Category Archives: Blog

Your blog category

BOB Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 5,000 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು – Kannada News | BOB Apprentice Recruitment: 5000 Banking Jobs for Graduates Apply by June 8

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶImage Credit source: gemini ai

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು, ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಕೆಳಗಿನಂತಿದೆ.

ಒಟ್ಟು ಹುದ್ದೆಗಳು ಮತ್ತು ಶೈಕ್ಷಣಿಕ ಅರ್ಹತೆ:

ಬ್ಯಾಂಕ್ ಆಫ್ ಬರೋಡಾ ಈ ಅಧಿಸೂಚನೆಯ ಮೂಲಕ ದೇಶಾದ್ಯಂತ ಒಟ್ಟು 5,000 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ (Degree) ಮುಗಿಸಿರಬೇಕು.

ವಯೋಮಿತಿ ಮತ್ತು ಸಡಿಲಿಕೆ

ಮೇ 1, 2026ರ ವೇಳೆಗೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 28 ವರ್ಷಗಳನ್ನು ಮೀರಬಾರದು. ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದ್ದು, ಅದರ ವಿವರ ಇಲ್ಲಿದೆ:

  • SC / ST ಅಭ್ಯರ್ಥಿಗಳಿಗೆ: 5 ವರ್ಷಗಳ ಸಡಿಲಿಕೆ
  • OBC ಅಭ್ಯರ್ಥಿಗಳಿಗೆ: 3 ವರ್ಷಗಳ ಸಡಿಲಿಕೆ
  • PwBD ಅಭ್ಯರ್ಥಿಗಳಿಗೆ: 10 ರಿಂದ 15 ವರ್ಷಗಳವರೆಗೆ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕದ ವಿವರ:

ಅಭ್ಯರ್ಥಿಗಳ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ಸಾಮಾನ್ಯ (General), EWS ಮತ್ತು OBC ಪುರುಷ ಅಭ್ಯರ್ಥಿಗಳಿಗೆ: ರೂ. 800
  • ಸಾಮಾನ್ಯ, EWS ಮತ್ತು OBC ಮಹಿಳಾ / ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 600
  • SC, ST ಮತ್ತು PwBD ಅಭ್ಯರ್ಥಿಗಳಿಗೆ: ರೂ. 200

ಆಯ್ಕೆ ವಿಧಾನ ಮತ್ತು ಪರೀಕ್ಷಾ ಶೈಲಿ:

ಅಭ್ಯರ್ಥಿಗಳನ್ನು ಒಟ್ಟು ಮೂರು ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಆನ್‌ಲೈನ್ ಲಿಖಿತ ಪರೀಕ್ಷೆ (Objective Type): ಈ ಪರೀಕ್ಷೆಯನ್ನು ‘ರಿಮೋಟ್ ಪ್ರೊಕ್ಟರ್ಡ್’ (Remote Proctored) ಮಾದರಿಯಲ್ಲಿ ನಡೆಸಲಾಗುತ್ತದೆ. ಅಂದರೆ, ಅಭ್ಯರ್ಥಿಗಳು ತಮ್ಮ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಬಳಸಿ ಮನೆಯಿಂದಲೇ ಪರೀಕ್ಷೆ ಬರೆಯಬಹುದು.
  • ದಾಖಲೆ ಪರಿಶೀಲನೆ (Document Verification)
  • ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (Local Language Proficiency Test)

ಇದನ್ನೂ ಓದಿ: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ತರಬೇತಿ ಅವಧಿ ಮತ್ತು ಮಾಸಿಕ ಸ್ಟೈಫಂಡ್:

ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷದ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿ ಪಡೆಯಲಿದ್ದಾರೆ. ಈ ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 15,000 ಸ್ಟೈಫಂಡ್ (Stipend) ನೀಡಲಾಗುತ್ತದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಭತ್ಯೆಗಳು (Allowances) ಅನ್ವಯಿಸುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ:

  • ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್ 8, 2026 ಕೊನೆಯ ದಿನವಾಗಿದೆ.
  • ಹಂತ 1: ಅರ್ಹ ಅಭ್ಯರ್ಥಿಗಳು ಮೊದಲು ಸರ್ಕಾರದ ಅಧಿಕೃತ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗಳಾದ NAPS ಅಥವಾ NATS ಮೂಲಕ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.
  • ಹಂತ 2: ನೋಂದಣಿಯ ನಂತರ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಜೂನ್ 8, 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಒಟಿಟಿಯಲ್ಲಿ ಬರಲಿದೆ ಹೊಸ ರೂಪದ ‘ಧುರಂಧರ್’; ಪ್ರೇಕ್ಷಕರಿಗೆ ಶುರುವಾಯ್ತು ಗೊಂದಲ – Kannada News | Ranveer Singh Dhurandhar Raw unseen version release Date Netflix Jio Hotstar confusion

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟನೆಯ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಸದ್ಯ ಒಟಿಟಿ ಜಗತ್ತಿನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರದ ಎರಡನೇ ಭಾಗ ‘ಧುರಂಧರ್: ದಿ ರಿವೇಂಜ್’ ಇತ್ತೀಚೆಗಷ್ಟೇ ವಿದೇಶಗಳಲ್ಲಿ ಒಟಿಟಿ ಮೂಲಕ ರಿಲೀಸ್ ಆಗಿ ಭಾರಿ ಸೌಂಡ್ ಮಾಡಿತ್ತು. ಇದರ ಬೆನ್ನಲ್ಲೇ ಈಗ ಚಿತ್ರತಂಡ ಹಾಗೂ ನೆಟ್‌ಫ್ಲಿಕ್ಸ್ (Netflix) ಪ್ರೇಕ್ಷಕರಿಗೆ ಮತ್ತೊಂದು ಬಿಗ್ ಸರ್ಪ್ರೈಸ್ ನೀಡಿದೆ. ‘ಧುರಂಧರ್’ (Dhurandhar) ಚಿತ್ರದ ಮೊದಲ ಭಾಗವು, ಯಾವುದೇ ಕಟ್‌ ಇಲ್ಲದೇ, ಇದುವರೆಗೆ ಯಾರೂ ನೋಡಿರದ ದೃಶ್ಯಗಳೊಂದಿಗೆ ಮತ್ತೆ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲು ಸಜ್ಜಾಗಿದೆ.

ನೆಟ್‌ಫ್ಲಿಕ್ಸ್ ಸಂಸ್ಥೆಯು ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಬಗ್ಗೆ ಪ್ರಕಟಣೆ ಹಂಚಿಕೊಂಡಿದೆ. ಥಿಯೇಟರ್‌ನಲ್ಲಿ ರಿಲೀಸ್ ಆದಾಗ ಕತ್ತರಿ ಬಿದ್ದಿದ್ದ ಹಲವು ಪ್ರಮುಖ ಮತ್ತು ರಗಡ್ ದೃಶ್ಯಗಳನ್ನು ಒಳಗೊಂಡ ವಿಸ್ತೃತ ಆವೃತ್ತಿ ಇದಾಗಿರಲಿದೆ ಎಂದು ತಿಳಿಸಿದೆ. ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿರುವ ನೆಟ್‌ಫ್ಲಿಕ್ಸ್, ‘ಈ ಆವೃತ್ತಿಯನ್ನು ಮೇ 22ರಿಂದ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ವೀಕ್ಷಿಸಿ’ ಎಂದು ಬರೆದುಕೊಂಡಿದೆ.

ಒಂದೆಡೆ ಅಭಿಮಾನಿಗಳು ಈ ‘ಅನ್‌ಕಟ್’ ಆವೃತ್ತಿ ನೋಡಲು ಕಾಯುತ್ತಿದ್ದರೆ, ಮತ್ತೊಂದೆಡೆ ಪ್ರೇಕ್ಷಕರಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ‘ಧುರಂಧರ್’ ಎರಡನೇ ಭಾಗದ ಒಟಿಟಿ ರಿಲೀಸ್ ಅಪ್ಡೇಟ್. ‘ಧುರಂಧರ್: ದಿ ರಿವೇಂಜ್’ ಈಗಾಗಲೇ ಮೇ 14ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಆದರೆ, ಭಾರತದಲ್ಲಿ ಇದರ ಪ್ರೀಮಿಯರ್ ಜೂನ್ 4ರಂದು ‘ಜಿಯೋ ಹಾಟ್‌ಸ್ಟಾರ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯಲಿದೆ.

ಈ ಗೊಂದಲದಿಂದಾಗಿ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ‘ಒಂದು ಭಾಗ ನೆಟ್‌ಫ್ಲಿಕ್ಸ್‌ನಲ್ಲಿ ಬಂದರೆ, ಮತ್ತೊಂದು ಭಾಗ ಜಿಯೋಸ್ಟಾರ್‌ನಲ್ಲಿ ಬರುತ್ತಿದೆ, ನಮಗಂತೂ ಫುಲ್ ಗೊಂದಲ’ ಎಂದು ಜನರು ಕಮೆಂಟ್ ಮಾಡಿದ್ದಾರೆ. ‘ಇದನ್ನು ಮೊದಲೇ ರಿಲೀಸ್ ಮಾಡಬಾರದಿತ್ತೇ?’ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ಇನ್ನು ಕೆಲವರು, ‘ನಮಗೆ ಭಾಗ 2 ಕೂಡ ನೆಟ್‌ಫ್ಲಿಕ್ಸ್‌ನಲ್ಲೇ ಬೇಕಿತ್ತು’ ಎಂದು ಬೇಡಿಕೆ ಇಡುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಚಿತ್ರದಲ್ಲಿ ದೇಶದ ಭದ್ರತೆಯ ರಹಸ್ಯ ಮಾಹಿತಿ ಸೋರಿಕೆ ಆರೋಪ; ಹೈಕೋರ್ಟ್ ಮಹತ್ವದ ಆದೇಶ

ಯಾರಿಗೆ ಯಾವ ಒಟಿಟಿಯಲ್ಲಿ ಸಿನಿಮಾ ಸಿಗಲಿದೆ ಎಂಬ ಗೊಂದಲ ಏನೇ ಇದ್ದರೂ, ಮೇ 22ರಿಂದ ರಣವೀರ್ ಸಿಂಗ್ ಅವರ ರಗಡ್ ಆ್ಯಕ್ಷನ್ ದೃಶ್ಯಗಳನ್ನು ಯಾವುದೇ ಕಟ್ ಇಲ್ಲದೇ ನೋಡಲು ನೆಟ್‌ಫ್ಲಿಕ್ಸ್ ಪ್ರೇಕ್ಷಕರಂತೂ ಕಾತರರಾಗಿದ್ದಾರೆ. ಒಟಿಟಿ ಪ್ರೇಕ್ಷಕರು ಈ ವರ್ಷನ್ ನೋಡಿ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ರಾಜ ಶಿವಾಜಿ’ ಚಿತ್ರದಿಂದ ರಿತೇಶ್​​ಗೆ ದೊಡ್ಡ ಗೆಲುವು; ಸಿನಿಮಾ ಕಂಡ ಲಾಭ ಎಷ್ಟು? – Kannada News | Raja Shivaji Box Office: Riteish Deshmukh’s Dream Film Hits 100 Cr, Breaks Records

ನಟ ಮತ್ತು ನಿರ್ದೇಶಕ ರಿತೇಶ್ ದೇಶಮುಖ್ ಅವರ ಹತ್ತು ವರ್ಷಗಳ ಕನಸಿನ ಚಿತ್ರ ‘ರಾಜ ಶಿವಾಜಿ’ ಮೇ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ, ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರ ವೀರಗಾಥೆಯನ್ನು ಆಧರಿಸಿದ ಈ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಭರ್ಜರಿ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದ್ದರೂ, ಮರಾಠಿ ಆವೃತ್ತಿಯು ಭಾರತದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಮರಾಠಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬಜೆಟ್ ಮತ್ತು ಒಟ್ಟು ಗಳಿಕೆ:

ಚಿತ್ರದ ಒಟ್ಟು ಬಜೆಟ್: ಸುಮಾರು 75 ಕೋಟಿ ರೂ.

ಭಾರತದಲ್ಲಿನ ಒಟ್ಟು ಗಳಿಕೆ (Gross): 102.90 ಕೋಟಿ ರೂ.

ನಿವ್ವಳ ಲಾಭ (Net Profit): 87 ಕೋಟಿ ರೂ.

ವಿದೇಶಿ ಮಾರುಕಟ್ಟೆಯಲ್ಲಿನ ಗಳಿಕೆ: 4.10 ಕೋಟಿ ರೂ.

ಚಿತ್ರಮಂದಿರಗಳ ಗಳಿಕೆಯ ಸಂಪೂರ್ಣ ಹಣ ನಿರ್ಮಾಪಕರಿಗೆ ಸೇರುವುದಿಲ್ಲ. ಇದರಲ್ಲಿ ಸುಮಾರು ಅರ್ಧದಷ್ಟು ಮಾತ್ರ ಅವರ ಕೈ ಸೇರುತ್ತದೆ. ಆದಾಗ್ಯೂ, ಒಟಿಟಿ (OTT) ಮತ್ತು ಟಿವಿ ಸ್ಯಾಟಲೈಟ್ ಹಕ್ಕುಗಳ ಮಾರಾಟವನ್ನು ಸೇರಿಸಿದರೆ, ಚಿತ್ರವು ಈಗಾಗಲೇ ನಿರ್ಮಾಪಕರಿಗೆ ಭರ್ಜರಿ ಲಾಭ ತಂದುಕೊಟ್ಟಿದೆ.

ದಿನಾವಾರು ಗಳಿಕೆಯ ವಿವರ (ಮೊದಲ ಎರಡು ವಾರಗಳು)
ಚಿತ್ರವು ಬಿಡುಗಡೆಯಾದ ಮೊದಲ ದಿನದಿಂದಲೇ ‘ಮೌತ್ ಪಬ್ಲಿಸಿಟಿ’ (ಪ್ರೇಕ್ಷಕರ ಮೆಚ್ಚುಗೆಯ ಮಾತು) ನೆರವಿನಿಂದ ಗಲ್ಲಾಪೆಟ್ಟಿಗೆಯಲ್ಲಿ ಭದ್ರವಾಗಿ ಕಚ್ಚಿ ಕುಳಿತಿದೆ.

ಮೊದಲ ವಾರದ ಗಳಿಕೆ (ಒಟ್ಟು: 52.65 ಕೋಟಿ ರೂ.)

1ನೇ ದಿನ: 11.35 ಕೋಟಿ ರೂ.

2ನೇ ದಿನ: 10.55 ಕೋಟಿ ರೂ.

3ನೇ ದಿನ: 12.00 ಕೋಟಿ ರೂ.

4ನೇ ದಿನ: 5.60 ಕೋಟಿ ರೂ.

5ನೇ ದಿನ: 4.90 ಕೋಟಿ ರೂ.

6ನೇ ದಿನ: 4.25 ಕೋಟಿ ರೂ.

7ನೇ ದಿನ: 4.00 ಕೋಟಿ ರೂ.

ಎರಡನೇ ವಾರದ ಪ್ರಮುಖ ದಿನಗಳ ಗಳಿಕೆ:

9ನೇ ದಿನ: 5.60 ಕೋಟಿ ರೂ.

1೦ನೇ ದಿನ: 6.80 ಕೋಟಿ ರೂ.

11ನೇ ದಿನ: 2.40 ಕೋಟಿ ರೂ.

12ನೇ ದಿನ: 2.50 ಕೋಟಿ ರೂ.

13ನೇ ದಿನ: 1.90 ಕೋಟಿ ರೂ.

14ನೇ ದಿನ: 1.90 ಕೋಟಿ ರೂ.

ಪ್ರಸ್ತುತ ಚಿತ್ರವು ಯಶಸ್ವಿಯಾಗಿ ಮೂರು ವಾರಗಳನ್ನು ಪೂರೈಸಿದ್ದು, ರಿತೇಶ್ ದೇಶಮುಖ್ ಅವರ ವೃತ್ತಿಜೀವನದ ಅತ್ಯಂತ ಯಶಸ್ವಿ ಹಾಗೂ ಮಹತ್ವಾಕಾಂಕ್ಷೆಯ ಸಿನಿಮಾವಾಗಿ ಹೊರಹೊಮ್ಮಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಮುಗ್ಧ ಮನಸ್ಸಿನ ಶುದ್ಧ ಭಕ್ತಿ: ದೇವರ ಮುಂದೆ ಕುಳಿತು ಪೂಜೆ ಮಾಡುತ್ತಿರುವ ಪುಟಾಣಿ – Kannada News |  A little boy worshipping before God, video goes viral

ಪುಟಾಣಿ (little kids) ಮಕ್ಕಳು ಏನು ಮಾಡಿದ್ರು ನೋಡೋಕೆ ಚಂದ. ಈ ಪುಟಾಣಿ ತೊದಲು ನುಡಿ, ನಡೆ ನುಡಿ ನೋಡುವುದೇ ಖುಷಿ. ಸ್ನಾನ ಮಾಡಿ ಬಂದು ದೇವರಿಗೆ ಕೈ ಮುಗಿಯುವ ಅಭ್ಯಾಸವನ್ನು ಮಕ್ಕಳಿಗೆ ಹೆತ್ತವರು ಹೇಳಿ ಕೊಡುತ್ತಾರೆ. ದೇವರ ಮುಂದೆ ನಿಂತು ನಮಸ್ಕಾರ ಮಾಡುವ ಪುಟ್ಟ ಮಕ್ಕಳನ್ನು ಕಂಡಾಗ ಖುಷಿಯೆನಿಸುತ್ತದೆ. ಮಕ್ಕಳ ಮುಗ್ಧ ಭಕ್ತಿ ಹಾಗೂ ಶುದ್ಧ ಪ್ರಾರ್ಥನೆ ಮನಸ್ಸಿಗೆ ಖುಷಿ ನೀಡುತ್ತದೆ. ಇದೀಗ ಈ ಪುಟಾಣಿ ಪೂಜೆ ಮಾಡೋದ್ರಲ್ಲಿ ಬ್ಯುಸಿಯಾಗಿದೆ. ಊದು ಬತ್ತಿ ಹಿಡಿದು ಶುದ್ಧ ಮನಸ್ಸಿನಿಂದ ದೇವರ ಮುಂದೆ ಬೇಡಿಕೊಂಡಿದೆ. ದೇವರಲ್ಲಿ ಪ್ರಾರ್ಥಿಸಿಕೊಳ್ಳುವ ಪುಟ್ಟ ಮಗುವಿನ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಶುದ್ಧ ಹಾಗೂ ನಿಷ್ಕಲ್ಮಶ ಭಕ್ತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಪೂಜಾ ಚಂಡೆಲ್ (Pooja Chandel) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್ ನಲ್ಲಿ ಪುಟಾಣಿಯೊಂದು ಪೂಜೆ ಮಾಡುತ್ತಿದೆ. ಊದು ಬತ್ತಿ ಹಿಡಿದುಕೊಂಡು ಜೈ ಗಣೇಶ ಜೈ ಗಣೇಶ ಎಂದು ಪ್ರಾರ್ಥಿಸುತ್ತಾ ಪೂಜೆ ಮಾಡುತ್ತಿರುವುದನ್ನು ಕಾಣಬಹುದು. ಈ ದೃಶ್ಯವನ್ನು ಪುಟ್ಟ ಮಗುವಿನ ಪಕ್ಕದಲ್ಲಿದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತುಂಬಾ ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಗಣಪತಿ ಬಪ್ಪ ಮೊರಿಯಾ ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು, ಜೈ ಗಣೇಶಜಿ ಮಹಾರಾಜ್ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka 2nd PUC-2 Result 2026: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ – Kannada News | Karnataka 2nd PUC Exam 2 Result 2026 (Declared): How to Check Scorecard Online

ಬೆಂಗಳೂರು, (ಮೇ 21): 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು (Karnataka 2nd PUC Exam 2 Result 2026)  ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಒಟ್ಟು 80,535 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮುಖ್ಯಾಂಶಗಳು

  • ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
  • ಕಲಾ, ವಾಣಿಜ್ಯ, ವಿಜ್ಞಾನದಲ್ಲಿ 80,535 ವಿದ್ಯಾರ್ಥಿಗಳು ಹಾಜರು
  • ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣ

ಫಲಿತಾಂಶದ ವಿವರ

ಪಿಯುಸಿ ಎರಡನೇ ಪರೀಕ್ಷೆ-2 ಪರೀಕ್ಷೆಗೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ ಒಟ್ಟು 80,535 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 36,764 ವಿದ್ಯಾರ್ಥಿಗಳು ತೇಗರ್ಡೆಯಾಗಿದ್ದಾರೆ. ಇನ್ನು ಪರೀಕ್ಷೆ ಬರೆದಿದ್ದ 43,311 ಬಾಲಕರಲ್ಲಿ 19367 ವಿದ್ಯಾರ್ಥಿಗಳು ಪಾಸಾಗಿದ್ದರೆ, 37,224 ಬಾಲಕಿಯರ ಪೈಕಿ 17,397 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಫಲಿತಾಂಶ ಪರಿಶೀಲಿಸುವುದು ಹೇಗೆ?

ಮಂಡಳಿಯ ಅಧಿಕೃತ ವೆಬ್ ಸೈಟ್ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು. 2026ರ ದ್ವಿತೀಯ ಪಿಯುಸಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ ನಿಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Published On – 2:19 pm, Thu, 21 May 26

Source link

ಕೊನೆಯ ಪಂದ್ಯದಲ್ಲಿ RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು! – Kannada News | Why RCB Will Keep Top Spot Even With a Loss in Final Game

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡದ ತವರು ಮೈದಾನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ. ಆರ್​ಸಿಬಿ ವಿರುದ್ಧದ ಈ ಪಂದ್ಯವು ಸನ್​ರೈಸರ್ಸ್ ಹೈದರಾಬಾದ್ ಪಾಲಿಗೆ ತುಂಬಾ ಮಹತ್ವದ್ದು.

ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಸನ್​ರೈಸರ್ಸ್ ಹೈದರಾಬಾದ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು. ಅತ್ತ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಕೂಡ ಅಮೋಘ ಗೆಲುವು ದಾಖಲಿಸಿದರೂ ಮೊದಲ ಸ್ಥಾನವನ್ನು ಅಲಂಕರಿಸಬಹುದು.

ಈ ಎರಡೂ ತಂಡಗಳು ಕೊನೆಯ ಲೀಗ್ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ, ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದರಿಂದ ಪ್ಲೇಆಫ್​ ಸುತ್ತಿನಲ್ಲಿ ಎಲಿಮಿನೇಟರ್ ಪಂದ್ಯವಾಡಬೇಕಾದ ಅನಿವಾರ್ಯತೆ ಎದುರಾಗಬಹುದು.

  • ಐಪಿಎಲ್​ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ.
  • ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ.
  • ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಿದರೆ, ಸೋಲುವ ತಂಡಕ್ಕೆ ಎರಡನೇ ಕ್ವಾಲಿಫೈಯರ್​ ಪಂದ್ಯವಾಡುವ ಅವಕಾಶ ದೊರೆಯಲಿದೆ.
  • ಅದೇ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.
  • ಹೀಗಾಗಿಯೇ ಎಲ್ಲಾ ತಂಡಗಳು ಟಾಪ್-2 ನಲ್ಲಿ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲು ಮುಂದಾಗಲಿದೆ.

RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು!

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಜಯ ಸಾಧಿಸಿದರೆ ಒಟ್ಟು 18 ಅಂಕಗಳನ್ನು ಪಡೆಯಲಿದೆ. ಅತ್ತ ಆರ್​ಸಿಬಿ ಗೆದ್ದರೆ 20 ಅಂಕಗಳೊಂದಿಗೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಒಂದು ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಭಾರೀ ಅಂತರದಿಂದ ಗೆದ್ದರೆ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಬಹುದು. ಹೀಗೆ ಆರ್​ಸಿಬಿ (+1.065) ತಂಡವನ್ನು ಯಾವ ಅಂತರದಿಂದ ಸೋಲಿಸಿದರೆ ಎಸ್​ಆರ್​ಹೆಚ್ (+0.350) ಅಂಕ ಪಟ್ಟಿಯಲ್ಲಿ ನೆಟ್​ ರನ್ ರೇಟ್ ಮೂಲಕ ಮೊದಲ ಸ್ಥಾನಕ್ಕೇರಬಹುದು ಎಂದು ನೋಡುವುದಾದರೆ…

  • ಮೊದಲು ಬ್ಯಾಟಿಂಗ್ ಮಾಡಿದರೆ:-
  • ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಖರವಾಗಿ 250 ರನ್ ಗಳಿಸಿದರೆ, ಆರ್‌ಸಿಬಿ ತಂಡವನ್ನು 162 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಬೇಕಾಗುತ್ತದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡವು ಮೊದಲು ಬ್ಯಾಟ್ 200 ರನ್ ಗಳಿಸಿದರೆ, ಆರ್‌ಸಿಬಿ ತಂಡವನ್ನು ಕೇವಲ 115 ರನ್‌ಗಳ ಒಳಗಾಗಿ ಆಲೌಟ್ ಮಾಡಬೇಕು
  • ಅಂದರೆ ಕನಿಷ್ಠ 85+ ರನ್​ಗಳ ಅಂತರದಿಂದ ಗೆದ್ದರೆ ಮಾತ್ರ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವನ್ನು ಹಿಂದಿಕ್ಕಬಹುದು.
  • ಚೇಸಿಂಗ್ ಮಾಡಿದರೆ:-
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟ್ ಮಾಡಿದ 200 ರನ್​ಗಳ ಗುರಿ ನೀಡಿದರೆ, ಈ ಗುರಿಯನ್ನು ಎಸ್‌ಆರ್‌ಹೆಚ್ ತಂಡವು ಕೇವಲ 11 ಓವರ್‌ಗಳಲ್ಲಿ (66 ಎಸೆತಗಳು) ಅಥವಾ ಅದಕ್ಕಿಂತ ಕಡಿಮೆ ಓವರ್‌ಗಳಲ್ಲಿ ಚೇಸ್ ಮಾಡಬೇಕು.
  • ಆರ್‌ಸಿಬಿ 180 ರನ್‌ಗಳ ಗುರಿಯನ್ನು ನೀಡಿದರೆ ಎಸ್‌ಆರ್‌ಹೆಚ್ ತಂಡವು ಕೇವಲ 11 ರಿಂದ 12 ಓವರ್‌ಗಳಲ್ಲಿ ಈ ಟಾರ್ಗೆಟ್ ಅನ್ನು ಬೆನ್ನಟ್ಟಬೇಕಾಗುತ್ತದೆ.
  • ಅಂದರೆ ಇಲ್ಲಿ ಕನಿಷ್ಠ 65+ ಎಸೆತಗಳನ್ನು ಬಾಕಿಯಿರಿಸಿ ಗೆದ್ದರೆ ಮಾತ್ರ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನವನ್ನು ಅಲಂಕರಿಸಬಹುದು.
  • ನೆಟ್​ ರನ್​ ರೇಟ್ ವ್ಯತ್ಯಾಸ: RCB (+1.065) vs SRH (+0.350) ನಡುವೆ 0.715 ರಷ್ಟು ದೊಡ್ಡ ನೆಟ್ ರನ್ ರೇಟ್ ವ್ಯತ್ಯಾಸವಿದೆ.

SRH ಅಮೋಘ ಗೆಲುವು ಸಾಧಿಸಿದರೆ ಏನಾಗಲಿದೆ?

ಒಂದು ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಆರ್​ಸಿಬಿ ವಿರುದ್ಧ ಈ ಮೇಲೆ ತಿಳಿಸಿದರೆ 85+ ರನ್​ಗಳ ಅಂತರದಿಂದ ಅಥವಾ 11 ಓವರ್​ಗಳಲ್ಲಿ ಚೇಸ್ ಮಾಡಿ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿಯಲಿದೆ. ಇತ್ತ ದ್ವಿತೀಯ ಸ್ಥಾನದಿಂದ ಆರ್​ಸಿಬಿ ತಂಡವನ್ನು ಹಿಂದಿಕ್ಕಲು ಗುಜರಾತ್ ಟೈಟಾನ್ಸ್ ತಂಡಕ್ಕೂ ಅವಕಾಶ ಇದೆ.

ಅಂದರೆ ಇಂದಿನ ಮ್ಯಾಚ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಭಾರೀ ಅಂತರದಿಂದ ಗೆದ್ದರೆ, ನೆಟ್ ರನ್​ ರೇಟ್​ ಏರಿಕೆಯಾಗಲಿದೆ. ಇದರಿಂದ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಹೀನಾಯವಾಗಿ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಬಹುದು.

ಇಲ್ಲಿ ಗುಜರಾತ್ ಟೈಟಾನ್ಸ್ ತಂಡವು ಆರ್​ಸಿಬಿ ತಂಡದ ನೆಟ್​ ರನ್ ರೇಟ್​ ಹಿಂದಿಕ್ಕಬೇಕಿದ್ದರೆ ಈ ಕೆಳಗೆ ನೀಡಲಾದ ಅಂತರದಿಂದ ಸಿಎಸ್​ಕೆ ತಂಡವನ್ನು ಮಣಿಸಬೇಕಾಗುತ್ತದೆ.

  • ಮೊದಲ ಬ್ಯಾಟಿಂಗ್ ಮಾಡಿದರೆ:-
  • ಗುಜರಾತ್ ಟೈಟಾನ್ಸ್ ತಂಡವು ಮೊದಲ ಬ್ಯಾಟಿಂಗ್ ಮಾಡಿ 220 ರನ್​ಗಳಿಸಿದರೆ, ಸಿಎಸ್​ಕೆ ತಂಡವನ್ನು 100 ರನ್​ಗಳ ಒಳಗೆ ನಿಯಂತ್ರಿಸಬೇಕು. ಅಂದರೆ ಬರೋಬ್ಬರಿ 120 ರನ್​ಗಳ ಅಮೋಘ ಜಯ ಸಾಧಿಸಬೇಕು.
  • ಗುಜರಾತ್ ಟೈಟಾನ್ಸ್ 200 ರನ್ ಬಾರಿಸಿದರೆ, ಸಿಎಸ್‌ಕೆ ತಂಡವನ್ನು ಕೇವಲ 80 ರಿಂದ 85 ರನ್‌ಗಳಿಗೆ ಆಲೌಟ್ ಮಾಡಬೇಕು.
  • ಅಂದರೆ ಕನಿಷ್ಠ 100+ ರನ್‌ಗಳ ಭಾರಿ ಅಂತರದ ಗೆಲುವು ಸಾಧಿಸಿದರೆ ಮಾತ್ರ ಗುಜರಾತ್ ಟೈಟಾನ್ಸ್ ತಂಡಕ್ಕೆ ಆರ್​ಸಿಬಿ ತಂಡವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಬಹುದು.
  • ಚೇಸಿಂಗ್ ಮಾಡಿದರೆ:-
  • ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡವು ಚೇಸಿಂಗ್ ಮಾಡಿದರೆ, ಸಿಎಸ್​ಕೆ ತಂಡ ನೀಡುವ 200 ರನ್​ಗಳ ಗುರಿಯನ್ನು 9.4 ಓವರ್​​ಗಳಲ್ಲಿ ಚೇಸ್ ಮಾಡಬೇಕು.
  • ಸಿಎಸ್‌ಕೆ 180 ರನ್​ಗಳ ಗುರಿ ನೀಡಿದರೆ ಗುಜರಾತ್ ಟೈಟಾನ್ಸ್ ತಂಡವು ಈ ಟಾರ್ಗೆಟ್ ಅನ್ನು 10 ರಿಂದ 11 ಓವರ್‌ಗಳ ಒಳಗೆ ಚೇಸ್ ಮಾಡಬೇಕಾಗುತ್ತದೆ.
  • ಅಂದರೆ ಕನಿಷ್ಠ 60 ಎಸೆತಗಳನ್ನು ಬಾಕಿಯಿರಿಸಿ ಗೆದ್ದರೆ ಮಾತ್ರ ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು.
  • RCB (+1.065) vs GT (+0.400) ನಡುವೆ 0.665 ರಷ್ಟು ದೊಡ್ಡ ನೆಟ್ ರನ್ ರೇಟ್ ವ್ಯತ್ಯಾಸವಿದೆ.

ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು (ಮೇ.21) ಪಂದ್ಯವಾಡಲಿದೆ ಎಂಬುದು. ಅದೇ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ (ಮೇ.22) ನಾಳೆ ಪಂದ್ಯವಾಡಲಿದೆ.

ಅಂದರೆ ಗುಜರಾತ್ ಟೈಟಾನ್ಸ್ ಮೊದಲ ಕ್ವಾಲಿಫೈಯರ್ ಆಡಲು ಸಿಎಸ್​ಕೆ ವಿರುದ್ಧ ಭರ್ಜರಿ ಜಯ ಸಾಧಿಸಿ ನೆಟ್ ರನ್ ರೇಟ್ ಉತ್ತಮಪಡಿಸಿಕೊಳ್ಳಬೇಕಿರುವುದು ಅನಿವಾರ್ಯ.

ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟಾನ್ಸ್ ತಂಡದ ನೆಟ್ ರನ್ ರೇಟ್ ಅನ್ನು ಸಹ ಟಾರ್ಗೆಟ್ ಮಾಡಲಿದೆ. ಈ ಮೂಲಕ ದ್ವಿತೀಯ ಸ್ಥಾನಕ್ಕೇರುವ ಮೂಲಕ ಮೊದಲ ಕ್ವಾಲಿಫೈಯರ್​ಗೇರಲು ಪ್ಲ್ಯಾನ್ ರೂಪಿಸಲಿದೆ.

ಇದನ್ನೂ ಓದಿ: IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಅಮೋಘ ಗೆಲುವು ದಾಖಲಿಸಿ ನೆಟ್ ರನ್ ರೇಟ್​ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ದ್ವಿತೀಯ ಅಥವಾ ಪ್ರಥಮ ಸ್ಥಾನಕ್ಕೇರಲು ಸನ್​ರೈಸರ್ಸ್ ಹೈದರಾಬಾದ್ ತಂಡ ಪ್ಲ್ಯಾನ್ ರೂಪಿಸಲಿದೆ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕೊನೆಯ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದೇ ಇದ್ದರೆ, ಭಾರೀ ಅಂತರದಿಂದ ಸೋಲುವುದನ್ನು ತಪ್ಪಿಸಿಕೊಳ್ಳಬೇಕು. ಈ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

Published On – 2:20 pm, Thu, 21 May 26

Source link

ಅಭಿವೃದ್ಧಿ ಹೆಸರಲ್ಲಿ ಹಸಿರು ಬಲಿ?: ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮಕ್ಕೆ ಮುಂದಾದ ಬಿಡಿಎ

ಬೆಂಗಳೂರು, ಮೇ.21: ರಾಜಧಾನಿ ಬೆಂಗಳೂರಿನಲ್ಲಿ ಅಸ್ತಿತ್ವದಲ್ಲಿರುವ ಗಿಡಮರಗಳನ್ನು ಉಳಿಸಿಕೊಳ್ಳುವುದು ಒಂದು ಸವಾಲಾಗಿ ಪರಿಣಮಿಸಿದೆ. ಇದೀಗ ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್‌ನಲ್ಲಿರುವ ಬಿ.ಡಿ.ಎ. ವಾಣಿಜ್ಯ ಸಂಕೀರ್ಣದ ಸುತ್ತಲೂ ಇರುವ 180 ಮರಗಳಿಗೆ ಕುತ್ತು ಎದುರಾಗಿದೆ. ಶಿಥಿಲಾವಸ್ಥೆಯಲ್ಲಿದ್ದ ಹಳೆಯ ವಾಣಿಜ್ಯ ಸಂಕೀರ್ಣವನ್ನು ಕೆಡವಿ ಹೊಸದಾಗಿ ನಿರ್ಮಿಸಲು ಬಿ.ಡಿ.ಎ. ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ, ಸಂಕೀರ್ಣದ ಆವರಣದಲ್ಲಿರುವ ಸುಮಾರು 180 ವಿವಿಧ ಜಾತಿಯ ಮರಗಳನ್ನು ಕಡಿಯಲು ಅನುಮತಿ ಕೋರಿ ಬಿ.ಡಿ.ಎ. ಅಧಿಕಾರಿಗಳು ಜಿ.ಬಿ.ಎ. ಅರಣ್ಯ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಮರಗಳನ್ನು ಕಡಿಯುವ ಈ ಪ್ರಸ್ತಾವನೆಗೆ ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮರಗಳಿದ್ದ ಸ್ಥಳದಲ್ಲಿ ತಾತ್ಕಾಲಿಕ ಅಂಗಡಿಗಳನ್ನು ನಿರ್ಮಿಸುವಾಗ ಬಿ.ಡಿ.ಎ. ಅನುಮತಿ ಇಲ್ಲದೆ ಎರಡು ಮರಗಳನ್ನು ಮತ್ತು ರೆಂಬೆಕೊಂಬೆಗಳನ್ನು ಕಡಿದ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಜಿ.ಬಿ.ಎ. ಅರಣ್ಯ ವಿಭಾಗವು ಬಿ.ಡಿ.ಎ. ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಜನರು ಮತ್ತು ಪರಿಸರ ಪ್ರೇಮಿಗಳು ಮರಗಳನ್ನು ಉಳಿಸಿಕೊಂಡೇ ಹೊಸ ಸಂಕೀರ್ಣವನ್ನು ನಿರ್ಮಿಸುವಂತೆ ಆಗ್ರಹಿಸುತ್ತಿದ್ದಾರೆ. ಈ ಮರಗಳು ಸಾರ್ವಜನಿಕರಿಗೆ ಆಶ್ರಯ ತಾಣಗಳಾಗಿದ್ದು, ಇವುಗಳನ್ನು ಉಳಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಜಿ.ಬಿ.ಎ. ಅರಣ್ಯ ವಿಭಾಗವು ಮರಗಳನ್ನು ಕಡಿಯಲು ಅನುಮತಿ ನೀಡಬಾರದು ಎಂಬುದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: RCB ತಂಡಕ್ಕೆ ಇಂಗ್ಲೆಂಡ್ ವೇಗಿ ಎಂಟ್ರಿ

Source link

Tv9 Kannada News Live: ಕೇರಳದಲ್ಲಿ ಹಾಲಿನ ದರ ಏರಿಕೆ, ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್, ಇಲ್ಲಿವೆ ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | National, Cinema and Sports News, Kerala Milk Prices See Sharp Spike, ipl 2026 good news for RCB and more News Updates

ನವದೆಹಲಿ, ಮೇ 21: ಕೇರಳದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಲೇ ಜನರಿಗೆ ಹಾಲು ದರ ಏರಿಕೆಯ ಶಾಕ್ ನೀಡಿದೆ. ಕೇರಳದ ಜನಪ್ರಿಯ ಬ್ರಾಂಡ್ ಮಿಲ್ಮಾ ಹಾಲಿನ ದರ 4 ರೂ.ಏರಿಕೆ ಮಾಡಲಾಗಿದೆ. ಕೇರಳ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ದರ ಏರಿಕೆ ಮಾಡಿದ್ದು, ಜೂನ್ 1ರಿಂದ ಪರಿಷ್ಕೃತ ಹಾಲಿನ ದರ ಜಾರಿಯಾಗಲಿದೆ. ನಾವು ಹಾಲಿನ ದರ ಏರಿಸಿಲ್ಲ, ಹಿಂದಿನ ಸರ್ಕಾರ ಏರಿಸಿದ್ದ ದರವನ್ನು ನಾವು ಜಾರಿಗೆ ತಂದಿದ್ದೀವಷ್ಟೇ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೆ ನೀಡಿದೆ.

ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ‘ಸಂಯುಕ್ತ ಪ್ರಜಾಸತ್ತಾತ್ಮಕ ರಂಗ’ (UDF) ದಶಕದ ಸುದೀರ್ಘ ಕಾಯುವಿಕೆಯ ನಂತರ ಅಧಿಕಾರಕ್ಕೆ ಮರಳಿದೆ. ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಇವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ 20 ಮಂದಿ ಸಚಿವರಿದ್ದು, 14 ಮಂದಿ ಹೊಸಬರಿಗೆ ಅವಕಾಶ ನೀಡಲಾಗಿದೆ.ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (KSRTC) ಮತ್ತು ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರಯು ನದಿಗೆ ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ
ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆ(Crocodile)ಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ, ನದಿಯ ಆಳಕ್ಕೆ ಎಳೆದೊಯ್ದಿರುವ ಅತ್ಯಂತ ದಾರುಣ ಘಟನೆ ವರದಿಯಾಗಿದೆ. ಗ್ರೇಟರ್ ನೋಯ್ಡಾ ನಿವಾಸಿಯಾದ ದೀಪಕ್ ಶರ್ಮಾ ಎಂಬ ವ್ಯಕ್ತಿ, ತಮ್ಮ ಅತ್ತೆಯ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಗೊಂಡಾ ಜಿಲ್ಲೆಯ ಉಮ್ರಿ ಗ್ರಾಮಕ್ಕೆ ಬಂದಿದ್ದರು. ನದಿಯ ದಡದಲ್ಲಿ ಅಂತ್ಯಕ್ರಿಯೆಯ ಚಿತೆಯನ್ನು ಸಿದ್ಧಪಡಿಸಲು ಸಹಾಯ ಮಾಡಿದ ನಂತರ, ಅವರು ಸ್ನಾನ ಮಾಡಲು ಸರಯು ನದಿಗೆ ಇಳಿದಿದ್ದಾರೆ. ಅವರು ನೀರಿನಲ್ಲಿದ್ದಾಗ ಹಠಾತ್ ಆಗಿ ಬಂದ ದೊಡ್ಡ ಮೊಸಳೆಯೊಂದು, ದೀಪಕ್ ಅವರ ತಲೆಯನ್ನು ತನ್ನ ಬಲವಾದ ದವಡೆಗಳಿಂದ ಕಚ್ಚಿ ಹಿಡಿದು ಕೆಲವೇ ಸೆಕೆಂಡುಗಳಲ್ಲಿ ನದಿಯೊಳಗೆ ಎಳೆದೊಯ್ದಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿದೆ ಲಿಂಕ್: ಸರಯು ನದಿಗೆ ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ

ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು
ತಮಿಳುನಾಡು(Tamil Nadu) ಮುಖ್ಯಮಂತ್ರಿ ಜೋಸೆಫ್ ವಿಜಯ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.. ಇಂದು (ಗುರುವಾರ) ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ಒಟ್ಟು 23 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ವಿಸ್ತರಣೆಯು ತಮಿಳುನಾಡು ರಾಜಕೀಯದಲ್ಲಿ ಹೊಸದೊಂದು ಯುಗಕ್ಕೆ ನಾಂದಿ ಹಾಡಿದೆ.ಈ ಸಂಪುಟ ವಿಸ್ತರಣೆಯ ಅತ್ಯಂತ ಪ್ರಮುಖ ಹೈಲೈಟ್ ಎಂದರೆ, ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ 59 ವರ್ಷಗಳ ಸುದೀರ್ಘ ರಾಜಕೀಯ ಬರಗಾಲ ಕೊನೆಗೊಂಡಿದೆ. ಬರೋಬ್ಬರಿ 59 ವರ್ಷಗಳ ನಂತರ ಕಾಂಗ್ರೆಸ್ ತಮಿಳುನಾಡಿನಲ್ಲಿ ಸರ್ಕಾರದ ಭಾಗವಾಗಿದೆ. ಕಾಂಗ್ರೆಸ್‌ನ ಒಟ್ಟು 5 ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರೊಂದಿಗೆ ಮೈತ್ರಿಪಕ್ಷವಾದ ವಿಸಿಕೆ (VCK) ಯ ಇಬ್ಬರು ಶಾಸಕರಲ್ಲಿ ಒಬ್ಬರನ್ನು ಸಚಿವರನ್ನಾಗಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಲಿಂಕ್: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು

ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್

ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ:  ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ 

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕರಣ್ ಕುಂದ್ರಾ ಹಾಗೂ ಶ್ರುತಿ ಪ್ರಕಾಶ್ ಹಿಂದಿ ಬಿಗ್ ಬಾಸ್ ಮೂಲಕ ಪರಸ್ಪರ ಪರಿಚಯ ಆದವರು. ಈಗ ಕರಣ್ ಕುಂದ್ರಾ ಅವರು ಶ್ರುತಿಗೆ ಪ್ರಪೋಸ್ ಮಾಡಿದ್ದಾರೆ. ಮರಭೂಮಿಯ ಹಿನ್ನೆಲೆಯಲ್ಲಿ ಹೂವುಗಳಿಂದ ಅಲಂಕೃತಗೊಂಡ ವಿಶೇಷ ವೇದಿಕೆಯಲ್ಲಿ, ಮಂಡಿಯೂರಿ ಕರಣ್ ಕುಂದ್ರಾ ಪ್ರೀತಿ ಹೇಳಿಕೊಂಡಿದ್ದಾರೆ. ಈ ಸುಂದರ ಕ್ಷಣಕ್ಕೆ ಸಾಕ್ಷಿಯಾದ ಆಪ್ತರು ಹಾಗೂ ಸ್ನೇಹಿತರು ಚಪ್ಪಾಳೆ ತಟ್ಟಿ ಸಡಗರದಿಂದ ನವಜೋಡಿಗೆ ಶುಭ ಹಾರೈಸಿದರು. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಘಟನೆ ಹೇಳುವಾಗ ಶ್ರುತಿ ಕಣ್ಣೀರು ಹಾಕಿದರು. ಇದು ರಿಯಾಲಿಟಿ ಶೋ ಒಂದರ ಭಾಗ ಆಗಿತ್ತು ಎನ್ನಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್

ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್

ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ. ಹೌದು, ಪ್ಲೇಆಫ್​ ಪಂದ್ಯಕ್ಕೂ ಮುನ್ನ ಫಿಲ್ ಸಾಲ್ಟ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಖಚಿತ – Kannada News | Ipl 2026 rcb playing 11 for SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ನಾಳೆ (ಮೆ.22) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ.

ಏಕೆಂದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಜಿತೇಶ್ ಶರ್ಮಾ ತಂಡವನ್ನು ಮುನ್ನಡೆಸಿದ್ದರು. ಇದೇ ವೇಳೆ ರಜತ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ತಿಳಿಸಿದ್ದರು.

ಅದರಂತೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಜತ್ ಪಾಟಿದಾರ್ ಕಣಕ್ಕಿಳಿಯಲಿದ್ದಾರೆ. ಇತ್ತ ರಜತ್ ಪಾಟಿದಾರ್ ಕಣಕ್ಕಿಳಿದರೆ ಸುಯಶ್ ಶರ್ಮಾ ಹೊರಗುಳಿಯಬೇಕಾಗಿ ಬರಬಹುದು. ಏಕೆಂದರೆ ಕಳೆದ ಮ್ಯಾಚ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

ಇದೀಗ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ಮುಖಾಮುಖಿಯಾಗುತ್ತಿರುವುದು ಹೈದರಾಬಾದ್​ನ ಬ್ಯಾಟಿಂಗ್ ಪಿಚ್​ನಲ್ಲಿ. ಹೀಗಾಗಿ ಆರ್​ಸಿಬಿ ಬಲಿಷ್ಠ ಬ್ಯಾಟಿಂಗ್ ಲೈನಪ್​ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ವಿರಾಟ್ ಕೊಹ್ಲಿ
  2. ಜೇಕಬ್ ಬೆಥೆಲ್
  3. ದೇವದತ್ ಪಡಿಕ್ಕಲ್
  4. ರಜತ್ ಪಾಟಿದಾರ್ (ನಾಯಕ)
  5. ಟಿಮ್ ಡೇವಿಡ್
  6. ವೆಂಕಟೇಶ್ ಅಯ್ಯರ್
  7. ಜಿತೇಶ್ ಶರ್ಮಾ
  8. ಕೃನಾಲ್ ಪಾಂಡ್ಯ
  9. ರೊಮಾರಿಯೊ ಶೆಫರ್ಡ್​
  10. ಜೋಶ್ ಹೇಝಲ್​ವುಡ್
  11. ಭುವನೇಶ್ವರ್ ಕುಮಾರ್
  12. ರಾಸಿಖ್ ಸಲಾಂ ಅಥವಾ ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್.

Source link