Category Archives: Blog

Your blog category

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ? – Kannada News | Beltangady Teen Found Dead in Pond; Murder Suspected

ಮಂಗಳೂರು, ಜನವರಿ 14: ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ 9ನೇ ತರಗತಿಯ ಬಾಲಕನೊಬ್ಬ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಸುಮಂತ್​​ (15) ಮೃತ ದುರ್ದೈವಿಯಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.

ಕುವೆಟ್ಟು ಸಮೀಪದ ಸಂಬೋಳ್ಯ ಬರಮೇಲು ನಿವಾಸಿಯಾದ ಸುಬ್ರಹ್ಮಣ್ಯ ನಾಯಕ್ ಅವರ ಮಗ ಸುಮಂತ್​​ ಧನುರ್ಮಾಸದ ಹಿನ್ನಲೆಯಲ್ಲಿ ಬೆಳಗ್ಗೆ 4 ಗಂಟೆಗೆ ಎದ್ದು ನಾಳದಲ್ಲಿರೋ ದೇವಸ್ಥಾನಕ್ಕೆ ಹೋಗಿಬರುತ್ತಿದ್ದ. ಹಾಗೆ ಇಂದು ಕೂಡ ದೇವಸ್ಥಾನಕ್ಕೆ ಅಂತಾ ಹೋಗಿದ್ದಾನೆ. ಆದರೆ ಈತನ ಸಹೋದರ ಸುದರ್ಶನ್​​ಗೆ ಬೆಳಗ್ಗೆ 6.30ರ ಸುಮಾರಿಗೆ ದೇವಸ್ಥಾನದಿಂದ ಸ್ನೇಹಿತರು ಕರೆ ಮಾಡಿ ಸುಮಂತ್ ದೇವಸ್ಥಾನಕ್ಕೆ ಯಾಕೆ ಬರಲಿಲ್ಲ ಅಂತಾ ಕೇಳಿದ್ದಾರೆ. ಆಗ ಸುಮಂತ್​​ ಮಿಸ್ಸಿಂಗ್​​ ಆಗಿರುವ ವಿಚಾರ ಮನೆಯವರಿಗೆ ಗೊತ್ತಾಗಿದೆ. ಮನೆಯಿಂದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗಿ ರಸ್ತೆ ಸಮೀಪ ನಿಲ್ಲಿಸಿದ್ದ ಬೈಸಿಕಲ್​​ ತೆಗೆದುಕೊಂಡು ಸುಮಂತ್​​ ದೇಗುಲಕ್ಕೆ ಹೋಗುತ್ತಿದ್ದ. ಅಲ್ಲಿಗೆ ಹೋಗಿ ನೋಡಿದ್ರೆ ಸೈಕಲ್ ನಿಲ್ಲಿಸಿದ್ದಲಿಯೇ ಇತ್ತು. ಇದ್ರಿಂದ ಅನುಮಾನಗೊಂಡು ಆತನನ್ನು ಎಲ್ಲರೂ ಹುಡುಕಿದ್ದಾರೆ. ಈ ವೇಳೆ ರಕ್ತದ ಹನಿಗಳು ಪತ್ತೆಯಾಗಿದ್ದು, ಅವನ್ನು ಹಿಂಬಾಲಿಸಿ ಹೋದಾಗ ಸಮೀಪದ ಕೆರೆ ಪಕ್ಕದಲ್ಲೇ ಇದ್ದ ಕಲ್ಲೊಂದಕ್ಕೆ ರಕ್ತ ಅಂಟಿಕೊಂಡಿರೋದು ಕಾಣಿಸಿದೆ. ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಬಂದು ಕೆರೆಯಲ್ಲಿ ಹುಡುಕಾಡಿದಾಗ ಅಲ್ಲಿ ಸುಮಂತ್ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ತಾಯಿಗೆ ಹೊಡೆದ ಎಂದು ಮಲತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಮಗ

ನಾಯಿ ಅಟ್ಟಿಸಿಕೊಂಡು ಬಂದು ಕಚ್ಚಿದ ಕಾರಣ ಬಾಲಕ ಓಡಿ ಹೋಗಿ ಕೆರೆಗೆ ಬಿದ್ದಿದ್ದಾನೆ ಅಂತಾ ಆರಂಭದಲ್ಲಿ ಅನುಮಾನಿಸಲಾಗಿತ್ತು. ಚಿರತೆ ದಾಳಿಯಿಂದ ಸಾವನ್ನಪ್ಪಿರಬಹುದು ಅಂತಲೂ ಅಂದಾಜಿಸಲಾಗಿತ್ತು. ಆದ್ರೆ ಬಾಕಲನ ತಲೆಯ ಮೇಲ್ಭಾಗದಲ್ಲಿ ಮಚ್ಚಿನಲ್ಲಿ ಹೊಡೆದಿರುವ ರೀತಿ ಎರಡು ಕಡೆ ಗಾಯವಾಗಿರೋದು ಕಂಡುಬಂದಿದೆ. ಹಾಗಿ ಇದು ಕೊಲೆಯಾಗಿರಬಹುದೆಂಬ ಅನುಮಾನ ಮೂಡಿದ್ದು, ಎಸ್ಪಿ ಡಾ.ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಾಗ್ ಸ್ಕ್ವಾಡ್​ನಿಂದಲೂ ತಪಾಸಣೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಘಟನೆ ಹೇಗಾಯ್ತು ಅಂತಾ ಗೊತ್ತಾಗಲಿದ್ದು, ಎಲ್ಲ ಆಯಾಮದಲ್ಲಿಯೂ ತನಿಖೆ ಮಾಡುತ್ತೇವೆ ಅಂತಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

III Recruitment 2026: ನಿವೃತ್ತಿಯ ನಂತರವೂ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಸುವರ್ಣವಕಾಶ – Kannada News | Retired Professionals: III Faculty Jobs Re enter Insurance Sector Career!

ನಿವೃತ್ತಿಯ ನಂತರ ಮನೆಯಲ್ಲಿ ಸಮಯ ಕಳೆಯುವುದು ನಿಮಗೆ ಕಷ್ಟವಾಗಿದ್ದರೆ, ನೀವು ಮತ್ತೆ ಕೆಲಸ ಮಾಡಲು ಪ್ರಾರಂಭಿಸಬಹುದು. ಭಾರತೀಯ ವಿಮಾ ಸಂಸ್ಥೆ (III) ನಿಮಗೊಂದು ಅವಕಾಶವನ್ನು ನೀಡುತ್ತಿದೆ. ನಿವೃತ್ತ ಉದ್ಯೋಗಿಗಳಿಗಾಗಿ ವಿಮಾ ಸಂಸ್ಥೆಯು ಅಧ್ಯಾಪಕರ ಹುದ್ದೆಗಳನ್ನು ಪ್ರಕಟಿಸಿದೆ. ನೀವು ಅರ್ಹರಾಗಿದ್ದರೆ, ನೀವು ಈ ನೇಮಕಾತಿಗೆ ಸಹ ಅರ್ಜಿ ಸಲ್ಲಿಸಬಹುದು.

ಭಾರತೀಯ ವಿಮಾ ಸಂಸ್ಥೆಯು ತನ್ನ ಕೋಲ್ಕತ್ತಾ ಕಚೇರಿಗೆ ಜನರಲ್ ವಿಮಾ ಫ್ಯಾಕಲ್ಟಿ ಹುದ್ದೆಯನ್ನು ಮತ್ತು ತನ್ನ ಮುಂಬೈ ಕಚೇರಿಗೆ ಸಹಾಯಕ ಪ್ರಾಧ್ಯಾಪಕ / ಫ್ಯಾಕಲ್ಟಿ ಹುದ್ದೆಯನ್ನು ಹುಡುಕುತ್ತಿದೆ . ಈ ಉದ್ದೇಶಕ್ಕಾಗಿ, ಸಂಸ್ಥೆಯು ಜನವರಿ 14 ರಂದು ತನ್ನ ಅಧಿಕೃತ ವೆಬ್‌ಸೈಟ್ www.insuranceinstituteofindia.com ನಲ್ಲಿ ಜಾಹೀರಾತು ಸಂಖ್ಯೆಯೊಂದಿಗೆ (Advt./Faculty-G/2026/02) ಖಾಲಿ ಹುದ್ದೆಯ ಅಧಿಸೂಚನೆಯನ್ನು ಬಿಡುಗಡೆ ಮಾಡಿತು.

ಅಗತ್ಯವಿರುವ ಅರ್ಹತೆಗಳು ಯಾವುವು?

ಅಧ್ಯಾಪಕರು (ಸಾಮಾನ್ಯ ವಿಮೆ) ಭಾರತದ ಸಾಮಾನ್ಯ ವಿಮಾ ಕಂಪನಿಗಳಿಂದ ಡೆಪ್ಯೂಟಿ ಜನರಲ್ ಮ್ಯಾನೇಜರ್ (ಜಿಐಸಿ ಮತ್ತು ಪಿಎಸ್‌ಯು ಕಂಪನಿಗಳು) ಅಥವಾ ಅದಕ್ಕಿಂತ ಹೆಚ್ಚಿನ ಅಥವಾ ಸಮಾನ ಹುದ್ದೆಯಿಂದ ನಿವೃತ್ತರಾದ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು. ಅವರು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಭಾರತೀಯ ವಿಮಾ ಸಂಸ್ಥೆಯ ಅಸೋಸಿಯೇಟ್/ಫೆಲೋಶಿಪ್ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು. ಅರ್ಜಿದಾರರು ಸಾಮಾನ್ಯ ವಿಮಾ ಕಂಪನಿಯಲ್ಲಿ ವ್ಯವಸ್ಥಾಪಕ ಮಟ್ಟದಲ್ಲಿ 15 ವರ್ಷಗಳ ಅನುಭವವನ್ನು ಹೊಂದಿರಬೇಕು. ವಯಸ್ಸಿನ ಮಿತಿ ಡಿಸೆಂಬರ್ 31, 2025 ರಂತೆ 55 ರಿಂದ 62 ರೊಳಗಿರಬೇಕು. ಈ ಹುದ್ದೆಯು ಒಪ್ಪಂದದಡಿಯಲ್ಲಿದೆ.

ಅಭ್ಯರ್ಥಿಯು ಸಂಬಂಧಿತ ವಿಷಯದಲ್ಲಿ ಕನಿಷ್ಠ 55 ಪ್ರತಿಶತ ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಉತ್ತಮ ಶೈಕ್ಷಣಿಕ ದಾಖಲೆಯೊಂದಿಗೆ ವ್ಯವಹಾರ ನಿರ್ವಹಣೆ ಅಥವಾ ಸಮಾಜ ವಿಜ್ಞಾನ ಕ್ಷೇತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಹೊಂದಿರಬೇಕು. ಯುಜಿಸಿ ನಡೆಸುವ ನೆಟ್ ಅಥವಾ ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಸಾಮಾನ್ಯ ವಿಮಾ ಕಂಪನಿಯಲ್ಲಿ ನಿರ್ವಹಣಾ ಮಟ್ಟದ ಅಥವಾ ಬೋಧನಾ ಅನುಭವವನ್ನು ಹೊಂದಿರಬೇಕು. 35 ರಿಂದ 55 ವರ್ಷದೊಳಗಿನ ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಧಿಕಾರಾವಧಿ 60 ವರ್ಷ ವಯಸ್ಸಿನವರೆಗೆ ಇರುತ್ತದೆ. ಈ ಹುದ್ದೆಗೆ ಮಾಸಿಕ ವೇತನ ಯುಜಿಸಿ ನಿಯಮಗಳ ಪ್ರಕಾರ ಇರುತ್ತದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿದ ನಂತರ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಬಯಸುವ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಮೊದಲು, ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯ ಅನುಬಂಧದಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ. ನಂತರ, ನಿಮ್ಮ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ. ಅಗತ್ಯವಿರುವ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಮತ್ತು ಅವುಗಳನ್ನು ಅಂಚೆ ಮೂಲಕ ಗೊತ್ತುಪಡಿಸಿದ ವಿಳಾಸಕ್ಕೆ ಕಳುಹಿಸಿ. ನೀವು ಜನವರಿ 31 ರ ಮೊದಲು, ಸಂಜೆ 6 ಗಂಟೆಗೆ recruitment@iii.org.in ಗೆ ಇಮೇಲ್ ಮಾಡಬೇಕು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ.. – Kannada News | Kichcha Sudeep releases Dear Husband Kannada movie Title Teaser

ಟೈಟಲ್ ಟೀಸರ್ ಮೂಲಕ ‘ಡಿಯರ್ ಹಸ್ಬೆಂಡ್’ ಸಿನಿಮಾ ಗಮನ ಸೆಳೆದಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ‘ಜಿ9 ಕಮ್ಯುನಿಕೇಶನ್ ಆ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಗುರುರಾಜ ಕುಲಕರ್ಣಿ (ನಾಡಗೌಡ) ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ‘ಡಿಯರ್ ಹಸ್ಬೆಂಡ್’ (Dear Husband) ಚಿತ್ರದಲ್ಲಿ ಸೂರಜ್ ಗೌಡ, ಶರಣ್ಯಾ ಶೆಟ್ಟಿ, ಪ್ರವೀಣ್ ಅವರು ನಟಿಸುತ್ತಿದ್ದಾರೆ.

ಈ ವೇಳೆ ಕಿಚ್ಚ ಸುದೀಪ್ ಮಾತನಾಡಿದರು. ‘ನಾವು ಚಿತ್ರರಂಗಕ್ಕೆ ಹೊಸಬರಾಗಿ ಬಂದಾಗ ಅನೇಕ ಹಿರಿಯರು ನಮಗೆ ಪ್ರೋತ್ಸಾಹಿಸಿ ಬೆನ್ನು ತಟ್ಟಿದ್ದರು. ಅದೇ ಕೆಲಸವನ್ನು ನಾವು ಈಗ ಹೊಸಬರಿಗೆ ಮಾಡುತ್ತಿದ್ದೇವೆ. ಅಂತಿಮವಾಗಿ ಕನ್ನಡ ಚಿತ್ರರಂಗ ಬೆಳೆಯಬೇಕು. ಇಡೀ ಚಿತ್ರತಂಡಕ್ಕೆ ಶುಭವಾಗಲಿ. ಹೊಸಬರ ತಂಡದ ಮೂಲಕ ಖಂಡಿತವಾಗಿಯೂ ಹೊಸ ರೀತಿಯ ಸಿನಿಮಾ ಬರಲಿದೆ’ ಎಂದು ಹೇಳಿದರು.

ಟೈಟಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಕಿಚ್ಚ ಸುದೀಪ್ ಅವರ ಜೊತೆ ಕುಮಾರ್ ಬಂಗಾರಪ್ಪ, ಪ್ರವೀಣ್ ತೇಜ್, ವಿ. ಹರಿಕೃಷ್ಣ, ಶಶಾಂಕ್, ಎ.ಪಿ. ಅರ್ಜುನ್, ವೈಶಾಕ್ ವಿಜಯಕುಮಾರ್, ರಿತೇಶ್ ಮುಂತಾದವರು ಆಗಮಿಸಿದ್ದರು. ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿವೆ. ಇದೇ ತಿಂಗಳ ಅಂತ್ಯದಿಂದ ಶೂಟಿಂಗ್ ಆರಂಭವಾಗಲಿದೆ. ಬೆಂಗಳೂರು, ಗೋವಾ ಮತ್ತಿತರ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗುವುದು.

‘ಡಿಯರ್ ಹಸ್ಬೆಂಡ್’ ಟೈಟಲ್ ಟೀಸರ್:

ಸಚಿನ್ ಬಸ್ರೂರು ಅವರು ಟೈಟಲ್ ಟೀಸರ್​ಗೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರಮೋದ್ ಮರವಂತೆ ಅವರ ಗೀತರಚನೆ ಹಾಗೂ ರಘು ನಿಡುವಳ್ಳಿ ಅವರ ಸಂಭಾಷಣೆ ಈ ಚಿತ್ರಕ್ಕೆ ಇರಲಿದೆ. ಹರ್ಷ ಕುಮಾರ್ ಗೌಡ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಬಿ.ಎಸ್. ಕೆಂಪರಾಜ್ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ: ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ..

ನಿರ್ಮಾಪಕ ಡಾ. ನಿರಂತರ ಗಣೇಶ್ ಅವರು ‘ಐರಾವನ್’ ಬಳಿಕ ನಿರ್ಮಾಣ ಮಾಡುತ್ತಿರುವ 2ನೇ ಸಿನಿಮಾ ಇದು. ಇಂದಿನ ಪ್ರೇಕ್ಷಕರಿಗೆ ಇಷ್ಟವಾಗುವಂತೆ ಸಿನಿಮಾ ಮೂಡಿಬರುತ್ತಿದೆ ಎಂದು ಅವರು ಹೇಳಿದರು. ‘ನೋಡುಗರಿಗೆ ಈ ಸಿನಿಮಾ ಖಂಡಿತವಾಗಿಯೂ ಹೊಸಥರದ ಅನುಭವ ನೀಡಲಿದೆ’ ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮನೆಯಲ್ಲಿ ಹಲ್ಲಿಗಳಿದ್ದರೆ ತುಂಬಾ ಒಳ್ಳೆಯದಂತೆ; ಯಾಕೆ ಗೊತ್ತಾ ? – Kannada News | Do you know what are the benefits of having lizards at home?

ಹಲ್ಲಿಗಳ (lizards) ಕಾಟ ಇಲ್ಲದಿರುವ ಮನೆಯೇ ಇಲ್ಲ. ಮನೆಯ ಗೋಡೆಗಳ ಮೇಲೆ ಇವುಗಳ ಓಡಾಟ ಇದ್ದೇ ಇರುತ್ತದೆ. ಅನೇಕರು ಈ ಪುಟ್ಟ ಜೀವಿಯನ್ನು ಕಂಡು ಸಿಕ್ಕಾಪಟ್ಟೆ ಭಯಪಡುತ್ತಾರೆ. ಅದಕ್ಕಾಗಿಯೇ ಈ ಹಲ್ಲಿಗಳನ್ನು ಓಡಿಸಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ.  ಆದ್ರೆ ಈ ರೀತಿ ಹಲ್ಲಿಗಳಲ್ಲಿಗೆ ಭಯ ಪಡುವ ಅಥವಾ ಅವುಗಳನ್ನು ಓಡಿಸುವ ಅವಶ್ಯಕತೆಯೇ ಇಲ್ಲ. ಅವುಗಳು ಮನೆಯಲ್ಲಿ ಇದ್ದರೆ ತುಂಬಾ ಒಳ್ಳೆಯಂದೆ. ಹೌದು ಅವು ನಿಮ್ಮ ಮನೆಯನ್ನು ಸ್ವಚ್ಛವಾಗಿ ಮತ್ತು ಸುರಕ್ಷಿತವಾಗಿಡಲು ಸಹಾಯ ಮಾಡುತ್ತವೆ. ಹಲ್ಲಿ ಮನೆಯಲ್ಲಿದ್ದರೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಕಂಡುಕೊಳ್ಳೋಣ ಬನ್ನಿ.

ಹಲ್ಲಿಗಳು ಮನೆಯಲ್ಲಿದ್ದರೆ ಆಗುವ ಪ್ರಯೋಜನಗಳೇನು?

ಜನರು ಸಾಮಾನ್ಯವಾಗಿ ಹಲ್ಲಿಗಳು ಅಪಾಯಕಾರಿ, ಅವುಗಳಿಂದ ಆರೋಗ್ಯಕ್ಕೆ ತೊಂದರೆಗಳಾಗಬಹುದು ಎಂಬ ಭಯದಿಂದ ಅವುಗಳನ್ನು ಓಡಿಸಲು ಪ್ರಯತ್ನಿಸುತ್ತಾರೆ. ಆದರೆ ವಾಸ್ತವದಲ್ಲಿ, ಅವುಗಳಿಂದ ಮನೆಗೆ ತುಂಬಾನೇ ಪ್ರಯೋಜನಗಳಿವೆಯಂತೆ.

ಕೀಟ ನಿಯಂತ್ರಣ: ಹಲ್ಲಿಗಳು ಕೀಟಗಳನ್ನು ತಿನ್ನುವ ಮೂಲಕ ನೈಸರ್ಗಿಕವಾಗಿ  ಅವುಗಳನ್ನು ನಿಯಂತ್ರಿಸುತ್ತವೆ. ನೊಣಗಳು, ಜಿರಳೆಗಳು ಮತ್ತು ಜೇಡಗಳು ಹಲ್ಲಿಗಳ ಪ್ರಾಥಮಿಕ ಆಹಾರವಾಗಿದ್ದು, ಮನೆಯಲ್ಲಿ ಓಡಾಡುವ ಈ ಜಿರಳೆ, ಕೀಟಗಳನ್ನು ತಿನ್ನುವ ಮೂಲಕ ಮನೆಯಲ್ಲಿ ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ. ಜೊತೆಗೆ ಹಲ್ಲಿಗಳಿದ್ದರೆ ಕೀಟಗಳನ್ನು ಓಡಿಸಲು ಕೀಟ ನಾಶಕ ಸ್ಪ್ರೇಗಳನ್ನು ಬಳಸುವ ಅವಶ್ಯಕತೆಯೇ ಇರುವುದಿಲ್ಲ. ಕೀಟನಾಶಕ ಸಿಂಪಡಿಸುವಿಕೆಯು ಗಾಳಿಯನ್ನು ಕಲುಷಿತಗೊಳಿಸುವುದಲ್ಲದೆ, ಸಸ್ಯಗಳು ಮತ್ತು ಜೇನುನೊಣಗಳಂತಹ ಪ್ರಯೋಜನಕಾರಿ ಕೀಟಗಳಿಗೂ ಹಾನಿಕಾರಕವಾಗಬಹುದು. ಹಲ್ಲಿಗಳು ಇದನ್ನು ಹಾನಿಯಾಗದಂತೆ ತಡೆಯುತ್ತವೆ.

ಮನೆಯ ವಾತಾವರಣ ಆರೋಗ್ಯಕರವಾಗಿ ಎಂದರ್ಥ: ಮನೆಯಲ್ಲಿ ಹಲ್ಲಿಗಳಿದ್ದರೆ ನಿಮ್ಮ ಮನೆಯ ಪರಿಸರವು ಸಮತೋಲಿತ ಮತ್ತು ಆರೋಗ್ಯಕರವಾಗಿದೆ ಎಂಬುದ ಸಂಕೇತವಾಗಿದೆ. ಇವು ಮನೆಯ ನೈಸರ್ಗಿಕ ಕೀಟ ವ್ಯವಸ್ಥೆಯಾಗಿದ್ದು, ಮನೆಯೊಳಗೆ ಬರುವ ಕೀಟಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಮತ್ತು ಅನಗತ್ಯ ಕೀಟಗಳಿಂದ ನಿಮ್ಮನ್ನು ರಕ್ಷಿಸುತ್ತವೆ. ಆದಾಗ್ಯೂ, ಅವು ನಿಮ್ಮ ಆಹಾರ ಅಥವಾ ಇತರ ವಸ್ತುಗಳ ಹತ್ತಿರ ಬರದಂತೆ ಎಚ್ಚರವಹಿಸಿ.

ಇದನ್ನೂ ಓದಿ: ಅಡುಗೆಗೆ ಮಾತ್ರವಲ್ಲ, ಗೃಹಪಯೋಗಿ ವಸ್ತುಗಳ ಸ್ವಚ್ಛತೆಗೂ ಬಳಸಬಹುದು ಉಪ್ಪು

ಸೊಳ್ಳೆಗಳ ಕಾಟದಿಂದ ಮುಕ್ತಿ ಒದಗಿಸುತ್ತವೆ: ಹಲ್ಲಿಗಳು ಸೊಳ್ಳೆಗಳನ್ನು ಬೇಟೆಯಾಡುವ ಅತ್ಯುತ್ತಮ ಜೀವಿಗಳಾಗಿವೆ. ಅವು ರೋಗಗಳನ್ನು ಹರಡುವ ಸೊಳ್ಳೆಗಳನ್ನು ತಿನ್ನುವ ಮೂಲಕ ನಿಮ್ಮ ಮನೆಯ ಆರೋಗ್ಯವನ್ನು ರಕ್ಷಿಸುತ್ತವೆ.

ಹೀಗೆ ಹಲ್ಲಿಗಳು ಕೀಟ, ನೋಣ, ಸೊಳ್ಳೆಗಳನ್ನು ನಿಮ್ಮ ಮನೆಯಿಂದ ದೂರವಿಡುವುದಲ್ಲದೆ, ಮನೆಯ ವಾತಾವರಣವನ್ನು ಸುರಕ್ಷಿತವಾಗಿ, ಸ್ವಚ್ಛವಾಗಿ ಮತ್ತು ಆರಾಮದಾಯಕವಾಗಿಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:54 pm, Wed, 14 January 26

Source link

ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ? – Kannada News | Bigg Boss Kannada season 12: Mid week eviction video

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ನಡೆಯುತ್ತಿದೆ. ಫಿನಾಲೆ ವಾರದಲ್ಲಿ ಮಜಾ, ಮೋಜು ಮಸ್ತಿಗಳ ಜೊತೆಗೆ ಮಿಡ್ ವೀಕ್ ಎಲಿಮಿನೇಷನ್ ಇದ್ದೇ ಇರುತ್ತದೆ. ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​​ಗೆ ಬಿಗ್​​ಬಾಸ್ ಚಾನಲೆ ನೀಡಿದ್ದಾರೆ. ಮನೆಯ ಎಲ್ಲ ಸದಸ್ಯರು ಆಕ್ಟಿವಿಟಿ ರೂಂನಲ್ಲಿ ಒಟ್ಟಿಗೆ ಸೇರಿದ್ದು, ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ಹೊರಗೆ ಕಳಿಸಲಾಗಿದೆ. ಈ ಹೊರಗೆ ಕಳಿಸಿದವರಲ್ಲಿ ಯಾರು ಮತ್ತೆ ಮನೆಯ ಒಳಗೆ ಬರುತ್ತಾರೊ ಅವರು ಉಳಿದುಕೊಳ್ಳುತ್ತಾರೆ. ಯಾರು ಬರುವುದಿಲ್ಲವೊ ಅವರು ಮನೆಯಿಂದ ಎಲಿಮಿನೇಟ್ ಆಗುತ್ತಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ರಸ್ತೆ ಮಧ್ಯೆಯೇ ಕೆಟ್ಟು ನಿಲ್ತಿವೆ ಕೋಟಿ ಕೋಟಿ ಕೊಟ್ಟು ತಂದ ಬಸ್​​ಗಳು: ಚಿಗರಿ ನಿರ್ವಹಣೆಯೇ ಈಗ ಸವಾಲು! – Kannada News | Hubballi Dharwad BRTS Chigari Buses Face Maintenance Crisis, NWKRTC Struggles

ಹುಬ್ಬಳ್ಳಿ, ಜನವರಿ 14: ಹುಬ್ಬಳ್ಳಿ-ಧಾರವಾಡದ ನಡುವೆ ತ್ವರಿತ ಸಂಪರ್ಕ ಒದಗಿಸಯವ ಉದ್ದೇಶದಿಂದ ಆರಂಭವಾಗಿರುವ ಐಷಾರಾಮಿ ಚಿಗರಿ ಬಸ್​​ಗಳ ನಿರ್ವಹಣೆಯೇ ಈಗ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಮಾರ್ಗ ಮಧ್ಯೆಯೇ ಬಸ್​​ಗಳು ಕೆಟ್ಟು ನಿಲ್ಲುತ್ತಿರೋದು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವ ಜೊತೆಗೆ ಇದರ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೂ ತಲೆನೋವು ತಂದಿಡುತ್ತಿದೆ. ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದ್ದ ಐಷಾರಾಮಿ ಬಸ್​​ಗಳು ಡಕೋಟಾ ಬಸ್​ಗಳಾಗಿ ಮಾರ್ಪಡುತ್ತಿದ್ದು, ಈ ಬಗ್ಗೆ ಅನೇಕ ಬಾರಿ ಸರ್ಕಾರಕ್ಕೆ ಮತ್ತು BRTS ಸಂಸ್ಥೆಗೆ NWKRTC ಪತ್ರ ಬರೆದಿದೆ ಎನ್ನಲಾಗಿದೆ.

ಪ್ರಯಾಣಿಕರ ಸಮಸ್ಯೆ ಮನಗಂಡ ಸರ್ಕಾರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಧಾರವಾಡ ಹೊಸ ಬಸ್ ನಿಲ್ದಾಣದವರಗೆ ಬರೋಬ್ಬರಿ 22.5 ಕಿಲೋ ಮೀಟರ ಪ್ರತ್ಯೇಕ ರಸ್ತೆ ನಿರ್ಮಾಣ ಮಾಡಿ, ಚಿಗರಿ ಹೆಸರಿನಲ್ಲಿ ಎಸಿ ಬಸ್​​ ಸೇವೆಯನ್ನು ಆರಂಭಿಸಿತ್ತು. 2018ರಲ್ಲಿ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆ ಜಾರಿಯಾಗಿದ್ದು, ಪ್ರತಿನಿತ್ಯ ಹುಬ್ಬಳ್ಳಿ-ಧಾರವಾಡ ನಡುವೆ ನೂರು ಚಿಗರಿ ಬಸ್​​ಗಳು ಸಂಚಾರ ಶುರುವಾಗಿತ್ತು. ದಕ್ಷಿಣ ಭಾರತದಲ್ಲಿಯೇ ಮೊದಲ ಯೋಜನೆ ಎನ್ನುವ ಖ್ಯಾತಿಯನ್ನು BRTS ಪಡೆದುಕೊಂಡಿತ್ತು. ಆದ್ರೆ ಈಗ ನಿರ್ವಹಣೆಯ ಸಮಸ್ಯೆಯಿಂದ ಎಲ್ಲೆಂದರಲ್ಲಿ ಬಸ್​​ಗಳು ಕೆಟ್ಟು ನಿಲ್ಲುತ್ತಿವೆ. ಕ್ಲಚ್ ಪ್ಲೇಟ್, ಗೇರ್ ಬಾಕ್ಸ್ ಸಮಸ್ಯೆ, ಇಂಜಿನ್ ಹೀಟ್ ಮತ್ತು ಸೆನ್ಸಾರ್ ಸಮಸ್ಯೆಗಳು ಮಾಮೂಲು ಎಂಬಂತಾಗಿವೆ. ಬಸ್ ರಿಪೇರಿಗೆ ಬಿಡಿಭಾಗಗಳು ಕೂಡ ಸರಿಯಾಗಿ ಲಭ್ಯವಿಲ್ಲದ ಹಿನ್ನೆಲೆ, ಈಗ ಪ್ರತಿನಿತ್ಯ 60ರಿಂದ 70 ಬಸ್ ಗಳು ಮಾತ್ರ ಓಡಾಟ ನಡೆಸುತ್ತಿವೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ಹೊಸ ಯೋಜನೆ; ಬಂದ್​ ಆಗುತ್ತಾ ಚಿಗರಿ ಬಸ್​ ಓಡಾಟ?

ಇನ್ನು ಈ ಬಸ್​​ಗಳನ್ನು ಪೂರೈಕೆ ಮಅಡಿರುವ ವೋಲ್ವೋ ಸಂಸ್ಥೆಗೆ ಮನವಿ ಮಾಡಿ, ಅಗತ್ಯ ಬಿಡಿ ಭಾಗಗಳನ್ನು ಕಳಿಸಿಕೊಡುವಂತೆ ಮನವಿ ಮಾಡಲಾಗಿದ್ದರೂ ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಬಸ್​​ಗಳ ದುರಸ್ತಿಯೇ ಸವಾಲಾಗಿದೆ ಅಂತಿದ್ದಾರೆ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು. ಒಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕೆ ಆರಂಭಿಸಿದ್ದ ಈ ಬಸ್​​ಗಳಿಗೆ ಜನರೇ ಹಿಡಿ ಶಾಪ ಹಾಕುವ ಸ್ಥಿತಿ ಉದ್ಭವಿಸಿದೆ. ಕೋಟಿ ಕೋಟಿ ಹಣ ನೀಡಿ ಖರೀದಿಸಿದ ಬಸ್​​ಗಳ ದುರಸ್ತಿಗೆ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ – Kannada News | PM Modi writes letter to the people of Karnataka in Kannada extending Makara Sankranti wishes

ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಕರ್ನಾಟಕದ ಸಮಸ್ತ ಜನರಿಗೆ ಮಕರ ಸಂಕ್ರಾಂತಿಯ (Makar Sankranti) ಶುಭ ಹಾರೈಸಿದ್ದಾರೆ. ಕನ್ನಡದಲ್ಲೇ ಪತ್ರ ಬರೆದು ಅವರು ಶುಭಾಶಯ ಕೋರಿರುವುದು ವಿಶೇಷ. ಈ ಪತ್ರವನ್ನು ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮಿಳು, ತೆಲುಗು, ಹಿಂದಿ, ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ಪತ್ರ ಬರೆದು ಆಯಾ ರಾಜ್ಯದ ಜನರಿಗೆ ಸಂಕ್ರಾಂತಿ/ ಪೊಂಗಲ್ ಶುಭಾಶಯ ಕೋರಿದ್ದಾರೆ.

ಪತ್ರದ ಮೂಲಕ ಪ್ರಧಾನಿ ಮೋದಿ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ. ಆತ್ಮೀಯ ಸಹ ನಾಗರಿಕರೇ, ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯು ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ದೇಶಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬ ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ ಎಂದು ಪ್ರಧಾನಿ ಮೋದಿ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Makar Sankranti 2026: ಸಂಕ್ರಾಂತಿಯಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ; ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಸಂಕ್ರಾಂತಿ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೇಷ ಸ್ಥಾನಮಾನ ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ. ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ. ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ. ನಿಮ್ಮ ಮನೆಯಲ್ಲಿ ಸಂತೋಷ ನೆಲೆಸಲಿ, ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

ಮಕರ ಸಂಕ್ರಾಂತಿ ಭಾರತೀಯ ಪರಂಪರೆಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಸಂತೋಷ, ಏಕತೆ ಮತ್ತು ಕೃತಜ್ಞತೆಯೊಂದಿಗೆ ನಿಕಟ ಸಂಬಂಧ ಹೊಂದಿದೆ. ಎಳ್ಳು ಮತ್ತು ಬೆಲ್ಲದ ಮಾಧುರ್ಯದಿಂದ ತುಂಬಿರುವ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನಕ್ಕೂ ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ. ಸೂರ್ಯ ದೇವರು ಎಲ್ಲರನ್ನೂ ಆಶೀರ್ವದಿಸಲಿ’ ಎಂದು ಪ್ರಧಾನಿ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 3:40 pm, Wed, 14 January 26

Source link

ರಫ್ತು ಸಜ್ಜಿತ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ನಂ. 1; ಕರ್ನಾಟಕದ ಸ್ಥಾನವೆಷ್ಟು? – Kannada News | NITI Aayog’s Export Preparedness Index released, Maharashtra overtakes Tamil Nadu to top the list

ನವದೆಹಲಿ, ಜನವರಿ 14: ರಫ್ತು ಸಜ್ಜಿತವಾಗಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ನಂಬರ್ ಒನ್ ಸ್ಥಾನಕ್ಕೆ ಏರಿದೆ. ರಫ್ತು ಪೂರಕ ನೀತಿ ಇತ್ಯಾದಿ ವಾತಾವರಣ ಇರುವ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು ನಂಬರ್ ಒನ್ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಇಳಿದಿದೆ. ಇದು 2024ರ ನೀತಿ ಆಯೋಗ್​ನ ಎಕ್ಸ್​ಪೋರ್ಟ್ ಪ್ರಿಪೇರ್ಡ್​ನೆಸ್ ಇಂಡೆಕ್ಸ್​ನ (2024) ಪಟ್ಟಿಯಲ್ಲಿ (EPI- Export Preparedness Index) ಕಂಡಂತಹ ಬದಲಾವಣೆ. ಕರ್ನಾಟಕ ಈ ಇಂಡೆಕ್ಸ್​ನಲ್ಲಿ ಟಾಪ್-5ನಿಂದ ಹೊರಗಿದೆ.

ಅತಿಹೆಚ್ಚು ರಫ್ತು ಮಾಡಬಲ್ಲ ಶಕ್ತಿ ಹಾಗೂ ಸಾಧನೆಯ ಆಧಾರದ ಮೇಲೆ ನೀತಿ ಆಯೋಗ್ ಕೆಲ ವರ್ಷಗಳಿಂದ ಇಪಿಐ ಇಂಡೆಕ್ಸ್ ತಯಾರಿಸುತ್ತಿದೆ. ಆರ್ಥಿಕ ಪ್ರಗತಿಯಲ್ಲಿ ರಫ್ತು ಬಹಳ ಮುಖ್ಯ ಪಾತ್ರ ಹೊಂದಿರುತ್ತದೆ.

ಜಾಗತಿಕ ಮೌಲ್ಯ ಸರಪಳಿಯಲ್ಲಿ ದೇಶಕ್ಕೆ ಆದ್ಯತೆಯ ಸ್ಥಾನ ನೀಡಲು, ವಿದೇಶೀ ವಿನಿಮಯ ಗಳಿಸಲು ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ರಫ್ತು ಬಹಳ ದೊಡ್ಡ ರೀತಿಯಲ್ಲಿ ನೆರವಾಗಬಲ್ಲುದು. ಈ ಕಾರಣಕ್ಕೆ ಸರ್ಕಾರವು ಎಲ್ಲಾ ರಾಜ್ಯಗಳನ್ನು ರಫ್ತು ಸಜ್ಜಿತಗೊಳಿಸಲು ಪ್ರಯತ್ನಗಳನ್ನು ಹಾಕುತ್ತಿದೆ. ಅದರ ಭಾಗವಾಗಿ ಎಕ್ಸ್​ಪೋರ್ಟ್ ಪ್ರಿಪೇರ್ಡ್ನೆಸ್ ಇಂಡೆಕ್ಸ್ ಕೂಡ ಇದೆ.

ಇದನ್ನೂ ಓದಿ: ಇನ್ನು 10-20 ವರ್ಷ ಮಾತ್ರ ಮನುಷ್ಯರು ಕೆಲಸ ಮಾಡಬೇಕಾಗಬಹುದು: ಇಲಾನ್ ಮಸ್ಕ್ ಹೀಗ್ಯಾಕಂದ್ರು ಗೊತ್ತಾ?

ನೀತಿ ಆಯೋಗ್​ನ ರಫ್ತು ಸಜ್ಜಿತ ರಾಜ್ಯಗಳ ಪಟ್ಟಿ 2024

  1. ಮಹಾರಾಷ್ಟ್ರ
  2. ತಮಿಳುನಾಡು
  3. ಗುಜರಾತ್
  4. ಉತ್ತರಪ್ರದೇಶ
  5. ಆಂಧ್ರಪ್ರದೇಶ
  6. ಕರ್ನಾಟಕ
  7. ಪಂಜಾಬ್

ಈ ಮೇಲಿನ ಪಟ್ಟಿಯು ದೊಡ್ಡ ರಾಜ್ಯಗಳದ್ದು. ಸಣ್ಣ ರಾಜ್ಯಗಳದ್ದೇ ಪ್ರತ್ಯೇಕ ಪಟ್ಟಿ ಮಾಡಿದಾಗ ಉತ್ತರಾಖಂಡ್ ನಂಬರ್ ಒನ್ ರಫ್ತು ಸಜ್ಜಿತ ರಾಜ್ಯವೆನಿಸುತ್ತದೆ. ಜಮ್ಮು ಕಾಶ್ಮೀರ, ನಾಗಾಲ್ಯಾಂಡ್, ದಾದ್ರಾ ನಾಗರ್ ಹವೇಲಿ, ದಾಮನ್ ಡಿಯು, ಗೋವಾ ಮತ್ತು ತ್ರಿಪುರಾ ರಾಜ್ಯಗಳು ನಂತರದ ಸ್ಥಾನ ಪಡೆಯುತ್ತವೆ.

ಇದನ್ನೂ ಓದಿ: ಭಾರತ ಸೇವಕ ಅಲ್ಲ ಉತ್ಪಾದಕ ಆಗಬೇಕು: ಉದ್ಯಮಿ ಬಾಬಾ ಕಲ್ಯಾಣಿ ಸಲಹೆ

ಇಪಿಐ ಇಂಡೆಕ್ಸ್ ರೂಪಿಸಲು ಏನು ಮಾನದಂಡ?

ರಾಜ್ಯಗಳ ರಫ್ತು ನೀತಿ, ಬ್ಯುಸಿನೆಸ್ ವಾತಾವರಣ, ಇನ್​ಫ್ರಾಸ್ಟ್ರಕ್ಚರ್ ಗುಣಮಟ್ಟ, ರಫ್ತು ಮೊತ್ತ ಇತ್ಯಾದಿ ಹಲವು ಅಂಶಗಳನ್ನು ಕೂಲಂಕಷವಾಗಿ ಪರಿಶೋಲಿಸಿ ಎಕ್ಸ್ಪೋರ್ಟ್ ಪ್ರಿಪೇರ್ಡ್ನೆಸ್ ಇಂಡೆಕ್ಸ್ ಅನ್ನು ರೂಪಿಸಲಾಗಿದೆ. ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರ ಮೂಲಗಳಿಂದ ದತ್ತಾಂಶವನ್ನು ಕಲೆ ಹಾಕಲಾಗಿದೆ. ವಿವಿಧ ಸೂಚ್ಯಂಕಗಳಿಗೆ ವಿವಿಧ ವೈಟೇಜ್ ಕೊಟ್ಟು ಅಂತಿಮವಾಗಿ ಇಪಿಐ ಅನ್ನು ರಚಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

UCO Bank Recruitment 2026: ಯುಕೋ ಬ್ಯಾಂಕ್​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | UCO Bank Recruitment 2026: Apply for CA and Officer Posts Online Now!

ಯುಕೋ ಬ್ಯಾಂಕ್ ಇತ್ತೀಚೆಗೆ ಸಿಎ ಹುದ್ದೆಗಳು ಸೇರಿದಂತೆ ಸಾಮಾನ್ಯ ಮತ್ತು ತಜ್ಞ ಅಧಿಕಾರಿಗಳಿಗೆ ನೇಮಕಾತಿಯನ್ನು ಘೋಷಿಸಿದೆ. ಬ್ಯಾಂಕ್ ತನ್ನ ಅಧಿಕೃತ ವೆಬ್‌ಸೈಟ್ www.uco.bank.in ನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಜಾಹೀರಾತನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಹೊಸ ನೇಮಕಾತಿ ಡ್ರೈವ್ ಮೂಲಕ, ಯುಕೋ ಬ್ಯಾಂಕ್ ಟ್ರೇಡ್ ಫೈನಾನ್ಸ್ ಆಫೀಸರ್, ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಸಿಸ್ಟಮ್ ಅಡ್ಮಿನಿಸ್ಟ್ರೇಟರ್, ಕ್ಲೌಡ್ ಎಂಜಿನಿಯರ್, ಸೈಬರ್ ಸೆಕ್ಯುರಿಟಿ ಆಫೀಸರ್, ಡೇಟಾ ಗೌಪ್ಯತೆ ಮತ್ತು ಡೇಟಾ ವಿಶ್ಲೇಷಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಇದರಲ್ಲಿ 75 ಸಿಎ ಹುದ್ದೆಗಳು ಸೇರಿವೆ. ಆನ್‌ಲೈನ್ ಅರ್ಜಿ ವಿಂಡೋ ಫೆಬ್ರವರಿ 2 ರವರೆಗೆ ತೆರೆದಿರುತ್ತದೆ.

ಅರ್ಹತೆಗಳ ವಿವರ ಇಲ್ಲಿದೆ:

ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರಾಗಿರಬೇಕು. ಎಂಬಿಎ ಪದವೀಧರರೂ ಅರ್ಹರು. ಪದವಿ ಮತ್ತು 1 ವರ್ಷದ ಅನುಭವ ಹೊಂದಿರಬೇಕು. ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ, ಅವರು ಐಸಿಎಐನಿಂದ ಸಿಎ ಪದವಿ ಹೊಂದಿರಬೇಕು . ಜೆಎಂಜಿಎಸ್-ಐ ಸ್ಕೇಲ್‌ಗೆ 1 ವರ್ಷ ಮತ್ತು ಎಂಎಂಜಿಎಸ್-ಐಐ ಸ್ಕೇಲ್‌ಗೆ 3 ವರ್ಷಗಳ ಅನುಭವ ಹೊಂದಿರಬೇಕು. ಅದೇ ರೀತಿ, ಇತರ ಹುದ್ದೆಗಳಿಗೆ, ಬಿಇ/ಬಿಟೆಕ್/ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್/ಎಂಸಿಎ/ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಮತ್ತು 1-3 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಯಸ್ಸಿನ ಮಿತಿ:

ಅರ್ಜಿದಾರರು ಜನವರಿ 1, 2026 ರಂತೆ ಕನಿಷ್ಠ 20 ವರ್ಷ ವಯಸ್ಸಿನವರಾಗಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಸಂಬಳದ ವಿವರ:

JMGS-I ಹುದ್ದೆಗೆ ಮೂಲ ವೇತನ ಶ್ರೇಣಿ 48480 ರಿಂದ 85920 ರೂ. ಮತ್ತು MMGS-II ಹುದ್ದೆಗೆ 64820-93960 ರೂ. ಇದರ ಜೊತೆಗೆ, DA, HRA/ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ಭತ್ಯೆಗಳು ಸಹ ಲಭ್ಯವಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಫಾರ್ಮ್ ಭರ್ತಿ ಮಾಡುವುದು ಹೇಗೆ ?

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮೊದಲು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ www.uco.bank.in ಗೆ ಭೇಟಿ ನೀಡಬೇಕು.
  • ನಂತರ, ವೃತ್ತಿಜೀವನ ಟ್ಯಾಬ್‌ಗೆ ಹೋಗಿ. ಇಲ್ಲಿ, ನೀವು ನೇಮಕಾತಿ ಅವಕಾಶಗಳ ಅಡಿಯಲ್ಲಿ, ಸಂಬಂಧಿತ ನೇಮಕಾತಿ ಜಾಹೀರಾತನ್ನು, HO/HRM/RECR/2025-26/COM-04  ನೋಡುತ್ತೀರಿ.
  • ಇದರ ಮುಂದೆ, “Apply online” ಟ್ಯಾಬ್‌ಗೆ ಹೋಗಿ.
  • ಮೊದಲು, ನಿಮ್ಮ ಮೂಲ ವಿವರಗಳನ್ನು ನಮೂದಿಸುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ನಂತರ, ಲಾಗಿನ್ ಮಾಡಿ.
  • ಹುದ್ದೆಯನ್ನು ಆಯ್ಕೆಮಾಡಿ ಮತ್ತು ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  • ಇದಾದ ನಂತರ, ಸಹಿ ಮತ್ತು ಫೋಟೋವನ್ನು ಸ್ಕ್ಯಾನ್ ಮಾಡಿ ಮತ್ತು ಡಾಕ್ಯುಮೆಂಟ್ ಅಪ್‌ಲೋಡ್ ಕಾಲಂನಲ್ಲಿ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅಂತಿಮವಾಗಿ ಫಾರ್ಮ್ ಅನ್ನು ಸಲ್ಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊಮ್ಮಗನ ಎದುರೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದಿದ್ದ ಆರೋಪಿ ನೇಣಿಗೆ ಶರಣು – Kannada News | Bengaluru: Elderly Woman Axe Murder; Accused Commits Suicide

ನೆಲಮಂಗಲ, ಜನವರಿ 14: ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯನ್ನು ಕೊಂದಿದ್ದ (Murder) ಆರೋಪಿ ನೇಣಿಗೆ ಶರಣಾಗಿರುವಂತಹ (Suicide) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ದಾಕ್ಷಾಯಿಣಮ್ಮ(55) ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಸದ್ಯ ಸ್ಥಳಕ್ಕೆ‌ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಳೆದ ಶನಿವಾರದಂದು ಮಟಮಟ ಮಧ್ಯಾಹ್ನ ದಾಕ್ಷಾಯಿಣಮ್ಮನನ್ನು ಆರೋಪಿ ವೀರಭದ್ರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿತ್ತು.

ಇದನ್ನೂ ಓದಿ: ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ?

ನಿನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದ ಅಕ್ಕನ ಮನೆಗೆ ತಡರಾತ್ರಿ ಬಂದಿದ್ದ. ಅಕ್ಕನನ್ನ ಮಾತನಾಡಿಸಿಕೊಂಡು ತೋಟಕ್ಕೆ ಹೋದವನು ಮರಕ್ಕೆ‌ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಹೊರಗಡೆ ಹೋದವನು ವಾಪಸ್ ಮನೆಗೆ ಬಾರದ ಕಾರಣ ಎಲ್ಲೆಡೆ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ನಡೆದದ್ದೇನು?

ಬೆಂಗಳೂರು ವಾಯುವ್ಯ ವಿಭಾಗ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯಲ್ಲಿ ನಿವಾಸಿ ದಾಕ್ಷಾಯಿಣಮ್ಮ 8 ವರ್ಷದ ಹಿಂದೆ ಪತಿ ನಾಗರಾಜ್​​​ರನ್ನು ಕಳೆದುಕೊಂಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನ ಮದುವೆ ಕೂಡ ಮಾಡಿದ್ದಾರೆ. ಹಣಕಾಸಿನ ವ್ಯವಹಾರ ಹಾಗೂ ಮನೆ ಬಾಡಿಗೆ ಹಣದಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ದಾಕ್ಷಾಯಿಣಮ್ಮ ಮಾವ ವೀರಭದ್ರನ ಜೊತೆ ಹಣಕಾಸಿನ ವ್ಯವಹಾರ ಹಾಗೂ ಭೂ ವ್ಯಾಜ್ಯ ಸಂಬಂಧ ಇಬ್ಬರ ಮಧ್ಯೆ ಜಗಳವಾಗಿತ್ತು.

ಇದನ್ನೂ ಓದಿ: ತಾಯಿಗೆ ಹೊಡೆದ ಎಂದು ಮಲತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಮಗ

ಅದೊಂದು ದಿನ ತಮ್ಮ ಮೊಮ್ಮಗನನ್ನು ಶಾಲೆಯಿಂದ ಕರೆತರಲು ಹೊರಟಿದ್ದಾರೆ. ಈ ವೇಳೆ ಬೈಕ್​ನಲ್ಲಿ ಬಂದ ವ್ಯಕ್ತಿಯೋರ್ವ ನಡು ರಸ್ತೆಯಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಅಷ್ಟೇ ಅಲ್ಲದರೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಆದರೆ ಅಷ್ಟರಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:14 pm, Wed, 14 January 26

Source link