ಕನ್ನಡ ಕಿರುತೆರೆ ಲೋಕದಲ್ಲಿ ಟಿ.ಎನ್. ಸೀತಾರಾಮ್ ಅವರ ಧಾರಾವಾಹಿಗಳಿಗೆ ಬೇರೆಯದ್ದೇ ಆದ ಪ್ರೇಕ್ಷಕ ವರ್ಗವಿದೆ. ಈಗ ಅವರ ಮಗಳು ಕೂಡ ನಿರ್ದೇಶನದ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂಬುದು ವಿಶೇಷ.
ಟಿ.ಎನ್. ಸೀತಾರಾಮ್ ಅವರ ಪುತ್ರಿ ಅಶ್ವಿನಿ ಅನೀಶ್ ಅವರು ‘ದಿ ಡೈಲಿ ಡ್ರಾಪ್’ ಎಂಬ ಕೋರ್ಟ್ ರೂಮ್ ಸೀರೀಸ್ ನಿರ್ದೇಶನ ಮಾಡಿ ಬಿಡುಗಡೆ ಮಾಡಿದ್ದಾರೆ. ಈ ಸೀರಿಸ್ನಲ್ಲಿ ಆರು ಸಂಚಿಕೆಗಳು ಇವೆ.
‘ತಪಸ್ವಿ ಪ್ರೊಡಕ್ಷನ್’ ಮೂಲಕ ‘ದಿ ಡೈಲಿ ಡ್ರಾಪ್’ ನಿರ್ಮಾಣ ಆಗಿದೆ. ಶ್ರೀನಿವಾಸ ಪ್ರಭು, ಅಶ್ವಿನಿ ಅನೀಶ್, ದೀಪ, ಸಂತೋಷ ಕರ್ಕಿ, ಸುದರ್ಶನ್, ನಮನ, ಪರಮ್, ಪವನ್, ನವನೀತ್ ಚಂದನ್ ಶಂಕರ್ ಮುಂತಾದವರು ನಟಿಸಿದ್ದಾರೆ.
ಮಹೇಶ್ ಪೈ ಕ್ಯಾಮೆರಾ ವರ್ಕ್ ಇರುವ ಈ ಸೀರಿಸ್ಗೆ ಶಿವ ಸಮರ್ಥ್ ಸಂಗೀತ ನಿರ್ದೇಶನ ಮಾಡಿದ್ದಾರೆ. ‘Lifepages’ ಯೂಟ್ಯೂಬ್ ಚಾನೆಲ್ ಮೂಲಕ ಈ ಸೀರಿಸ್ನ ಸಂಚಿಕೆಗಳನ್ನು ನೋಡಬಹುದಾಗಿದೆ.
35ರ ವಯಸ್ಸಿನ ಆಸುಪಾಸಿನ ಮಹಿಳೆಯೊಬ್ಬಳು ಕಾರ್ ಡ್ರೈವ್ ಮಾಡುವಾಗ ನಿಗೂಢವಾಗಿ ಸಾಯುತ್ತಾಳೆ. ಅವಳ ಸಾವಿಗೆ ಕಾರಣ ಬೇರೆಯದ್ದೇ ಇರುತ್ತೆ. ಅದೇನು ಎಂಬುದೇ ಈ ಸೀರೀಸ್ನ ಇಂಟರೆಸ್ಟಿಂಗ್ ಕಥೆ.
ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡಿದ್ದಲ್ಲದೆ ಅಧಿಕೃತವಾಗಿ ಫೈನಲ್ಗೂ ಟಿಕೆಟ್ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ 319 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘನ್ ಎ ಕೇವಲ218 ರನ್ಗಳಿಗೆ ಆಲೌಟ್ ಆಯಿತು.
ವಾಷಿಂಗ್ಟನ್, ಜೂನ್ 17: ಮೆಟಾ ಸಂಸ್ಥೆ ತನ್ನ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಬಳಕೆಗೆ ಹಣ ವಿಧಿಸಲು (Paid Subscriptions) ದಿಢೀರ್ ನಿರ್ಧಾರ ಮಾಡಿದೆ. ಮೆಟಾ ಕಂಪನಿಯ ಪ್ರಾಡಕ್ಟ್ ವಿಭಾಗದ ಮುಖ್ಯಸ್ಥರಾದ ನವೋಮಿ ಗ್ಲೈಟ್ (Naomi Gleit) ಅವರು ಜಾಗತಿಕವಾಗಿ ಹೊಸ “ಪ್ಲಸ್” (Plus) ಸಬ್ಸ್ಕ್ರಿಪ್ಷನ್ ಯೋಜನೆಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅದರ ಪ್ರಕಾರ, ಸಬ್ಸ್ಕ್ರಿಪ್ಷನ್ ದರಗಳು ಈ ಕೆಳಕಂಡಂತಿವೆ:
ಇನ್ಸ್ಟಾಗ್ರಾಮ್ ಪ್ಲಸ್ (Instagram Plus): ತಿಂಗಳಿಗೆ ಸುಮಾರು $3.99 (ಸುಮಾರು ₹377)
ಫೇಸ್ಬುಕ್ ಪ್ಲಸ್ (Facebook Plus): ತಿಂಗಳಿಗೆ ಸುಮಾರು $3.99 (ಸುಮಾರು ₹377)
ವಾಟ್ಸಾಪ್ ಪ್ಲಸ್ (WhatsApp Plus): ತಿಂಗಳಿಗೆ ಸುಮಾರು $2.99 (ಸುಮಾರು ₹282)
ನಿಮ್ಮ ಸದ್ಯದ ಸಾಮಾನ್ಯ ಫೇಸ್ಬುಕ್, ಇನ್ಸ್ಟಾಗ್ರಾಮ್ ಹಾಗೂ ವಾಟ್ಸಾಪ್ ಆ್ಯಪ್ಗಳು ಎಂದಿನಂತೆ ಉಚಿತವಾಗಿಯೇ ಇರಲಿವೆ. ಎಕ್ಸ್ನಲ್ಲಿ ಇರುವ ರೀತಿಯಲ್ಲಿ ಈ ಪ್ಲಾನ್ಗಳು ಕೇವಲ ಕೆಲವು ವಿಶೇಷ ಮತ್ತು ಪ್ರೀಮಿಯಂ ಫೀಚರ್ಗಳನ್ನು ಬಳಸಬಯಸುವವರಿಗಾಗಿ ಮಾತ್ರ ತರಲಾಗಿರುವ ಐಚ್ಛಿಕ (Optional) ಯೋಜನೆಗಳಾಗಿವೆ.
ಮೆಟಾ ಇದ್ದಕ್ಕಿದ್ದಂತೆ ಹಣ ವಿಧಿಸುತ್ತಿರುವುದಕ್ಕೆ ಪ್ರಮುಖ ಕಾರಣಗಳೇನು?
ಮೆಟಾ ಸಂಸ್ಥೆಯು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ರೇಸ್ನಲ್ಲಿ ಮುಂಚೂಣಿಯಲ್ಲಿರಲು ತನ್ನ AI ಡೇಟಾ ಸೆಂಟರ್ಗಳು ಮತ್ತು ಮೂಲಸೌಕರ್ಯಗಳಿಗಾಗಿ ಈ ವರ್ಷವೊಂದರಲ್ಲೇ ಬರೋಬ್ಬರಿ $125 ಬಿಲಿಯನ್ನಿಂದ $145 ಬಿಲಿಯನ್ (ಸುಮಾರು ₹10 ಲಕ್ಷ ಕೋಟಿಗೂ ಅಧಿಕ) ಬಂಡವಾಳ ಹೂಡಿಕೆ ಮಾಡುತ್ತಿದೆ. ಈ ಭಾರಿ ವೆಚ್ಚವನ್ನು ಸರಿದೂಗಿಸಲು ಕಂಪನಿಗೆ ಹೊಸ ಆದಾಯದ ಮೂಲಗಳ ಅಗತ್ಯವಿದೆ.
ಇಷ್ಟು ವರ್ಷಗಳ ಕಾಲ ಮೆಟಾ ಕೇವಲ ಜಾಹೀರಾತುಗಳ (Ad Revenue) ಮೂಲಕವೇ ಶೇ. 90ಕ್ಕಿಂತ ಹೆಚ್ಚು ಹಣ ಗಳಿಸುತ್ತಿತ್ತು. ಆದರೆ ಈಗ ಮಾರುಕಟ್ಟೆಯ ಏರಿಳಿತಗಳಿಂದ ಸುರಕ್ಷಿತವಾಗಿರಲು ಬಳಕೆದಾರರಿಂದಲೇ ನೇರ ಆದಾಯ ಪಡೆಯುವ ಚಂದಾದಾರಿಕೆ (Subscription Model) ಮಾದರಿಗೆ ಬದಲಾಗುತ್ತಿದೆ.
ಹೂಡಿಕೆದಾರರ ಒತ್ತಡವೂ ಮೆಟಾ ನಿರ್ಧಾರಕ್ಕೆ ಕಾರಣವಾಗಿರಬಹುದು. ಮೆಟಾ ಕಂಪನಿಯು AI ತಂತ್ರಜ್ಞಾನಕ್ಕಾಗಿ ಇಷ್ಟೊಂದು ಹಣ ಸುರಿಯುತ್ತಿರುವುದರ ಬಗ್ಗೆ ಹೂಡಿಕೆದಾರರು ಪ್ರಶ್ನೆ ಎತ್ತಿದ್ದರು. ಆ ಹೂಡಿಕೆಯಿಂದ ತಕ್ಷಣಕ್ಕೆ ಆದಾಯ ಹೇಗೆ ಬರುತ್ತದೆ ಎಂಬುದನ್ನು ತೋರಿಸಲು ಮೆಟಾ ಈ ಹಾದಿ ಹಿಡಿದಿದೆ.
ಹಣ ಪಾವತಿಸುವ ಇನ್ಸ್ಟಾ, ಫೇಸ್ಬುಕ್ “ಪ್ಲಸ್” ಬಳಕೆದಾರರಿಗೆ ಏನೆಲ್ಲಾ ಸಿಗಲಿದೆ?
ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ಲಸ್ನಲ್ಲಿ ಸ್ಟೋರಿ ರಿವಾಚ್ ಫೀಚರ್ ಇದೆ. ನಿಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯನ್ನು ಯಾರಾದರೂ ಮತ್ತೆ ಮತ್ತೆ ನೋಡಿದ್ದಾರಾ (Rewatched) ಎಂಬುದರ ಅಂಕಿ-ಅಂಶ ತಿಳಿಯಬಹುದು.
ಬೇರೆಯವರ ಸ್ಟೋರಿಗಳನ್ನು ಅವರಿಗೆ ತಿಳಿಯದಂತೆ (ವೀಕ್ಷಕರ ಪಟ್ಟಿಯಲ್ಲಿ ನಿಮ್ಮ ಹೆಸರು ಬರದಂತೆ) ರಹಸ್ಯವಾಗಿ (Stealth Mode) ಮೊದಲೇ ವೀಕ್ಷಿಸಬಹುದು (Preview).
ಸಾಮಾನ್ಯವಾಗಿ 24 ಗಂಟೆಗಳಲ್ಲಿ ಕಣ್ಮರೆಯಾಗುವ ಸ್ಟೋರಿಗಳನ್ನು ಇನ್ನು ಹೆಚ್ಚು ಸಮಯ ಇಡಬಹುದು.
ವಾರಕ್ಕೊಮ್ಮೆ ಒಂದು ನಿರ್ದಿಷ್ಟ ಸ್ಟೋರಿಯನ್ನು ಹೈಲೈಟ್ ಮಾಡುವ ಮೂಲಕ ನಿಮ್ಮ ಪ್ರೊಫೈಲ್ ಹೆಚ್ಚಿನ ಜನರನ್ನು ತಲುಪುವಂತೆ (Reach) ಮಾಡಬಹುದು.
ವಾಟ್ಸಾಪ್ ಕಸ್ಟಮೈಸ್ ಮಾಡಿಕೊಳ್ಳಬಹುದು. ಆ್ಯಪ್ನ ಐಕಾನ್ ಬದಲಾಯಿಸುವುದು, ಪ್ರೀಮಿಯಂ ಚಾಟ್ ಥೀಮ್ಗಳು ಹಾಗೂ ಕಸ್ಟಮ್ ರಿಂಗ್ಟೋನ್ಗಳನ್ನು ಇಟ್ಟುಕೊಳ್ಳಬಹುದು. ಪ್ರೀಮಿಯಂ ಸ್ಟಿಕ್ಕರ್ಗಳು ಮತ್ತು ಹೆಚ್ಚುವರಿ ಚಾಟ್ಗಳನ್ನು ಪ್ರಮುಖವಾಗಿ ಪಿನ್ (Pin chats) ಮಾಡಿ ಇಟ್ಟುಕೊಳ್ಳುವ ಸೌಲಭ್ಯ ಇರುತ್ತದೆ.
‘ಮೆಟಾ ಒನ್’ (Meta One) ಮತ್ತು ಸುಧಾರಿತ AI ಪ್ಲಾನ್ಗಳು
ಭವಿಷ್ಯದಲ್ಲಿ ಈ ಎಲ್ಲಾ ವಿಭಿನ್ನ ಸಬ್ಸ್ಕ್ರಿಪ್ಷನ್ಗಳನ್ನು ಒಟ್ಟುಗೂಡಿಸಿ ‘ಮೆಟಾ ಒನ್’ (Meta One) ಎಂಬ ಒಂದೇ ಬ್ರಾಂಡ್ ಅಡಿಯಲ್ಲಿ ತರಲು ಕಂಪನಿ ಯೋಜಿಸಿದೆ. ಇದರ ಜೊತೆಗೆ, ಮೆಟಾ AI ಅನ್ನು ಅತಿಯಾಗಿ ಬಳಸುವವರಿಗಾಗಿ ಸುಧಾರಿತ ಇಮೇಜ್/ವಿಡಿಯೋ ಜನರೇಶನ್ ಮತ್ತು ಸಂಕೀರ್ಣ ಪ್ರಶ್ನೆಗಳಿಗೆ ಉತ್ತರಿಸುವ ಪ್ರತ್ಯೇಕ ಪ್ರೀಮಿಯಂ AI ಪ್ಲಾನ್ಗಳನ್ನು ಸಹ ತರಲಾಗುತ್ತಿದ್ದು, ಇವುಗಳ ಬೆಲೆ ತಿಂಗಳಿಗೆ $7.99 ರಿಂದ $19.99 ರವರೆಗೆ ಇರಲಿದೆ ಎಂದು ವರದಿ ತಿಳಿಸಿದೆ.
ಶುಭ್ಮನ್ ಗಿಲ್ ನಾಯಕನಾಗಿ ತಮ್ಮ ಮೊದಲ ಏಕದಿನ ಶತಕ ಗಳಿಸಿದ್ದಾರೆ. ಲಕ್ನೋದ ಎಕಾನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ, ಗಿಲ್ 77 ಎಸೆತಗಳಲ್ಲಿ ಶತಕ ಗಳಿಸಿದರು. ಇದು ಅವರ ಒಂಬತ್ತನೇ ಏಕದಿನ ಶತಕವಾಗಿದ್ದು, ಈ ಶತಕದ ಮೂಲಕ ಗಿಲ್ ಹಲವಾರು ದಾಖಲೆಗಳನ್ನು ನಿರ್ಮಿಸಿದರು (PC-PTI).
ಈ ಶತಕದ ಇನ್ನಿಂಗ್ಸ್ ಮೂಲಕ ಗಿಲ್ ಭಾರತದಲ್ಲಿ ತಮ್ಮ 1,000 ಏಕದಿನ ರನ್ಗಳನ್ನು ಪೂರ್ಣಗೊಳಿಸಿದರು. ಕೇವಲ 19 ನೇ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡುವ ಮೂಲಕ ಗಿಲ್, ಭಾರತದಲ್ಲಿ ಅತಿ ಕಡಿಮೆ ಇನ್ನಿಂಗ್ಸ್ಗಳಲ್ಲಿ ಈ ಮೈಲಿಗಲ್ಲು ದಾಟಿದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು (PC-PTI).
ಅತಿ ವೇಗವಾಗಿ 1000 ರನ್ ಪೂರೈಸುವುದರ ಜೊತೆಗೆ ಗಿಲ್, ವಿರಾಟ್ ಕೊಹ್ಲಿ, ಶಿಖರ್ ಧವನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಮತ್ತು ನವಜೋತ್ ಸಿಂಗ್ ಸಿಧು ಅವರನ್ನು ಹಿಂದಿಕ್ಕಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ 66 ಎಸೆತಗಳಲ್ಲಿ ಅಜೇಯ 84 ರನ್ ಬಾರಿಸಿದ್ದ ಗಿಲ್, ಎರಡನೇ ಏಕದಿನ ಪಂದ್ಯದಲ್ಲಿ ಭಾರತೀಯ ನಾಯಕನಾಗಿ ಐದನೇ ವೇಗದ ಏಕದಿನ ಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದರು (PC-PTI).
ಕೇವಲ 77 ಎಸೆತಗಳಲ್ಲಿ ಶತಕ ಪೂರೈಸಿದ ಶುಭಮನ್ ಗಿಲ್ಗೆ ನಾಯಕನಾಗಿ ಇದು ಅತಿ ವೇಗದ ಏಕದಿನ ಶತಕವೂ ಆಗಿದೆ. ರೋಹಿತ್ ಶರ್ಮಾ ಭಾರತದ ನಾಯಕನಾಗಿ ಅತಿ ವೇಗದ ಏಕದಿನ ಶತಕ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ರೋಹಿತ್ 63 ಎಸೆತಗಳಲ್ಲಿ ಈ ಮೈಲಿಗಲ್ಲು ದಾಟಿದ್ದರು. ಹಾಗೆಯೇ ವೀರೇಂದ್ರ ಸೆಹ್ವಾಗ್ 69 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಗಿಲ್ 77 ಎಸೆತಗಳಲ್ಲಿ ಶತಕ ತಲುಪುವ ಮೂಲಕ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ (PC-PTI).
ತಮ್ಮ ಶತಕದ ಇನ್ನಿಂಗ್ಸ್ನಲ್ಲಿ 12 ಬೌಂಡರಿಗಳು ಮತ್ತು ಎರಡು ಸಿಕ್ಸರ್ಗಳನ್ನು ಬಾರಿಸಿದ ಗಿಲ್, ಈ ಶತಕದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 21 ಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಹಾಲಿ ಕೋಚ್ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಿದ್ದಾರೆ. ಗಂಭೀರ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 20 ಶತಕಗಳನ್ನು ಬಾರಿಸಿದ್ದರು (PC-PTI).
ಇನ್ನು ಈ ಪಂದ್ಯದಲ್ಲಿ 110 ಎಸೆತಗಳನ್ನು ಎದುರಿಸಿದ ಗಿಲ್, 22 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 154 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ರೋಹಿತ್ ಶರ್ಮಾ ಅವರೊಂದಿಗೆ ಎರಡನೇ ವಿಕೆಟ್ಗೆ 87 ರನ್ಗಳ ಜೊತೆಯಾಟ ಹಾಗೂ ಇಶಾನ್ ಕಿಶನ್ ಅವರೊಂದಿಗೆ ದ್ವಿಶತಕದ ಜೊತೆಯಾಟವನ್ನು ಆಡಿದರು (PC-PTI).
ಬೆಂಗಳೂರು, ಜೂನ್ 17: ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧ ಷಡ್ಯಂತ್ರ, ಅಪಪ್ರಚಾರ ಪ್ರಕರಣದಲ್ಲಿ ಅನೇಕರ ಚಾರಿತ್ರ್ಯ ಹನನವನ್ನು ನೋಡಿದ್ದೇವೆ. ಇಂದು ಷಡ್ಯಂತ್ರ ಹೊರ ಬಂದಿದೆ. ಅದೇ ರೀತಿ ರಾಜ್ಯದ ಬೇರೆ ಬೇರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ನಡೆದಿತ್ತು. ಬೇರೆ ಬೇರೆ ಮೂಲಗಳಿಂದ ಹಣದ ಬಂದಿತ್ತು. ನಾವು ಜನಾಗ್ರಹ ಸಭೆಗಳನ್ನು ಮಾಡುತ್ತೇವೆ. ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಕೇಂದ್ರ ಸರ್ಕಾರದ ಬಳಿ ಹೋಗುತ್ತೇವೆ ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
ಮುಖ್ಯಾಂಶಗಳು
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ
ಬೆಂಗಳೂರಿನಲ್ಲಿ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ಸುದ್ದಿಗೋಷ್ಠಿ
ಷಡ್ಯಂತ್ರ ಹೊರ ಬಂದಿದೆ ಎಂದ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ
ಚಕ್ರವರ್ತಿ ಸೂಲಿಬೆಲೆ ಹೇಳಿದ್ದಿಷ್ಟು
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ವಿಚಾರವಾಗಿ ಇಂದು ನಗರದಲ್ಲಿ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಒಂದು ತಂಡ ಸಿದ್ದರಾಮಯ್ಯನ ಸುತ್ತಮುತ್ತ ಓಡಾಡಿಕೊಂಡು ಎಸ್ಐಟಿ ರಚನೆ ಮಾಡಿಸಿದ್ದರು. ನನಗೆ ಆಮಿಷ ಒಡ್ಡಲಾಯಿತು ಅಂತಾ ಕೋರ್ಟ್ನಲ್ಲಿ ಚಿನ್ನಯ್ಯ ಹೇಳುತ್ತಿದ್ದಾನೆ. ಇದು ನೇರವಾಗಿ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರಕ್ಕೆ ಮೋಸ ಅಲ್ಲ, 7 ಕೋಟಿ ಜನರಿಗೆ ಮಾಡುತ್ತಿರುವ ಮೋಸ ಎಂದರು.
ಇನ್ನು ನಿನ್ನ ತಬ್ಬಿಕೊಳ್ಳುತ್ತೇನೆ ಎಂದು ಚಿನ್ನಯ್ಯಗೆ ನಟ ಪ್ರಕಾಶ್ ರಾಜ್ ಹೇಳಿದ್ದರಂತೆ. ಅವರ ಉದ್ದೇಶ ಏನಿತ್ತು, ಏಕೆ ಹಾಗೆ ಹೇಳಿದ್ದಾರೆ ಗೊತ್ತಿಲ್ಲ. ಚಿನ್ನಯ್ಯನಿಗೆ ಪ್ರೇರಣೆ ಕೊಟ್ಟ ಪ್ರಕಾಶ್ ರಾಜ್ ವೀರೇಂದ್ರ ಹೆಗ್ಗಡೆಗೆ ಜಂಟಲ್ ಮ್ಯಾನ್ ಎನ್ನುತ್ತಾರೆ. ಜನರ ಆಸ್ತಿಕತೆಯ ಮೇಲೆ ಆಗಿರುವ ಆಘಾತಕ್ಕೆ ಪ್ರಕಾಶ್ ರಾಜ್ ಕ್ಷಮೆ ಕೇಳುತ್ತಾರಾ? ಪ್ರಕಾಶ್ ರಾಜ್ ಕರೆ ಮಾಡಿದ್ದನ್ನು ವರದಿಯಲ್ಲಿ ದಾಖಲಿಸಿದ್ದಾರಾ? ರಾಜ್ಯ ಸರ್ಕಾರ SIT ಮಧ್ಯಂತರ ವರದಿ ಬಹಿರಂಗ ಮಾಡಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
ಎಲ್ಲಿದೆ ಮೂಳೆಗಳ ರಾಶಿ? ವಸಂತ್ ಗಿಳಿಯಾರ್ ಪ್ರಶ್ನೆ
ವಸಂತ್ ಗಿಳಿಯಾರ್ ಮಾತನಾಡಿದ್ದು, ನಾವು ಧರ್ಮಸ್ಥಳ ಪರವಾದ ಪಿಆರ್ಓ ಅಲ್ಲ. ಧರ್ಮಸ್ಥಳದವರು ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಟ್ಟಿರಬಹುದು. ಮೂಳೆಗಳ ರಾಶಿ ಸಿಕ್ಕಿದೆ ಎಂದು ಯೂಟ್ಯೂಬ್ನಲ್ಲಿ ವರದಿ ಮಾಡಿದರು. ಎಲ್ಲಿದೆ ಮೂಳೆಗಳ ರಾಶಿ? ಸುಳ್ಳು ವರದಿಯನ್ನು ಎಸ್ಐಟಿ ತಡೆ ಹಾಕಿದ್ದರೆ ಇಷ್ಟು ಡ್ಯಾಮೇಜ್ ಆಗುತ್ತಿರಲಿಲ್ಲ. ಷಡ್ಯಂತ್ರ ಮಾಡಿದವರು ಕೆಲವು ಯೂಟ್ಯೂಬರ್ಗಳನ್ನು ಹಣ ಕೊಟ್ಟು ಸಾಕಿಕೊಂಡಿದ್ದಾರೆ. ಎಲ್ಲರೂ ಇದ್ದಿದ್ದು ಷಡ್ಯಂತ್ರ ಕೂಟದ ಮನೆಯಲ್ಲೇ. ಎಸ್ಐಟಿ ಮಧ್ಯಂತರ ವರದಿಯನ್ನು ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಅಂದು ನಾವು ಮಾಡಿರುವ ಆರೋಪಗಳು ನಿಜ ಅಂತಾ ಸಾಬೀತಾಗಿದೆ. ಇದರಲ್ಲಿ ಖಳ ನಟ ಅಥವಾ ಚಿತ್ರನಟ ಪ್ರಕಾಶ್ ರಾಜ್ ಹೆಸರು ಕೂಡ ಕೇಳಿಬಂದಿದೆ. ಚಿನ್ನಯ್ಯ ಜೊತೆ ಮಾತಾಡಿದ್ದು ನಿಜ ಅಂತಾ ಪ್ರಕಾಶ್ ರಾಜ್ ಒಪ್ಪಿಕೊಂಡಿದ್ದಾರೆ. ಎಸ್ಐಟಿ ಮುಖ್ಯಸ್ಥ ಮೊಹಂತಿ ಜೊತೆ ಮಾತನಾಡಿದ್ದನ್ನು ಒಪ್ಪಿಕೊಂಡಿದ್ದಾರೆ. ಗೃಹ ಸಚಿವರಾಗಿದ್ದ ಡಾ. ಜಿ ಪರಮೇಶ್ವರ್ ಮುಚ್ಚಿಟ್ಟ ಸತ್ಯವನ್ನು ಪ್ರಿಯಾಂಕ್ ಖರ್ಗೆ ಬಯಲು ಮಾಡಬೇಕು ಎಂದರು.
ಚಿನ್ನಯ್ಯಗೆ ಹೆಡ್ ಫೋನ್ ಮೂಲಕ ಡೈರೆಕ್ಷನ್ ನೀಡುತ್ತಿದ್ದರು
ನನ್ನ ಕಿವಿಗೆ ಹೆಡ್ ಫೋನ್ ಹಾಕಲಾಗಿತ್ತು ಅಂತಾ ರಿಟ್ ಅರ್ಜಿಯಲ್ಲಿ ಚಿನ್ನಯ್ಯ ಹೇಳಿದ್ದಾನೆ. ಮಾಸ್ಕ್ ಹಾಕಿದ್ದ ರಹಸ್ಯವೇ ಹೆಡ್ ಫೋನ್ ಹಾಕಿರುವುದು. ಅಂದು ಗುಂಡಿ ಅಗೆಯುವ ವೇಳೆ ಚಿನ್ನಯ್ಯ ಅತ್ತಿತ್ತ ಓಡಾಡುತ್ತಿದ್ದ. ಆಗ ಆತನಿಗೆ ಹೆಡ್ ಫೋನ್ ಮೂಲಕ ಡೈರೆಕ್ಷನ್ ಕೊಡುತ್ತಿದ್ದರು ಎನ್ನುವುದು ಈಗ ಸ್ಪಷ್ಟ ಆಗಿದೆ. ಎಡಪಂಥೀಯ ಚಿಂತಕರೇ ಎಸ್ಐಟಿಯನ್ನು ಮುನ್ನಡೆಸುವ ರೀತಿಯಲ್ಲಿ ಕಂಡುಬರುತ್ತಿದೆ. ಚಿನ್ನಯ್ಯ ಜೊತೆ ಮಾತಾಡಬೇಡಿ ಎಂದು ಪ್ರಣಬ್ ಮೊಹಂತಿ ಹೇಳಿದ್ದರು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಚಿನ್ನಯ್ಯ ಜೊತೆ ಪ್ರಕಾಶ್ ರಾಜ್ ಸಂಪರ್ಕದಲ್ಲಿರುವುದು ಗೊತ್ತಾದ ಕೂಡಲೇ ಪ್ರಣಬ್ ಮೊಹಂತಿ ನೋಟಿಸ್ ಕೊಡಬೇಕಿತ್ತಲ್ವಾ ಎಂದು ವಸಂತ್ ಗಿಳಿಯಾರ್ ಪ್ರಶ್ನಿಸಿದ್ದಾರೆ.
ನಾವು ಎಸ್ಐಟಿ ಮುಖ್ಯಸ್ಥರ ಮೇಲೆ ಆರೋಪ ಮಾಡುತ್ತಿಲ್ಲ. ಪ್ರಣಬ್ ಮೊಹಂತಿ ನನಗೆ ಸೂಚಿಸಿದ್ದರು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಇದೇ ಪ್ರಕಾಶ್ ರಾಜ್ ತಮ್ಮ ನಿರ್ದಿಗಂತ ನಾಟಕದಲ್ಲಿ ಧರ್ಮಾಧಿಕಾರಿಗಳನ್ನು ತುಚ್ಛವಾಗಿ ತೋರಿಸಿದ್ದಾರೆ. ಪ್ರಕಾಶ್ ರಾಜ್ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದಾಗ ನಾವು ಪ್ರಶ್ನೆ ಮಾಡಿದ್ದೇವೆ ಎಂದರು.
ಸರ್ಕಾರ ಸೂಕ್ತ ತನಿಖೆ ನಡೆಸಬೇಕು: ವಿಕಾಸ್ ಕುಮಾರ್ ಪುತ್ತೂರು
ವಿಕಾಸ್ ಕುಮಾರ್ ಪುತ್ತೂರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯ ಎಂಬ ವ್ಯಕ್ತಿ ಷಡ್ಯಂತ್ರ ಆಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಷಡ್ಯಂತ್ರದ ಸೂತ್ರಧಾರಿ ಯಾರು ಎಂದು ಬಯಲಾಗಬೇಕಿದೆ. ಈ ಪ್ರಕರಣವನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂಬ ಅನುಮಾನ ಇದೆ. ಹೊಸ ಗೃಹ ಸಚಿವರು ಎಲ್ಲವನ್ನೂ ಬಹಿರಂಗಪಡಿಸಲಿ. ಎಡಪಂಥೀಯರ ಮನವಿಯಂತೆ ಎಸ್ಐಟಿ ರಚಿಸಲಾಗಿದೆ ಎಂದು ಅಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಹೇಳಿದ್ದರು. ಆ ಎಡಪಂಥೀಯರು ಯಾರು ಅಂತಾ ಬಹಿರಂಗವಾಗಲಿ. ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದಿದ್ದಾರೆ.
ನವದೆಹಲಿ, ಜೂನ್ 17: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಬಿರುಕು ಮೂಡಲಿದೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ಬಣದ ಪ್ರಮುಖ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ (Sanjay Raut) ಇಂದು ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂಡಾಯಗಾರರಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಪಕ್ಷಾಂತರ ಮಾಡಬೇಕೆಂಬ ಆಲೋಚನೆ ಇರುವವರು ಮೊದಲು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಲಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಈ ಬೆಳವಣಿಗೆಯು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಶಿವಸೇನೆ ಠಾಕ್ರೆ ಬಣದ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಹಗಲಿರುಳು ಶ್ರಮಿಸಿ ಇವರನ್ನು ಲೋಕಸಭೆಗೆ ಗೆಲ್ಲಿಸಿದ್ದಾರೆ. ಉದ್ಧವ್ ಠಾಕ್ರೆ ಅವರ ನಾಯಕತ್ವ ಹಾಗೂ ಪಕ್ಷದ ಚಿಹ್ನೆಯಡಿ ಗೆದ್ದು ಬಂದಿರುವ ಸಂಸದರು, ಈಗ ಪಕ್ಷದಲ್ಲಿ ಇರಲು ಇಷ್ಟವಿಲ್ಲದಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಗುಡುಗಿದ್ದಾರೆ. ಆಶ್ಚರ್ಯದ ಸಂಗತಿಯೆಂದರೆ, ಉದ್ಧವ್ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ ಕೇವಲ ಮೂವರು (ಅರವಿಂದ್ ಸಾವಂತ್, ಅನಿಲ್ ದೇಸಾಯಿ ಮತ್ತು ರಾಜಾಭಾವು ವಾಜೆ) ಮಾತ್ರ ಸಂಜಯ್ ರಾವತ್ ಅವರ ಈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
#WATCH | Delhi | Amid speculations of split in Shiv Sena UBT, party MP Sanjay Raut says, “If anyone wants to go, they can resign and leave. If such reports emerge about our MPs, then they should refute them. This time, the people of Maharashtra will not remain silent.” pic.twitter.com/5UljgWOu0O
ನಮ್ಮ ಪಕ್ಷದ ಸಂಸದರನ್ನು ಸೆಳೆಯಲು ವಿರೋಧಿ ಬಣಗಳು ಮತ್ತು ತೃತೀಯ ಶಕ್ತಿಗಳು ಹಣದ ಹೊಳೆಯನ್ನೇ ಹರಿಸುತ್ತಿವೆ ಎಂದು ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಪಕ್ಷದ ಸಂಸದರನ್ನು ಖರೀದಿಸಲು ತಲಾ 50 ಕೋಟಿ ರೂ. ಹಾಗೂ ಇತರೆ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಿದೆ. ಕೆಲವು ಸಂಸದರನ್ನು ರಹಸ್ಯವಾಗಿ ಕರೆದೊಯ್ಯಲು ಈಗಾಗಲೇ ವಿಶೇಷ ಚಾರ್ಟರ್ಡ್ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.
#WATCH | Delhi | Amid speculations of a split in Shiv Sena UBT, party MP Sanjay Raut says, “I have information that Rs 15 crore each was delivered to the MPs, after which they boarded charter flights from three places, including Nanded and Pune. We have issued a whip for the… pic.twitter.com/s50XxiJV3E
ಪಕ್ಷದ ‘ವಿಪ್’ ಈಗಲೂ ಜಾರಿಯಲ್ಲಿದೆ. ಪಕ್ಷದ ಅಸ್ತಿತ್ವದ ಕಾನೂನು ಹೋರಾಟ ಮುಂದುವರಿದಿದ್ದು, ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಕುರಿತು ಲೋಕಸಭಾ ಸ್ಪೀಕರ್ ಅವರಿಗೆ ಅಧಿಕೃತ ಪತ್ರ ಬರೆಯಲಾಗಿದೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಜೂನ್ 17: ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಜನರು ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸುತ್ತಾರೆ. ಈ ಆಟೋ ಚಾಲಕನ ಐಡಿಯಾ ಮಾತ್ರ ವಿಭಿನ್ನವಾಗಿದೆ. ಹೌದು, ಆಟೋದಲ್ಲಿ ಸೀಟಿನ ಹಿಂದೆ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ತನ್ನ ಆಟೋದಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಹೊಸ ಐಡಿಯಾವನ್ನು ಕಂಡುಕೊಂಡಿದ್ದಾನೆ. ಬೆಂಗಳೂರಿನ (Bengaluru) ಈ ಆಟೋ ಚಾಲಕನ ಕೈಯಲ್ಲಿರುವ ಸ್ಮಾರ್ಟ್ ವಾಚ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸ್ಮಾರ್ಟ್ವಾಚ್ನ ಸ್ಕ್ರೀನ್ ಮೇಲೆ ಕ್ಯೂಆರ್ ಕೋಡ್ನ್ನು ಅಳವಡಿಸಿಕೊಂಡಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಈ ಆಟೋ ಚಾಲಕನ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ.
ಹೇಮಂತ್ (Hemant) ಎಂಬ ಬಳಕೆದಾರರು ತಮ್ಮ ಎಕ್ಸ್ ಖಾತೆಯಲ್ಲಿ ಬೆಂಗಳೂರಿನ ಆಟೋಚಾಲಕ ಸ್ಮಾರ್ಟ್ ಟ್ರಿಕ್ಸ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ಇಂದು ಇಂದಿರಾ ನಗರದಿಂದ ಕೋರಮಂಗಲಕ್ಕೆ ಆಟೋದಲ್ಲಿ ಬಂದೆ. ಆಟೋದಿಂದ ಇಳಿಯುವ ವೇಳೆಗೆ ಕ್ಯೂಆರ್ ಕೋಡ್ ಕೇಳಿದೆ. ಆಟೋ ಚಾಲಕ ತನ್ನ ಕೈಯನ್ನು ಎತ್ತಿ ಹಿಡಿದ. ಕ್ಯೂಆರ್ ಕೋಡ್ ಆತನ ಸ್ಮಾರ್ಟ್ವಾಚ್ನಲ್ಲಿದ್ದನ್ನು ಕಂಡು ಶಾಕ್ ಅದೆ. ಚಾಲಕನ ಸ್ಮಾರ್ಟ್ ಐಡಿಯಾಕ್ಕೆ ಫಿದಾ ಆದೆ ಎಂದು ಬರೆದುಕೊಂಡಿದ್ದಾರೆ.
ವೈರಲ್ ಪೋಸ್ಟ್ ಇಲ್ಲಿದೆ
Took an auto today from Indiranagar to Koramangala and asked the driver for the QR code to pay
Bro lifted his wrist, the QR code was on his smartwatch pic.twitter.com/bzDkXe1UBZ
ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬೆಂಗಳೂರಿನ ಆಟೋ ಚಾಲಕರು ಯಾವುದರಲ್ಲೂ ಕಡಿಮೆಯಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಸ್ಮಾರ್ಟ್ ವಾಚ್ ಗೆ ಕ್ಯೂ ಆರ್ ಕೋಡ್ ಅಳವಡಿಸಿಕೊಂಡದ್ದನ್ನು ನೋಡಿ ಅಚ್ಚರಿಯಾಯ್ತು. ತಂತ್ರಜ್ಞಾನವನ್ನು ಎಲ್ಲರೂ ಒಳ್ಳೆಯದ್ದಕ್ಕೆ ಬಳಸಿಕೊಳ್ಳಲಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಸ್ಮಾರ್ಟ್ ವಾಚ್ ಗೆ ಕ್ಯೂ ಆರ್ ಕೋಡ್ ಅಳವಡಿಸಿಕೊಳ್ಳಲು ಎಷ್ಟು ಖರ್ಚು ಆಯ್ತು ಎಂದು ಕೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, (ಜೂನ್ 17): ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್ ಮಾಡುವವರಿಗೆ ತಕ್ಕ ಶಾಸ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ. ವ್ಯಕ್ತಿಯ ಅನುಮತಿ ಪಡೆದುಕೊಳ್ಳದೆ ಅವರ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ( DG-IGP Dr.M.A.Saleem) ಅವರು ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ವಿಸ್ತತವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪೊಲೀಸರು ನಾನಾ ಕಾರಣಗಳನ್ನು ನೀಡಿ ಎಫ್ ಐ ಆರ್ ದಾಖಲು ಮಾಡಲು ವಿಳಂಬ ಮಾಡಿದರೆ ಸೂಕ್ತ ರೀತಿಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಾಂಶಗಳು
ಬೇರೆಯವರ ಖಾಸಗಿ ಚಿತ್ರ ಶೇರ್ ಮಾಡಿದ್ರೆ FIR ದಾಖಲಿಸಲು ಸೂಚನೆ
ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ
ಇಂತಹ ದೂರುಗಳನ್ನು ದಾಖಲಿಸಲು ಪೊಲೀಸರು ನಿರಾಕರಿಸುವಂತಿಲ್ಲ
ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಮೊದಲು ಒಪ್ಪಿದ್ದರು ಅನ್ನೋ ಕಾರಣ ಕೊಟ್ಟು
ಪೊಲೀಸರು ದೂರು ಸ್ವೀಕರಿಸದೇ ಇರಬಾರದು
ಸಂತ್ರಸ್ತರು ಮೊದಲು ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಒಪ್ಪಿದ್ದರು ಎಂದ ಮಾತ್ರಕ್ಕೆ ಇಂತ ಕಾರಣ ಕೊಟ್ಟು ದೂರು ಸ್ವೀಕರಿಸದೇ ಇರಬಾರದು. ಚಿತ್ರೀಕರಣದ ಒಪ್ಪಿಗೆಗೂ ಮತ್ತು ಹಂಚಿಕೆ ಅಥವಾ ಪ್ರಸಾರದ ಒಪ್ಪಿಗೆಗೂ ವ್ಯತ್ಯಾಸವಿದೆ. ಇದು ಕಾನೂನು ಪ್ರಕಾರ ಸಂಜ್ಞೆಯ ಅಪರಾಧವಾಗುತ್ತದೆ. ಹೀಗಾಗಿ ಬೇರೆಯವರ ಖಾಸಗಿ ಚಿತ್ರ ವೈರಲ್ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.
ಆಪ್ತ ವಿಷಯಗಳನ್ನು ಬಳಸಿಕೊಂಡು ಹಣ, ಲೈಂಗಿಕ ಅನುಕೂಲ ಅಥವಾ ಬೇರೆ ಲಾಭಕ್ಕಾಗಿ ಬೆದರಿಕೆ, ಸುಲಿಕೆ ನಡೆಸುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಮಾಡಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಬಿಎನ್ಎಸ್ -2023ರ ಅಡಿಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಸಂಬಂಧಿತ ಸೆಕ್ಷನ್ ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲು ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇಂತಹ ಪ್ರಕರಣಗಲ್ಲಿ ಎಲ್ಲಾ ಡಿಜಿಟಲ್ ಸಾಕ್ಷ್ಯವನ್ನು ಗೌಪ್ಯವಾಗಿ ಸಂರಕ್ಷಿಸಬೇಕು. ಅಷ್ಟೇ ಅಲ್ಲದೆ, ಸಂತ್ರಸ್ತರ ಗುರುತು ಗೌಪ್ಯವಾಗಿ ಇರುವಂತೆ ನೋಡಿಕೊಳ್ಳಬೇಕಾಗಿದೆ. ಜೊತೆಗೆ ದೂರುದಾರರನ್ನು ಸೂಕ್ಷ್ಮವಾಗಿ ನಡೆಸಿಕೊಳ್ಳುವಂತೆಯೂ ಮಾರ್ಗಸೂಚಿಯಲ್ಲಿ ಉಲ್ಲೇಖ ಮಾಡಲಾಗಿದೆ. ದೂರುದಾರರನ್ನು ಅವಮಾನ ಮಾಡುವುದನ್ನು ತಪ್ಪಿಸಬೇಕು ಹಾಗೂ ಸಂತ್ರಸ್ತೆಯ ದೂರನ್ನು ಮಹಿಳಾ ಅಧಿಕಾರಿಯೇ ದಾಖಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.
ಆದೇಶದಲ್ಲೇನಿದೆ?
ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ ವಿಳಂಬ ಅಥವಾ ನಿರಾಕರಣೆ ಮಾಡಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ, ಈ ಆದೇಶದಲ್ಲಿ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರೆ ಪ್ರಸಾರಕ್ಕೂ ಒಪ್ಪಿಗೆ ನೀಡಿದಂತೆ ಅಲ್ಲ ಎಂಬ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಒಬ್ಬ ವ್ಯಕ್ತಿ ಚಿತ್ರ ಸೆರೆಹಿಡಿಯಲು ಒಪ್ಪಿಗೆ ನೀಡಿದ್ದರೂ ಅದನ್ನು ಹಂಚಲು ಅಥವಾ ಪ್ರಸಾರ ಮಾಡಲು ಒಪ್ಪಿಗೆ ನೀಡದಿದ್ದರೆ ಅದು ಕಾಗ್ನಿಜೆನ್ಸ್ ಅಪರಾಧವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 77ರಂತೆ ಗೌಪ್ಯತೆ ಉಲ್ಲಂಘನೆಗೆ ಸಂಬಂಧಿಸಿದ ವಿಧಿಗಳು, ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 66(ಇ), 67 ಮತ್ತು 67(ಎ)ಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಮಹಿಳಾ ಸಂತ್ರಸ್ತರಿದ್ದಲ್ಲಿ 77ರ ವಿಧಿಯ ಜೊತೆಗೆ ಐಟಿ ಕಾಯ್ದೆಯ ಸೆಕ್ಷನ್ ಗಳನ್ನು ಸೇರಿಸಿ ಎಫ್ಐಆರ್ ಕಡ್ಡಾಯವಾಗಿ ನೋಂದಣಿ ಮಾಡಬೇಕೆಂದು ನಿರ್ದೇಶಿಸಲಾಗಿದೆ.
ಬ್ಲಾಕ್ಮೇಲ್ ವೀಡಿಯೊಗಳು, ಸೆಕ್ಸ್ಟೋರ್ಷನ್, ರಿವೆಂಜ್ ಪೋರ್ನೋಗ್ರಫಿ ಮುಂತಾದ ಪ್ರಕರಣಗಳಲ್ಲಿ ತಕ್ಷಣ ಎಫ್ಐಆರ್ ದಾಖಲಿಸಬೇಕು. ಪೀಡಿತರು ಮೊದಲು ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣಕ್ಕೆ ದೂರು ನಿರಾಕರಿಸಬಾರದು. ಅಪರಾಧ ಸ್ಥಳೀಯ ವ್ಯಾಪ್ತಿಯ ಹೊರಗೆ ನಡೆದಿದ್ದರೆ ಝೀರೋ ಎಫ್ಐಆರ್ ದಾಖಲಿಸಿ ಸಂಬಂಧಿತ ಠಾಣೆಗೆ ವರ್ಗಾಯಿಸಬೇಕು/
ಅಪರಾಧ ವಿಷಯವನ್ನು ತಕ್ಷಣ ತೆಗೆದುಹಾಕಲು ಐಟಿ ನಿಯಮಗಳ ಪ್ರಕಾರ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್ ನೀಡಬೇಕು ಮತ್ತು ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಕಾನೂನುಬದ್ಧವಾಗಿ ಸಂರಕ್ಷಿಸಬೇಕು. ಪೀಡಿತರ ಗುರುತು ಗೌಪ್ಯವಾಗಿರಬೇಕು, ಮಹಿಳಾ ಸಂತ್ರಸ್ತೆಯ ದೂರುಗಳನ್ನು ಮಹಿಳಾ ಅಧಿಕಾರಿಗಳು ದಾಖಲಿಸುವಂತೆ ಸೂಚಿಸಲಾಗಿದೆ.
ತನಿಖಾಧಿಕಾರಿಗಳು ಸೈಬರ್ ಕ್ರೈಂ ಘಟಕಗಳೊಂದಿಗೆ ಸಮನ್ವಯತೆ ಸಾಧಿಸಿ ತಾಂತ್ರಿಕ ತನಿಖೆ ಹಾಗೂ ಫೋರೆನ್ಸಿಕ್ ವಿಶ್ಲೇಷಣೆ ನಡೆಸಬೇಕು. ಎಫ್ಐಆರ್ ನೋಂದಣಿ ಮಾಡದಿರುವುದು ಅಥವಾ ಪೂರ್ವಾನುಮತಿ ಎಂಬ ತಪ್ಪು ಕಾರಣದಿಂದ ವಿಳಂಬ ಮಾಡಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶದಲ್ಲಿ ಎಚ್ಚರಿಸಿದ್ದಾರೆ.
‘ರೆಬೆಲ್ ಸ್ಟಾರ್’ ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ ಚಿತ್ರದ ಸೀಕ್ವೆಲ್ (Kalki 2) ಕುರಿತು ದಿನಕ್ಕೊಂದು ಹೊಸ ಗಾಸಿಪ್ಗಳು ಹುಟ್ಟಿಕೊಳ್ಳುತ್ತಿವೆ. ಚಿತ್ರದಿಂದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊರನಡೆದ ಬಳಿಕ ಅವರ ಜಾಗಕ್ಕೆ ಆಲಿಯಾ ಭಟ್ (Alia Bhatt) ಅಥವಾ ಸಾಯಿ ಪಲ್ಲವಿ ಬರಲಿದ್ದಾರೆ ಎಂಬ ಬಲವಾದ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಿರ್ದೇಶಕ ನಾಗ್ ಅಶ್ವಿನ್ (Nag Ashwin) ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ವರ್ಷ ‘ವೈಜಯಂತಿ ಮೂವೀಸ್’ ಸಂಸ್ಥೆಯು ದೀಪಿಕಾ ಪಡುಕೋಣೆ ಅವರೊಂದಿಗೆ ಒಪ್ಪಂದ ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕೃತವಾಗಿ ಪ್ರಕಟಿಸಿತ್ತು. ಚಿತ್ರದ ಕಥೆಯಲ್ಲಿ ದೀಪಿಕಾ ನಿರ್ವಹಿಸಿದ್ದ ಸುಮತಿ ಎಂಬ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದರಿಂದ, ಮುಂದಿನ ಭಾಗದಲ್ಲಿ ಈ ಪಾತ್ರದ ಗತಿ ಏನು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿತ್ತು. ಇದೇ ಕಾರಣಕ್ಕೆ ಸುಮತಿ ಪಾತ್ರಕ್ಕೆ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಮತ್ತೊಂದೆಡೆ ಆಲಿಯಾ ಭಟ್ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ ಎಂಬ ವರದಿಗಳು ಬಂದಿದ್ದವು.
ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ನಾಗ್ ಅಶ್ವಿನ್, ‘ಕಲ್ಕಿ 2 ಚಿತ್ರದಲ್ಲಿ ಸುಮತಿ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬುದನ್ನು ನಾವು ಅಧಿಕೃತವಾಗಿ ಘೋಷಿಸಬೇಕಿದೆ. ಸದ್ಯಕ್ಕೆ ಕೇಳಿಬರುತ್ತಿರುವ ಸುದ್ದಿಗಳೆಲ್ಲವೂ ಕೇವಲ ಊಹಾಪೋಹಗಳಷ್ಟೇ. ಆದರೆ ಕಥೆಯಲ್ಲಿ ಸುಮತಿ ಪಾತ್ರ ಖಂಡಿತವಾಗಿಯೂ ಇರಲಿದೆ. ಅದು ಅತ್ಯಂತ ಪ್ರಮುಖವಾದ ಪಾತ್ರವಾಗಿರುವುದರಿಂದ ಅದನ್ನು ಕಥೆಯಿಂದ ತೆಗೆದುಹಾಕಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಫ್ಯಾನ್ಸ್ ವಲಯದಲ್ಲಿ ಕೆಲವು ಗಾಸಿಪ್ಗಳು ಹರಿದಾಡಿವೆ. ನಿರ್ದೇಶಕರ ಹೇಳಿಕೆಯ ಬೆನ್ನಲ್ಲೇ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತಿದ್ದಾರೆ. ಆಲಿಯಾ ಭಟ್ ಅವರು ದೀಪಿಕಾ ಅವರ ಸುಮತಿ ಪಾತ್ರವನ್ನು ರೀಪ್ಲೇಸ್ ಮಾಡುತ್ತಿಲ್ಲ, ಬದಲಿಗೆ ಕಲ್ಕಿ ಪುರಾಣದಲ್ಲಿ ಬರುವ ವೈಷ್ಣೋದೇವಿ ಎಂಬ ಸಂಪೂರ್ಣ ಹೊಸ ಹಾಗೂ ಶಕ್ತಿಶಾಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಕಲ್ಕಿಯ ತಾಯಿಯಾದ ಸುಮತಿ ಪಾತ್ರಕ್ಕೆ ಸಾಯಿ ಪಲ್ಲವಿ ಅಥವಾ ಆಲಿಯಾ ಭಟ್ ಇಬ್ಬರಲ್ಲಿ ಒಬ್ಬರನ್ನು ನೇರವಾಗಿ ರೀಕಾಸ್ಟ್ ಮಾಡುವ ಸಾಧ್ಯತೆಯೂ ಇದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಸದ್ಯ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರ ಕಾಂಬಿನೇಷನ್ನಲ್ಲಿ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ನಟಿಯರ ಅಧಿಕೃತ ಆಯ್ಕೆಯ ಬಗ್ಗೆ ಚಿತ್ರತಂಡ ಶೀಘ್ರದಲ್ಲೇ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.
ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಇದರ ಮಧ್ಯೆ ಬಿಜೆಪಿಯ ಉಚ್ಛಾಟಿತ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳೆಯದಲ್ಲಿ ಗುರುತಿಸಿಕೊಂಡಿರುವುದು ಸಂಚಲನಕ್ಕೆ ಕಾರಣವಾಗಿದೆ.
ಹೌದು….ಏಳನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದ್ದು, ಕೆಲ ಜೆಡಿಎಸ್ ಹಾಗೂ ಬಿಜೆಪಿಯಿಂದ ಗೆದ್ದಿರುವ ಶಾಸಕರನ್ನು ಸೆಳೆಯು ಯತ್ನ ನಡೆಸಿದೆ. ಇದರ ನಡುವೆ ಬಿಜೆಪಿಯ ಇಬ್ಬರು ಉಚ್ಛಾಟಿತ ಶಾಸಕರು, ಕಾಂಗ್ರೆಸ್ ಶಾಸಕರಿರುವ ವಂಡರ್ ಲಾ ರೆಸಾರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.