Category Archives: Blog

Your blog category

Bangalore rains: ಅರ್ಧ ಗಂಟೆಯ ಭಾರಿ ಮಳೆಗೇ ನಲುಗಿದ ಬೆಂಗಳೂರು, ಅವಾಂತರಗಳ ಸರಮಾಲೆ

Source link

Video: ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ – Kannada News | Two Visitors Arrested After Entering Monkey Enclosure at Punch The Monkey’s Zoo

ಟೋಕಿಯೋ, ಮೇ 19: ಜಪಾನಿನಲ್ಲಿ ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟೋಕಿಯೋ ಉಪನಗರ ಚಿಬಾದಲ್ಲಿರುವ ಪ್ರಸಿದ್ಧ ಇಚಿಕಾವಾ ಸಿಟಿ ಮೃಗಾಲಯದಲ್ಲಿ ಈ ಘಟನೆ ನಡೆದಿದ್ದು, ಕ್ರಿಪ್ಟೋಕರೆನ್ಸಿ ಪ್ರಚಾರಕ್ಕಾಗಿ ಇವರು ಈ ಹುಚ್ಚು ಸಾಹಸಕ್ಕೆ ಕೈಹಾಕಿದ್ದರು ಎನ್ನಲಾಗಿದೆ.

ಬಂಧಿತರನ್ನು 24 ವರ್ಷದ ರೀಡ್ ಜಹ್ನಾಯಿ ಡೇಸನ್ ಮತ್ತು 27 ವರ್ಷದ ನೀಲ್ ಜಬಾಹ್ರಿ ಡುವಾನ್ ಎಂದು ಗುರುತಿಸಲಾಗಿದೆ. ವೈರಲ್ ಆಗಿರುವ ವಿಡಿಯೋ ತುಣುಕುಗಳ ಪ್ರಕಾರ, ಡೇಸನ್ ನೀಲಿ ಬಣ್ಣದ ಸೂಟ್ ಧರಿಸಿ, ಮುಖಕ್ಕೆ ನಗುತ್ತಿರುವ ದೊಡ್ಡ ಎಮೋಜಿ ಹಾಕಿಕೊಂಡು ಮೃಗಾಲಯದ ರಕ್ಷಣಾ ಬೇಲಿಯನ್ನು ಜಿಗಿದು ಕೋತಿಗಳ ಆವರಣದೊಳಗೆ ನುಗ್ಗಿದ್ದರು, ಮತ್ತೊಬ್ಬ ಆರೋಪಿ ಡುವಾನ್ ಈ ಇಡೀ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿದ್ದ.

ಡೇಸನ್ ಧರಿಸಿದ್ದ ವಿಚಿತ್ರ ಉಡುಗೆ ಮತ್ತು ಎಮೋಜಿ ಮಾಸ್ಕ್, ಡಿಜಿಟಲ್ ಹಣವಾದ ಮೆಮೆಕಾಯಿನ್ ಕ್ರಿಪ್ಟೋಕರೆನ್ಸಿಗಳನ್ನು ಪ್ರಚಾರ ಮಾಡಲು ಬಳಸುವ ಸಂಕೇತವಾಗಿತ್ತು. ಮೃಗಾಲಯದ ಭದ್ರತಾ ಸಿಬ್ಬಂದಿ ತಕ್ಷಣವೇ ಅಲರ್ಟ್ ಆಗಿ ಇಬ್ಬರನ್ನೂ ವಶಕ್ಕೆ ಪಡೆದಿದ್ದರಿಂದ, ಅವರು ಪಂಚ್ ಅಥವಾ ಅಲ್ಲಿನ ಇತರ ಯಾವುದೇ ಕೋತಿಗಳಿಗೆ ಹಾನಿ ಮಾಡಲು ಸಾಧ್ಯವಾಗಲಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗೋಮಾಂಸ ಮತ್ತು ಅಶ್ಲೀಲ ಸಿನಿಮಾ ನಿಷೇಧವನ್ನು ಖಂಡಿಸಿದ್ದ ಕಿಯಾರಾ ಅಡ್ವಾಣಿ – Kannada News | Kiara Advani’s Decade Old Statement On Beef And P rn Bans Sparks Fresh Controversy

ಸೆಲೆಬ್ರಿಟಿಗಳು ಒಮ್ಮೊಮ್ಮೆ ನೀಡುವ ಹೇಳಿಕೆ ಅವರಿಗೆ ಮುಳುವಾಗುತ್ತದೆ. ಎಷ್ಟೋ ವರ್ಷಗಳ ಹಿಂದೆ ನೀಡಿದ ಹೇಳಿಕೆ ಮತ್ತೆ ಮತ್ತೆ ಚರ್ಚೆ ಆಗುತ್ತದೆ. ಈಗ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ದಶಕಗಳ ಹಿಂದೆ ಮುಂಬೈನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಿಯಾರಾ ನೀಡಿದ್ದ ಹೇಳಿಕೆ ಇದಾಗಿದೆ. ಗೋಮಾಂಸ ಹಾಗೂ ಅಶ್ಲೀಲ ಸಿನಿಮಾ ಬ್ಯಾನ್ ವಿಷಯವಾಗಿ ಅವರು ಮಾತನಾಡಿದ್ದರು.

1. ಕಿಯಾರಾ ಅಡ್ವಾಣಿ ವೈರಲ್ ವಿಡಿಯೋ 

2. ಅಶ್ಲೀಲ ಸೈಟ್ ಹಾಗೂ ಗೋಮಾಂಸ ಬಗ್ಗೆ ಹೇಳಿಕೆ

3. ದಶಕಗಳ ಬಳಿಕ ವೈರಲ್ ಆಯ್ತು ವಿಡಿಯೋ

2015ರಲ್ಲಿ ಮಹಾರಾಷ್ಟ್ರ ಸರ್ಕಾರ ಗೋಮಾಂಸ ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿತ್ತು. ಕೇಂದ್ರ ಸರ್ಕಾರ ಅಶ್ಲೀಲ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿತ್ತು. ಈ ಬಗ್ಗೆ ಕಿಯಾರಾ ಈ ಪ್ರತಿಕ್ರಿಯೆ ನೀಡಿದ್ದರು. ಸೆನ್ಸಾರ್‌ಶಿಪ್ ಮತ್ತು ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದ ಅವರು, ‘ಮೊದಲು ಗೋಮಾಂಸ, ಈಗ ಪೋರ್ನ್ ನಿಷೇಧಿಸಲಾಗಿದೆ. ಮುಂದೆ ಏನಾಗುತ್ತದೆಯೋ ಯಾರಿಗೂ ಗೊತ್ತಿಲ್ಲ. ಇದು ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನೇ ಕಸಿದುಕೊಳ್ಳುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಗಳು ಬೆಳೆದು ದೊಡ್ಡವಳಾದಮೇಲೆ ಬಾಯ್​​ಫ್ರೆಂಡ್ ಮಾಡಿಕೊಂಡ್ರೆ? ಕಿಯಾರಾ ಕೊಟ್ಟ ಉತ್ತರ ಏನು?

ಈ ಹಳೇ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಎರಡು ಬಣಗಳಾಗಿ ವಿಂಗಡಣೆಯಾಗಿದ್ದಾರೆ. ಕೆಲವರು ಕಿಯಾರಾ ಅವರನ್ನು ದೇಶವಿರೋಧಿ ಎಂದು ಟೀಕಿಸಿದರೆ, ಇನ್ನು ಕೆಲವರು ‘ಇದು ಹತ್ತು ವರ್ಷಗಳ ಹಳೆಯ ವಿಡಿಯೋ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ’ ಎಂದು ನಟಿಯ ಬೆಂಬಲಕ್ಕೆ ನಿಂತಿದ್ದಾರೆ.

ಯಶ್ ಜೊತೆ ‘ಟಾಕ್ಸಿಕ್’ ಚಿತ್ರದಲ್ಲಿ ಕಿಯಾರಾ

ನಟಿ ಕಿಯಾರಾ ಅಡ್ವಾಣಿ ಸದ್ಯ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ತಾಯಿಯಾಗಿರುವ ಕಿಯಾರಾ, ಈ ಸಾಹಸ ಪ್ರಧಾನ ಆಕ್ಷನ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್​ಗೆ  ದೊಡ್ಡ ಮಟ್ಟದಲ್ಲಿ ಹೆಜ್ಜೆ ಇಡುತ್ತಿದ್ದಾರೆ. ಅವರ ಪಾತ್ರದ ಮೇಲೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Petrol Diesel Price Hike: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ – Kannada News | Petrol, Diesel Price Hike: Fuel Prices Increase Again by 90 Paise

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್, ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ!

ಬೆಂಗಳೂರು, ಮೇ 19: ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರದಲ್ಲಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 6:50 am, Tue, 19 May 26

Source link

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಹಲವೆಡೆ ಭಾರೀ ಅವಾಂತರ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು – Kannada News | Bengaluru Rain: Over 300 Houses Drowned as Stormwater Drain Overflows into Nagawara Layout; HBR Layout Waterlogged

ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಗೆ ನಾಗವಾರದ ಎಂಎಸ್ ರಾಮಯ್ಯ ನಾರ್ತ್ ಸಿಟಿ ಲೇಔಟ್‌ನಲ್ಲಿ ಭಾರಿ ಅವಾಂತರ ಸಂಭವಿಸಿದೆ. ರಾಜಕಾಲುವೆಯ ಕೊಳಚೆ ನೀರು ಲೇಔಟ್ ಒಳಗೆ ನುಗ್ಗಿ ಸುಮಾರು 300ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹತ್ತು ಕ್ರಾಸ್‌ಗಳಲ್ಲಿ ಏಳಕ್ಕೂ ಹೆಚ್ಚು ಕ್ರಾಸ್‌ಗಳು ಸಂಪೂರ್ಣವಾಗಿ ಮುಳುಗಿವೆ. ರಾಜಕಾಲುವೆ ಅಗಲೀಕರಣದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಹಳೆ ಕಾಲುವೆಯನ್ನು ಒಡೆಯಲಾಗಿದ್ದರಿಂದ ನೀರಿನ ಹರಿವು ಹೆಚ್ಚಾಗಿ ಈ ಅವಾಂತರಕ್ಕೆ ಕಾರಣವಾಗಿದೆ.

ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದಿದೆ. ಮಳೆಗಾಲ ಹತ್ತಿರ ಬಂದಾಗ ಕಾಮಗಾರಿ ಆರಂಭಿಸಿರುವುದು ಮತ್ತು ಅದನ್ನು ಪೂರ್ಣಗೊಳಿಸದಿರುವುದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದಲೇ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ನಿವಾಸಿಗಳು ತಮ್ಮ ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡುತ್ತಿದ್ದಾರೆ.

ಮತ್ತೊಂದೆಡೆ, HBR ಲೇಔಟ್​ನಲ್ಲಿ ರಸ್ತೆಗಳು ಜಲಾವೃತಗೊಂದು ಸ್ಥಳೀಯರು ಪರದಾಡುವಂತಾಯಿತು. ಹೊರಮಾವು ಬಳಿಯ SLV ವಜ್ರ ಅಪಾರ್ಟ್ಮೆಂಟ್​ನಲ್ಲೂ ಮಳೆಯಿಂದಾಗಿ ಸಂಕಷ್ಟ ಎದುರಾಯಿತು. ಬೆಲೆಬಾಳುವ ಕಾರುಗಳು ಜಲಾವೃತವಾಗಿದ್ದು, ತುರ್ತು ಸೇವೆ ಇಲ್ಲದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CSK vs SRH: ಸಿಎಸ್​ಕೆ ಪ್ಲೇಆಫ್‌ ಕನಸಿಗೆ ಕೊಳ್ಳಿ ಇಟ್ಟ ಸನ್‌ರೈಸರ್ಸ್ ಹೈದರಾಬಾದ್ – Kannada News | IPL 2026: SRH Beats CSK, Secures Playoff Spot; Gujarat Also Qualifies

ಐಪಿಎಲ್ 2026 ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆಯ ತವರು ನೆಲವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಈ ಹೈವೋಲ್ಟೇಜ್ ಕದನಲ್ಲಿ ಸಿಎಸ್​ಕೆ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿದ ಸನ್‌ರೈಸರ್ಸ್ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಸನ್‌ರೈಸರ್ಸ್ ವಿರುದ್ಧ ಸೋತ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಭಾಗಶಃ ಹೊರಬಿದ್ದಿದೆ. ಸನ್‌ರೈಸರ್ಸ್ ತಂಡದ ಗೆಲುವಿನೊಂದಿಗೆ ಗುಜರಾತ್ ಕೂಡ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ 180 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸುವ ಮೂಲಕ ಅಮೋಘ ಜಯ ದಾಖಲಿಸಿತು.

ಸಿಎಸ್​ಕೆ ತಂಡಕ್ಕೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅನುಭವಿ ಸಂಜು ಸ್ಯಾಮ್ಸನ್ 27 ರನ್​ಗಳಿಗೆ ಔಟಾದರೆ, ನಾಯಕ ರುತುರಾಜ್ ಗಾಯಕ್ವಾಡ್ ಗೆಲ್ಲಲೇಬೇಕಾದ ಪಂದ್ಯದಲ್ಲಿ 15 ರನ್​ಗಳಿಗೆ ಸುಸ್ತಾದರು. ಊರ್ವಿಲ್ ಪಟೇಲ್ ಇನ್ನಿಂಗ್ಸ್ ಕೂಡ 17 ರನ್​ಗಳಿಗೆ ಅಂತ್ಯವಾಯಿತು. ಈ ಮಧ್ಯದಲ್ಲಿ, ಕಾರ್ತಿಕ್ ಶರ್ಮಾ 32 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಡೆವಾಲ್ಡ್ ಬ್ರೆವಿಸ್ ಕೂಡ 44 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 180 ರನ್‌ಗಳಿಗೆ ಕೊಂಡೊಯ್ದರು. ಇತ್ತ ಹೈದರಾಬಾದ್ ಪರ ನಾಯಕ ಪ್ಯಾಟ್ ಕಮ್ಮಿನ್ಸ್ ಗರಿಷ್ಠ ಮೂರು ವಿಕೆಟ್‌ಗಳನ್ನು ಪಡೆದರು.

ನಾಯಕನ ಇನ್ನಿಂಗ್ಸ್ ಆಡಿದ ಕಿಶನ್

ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್‌ಗೂ ಆಘಾತ ಎದುರಾಯಿತು. ಎರಡನೇ ಓವರ್‌ನಲ್ಲಿ ಟ್ರಾವಿಸ್ ಹೆಡ್ ಔಟ್ ಆದರು.ಆದರೆ ಆ ನಂತರ ಬಂದ ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ನಿಧಾನವಾಗಿ ಜೊತೆಯಾಟ ಕಟ್ಟಿದರು. ಆದಾಗ್ಯೂ ಅಭಿಷೇಕ್ ಶರ್ಮಾ ಎಂಟನೇ ಓವರ್‌ನಲ್ಲಿ 26 ರನ್ ಬಾರಿಸಿ ಔಟಾದರು. ಆಗ ತಂಡದ ಮೊತ್ತ ಕೇವಲ 56 ರನ್ ಆಗಿತ್ತು.

ಕಿಶನ್- ಕ್ಲಾಸೆನ್ ಜೊತೆಯಾಟ

ಈ ವೇಳೆ ತಂಡಕ್ಕೆ ಆಸರೆಯಾದ ಹೆನ್ರಿಕ್ ಕ್ಲಾಸೆನ್ ನಾಯಕ ಇಶಾನ್ ಕಿಶನ್ ಜೊತೆ 75 ರನ್‌ಗಳ ಜೊತೆಯಾಟ ಕಟ್ಟಿದರು. 47 ರನ್ ಬಾರಿಸಿದ್ದ ಕ್ಲಾಸೆನ್ ಅವರ ವಿಕೆಟ್ ಪಡೆದ ನಂತರ ಚೆನ್ನೈ ತಂಡವು ಮತ್ತೆ ಗೆಲುವಿನ ಭರವಸೆ ಮೂಡಿಸಿತ್ತು. ಆದರೆ ಇಶಾನ್ ಕಿಶಾನ್ ಅದ್ಭುತ ಅರ್ಧಶತಕದ ಜೊತೆಗೆ 70 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿ ತಂಡವನ್ನು 5 ವಿಕೆಟ್‌ಗಳ ಗೆಲುವಿನತ್ತ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್ – Kannada News | RCB IPL 2026 Playoffs: Sehwag Predicts Champions, GT Major Challenge Ahead

ಹಾಲಿ ಚಾಂಪಿಯನ್ ಆರ್​ಸಿಬಿ 2026 ರ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಮೊದಲ ತಂಡವಾಗಿ ಪ್ಲೇಆಫ್‌ಗೇರಿದೆ. ಆರ್​ಸಿಬಿ ಕಳೆದ ಐಪಿಎಲ್​ನಂತೆ ಈ ಐಪಿಎಲ್​ನಲ್ಲೂ ಎಲ್ಲಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಆರ್​ಸಿಬಿಯ ಸಾಂಘಿಕ ಹೋರಾಟವನ್ನು ವೀಕ್ಷಿಸಿರುವ ಹಲವಾರು ಮಾಜಿ ಕ್ರಿಕೆಟಿಗರು ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್ ಎನ್ನುತ್ತಿದ್ದಾರೆ. ಈ ರೀತಿಯಾಗಿ ಭವಿಷ್ಯ ನುಡಿದವರಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಒಬ್ಬರು.

ಆರ್‌ಸಿಬಿಯದ್ದೇ ಟ್ರೋಫಿ

ಕ್ರಿಕ್‌ಬಜ್‌ನಲ್ಲಿ ಆರ್​ಸಿಬಿ ತಂಡದ ಪ್ರದರ್ಶನದ ಕುರಿತು ಮಾತನಾಡಿದ ವೀರೇಂದ್ರ ಸೆಹ್ವಾಗ್, ‘ಚಾಂಪಿಯನ್ ತಂಡವು ಅಗ್ರ ಎರಡು ಸ್ಥಾನಗಳಲ್ಲಿ ಅರ್ಹತೆ ಪಡೆಯಬೇಕು. ಅದರಂತೆ ಆರ್​ಸಿಬಿ ಆಡುತ್ತಿರುವ ರೀತಿಯನ್ನು ನೋಡಿದರೆ, ಈ ವರ್ಷವೂ ಅವರೇ ಟ್ರೋಫಿಯನ್ನು ಎತ್ತಿಹಿಡಿಯುತ್ತಾರೆ ಎಂದು ತೋರುತ್ತದೆ’ ಎಂದಿದ್ದಾರೆ. ಆದಾಗ್ಯೂ, ಆರ್​ಸಿಬಿ ಎದುರಿಸುತ್ತಿರುವ ದೊಡ್ಡ ಸವಾಲನ್ನು ಸಹ ಉಲ್ಲೇಖಿಸಿರುವ ಸೆಹ್ವಾಗ್. ಟ್ರೋಫಿ ಗೆಲುವಿನಲ್ಲಿ ಆರ್‌ಸಿಬಿಗೆ ಕಠಿಣ ಹೋರಾಟ ನೀಡಬಲ್ಲ ತಂಡವೆಂದರೆ ಅದು ಗುಜರಾತ್ ಟೈಟಾನ್ಸ್.

ಒಂದು ವೇಳೆ ಗುಜರಾತ್ ತಂಡ ಕೂಡ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆದರೆ, ಆರ್‌ಸಿಬಿಗೆ ಅದು ಕಷ್ಟಕರವಾಗಿರುತ್ತದೆ. ಏಕೆಂದರೆ ಗುಜರಾತ್ ಟೈಟಾನ್ಸ್ ಕೂಡ ಉತ್ತಮ ಬೌಲಿಂಗ್ ಘಟಕವನ್ನು ಹೊಂದಿದೆ. ಈ ಎರಡೂ ತಂಡಗಳ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ಬಲಿಷ್ಠವಾಗಿರುವುದರಿಂದ ಪ್ಲೇಆಫ್‌ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದನ್ನು ನೋಡಲು ಖುಷಿಯಾಗುತ್ತದೆ. ಉಭಯ ತಂಡಗಳ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳು ಸ್ಥಿರವಾಗಿ ರನ್ ಗಳಿಸುತ್ತಿದ್ದಾರೆ ಎಂದು ಸೆಹ್ವಾಗ್ ಎಚ್ಚರಿಸಿದ್ದಾರೆ.

ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡ

ಸೆಹ್ವಾಗ್ ನೀಡಿರುವ ಹೇಳಿಕೆಗೆ ಪೂರಕವಾಗಿ ಆರ್​ಸಿಬಿ ಕೂಡ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡುತ್ತಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 23 ರನ್‌ಗಳಿಂದ ಜಯಗಳಿಸಿದ ಆರ್​ಸಿಬಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಈ ಆವೃತ್ತಿಯಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ಐಪಿಎಲ್ ತಂಡ ೆಎನಿಸಿಕೊಂಡಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಈ ಆವೃತ್ತಿಯಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದು, ಒಂಬತ್ತು ಪಂದ್ಯಗಳನ್ನು ಗೆದ್ದು ನಾಲ್ಕರಲ್ಲಿ ಸೋತಿದ್ದು, ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು? – Kannada News | Kodagu: Dubare Elephant Camp Tragedy: Karnataka Forest Department Tightens Safety Measures

ಕೊಡಗು, ಮೇ 18: ದುಬಾರೆ ಆನೆ ಶಿಬಿರದಲ್ಲಿರುವ ಸಾಕಾನೆಗಳನ್ನ ನೋಡಲು ರಾಜ್ಯಮಾತ್ರವಲ್ಲ, ತಮಿಳುನಾಡು, ಕೇರಳದಿಂದಲೂ ಪ್ರವಾಸಿಗರು ಬರುತ್ತಾರೆ. ಹೀಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಂದು ಆನೆಗಳ ಕಾಳಗಕ್ಕೆ ಬಲಿ ಆಗಿದ್ದಾರೆ. ಚೆನ್ನೈ ಮೂಲದ ಜೋಯೆಲ್ ತನ್ನ ಪತ್ನಿ ತುಳಸಿ ಹಾಗೂ ಮೂರು ವರ್ಷದ ಮಗಳ ಜೊತೆ ಇಂದು ಬೆಳಗ್ಗೆ ದುಬಾರೆ ಶಿಬಿರಕ್ಕೆ ಬಂದಿದ್ದಾರೆ. ಈ ವೇಳೆ ಮಾರ್ತಾಂಡ ಆನೆ ಜತೆ ನಿಂತಿದ್ದ ದಂಪತಿ ಫೋಟೋ ತೆಗೆಸಿಕೊಳ್ತಿದ್ರು. ಆಗ ಮದವೇರಿದ ಕಂಜನ್ ಆನೆ ಅಲ್ಲಿಗೆ ಬಂದಿದೆ. ನೋಡ ನೋಡ್ತಿದ್ದಂತೆ ಮಾರ್ತಾಂಡ ಆನೆ ಮೇಲೆ ಕಂಜನ್‌ ದಾಳಿ ಮಾಡಿದೆ. ಏಕಾಏಕಿ ದಾಳಿ ಆಗ್ತಿದ್ದಂತೆ ಮಾರ್ತಾಂಡ ಆನೆ ದಂಪತಿ ಮೇಲೆ ಬಿದ್ದಿದೆ. ತಕ್ಷಣ ಪುತ್ರಿಯನ್ನ ಒಂದು ಕೈಯಲ್ಲಿ ಎತ್ತಿ ನೀರಿನಿಂದ ಮೇಲೆದ್ದ ಜೋಯೆಲ್‌, ಬಳಿಕ ಪತ್ನಿಯನ್ನ ಉಳಿಸಿಕೊಳ್ಳಲು ಯತ್ನಿಸಿದರು. ಆದರೆ ಸಾಧ್ಯವಾಗಿಲ್ಲ. ಅದಾಗಲೇ ಆನೆ ಕೆಳಗೆ ಬಿದ್ದಿದ್ದ ತುಳಸಿ ಮೃತಪಟ್ಟಿದ್ದರು. ಈ ದುರಂತದ ಬಳಿಕ ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರವಾಸಿಗರನ್ನು ಆನೆಗಳ ಹತ್ತಿರ ಬಿಡುವ ಅಪಾಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಮೃತರ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಅರಣ್ಯ ಸಚಿವರು ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದು, ಇನ್ನು ಮುಂದೆ ಪ್ರವಾಸಿಗರು ಆನೆಗಳಿಂದ ಕನಿಷ್ಠ 100 ಅಡಿ ದೂರದಲ್ಲಿ ನಿಂತು ವೀಕ್ಷಿಸಬೇಕು ಎಂದು ಆದೇಶಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ? – Kannada News | This is what Darshan said when DGP Alok Kumar visits Parappana Agrahara Jail

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಅಲ್ಲಿ ತಮಗೆ ಕೆಲವು ಸೌಕರ್ಯಗಳು ಸಿಗುತ್ತಿಲ್ಲ ಎಂದು ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಸ್ವತಃ ದರ್ಶನ್ ಅವರ ಸೆಲ್​ಗೆ ಭೇಟಿ ನೀಡಿದಾಗ ಅವರು ತೊಂದರೆಗಳ ಬಗ್ಗೆ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಆ ಬಗ್ಗೆ ಟಿವಿ9ಗೆ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ‘ಮೇ 15ರಂದು ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಸಮಸ್ಯೆ ಆಲಿಸಿದ್ದೇನೆ. ಕೆಲವು ದೂರುಗಳು ಇದ್ದವು. ಅದನ್ನೆಲ್ಲ ಪರಿಶೀಲನೆ ಮಾಡಿದೆ. ದರ್ಶನ್ (Darshan) ಇರುವ ಸೆಲ್​ಗೂ ಹೋಗಿದ್ದೆ. ಕುಟುಂಬದವರನ್ನು ಭೇಟಿ ಮಾಡಲು ಅವಕಾಶ ಬೇಕು ಮತ್ತು ಫೋನ್ ಮಾಡಲು ಸಮಯ ಕೊಡಬೇಕು ಎಂಬುದನ್ನು ಬಿಟ್ಟರೆ ಬೇರೆ ಏನೂ ಸಮಸ್ಯೆ ಇಲ್ಲ ಎಂದು ಅವರು ಹೇಳಿದರು’ ಎಂದಿದ್ದಾರೆ ಅಲೋಕ್ ಕುಮಾರ್. ಜಾಮೀನು ಪಡೆಯಬೇಕು ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಅವರಿಗೆ ನಿರಾಸೆ ಆಗಿದೆ. ಸದ್ಯಕ್ಕೆ ಅವರ ಜೈಲುವಾಸ ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ: ಬಂದ ಆದಾಯದಲ್ಲಿ 85.20 ಕೋಟಿ ರೂ.ವೆಚ್ಚ – Kannada News | Top 11 temples in Karnataka Kukke Subrahmanya earn Rs 602 crore in 2025 26, up Rs 45 cr year after year

ಮಂಗಳೂರು, (ಮೇ 18): ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya temple). ನಾಗದೋಷಕ್ಕೆ ಪರಿಹಾರ ನೀಡುವ ಅತ್ಯಂತ ಪವರ್ ಫುಲ್ ಕ್ಷೇತ್ರ. ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಶದ ಮೂಲೆ ಮೂಲೆಯಿಂದ ಭಕ್ತರು ಹರಿದು ಬರ್ತಾರೆ. ಈ ಪ್ರಸಿದ್ದ ಪುಣ್ಯಕ್ಷೇತ್ರ ಇದೀಗ ಮತ್ತೊಮ್ಮೆ ಆದಾಯದಲ್ಲಿ ಇತಿಹಾಸ ನಿರ್ಮಿಸಿದೆ. ಮುಜರಾಯಿ ಇಲಾಖೆಯ ಆಧೀನದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷ ರೂಪಾಯಿ ಆದಾಯ ಗಳಿಸಿದೆ. ಕಳೆದ ವರ್ಷ 155 ಕೋಟಿ ರೂಪಾಯಿ ಆದಾಯ ಗಳಿಸಿದ್ದ ದೇವಳ ಈ ಬಾರಿ ಸುಮಾರು 12 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ದಾಖಲಿಸಿದೆ. ಇದೇ ಮೊದಲ ಬಾರಿಗೆ 168 ಕೋಟಿಯ ಗಡಿಗೆ ಸಮೀಪಿಸಿದ ಕುಕ್ಕೆ ದೇವಸ್ಥಾನ ರಾಜ್ಯದ ನಂಬರ್ ಒನ್ ಶ್ರೀಮಂತ ದೇವಾಲಯ ಎಂಬ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

_ದೇವಳದ ಪ್ರಮುಖ ಆದಾಯ ಮೂಲವೇ ಹರಕೆ ಸೇವೆಗಳು. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳಿಂದಲೇ 64 ಕೋಟಿಗೂ ಅಧಿಕ ಆದಾಯ ಬಂದಿದೆ. ಕಾಣಿಕೆ ಹುಂಡಿಯಿಂದ 24 ಕೋಟಿ ರೂಪಾಯಿ, ಸಾಮಾನ್ಯ ಕಾಣಿಕೆಯಿಂದ 5 ಕೋಟಿ ರೂಪಾಯಿ, ಹೂಡಿಕೆ ಮೇಲಿನ ಬಡ್ಡಿಯಿಂದ ಸುಮಾರು 49 ಕೋಟಿ ಆದಾಯ ಬಂದಿದೆ. ಇದಷ್ಟೇ ಅಲ್ಲದೆ ಛತ್ರಗಳ ಬಾಡಿಗೆ, ಕಟ್ಟಡ ಮತ್ತು ಅಂಗಡಿಗಳ ಬಾಡಿಗೆ, ಕೃಷಿ ತೋಟದ ಉತ್ಪನ್ನ, ಅನ್ನಸಂತರ್ಪಣೆ ನಿಧಿ ಹೀಗೆ ಹಲವು ಮೂಲಗಳಿಂದ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಹರಿದು ಬಂದಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1

Source link