Category Archives: Blog

Your blog category

ಈ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ, ಏನ್‌ ಆಗುತ್ತೋ ಆಗಲಿ: ಶಾಸಕ ಬಾಲಕೃಷ್ಣ ಮುಂದೆ ಅಬ್ಬರಿಸಿದ ರೈತ ಮಹಿಳೆ – Kannada News | MLA Balakrishna Addresses Farmer Concerns Amidst Bidadi Township Project Meeting

ರಾಮನಗರ, ಜ.17: ಜಿಲ್ಲೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬಿಡದಿ ಬಳಿಯ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ರೈತರೊಂದಿಗೆ ಮಾತುಕತೆ ನಡೆಸಿದರು. ಸಭೆಯು 9 ಕಂದಾಯ ಗ್ರಾಮಗಳ 26 ಹಳ್ಳಿಗಳ ರೈತರ ಅರ್ಜಿ ಸ್ವೀಕಾರಕ್ಕೂ ಅವಕಾಶ ನೀಡಿತ್ತು. ಸಭೆಯ ಆರಂಭದಲ್ಲಿ ಶಾಸಕ ಬಾಲಕೃಷ್ಣ ಅವರು, ಭೂಸ್ವಾಧೀನ ಪ್ರಕ್ರಿಯೆಯು 15-20 ವರ್ಷಗಳ ಹಿಂದೆ ಆಗಿದ್ದು, ಈಗ ದಾಖಲಾತಿಗಳನ್ನು ಸರಿಪಡಿಸುವ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಸಭೆ ಕರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು. ಸರಕಾರವು ಈ ದರವನ್ನು ನಿಗದಿಪಡಿಸಿಲ್ಲ. ಎಂದು ಹೇಳಿದ್ದಾರೆ. ಈ ವೇಳೆ ಸಭೆಯಲ್ಲಿದ್ದ ರೈತ ಮಹಿಳೆಯರು, ಭೂಸ್ವಾಧೀನ ಪ್ರಕ್ರಿಯೆ ಮತ್ತು ಸರಕಾರ ನಿಗದಿಪಡಿಸಿದ ಪರಿಹಾರ ದರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ನಾವು ನಮ್ಮ ಹಕ್ಕುಗಳನ್ನು ಬಿಟ್ಟುಕೊಡುವುದಿಲ್ಲ, ಈ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ ಎಂದು ಹೇಳಿದರು. “ಸರ್ಕಾರಕ್ಕೆ ಧಿಕ್ಕಾರ”, “ನ್ಯಾಯ ಬೇಕು, ಇದು ನಮ್ಮ ಹಕ್ಕು”, “ರೈತರಿಗೆ ಜಯವಾಗಲಿ” ಎಂಬ ಘೋಷಣೆಗಳನ್ನು ಕೂಗಿದರು. ಭೂಮಿ ಸ್ವಾಧೀನಪಡಿಸಿಕೊಳ್ಳುವಿಕೆಯನ್ನು ಪ್ರಶ್ನಿಸಿ, ತಮ್ಮ ಅರ್ಜಿಯನ್ನು ಅಂಗೀಕರಿಸಬೇಕು ಮತ್ತು ತಮ್ಮ ಬೇಡಿಕೆಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! – Kannada News | Mysuru: Female Officer Threatened During NIMHANS Land Survey in CM’s Home land

‘ಇಲ್ಲೇ ನಿನ್ನ ಹೆಣ ಬೀಳತ್ತೆ’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

ಮೈಸೂರು, ಜನವರಿ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ (Mysore) ಗುಡಮಾದನಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ

ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ವೆ ನಂ. 8ರಲ್ಲಿ 5 ಎಕರೆ 5 ಗುಂಟೆ, ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ ಹಾಗೂ ಸರ್ವೆ ನಂ. 68ರಲ್ಲಿ 8 ಎಕರೆ 25 ಗುಂಟೆ ಸೇರಿ ಒಟ್ಟು 20 ಎಕರೆ ಭೂಮಿಯನ್ನು ಆಸ್ಪತ್ರೆಗಾಗಿ ಮೀಸಲಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಯಾಗಿರುವ ಆಸ್ಪತ್ರೆಯ ಜಾಗ ಗುರುತಿಸುವ ಮತ್ತು ಸ್ವಾಧೀನ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸೇರಿ ಜಮೀನು ಪರಿಶೀಲನೆಗೆ ತೆರಳಿದ್ದರು.

ನಿಂದನೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ

ಪರಿಶೀಲನೆ ವೇಳೆ ಅನಧಿಕೃತವಾಗಿ ಅಡಕೆ ತೋಟ ನಿರ್ಮಿಸಿಕೊಂಡಿದ್ದ ಜಿ.ಎಂ. ಪುಟ್ಟಸ್ವಾಮಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಶೀಲ್ದಾರ್ ತಲೆ ತೆಗೆಯಬೇಕು ಎಂದು ಧಮ್ಕಿ ಹಾಕಿರುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಬಳಿಕ ಪುಟ್ಟಸ್ವಾಮಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿಂತಿದ್ದ ಪಿಕಪ್​​ ಟ್ರಕ್​​​ಗೆ ಶಾಲಾ ಮಕ್ಕಳಿದ್ದ ಓಮಿನಿ ಡಿಕ್ಕಿ: ನಡು ರಸ್ತೆಯಲ್ಲಿ ಒದ್ದಾಡಿದ ಮಕ್ಕಳು

ಕಾರವಾರ, ಜ.17: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ಧಾಣದ ಬಳಿ ನಡೆದಿದೆ. ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಕುಮಟಾದ ಡಾ.ಎ.ವಿ.ಬಾಳಿಗಾ ಆಂಗ್ಮ ಮಾಧ್ಯಮ ಶಾಲೆಯ ವಾಹನ ಎಂದು ಹೇಳಲಾಗಿದೆ. ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೀಗ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕುಮಟಾ ಪೊಲೀಸರಿಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಮಗನ ದಾಖಲೆ ಮುರಿದ ಅಪ್ಪ: ‘RRR’ ಹಿಂದಿಕ್ಕಿದ ‘MSVPG’ – Kannada News | Megastar Chiranjeevi movie breaks RRR record in fifth day collection

ಸಂಕ್ರಾಂತಿಗೆ ತೆಲುಗಿನ ಹಲವು ಸಿನಿಮಾಗಳು ಬಿಡುಗಡೆ ಆಗಿವೆ. ಪ್ರಭಾಸ್ (Prabhas) ಸಿನಿಮಾ ಸೇರಿದಂತೆ, ಒಟ್ಟು ಐದು ದೊಡ್ಡ ಸಿನಿಮಾಗಳೇ ಬಿಡುಗಡೆ ಆಗಿವೆ. ಆದರೆ ಗೆದ್ದಿರುವುದು ಮೆಗಾಸ್ಟಾರ್ ಚಿರಂಜೀವಿ ಮಾತ್ರ. ಚಿರಂಜೀವಿ ನಟಿಸಿರುವ ‘ಮನ ಶಂಕರ ವರ ಪ್ರಸಾದ್ ಗಾರು’ (MSVPG) ಸಿನಿಮಾ ಇತರೆ ಸಿನಿಮಾಗಳನ್ನು ಬಾಕ್ಸ್ ಆಫೀಸ್​​ನಲ್ಲಿ ಹಿಂದಿಕ್ಕಿದೆ. ಅದು ಮಾತ್ರವೇ ಅಲ್ಲದೆ ಈ ಸಿನಿಮಾ ತೆಲುಗು ಚಿತ್ರರಂಗದ ಇತ್ತೀಚೆಗಿನ ಟಾಪ್ ಸಿನಿಮಾಗಳಲ್ಲಿ ಒಂದಾಗಿರುವ ‘ಆರ್​​ಆರ್​​ಆರ್’ ಸಿನಿಮಾದ ಒಂದು ದಾಖಲೆಯನ್ನೇ ಮುರಿದು ಹಾಕಿದೆ.

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಜನವರಿ 12 ರಂದು ಬಿಡುಗಡೆ ಆಗಿದ್ದು, ಬಿಡುಗಡೆ ಆದ ಮೊದಲ ದಿನ ಸುಮಾರು 84 ಕೋಟಿ ಹಣ ಗಳಿಸಿತ್ತು. ಅದಾದ ಬಳಿಕವೂ ಸಹ ಸಿನಿಮಾ ಕಲೆಕ್ಷನ್​​ನಲ್ಲಿ ಇಳಿಕೆ ಆಗಿಲ್ಲ. ಅದರಲ್ಲೂ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಲೆಕ್ಷನ್ ಗಮನಾರ್ಹ ಮಟ್ಟದಲ್ಲಿ ಸಮತೋಲನ ಕಾಯ್ದುಕೊಂಡಿದೆ. ಸಿನಿಮಾ ಬಿಡುಗಡೆ ಆಗಿ ವಾರವಾಗುತ್ತಾ ಬರುತ್ತಿದ್ದರೂ ಸಿನಿಮಾ ಈಗಲೂ ಡಬಲ್ ಡಿಜಿಟ್ ಗಳಿಕೆ ಮಾಡುತ್ತಿದೆ.

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಬಿಡುಗಡೆ ಆದ ಐದನೇ ದಿನ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ 14.50 ಕೋಟಿ ರೂಪಾಯಿ ಹಣ ಗಳಿಕೆ ಮಾಡಿದೆ. ಇದು ಕಡಿಮೆ ಮೊತ್ತವಲ್ಲ. ‘ಆರ್​​ಆರ್​​ಆರ್​ಆರ್’ ಸಿನಿಮಾ ಸಹ ಬಿಡುಗಡೆ ಆದ ಐದನೇ ದಿನ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿರಲಿಲ್ಲ. ‘ಆರ್​​ಆರ್​​ಆರ್’ ಸಿನಿಮಾ ಐದನೇ ದಿನ ಗಳಿಸಿದ್ದಿದ್ದು 13 ಕೋಟಿ ರೂಪಾಯಿಗಳು ಆದರೆ ‘ಶಂಕರ ವರ ಪ್ರಸಾದ್’ ಗಳಿಸಿರುವುದು 14.50 ಕೋಟಿ. ಆ ಮೂಲಕ ‘ಆರ್​​ಆರ್​​ಆರ್’ ಸಿನಿಮಾದ ದಾಖಲೆಯನ್ನೇ ಮುರಿದಿದೆ ಚಿರಂಜೀವಿ ಸಿನಿಮಾ. ಆ ಮೂಲಕ ತಮ್ಮ ಪುತ್ರ ರಾಮ್ ಚರಣ್ ಅವರ ದಾಖಲೆಯನ್ನೇ ಮುರಿದಂತಾಗಿದೆ ಚಿರಂಜೀವಿ.

ಇದನ್ನೂ ಓದಿ:ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್​​ಗೆ ಹಬ್ಬ

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಐದು ದಿನಗಳಲ್ಲಿ 200 ಕೋಟಿಗೂ ಹೆಚ್ಚು ಮೊತ್ತವನ್ನು ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದೆ. ಚಿರಂಜೀವಿ ಅವರ ಸಿನಿಮಾ ಒಂದು ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ದೊಡ್ಡ ಮೊತ್ತ ಗಳಿಸಿರುವುದು ಇದೇ ಮೊದಲು. 2019 ರಲ್ಲಿ ಚಿತ್ರರಂಗಕ್ಕೆ ರೀ ಎಂಟ್ರಿ ಕೊಟ್ಟಾಗಿನಿಂದಲೂ ಸಹ ಚಿರಂಜೀವಿಗೆ ಇಷ್ಟು ದೊಡ್ಡ ಜಯ ಲಭಿಸಿರಲಿಲ್ಲ. ಚಿರಂಜೀವಿ ನಟಿಸಿದ ಸಿನಿಮಾಗಳು ಸತತವಾಗಿ ಬಾಕ್ಸ್ ಆಫೀಸ್​​ನಲ್ಲಿ ಸೋಲುತ್ತಲೇ ಇದ್ದವು. ಆದರೆ ಇದೀಗ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಚಿರಂಜೀವಿಗೆ ಮತ್ತೆ ಗೆಲುವು ಲಭಿಸಿದೆ.

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ನಯನತಾರಾ ನಾಯಕಿ. ವಿಕ್ಟರಿ ವೆಂಕಟೇಶ್ ಸಹ ಸಿನಿಮಾನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹಾಸ್ಯದ ಜೊತೆಗೆ ಸಖತ್ ಆಕ್ಷನ್ ಸಹ ಸಿನಿಮಾನಲ್ಲಿದೆ. ಈ ಸಿನಿಮಾನಲ್ಲಿ ವಿಂಟೇಜ್ ಚಿರಂಜೀವಿ ಕಾಣಿಸುತ್ತಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

U19 World Cup 2026: ಅತಿ ವೇಗದ, ಅತಿ ಕಿರಿಯ; ವಿಶ್ವದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

Source link

ಬೆಂಗಳೂರು: 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ; ಸಿಎಂ ಸಿದ್ದರಾಮಯ್ಯ – Kannada News | Bengaluru: It Is Shameful That Police Are Involved in 88 Criminal Cases, Says CM Siddaramaiah

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ

ಬೆಂಗಳೂರು, ಜನವರಿ 17: ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ (police) ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಇದು ಸರ್ಕಾರಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಿಡಿಸಿದ್ದಾರೆ.

ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೆಲವು ಪೊಲೀಸ್​​ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಪೊಲೀಸ್​​ ಅಧಿಕಾರಿಗಳಿಗೆ ಗೊತ್ತಾಗದೇ ಕ್ರೈಂ ನಡೆಯಲು ಸಾಧ್ಯವಿಲ್ಲ, ಪೊಲೀಸರು ಬಲಾಢ್ಯರ ಕೈಗೊಂಬೆಯಂತೆ ಕೆಲಸ ಮಾಡಬಾರದು. ರಾಯಚೂರಿನ ಕವಿತಾಳ ಠಾಣೆ ದೇಶದಲ್ಲೇ 3ನೇ ಸ್ಥಾನ ಪಡೆದುಕೊಂಡಿದೆ‌ ಎಂದರು.

ಸಿಎಂ ಸಿದ್ದರಾಮಯ್ಯ ಟ್ವೀಟ್​

ನಮ್ಮಲ್ಲಿ ಕಳ್ಳತನ, ಸುಲಿಗೆ, ದರೋಡೆ ಪ್ರಕರಣ ಕಡಿಮೆ ಆಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಜಾಸ್ತಿ‌ ಆಗುತ್ತಿದೆ. ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕೆಂದು ನಮ್ಮ ಸರ್ಕಾರದಿಂದ ಹೋರಾಟ ಮಾಡಲಾಗುತ್ತಿದೆ. ಪೊಲೀಸರು ಸರಿಯಾಗಿ ಕೆಲಸ ಮಾಡಿದರೆ ಎಲ್ಲವನ್ನೂ ಮಟ್ಟಹಾಕಬಹುದು ಎಂದಿದ್ದಾರೆ.

ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ: ಸಿಎಂ ಪ್ರಶ್ನೆ

ಡ್ರಗ್ಸ್ ಮುಕ್ತಮಾಡಲು ವ್ಯಸನಿ ವಿಚಾರಣೆ ಮಾಡಿದರೆ ಮೂಲ ಮಾಹಿತಿ ಸಿಗುತ್ತದೆ. ಪೆಡ್ಲರ್​ ವಿಚಾರಣೆ ‌ಮಾಡಿದರೆ ಎಲ್ಲಿಂದ ಡ್ರಗ್ಸ್​ ಬಂತು ಅಂತಾ ಗೊತ್ತಾಗುತ್ತೆ‌. ಅಪರಾಧದಲ್ಲಿ ಭಾಗಿಯಾದ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳಿಸುವ ಕೆಲಸ ಮಾಡುತ್ತೇವೆ. ಪಿಐ, ಪಿಎಸ್​​ಐ ಸೇರಿ ಎಲ್ಲರ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. ಅದನ್ನು ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ. ಈ ರೀತಿ ಇನ್ಮುಂದೆ ಆಗಬಾರದು ಅಂತಾ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮನೆ ಮನೆಗೆ ಪೊಲೀಸ್ ಕಾರ್ಯಕ್ಕೆ ಮೂರನೇ ಸ್ಥಾನ

ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಸೈಬರ್ ಕ್ರೈಂ ತಡೆಗೆ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ. ಮನೆ ಮನೆಗೆ ಪೊಲೀಸ್ ಕಾರ್ಯಕ್ಕೆ ನಮಗೆ ದೇಶದಲ್ಲಿ ಮೂರನೇ ಸ್ಥಾನ ಬಂದಿದೆ ಎಂದು ಹೇಳಿದರು.

ವರದಿ: ವಿಕಾಸ್​ ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope Jan 18 25, 2026: Navigate Job Challenges and Achieve Success

18 ರಿಂದ 25 ರವರೆಗೆ ಉದ್ಯೋಗದಲ್ಲಿ ಹಲವಾರು ತಿರುವುಗಳು ಬರಲಿವೆ. ಸಮಸ್ಯೆಗಳನ್ನು ಬೆನ್ನೇರಿ ಹೊರಟರೆ ನಿಮ್ಮನ್ನು ಪ್ರಪಾತಕ್ಕೆ ಬೀಳಿಸಬಹುದು‌. ಎಷ್ಟು ಬೇಕೋ ಅಷ್ಟಕ್ಕೆ ಸ್ಪಂದಿಸಿ, ನಿಮ್ಮ ಗುರಿಯತ್ತ ಇರಿ.

ಮೇಷ ರಾಶಿ :

ಈ ವಾರ ಕೆಲಸದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿಗಳು ನಿಮ್ಮ ಸಾಮರ್ಥ್ಯ ಪರೀಕ್ಷಿಸಬಹುದು. ಆತುರದ ನಿರ್ಧಾರ ತಪ್ಪಿಸಿ. ಹಿರಿಯರ ಮಾರ್ಗದರ್ಶನ ಲಾಭಕರ. ಸ್ವಂತ ಪ್ರಯತ್ನದಿಂದ ಅವಕಾಶಗಳನ್ನು ರೂಪಿಸಬಹುದು. ಅಧಿಕಾರಿಗಳ ಗಮನ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ.

ವೃಷಭ ರಾಶಿ:

ಮೂರನೇ ವಾರದಲ್ಲಿ ವೃತ್ತಿಯಲ್ಲಿ ನಿಧಾನವಾದರೂ ಸ್ಥಿರ ಪ್ರಗತಿ ಕಾಣುತ್ತದೆ. ಹಣಕಾಸು ಸಂಬಂಧಿತ ವಿಚಾರಗಳಲ್ಲಿ ಜಾಗ್ರತೆ ಅಗತ್ಯ. ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ. ಶ್ರಮಕ್ಕೆ ತಕ್ಷಣ ಫಲ ಕಾಣಿಸದಿದ್ದರೂ ನಿರಾಶರಾಗಬೇಡಿ. ವಾರಾಂತ್ಯಕ್ಕೆ ಒತ್ತಡ ಕಡಿಮೆಯಾಗುತ್ತದೆ. ಸ್ಥಿರತೆ ನಿಮ್ಮ ಬಲ.

ಮಿಥುನ ರಾಶಿ:

ನಿಮಗೆ ಈ ವಾರ ಸಂವಹನ, ಸಭೆ, ಬರವಣಿಗೆ, ಮಾರ್ಕೆಟಿಂಗ್ ಕೆಲಸಗಳಲ್ಲಿ ಯಶಸ್ಸು. ಹೊಸ ಸಂಪರ್ಕಗಳು ಭವಿಷ್ಯಕ್ಕೆ ಉಪಯುಕ್ತ. ಕೆಲಸದ ಒತ್ತಡ ಇದ್ದರೂ ಬುದ್ಧಿಚಾತುರ್ಯದಿಂದ ನಿಭಾಯಿಸುತ್ತೀರಿ. ಸಂದರ್ಶನ ಅಥವಾ ಪ್ರಸ್ತಾವನೆಗೆ ಉತ್ತಮ ಸಮಯ. ಏಕಾಗ್ರತೆ ಕಾಪಾಡಿಕೊಳ್ಳಿ.

ಕರ್ಕಟಕ ರಾಶಿ:

ನಾಲ್ಕನೇ ರಾಶಿಗೆ ಈ ವಾರ ಕೆಲಸದ ಸ್ಥಳದಲ್ಲಿ ಭಾವನಾತ್ಮಕತೆ ಹೆಚ್ಚಾಗಬಹುದು. ಸಹೋದ್ಯೋಗಿಗಳ ಮಾತುಗಳಿಂದ ಬೇಸರವಾಗುವ ಸಾಧ್ಯತೆ. ಶಾಂತವಾಗಿ ಕಾರ್ಯನಿರ್ವಹಿಸಿದರೆ ಸಮಸ್ಯೆ ತೀರಿಕೊಳ್ಳುತ್ತದೆ. ಕುಟುಂಬ ಬೆಂಬಲ ಮನೋಬಲ ನೀಡುತ್ತದೆ. ಹೊಣೆಗಾರಿಕೆ ಹೆಚ್ಚಾದರೂ ನಿಮ್ಮ ಶ್ರಮ ಗುರುತಿಸಲಾಗುತ್ತದೆ.

ಸಿಂಹ ರಾಶಿ:

ನಿಮ್ಮ ನೇತೃತ್ವದ ಗುಣ ಮೆಚ್ಚುಗೆ ಪಡೆಯುವ ವಾರ. ಗೌರವ, ಪ್ರಶಂಸೆ ದೊರೆಯಬಹುದು. ಅಧಿಕಾರ ಸಂಬಂಧಿತ ಕೆಲಸಗಳಲ್ಲಿ ಮುನ್ನಡೆ. ಆದರೆ ಅಹಂಕಾರ ಮತ್ತು ತ್ವರಿತ ನಿರ್ಧಾರ ತಪ್ಪಿಸಿ. ತಂಡದ ಸಹಕಾರದಿಂದ ದೊಡ್ಡ ಗುರಿ ಸಾಧಿಸುವ ಅವಕಾಶ ಇದೆ. ವೃತ್ತಿಯಲ್ಲಿ ಹೆಸರು ಹೆಚ್ಚಾಗುತ್ತದೆ.

ಕನ್ಯಾ ರಾಶಿ:

ನೀವು ಈ ವಾರ ಯೋಜನೆ, ಲೆಕ್ಕಪತ್ರ, ದಾಖಲೆ ಕೆಲಸಗಳಲ್ಲಿ ಒತ್ತಡದಿಂದ ಇರುವಿರಿ. ಸೂಕ್ಷ್ಮ ಪರಿಶೀಲನೆ ನಿಮ್ಮ ಶಕ್ತಿಯಾಗುತ್ತದೆ. ಕೆಲಸದ ಒತ್ತಡ ಇದ್ದರೂ ಫಲ ತೃಪ್ತಿದಾಯಕ. ಆರೋಗ್ಯದ ಕಡೆ ಸ್ವಲ್ಪ ಗಮನ ಅಗತ್ಯ. ಶಿಸ್ತು ಮತ್ತು ಸಮಯಪಾಲನೆ ನಿಮಗೆ ಪ್ರಗತಿಯ ದಾರಿ ತೋರಿಸುತ್ತದೆ.

ತುಲಾ ರಾಶಿ:

ಇದು ನಿಮಗೆ ಪಾಲುದಾರಿಕೆ ಮತ್ತು ಸಾಮೂಹಿಕ ಕಾರ್ಯದಲ್ಲಿ ಲಾಭ ನೀಡುವ ವಾರ. ಮಾತುಕತೆ, ಒಪ್ಪಂದಗಳಲ್ಲಿ ಜಯ. ನಿರ್ಧಾರಗಳಲ್ಲಿ ಸ್ಪಷ್ಟತೆ ಇರಲಿ. ವಿಳಂಬ ಮಾಡಿದರೆ ಅವಕಾಶ ಕೈತಪ್ಪಬಹುದು. ಸಮತೋಲನದ ನಿಲುವು ವೃತ್ತಿಯಲ್ಲಿ ಗೌರವ ತರುತ್ತದೆ. ಕಾನೂನು ಅಥವಾ ಕಲಾತ್ಮಕ ಕ್ಷೇತ್ರಗಳಲ್ಲಿ ಬೆಳವಣಿಗೆ.

ವೃಶ್ಚಿಕ ರಾಶಿ:

ನಿಮ್ಮ ಅತಿಯಾದ ಒಳಗಿನ ಒತ್ತಡ ಕೆಲಸದಲ್ಲಿ ಪ್ರತಿಫಲಿಸಬಹುದು. ಮೌನವಾಗಿ ಮಾಡಿದ ಶ್ರಮ ಫಲ ನೀಡುತ್ತದೆ. ಆಂತರಿಕ ರಾಜಕೀಯದಿಂದ ದೂರವಿರುವುದು ಒಳಿತು. ಹಣಕಾಸು ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಸಂಶೋಧನೆ, ತನಿಖೆ ಅಥವಾ ತಾಂತ್ರಿಕ ಕೆಲಸಗಳಲ್ಲಿ ಮುನ್ನಡೆ ಸಾಧ್ಯ.

ಧನು ರಾಶಿ:

ಈ ವಾರ ಯಾರದೋ ಮೂಲಕ ಹೊಸ ಅವಕಾಶಗಳ ಸೂಚನೆ ಸಿಗುತ್ತದೆ. ತರಬೇತಿ, ಪ್ರಯಾಣ ಅಥವಾ ವಿದೇಶಿ ಸಂಪರ್ಕ ಲಾಭಕರ. ಭವಿಷ್ಯದ ವೃತ್ತಿಗೆ ಸ್ಪಷ್ಟ ದಿಕ್ಕು ದೊರೆಯುತ್ತದೆ. ಉತ್ಸಾಹ ಹೆಚ್ಚಾಗುತ್ತದೆ. ಆದರೆ ಅತಿಯಾದ ನಿರೀಕ್ಷೆ ತಪ್ಪಿಸಿ. ಕಲಿಕೆ ಮತ್ತು ಜ್ಞಾನ ವೃದ್ಧಿಗೆ ಉತ್ತಮ ವಾರ.

ಮಕರ ರಾಶಿ:

ಬೇಸರದಿಂದ ಇರುವ ನಿಮಗೆ ಈ ವಾರ ಶ್ರಮಕ್ಕೆ ಫಲ ದೊರೆಯುವ ಸಮಯ. ಹಿರಿಯರ ವಿಶ್ವಾಸ ಮತ್ತು ಬೆಂಬಲ ಸಿಗುತ್ತದೆ. ಹುದ್ದೆ ಅಥವಾ ಜವಾಬ್ದಾರಿ ಹೆಚ್ಚಾಗುವ ಸಾಧ್ಯತೆ. ಕೆಲಸದ ಒತ್ತಡ ಇದ್ದರೂ ಸಹನೆ ನಿಮ್ಮ ಗೆಲುವು. ಸರ್ಕಾರಿ ಅಥವಾ ಆಡಳಿತ ಕ್ಷೇತ್ರದಲ್ಲಿ ಪ್ರಗತಿ ಕಾಣಿಸುತ್ತದೆ.

ಕುಂಭ ರಾಶಿ:

ನಿಮ್ಮ ಹೊಸ ಆಲೋಚನೆಗಳು ಮತ್ತು ವಿಭಿನ್ನ ಪ್ರಯತ್ನಗಳು ಮೆಚ್ಚುಗೆ ಪಡೆಯುತ್ತವೆ. ತಂತ್ರಜ್ಞಾನ, ವಿಜ್ಞಾನ, ಇನೋವೇಶನ್ ಕ್ಷೇತ್ರದಲ್ಲಿ ಮುನ್ನಡೆ. ತಂಡದಲ್ಲಿ ನಿಮ್ಮ ಪಾತ್ರ ಮಹತ್ವ ಪಡೆಯುತ್ತದೆ. ದೊಡ್ಡ ಪ್ರಯಾಣದ ಭಂಗ ತಪ್ಪಿಸಿದರೆ ದೊಡ್ಡ ಸಾಧನೆ ಸಾಧ್ಯ. ಸಾಮಾಜಿಕ ಕಾರ್ಯಗಳಿಂದ ಹೆಸರು ಬರುತ್ತದೆ.

ಮೀನ ರಾಶಿ:

ಈ ವಾರ ಸೃಜನಶೀಲತೆ ಮತ್ತು ಕಲ್ಪನೆ ಕೆಲಸಕ್ಕೆ ಹೊಸ ರೂಪ ನೀಡುತ್ತದೆ. ಕಲೆ ಅಥವಾ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತೃಪ್ತಿ. ನಿರ್ಧಾರಗಳಲ್ಲಿ ಗೊಂದಲ ಸಾಧ್ಯ, ಸ್ಪಷ್ಟ ಗುರಿ ಹಿಡಿಯಿರಿ. ಶಾಂತ ಮನಸ್ಸಿನಿಂದ ಕೆಲಸ ಮಾಡಿದರೆ ಯಶಸ್ಸು ನಿಮ್ಮದಾಗುತ್ತದೆ.

– ಲೋಹಿತ ಹೆಬ್ಬಾರ್ – 8762924271 (what’s app only)

Source link

U19 World Cup 2026: ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ – Kannada News | U19 World Cup: Pakistan Crushed by England in Opening Match; Top Order Fails

ಅಂಡರ್ 19 ವಿಶ್ವಕಪ್‌ನಲ್ಲಿ (U19 World Cup 2026) ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್‌ ವಿರುದ್ಧ ಆಡಿದ್ದ ಪಾಕಿಸ್ತಾನ (Pakistan U19 vs England U19) ತಂಡ ಹೀನಾಯ ಸೋಲು ಅನುಭವಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಈ ಸಣ್ಣ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿದೆ 173 ರನ್‌ಗಳಿಗೆ ಆಲೌಟ್ ಆಗಿ 37 ರನ್‌ಗಳ ಅಂತರದಿಂದ ಸೋಲನುಭವಿಸಿತು. ಪಾಕಿಸ್ತಾನದ ಸೋಲಿಗೆ ತಂಡದ ಬ್ಯಾಟ್ಸ್‌ಮನ್‌ಗಳು ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು. ವಿಶೇಷವಾಗಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಪರಿಣಾಮಕಾರಿಯಾಗಲಿಲ್ಲ. ಸಮೀರ್ ಮಿನ್ಹಾಸ್, ಮೊಹಮ್ಮದ್ ಶಯಾನ್, ಉಸ್ಮಾನ್ ಖಾನ್, ಅಹ್ಮದ್ ಹುಸೇನ್ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದು ತಂಡದ ಸೋಲಿಗೆ ಕಾರಣವಾಯಿತು.

ಪಾಕಿಸ್ತಾನದ ಅಗ್ರ ಕ್ರಮಾಂಕ ವಿಫಲ

ಇಂಗ್ಲೆಂಡ್‌ ನೀಡಿದ 210 ರನ್​ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನಕ್ಕೆ ಅತ್ಯಂತ ಕಳಪೆ ಆರಂಭ ಸಿಕ್ಕಿತು. ತಂಡದ ಅತ್ಯುತ್ತಮ ಬ್ಯಾಟ್ಸ್‌ಮನ್ ಸಮೀರ್ ಮಿನ್ಹಾಸ್ ನಾಲ್ಕನೇ ಓವರ್‌ನಲ್ಲಿಯೇ ಔಟಾದರು. ಸಮೀರ್ ಮಿನ್ಹಾಸ್ ಕೇವಲ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದು ತಂಡದ ಇನ್ನಿಂಗ್ಸ್ ಕುಸಿಯುವಂತೆ ಮಾಡಿತು. ಮೊಹಮ್ಮದ್ ಶಯಾನ್ 7 ರನ್​ಗಳಿಗೆ ಔಟಾದರೆ, ಉಸ್ಮಾನ್ ಖಾನ್ 6 ರನ್, ಅಹ್ಮದ್ ಹುಸೇನ್ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ತಂಡದ ನಾಯಕ ಫರ್ಹಾನ್ ಯೂಸುಫ್ 65 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ವಿಫಲರಾದರು. ಇತ್ತ ಇಂಗ್ಲೆಂಡ್‌ನ ವೇಗಿಗಳಾದ ಅಲೆಕ್ಸ್ ಗ್ರೀನ್, ಜೇಮ್ಸ್ ಮಿಂಟೊ ಮತ್ತು ರಾಲ್ಫಿ ಆಲ್ಬರ್ಟ್ ತಲಾ 2 ವಿಕೆಟ್ ಪಡೆದು, ಪಾಕಿಸ್ತಾನವನ್ನು ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.

ಕ್ಯಾಲೆಬ್ ಫಾಕ್ನರ್ ಅರ್ಧಶತಕ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ನ ಬ್ಯಾಟಿಂಗ್ ಕೂಡ ಕಳಪೆಯಾಗಿತ್ತು. ಆದರೆ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಕ್ಯಾಲೆಬ್ ಫಾಕ್ನರ್ ಪಾಕಿಸ್ತಾನಿ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿ 73 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳೊಂದಿಗೆ 66 ರನ್ ಗಳಿಸಿದರು. ಆರಂಭಿಕ ಬೆನ್ ಡಾಕಿನ್ಸ್ ಕೂಡ 33 ರನ್ ಗಳಿಸುವ ಮೂಲಕ ತಂಡದ ಇನ್ನಿಂಗ್ಸ್​ಗೆ ಜೀವ ತುಂಬಿದರು.

U19 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಯಂಗ್ ಇಂಡಿಯಾ

ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕು

ತನ್ನ ಮೊದಲ ಪಂದ್ಯದಲ್ಲಿ ಸೋತಿರುವ ಪಾಕಿಸ್ತಾನ ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ಈಗ ಉಳಿದಿರುವ ಎರಡೂ ಗುಂಪು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಮುಂದಿನ ಪಂದ್ಯ ಜನವರಿ 19 ರಂದು ಸ್ಕಾಟ್ಲೆಂಡ್ ವಿರುದ್ಧ ಆಡಿರುವ ಪಾಕಿಸ್ತಾನ, ತನ್ನ ಕೊನೆಯ ಲೀಗ್ ಪಂದ್ಯವನ್ನು ಜನವರಿ 22 ರಂದು ಜಿಂಬಾಬ್ವೆ ವಿರುದ್ಧ ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:58 pm, Sat, 17 January 26

Source link

ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ – Kannada News | PM Modi interacts with students and loco pilots in Vande Bharat Sleeper Train

ಮಾಲ್ಡಾ, ಜನವರಿ 17: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಈ ವಿಶೇಷವಾದ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳು ಮತ್ತು ರೈಲ್ವೆ ಸಿಬ್ಬಂದಿಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಈ ಯೋಜನೆಯಲ್ಲಿ ಭಾಗಿಯಾಗಿರುವ ರೈಲ್ವೆ ಸಿಬ್ಬಂದಿಯ ಪ್ರಯತ್ನಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಂದೇ ಭಾರತ್ ಸ್ಲೀಪರ್ ರೈಲು ಭಾರತದಲ್ಲಿ ದೀರ್ಘ ಪ್ರಯಾಣವನ್ನು ಹೆಚ್ಚು ಆರಾಮದಾಯಕ, ಅದ್ಭುತ ಮತ್ತು ಸ್ಮರಣೀಯವಾಗಿಸುತ್ತದೆ ಎಂದು ಹೇಳಿದರು. “ಇಂದು ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಮಾಲ್ಡಾದಿಂದ ಇನ್ನಷ್ಟು ವೇಗವನ್ನು ಪಡೆದುಕೊಂಡಿದೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

“ಸಲಿಂಗಕಾಮಿಗಳು ಜಿಮ್​​​​ಗೆ ಬರಬಾರದು”: ವಿವಾದ ಸೃಷ್ಟಿಸಿದ ಬೆಂಗಳೂರಿನ ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋ ಪೋಸ್ಟರ್​​ – Kannada News | Bengaluru Gym’s Anti Gay Poster Draws Widespread Criticism

ಬೆಂಗಳೂರು, ಜ.17: ಬೆಂಗಳೂರಿನ ಜಿಮ್ (Bengaluru Gym)​​ ಒಂದರಲ್ಲಿ ವಿಚಿತ್ರ ಪೋಸ್ಟ್​​ವೊಂದನ್ನು ಹಾಕಿದ್ದಾರೆ. ಇದೀಗ ಈ ಪೋಸ್ಟರ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ನಗರದ ಜಿಮ್​​ವೊಂದರಲ್ಲಿ ಸಲಿಂಗಕಾಮಿಗಳಿಗೆ ತೂಕ ಇಳಿಸಿಕೊಳ್ಳಲು ಅವಕಾಶ ಇಲ್ಲ ಎಂಬ ಪೋಸ್ಟರ್​​ ಹಾಕಿದ್ದಾರೆ. ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಿಮ್​​ ಮಾಲೀಕರ​​​​ ವಿರುದ್ಧ ಅಕ್ರೋಶ ವ್ಯಕ್ತವಾಗಿದೆ. ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋ ಈ ಪೋಸ್ಟ್​​ನ್ನು ಹಾಕಿದೆ ಎಂದು ಹೇಳಲಾಗಿದೆ. ಈ ಪೋಸ್ಟರ್​​ನ್ನು ತಕ್ಷಣವೇ ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ. ಟೈಮ್ಸ್ ನೌ ವರದಿ ಮಾಡಿರುವ ಪ್ರಕಾರ, ಯಾವುದೇ ಸಮುದಾಯವನ್ನು ನೋಯಿಸುವ ಅಥವಾ ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋ ಹೇಳಿಕೆ ನೀಡಿದೆ. ಜತೆಗೆ ಕ್ಷಮೆಯನ್ನು ಕೇಳಿದೆ ಎಂದು ಹೇಳಲಾಗಿದೆ. ಪೋಸ್ಟ್ ಈಗಾಗಲೇ ಆನ್‌ಲೈನ್‌ನಲ್ಲಿ ಬಿಸಿ ಚರ್ಚೆಯನ್ನು ಹುಟ್ಟುಹಾಕಿತ್ತು, ಅನೇಕ ನೆಟ್ಟಿಗರು ಹೋಮೋಫೋಬಿಕ್ ಬಗ್ಗೆ ಹೇಳಿಕೆ ನೀಡಿದ ಜಿಮ್​ನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ.

ಈ ಪೋಸ್ಟ್​​ನ್ನು ರೆಡ್ಡಿಟ್‌ನಲ್ಲಿ ಒಬ್ಬರು ಹಂಚಿಕೊಂಡಿದ್ದಾರೆ. ‘ಗೇ’ ಪದವನ್ನು ಹೀಗೆ ಬಳಸುವುದು ಸರಿಯಲ್ಲ. ಇದು ಅವಮಾನದ ಸಂಗತಿ ಎಂದು ಈ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್​​ನ್ನು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್​​​ನಲ್ಲಿರುವ ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋದಲ್ಲಿ ಹಾಕಲಾಗಿದೆ. ಇಂತಹ ಅಸಂಬದ್ಧ ಪೋಸ್ಟರ್​​​ಗಳನ್ನು ಹಾಕಲು ಯಾರೂ ಅಧಿಕಾರ ನೀಡಿದ್ದು, ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. HSR ಲೇಔಟ್‌ನ ಅತ್ಯಂತ ಪ್ರಸಿದ್ಧ ಜಿಮ್‌ನಲ್ಲಿ ಇಂತಹ ಪೋಸ್ಟರ್​​​ಗಳನ್ನು ಹಾಕುತ್ತಾರೆ ಎಂದರೆ ನಂಬಲು ಸಾಧ್ಯವಿಲ್ಲ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ತೂಕ ಇಳಿಸಿಕೊಳ್ಳಲು ಎಲ್ಲರೂ ಕಷ್ಟ ಪಡುತ್ತಾರೆ. ಆದರೆ ಗೇ ಎನ್ನುವ ಕಾರಣಕ್ಕೆ ಈ ರೀತಿ ಪೋಸ್ಟರ್​​​ಗಳನ್ನು ಹಾಕಿ ಅವಮಾನ ಮಾಡುವುದು ಸರಿಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

ಇಲ್ಲಿದೆ ನೋಡಿ ವೈರಲ್​​ ಪೋಸ್ಟ್:

Blatant homophobia at a gym in HSR. Can’t believe this is real
byu/skullkeeper0023 inbangalore

ಈ ಜಿಮ್ ನಡೆಸುವವರು ಅನಕ್ಷರಸ್ಥರು ಎಂಬುದನ್ನು ಈ ಪೋಸ್ಟರ್​​​ ತೋರಿಸುತ್ತದೆ. ಈ ವ್ಯಕ್ತಿ ಮೆದುಳಿಲ್ಲ, ಕೇವಲ ಸ್ನಾಯುಗಳು ಮಾತ್ರ ಇದೆ ಎಂದು ಟೀಕಿಸಿದ್ದಾರೆ. ಈ ಜಿಮ್​​ನ್ನು ಬಹಿಷ್ಕಾರ ಮಾಡಿ. ಕೆಟ್ಟದಾಗಿ ರೇಟ್ ಮಾಡಿ ಎಂದು ಮತ್ತೊಬ್ಬರು ಹೇಳಿದ್ದಾರೆ. ನಾನು ಈ ಜಿಮ್‌ಗೆ ಒಂದು ವರ್ಷ ಹೋಗಿದ್ದೆ. ಅಲ್ಲಿನ ಜನರು ಮತ್ತು ತರಬೇತುದಾರರು ಸಂಪೂರ್ಣವಾಗಿ ಹುಚ್ಚರು. ಇದು ನಿಜಕ್ಕೂ ತುಂಬಾ ಅವಮಾನ ವಿಚಾರ ಎಂದು ಹೇಳಿದ್ದಾರೆ. ಸಲಿಂಗಕಾಮಿ ಕೂಡ ಮನುಷ್ಯರಲ್ಲವೇ? ಈ ಪೋಸ್ಟರ್​​ ಹಾಕಿದವನಿಗೆ ಬಾಲ್​​​​​​​​​….. ಕ್ಷಮಿಸಿ ಮೆದುಳು ಇಲ್ಲ ಎಂದು ಮತ್ತೊಬ್ಬರು ತಮಾಷೆಯಾಗಿ ಕಮೆಂಟ್​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:37 pm, Sat, 17 January 26

Source link