುದ್ಧ ನಮ್ಮ ಹೋರಾಟ ಅಂತ್ಯ ಅಲ್ಲ, ಇಂದಿನಿಂದಲೇ ಹೋರಾಟ ಆರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ಪರವಾಗಿದೆ, ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಹಚ್ಚುವ ಕೆಲಸ ಮಾಡಿದ್ದೇವೆ. ಎಡಪಂಥೀಯರ ಒತ್ತಡಕ್ಕೆ ಮಣಿದು ಸರ್ಕಾರ ರಾತ್ರಿ ವೇಳೆ ಬಂಧಿಸಿದೆ. ಠಾಣೆಯಲ್ಲೇ ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳಿವೆ, ಅದ್ರೂ ಕೂಡ ಬಂಧನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ

ಸದ್ಯ ಪುನೀತ್ ಕೆರೆಹಳ್ಳಿ ಮತ್ತವರ ತಂಡಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಬಾಂಗ್ಲಾ ವಲಸಿಗರ ವಿರುದ್ಧ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ. ಇನ್ನೊಂದೆಡೆ ವಲಸೆ ಕಾರ್ಮಿಕರಿಗೆ ಪುನೀತ್ ಕೆರೆಹಳ್ಳಿ ತಂಡ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸರ್ಕಾರ ಮತ್ತು ಪೊಲೀಸರು ಯಾವ ರೀತಿ ಕ್ರಮಕೈಗೊಳ್ಳುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಧ್ರುವಂತ್​​ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್ – Kannada News | Why Dhruvanth Gets Kichchana Chappale Sudeep Clarifies on Pre Finale

ಕಿಚ್ಚ ಸುದೀಪ್ (Sudeep) ಅವರು ಕಳೆದ ವಾರ ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಕೊಟ್ಟಿದ್ದು ಗೊತ್ತೇ ಇದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಈ ವಿಷಯ ಕಿಚ್ಚನ ಕಿವಿಗೂ ಬಿದ್ದಿದೆ. ಈ ಚರ್ಚೆಯ ಬಗ್ಗೆ ಅವರಿಗೆ ಬೇಸರ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಬಗ್ಗೆ ಅವರು ವೀಕೆಂಡ್ ಎಪಿಸೋಡ್​​ನಲ್ಲಿ ಮಾತನಾಡಿದ್ದಾರೆ.

ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು ಚರ್ಚೆ ಆದವು. ಸುದೀಪ್ ಅವರನ್ನೇ ಅನೇಕರು ಟೀಕಿಸಿದರು. ಈ ವಿಷಯದಲ್ಲಿ ಸುದೀಪ್ ಅಭಿಪ್ರಾಯ ಬೇರೆಯದೇ ಇದೆ ಎನ್ನಬಹುದು. ಅವರು ಜನವರಿ 17ರ ಪ್ರೀ-ಫಿನಾಲೆಯಲ್ಲಿ ಈ ಬಗ್ಗೆ ಅವರು ಮಾತನಾಡಿದರು.

‘ಕಿಚ್ಚನ ಚಪ್ಪಾಳೆ ನನ್ನ ಅನಿಸಿಕೆ. ಯಾರು ಅರ್ಹರೋ ಅವರನ್ನು ಹುರಿದುಂಬಿಸಬೇಕು ಎಂದು ಶಾಲೆಯಲ್ಲಿ ಟೀಚರ್ ಹೇಳಿಕೊಟ್ಟಿದ್ದರು. ಬಿಗ್ ಬಾಸ್ ಒಬ್ಬ ವ್ಯಕ್ತಿ ಇಂದ ಅಲ್ಲ, ಒಬ್ಬ ಸುದೀಪ್ ಇಂದ ಅಲ್ಲ. ಬಿಗ್ ಬಾಸ್ ಎಲ್ಲರ ಕೊಡುಗೆ. ಪ್ರತಿಯೊಬ್ಬರೂ ಇದ್ದರೇನೆ ಬಿಗ್ ಬಾಸ್. ಅವರು ಗೆಲ್ಲದೆ ಇರಬಹುದು. ಆದರೆ, ಬಿಗ್ ಬಾಸ್ ಮನೆಗೆ ಅವರ ಕೊಡುಗೆ ಇದೆ ಎಂಬುದನ್ನು ಒಪ್ಪಲೇಬೇಕು’ ಎಂದರು ಕಿಚ್ಚ ಸುದೀಪ್.

ಇದನ್ನೂ ಓದಿ: ಗಿಲ್ಲಿಗೆ ಒಳ್ಳೆಯದಾಗಲಿ, ಅವನ ಹೆಸರಲ್ಲಿ ನಡೆಯುತ್ತಿರುವ ನಾಟಕಕ್ಕಲ್ಲ; ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್

ಶೋ ನಡೆಸಿಕೊಡೋ ನಮಗೆ ಯಾರು ಹೊರ ಹೋಗ್ತಾರೆ ಎಂಬ ವಿಷಯ ಗೊತ್ತಿರೋದಿಲ್ಲವಾ? ಹಾಗಿದ್ರೂ ಕೊಟ್ಟಿದ್ದೇವೆ ಎಂದರೆ ಅದಕ್ಕೆ ಅರ್ಥ ಇದೆ. ಗೆಲ್ಲುವವರು ಯಾರೇ ಇರಬಹುದು. ಎಲ್ಲರ ಕಾಂಟ್ರಿಬ್ಯೂಷನ್ ಇದೆ ಎಂದಾಗ ನ್ಯಾಯವಾಗಿ ಮನಸ್ಫೂರ್ವಕವಾಗಿ ಧ್ರುವಂತ್​​ಗೆ ಕೊಟ್ಟೆ. ಚಪ್ಪಾಳೆ ವಿಷಯದಲ್ಲಿ ಜೀವನ್ನೇ ಜಾಲಾಡಿಬಿಟ್ರಲ್ಲ. ಕಿಚ್ಚನ ಚಪ್ಪಾಳೆಯಲ್ಲಿ ತಲೆಕೆಡಿಸಿಕೊಳ್ಳೋಬೇಡಿ. ನಮ್ಮದು ಉದ್ಧಾರ ಮಾಡೋ ಚಪ್ಪಾಳೆ, ಹೊರಗೆ ತಟ್ಟುತ್ತಾ ಇರೋದು ಹಾಳು ಮಾಡೋ ಚಪ್ಪಾಳೆ. ನಿಮ್ಮ ಜೀವನ ಮೇಲೆ ಗಮನ ಹರಿಸಿ. ಕಿಚ್ಚ ಚಪ್ಪಾಳೆ ಮೇಲೆ ಅಲ್ಲ’ ಎಂದರು ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗದಗದಲ್ಲಿ ಮತ್ತೊಂದು ಅಚ್ಚರಿಯ ಘಟನೆ: ಆ ಒಂದು ಶಬ್ದಕ್ಕೆ ದುರ್ಗಮ್ಮನ ಮೂರ್ತಿ ಕಾರಣ – Kannada News | Durga Devi Anklet Miracle in Korlahallis Anjaneya Temple

ಗದಗ, ಜ.17: ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಶಬ್ದವೊಂದು ಕೇಳಿ ಗ್ರಾಮಸ್ಥರ ಅಚ್ಚರಿಗೊಂಡಿದ್ದಾರೆ. ದೇಗುಲದ ಗರ್ಭಗುಡಿಯಲ್ಲಿ ದುರ್ಗಾದೇವಿ ಮತ್ತು ಮಾಯಮ್ಮ ದೇವಿಯ ಗೆಜ್ಜೆ ಸದ್ದು ಹಾಗೂ ಗಂಟೆ ನಾದ ಕೇಳಿಬರುತ್ತಿದ್ದು, ಇದು ಮೂರು ದಿನಗಳಿಂದ ಈ ಶಬ್ದ ಕೇಳಿ ಬರುತ್ತಿದೆ. ಗ್ರಾಮಸ್ಥರಾದ ಗಂಗವ್ವ ಅವರ ಪ್ರಕಾರ, ದುರ್ಗಮ್ಮನ ಮೂರ್ತಿಯನ್ನು ಬಣ್ಣಕ್ಕೆ ತಂದ ನಂತರ ಈ ಘಟನೆಗಳು ಪ್ರಾರಂಭವಾಗಿವೆ. ಬುಧವಾರದಂದು ದೇಗುಲಕ್ಕೆ ತಂದ ಮೂರ್ತಿಗಳಿಂದ ಈ ಶಬ್ಧಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ಇದನ್ನು ಪವಾಡವೆಂದು ಬಣ್ಣಿಸಿದ್ದಾರೆ. ಹಗಲಿನಲ್ಲಿಯೂ, ಮಧ್ಯಾಹ್ನ 12 ಗಂಟೆಗೆ, ಗೆಜ್ಜೆ ಮತ್ತು ಗಂಟೆ ಸದ್ದು ಕೇಳಿಸಿದ್ದು, ಕೆಲವೊಮ್ಮೆ ನಿರಂತರವಾಗಿ ಈ ಶಬ್ದ ಕೇಳಿ ಬರುತ್ತದೆ. ಇದರಿಂದ ಗ್ರಾಮಸ್ಥರು ರಾತ್ರಿಯಿಡೀ ದೇವಸ್ಥಾನದ ಬಳಿ ಜಾಗರಣೆ ಮಾಡಿದ್ದಾರೆ. ದುರ್ಗಾದೇವಿ ಮೂರ್ತಿಗಳಿಗೆ ಜಾತ್ರೆ ಮಾಡಬೇಕಿತ್ತೇ ಅಥವಾ ಬಣ್ಣ ಲೇಪಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಏನಾದರೂ ವಿಧಿವಿಧಾನ ಲೋಪವಾಗಿದೆಯೇ ಎಂಬ ಗೊಂದಲ ಗ್ರಾಮಸ್ಥರಲ್ಲಿದೆ. ಈ ದೈವಿಕ ಶಕ್ತಿಯು ಸರಿಪಡಿಸಲು ಏನು ಮಾಡಬೇಕು ಎಂದು ಅವರು ಚಿಂತಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಸರ್ಕಾರದ ವಿರುದ್ಧ ಗುಡುಗಿದ ಕೇಸರಿ ಪಡೆ – Kannada News | BJP massive rally for Ballari Riots: BJP leaders spark on against the Karnataka Congress government

ಬಳ್ಳಾರಿ, ಜನವರಿ 17: ಬಳ್ಳಾರಿ ಗಲಭೆಯನ್ನ (Ballari riots) ಖಂಡಿಸಿ ಇಂದು ಬಿಜೆಪಿ (bjp) ಬೃಹತ್ ಪ್ರತಿಭಟನೆ ಮಾಡಿತು. ಸಮಾವೇಶದ ಮೂಲಕ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ. ನಿಮ್ಮ ಗುಂಡೇಟಿಗೆ ನಾವು ಹೆದರಲ್ಲ ಅಂತಾ ಸಂದೇಶ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಯಥಾಪ್ರಕಾರ, ಗಲಭೆಗೆ ಬಿಜೆಪಿಯೇ ಕಾರಣ ಅಂತಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬಳ್ಳಾರಿ ಸಮರ ಸಾರಿದೆ. ಜನವರಿ 1ರ ಗಲಭೆ ಖಂಡಿಸಿ ಕದನಕ್ಕಿಳಿದಿದೆ. ಇದರ ಭಾಗವಾಗಿ ಇವತ್ತು ಗಣಿನಾಡಿನಲ್ಲಿ ಕೇಸರಿ ಕಲಿಗಳು ಬೃಹತ್ ಸಮಾವೇಶ ನಡೆಸಿದ್ದಾರೆ. APMC ಯಾರ್ಡ್ ಮೈದಾನದಲ್ಲಿ ನಡೆದ ಈ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದ್ದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್​.ಅಶೋಕ್, ಛಲವಾದಿ ನಾರಾಯಸ್ವಾಮಿ, ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾದ್ರು. ಸರ್ಕಾರದ ನಡೆಯನ್ನೇ ಖಂಡಿಸಿದ್ದಾರೆ.

ಭರತ್ ರೆಡ್ಡಿಯನ್ನ ಅರೆಸ್ಟ್ ಮಾಡಲು ಪೊಲೀಸರಿಗೆ ಆಗುವುದಿಲ್ಲವೆ? ಶ್ರೀರಾಮುಲು ಪ್ರಶ್ನೆ

ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಭರತ್ ರೆಡ್ಡಿ ಸಣ್ಣ ವಯಸ್ಸಿನಲ್ಲಿ ಶಾಸಕನಾಗಿ ದರ್ಪ‌‌ ತೋರಿಸುತ್ತಿದ್ದಾರೆ. ನಮ್ಮ ರಕ್ಷಣೆಗಾಗಿ ನಾವು ಈ ಸಮಾವೇಶ ಮಾಡುತ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗರ ಜನರ ರಕ್ಷಣೆಗಾಗಿ ಸಮಾವೇಶ ಮಾಡಿದ್ದೇವೆ. ‌ನಾನಾಗಲೀ, ಜನಾರ್ದನ ರೆಡ್ಡಿ ಶಾಸಕರಾಗಿದ್ದಾಗ ಈ ರೀತಿ ನಡೆದುಕೊಂಡಿದ್ದೇವಾ? ನಿಮ್ಮಲ್ಲರ ಆಶೀರ್ವಾದದಿಂದ ಇಂದು ಜನಾರ್ದನ ರೆಡ್ಡಿಗೆ ಅನಾಹುತ ತಪ್ಪಿದೆ ಎಂದರು.

ಇದನ್ನೂ ಓದಿ: ಬ್ಯಾನರ್​​ ಗಲಭೆ: ನಾಳೆ ಬಳ್ಳಾರಿಗೆ ಬಿಜೆಪಿ ನಾಯಕರ ದಂಡು; ಮದ್ಯ ಮಾರಾಟ ಬ್ಯಾನ್

ಭರತ್ ರೆಡ್ಡಿ ನೀನು ಪಾತಾಳದಲ್ಲಿ ಅಡಗಿಕೊಂಡಿದ್ದರು ಬಿಡುವುದಿಲ್ಲ. ಅಂದು ಎಲ್ಲಿ ತಪ್ಪಿಸಿಕೊಳ್ಳುತ್ತೀಯಾ, ನಿನ್ನ ಯಾರು ರಕ್ಷಣೆ ಮಾಡುತ್ತಾರೆ ಅಂತಾ ನಾನೂ ನೋಡುತ್ತೇನೆ. ಭರತ್ ರೆಡ್ಡಿಯನ್ನು ಅರೆಸ್ಟ್ ಮಾಡಲು ಪೊಲೀಸರಿಗೆ ಆಗುವುದಿಲ್ಲವೆ? ಪೊಲೀಸರೇ ನೀವೇನು ಮಾಡುತ್ತಿದ್ದೀರಿ? ನಿಮಗೂ ಪಾಲು ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

ಶ್ರೀರಾಮುಲು, ಶಾಸಕ ಭರತ್ ರೆಡ್ಡಿ ಅವರನ್ನ ಬಂಧಿಸದ ಪೊಲೀಸರ ಸಾಮರ್ಥ್ಯ ಪ್ರಶ್ನಿಸಿದರೆ, ಮತ್ತೊಂದ್ಕಡೆ ಗಣಿದಣಿ ಜನಾರ್ದನ ರೆಡ್ಡಿ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್​ನ ಕಿತ್ತೊಗೆಯುವ ಶಪಥ ಮಾಡಿದ್ದಾರೆ. ಇಷ್ಟು ಮಾತ್ರವಲ್ಲ. ಉಳಿದ ಬಿಜೆಪಿ ನಾಯಕರು ಕೂಡ, ಕಾಂಗ್ರೆಸ್​ನ ಗುಂಡೇಟಿಗಿಂತ ನಮ್ಮ ಎದೆ ಗಟ್ಟಿ ಅಂತಾ ಭಾಷಣ ಮಾಡಿದ್ದಾರೆ.

ಮೃತ ರಾಜಶೇಖರ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ

ಬೃಹತ್ ಸಮಾವೇಶಕ್ಕೆ ಮುನ್ನ ಬಿಜೆಪಿ ನಾಯಕರು ಮೃತ ರಾಜಶೇಖರ್​ನ ಮನೆಗೆ ಭೇಟಿ ಕೊಟ್ರು. ಮೃತನ ತಾಯಿಗೆ ಸಾಂತ್ವಾನ ಹೇಳಿದ್ರು. ಬಳಿಕ ಜನಾರ್ಧನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ, 10 ಲಕ್ಷ ರೂ ಪರಿಹಾರ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಗಲಭೆಯ ಹೊಣೆಗಾರಿಕೆಯನ್ನ ಬಿಜೆಪಿ ಕಡೆಗೆ ತಿರುಗಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: ರೆಡ್ಡಿ ಬೆನ್ನಿಗೆ ನಿಂತ ಬಿಜೆಪಿ ಹೈಕಮಾಂಡ್, ದೆಹಲಿಯಿಂದ ಬಂತು ಮಹತ್ವದ ಸೂಚನೆ

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿ ಬೃಹತ್ ಹೋರಾಟ ರೂಪಿಸಿದೆ. ಗಣಿನಾಡಿನಲ್ಲಿ ನಿಂತು ಸರ್ಕಾರ ಹಾಗೂ ಸ್ಥಳೀಯ ಶಾಸಕರಿಗೆ ಎಚ್ಚರಿಕೆ ರವಾನಿಸಿರೋದಂತೂ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link