Headlines

IND vs NZ: ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ..!

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತೀಯ ಪಿಚ್​ನಲ್ಲಿ ಐತಿಹಾಸಿಕ ಸಾಧನೆಯನ್ನು ಸಹ ಮಾಡಿದೆ. ಅಂದರೆ ಇದು ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (112) ಅಜೇಯ ಶತಕ ಸಿಡಿಸಿದ್ದರು….

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲ ನಿಂದನೆ ಮಾಡಿದ ಕಾಂಗ್ರೆಸ್ ಮುಖಂಡನಿಗೆ ಎದುರಾಯ್ತು ಎರಡೆರಡು ಸಂಕಷ್ಟ – Kannada News | Congress Leader Faces Double Trouble for Obscene Abuse Against Shidlaghatta Municipal Commissioner

ರಾಜೀವ್ ಗೌಡ (ಎಡಚಿತ್ರ) ಹಾಗೂ ಅವರ ವಿರುದ್ಧ ದೂರು ನೀಡುತ್ತಿರುವುದು ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಈಗ ಎರಡೆರಡು ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ, ಇದೀಗ ಜೆಡಿಎಸ್ ಮುಖಂಡರು ಕೂಡ ದೂರು ನೀಡಿದ್ದಾರೆ. ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ…

Read More

ಐದು ವರ್ಷದ ಬಾಲಕಿಯನ್ನು ಬೆದರಿಸಿ 55 ವರ್ಷದ ವ್ಯಕ್ತಿಯಿಂದ 5 ದಿನಗಳ ಕಾಲ ಅತ್ಯಾಚಾರ – Kannada News | Chhattisgarh man, Physically assaults 5 year old, threatens to kill her if she complains

ಛತ್ತೀಸ್​ಗಢ, ಜನವರಿ 15: ಐದು ವರ್ಷದ ಬಾಲಕಿ(Girl)ಗೆ ಐದು ದಿನಗಳ ಕಾಲ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಚಾಕೊಲೇಟ್ ಕೊಟ್ಟು ಮನೆಗೆ ಕರೆದೊಯ್ದ ಅನ್ಸಾರಿ ಜನವರಿ 7ರಿಂದ 11ರವರೆಗೆ ಐದು ದಿನಗಳ ಕಾಲ ನಿರಂತರವಾಗಿ ದೌರ್ಜನ್ಯವೆಸಗಿರುವುದು ಬೆಳಕಿಗೆ ಬಂದಿದೆ. ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಆರೋಪಿ ಬೆದರಿಕೆ ಹಾಕಿದ್ದರಿಂದ ಬಾಲಕಿ ಭಯದಿಂದ ಮೌನವಾಗಿಯೇ ಉಳಿದಿದ್ದಳು. ದೈಹಿಕ ನೋವು ಸಹಿಸಲಾಗದಿದ್ದಾಗ ಬಾಲಕಿ ನಡೆದಿರುವ ವಿಚಾರವನ್ನು ಮನೆಯಲ್ಲಿ ಹೇಳಿಕೊಂಡಿದ್ದಾಳೆ. ಜನವರಿ 12 ರಂದು ಬಾಲಕಿಗೆ ಚಿಕ್ಕಮ್ಮ ಸ್ನಾನ ಮಾಡಿಸುವಾಗ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ – Kannada News | Bangalore Temperature 28°C: IMD Forecasts Mixed Karnataka Weather and Cold Wave

ಬೆಂಗಳೂರು, ಜ.15: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather) ವಾತಾವರಣ ಹೇಗಿದೆ. ಹವಾಮಾನ ಇಲಾಖೆ ನೀಡಿದ ಸೂಚನೆಗಳೇನು?  ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು,  ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ.  ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ…

Read More

ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ – Kannada News | Fire Breaks Out at Scrap Warehouse in Bengaluru’s Begur, Plastic Materials Gutted

ಬೆಂಗಳೂರು, ಜನವರಿ 15: ನಗರದ ಬೇಗೂರು ಪ್ರದೇಶದ ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಧಗಧಗನೆ ಹೊತ್ತಿ ಉರಿದಿದ್ದು, ಇಡೀ ಪ್ರದೇಶದಲ್ಲಿ ಆತಂಕ ಉಂಟಾಯಿತು. ಬೆಂಕಿಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಸದ್ಯ…

Read More

Horoscope Today 15 January; ಇಂದು 12 ರಾಶಿಗಳ ಅದೃಷ್ಟ ಫಲ ಹೇಗಿದೆ? – Kannada News | Makara Sankranti 2026: Astrological Forecasts for All Zodiac Signs by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 15ರ ಗುರುವಾರದ ದಿನ ಭವಿಷ್ಯದ ಬಗ್ಗೆ ತಿಳಿಸಿದ್ದಾರೆ. ಇದು ವಿಶ್ವಾವಸುನಾಮ ಸಂವತ್ಸರ, ಪುಷ್ಯಮಾಸ, ಕೃಷ್ಣಪಕ್ಷ ದ್ವಾದಶಿ, ಜೇಷ್ಠಾ ನಕ್ಷತ್ರ, ವೃದ್ಧಿಯೋಗ ಮತ್ತು ಕೌಲವಕರಣ ಇರುವ ದಿನವಾಗಿದೆ. ರಾಹುಕಾಲವು ಮಧ್ಯಾಹ್ನ 1:54 ರಿಂದ 3:20ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಮಧ್ಯಾಹ್ನ 12:29 ರಿಂದ 1:53ರ ವರೆಗೆ ಇರುತ್ತದೆ. ಈ ದಿನದ ಪ್ರಮುಖ ಘಟನೆ ಮಕರ ಸಂಕ್ರಾಂತಿ ಮತ್ತು ಉತ್ತರಾಯಣ…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ – Kannada News | Good News for Namma Metro Commuters: 7th Train Starts Operations on Yellow Line from Today

ಬೆಂಗಳೂರು, ಜನವರಿ 15: ನಮ್ಮ ಮೆಟ್ರೋ (Namma Metro) ಯೆಲ್ಲೋ ಲೈನ್‌ನಲ್ಲಿ ಇಂದಿನಿಂದ ಮತ್ತೊಂದು ಮೆಟ್ರೋ ರೈಲು ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ. ಆರ್.ವಿ.ರೋಡ್–ಬೊಮ್ಮಸಂದ್ರ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸೇವೆಗೆ ಸೇರ್ಪಡೆಯಾಗಿದ್ದು, ಇದರಿಂದ ಪ್ರಯಾಣಿಕರಿಗೆ ಸಂಚಾರ ಇನ್ನಷ್ಟು ಸುಗಮವಾಗಲಿದೆ. ಬೆಳಗ್ಗೆ 6 ಗಂಟೆಯಿಂದಲೇ ಯೆಲ್ಲೋ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತಿದ್ದು, ರೈಲುಗಳ ಸಂಚಾರದ ನಡುವಿನ ಅಂತರ ಕಡಿಮೆಯಾಗಿದೆ. ಈವರೆಗೆ ಈ ಮಾರ್ಗದಲ್ಲಿ ಪ್ರತಿ 13 ನಿಮಿಷಕ್ಕೊಮ್ಮೆ ಒಂದು ಮೆಟ್ರೋ ರೈಲು ಸಂಚರಿಸುತ್ತಿತ್ತು. ಇದೀಗ 7ನೇ…

Read More

Daily Devotional: ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು? – Kannada News | Makar Sankranti 2026: Why Celebrate on January 15th? Rituals and Significance

ಮಕರ ಸಂಕ್ರಾಂತಿ 2026 ರ ಆಚರಣೆಯ ದಿನಾಂಕದ ಕುರಿತು ಜನರಲ್ಲಿ ಗೊಂದಲಗಳಿವೆ. ಕೆಲವರು ಜನವರಿ 14 ಅಥವಾ 15 ರಂದು ಆಚರಿಸಬೇಕೇ ಎಂಬ ಪ್ರಶ್ನೆಯನ್ನು ಹೊಂದಿದ್ದಾರೆ. ಈ ಗೊಂದಲವನ್ನು ನಿವಾರಿಸಲು, ಸೂರ್ಯ ಸಿದ್ಧಾಂತದ ಪ್ರಕಾರ, 2026 ರ ಜನವರಿ 15 ರಂದು ಮಕರ ಸಂಕ್ರಾಂತಿ ಆಚರಣೆ ಸೂಕ್ತವಾಗಿದೆ.ಸೂರ್ಯ ಭಗವಾನರು ಧನುರ್ ರಾಶಿಯಿಂದ ಮಕರ ರಾಶಿಗೆ ಪ್ರಯಾಣ ಬೆಳೆಸುವ ಈ ಕಾಲವನ್ನು ಉತ್ತರಾಯಣ ಪುಣ್ಯಕಾಲ ಎಂದು ಕರೆಯಲಾಗುತ್ತದೆ. ಇದು ದೇವತೆಗಳಿಗೆ ಹಗಲಿನ ಕಾಲವೆಂದು ಸಹ ಪರಿಗಣಿಸಲಾಗುತ್ತದೆ. 2026 ರಲ್ಲಿ,…

Read More

ಇಳಯರಾಜ ಹಾಡು ಬಳಸಿದರೂ ಬಿದ್ದಿಲ್ಲ ಕಾಪಿ ರೈಟ್ಸ್; ಟೆಕ್ನಿಕ್ ತಿಳಿಸಿದ ನಿರ್ದೇಶಕ – Kannada News | How Mana Shankara Vara Prasad Garu escapade from Copyrights of Ilaiyaraaja

ಇಳಯರಾಜ ಕಂಪೋಸ್ ಮಾಡಿದ ಯಾವುದೇ ಹಾಡನ್ನು ಸಿನಿಮಾದಲ್ಲಿ ಬಳಿಸಿದರೂ ಅವರು ಕೇಸ್ ಹಾಕುತ್ತಾರೆ. ಈ ಸಂಬಂಧ ಕೋರ್ಟ್ ಮೆಟ್ಟಿಲು ಹತ್ತುತ್ತಾರೆ. ಕೇವಲ ಮ್ಯೂಸಿಕ್ ಕಂಪನಿಯ ಹಕ್ಕನ್ನು ಪಡೆದರೆ ಮಾತ್ರ ಆಗೋದಿಲ್ಲ, ತಮ್ಮ ಒಪ್ಪಿಗೆಯನ್ನು ಪಡೆಯಬೇಕು ಎಂದು ಅವರು ಹೇಳುತ್ತಾರೆ. ಈಗ ಚಿರಂಜೀವಿ ಸಿನಿಮಾದಲ್ಲಿ ಇಳಯರಾಜ ಹಾಡು ಬಳಕೆ ಮಾಡಲಾಗಿದೆ. ಆದರೂ ಕೇಸ್ ಬಿದ್ದಿಲ್ಲ. ಈ ಬಗ್ಗೆ ನಿರ್ದೇಶಕ ಮಾತನಾಡಿದ್ದಾರೆ. ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರ ಪ್ರಸಾದ ಗಾರು’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ…

Read More

ಬೆಂಗಳೂರಲ್ಲಿ ಜನವರಿ 16ಕ್ಕೆ ಎಎಂಬಿ ಸಿನಿಮಾಸ್ ಕಾರ್ಯಾರಂಭ; ವಿಶೇಷತೆ ಏನು? – Kannada News | Amb Cinemas Kapali To start from Jan 16 In Gandhi Nagara

ಮಹೇಶ್ ಬಾಬು ಅವರು ಕೇವಲ ನಟನೆ ಮಾತ್ರವಲ್ಲದೆ ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಇದರಲ್ಲಿ ಅವರ ಒಡೆತನದ ಎಎಂಬಿ ಸಿನಿಮಾಸ್ ಕೂಡ ಒಂದು. ಹೈದರಾಬಾದ್ ಸೇರಿದಂತೆ ಕೆಲವೆಡೆ ಅತ್ಯುತ್ತಮ ಸಿನಿಮಾ ಅನುಭವವನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಎಎಂಬಿ ಸಿನಿಮಾಸ್ ಮಲ್ಟಿಪ್ಲೆಕ್ಸ್ ಚೈನ್ ಆಗಿದೆ. ಇದೀಗ ಈ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭ ಆಗುತ್ತಿದೆ. ಇದಕ್ಕೆ ದಿನಾಂಕ ಫಿಕ್ಸ್ ಆಗಿದೆ. ಮಹೇಶ್ ಬಾಬು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ಚಿತ್ರಮಂದಿರ ಇದ್ದ ಜಾಗದಲ್ಲಿಯೇ ಮಹೇಶ್ ಬಾಬು ತಮ್ಮ ಹೊಸ…

Read More