ದೆಹಲಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ – Kannada News | Fire Erupts at Union Minister Ravi Shankar Prasad’s Delhi Residence
ನವದೆಹಲಿ, ಜನವರಿ 14: ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ದೆಹಲಿ ನಿವಾಸದಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. 8.05ರ ಸುಮಾರಿಗೆ ಅಗ್ನಿಶಾಮಕ ದಳ ಅಲ್ಲಿಗೆ ತಲುಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯೊಳಗೆ, ಒಂದು ಕೋಣೆಯೊಳಗಿನ ಹಾಸಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು, ಮತ್ತಷ್ಟು ಹರಡುವುದನ್ನು ತಡೆದಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link