ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ – Kannada News | Illegal Bangladeshi Immigrants Entering Bengaluru via West Bengal Trains? Chalavadi Narayanaswamy Flags Security Concerns
ಬೆಂಗಳೂರು, ಜನವರಿ 17: ಪಶ್ಚಿಮ ಬಂಗಾಳ–ಬೆಂಗಳೂರು ನಡುವಣ ರೈಲು ಸಂಚಾರ ರಾಷ್ಟ್ರೀಯ ಭದ್ರತೆಗೆ ಭಾರೀ ಸವಾಲಾಗುತ್ತಿದೆ ಎಂದು ಕರ್ನಾಟಕ (Karnataka) ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಪತ್ರವನ್ನೂ ಬರೆದಿರುವ ಅವರು, ಅಕ್ರಮ ವಲಸಿಗರು ರೈಲುಗಳ ಮೂಲಕ ದಕ್ಷಿಣ ಭಾರತ ಪ್ರವೇಶಿಸುವುದನ್ನು ತಡೆಯುವುದಕ್ಕಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬೆಂಗಳೂರು ನಡುವೆ ಪ್ರಸ್ತುತ 15ರಿಂದ 17ರಷ್ಟು ವೀಕ್ಲಿ…