Category Archives: Blog

Your blog category

20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ? – Kannada News | KD Movie Box Office: 20 Day Collection, Profit or Loss for Producers

‘ಕೆಡಿ’ ಸಿನಿಮಾ (KD Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಜೋಗಿ ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ ನಟನೆ ಸಿನಿಮಾದ ಹೈಲೈಟ್ ಆಗಿತ್ತು. ಈಗ ಸಿನಿಮಾ ರಿಲೀಸ್ ಆಗಿ 20 ದಿನಗಳು ಕಳೆದಿವೆ. ಕೆಲವರು ಚಿತ್ರವನ್ನು ಇಷ್ಟಪಟ್ಟರೆ, ಇನ್ನೂ ಕೆಲವರು ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆಯಾಗಿ ‘ಕೆಡಿ’ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ? ನಿರ್ಮಾಪಕರಿಗೆ ಲಾಭವೋ ಅಥವಾ ನಷ್ಟವೋ? ಆ ಬಗ್ಗೆ ಇಲ್ಲಿದೆ ವಿವರ.

‘ಕೆಡಿ’ ಸಿನಿಮಾ ರಿಲೀಸ್ ಆಗಿದ್ದು ಮೇ 1ರಂದು. ಅಂದರೆ ಸಿನಿಮಾ ತೆರೆಗೆ ಬಂದು ಇಂದಿಗೆ (ಮೇ 20) ಮೂರು ವಾರಗಳು ಪೂರ್ಣಗೊಳ್ಳಲಿವೆ. ಇಂದಿನ ಗಳಿಕೆಯ ಸಂಪೂರ್ಣ ಲೆಕ್ಕಾಚಾರ ಈಗಲೇ ಸಿಗೋದಿಲ್ಲ. ಹೀಗಾಗಿ, 20 ದಿನಗಳ ಗಳಿಕೆಯ ವಿವರವನ್ನು ನಾವು ನೀಡುತ್ತಿದ್ದೇವೆ.

‘ಕೆಡಿ’ ಸಿನಿಮಾ ಮೊದಲ ನಾಲ್ಕು ದಿನ ಅಬ್ಬರದ ಕಲೆಕ್ಷನ್ ಮಾಡಿತ್ತು. ಮೊದಲ ನಾಲ್ಕು ದಿನಕ್ಕೆ ಸಿನಿಮಾ 13.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಕುಗ್ಗುತ್ತಾ ಸಾಗಿತು. ಮಂಗಳವಾರ (ಮೇ 19) ಸಿನಿಮಾ ಕೇವಲ 19 ಲಕ್ಷ ಗಳಿಕೆ ಮಾಡಿದೆ. ರಾಜ್ಯಾದ್ಯಂತ ಚಿತ್ರಕ್ಕೆ 300 ಶೋಗಳನ್ನು ನೀಡಲಾಗಿದೆ.

‘ಕೆಡಿ’ ಸಿನಿಮಾದ ವಿಶ್ವ ಬಾಕ್ಸ್ ಆಫೀಸ್ ಕಲೆಕ್ಷನ್ 23 ಕೋಟಿ ರೂಪಾಯಿ ಆಗಿದೆ. ಈ ಚಿತ್ರದ ಒಟಿಟಿ ಹಕ್ಕು, ಟಿವಿ ಹಕ್ಕು ಹಾಗೂ ಮ್ಯೂಸಿಕ್ ಹಕ್ಕುಗಳು ಒಳ್ಳೆಯ ಮೊತ್ತಕ್ಕೆ ಮಾರಾಟ ಆಗಿವೆ ಎನ್ನಲಾಗಿದೆ. ಕೆಲವು ವರದಿ ಪ್ರಕಾರ ಚಿತ್ರದ ಬಜೆಟ್ 100-120 ಕೋಟಿ ರೂಪಾಯಿ ಎನ್ನಲಾಗಿದೆ. ಇದನ್ನು ಲೆಕ್ಕಾಚಾರ ಹಾಕಿದರೆ ನಿರ್ಮಾಣ ಸಂಸ್ಥೆಗೆ ಭಾರೀ ನಷ್ಟ ಆಗಿರಬಹುದು ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಇದನ್ನೂ ಓದಿ: ಮೂರನೇ ಭಾನುವಾರ ‘ಕೆಡಿ’ ಗಳಿಸಿದ್ದೆಷ್ಟು? ಒಟ್ಟೂ ಕಲೆಕ್ಷನ್ ವಿವರ ಇಲ್ಲಿದೆ

ಜೋಗಿ ಪ್ರೇಮ್ ನಿರ್ದೇಶನದ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಕೆಡಿ’ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಬಾಲಿವುಡ್ ನಟ ಸಂಜಯ್ ದತ್ ಮುಖ್ಯ ವಿಲನ್ ಆಗಿ ಕಾಣಿಸಿಕೊಂಡರೆ, ಶಿಲ್ಪಾ ಶೆಟ್ಟಿ ‘ಸತ್ಯವತಿ’ ಎಂಬ ಪ್ರಮುಖ ಪಾತ್ರದಲ್ಲಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ಪ್ರೇರಣಾ ಕಂಬಂ ಚಿತ್ರದ ಇತರ ಪ್ರಮುಖ ಪಾತ್ರವರ್ಗದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ – Kannada News | Bengaluru Mega Drug Bust: Hebbal Police Seize MDMA Worth Rupees 34 Crore, Arrest 8 Accused

ವಶಕ್ಕೆ ಪಡೆಯಲಾದ ಡ್ರಗ್ಸ್​​Image Credit source: Tv9 Kannada

ಬೆಂಗಳೂರು, ಮೇ 20: ಹೆಬ್ಬಾಳ ಪೊಲೀಸರು ಬೃಹತ್​​ ಡ್ರಗ್​​ ಜಾಲವೊಂದನ್ನು ಭೇದಿಸಿದ್ದು, ದೆಹಲಿಯಿಂದ ಬೆಂಗಳೂರಿಗೆ (Bengaluru) ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್​​ನ ಹೆಡೆಮುರಿ ಕಟ್ಟಿದ್ದಾರೆ. ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು, ಈ ಒಂದೇ ತಂಡದಿಂದ ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​​ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಈ ಜಾಲ ಮೂರು ಲೇಯರ್​​ಗಳಲ್ಲಿ ಕೆಲಸ ಮಾಡುತ್ತಿತ್ತು. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು ನಾನಾ ದಾರಿಗಳನ್ನು ಕಂಡುಕೊಂಡಿದ್ದರು ಎಂಬುದು ಕೂಡ ತನಿಖೆ ವೇಳೆ ಗೊತ್ತಾಗಿದೆ.

ಮುಖ್ಯಾಂಶಗಳು

  • ಬೃಹತ್​​ ಡ್ರಗ್​​ ಜಾಲ ಭೇದಿಸಿದ ಬೆಂಗಳೂರಿನ ಹೆಬ್ಬಾಳ ಪೊಲೀಸರು
  • ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು​​ ವಶಕ್ಕೆ
  • ಪ್ರಕರಣ ಸಂಬಂಧ  8 ಮಂದಿ ಆರೋಪಿಗಳನ್ನು ಬಂಧಿಸಿದ ಖಾಕಿ

ದೆಹಲಿಯಿಂದ ರೈಲಿನಲ್ಲಿ ಡ್ರಗ್ಸ್ ಸಾಗಿಸಿದ್ದ ಆರೋಪಿಗಳು ಅವನ್ನು ಸೀರೆ , ಐರನ್ ಮಾಡಲು ಬಳಸುವ ಟೇಬಲ್ ಮತ್ತು ಚೇರ್​​ಗಳಲ್ಲಿ ಅಡಗಿಸಿಟ್ಟು ತಂದಿದ್ದರು. ಗಿಫ್ಟ್ ರೀತಿಯಲ್ಲಿ ಪ್ಯಾಕ್ ಮಾಡಿ ಅವುಗಳಣ್ನ ಸಾಗಾಟ ಮಾಡಿದ್ದರು. ರೈಲಲ್ಲಿ ಸಾಗಿಸಿ ತಂದಿದ್ದ ಈ ಮಾದಕ ವಸ್ತುಗಳನ್ನು ಕಾರಿಗೆ ಶಿಫ್ಟ್​​ ಮಾಡುವ ವೇಳೆ ದಾಳಿ ನಡೆಸಿರುವ ಪೊಲೀಸರು 4 ಕೆಜಿ 300 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಸರ್ಜಾಪುರದ ಮನೆಯೊಂದರಲ್ಲಿ ಬಾಕಿ ಡ್ರಗ್ಸ್ ಇಟ್ಟಿರುವ ಮಾಹಿತಿ ಸಿಕ್ಕ ಹಿನ್ನೆಲೆ ಬೆಂಗಳೂರಿನ ಪೆಡ್ಲರ್ ಮನ್ಸೂರ್ ನಿವಾಸದಲ್ಲಿ ದಾಳಿ ನಡೆಸಲಾಗಿತ್ತು. ರೇಡ್​​ ವೇಳೆ ಮನೆಯಲ್ಲಿ 10 ಕೆಜಿ ಎಂಡಿಎಂಎ ಪತ್ತೆಯಾಗಿದೆ. ಬಳಿಕ ಅಬ್ದುಲ್ ಸಮಾದ್ ನಿವಾಸದಲ್ಲಿಯೂ ಡ್ರಗ್ಸ್ ಇರುವ ಬಗ್ಗೆ ಮಾಹಿತಿ ಆಧಾರದಲ್ಲಿ ಆತನ ಹೆಣ್ಣೂರು ನಿವಾಸದಲ್ಲಿ ತಪಾಸಣೆ ನಡೆಸಿದಾಗ 3.5 ಕೆಜಿ ಎಂಡಿಎಂಎ ಸಿಕ್ಕಿದೆ. ಆ ಮೂಲಕ ಒಟ್ಟು 34 ಕೋಟಿ ಮೌಲ್ಯದ 17 ಕೆಜಿಗೂ ಹೆಚ್ಚಿನ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್

ಇನ್ನು ಉತ್ತರ ಭಾರತ ಅಥವಾ ವಿದೇಶದಿಂದ ಡ್ರಗ್ಸ್ ದೆಹಲಿಗೆ ಬರುತ್ತಿದ್ದ ಡ್ರಗ್ಸ್​​ನ ಅಲ್ಲಿಂದ ದೇಶದ ವಿವಿಧ ಭಾಗಕ್ಕೆ ಆರೋಪಿಗಳು ಸರಬರಾಜು ಮಾಡುತ್ತಿದ್ದರು. ಸೆನೆಗಲ್​ನ ಡನ್ಫಾ ಗೆರಾಲ್ಡ್, ತಾಂಜೇನಿಯಾದ ಮೆಗ್ರಾತ್ ಮತ್ತು ನೈಜೀರಿಯಾ ಮೂಲದ ಒಬಿಯಾನಿಜ್ ರೀಟಾ ದೆಹಲಿಯ ಡೀಲರ್​​ಗಳಾಗಿದ್ದರೆ, ದೆಹಲಿ ಮೂಲದ ರೀನಾ ಯಾದವ್ , ದೆಬಶಿಶ್ ಬ್ಯಾನರ್ಜಿ ಮತ್ತು ಧೀರಜ್ ಬೆಂಗಳೂರಿನ ಟ್ರಾನ್ಸ್‌ಪೋರ್ಟರ್​​ಗಳಾಗಿ ಕೆಲಸ ಮಾಡುತ್ತಿದ್ದರು. ಮಂಗಳೂರು ಮೂಲದ ಬೆಂಗಳೂರು ನಿವಾಸಿಗಳಾಗಿರುವ ಮಹಮ್ಮದ್ ಮನ್ಸೂರ್ ಮತ್ತು ಅಬ್ದುಲ್ ಸಮಾದ್ ಬೆಂಗಳೂರಲ್ಲಿ ಪೆಡ್ಲರ್ಸ್​ಗಳಾಗಿದ್ದರು ಎಂಬುದು ತಿಳಿದುಬಂದಿದೆ.

ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಲ್ಲಿ ಐದು ಕೇಸ್ ದಾಖಲಾಗಿತ್ತು. ಈ ಸಂಬಂಧ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗ ವಿಚಾರಣೆ ವೇಳೆ ಡ್ರಗ್ಸ್ ಜಾಲದ ಮುಂದಿನ ಲೇಯರ್ ಪತ್ತೆಯಾಗಿತ್ತು. ಆ ಮಾಹಿತಿ ಅಧಾರದಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದೆಹಲಿ ಮತ್ತು ದೆಹಲಿ ಎನ್​​ಸಿಆರ್​​ನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಇದಕ್ಕಾಗಿ ಹೆಬ್ಬಾಳ ಮತ್ತು ಉತ್ತರ ವಿಭಾಗದ ಸುಮಾರು ನಲವತ್ತು ಪೊಲೀಸರನ್ನೊಳಗೊಂಡ ತಂಡ ರಚನೆ ಮಾಡಲಾಗಿತ್ತು. ತಂಡ ಕಳೆದ ಒಂದು ತಿಂಗಳಿಂದ ಈ ಕುರಿತು ಕೆಲಸ ಮಾಡಿದ್ದು, ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಮತ್ತು ಪೆಡ್ಲರ್ಸ್​​ಗಳನ್ನು ಹಂತ ಹಂತವಾಗಿ ಅರೆಸ್ಟ್​​ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಾಲಿವುಡ್ ಸ್ಟಾರ್ ನಟನಿಗೆ ‘ಧುರಂಧರ್’ ನೋಡುವಾಸೆ – Kannada News | Jack Ryan star John Krasinski says he wants to watch Dhurandhar movie

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ದೊಡ್ಡ ಹಿಟ್ ಆಗಿದೆ. ಎರಡೂ ಸಿನಿಮಾಗಳ ಒಟ್ಟು ಗಳಿಕೆ 4000 ಕೋಟಿಗಳ ಹತ್ತಿರಕ್ಕಿದೆ. ‘ಧುರಂಧರ್’ ಸರಣಿ ಭಾರತೀಯ ಪ್ರೇಕ್ಷಕರನ್ನು ಮಾತ್ರವಲ್ಲ, ವಿದೇಶಿ ಸಿನಿಮಾ ಪ್ರೇಮಿಗಳನ್ನೂ ಸೆಳೆದಿದೆ. ಇದೀಗ ಹಾಲಿವುಡ್​ನ ಸ್ಟಾರ್ ನಟರೊಬ್ಬರು ‘ಧುರಂಧರ್’ ಸಿನಿಮಾ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಹಾಲಿವುಡ್​ನ ಸೂಪರ್ ಹಿಟ್ ಸಿನಿಮಾಗಳಾದ ‘13 ಹವರ್ಸ್’, ‘ಡಾಕ್ಟರ್ ಸ್ಟ್ರೇಂಜ್’, ‘ಕ್ವೈಟ್ ಪ್ಲೇಸ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ ಮತ್ತು ವಿಶ್ವದಾದ್ಯಂತ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ವೆಬ್ ಸರಣಿ ‘ಜಾಕ್ ರಯಾನ್’ನ ನಾಯಕ ಜಾನ್ ಕ್ರಾಸಿನ್​ಸ್ಕಿ ತಮ್ಮ ಹೊಸ ಸಿನಿಮಾ ‘ಜಾಕ್ ರಯಾನ್’ ಪ್ರಚಾರದಲ್ಲಿದ್ದು, ಇತ್ತೀಚೆಗಷ್ಟೆ ಅವರು ಭಾರತದ ಟಿವಿ ವಾಹಿನಿಯೊಟ್ಟಿಗೆ ಮಾತನಾಡುತ್ತಾ, ‘ಧುರಂಧರ್’ ಸಿನಿಮಾ ನೋಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ನಿಮಗೆ ‘ಧುರಂಧರ್’ ಚಿತ್ರದ ಬಗ್ಗೆ ತಿಳಿದಿದೆಯೇ ಮತ್ತು ಒಟ್ಟಾರೆಯಾಗಿ ಭಾರತೀಯ ಚಿತ್ರರಂಗದ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಜಾನ್, ‘ನಾನು ಇನ್ನೂ ಆ (ಧುರಂಧರ್) ಚಿತ್ರವನ್ನು ನೋಡಿಲ್ಲ. ಆದರೆ ಭಾರತೀಯ ಚಿತ್ರರಂಗದ ಬಗ್ಗೆ ಹೇಳುವುದಾದರೆ, ಅಲ್ಲಿ ಅತ್ಯಂತ ಅತ್ಯಾಧುನಿಕ ಮತ್ತು ತಾಂತ್ರಿಕವಾಗಿ ಗುಣಮಟ್ಟದ ಸಿನಿಮಾಗಳು ತಯಾರಾಗುತ್ತಿವೆ. ಸಿನಿಮಾ ನಿರ್ದೇಶಿಸಲು ಪ್ರಯತ್ನಿಸುತ್ತಿರುವ ನನ್ನ ಅನೇಕ ನಿರ್ದೇಶಕ ಸ್ನೇಹಿತರು, ಅಲ್ಲಿಂದ ಬರುತ್ತಿರುವ ಚಿತ್ರಗಳನ್ನು ನೋಡಿ ನಿರಂತರವಾಗಿ ಆಶ್ಚರ್ಯ ಚಕಿತರಾಗುತ್ತಿರುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ:ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದು ನೋಡಿದ ಜನ, ಸರ್ವರ್ ಕ್ರ್ಯಾಶ್

‘ಅವಕಾಶ ಸಿಕ್ಕರೆ ಖಂಡಿತವಾಗಿಯೂ ‘ಧುರಂಧರ್’ ಸಿನಿಮಾವನ್ನು ನೋಡಬಯಸುತ್ತೇನೆ ಎಂದು ಹೇಳಿದ ಅವರು, ‘ಖಂಡಿತವಾಗಿ, ನನಗೆ ಯಾವುದೇ ಸಿನಿಮಾ ನೋಡಲು ಇಷ್ಟ. ಬೇರೆಯವರು ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡುವುದು ಯಾವಾಗಲೂ ನಮಗೆ ಸ್ಫೂರ್ತಿ ನೀಡುತ್ತದೆ. ‘ಧುರಂಧರ್’ ಸಿನಿಮಾ ಸಹ ನನಗೆ ಸ್ಪೂರ್ತಿ ನೀಡುವ ವಿಶ್ವಾಸವಿದೆ’ ಎಂದಿದ್ದಾರೆ ಜಾನ್.

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಭಾರಿ ಯಶಸ್ಸು ಗಳಿಸಿದ್ದು, ಇತ್ತೀಚೆಗಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಆದರೆ ಭಾರತದ ಹೊರಗೆ ಮಾತ್ರ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆದ ಕೂಡಲೇ ಪಾಕಿಸ್ತಾನ ಸೇರಿದಂತೆ ಇನ್ನೂ ಕೆಲ ದೇಶಗಳಲ್ಲಿ ಟಾಪ್ ಟ್ರೆಂಡಿಂಗ್​​ನಲ್ಲಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಹುಲ್ ದ್ರಾವಿಡ್​ಗೆ ನಾನು ಸದಾ ಚಿರಋಣಿ: ವಿರಾಟ್ ಕೊಹ್ಲಿ ಮನದಾಳದ ಮಾತು – Kannada News | Virat Kohli Opens Up On ‘Impostor Syndrome’ and Dravid’s Healing Touch

ವಿಶ್ವ ಕ್ರಿಕೆಟ್‌ನ ರನ್‌ ಮಷೀನ್, ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಸದಾ ಮೈದಾನದಲ್ಲಿ ಅಗ್ರೆಸ್ಸಿವ್ ಆಗಿ ಕಾಣುವ ಆಟಗಾರ. ಆದರೆ, ಸದಾ ಆತ್ಮವಿಶ್ವಾಸದಿಂದ ಬೀಗುವ ಕೊಹ್ಲಿ ಅವರನ್ನೂ ಕೂಡ ತೀವ್ರವಾದ ಮಾನಸಿಕ ಆತಂಕ ಕಾಡಿತ್ತು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸ್ಪೋರ್ಟ್ಸ್ ಸಮ್ಮಿಟ್‌ನಲ್ಲಿ ಸ್ವತಃ ಮನದಾಳ ಬಿಚ್ಚಿಟ್ಟಿರುವ ಕಿಂಗ್ ಕೊಹ್ಲಿ, ತಾವು ಸುದೀರ್ಘ ಕಾಲ ‘ಇಂಪೋಸ್ಟರ್ ಸಿಂಡ್ರೋಮ್’ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಕಠಿಣ ದಿನಗಳಲ್ಲಿ ಮಾಜಿ ಹೆಡ್ ಕೋಚ್ ರಾಹುಲ್ ದ್ರಾವಿಡ್ ತಮಗೆ ಮಾನಸಿಕ ರಕ್ಷಾಕವಚವಾಗಿ ನಿಂತು ವೃತ್ತಿಬದುಕನ್ನು ಕಾಪಾಡಿದ್ದನ್ನು ಕೊಹ್ಲಿ ಸ್ಮರಿಸಿದ್ದಾರೆ.

ಏನಿದು ಇಂಪೋಸ್ಟರ್ ಸಿಂಡ್ರೋಮ್?

ಇಂಪೋಸ್ಟರ್ ಸಿಂಡ್ರೋಮ್ (Impostor Syndrome) ಎಂದರೆ ಒಬ್ಬ ವ್ಯಕ್ತಿ ತಾನು ಸಾಧಿಸಿದ ಯಶಸ್ಸು ಮತ್ತು ಕೌಶಲ್ಯಗಳನ್ನು ನಂಬದೆ, ತನ್ನ ಸಾಮರ್ಥ್ಯದ ಬಗ್ಗೆ ತಾನೇ ಅಪನಂಬಿಕೆ ಹೊಂದುವ ಒಂದು ಮಾನಸಿಕ ಸ್ಥಿತಿ.

ಸರಳವಾಗಿ ಹೇಳುವುದಾದರೆ, ಎಷ್ಟೇ ಸಾಧನೆ ಮಾಡಿದ ಮೇಲೂ “ನಾನು ಇದಕ್ಕೆ ಅರ್ಹನಲ್ಲ, ನಾನೊಬ್ಬ ವಂಚಕ , ನನ್ನ ಅಸಲಿಯತ್ತು ಅಥವಾ ತಪ್ಪುಗಳು ಸದ್ಯದಲ್ಲೇ ಎಲ್ಲರಿಗೂ ಗೊತ್ತಾಗಿಬಿಡುತ್ತದೆ” ಎಂದು ಒಳಗೊಳಗೇ ಭಯಪಡುವುದೇ ಈ ಸಿಂಡ್ರೋಮ್. ಇದರ ಲಕ್ಷಣಗಳೆಂದರೆ…

  • ತಮ್ಮ ಯಶಸ್ಸು ಸ್ವಂತ ಕಷ್ಟದಿಂದ ಬಂದಿದ್ದಲ್ಲ, ಕೇವಲ ‘ಅದೃಷ್ಟ’ದಿಂದ ಸಿಕ್ಕಿದ್ದು ಎಂದು ಭಾವಿಸುವುದು.
  • ನೂರಾರು ಯಶಸ್ಸಿನ ನಡುವೆಯೂ, ಯಾವುದೋ ಒಂದು ಸಣ್ಣ ತಪ್ಪನ್ನು ಹಿಡಿದುಕೊಂಡು ಕೊರಗುವುದು.
  • ಬೇರೆಯವರು ತನ್ನನ್ನು ಜಡ್ಜ್ ಮಾಡುತ್ತಿದ್ದಾರೆ, ತನ್ನ ಮುಖವಾಡ ಕಳಚಿಬೀಳುತ್ತದೆ ಎಂದು ಸದಾ ಆತಂಕದಲ್ಲಿರುವುದು.

ಇಂತಹದೊಂದು ಮಾನಸಿಕ ಸಮಸ್ಯೆಯನ್ನು ವಿರಾಟ್ ಕೊಹ್ಲಿ ಕೂಡ ಅನುಭವಿಸಿದ್ದರು. ಈ ವೇಳೆ ಅವರ ನೆರವಿಗೆ ನಿಂತದ್ದು ಟೀಮ್ ಇಂಡಿಯಾ ದಿಗ್ಗಜ ರಾಹುಲ್ ದ್ರಾವಿಡ್.

ಈ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ, ನಾನು ಇಷ್ಟೆಲ್ಲಾ ಸಾಧನೆ ಮಾಡಿದ ಮೇಲೂ, ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಯುವ ಆಟಗಾರರು ತನ್ನನ್ನು ಹೇಗೆ ಅಳೆಯಬಹುದು ಎಂಬ ಆತಂಕ ಇಂದಿಗೂ ಕಾಡುತ್ತದೆ ಎಂದು ಕೊಹ್ಲಿ ಒಪ್ಪಿಕೊಂಡಿದ್ದಾರೆ.

“ನಾಯಕತ್ವದ ಜವಾಬ್ದಾರಿಯಲ್ಲಿ ನಾನು ಎಷ್ಟು ಮುಳುಗಿಹೋಗಿದ್ದೆ ಎಂದರೆ, ನನ್ನ ಸ್ವಂತ ಭಾವನೆಗಳ ಕಡೆಗೆ ಗಮನ ಹರಿಸುವುದನ್ನೇ ನಿಲ್ಲಿಸಿಬಿಟ್ಟಿದ್ದೆ. ನಾನು ಎಲ್ಲವನ್ನೂ ನಿಭಾಯಿಸುತ್ತಿದ್ದೇನೆ ಅಂದುಕೊಂಡಿದ್ದೆ, ಆದರೆ ಆ 9 ವರ್ಷಗಳಲ್ಲಿ ಯಾರೊಬ್ಬರೂ ನನ್ನ ಬಳಿ ಬಂದು ‘ನೀನು ಹೇಗಿದ್ದೀಯಾ?’ ಎಂಬ ಕನಿಷ್ಠ ಪ್ರಶ್ನೆಯನ್ನೂ ಕೇಳಲಿಲ್ಲ ಎಂಬುದನ್ನು ಆಮೇಲೆ ಅರಿತುಕೊಂಡೆ.”

“ನಾಯಕತ್ವದಿಂದ ಕೆಳಗಿಳಿದ ನಂತರ ಕೂಡ ಕೊಹ್ಲಿ ಅತ್ಯಂತ ಕಠಿಣ ಹಂತವನ್ನು ಎದುರಿಸಿದ್ದೆ. ಆ ಸಮಯದಲ್ಲಿ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ನನಗೆ ಬೆಂಬಲವಾಗಿ ನಿಂತರು” ಎಂದು ಕೊಹ್ಲಿ ಸ್ಮರಿಸಿದ್ದಾರೆ.

“ರಾಹುಲ್ (ದ್ರಾವಿಡ್) ಭಾಯ್ ಸ್ವತಃ ಉನ್ನತ ಮಟ್ಟದಲ್ಲಿ ಕ್ರಿಕೆಟ್ ಆಡಿದ್ದರಿಂದ ನಾನು ಅನುಭವಿಸುತ್ತಿದ್ದ ಮಾನಸಿಕ ಒತ್ತಡ ಅವರಿಗೆ ಚೆನ್ನಾಗಿ ಅರ್ಥವಾಗಿತ್ತು. ಅವರಿಬ್ಬರೂ ನನ್ನನ್ನು ಮಾನಸಿಕವಾಗಿ ತುಂಬಾ ಚೆನ್ನಾಗಿ ನೋಡಿಕೊಂಡರು. ನಾನು ಅವರಿಗಾಗಿ ಆಡಬೇಕು, ಮೈದಾನದಲ್ಲಿ ಕಷ್ಟಪಟ್ಟು ರನ್ ಗಳಿಸಬೇಕು ಎಂಬ ಹಸಿವನ್ನು ಅವರು ನನ್ನಲ್ಲಿ ಮತ್ತೆ ಮೂಡಿಸಿದರು. ನಾನು ಕ್ರಿಕೆಟ್ ಇತಿಹಾಸದಲ್ಲಿ ಸಾಧಿಸಿದ್ದನ್ನು ಅವರು ನನಗೆ ನೆನಪಿಸಿಕೊಟ್ಟರು, ಇದರಿಂದಾಗಿ ನಾನು ಮತ್ತೆ ಕ್ರಿಕೆಟ್ ಅನ್ನು ಆನಂದಿಸಲು ಸಾಧ್ಯವಾಯಿತು.” ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

“ನನ್ನ ಕೆರಿಯರ್​ನ ಈ ಕಠಿಣ ದಿನಗಳಲ್ಲಿ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮತ್ತು ವಿಕ್ರಮ್ ರಾಥೋಡ್ ನೀಡಿದ ಬೆಂಬಲಕ್ಕೆ ನಿಜವಾಗಲೂ ನಾನು ಚಿರಋಣಿ. ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ವಿರಾಟ್ ಕೊಹ್ಲಿ ಅವರ ಈ ಮಾತುಗಳು ಕ್ರೀಡಾಲೋಕದ ತೆರೆಯ ಮರೆಯ ಕಹಿಸತ್ಯವನ್ನು ಮತ್ತೊಮ್ಮೆ ಜಗತ್ತಿನ ಮುಂದೆ ತಂದಿಟ್ಟಿವೆ. ಮೈದಾನದಲ್ಲಿ ಸದಾ ಬಲಿಷ್ಠವಾಗಿ ಕಾಣುವ ಸೂಪರ್ ಸ್ಟಾರ್‌ಗಳೂ ಕೂಡ ಒಳಗೊಳಗೇ ತೀವ್ರ ಮಾನಸಿಕ ಹೋರಾಟ ನಡೆಸುತ್ತಿರುತ್ತಾರೆ ಎಂಬುದಕ್ಕೆ ಕೊಹ್ಲಿ ಅವರ ಈ ‘ಇಂಪೋಸ್ಟರ್ ಸಿಂಡ್ರೋಮ್’ ಒಪ್ಪಿಗೆಯೇ ಸಾಕ್ಷಿ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!

ಕೇವಲ ತಾಂತ್ರಿಕ ಕೌಶಲ್ಯಗಳಷ್ಟೇ ಅಲ್ಲದೆ, ರಾಹುಲ್ ದ್ರಾವಿಡ್ ಅವರಂತೆ ಆಟಗಾರರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸೂಕ್ಷ್ಮ ಮಾರ್ಗದರ್ಶಕರು ತಂಡದಲ್ಲಿದ್ದಾಗ ಮಾತ್ರ ಒಬ್ಬ ದಿಗ್ಗಜ ಆಟಗಾರ ತನ್ನ ವೃತ್ತಿಬದುಕನ್ನು ದೀರ್ಘಕಾಲ ಉಳಿಸಿಕೊಳ್ಳಲು ಸಾಧ್ಯ ಎಂಬುದಕ್ಕೆ ಕಿಂಗ್ ಕೊಹ್ಲಿ ಬಿಚ್ಚಿಟ್ಟಿರುವ ಈ ಘಟನೆಯೇ ಸಾಕ್ಷಿ.

Published On – 2:09 pm, Wed, 20 May 26

Source link

ಬೀದರ್​ನಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ: ಬರೋಬ್ಬರಿ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ನಾಶ – Kannada News | Bidar Rain Havoc: One Acre of Papaya Crop Destroyed as Hailstorm Lashes Kollar B Village; Farmer In Deep Distress

ಬೀದರ್, ಮೇ 20: ಬೀದರ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯು ರೈತರ ಬದುಕಿಗೆ ಭಾರಿ ಹೊಡೆತ ನೀಡಿದೆ. ಬೀದರ್ ತಾಲೂಕಿನ ಕೊಳ್ಳಾರ ಬಿ ಗ್ರಾಮದ ಬಾಬ್ ಶೆಟ್ಟಿ ಅವರ ಒಂದು ಎಕರೆಯ ಪಪ್ಪಾಯಿ ತೋಟ ಸಂಪೂರ್ಣವಾಗಿ ನಾಶವಾಗಿದೆ. ಐದು ತಿಂಗಳ ಹಿಂದೆ ನಾಟಿ ಮಾಡಿದ್ದ ಪಪ್ಪಾಯಿ ಬೆಳೆ ಇನ್ನೆರಡು ತಿಂಗಳಲ್ಲಿ ಕಟಾವಿಗೆ ಬರಬೇಕಿತ್ತು. ರೈತರು ಈ ಬೆಳೆಯ ಮೇಲೆ ಸುಮಾರು ಒಂದರಿಂದ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಆದರೆ, ಭಾರಿ ಮಳೆಯಿಂದಾಗಿ ಪ್ರತಿಯೊಂದು ಗಿಡದ ಎಲೆಗಳು ಉದುರಿ, ಕಾಯಿಗಳೂ ಹಾನಿಗೊಂಡಿವೆ.

ಸಾಲ ಸೋಲ ಮಾಡಿ ಪಪ್ಪಾಯಿ ಬೆಳೆದಿದ್ದ ಬಾಬ್ ಶೆಟ್ಟಿ, ನಾಲ್ಕೈದು ಲಕ್ಷ ರೂಪಾಯಿ ಆದಾಯ ಗಳಿಕೆಯ ನಿರೀಕ್ಷೆಯಲ್ಲಿದ್ದರು. ಆದರೆ, ಅನಿರೀಕ್ಷಿತ ಮಳೆಯಿಂದ ಬೆಳೆ ಸಂಪೂರ್ಣವಾಗಿ ಹಾಳಾಗಿರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಳಿ ಮತ್ತು ಆಲಿಕಲ್ಲು ಮಳೆ ರೈತರ ಬದುಕನ್ನು ಬರಬಾದ್ ಮಾಡಿದೆ ಎಂದು ಅವರು ಅಳಲನ್ನು ತೋಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ – Kannada News | Narendra Modi Gifts Melody Toffees to Giorgia Meloni in Lighthearted Moment

ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು ಕೊನೆಯ ಹಂತಕ್ಕಾಗಿ ಮಂಗಳವಾರ ರೋಮ್‌ಗೆ ಬಂದಿಳಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಶುದ್ಧ ಇಂಧನ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ವಿನಿಮಯಗಳಲ್ಲಿ ಸಹಕಾರದ ಮೇಲೆ ಕೇಂದ್ರೀಕರಿಸುವ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029 ರ ಅಡಿಯಲ್ಲಿ ಭಾರತ ಮತ್ತು ಇಟಲಿ ಸಂಬಂಧಗಳನ್ನು ಗಟ್ಟಿಗೊಳಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ನಡೆಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್​​ನಿಂದ ಹೊಸ ಡೆಡ್​​ಲೈನ್​​: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ – Kannada News | Supreme Court Extends Deadline For Greater Bengaluru Authority Elections Till August 31

ನವದೆಹಲಿ/ಬೆಂಗಳೂರು, ಮೇ 20: ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಜೂನ್​​ 30ರ ವರೆಗೆ ಈ ಮುಂಚೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಸಮಯಾವಕಾಶ ನೀಡಿರುವ ಕೋರ್ಟ್​​, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಮುಖ್ಯಾಂಶಗಳು

  • ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಗಡುವು ವಿಸ್ತರಣೆ
  • ಈ ಹಿಂದೆ ಜೂನ್​​ 30ರ ವರೆಗೆ ಸಮಯ ನೀಡಿದ್ದ ಸುಪ್ರೀಂಕೋರ್ಟ್​​
  • ಸರ್ಕಾರ, ಚುನಾವಣಾ ಆಯೋಗದ ಮನವಿ ಹಿನ್ನೆಲೆ ಸಮಯಾವಕಾಶ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠ ಈ ಬಗ್ಗೆ ಆದೇಶ ನೀಡಿದ್ದು, ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಗಡುವು ವಿಸ್ತರಣೆ ಕೋರಿ ಮನವಿ ಸಲ್ಲಿಸಿದ್ದರು. ರಾಜ್ಯದಲ್ಲಿ ನಡೆಯಲಿರುವ ವಿಶೇಷ ಮತದಾರರ ಪರಿಶೀಲನೆ (SIR) ಕಾರ್ಯದ ಹಿನ್ನೆಲೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗುತ್ತಿದೆ ಎಂದು ಅವರು ವಾದಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್, ಹಿಂದಿನ ಗಡುವು ವಿಸ್ತರಣೆ ವೇಳೆ ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಭರವಸೆ ನೀಡಿತ್ತು ಎಂದು ತಿಳಿಸಿದ್ದರು.

ಇದನ್ನೂ ಓದಿ: ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ; ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಇದಕ್ಕೆ ಪ್ರತಿಕ್ರಿಯಿಸಿದ ಸಿಂಘ್ವಿ, ಚುನಾವಣೆಗೆ ಅಗತ್ಯ ಸಿದ್ಧತೆಗಳೆಲ್ಲ ಪೂರ್ಣಗೊಂಡಿದ್ದರೂ SIR ಕಾರ್ಯದಿಂದ ಸಿಬ್ಬಂದಿ ಸಮಸ್ಯೆ ಉಂಟಾಗಿದೆ. ಕನಿಷ್ಠ ಎರಡರಿಂದ ಮೂರು ತಿಂಗಳ ಅವಧಿ ವಿಸ್ತರಣೆ ಅಗತ್ಯವಾಗಿದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇತ್ತ ರಾಜ್ಯ ಚುನಾವಣಾ ಆಯೋಗವೂ ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವಂತೆ ಕೋರ್ಟ್​​ ಈ ಹಿಂದೆ ನೀಡಿದ್ದ ಗಡುವು ವಿಸ್ತರಣೆಗೆ ಕೋರಿ ಮನವಿ ಮಾಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಓವರ್‌ ಆ್ಯಕ್ಟಿಂಗ್ ಮಾಡಿದ್ರೆ 50 ಪೈಸೆ ಕಟ್ ಮಾಡ್ತೀವಿ: ರಿಝ್ವಾನ್ ಫುಲ್ ಟ್ರೋಲ್! – Kannada News | Bangladesh Players Trolls Mohammad Rizwan

ಸಿಲ್ಹೆಟ್‌ನಲ್ಲಿ ನಡೆದ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಹೈ-ಡ್ರಾಮಾ ನಡೆದಿದೆ. ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಅವರ ವರ್ತನೆಗೆ ಬೇಸತ್ತ ಬಾಂಗ್ಲಾದೇಶ್ರ ಆಟಗಾರರು, ಬಾಲಿವುಡ್‌ನ ಪ್ರಸಿದ್ಧ ‘ಹೇರಾ ಫೇರಿ’ ಸಿನಿಮಾದ ಡೈಲಾಗ್ ಬಳಸಿ ಮೈದಾನದಲ್ಲೇ ಕಾಲೆಳೆದಿದ್ದಾರೆ.

 ಮೊಹಮ್ಮದ್ ರಿಝ್ವಾನ್ ಟ್ರೋಲ್:

ಪಾಕಿಸ್ತಾನ್ ತಂಡವು 437 ರನ್‌ಗಳ ಬೃಹತ್ ಗುರಿ ಬೆನ್ನಟ್ಟುತ್ತಿದ್ದಾಗ, 72ನೇ ಓವರ್‌ನಲ್ಲಿ ಎಡಗೈ ಸ್ಪಿನ್ನರ್ ತೈಜುಲ್ ಇಸ್ಲಾಂ ಬೌಲಿಂಗ್ ಮಾಡಲು ಬಂದರು. ಈ ವೇಳೆ ಸೈಟ್‌ಸ್ಕ್ರೀನ್ ಬಳಿ ಏನೋ ತೊಂದರೆಯಾಗಿದೆ ಎಂದು ರಿಝ್ವಾನ್ ಕೊನೆ ಕ್ಷಣದಲ್ಲಿ ಕ್ರೀಸ್​ನಿಂದ ಹಿಂದೆ ಸರಿದರು.

ರಿಝ್ವಾನ್ ಪದೇ ಪದೇ ಹೀಗೆ ಸಮಯ ವ್ಯರ್ಥ ಮಾಡುತ್ತಿರುವುದನ್ನು ಕಂಡು ಸಿಟ್ಟಾದ ಬಾಂಗ್ಲಾದೇಶ್ ವಿಕೆಟ್ ಕೀಪರ್ ಲಿಟನ್ ದಾಸ್, “ನಿಮ್ಮ ಸಮಸ್ಯೆಯಾದರೂ ಏನು? ನಿರಂತರವಾಗಿ ಬೌಲರ್‌ಗೆ ತೊಂದರೆ ಕೊಡುತ್ತಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ಇದರೊಂದಿಗೆ ಮೊಹಮ್ಮದ್ ರಿಝ್ವಾನ್ ಹಾಗೂ ಲಿಟ್ಟನ್ ದಾಸ್ ನಡುವೆ ಮಾತಿನ ಚಕಮಕಿ ಶುರುವಾಯಿತು. ಈ ವೇಳೆ ಅಂಪೈರ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಆದರೆ ಆ ಬಳಿಕ ಶುರುವಾಗಿದ್ದೇ ಅಸಲಿ ಟ್ರೋಲ್.

“50 ರನ್ ಮುಗಿಯಿತು, ಇನ್ನು ಆ್ಯಕ್ಟಿಂಗ್ ಶುರು” ಎಂದು ಲಿಟ್ಟನ್ ದಾಸ್ ರಿಝ್ವಾನ್​ಗೆ ಟಾಂಗ್ ನೀಡಿದರು. ಇನ್ನು ಕೇಳಿಸಿಕೊಂಡ ಪಾಕ್ ಆಟಗಾರ ಓವರ್ ಮುಗಿದ ನಂತರ ಅಂಪೈರ್‌ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Vaibhav Sooryavanshi: ಸರ್, ಅದರ ಬಗ್ಗೆ ತಲೆನೇ ಕೆಡಿಸಿಕೊಳ್ಳಲ್ಲ..!

ಇದೇ ಸಮಯವನ್ನು ಬಳಸಿಕೊಂಡ ಬಾಂಗ್ಲಾ ನಾಯಕ ನಜ್ಮುಲ್ ಹೊಸೈನ್ ಶಾಂತೊ ಮತ್ತು ಇತರ ಫೀಲ್ಡರ್‌ಗಳು ರಿಝ್ವಾನ್ ಅವರ ಕಾಲೆಳೆಯಲು ಬಾಲಿವುಡ್ ಡೈಲಾಗ್‌ಗಳನ್ನು ಬಳಸಿದ್ದಾರೆ.

  • “ಹಮ್ ಇಸ್ ಓವರ್‌ ಆಕ್ಟಿಂಗ್ ಕಾ ಫಿಫ್ಟಿ ಪೈಸಾ ಕಾಟೇಂಗೆ!” (ಈ ಓವರ್‌ ಆ್ಯಕ್ಟಿಂಗ್​ಗೆ ನಾವು 50 ಪೈಸೆ ಕಟ್ ಮಾಡ್ತೀವಿ! – ಹೇರಾ ಫೇರಿ ಸಿನಿಮಾ ಡೈಲಾಗ್)
  •  “ಬಾಲಿವುಡ್ ಮೇ ಜಗಾ ನಹೀ ಹೈ!” (ನಿಮಗೆ ಬಾಲಿವುಡ್‌ನಲ್ಲಿ ಜಾಗ ಸಿಗಲ್ಲ!)
  •  “ಅಚ್ಛಾ ಆ್ಯಕ್ಟಿಂಗ್ ಕರ್ ರಹಾ ಹೈ, ಸಬ್ಕೋ ಸಿಖಾ ರಹಾ ಹೈ.” (ಚೆನ್ನಾಗಿ ಆ್ಯಕ್ಟಿಂಗ್ ಮಾಡ್ತಿದ್ದಾನೆ, ಎಲ್ಲರಿಗೂ ಹೇಳಿಕೊಡ್ತಿದ್ದಾನೆ.)

ಹೀಗೆ ಹಾಸ್ಯಮಯವಾಗಿ ಮೊಹಮ್ಮದ್ ರಿಝ್ವಾನ್ ಅವರನ್ನು ಕಾಲೆಳೆಯುವ ಮೂಲಕ ಬಾಂಗ್ಲಾದೇಶ್ ಆಟಗಾರರು ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಒದಗಿಸಿದ್ದಾರೆ. ಇದೀಗ ಈ ಸ್ಲೆಡ್ಜಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಬಾಂಗ್ಲಾದೇಶ್ ಆಟಗಾರರ ಹಾಸ್ಯಪ್ರಜ್ಞೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

Published On – 1:40 pm, Wed, 20 May 26

Source link

ಬಾಲಕೃಷ್ಣ ಸಿನಿಮಾನಲ್ಲಿ ವಿಲನ್ ಆದ ‘ನಾಯಕ ನಟ’, ಭರ್ಜರಿ ಆಕ್ಷನ್ ನಿರೀಕ್ಷೆ – Kannada News | Manchu Manoj is getting ready to play villain in Nandamuri Balakrishna’s movie

ನಂದಮೂರಿ ಬಾಲಕೃಷ್ಣ (Nandamuri Balakrishna) ತಮ್ಮ 111ನೇ ಸಿನಿಮಾನಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡಲಿದ್ದು, ಅದ್ಧೂರಿ ಆಕ್ಷನ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ತೆಲುಗು ಚಿತ್ರರಂಗದಲ್ಲಿ ನಾಯಕನಾಗಿ ಹೆಸರು ಮಾಡಿದ್ದ ನಟನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಬಾಲಯ್ಯ ಎದುರು ಮಂಚು ಮನೋಜ್ ಅವರು ವಿಲನ್ ಆಗಿ ನಟಿಸಲಿದ್ದಾರೆ.

ಇಂದು (ಮೇ 20) ಮಂಚು ಮನೋಜ್ ಅವರ ಜನ್ಮದಿನವಾಗಿದ್ದು, ವಿಶೇಷ ಸಂದರ್ಭದಲ್ಲಿ ಚಿತ್ರತಂಡವು ಈ ಅಧಿಕೃತ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಅವರು ಅತ್ಯಂತ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದಾರೆ. ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರು ಮನೋಜ್ ಅವರಿಗಾಗಿ ಅತ್ಯಂತ ಕ್ರೂರ ಹಾಗೂ ಪವರ್‌ಫುಲ್ ಆದ ನೆಗೆಟಿವ್ ಪಾತ್ರವನ್ನು ಸೃಷ್ಟಿಸಿದ್ದು, ಕಥೆ ಕೇಳಿದ ತಕ್ಷಣವೇ ಮನೋಜ್ ಈ ಚಿತ್ರಕ್ಕೆ ಒಪ್ಪಿಗೆ ನೀಡಿದ್ದಾರಂತೆ.

ಈ ವಿಶೇಷ ಪಾತ್ರಕ್ಕಾಗಿ ಮಂಚು ಮನೋಜ್ ದೊಡ್ಡ ಮಟ್ಟದ ದೈಹಿಕ ಬದಲಾವಣೆಗೆ ಒಳಗಾಗುತ್ತಿದ್ದಾರೆ. ದೇಹವನ್ನು ಇನ್ನಷ್ಟು ಹುರಿಗೊಳಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಶರವೇಗದಲ್ಲಿ ಶೂಟಿಂಗ್ ನಡೆಯುತ್ತಿದ್ದು, ಆದಷ್ಟು ಬೇಗ ಮನೋಜ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಬೆಳ್ಳಿತೆರೆಯ ಮೇಲೆ ನಂದಮೂರಿ ಬಾಲಕೃಷ್ಣ ಮತ್ತು ಮಂಚು ಮನೋಜ್ ಅವರ ನಡುವಿನ ಮುಖಾಮುಖಿ ಮತ್ತು ಇಬ್ಬರ ರಗಡ್ ಎನರ್ಜಿ ಚಿತ್ರದ ಪ್ರಮುಖ ಆಕರ್ಷಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ತಮ್ಮದೇ ಮಿಮಿಕ್ರಿ ನೋಡಿ ಖುಷಿ ಪಟ್ಟ ನಂದಮೂರಿ ಬಾಲಕೃಷ್ಣ: ವಿಡಿಯೋ ನೋಡಿ

ವಾಸ್ತವದಲ್ಲಿ ಬಾಲಕೃಷ್ಣ ಮತ್ತು ಮಂಚು ಮನೋಜ್ ನಡುವೆ ಅತ್ಯಂತ ಆಪ್ತವಾದ ಬಾಂಧವ್ಯವಿದೆ. ಈ ಹಿಂದೆ ಮಂಚು ಮನೋಜ್ ನಟನೆಯ ‘ಊ ಕೊಡತಾರಾ ಉಲಿಕ್ಕಿ ಪಡತಾರಾ’ ಚಿತ್ರದಲ್ಲಿ ಬಾಲಕೃಷ್ಣ ಅವರು ಪ್ರಮುಖ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರಕ್ಕೆ ದೊಡ್ಡ ಶಕ್ತಿ ತುಂಬಿದ್ದರು. ಈಗ ಬಾಲಯ್ಯ ಅವರ ಚಿತ್ರದಲ್ಲೇ ಮನೋಜ್ ವಿಲನ್ ಆಗಿ ನಟಿಸುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ.

ಈ ಪ್ರಾಜೆಕ್ಟ್‌ಗೆ ಆಯ್ಕೆಯಾಗಿರುವುದರ ಬಗ್ಗೆ ಮಂಚು ಮನೋಜ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ‘ನನ್ನ ಗಾಡ್ ಫಾದರ್, ಲಯನ್ ನಂದಮೂರಿ ಬಾಲಕೃಷ್ಣ ಅವರೊಂದಿಗೆ ನಟಿಸಬೇಕೆಂಬುದು ನನ್ನ ಹಲವು ವರ್ಷಗಳ ಕನಸಾಗಿತ್ತು. ಈ ಜನ್ಮದಿನದಂದು ನನಗೆ ಸಿಕ್ಕ ಅತ್ಯಂತ ಸುಂದರ ಉಡುಗೊರೆ ಇದಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ ‘ಮಿರಾಯ್’ ಮತ್ತು ‘ಭೈರವಂ’ ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಮಂಚು ಮನೋಜ್ ಈಗಾಗಲೇ ನಟಿಸಿದ್ದು, ಎರಡೂ ಸಿನಿಮಾಗಳಲ್ಲಿ ಅವರ ಪಾತ್ರ ಹಿಟ್ ಆಗಿದೆ. ಈಗ ಮತ್ತೊಮ್ಮೆ ದೊಡ್ಡ ಸಿನಿಮಾನಲ್ಲಿ ವಿಲನ್ ಆಗಿ ಮಿಂಚಲು ಬಾಲಯ್ಯ ರೆಡಿ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Solar Eclipse: ಆಗಸ್ಟ್ 12 ರಂದು ಸಂಭವಿಸಲಿದೆ ಸಂಪೂರ್ಣ ಸೂರ್ಯಗ್ರಹಣ; ಭಾರತದಲ್ಲಿ ಇದು ಗೋಚರಿಸುತ್ತಾ? – Kannada News | August 12, 2026 Total Solar Eclipse: Global Spectacle and Scientific Insights

ಖಗೋಳಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳಿಗೆ 2026ರ ವರ್ಷ ಅತ್ಯಂತ ರೋಮಾಂಚನಕಾರಿ ವರ್ಷವಾಗಿದೆ. ಈ ಒಂದೇ ವರ್ಷದಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣಗಳು ಸೇರಿದಂತೆ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸುತ್ತಿವೆ. ಕೆಲವು ಗ್ರಹಣಗಳು ಈಗಾಗಲೇ ಮುಗಿದಿದ್ದು, ಈಗ ವಿಶ್ವದಾದ್ಯಂತ ಎಲ್ಲರ ಕಣ್ಣು ಆಗಸ್ಟ್ 12 ರಂದು ಸಂಭವಿಸಲಿರುವ ವರ್ಷದ ಎರಡನೇ ಹಾಗೂ ಅತ್ಯಂತ ಪ್ರಮುಖ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಮೇಲಿದೆ.

ವಿಜ್ಞಾನ ಲೋಕದಲ್ಲಿ ಈ ಘಟನೆಯನ್ನು ಒಂದು ದೊಡ್ಡ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಗ್ರಹಣದ ಸಂಪೂರ್ಣ ಅವಧಿ ಸುಮಾರು 1 ನಿಮಿಷ 53 ಸೆಕೆಂಡುಗಳು ಇರಲಿದ್ದು, ಈ ಸಮಯದಲ್ಲಿ ಚಂದ್ರನು ಸೂರ್ಯನನ್ನು ಪೂರ್ಣವಾಗಿ ಮರೆಮಾಚಲಿದ್ದಾನೆ. ಪರಿಣಾಮವಾಗಿ ಭೂಮಿಯ ಕೆಲವು ಭಾಗಗಳಲ್ಲಿ ಹಗಲಿನಲ್ಲೇ ದಟ್ಟ ಕತ್ತಲೆ ಆವರಿಸಲಿದೆ!

ಈ ಸೂರ್ಯಗ್ರಹಣ ಎಲ್ಲೆಲ್ಲಿ ಗೋಚರಿಸುತ್ತದೆ?

ಆಗಸ್ಟ್ 12 ರ ಈ ಭವ್ಯ ಖಗೋಳ ವಿದ್ಯಮಾನವು ಮುಖ್ಯವಾಗಿ ಉತ್ತರ ಗೋಳಾರ್ಧದ (Northern Hemisphere) ದೇಶಗಳಲ್ಲಿ ಕಂಡುಬರಲಿದೆ.

  • ಸಂಪೂರ್ಣ ಗ್ರಹಣ ಗೋಚರಿಸುವ ಪ್ರದೇಶಗಳು: ಆರ್ಕ್ಟಿಕ್ ಪ್ರದೇಶ, ಗ್ರೀನ್‌ಲ್ಯಾಂಡ್, ಐಸ್‌ಲ್ಯಾಂಡ್ ಮತ್ತು ಸ್ಪೇನ್ ದೇಶದ ಕೆಲವು ಭಾಗಗಳ ಜನರಿಗೆ ಈ ಅದ್ಭುತ ದೃಶ್ಯ ಕಣ್ಣಿಗೆ ಕಟ್ಟಿದಂತೆ ಕಾಣಿಸಲಿದೆ.
  • ಭಾಗಶಃ ಗ್ರಹಣ ಗೋಚರಿಸುವ ಪ್ರದೇಶಗಳು: ಪಶ್ಚಿಮ ಯುರೋಪ್ ಮತ್ತು ಉತ್ತರ ಅಮೆರಿಕದ ಬಹುತೇಕ ಭಾಗಗಳಲ್ಲಿ ಇದು ಭಾಗಶಃ ಸೂರ್ಯಗ್ರಹಣವಾಗಿ ಗೋಚರಿಸುತ್ತದೆ. ಕೆಲವು ಕಡೆಗಳಲ್ಲಿ ಸೂರ್ಯನ ಸುತ್ತಲೂ ಹೊಳೆಯುವ ಉಂಗುರದಂತಹ ಆಕೃತಿ ಕಾಣಿಸಲಿದ್ದು, ಇದನ್ನು ‘ಬೆಂಕಿಯ ಉಂಗುರ’ (Ring of Fire) ಎಂದು ಕರೆಯಲಾಗುತ್ತದೆ.

ಸಂಪೂರ್ಣ ಸೂರ್ಯಗ್ರಹಣದ ವೇಳೆ ಏನಾಗುತ್ತದೆ?

ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ನೇರವಾಗಿ ಬಂದು, ಸೂರ್ಯನ ಬೆಳಕು ಭೂಮಿಗೆ ಬೀಳದಂತೆ ಸಂಪೂರ್ಣವಾಗಿ ತಡೆದಾಗ ‘ಸಂಪೂರ್ಣ ಸೂರ್ಯಗ್ರಹಣ’ ಸಂಭವಿಸುತ್ತದೆ. ಈ ಸಮಯದಲ್ಲಿ ಪ್ರಕೃತಿಯಲ್ಲಿ ಕೆಲವು ಆಶ್ಚರ್ಯಕರ ಬದಲಾವಣೆಗಳಾಗುತ್ತವೆ. ಹಗಲು ವೇಳೆಯಲ್ಲೇ ದಿಢೀರನೆ ಕತ್ತಲೆ ಆವರಿಸಿ ರಾತ್ರಿಯ ವಾತಾವರಣ ನಿರ್ಮಾಣವಾಗುತ್ತದೆ. ವಾತಾವರಣದ ತಾಪಮಾನದಲ್ಲಿ ದಿಢೀರ್ ಇಳಿಕೆ ಕಂಡುಬರುತ್ತದೆ. ಆಕಾಶದಲ್ಲಿ ಹಗಲಿನಲ್ಲೇ ನಕ್ಷತ್ರಗಳು ಮತ್ತು ಗ್ರಹಗಳು ಕಣ್ಣಿಗೆ ಕಾಣಿಸುತ್ತವೆ.

ಸೂರ್ಯನ ಅತ್ಯಂತ ಹೊರಗಿನ ಪದರವಾದ ‘ಕರೋನಾ’ (Corona) ಈ ಸಮಯದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇದು ವಿಜ್ಞಾನಿಗಳಿಗೆ ಸೂರ್ಯನ ವಾತಾವರಣವನ್ನು ಅಧ್ಯಯನ ಮಾಡಲು ಸಿಗುವ ಅತ್ಯುತ್ತಮ ಅವಕಾಶವಾಗಿದೆ.

ಈ ಗ್ರಹಣ ವಿಜ್ಞಾನಿಗಳಿಗೆ ಏಕೆ ಇಷ್ಟೊಂದು ವಿಶೇಷ?

ಸಾಮಾನ್ಯವಾಗಿ ಭೂಮಿಯ ಮೇಲೆ ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ಎಲ್ಲೋ ಒಂದು ಕಡೆ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ. ಆದರೆ, ಅದು ಮನುಷ್ಯರು ವಾಸಿಸುವ ಜನನಿಬಿಡ ಪ್ರದೇಶಗಳಲ್ಲಿ ಗೋಚರಿಸುವುದು ತೀರಾ ಅಪರೂಪ. ಹೀಗಾಗಿ ಈ ಆಗಸ್ಟ್ 2026 ರ ಗ್ರಹಣಕ್ಕೆ ಜಾಗತಿಕವಾಗಿ ಭಾರಿ ಮಹತ್ವವಿದೆ.

ಯುರೋಪಿನ ಪಾಲಿಗೆ ಹಿಸ್ಟಾರಿಕ್ ಮೂಮೆಂಟ್:

ಯುರೋಪಿನ ದೊಡ್ಡ ಭಾಗದಲ್ಲಿ 1999 ರ ನಂತರ ಸಂಭವಿಸುತ್ತಿರುವ ಮೊದಲ ಸಂಪೂರ್ಣ ಸೂರ್ಯಗ್ರಹಣ ಇದಾಗಿದೆ. ಇನ್ನು ಐಸ್‌ಲ್ಯಾಂಡ್ ದೇಶವು ಬರೋಬ್ಬರಿ 1954 ರ ನಂತರ ಅಂದರೆ ಸುಮಾರು 72 ವರ್ಷಗಳ ಬಳಿಕ ಇಂತಹ ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗುತ್ತಿದೆ. ಇದೇ ಕಾರಣಕ್ಕೆ ಜಗತ್ತಿನಾದ್ಯಂತದ ಪ್ರವಾಸಿಗರು ಮತ್ತು ಖಗೋಳಶಾಸ್ತ್ರಜ್ಞರು ಈ ದಿನಕ್ಕಾಗಿ ಕಾಯುತ್ತಿದ್ದಾರೆ.

ಈ ಸೂರ್ಯಗ್ರಹಣ ಭಾರತದಲ್ಲಿ ಕಾಣಿಸುತ್ತದೆಯೇ?

ಇಲ್ಲ, ಈ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಆಗಸ್ಟ್ 12 ರಂದು ವಿದೇಶಗಳಲ್ಲಿ ಈ ಗ್ರಹಣ ಸಂಭವಿಸುವ ಸಮಯದಲ್ಲಿ ಭಾರತದಲ್ಲಿ ರಾತ್ರಿಯಿರುತ್ತದೆ. ಸೂರ್ಯನು ದಿಗಂತದ ಕೆಳಗೆ ಇರುವುದರಿಂದ ಭಾರತದ ಜನರಿಗೆ ಈ ಆಕಾಶ ವಿಸ್ಮಯವನ್ನು ನೇರವಾಗಿ ವೀಕ್ಷಿಸಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ!

ಭಾರತದಲ್ಲಿ ‘ಸೂತಕ ಅವಧಿ’ (Sutak Period) ಅನ್ವಯವಾಗುತ್ತದೆಯೇ?

ಧಾರ್ಮಿಕ ಮತ್ತು ಜ್ಯೋತಿಷ್ಯ ಶಾಸ್ತ್ರದ ನಿಯಮಗಳ ಪ್ರಕಾರ, ಗ್ರಹಣವು ಯಾವ ದೇಶ ಅಥವಾ ಪ್ರದೇಶದಲ್ಲಿ ಕಣ್ಣಿಗೆ ಕಾಣಿಸುತ್ತದೆಯೋ, ಅಲ್ಲಿ ಮಾತ್ರ ‘ಸೂತಕ ಕಾಲ’ ಅಥವಾ ಧಾರ್ಮಿಕ ನಿಯಮಗಳು ಅನ್ವಯವಾಗುತ್ತವೆ. ಈ ಸೂರ್ಯಗ್ರಹಣ ಭಾರತದಲ್ಲಿ ಕಾಣಿಸದೇ ಇರುವುದರಿಂದ ಇಲ್ಲಿ ಯಾವುದೇ ಸೂತಕ ಅವಧಿ ಇರುವುದಿಲ್ಲ.

ಸಾಮಾನ್ಯ ದಿನಚರಿ:

ಭಾರತದಾದ್ಯಂತ ಜನರು ಎಂದಿನಂತೆ ತಮ್ಮ ದೈನಂದಿನ ಕೆಲಸಗಳನ್ನು ಮಾಡಬಹುದು. ಪೂಜೆ ಪುನಸ್ಕಾರಗಳು, ಅಡುಗೆ ಮಾಡುವುದು, ಊಟ ಮಾಡುವುದು ಅಥವಾ ದೇವಸ್ಥಾನಗಳನ್ನು ಮುಚ್ಚುವ ಯಾವುದೇ ಧಾರ್ಮಿಕ ನಿರ್ಬಂಧಗಳು ಇರುವುದಿಲ್ಲ. ಜ್ಯೋತಿಷಿಗಳ ಪ್ರಕಾರ, ಭಾರತೀಯರ ಪಾಲಿಗೆ ಈ ಗ್ರಹಣವು ಧಾರ್ಮಿಕವಾಗಿ ಯಾವುದೇ ಪ್ರಭಾವ ಬೀರುವುದಿಲ್ಲ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:18 pm, Wed, 20 May 26

Source link