Category Archives: Blog

Your blog category

ಬೆಂಗಳೂರಲ್ಲಿ ತರಕಾರಿ ಮಾರುವ ಹುಡುಗನ ತಲೆಯಲ್ಲಿ ಎಐ ಟೂಲ್; ಗಂಟೆಗೆ 350 ರೂ ಎಕ್ಸ್​ಟ್ರಾ ಇನ್ಕಮ್; ಬೆರಗಾದ ನೆಟ್ಟಿಗರು – Kannada News | Bengaluru Veg Seller Uses AI Tool for Rs 350 per Hr Extra Income & Data Collection

ಬೆಂಗಳೂರಿನ ತರಕಾರಿ ವ್ಯಾಪಾರಿ ತಲೆಯಲ್ಲಿ ಎಐ ಪರಿಕರImage Credit source: Vai.bhaaavvv Insta account

ಬೆಂಗಳೂರು, ಮೇ 21: ಜನರೇಟಿವ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಬೆಳೆಯುತ್ತಾ ಹೋದಂತೆ ಬ್ರಹ್ಮರಾಕ್ಷಸನಂತೆ ಡಾಟಾ ಆಹಾರ ಬಯಸುತ್ತಲೇ ಇರುತ್ತದೆ. ಎಲ್ಲಾ ರೀತಿಯ ದತ್ತಾಂಶಗಳನ್ನು ಅದು ಬಯಸುತ್ತದೆ. ಮನುಷ್ಯರ ವರ್ತನೆ, ಮಾತುಕತೆ, ನಗರಗಳ ವಾತಾವರಣ ಇವೆಲ್ಲವೂ ತುಂಬಾ ಸೂಕ್ಷ್ಮ ರೂಪದಲ್ಲಿ ಎಐಗೆ ಫೀಡ್ ಮಾಡಲಾಗುತ್ತದೆ. ಈ ರೀತಿ ಡಾಟಾ ಕಲೆಹಾಕಲೆಂದೇ ನಾನಾ ಏಜೆನ್ಸಿಗಳಿವೆ. ಇವು ಜನಸಾಮಾನ್ಯರ ಮೂಲಕ ದತ್ತಾಂಶ ಕಲೆಹಾಕುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ಒಬ್ಬ ಬಳಕೆದಾರ ಒಂದು ಪೋಸ್ಟ್ ಹಾಕಿದ್ದು, ಅದರಲ್ಲಿ ಬೆಂಗಳೂರಿನ ಬೀದಿಬದಿಯಲ್ಲಿ ತರಕಾರಿ ವ್ಯಾಪಾರ ಮಾಡುವ ಹುಡುಗ (Street vendor) ತಲೆಗೆ ಎಐ ಪರಿಕರಣಗಳನ್ನು ಸಿಕ್ಕಿಸಿಕೊಂಡಿರುವ ದೃಶ್ಯ ಕಾಣುತ್ತದೆ. ಆ ಹುಡುಗ ತರಕಾರಿ ವ್ಯಾಪಾರ ಮಾಡಿ ಹಣ ಮಾಡುವುದರ ಜೊತೆಗೆ, ಎಐ ಪರಿಕರ ಸಿಕ್ಕಿಸಿಕೊಂಡು ಗಂಟೆಗೆ 350 ರೂ ಹೆಚ್ಚುವರಿ ಆದಾಯ ಗಳಿಸುತ್ತಾನಂತೆ.

ವೈಭವ್ ಎನ್ನುವ ಇನ್ಸ್​ಟಾ ಯೂಸರ್ ಈ ಪೋಸ್ಟ್ ಹಾಕಿದ್ದಾರೆ. ರಸ್ತೆಯಲ್ಲಿ ವಾಹನದಲ್ಲಿ ಹೋಗುವಾಗ ತಲೆಗೆ ಎಐ ಪರಿಕರವನ್ನು ಸಿಕ್ಕಿಸಿಕೊಂಡಿರುವ ತರಕಾರಿ ವ್ಯಾಪಾರಿಯೊಬ್ಬನನ್ನು ನೋಡಿದೆ ಎಂದು ವಿವರಿಸಿದ್ದಾರೆ. ಗಾಡಿ ನಿಲ್ಲಿ ಅದು ಏನೆಂದು ವಿಚಾರಿಸಿದೆ ಎಂದು ತಿಳಿಸಿರುವ ವೈಭವ್, ಆ ಯುವಕನಿಗೆ ಗಂಟೆಗೆ 350 ರೂ ಕೊಡಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕೆಲಸ ಸಿಕ್ಕಿತೆಂದು ಖುಷಿಯಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ದೆಹಲಿಗೆ ಹೋದ್ರೆ ಅಲ್ಲಿ ಆಫೀಸೇ ಇರ್ಲಿಲ್ವಂತೆ

ಗಂಟೆಗೆ 350 ರೂ ಸಿಕ್ಕರೆ ಒಂದು ದಿನದಲ್ಲಿ 10 ಗಂಟೆಯಲ್ಲಿ ಆತ 3,500 ರೂ ಗಳಿಸುತ್ತಾನೆ. ತಿಂಗಳಿಗೆ 1,05,000 ರೂ ಆಗುತ್ತದೆ. ಅರ್ಧದಷ್ಟು ಕಾರ್ಪೊರೇಟ್ ಉದ್ಯೋಗಿಗಳ ಸಂಬಳವನ್ನು ಈತ ಮೀರಿಸುತ್ತಾನೆ ಎಂದು ವೈಭವ್ ಅವರು ಚರ್ಚೆ ಹುಟ್ಟುಹಾಕಿದ್ದಾರೆ.

ಈ ಪೋಸ್ಟ್ ಸಾಕಷ್ಟು ವೀಕ್ಷಣೆ ಪಡೆದಿದೆ. ಮಿಶ್ರ ಪ್ರತಿಕ್ರಿಯೆಗಳು ಬಂದಿವೆ. ಇದೇ ರೀತಿಯ ಎಐ ಗ್ಯಾಜೆಟ್​ಗಳ ಸೆಟಪ್ ಅನ್ನು ತಮ್ಮ ಕಾಲೊನಿಯ ಎಲ್ಲಾ ಗೃಹಿಣಿಯರಿಗೂ ಕೊಡಲಾಗಿತ್ತು. ಅದಾದ ಬಳಿಕ ಎಲ್ಲಾ ಮನೆಗಳು ಎಂದಿಗಿಂತ ಹೆಚ್ಚು ಸ್ವಚ್ಛವಾಗತೊಡಗಿದವು. ಒಂದು ತಿಂಗಳವರೆಗೆ ನಡೆದು ಈಗ ಅದು ನಿಂತಿದೆ ಎಂದು ಒಬ್ಬ ಬಳಕೆದಾರ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ: ಶಾಪಿಂಗ್​ಗೆ ಅಸಿಸ್ಟೆಂಟ್​ಗಳನ್ನು ಕೊಡುತ್ತೆ ಈ ಸ್ಟಾರ್ಟಪ್; ಲಗೇಜ್ ಹೊರೋದ್ರಿಂದ ಹಿಡಿದು, ಗಾಡಿ ಹತ್ತಿಸೋವರೆಗೂ ಎಲ್ಲಾ ನೆರವೂ ಕೊಡ್ತಾರಂತೆ

ಈ ರೀತಿಯ ಡಾಟಾ ಸಂಗ್ರಹಣೆ ನಿರಂತರವಾಗಿ ನಡೆಯುವುದಿಲ್ಲ. ಆ ಹುಡುಗ ಒಂದು ತಿಂಗಳಲ್ಲಿ ಕೆಲ ಗಂಟೆ ಮಾತ್ರ ಈ ಪರಿಕರ ಬಳಸಲು ಅವಕಾಶ ಕೊಡಲಾಗುತ್ತದೆ. ಇಡೀ ಪ್ರಾಜೆಕ್ಟ್ ಅವಧಿಯಲ್ಲಿ ಆ ಹುಡುಗ 10-20 ಗಂಟೆ ಕೆಲಸ ಮಾತ್ರವೇ ಪಡೆಯಬಹುದು ಎಂದು ಮತ್ತೊಬ್ಬ ಬಳಕೆದಾರ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು – Kannada News | HESCOM Faces Anger as Hubballis Gandhinagar Endures Prolonged Power Cut

ಹುಬ್ಬಳ್ಳಿ, ಮೇ.21: ನಗರದ ಗಾಂಧಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ಕಡಿತದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದ ಕಾರಣ ಕುಡಿಯುವ ನೀರಿಗೂ, ಶೌಚಾಲಯಕ್ಕೂ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ಹೆಸ್ಕಾಂ (HESCOM) ಅಧಿಕಾರಿಗಳು ಮತ್ತು ಪಾಲಿಕೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರಗಳನ್ನು ತೆರವುಗೊಳಿಸುವಲ್ಲಿ ಮತ್ತು ವಿದ್ಯುತ್ ಕಂಬಗಳನ್ನು ಸರಿಪಡಿಸುವಲ್ಲಿ ವಿಳಂಬವಾಗಿದೆ. ರಾತ್ರಿ ಹೊತ್ತು ಮನೆಯಲ್ಲಿ ಇರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಜನಪ್ರತಿನಿಧಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Maruti 800 Viral Bill: ಕೇವಲ 60,000 ರೂ.ಗೆ ಸಿಗುತ್ತಿತ್ತು ಮಾರುತಿ 800 ಕಾರು! ಹಳೇ ಬಿಲ್ ನೋಡಿ ನೆಟ್ಟಿಗರು ಶಾಕ್! – Kannada News | Maruti 800 Viral Bill: 1984 Car Price Shocks Internet, Sparks Authenticity Debate

ಮಾರುತಿ 800 ಹಳೆಯ ಬಿಲ್ ವೈರಲ್Image Credit source: instagram

ಭಾರತೀಯ ಆಟೋಮೊಬೈಲ್ ಇತಿಹಾಸದಲ್ಲಿ ‘ಮಾರುತಿ 800’ (Maruti 800) ಕಾರಿಗೆ ಎಂದಿಗೂ ವಿಶೇಷ ಸ್ಥಾನವಿದೆ. ಮಧ್ಯಮ ವರ್ಗದ ಕುಟುಂಬಗಳ ಕಾರು ಮಾಲೀಕತ್ವದ ಕನಸನ್ನು ನನಸು ಮಾಡಿದ ಕೀರ್ತಿ ಈ ಪುಟ್ಟ ಕಾರಿಗೆ ಸಲ್ಲುತ್ತದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ದಶಕಗಳಷ್ಟು ಹಳೆಯದಾದ ಕಾರು ಖರೀದಿಯ ರಶೀದಿಯೊಂದು (ಬಿಲ್) ಸಖತ್ ವೈರಲ್ ಆಗುತ್ತಿದ್ದು, ಅಂದಿನ ದಿನಗಳಲ್ಲಿ ವಾಹನಗಳು ಎಷ್ಟು ಅಗ್ಗವಾಗಿದ್ದವು ಎಂಬುದನ್ನು ನೋಡಿ ನೆಟ್ಟಿಗರು ಶಾಕ್​ ಆಗಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆದ 1984ರ ಬಿಲ್:

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನ ‘namma_mysuru1994’ ಎಂಬ ಖಾತೆಯಲ್ಲಿ 1984ರ ಜುಲೈ 12ರ ದಿನಾಂಕ ಹೊಂದಿರುವ ಕಾರು ಖರೀದಿಯ ರಶೀದಿಯೊಂದನ್ನು ಹಂಚಿಕೊಳ್ಳಲಾಗಿದೆ. ಈ ಬಿಲ್ ಪ್ರಕಾರ, ಮಧ್ಯಪ್ರದೇಶದ ಬಾಗನ್ ಗ್ರಾಮದ ಶಾಮ್ ರಾವ್ ಎಂಬ ಗ್ರಾಹಕರು ಆಗಿನ ಕಾಲದ ಮಾರುತಿ 800 ಕಾರನ್ನು ಖರೀದಿಸಿದ್ದಾರೆ. ಈ ಕಾರಿನ ಅಂದಿನ ಎಕ್ಸ್ ಶೋರೂಮ್ ಬೆಲೆ ಕೇವಲ 47,500 ರೂಪಾಯಿಗಳಾಗಿತ್ತು! ಇದಕ್ಕೆ ಇನ್ಶೂರೆನ್ಸ್, ತೆರಿಗೆಗಳು ಮತ್ತು ಇತರೆ ಶುಲ್ಕಗಳನ್ನು ಸೇರಿಸಿದ ನಂತರ ಒಟ್ಟು ಆನ್ ರೋಡ್ ಬೆಲೆ ಸುಮಾರು 60,000 ರೂಪಾಯಿಗಳಾಗಿದೆ.

Maruti 800 Viral Bill

ಅಂದಿನ 60 ಸಾವಿರ ಇಂದಿನ 5-6 ಲಕ್ಷಕ್ಕೆ ಸಮಾನ:

ಈ ಬಿಲ್‌ನಲ್ಲಿರುವ ಬೆಲೆಯನ್ನು ನೋಡಿ ಸಾಮಾಜಿಕ ಜಾಲತಾಣಗಳ ಬಳಕೆದಾರರು ಆಶ್ಚರ್ಯಚಕಿತರಾಗಿದ್ದಾರೆ. ಆದರೆ ನೆಟ್ಟಿಗರು ಗಮನಿಸಿದ ಮತ್ತೊಂದು ಪ್ರಮುಖ ಅಂಶವೆಂದರೆ, 1984ರ ಕಾಲದ 60,000 ರೂಪಾಯಿಗಳು ಇಂದಿನ ಹಣದುಬ್ಬರ ಮತ್ತು ಮೌಲ್ಯದ ಲೆಕ್ಕಾಚಾರದಲ್ಲಿ ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಿಗೆ ಸಮಾನವಾಗಿದೆ. ಅಂದಿನ ದಿನಗಳಲ್ಲಿ ಮಾರುತಿ 800 ಕಾರಿನಲ್ಲಿ ಕನಿಷ್ಠ ಹವಾನಿಯಂತ್ರಣ (AC) ಸೌಲಭ್ಯ ಕೂಡ ಇರುತ್ತಿರಲಿಲ್ಲ. ಆದರೂ ಭಾರತೀಯ ಮಾರುಕಟ್ಟೆಯಲ್ಲಿ ಇದು ಶ್ರೀಮಂತಿಕೆ ಅಥವಾ ಅಂತಸ್ತಿನ ಸಂಕೇತವಾಗಿ ಗುರುತಿಸಲ್ಪಟ್ಟಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಲೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು

ಹಳೆಯ ನೆನಪುಗಳ ನಡುವೆ ಬಿಲ್‌ನ ಅಸಲಿತನದ ಬಗ್ಗೆ ಸಂಶಯ:

ಈ ವೈರಲ್ ಬಿಲ್ ಅನೇಕರಲ್ಲಿ ಹಳೆಯ ದಿನಗಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದ್ದರೆ, ಇನ್ನೂ ಕೆಲವು ನೆಟ್ಟಿಗರು ಈ ಬಿಲ್‌ನ ಅಸಲಿತನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಲ್‌ನಲ್ಲಿ ಬಳಕೆಯಾಗಿರುವ ಅಕ್ಷರಗಳ ಶೈಲಿ (Font) ಹಾಗೂ ಚಾಸಿಸ್ ವಿವರಗಳಲ್ಲಿ ಕೆಲವು ವ್ಯತ್ಯಾಸಗಳಿರುವುದನ್ನು ಗಮನಿಸಿರುವ ಕೆಲವರು, ಇದು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ನಕಲಿ ಚಿತ್ರವಾಗಿರಬಹುದು ಎಂದು ಕಮೆಂಟ್ ಮಾಡಿದ್ದಾರೆ. ಆದಾಗ್ಯೂ, ಈ ಚಿತ್ರವನ್ನು ಪೋಸ್ಟ್ ಮಾಡಿದ ಮೂಲ ಖಾತೆಯಿಂದ ಈವರೆಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದುಬಾರಿ ವಿಲನ್ ಈ ನಟ – Kannada News | Prashanth Neel said Jr NTR is the most costliest villain in Indian Cinema history

ಸಿನಿಮಾ (Cinema) ಯಾವಾಗಲೂ ನಾಯಕ ಪ್ರಧಾನ. ನಾಯಕನ ಹೊರತಾಗಿ ಬೇರೆ ಪಾತ್ರಗಳಿಗೆ ಪ್ರಾಧಾನ್ಯತೆ ಸಿಗುವುದು ತೀರಾ ವಿರಳ. ಇದೇ ಕಾರಣಕ್ಕೆ ನಾಯಕ ನಟರಿಗೆ ಭಾರಿ ದೊಡ್ಡ ಸಂಭಾವನೆ. ಕೆಲವು ಸ್ಟಾರ್ ನಟರ ಸಂಭಾವನೆ ಇಡೀ ಸಿನಿಮಾದ ಬಜೆಟ್​ನ 60 ರಿಂದ 70% ಇರುತ್ತದೆ. ಕೆಲವೊಮ್ಮೆ ಇನ್ನೂ ಹೆಚ್ಚು. ಇತ್ತೀಚೆಗೆ ವಿಲನ್​​ಗಳನ್ನು ಸ್ಟೈಲಿಷ್ ಆಗಿ ತೋರಿಸುವುದು, ಖ್ಯಾತ ನಟರನ್ನು ವಿಲನ್​​ಗಳಾಗಿ ಹಾಕಿಕೊಳ್ಳುವ ಪದ್ಧತಿ ಹೆಚ್ಚಾಗಿದೆ. ಆದರೂ ವಿಲನ್​​ಗಳು ನಾಯಕನಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಉದಾಹರಣೆ ಇಲ್ಲ. ಆದರೆ ಇದೀಗ ‘ವಿಲನ್’ ಒಬ್ಬರಿಗೆ ಭಾರಿ ದೊಡ್ಡ ಸಂಭಾವನೆ ನೀಡಲಾಗಿದೆ. ಆದರೆ ಇಲ್ಲಿ, ‘ನಾಯಕ’ ನಟನೇ ‘ವಿಲನ್’ ಆಗಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶಿಸಿ, ಜೂ ಎನ್​​ಟಿಆರ್ ನಟಿಸುತ್ತಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಖತ್ ವೈರಲ್ ಆಗುತ್ತಿದೆ. ಟೀಸರ್ ರಿಲೀಸ್ ಆದ ಬೆನ್ನಲ್ಲೆ ಸಿನಿಮಾದ ನಿರ್ದೇಶಕ ಪ್ರಶಾಂತ್ ನೀಲ್ ಸಂದರ್ಶನ ನೀಡಿದ್ದು, ಈ ಸಿನಿಮಾನಲ್ಲಿ ಜೂ ಎನ್​​ಟಿಆರ್ ‘ನಾಯಕ’ ಅಲ್ಲ ಬದಲಿಗೆ ‘ವಿಲನ್’ ಎಂದಿದ್ದಾರೆ. ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ವಿಲನ್ ಜೂ ಎನ್​​ಟಿಆರ್ ಎಂದು ಸಹ ಹೇಳಿದ್ದಾರೆ.

‘ಡ್ರ್ಯಾಗನ್’ ಸಿನಿಮಾನಲ್ಲಿ ಜೂ ಎನ್​​ಟಿಆರ್ ‘ಲೂಗರ್’ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಾದಕ ವಸ್ತು ಸರಬರಾಜು ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳು ಪರಸ್ಪರ ಬಡಿದಾಡಿಕೊಳ್ಳುವ ಕತೆಯನ್ನು ‘ಡ್ರ್ಯಾಗನ್’ ಒಳಗೊಂಡಿದ್ದು, ‘ಲೂಗರ್’ ಸಹ ಒಬ್ಬ ಗ್ಯಾಂಗಿನ ಸದಸ್ಯನಾಗಿದ್ದು, ಕಿರಾತಕ ಗ್ಯಾಂಗ್​​​ಸ್ಟರ್​​ಗಳ ನಡುವೆ ಆತನೂ ಒಬ್ಬ ಕಿರಾತಕ ಎನ್ನಲಾಗಿದೆ. ಇದೇ ಕಾರಣಕ್ಕೆ ಪ್ರಶಾಂತ್ ನೀಲ್, ಜೂ ಎನ್​​ಟಿಆರ್, ಭಾರತದ ಅತ್ಯಂತ ದುಬಾರಿ ವಿಲನ್ ಎಂದಿದ್ದಾರೆ.

ಇದನ್ನೂ ಓದಿ:‘ರಾಜ ಶಿವಾಜಿ’ ಚಿತ್ರದಿಂದ ರಿತೇಶ್​​ಗೆ ದೊಡ್ಡ ಗೆಲುವು; ಸಿನಿಮಾ ಕಂಡ ಲಾಭ ಎಷ್ಟು?

ಜೂ ಎನ್​​ಟಿಆರ್ ಈ ಹಿಂದೆ ‘ಲವ-ಕುಶ’ ಸಿನಿಮಾನಲ್ಲಿ ಅಪ್ಪಟ ವಿಲನ್ ರೀತಿಯ ಪಾತ್ರದಲ್ಲಿ ನಟಿಸಿದ್ದರು. ‘ಊಸರವಳ್ಳಿ’ ಸಿನಿಮಾನಲ್ಲಿ ಮೊದಲು ವಿಲನ್ ಆಗಿದ್ದು ಬಳಿಕ ಹೀರೋ ಆಗುವ ರೀತಿಯ ಪಾತ್ರದಲ್ಲೂ ನಟಿಸಿದ್ದಾರೆ. ಆದರೆ ‘ಡ್ರ್ಯಾಗನ್’ ಸಿನಿಮಾನಲ್ಲಿ ಅಪ್ಪಟ ವಿಲನ್ ಆಗಿಯೇ ಕಾಣಿಸಿಕೊಳ್ಳಲಿದ್ದಾರಂತೆ ಜೂ ಎನ್​​ಟಿಆರ್.

‘ಡ್ರ್ಯಾಗನ್’ ಸಿನಿಮಾನಲ್ಲಿ ಜೂ ಎನ್​​ಟಿಆರ್ ಜೊತೆಗೆ ಬಾಲಿವುಡ್ ಸ್ಟಾರ್ ನಟ ಅನಿಲ್ ಕಪೂರ್ ಸಹ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿ. ಸಿನಿಮಾದ ಬಿಡುಗಡೆ ದಿನಾಂಕ ಇನ್ನಷ್ಟೆ ಘೋಷಣೆ ಆಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 12:07 pm, Thu, 21 May 26

Source link

ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿ: ರಾಜ್ಯ ಮಾಹಿತಿ ಆಯೋಗದ ಸೂಚನೆ ಬೆನ್ನಲ್ಲೇ FIR – Kannada News | RTI Shock in Tumakuru: FIR Filed After Key Land File Goes Missing From Tahsildar Office

ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿImage Credit source: Tv9 Kannada

ತುಮಕೂರು, ಮೇ 21: ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಸರ್ಕಾರಿ ಕಡತ ನಾಪತ್ತೆಯಾಗಿರುವ ಘಟನೆ ತುಮಕೂರಲ್ಲಿ (Tumakuru) ನಡೆದಿದೆ. ಈ ಸಂಬಂಧ ಅರ್ಜಿದಾರ ರಾಜ್ಯ ಮಾಹಿತಿ ಆಯೋಗದ ಮೊರೆಹೋದ ಹಿನ್ನೆಲೆ, ಪರಿಶೀಲಿಸುವಂತೆ ಆಯೋಗ ಖಡಕ್ ಸೂಚನೆ ಕೊಟ್ಟ ಕಾರಣ ತುಮಕೂರು ತಹಶೀಲ್ದಾರ್ ರಾಜೇಶ್ವರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಡತ ನಾಪತ್ತೆ ಸಂಬಂಧ ಅವರು ದೂರು ನೀಡಿದ್ದು, ಅದರನ್ವಯ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಹೆಬ್ಬೂರು ಹೋಬಳಿಯ ಜೋಡಿ ಕಲ್ಕರೆ ಗ್ರಾಮದ ದೊಡ್ಡಶಾನಯ್ಯ ಎಂಬುವರ ಸಹಿ ಇದ್ದ ಮೂಲ ಅರ್ಜಿ, ವಂಶವೃಕ್ಷ ಮರಣ ಪ್ರಮಾಣ ಪತ್ರಗಳಿದ್ದ ಕಡತ ನಾಪತ್ತೆಯಾಗಿದ್ದು, ಈ ಬಗ್ಗೆ ಅರ್ಜಿದಾರರು ಹಲವು ಬಾರಿ ಗಮನಕ್ಕೆ ತಂದರು ಅಧಿಕಾರಿಗಳು ತಲೆಕೆಡಿಸಿಕೊಂಡಿರಲಿಲ್ಲ. ಇದರಿಂದ ಬೇಸತ್ತ ಅರ್ಜಿದಾರರಿಂದ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದರು. ಆ ಬೆನ್ನಲ್ಲೇ ದೂರು ಪರಿಶೀಲಿಸಿದ ನಾಪತ್ತೆಯಾದ ಫೈಲ್‌ಗಳ ಬಗ್ಗೆ ಅಫಿಡವಿಟ್ ಸಲ್ಲಿಸಲು ಆಯೋಗ ಡೆಡ್‌ಲೈನ್ ಕೊಟ್ಟ ಹಿನ್ನೆಲೆ ಎಚ್ಚೆತ್ತ ತಹಶೀಲ್ದಾರ್ ಕಡತ ನಾಪತ್ತೆ ಬಗ್ಗೆ ರಾಜ್ಯ ಸಾರ್ವಜನಿಕ ದಾಖಲೆಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು?

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಶೀಲ್ದಾರ್​ ರಾಜೇಶ್ವರಿ, ಅರ್ಜಿದಾರರು ವಂಶವೃಕ್ಷದ ಮೂಲ ದಾಖಲಾತಿಗಳನ್ನು ಕೇಳಿ 2023ರ ಮಾರ್ಚ್​​ 11ರಂದು ಅರ್ಜಿ ಸಲ್ಲಿಸಿದ್ದರು. ಆ ವೇಳೆ ಹಿಂದಿನ ತಹಶೀಲ್ದಾರ್​​ ಮತ್ತು ಕಚೇರಿ ಸಿಬ್ಬಂದಿ ಈ ಬಗ್ಗೆ ಹುಡುಕಾಡಿದಾಗ ಕಾಗದಪತ್ತ ನಾಪತ್ತೆ ಆಗಿರುವುದು ಗೊತ್ತಾಗಿದ್ದು, ಈ ಬಗ್ಗೆ ಅರ್ಜಿದಾರರಿಗೆ ಹಿಂಬರಹ ನೀಡಲಾಗಿತ್ತು. ಈ ವಿಚಾರ ಆರ್​​ಟಿಐ ಕಮಿಷನ್​​ಗೆ ಹೋಗಿದ್ದು, ಅವರು ಕಾಗಪತ್ರಗಳನ್ನು ಅರ್ಜಿದಾರರಿಗೆ ಹುಡುಕಿಕೊಡಿ. ಇಲ್ಲದಿದ್ದರೆ ಆ ಬಗ್ಗೆ ಪೊಲೀಸ್​​ ದೂರು ದಾಖಲಿಸುವಂತೆ ನಿರ್ದೇಶನ ಬಂದಿತ್ತು. ಆ ಕಾರಣ ಕಂಪ್ಲೇಂಟ್​​ ನೀಡಿರೋದಾಗಿ ಅವರು ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರ ಶ್ರೀನಿವಾಸ ಕಲ್ಕೆರೆ, 4 ಸರ್ವೇ ನಂಬರ್​ಗಳನ್ನು ಹೊಂದಿರುವ ಈ ಜಾಗ ಇನಾಂ ಲ್ಯಾಂಡ್​​ ಆಗಿದ್ದು ಅದು ತನಗೆ ದಕ್ಕಬಾರದು ಎಂದೇ ಕಡತ ನಾಪತ್ತೆ ಆಗಿದೆ ಎಂದು ಸೃಷ್ಟಿಸಿದ್ದಾರೆ. 2020-21 ಆರ್​​ಐ ಮತ್ತು ವಿಎ ಇಬ್ಬರೂ ಈ ಕಡತಗಳನ್ನ ಪರಿಶೀಲನೆ ಮಾಡಿದ್ದಾರೆ. ಆ ಬಳಿಕ ಅವರೇ ಕದ್ದುಹೋಗಿದ್ದು, ಈಗ ಅದು ಕಳವಾಗಿದೆ ಎಂದು ತಹಶೀಲ್ದಾರ್​​ ಪೊಲೀಸ್​​ ದೂರು ನೀಡಿದ್ದಾರೆ. 5 ಎಕ್ರೆ 28 ಗುಂಟೆ ಜಮೀನಿಗೆ ಸೇರಿದ ದಾಖಲೆ ಅದಾಗಿದ್ದು, ನನಗೆ ಈ ಕಡತ ಯಾವ ಕಾರಣಕ್ಕೆ ಬೇಕು ಎಂಬುದನ್ನು ಕೂಡ ಅರ್ಜಿಯಲ್ಲಿ ತಿಳಿಸಿದ್ದೆ ಎಂಬುದಾಗಿ ಅವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

Source link

Ebola Virus Threat: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ!: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ – Kannada News | Global Ebola Alert: Africa Outbreak Sparks WHO Emergency Declaration, India Prepares

ದೆಹಲಿ, ಮೇ.21: ಜಗತ್ತು ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಈಗ ತಾನೇ ಹೊರ ಬಂದಿದೆ. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ‘ಎಬೋಲಾ ವೈರಸ್’ (Ebola Virus) ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು (PHEIC) ಘೋಷಿಸಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಸಹ ಮುನ್ನೆಚ್ಚರಿಕೆ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.

ಲಸಿಕೆ ಇಲ್ಲದ ಅಪರೂಪದ ತಳಿ; ಕೋವಿಡ್‌ನಂತೆ ಹರಡುವುದಿಲ್ಲ:

ಡಾ. ದಿವ್ಯಾ ಅವರ ಪ್ರಕಾರ, ಪ್ರಸ್ತುತ ಔಟ್‌ಬ್ರೇಕ್ (Outbreak) ಆಗಿರುವ ಎಬೋಲಾ ಬುಂಡಿಬುಗ್ಯೊ ತಳಿಗೆ ಯಾವುದೇ ಅಧಿಕೃತ ಲಸಿಕೆ (Vaccine) ಅಥವಾ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ (Mortality Rate) ಅತ್ಯಂತ ಹೆಚ್ಚಾಗಿದೆ. ಆದರೆ, ಇದು ಕೋವಿಡ್ ಮಹಾಮಾರಿಯಂತೆ ಗಾಳಿಯಲ್ಲಿ ಅತಿ ವೇಗವಾಗಿ ಪೆಂಡಾಮಿಕ್ (Pandemic) ಆಗುವ ಸಾಧ್ಯತೆ ತೀರಾ ಕಡಿಮೆ. ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ (Fruit Bats) ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ (Blood or Body Fluids) ನೇರ ಸಂಪರ್ಕ ಅಗತ್ಯವಾಗುತ್ತದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಠಿಣ ನಿಗಾ ಅಗತ್ಯ:

ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೆ, ರಿಸ್ಕ್ (Risk) ಹೆಚ್ಚಿರುವ ಕಾಂಗೋ, ಉಗಾಂಡ ಮತ್ತು ಇತರೆ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಸ್ಕ್ರೀನಿಂಗ್ (Screening at Airports) ನಡೆಸುವ ಜೊತೆಗೆ, ಅಗತ್ಯವಿದ್ದರೆ ಆಫ್ರಿಕಾ ಪ್ರವಾಸಿಗರಿಗೆ ಕ್ವಾರಂಟೈನ್ (Quarantine) ವ್ಯವಸ್ಥೆ ಮಾಡುವುದು ದೇಶದ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅವಶ್ಯಕವಾಗಿದೆ ಎಂದು ಡಾ. ದಿವ್ಯಾ ತಿಳಿಸಿದ್ದಾರೆ. ಸಾರ್ವಜನಿಕರು ಆಫ್ರಿಕಾ ದೇಶಗಳ ಪ್ರವಾಸದ ಬಗ್ಗೆ ಸದ್ಯಕ್ಕೆ ಎಚ್ಚರಿಕೆ ವಹಿಸುವುದು ಉತ್ತಮ.

ಇದನ್ನೂ ಓದಿ: ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆ: ವಚನಾನಂದ ಸ್ವಾಮೀಜಿಗೆ ಜೈಲಾ? ಬೇಲಾ? ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು

ಎಬೋಲಾ ವೈರಸ್‌ನ ಪ್ರಮುಖ ಲಕ್ಷಣಗಳು:

ಸೋಂಕು ತಗುಲಿದ ನಂತರ ಆರಂಭದಲ್ಲಿ ತೀವ್ರ ಜ್ವರ, ತಲೆನೋವು, ಮೈಕೈನೋವು, ವಾಂತಿ ಮತ್ತು ಭೇದಿ ಕಂಡುಬರುತ್ತದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಲಿವರ್ ಮತ್ತು ಶ್ವಾಸಕೋಶದ ವೈಫಲ್ಯ (Liver and Lungs Failure) ಸಂಭವಿಸಿ ಸಾವು ಸಂಭವಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಾಪಿಂಗ್​ಗೆ ಅಸಿಸ್ಟೆಂಟ್​ಗಳನ್ನು ಕೊಡುತ್ತೆ ಈ ಸ್ಟಾರ್ಟಪ್; ಲಗೇಜ್ ಹೊರೋದ್ರಿಂದ ಹಿಡಿದು, ಗಾಡಿ ಹತ್ತಿಸೋವರೆಗೂ ಎಲ್ಲಾ ನೆರವೂ ಕೊಡ್ತಾರಂತೆ – Kannada News | Carrymen startup hassle free shopping delhi bag carrier service

ನವದೆಹಲಿ, ಮೇ 20: ಶಾಪಿಂಗ್ ಎಂದ್ರೆ ಯಾವ ಮಹಿಳೆಗೆ ಇಷ್ಟವಿಲ್ಲ ಹೇಳಿ..! ಆದರೆ, ಬಹಳ ಮಂದಿ ಶಾಪರ್ಸ್​ಗೆ ಒಂದೇ ಪ್ರಮುಖ ತಲೆನೋವು. ಅದು ಲಗೇಜ್​ಗಳನ್ನು ಹೊತ್ತು ಶಾಪ್​ನಿಂದ ಶಾಪ್​ಗೆ ತಿರುಗೋದು. ಕೈಯಲ್ಲಿ ಐದಾರು ಬ್ಯಾಗ್​ಗಳನ್ನು ಇಟ್ಟುಕೊಂಡು ನಡೆದಾಡುವುದರಿಂದ ಶಾಪಿಂಗ್​ನ ಖುಷಿಯೇ ಬತ್ತಿಹೋಗಿರುತ್ತೆ ಹೆಂಗಳೆಯರಿಗೆ. ಆ ಮಹಿಳೆಯ ಜೊತೆ ಶಾಪಿಂಗ್​ಗೆ ಬರುವ ಆಕೆಯ ಗಂಡನಿಗೋ ಅಥವಾ ಮಗನಿಗೋ ಈ ಲಗೇಜುಗಳನ್ನು ಹೊರುವ ಕಷ್ಟ ಬರಬಹುದು. ಈ ಕಷ್ಟ ನೋಡಲಾಗದೆ ದಿಲ್ಲಿಯ ಸ್ಟಾರ್ಟಪ್​ವೊಂದು ಪರಿಹಾರ ಹುಡುಕಿದೆ. ಅದೇ ಶಾಪಿಂಗ್ ಅಸಿಸ್ಟೆಂಟ್ ಸೇವೆ. ಈ ಸ್ಟಾರ್ಟಪ್​ನ ಹೆಸರು ಕ್ಯಾರಿಮೆನ್ (CarryMen).

‘ನೀವು ಶಾಪಿಂಗ್ ಮಾಡಿ, ನಾವು ಹೊರೆ ಹೊರುತ್ತೇವೆ’. ಇದು ದೆಹಲಿಯ ಕ್ಯಾರಿಮೆನ್ ಸಂಸ್ಥೆಯ ಧ್ಯೇಯ ನುಡಿ. ಗಂಟೆಗೆ 149 ರೂ ಚಾರ್ಜ್ ಮಾಡಲಾಗುತ್ತದೆ. 2 ಗಂಟೆ, 3 ಗಂಟೆ, 4 ಗಂಟೆಯ ಪ್ಯಾಕೇಜ್​ಗಳಿವೆ. ತರಬೇತಿ ಪಡೆದ ಸಹಾಯಕರನ್ನು ಜೊತೆಗೆ ಕಳುಹಿಸಿಕೊಡಲಾಗುತ್ತದೆ.

ಈ ಸಹಾಯಕರು ಶಾಪಿಂಗ್ ಬ್ಯಾಗ್​ಗಳನ್ನು ಹೊತ್ತುಕೊಂಡು ಜೊತೆಯಲ್ಲಿ ಬರುತ್ತಾರೆ. ಶಾಪ್​ಗಳಿಗೆ ಕರೆದೊಯ್ಯುತ್ತಾರೆ. ಗ್ರಾಹಕರನ್ನು ಕುಳ್ಳಿರಿಸಿ ಆಹಾರದ ಕ್ಯೂಗಳಲ್ಲಿ ತಾವು ನಿಲ್ಲುತ್ತಾರೆ. ಶಾಪಿಂಗ್ ಮಧ್ಯೆ ಗ್ರಾಹಕರಿಗೆ ಕೂರಲು ಜಾಗದ ವ್ಯವಸ್ಥೆ ಮಾಡುತ್ತಾರೆ. ಕೂರುವ ಜಾಗ ಸಿಗದೇ ಹೋದರೆ ತಾವೇ ತಂದ ಫೋಲ್ಡಬಲ್ ಚೇರ್ ಅನ್ನು ಕೊಟ್ಟು ಕೂರಿಸಲು ಸಹಾಯವಾಗುತ್ತಾರೆ.

ಇದನ್ನೂ ಓದಿ: ಕೆಲಸ ಸಿಕ್ಕಿತೆಂದು ಖುಷಿಯಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ದೆಹಲಿಗೆ ಹೋದ್ರೆ ಅಲ್ಲಿ ಆಫೀಸೇ ಇರ್ಲಿಲ್ವಂತೆ

‘ಜನರಿಗೆ ಶಾಪಿಂಗ್ ಮಾಡುವುದೆಂದರೆ ಇಷ್ಟ. ಆದರೆ, ಅದರಿಂದ ದೈಹಿಕ ಆಯಾಸವೂ ಇರುತ್ತದೆ. ಜನರು ಶಾಪಿಂಗ್ ಬ್ಯಾಗ್ ಹೊರಲೂ ಆಗದೆ, ಕೈಯಲ್ಲಿರುವ ಮೋಮೋ ತಿನ್ನಲೂ ಆಗದೆ ಚಿಂತಿತರಾಗುವುದುಂಟು. ಶಾಪಿಂಗ್ ಬ್ಯಾಗ್​ಗಳ ಹೊರೆ ಬಿಟ್ಟು ಜನರು ಶಾಪಿಂಗ್​ನ ಆನಂದ ಅನುಭವಿಸಬೇಕೆಂಬುದು ನಮ್ಮ ಉದ್ದೇಶ’ ಎಂದು ಕ್ಯಾರಿಮೆನ್ ಸಂಸ್ಥೆ ಹೇಳುತ್ತದೆ.

ಗರ್ಭಿಣಿಯಾಗಿರುವವರು, ಸಣ್ಣ ಮಕ್ಕಳಿರುವವರು, ಜನಸಂದಣಿ ಇರುವ ಮಾರುಕಟ್ಟೆ ಪ್ರದೇಶಗಳಲ್ಲಿ ಶಾಪಿಂಗ್ ಮಾಡುವವರು, ಜೊತೆಗೆ ಸಾಮಾನು ಹೊರಲು ನೆರವಾಗಲು ಯಾರೂ ಇಲ್ಲದವರು, ಇಂಥವರಿಗೆ ಶಾಪಿಂಗ್ ಅಸಿಸ್ಟೆಂಟ್​ಗಳು ಬೇಕಾಗಬಹುದು. ಗಂಟೆ ಲೆಕ್ಕದಲ್ಲಿ ಶುಲ್ಕ ಪಡೆಯಲಾಗುತ್ತದೆ.

ಅಸಿಸ್ಟೆಂಟ್​​ಗೆ ಹೆಚ್ಚು ಭಾರ ಹೊರಿಸುವಂತಿಲ್ಲ

ಮೇಲೆ ಹೇಳಲಾದಂತೆ ಶಾಪಿಂಗ್ ಅಸಿಸ್ಟೆಂಟ್​ಗಳಿಗೆ ಗಂಟೆಯ ಲೆಕ್ಕದಲ್ಲಿ ಶುಲ್ಕ ಇರುತ್ತದೆ. ಗಂಟೆಗೆ 149 ರೂ ನಿಗದಿ ಮಾಡಲಾಗಿದೆ. ಆದರೆ, ಒಬ್ಬ ಸಹಾಯಕರು ಎಲ್ಲಾ ತೂಕವನ್ನೂ ಹೊರಲು ಆಗುವುದಿಲ್ಲ. ಒಬ್ಬ 12 ಕಿಲೋ ಮಾತ್ರ ಹೊರುವುದು. ಅದಕ್ಕಿಂತ ಹೆಚ್ಚಿನ ತೂಕದ ಶಾಪಿಂಗ್ ಬ್ಯಾಗ್ಗಳಿದ್ದರೆ ಮತ್ತೊಬ್ಬ ಅಸಿಸ್ಟೆಂಟ್ ಅನ್ನು ಬುಕ್ ಮಾಡಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ: ಮೊದಲಿಗೆ ವರ್ಕ್ ಫ್ರಂ ಹೋಮ್, ನಂತರ ಬೆಳ್ಳಂಬೆಳಗ್ಗೆ ಇಮೇಲ್ ಶಾಕ್; ಮೆಟಾದಲ್ಲಿ 8,000 ಮಂದಿಗೆ ಕೆಲಸದಿಂದ ಕೊಕ್

ದೆಹಲಿಯಲ್ಲಿ ಏಪ್ರಿಲ್ ತಿಂಗಳಲ್ಲಿ ಈ ಸ್ಟಾರ್ಟಪ್ ಆರಂಭವಾಗಿದೆ. ಮೊದಲ ತಿಂಗಳಲ್ಲೇ 50 ಬುಕಿಂಗ್ ಆಗಿದೆಯಂತೆ. ದೊಡ್ಡ ಪ್ರಚಾರ ಇಲ್ಲದೆ, ಸೋಷಿಯಲ್ ಮೀಡಿಯಾ ಹಾಗೂ ಬಾಯಿಯಿಂದ ಬಾಯಿಗೆ ಈ ಸ್ಟಾರ್ಟಪ್ ಸೇವೆ ಪ್ರಚಾರ ಪಡೆಯುತ್ತಿದೆಯಂತೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Tv9 Kannada News Live: ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆ: ವಚನಾನಂದ ಸ್ವಾಮೀಜಿಗೆ ಜೈಲಾ? ಬೇಲಾ? ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Today’s Top Karnataka Headlines: Rain Warning, Vachananda Case and Kusuma’s SSLC Success

ಬೆಂಗಳೂರು, ಮೇ.21: ಇಂದಿನಿಂದ ಮುಂದಿನ 4 ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪೋಕ್ಸೊ ಪ್ರಕರಣದ ಆರೋಪಿ ವಚನಾನಂದ ಸ್ವಾಮೀಜಿ ಜಾಮೀನು ರದ್ದತಿ ಅರ್ಜಿಯ ವಿಚಾರಣೆ ಮೇ 29 ರಂದು ದಾವಣಗೆರೆ ಕೋರ್ಟ್‌ನಲ್ಲಿ ನಡೆಯಲಿದೆ. ಬೆಳಗಾವಿಯ ನಿಪ್ಪಾಣಿಯ ಪಟ್ಟಣಕುಡಿಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದ ಆಶ್ರಯ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಗಲಾಟೆ ನಡೆದಿದೆ. ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಧೃತಿಗೆಡದೆ ಸ್ಟ್ರೇಚರ್ ಮೇಲೆಯೇ ಮಲಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಪ್ರಥಮ ದರ್ಜೆಯಲ್ಲಿ ಪಾಸಾದ ಕೋಲಾರದ ಕುಸುಮಾಳ ಸ್ಪೂರ್ತಿದಾಯಕ ಯಶೋಗಾಥೆ ಇಲ್ಲಿದೆ ನೋಡಿ.

ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆ:

ರಾಜ್ಯದ ಜನತೆಗೆ ಹವಾಮಾನ ಇಲಾಖೆ ಪ್ರಮುಖ ಮುನ್ಸೂಚನೆಯೊಂದನ್ನು ನೀಡಿದ್ದು, ಇಂದಿನಿಂದ (ಮೇ 21) ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗದಂತಹ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ವಚನಾನಂದ ಸ್ವಾಮೀಜಿಗೆ ಜೈಲಾ? ಬೇಲಾ? ಮೇ 29ಕ್ಕೆ ನಿರ್ಧಾರ:

ಪೋಕ್ಸೊ (POCSO) ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರ ಕಾನೂನು ಹೋರಾಟ ತೀವ್ರಗೊಂಡಿದೆ. ಪ್ರಕರಣ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಪಡೆದಿದ್ದ ಸ್ವಾಮೀಜಿಯ ಜಾಮೀನನ್ನು ರದ್ದುಗೊಳಿಸುವಂತೆ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯವು ಇದೇ ಮೇ 29 ರಂದು ಕೈಗೆತ್ತಿಕೊಳ್ಳಲಿದೆ.

ಶಾಸಕಿ ಶಶಿಕಲಾ ಜೊಲ್ಲೆ ಕಾರ್ಯಕ್ರಮಕ್ಕೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದಲ್ಲಿ ಆಶ್ರಯ ಯೋಜನೆಯ ಮನೆ ಹಂಚಿಕೆ ಕಾರ್ಯಕ್ರಮದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರಿ ಕಿತ್ತಾಟ ನಡೆದಿರುವ ಆಘಾತಕಾರಿ ಘಟನೆ ವರದಿಯಾಗಿದೆ. ನಿಪ್ಪಾಣಿ ತಾಲೂಕಿನ ಪಟ್ಟಣಕುಡಿ ಗ್ರಾಮದಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಲಾಟರಿ ಮೂಲಕ 950 ಮನೆಗಳನ್ನು ಹಂಚಿಕೆ ಮಾಡುವ ಅಧಿಕೃತ ಕಾರ್ಯಕ್ರಮವನ್ನು ಶಾಸಕಿ ಶಶಿಕಲಾ ಜೊಲ್ಲೆ ಹಮ್ಮಿಕೊಂಡಿದ್ದರು.

ಇದನ್ನೂ ಓದಿ: ‘ಸುಪ್ರೀಂ’ನಲ್ಲಿ ಇಂದು ನಿರ್ಧಾರವಾಗುತ್ತಾ ಶೃಂಗೇರಿ ಮರು ಮತ ಎಣಿಕೆ ಭವಿಷ್ಯ?: ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು

ಕುಸುಮಾಗೆ ಶಾಸಕಿ ರೂಪಕಲಾ ಬಂಪರ್ ಗಿಫ್ಟ್!

ಕೋಲಾರದ ಕುಸುಮಾ ದೃಢ ಸಂಕಲ್ಪದಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ದರ್ಜೆ ಗಳಿಸಿದ್ದಾರೆ. ಆಸ್ಪತ್ರೆಯಿಂದಲೇ ಪರೀಕ್ಷೆಗೆ ಬಂದ ಈಕೆಯ ಸಾಧನೆಗೆ ಶಾಸಕಿ ರೂಪಕಲಾ ಶಶಿಧರ್ ಸ್ಪಂದಿಸಿದ್ದಾರೆ. ಅವರಿಗೆ ವೈದ್ಯಕೀಯ ಹಾಗೂ ‘ಲೈಫ್ ಸೇವರ್’ ಸಹಯೋಗದೊಂದಿಗೆ ರೋಬೋಟಿಕ್ ಕೃತಕ ಕಾಲುಗಳನ್ನು ಜೋಡಿಸಲು ವ್ಯವಸ್ಥೆ ಮಾಡಿದ್ದಾರೆ. ಕುಸುಮಾಳ ಛಲ ಮತ್ತು ಶಾಸಕಿಯ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 10:57 am, Thu, 21 May 26

Source link

Video:ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ ಇನ್​ಸ್ಪೆಕ್ಟರ್ – Kannada News | Viral Video Puts Nagpur Police Under Scrutiny in Missing Girl Case

ನಾಗ್ಪುರ, ಮೇ 21: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ.

ಈ ದಿಗ್ಭ್ರಮೆಗೊಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಯಿತು. ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಈ ವಿಡಿಯೋವನ್ನು ಹಂಚಿಕೊಂಡು, ಇದು ವ್ಯವಸ್ಥೆಯ ಕುಸಿತ. ಗೃಹ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಪರಿಸ್ಥಿತಿ ಇರುವುದೇ? ಎಂದು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡುವ ಸರ್ಕಾರ, ತುರ್ತು ಸೇವೆಗಳಿಗೆ ಇಂಧನ ನೀಡುತ್ತಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಈ ಘಟನೆ ತೀವ್ರ ರಾಜಕೀಯ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಹಿರಿಯ ಅಧಿಕಾರಿಗಳು, ಬೇಜವಾಬ್ದಾರಿ ತೋರಿದ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರನ್ನು ತಕ್ಷಣವೇ ಕಂಟ್ರೋಲ್ ರೂಮ್‌ಗೆ ವರ್ಗಾಯಿಸಿ ತನಿಖೆಗೆ ಆದೇಶಿಸಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಗೆ ಹಣ ಕೊಡುತ್ತಿರುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link