ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ ಚುನಾವಣೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ, ಜೆಡಿಎಸ್ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೊಸ ಕಾವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರಿಂದ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸಲು ಪಕ್ಷ ಮುಂದಾಗಿದೆ. ಇದೀಗ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿಸೋಣ ಎಂದಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಈಗಾಗಲೇ 9 ಪಂದ್ಯಗಳು ಮುಗಿದಿವೆ. ಎಲ್ಲಾ ತಂಡಗಳು ಕನಿಷ್ಠ 3 ಪಂದ್ಯಗಳನ್ನಾಡಿದೆ. ಈ ಪಂದ್ಯಗಳ ಮೂಲಕ ಐದು ತಂಡಗಳು ಕೂಡ ಗೆಲುವಿನ ಖಾತೆ ತೆರೆದಿದೆ. ಈ ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ….
1- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು ಈವರೆಗೆ 3 ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್ಗಳಲ್ಲೂ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಒಟ್ಟು 6 ಅಂಕಗಳನ್ನು ಪಡೆದಿರುವ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +1.828 .
2- ಮುಂಬೈ ಇಂಡಿಯನ್ಸ್: ಹರ್ಮನ್ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 4 ಮ್ಯಾಚ್ಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಈ ಮೂಲಕ ಒಟ್ಟು 4 ಅಂಕಗಳನ್ನು ಪಡೆದಿರುವ ಮುಂಬೈ ಇಂಡಿಯನ್ಸ್ ತಂಡವು +0.469 ನೆಟ್ ರನ್ ರೇಟ್ ಹೊಂದಿದೆ.
3- ಗುಜರಾತ್ ಜೈಂಟ್ಸ್: ಆಶ್ಲೀ ಗಾರ್ಡ್ನರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಗುಜರಾತ್ ಜೈಂಟ್ಸ್ ತಂಡವು ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು, 2 ಸೋಲು ಕಂಡಿದೆ. ಈ ಮೂಲಕ -0.319 ನೆಟ್ ರನ್ ರೇಟ್ನೊಂದಿಗೆ ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ.
4- ಡೆಲ್ಲಿ ಕ್ಯಾಪಿಟಲ್ಸ್: ಜೆಮಿಮಾ ರೊಡ್ರಿಗಸ್ ನಾಯಕತ್ವದಲ್ಲಿ ಈಗಾಗಲೇ 3 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಗೆಲುವು ಮಾತ್ರ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇನ್ನುಳಿದ 2 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಪಡೆದಿರುವುದು ಕೇವಲ 2 ಅಂಕಗಳನ್ನು ಮಾತ್ರ. ಅಲ್ಲದೆ ಡಿಸಿ ಪಡೆಯ ಪ್ರಸ್ತುತ ನೆಟ್ ರನ್ ರೇಟ್ -0.833 .
5- ಯುಪಿ ವಾರಿಯರ್ಸ್: ಮೆಗ್ ಲ್ಯಾನಿಂಗ್ ಸಾರಥ್ಯದಲ್ಲಿ ಹೊಸ ಸೀಸನ್ ಆರಂಭಿಸಿರುವ ಯುಪಿ ವಾರಿಯರ್ಸ್ ಈವರೆಗೆ 4 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 1 ಮ್ಯಾಚ್ನಲ್ಲಿ ಮಾತ್ರ. ಈ ಮೂಲಕ 2 ಅಂಕಗಳನ್ನು ಪಡೆದಿರುವ ಯುಪಿ ವಾರಿಯರ್ಸ್ -0.906 ನೆಟ್ ರನ್ ರೇಟ್ ಹೊಂದಿದೆ.
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಜನವರಿ 21 ರಿಂದ ಆರಂಭವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಶ್ರೇಯಸ್ ಅಯ್ಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.
ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯ ಮೊದಲ ಮೂರು ಮ್ಯಾಚ್ಗಳಿಗೆ ಮಾತ್ರ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನುಳಿದ ಎರಡು ಮ್ಯಾಚ್ಗಳಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವ ಸಾಧ್ಯತೆಯಿದೆ. ಹೀಗಾಗಿಯೇ ಅಯ್ಯರ್ ಅವರನ್ನು 3 ಪಂದ್ಯಗಳಿಗೆ ಆಯ್ಕೆ ಮಾಡಿದ್ದಾರೆ.
ಇತ್ತ ಸರ್ಜರಿಗೆ ಒಳಗಾಗಿರುವ ತಿಲಕ್ ವರ್ಮಾ ಮೇಲೆ ಬಿಸಿಸಿಐ ವೈದ್ಯಕೀಯ ತಂಡವು ನಿಗಾಯಿಟ್ಟಿದ್ದು, ಈ ಮೂಲಕ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿದ್ದಾರೆ. ಅದರಂತೆ ಸಂಪೂರ್ಣ ಗುಣಮುಖರಾಗಿ ಜನವರಿ 25 ರ ಬಳಿಕ ತಿಲಕ್ ವರ್ಮಾ ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.
ಒಂದು ವೇಳೆ ತಿಲಕ್ ವರ್ಮಾ ಕೊನೆಯ ಎರಡು ಪಂದ್ಯಗಳ ವೇಳೆಗೆ ಸಂಪೂರ್ಣ ಫಿಟ್ನೆಸ್ ಸಾಧಿಸದೇ ಇದ್ದರೆ ಶ್ರೇಯಸ್ ಅಯ್ಯರ್ ತಂಡದಲ್ಲಿ ಮುಂದುವರೆಯಲಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ನಲ್ಲೂ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ
ಗದಗ, ಜನವರಿ 17: ಲಕ್ಕುಂಡಿಯಲ್ಲಿ ಒಂದು ಕುಟುಂಬಕ್ಕೆ ಇತ್ತೀಚಿಗಷ್ಟೆ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ (Gold Tressure) ಸಿಕ್ಕಿತ್ತು. ಈ ಹಿನ್ನೆಲೆ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಸಂಬಂಧ ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಆರಂಭವಾಗಿರುವ ಉತ್ಖನನ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ್ದ ಕುಟುಂಬ, ಮನಸ್ಸು ಬದಲಿಸಿ ಚಿನ್ನ ತಮಗೇ ಸೇರಬೇಕೆಂಬ ಬೇಡಿಕೆಯಿಟ್ಟಿತ್ತು. ಇದೀಗ ಸಿಕ್ಕ ನಿಧಿಯ 5ನೇ ಒಂದು ಭಾಗವನ್ನು ಕುಟುಂಬಕ್ಕೆ ನೀಡುವುದಾಗಿ ಸರ್ಕಾರ ಒಪ್ಪಿಕೊಂಡಿದೆ. ಅದಲ್ಲದೆ ನಿಧಿ ಸಿಕ್ಕ ಜಾಗದಲ್ಲಿ ಉತ್ಖನನ ಮಾಡಲು ಮುಂದಾಗಿದೆ. ಈ ಸಂಬಂಧ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಮಲಾಪುರ–ಹಂಪಿ ಹಾಗೂ ಉತ್ಖನನದ ಸಹ ನಿರ್ದೇಶಕರಾದ ಶೇಜೇಶ್ವರ, ನಿನ್ನೆ (ಜನವರಿ 16) ನೀಡಿದ ಪತ್ರದ ಹಿನ್ನಲೆಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ.
ಅಧಿಕೃತವಾಗಿ ನೇಮಿಸಲ್ಪಟ್ಟವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ
ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಜಾಗದಲ್ಲಿ ಜನವರಿ 16ರಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಈ ಪ್ರದೇಶವು ಅತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ಖನನ ಕಾರ್ಯ ಸಂಪೂರ್ಣವಾಗುವವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಕೃತವಾಗಿ ನೇಮಕಗೊಂಡವರನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರು, ಪ್ರವಾಸಿಗರು ಅಥವಾ ಇತರ ವ್ಯಕ್ತಿಗಳು ಈ ಸ್ಥಳಕ್ಕೆ ಪ್ರವೇಶಿಸುವುದಕ್ಕೂ, ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ನಡೆಸುವುದಕ್ಕೂ ಸಂಪೂರ್ಣ ನಿಷೇಧ ವಿಧಿಸಲಾಗಿದೆ.
ಐತಿಹಾಸಿಕ ಮತ್ತು ಪಾರಂಪರಿಕ ಮಹತ್ವ ಹೊಂದಿರುವ ಲಕ್ಕುಂಡಿಯ ಉತ್ಖನನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಇಂದು (ಜನವರಿ 17) ಫಿನಾಲೆ ನಡೆಯಬೇಕಿತ್ತು. ಆದರೆ, ಸುದೀಪ್ ಅವರು ಗೈರಾಗಿದ್ದಾರೆ. ಸಿಸಿಎಲ್ ಕಾರಣದಿಂದ ಅವರು ಇಂದು ಆಗಮಿಸೋದು ಅನುಮಾನ ಎನ್ನಲಾಗುತ್ತಿದೆ. ಇಂದು ಪ್ರೀ-ಫಿನಾಲೆ ನಡೆಯಲಿದೆ. ಅದು ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ. ಸುದೀಪ್ ಕೂಡ ಇದರ ಭಾಗ ಆಗುತ್ತಾರಾ ಅಥವಾ ಇಲ್ಲವಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಸಿಸಿಎಲ್ ಕ್ರಿಕೆಟ್ ಹಬ್ಬ ಮತ್ತೆ ಶುರುವಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಅನ್ನೋದು ಸಿಸಿಎಲ್ನ ವಿಸ್ತೃತ ರೂಪ. ಸಿಸಿಎಲ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಪಂಜಾಬ್ ದೆ ಶೇರ್ ಪಂದ್ಯ ಜನವರಿ 16ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ಮೊದಲ ಪಂದ್ಯವನ್ನು ಕರ್ನಾಟಕ ಬುಲ್ಡೋಜರ್ ಗೆದ್ದಿದೆ. ಪ್ರದೀಪ್ ಅವರ ಬೌಲಿಂಗ್ ವೇಳೆ ಬಬ್ಬಲ್ ಅವರು ಬ್ಯಾಟಿಂಗ್ ನಿಂತಿದ್ದರು. ಅವರು ಬೀಸಲು ಹೋಗಿ ಬಾಲ್ ಬ್ಯಾಟ್ಗೆ ಟಚ್ ಆಗಿ ಕೀಪರ್ನಿಂದ ಹೊರ ಹೋಗುತ್ತಿತ್ತು. ಈ ವೇಳೆ ಸುದೀಪ್ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ವಯಸ್ಸು ಕೇವಲ ಸಂಖ್ಯೆ ಎಂಬ ಮಾತು ಕೇಳಿ ಬಂದಿದೆ.
ಕಳಪೆ ಏರ್ ಕ್ವಾಲಿಟಿಯಿಂದ ಬೆಂಗಳೂರಿನಲ್ಲಿ ಉಸಿರಾಡುವುದೂ ಅಪಾಯವೇ?
ಬೆಂಗಳೂರು, ಜನವರಿ 17: ಇನ್ನೇನು ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಸುಧಾರಿಸಿತೆನ್ನುವಷ್ಟರಲ್ಲಿ ಮತ್ತೊಮ್ಮೆ ಕಳಪೆ ಮಟ್ಟಕ್ಕೆ ತಲುಪಿದೆ. ಕೆಲ ತಿಂಗಳ ಹಿಂದೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ಹಂತ ಹಂತವಾಗಿ 130ರ ಆಸು ಪಾಸು ಬಂದಿತ್ತು. ಆದರೆ ಇಂದಿನ AQI ನೋಡಿದರೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ವಾಯುಮಾಲಿನ್ಯಕ್ಕೆ ತುತ್ತಾಗಿರುವುದನ್ನು ಕಾಣಬಹುದು. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ.
ಬೆಂಗಳೂರಿನ ಗಾಳಿಯ ಗುಣಮಟ್ಟ 190 ಇದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್, ವೈಟ್ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.
ಸೂಕ್ಷ್ಮ ಕಣಗಳಿಂದ ಬರುತ್ತೆ ಶ್ವಾಸ ಸಂಬಂಧಿ ಖಾಯಿಲೆ
ನಗರದಲ್ಲಿ PM2.5 ಮಟ್ಟ 111 ಹಾಗೂ PM10 ಮಟ್ಟ 141ಕ್ಕೆ ಏರಿಕೆಯಾಗಿದೆ. ಈ ಎರಡೂ ಪ್ರಮಾಣಗಳು ಸುರಕ್ಷಿತ ಮಿತಿಯನ್ನು ಮೀರಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಟ್ಟದಲ್ಲಿವೆ. ವಿಶೇಷವಾಗಿ PM2.5 ಸೂಕ್ಷ್ಮ ಕಣಗಳು ಶ್ವಾಸಕೋಶದ ಆಳಕ್ಕೆ ಪ್ರವೇಶಿಸಿ ಉಸಿರಾಟದ ತೊಂದರೆ, ಆಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ವಾಹನಗಳ ಅತಿಯಾದ ಬಳಕೆ, ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಮತ್ತು ಹವಾಮಾನದಲ್ಲಿ ಗಾಳಿಯ ಚಲನೆಯ ಕೊರತೆ ಈ ಪರಿಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮಾಲಿನ್ಯ ಪ್ರಮಾಣ ಇನ್ನಷ್ಟು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.
PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೊದಲ ಓವರ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಅದು ಕೂಡ ಬರೋಬ್ಬರಿ 23 ರನ್ಗಳಿಸುವ ಮೂಲಕ.
ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ತಂಡವು ಪ್ರಥಮ ಓವರ್ನಲ್ಲಿ ಬರೋಬ್ಬರಿ 23 ರನ್ ಕಲೆಹಾಕಿತು. ಹೀಗೆ 23 ರನ್ ಬಿಟ್ಟು ಕೊಟ್ಟಿರುವುದು ಆರ್ಸಿಬಿ ತಂಡದ ಮಾಜಿ ವೇಗಿ ರೇಣುಕಾ ಸಿಂಗ್ ಠಾಕೂರ್.
ಗುಜರಾಜ್ ಜೈಂಟ್ಸ್ ಪರ ಮೊದಲ ಓವರ್ ಎಸೆದ ರೇಣುಕಾ ಸಿಂಗ್ ಮೊದಲ ಎಸೆತದಲ್ಲೇ ವೈಡ್ ಎಸೆದರು. ಈ ಚೆಂಡು ವಿಕೆಟ್ ಕೀಪರ್ನ ವಂಚಿಸಿ ಬೌಂಡರಿ ಲೈನ್ ದಾಟಿತು. ಇದಾದ ಬಳಿಕ ಆರ್ಸಿಬಿ ಬ್ಯಾಟರ್ ಗ್ರೇಸ್ ಹ್ಯಾರಿಸ್ ಹ್ಯಾಟ್ರಿಕ್ ಫೋರ್ ಬಾರಿಸಿದರು. ಇದರ ಜೊತೆಗೆ ರೇಣುಕಾ ಮತ್ತೆರಡು ವೈಡ್ಗಳನ್ನು ಎಸೆದರು. ಇನ್ನು ಕೊನೆಯ ಎಸೆತದಲ್ಲಿ ಹ್ಯಾರಿಸ್ ಮತ್ತೊಂದು ಫೋರ್ ಬಾರಿಸಿದರು.
ಹೀಗೆ ಮೊದಲ ಓವರ್ನಲ್ಲಿ ಬರೋಬ್ಬರಿ 23 ರನ್ ನೀಡುವ ಮೂಲಕ ರೇಣುಕಾ ಸಿಂಗ್ ಠಾಕೂರ್ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ದುಬಾರಿ ಪ್ರಥಮ ಓವರ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ತನುಜಾ ಕನ್ವರ್ ಹೆಸರಿನಲ್ಲಿತ್ತು.
2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಪರ ಮೊದಲ ಓವರ್ ಎಸೆದ ತನುಜಾ ಕನ್ವರ್ 21 ರನ್ ನೀಡುವ ಮೂಲಕ ಅನಗತ್ಯ ದಾಖಲೆ ನಿರ್ಮಿಸಿದ್ದರು. ಇದೀಗ 23 ರನ್ ಬಿಟ್ಟು ಕೊಟ್ಟು ರೇಣುಕಾ ಸಿಂಗ್ ಠಾಕೂರ್ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಗುಜರಾತ್ ಜೈಂಟ್ಸ್ 18.5 ಓವರ್ಗಳಲ್ಲಿ 150 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆರ್ಸಿಬಿ 32 ರನ್ಗಳ ಜಯ ಸಾಧಿಸಿದೆ.
ಸಾಮಾನ್ಯವಾಗಿ ಹೀರೋ/ಹೀರೋಯಿನ್ಗಳ ಎರಡೆರಡು ಸಿನಿಮಾಗಳು ಒಂದೇ ದಿನ ರಿಲೀಸ್ ಆಗೋದು ಕಡಿಮೆ. ಆದರೆ, ಕೆಲವೊಮ್ಮೆ ಆ ರೀತಿಯ ಘಟನೆಗಳು ಸಂಭವಿಸುತ್ತವೆ. ಈಗ ರಚಿತಾ ರಾಮ್ ನಟನೆಯ ಎರಡು ಸಿನಿಮಾಗಳು ಜನವರಿ 23ರಂದು ರಿಲೀಸ್ ಆಗುತ್ತಿವೆ. ಒಂದರಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡರೆ ಮತ್ತೊಂದರಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಕೊಟ್ಟಿದೆ.
ಕಲ್ಟ್ ಸಿನಿಮಾ
ಝಯಿದ್ ಖಾನ್ ‘ಬನಾರಸ್’ ಸಿನಿಮಾ ಬಳಿಕ ‘ಕಲ್ಟ್’ ಸಿನಿಮಾ ಒಪ್ಪಿಕೊಂಡರು. ಈ ಚಿತ್ರಕ್ಕೆ ರಚಿತಾ ರಾಮ್ ಕೂಡ ನಾಯಕಿ. ಮಲೈಕಾ ವಾಸುಪಾಲ್ ಕೂಡ ಚಿತ್ರದಲ್ಲಿದ್ದಾರೆ. ಈ ಸಿನಿಮಾ ಜನವರಿ 23ರಂದು ರಿಲೀಸ್ ಆಗುತ್ತಿದೆ. ಜನವರಿ 16ರಂದು ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ.
ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಎರಡು ಶೇಡ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್ನಲ್ಲಿ ಅವರ ಒಂದು ಶೇಡ್ ಮಾತ್ರ ತೋರಿಸಲಾಗಿದೆ. ಮತ್ತೊಂದು ಶೇಡ್ನ ಸಿನಿಮಾದಲ್ಲಿ ಕಣ್ತುಂಬಿಕೊಳ್ಳಬೇಕು ಎಂಬುದು ರಚಿತಾ ರಾಮ್ ಮಾತು. ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ‘ಉಪಾಧ್ಯಕ್ಷ’ ಚಿತ್ರ ನಿರ್ದೇಶನ ಮಾಡಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿರೋ ‘ಲ್ಯಾಂಡ್ಲಾರ್ಡ್’ ಸಿನಿಮಾ ಜನವರಿ 23ರಂದೇ ರಿಲೀಸ್ ಆಗುತ್ತಿದೆ. ಇದು ಅಳಿದು ಉಳಿದವರ ಕಥೆ. ಜಡೇಶ್ ಕುಮಾರ್ ಹಂಪಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹೇಮಂತ್ ಗೌಡ ಕೆಎಸ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ಈಗಾಗಲೇ ರಿಲೀಸ್ ಆಗಿರೋ ಟೀಸರ್ಗಳು ಗಮನ ಸೆಳೆದಿವೆ. ಸತ್ಯ ಪ್ರಕಾಶ್ ಅವರು ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಕೂಡ ನಿರೀಕ್ಷೆ ಹುಟ್ಟುಹಾಕಿದೆ. ಒಂದೇ ದಿನ ಅವರ ನಟನೆಯ ಎರಡು ಸಿನಿಮಾಗಳು ತೆರೆಗೆ ಬರುತ್ತಿವೆ ಅನ್ನೋದು ವಿಶೇಷ.
ಬಿಗ್ ಬ್ಯಾಷ್ ಲೀಗ್ನಲ್ಲಿ ಸ್ಟೀವ್ ಸ್ಮಿತ್ (Steve Smith) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಬಿಬಿಎಲ್ ನ 37ನೇ ಪಂದ್ಯದಲ್ಲಿ ಸಿಡ್ನಿ ಥಂಡರ್ ಹಾಗೂ ಸಿಡ್ನಿ ಸಿಕ್ಸರ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಸಿಡ್ನಿಯ ಎಸ್ ಸಿ ಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 65 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್ ಗಳೊಂದಿಗೆ ಅಜೇಯ 110 ರನ್ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ಸಿಡ್ನಿ ಥಂಡರ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು.
190 ರನ್ ಗಳ ಗುರಿ ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ಪರ ಸ್ಟೀವ್ ಸ್ಮಿತ್ ಸ್ಫೋಟಕ ಇನಿಂಗ್ಸ್ ಆಡಿದರು. ಮೊದಲ ಓವರ್ನಿಂದಲೇ ಅಬ್ಬರಿಸಿದ ಸ್ಮಿತ್ ಕೇವಲ 41 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ ಶತಕ ಪೂರೈಸಿದರು.
ಈ ಶತಕದೊಂದಿಗೆ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆಯನ್ನು ಸ್ಟೀವ್ ಸ್ಮಿತ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು.
ಬಿಗ್ ಬ್ಯಾಷ್ ಲೀಗ್ನಲ್ಲಿ ಈವರೆಗೆ 31 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 3 ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಬಿಬಿಎಲ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎನ್ನುವ ದಾಖಲೆ ನಿರ್ಮಿಸಿದ್ದರು.
ಇದೀಗ ಈ ದಾಖಲೆಯನ್ನು ಸ್ಟೀವ್ ಸ್ಮಿತ್ ಅಳಿಸಿ ಹಾಕಿದ್ದಾರೆ. ಬಿಗ್ ಬ್ಯಾಷ್ ಲೀಗ್ನಲ್ಲಿ ಈವರೆಗೆ 55 ಇನಿಂಗ್ಸ್ ಆಡಿರುವ ಸ್ಮಿತ್ ಒಟ್ಟು 4 ಶತಕ ಬಾರಿಸಿದ್ದಾರೆ. ಈ ಮೂಲಕ ಬಿಬಿಎಲ್ ನ ಸೆಂಚುರಿ ಸರದಾರ ಎನಿಸಿಕೊಂಡಿದ್ದಾರೆ.
ಇನ್ನು ಸ್ಟೀವ್ ಸ್ಮಿತ್ ಬಾರಿಸಿದ ಈ ಶತಕದೊಂದಿಗೆ ಸಿಡ್ನಿ ಡರ್ಬಿ ಪಂದ್ಯದಲ್ಲಿ ಸಿಕ್ಸರ್ಸ್ ತಂಡ ಜಯಭೇರಿ ಬಾರಿಸಿದೆ. ಸಿಡ್ನಿ ಥಂಡರ್ ನೀಡಿದ 190 ರನ್ ಗಳ ಗುರಿಯನ್ನು ಸಿಡ್ನಿ ಸಿಕ್ಸರ್ಸ್ ಕೇವಲ 17.2 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ.