ಪಶ್ಚಿಮ ಬಂಗಾಳದಲ್ಲೊಬ್ಬ ನರಭಕ್ಷಕ, ಜನರ ಕೊಂದು ಮೃತದೇಹ ತಿನ್ನುತ್ತಿದ್ದ ವ್ಯಕ್ತಿಯ ಸೆರೆ – Kannada News | Gruesome Incident in Cooch Behar: Man Found Dragging Body and Consuming Flesh
ಕೂಚ್ಬೆಹಾರ್, ಜನವರಿ 14: ಪಶ್ಚಿಮ ಬಂಗಾಳ(West Bengal)ದಲ್ಲಿ ನರಭಕ್ಷಕನೊಬ್ಬ ಪತ್ತೆಯಾಗಿದ್ದಾನೆ. ಈತ ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂಡು ಹೋಗಿ ತಿನ್ನುತ್ತಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದು ಇಡೀ ಬಂಗಾಳದ ಜನತೆಯೇ ಬೆಚ್ಚಿಬಿದ್ದಿದ್ದಾರೆ. ಆರೋಪಿ ಅಪರಿಚಿತ ವ್ಯಕ್ತಿಯನ್ನು ಕೊಲೆ(Murder) ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ, ದಿನ್ಹಾಟಾ ಉಪಜಿಲ್ಲಾ ಪೊಲೀಸ್ ಅಧಿಕಾರಿ ಧಿಮಾನ್ ಮಿತ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜನವರಿ 10 ರಂದು, ದಿನ್ಹಾಟಾ ಗಡಿಗೆ ಹೊಂದಿಕೊಂಡಿರುವ ಕುರ್ಷಾ ಹ್ಯಾಟ್ನಲ್ಲಿರುವ ದೂರದ…