Category Archives: Blog

Your blog category

‘ಧುರಂಧರ್’ ಸಿನಿಮಾ ಆಫರ್ ತಿರಸ್ಕರಿಸಿದರಾ ನಾಗಾರ್ಜುನ? – Kannada News | Did Dhurandhar’s Rehman Dakait character offered to Akkineni Nagarjuna first

ಬಾಲಿವುಡ್‌ನ ಇತ್ತೀಚಿನ ಬ್ಲಾಕ್‌ಬಸ್ಟರ್ ಸಿನಿಮಾ ‘ಧುರಂಧರ್’ (Dhurandhar) ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸವನ್ನೇ ಬರೆದಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಈ ಸಿನಿಮಾನಲ್ಲಿ ಅವರಷ್ಟೆ ಪ್ರಾಮುಖ್ಯತೆಯನ್ನು ಇತರೆ ಪಾತ್ರಗಳು ಸಹ ಪಡೆದುಕೊಂಡಿವೆ. ಅದರಲ್ಲೂ ರಹಮಾನ್ ಡಕೈತ್ ಪಾತ್ರವಂತೂ ಸೂಪರ್ ಹಿಟ್ ಆಗಿದೆ. ಪಾತ್ರದಲ್ಲಿ ನಟಿಸಿರುವ ಅಕ್ಷಯ್ ಖನ್ನಾ, ತಾವೇಕೆ ಬಾಲಿವುಡ್​ನ ಪ್ರತಿಭಾವಂತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದರೆ ಈ ಪಾತ್ರ ಮೊದಲಿಗೆ ದಕ್ಷಿಣದ ಸ್ಟಾರ್ ನಟನಿಗೆ ಆಫರ್ ಮಾಡಲಾಗಿತ್ತು ಎನ್ನಲಾಗುತ್ತಿದೆ. ತೆಲುಗಿನ ಸ್ಟಾರ್ ಹೀರೋ ಆಗಿರುವ ಅಕ್ಕಿನೇನಿ ನಾಗಾರ್ಜುನ ಅವರಿಗೆ ರಹಮಾನ್ ಡಕೈತ್ ಪಾತ್ರ ಆಫರ್ ಆಗಿತ್ತು, ಆದರೆ ಅವರು ಪಾತ್ರವನ್ನು ತಿರಸ್ಕರಿಸಿದರು ಎನ್ನಲಾಗುತ್ತಿದೆ. ಈಗ ಸ್ವತಃ ನಾಗಾರ್ಜುನ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ನಾಗಾರ್ಜುನ, ‘ಖಂಡಿತವಾಗಿಯೂ ಇಲ್ಲ, ನನಗೆ ಈ ಪಾತ್ರದ ಆಫರ್ ಬಂದಿರಲಿಲ್ಲ. ಆದರೆ ಅಂತಹ ಅದ್ಭುತ ಪಾತ್ರ ನನಗೆ ಸಿಗಬೇಕಿತ್ತು ಎಂದು ಈಗ ಅನಿಸುತ್ತಿದೆ. ‘ಧುರಂಧರ್’ ಒಂದು ಅದ್ಭುತ ಸಿನಿಮಾ. ನಿರ್ದೇಶಕ ಆದಿತ್ಯ ಧರ್ ಅವರ ಮೇಕಿಂಗ್ ಶೈಲಿ ನನಗೆ ತುಂಬಾ ಇಷ್ಟವಾಯಿತು. ಚಿತ್ರದಲ್ಲಿ ಪ್ರತಿಯೊಬ್ಬರೂ ಅದ್ಭುತವಾಗಿ ನಟಿಸಿದ್ದಾರೆ, ವಿಶೇಷವಾಗಿ ಅಕ್ಷಯ್ ಖನ್ನಾ ಅವರ ಅಭಿನಯ ಅದ್ಭುತವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮಗೆ ಆಫರ್ ಬಂದಿಲ್ಲ ಎಂಬ ವಿಷಯವನ್ನು ಸ್ಪಷ್ಟಪಡಿಸಿ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ನಾಗಾರ್ಜುನ ಅವರು ಕೆಲ ತಿಂಗಳ ಹಿಂದೆ ಬಿಡುಗಡೆ ಆದ ‘ಕೂಲಿ’ ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾ ದೊಡ್ಡ ಹಿಟ್ ಆಗದೇ ಇದ್ದರೂ ಸಹ ನಾಗಾರ್ಜುನ ಅವರು ಹೊಸ ಪ್ರಯೋಗಕ್ಕೆ ತಮ್ಮನ್ನು ಒಗ್ಗಿಸಿಕೊಂಡಿದ್ದು ಪ್ರಶಂಸೆಗೆ ಕಾರಣವಾಯ್ತು. ಇದೇ ಕಾರಣಕ್ಕೆ ಈಗ ‘ಧುರಂಧರ್’ ಸಿನಿಮಾದ ನೆಗೆಟಿವ್ ರೋಲ್ ಆಫರ್ ಸಹ ಬಂದಿರಬಹುದು ಎಂದು ನೆಟ್ಟಿಗರು ಊಹೆ ಮಾಡಿ ಸುದ್ದಿ ಹಬ್ಬಿಸಿದ್ದರು. ಆದರೆ ಅದನ್ನು ನಾಗಾರ್ಜುನ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ತಾವು ಅಂಥಹಾ ಪಾತ್ರದಲ್ಲಿ ನಟಿಸಲು ಸಿದ್ದ ಎಂದು ಪರೋಕ್ಷವಾಗಿ ಹೇಳಿದ್ದಾರೆ. ನಾಗಾರ್ಜುನ ಅವರು ಇತ್ತೀಚೆಗೆ ವಿಲನ್ ಪಾತ್ರ, ಪ್ರಮುಖ ಪೋಷಕ ಪಾತ್ರಗಳಲ್ಲಿ ಸಹ ನಟಿಸುತ್ತಿದ್ದಾರೆ ಧನುಶ್ ನಾಯಕನಾಗಿ ನಟಿಸಿದ್ದ ‘ಕುಬೇರ’ ಸಿನಿಮಾನಲ್ಲಿಯೂ ನಾಗಾರ್ಜುನ ಪ್ರಮುಖ ಪೋಷಕ ಪಾತ್ರದಲ್ಲಿ ನಟಿಸಿದ್ದರು.

ಇದನ್ನೂ ಓದಿ:‘ಧುರಂಧರ್ 2’ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ‘ಟಾಕ್ಸಿಕ್’

ಇದೀಗ ನಾಗಾರ್ಜುನ ಅವರು ವೃತ್ತಿಜೀವನದ 100ನೇ ಸಿನಿಮಾನಲ್ಲಿ ನಟಿಸಲು ತಯಾರಿ ನಡೆಸಿದ್ದಾರೆ. ಇದನ್ನು ಆರ್‌ ಕಾರ್ತಿಕ್ ನಿರ್ದೇಶಿಸುತ್ತಿದ್ದು, ಈ ಚಿತ್ರದಲ್ಲಿ ನಟಿ ಟಬು ಕೂಡ ನಟಿಸುವ ಸಾಧ್ಯತೆ ಇದೆ. ಸಿನಿಮಾಕ್ಕೆ ‘ಲಾಟರಿ ಕಿಂಗ್’ ಎಂದು ಹೆಸರಿಡಲಾಗಿದೆ. ಸಿನಿಮಾವನ್ನು ನಾಗಾರ್ಜುನ ಅವರ ಅನ್ನಪೂರ್ಣ ಸ್ಟುಡಿಯೋಸ್​​ ವತಿಯಿಂದಲೇ ನಿರ್ಮಾಣ ಮಾಡಲಾಗುತ್ತಿದೆ. ಇನ್ನು ಮುಂದಿನ ವರ್ಷದ ಸಂಕ್ರಾಂತಿಗೆ ತಮ್ಮ ನಟನೆಯ ಸಿನಿಮಾ ಬಿಡುಗಡೆ ಮಾಡುವುದಾಗಿ ಈಗಾಗಲೇ ನಾಗಾರ್ಜುನ ಘೋಷಣೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಣಜಿ ಟ್ರೋಫಿ ಸೆಮಿಫೈನಲ್​ನಲ್ಲಿ 141 ರನ್ ಚಚ್ಚಿದ ರಾಹುಲ್ – Kannada News | KL Rahul’s Century Powers Karnataka in Ranji Semifinal vs Uttarakhand

ಕರ್ನಾಟಕ ಹಾಗೂ ಉತ್ತರಾಖಂಡ ನಡುವಿನ 2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ ಪಂದ್ಯ ಇಂದಿನಿಂದ ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ, ಕರ್ನಾಟಕವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಆರಂಭಿಸಿದ ಕರ್ನಾಟಕ ತಂಡವು ಕಳಪೆ ಆರಂಭ ಪಡೆದುಕೊಂಡಿತು. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 5 ರನ್‌ಗಳಿಸಿ ಔಟಾದರು. ಆದಾಗ್ಯೂ, ಆ ಬಳಿಕ ಜೊತೆಯಾದ ನಾಯಕ ದೇವದತ್ ಪಡಿಕ್ಕಲ್ ಹಾಗೂ ರಾಹುಲ್ 200 ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನಡೆಸಿದರು. ಇದೇ ವೇಳೆ ರಾಹುಲ್ ತಮ್ಮ 25 ನೇ ಪ್ರಥಮ ದರ್ಜೆ ಶತಕವನ್ನು ಪೂರೈಸಿದರು.

ರಾಹುಲ್ 153 ಎಸೆತಗಳಲ್ಲಿ ರಣಜಿಯಲ್ಲಿ ಸತತ ಎರಡನೇ ಶತಕ ಬಾರಿಸಿದರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ವಿರುದ್ಧ ಗೆಲುವಿನ ಶತಕ ಬಾರಿಸಿದ್ದ ರಾಹುಲ್ ಸೆಮಿಫೈನಲ್​ನಲ್ಲಿ ಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಹೊರತಂದರು. ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 211 ಎಸೆತಗಳನ್ನು ಎದುರಿಸಿದ ರಾಹುಲ್ 11 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 141 ರನ್ ಬಾರಿಸಿದರು.

ರಣಜಿ ಟ್ರೋಫಿಯಲ್ಲಿ ಕೆಎಲ್ ರಾಹುಲ್ ಅವರ ಪ್ರದರ್ಶನ ಅದ್ಭುತವಾಗಿದೆ. ಮೇಲೆ ಹೇಳಿದಂತೆ ಕ್ವಾರ್ಟರ್ ಫೈನಲ್‌ನಲ್ಲಿ, ಮುಂಬೈ ವಿರುದ್ಧದ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಶತಕದೊಂದಿಗೆ ಕರ್ನಾಟಕವನ್ನು ಗೆಲುವಿನತ್ತ ಕೊಂಡೊಯ್ದರು. ಮುಂಬೈ ನೀಡಿದ 325 ರನ್‌ಗಳ ಗುರಿ ಬೆನ್ನಟ್ಟಿದ ಕರ್ನಾಟಕ ಪರ ಕೆಎಲ್ ರಾಹುಲ್ 182 ಎಸೆತಗಳಲ್ಲಿ 130 ರನ್ ಗಳಿಸುವ ಮೂಲಕ ತಮ್ಮ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಅದಕ್ಕೂ ಮೊದಲು ಕೆಎಲ್ ರಾಹುಲ್ ಪಂಜಾಬ್ ವಿರುದ್ಧವೂ ಅರ್ಧಶತಕ ಸಿಡಿಸಿದ್ದರು. ಇದರರ್ಥ ರಾಹುಲ್ ಆಡಿರುವ ಮೂರು ರಣಜಿ ಟ್ರೋಫಿ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಉಚಿತವಾಗಿ ಪಡೆಯುವ ವಸ್ತುಗಳು ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತೆ ಗೊತ್ತಾ? – Kannada News | Chanakya Niti: Do you know how free things weaken a person?

ಪುಕ್ಕಟ್ಟೆ ಏನಾದ್ರೂ ಸಿಗುತ್ತೆ ಅಂದ್ರೆ ಅದನ್ನು ಪಡೆಯಲು ಜನ ನಾಮುಂದು ತಾ ಮುಂದು ಅಂತ ಧಾವಿಸ್ತಾರೆ. ಈ ರೀತಿ ಉಚಿತವಾಗಿ ಪಡೆಯುವುದು ಮನಸ್ಸಿಗೆ ಖುಷಿಯನ್ನು ನೀಡಬಹುದು, ಆದ್ರೆ ಇದು ವ್ಯಕ್ತಿಯನ್ನು ಕ್ರಮೇಣ ದುರ್ಬಲಗೊಳಿಸುತ್ತದೆ ಎಂದು ಆಚಾರ್ಯ ಚಾಣಕ್ಯರು (Acharya Chanakya) ಎಚ್ಚರಿಕೆ ನೀಡಿದ್ದಾರೆ. ಉಚಿತವಾಗಿ ಏನಾದ್ರೂ ಸಿಗುತ್ತಿದೆ ಅಂದ್ರೆ ಅದನ್ನು ಪಡೆಯುವುದರಲ್ಲಿ ತಪ್ಪೇನಿದೆ ಎಂದು ಹಲವರು ಭಾವಿಸಬಹುದು ಆದ್ರೆ ಉಚಿತವಾಗಿ ಪಡೆಯುವ ಏನಾದರೂ ಸರಿ ಅದು ಮನುಷ್ಯನ ಸ್ವಾಭಿಮಾನಕ್ಕೆ ಹಾನಿಯುಂಟು ಮಾಡುತ್ತದೆ ಎಂದಿದ್ದಾರೆ. ಹಾಗಿದ್ರೆ ಉಚಿತವಾಗಿ ಲಭಿಸುವ ಸಂಗತಿಗಳು ಮನಷ್ಯನಿಗೆ ಯಾವೆಲ್ಲಾ ರೀತಿಯಲ್ಲಿ ಹಾನಿ ಮಾಡುತ್ತವೆ ಎಂಬುದನ್ನು ತಿಳಿಯೋಣ ಬನ್ನಿ.

ಪ್ರತಿಯೊಂದು ಉಚಿತವಾಗಿ ಲಭಿಸಿದರೆ ಏನಾಗುತ್ತೆ ಗೊತ್ತಾ?

ಕಠಿಣ ಪರಿಶ್ರಮದ ಅಭ್ಯಾಸ ಕೊನೆಗೊಳ್ಳುತ್ತದೆ: ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಶ್ರಮವಿಲ್ಲದೆ ಏನನ್ನಾದರೂ ಪಡೆದಾಗ, ಅವನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮರೆತುಬಿಡುತ್ತಾನೆ, ಪ್ರತಿಯೊಂದು ಸುಲಭವಾಗಿ ಖರ್ಚಿಲ್ಲದೆ ದಕ್ಕಬೇಕು ಎಂದು ಬಯಸುತ್ತಾನೆ.  ಕಠಿಣ ಪರಿಶ್ರಮದ ಮೂಲಕ ಏನನ್ನಾದರೂ ಗಳಿಸಿದಾಗ ಮಾತ್ರ ಮನುಷ್ಯ ಬಲಶಾಲಿಯಾಗಲು ಸಾಧ್ಯ, ಅದೇ ಉಚಿತವಾಗಿ ಸಿಗುವ ಭಾಗ್ಯಗಳು ಆತನನ್ನು ಸೋಮಾರಿ ಮತ್ತು ದುರ್ಬಲನನ್ನಾಗಿ ಮಾಡುತ್ತವೆ.

ಸ್ವಾಭಿಮಾನಕ್ಕೆ ಹಾನಿ: ಚಾಣಕ್ಯ ನೀತಿಯ ಪ್ರಕಾರ, ನೀವು ಪದೇ ಪದೇ ಯಾವುದೇ ವಸ್ತು, ಸಂಗತಿಯನ್ನಾದರೂ ಉಚಿತವಾಗಿ ಸ್ವೀಕರಿಸಿದರೆ, ನಿಮ್ಮ ಸ್ವಾಭಿಮಾನ ಕ್ರಮೇಣ ಕುಸಿಯುತ್ತದೆ. ಪ್ರತಿಯೊಂದನ್ನೂ ಉಚಿತವಾಗಿ ಸಿಗಬೇಕೆಂದು ಬಯಸುವ ಜನರು ಇತರರನ್ನು ಅವಲಂಬಿಸುವ ಅಭ್ಯಾಸವನ್ನು ಬೆಳೆಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಗಳು ಜೀವನದಲ್ಲಿ ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಮತ್ತು ನಿರಂತರವಾಗಿ ಇತರರಿಂದ ಬೆಂಬಲವನ್ನು ಬಯಸುತ್ತಾರೆ. ಕೊನೆಗೆ ಇದು ಅವರ  ವ್ಯಕ್ತಿತ್ವವನ್ನೇ ದುರ್ಬಲಗೊಳಿಸುತ್ತದೆ, ಸ್ವಾಭಿಮಾನವನ್ನೇ ಕಸಿದುಕೊಳ್ಳುತ್ತದೆ.

ದುರಾಸೆಗೆ ಕಾರಣವಾಗುತ್ತದೆ: ಚಾಣಕ್ಯ ನೀತಿಯ ಪ್ರಕಾರ, ನೀವು ಪ್ರತಿಯೊಂದನ್ನೂ ಉಚಿತವಾಗಿ ಪಡೆಯಲು ಪ್ರಾರಂಭಿಸಿದಾಗ, ದುರಾಸೆ ನಿಮ್ಮೊಳಗೆ ಹುಟ್ಟುತ್ತದೆ. ನೀವು ಎಲ್ಲವನ್ನೂ ಉಚಿತವಾಗಿಯೇ ಸಿಗಬೇಕೆಂದು ಬಯಸುವ ಅಭ್ಯಾಸವನ್ನು ಬೆಳೆಸಿಕೊಳ್ಳುತ್ತೀರಿ. ಯಾವುದೇ ಪ್ರಯತ್ನ, ಪರಿಶ್ರಮವಿಲ್ಲದೆ ಎಲ್ಲವೂ ಸಲುಭವಾಗಿ ದಕ್ಕಬೇಕು ಎಂದು ಬಯಸುತ್ತೀರಿ. ಚಾಣಕ್ಯರ ಪ್ರಕಾರ, ದುರಾಸೆಯು ವ್ಯಕ್ತಿಯ ದೊಡ್ಡ ಶತ್ರು. ದುರಾಸೆಯು ನಿಮ್ಮೊಳಗೆ ಬೆಳೆದಾಗ, ಅದು ವಂಚನೆ ಮತ್ತು ತಪ್ಪು ನಿರ್ಧಾರಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಸಂಗತಿಗಳು

ಮೌಲ್ಯವನ್ನು ಕಳೆದುಕೊಳ್ಳಬೇಕಾಗುತ್ತದೆ: ನೀವು ಎಲ್ಲವನ್ನೂ ಉಚಿತವಾಗಿ ಪಡೆಯಲು ಪ್ರಾರಂಭಿಸಿದಾಗ, ನೀವು ಮೌಲ್ಯವನ್ನು ಕಳೆದುಕೊಳ್ಳುತ್ತೀರಿ. ಕಷ್ಟಪಟ್ಟು ಸಂಪಾದಿಸಿದ ವಸ್ತುಗಳು ಮೌಲ್ಯಯುತವಾಗುತ್ತವೆ, ಅದೇ  ಏನನ್ನಾದರೂ ಉಚಿತವಾಗಿ ಪಡೆದಾಗ ನೀವು ಅವುಗಳನ್ನು ಬೇಗನೆ ವ್ಯರ್ಥ ಮಾಡುತ್ತೀರಿ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅಲ್ಲದೆ ಇದರಿಂದ ನಿಮ್ಮ ಮೌಲ್ಯವೂ ಕುಂಠಿತಗೊಳ್ಳುತ್ತದೆ.

ಯಶಸ್ಸಿನ ಹಾದಿಯಲ್ಲಿ ಅಡೆತಡೆಗಳು ಎದುರಾಗಬಹುದು:  ಚಾಣಕ್ಯ ನೀತಿಯ ಪ್ರಕಾರ, ಪ್ರತಿಯೊಂದು ಉಚಿತವಾಗಿ ಸಿಗಬೇಕೆಂದು ಬಯಸುವವರು ಜೀವನದಲ್ಲಿ ಎಂದಿಗೂ ಪ್ರಗತಿ ಹೊಂದುವುದಿಲ್ಲ. ಅಂತಹ ಜನರಿಗೆ ಹೋರಾಟ ಮತ್ತು ಕಠಿಣ ಪರಿಶ್ರಮದ ಒಂದು ಚೂರು ಕಲ್ಪನೆಯೇ ಇರುವುದಿಲ್ಲ, ಹೋರಾಟದ ಸಂದರ್ಭ ಬಂದಾಗ ಅವರು ಅಂತಹ ಪರಿಸ್ಥಿತಿಯನ್ನು ನಿಭಾಯಿಸಲು ಸಹ ಸಾಧ್ಯವಾಗುವುದಿಲ್ಲ, ಕೊನೆಗೆ ಅವರು ಜೀವನದಲ್ಲಿ ಸೋತು ಬಿಡುತ್ತಾರೆ. ಅದೇ ಕಷ್ಟಪಟ್ಟು ದುಡಿಯುವ ವ್ಯಕ್ತಿಯು ಪ್ರತಿಯೊಂದು ಪರಿಸ್ಥಿತಿಯಲ್ಲೂ ತನ್ನನ್ನು ತಾನು ನಿಭಾಯಿಸಿಕೊಂಡು, ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿಯಲ್ಲಿ 400 ಕೋಟಿ ರೂ ದರೋಡೆ ಕೇಸ್​​ಗೆ ಟ್ವಿಸ್ಟ್​​​​​: SIT ವಿರುದ್ಧವೇ ಸ್ಫೋಟಕ ಆರೋಪ – Kannada News | 400 Cr Karnataka Goa Border Robbery: Sandeep Patil Demands Belagavi FIR, Doubts SIT Probe

400 ಕೋಟಿ ದರೋಡೆ ಪ್ರಕರಣImage Credit source: tv9 kannada

ಬೆಳಗಾವಿ, ಫೆಬ್ರವರಿ 15: ಕರ್ನಾಟಕ, ಗೋವಾ, ಮಹಾರಾಷ್ಟ್ರದಲ್ಲಿ ನಡೆದಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣ (400 crore robbery case) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದೇಶವನ್ನೇ ದಂಗಾಗಿಸಿದ ಈ ದರೋಡೆ ನಡೆದು ದಿನಗಳು ಉರುಳಿದರು ಈವರೆಗೆ ಕಂಟೇನರ್​ಗಳು ಹೋಗಿದ್ದೆಲ್ಲಿಗೆ? ಕಂಟೇನರ್​ನಲ್ಲಿದ್ದ ಹಣ ಎಲ್ಲಿದೆ ಅನ್ನೋದು ರಿವೀಲ್ ಆಗಿಲ್ಲ. ಹೀಗಿರುವಾಗ ದೂರುದಾರ ಸಂದೀಪ್ ಪಾಟೀಲ್​​ ಬೆಳಗಾವಿ ಎಸ್​ಪಿ ಕೆ.ರಾಮರಾಜನ್​ಗೆ ಪತ್ರ ಬರೆಯುವ ಮೂಲಕ ಎಫ್ಐಆರ್ (FIR) ದಾಖಲಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ ಎಸ್​ಪಿ ಕೆ.ರಾಮರಾಜನ್​ಗೆ ಪತ್ರ ಬರೆದಿರುವ 400 ಕೋಟಿ ದರೋಡೆ ಪ್ರಕರಣದ ದೂರುದಾರ ಸಂದೀಪ್ ಪಾಟೀಲ್​​, ಮಹಾರಾಷ್ಟ್ರ ಎಸ್ಐಟಿ ಪೊಲೀಸರಿಂದ ಪಾರದರ್ಶಕ ತನಿಖೆ ಆಗುತ್ತಿಲ್ಲ. ಘಟನೆ ಸಂಬಂಧ ಆಡಿಯೋ ದಾಖಲೆಗಳು ನನ್ನ ಬಳಿ ಇವೆ. ಅವುಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಎಸ್ಐಟಿ ತಂಡದ ವಿರುದ್ಧವೇ ದೂರು ನೀಡಿರುವ ಸಂದೀಪ್ ಪಾಟೀಲ್

ಇನ್ನು ಪ್ರಕರಣ ಸಂಬಂಧ 8 ಆರೋಪಿಗಳನ್ನು ಮಹಾರಾಷ್ಟ್ರ ಎಸ್​​ಐಟಿ ಬಂಧಿಸಿದೆ. ಆದರೆ ಮಹಾರಾಷ್ಟ್ರ ಪೊಲೀಸರ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸಂದೀಪ್, ಈಗಾಗಲೇ ಎಸ್ಐಟಿ ಮತ್ತು ಪೊಲೀಸ್​​ ಮಹಾನಿರ್ದೇಶಕರ ವಿರುದ್ಧ ಮಹಾರಾಷ್ಟ್ರ ಪೊಲೀಸ್​​ ಮಹಾನಿರ್ದೇಶಕರ ವಿರುದ್ಧ ಹೈಕೋರ್ಟ್​​ಗೆ ದೂರು ನೀಡಿದ್ದಾರೆ. ಆ ಮೂಲಕ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆದಿರುವ ಬಗ್ಗೆ ಸಂದೀಪ್ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಮೂರು ರಾಜ್ಯಗಳ ಗಡಿಯಿರುವ ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ ದರೋಡೆ ಇತ್ತೀಚೆಗೆ ನಡೆದಿತ್ತು. 2 ಸಾವಿರ ಮುಖಬೆಲೆಯ ನೋಟುಗಳು ರದ್ದಾದ ಹಿನ್ನೆಲೆಯಲ್ಲಿ ಎಕ್ಸ್‌ಚೇಂಜ್ ಮಾಡಲು ತೆಗೆದುಕೊಂಡು ಹೋಗಲಾಗ್ತಿತ್ತು ಎನ್ನಲಾಗಿತ್ತು. ದೂರುದಾರ ಸಂದೀಪ್ ಪಾಟೀಲ್​ನಿಂದ ಈ ರಾಬರಿ ಕೇಸ್​ನ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅನ್ನೋದು ಗೊತ್ತಾಗಿತ್ತು.

ಇದನ್ನೂ ಓದಿ: 400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್? ಕರ್ನಾಟಕದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್ ಪಾಟೀಲ್

ಈ ಸಂದೀಪ್ ಪಾಟೀಲ್, ಇದೇ ಕಿಶೋರ್​ನ ಆಪ್ತ. 400 ಕೋಟಿ ರೂ ದರೋಡೆಯಾಗಿದ್ದು ತಿಳೀತಿದ್ದಂತೆಯೇ ಸಂದೀಪ್​ನನ್ನು ಅಪಹರಿಸಿ, 400 ಕೋಟಿ ರೂ ಹಣ ಎಲ್ಲಿಟ್ಟಿದ್ದೀಯಾ? ಕಂಟೇನರ್​ಗಳು ಎಲ್ಲಿವೆ? ಹೀಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿ ಸಂದೀಪ್​ಗೆ ಕಿಶೋರ್ ಗ್ಯಾಂಗ್ ಚಿತ್ರಹಿಂಸೆ ನೀಡಿತ್ತು. ಹೀಗೆ ಹಿಂಸೆಗೊಳಗಾಗಿದ್ದ ಸಂದೀಪ್, ಕಿಡ್ನ್ಯಾಪರ್ಸ್​ನಿಂದ ತಪ್ಪಿಸಿಕೊಂಡು ಬಂದು ನಾಸೀಕ್ ಠಾಣೆಗೆ ದೂರು ನೀಡಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಇತ್ತ ಪೊಲೀಸರ ಪರದಾಟ, ಅತ್ತ ಪರಪುರುಷನ ಜೊತೆ ಆಟ: ಆಂಟಿಯ ಮತ್ತಷ್ಟು ನೌಟಂಕಿ ಆಟ ಬಯಲು – Kannada News | Tumakuru lady Missing Lady Found With Boy friend: here Is Kunigal Priyanka case Timeline

ಹಾಸನ/ತುಮಕೂರು, (ಫೆಬ್ರವರಿ 15): ಕುಣಿಗಲ್​​ ಮೂಲದ ಪ್ರಿಯಾಂಕಾ ಮಿಸ್ಸಿಂಗ್ (Priyanka Missing Case) ಕಹಾನಿ ರೋಚಕ ತಿರುವು ಪಡೆದುಕೊಂಡಿದೆ. ಮದ್ವೆಗೆಂದು ಹಾಸನದ ಬೇಲೂರಿಗೆ ಬಂದಿದ್ದ ಪ್ರಿಯಾಂಕಾ, ಆತ್ಮಹತ್ಯೆ ಎಂದು ಬಿಂಬಿಸಿ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಕೆರೆ ಬಳಿ ಬಟ್ಟೆ, ಬ್ಯಾಗ್, ಚಪ್ಪಲಿ ಪತ್ತೆಯಾಗಿತ್ತು. ಇದರಿಂದ ಮುಳುಗುತಜ್ಞರನ್ನು ಕರೆಸಿ ಕೆರೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಕೆರೆಯ ಪರಶೀಲನೆ ನಡೆಸಿದ್ದರು. ಆದ್ರೆ, ಅತ್ಯಾಚಾರವೂ ಇಲ್ಲ, ಕೊಲೆಯೂ ಅಲ್ಲ, ಮಳ್ಳಿಯ ಬೃಹನ್ನಾಟಕ ಬಯಲಾಗಿದೆ. ಪೊಲೀಸರು ಪ್ರಿಯಾಂಕಾಳ ಪತ್ತೆಗೆ ಪರದಾಡುತ್ತಿದ್ದರೆ, ಮತ್ತೊಂದೆಡೆ ಪ್ರಿಯಾಂಕಾ ಪರಪುರುಷನ ಜೊತೆ ಆಯಾಗಿದ್ದಳು. ಅಸಲಿಗೆ ಗಂಡನನ್ನು ಬಿಟ್ಟು ಪ್ರಿಯಕರ ಡೇವಿಡ್ ಜತೆ ಸಂಸಾರ ಮಾಡಲು ನಿರ್ಧರಿಸಿದ್ದಳು. ಹೀಗಾಗಿ ಈ ಎಲ್ಲಾ ಹೈಡ್ರಾಮಾ ಮಾಡಿದ್ದಾಳೆ ಎನ್ನುವ ಸ್ಫೋಟಕ ಅಂಶ ಬಯಲಿಗೆ ಬಂದಿದೆ.

ನಾಪತ್ತೆ ಸೀನ್‌ ಕ್ರಿಯೇಟ್ ಮಾಡಿದ್ದ ಪ್ರಿಯಾಂಕಾ

ಪ್ರಿಯಾಂಕಾ ಅನ್ನೋ ಈ ಮಹಿಳೆ ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಯಲಿಯೂರು ಗ್ರಾಮದಿಂದ ಚಿಕ್ಕಮಗಳೂರಿಗೆ ಚಿಕ್ಕಮ್ಮನ ಮಗಳ ಮದುವೆಗೆಂದು ಬಂದಿದ್ದಳು. ಮೈಮೇಲೆ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವಿತ್ತು. ಮದ್ವೆ ಮುಗಿಸಿಕೊಂಡು ತವರು ಮನೆಯಿದ್ದ ಹಾಸನದ ಬೇಲೂರಿಗೆ ಹೋಗಿದ್ದಳು. ಅಲ್ಲಿ ತಾಯಿ ಜೊತೆ ಮಾತಾಡಿಕೊಂಡು ಸೀರೆ ಬದಲಿಸಿ ಟಾಪ್ ಹಾಕಿಕೊಂಡಿದ್ದಳು. ಆದ್ರೆ ವಾಪಸ್ ಊರಿನ ಬಸ್ ಹತ್ತಿದ್ದವಳು ದಿಢೀರ್ ನಾಪತ್ತೆಯಾಗಿದ್ದಳು. ನನ್ನ ಹೆಂಡ್ತಿ ಪ್ರಿಯಾಂಕಾ ಎಲ್ಲಿ ಹೋದ್ಲಪ್ಪ ಅಂತಾ ಗಂಡ ತಲೆಕೆಡಿಸಿಕೊಂಡಿದ್ದ. ಸಂಬಂಧಿಕರು ಪೊಲೀಸರಿಗೆ ದೂರು ಕೊಟ್ಟು ಸರಿಯಾಗಿ ತನಿಖೆ ಮಾಡ್ತಿಲ್ಲ ಅಂತಾ ಗಲಾಟೆ ಮಾಡಿದ್ರು. ನಂತರ ಹಾಸನದ ಹೆದ್ದಾರಿ ಬದಿಯಲ್ಲಿರೋ ಕಲ್ಕೆರೆ ಬಳಿ ಈಕೆಯ ಆಧಾರ್‌ ಕಾರ್ಡ್‌ ಸಿಕ್ಕಿತ್ತು. ಕೆರೆಯ ಸುತ್ತಮುತ್ತ ಹುಡುಕಾಡಿದಾಗ ಚಪ್ಪಲಿ, ವ್ಯಾನಿಟಿ ಬ್ಯಾಗ್, ಒಳಉಡುಪು ಸಿಕ್ಕಿತ್ತು. ಹೀಗಾಗಿ ಪ್ರಿಯಾಂಕಾ ಹಾಕಿದ್ದ 20 ರೂ. ಲಕ್ಷದ ಚಿನ್ನಾಭರಣಗಳಿಗಾಗಿ ಯಾರಾದ್ರೂ ಕೊಲೆಮಾಡಿದ್ರಾ? ಇಲ್ಲ ಅತ್ಯಾಚಾರ ಮಾಡಿ ಕೆರೆಯಲ್ಲಿ ಶವ ಬೀಸಾಡಿದ್ರಾ. ಹೀಗೆ ನಾನಾ ಅನುಮಾನಗಳು ಪೊಲೀಸರ ತಲೆಹೊಕ್ಕಿತ್ತು. ಈಕೆಯ ಪತಿರಾಯ ಮತ್ತು ಮನೆಯವರೆಲ್ಲ ಏನಾಯ್ತೋ ಎಂದು ಆತಂಕದಲ್ಲಿದ್ದರು.

ಇದನ್ನೂ ನೋಡಿ; ಮದ್ವೆಗೆಂದು ಹೋಗಿ ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP

ಶವಕ್ಕಾಗಿ ರಾತ್ರಿವರೆಗೂ ಹುಡುಕಿದ್ದ ಮುಳುಗು ತಜ್ಞರ ತಂಡ!

ನಿಗೂಢವಾಗಿದ್ದ ಮಹಿಳೆ ಪ್ರಿಯಾಂಕಾ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಫುಲ್ ತಲೆಕೆಡಿಸಿಕೊಂಡಿದ್ದು, ಅಗ್ನಿಶಾಮಕ ದಳದವರು, ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ನಿನ್ನೆ ರಾತ್ರಿವರೆಗೂ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದ್ರೆ ಎಷ್ಟು ಹುಡುಕಿದ್ರೆ ಏನು ಪ್ರಯೋಜನ. ಯಾಕಂದ್ರೆ ಏನಾಗಿಹೋದ್ಲೋ ಅಂದುಕೊಂಡಿದ್ದ ಪ್ರಿಯಾಂಕಾ ದೊಡ್ಡ ಡ್ರಾಮಾವನ್ನೇ ಮಾಡಿಬಿಟ್ಟಿದ್ದಳು. ಪ್ರಿಯಾಂಕಾಳ ತಾಯಿ ಹುಷಾರಾಗಿ ಹೋಗಿ ಬಾ ಮಗಳೇ ಎಂದು ಹಾಸನದ ಬೇಲೂರಿನಿಂದ ಬಸ್‌ಹತ್ತಿಸಿ ಕಳಿಸಿದ್ದಳು. ಆದ್ರೆ ಮುಂದಿನ ಸ್ಟಾಪ್‌ನಲ್ಲಿ ಬಸ್‌ನಿಂದ ಇಳಿದಿದ್ದ ಪ್ರಿಯಾಂಕಾ ತನ್ನ ಸ್ನೇಹಿತ ಡೇವಿಡ್‌ನ ಬೈಕ್ ಹತ್ತಿದ್ದಳು. ಸ್ವಲ್ಪದೂರ ಹೋಗಿ ರಾತ್ರಿ ವೇಳೆ ಬಟ್ಟೆ ಬದಲಿಸಿಕೊಂಡಿದ್ದ ಪ್ರಿಯಾಂಕಾ, ನಾಪತ್ತೆ ಸೀನ್ ಕ್ರಿಯೇಟ್ ಮಾಡುವ ಸಲುವಾಗಿ ಹೆದ್ದಾರಿ ಬದಿ ಒಂದ್ಕಡೆ ಆಧಾರ್ ಕಾರ್ಡ್ ಬಿಸಾಕಿದ್ರೆ, ಮತ್ತೊಂದ್ಕಡೆ ಚಪ್ಪಲಿ, ಇನ್ನೊಂದಡೆ ವ್ಯಾನಿಟಿ ಬ್ಯಾಗ್ ಎಸೆದಿದ್ದಳು. ಪೊಲೀಸರ ದಿಕ್ಕು ತಪ್ಪಿಸುವ ಸಲುವಾಗಿಯೇ ಕೆರೆ ಬಳಿಯೇ ತಾನು ಧರಿಸಿದ್ದ ಒಳಉಡುಪನ್ನು ಹರಿದು ಬಿಸಾಡಿದ್ದಳು.

ಪ್ರಿಯಾಂಕಾಳ ನೌಟಂಕಿ ಆಟ ಹೇಗಿತ್ತು ಗೊತ್ತಾ?

ಮದುವೆಗೆಂದು ಬಂದಿದ್ದ ಮಹಿಳೆ ಪ್ರಿಯಾಂಕ ನಿಗೂಢ ನಾಪತ್ತೆ ಪ್ರಕರಣದ ಸಂಪೂರ್ಣ ಟೈಮ್​ ಲೈನ್​ ಟಿವಿ9 ಬಿಚ್ಚಿಡುತ್ತಿದೆ. ಗುರುವಾರ ಮುಂಜಾನೆ 5 ಗಂಟೆಗೆ ಕುಣಿಗಲ್ ನಿಂದ ಬಸ್ ಹತ್ತಿ ಬೇಲೂರಿಗೆ ಬಂದಿಳಿದಿದ್ದ ಪ್ರಿಯಾಂಕಾ, ಗಂಡ ಬೀಳ್ಕೊಡುವ ವೇಳೆಯೇ ಪ್ರಿಯಕರನ ಜೊತೆ ಎಸ್ಕೇಪ್ ಆಗಲು ಪ್ಲಾನ್ ಮಾಡಿದ್ದಳು. ಆದ್ರೆ, ಅದು ಸಾಧ್ಯವಾಗಿಲ್ಲ. ಬೇಲೂರಿಗೆ ಬಂದು ಅಮ್ಮ ಚಿಕ್ಕಮ್ಮನ‌ ಜೊತೆ ಚಿಕ್ಕಮಗಳೂರಿಗೆ ಪ್ರಯಾಣ ಮಾಡಿ ಮದುವೆಯಲ್ಲಿ ಬಾಗಿಯಾಗಿದ್ದಳು. ಮದುವೆ ಮುಗಿಸಿ ಅಮ್ಮನ ಮನೆಗೆ ಬಂದು ಒಂದೆರಡು ಗಂಟೆ ಸಮಯ ಕಳೆದಿದ್ದ ಪ್ರಿಯಾಂಕಾ, ಬೇಲೂರು ತಾಲ್ಲೂಕಿನ ಮತ್ತಾವರದ ತಾಯಿ ಮನೆಯಲ್ಲಿದ್ದು ಸಂಜೆ ವಾಪಸ್ ಊರಿಗೆ ಹೊರಟಿದ್ದಳು. ಬಸ್ ಹತ್ತೋ ವೇಳೆ ತಾಯಿಯನ್ನ ತಬ್ಬಿ ಕಣ್ಣೀರಿಟ್ಟು ಹೊರಟಿದ್ದಳು. ಸಂಜೆ 6-30 ಕ್ಕೆ ಮತ್ತಾವರದಿಂದ ಹತ್ತಿ 7 ಗಂಟೆ 7 ನಿಮಿಷಕ್ಕೆ ಬೇಲೂರಿಗೆ ಬಂದಿದ್ದಳು. ಇತ್ತ ಪ್ರಿಯಕರ ಡೇವಿಡ್ ಸಹ ಪ್ರಿಯಾಂಕಾ ಬರೋ ವೇಳೆಗೆ ಬೈಕ್ ತಗೊಂಡು ಬೇಲೂರಿಗೆ ಬಂದಿದ್ದ.

ಒಳಉಡುಪಿ ಬಿಸಾಡಿ ಹೋಗಿದ್ಯಾಕೆ?

ಪ್ರಿಯಕರನ ಜೊತೆ ಮಾತನಾಡಲು ಬೇರೆ ಸಿಮ್ ಬಳಸುತ್ತಿದ್ದಳು. ಹಾಗಾಗಿಯೇ ಪ್ರಿಯಾಂಕ ಮಾಮೂಲಿ ಸಿಮ್ ಸಿಡಿಆರ್ ತೆಗೆದರೂ ಯಾವುದೇ ಸುಳಿವು ಸಿಗದೆ ಪೊಲೀಸರು ಕಂಗಾಲಾಗಿದ್ದರು. ಕಡೆಗೆ ಒಂದೇ ಮೊಬೈಲ್ ನಲ್ಲಿ ಎರಡು ಸಿಮ್ ಆಪರೇಟ್ ಆಗ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಇದೇ ಮಾಹಿತಿ ಆದರಿಸಿ ತನಿಖೆಗಿಳಿದಾಗ ಪ್ರಿಯಾಂಕಾಳ ಆಂಟಿಯ ನೌಟಂಕಿ ಆಟ ಬಯಲಾಗಿದೆ. ಬೇಲೂರಿನಿಂದ ಬೈಕ್ ಹತ್ತಿ ಹೊರಟು ದಾರಿ ಮದ್ಯೆ ಬಟ್ಟೆ ಬದಲಾಯಿಸಿದ್ದ ಪ್ರಿಯಾಂಕಾ, ತಾಯಿ ಮನೆಯಿಂದ ಹೊರಟಾಗ ದರಿಸಿದ್ದ ಟಾಪ್, ಪ್ಯಾಂಟ್ ಒಳ ಉಡುಪು ಕಳಚಿ ಕೆರೆ ಬಳಿ ಬಿಸಾಡಿ ಹಾಸನದ ಮೂಲಕ ಅದೇ ದಿನ ಪ್ರಿಯಾಂಕ ಹಾಗು ಡೇವಿಡ್, ಕುಣಿಗಲ್ ತಲುಪಿದ್ದರು. ಬಟ್ಟೆ ರಸ್ತೆಯಲ್ಲಿ ಸಿಕ್ಕರೆ ಎಲ್ಲೆಡೆ ಹುಡುಕಾಡುತ್ತಾರೆ. ತನ್ನ ಬಗ್ಗೆ ಯಾವುದೇ ಸುಳಿವು ಸಿಗದಿದ್ದಾಗ ಯಾರೋ ಕೊಲೆ ಮಾಡಿ ಎಲ್ಲೊ ಬಿಸಾಡಿದ್ದಾರೆ ಎಂದು ಸುಮ್ಮನಾಗ್ತಾರೆ ಎಂದು ಈ ರೀತಿ ಪ್ಲ್ಯಾನ್ ಮಾಡಿದ್ದಳು.

ಗಂಡನನ್ನ ಬಿಟ್ಟು ಪ್ರಿಯಕರನ ಜತೆ ಇರಲು ಪ್ಲ್ಯಾನ್

ಪ್ರಿಯಾಂಕ ಹಾಗೂ ಡೆವಿಡ್ ಕುಣಿಗಲ್ ನಲ್ಲಿ ಒಂದೇ ಕಂಪನಿಯ ಉದ್ಯೋಗಿಯಾಗಿದ್ದರು. ಪರಿಚಯವಾಗಿ ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಪ್ರೇಮಿಗಳ ದಿನವೇ ಜೊತೆಯಾಗಿ ಇರಲು ನಿರ್ಧರಿಸಿದ್ದರು. ಹೀಗಾಗಿ ಎಲ್ಲರಿಗೂ ದಾರಿ ತಪ್ಫಿಸಿ ಎಸ್ಕೇಪ್ ಆಗುವ ಪ್ಲ್ಯಾನ್ ಮಾಡಿದ್ದರು. ತಾವು ಕೆಲಸ ಮಾಡುತ್ತಿದ್ದ ಕಂಪನಿ ಮಧ್ಯಪ್ರದೇಶಕ್ಕೆ ಶಿಫ್ಟ್ ಆಗುವ ಹಿನ್ನೆಲೆಯಲ್ಲಿ ಈ ಜೋಡಿ ಅಲ್ಲಿಗೆ ತೆರಳಿ ಒಟ್ಟಿಗೆ ಜೀವನ ನಡೆಸಲು ತೀರ್ಮಾನಿಸಿತ್ತು. ಇದರಿಂದ 20 ಲಕ್ಷ ರೂ. ಮೌಲ್ಯದ ಒಡವೆ ಸಮೇತ ಪ್ರಿಯಾಂಕಾ ಪ್ರಿಯಕರನ ಜೊತೆ ಎಸ್ಕೇಪ್ ಆಗಲು ಸ್ಕೆಚ್ ಹಾಕಿದ್ದಳು. ಆದ್ರೆ, ನಿನ್ನೆ(ಫೆಬ್ರವರಿ 14ರ ರಾತ್ರಿ 9 ಗಂಟೆ ವೇಳೆಗೆ ಕುಣಿಗಲ್ ನಲ್ಲಿ ಈ ಜೋಡಿ ಲಾಕ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs PAK: ಪಾಕಿಸ್ತಾನವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ 8 ವಿಕೆಟ್​ಗಳಿಂದ ಗೆದ್ದ ಭಾರತ – Kannada News | India Women Dominates Pakistan A by 8 Wickets; Vrinda Dinesh Shines in Asia Cup Win

2026 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಕೆಲವೇ ಗಂಟೆಗಳಲ್ಲಿ ಪಂದ್ಯ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಬ್ಯಾಂಕಾಕ್‌ನಲ್ಲಿ ನಡೆದ ಮಹಿಳಾ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ (Women’s Rising Stars Asia Cup) ಪಾಕಿಸ್ತಾನ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದ ಭಾರತ ಮಹಿಳಾ ತಂಡ ದಾಖಲೆಯ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಕೇವಲ 93 ರನ್​ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನ ತಂಡದ ಪರ ಕೇವಲ ಮೂವರು ಆಟಗಾರ್ತಿಯರಿಗೆ ಮಾತ್ರ ಎರಡಂಕಿ ಮೊತ್ತ ಕಲೆಹಾಕಲು ಸಾಧ್ಯವಾಯಿತು. ಈ ಗುರಿ ಬೆನ್ನಟ್ಟಿದ ಭಾರತ ತಂಡ ಕೇವಲ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಭಾರತದ ಈ ಗೆಲುವಿನಲ್ಲಿ ಕನ್ನಡತಿ ವೃಂದಾ ದಿನೇಶ್ ಅವರ ಅರ್ಧಶತಕ ಪ್ರಮುಖ ಪಾತ್ರವಹಿಸಿತು.

ಎರಡಂಕಿ ಮೊತ್ತಕ್ಕೆ ಪಾಕ್ ಆಲೌಟ್

ಪಾಕಿಸ್ತಾನ ಎ ತಂಡದ ಬ್ಯಾಟಿಂಗ್ ನಿರ್ಧಾರ ಸರಿ ಎಂದು ಸಾಬೀತಾಗುವ ಮೊದಲೇ ಭಾರತೀಯ ಎ ತಂಡದ ಮಹಿಳಾ ಬೌಲರ್‌ಗಳು ಪಾಕ್ ತಂಡದ ಬ್ಯಾಟಿಂಗ್ ಬೆನ್ನೇಲುಬನ್ನು ಪುಡಿಪುಡಿ ಮಾಡಿದರು. ಪಾಕಿಸ್ತಾನ ಎ ತಂಡದ ಆರಂಭಿಕ ಜೋಡಿ ಕೇವಲ ಎರಡು ರನ್‌ಗಳಿಸಲಷ್ಟೇ ಶಕ್ತವಾಯಿತು. ಆ ಬಳಿಕ 15 ರನ್‌ಗಳೊಳಗೆ ಎರಡನೇ ವಿಕೆಟ್ ಪತನವಾಯಿತು. ನಂತರ ಮುಂದಿನ 17 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. 32 ರನ್ ಕಲೆಹಾಕುವಷ್ಟರಲ್ಲಿ ಪಾಕ್ ತಂಡದ 6 ವಿಕೆಟ್​ಗಳು ಉರುಳಿದವು. ಪರಿಣಾಮವಾಗಿ, ಪಾಕಿಸ್ತಾನ ಎ ತಂಡವು 18.5 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 93 ರನ್‌ಗಳಿಗೆ ಆಲೌಟ್ ಆಯಿತು.

ಪಾಕಿಸ್ತಾನ ಎ ತಂಡದ ಬ್ಯಾಟಿಂಗ್ ಕಳಪೆಯಾಗಿತ್ತು, ಆರಂಭಿಕ ಆಟಗಾರ್ತಿ ಶವಾಲ್ ಜುಲ್ಫಿಕರ್ 23 ರನ್ ಗಳಿಸಿದ್ದು ಸೇರಿದಂತೆ ತಂಡದ ಮೂವರು ಬ್ಯಾಟರ್​ಗಳಿಗೆ ಮಾತ್ರ ಎರಡಂಕಿಯ ತಲುಪಲು ಸಾಧ್ಯವಾಯಿತು. ಗುಲ್ ರುಖ್ 21 ರನ್ ಗಳಿಸಿದರೆ, ಅನೂಷಾ ನಾಸೀರ್ 17 ರನ್ ಗಳಿಸಿದರು. ಭಾರತ ಎ ಪರ ರಾಧಾ ಯಾದವ್, ಪ್ರೇಮಾ ರಾವತ್ ಮತ್ತು ಸಲ್ಮಾ ಠಾಕೂರ್ ತಲಾ ಎರಡು ವಿಕೆಟ್ ಪಡೆದರೆ, ಮಿನು ಮಣಿ ಮತ್ತು ಜಿಂಟಿಮಣಿ ಕಲಿತಾ ತಲಾ ಒಂದು ವಿಕೆಟ್ ಪಡೆದರು.

IND vs PAK: ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ?

ಕನ್ನಡತಿಯ ಗೆಲುವಿನ ಅರ್ಧಶತಕ

ಬೌಲರ್‌ಗಳ ನಂತರ, ಭಾರತದ ಬ್ಯಾಟರ್​ಗಳು ಸಹ ಅದ್ಭುತ ಪ್ರದರ್ಶನ ನೀಡಿದರು. 94 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಎ ತಂಡವು ಸ್ಕೋರ್‌ಬೋರ್ಡ್‌ಗೆ ಒಂದು ರನ್ ಸೇರಿಸದೆಯೇ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆದಾಗ್ಯೂ, ಆ ನಂತರ ಭಾರತ, ಪಾಕಿಸ್ತಾನಕ್ಕೆ ಯಾವುದೇ ಅವಕಾಶ ನೀಡಲಿಲ್ಲ. 79 ರನ್‌ಗಳಿಗೆ ತಂಡದ ಎರಡನೇ ವಿಕೆಟ್ ಪತನವಾಯಿತು. ಭಾರತವು 10.1 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ಗಳ ನಷ್ಟಕ್ಕೆ 94 ರನ್‌ಗಳ ಗುರಿ ತಲುಪಿತು. ಕನ್ನಡತಿ ವೃಂದಾ ದಿನೇಶ್ 29 ಎಸೆತಗಳಲ್ಲಿ ಅಜೇಯ 55 ರನ್ ಗಳಿಸುವ ಮೂಲಕ ಭಾರತ ಎ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:51 pm, Sun, 15 February 26

Source link

ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್​ಮ್ಯಾನ್ ಅಲ್ಲ ಫೈರ್​​​ಫೈಟರ್ – Kannada News | Karnataka fire department: Fireman Renamed Fire Fighter; 10 percent Women Quota in Recruitment

ಅಗ್ನಿಶಾಮಕ (ಸಂಗ್ರಹ ಚಿತ್ರ)Image Credit source: google

ಬೆಂಗಳೂರು. ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯ ಹುದ್ದೆ ಮರು ನಾಮಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇನ್ಮುಂದೆ ‘ಫೈರ್‌ಮ್ಯಾನ್’ (Fireman) ಬದಲಿಗೆ ‘ಫೈರ್ ಫೈಟರ್’ (Fire Fighter) ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ನಡೆದಿದೆ.

ಆದೇಶದಲ್ಲೇನಿದೆ? 

ಕೇಂದ್ರ ಗೃಹ ಸಚಿವಾಲಯವು SFAC ಸಭೆಯಲ್ಲಿ ತೀರ್ಮಾನಿಸಿದಂತೆ ಅಗ್ನಿಶಾಮಕ ಇಲಾಖೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಫೈರ್‌ಮ್ಯಾನ್ ಹುದ್ದೆಯ ಹೆಸರನ್ನು ಫೈರ್ ಫೈಟರ್ ಎಂದು ಬದಲಾಯಿಸಲು ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ

ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಇವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು 1964 ರಿಂದ ಜಾರಿಗೆ ಬಂದಿದ್ದು, ಅಗ್ನಿ ಅವಘಡ, ಪ್ರಕೃತಿ ವಿಕೋಪ, ನೆರೆ ಹಾವಳಿ, ಜಾನುವಾರುಗಳ ರಕ್ಷಣೆ, ವಿವಿಧ ಕಟ್ಟಡಗಳಲ್ಲಿ ಅಗ್ನಿಸುರಕ್ಷತೆ ಹಾಗೂ ಇತ್ಯಾದಿಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸುತ್ತ ಬಂದಿದ್ದಾರೆ.

ಈ ಇಲಾಖೆಯಲ್ಲಿ ಪ್ರಸ್ತುತ ಒಟ್ಟು 7159 ವಿವಿಧ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ ವಿವಿಧ ಹುದ್ದೆಗಳಲ್ಲಿ ಪ್ರಸ್ತುತ 5272 ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವುಗಳ ಪೈಕಿ ‘ಅಗ್ನಿಶಾಮಕ’ ಮತ್ತು ‘ಅಗ್ನಿಶಾಮಕ ಠಾಣಾಧಿಕಾರಿ’ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಶೇ.10 ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿರಿಸಲು ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿಯಮಗಳು, 2013 ‘ಫೈರ್ ಮ್ಯಾನ್’ ಬದಲಿಗೆ ‘ಫೈರ್ ಫೈಟರ್’ ಹುದ್ದೆಗಳ ಪದನಾಮವಿರುತ್ತದೆ. ಈ ಹುದ್ದೆಗಳ ಪದನಾಮವನ್ನು ಅನುಕ್ರಮವಾಗಿ ‘ಲೀಡಿಂಗ್ ಫೈರ್‌ಮ್ಯಾನ್’ ಹುದ್ದೆಯು ‘ಲೀಡಿಂಗ್ ಫೈರ್ ಫೈಟರ್’ ಎಂದು ಮರು ನಾಮಕರಣಗೊಳಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Mahashivratri Fasting: ಈ 5 ವರ್ಗದ ಜನರು ಹಬ್ಬದ ದಿನದಂದು ಉಪವಾಸ ಮಾಡಲೇಬೇಡಿ – Kannada News | Safe Fasting: Mahashivratri Health Guide and Precautions, Who Should Avoid Upavasa?

ಉಪವಾಸ ಎಂದರೆ ಕೇವಲ ಊಟ ತ್ಯಜಿಸುವುದಲ್ಲ, ಅದು ಮನಸ್ಸನ್ನು ಶುದ್ಧಗೊಳಿಸಿ ದೇವರ ಧ್ಯಾನದಲ್ಲಿ ತೊಡಗುವ ಒಂದು ಆಧ್ಯಾತ್ಮಿಕ ವಿಧಾನ. ವಿಶೇಷವಾಗಿ ಮಹಾಶಿವರಾತ್ರಿ ದಿನ ಉಪವಾಸವನ್ನು ಅನೇಕರು ಭಕ್ತಿಯಿಂದ ಆಚರಿಸುತ್ತಾರೆ. ಆದರೆ ಭಕ್ತಿಯ ಜೊತೆಗೆ ಆರೋಗ್ಯದ ಬಗ್ಗೆ ಜಾಗರೂಕತೆಯೂ ಅತ್ಯಗತ್ಯ. ದೇಹ ಸಹಕರಿಸದಿದ್ದರೆ ಕಠಿಣ ಉಪವಾಸ ಮಾಡುವುದು ಸೂಕ್ತವಲ್ಲ.

ಮಧುಮೇಹಿಗಳು:

ಮಧುಮೇಹಿಗಳು ಊಟ ಮಾಡದೇ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಕುಸಿಯುವ (ಹೈಪೊಗ್ಲೈಸಿಮಿಯಾ) ಅಪಾಯವಿದೆ. ಇದು ತಲೆ ಸುತ್ತು, ಅಸ್ವಸ್ಥತೆ, ಗಂಭೀರ ಪರಿಸ್ಥಿತಿಯಲ್ಲಿ ಕೋಮಾಗೆ ಕಾರಣವಾಗಬಹುದು. ಆದ್ದರಿಂದ ಉಪವಾಸ ಮಾಡದೇ ಭಕ್ತಿಯಿಂದ ಶುದ್ಧ ಮನಸ್ಸಿನಿಂದ ಶಿವನನ್ನು ಪೂಜಿಸಿ.

ಗರ್ಭಿಣಿಯರು:

ತಾಯಿ ಮತ್ತು ಭ್ರೂಣಕ್ಕೆ ನಿರಂತರ ಪೋಷಕಾಂಶ ಅಗತ್ಯ. ಉಪವಾಸದಿಂದ ಉಂಟಾಗುವ ಪೌಷ್ಟಿಕಾಂಶ ಕೊರತೆ ಭ್ರೂಣದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಗರ್ಭಿಣಿಯರು ಉಪವಾಸ ಮಾಡದೇ ಭಕ್ತಿಯಿಂದ ಶುದ್ಧ ಮನಸ್ಸಿನಿಂದ ಶಿವನನ್ನು ಪೂಜಿಸಿ.

ಮಕ್ಕಳು ಮತ್ತು ವೃದ್ಧರು:

ಮಕ್ಕಳು ಮತ್ತು ವೃದ್ಧರಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಇಡೀ ದಿನ ಆಹಾರವಿಲ್ಲದೆ ಇದ್ದರೆ ನಿರ್ಜಲೀಕರಣ, ತೀವ್ರ ದೌರ್ಬಲ್ಯ ಉಂಟಾಗಬಹುದು. ಇದು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ ಉಪವಾಸ ಮಾಡದೇ ಇರುವುದು ಒಳಿತು.

ಮೂತ್ರಪಿಂಡದ ಸಮಸ್ಯೆ ಇರುವವರು:

ಮೂತ್ರಪಿಂಡದ ಕಾಯಿಲೆ ಇರುವವರು ನಿಯಮಿತವಾಗಿ ನೀರು ಮತ್ತು ಔಷಧಿ ತೆಗೆದುಕೊಳ್ಳಬೇಕು. ಉಪವಾಸವು ದೇಹದ ಎಲೆಕ್ಟ್ರೋಲೈಟ್ ಸಮತೋಲನವನ್ನು ಹದಗೆಡಿಸಿ ಸಮಸ್ಯೆ ಹೆಚ್ಚಿಸಬಹುದು. ಆದ್ದರಿಂದ ಮೂತ್ರಪಿಂಡದ ಸಮಸ್ಯೆ ಇರುವವರು ಉಪವಾಸ ಮಾಡದೇ ಭಕ್ತಿಯಿಂದ ಶುದ್ಧ ಮನಸ್ಸಿನಿಂದ ಶಿವನನ್ನು ಪೂಜಿಸಿ.

ಇದನ್ನೂ ಓದಿ: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು:

ಖಾಲಿ ಹೊಟ್ಟೆ ಇರುವುದರಿಂದ ಆಮ್ಲ ಉತ್ಪಾದನೆ ಹೆಚ್ಚಾಗಿ ತೀವ್ರ ಹೊಟ್ಟೆನೋವು, ವಾಂತಿ ಅಥವಾ ಹುಣ್ಣಿನ ಸಮಸ್ಯೆ ಉಲ್ಬಣವಾಗಬಹುದು. ಇದಲ್ಲದೇ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾದವರು, ದೀರ್ಘಕಾಲೀನ ಔಷಧಿಗಳನ್ನು ಸೇವಿಸುತ್ತಿರುವವರು, ಹಾಲುಣಿಸುವ ತಾಯಂದಿರು ಉಪವಾಸ ಮಾಡುವ ಮೊದಲು ವೈದ್ಯರ ಸಲಹೆ ಪಡೆಯಬೇಕು. ಹಾಲುಣಿಸುವ ತಾಯಂದಿರಲ್ಲಿ ಉಪವಾಸದಿಂದ ಹಾಲಿನ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆ ಇದೆ.

ಉಪವಾಸ ಮಾಡಬೇಕೆಂದಿದ್ದರೆ ಏನು ಮಾಡಬೇಕು?

ದೇಹ ಸಂಪೂರ್ಣ ಸಹಕರಿಸದಿದ್ದರೂ ಭಕ್ತಿಯಿಂದ ಆಚರಿಸಲು ಬಯಸುವವರು ಕಠಿಣ ಉಪವಾಸದ ಬದಲು ಹಣ್ಣುಗಳು, ಹಾಲು, ಲಘು ಆಹಾರ ಸೇವಿಸುವ ‘ಫಲಾಹಾರ ಉಪವಾಸ’ವನ್ನು ಅನುಸರಿಸಬಹುದು. ‘ನಿರ್ಜಲ ಉಪವಾಸ’ (ನೀರು ಕೂಡ ಸೇವಿಸದಿರುವುದು) ಸಂಪೂರ್ಣ ಆರೋಗ್ಯವಂತರಿಗೆ ಮಾತ್ರ ಸೂಕ್ತ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

4000 ಕೋಟಿ ಬಜೆಟ್ ಹಾಕಿ ‘ರಾಮಾಯಣ’ ನಿರ್ಮಿಸುತ್ತಿರುವುದೇಕೆ? ಉತ್ತರ ಕೊಟ್ಟ ನಿರ್ಮಾಪಕ – Kannada News | Ramayana producer Namit Malhotra talks about why he produce the movie

ಭಾರತೀಯ ಚಿತ್ರರಂಗದ ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಹಾಲಿವುಡ್​ನಲ್ಲಿ ಈಗಾಗಲೇ ದೊಡ್ಡ ಹೆಸರು ಮಾಡಿರುವ ಸ್ಟುಡಿಯೋ ಹೊಂದಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಹಾಲಿವುಡ್​​ನಲ್ಲಿ ಭಾರತದ ಸಿನಿಮಾಕ್ಕೆ ಮೌಲ್ಯ ತಂದುಕೊಡಬೇಕೆಂಬ ಘನ ಉದ್ದೇಶದಿಂದಲೇ ಈ ಸಿನಿಮಾಕ್ಕೆ ಕೈ ಹಾಕಿರುವುದಾಗಿ ಈ ಹಿಂದೆ ಅವರು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಸಂದರ್ಶನದಲ್ಲಿ ಮಾತನಾಡಿರುವ ನಮಿತ್ ಮಲ್ಹೋತ್ರಾ ಹಾಲಿವುಡ್‌ನಲ್ಲಿ ಭಾರತವನ್ನು, ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಮಿತ್, ‘ನಾನು ಹಾಲಿವುಡ್‌ಗೆ ಹೋದಾಗ ಅಲ್ಲಿ ನಮ್ಮ ಇತಿಹಾಸ ಅಥವಾ ಸಂಸ್ಕೃತಿಗೆ ಯಾವುದೇ ಸರಿಯಾದ ಪ್ರಾತಿನಿಧ್ಯ ಇರದೇ ಇರುವುದು ಗಮನಿಸಿದೆ. ಇದು ನನ್ನನ್ನು ಕಾಡುತ್ತಲೇ ಇತ್ತು. ಹಣಕಾಸು ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಭಾರತೀಯರು ಜಾಗತಿಕವಾಗಿ ಗುರುತಿಸಿಕೊಂಡಿದ್ದರೂ, ಸಿನಿಮಾ ರಂಗದಲ್ಲಿ ನಮ್ಮ ಸಂಸ್ಕೃತಿಯನ್ನು ಅವರು ಸರಿಯಾಗಿ ಗೌರವಿಸುತ್ತಿಲ್ಲ ಅಥವಾ ಅರ್ಥಮಾಡಿಕೊಳ್ಳುತ್ತಿಲ್ಲ’ ಎಂದಿದ್ದಾರೆ.

‘ಬಹಳ ವರ್ಷಗಳಿಂದಲೂ ಹಾಲಿವುಡ್ ನಮ್ಮನ್ನು ನೋಡುವ ದೃಷ್ಟಿಕೋನ ಬದಲಾಗಿಲ್ಲ. ‘ಸ್ಲಂಡಾಗ್ ಮಿಲಿಯನೇರ್’ ನಂತಹ ಚಿತ್ರಗಳಲ್ಲಾಗಲಿ ಅಥವಾ ಇತರ ಚಿತ್ರಗಳಲ್ಲಾಗಲಿ ಭಾರತೀಯರನ್ನು ಕೇವಲ ಸಂತ್ರಸ್ತರನ್ನಾಗಿ ಅಥವಾ ಬಡವರನ್ನಾಗಿ ತೋರಿಸಲಾಗಿದೆ. ಇದು ನನಗೆ ಬಹಳ ನೋವುಂಟು ಮಾಡಿತ್ತು. ನಮ್ಮ ಶ್ರೀಮಂತ ಇತಿಹಾಸ ಮತ್ತು ಪರಂಪರೆಯನ್ನು ಇಡೀ ಜಗತ್ತು ಹೆಮ್ಮೆಪಡುವಂತೆ ತೋರಿಸಬೇಕು ಎಂಬ ಹಠದಿಂದಲೇ ‘ರಾಮಾಯಣ’ ಸಿನಿಮಾ ಹುಟ್ಟಿಕೊಂಡಿತು’ ಎಂದಿದ್ದಾರೆ. ಆ ಮೂಲಕ ಹಾಲಿವುಡ್​​ಗೆ ಪ್ರತ್ಯುತ್ತರ ನೀಡಲೆಂದೇ ತಾವು ‘ರಾಮಾಯಣ’ ಸಿನಿಮಾ ನಿರ್ಮಿಸುತ್ತಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಯಶ್, ರಣ್​​ಬೀರ್ ಕಪೂರ್ ‘ರಾಮಾಯಣ’ ಸಿನಿಮಾಕ್ಕೆ ಕೊರಿಯೋಗ್ರಾಫರ್ ಯಾರು ಗೊತ್ತೆ?

ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಸಿನಿಮಾ ಮೇಲೆ ಸುಮಾರು 4000 ಕೋಟಿ ಬಂಡವಾಳವನ್ನು (ಎರಡೂ ಭಾಗಗಳಿಗೆ ಸೇರಿ) ನಮಿತ್ ಹೂಡಿದ್ದಾರೆ. ಅವರೇ ಹೇಳಿಕೊಂಡಿರುವಂತೆ ಇದು ವಿಶ್ವದ ಅತಿ ದೊಡ್ಡ ಸ್ವತಂತ್ರ್ಯ ಬಜೆಟ್ ಸಿನಿಮಾ. ಅಂದರೆ ಬೇರೆ ಬೇರೆ ಸಂಸ್ಥೆಗಳ ಬದಲಿಗೆ ಕೇವಲ ಒಂದು ಸಂಸ್ಥೆಯೇ ಸಿನಿಮಾದ ಮೇಲೆ ದೊಡ್ಡ ಬಜೆಟ್ ಹೂಡಿಕೆ ಮಾಡಿದೆ. ಹಾಗಾಗಿ ಇದನ್ನು ಸ್ವತಂತ್ರ್ಯ ಫೈನ್ಯಾನ್ಸ್ಡ್ ಎಂದು ನಮಿತ್ ಕರೆದಿದ್ದಾರೆ.

ಈ ಸಿನಿಮಾನಲ್ಲಿ ಹಲವು ಖ್ಯಾತ ನಾಮ ನಟ-ನಟಿಯರು ಕೆಲಸ ಮಾಡಿದ್ದಾರೆ. ರಣ್​​ಬೀರ್ ಕಪೂರ್ ಈ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಯಿ ಪಲ್ಲವಿ ಸೀತೆಯ ಪಾತ್ರ, ನಟ ಯಶ್ ರಾವಣನ ಪಾತ್ರದಲ್ಲಿ ನಟಿಸಿರುವ ಜೊತೆಗೆ ಸಹ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಸನ್ನಿ ಡಿಯೋಲ್, ವಿಜಯ್ ಸೇತುಪತಿ, ಕಾಜಲ್ ಅಗರ್ವಾಲ್ ಇನ್ನೂ ಹಲವಾರು ಕಲಾವಿದರು ಸಿನಿಮಾನಲ್ಲಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಆಸ್ಕರ್ ವಿಜೇತ ಸಂಗೀತ ನಿರ್ದೇಶಕರುಗಳಾದ ಎಆರ್ ರೆಹಮಾನ್ ಮತ್ತು ಹಾನ್ಸ್ ಜೈಮರ್. ಸಿನಿಮಾ ನಿರ್ದೇಶನ ಮಾಡಿರುವುದು ನಿತೇಶ್ ತಿವಾರಿ. ಚಿತ್ರದ ಮೊದಲ ಭಾಗವು ಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಎರಡನೇ ಭಾಗವು 2027ರ ದೀಪಾವಳಿಗೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India

ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್​ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ.

ಮೃತರ ಐಟಿ ರಿಟರ್ನ್ ಸಲ್ಲಿಕೆ

ಮೃತರು ನಿಧನವಾದ ವರ್ಷಕ್ಕೆ ಅವರ ಐಟಿ ರಿಟರ್ನ್ ಸಲ್ಲಿಕೆ ಮಾಡಬೇಕು. ಆ ವರ್ಷದ ಅವರ ಯಾವುದೇ ಆದಾಯವಿದ್ದರೂ ಅದನ್ನು ತೋರಿಸಿ, ಅದಕ್ಕೆ ತೆರಿಗೆ ಕಟ್ಟುವುದಿದ್ದರೆ ಕಟ್ಟಬೇಕು.

ಪಿತ್ರಾರ್ಜಿತ ಆಸ್ತಿಗೆ ಟ್ಯಾಕ್ಸ್ ಇರುವುದಿಲ್ಲ, ಆದರೆ ಇದು ಇರುತ್ತೆ…

ಅಮೆರಿಕದಲ್ಲಿರುವಂತೆ ಪಿತ್ರಾರ್ಜಿತ ಆಸ್ತಿಗೆ ಎಸ್ಟೇಟ್ ಟ್ಯಾಕ್ಸ್ ಎಂಬುದು ಭಾರತದಲ್ಲಿ ಇರುವುದಿಲ್ಲ. ನೀವು ಟ್ಯಾಕ್ಸ್ ರಹಿತವಾಗಿ ಆಸ್ತಿ ವರ್ಗಾವಣೆ ಮಾಡಿಕೊಳ್ಳಬಹುದು. ಆದರೆ, ಮುಂದೆ ಆ ಆಸ್ತಿಯಿಂದ ಆದಾಯ ಗಳಿಸತೊಡಗಿದರೆ ಅದಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತದೆ.

ಇದನ್ನೂ ಓದಿ: ನಗರಗಳೇ ಅಭಿವೃದ್ಧಿ ಯಂತ್ರಗಳು; ಸರ್ಕಾರದಿಂದ 1 ಲಕ್ಷ ಕೋಟಿ ರೂ ಅರ್ಬನ್ ಚಾಲೆಂಜ್ ಫಂಡ್

ನಿಮ್ಮ ಇನ್ಕಮ್ ಟ್ಯಾಕ್ಸ್​ಗೆ ರಿಟರ್ನ್ ಸಲ್ಲಿಸುವಾಗ ಪಿತ್ರಾರ್ಜಿತ ಆಸ್ತಿ ಹಾಗೂ ಅದರಿಂದ ಸೃಷ್ಟಿಯಾಗುವ ಆದಾಯದ ಮಾಹಿತಿ ಇರಬೇಕು. ಪಿತ್ರಾರ್ಜಿತ ಆಸ್ತಿಯಾಗಿ ಬಂದ ಮನೆಯ ಬಾಡಿಗೆ ಆದಾಯವನ್ನು ‘ಇನ್ಕಮ್ ಫ್ರಂ ಹೌಸ್ ಪ್ರಾಪರ್ಟಿ’ ಎಂದು ತೋರಿಸಬೇಕು. ಬಡ್ಡಿ, ಡಿವಿಡೆಂಡ್ ಆದಾಯ ಇದ್ದರೆ ‘ಇನ್ಕಮ್ ಫ್ರಂ ಅದರ ಸೋರ್ಸಸ್’ ಎಂದು ತೋರಿಸಬೇಕು.

ಕ್ಯಾಪಿಟಲ್ ಗೇನ್ ಟ್ಯಾಕ್ಸ್

ನೀವು ಪಿತ್ರಾರ್ಜಿತವಾಗಿ ಪಡೆದ ಆಸ್ತಿಯನ್ನು ಮಾರಿದಾಗ ಅದಕ್ಕೆ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಕಟ್ಟಬೇಕು. ಆ ಆಸ್ತಿಯನ್ನು ನಿಮ್ಮ ತಂದೆ ಅಥವಾ ತಾಯಿ ಖರೀದಿಸಿದಾಗ ಯಾವ ದರ ಇತ್ತು, ಮತ್ತು ಈಗ ದರಕ್ಕೆ ಮಾರಲಾಗಿದೆ, ಅದರಿಂದ ಬಂದಿರುವ ಲಾಭಕ್ಕೆ ಟ್ಯಾಕ್ಸ್ ಕಟ್ಟಬೇಕು. ಪಿತ್ರಾರ್ಜಿತವಾಗಿ ಪಡೆದ ಆಸ್ತಿಯನ್ನು ಎರಡಕ್ಕೂ ಹೆಚ್ಚು ವರ್ಷದ ಬಳಿಕ ಮಾರಿದಾಗ ಎಲ್​ಟಿಸಿಜಿ ಟ್ಯಾಕ್ಸ್ ಅನ್ವಯ ಆಗುತ್ತದೆ. ಇಲ್ಲದಿದ್ದರೆ ಎಸ್​​ಟಿಸಿಜಿ ಟ್ಯಾಕ್ಸ್ ಅನ್ವಯ ಆಗುತ್ತದೆ.

ಸಾಲ ಬಾಧ್ಯತೆ ಉಳಿದಿದ್ದರೆ ಕಟ್ಟಿರಿ…

ಮೃತರು ಯಾವುದಾದರೂ ಸಾಲ ಬಾಧ್ಯತೆ ಉಳಿಸಿಕೊಂಡಿದ್ದರೆ ಅದನ್ನು ತೀರಿಸುವುದು ವಾರಸುದಾರರ ಕರ್ತವ್ಯ. ಅದರಲ್ಲೂ ಆಸ್ತಿಯನ್ನು ಅಡಮಾನ ಇಟ್ಟು ಪಡೆದ ಸಾಲವನ್ನು ತೀರಿಸಿದರೆ ಮಾತ್ರವೇ ಆಸ್ತಿ ವರ್ಗಾವಣೆ ಸಾಧ್ಯ.

ಇದನ್ನೂ ಓದಿ: ಆಂಟ್ರೋಪಿಕ್ ಹಾಗೂ ಇತರ 13 ಎಐ ಕಂಪನಿಗಳೊಂದಿಗೆ ಮುಕೇಶ್ ಅಂಬಾನಿ ಅವರ ಜಿಯೋ ಮೈತ್ರಿ

ಸರಿಯಾದ ದಾಖಲೆಗಳು ಜೊತೆಗಿರಲಿ…

ನೀವು ಪಿತ್ರಾರ್ಜಿತವಾಗಿ ಆಸ್ತಿ ಪಡೆಯಲು ಹಕ್ಕುದಾರರಾಗಿದ್ದರೆ ಸರಿಯಾದ ದಾಖಲೆಗಳನ್ನು ಹೊಂದಿರಬೇಕು. ಉಯಿಲು ಇದ್ದರೆ ಅದು ಇರಬೇಕು. ಸಕ್ಸಶನ್ ಸರ್ಟಿಫಿಕೇಟ್, ಡೆತ್ ಸರ್ಟಿಫಿಕೇಟ್​ಗಳು ಇರಬೇಕು. ಆಸ್ತಿ ಮೌಲ್ಯಮಾಪನ ಮಾಡುವ ವ್ಯಾಲ್ಯುಯೇಶನ್ ರಿಪೋರ್ಟ್ ಇರಬೇಕು. ಆಸ್ತಿ ವರ್ಗಾವಣೆ ವೇಳೆ ಇದನ್ನು ಕೇಳಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link