ಮಾಲ್ಡಾ, ಜನವರಿ 17: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಈ ವಿಶೇಷವಾದ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್ಗಳು ಮತ್ತು ರೈಲ್ವೆ ಸಿಬ್ಬಂದಿಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಈ ಯೋಜನೆಯಲ್ಲಿ ಭಾಗಿಯಾಗಿರುವ ರೈಲ್ವೆ ಸಿಬ್ಬಂದಿಯ ಪ್ರಯತ್ನಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಂದೇ ಭಾರತ್ ಸ್ಲೀಪರ್ ರೈಲು ಭಾರತದಲ್ಲಿ ದೀರ್ಘ ಪ್ರಯಾಣವನ್ನು ಹೆಚ್ಚು ಆರಾಮದಾಯಕ, ಅದ್ಭುತ ಮತ್ತು ಸ್ಮರಣೀಯವಾಗಿಸುತ್ತದೆ ಎಂದು ಹೇಳಿದರು. “ಇಂದು ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಮಾಲ್ಡಾದಿಂದ ಇನ್ನಷ್ಟು ವೇಗವನ್ನು ಪಡೆದುಕೊಂಡಿದೆ” ಎಂದು ಅವರು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಜ.17: ಬೆಂಗಳೂರಿನ ಜಿಮ್ (Bengaluru Gym) ಒಂದರಲ್ಲಿ ವಿಚಿತ್ರ ಪೋಸ್ಟ್ವೊಂದನ್ನು ಹಾಕಿದ್ದಾರೆ. ಇದೀಗ ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ನಗರದ ಜಿಮ್ವೊಂದರಲ್ಲಿ ಸಲಿಂಗಕಾಮಿಗಳಿಗೆ ತೂಕ ಇಳಿಸಿಕೊಳ್ಳಲು ಅವಕಾಶ ಇಲ್ಲ ಎಂಬ ಪೋಸ್ಟರ್ ಹಾಕಿದ್ದಾರೆ. ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಿಮ್ ಮಾಲೀಕರ ವಿರುದ್ಧ ಅಕ್ರೋಶ ವ್ಯಕ್ತವಾಗಿದೆ. ಜೆಸ್ಟ್ ಫಿಟ್ನೆಸ್ ಸ್ಟುಡಿಯೋ ಈ ಪೋಸ್ಟ್ನ್ನು ಹಾಕಿದೆ ಎಂದು ಹೇಳಲಾಗಿದೆ. ಈ ಪೋಸ್ಟರ್ನ್ನು ತಕ್ಷಣವೇ ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ. ಟೈಮ್ಸ್ ನೌ ವರದಿ ಮಾಡಿರುವ ಪ್ರಕಾರ, ಯಾವುದೇ ಸಮುದಾಯವನ್ನು ನೋಯಿಸುವ ಅಥವಾ ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಜೆಸ್ಟ್ ಫಿಟ್ನೆಸ್ ಸ್ಟುಡಿಯೋ ಹೇಳಿಕೆ ನೀಡಿದೆ. ಜತೆಗೆ ಕ್ಷಮೆಯನ್ನು ಕೇಳಿದೆ ಎಂದು ಹೇಳಲಾಗಿದೆ. ಪೋಸ್ಟ್ ಈಗಾಗಲೇ ಆನ್ಲೈನ್ನಲ್ಲಿ ಬಿಸಿ ಚರ್ಚೆಯನ್ನು ಹುಟ್ಟುಹಾಕಿತ್ತು, ಅನೇಕ ನೆಟ್ಟಿಗರು ಹೋಮೋಫೋಬಿಕ್ ಬಗ್ಗೆ ಹೇಳಿಕೆ ನೀಡಿದ ಜಿಮ್ನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ.
ಈ ಪೋಸ್ಟ್ನ್ನು ರೆಡ್ಡಿಟ್ನಲ್ಲಿ ಒಬ್ಬರು ಹಂಚಿಕೊಂಡಿದ್ದಾರೆ. ‘ಗೇ’ ಪದವನ್ನು ಹೀಗೆ ಬಳಸುವುದು ಸರಿಯಲ್ಲ. ಇದು ಅವಮಾನದ ಸಂಗತಿ ಎಂದು ಈ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ನ್ನು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿರುವ ಜೆಸ್ಟ್ ಫಿಟ್ನೆಸ್ ಸ್ಟುಡಿಯೋದಲ್ಲಿ ಹಾಕಲಾಗಿದೆ. ಇಂತಹ ಅಸಂಬದ್ಧ ಪೋಸ್ಟರ್ಗಳನ್ನು ಹಾಕಲು ಯಾರೂ ಅಧಿಕಾರ ನೀಡಿದ್ದು, ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. HSR ಲೇಔಟ್ನ ಅತ್ಯಂತ ಪ್ರಸಿದ್ಧ ಜಿಮ್ನಲ್ಲಿ ಇಂತಹ ಪೋಸ್ಟರ್ಗಳನ್ನು ಹಾಕುತ್ತಾರೆ ಎಂದರೆ ನಂಬಲು ಸಾಧ್ಯವಿಲ್ಲ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ತೂಕ ಇಳಿಸಿಕೊಳ್ಳಲು ಎಲ್ಲರೂ ಕಷ್ಟ ಪಡುತ್ತಾರೆ. ಆದರೆ ಗೇ ಎನ್ನುವ ಕಾರಣಕ್ಕೆ ಈ ರೀತಿ ಪೋಸ್ಟರ್ಗಳನ್ನು ಹಾಕಿ ಅವಮಾನ ಮಾಡುವುದು ಸರಿಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ.
ಈ ಜಿಮ್ ನಡೆಸುವವರು ಅನಕ್ಷರಸ್ಥರು ಎಂಬುದನ್ನು ಈ ಪೋಸ್ಟರ್ ತೋರಿಸುತ್ತದೆ. ಈ ವ್ಯಕ್ತಿ ಮೆದುಳಿಲ್ಲ, ಕೇವಲ ಸ್ನಾಯುಗಳು ಮಾತ್ರ ಇದೆ ಎಂದು ಟೀಕಿಸಿದ್ದಾರೆ. ಈ ಜಿಮ್ನ್ನು ಬಹಿಷ್ಕಾರ ಮಾಡಿ. ಕೆಟ್ಟದಾಗಿ ರೇಟ್ ಮಾಡಿ ಎಂದು ಮತ್ತೊಬ್ಬರು ಹೇಳಿದ್ದಾರೆ. ನಾನು ಈ ಜಿಮ್ಗೆ ಒಂದು ವರ್ಷ ಹೋಗಿದ್ದೆ. ಅಲ್ಲಿನ ಜನರು ಮತ್ತು ತರಬೇತುದಾರರು ಸಂಪೂರ್ಣವಾಗಿ ಹುಚ್ಚರು. ಇದು ನಿಜಕ್ಕೂ ತುಂಬಾ ಅವಮಾನ ವಿಚಾರ ಎಂದು ಹೇಳಿದ್ದಾರೆ. ಸಲಿಂಗಕಾಮಿ ಕೂಡ ಮನುಷ್ಯರಲ್ಲವೇ? ಈ ಪೋಸ್ಟರ್ ಹಾಕಿದವನಿಗೆ ಬಾಲ್….. ಕ್ಷಮಿಸಿ ಮೆದುಳು ಇಲ್ಲ ಎಂದು ಮತ್ತೊಬ್ಬರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.
ಬೆಂಗಳೂರು, ಜನವರಿ 17: ಪರಿಚಯಸ್ಥ ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ವ್ಯಕ್ತಿ ಓರ್ವ ನಡುರಸ್ತೆಯಲ್ಲೇ ಪುಂಡಾಟ ಮೆರೆದಿರುವಂತಹ ಘಟನೆ ಬೆಂಗಳೂರು ಬಳಿಯ ಆನೇಕಲ್ ತಾಲೂಕಿನ ಗೌರೇನಹಳ್ಳಿಯಲ್ಲಿ ನಡೆದಿದೆ. ಗೌರೇನಾಹಳ್ಳಿ ಗ್ರಾಮದ ಬಸವರಾಜ್ ಎಂಬಾತ ಕುಡಿದ ಅಮಲಿನಲ್ಲಿ ಮಚ್ಚು ಹಿಡಿದು ದಾಂದಲೆ ಮಾಡಿದ್ದಾರೆ. ಪರಿಚಯಸ್ಥ ಪ್ರಕಾಶ್ಗೆ ಬಸವರಾಜ್ ಮಚ್ಚು ಹಿಡಿದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಸವರಾಜ್ ಮಚ್ಚುಹಿಡಿದು ಓಡಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪುಂಡರ ಹಾವಳಿಗೆ ಕಡಿವಾಣ ಹಾಕದ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಜನವರಿ 17: ಓದು ಮುಗಿಸಿ ಉದ್ಯೋಗಕ್ಕೆಂದು ದೂರದ ಊರಿಗೆ ಹೋದಾಗ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಮಯ ಬೇಕು. ಹೊಸ ಊರ ಜನರು ಹೇಗಿರುತ್ತದೆ ಎಂದು ಹೇಳುವುದು ಕಷ್ಟ. ಹೀಗಾಗಿ ಅಪರಿಚಿತರ ಜತೆಗೆ ಸ್ನೇಹ (friendship) ಬೆಳೆಸಿಕೊಳ್ಳಲು ಹಿಂದೇಟು ಹಾಕುವುದಿದೆ. ಪ್ರಾರಂಭದ ದಿನಗಳಲ್ಲಿ ಒಂಟಿ ಭಾವ ಕಾಡುತ್ತದೆ. ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡ ಸಂಸ್ಥಾಪಕಿಯೊಬ್ಬರಿಗೆ ಅದೇ ರೀತಿಯ ಅನುಭವವಾಗಿತ್ತಂತೆ. ಈ ಬಗ್ಗೆ ಪೋಸ್ಟ್ ಹಂಚಿಕೊಂಡು ತಮ್ಮ ಅನುಭವವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಸುರಭಿ ಜೈನ್ (Surbhi Jain) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬೆಂಗಳೂರಿಗೆ ಬಂದ ಪ್ರಾರಂಭದ ದಿನಗಳು ಹೇಗಿದ್ದವು, ಹೇಗೆ ಸ್ನೇಹಿತರನ್ನು ಮಾಡಿಕೊಂಡೆ ಎನ್ನುವುದನ್ನು ವಿವರಿಸಿರುವುದನ್ನು ಕಾಣಬಹುದು. ಈ ಪೋಸ್ಟ್ ನಲ್ಲಿ ನೀವು ಯಾವುದೇ ನಗರಕ್ಕೆ ಹೊಸಬರಾಗಿದ್ದರೆ, ಇದು ನಿಮಗಾಗಿ. 2020 ರಲ್ಲಿ ನಾನು ಬೆಂಗಳೂರಿಗೆ ಸ್ಥಳಾಂತರಗೊಂಡಾಗ, ನನಗೆ ಯಾರ ಪರಿಚಯವೂ ಇರಲಿಲ್ಲ. ಕೆಲವೇ ಕೆಲವು ಪರಿಚಿತ ಮುಖಗಳಷ್ಟೇ ಇದ್ದವು, ಆದರೆ ಅವರಲ್ಲಿ ಹೆಚ್ಚಿನವರು ನಾನು ಇರುವ ಸ್ಥಳಕ್ಕಿಂತ ದೂರದಲ್ಲಿಯೇ ವಾಸಿಸುತ್ತಿದ್ದರು. ಹೊಸದನ್ನು ಪ್ರಾರಂಭಿಸುವ ದೊಡ್ಡ ಕನಸುಗಳೊಂದಿಗೆ ನಾನು ನಗರಕ್ಕೆ ಬಂದಿದ್ದೆ. ನಾನು ಒಂದು ಕಂಪನಿಯನ್ನು ಸೇರಿಕೊಂಡೆ. ನನ್ನ ಸಹೋದ್ಯೋಗಿಗಳು ಒಳ್ಳೆಯವರಾಗಿದ್ದರು, ಆದರೆ ಅವರು ಸಹೋದ್ಯೋಗಿಗಳಷ್ಟೇ ಆಗಿದ್ದರು, ನಿಮಗೆ ತಿಳಿದಿದೆಯೇ?. ಕಚೇರಿಯಲ್ಲಿ ಸಣ್ಣ ಸಣ್ಣ ಮಾತುಗಳು ಅಂತರವನ್ನು ಕಡಿಮೆ ಮಾಡಿತು. ಜ್ಯೂಸ್ ಕುಡಿಯಲು ಅಥವಾ ಕಾಫಿಗಾಗಿ ಭೇಟಿಯಾಗುವುದಕ್ಕಿಂತ ಜನರೊಂದಿಗೆ ಈ ರೀತಿ ಸಂಪರ್ಕ ಸಾಧಿಸುವುದು ತುಂಬಾ ಉತ್ತಮವಾಯಿತು ಎಂದು ಹೇಳಿದ್ದಾರೆ.
ವೈರಲ್ ಪೋಸ್ಟ್ ಇಲ್ಲಿದೆ
If you are new to any city, this is for you👇
When I moved to Bangalore in 2020, I barely knew anyone. There were a few familiar faces, but most of them lived far away.
I had come to the city with big dreams of starting something new, and I joined a company to begin with. My…
ಇದು ವಿಭಿನ್ನವೆನಿಸಿತು, ನಾನು ಪ್ರತಿದಿನ ಎದುರು ನೋಡುತ್ತಿದ್ದ ವಿಷಯವಾಯಿತು. ಇದರಿಂದ ಹಗುರವಾದ ಮನಸ್ಸಿನೊಂದಿಗೆ ಹಿಂತಿರುಗಬಹುದು. ಕಾಫಿ ಅಥವಾ ಜ್ಯೂಸ್ ಕುಡಿಯಲು ಹೋದಾಗ ನೀವು ಮತ್ತೆ ಮತ್ತೆ ಅದೇ ಮುಖಗಳನ್ನು ನೋಡಲು ಪ್ರಾರಂಭಿಸುತ್ತೀರಿ. ಆಗ ಸ್ನೇಹವು ಪ್ರಾರಂಭವಾಗುತ್ತದೆ. ಅಪರಿಚಿತ ಭಾವವು ನಿಧಾನವಾಗಿ ಸ್ನೇಹಕ್ಕೆ ತಿರುಗುತ್ತದೆ ದೊಡ್ಡ ನಗರವು ಮನೆಯಂತೆ ಭಾಸವಾಗಲು ಪ್ರಾರಂಭಿಸುತ್ತದೆ ಎಂದು ಬರೆದಿರುವುದನ್ನು ಕಾಣಬಹುದು.
ಜನವರಿ 14 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಇದುವರೆಗೆ ಇಪ್ಪತ್ತ ಮೂರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇದು ನಿಜ, ಸರ್ಜಾಪುರ ಪ್ರದೇಶದಲ್ಲಿ ಸಕ್ರಿಯವಾಗಿರುವ ಬಹುತೇಕ ಎಲ್ಲಾ ಕ್ರಿಕೆಟ್ ಆಟಗಾರರನ್ನು ನಾನು ಬಲ್ಲೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ನೀವು ಗಂಭೀರವಾದ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಸಂಗಾತಿಯನ್ನು ಹುಡುಕುತ್ತಿದ್ದರೆ, ಶನಿವಾರ ಬೆಳಿಗ್ಗೆ ಓಟ, ನಡಿಗೆ ಅಥವಾ ವ್ಯಾಯಾಮಕ್ಕೆ ಹೋಗಿ. ನಿಮಗೆ ನಿಮ್ಮದೇ ಆದ ವ್ಯಕ್ತಿ ಸಿಗಬಹುದು ಎಂದಿದ್ದಾರೆ. ಮತ್ತೊಬ್ಬರು ಒಳ್ಳೆಯ ಸಲಹೆ, ನಾನು ಕೂಡ ಈ ರೀತಿ ಸ್ನೇಹಿತರನ್ನು ಮಾಡಿಕೊಳ್ಳುವೆ ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ರಕ್ತ ಚಂದನದ ಕಳ್ಳ ಸಾಗಣೆಯ ಕಥೆಯನ್ನು ಹೇಳಲಾಗಿತ್ತು. ಈಗ ‘ಕಾಟಾಳನ್’ ಹೆಸರಿನ ಮಲಯಾಳಂ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರದ ಆನೆ ದಂತದ ಕಳ್ಳ ಸಾಗಣೆಯ ಕರಾಳ ಜಗತ್ತನ್ನು ತೆರೆದಿಡಲು ನಿರ್ದೇಶಕರು ಪ್ರಯತ್ನಿಸಿದಂತಿದೆ. ಇದರ ಜೊತೆಗೆ ಭರ್ಜರಿ ಆ್ಯಕ್ಷನ್ ಕೂಡ ಸಿನಿಮಾದಲ್ಲಿ ಇರಲಿದೆ.
‘ಕಾಟಾಳನ್’ ಸಿನಿಮಾದ ಟೀಸರ್ ರಿಲೀಸ್ ಬಿಡುಗಡೆ ಕಂಡಿದೆ. ಇದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ಈ ಸಿನಿಮಾ ಮೇ 14ರಂದು ರಿಲೀಸ್ ಆಗಲಿದೆ. ‘ಕಾಟಾಳನ್’ ಮಲಯಾಳಂ ಚಿತ್ರ. ಈ ಸಿನಿಮಾ ಮಲಯಾಳಂ ಜೊತೆಗೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆ ಕಾಣಲಿದೆ ಎಂಬುದು ವಿಶೇಷ.
In the rain of wrath, only one stands tall
.
.
Presenting Second Look poster of KATTALAN – The Hunter
ಈ ಚಿತ್ರದಲ್ಲಿ ಪಾತ್ರಗಳ ಜೊತೆಗೆ ಆನೆಗಳು ಕೂಡ ಹೈಲೈಟ್ ಆಗಿವೆ. ಆನೆಗಳ ಜೊತೆಗಿನ ಸಾಹಸ ದೃಶ್ಯ ಟೀಸರ್ನಲ್ಲಿ ಗಮನ ಸೆಳೆದಿವೆ. ದಂತದ ಕಳ್ಳಸಾಗಣೆ ವಿಷಯ ಕೂಡ ಹೈಲೈಟ್ ಆಗಿದೆ. ಸಾಮಾನ್ಯವಾಗಿ ಆನೆಗಳ ಜೊತೆಗಿನ ಸೆಣೆಸಾಟ ಎಂದಾಗ ಗ್ರಾಫಿಕ್ಸ್ ಬಳಸುತ್ತಾರೆ. ಆದರೆ, ನೈಜವಾಗಿ ಇದನ್ನು ಚಿತ್ರೀಕರಿಸಲಾಗಿದೆ. ಅಂತರಾಷ್ಟ್ರೀಯ ಸ್ಟಂಟ್ ಕೋ-ಆರ್ಡಿನೇಟರ್ ಕೇಚಾ ಖಾನ್ಫಕ್ಡಿ ನೇತೃತ್ವದಲ್ಲಿ ಥೈಲ್ಯಾಂಡ್ನಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.
‘ಕಾಟಾಳನ್’ ಸಿನಿಮಾನ ಪೌಲ್ ಜಾರ್ಜ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಆ್ಯಂಟನಿ ವರ್ಗೀಸ್, ‘ಪುಷ್ಪ’ ಖ್ಯಾತಿಯ ತೆಲುಗು ನಟ ಸುನೀಲ್, ಕಬೀರ್ ಸಿಂಗ್, ದುಶಾರಾ ವಿಜಯನ್ ಮೊದಲಾದವರು ನಟಿಸಿದ್ದಾರೆ. ಯಾವುದೇ ಸಿನಿಮಾ ಯಶಸ್ಸು ಕಾಣಬೇಕು ಎಂದರೆ ಸಂಗೀತದ ಪಾತ್ರ ದೊಡ್ಡದಿರುತ್ತದೆ. ಈ ಚಿತ್ರಕ್ಕೆ ಕನ್ನಡದ ಬಿ. ಅಜನೀಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಟೀಸರ್ನ ಹಿನ್ನೆಲೆ ಸಂಗೀತ ಗಮನ ಸೆಳೆಯುವ ರೀತಿಯಲ್ಲಿದೆ.
ಕ್ಯೂಬ್ ಎಂಟರ್ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ಶರೀಫ್ ಮೊಹಮ್ಮದ್ ಚಿತ್ರ ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್ಗೂ ಮೊದಲೇ ಸದ್ದು ಮಾಡುತ್ತಿದ್ದು, ಒಟಿಟಿ ಹಾಗೂ ಟಿವಿ ಹಕ್ಕಿಗೆ ಬೇಡಿಕೆ ಬಂದಿದೆ.
ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ (Zaid Khan) ನಟಿಸಿರುವ ‘ಕಲ್ಟ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾದ ಪೋಸ್ಟರ್ನಿಂದ ಸಖತ್ ಗಮನ ಸೆಳೆದಿದ್ದ ‘ಕಲ್ಟ್’ ಸಿನಿಮಾಕ್ಕೆ ಮಲೈಕಾ ವಸುಪಾಲ್ ನಾಯಕಿ. ಝೈದ್ ಖಾನ್ ಮತ್ತು ಮಲೈಕಾ ಅವರು ಸಿನಿಮಾಕ್ಕೆ ಭರ್ಜರಿ ಪ್ರಚಾವನ್ನು ಸಹ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಮೇಕಿಂಗ್, ಆಕ್ಷನ್ ದೃಶ್ಯಗಳು ಮತ್ತು ಭಾವುಕ ದೃಶ್ಯಗಳಿಂದ ಟ್ರೈಲರ್ ಗಮನ ಸೆಳೆಯುತ್ತಿದೆ.
‘ಕಲ್ಟ್’ ಟ್ರೈಲರ್ ನೋಡಿದರೆ ಇದು ಪಕ್ಕಾ ಭಗ್ನ ಪ್ರೇಮಿಯ ಕತೆ ಎಂಬುದು ತಿಳಿಯುತ್ತದೆ. ಝೈದ್ ಖಾನ್ ಮಾಧವ ಪಾತ್ರದಲ್ಲಿ ನಟಿಸಿದ್ದರೆ ಮಲೈಕಾ ಗೀತಾ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ರಚಿತಾ ರಾಮ್ ಸಹ ನಟಿಸಿದ್ದು, ಅವರುದ್ದ ಕೇವಲ ಅತಿಥಿ ಪಾತ್ರ ಮಾತ್ರವೇ ಅಲ್ಲ ಎಂಬುದು ಟ್ರೈಲರ್ನಲ್ಲಿಯೇ ತಿಳಿದು ಬರುತ್ತಿದೆ. ಪ್ರೀತಿಯನ್ನು ಕಳೆದುಕೊಂಡು ಮದ್ಯದ ದಾಸನಾದ ಯುವಕನ ಪಾತ್ರದಲ್ಲಿ ಝೈದ್ ಖಾನ್ ನಟಿಸಿದ್ದಾರೆ.
ಸಿನಿಮಾದಲ್ಲಿ ಪ್ರೇಮಿಯಾಗಿ, ಭಗ್ನ ಪ್ರೇಮಿಯಾಗಿ ಹೀಗೆ ಎರಡು ಶೇಡ್ನಲ್ಲಿ ಝೈದ್ ಖಾನ್ ಕಾಣಿಸಿಕೊಂಡಿರುವುದು ಟ್ರೈಲರ್ನಲ್ಲಿಯೇ ತಿಳಿದು ಬರುತ್ತಿದೆ. ಮಲೈಕಾ ವಸುಪಾಲ್ ಟ್ರೈಲರ್ನಲ್ಲಿ ಕಡಿಮೆ ಕಾಣಿಸಿಕೊಂಡರೂ ಸಹ ಬಲು ಅಂದವಾಗಿ ಕಾಣುತ್ತಾರೆ. ರಚಿತಾ ರಾಮ್ ಅವರ ಪಾತ್ರ ಬೋಲ್ಡ್ ಆಗಿರುವ ಜೊತೆಗೆ ಪ್ರಬುದ್ಧತೆಯನ್ನೂ ಒಳಗೊಂಡಿರುವುದು ಟ್ರೈಲರ್ನಿಂದ ತಿಳಿದು ಬರುತ್ತಿದೆ. ಕೆಲವು ಆಕ್ಷನ್ ಸೀನ್ಗಳನ್ನು ಟ್ರೈಲರ್ನಲ್ಲಿ ತೋರಿಸಲಾಗಿದ್ದು, ಆಕ್ಷನ್ ಒಳ್ಳೆಯ ಗುಣಮಟ್ಟದಿಂದ ಕೂಡಿರುವುದು ಕಾಣುತ್ತಿದೆ.
ಒಟ್ಟಾರೆಯಾಗಿ ‘ಕಲ್ಟ್’ ಸಿನಿಮಾದ ಟ್ರೈಲರ್ ಕುತೂಹಲ ಮೂಡಿಸುವಂತಿದೆ. ಸಿನಿಮಾನಲ್ಲಿ ಪ್ರೀತಿ, ರೊಮ್ಯಾನ್ಸ್, ಆಕ್ಷನ್, ಭಗ್ನ ಪ್ರೇಮ, ಭಗ್ನ ಪ್ರೇಮದ ಬಳಿಕ ಮತ್ತೆ ಪ್ರೇಮದಲ್ಲಿ ಬೀಳುವುದು, ಮಗ ವ್ಯಸನಗಳಿಗೆ ದಾಸನಾದರೆ ಪೋಷಕರು ಅನುಭವಿಸುವ ನೋವು, ಝೈದ್ ಖಾನ್ (ಮಾಧವ) ಭಗ್ನ ಪ್ರೇಮಿ ಯಾಕಾದ, ರಚಿತಾ ರಾಮ್ ಪಾತ್ರ, ಮಾಧವನ ಹುಡುಕಿ ಬರುವುದೇಕೆ? ಇನ್ನೂ ಹಲವು ಅಂಶಗಳು, ಕುತೂಹಲಗಳು ಸಿನಿಮಾನಲ್ಲಿ ಇರುವಂತಿದೆ.
‘ಕಲ್ಟ್’ ಸಿನಿಮಾವನ್ನು ಅನಿಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಅರ್ಜುನ್ ಜನ್ಯ. ಎ ಹರ್ಷ ಕೊರಿಯೋಗ್ರಫಿ ಮಾಡಿದ್ದಾರೆ. ಝೈದ್ ಖಾನ್, ಮಲೈಕಾ ಹಾಗೂ ರಚಿತಾ ರಾಮ್ ಜೊತೆಗೆ ಅಚ್ಯುತ್ ಕುಮಾರ್, ರಂಗಾಯಣ ರಘು ಇನ್ನೂ ಕೆಲ ಒಳ್ಳೆಯ ನಟ-ನಟಿಯರಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಲೋಕಿ ಸಿನಿಮಾಸ್. ಜನವರಿ 23ರಂದು ಸಿನಿಮಾ ಬಿಡುಗಡೆ ಆಗಲಿದೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ.
ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಮೂರನೇ ಪಂದ್ಯದಿಂದ ಇವರಿಬ್ಬರಲ್ಲಿ ಒಬ್ಬರನ್ನು ಕೈ ಬಿಡುವುದು ಖಚಿತ.
ಇಲ್ಲಿ ಪ್ರಸಿದ್ಧ್ ಕೃಷ್ಣ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಅವರ ಬದಲಿಗೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಆಡುವ ಬಳಗಕ್ಕೆ ಸೇರಿಕೊಳ್ಳಬಹುದು. ಈ ಮೂಲಕ ಟೀಮ್ ಇಂಡಿಯಾ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಬಹುದು.
ಅಂದರೆ ಮೂರನೇ ಪಂದ್ಯದಲ್ಲಿ ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅವರೊಂದಿಗೆ ನಿತೀಶ್ ಕುಮಾರ್ ರೆಡ್ಡಿ ಕೂಡ ಹೆಚ್ಚುವರಿ ವೇಗಿಯಾಗಿ ತಂಡದಲ್ಲಿ ಇರಲಿದ್ದಾರೆ. ಹಾಗೆಯೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಈ ಪಂದ್ಯದಲ್ಲೂ ಮುಂದುವರೆಯುವುದನ್ನು ನಿರೀಕ್ಷಿಸಬಹುದು.
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದರೆ, ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡರೆ, ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆಯಲಿದ್ದಾರೆ. ಇನ್ನುಳಿದಂತೆ ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹಾಗೂ ಕುಲ್ದೀಪ್ ಯಾದವ್ ಬೌಲರ್ಗಳಾಗಿ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
‘ಬಿಗ್ ಬಾಸ್ ಕನ್ನಡ ಸೀಸನ್ 12’ರ (Bigg Boss) ಸ್ಪರ್ಧಿ ಗಿಲ್ಲಿ ನಟಗೆ ಅಭಿಮಾನಿ ಬಳಗ ಹಿರಿದಾಗಿದೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 1.5 ಮಿಲಿಯನ್ ಅಂದರೆ 15 ಲಕ್ಷ ಹಿಂಬಾಲಕರು ಸಿಕ್ಕಿದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿ. ಈಗ ಅವರು ಬಿಗ್ ಬಾಸ್ಗೆ ಬರಲು ಕಾರಣ ಯಾರು ಎಂಬುದನ್ನು ರಿವೀಲ್ ಮಾಡಿದ್ದಾರೆ. ಅವರು ಬಿಗ್ ಬಾಸ್ನ ಓರ್ವ ಮಾಜಿ ಸ್ಪರ್ಧಿಗೆ ಧನ್ಯವಾದ ಹೇಳಿದ್ದಾರೆ.
ಗಿಲ್ಲಿ ನಟ ಅವರು ಜೀ ಕನ್ನಡದಲ್ಲಿ ಶೋಗಳನ್ನು ನೀಡುತ್ತಾ ಬಂದವರು. ಅವರು ಮೊದಲ ಬಾರಿಗೆ ಕಲರ್ಸ್ನಲ್ಲಿ ಕಾಣಿಸಿಕೊಂಡಿದ್ದು ‘ಕ್ವಾಟ್ಲೆ ಕಿಚನ್’ ಶೋನಲ್ಲಿ. ಇದರಲ್ಲಿ ಅವರು ಹೆಚ್ಚು ದಿನ ಇರಲಿಲ್ಲ. ಆ ಬಳಿಕ ಗಿಲ್ಲಿ ನಟ ಅವರು ‘ಬಿಗ್ ಬಾಸ್’ ಶೋಗೆ ಬಂದು ಗಮನ ಸೆಳೆದರು. ಅವರು ಅದ್ಭುತವಾಗಿ ಮನರಂಜನೆ ನೀಡುವ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ಇಲ್ಲಿಗೆ ಬರಲು ಕಾರಣ ತುಕಾಲಿ ಸಂತೋಷ್ ಎಂಬ ವಿಷಯ ಗೊತ್ತಾಗಿದೆ.
ತುಕಾಲಿ ಸಂತೋಷ್ ಅವರು ‘ಗಿಚ್ಚಿ ಗಿಲಿಗಿಲಿ’ ತಂಡದಲ್ಲಿ ಇದ್ದಾರೆ. ಈ ತಂಡ ಬಿಗ್ ಬಾಸ್ ಮನೆಗೆ ಬಂದಿತ್ತು. ಈ ವೇಳೆ ಇಷ್ಟದ ಸ್ಪರ್ಧಿ ಯಾರು ಎಂಬುದನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಗಿಲ್ಲಿ, ಹಲವರ ಹೆಸರನ್ನು ಹೇಳಿದರು. ಆದರೆ, ತುಕಾಲಿ ಹೆಸರನ್ನು ಅವರು ಉಲ್ಲೇಖ ಮಾಡಿಲ್ಲ. ಆಗ ತುಕಾಲಿ ಸಂತು ಅವರು, ‘ನನ್ನ ಹೆಸರನ್ನು ಹೇಳ್ತೀಯಾ ಎಂದು ಕಾಯ್ತಾ ಇದ್ದೆ’ ಎಂದರು.
‘ನಿನ್ನನ್ನು ಮರೆಯೋಕೆ ಹೇಗೆ ಸಾಧ್ಯ? ಈ ಶೋಗೆ ಬರೋಕೆ ನೀನು ಕಾರಣ. ಮರೆತು ಬಿಟ್ಟೆಯಾ? ಅಣ್ಣನೇ ಸಂಧಾನ ಮಾಡ್ಸಿದ್ದು’ ಎಂದು ಗಿಲ್ಲಿ ಹೇಳಿದರು. ಏನು ಸಂಧಾನ ಎಂಬಿತ್ಯಾದಿ ವಿಷಯವನ್ನು ಉಲ್ಲೇಖಿಸಿಲ್ಲ. ಗಿಲ್ಲಿ ಈ ಶೋಗೆ ಬರೋಕೆ ತುಕಾಲಿ ಸಂತೋಷ್ ಕಾರಣ ಎಂಬ ವಿಷಯ ಸ್ಪಷ್ಟವಾಗಿದೆ. ಇದನ್ನು ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರಿಂದಾಗಿ ಒಂದೊಳ್ಳೆಯ ಕೆಲಸ ಆಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸೀಸನ್ ಅಲ್ಲಿ ಗಿಲ್ಲಿ ಇಲ್ಲದೆ ಇದ್ದಿದ್ದರೆ ಸಾಕಷ್ಟು ನಷ್ಟ ಆಗುತ್ತಿತ್ತು ಎಂದು ಅನೇಕರು ಹೇಳಿದ್ದಾರೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿವರೆಗೆ ಎಲ್ಲರೂ ಗಿಲ್ಲಿಯ ಅಭಿಮಾನಿಯಾಗಿದ್ದಾರೆ.
ಗದಗ, ಜನವರಿ 17: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದ್ದು, ಈ ಅನಿರೀಕ್ಷಿತ ಘಟನೆಯಿಂದ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಮೂಲಗಳ ಪ್ರಕಾರ, ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ದೇವಾಲಯಕ್ಕೆಂದು ತಂದ ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ಆಂಜನೇಯ ದೇಗುಲದಲ್ಲಿ ತಾತ್ಕಾಲಿಕವಾಗಿ ಇರಿಸಿದ ನಂತರ ಗೆಜ್ಜೆನಾದ ಕೇಳಿಸಲು ಪ್ರಾರಂಭಿಸಿದೆ. ಗುರುವಾರ ರಾತ್ರಿ 8 ಗಂಟೆಯಿಂದ ಆರಂಭವಾದ ಈ ಶಬ್ದ ಇದುವರೆಗೆ ನಿಂತಿಲ್ಲ ಎಂದು ಸ್ಥಳೀಯ ನಿವಾಸಿ ಮಹೇಶ್ ತಿಳಿಸಿದ್ದಾರೆ.
ಗೆಜ್ಜೆ ಶಬ್ದ ಕೇಳಿದ ಕೂಡಲೇ ನೂರಾರು ಗ್ರಾಮಸ್ಥರು ದೇವಸ್ಥಾನಕ್ಕೆ ಓಡೋಡಿ ಬಂದಿದ್ದು, ರಾತ್ರಿಯಿಡೀ ಅಲ್ಲೇ ಜಾಗರಣೆ ಮಾಡಿದ್ದಾರೆ. ಈ ಶಬ್ದ ದೇವಸ್ಥಾನದ ಗರ್ಭಗುಡಿಯಿಂದ ಕೇಳಿಬರುತ್ತಿದೆ ಎನ್ನಲಾಗಿದೆ. ಭಯದಿಂದ ಯಾವುದೇ ಗ್ರಾಮಸ್ಥರು ಒಳಗಡೆ ಹೋಗಲು ಮುಂದಾಗಿಲ್ಲ. ಗ್ರಾಮಸ್ಥರು ಈ ಘಟನೆಯ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ತಿಳಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬಂದು ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ತಾನು ಚೆನ್ನಾಗಿ ಓದಿ, ಒಂದೊಳ್ಳೆ ಉದ್ಯೋಗ ಪಡೆದುಕೊಂಡು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅಮ್ಮ ಅಪ್ಪ, ಅಜ್ಜ, ಅಜ್ಜಿಯೊಂದಿಗೆ (grand parents) ಊರು ಸುತ್ತಬೇಕು. ಅವರ ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸಬೇಕು ಹೀಗೆ ಸಾವಿರಾರು ಕನಸುಗಳನ್ನು ಕಂಡಿರುತ್ತಾರೆ. ಆ ಕನಸುಗಳು ನನಸಾಗುವ ಘಳಿಗೆ ಬಂದರೆ ಹೇಗಿರುತ್ತೆ ಎಂದು ನೀವು ಒಮ್ಮೆಯಾದ್ರೂ ಊಹಿಸಿದ್ದೀರಾ. ಆದರೆ ಈ ಹಿರಿಜೀವಗಳು ಮೊಮ್ಮಗನಿಂದಾಗಿ (grandson) ವಿಮಾನ ಹತ್ತುವಂತಾಗಿದೆ. ಹೌದು, ಮೊಮ್ಮಗನು ತನ್ನ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದು ಈ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ತುಂಬಿಬಂದಿದೆ.
ಅಂಕಿತ್ ಬಿಗ್ ಮೌತ್ (ankitranabigmouth) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಯುವಕನೊಬ್ಬನು ತನ್ನ ಅಜ್ಜ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ದುಬೈಗೆ ಕರೆದುಕೊಂಡಿರುವ ದೃಶ್ಯವನ್ನು ನೀವಿಲ್ಲಿ ನೋಡಬಹುದು. ಈ ವಿಡಿಯೋದ ಶೀರ್ಷಿಕೆಯಲ್ಲಿ ದಾದಿಜೀ ಕಿ ಫಸ್ಟ್ ಫ್ಲೈಟ್ ಎಂದು ಬರೆಯಲಾಗಿದೆ.
ವೈರಲ್ ವಿಡಿಯೋ ಇಲ್ಲಿದೆ
ಅಜ್ಜ ಅಜ್ಜಿಯ ಮೊದಲ ವಿಮಾನ ಪ್ರಯಾಣದ ಭಾವುಕ ಕ್ಷಣದ ವಿಡಿಯೋ ಇದಾಗಿದೆ. ಈ ವಿಡಿಯೋದಲ್ಲಿ ವೃದ್ಧ ದಂಪತಿಯೂ ತನ್ನ ಮೊಮ್ಮಗನ ಜೊತೆ ವಿಮಾನದಲ್ಲಿ ಏರ್ಪೋರ್ಟ್ಗೆ ತೆರಳಿ ಅಲ್ಲಿಂದ ವಿಮಾನ ಪ್ರಯಾಣಿಸಿ ದುಬೈಗೆ ಹೋಗುವುದನ್ನು ಕಾಣಬಹುದು. ಈ ಹಿರಿಜೀವಗಳು ವಿಮಾನ ಹಾರಾಟ ಸೇರಿದಂತೆ ದುಬೈನಲ್ಲಿ ಕಳೆಯುವ ಕ್ಷಣವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಪ್ರಯಾಣ ಎಷ್ಟು ಖುಷಿ ತಂದಿದೆ ಎನ್ನುವುದಕ್ಕೆ ಅಜ್ಜ ಅಜ್ಜಿಯ ಮೊಗದಲ್ಲಿನ ನಗುವೇ ಸಾಕ್ಷಿಯಾಗಿದೆ.
ಈ ವಿಡಿಯೋ 3 ಮಿಲಿಯನ್ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇಂತಹ ಮೊಮ್ಮಗನನ್ನು ಪಡೆದ ನೀವೇ ಧನ್ಯ ಎಂದಿದ್ದಾರೆ. ಇನ್ನೊಬ್ಬರು, ಅಜ್ಜ ಅಜ್ಜಿಯ ಮೊಗದಲ್ಲಿನ ಖುಷಿ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅನೇಕ ಜನರಿಗೆ ವಿಮಾನದಲ್ಲಿನ ಪ್ರಯಾಣ ಕನಸಿನ ಮಾತು. ಈ ದೃಶ್ಯ ನೋಡಿ ಕಣ್ಣಲ್ಲಿ ನೀರು ಬಂತು ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ