Headlines

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಗೂಬೆಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಬಲ್ಲಿರಾ? – Kannada News | Optical Illusion: Can you find the cat hiding among the owls

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: TinEye ನಿಮ್ಮ ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ದೀರಾ. ಹಾಗಾದ್ರೆ ನೀವು ಈ ಇಲ್ಯೂಷನ್ ಚಿತ್ರವನ್ನು ಏಕಾಗ್ರತೆಯಿಂದ ನೋಡುವುದು ಒಳ್ಳೆಯದು. ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಗೂಬೆಗಳ ನಡುವೆ ಇರುವಾಗ ಬೆಕ್ಕನ್ನು 10 ಸೆಕೆಂಡುಗಳೊಳಗೆ ಹುಡುಕಬೇಕು. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ? ಈ…

Read More

ಜಿಮ್ನಾಸ್ಟಿಕ್ ಬೆಲ್ಟ್​​ನಿಂದ ನೇಣು ಬಿಗಿದುಕೊಂಡು ತ್ವಿಶಾ ಸಾವು, ಮರಣೋತ್ತರ ವರದಿಯಲ್ಲಿ ಹಲವು ವಿಚಾರಗಳು ಬಹಿರಂಗ – Kannada News | New Forensic Details Surface in Twisha Sharma Death Investigation

ಭೋಪಾಲ್, ಮೇ 20: ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ತ್ವಿಶಾ ಶರ್ಮಾ(Twisha Sharma) ಅವರ ಅನುಮಾನಾಸ್ಪದ ಸಾವು ಪ್ರಕರಣ ಈಗ ಇಡೀ ದೇಶದ ಗಮನ ಸೆಳೆದಿದೆ. ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ಅವರ ಸೊಸೆಯಾಗಿರುವ ತ್ವಿಶಾ ಅವರ ಸಾವು ಕೇವಲ ಆತ್ಮಹತ್ಯೆಯಲ್ಲ, ಅದೊಂದು ವ್ಯವಸ್ಥಿತ ಕೊಲೆ ಎಂದು ಹೆತ್ತ ಕುಟುಂಬ ಆಕ್ರೋಶ ಹೊರಹಾಕಿದೆ. ನ್ಯಾಯಕ್ಕಾಗಿ ಆಗ್ರಹಿಸಿ ತ್ವಿಶಾ ಅವರ ಕುಟುಂಬಸ್ಥರು ಮಂಗಳವಾರ ಸತತ ಏಳನೇ ದಿನವೂ ಮಗಳ…

Read More

ಅಭಿಮಾನಿಗಳು ತಳ್ಳಲು ಬಂದ ಬೌನ್ಸರ್​​ಗೆ ಸರಿಯಾಗಿ ಕ್ಲಾಸ್​ ತೆಗೆದುಕೊಂಡ ಜೂ.ಎನ್​ಟಿಆರ್ – Kannada News | Jr. NTR Defends Fans, Scolds Bouncers for Rude Behavior On His Birthday

ನೆಚ್ಚಿನ ಸ್ಟಾರ್ ನಟನನ್ನು ಕಣ್ತುಂಬಿಕೊಳ್ಳಲು ನೂರಾರು ಕಿಲೋಮೀಟರ್ ದೂರದಿಂದ ಬರುವ ಅಭಿಮಾನಿಗಳ ಮೇಲೆ ನಟರಿಗೆ ಸಾಕಷ್ಟು ಪ್ರೀತಿ ಇರುತ್ತದೆ. ಆದರೆ, ಅವರ ಭದ್ರತಾ ಸಿಬ್ಬಂದಿ ಮಾತ್ರ ಉದ್ಧಟತನ ತೋರುತ್ತಿರುತ್ತಾರೆ. ಸಾರ್ವಜನಿಕವಾಗಿ ಅಭಿಮಾನಿಗಳನ್ನು ದೂಡುವುದು, ಮುಗಿಬೀಳುವುದು ಬೌನ್ಸರ್‌ಗಳಿಗೆ ಸಾಮಾನ್ಯ ಎಂಬಂತಾಗಿದೆ. ಜೂನಿಯರ್ ಎನ್​​ಟಿಆರ್ (JR NTR) ಬೌನ್ಸರ್ ಕೂಡ ಇದೇ ರೀತಿ ನಡೆದುಕೊಂಡರು. ಆದರೆ, ಈ ಸಂದರ್ಭದಲ್ಲಿ ಅವರು ತಮ್ಮ ಅಭಿಮಾನಿಗಳ ಪರವಾಗಿ ನಿಂತು, ದುರ್ವರ್ತನೆ ತೋರಿದ ಭದ್ರತಾ ಸಿಬ್ಬಂದಿಗೆ ಎಲ್ಲರೆದುರೇ ಕ್ಲಾಸ್ ತಗೊಂಡಿದ್ದಾರೆ. ಜೂನಿಯರ್ ಎನ್​​ಟಿಆರ್ ಅವರ…

Read More

ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮತ್ತು ಆನೆ ಸಾವು ಪ್ರಕರಣ: ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದ ಅರಣ್ಯ ಇಲಾಖೆ! – Kannada News | Dubare Elephant Camp Tragedy: Expert Report Ignored by Forest Department Before Mishap

ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮತ್ತು ಆನೆ ಸಾವು ಪ್ರಕರಣ: ತಜ್ಞರ ಸಮಿತಿ ವರದಿಯನ್ನ ನಿರ್ಲಕ್ಷಿಸಿದ್ದ ಅರಣ್ಯ ಇಲಾಖೆ! ಕೊಡಗು, ಮೇ 20: ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ (ಮೇ 18) ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದರು. ಇದರ ಬೆನ್ನಲ್ಲೇ, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದಾರುಣ ಘಟನೆಗೆ ಅರಣ್ಯ ಇಲಾಖೆಯ…

Read More

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಎಫೆಕ್ಟ್​​: ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರದ ಕೊರತೆ – Kannada News | Middle East War Impact: Karnataka Faces 38,000 Ton Fertilizer Shortage Ahead of Monsoon Sowing

ಬೆಂಗಳೂರು, ಮೇ 20: ಮಧ್ಯಪ್ರಾಚ್ಯದಲ್ಲಿನ ಯುದ್ಧ ಕೇವಲ ಇಂಧನಗಳ ಅಭಾವದ ಸಮಸ್ಯೆಯನ್ನು ಮಾತ್ರ ಸೃಷ್ಟಿಸಿಲ್ಲ. ಹತ್ತು ಹಲವು ತೊಂದರೆಗಳಿಗೆ ಕಾರಣವಾಗಿದ್ದು, ಅನ್ನದಾತರನ್ನೂ ಸಂಕಷ್ಟಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಸಂಕಷ್ಟದ ಪರಿಣಾಮ ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ ಎದುರಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ. 14 ಸಾವಿರ ಟನ್ ಯೂರಿಯಾ ಕೊರತೆಯೂ…

Read More

ಸೋಲು ಹೀನಾಯ ಸೋಲು… ಪಾಕಿಸ್ತಾನ್ ವೈಟ್ ವಾಶ್ಡ್​..! – Kannada News | Pakistan whitewashed by Bangladesh

ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಬಾಂಗ್ಲಾ ಪಡೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮೊದಲ ಇನಿಂಗ್ಸ್​ನಲ್ಲಿ 278 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ 232 ರನ್​ಗಳಿಗೆ ಆಲೌಟ್ ಆಗಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಾಂಗ್ಲಾದೇಶ್…

Read More

ಗಡಿಪಾರಾಗಿದ್ದ ರೌಡಿಯನ್ನು ಮಗಳ ಮದುವೆ ಮಂಟಪದಿಂದಲೇ ಸಿನಿಮೀಯ ಶೈಲಿಯಲ್ಲಿ ಎಳೆದೊಯ್ದ ಪೊಲೀಸರು: ವಿಡಿಯೋ ವೈರಲ್ – Kannada News | KGF Rowdy Sheeter Arrested From Daughter Marriage Hall: Extortionist Stanley Nabbed in Filmy Style by Kolar Police

ಕೋಲಾರ, ಮೇ 20: ಕೋಲಾರ ಜಿಲ್ಲೆಯ ಕೆಜಿಎಫ್‌ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್‌ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ…

Read More

ಆಪರೇಷನ್ ಎಪಿಕ್ ಫ್ಯೂರಿಯಲ್ಲಿ ಅಮೆರಿಕಕ್ಕೆ ಭಾರಿ ಪೆಟ್ಟು, ಇರಾನ್​ ಮೇಲಿನ ದಾಳಿಯಲ್ಲಿ 42 ಯುದ್ಧ ವಿಮಾನಗಳು, ಡ್ರೋನ್​ಗಳು ಧ್ವಂಸ – Kannada News | The Ghostly Cost of Epic Fury How a Single U.S. Operation Against Iran Left 42 Warplanes Damaged or Destroyed

ವಾಷಿಂಗ್ಟನ್, ಮೇ 20: ಅಮೆರಿಕ(America)ವು ಫೆಬ್ರವರಿ 28ರಂದು ಇರಾನ್ ವಿರುದ್ಧ ನಡೆಸಿದ ಹೈ-ವೋಲ್ಟೇಜ್ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ತನ್ನ ಅತ್ಯಂತ ಆಧುನಿಕ ಫೈಟರ್ ಜೆಟ್‌ಗಳು ಮತ್ತು ಡ್ರೋನ್‌ಗಳು ಸೇರಿದಂತೆ ಕನಿಷ್ಠ 42 ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಅಥವಾ ಭೀಕರವಾಗಿ ಹಾನಿಗೊಳಿಸಿಕೊಂಡಿದೆ ಎಂದು ಅಧಿಕೃತ ವರದಿ ಬಹಿರಂಗಪಡಿಸಿದೆ. ಮಿಲಿಟರಿ ಕಾರ್ಯಾಚರಣೆಗಳ ರಹಸ್ಯ ವರ್ಗೀಕರಣ ನಿರ್ಬಂಧಗಳು, ಆ ಪ್ರದೇಶದಲ್ಲಿ ಇನ್ನೂ ನಡೆಯುತ್ತಿರುವ ಯುದ್ಧ ಮತ್ತು ಹಾನಿಯ ನಿಖರ ಮೌಲ್ಯಮಾಪನದ ಸವಾಲುಗಳಿಂದಾಗಿ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು…

Read More

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಯುವಕನ ಹೈಡ್ರಾಮಾ: ಪ್ರೇಮಿಯ ಹುಚ್ಚಾಟಕ್ಕೆ ಜನರು ಕಂಗಾಲು – Kannada News | Anekal Love Failure Drama: Dejected Lover Climbs High Tension Electric Pole After Girl Rejects Marriage Proposal

ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿImage Credit source: tv9 ಆನೇಕಲ್, ಮೇ 20: ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿ ಕೈಕೊಟ್ಟಿದ್ದಾಳೆಂಬ ಕಾರಣಕ್ಕೆ ಬೇಸತ್ತ ಯುವಕನೊಬ್ಬ ಅಪಾಯಕಾರಿ ಸಾಹಸ ಮಾಡಿದ್ದಾನೆ. ಆತ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಆನೇಕಲ್ (Anekal) ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ಚಿನ್ನಯ್ಯನಪಾಳ್ಯದ ನಿವಾಸಿಯಾದ ಸೋಮಶೇಖರ್ ಎಂಬಾತನೇ ವಿದ್ಯುತ್ ಕಂಬದ ಮೇಲೇರಿ ಹೈಡ್ರಾಮಾ ಸೃಷ್ಟಿಸಿರುವ ಪ್ರೇಮಿ. ಈತನ ಹುಚ್ಚಾಟದಿಂದಾಗಿ ಇಡೀ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಂಟೆಗಟ್ಟಲೆ ಆತಂಕದಲ್ಲಿ…

Read More

ಜೂ ಎನ್​​ಟಿಆರ್​​ಗೆ ಏನಾಗಿದೆ? ಕಾಡುತ್ತಿದ್ದೆಯೇ ಅನಾರೋಗ್ಯ?

ಇಂದು (ಮೇ 20) ತೆಲುಗು ಚಿತ್ರರಂಗದ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ವರ್ಷದ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ಭಾರಿ ಸಂಖ್ಯೆಯ ಅಭಿಮಾನಿಗಳು ನಟನ ಮನೆ ಬಳಿ ತೆರಳಿ ನೆಚ್ಚಿನ ನಟನಿಗೆ ಶುಭಾಶಯಗಳನ್ನು ತಿಳಿಸಿದರು. ಜೂ ಎನ್​​ಟಿಆರ್ ಸಹ ಮಧ್ಯರಾತ್ರಿ ಎದ್ದು ಬಂದು ಅಭಿಮಾನಿಗಳತ್ತ ಕೈಬೀಸಿ ಧನ್ಯವಾದ ಹೇಳಿದರು. ಜೂ ಎನ್​​ಟಿಆರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುವ ಜೊತೆಗೆ ಅವರ ಬಗ್ಗೆ ಅವರ ಆರೋಗ್ಯದ ಬಗ್ಗೆ ಕೆಲವರು ಕಾಳಜಿಯನ್ನು ವ್ಯಕ್ತಪಡಿಸುತ್ತಿದ್ದಾರೆ….

Read More