Category Archives: Blog

Your blog category

ಬಿಗ್ ಬಾಸ್ ವೀಕ್ಷಕರಿಗೆ ಬೇಸರ; ಸುದೀಪ್​ ಗೈರು, ಇವತ್ತು ನಡೆಯಲ್ಲ ಫಿನಾಲೆ – Kannada News | BBK12 Finale Shock: Sudeep’s Absence Reschedules Grand Finale to Sunday

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ಇಂದು (ಜನವರಿ 17) ಹಾಗೂ ನಾಳೆ (ಜನವರಿ 18) ನಡೆಯಬೇಕಿತ್ತು. ಆದರೆ, ಸುದೀಪ್ ಇಂದು ಆಗಮಿಸಲು ಸಾಧ್ಯವಾಗದ ಕಾರಣ ಭಾನುವಾರ ಮಾತ್ರ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ.

ಬಿಗ್ ಬಾಸ್ ಕನ್ನಡದ ಎಪಿಸೋಡ್ ನಡೆಸಿಕೊಡೋದನ್ನು ಸುದೀಪ್ ವಿವಿಧ ಕಾರಣದಿಂದ ಕೆಲವು ಬಾರಿ ಮಿಸ್ ಮಾಡಿಕೊಂಡಿದ್ದು ಇದೆ. ಆದರೆ, ಇದೇ ಮೊದಲ ಬಾರಿಗೆ ಸುದೀಪ್ ಅವರು ಬಿಗ್ ಬಾಸ್ ಫಿನಾಲೆಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಬಾರಿ ಬಿಗ್ ಬಾಸ್ ಫಿನಾಲೆ ಎರಡು ದಿನ ನಡೆಯುತ್ತಿತ್ತು. ಆದರೆ, ಈ ಸೀಸನ್ ಅಲ್ಲಿ ಒಂದೇ ದಿನ ಫಿನಾಲೆ ನಡೆಯುವಂತೆ ಆಗಿದೆ.

ಸುದೀಪ್ ಗೈರಾಗಲು ಕಾರಣವೂ ಇದೆ. ಸುದೀಪ್ ಅವರು ಸಿಸಿಎಲ್​​ನಲ್ಲಿ ಬ್ಯುಸಿ ಇದ್ದಾರೆ. ಜನವರಿ 16ರಂದು ‘ಪಂಜಾಬ್ ದೆ ಶೇರ್’ ವಿರುದ್ಧ ಮೊದಲ ಪಂದ್ಯವನ್ನಾಡಿರೋ ಕರ್ನಾಟಕ ಬುಲ್ಡೋಜರ್ ತಂಡ ಗೆಲುವು ಸಾಧಿಸಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಈ ಪಂದ್ಯ ನಡೆದಿದೆ. ಆಟ ಮುಗಿದ ಬಳಿಕ ರಾತ್ರೋ ರಾತ್ರಿ ಬೆಂಗಳೂರಿಗೆ ಬಂದು ಬೆಳಿಗ್ಗೆ ಬಿಗ್ ಬಾಸ್ ನಡೆಸಿಕೊಡೋದು ಎಂದರೆ ಅದು ಅಸಾಧ್ಯವಾದ ಮಾತು. ಈ ಕಾರಣದಿಂದಲೇ ಒಂದು ದಿನ ಬಿಡುವು ಪಡೆದು ಸುದೀಪ್ ‘ಬಿಗ್ ಬಾಸ್ 12’ ಫಿನಾಲೆ ನಡೆಸಿಕೊಡುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 1 To 11: ಗೆದ್ದ ಬೀಗಿದವರ ಹೆಸರು, ವಿವರ ಇಲ್ಲಿದೆ

ಹಾಗಾದರೆ ಇಂದಿನ ವಿಶೇಷತೆ ಏನು? ಮೂಲಗಳ ಪ್ರಕಾರ ಇಂದು ಸಾಮಾನ್ಯ ಎಪಿಸೋಡ್ ಪ್ರಸಾರ ಕಾಣಲಿದೆಯಂತೆ. ವಿಶೇಷ ಡ್ಯಾನ್ಸ್​​​ಗಳು ಇಂದು ಪ್ರಸಾರ ಕಾಣುವ ಸಾಧ್ಯತೆ ಇದೆ. ಭಾನುವಾರ 10 ಗಂಟೆವರೆಗೆ ವೋಟಿಂಗ್​​ಗೆ ಅವಕಾಶ ಇದೆ. ಹೀಗಾಗಿ, ಆರು ಜನರ ಪೈಕಿ ನಾಲ್ವರ ಎಲಿಮಿನೇಷನ್, ಒಬ್ಬರು ವಿನ್ನರ್ ಹಾಗೂ ರನ್ನರ್ ಅಪ್ ಎಂದು ಘೋಷಿಸೋದು ಭಾನುವಾರವೇ ನಡೆಯಲಿದೆ. ಭಾನುವಾರ ಸಂಜೆ 6 ಗಂಟೆಗೆ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:04 am, Sat, 17 January 26

Source link

Daily Devotional: ಮೌನಿ ಅಮಾವಾಸ್ಯೆಯ ವಿಶೇಷ ಹಾಗೂ ಆಚರಿಸುವ ವಿಧಾನ – Kannada News | Daily Devotional: Mouni Amavasya, Significance, Rituals, and Benefits for Ancestral Blessings

ಬೆಂಗಳೂರು, ಜನವರಿ 17: ಈ ಅಮಾವಾಸ್ಯೆಯನ್ನು ಮಾಘ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಇದು ಪೂರ್ವಿಕರ ಸ್ಮರಣೆಗೆ ಮತ್ತು ಅವರ ಆಶೀರ್ವಾದ ಪಡೆಯಲು ಬಹಳ ಪ್ರಶಸ್ತವಾದ ದಿನವಾಗಿದೆ. ಮೌನಿ ಅಮಾವಾಸ್ಯೆಯಂದು ಪೂರ್ವಿಕರು ನಮ್ಮ ಸುತ್ತಲೂ ಇರುತ್ತಾರೆಂದು ನಂಬಲಾಗಿದೆ. ಅವರು ನಮ್ಮನ್ನು ಸರಿಯಾದ ಮಾರ್ಗಕ್ಕೆ ತರಲು, ನಮ್ಮ ಲೋಪದೋಷಗಳನ್ನು ಸರಿಪಡಿಸಲು, ಆಯುರಾರೋಗ್ಯ ನೀಡಲು ಮತ್ತು ದುಷ್ಟ ಶಕ್ತಿಗಳನ್ನು ಹೋಗಲಾಡಿಸಲು ಈ ದಿನ ಬರುತ್ತಾರೆ. ಅವರನ್ನು ತೃಪ್ತಿಪಡಿಸಲು ನಾವು ಮಾಡುವ ದಾನ, ಸಹಾಯ ಮತ್ತು ಒಳ್ಳೆಯ ಕಾರ್ಯಗಳು ಬಹಳ ಮುಖ್ಯ. ಅನಾಥರು, ಅಶಕ್ತರು, ರೋಗಿಗಳು, ವೃದ್ಧರು ಹಾಗೂ ಬಡವರಿಗೆ ನೆರವು ನೀಡುವುದರಿಂದ ಪೂರ್ವಿಕರು ಸಂತೃಪ್ತರಾಗುತ್ತಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಹಾಸನ: ಮಹಿಳೆಯ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ – Kannada News | Rogue Elephant That Killed Woman Captured After Four Hour Operation in Hassan

ಹಾಸನ, ಜನವರಿ 17: ಹಾಸನದ ಸಕಲೇಶಪುರದ ಗ್ರಾಮದಲ್ಲಿ ಮಹಿಳೆಯ ಬಲಿ ಪಡೆದಿದ್ದ, ಜನರಿಗೆ ತೊಂದರೆ ನೀಡುತ್ತಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬೇಲೂರು ತಾಲೂಕಿನ ಬೆಳ್ಳಾವರ ಕಾಫಿ ತೋಟದಲ್ಲಿ ನಾಲ್ಕು ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಈ ಆನೆಯನ್ನು ಹಿಡಿಯಲಾಗಿದೆ. ಜನವರಿ 13ರಂದು ಮೊಗಲಿಯಲ್ಲಿ ಓರ್ವ ಮಹಿಳೆಯನ್ನು ಬಲಿತೆಗೆದುಕೊಂಡಿದ್ದ ಈ ಕಾಡಾನೆ ಸೆರೆಯಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 17 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭದ್ರಕರಣ ಇರಲಿದೆ. ರಾಹುಕಾಲವು ಬೆಳಗ್ಗೆ 9:36ರಿಂದ 11:02ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:55ರಿಂದ 3:21ರವರೆಗೆ ಇರುತ್ತದೆ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳು ಇರುವ ಪರ್ವ ದಿನವಾಗಿದೆ. ಮಾಸ ಶಿವರಾತ್ರಿ, ಸುತ್ತೂರು ಶಿವರಾತ್ರೀಶ್ವರ ಮಹಾಲಿಂಗೇಶ್ವರರ ರಥೋತ್ಸವ ಮತ್ತು ಸೂಡಿ ಮಹಾಂತ ಸ್ವಾಮಿಗಳ ಪುಣ್ಯ ದಿನವೂ ಹೌದು. ಇಂದು ಬೆಳಗ್ಗೆ 10:27ಕ್ಕೆ ಬುಧ ಗ್ರಹ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ರವಿ ಮಕರ ರಾಶಿಯಲ್ಲಿ, ಚಂದ್ರ ಧನಸ್ಸು ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

Source link

ಬಿಗ್ ಬಾಸ್ ಕನ್ನಡ ಸೀಸನ್ 1 To 11: ಗೆದ್ದ ಬೀಗಿದವರ ಹೆಸರು, ವಿವರ ಇಲ್ಲಿದೆ – Kannada News | Bigg Boss Kannada 12 Finale: Meet All Past Winners & Champions List

ನೋಡ ನೋಡುತ್ತಾ ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಬಂದೇ ಬಿಟ್ಟಿದೆ. ಈ ಬಾರಿ ಯಾರು ಬಿಗ್ ಬಾಸ್ ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ. ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಕ್ಷಿತಾ, ರಘು, ಧನುಶ್ ಫಿನಾಲೆ ಓಟದಲ್ಲಿ ಇದ್ದಾರೆ. ಈಗ ಹಳೆಯ ಸೀಸನ್​​ಗಳ ವಿನ್ನರ್​​ಗಳ ಚರ್ಚೆ ನಡೆದಿದೆ. ಈ ಮೊದಲ ಸೀಸನ್​ಗಳಲ್ಲಿ ಯಾರೆಲ್ಲ ವಿನ್ ಆಗಿದ್ದರು ಎನ್ನುವುದರ ವಿವರ ಇಲ್ಲಿದೆ.

ಬಿಗ್ ಬಾಸ್ ಸೀಸನ್ 1: ಬಿಗ್ ಬಾಸ್ ಆರಂಭ ಆಗಿದ್ದು 2013ರಲ್ಲಿ. ಹಿಂದಿಯಲ್ಲಿ ಗಮನ ಸೆಳೆದ ಈ ಶೋನ ಕನ್ನಡಕ್ಕೂ ತರಲಾಯಿತು. ಈಟಿವಿಯಲ್ಲಿ ಮೊದಲ ಬಾರಿ ಶೋ ಪ್ರಸಾರ ಕಂಡಿತು. ಮೊದಲ ಸೀಸನ್ 98 ದಿನಗಳ ಕಾಲ ನಡೆಯಿತು. ಸುದೀಪ್ ಇದರ ಹೋಸ್ಟ್ ಆದರು. ವಿಜಯ್ ರಾಘವೇಂದ್ರ ಮೊದಲ ವಿನ್ನರ್.

ಬಿಗ್ ಬಾಸ್ ಸೀಸನ್ 2: 2014ರ ಜೂನ್ 29ರಿಂದ ಅಕ್ಟೋಬರ್ 5ರವರೆಗೆ ‘ಬಿಗ್ ಬಾಸ್ ಸೀಸನ್ 2’ ನಡೆಸಲಾಯಿತು. ಅಕುಲ್ ಬಾಲಾಜಿ ವಿನ್ನರ್ ಆದರೆ, ಸೃಜನ್ ಲೋಕೆಶ್ ರನ್ನರ್ ಅಪ್​. ಏಷ್ಯಾನೆಟ್ ಸುವರ್ಣದಲ್ಲಿ ಈ ಶೋ ಪ್ರಸಾರ ಆಗಿತ್ತು.

ಬಿಗ್ ಬಾಸ್ ಸೀಸನ್ 3: ‘ಬಿಗ್ ಬಾಸ್ 3’ 2015ರಲ್ಲಿ ನಡೆಯಿತು. 98 ದಿನ ಶೋ ಪ್ರಸಾರ ಕಂಡಿತ್ತು. ಚಂದನ್ ಕುಮಾರ್ ರನ್ನರ್​ ಅಪ್ ಹಾಗೂ ಶ್ರುತಿ ಶೋನ ವಿನ್ನರ್.

ಬಿಗ್ ಬಾಸ್ ಸೀಸನ್ 4: ‘ಬಿಗ್ ಬಾಸ್ 4’ರಲ್ಲಿ ಪ್ರಥಮ್ ಅವರು ವಿನ್ನರ್ ಹಾಗೂ ಕಿರಿಕ್ ಕೀರ್ತಿ ರನ್ನರ್ ಅಪ್ ಆದರು. ಮೊದಲ ಬಾರಿಗೆ ಶೋ 100 ದಿನಗಳನ್ನು ದಾಟಿತ್ತು. ಆ ಸೀಸನ್​ನಲ್ಲಿ ಎರಡು ವಾರ ಹೆಚ್ಚುವರಿಯಾಗಿ ನಡೆಸಲಾಯಿತು. 112 ದಿನಗಳ ಕಾಲ ಶೋ ನಡೆದಿತ್ತು.

ಬಿಗ್ ಬಾಸ್ ಸೀಸನ್ 5: ಚಂದನ್ ಶೆಟ್ಟಿ ಅವರು ಐದನೇ ಸೀಸನ್ ವಿನ್ ಆದರು. ದಿವಾಕರ್ ರನ್ನರ್ ಅಪ್ ಆದರು 20 ಜನ ಇದ್ದ ಸ್ಪರ್ಧೆ 105 ದಿನಗಳ ಕಾಲ ನಡೆಯಿತು.

ಬಿಗ್ ಬಾಸ್ ಸೀಸನ್ 6: ಶಶಿಕುಮಾರ್ ಅವರು ಆರನೇ ಸೀಸನ್ ವಿನ್ ಆದರು. ಕಲರ್ಸ್ ಸೂಪರ್​ನಲ್ಲಿ ಶೋ ಪ್ರಸಾರ ಕಂಡಿತು. ನವೀನ್ ಸಜ್ಜು ರನ್ನರ್ ಅಪ್ ಆದರು.

ಬಿಗ್ ಬಾಸ್ ಸೀಸನ್ 7: ಶೈನ್ ಶೆಟ್ಟಿ ಸೀಸನ್ 7ರ ವಿನ್ನರ್ ಹಾಗೂ ಕುರಿ ಪ್ರತಾಪ್ ರನ್ನರ್ ಅಪ್ ಆದರು. ಇದು ಬಿಗ್ ಬಾಸ್ ಇತಿಹಾಸದಲ್ಲೇ ಅತ್ಯುತ್ತಮ ಸೀಸನ್ ಎನಿಸಿಕೊಂಡಿದೆ.

ಬಿಗ್ ಬಾಸ್ ಸೀಸನ್ 8: ಮಂಜು ಪಾವಗಡ ಶೋನ ವಿನ್ನರ್ ಆದರೆ, ಅರವಿಂದ್ ಕೆಪಿ ರನ್ನರ್​ ಅಪ್ . 120 ದಿನಗಳ ಕಾಲ ಶೋನ ನಡೆಯಿತು. ಕೊವಿಡ್ ಎರಡನೆ ಅಲೆ ಕಾರಣದಿಂದ ಶೋನ ಅರ್ಧಕ್ಕೆ ನಿಲ್ಲಿಸಿ ಮತ್ತೆ ನಡೆಸಲಾಗಿತ್ತು. ಬಿಗ್ ಬಾಸ್ ಇತಿಹಾಸದಲ್ಲಿ ಹೀಗಾಗಿದ್ದು ಇದೇ ಮೊದಲು.

ಬಿಗ್ ಬಾಸ್ ಸೀಸನ್ 9: ಈ ಸೀಸನ್​​ನಲ್ಲಿ ಹಳೆಯ ಸ್ಪರ್ಧಿಗಳು ಬಂದಿದ್ದರು. ಒಟಿಟಿ ಬಳಿಕ ಟಿವಿ ಶೋ ಆರಂಭಿಸಲಾಯಿತು. ರೂಪೇಶ್ ಶೆಟ್ಟಿ ವಿನ್ನರ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು.

ಬಿಗ್ ಬಾಸ್ ಸೀಸನ್ 10: ಈ ಸೀಸನ್​ ಅಲ್ಲಿ ಕಾರ್ತಿಕ್ ಮಹೇಶ್ ಅವರು ವಿನ್ನರ್ ಹಾಗೂ ಡ್ರೋನ್ ಪ್ರತಾಪ್ ರನ್ನರ್ ಅಪ್ ಆದರು.

ಇದನ್ನೂ ಓದಿ: ಬಿಗ್ ಬಾಸ್​​ನ ಗಿಲ್ಲಿನೇ ಗೆಲ್ಲೋದು; ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ

ಬಿಗ್ ಬಾಸ್ ಸೀಸನ್ 11: ಹನುಮಂತ ಅವರು ಕಳೆದ ಸೀಸನ್ ವಿನ್ನರ್ ಆದರೆ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ.

ಬಿಗ್ ಬಾಸ್ ಸೀಸನ್ 12: ಈ ಬಾರಿ ಒಟ್ಟು 112 ದಿನ ಬಿಗ್ ಬಾಸ್ ನಡೆಯುತ್ತಿದೆ. ಜನವರಿ 18ರಂದು ವಿನ್ನರ್ ಘೋಷಣೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 6:30 am, Sat, 17 January 26

Source link

Bheemanna Khandre passes away: ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ – Kannada News | Veteran Congress Leader and Former Minister Bheemanna Khandre Passes Away at 102 in Bidar

ಬೀದರ್, ಜನವರಿ 17: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) (Bheemanna Khandre) ವಯೋಸಹಜ ಅನಾರೋಗ್ಯದಿಂದ ಬೀದರ್​​ನ (Bidar) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಸೋಮವಾರ ಅವರನ್ನು ಮನೆಗೆ ಕರೆದೊಯ್ದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ರಾತ್ರಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಕೊನೆಯುಸಿರೆಳೆದಿದ್ದಾರೆ.

ಇಂದೇ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

ಭೀಮಣ್ಣ ಖಂಡ್ರೆ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಇಂದೇ ನಡೆಯಲಿದೆ ಎಂದು ಅವರ ಮಗ, ಸಚಿವರೂ ಆಗಿರುವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್​ನಲ್ಲಿರುವ ಸ್ವಗೃಹದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಎಕ್ಸ್ ಸಂದೇಶ

ಭೀಮಣ್ಣ ಖಂಡ್ರೆ ನಡೆದುಬಂದ ಹಾದಿ

ಡಾ. ಭೀಮಣ್ಣ ಖಂಡ್ರೆ ಅವರು 1927ರ ಜನವರಿ 8ರಂದು ಶಿವಲಿಂಗಪ್ಪ ಖಂಡ್ರೆ ಮತ್ತು ಶ್ರೀಮತಿ ಪಾರ್ವತಿ ದಂಪತಿಯ ಪುತ್ರನಾಗಿ ಜನಿಸಿದರು. ಭಾಲ್ಕಿ ಹಿರೇಮಠದಲ್ಲಿ ಕನ್ನಡ ಶಿಕ್ಷಣ ಪಡೆದು ಶರಣತತ್ವದ ದೀಕ್ಷೆ ಪಡೆದ ಅವರು, ಬಾಲ್ಯದಲ್ಲಿಯೇ ಶಿಸ್ತಿನ ಬದುಕಿಗೆ ಪೂರಕವಾದ ಮೌಲ್ಯಗಳನ್ನು ಅಳವಡಿಸಿಕೊಂಡರು. ಭಾಲ್ಕಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಬೀದರ್‌ನಲ್ಲಿ ಪ್ರೌಢ ಶಿಕ್ಷಣ ಪಡೆದರು. ಮುನ್‌ಪಿ–ಫಾಜಲ್ ಪರೀಕ್ಷೆಯಲ್ಲಿ ಇಡೀ ಹೈದರಾಬಾದ್ ಪ್ರಾಂತ್ಯದಲ್ಲೇ ಪ್ರಥಮ ಸ್ಥಾನ ಪಡೆದು ತಮ್ಮ ಪ್ರತಿಭೆಯನ್ನು ಮೆರೆದರು. ನಂತರ ಹೈದರಾಬಾದ್‌ನ ಉಸ್ಮಾನಿಯಾ ಕಾಲೇಜಿನಲ್ಲಿ ವಕಾಲತ್ ಅಧ್ಯಯನ ಪೂರ್ಣಗೊಳಿಸಿದರು. ಕನ್ನಡದ ಜೊತೆಗೆ ಉರ್ದು, ಪಾರಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದ್ದರು.

ಭೀಮಣ್ಣ ಖಂಡ್ರೆ ರಾಜಕೀಯ ಪಯಣ

1949–50ರಲ್ಲಿ ಪ್ರಜಾ ಸಮಾಜವಾದಿ ಪಕ್ಷದ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿದ ಭೀಮಣ್ಣ ಖಂಡ್ರೆ, 1953ರಲ್ಲಿ ಭಾಲ್ಕಿ ಪುರಸಭೆಯ ಮೊದಲ ಚುನಾಯಿತ ಅಧ್ಯಕ್ಷರಾಗಿ ಜನಸೇವೆಗೆ ಹೊಸ ದಿಕ್ಕು ನೀಡಿದರು. ಅವರು 1962, 1967, 1978 ಮತ್ತು 1983ರಲ್ಲಿ ಭಾಲ್ಕಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದರು. ಇದೇ ವೇಳೆ 1988 ರಿಂದ 1994ರವರೆಗೆ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ (MLC) ಸೇವೆ ಸಲ್ಲಿಸಿದರು. ಶಾಸನಸಭೆಯ ವಿವಿಧ ಸಮಿತಿಗಳ ಸದಸ್ಯ ಹಾಗೂ ಅಧ್ಯಕ್ಷರಾಗಿ, ಪಾರ್ಲಿಮೆಂಟರಿ ವ್ಯವಹಾರಗಳ ಅಧ್ಯಯನ ಸಂಸ್ಥೆಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

ಸಚಿವರಾಗಿ ಭೀಮಣ್ಣ ಖಂಡ್ರೆ

ಎಂ. ವೀರಪ್ಪ ಮೊಯಿಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, 1992 ರಿಂದ 1994ರವರೆಗೆ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ ಡಾ. ಭೀಮಣ್ಣ ಖಂಡ್ರೆ, ಆಡಳಿತದಲ್ಲಿ ಶಿಸ್ತು, ಪಾರದರ್ಶಕತೆ ಮತ್ತು ಜನಪರ ನಿಲುವಿಗೆ ಹೆಸರಾಗಿದ್ದರು.

ಕಾಂಗ್ರೆಸ್ ಮತ್ತು ಸಮಾಜ ಸೇವೆ

1980ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಭೆಯ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ರೈತ ವಿಭಾಗದ ಸಂಚಾಲಕರಾಗಿ ದುಡಿದ ಅವರು, ರೈತರ ಹಿತಕ್ಕಾಗಿ ಸದಾ ಧ್ವನಿ ಎತ್ತಿದರು. ವೀರಶೈವ ಲಿಂಗಾಯತ ಸಮುದಾಯದ ಸಂಘಟನೆ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಗೆ ಮಹತ್ವದ ಪಾತ್ರ ವಹಿಸಿದ್ದರು.

ರಾಜ್ಯ ಏಕೀಕರಣದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2006ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಪ್ರಶಸ್ತಿ ನೀಡಿ ಕರ್ನಾಟಕ ಸರ್ಕಾರವು ಅವರನ್ನು ಗೌರವಿಸಿತು. ಇದು ಅವರ ದೀರ್ಘಕಾಲದ ಜನಸೇವೆಗೆ ಸಿಕ್ಕ ಗೌರವವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:34 am, Sat, 17 January 26

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ ಪದ್ಧತಿಯಲ್ಲಿ ಅಥವಾ ವೈದ್ಯರನ್ನು ಬದಲಾವಣೆ ಮಾಡುವ ಮುಂಚೆ ಆಲೋಚಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಭಾವನಾತ್ಮಕವಾಗಿ ತುಂಬ ಕಠಿಣವಾದ ದಿನ ಇದಾಗಿರಲಿದೆ. ಬಹಳ ವರ್ಷಗಳಿಂದ ಬಾಂಧವ್ಯ ಇರುವ ವ್ಯಕ್ತಿ, ಸಂಘಟನೆ, ಸಂಸ್ಥೆಯಿಂದ ದೂರ ಆಗಬೇಕಾದ ಪರಿಸ್ಥಿತಿ ಸೃಷ್ಟಿ ಆಗುತ್ತದೆ. ಮುಂದೆ ಏನು ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಂಥ ಒತ್ತಡವೊಂದು ಮೇಲೆ ಬೀಳಲಿದೆ. ಮುಖ್ಯ ಕೆಲಸಗಳನ್ನು ಗಡುವಿನ ಒಳಗಾಗಿ ಮಾಡಿ ಮುಗಿಸುವುದು ಬಹಳ ಮುಖ್ಯ. ಮರೆವಿನ ಕಾರಣಕ್ಕೆ ಸಣ್ಣ ಪ್ರಮಾಣದಲ್ಲಿಯಾದರೂ ತೊಂದರೆ ಅನುಭವಿಸುವಂತೆ ಆಗಲಿದೆ. ಮಾಂಸಾಹಾರ ಸೇವಿಸುವವರು ದಿನದ ಮಟ್ಟಿಗೆ ದೂರ ಇರುವುದು ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ದೇಹದಲ್ಲಿನ ವಿಟಮಿನ್, ಹಿಮೋಗ್ಲೋಬಿನ್ ಇತರ ಮುಖ್ಯ ಅಂಶಗಳು ಸರಿಯಾದ ಪ್ರಮಾಣದಲ್ಲಿ ಇದೆಯೇ ಅಥವಾ ಕೊರತೆ ಇದೆಯಾ ಎಂದು ತಿಳಿದುಕೊಳ್ಳಲು ಕೆಲವು ವೈದ್ಯಕೀಯ ಪರೀಕ್ಷೆ ಮಾಡಿಸಲಿದ್ದೀರಿ. ಬ್ಯಾಂಕ್ ಗಳಲ್ಲಿ ಕೆಲಸ ಮಾಡುವವರು ಈ ದಿನ ನಡೆಸುವ ಹಣಕಾಸು ವ್ಯವಹಾರಗಳಲ್ಲಿ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಎಚ್ಚರಿಕೆಯನ್ನು ವಹಿಸಿ. ಕುಟುಂಬ ಸದಸ್ಯರಿಂದ ಆಗುವ ಸಣ್ಣ- ಪುಟ್ಟ ತಪ್ಪುಗಳನ್ನು ದೊಡ್ಡದು ಮಾಡಿ, ಕೂಗಾಟ- ಕಿರುಚಾಟ ಮಾಡಲಿಕ್ಕೆ ಹೋಗಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಹೊಸ ಬಟ್ಟೆ- ವಾಚ್, ಶೂ ಇಂಥವುಗಳ ಖರೀದಿ ಮಾಡಲಿದ್ದೀರಿ. ಪ್ರವಾಸಕ್ಕೆ ಅಂತಲೋ ಕಾರ್ಯಕ್ರಮ- ಸಮಾರಂಭಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮಲ್ಲಿ ಕೆಲವರು ಇಷ್ಟಪಡುವ ವ್ಯಕ್ತಿ ಎದುರಿಗೆ ಪ್ರೇಮ ನಿವೇದನೆ ಮಾಡಲಿದ್ದೀರಿ. ನಿಮ್ಮ ಬಳಿ ರಹಸ್ಯ ಎಂದು ಇತರರು ಹೇಳಿದಂಥ ವಿಷಯಗಳನ್ನು ಯಾರ ಮುಂದೆಯೂ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ಸ್ನೇಹಿತರಿಗೆ ನಿಮ್ಮ ಸಹಾಯದ ಅಗತ್ಯ ಬರಲಿದೆ. ನಿಮ್ಮ ಮೊಬೈಲ್ ಫೋನ್ ನಾಟ್ ರೀಚಬಲ್ ಆಗದಂತೆ ಸಾಧ್ಯವಾದಷ್ಟೂ ನೋಡಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ ಸಮಯದಿಂದ ಒಂದು ಅವಕಾಶ ಎಂಬಂತೆ ಎದುರು ನೋಡುತ್ತಾ ಇದ್ದದ್ದು ಅದೀಗ ನಿಮ್ಮ ಕಡೆಗೆ ಬರುವಂಥ ಸುಳಿವು ದೊರೆಯಲಿದೆ. ಮಾನಸಿಕವಾಗಿ ಈ ದಿನ ಬಹಳ ಗಟ್ಟಿಯಾಗಿ ಇರಲಿದ್ದೀರಿ. ಇತರರಿಗೆ ಕಷ್ಟ ಎನಿಸಿದ ವಿಷಯಗಳನ್ನು ಸಹ ಅರ್ಥ ಮಾಡಿಕೊಳ್ಳುವಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮಗೆ ಇಷ್ಟವಾದದ್ದನ್ನು ಖರೀದಿ ಮಾಡಿಬಿಡಬೇಕು ಎಂಬ ಚಡಪಡಿಕೆ ನಿಮ್ಮಲ್ಲಿ ಇರಲಿದೆ. ನಿಶ್ಚಿತವಾದ ಆದಾಯ ಬರುವಂತೆ ಮಾಡಿಕೊಳ್ಳಬೇಕು ಎಂಬ ಪ್ರಯತ್ನಗಳು ಗುರಿಯ ಕಡೆಗೆ ಸಾಗಲಿವೆ. ಶಿಕ್ಷಕರಿಗೆ ನಿಯೋಜನೆ ಮೇರೆಗೆ ದೊಡ್ಡ ಜವಾಬ್ದಾರಿಗಳು ನಿರ್ವಹಿಸಬೇಕಾಗಿ ಬರಲಿದೆ. ಆರಂಭದಲ್ಲಿ ಅದು ನಿಮ್ಮಿಂದ ಸಾಧ್ಯವೇ ಎಂಬ ಆತಂಕವಾದರೂ ಇದರಿಂದ ನಿಮಗೆ ಹೆಸರು ಬರುವಂಥ ಸಾಧ್ಯತೆ ಇದೆ. ಸಿನಿಮಾ ರಂಗದಲ್ಲಿ ಅವಕಾಶಕ್ಕಾಗಿ ಪ್ರಯತ್ನ ಮಾಡುತ್ತಾ ಇರುವವರಿಗೆ ಆತ್ಮವಿಶ್ವಾಸ ಹೆಚ್ಚಾಗುವಂಥ ದಿನವಿದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕಂಡುಬರುವುದಿಲ್ಲ. ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಅಂದುಕೊಳ್ಳದ ಕೆಲವು ಫಲಿತಾಂಶ ಬರುವುದರಿಂದ ವಿಚಲಿತರಾಗುವಂತೆ ಆಗಲಿದೆ. ಸ್ವಲ್ಪ ದೂರದ ಸ್ಥಳಕ್ಕೆ ತೆರಳಿ ಏಕಾಂಗಿಯಾಗಿ ಸಮಯ ಕಳೆಯೋಣ ಎಂದೆನಿಸಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕಾಗದ- ದಾಖಲೆ ಪತ್ರಗಳ ವ್ಯವಹಾರ ಸಲೀಸಾಗಿ ಆಗಲಿದೆ. ಇದಕ್ಕೆ ನಿಮ್ಮ ಪ್ರಭಾವ- ಪ್ರಯತ್ನ ಸಹಾಯ ಮಾಡಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಪ್ಲಾನಿಂಗ್- ಪರಿಶ್ರಮ ಜತೆಯಾಗಿ ಅತ್ಯುತ್ತಮ ಫಲಿತಾಂಶ ದೊರೆಯಲಿದೆ. ದಂಪತಿ ಮಧ್ಯೆ ಸಂತೋಷಕರವಾದ ಸಮಯವನ್ನು ಕಳೆಯುವ ಯೋಗ ಇದೆ. ನಿಮ್ಮ ಬಳಿ ಎಷ್ಟು ಹಣ ಇದೆಯೋ ಅಷ್ಟಕ್ಕೆ ಮಾತ್ರ ಸೀಮಿತಗೊಳ್ಳಿ. ಕಡಿಮೆ ಬಡ್ಡಿ- ದೀರ್ಘಾವಧಿ ಹೀಗೆ ಏನೇ ಆಕರ್ಷಣೆಗಳು ಇದ್ದರೂ ಸಾಲ ಪಡೆದುಕೊಳ್ಳಬೇಡಿ. ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಅದೆಷ್ಟೇ ಸಣ್ಣ ಪ್ರಮಾಣದ ಕೆಲಸವಾದರೂ ನೀವೇ ಪೂರ್ಣಗೊಳಿಸುವುದು ಉತ್ತಮ. ನಿಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ವರ್ಗಾವಣೆ ಮಾಡಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು ಪಡುವಂತೆ ಆಗುತ್ತದೆ. ಉಳಿತಾಯದ ಉದ್ದೇಶಕ್ಕೆ ಖರೀದಿ ಮಾಡಿಟ್ಟಿದ್ದ ಚಿನ್ನ ಅಥವಾ ಬೆಳ್ಳಿಯನ್ನು ಮಾರಾಟ ಮಾಡಿ, ಸದ್ಯದ ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಚಿಂತನೆ ಮಾಡುತ್ತೀರಿ. ಮ್ಯೂಚುವಲ್ ಫಂಡ್ ನಲ್ಲಿ ಹಣ ಹೂಡಿಕೆ ಮಾಡಿದವರಿಗೆ ಲಾಭ ಸಿಗಲಿದೆ. ಪ್ರಾಫಿಟ್ ಬುಕ್ಕಿಂಗ್ ಗೆ ನಿರ್ಧಾರ ಮಾಡುತ್ತೀರಿ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09-44 – 11:09, ಯಮಗಂಡ ಕಾಲ 13:59 – 15:25, ಗುಳಿಕ ಕಾಲ 06:54 – 08:18.

ಮೇಷ ರಾಶಿ: ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನೀವು ನೀಡುವ ಅಗೌರವವು ಪಶ್ಚಾತ್ತಾಪಕ್ಕೆ ಕಾರಣವಾಗಲಿದೆ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ಚು ಆಗುವುದು. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅವಶ್ಯಕತೆ ಇರುವಷ್ಟು ಬಳಸಿಕೊಂಡು, ಇನ್ನೊಬ್ಬರ ವಸ್ತುವನ್ನು ಹಿಂದಿರುಗಿಸುವಿರಿ.

ವೃಷಭ ರಾಶಿ: ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ನೀವು ಇಂದು ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ಕೆಲಸದಲ್ಲಿ ನೈಪುಣ್ಯತೆಯನ್ನು ಬೆಳೆಸಿಕೊಂಡಿರುವಿರಿ. ನಿಮಗೆ ಕೆಲವು ಪರೋಕ್ಷ ಮಾತುಗಳು ಅಭಿಮಾನಕ್ಕೆ ಭಂಗ ತರಬಹುದು. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ವಿನಯದಿಂದ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳಬಹುದು.

ಮಿಥುನ ರಾಶಿ: ಇಂದಿನ ವರ್ತನೆಯು ಊಹಾತೀತವಾಗಿರುವುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ನಿಮ್ಮ ಮನೆಯ ವಾತಾವರಣವು ಅನೇಕ ದಿನಗಳ ಅನಂತರ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ಎಲ್ಲ ಕಡೆಗಳಲ್ಲಿ ತಾರತಮ್ಯ ತೋರುವುದು ಬೇಡ. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟಕೊಳ್ಳಿ.

ಕರ್ಕಾಟಕ ರಾಶಿ: ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ನಂಬಿಕೆ ಬಾರದ ಕಡೆ ವ್ಯವಹಾರವನ್ನು ಮುಂದುವರಿಸುವುದು ಬೇಡ. ಧನವ್ಯಯವಾದರೂ ದೊಡ್ಡ ಸಮಸ್ಯೆ ಆಗುವುದಿಲ್ಲ. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು.‌

ಸಿಂಹ ರಾಶಿ: ಯಾರನ್ನೂ ಕೊಂಡುಕೊಳ್ಳಲಾಗದು, ಇನ್ನೊಬ್ಬರಿಗೆ ಕೊಟ್ಟುಕೊಂಡರೆ ಕೆಲಸ ಸಲೀಸು. ಆರ್ಥಿಕತೆಯಿಂದ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು. ಇಂದು ನಿಮಗೆ ವ್ಯಕ್ತಿಗಿಂತ ಕೆಲಸವೇ ಮುಖ್ಯವಾಗುವುದು. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಬರುವ ಆದಾಯವನ್ನು ಜಾಣ್ಮೆಯಿಂದ ಬಳಸಿಕೊಳ್ಳುವಿರಿ. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ.

ಕನ್ಯಾ ರಾಶಿ: ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭ ಗಳಿಸುವಿರಿ. ಯಾರಿಗೂ ನೋವಾಗಂದಂತೆ ಇರುವುದು ಸುಲಭವಲ್ಲ. ಸಂಗಾತಿಯ ಬಯಕೆಯನ್ನು ಪೂರ್ಣವಾಗಿಸುವಿರಿ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ.

ತುಲಾ ರಾಶಿ: ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸುವಿರಿ. ಸಂತೋಷವನ್ನು ಇನ್ನೊಂದರಲ್ಲಿ ಹುಡುಕುವುದಕ್ಕಿಂತ ನಿಮ್ಮೊಳಗೆ ಇದೆಯೇ ಎಂದು ಭಾವಿಸಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ‌ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು.

ವೃಶ್ಚಿಕ ರಾಶಿ: ಪ್ರೇಮಿಗಳು ಇಂದು ಸ್ವತಂತ್ರವಾಗಿ ಇರಲು ಆಸೆಪಡುವರು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ವರ್ಚಸ್ಸು ಅಧಿಕವಾದಷ್ಟೂ ಅಪಾಯವೇ ನಿಮಗೆ. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು.

ಧನು ರಾಶಿ: ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸುವ ಅಗತ್ಯವಿದೆ. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು.‌ ಆಕಸ್ಮಿಕವಾಗಿ ಉದ್ಯೋಗವು ನಿಮ್ಮ‌ ಪಾಲಿಗೆ ಬರುವುದು.‌ ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ಇಂದಿನ ನಿಮ್ಮ ಉತ್ಸಾಹವು ಸಮಾರಂಭಗಳಲ್ಲಿ ಸಂತೋಷದಿಂದ ಭಾಗವಿಸುವಂತೆ ಮಾಡುವುದು.

ಮಕರ ರಾಶಿ: ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಅತಿಯಾದ ನಿರೀಕ್ಷೆಯನ್ನು ಇಟ್ಟು ಕಾರ್ಯ ಮಾಡುವುದು ಬೇಡ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ.

ಕುಂಭ ರಾಶಿ: ಅಂತಸ್ತಿನ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ.

ಮೀನ ರಾಶಿ: ಉದ್ಯಮದಲ್ಲಿ ಬರುವ ದಾಖಲೆಗಳ ಸಮಸ್ಯೆಯೂ ದೂರಾಗುವುದು. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯವು ಸುಸ್ಥಿರವಾಗಿದ್ದು ಇಂದು ಅನುಕೂಲವೇ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ.‌ ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದದಿಂದ ಬೇಸರ ಇರಲಿದೆ.

ಲೋಹಿತ ಹೆಬ್ಬಾರ್ -8762924271 (what’s app only)

Source link