Category Archives: Blog

Your blog category

ಕೊಹ್ಲಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸ್ಟಾರ್ ವೇಗಿ ಟಿ20 ವಿಶ್ವಕಪ್​ನಿಂದ ಔಟ್

Source link

‘ದೈಹಿಕ ವಂಚನೆ ವಂಚನೆಯೇ’; ಕಾಜೋಲ್ ಹೇಳಿಕೆಗೆ ಖಡಕ್ ಉತ್ತರ ಕೊಟ್ಟ ನಟಿ – Kannada News | Gautami Kapoor Rejects Kajol Twinkle’s Infidelity Stance: Modern Relationships

ಕಾಜೋಲ್ ಮತ್ತು ಟ್ವಿಂಕಲ್ ಖನ್ನಾ ತಮ್ಮ ‘ಟೂ ಮಚ್’ ಎಂಬ ಟಾಕ್ ಶೋನಲ್ಲಿ ಆಧುನಿಕ ಮದುವೆ, ಸಂಬಂಧಗಳು ಮತ್ತು ಮೋಸದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಈ ಜೋಡಿ ಕೆಲವು ಹೇಳಿಕೆಗಳನ್ನು ನೀಡಿತ್ತು.ದೈಹಿಕ ಸಂಬಂಧಗಳಲ್ಲಿ ದ್ರೋಹವು ಯಾವಾಗಲೂ ಸಂಬಂಧವನ್ನು ಕೊನೆಗೊಳಿಸುವುದಿಲ್ಲ ಎಂದು ಇಬ್ಬರೂ ಹೇಳಿದ್ದರು. ಇದರಿಂದಾಗಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲಿಂಗ್ ಎದುರಿಸಬೇಕಾಯಿತು.

ಈಗ ಪ್ರಸಿದ್ಧ ಟಿವಿ ನಟಿ ಗೌತಮಿ ಕಪೂರ್ ಈ ಅಭಿಪ್ರಾಯಗಳಿಗೆ ಪ್ರತಿಕ್ರಿಯಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಗೌತಮಿ ಅವರನ್ನು ದೈಹಿಕ ವಂಚನೆ ಅಥವಾ ಸಂಬಂಧಗಳಲ್ಲಿ ದ್ರೋಹವನ್ನು ಕ್ಷಮಿಸಬಹುದೇ ಎಂದು ಕೇಳಲಾಯಿತು. ಇದಕ್ಕೆ ಅವರು ಇಲ್ಲ ಎಂದು ಉತ್ತರಿಸಿದ್ದಾರೆ.

‘ನಾನು ದೈಹಿಕ ಮತ್ತು ಭಾವನಾತ್ಮಕ ದ್ರೋಹವು ದ್ರೋಹವೇ. ನಾನು ಜನರ ವಿಭಿನ್ನ ಅಭಿಪ್ರಾಯಗಳನ್ನು ಗೌರವಿಸುತ್ತೇನೆ. ಆದರೆ ನನ್ನ ಗಡಿಗಳು ತುಂಬಾ ಸ್ಪಷ್ಟವಾಗಿವೆ. ಅದು ದೈಹಿಕ, ಭಾವನಾತ್ಮಕ, ಆಧ್ಯಾತ್ಮಿಕ ಅಥವಾ ಇನ್ನೇನಾದರೂ ಆಗಿರಬಹುದು. ದ್ರೋಹವು ದ್ರೋಹವಾಗಿದೆ. ನಾನು ಅವರಿಬ್ಬರ ದೃಷ್ಟಿಕೋನಗಳನ್ನು ಗೌರವಿಸುತ್ತೇನೆ, ಆದರೆ ಇವು ನನ್ನ ಆಲೋಚನೆಗಳು. ಅದರಲ್ಲಿ ನನಗೆ ಯಾವುದೇ ತಪ್ಪಿಲ್ಲ’ ಎಂದಿದ್ದಾರೆಅವರು.

‘ನಾನು ತುಂಬಾ ಪೊಸೆಸಿವ್ ವ್ಯಕ್ತಿ. ನಿಜ ಹೇಳಬೇಕೆಂದರೆ, ನಾನು ನನ್ನ ಗಂಡ, ಸ್ನೇಹಿತರು, ಮಕ್ಕಳು ಮತ್ತು ಅಷ್ಟೇ ಅಲ್ಲ, ನನ್ನ ತಂಡ, ನನ್ನ ಸುತ್ತಮುತ್ತಲಿನ ಜನರ ಬಗ್ಗೆಯೂ ತುಂಬಾ ಪೊಸೆಸಿವ್ ಆಗಿರುತ್ತೇನೆ. ಆ ಸಂಬಂಧದಲ್ಲಿ ನೀವು ಬಹಳಷ್ಟು ಹೂಡಿಕೆ ಮಾಡಿದಾಗ, ಅದು ನಿಮ್ಮಲ್ಲಿ ಪೊಸೆಸಿವ್ ಭಾವನೆಯನ್ನು ಉಂಟುಮಾಡುತ್ತದೆ. ನಾನು ತುಂಬಾ ಪ್ರಾಮಾಣಿಕನಾಗಿರುವುದರಿಂದ, ಅದಕ್ಕಾಗಿಯೇ ನಾನು ಪ್ರತಿ ಸಂಬಂಧದಲ್ಲೂ ನನ್ನ 500 ಪ್ರತಿಶತವನ್ನು ನೀಡುತ್ತೇನೆ. ಒಮ್ಮೆ ದ್ರೋಹ ಸಂಭವಿಸಿದರೆ, ಅದು ದೊಡ್ಡ ಹೊರೆಯಾಗುತ್ತದೆ. ಅದು ದೈಹಿಕವಾಗಿದ್ದರಿಂದ ನಾನು ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅದು ಇತರರಿಗೆ ಸರಿಯಾಗಿರಬಹುದು, ಆದರೆ ನನಗೆ ಅಲ್ಲ,” ಎಂದು ಗೌತಮಿ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಂಬಂಧವು ದೈಹಿಕ ದ್ರೋಹದಿಂದ ಕೊನೆಗೊಳ್ಳುವುದಿಲ್ಲ ಎಂದು ಕಾಜೋಲ್ ಹೇಳಿದ್ದರು.

ಇದನ್ನೂ ಓದಿ: ‘ಕುಚ್​ ಕುಚ್ ಹೋತಾ ಹೈ’ ಹಾಡಿಗೆ ಕುಣಿದ ಶಾರುಖ್-ಕಾಜೋಲ್: ವಿಡಿಯೋ

‘ಗೌತಮಿ ತಾಳ್ಮೆಯ ಕೊರತೆ ಇದೆ ಎಂದು ವಿವರಿಸಿದರು. ‘ಹಿಂದೆ, ಜನರು ಈ ಸಮಸ್ಯೆಯನ್ನು ಪರಿಹರಿಸೋಣ ಎಂದು ಹೇಳುತ್ತಿದ್ದರು. ಇಂದು, ಜನರು ಮೊದಲ ಜಗಳದಲ್ಲೇ ಮುರಿದು ಬೀಳುತ್ತಾರೆ. ಇದಕ್ಕೆ ಕಾರಣವೆಂದರೆ ನಿಮ್ಮ ಸಹಿಷ್ಣುತೆ ಕಡಿಮೆಯಾಗುತ್ತಿದೆ. ನಿಮಗೆ ಹಲವು ಆಯ್ಕೆಗಳಿವೆ, ಹಲವು ಆಕರ್ಷಣೆಗಳಿವೆ. ನಾನು ಬೇಗನೆ ಬಿಟ್ಟುಕೊಡುವ ಪೀಳಿಗೆಯವನಲ್ಲ. ನೀವು ಸರಿಯಾದ ಕಾರಣಗಳಿಗಾಗಿ ಮದುವೆಯಾಗುತ್ತಿದ್ದರೆ, ಬಹುಶಃ ನಿಮಗೆ ಇನ್ನೊಂದು ಅವಕಾಶ ನೀಡಬಹುದು. ಇಂದಿನ ಪೀಳಿಗೆ ಸಮಯ, ತಾಳ್ಮೆ ಮತ್ತು ಸಂಬಂಧಗಳನ್ನು ಯಶಸ್ವಿಗೊಳಿಸುವ ಸಾಮರ್ಥ್ಯದ ಕೊರತೆಯೊಂದಿಗೆ ಹೋರಾಡುತ್ತಿದೆ’ ಎಂದು ಗೌತಮಿ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ನಾನೇನು ಪಾಕಿಸ್ತಾನಿನಾ ನಾನೂ ಭಾರತೀಯನೆ ಪ್ರವಾಸಿಗರಿಗೆ ಕಾಶ್ಮೀರಿ ವ್ಯಕ್ತಿ ಕೊಟ್ಟ ಉತ್ತರ ಕೇಳಿ – Kannada News | I am also Indian, Boatman’s Clever Comeback Leaves Tourist Smiling in Kashmir

ಕಾಶ್ಮೀರ, ಜನವರಿ 16: ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್​​ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರು ಪ್ರವಾಸಿಗರ ಬಳಿ ನೀವು ಎಲ್ಲಿಂದ ಬಂದವರು ಎನ್ನುವ ಪ್ರಶ್ನೆ ಕೇಳುತ್ತಾರೆ, ಆ ಅದರಲ್ಲಿ ಒಬ್ಬ ನಾವು ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳುತ್ತಾರೆ ಆಗ ಪ್ರವಾಸಿಗರೂ ಕೂಡ ನಕ್ಕು ಸುಮ್ಮನಾಗುತ್ತಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಿಗ್ ಬಾಸ್​​ನ ಗಿಲ್ಲಿನೇ ಗೆಲ್ಲೋದು; ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ – Kannada News | Gilli’s Bigg Boss Win Predicted by Shivrajkumar: Viral Video and Their Special Bond

ಶಿವರಾಜ್​​ಕುಮಾರ್ (Shivarajkumar) ಹಾಗೂ ಗಿಲ್ಲಿ ನಟನ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಗಿಲ್ಲಿಯ ಪರಿಚಯ ಶಿವರಾಜ್​​ಕುಮಾರ್ ಅವರಿಗೆ ಆಗಿತ್ತು. ಈ ಸಂದರ್ಭದಲ್ಲಿ ಗಿಲ್ಲಿಯನ್ನು ನೋಡಿ ಶಿವಣ್ಣ ಇಂಪ್ರೆಸ್ ಆಗಿದ್ದರು. ಈಗ ಗಿಲ್ಲಿಯೇ ಬಿಗ್ ಬಾಸ್ ಗೆಲ್ಲೋದು ಎಂದು ಶಿವರಾಜ್​​ಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಗಿಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಗಿಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಗಿಲ್ಲಿ ಟ್ಯಾಲೆಂಟ್ ನೋಡಿ ಶಿವಣ್ಣನಿಗೆ ಖುಷಿ ಆಗಿತ್ತು. ಈಗ ಗಿಲ್ಲಿ ಬಿಗ್ ಬಾಸ್​​ನಲ್ಲಿದ್ದಾರೆ. ಅಶ್ವಿನಿ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ರಘು ಹಾಗೂ ಧನುಶ್ ಜೊತೆ ಸ್ಪರ್ಧೆ ಮಾಡುತ್ತಿದ್ದಾರೆ. ಈ ಸ್ಪರ್ಧೆಯಲ್ಲಿ ಗೆಲುವು ಗಿಲ್ಲಿಗೆ ಸಿಗಲಿದೆ ಎಂಬುದು ಶಿವಣ್ಣನ ಅಭಿಪ್ರಾಯ.

ಕಾರ್ಯಕ್ರಮ ಒಂದರಲ್ಲಿ ಮಾತನಾಡುವಾಗ, ‘ಗಿಲ್ಲಿಯೇ ಗೆಲ್ಲೋದು’ ಎಂದು ಟೇಬಲ್ ತಟ್ಟಿ ಹೇಳಿದ್ದಾರೆ ಶಿವಣ್ಣ. ಇಷ್ಟೇ ಅಲ್ಲ, ಶಿವರಾಜ್​​ಕುಮಾರ್ ಅವರು ಗಿಲ್ಲಿಗೆ ಆಲ್​ ದಿ ಬೆಸ್ಟ್ ಕೂಡ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದು, ಗಿಲ್ಲಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಈ ಮೊದಲು ಗಿಲ್ಲಿ ಬಗ್ಗೆ ಮಾತನಾಡಿದ್ದ ಶಿವಣ್ಣ, . ‘ಗಿಲ್ಲಿನ ಹಾಕಿಕೊಂಡು ಒಂದು ಸಿನಿಮಾ ಮಾಡಬೇಕು. ಗಿಲ್ಲಿ ನೋಡಿದಾಗಲೆಲ್ಲ ತಮಿಳಿನ ಹಾಸ್ಯ ನಟ ಚಂದ್ರಬಾಬುನ ನೆನಪಾಗುತ್ತಾರೆ. ಚಂದ್ರಬಾಬು ಅದ್ಭುತ ಕಾಮಿಡಿಯನ್. ಗಿಲ್ಲಿ ಜೊತೆ ಖಂಡಿತವಾಗಿಯೂ ಒಂದು ಸಿನಿಮಾ ಮಾಡುತ್ತೇನೆ’ ಎಂದಿದ್ದರು ಶಿವಣ್ಣ.

ಇದನ್ನೂ ಓದಿ: ನಟ ಶಿವರಾಜ್​​ಕುಮಾರ್ ಸಾವು ಗೆದ್ದು ಒಂದು ವರ್ಷ; ಅಂದು ನಡೆದಿದ್ದೇನು?

ಈ ಬಾರಿ ಬಿಗ್ ಬಾಸ್ ಮನೆಗೆ ಬಂದಿದ್ದ ಜೋಗಿ ಪ್ರೇಮ್ ಅವರು ಗಿಲ್ಲಿಗೆ ವಿಶೇಷ ಪ್ರೀತಿ ತೋರಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೋಗುವಾಗ, ‘ಹೊರಗೆ ಬಂದ್ಮೇಲೆ ಸಿಗು’ ಎಂದಿದ್ದರು. ಹೀಗಾಗಿ, ಪ್ರೇಮ್ ಕೂಡ ಗಿಲ್ಲಿಗೆ ಸಿನಿಮಾದಲ್ಲಿ ಒಂದು ಪಾತ್ರ ಕೊಡಬಹುದು ಎಂದು ಅನೇಕರು ಊಹಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:54 pm, Fri, 16 January 26

Source link

ಮೊದಲ ಬಾಲಿವುಡ್ ಸಿನಿಮಾ ಮೂಲಕ ಸಂಪ್ರದಾಯ ಮುರಿದ ಸಾಯಿ ಪಲ್ಲವಿ: ಅಭಿಮಾನಿಗಳು ಒಪ್ಪುತ್ತಾರಾ? – Kannada News | Sai Pallavi’s first Bollywood movie Ek Din teaser released

ನಟಿ ಸಾಯಿ ಪಲ್ಲವಿ (Sai Pallavi) ದಕ್ಷಿಣದ ಸ್ಟಾರ್ ನಟಿ. ತಮ್ಮ ಅದ್ಭುತ ನಟನೆ, ನೃತ್ಯ ಮತ್ತು ಸೌಂದರ್ಯದಿಂದ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಸಾಯಿ ಪಲ್ಲವಿ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಾರೆ. ಇತರೆ ಸಮಕಾಲೀನ ನಟಿಯರಂತೆ ಗ್ಲಾಮರಸ್ ಮಾತ್ರ, ಮರ ಸುತ್ತುವ ಪಾತ್ರಗಳಲ್ಲಿ ಮಾತ್ರ ನಟಿಸದೆ ಸಮಾಜಕ್ಕೆ ಸಂದೇಶ ನೀಡುವ, ನಟನೆಗೆ ಒತ್ತು ಇರುವ ಪಾತ್ರಗಳನ್ನು ಮಾತ್ರವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ಸಾಯಿ ಪಲ್ಲವಿ ಮೊದಲ ಬಾರಿ ಬಾಲಿವುಡ್​ಗೆ ಕಾಲಿಟ್ಟಿದ್ದು, ಮೊದಲ ಹೆಜ್ಜೆಯಲ್ಲೇ ಪ್ರೇಕ್ಷಕರಿಗೆ ಮೋಡಿ ಮಾಡಿದ್ದಾರೆ. ಜೊತೆಗೆ ಮೊದಲ ಬಾಲಿವುಡ್ ಸಿನಿಮಾ ಮೂಲಕ ಇಷ್ಟು ವರ್ಷ ಪಾಲಿಸಿಕೊಂಡು ಬಂದ ಸಂಪ್ರದಾಯವೊಂದನ್ನು ಮುರಿದಿದ್ದಾರೆ.

ಸಾಯಿ ಪಲ್ಲವಿ ಹಿಂದಿಯ ‘ರಾಮಾಯಣ’ ಸಿನಿಮಾನಲ್ಲಿ ಸೀತೆಯ ಪಾತ್ರದಲ್ಲಿ ನಟಿಸುತ್ತಿರುವುದು ತಿಳಿದೇ ಇದೆ. ಆದರೆ ಸಾಯಿ ಪಲ್ಲವಿಯ ಮೊದಲ ಬಾಲಿವುಡ್ ಸಿನಿಮಾ ಇದಲ್ಲ ಬದಲಿಗೆ ಆಮಿರ್ ಖಾನ್ ಪುತ್ರನ ಜೊತೆಗೆ ನಟಿಸಿರುವ ‘ಏಕ್ ದಿನ್’. 2024 ರ ಆರಂಭದಲ್ಲೇ ಚಿತ್ರೀಕರಣ ಶುರುವಾದರೂ ಬಹಳ ತಡವಾಗಿ ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದ್ದು, ಸಾಯಿ ಪಲ್ಲವಿ ಸಖತ್ ಗಮನ ಸೆಳೆಯುತ್ತಿದ್ದಾರೆ.

ಆಮಿರ್ ಖಾನ್ ಪುತ್ರ ಝುನೈದ್ ಖಾನ್ ನಾಯಕನಾಗಿ ಸಾಯಿ ಪಲ್ಲವಿ ನಾಯಕಿಯಾಗಿರುವ ‘ಏಕ್ ದಿನ್’ ಸಿನಿಮಾ ಅಪ್ಪಟ ಪ್ರೇಮಕಥಾ ಸಿನಿಮಾ ಆಗಿದ್ದು, ಇಬ್ಬರು ಭಾರತೀಯರು ದೂರದ ಜಪಾನ್​ನಲ್ಲಿ ಪರಸ್ಪರ ಪ್ರೀತಿಗೆ ಬೀಳುವ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾದ ಬಹುತೇಕ ಚಿತ್ರೀಕರಣವನ್ನು ಜಪಾನ್​​ನಲ್ಲಿಯೇ ಚಿತ್ರೀಕರಿಸಲಾಗಿದ್ದು, ಸಿನಿಮಾದ ಟೀಸರ್​​ನಲ್ಲಿ ಜಪಾನ್​ ಸುಂದರ ತಾಣಗಳು ಅದ್ಭುತವಾಗಿ ಕಾಣುತ್ತಿವೆ.

ಇದನ್ನೂ ಓದಿ:ರಜನೀಕಾಂತ್-ಕಮಲ್ ಹಾಸನ್ ಸಿನಿಮಾನಲ್ಲಿ ನಟಿಸಲಿದ್ದಾರೆ ಸಾಯಿ ಪಲ್ಲವಿ?

‘ಏಕ್ ದಿನ್’ ಸಿನಿಮಾ, ಹೆಸರಿನಂತೆ ಒಂದೇ ದಿನದಲ್ಲಿ ನಡೆಯುವ ಕತೆ ಎನ್ನಲಾಗುತ್ತಿದೆ. ಇದೀಗ ಬಿಡುಗಡೆ ಆಗಿರುವ ಟೀಸರ್​​ನಲ್ಲಿ ಸಾಯಿ ಪಲ್ಲವಿ ತಮ್ಮ ನಟನೆ, ಕ್ಯೂಟ್​​ನೆಸ್​​ನಿಂದ ಗಮನ ಸೆಳೆಯುತ್ತಿದ್ದಾರೆ. ಝುನೈದ್ ಖಾನ್ ಸಹ ಪ್ರಬುದ್ಧ ನಟನೆ ನೀಡಿದಂತೆ ಟೀಸರ್​​ನಲ್ಲಿ ಕಾಣುತ್ತಿದೆ. ಸಿನಿಮಾದ ಕತೆ ಇಬ್ಬರು ಪ್ರಬುದ್ಧರ ನಡುವೆ ನಡೆಯುವ ಪ್ರೇಮಕತೆಯನ್ನು ಒಳಗೊಂಡಿದೆಯಂತೆ.

‘ಏಕ್ ದಿನ್’ ಸಿನಿಮಾವನ್ನು ಸುನಿಲ್ ಪಾಂಡೆ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ರಾಮ್ ಸಂಪತ್ ಸಂಗೀತವಿದೆ. ಈ ಸಿನಿಮಾ 2016ರಲ್ಲಿ ಬಿಡುಗಡೆ ಆಗಿದ್ದ ಥಾಯ್ ಸಿನಿಮಾದ ರೀಮೇಕ್ ಆಗಿದೆ. ಅಸಲಿಗೆ ಸಾಯಿ ಪಲ್ಲವಿ ರೀಮೇಕ್ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಈ ಹಿಂದೆ ರೀಮೇಕ್ ಸಿನಿಮಾ ಎಂಬ ಕಾರಣಕ್ಕೆ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶವನ್ನು ನಿರಾಕರಿಸಿದ್ದರು. ಖುದ್ದು ವೇದಿಕೆ ಮೇಲೆ ತಾವು ರೀಮೇಕ್ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದರು. ಆದರೆ ಈಗ ಥಾಯ್ ಭಾಷೆಯ ‘ಒನ್ ಡೇ’ ಸಿನಿಮಾದ ರೀಮೇಕ್​​ನಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ‘ಏಕ್ ದಿನ್’ ಸಿನಿಮಾ ಮೇ 1 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ – Kannada News | Alur Elephant Operation: Wild elephant’s Playful Start Before Rogue Capture

ಹಾಸನ, ಜನವರಿ 16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೊಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಶೋಭಾ ಎಂಬ ಮಹಿಳೆ ಬಲಿಯಾದ ಘಟನೆಗೆ ಸಂಬಂಧಿಸಿ, ಹಂತಕ ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಹಾಗೂ ಸುಗ್ರೀವ ಎಂಬ ಐದು ಸಾಕಾನೆಗಳು ಆಲೂರು ತಾಲ್ಲೂಕಿನ ಬೈರಾಪುರ ತಾತ್ಕಾಲಿಕ ಆನೆ ಶಿಬಿರಕ್ಕೆ ಆಗಮಿಸಿವೆ. ಕಾರ್ಯಾಚರಣೆ ಆರಂಭಕ್ಕೂ ಮುನ್ನ ಸಾಕಾನೆಗಳ ತುಂಟಾಟ ಎಲ್ಲರ ಗಮನ ಸೆಳೆದಿದ್ದು, ಧನಂಜಯ ಹಾಗೂ ಅಯ್ಯಪ್ಪ ಆನೆಗಳು ಪರಸ್ಪರ ಮುಖಾಮುಖಿಯಾಗಿ ಕೋರೆ ಮರ್ದಿಸಿ ಹುಡುಗಾಟ ನಡೆಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯ ಕೋಟೆ ಸರ್ಕಲ್‌ನಲ್ಲಿ ಅಳವಡಿಸಿದ್ದ ಅಕ್ರಮ ಬ್ಯಾನರ್ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಒಂದು ಚಲನಚಿತ್ರದ ಪ್ರಮೋಷನ್‌ಗಾಗಿ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಈ ಬ್ಯಾನರ್‌ನಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಗಾಳಿಗೆ ಅದು ಬೈಕ್ ಸವಾರರ ಮುಖಕ್ಕೆ ಅಪ್ಪಳಿಸಿ ಗಾಯಗೊಳಿಸುವ ಸಾಧ್ಯತೆಯೂ ಇತ್ತು ಎಂದು ಸ್ಥಳೀಯರು ಮತ್ತು ನಗರಸಭೆ ಸಿಬ್ಬಂದಿ ತಿಳಿಸಿದ್ದಾರೆ.

ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರ ಸೂಚನೆ ಮೇರೆಗೆ ಸಿಬ್ಬಂದಿ ಬ್ಯಾನರ್ ಅನ್ನು ತೆರವುಗೊಳಿಸಿದ್ದರು. ಈ ಕ್ರಮದಿಂದ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಆಕ್ರೋಶಗೊಂಡಿದ್ದು, ಪೌರಾಯುಕ್ತ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವಬೆದರಿಕೆ ಹಾಕದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯು ಶಿಡ್ಲಘಟ್ಟದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜೀವ್ ಗೌಡರ ವರ್ತನೆಯನ್ನು ಜನ ಖಂಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್: ವೋಟ್ ಮಾಡಲು ಭಾನುವಾರದವರೆಗೆ ಅವಕಾಶ; ಗಮನಿಸಬೇಕಾದ ವಿಷಯಗಳಿವು – Kannada News | Bigg Boss Kannada 12 Finale Voting: How to Vote, Last Date, Winner and Finalists Guide

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜನವರಿ 18) ಒಬ್ಬರು ಕಪ್ ಎತ್ತಲಿದ್ದಾರೆ. ಈ ಸೀಸನ್ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಇದೆ. ವೋಟ್ ಮಾಡೋದು ಹೇಗೆ? ಎಲ್ಲಿಯವರೆಗೆ ಇದಕ್ಕೆ ಅವಕಾಶ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಬಿಗ್ ಬಾಸ್ ಫಿನಾಲೆಯಲ್ಲಿ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಘು, ಧನುಶ್ ಇದ್ದಾರೆ. ಇವರ ಪೈಕಿ ಒಬ್ಬರಿಗೆ ವಿಜಯಲಕ್ಷ್ಮೀ ಒಲಿಯಲಿದೆ. ಆ ವ್ಯಕ್ತಿ ಯಾರು ಎಂಬ ಕುತೂಹಲ ಮೂಡಿದೆ. ಇದನ್ನು ತಿಳಿಯಲು ಭಾನುವಾರದವರೆಗೆ ಕಾಯಲೇಬೇಕು. ಆದರೆ, ನೀವು ನಿಮ್ಮ ಮತ ಹಾಕಿ ವಿನ್ನರ್ ಯಾರು ಎಂಬುದನ್ನು ನಿರ್ಧರಿಸಬಹುದು.

ಜಿಯೋ ಹಾಟ್​​ಸ್ಟಾರ್​ನಲ್ಲಿ ವೋಟಿಂಗ್ ಲೈನ್ ಆರಂಭ ಆಗಿದೆ. ಭಾನುವಾರದ (ಜನವರಿ 11)ಎಲಿಮಿನೇಷನ್ ಬಳಿಕ ಓಪನ್ ಆಗಿದ್ದು ಮಧ್ಯವಾರದ ಎಲಿಮಿನೇಷನ್​ ವೋಟಿಂಗ್ ಲೈನ್. ಈ ಮತಗಳನ್ನು ಫಿನಾಲೆಗೆ ಪರಿಗಣನೆ ಮಾಡಲಾಗುವುದಿಲ್ಲ. ಬುಧವಾರ (ಜನವರಿ 14) ಹೊಸ ವೋಟಿಂಗ್ ಲೈನ್ ಓಪನ್ ಆಗಿದ್ದು, ಇದನ್ನು ಮಾತ್ರ ಫಿನಾಲೆಗೆ ಪರಿಗಣಿಸಲಾಗುತ್ತದೆ. ಹೀಗಾಗಿ, ನಾನು ಸೋಮವಾರವೇ ವೋಟ್ ಹಾಕಿದ್ದೇನೆ, ಮಂಗಳವಾರವೇ ವೋಟ್ ಹಾಕಿದ್ದೇನೆ ಎಂದರೆ ಅದು ಪರಿಗಣನೆಗೆ ಬರೋದಿಲ್ಲ. ಇದು ಮೊದಲು ಗಮನಿಸಬೇಕಾದ ವಿಷಯ.

ಇನ್ನು, ಭಾನುವಾರ ಮುಂಜಾನೆ 10 ಗಂಟೆವರೆಗೆ ವೋಟ್ ಮಾಡಲು ಅವಕಾಶ ಇದೆ. ಪ್ರತಿ ಖಾತೆಗೆ 99 ಮತ ಹಾಕಲು ಅವಕಾಶ ಇದೆ. ಆರು ಜನರ ಪೈಕಿ ಓರ್ವ ಸ್ಪರ್ಧಿಗೆ 99 ಮತ ಹಾಕಬಹುದು. ಅಥವಾ ಎಲ್ಲಾ ಸ್ಪರ್ಧಿಗಳಿಗೂ ಸ್ವಲ್ಪ ಸ್ವಲ್ಪ ಮತ ಹಾಕಬಹುದು. ಒಮ್ಮೆ ವೋಟ್ ಸಲ್ಲಿಕೆ ಮಾಡಿದ ಬಳಿಕ ಮತ್ತೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಹೀಗಾಗಿ, ಆ ಬಗ್ಗೆ ಗಮನ ಬೇಕು.

ಇದನ್ನೂ ಓದಿ: ‘ಹೊರ ಹೋದ್ಮೇಲೆ ಬ್ಲಾಕ್ ಮಾಡ್ತೀನಿ’; ಬ್ಲ್ಯಾಕ್​​ಮೇಲ್ ಮಾಡಿದ ಕಾವ್ಯಾಗೆ ತಿರುಗೇಟು ಕೊಟ್ಟ ಗಿಲ್ಲಿ

ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಕೊಟ್ಟಿರುವುದರಿಂದ ಶನಿವಾರ ಎಲಿಮಿನೇಷನ್ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಾ ಇದೆ. ಈ ಬಗ್ಗೆ ಶನಿವಾರವರೇ ಘೋಷಣೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 16th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಕಡಿಮೆಗೊಂಡಿವೆ. ನಿನ್ನೆ ಗುರುವಾರ ಬೆಳಗ್ಗೆ 40 ರೂ ಕಡಿಮೆಗೊಂಡು, ಸಂಜೆ 60 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate) ಇವತ್ತು 20 ರೂ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3-4 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,755 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,145 ರೂ
  • ಚೆನ್ನೈ: 13,230 ರೂ
  • ಮುಂಬೈ: 13,145 ರೂ
  • ದೆಹಲಿ: 13,160 ರೂ
  • ಕೋಲ್ಕತಾ: 13,145 ರೂ
  • ಕೇರಳ: 13,145 ರೂ
  • ಅಹ್ಮದಾಬಾದ್: 13,150 ರೂ
  • ಜೈಪುರ್: 13,160 ರೂ
  • ಲಕ್ನೋ: 13,160 ರೂ
  • ಭುವನೇಶ್ವರ್: 13,145 ರೂ

ಇದನ್ನೂ ಓದಿ: ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,068 ರುಪಾಯಿ)
  • ದುಬೈ: 514.75 ಡಿರಾಮ್ (12,709 ರುಪಾಯಿ)
  • ಅಮೆರಿಕ: 143.50 ಡಾಲರ್ (13,011 ರುಪಾಯಿ)
  • ಸಿಂಗಾಪುರ: 184.70 ಸಿಂಗಾಪುರ್ ಡಾಲರ್ (13,003 ರುಪಾಯಿ)
  • ಕತಾರ್: 511 ಕತಾರಿ ರಿಯಾಲ್ (12,712 ರೂ)
  • ಸೌದಿ ಅರೇಬಿಯಾ: 521 ಸೌದಿ ರಿಯಾಲ್ (12,597 ರುಪಾಯಿ)
  • ಓಮನ್: 54.60 ಒಮಾನಿ ರಿಯಾಲ್ (12,887 ರುಪಾಯಿ)
  • ಕುವೇತ್: 41.94 ಕುವೇತಿ ದಿನಾರ್ (12,437 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 292 ರೂ
  • ಚೆನ್ನೈ: 306 ರೂ
  • ಮುಂಬೈ: 292 ರೂ
  • ದೆಹಲಿ: 292 ರೂ
  • ಕೋಲ್ಕತಾ: 292 ರೂ
  • ಕೇರಳ: 306 ರೂ
  • ಅಹ್ಮದಾಬಾದ್: 292 ರೂ
  • ಜೈಪುರ್: 292 ರೂ
  • ಲಕ್ನೋ: 292 ರೂ
  • ಭುವನೇಶ್ವರ್: 306 ರೂ
  • ಪುಣೆ: 292

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಲಕಿ ಕಣ್ಣೆದುರೇ ತಂದೆಯ ಕೊಲೆ ಪ್ರಕರಣ: ನಿಗೂಢ ಕೊಲೆಯ ಸುಳಿವು ನೀಡಿದ್ದ ಕಾರು! ಕೊನೆಗೂ ಬಲೆಗೆ ಬಿದ್ದ ಹಂತಕರು – Kannada News | Father Murdered Before Daughter’s Eyes in Tumakuru: Car Clue Leads Police to Killers Within 48 Hours

ಆರೋಪಿಗಳಾದ ಅರುಣ್, ಕವಿತೇಶ್ವರನ್ ಹಾಗೂ ಕೇಶವನ್

ತುಮಕೂರು, ಜನವರಿ 16: ಅದೊಂದು ಕೊಲೆಗೆ ಇಡೀ ತುಮಕೂರು (Tumakur) ಜಿಲ್ಲೆ ಬೆಚ್ಚಿ ಬಿದಿತ್ತು. ಮಕ್ಕಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿ ಅರಿಚಿತ ಮುಸುಕುಧಾರಿಗಳ ದಾಳಿಗೆ ಮೃತಪಟ್ಟಿದ್ದರು. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿದ್ದ ಮಂಜುನಾಥನ ಕೊಲೆ ತುಮಕೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಸಿಕ್ಕ ಅದೊಂದು ಸುಳಿವು ಆಧರಿಸಿ ಶಿವಮೊಗ್ಗ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ತುಮಕೂರು ಪೊಲೀಸರು ಕೃತ್ಯ ನಡೆದ 48 ಗಂಟೆಗಳಲ್ಲೇ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.

ಆರೋಪಿಗಳು ಮೂಲತಃ ತಮಿಳುನಾಡಿನವರಾದ ಸತೀಶ, ಕೇಶವನ್, ಕವಿತೇಶ್ವರನ್ ಹಾಗೂ ಅರುಣ್ ಎಂಬುದು ಗೊತ್ತಾಗಿದೆ. ಇವರು ಬೆಂಗಳೂರಿನ ಆನೆಕಲ್ ಭಾಗದ ಅತ್ತಿಬೆಲೆಯ ನಿವಾಸಿಗಳಾಗಿದ್ದಾರೆ. ವೃತ್ತಿಪರ ಕಳ್ಳರಾಗಿದ್ದು, ರಾಜ್ಯದ ವಿವಿಧೆಡೆ ಕಳ್ಳತನ ಕೃತ್ಯ ಎಸಗಿರುವ ಈ ಆರೋಪಿಗಳು ತುಮಕೂರಿಗೂ ಎಂಟ್ರಿ ಕೊಟ್ಟಿದ್ದರು. ಅದರಂತೆ ಚಿಕ್ಕನಾಯಕನಹಳ್ಳಿಯ ಕೆಂಕೆರೆಗೆ ಬಂದಿದ್ದ ಆರೋಪಿಗಳು, ಇದೇ ಮಂಜುನಾಥ್ ಮನೆಯ ಕಳ್ಳತನಕ್ಕೆ ಹೊಂಚು ಹಾಕಿದ್ದರು. ಹಿಂದಿನ ದಿನವೇ ಸಿದ್ಧತೆ ಮಾಡಿ ಜನವರಿ 11 ರಂದು ರಾತ್ರಿ 9ಗಂಟೆಗೆ ಕಳ್ಳತನಕ್ಕೆ ಬಂದಿದ್ದರು. ಕೈಗೆ ಗ್ಲೌಸ್ ಮುಖಕ್ಕೆ ಮಾಸ್ಕ್ ಧರಿಸಿ ಬಂಧವರೇ ಗೇಟ್ ಬಳಿಯೇ‌ ಮಕ್ಕಳ ಜೊತೆ ನಿಂತಿದ್ದ ಮಂಜುನಾಥ್ ಹಿಡಿದು ಅಂಗಡಿ ಬಾಗಿಲು ತೆರೆಯಲು ಹೇಳಿದ್ದರು. ನಿರಾಕರಿಸಿದ ಮಂಜುನಾಥ್​ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಇನ್ನು ಈ ವೇಳೆ ಮಂಜುನಾಥ್ ಅವರ 12 ವರ್ಷದ ಮಗಳು ಈ ಘಟನೆಯನ್ನು ಕಣ್ಣಾರೆ ಕಂಡು ಬೆಚ್ಚಿ ಬಿದಿದ್ದಳು.

ಆರೋಪಿಗಳ ಸುಳಿವು ಸಿಕ್ಕಿದ್ಹೇಗೆ?

ಘಟನೆ ಬಳಿಕ ಪ್ರಕರಣ ದಾಖಲಿಸಿದ್ದ ಹುಳಿಯಾರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ನಡುವೆ ಶಿವಮೊಗ್ಗದ ವಿನೋಭನಗರ ಪೊಲೀಸರಿಗೆ ಬೇಕಾದ ಕಳ್ಳರ ಗ್ಯಾಂಗ್​​ನ ಕಾರು ಕೊಲೆ ನಡೆದ ಊರಿನಲ್ಲಿ ಓಡಾಡಿದ್ದ ಮಾಹಿತಿ ಲಭ್ಯವಾಗಿತ್ತು. ಜೊತೆಗೆ ಅದೇ ಕಾರು ತುಮಕೂರಿನ ಶಿರಾ ತಾಲೂಕಿನ ಮನೆಗಳ್ಳತನಕ್ಕೂ ಬಳಕೆಯಾಗಿತ್ತು. ಇದೇ ಅನುಮಾನದಲ್ಲಿ ಕಾರಿನ ಬೆನ್ನು ಬಿದ್ದ ಪೊಲೀಸರಿಗೆ ಬೆಂಗಳೂರಿನ ಅತ್ತಿಬೆಲೆಯಲ್ಲಿ ಆರೋಪಿಗಳು ಪತ್ತೆಯಾಗಿದ್ದು, ನಾಲ್ವರು ಹಂತಕರ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು

ಇನ್ನು ಬಂಧಿತರು ಅಂತರರಾಜ್ಯ ಕಳ್ಳರಾಗಿದ್ದು, ರಾಜ್ಯದ ಹಲವು ಕಡೆ ಕಳ್ಳತನ ಕೃತ್ಯ ಎಸಗಿದ್ದಾರೆ. ಜೊತೆಗೆ 2018ರಲ್ಲಿ ಆನೇಕಲ್ ಬಳಿ ನಡೆದಿದ್ದ ಕೊಲೆ ಪ್ರಕರಣ ಒಂದರಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.

ಅಸಲಿಗೆ ಕೊಲೆಯಲ್ಲಿ ಐವರು ಶಾಮೀಲಾಗಿದ್ದು, ನಾಲ್ವರ ಬಂಧನವಾಗಿದೆ. ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದು ಆತನಿಗಾಗಿ ಹುಳಿಯಾರು ಪೊಲೀಸರು ಹುಡುಕಾಟ ನಡೆಸುತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link