Category Archives: Blog

Your blog category

‘ಟಾಕ್ಸಿಕ್’ ಸಿನಿಮಾ ಪದೇ ಪದೇ ಪೋಸ್ಟ್‌ಪೋನ್; ಅಭಿಮಾನಿಗಳ ಬೇಸರದ ಬಗ್ಗೆ ಯಶ್ ಮಾತು – Kannada News | Yash Explains ‘Toxic’ Movie Delay: Global Strategy and Fan Disappointment

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಪದೇ ಪದೇ ಮುಂದೂಡಲ್ಪಡುತ್ತಿದೆ. ಇದು ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಜೂನ್ 4ಕ್ಕೆ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ, ಜಾಗತಿಕ ಮಾರುಕಟ್ಟೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತೊಮ್ಮೆ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ. ಈ ವಿಳಂಬದ ಬಗ್ಗೆ ನಟ ಹಾಗೂ ನಿರ್ಮಾಪಕ ಯಶ್ ಅವರು ಅಂತರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದು, ಭಾರತೀಯ ಪ್ರೇಕ್ಷಕರು ಮತ್ತು ಅಭಿಮಾನಿಗಳ ಬೇಸರವನ್ನು ಒಪ್ಪಿಕೊಂಡಿದ್ದಾರೆ.

‘ಸಿನಿಮಾ ಪದೇ ಪದೇ ಮುಂದಕ್ಕೆ ಹೋಗುತ್ತಿರುವುದು ಖಂಡಿತವಾಗಿಯೂ ನನ್ನ ಅಭಿಮಾನಿಗಳಿಗೆ ಅಥವಾ ಭಾರತದ ಸಿನಿ ಪ್ರೇಮಿಗಳಿಗೆ ಇಷ್ಟ ಆಗೋದಿಲ್ಲ. ಅವರು ಬೇಸರ ಮಾಡಿಕೊಳ್ಳುತ್ತಾ ಇದ್ದಾರೆ. ನಮ್ಮಲ್ಲಿ ಒಮ್ಮೆ ಶೂಟಿಂಗ್ ಆರಂಭವಾದರೆ, ಸಿನಿಮಾ ಇದೇ ಸಮಯಕ್ಕೆ ಬರುತ್ತದೆ ಎಂಬ ಒಂದು ಟೈಮ್‌ಲೈನ್ ಜನರ ತಲೆಯಲ್ಲಿ ಫಿಕ್ಸ್ ಆಗಿರುತ್ತದೆ. ಹಾಗಿದ್ದರೂ, ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ತಲುಪಿಸಲು ಈ ಕಠಿಣ ನಿರ್ಧಾರ ಅನಿವಾರ್ಯವಾಗಿತ್ತು’ ಎಂದು ಯಶ್ ಸಮರ್ಥಿಸಿಕೊಂಡಿದ್ದಾರೆ.

‘ಪಾಶ್ಚಿಮಾತ್ಯ ದೇಶಗಳಲ್ಲಿ ಸಿನಿಮಾ ಸಂಪೂರ್ಣ ಮುಗಿದ ನಂತರವೇ ವಿತರಕರಿಗೆ ತೋರಿಸಿ ವ್ಯಾಪಾರ ಮಾಡಲಾಗುತ್ತದೆ. ಅಲ್ಲಿ ದೊಡ್ಡ ಮಟ್ಟದ ಹಣ ಹೂಡಿಕೆಯಾಗುವುದರಿಂದ ಪ್ರತಿಯೊಬ್ಬರೂ ಔಟ್‌ಪುಟ್ ನೋಡಲು ಬಯಸುತ್ತಾರೆ. ಆದರೆ ಭಾರತದಲ್ಲಿ ಸಿನಿಮಾ ಅನೌನ್ಸ್ ಆದ ದಿನದಿಂದಲೇ ಪ್ರಮೋಷನ್, ಮಾರ್ಕೆಟಿಂಗ್ ಶುರುವಾಗುತ್ತದೆ’ ಎಂದು ಯಶ್ ಭಾರತೀಯ ಚಿತ್ರರಂಗದ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

‘ಸಿನಿಮಾ ಮುಹೂರ್ತವಾದ ದಿನದಿಂದಲೇ ಜನರು ಅದರ ಬಗ್ಗೆ ಬರೆಯಲು ಆರಂಭಿಸುತ್ತಾರೆ, ಇದು ದೊಡ್ಡ ಸವಾಲು. ಆದರೆ ನನಗೆ ನನ್ನ ಜನರ ಮೇಲೆ ನಂಬಿಕೆಯಿದೆ. ನಾವು ಮಾಡುತ್ತಿರುವುದು ಇಡೀ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ತರುವ ಕೆಲಸ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ’ ಎಂದು ಯಶ್ ಹೇಳಿದ್ದಾರೆ.

‘ಕೆಲವು ಕಥೆಗಳು ತಾಳ್ಮೆಯನ್ನು ಬೇಡುತ್ತವೆ. ಭಾರತೀಯ ಸಿನಿಮಾ ಜಾಗತಿಕ ಮಟ್ಟಕ್ಕೆ ಹೆಜ್ಜೆ ಇಡುತ್ತಿರುವಾಗ, ಅದರ ಗುಣಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ನನ್ನ ಮೇಲಿದೆ. ಜಾಗತಿಕ ಮಾರುಕಟ್ಟೆಗೆ ಸರಿ ಹೊಂದು ಹೊಸ ದಿನಾಂಕದೊಂದಿಗೆ ಟಾಕ್ಸಿಕ್ ಶೀಘ್ರದಲ್ಲೇ ಪ್ರಪಂಚದಾದ್ಯಂತ ತೆರೆಗೆ ಬರಲಿದೆ’ ಎಂದು ಯಶ್ ವಿವರಿಸಿದರು.

ಇದನ್ನೂ ಓದಿ: ಹೇಗಿತ್ತು ‘ಟಾಕ್ಸಿಕ್’ ಸೆಟ್: ನಟಿಯ ಮಾತು ಕೇಳಿ ಯಶ್ ಬಗ್ಗೆ ಹೆಮ್ಮೆ ಆಗದೇ ಇರದು

ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಸಂಘರ್ಷದಿಂದ ಹಾಗೂ ಇತ್ತೀಚೆಗೆ ‘ಸಿನಿಮಾಕಾನ್’ನಲ್ಲಿ ಜಾಗತಿಕ ವಿತರಕರಿಂದ ಸಿಕ್ಕ ಅಭೂತಪೂರ್ವ ರೆಸ್ಪಾನ್ಸ್‌ನಿಂದಾಗಿ ‘ಟಾಕ್ಸಿಕ್’ ತನ್ನ ಬಿಡುಗಡೆಯ ದಿನಾಂಕವನ್ನು ಬದಲಿಸಿಕೊಳ್ಳುತ್ತಾ ಬಂದಿದೆ. ಆದಷ್ಟು ಬೇಗ ಜಾಗತಿಕ ಮಟ್ಟದಲ್ಲಿ ದೊಡ್ಡ ಇಂಪ್ಯಾಕ್ಟ್ ಸೃಷ್ಟಿಸಲು ಯಶ್ ತಂಡ ಸಜ್ಜಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:59 am, Mon, 18 May 26

Source link

Video: ಬಿಹಾರದಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ರೈಲು

ಪಾಟ್ನಾ, ಮೇ 18: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕಕ್ಕೆ ಸಾವಿರ ಕೋಟಿ ರೂ. ಅನುದಾನದೊಂದಿಗೆ 1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು ಮಾಡಿದ ಕೇಂದ್ರ – Kannada News | Record Milestone: Karnataka Gets 1122 Additional Medical Seats with Rs 1090 Crore Central Funding

ಬೆಂಗಳೂರು, ಮೇ 18: ಕರ್ನಾಟಕದ (Karnataka) ವೈದ್ಯಕೀಯ ಶಿಕ್ಷಣ (Medical Education) ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ ಸಿಕ್ಕಿದ್ದು, ಬರೋಬ್ಬರಿ 1,122 ಹೆಚ್ಚುವರಿ ಯುಜಿ (UG) ಮತ್ತು ಪಿಜಿ (PG) ವೈದ್ಯಕೀಯ ಸೀಟುಗಳು ಮಂಜೂರಾಗಿವೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ಮೇ 15ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇದಕ್ಕೆ ಅಂತಿಮ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ. ದೇಶದಲ್ಲೇ ಒಂದೇ ಬಾರಿಗೆ ಒಂದೇ ರಾಜ್ಯಕ್ಕೆ 1,000ಕ್ಕೂ ಹೆಚ್ಚು ಹೆಚ್ಚುವರಿ ಸೀಟುಗಳು ಹಂಚಿಕೆಯಾಗಿರುವುದು ಇದೇ ಮೊದಲು ಹಾಗೂ ಇದು ಒಂದು ಐತಿಹಾಸಿಕ ದಾಖಲೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕಕ್ಕೆ ಒಟ್ಟು 1,122 ಹೆಚ್ಚುವರಿ ಸೀಟುಗಳು ಮಂಜೂರು.
  • ಇವುಗಳಲ್ಲಿ 550 ಸೀಟುಗಳು ಪದವಿ (UG-MBBS) ಮತ್ತು 572 ಸೀಟುಗಳು ಸ್ನಾತಕೋತ್ತರ (PG) ಕೋರ್ಸ್‌ಗಳಿಗೆ ಸೇರಿವೆ.
  • ಈ ಹೆಚ್ಚುವರಿ ಸೀಟುಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 1,090 ಕೋಟಿ ಅನುದಾನ ನೀಡುತ್ತಿದೆ.

ಈ ಪ್ರಮಾಣದ ಸೀಟುಗಳ ಹೆಚ್ಚಳವು ರಾಜ್ಯದಲ್ಲಿ ಹೊಸದಾಗಿ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯುವುದಕ್ಕೆ ಸಮಾನವಾಗಿದೆ, ಆದರೆ ಇದಕ್ಕೆ ಭಾರಿ ವೆಚ್ಚದ ಅಗತ್ಯವಿರುವುದಿಲ್ಲ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ

ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 72 ವೈದ್ಯಕೀಯ ಕಾಲೇಜುಗಳಿದ್ದು, ಈ ಹೊಸ ಸೇರ್ಪಡೆಯಿಂದಾಗಿ ರಾಜ್ಯದ ಒಟ್ಟು ವೈದ್ಯಕೀಯ ಸೀಟುಗಳ ಲಭ್ಯತೆ ಮತ್ತಷ್ಟು ಹೆಚ್ಚಾಗಲಿದೆ. ನೀಟ್ (NEET) ಪರೀಕ್ಷೆಯ ಅಕ್ರಮಗಳ ಆತಂಕದ ನಡುವೆ ಕಂಗಾಲಾಗಿದ್ದ ವಿದ್ಯಾರ್ಥಿಗಳಿಗೆ ಈ ಸರ್ಕಾರಿ ಕೋಟಾದ ಸೀಟುಗಳು ಒಂದು ಸುವರ್ಣಾವಕಾಶವಾಗಲಿದ್ದು, ವೈದ್ಯಕೀಯ ಶಿಕ್ಷಣ ಪಡೆಯಬಯಸುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಕರೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಿಟಕಿ ಸರಳು ಮುರಿದು ಉಗಾಂಡದ ನಾಲ್ವರು ಮಹಿಳೆಯರು ಎಸ್ಕೇಪ್; ಮತ್ತೆ ಡ್ರಗ್ಸ್ ದಂಧೆಗೆ ಇಳಿಯುವ ಆತಂಕ! – Kannada News | Bengaluru: Four Ugandan Women Escape from Shelter, High Risk of Rejoining Drug Smuggling Networks

ಬೆಂಗಳೂರು, ಮೇ 18: ಸ್ಟೂಡೆಂಟ್ ಹಾಗೂ ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದು, ವೀಸಾ ಅವಧಿ ಮುಗಿದಿದ್ದರೂ ಸ್ವದೇಶಕ್ಕೆ ಮರಳದೆ ಅಕ್ರಮವಾಗಿ ನೆಲೆಸುವ ವಿದೇಶಿಗರ ಜಾಲ ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ‘ಹೋಮ್ ಆಫ್ ಹೋಪ್’ ನಿರಾಶ್ರಿತರ ಕೇಂದ್ರದಿಂದ ನಾಲ್ವರು ಉಗಾಂಡ ಮೂಲದ ಮಹಿಳೆಯರು (Uganda women) ಕಿಟಕಿ ಸರಳು ಮುರಿದು ಪರಾರಿಯಾಗಿದ್ದು, ಇವರು ಮತ್ತೆ ಮಾದಕ ವಸ್ತುಗಳ ಸ್ಮಗ್ಲಿಂಗ್ ಜಾಲದಲ್ಲಿ ಸಕ್ರಿಯರಾಗುವ ದಟ್ಟ ಸಾಧ್ಯತೆಗಳು ಎದುರಾಗಿವೆ.

ಮುಖ್ಯಾಂಶಗಳು

  • ವೀಸಾ ಅವಧಿ ಮುಗಿದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ವಿದೇಶಿಗರ ಉಪಟಳ.
  • ನಿರಾಶ್ರಿತರ ಕೇಂದ್ರದ ಕಿಟಕಿ ಸರಳು ಮುರಿದು ನಾಲ್ವರು ಮಹಿಳೆಯರು ಪರಾರಿಯಾಗಿದ್ದಾರೆ.
  • ಎಸ್ಕೇಪ್ ಆದ ವಿದೇಶಿ ಮಹಿಳೆಯರು ಮತ್ತೆ ಡ್ರಗ್ಸ್ ದಂಧೆಗೆ ಇಳಿಯುವ ಆತಂಕ.

ಪೊಲೀಸರ ಕಣ್ಣು ತಪ್ಪಿಸಿ ಮಧ್ಯರಾತ್ರಿ ಎಸ್ಕೇಪ್!

ಕೊತ್ತನೂರು ಬಳಿಯ ಚಿಕ್ಕಗುಬ್ಬಿಯಲ್ಲಿರುವ ‘ಆಟೋ ರಾಜ’ ಅವರ ಉಸ್ತುವಾರಿಯ ನಿರಾಶ್ರಿತ ಕೇಂದ್ರದಲ್ಲಿ ನೈಜೀರಿಯಾ, ಉಗಾಂಡ, ಕೀನ್ಯಾ ಸೇರಿದಂತೆ 30ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ತಾತ್ಕಾಲಿಕವಾಗಿ ಇರಿಸಲಾಗಿತ್ತು. ಮೇ 11 ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿದ ಉಗಾಂಡದ ತೋಪಿಷ್ಟ, ನಗವ, ಸಫಿನಾ ಮತ್ತು ಪಿತೀನ ಎಂಬ ನಾಲ್ವರು ಮಹಿಳೆಯರು, ಎರಡನೇ ಅಂತಸ್ತಿನ ಕಿಟಕಿಯ ಕಬ್ಬಿಣದ ಗ್ರಿಲ್ ಮುರಿದು ಎಸ್ಕೇಪ್ ಆಗಿದ್ದಾರೆ.

ಮತ್ತೆ ಮಾದಕ ವಸ್ತುಗಳ ಸ್ಮಗ್ಲಿಂಗ್ ಜಾಲ ಸೇರುವ ಹೈ ಚಾನ್ಸ್!

ಪರಾರಿಯಾಗಿರುವ ಈ ನಾಲ್ವರು ಮಹಿಳೆಯರು ಈಗಾಗಲೇ ಡ್ರಗ್ಸ್ ಮತ್ತು ಗಾಂಜಾ ಸರಬರಾಜಿನಂತಹ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದ ಹಿನ್ನೆಲೆ ಹೊಂದಿದ್ದಾರೆ. ನಿರಾಶ್ರಿತರ ಕೇಂದ್ರದಲ್ಲಿದ್ದ ಸಂದರ್ಭದಲ್ಲೂ ಇವರ ಬಳಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿತ್ತು. ಅಲ್ಲಿಂದ ತಪ್ಪಿಸಿಕೊಂಡ ಇವರು, ತಮಗೆ ಪರಿಚಯವಿರುವ ಹಳೆಯ ಡ್ರಗ್ ನೆಟ್‌ವರ್ಕ್ ಮತ್ತು ಸ್ಮಗ್ಲಿಂಗ್ ಜಾಲವನ್ನು ತಕ್ಷಣವೇ ಮರುಸಂಪರ್ಕಿಸುವ ಹೈ ಚಾನ್ಸಸ್ ಇದೆ ಎಂದು ಶಂಕಿಸಲಾಗಿದೆ. ವೀಸಾ ಅವಧಿ ಮುಗಿದರೂ ಇಲ್ಲೇ ಉಳಿದುಕೊಂಡಿರುವುದರ ಮುಖ್ಯ ಉದ್ದೇಶವೇ ಈ ಡ್ರಗ್ಸ್ ದಂಧೆಯಾಗಿರುವುದರಿಂದ, ಇವರು ಸಮಾಜಕ್ಕೆ ಮತ್ತಷ್ಟು ಮಾರಕವಾಗುವ ಆತಂಕ ಮೂಡಿದೆ.

ಇದನ್ನೂ ಓದಿ ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!

FRRO ಅಧಿಕಾರಿಗಳಿಗೆ ತಲೆನೋವಾದ ವಲಸಿಗರು

ಅಕ್ರಮ ವಲಸಿಗರನ್ನು ಇರಿಸಬೇಕಾದ FRRO ಜೈಲಿನಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಇವರನ್ನು ಆಶ್ರಮದಲ್ಲಿ ಇರಿಸಲಾಗಿತ್ತು. ಆದರೆ ಮಾದಕ ದ್ರವ್ಯಗಳ ವ್ಯಸನಿಗಳಾಗಿರುವ ಇವರು ಆಶ್ರಮದ ಸಿಬ್ಬಂದಿಯೊಂದಿಗೆ ನಿರಂತರವಾಗಿ ಮಾತಿನ ಚಕಮಕಿ ಹಾಗೂ ಗಲಾಟೆ ನಡೆಸುತ್ತಾ, ತಮಗೆ ಬೇಕಾದ ಮಾದಕ ವಸ್ತುಗಳ ಡೀಲಿಂಗ್‌ಗಾಗಿ ಈ ಸಂಚು ರೂಪಿಸಿ ಪರಾರಿಯಾಗಿದ್ದಾರೆ.

ಈ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮತ್ತೆ ಸ್ಮಗ್ಲಿಂಗ್ ಜಾಲಕ್ಕೆ ಜೀವ ತುಂಬಲು ಹೊಂಚು ಹಾಕುತ್ತಿರುವ ಈ ನಾಲ್ವರು ವಿದೇಶಿ ಮಹಿಳಾ ಆರೋಪಿಗಳ ಪತ್ತೆಗಾಗಿ ಪೊಲೀಸರು ಹಗಲಿರುಳು ತೀವ್ರ ಶೋಧ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಮುಗಿದ ಬಳಿಕ ಹೊಸ ರಿಯಾಲಿಟಿ ಶೋಗೆ ರಕ್ಷಿತಾ ಶೆಟ್ಟಿ ಎಂಟ್ರಿ – Kannada News | Rakshitha Shetty New Reality Show After Bigg Boss Kannada

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ ಶೋ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ಹೋದಲ್ಲಿ, ಬಂದಲ್ಲಿ ಅವರನ್ನು ಜನರು ಮುತ್ತಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಶೋನ ಭಾಗ ಆಗುತ್ತಿದ್ದಾರೆ. ಅದುವೇ ‘ಕ್ವಾಟ್ಲೆ ಕಿಚನ್ ಸೀಸನ್ 2’. ಸೂರಜ್ ಸಿಂಗ್, ತುಕಾಲಿ ಸಂತೋಷ್, ಓಂ ಪ್ರಕಾಶ್ ರಾವ್ ಮೊದಲಾದವರು ಶೋನ ಭಾಗ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೇರಳಂಗೆ ಪ್ರವಾಸ ಸದ್ಯಕ್ಕೆ ಬೇಡ, ಪ್ಲಾನ್ ಇದ್ದರೆ ಮುಂದೂಡಿ: ಸರ್ಕಾರದಿಂದ ಮಹತ್ವದ ಸಲಹೆ

ಬೆಂಗಳೂರು, ಮೇ 18: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪೂರ್ವ ಅಲೆಗಳ ಅಬ್ಬರ ಚುರುಕುಗೊಂಡಿದ್ದು, ಕೇರಳಂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಸ್ತುತ ಕೇರಳಂನ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಹಾಗೂ ಬಿರುಗಾಳಿ ಸಹಿತ ಮಳೆ ನಿರಂತರವಾಗಿ ಸುರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಕೇರಳಕ್ಕೆ ಪ್ರವಾಸದ ಪ್ಲಾನ್ ಇದ್ದರೆ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಪ್ರಸ್ತುತ ಕೇರಳಕ್ಕೆ ಪ್ರಯಾಣಿಸಲು ಯೋಜನೆ ರೂಪಿಸಿಕೊಂಡಿರುವವರು ನಿರ್ಧಾರವನ್ನು ಸದ್ಯಕ್ಕೆ ಕೈಬಿಡುವುದು ಸೂಕ್ತ ಎಂದು ಸೂಚಿಸಲಾಗಿದೆ. ಭಾರೀ ಮಳೆಯಿಂದ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸಲು ಈ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿತ್ಯಾಗೆ ಗೊತ್ತಾಯ್ತ ಪ್ರೀತಿಯ ಸತ್ಯ; ಕರ್ಣ-ನಿಧಿ ವಿವಾಹ ಮಾಡಿಸಲು ಮುಂದಾದ ಸಹೋದರಿ – Kannada News | Karna Kannada Serial: Nithya’s Shocking Decision for Karna Nidhi Wedding**

‘ಕರ್ಣ’ ಧಾರಾವಾಹಿಯಲ್ಲಿ ಒಂದು ಪ್ರಮುಖ ಬೆಳವಣಿಗೆ ನಡೆದಿದೆ. ಇಷ್ಟು ದಿನ ಮುಚ್ಚಿಟ್ಟ ಸತ್ಯವು ಹೊರ ಬೀಳುವ ಸಮಯ ಬಂದಿದೆ. ಕರ್ಣ ಹಾಗೂ ನಿಧಿ ಪರಸ್ಪರ ಪ್ರೀತಿಸುತ್ತಾ ಇದ್ದವರು. ಆದರೆ, ಕರ್ಣನ ತಂದೆ ಮಾಡಿದ ಮೋಸದಿಂದ ಒಂದು ದೊಡ್ಡ ಆಘಾತ ಉಂಟಾಗಿತ್ತು. ಕರ್ಣನು ನಿತ್ಯಾಳನ್ನು ಮದುವೆ ಆಗುವ ಅನಿವಾರ್ಯತೆ ಬಂತು. ಈಗ ಆ ತಪ್ಪನ್ನು ಸರಿ ಮಾಡುವ ಸಮಯ ಎಂದೇ ಹೇಳಬಹುದು. ಧಾರಾವಾಹಿಯಲ್ಲಿ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ನಿಧಿ ಹಾಗೂ ಕರ್ಣ ಪ್ರೀತಿ ಮಾಡುತ್ತಿದ್ದರು. ಆದರೆ, ಕರ್ಣ ಹಾಗೂ ನಿತ್ಯಾ ವಿವಾಹ ನಡೆದಿದೆ. ಈ ವಿವಾಹದ ಬಳಿಕ ನಿಧಿಗೆ ಸಾಕಷ್ಟು ಬೇಸರ ಆಯಿತು. ಮುಂದೇನು ಮಾಡಬೇಕು ಎಂಬ ಚಿಂತೆ ಆಕೆಗೆ ಬಂದಿತ್ತು. ಕೊನೆಗೆ ಕರ್ಣನು ಮುಂದಿನ ದಿನಗಳಲ್ಲಿ ಅವಳನ್ನು ಮದುವೆ ಆಗುವ ಭರವಸೆ ನೀಡಿದನು. ಈಗ ಆ ಸಮಯ ಬಂದಿದೆ.

ಕರ್ಣನು ಮತ್ತೊಂದು ಕುತಂತ್ರ ಮಾಡಿದ್ದಾನೆ. ಈ ಕುತಂತ್ರ ಸಣ್ಣದಲ್ಲ. ಅದು ದೊಡ್ಡ ಕತಂತ್ರವೇ. ನಿಧಿಗೆ ಬೇರೆ ಮದುವೆ ಮಾಡಬೇಕು ಎಂದು ಆತ ನಿರ್ಧರಿಸಿದೆ. ಈ ಬೆನ್ನಲ್ಲೇ ಅರ್ಜುನ್​​ನ (ಗಗನ್ ಚಿನ್ನಪ್ಪ) ಕರೆ ತಂದನು. ಇಬ್ಬರೂ ಮದುವೆ ಮಾಡಬೇಕು ಎಂಬ ಪ್ರಯತ್ನ ನಡೆಯಿತು. ಇದನ್ನು ಈಗ ನಿಧಿಯೇ ಬದಲಿಸುವ ಸಮಯ ಬಂದಿದೆ.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್; ಕರ್ಣ-ನಿಧಿ ಮದುವೆ ಮಾಡಿಸ್ತಾಳೆ ನಿತ್ಯಾ

ಕರ್ಣ ಧಾರಾವಾಹಿಯಲ್ಲಿ ಈಗ ನಿತ್ಯಾಗೆ ಸತ್ಯ ಗೊತ್ತಾಗಿದೆ. ಆಕೆ ನಿಧಿ ಹಾಗೂ ಕರ್ಣನ ಮದುವೆ ಮಾಡಿಸಲು ಮುಂದಾಗಿದ್ದಾಳೆ. ಈ ನಿರ್ಧಾರ ಮನೆಯವರಿಗೆ ಶಾಕಿಂಗ್ ಎನಿಸಿದೆ. ಈ ಮೊದಲೇ ಹೇಳಿದಂತೆ ನಿತ್ಯಾ ಹಾಗೂ ಕರ್ಣ ಮದುವೆ ನಡೆದೇ ಇಲ್ಲ. ಹೀಗಾಗಿ, ನಿಧಿ ಹಾಗೂ ಕರ್ಣನ ಮದುವೆ ಆಗಲು ಯಾವುದೇ ತೊಂದರೆ ಇಲ್ಲ. ಮತ್ತೊಂದು ವಿಷಯ ಎಂದರೆ ಕರ್ಣ ಹಾಗೂ ನಿತ್ಯಾ ಇನ್ನುಮುಂದೆ ಫ್ರೆಂಡ್ಸ್ ಆಗಿರಲು ನಿರ್ಧರಿಸಿದ್ದಾರೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಹಿಳೆಯ ಅನುಮಾನಾಸ್ಪದ ಸಾವು, ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಂದೆಯ ಎಚ್ಚರಿಕೆ – Kannada News | Father Alleges Planned Crime After Woman Found Dead in Bhopal

ಭೋಪಾಲ್, ಮೇ 18: ಗಂಡನ ಮನೆಯಲ್ಲಿ ಮಹಿಳೆ(Woman) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 31 ವರ್ಷ ತ್ವಿಶಾ ಸಾವು ಪ್ರಕರಣ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೊಂದು ಯೋಜಿತ ಕೊಲೆ ಎಂದು ಆರೋಪಿಸಿರುವ ತ್ವಿಶಾ ಅವರ ತಂದೆ ನ್ಯಾಯಕ್ಕಾಗಿ ಒತ್ತಾಯಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನಿವಾಸದ ಹೊರಗೆ ಸುಡುವ ಬಿಸಿಲಿನಲ್ಲೇ ಬೃಹತ್ ಪ್ರತಿಭಟನೆ ನಡೆಸಿದರು. ಒಂದೊಮ್ಮೆ ನ್ಯಾಯ ಸಿಗದಿದ್ದರೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನನ್ನ ಮಗಳ ಸಾವಿಗೆ ನ್ಯಾಯ ಸಿಗದಿದ್ದರೆ ನಾನು ಮುಖ್ಯಮಂತ್ರಿಯವರ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡು ಪ್ರಾಣ ಬಿಡುತ್ತೇನೆ ಎಂದು ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಏಮ್ಸ್ ಭೋಪಾಲ್ ನೀಡಿರುವ ಆರಂಭಿಕ ಮರಣೋತ್ತರ ಪರೀಕ್ಷೆಯ ವರದಿ ತೃಪ್ತಿಕರವಾಗಿಲ್ಲ ಎಂದು ಆರೋಪಿಸಿರುವ ಕುಟುಂಬಸ್ಥರು, ದೆಹಲಿಯ ಏಮ್ಸ್‌ನಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಮಗಳ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ತ್ವಿಶಾ ಅವರ ಪತಿ ಸಮರ್ಥ್ ಸಿಂಗ್ (ವಕೀಲ) ಮತ್ತು ಅತ್ತೆ ಗಿರಿಬಾಲಾ ಸಿಂಗ್ ತುಂಬಾ ದಿನಗಳಿಂದ ಆಕೆಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ದೂರಿದ್ದಾರೆ. ವಿಚಾರಣೆ ಆರಂಭವಾಗುವ ಮುನ್ನವೇ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಗುತ್ತಿದೆ. ಕುಟುಂಬವು ತಮ್ಮ ಪ್ರಭಾವವನ್ನು ಬಳಸಿ ತನಿಖೆಯ ಹಾದಿ ತಪ್ಪಿಸುತ್ತಿದೆ.

ಮಗಳ ಸಾವಿನ ಎರಡು ದಿನಗಳ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ರಚಿಸಿರುವ ವಿಶೇಷ ತನಿಖಾ ತಂಡ (SIT) ದ ಮೇಲೂ ನಂಬಿಕೆ ಕಳೆದುಕೊಂಡಿರುವ ಕುಟುಂಬವು, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿದೆ. ತ್ವಿಶಾ ಅವರ ದೇಹದ ಕೈ ಮತ್ತು ಕಿವಿಗಳ ಮೇಲೆ ಗಾಯದ ಗುರುತುಗಳಿದ್ದು, ಪ್ರಕರಣವನ್ನು ಬಲವಂತವಾಗಿ ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ ಎಂಬುದು ಅವರ ಆರೋಪವಾಗಿದೆ.

ಮತ್ತಷ್ಟು ಓದಿ: Video: ಇನೋವಾ ಕಾರಿನಲ್ಲಿ ಬಂದು 7 ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್!

ಪ್ರಸ್ತುತ ಇರುವ ಭೀಕರ ಬಿಸಿಲಿನಿಂದಾಗಿ ಶವ ಕೊಳೆಯದಂತೆ ತಡೆಯಲು ತ್ವಿಶಾ ಅವರ ದೇಹವನ್ನು ಮೈನಸ್ 4 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂರಕ್ಷಿಸಿಡಬೇಕೆಂದು ಕುಟುಂಬಸ್ಥರು ಸಿಎಂ ಅವರ ಒಎಸ್‌ಡಿ ಬಳಿ ವಿನಂತಿಸಿದ್ದಾರೆ. ಇದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ಸಹ ಅವರು ಸಜ್ಜಾಗಿದ್ದಾರೆ.

ವರದಕ್ಷಿಣೆ ಕಿರುಕುಳ, ಹಲ್ಲೆ ಮತ್ತು ಸಾಕ್ಷ್ಯ ನಾಶದ ಆರೋಪಗಳ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದ್ದು, ಎಸಿಪಿ ರಜನೀಶ್ ಕಶ್ಯಪ್ ಇದರ ನೇತೃತ್ವ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಪತಿ ಸಮರ್ಥ್ ಸಿಂಗ್ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಕಟಾರಾ ಹಿಲ್ಲಸ್ ಠಾಣೆಯ ಉಸ್ತುವಾರಿ ಸುನಿಲ್ ದುಬೆ ತಿಳಿಸಿದ್ದಾರೆ. ನಿವೃತ್ತ ನ್ಯಾಯಾಧೀಶರ ಜಾಮೀನನ್ನು ಪ್ರಶ್ನಿಸಿ ಕಾನೂನು ಹೋರಾಟ ಮುಂದುವರಿಸಲಾಗುವುದು, ಆದರೆ ಕುಟುಂಬಸ್ಥರು ಶವ ಸ್ವೀಕರಿಸದಿದ್ದರೆ ಕಾನೂನಿನ ನಿಯಮಗಳ ಪ್ರಕಾರ ತಾವೇ ಅಂತ್ಯಕ್ರಿಯೆ ನಡೆಸಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ನೋಯ್ಡಾ ಮೂಲದ ತ್ವಿಶಾ ಶರ್ಮಾ ಮತ್ತು ವಕೀಲ ಸಮರ್ಥ್ ಸಿಂಗ್ 2025ರ ಡಿಸೆಂಬರ್‌ನಲ್ಲಿ ವಿವಾಹವಾಗಿದ್ದರು. ಆದರೆ ಕಿರುಕುಳ ತಾಳಲಾರದೆ ತ್ವಿಶಾ ನೋಯ್ಡಾಗೆ ಮರಳಲು ಬಯಸಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಮೇ 12 ರ ರಾತ್ರಿ ಅವರು ಶವವಾಗಿ ಪತ್ತೆಯಾಗಿದ್ದು, ಇಡೀ ಪ್ರಕರಣ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವೆಂಕಿಯ ಬೆಂಕಿ ಸೆಲೆಬ್ರೇಷನ್​ ಅರ್ಥವೇನು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಭರ್ಜರಿ ಅರ್ಧಶತಕ ಸಿಡಿಸಿದ್ದರು. ಈ ಅರ್ಧಶತಕ ಪೂರೈಸುತ್ತಿದ್ದಂತೆ ಅಯ್ಯರ್ ತಮ್ಮ ಕೈಗಳನ್ನು ಮೇಲೆಕ್ಕೆತ್ತುವ ಮೂಲಕ ವಿಶೇಷ ಸ್ಟ್ರೈಲ್​ನಲ್ಲಿ ಸಂಭ್ರಮಿಸಿದ್ದರು.

ಇದರ ಬೆನ್ನಲ್ಲೇ ಈ ಸಂಭ್ರಮಕ್ಕೆ ಕಾರಣವೇನು? ಇದರ ಅರ್ಥವೇನು? ಎಂಬ ಗೂಗಲ್ ಹುಡುಕಾಟಗಳು ಶುರುವಾಗಿದ್ದವು. ಈ ಪ್ರಶ್ನೆಗಳಿಗೆ ಸಿಗುವ ಉತ್ತರ ಇಳಯ ದಳಪತಿ ವಿಜಯ್. ಅಂದರೆ ತಮಿಳುನಾಡಿನ ಹೊಸ ಮುಖ್ಯಮಂತ್ರಿ ವಿಜಯ್ ಅವರ ಸ್ಟೈಲ್​ನಲ್ಲಿ ವೆಂಕಿ ಬೆಂಕಿ ಸೆಲೆಬ್ರೇಷನ್ ಮಾಡಿದ್ದರು ಎಂಬುದು.

2017 ರಲ್ಲಿ ಬಿಡುಗಡೆಯಾಗಿದ್ದ ಸೂಪರ್ ಹಿಟ್ ಮೆರ್ಸಲ್ ಚಿತ್ರದಲ್ಲಿ ನಟ ವಿಜಯ್ ಇದೇ ಶೈಲಿಯಲ್ಲಿ ಪೋಸ್ ನೀಡಿ ಅಭಿಮಾನಿಗಳನ್ನು ರಂಜಿಸಿದ್ದರು. ಇದೀಗ ಅವರು ರಾಜಕೀಯಕ್ಕೆ ಇಳಿದು ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಇತ್ತ ತಮಿಳು ಚಿತ್ರಪ್ರೇಮಿಯಾಗಿರುವ ವೆಂಕಟೇಶ್ ಅಯ್ಯರ್, ತನ್ನ ನೆಚ್ಚಿನ ನಟನ ಐಕಾನಿಕ್ ಪೋಸ್ ಅನ್ನು ಮರುಸೃಷ್ಟಿಸಿ ಅರ್ಧಶತಕವನ್ನು ಸಂಭ್ರಮಿಸಿದ್ದಾರೆ.

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿಜಯ್ ಅಭಿಮಾನಿಗಳು ಹಾಗೂ ಆರ್​ಸಿಬಿ ಫ್ಯಾನ್ಸ್​​ಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಸೆಲೆಬ್ರೇಷನ್ ಅರ್ಥ “ಆಶ್ಚರ್ಯಚಕಿತಗೊಳಿಸುವುದು” ಎನ್ನಲಾಗಿದೆ. ಇಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದು ವೆಂಕಿ ಸ್ಫೋಟಕ ಇನಿಂಗ್ಸ್​ನೊಂದಿಗೆ ಎಲ್ಲರನ್ನು ಆಶ್ಚರ್ಯಗೊಳಿಸಿದ್ದು ಸುಳ್ಳಲ್ಲ.

ಪಂದ್ಯದ ಹೈಲೈಟ್ಸ್ ಮತ್ತು ಅಯ್ಯರ್  ಅಬ್ಬರ:

  • ಸ್ಫೋಟಕ ಇನ್ನಿಂಗ್ಸ್: ಗಾಯಗೊಂಡ ರಜತ್ ಪಾಟಿದಾರ್ ಬದಲಿಗೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್, ಪಂಜಾಬ್ ಕಿಂಗ್ಸ್​ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಅವರು ಕೇವಲ 40 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 73 ರನ್ ಚಚ್ಚಿದರು.
  • ಆರ್‌ಸಿಬಿ ಭರ್ಜರಿ ಜಯ: ಅಯ್ಯರ್ ಅವರ ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ತಂಡವು 4 ವಿಕೆಟ್ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಈ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್​ ತಂಡ 23 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.
  • ಪ್ಲೇಆಫ್‌ಗೆ ಲಗ್ಗೆ: ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿದೆ.

ಸದ್ಯ ಪ್ಲೇಆಫ್ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲೂ ಗೆದ್ದು ಆರ್​ಸಿಬಿ 20 ಅಂಕಗಳನ್ನು ಪಡೆಯಲಿದೆಯಾ ಕಾದು ನೋಡಬೇಕಿದೆ.

 

Source link

‘ಆಸೆ’ ಧಾರಾವಾಹಿಗೆ ಎಂಟ್ರಿ ಆಯ್ತು ಸೂರ್ಯ ತಂಗಿ ಪಾತ್ರ – Kannada News | Aase Serial: Tara’s Shocking Re entry Surya’s Sister Returns, Unraveling Old Mysteries

ಆಸೆ ಧಾರಾವಾಹಿ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣುತ್ತಿರುವ ಪ್ರಮುಖ ಧಾರಾವಾಹಿಗಳಲ್ಲಿ ಒಂದು. ಈ ಧಾರಾವಾಹಿ ಸಾಕಷ್ಟು ನಿರೀಕ್ಷೆಯನ್ನು ಸೃಷ್ಟಿಸಿದೆ. ಈಗ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರವೊಂದರ ಎಂಟ್ರಿ ಆಗಿದೆ. ಅದು ಕೂಡ 860 ಎಪಿಸೋಡ್​​​ಗಳ ಬಳಿಕ ಎಂಬುದು ವಿಶೇಷ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಹಾಗಾದರೆ ಯಾವುದು ಆ ಪಾತ್ರ? ಆ ಬಗ್ಗೆ ಇಲ್ಲಿದೆ ವಿವರ.

ಆಸೆ ಧಾರಾವಾಹಿಯಲ್ಲಿ ರಂಗನಾಥ್ ಅವರಿಗೆ ನಾಲ್ಕು ಮಕ್ಕಳಿದ್ದರು. ಈ ಪೈಕಿ ತಾರಾ ಎಂಬ ಹುಡುಗಿ ಸಣ್ಣ ವಯಸ್ಸಿನಲ್ಲೇ ನಿಧನ ಹೊಂದಿದಳು. ಸಾಯಿಸಿದ್ದು ಮನೋಜ್ ಆದರೂ ಈ ಆರೋಪ ಬಂದಿದ್ದು ಸೂರ್ಯನ ಮೇಲೆ. ಹೀಗಾಗಿ ಸೂರ್ಯ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಬಂತು. ಇದು ಸೂರ್ಯನ ಬಾಲ್ಯವನ್ನೇ ಹಾಳು ಮಾಡಿತು. ಅಮ್ಮನಿಂದ ಅವನನ್ನು ದೂರ ಮಾಡಿತು. ಈಗ ಆ ತಾರ ಮತ್ತೆ ಬಂದಿದ್ದಾಳೆ ಎಂಬುದನ್ನು ತೋರಿಸಲಾಗಿದೆ.

ತಾರಾ ಎಂಬ ಹುಡುಗಿಯನ್ನು ‘ಆಸೆ’ ಧಾರಾವಾಹಿಯಲ್ಲಿ ತರಲಾಗಿದೆ. ಆಕೆ ಒಂದು ಕಂಪನಿಯನ್ನು ನೋಡಿಕೊಳ್ಳುತ್ತಿದ್ದಾಳೆ. ಆಕೆಯನ್ನು ಹುಡುಕುವ ಪ್ರಯತ್ನದಲ್ಲಿರುವ ಮೀನಾಗೆ ತಾರಾಳ ಭೇಟಿ ಮಾಡುವ ಪರಿಸ್ಥಿತಿ ಬಂದಿದೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ತಾರಾ ತನ್ನ ತಂದೆಗೆ ಸಾಕು ಮಗಳು. ಈ ವಿಷಯ ಆಕೆಗೆ ಗೊತ್ತಿಲ್ಲ. ಈ ವಿಷಯ ಯಾವಾಗಲೂ ಗೊತ್ತಾಗದಂತೆ ನೋಡಿಕೊಳ್ಳಬೇಕು ಎಂಬುದು ತಾರಾಳ ತಂದೆಯ ಉದ್ದೇಶ. ಆದರೆ, ಸತ್ಯ ಎಂಬುದು ಒಂದಲ್ಲಾ ಒಂದು ದಿನ ಹೊರ ಬರಲೇಬೇಕಲ್ಲ. ಈಗ ಮೀನಾಳು ತಾರಾಳ ಹುಡುಕುವ ಪ್ರಯತ್ನದಲ್ಲಿ ಇರುವಾಗಲೇ ಆಕೆಯೇ ಎದುರು ಬಂದಿದ್ದಾಳೆ. ಮುಂದೆ ಸತ್ಯ ಗೊತ್ತಾದರೆ ಏನಾಗಬಹುದು ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಆಸೆ’ ಧಾರಾವಾಹಿ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ್ರಾ ಅಮೃತಾ ರಾಮಮೂರ್ತಿ?

ತಾರಾ ಸಿಕ್ಕರೆ ತನ್ನನ್ನು ಕೊಲ್ಲಲು ಪ್ರಯತ್ನಿಸಿದ್ದು ಯಾರು ಎಂಬ ವಿಷಯ ಗೊತ್ತಾಗಲಿದೆ. ಇದನ್ನು ಮಾಡಿದ್ದು ಮನೋಜ್ ಎಂಬ ವಿಷಯ ಗೊತ್ತಾದರೆ ಆತನ ತಾಯಿ ಬದಲಾಗುವು ಸಾಧ್ಯತೆ ಇರುತ್ತದೆ. ಮುಂದಿನ ದಿನಗಳಲ್ಲಿ ಈ ವಿಷಯ ರಿವೀಲ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link