Category Archives: Blog

Your blog category

‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

FIFA ವಿಶ್ವಕಪ್ 2026 ರ ಬಹುಮಾನ ಪ್ರಕಟ: ವಿಜೇತರಿಗೆ 481 ಕೋಟಿ..! ಉಳಿದವರಿಗೆ? – Kannada News | ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026 FIFA World Cup 2026: New Format, Hosts, and Record Prize Money Revealed!

2026 ರ ಫಿಫಾ ವಿಶ್ವಕಪ್ (FIFA World Cup 2026) ಇದೇ ಜೂನ್ 11, 2026 ರಿಂದ ಜುಲೈ 19, 2026 ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮೂರು ದೇಶಗಳು ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಪಂದ್ಯಾವಳಿ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿದೆ. ಅದರಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ 11, ಮೆಕ್ಸಿಕೊದಲ್ಲಿ ಮೂರು ಮತ್ತು ಕೆನಡಾದಲ್ಲಿ ಎರಡು ಸೇರಿದಂತೆ ಒಟ್ಟು 16 ನಗರಗಳು ಪಂದ್ಯಗಳನ್ನು ಆಯೋಜಿಸುತ್ತವೆ. ಫೈನಲ್ ಪಂದ್ಯವು ಜುಲೈ 19, 2026 ರಂದು ನ್ಯೂಯಾರ್ಕ್-ನ್ಯೂಜೆರ್ಸಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಬಾರಿಯ ವಿಶೇಷವೇನು?

ಈ ಬಾರಿಯ ಫಿಫಾ ವಿಶ್ವಕಪ್​ನ ವಿಶೇಷತೆ ಏನೆಂದರೆ, ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 32 ತಂಡಗಳು ಭಾಗವಹಿಸುತ್ತಿದ್ದ ಈ ಪಂದ್ಯಾವಳಿಯಲ್ಲಿ ಈ ಬಾರಿ 48 ತಂಡಗಳು ಕಣಕ್ಕಿಳಿಯಲಿವೆ. ಇದರ ಜೊತೆಗೆ ಸ್ವರೂಪವನ್ನು ಸಹ ಬದಲಾಯಿಸಲಾಗಿದೆ. 48 ತಂಡಗಳನ್ನು ತಲಾ 4 ತಂಡಗಳ 12 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು, ಜೊತೆಗೆ ಮೂರನೇ ಸ್ಥಾನ ಪಡೆದ ಎಂಟು ಅತ್ಯುತ್ತಮ ತಂಡಗಳು 32 ರ ಸುತ್ತಿಗೆ ಮುನ್ನಡೆಯುತ್ತವೆ. ತಂಡಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಪಂದ್ಯಗಳ ಸಂಖ್ಯೆಯೂ ಹೆಚ್ಚಾಗಿದ್ದು, ಈ ಬಾರಿಯ ಪಂದ್ಯಾವಳಿಯಲ್ಲಿ ಒಟ್ಟು 104 ಪಂದ್ಯಗಳು ನಡೆಯಲಿವೆ.

ಬಹುಮಾನದ ಮೊತ್ತದಲ್ಲಿ ದಾಖಲೆಯ ಏರಿಕೆ

ಈ ವರ್ಷ ಫಿಫಾ ಬಹುಮಾನದ ಹಣವನ್ನು ಗಣನೀಯವಾಗಿ ಹೆಚ್ಚಿಸಿದೆ. ಒಟ್ಟು US$655 ಮಿಲಿಯನ್ (ಸುಮಾರು 6300 ಕೋಟಿ ರೂ.) ಮೊತ್ತವನ್ನು 48 ತಂಡಗಳ ನಡುವೆ ಹಂಚಲಾಗುತ್ತದೆ. ಹಿಂದಿನ ಆವೃತ್ತಿಗೆ ಹೋಲಿಸಿದರೆ ಈ ಬಾರಿ ಬಹುಮಾನದ ಮೊತ್ತದಲ್ಲಿ ಸುಮಾರು 50% ಹೆಚ್ಚಳವಾಗಿದೆ.

ಯಾವ ತಂಡಕ್ಕೆ ಎಷ್ಟು ಹಣ ಸಿಗುತ್ತದೆ?

  • ಚಾಂಪಿಯನ್ ತಂಡ: ಸುಮಾರು 481 ಕೋಟಿ ರೂ.
  • ರನ್ನರ್ ಅಪ್: ಸುಮಾರು 317 ಕೋಟಿ ರೂ.
  • 3ನೇ ಸ್ಥಾನ: ಸುಮಾರು 279 ಕೋಟಿ ರೂ.
  • 4ನೇ ಸ್ಥಾನ: ಸುಮಾರು 259 ಕೋಟಿ ರೂ.
  • 5 ರಿಂದ 8 ನೇ ಶ್ರೇಯಾಂಕಿತ ತಂಡಗಳು: ಸುಮಾರು 182 ಕೋಟಿ ರೂ.
  • 9 ರಿಂದ 16 ನೇ ಸ್ಥಾನದಲ್ಲಿರುವ ತಂಡಗಳು: ಸುಮಾರು 144 ಕೋಟಿ ರೂ.
  • 17 ರಿಂದ 32 ನೇ ಸ್ಥಾನದಲ್ಲಿರುವ ತಂಡಗಳು: ಸುಮಾರು 105 ಕೋಟಿ ರೂ.
  • 33 ರಿಂದ 48 ನೇ ಸ್ಥಾನ: ಸುಮಾರು 86 ಕೋಟಿ ರೂ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bengaluru Airport Air India Tail Strike; Karnataka Rain Alert

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada

ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್​​ ವೇಳೆ ಅವರ ಹಿಂಭಾಗ ರನ್​ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್​​ಗಳ ಎಡವಟ್ಟಾ ಎಂದು ತಿಳಿಯಲು ಡಿಜಿಸಿಎ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಲಾಗಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಮುಖ್ಯಾಂಶಗಳು

  • ಲ್ಯಾಂಡಿಂಗ್​​ ವೇಳೆ ನೆಲಕ್ಕಪ್ಪಳಿಸಿದ ಏರ್​ಇಂಡಿಯಾ ವಿಮಾನದ ಹಿಂಭಾಗ
  • ರಾಜ್ಯದಲ್ಲಿ ಭಾರಿ ಮಳೆ ಎಂದ ಹವಾಮಾನ ಇಲಾಖೆ
  • ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿದ ಪಾಪರಾಜಿಗಳು
  • ಇಂಗ್ಲೆಂಡ್ ವೇಗಿ ರಿಚರ್ಡ್ ಗ್ಲೀಸನ್ ಆರ್‌ಸಿಬಿಗೆ ಸೇರ್ಪಡೆ

ಕರ್ನಾಟಕದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮೇ 26ರ ವೇಳೆಗೆ ಕೇರಳ ಪ್ರವೇಶಿಸುವ ಸಾಧ್ಯತೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.

ಇದನ್ನೂ ಓದಿ: ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್​ಗೆ

ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

‘ಸಾರಿ ಭಾಯ್, ಕ್ಷಮಿಸಿ’: ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿದ ಪಾಪರಾಜಿಗಳು

ಮುಂಬೈನ ಆಸ್ಪತ್ರೆಯೊಂದರ ಹೊರಗಡೆ ತಮ್ಮ ಖಾಸಗಿತನಕ್ಕೆ ಧಕ್ಕೆ ತಂದ ಪಾಪರಾಜಿಗಳ ವರ್ತನೆಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೀವ್ರ ಆಕ್ರೋಶ ಹೊರಹಾಕಿದ್ದರು. ಆದರೆ, ಈ ಘಟನೆ ಬಳಿಕ ಅಂದರೆ ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ಪಾಪರಾಜಿಗಳು ರಾಜಿ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಮುಂಬೈನಲ್ಲಿ ನಡೆದ ‘ರಾಜಾ ಶಿವಾಜಿ’ ಸಿನಿಮಾದ ಸಕ್ಸಸ್ ಪಾರ್ಟಿಯಲ್ಲಿ ಸಲ್ಮಾನ್ ಖಾನ್ ಭಾಗವಹಿಸಿದ್ದರು.

ಇದನ್ನೂ ಓದಿ: ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ

ಈ ಚಿತ್ರದಲ್ಲಿ ಸಲ್ಮಾನ್ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ನಾಯಕ ಹಾಗೂ ನಿರ್ದೇಶಕ ರಿತೇಶ್ ದೇಶ್‌ಮುಖ್ ಜೊತೆಗೆ ಸಲ್ಮಾನ್ ಹೊರಬರುತ್ತಿದ್ದಂತೆ, ಅಲ್ಲಿದ್ದ ಪಾಪರಾಜಿಗಳು ಒಟ್ಟಿಗೆ “ನಮ್ಮನ್ನು ಕ್ಷಮಿಸಿ ಭಾಯ್, ಸಾರಿ” ಎಂದು ಹೇಳಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಆರ್‌ಸಿಬಿ ತಂಡ ಸೇರಿದ ಇಂಗ್ಲೆಂಡ್ ವೇಗಿ ರಿಚರ್ಡ್ ಗ್ಲೀಸನ್

ಐಪಿಎಲ್ 2026ರ ಟೂರ್ನಿಯ ಮಧ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ವೇಗಿಯೊಬ್ಬರ ಎಂಟ್ರಿಯಾಗಿದೆ. ಇಂಗ್ಲೆಂಡ್ ತಂಡದ ಅನುಭವಿ ಬಲಗೈ ವೇಗದ ಬೌಲರ್ ರಿಚರ್ಡ್ ಗ್ಲೀಸನ್ ಅವರು ಅಧಿಕೃತವಾಗಿ ಆರ್‌ಸಿಬಿ ಪಡೆಗೆ ಸೇರಿಕೊಂಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಪ್ರಮುಖ ವೇಗದ ಬೌಲರ್ ಒಬ್ಬರು ಗಾಯದಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನವನ್ನು ತುಂಬಲು ಆರ್‌ಸಿಬಿ ಮ್ಯಾನೇಜ್‌ಮೆಂಟ್ ಇಂಗ್ಲೆಂಡ್‌ನ ರಿಚರ್ಡ್ ಗ್ಲೀಸನ್​​ ಅನ್ನು ತಂಡಕ್ಕೆ ಸೇರಿಸಿಕೊಂಡಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 6:01 pm, Thu, 21 May 26

Source link

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ ದೃಶ್ಯಗಳನ್ನು ತೋರಿಸಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ಪೂರ್ಣ ಮಾಹಿತಿ ತಿಳಿಯಲು ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ? – Kannada News | Rajinikanth starrer Jailer 2 movie release date postpone

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ ಎಂದು ಸುದ್ದಿ ಹರಡಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕ ಬದಲಾಯಿಸಲಾಗಿದೆ.

ಇತ್ತೀಚೆಗಷ್ಟೆ ಸಿನಿಮಾದ ಸೆಟ್​​ನಲ್ಲಿ ಅವಘಡ ನಡೆದ ಸುದ್ದಿ ಹೊರಬಿತ್ತು. ‘ಜೈಲರ್ 2’ ಸಿನಿಮಾದ ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ವ್ಯಕ್ತಿಯೊಬ್ಬ ನಿಧನ ಹೊಂದಿದ್ದ. ಅದರ ಬೆನ್ನಲ್ಲೆ ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದ ಸುದ್ದಿ ಹೊರಬಿದ್ದಿದೆ. ಈಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಜೂನ್ 12 ರಂದು ಬಿಡುಗಡೆ ಆಗಬೇಕಿದ್ದ ‘ಜೈಲರ್ 2’ ಸಿನಿಮಾ ಸೆಪ್ಟೆಂಬರ್ 11 ರಂದು ಬಿಡುಗಡೆ ಆಗಲಿದೆ. ಆದರೆ ಇದು ಸಿನಿಮಾದ ಒಳಿತಿಗಾಗಿ ತೆಗೆದುಕೊಳ್ಳಲಾಗಿರುವ ನಿರ್ಣಯ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದುಬಾರಿ ವಿಲನ್ ಈ ನಟ

ಸೆಪ್ಟೆಂಬರ್ 14 ರ ಸೋಮವಾರ ಬರುವ ಗಣೇಶ ಚತುರ್ಥಿ ಹಬ್ಬದ ರಜಾದಿನಗಳ ಲಾಭವನ್ನು ಪಡೆಯಲೆಂದು ‘ಜೈಲರ್ 2’ ಸಿನಿಮಾವನ್ನು ಸೆಪ್ಟೆಂಬರ್ 11 ರಂದು ಬಿಡುಗಡೆ ಮಾಡಲಾಗುತ್ತಿದೆ. ಹಬ್ಬ ಇರುವ ಕಾರಣ ಸತತ 4 ದಿನಗಳ ಲಾಂಗ್ ವೀಕೆಂಡ್ ಸಿಗಲಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಇನ್ನೂ ಹಲವು ರಾಜ್ಯಗಳಲ್ಲಿ ಗಣೇಶ ಹಬ್ಬದ ಸಾರ್ವಜನಿಕ ರಜೆ ಇರುವುದರಿಂದ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಮಾಡಲು ಇದು ಸಹಕಾರಿಯಾಗಲಿದೆ.

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಜನಿಕಾಂತ್ ಅವರು ಮತ್ತೊಮ್ಮೆ ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. 2023 ರ ಬ್ಲಾಕ್‌ಬಸ್ಟರ್ ‘ಜೈಲರ್’ ಚಿತ್ರದ ಮುಂದುವರಿದ ಭಾಗವಾಗಿರುವ ಈ ಸೀಕ್ವೆಲ್‌ನಲ್ಲಿ ದೊಡ್ಡ ತಾರಾಬಳಗವೇ ಇದೆ. ಮೊದಲ ಭಾಗದಲ್ಲಿದ್ದ ಶಿವರಾಜ್‌ಕುಮಾರ್ ಮತ್ತು ಮೋಹನ್‌ಲಾಲ್ ಈ ಚಿತ್ರದಲ್ಲೂ ತಮ್ಮ ಪಾತ್ರಗಳನ್ನು ಮುಂದುವರಿಸಲಿದ್ದಾರೆ. ಇವರ ಜೊತೆಗೆ ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಮತ್ತು ಕಮಲ್ ಹಾಸನ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರ ಸಂಗೀತವಿದೆ. ಸಿನಿಮಾನಲ್ಲಿ ಶಾರುಖ್ ಖಾನ್ ಸಹ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಆ ಸುದ್ದಿ ಖಾತ್ರಿ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ – Kannada News | Pulwama attack mastermind Hamza Burhan killed in Pakistan

ನವದೆಹಲಿ, ಮೇ 21: 2019ರ ಪುಲ್ವಾಮಾ (Pulwama Attack) ಭೀಕರ ಭಯೋತ್ಪಾದನಾ ದಾಳಿಯ ಸಂಚುಗಾರರಲ್ಲಿ ಒಬ್ಬನಾದ ಹಮ್ಜಾ ಬುರ್ಹಾನ್ (Hamza Burhan) ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳಿಂದ ಕೊಲ್ಲಲ್ಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಮುಜಫರಾಬಾದ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿ ನಡೆಸಿದವರ ಗುರುತು ಅಥವಾ ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಪುಲ್ವಾಮಾ ದಾಳಿಗೆ ಸಂಬಂಧಿಸಿದ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಪ್ರಮುಖ ಮಾಸ್ಟರ್ ಮೈಂಡ್‌ಗಳಲ್ಲಿ ಹಮ್ಜಾ ಬುರ್ಹಾನ್ ಒಬ್ಬನೆಂದು ವರದಿಯಾಗಿದೆ. ನಿಷೇಧಿತ ‘ಅಲ್-ಬದ್ರ್’ (Al-Badr) ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಹಮ್ಜಾ ಬುರ್ಹಾನ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಮುಜಾಫರಾಬಾದ್ ನಗರದಲ್ಲಿದ್ದಾಗ ಅಪರಿಚಿತ ಸಶಸ್ತ್ರಧಾರಿಗಳು ಆತನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಆತನ ದೇಹಕ್ಕೆ ಹಲವು ಗುಂಡುಗಳು ತಗುಲಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದಾಳಿ ನಡೆಸಿದವರು ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: 

ಈತ ಮೂಲತಃ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖರ್ಬತ್‌ಪೋರಾ ನಿವಾಸಿಯಾಗಿದ್ದಾನೆ. 2017ರಲ್ಲಿ ಉನ್ನತ ಶಿಕ್ಷಣದ ನೆಪದಲ್ಲಿ ಪಾಕಿಸ್ತಾನಕ್ಕೆ ತೆರಳಿದ ಈತ, ಅಲ್ಲಿ ಉಗ್ರಗಾಮಿ ಸಂಘಟನೆ ಸೇರಿಕೊಂಡನು. ಭಯೋತ್ಪಾದಕ ವಲಯದಲ್ಲಿ ಈತನನ್ನು ‘ಡಾಕ್ಟರ್’ ಎಂಬ ಉಪನಾಮದಿಂದ ಕರೆಯಲಾಗುತ್ತಿತ್ತು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು 2022ರಲ್ಲೇ ಈತನನ್ನು ‘ಯುಎಪಿಎ’ (UAPA) ಕಾಯ್ದೆಯಡಿ ‘ಘೋಷಿತ ಭಯೋತ್ಪಾದಕ’ ಎಂದು ಪ್ರಕಟಿಸಿತ್ತು.

ಇದನ್ನೂ ಓದಿ: Pulwama Day 2026: ಫೆಬ್ರವರಿ 14ರಂದು ಪುಲ್ವಾಮಾ ದಿನ, 40 ಸೈನಿಕರ ಬಲಿದಾನದ ಸ್ಮರಣೆ, ಉಗ್ರ ದಾಳಿ ನಡೆದಿದ್ಹೇಗೆ?

2019ರ ಫೆಬ್ರವರಿ 14ರಂದು ಪುಲ್ವಾಮಾದ ಲೆಥ್‌ಪೋರಾದಲ್ಲಿ ಸಿಆರ್‌ಪಿಎಫ್ ಜವಾನರ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಈ ಇಡೀ ಭೀಕರ ದಾಳಿಯ ತನಿಖೆ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಹಂಜಾ ಬುರ್ಹಾನ್ ಹೆಸರನ್ನು ಪ್ರಮುಖ ಸಂಚುಗಾರನಾಗಿ ಉಲ್ಲೇಖಿಸಲಾಗಿತ್ತು. ಗಡಿಯ ಆಚೆ ಕುಳಿತು ಭಾರತದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಈತ ಹಣಕಾಸು ಮತ್ತು ಯೋಜನಾ ನೆರವು ನೀಡುತ್ತಿದ್ದನು. ಆತ ಈಗ ಕೊಲೆಯಾಗಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Karnataka Weather Forecast: ಕರ್ನಾಟಕದಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ? – Kannada News | Heavy rain Forecast In Karnataka till May 25. The IMD has issued yellow and orange alerts for several districts

ಬೆಂಗಳೂರು, (ಮೇ 21): ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ (karnataka Rains) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ (pre monsoon) ಮಾರುಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru), ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert)​ ಘೋಷಿಸಲಾಗಿದೆ.

ಮುಖ್ಯಾಂಶಗಳು

  • ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆಯಾಗುವ ಸಾಧ್ಯತೆ
  • ಮಳೆಯಾಗುವ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ
  • ಬೆಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್​, 3 ದಿನ ಯೆಲ್ಲೋ ಅಲರ್ಟ್​
  • 4 ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ
  • ಇಂದು ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಎಲ್ಲೆಲ್ಲಿ ಮಳೆ?

ಬೆಂಗಳೂರಿನಲ್ಲಿ ಇಂದು (ಮೇ 21) ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ ಮಾತ್ರವಲ್ಲದೇ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮೇ 23ರಂದು ಬೀದರ್ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಡಲಿಗೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಮುನ್ನೆಚ್ಚರಿಕೆ

ಬಂಗಾಳಕೊಲ್ಲಿ, ಅರಬ್ಬೀ ಸಮುದ್ರದ ವಿವಿಧ ಭಾಗಗಳಲ್ಲಿ ಬಿರುಗಾಳಿ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಹೀಗಾಗಿ ಈಗಾಗಲೇ ಕಡಲಿಗೆ ಇಳಿದವರು ತಕ್ಷಣ ತೀರ ಪ್ರದೇಶ ಸೇರಬೇಕೆಂದು ಸೂಚನೆ ನೀಡಲಾಗಿದೆ. ಇದರಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್​​​ಗಳು ಮಲ್ಪೆ ಹಿನ್ನೀರು ಪರಿಸರದಲ್ಲಿ ವಾಪಸ್ ಆಗುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

SpaceXAIಗೆ ಜನ ಬೇಕಿದ್ದಾರೆ; ಎಐ ಪರಿಣತಿ ಬೇಕಿಲ್ಲವಂತೆ; ಇಲಾನ್ ಮಸ್ಕ್ ಬಯಸುತ್ತಿರೋದು ಎಂಥವರನ್ನು? – Kannada News | Elon Musk wants world class engineers and physicists for SpaceXAI

ವಾಷಿಂಗ್ಟನ್, ಮೇ 21: ಇಲಾನ್ ಮಸ್ಕ್ (Elon Musk) ಅವರು ತಮ್ಮ ಸ್ಪೇಸ್ ಎಕ್ಸ್ ಎಐ (SpaceXAI) ಸಂಸ್ಥೆಗೆ ಉದ್ಯೋಗಿಗಳ ಶೋಧ ನಡೆಸುತ್ತಿದ್ದಾರೆ. ತಮ್ಮ ಎಕ್ಸ್ ಅಕೌಂಟ್​ನಲ್ಲಿ ಹೈರಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಇಮೇಲ್ ಐಡಿಯನ್ನೂ ಒದಗಿಸಿದ್ದಾರೆ. ಸ್ಪೇಸ್​ಎಕ್ಸ್ ಎಐ ಸಂಸ್ಥೆಗೆ ಸೇರಬಯಸುವವರು ಎಐನಲ್ಲಿ ಅನುಭವದ ಹಿನ್ನೆಲೆ ಇಲ್ಲದಿದ್ದರೂ ಆದೀತು, ಆದರೆ, ಸ್ಮಾರ್ಟ್ ಆಗಿರಬೇಕು. ವಿಶ್ವ ದರ್ಜೆಯ ಎಂಜಿನಿಯರುಗಳು, ವಿಜ್ಞಾನಿಗಳಾಗಿರಬೇಕಂತೆ.

‘ಸ್ಪೇಸ್​ಎಕ್ಸ್​ಎಐಗೆ ವಿಶ್ವದರ್ಜೆಯ ಎಂಜಿನಿಯರುಗಳು, ಫಿಸಿಸಿಸ್ಟ್​ಗಳನ್ನು (ಭೌತವಿಜ್ಞಾನಿಗಳು) ನೇಮಕಾತಿ ಮಾಡಲಾಗುತ್ತಿದೆ. ಅವರಿಗೆ ಎಐನಲ್ಲಿ ಯಾವುದೇ ಅನುಭವ ಇಲ್ಲದಿದ್ದರೂ ಆಗುತ್ತದೆ. ಸ್ಮಾರ್ಟ್ ವ್ಯಕ್ತಿಗಳು ಬೇಗ ಕಲಿತುಕೊಳ್ಳುತ್ತಾರೆ’ ಎಂದು ಇಲಾನ್ ಮಸ್ಕ್ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ತಮ್ಮಲ್ಲಿ ಅಸಾಧಾರಣ ಸಾಮರ್ಥ್ಯವಿರುವುದನ್ನು ತೋರಿಸುವಂತಹ ಅಂಶಗಳನ್ನು 3 ಬುಲೆಟ್ ಪಾಯಿಂಟ್​ಗಳಲ್ಲಿ ಬರೆದು, ai_eng@spacex.com ಇಮೇಲ್ ವಿಳಾಸಕ್ಕೆ ಕಳುಹಿಸಬಹುದು. ಹಾಗೆಂದು ಮಸ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಫೋನ್ ಖರೀದಿಸಿ, ಇಎಂಐ ಕಟ್ಟೋಕಾಗ್ತಿಲ್ವಾ? ಸಾಲಗಾರರು ನಿಮ್ಮ ಫೋನ್ ಲಾಕ್ ಮಾಡಬಹುದಾ? ಆರ್​ಬಿಐ ಬಳಿ ಪ್ರಸ್ತಾಪ

ಎಲ್ಲಾ ಇಮೇಲ್​ಗಳನ್ನೂ ಮಸ್ಕ್ ನೋಡುತ್ತಾರಾ?

ಮತ್ತೊಂದು ಟ್ವೀಟ್​ನಲ್ಲಿ ಇಲಾನ್ ಮಸ್ಕ್ ಅವರು, ನೇಮಕಾತಿಗೆ ಕೋರಿ ಬರುವ ಎಲ್ಲಾ ಇಮೇಲ್​ಗಳನ್ನು ಖುದ್ದಾಗಿ ಪರಿಶೀಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಹಾಗೆಯೇ, ಸ್ಮಾರ್ಟ್ ಜನರು ಪ್ರಯೋಜನವೆನಿಸುವ ಬಹಳ ಸಂಕೀರ್ಣ ಇರುವ ಕೆಲಸವನ್ನು ಮಾಡಿದರೆ ಅವರಿಗೆ ಆದ್ಯತೆ ಸಿಗುವುದು ಎಂದೂ ಮಸ್ಕ್ ಹೇಳಿದ್ದಾರೆ.

ಇಲಾನ್ ಮಸ್ಕ್ ಅವರ ಟ್ವೀಟ್

ಎಕ್ಸ್​ಎಐ ಎಂಬುದು ಇಲಾನ್ ಮಸ್ಕ್ ಇತ್ತೀಚೆಗಷ್ಟೇ ಆರಂಭಿಸಿದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕಂಪನಿ. ರಾಕೆಟ್, ಸ್ಪೇಸ್​ಶಿಪ್ ತಯಾರಿಸುವ ಸ್ಪೇಸ್​ಎಕ್ಸ್ ಜೊತೆಗೆ ಎಕ್ಸ್​ಎಐ ಅನ್ನು ಸೇರಿಸಲಾಗಿದೆ. ಇದು ಸ್ಪೇಸ್​ಎಕ್ಸ್​ನ ಎಐ ವಿಭಾಗವಾಗಿದ್ದು, ಸ್ಪೇಸ್​ಎಕ್ಸ್​ಎಐ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಲ್ಲಿ ತರಕಾರಿ ಮಾರುವ ಹುಡುಗನ ತಲೆಯಲ್ಲಿ ಎಐ ಟೂಲ್; ಗಂಟೆಗೆ 350 ರೂ ಎಕ್ಸ್​ಟ್ರಾ ಇನ್ಕಮ್; ಬೆರಗಾದ ನೆಟ್ಟಿಗರು

ಸ್ಪೇಸ್​ಎಕ್ಸ್​ನ ಕೊಲೋಸಸ್ ಸೂಪರ್ ಕಂಪ್ಯೂಟರ್

ಸ್ಪೇಸ್ ಎಕ್ಸ್ ಸಂಸ್ಥೆ ಕೊಲೋಸಸ್ ಎನ್ನುವ ಬಹಳ ಶಕ್ತಿಶಾಲಿ ಸೂಪರ್ ಕಂಪ್ಯೂಟರ್ ನಿರ್ಮಿಸಿದೆ. ಇದು ವಿಶ್ವದ ಅತಿದೊಡ್ಡ ಎಐ ಸೂಪರ್ ಕಂಪ್ಯೂಟರ್​ಗಳ ಸಿಸ್ಟಂ ಆಗಿದೆ. ಎನ್​ವಿಡಿಯಾದ 2.2 ಲಕ್ಷಕ್ಕೂ ಅಧಿಕ ಜಿಪಿಯುಗಳನ್ನು ಬಳಸುತ್ತದೆ. ಎಐ ಕ್ಷೇತ್ರದಲ್ಲಿ ಸಂಚಲನ ಮೂಡಿಸಿರುವ ಆಂಥ್ರೋಪಿಕ್ ಸಂಸ್ಥೆಯು ಈ ಕೊಲೋಸಸ್ ಸಿಸ್ಟಂನ ಕಂಪ್ಯೂಟಿಂಗ್​ ಬಳಕೆಗಾಗಿ ಪ್ರತೀ ತಿಂಗಳು 1.25 ಬಿಲಿಯನ್ ಡಾಲರ್ (ಬರೋಬ್ಬರಿ 11,000 ಕೋಟಿ ರೂಗೂ ಅಧಿಕ) ಪಾವತಿ ಮಾಡುತ್ತದಂತೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ – Kannada News | Twisha Sharma Dowry Death Case co star Dheekshith Shetty reveals why she quit acting

ಮಾಡೆಲ್ ಹಾಗೂ ನಟಿ ಟ್ವಿಶಾ ಶರ್ಮಾ ಅವರ ನಿಗೂಢ ಸಾವು (Twisha Sharma Death) ಸದ್ಯ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತಮ್ಮ ಪತಿ ಮನೆಯಲ್ಲಿ ಮೇ 12ರಂದು ಟ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಮನೆಯವರ ದೈಹಿಕ-ಮಾನಸಿಕ ಹಿಂಸೆಯೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಟ್ವಿಶಾ ಶರ್ಮಾ (Twisha Sharma) ಅವರು ಸಿನಿಮಾರಂಗವನ್ನು ತೊರೆದು ಮತ್ತು ಕಾರ್ಪೊರೇಟ್ ವಲಯಕ್ಕೆ ಕಾಲಿಡಲು ಅಸಲಿ ಕಾರಣ ಏನೆಂಬುದು ಈಗ ತಿಳಿದುಬಂದಿದೆ.

ತೆಲುಗಿನ ‘ಮುಗ್ಗುರು ಮೊನಗಾಳ್ಳು’ (2021) ಚಿತ್ರದಲ್ಲಿ ಟ್ವಿಶಾ ಶರ್ಮಾ ಜೊತೆ ನಟಿಸಿದ್ದ ಕನ್ನಡದ ಖ್ಯಾತ ನಟ ದೀಕ್ಷಿತ್ ಶೆಟ್ಟಿ ಅವರು ಈ ದುರಂತ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ದೀಕ್ಷಿತ್ ಶೆಟ್ಟಿ, ‘ಇದು ಅತ್ಯಂತ ಆಘಾತಕಾರಿ ಸುದ್ದಿ. ಅವರು ಯಾವಾಗಲೂ ಕೆಲಸದ ಬಗ್ಗೆ ಅಪಾರ ಬದ್ಧತೆ ಮತ್ತು ಕಠಿಣ ಪರಿಶ್ರಮ ಹೊಂದಿದ್ದ ಹುಡುಗಿ. ತುಂಬ ಉತ್ಸಾಹದಿಂದ ಬದುಕುತ್ತಿದ್ದ ಅವರು ಇಂತಹ ನಿರ್ಧಾರ ಕೈಗೊಂಡಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವಿಶಾ ಸಿನಿಮಾರಂಗ ತೊರೆದ ಬಗ್ಗೆ ಮಾತನಾಡಿದ ದೀಕ್ಷಿತ್, ‘ನಾನು ಸುಮಾರು ನಾಲ್ಕು ವರ್ಷಗಳ ಹಿಂದೆ ಅವರೊಂದಿಗೆ ಮಾತನಾಡಿದ್ದೆ. ಅವರಿಗೆ ಮದುವೆಯಾಗಿದ್ದ ವಿಷಯವೇ ನನಗೆ ಗೊತ್ತಿರಲಿಲ್ಲ. ನಾವು ಆ ಒಂದು ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೆವು, ಆಮೇಲೆ ಅವರು ತಮ್ಮ ಸ್ವಂತ ಊರಿಗೆ ಮರಳಿದರು. ತಮಗೆ ನಟನೆಯಲ್ಲಿ ತಾವು ಅಂದುಕೊಂಡಷ್ಟು ತೃಪ್ತಿ ಸಿಗುತ್ತಿಲ್ಲ, ಹಾಗಾಗಿ ಸ್ನಾತಕೋತ್ತರ ಪದವಿ ಮಾಡಬಯಸುವುದಾಗಿ ಹೇಳಿದ್ದಳು. ಅವರ ಸಹೋದರ ಸೇನೆಯಲ್ಲಿದ್ದಾರೆ. ಚಿತ್ರರಂಗ ತಮಗೆ ಒಗ್ಗುತ್ತಿಲ್ಲ ಎಂದು ಅರಿತುಕೊಂಡ ಅವರು, ಊರಿಗೆ ವಾಪಸ್ ಹೋಗಿ ಕುಟುಂಬದೊಂದಿಗೆ ನೆಲೆಸಲು ಬಯಸಿದ್ದರು’ ಎಂದು ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಅದೇ ರೀತಿ ‘ಮುಗ್ಗುರು ಮೊನಗಾಳ್ಳು’ ಚಿತ್ರದ ನಿರ್ದೇಶಕ ಅಭಿಲಾಷ್ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದು, ‘ಚಿತ್ರದ ಸ್ಕ್ರೀನಿಂಗ್ ದಿನ ನಾನು ಅವರ ಪೋಷಕರನ್ನು ಭೇಟಿಯಾಗಿದ್ದೆ, ಅವರು ತುಂಬಾ ಒಳ್ಳೆಯ ವ್ಯಕ್ತಿಗಳು. ಅವರ ಅಗಲಿಕೆಯ ಸುದ್ದಿ ಕೇಳಿ ತುಂಬಾ ಬೇಸರವಾಗಿದೆ’ ಎಂದಿದ್ದಾರೆ. ಟ್ವಿಶಾ ಶರ್ಮಾ ಅವರು ಮಾಡೆಲಿಂಗ್ ದಿನಗಳಲ್ಲಿ ‘ಮಿಸ್ ಪುಣೆ’ ಪ್ರಶಸ್ತಿಯನ್ನು ಸಹ ಮುಡಿಗೇರಿಸಿಕೊಂಡಿದ್ದರು.

ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ

ಟ್ವಿಶಾ ಶರ್ಮಾ ಅವರು 2024ರಲ್ಲಿ ಡೇಟಿಂಗ್ ಆ್ಯಪ್ ಮೂಲಕ ಸಮರ್ಥ್ ಸಿಂಗ್ ಎಂಬಾತನನ್ನು ಪರಿಚಯ ಮಾಡಿಕೊಂಡು, ಡಿಸೆಂಬರ್ 2025ರಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇತ್ತ ಪತಿ ಸಮರ್ಥ್ ಸಿಂಗ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಟ್ವಿಶಾ ಮಾದಕ ವ್ಯಸನಿಯಾಗಿದ್ದರು ಮತ್ತು ಮನೋವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪ್ರತಿ-ಆರೋಪ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೀಕೆಗಳಿಂದ ರೋಸಿಹೋದ ಪ್ರಶಾಂತ್ ನೀಲ್, ಬದಲಾಗುವ ನಿರ್ಧಾರ ಮಾಡಿದ ನಿರ್ದೇಶಕ – Kannada News | Prashanth Neel said he will change his movie making style

ಪ್ರಶಾಂತ್ ನೀಲ್ (Prashanth Neel), ಪ್ರಸ್ತುತ ಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಎಲ್ಲವೂ ಸೂಪರ್ ಹಿಟ್. ಪ್ರಶಾಂತ್ ನೀಲ್, ಕಮರ್ಶಿಯಲ್, ಮಾಸ್ ಸಿನಿಮಾಗಳಿಗೆ ಭಿನ್ನ ವ್ಯಾಕರಣ ನೀಡಿದ ನಿರ್ದೇಶಕ. ತಮ್ಮ ಡಾರ್ಕ್ ಕಲರ್ ಗ್ರೇಡಿಂಗ್, ಮೊನಚು ಸಂಭಾಷಣೆ, ಭಿನ್ನವಾಗಿ ಕತೆ ಹೇಳುವ ರೀತಿ, ನಿರೂಪಣಾ ಶೈಲಿಯಿಂದ ತಮ್ಮದೇ ಒಂದು ಭಿನ್ನ ಶೈಲಿಯನ್ನೇ ಅವರು ಸೃಷ್ಟಿಸಿದ್ದಾರೆ. ಆದರೆ ಈಗ ಪ್ರಶಾಂತ್ ನೀಲ್ ತಮ್ಮ ಶೈಲಿಯನ್ನೇ ಕೈಬಿಡುತ್ತಿದ್ದಾರೆ.

ಇದೀಗ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾ ಅನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ಸಿನಿಮಾದ ಟೀಸರ್ ನಿನ್ನೆಯಷ್ಟೆ (ಮೇ 20) ಬಿಡುಗಡೆ ಆಗಿದೆ. ನೀಲ್ ಅವರ ಈ ಹಿಂದಿನ ಸಿನಿಮಾಗಳಾದ ‘ಸಲಾರ್’, ‘ಕೆಜಿಎಫ್’ ರೀತಿ, ‘ಡ್ರ್ಯಾಗನ್’ ಸಹ ಕಡುಕಪ್ಪು ಬಣ್ಣದ ಥೀಮ್ ಅನ್ನು ಹೊಂದಿದೆ. ಅದೇ ಬ್ಯಾಟಲ್ ಫೀಲ್ಡ್, ಅದೇ ಸ್ಟೋರಿ ನರೇಟರ್ (ಕಥಾ ನಿರೂಪಕನ ಪಾತ್ರ). ಅಬ್ಬರದ ಸಂಗೀತ. ಸಿಂಗಲ್ ವಲ್ರ್ಡ್ ಡೈಲಾಗ್​​ಗಳು ಸಿನಿಮಾನಲ್ಲಿವೆ. ಟೀಸರ್ ಅನ್ನು ಬಹಳ ಜನ ಮೆಚ್ಚಿದ್ದಾರಾದರೂ, ನೀಲ್ ತಮ್ಮ ಹಳೆಯ ಸಿನಿಮಾಗಳ ಮಾದರಿಯನ್ನೇ ಇಲ್ಲೂ ಅನುಸರಿಸಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿರುವ ಪ್ರಶಾಂತ್ ನೀಲ್, ಇನ್ನೆರಡು ಸಿನಿಮಾಗಳ ಬಳಿಕ ತಮ್ಮ ಶೈಲಿಯನ್ನು ಬದಲಾವಣೆ ಮಾಡಲು ನಿರ್ಧರಿಸಿರುವುದಾಗಿ ಪ್ರಕಟಿಸಿದ್ದಾರೆ. ಇನ್ನು ಮುಂದೆ ಡಾರ್ಕ್ ಥೀಮ್​​ಗಳು ಇರುವುದಿಲ್ಲ. ಸಾಕಷ್ಟು ಮಂದಿ ನನ್ನ ಶೈಲಿಯ ಬಗ್ಗೆ ವಿಮರ್ಶೆ ಮಾಡಿದ್ದಾರೆ. ಕೆಲವರು ನನ್ನೊಟ್ಟಿಗೆ ನೇರವಾಗಿ ವಾಗ್ವಾದ ಸಹ ಮಾಡಿದ್ದಾರೆ. ಆದರೆ ಇನ್ನು ಮುಂದೆ ನಾನು ನನ್ನ ನೈಜ ಶೈಲಿಯನ್ನು ಬಳಸುವುದಿಲ್ಲ ಎಂದಿದ್ದಾರೆ. ಇದು ನಿಜಕ್ಕೂ ದೊಡ್ಡ ನಿರ್ಧಾರವೇ ಆಗಿದೆ.

ಇದನ್ನೂ ಓದಿ:ಹುಟ್ಟುಹಬ್ಬದ ದಿನ ಪ್ರಶಾಂತ್ ನೀಲ್​​ಗೆ ಧನ್ಯವಾದ ಹೇಳಿದ ಜೂ ಎನ್​​ಟಿಆರ್

ಪ್ರಶಾಂತ್ ನೀಲ್ ಅವರು ‘ಸಲಾರ್ 2’, ‘ಡ್ರ್ಯಾಗನ್ 2’ ಸಿನಿಮಾಗಳನ್ನು ನಿರ್ದೇಶಿಸಲಿದ್ದು, ಆ ಎರಡು ಸಿನಿಮಾಗಳ ಬಳಿಕ ನೀಲ್ ಅವರು ತಮ್ಮ ಶೈಲಿಯನ್ನೇ ಬದಲಿಸಲಿದ್ದಾರೆ. ‘ನನ್ನ ಸಿನಿಮಾಗಳಲ್ಲಿ ಇನ್ನು ಮುಂದೆ ಹೆಚ್ಚು ಬಣ್ಣಗಳು ಕಾಣಲಿವೆ. ಇಂಟೆನ್ಸ್ ಕತೆಯ ಹೊರತಾಗಿ ಭಿನ್ನ ಕತೆಗಳು ಸಹ ಇರಲಿವೆ’ ಎಂದಿದ್ದಾರೆ. ‘ಹಾಗಿದ್ದರೆ ನಿಮ್ಮ ಸಿನಿಮಾನಲ್ಲಿ ಪಿಂಕ್ ಬಣ್ಣವನ್ನೂ ನೋಡಬಹುದೇ?’ ಎಂಬ ಪ್ರಶ್ನೆಗೆ, ‘ಖಂಡಿತ ಹೌದು’ ಎಂದಿದ್ದಾರೆ ನೀಲ್.

ಡಾರ್ಕ್ ಥೀಮ್, ಪಾತಕಿಗಳ ಪ್ರಪಂಚವನ್ನು ಸೃಷ್ಟಿಸುವುದು, ಮುಖ್ಯವಾದ ಹಲವು ಪಾತ್ರಗಳ ಸೃಷ್ಟಿಸಿ ಅವರನ್ನು ಕತೆಯಲ್ಲಿ ಕನೆಕ್ಟ್ ಮಾಡುವುದು ಮೂರನೇ ಒಂದು ಪಾತ್ರದ ಮೂಲಕ ಕತೆಯನ್ನು ನರೇಟ್ ಮಾಡಿಸುವುದು ಇವು ಪ್ರಶಾಂತ್ ನೀಲ್ ಅವರ ಶೈಲಿ. ಇದರಿಂದ ನೀಲ್ ಅವರಿಗೆ ಭಾರಿ ಯಶಸ್ಸು ಸಹ ಸಿಕ್ಕಿದೆ. ಆದರೆ ಇನ್ನು ಮುಂದೆ ಆ ಶೈಲಿಯನ್ನೇ ಬಿಡಲಿದ್ದಾರಂತೆ ನೀಲ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link