Category Archives: Blog

Your blog category

Makar Sankranti 2026: ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಏಕೆ ಹಾರಿಸಲಾಗುತ್ತದೆ ಎಂದು ತಿಳಿದಿದೆಯೇ? – Kannada News | Makar Sankranti 2026: What Is the Connection Between Kites and Lord Rama? Checkout the details here

ಹಿಂದೂ ಕ್ಯಾಲೆಂಡರ್ ಮತ್ತು ದೃಕ್ ಪಂಚಾಂಗದ ಪ್ರಕಾರ, 2026ರ ಮಕರ ಸಂಕ್ರಾಂತಿಯನ್ನು ಜನವರಿ 15 ರಂದು  ಆಚರಿಸಲಾಗುತ್ತದೆ. ಭಾರತದ ಅನೇಕ ನಗರಗಳಲ್ಲಿ ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಹಾರಿಸಲಾಗುತ್ತದೆ. ಹಬ್ಬದ ದಿನದಂದು ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯ ಹೊಸದಲ್ಲ. ಇದು ರಾಮನ ಕಾಲದಿಂದಲೂ ನಡೆದು ಬಂದಿದೆ. ಇದು ಮೊಘಲರೊಂದಿಗೆ ಸಹ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತದೆ.

ಗಾಳಿಪಟಕ್ಕೂ ರಾಮನಿಗೂ ಇದೆ ನಂಟು:

ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದರ ಹಿಂದೆ ಧಾರ್ಮಿಕ ನಂಬಿಕೆಗಳಿವೆ. ರಾಮಾಯಣದ ಪ್ರಕಾರ, ರಾಮನು ಮೊದಲ ಬಾರಿಗೆ ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸಿದನು. ಅವನ ಗಾಳಿಪಟವು ಬಹಳ ಎತ್ತರಕ್ಕೆ ಹಾರಿ ಇಂದ್ರಲೋಕವನ್ನು ತಲುಪಿತು ಎಂದು ಹೇಳಲಾಗುತ್ತದೆ. ಅಂದಿನಿಂದ, ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವ ಸಂಪ್ರದಾಯ ಪ್ರಾರಂಭವಾಗಿದೆ. ಇದನ್ನು ರಾಮಚರಿತಮಾನಸದ ಬಾಲಕಾಂಡದಲ್ಲಿ ಉಲ್ಲೇಖಿಸಲಾಗಿದೆ.

ಗಾಳಿಪಟ ಹಾರಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನ:

ಮಕರ ಸಂಕ್ರಾಂತಿಯ ಸಮಯದಲ್ಲಿ ಸಾಕಷ್ಟು ಚಳಿ ಇರುವುದರಿಂದ ಚಳಿಗಾಲದ ಸೂರ್ಯಪ್ರಕಾಶದಲ್ಲಿ ಗಾಳಿಪಟ ಹಾರಾಟ ಮಾಡುವುದರಿಂದ ದೇಹಕ್ಕೆ ವಿಟಮಿನ್ ಡಿ ದೊರೆಯುತ್ತದೆ. ವಿಟಮಿನ್ ಡಿ ಎಲುಬುಗಳ ಬಲವರ್ಧನೆಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅಗತ್ಯವಾಗಿದ್ದು, ಚಳಿಗಾಲದಲ್ಲಿ ಇದರ ಕೊರತೆ ಸಾಮಾನ್ಯವಾಗಿ ಕಂಡುಬರುತ್ತದೆ. ಹೊರಗಡೆ ಸಮಯ ಕಳೆಯುವುದರಿಂದ ಈ ಕೊರತೆಯನ್ನು ಸಹಜವಾಗಿ ತುಂಬಿಕೊಳ್ಳಬಹುದು. ಇದಲ್ಲದೇ ಗಾಳಿಪಟ ಹಾರಿಸುವಾಗ ಕೈಗಳು, ಭುಜಗಳು ಮತ್ತು ಬೆನ್ನು ಸ್ನಾಯುಗಳು ನಿರಂತರವಾಗಿ ಚಲಿಸುತ್ತವೆ. ದಾರವನ್ನು ಹಿಡಿದು ನಿಯಂತ್ರಿಸುವ ಕ್ರಿಯೆಯಿಂದ ಹಿಡಿತ ಶಕ್ತಿ ಹೆಚ್ಚುತ್ತದೆ ಮತ್ತು ಸ್ನಾಯುಗಳು ಬಲವಾಗುತ್ತವೆ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಗಾಳಿಪಟ ಹಾರಿಸುವಿಕೆಯ ಹಿಂದಿನ ಇತಿಹಾಸ:

ಗಾಳಿಪಟ ಹಾರಾಟಕ್ಕೆ ಸುಮಾರು 2,000 ವರ್ಷಗಳ ಇತಿಹಾಸವಿದೆ. ಇದು ಚೀನಾದಲ್ಲಿ ಪ್ರಾರಂಭವಾಯಿತು. ಆ ಸಮಯದಲ್ಲಿ, ಗಾಳಿಪಟಗಳನ್ನು ಸಂದೇಶಗಳನ್ನು ಕಳುಹಿಸಲು ಬಳಸಲಾಗುತ್ತಿತ್ತು. ಚೀನಾದ ಪ್ರಯಾಣಿಕರಾದ ಫಾ ಹಿಯಾನ್ ಮತ್ತು ಹ್ಯೂಯೆನ್ ತ್ಸಾಂಗ್ ಅವರು ಗಾಳಿಪಟಗಳನ್ನು ಭಾರತಕ್ಕೆ ತಂದರು. ಆರಂಭದಲ್ಲಿ, ಯುದ್ಧಭೂಮಿಯಲ್ಲಿ ಪರಸ್ಪರ ಸಂದೇಶಗಳನ್ನು ಕಳುಹಿಸುವ ಸಂಪ್ರದಾಯದಲ್ಲಿ ಗಾಳಿಪಟಗಳನ್ನು ಬಳಸಲಾಗುತ್ತಿತ್ತು. ಮೊಘಲರು ದೆಹಲಿಯಲ್ಲಿ ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದರು. ಅದರ ನಂತರ, ಗಾಳಿಪಟ ಹಾರಾಟವು ಕ್ರಮೇಣ ಭಾರತದಲ್ಲಿ ಹೊಸ ಕ್ರೀಡೆಯಾಗಿ ಗುರುತಿಸಲ್ಪಟ್ಟಿತು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:15 am, Tue, 13 January 26

Source link

Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ – Kannada News | Gold Price Today on 13th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ವಿದೇಶಗಳಲ್ಲಿ ತುಸು ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಗ್ರಾಮ್​ಗೆ 35 ರೂ ಬೆಲೆ ಜಾಸ್ತಿಯಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಓಟ ಇವತ್ತೂ ಮುಂದುವರಿದಿದೆ. ಮಂಗಳವಾರ ಬೆಳ್ಳಿ ಬೆಲೆ 5 ರೂ ಏರಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,42,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,30,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,690 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,065 ರೂ
  • ಚೆನ್ನೈ: 13,170 ರೂ
  • ಮುಂಬೈ: 13,065 ರೂ
  • ದೆಹಲಿ: 13,080 ರೂ
  • ಕೋಲ್ಕತಾ: 13,065 ರೂ
  • ಕೇರಳ: 13,065 ರೂ
  • ಅಹ್ಮದಾಬಾದ್: 13,070 ರೂ
  • ಜೈಪುರ್: 13,080 ರೂ
  • ಲಕ್ನೋ: 13,080 ರೂ
  • ಭುವನೇಶ್ವರ್: 13,065 ರೂ

ಇದನ್ನೂ ಓದಿ: ನವೆಂಬರ್​ನಲ್ಲಿ 0.7 ಪ್ರತಿಶತ ಇದ್ದ ಹಣದುಬ್ಬರ ಡಿಸೆಂಬರ್​ನಲ್ಲಿ ಶೇ. 1.3ಕ್ಕೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,014 ರುಪಾಯಿ)
  • ದುಬೈ: 514.75 ಡಿರಾಮ್ (12,645 ರುಪಾಯಿ)
  • ಅಮೆರಿಕ: 144 ಡಾಲರ್ (12,994 ರುಪಾಯಿ)
  • ಸಿಂಗಾಪುರ: 183.80 ಸಿಂಗಾಪುರ್ ಡಾಲರ್ (12,891 ರುಪಾಯಿ)
  • ಕತಾರ್: 513 ಕತಾರಿ ರಿಯಾಲ್ (12,699 ರೂ)
  • ಸೌದಿ ಅರೇಬಿಯಾ: 514.75 ಸೌದಿ ರಿಯಾಲ್ (12,645 ರುಪಾಯಿ)
  • ಓಮನ್: 54.65 ಒಮಾನಿ ರಿಯಾಲ್ (12,808 ರುಪಾಯಿ)
  • ಕುವೇತ್: 41.91 ಕುವೇತಿ ದಿನಾರ್ (12,367 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 292 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 292 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 292 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ, ಡಿಸಿಎಂಗೆ ಮಾತಲ್ಲೇ ತಿವಿದ ವಿಪಕ್ಷ ನಾಯಕ: ಎಕ್ಸ್​​ ಪೋಸ್ಟ್​​ ಮಾಡಿ ಅಶೋಕ್​​ ಹೇಳಿದ್ದೇನು? – Kannada News | Karnataka CM and DyCM Snub German Chancellor’s Visit for Rahul, Says R. Ashoka

ಆರ್​​. ಅಶೋಕ್​​ ಕಿಡಿ

ಬೆಂಗಳೂರು, ಜನವರಿ 13: ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಆಗಮಿಸಿದ್ದ ಸಂದರ್ಭವೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ​ ರಾಹುಲ್​​ ಗಾಂಧಿ ಭೇಟಿಗಾಗಿ ಮೈಸೂರಿಗೆ ತೆರಳಿದ್ದನ್ನು ವಿಪಕ್ಷ ನಾಯಕ ಆರ್​​. ಅಶೋಕ್​​ ಕಟುವಾಗಿ ಟಿಕಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಕಿಡಿ ಕಾರಿರುವ ಅವರು, ಆದ್ಯತೆಗಳ ತಪ್ಪು ನಿರ್ಧಾರದಿಂದ ಅವಕಾಶಗಳು ಕೈ ತಪ್ಪಿ ಹೋಗಿವೆ ಎಂದಿದ್ದಾರೆ.

ಅಶೋಕ್​​ ಪೋಸ್ಟ್​​ನಲ್ಲಿ ಏನಿದೆ?

ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ರಾಜ್ಯಕ್ಕೆ ಪ್ರೀತಿಯಿಂದ ಬರಮಾಡಿಕೊಂಡು, ಶುಭ ಹಾರೈಸಿದೆ ಎಂಬ ಸಿದ್ದರಾಮಯ್ಯನವರ ಎಕ್ಸ್​​ ಫೊಸ್ಟ್​​ಗೆ ಪ್ರತಿಕ್ರಿಯಿಸಿದ ಅಶೋಕ್​​, ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ ಭೇಟಿ ನಮ್ಮ ರಾಜ್ಯಕ್ಕೆ ರಾಜತಾಂತ್ರಿಕ, ಆರ್ಥಿಕ ಹಾಗೂ ತಂತ್ರಾತ್ಮಕವಾಗಿ ಅತ್ಯಂತ ಮಹತ್ವದ ಕ್ಷಣವಾಗಿತ್ತು. ಯಾವುದೇ ಜವಾಬ್ದಾರಿಯುತ ಮುಖ್ಯಮಂತ್ರಿ ಇದ್ದರೆ, ಇಂತಹ ಭೇಟಿಗೆ ಅಗತ್ಯದ ಬಗ್ಗೆ ಇರುವ ಗಂಭೀರತೆಯನ್ನು ಅರ್ಥಮಾಡಿಕೊಳ್ಳುತ್ತಿದ್ದರು. ಇದು ಕರ್ನಾಟಕಕ್ಕೆ ಹೂಡಿಕೆ, ಕೈಗಾರಿಕೆ, ಉದ್ಯೋಗ ಮತ್ತು ದೀರ್ಘಕಾಲೀನ ಬೆಳವಣಿಗೆಯ ಅವಕಾಶವಾಗಿತ್ತು. ಆದರೆ ಇಂದು ಕಂಡುಬಂದ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಜಗತ್ತಿನ ಅತ್ಯಂತ ಬಲಿಷ್ಠ ಆರ್ಥಿಕತೆಯೊಂದರ ಮುಖ್ಯಸ್ಥರನ್ನು ಸ್ವಾಗತಿಸುವುದಕ್ಕಿಂತ ರಾಜಕೀಯ ನಿಷ್ಠೆ ಮತ್ತು ಹೈಕಮಾಂಡ್‌ ಸಂತೋಷಪಡಿಸುವುದೇ ಇವರ ಹೆಚ್ಚಿನ ಆದ್ಯತೆಯಾಗಿತ್ತು. ಈ ನಡೆ ರಾಜ್ಯದ ಹಿತಾಸಕ್ತಿಗಳ ಕುರಿತ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತಿದೆ. ಪಕ್ಷಕ್ಕಿಂತ ರಾಜ್ಯವನ್ನು ಮೊದಲು ಇಡುವ, ಅಧಿಕಾರ ರಾಜಕಾರಣಕ್ಕಿಂತ ರಾಜ್ಯದ ಪ್ರಗತಿಗೆ ಆದ್ಯತೆ ನೀಡುವ, ರಾಜಕೀಯ ತೃಪ್ತಿಗಿಂತ ಜಾಗತಿಕ ಅವಕಾಶಗಳಿಗೆ ಮಹತ್ವ ನೀಡುವ ನಾಯಕತ್ವಕ್ಕೆ ಕರ್ನಾಟಕ ಅರ್ಹವಾಗಿದೆ ಎಂದೂ ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:23 pm, Tue, 13 January 26

Source link

Indian Navy Recruitment 2026: ಭಾರತೀಯ ನೌಕಾಪಡೆಯಲ್ಲಿ 260 ಹುದ್ದೆಗೆ ಅರ್ಜಿ ಆಹ್ವಾನ; ತಿಂಗಳಿಗೆ 1 ಲಕ್ಷ ರೂ. ಸಂಬಳ – Kannada News | INA SSC Officer Recruitment 2026: Apply for 260 Indian Navy Posts Now!

ಭಾರತೀಯ ನೌಕಾ ಅಕಾಡೆಮಿ (INA) ಶಾರ್ಟ್ ಸರ್ವಿಸ್ ಕಮಿಷನ್ (SSC) ಆಫೀಸರ್ ಕೋರ್ಸ್‌ ಪ್ರವೇಶಕ್ಕಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 260 SSC ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 24ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಶಾಖೆಗಳ ವಿವರಗಳು:

  • ಕಾರ್ಯನಿರ್ವಾಹಕ ಶಾಖೆ (ಜಿಎಸ್ (ಎಕ್ಸ್) / ಹೈಡ್ರೊ ಕೇಡರ್) ಹುದ್ದೆಗಳ ಸಂಖ್ಯೆ: 76
  • ಪೈಲಟ್ ಹುದ್ದೆಗಳ ಸಂಖ್ಯೆ: 25
  • ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ (ವೀಕ್ಷಕ) ಹುದ್ದೆಗಳ ಸಂಖ್ಯೆ: 20
  • ಏರ್ ಟ್ರಾಫಿಕ್ ಕಂಟ್ರೋಲರ್ ಹುದ್ದೆಗಳ ಸಂಖ್ಯೆ: 18
  • ಲಾಜಿಸ್ಟಿಕ್ಸ್ ಹುದ್ದೆಗಳ ಸಂಖ್ಯೆ: 10
  • ಶಿಕ್ಷಣ ಹುದ್ದೆಗಳ ಸಂಖ್ಯೆ: 7
  • ಎಂಜಿನಿಯರಿಂಗ್ ಶಾಖೆ (ಸಾಮಾನ್ಯ ಸೇವೆ) ಹುದ್ದೆಗಳ ಸಂಖ್ಯೆ: 42
  • ಸಬ್‌ಮೆರಿನ್ ಟೆಕ್ ಎಂಜಿನಿಯರಿಂಗ್ ಹುದ್ದೆಗಳ ಸಂಖ್ಯೆ: 8
  • ವಿದ್ಯುತ್ ಶಾಖೆಯಲ್ಲಿ (ಸಾಮಾನ್ಯ ಸೇವೆ) ಹುದ್ದೆಗಳ ಸಂಖ್ಯೆ: 38
  • ಸಬ್‌ಮೆರಿನ್ ಟೆಕ್ ಎಲೆಕ್ಟ್ರಿಕಲ್ ಹುದ್ದೆಗಳ ಸಂಖ್ಯೆ: 8

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಶೇ.60 ಅಂಕಗಳೊಂದಿಗೆ ಸಂಬಂಧಿತ ವಿಭಾಗದಲ್ಲಿ ಬಿ.ಎಸ್ಸಿ, ಬಿ.ಕಾಂ, ಬಿಇ, ಬಿ.ಟೆಕ್, ಎಂಇ, ಎಂಟೆಕ್, ಎಂಬಿಎ, ಎಂಸಿಎ, ಪಿಜಿ, ಪಿಜಿ ಡಿಪ್ಲೊಮಾ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಅವರು ನಿರ್ದಿಷ್ಟ ದೈಹಿಕ, ವೈದ್ಯಕೀಯ ಮಾನದಂಡಗಳು ಮತ್ತು ವಯಸ್ಸಿನ ಮಿತಿಯನ್ನು ಸಹ ಹೊಂದಿರಬೇಕು. ಈ ಅರ್ಹತೆಗಳನ್ನು ಹೊಂದಿರುವವರು ಫೆಬ್ರವರಿ 24 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಅಂತಿಮ ಆಯ್ಕೆಯು ಶೈಕ್ಷಣಿಕ ಅರ್ಹತೆಗಳ ಅಂಕಗಳು, ಎಸ್‌ಎಸ್‌ಬಿ ಸಂದರ್ಶನ, ದಾಖಲೆ ಪರಿಶೀಲನೆ ಇತ್ಯಾದಿಗಳನ್ನು ಆಧರಿಸಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇರಳದ ಎಜಿಮಲದಲ್ಲಿರುವ ಭಾರತೀಯ ನೌಕಾ ಅಕಾಡೆಮಿ (ಐಎನ್‌ಎ)ಯಲ್ಲಿ ತರಬೇತಿ ನೀಡಲಾಗುತ್ತದೆ. ಅದರ ನಂತರ, ಅವರಿಗೆ ಕರ್ತವ್ಯಗಳನ್ನು ನಿಯೋಜಿಸಲಾಗುತ್ತದೆ. ಈ ಹುದ್ದೆಗಳಿಗೆ ಆರಂಭಿಕ ವೇತನವು ತಿಂಗಳಿಗೆ 1,25,000 ರೂ. ಯಿಂದ ಪ್ರಾರಂಭವಾಗುತ್ತದೆ.

ಭಾರತೀಯ ನೌಕಾಪಡೆಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಹೆಬ್ಬಾಳ್ಕರ್ – Kannada News | Minister Lakshmi Hebbalkar recalls Last year her Car Accident at Belagavi

ಬೆಳಗಾವಿ, (ಜನವರಿ 13): ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನೆನಪಿಸಿಕೊಂಡಿದ್ದಾರೆ. ಇಂದು (ಜನವರಿ 13) ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕಾರು ಅಪಘಾತಗೊಂಡು (Car Accident) ಇವತ್ತಿಗೆ ಒಂದು ವರ್ಷವಾಗಿದೆ. ಒಂದು ವರ್ಷದ ಹಿಂದೆ ಏನಾದರೂ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ರೆ ಎಲ್ಲರೂ ಒಂದು ವರ್ಷದ ಜಯಂತಿ ಮಾಡುತ್ತಿದ್ರಿ. ನಿಮ್ಮೆಲ್ಲರ ಆಶೀರ್ವಾದಿಂದ ಸೇವೆ ಮಾಡುವ ಸಲುವಾಗಿ ಬದುಕಿದ್ದೇನೆ ಎಂದು ಅಂದಿನ ಘಟನೆಯನ್ನು ನೆನಪಿಸಿಕೊಂಡರು.

ಇನ್ನು ಇದೇ ವೇಳೆ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪನವರ ರೀತಿ ಬೆಳೆಯಬೇಕೆಂಬ ಆಶಯ ವ್ಯಕ್ತಪಡಿಸಿದ್ದಾರೆ. ನಾನು ಜ‌ನನಾಯಕಿ ಅನ್ನಿಸಿಕೊಳ್ಳಬೇಕೆಂಬ ಹುಚ್ಚು ಹಂಬಲವಿದೆ. ನಾನು ಶಾಸಕಿಯಾದ ಮೇಲೆ ಗಲಭೆ, ಜಾತಿ ರಾಜಕಾರಣ ಮಾಡಿಲ್ಲ. ನಾನು ಪೊಲೀಸರ ಮೇಲೂ ಒತ್ತಡ ಹಾಕಿಲ್ಲ. ಕುವೆಂಪು ಹೇಳಿದಂತೆ ನಮ್ಮ ಕ್ಷೇತ್ರ ಶಾಂತಿಯ ತೋಟವಾಗಿದೆ. ಎಲ್ಲರೂ ಅನ್ಯೋನ್ಯವಾಗಿ ಒಟ್ಟಾಗಿ ಹೋಗೋಣ, ಬಾಳೋಣ. ನನ್ನ ಕಾರು ಅಪಘಾತಗೊಂಡು ಇವತ್ತಿಗೆ ಒಂದು ವರ್ಷವಾಗಿದೆ. ಎಲ್ಲಿಯೂ ಓಡಾಡಬೇಡಿ ಎಂದು ಯುವರಾಜ ಅಣ್ಣ ಹೇಳಿದ್ರು. ಆದ್ರೆ ನಾನು ಸಾಧನೆ ಮಾಡುವುದು, ಹೆಸರು ಗಳಿಸಬೇಕಿದೆ. ಜ‌ನನಾಯಕಿ ಅನ್ನಿಸಿಕೊಳ್ಳಬೇಕು ಎಂಬ ಹುಚ್ಚು, ಹಂಬಲವಿದೆ. ಸಿದ್ದರಾಮಯ್ಯ, ಯಡಿಯೂರಪ್ಪಗೆ ಜನಪ್ರಿಯ ನಾಯಕ‌ ಅಂತೀವಿ. ಅದೇ ರೀತಿ ಜನಪ್ರಿಯ ನಾಯಕಿ ಅನ್ನಿಸಿಕೊಳ್ಳಬೇಕೆಂಬ ಹುಚ್ಚಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಈ ಬದಲಾವಣೆಗಳು ಕಾಣಿಸುತ್ತವಂತೆ – Kannada News | Chanakya Niti: According to Chanakya, these changes are seen in people before they become rich

ಇದ್ದಕ್ಕಿದ್ದಂತೆ ಯಶಸ್ಸು, ಶ್ರೀಮಂತಿಕೆ (Richness) ಗಳಿಸಲು ಸಾಧ್ಯವಿಲ್ಲ. ಕಠಿಣ ಪರಿಶ್ರಮ ಹಾಗೂ ಕೆಲವೊಂದು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಾತ್ರ ಶ್ರೀಮಂತಿಕೆ ಗಳಿಸಲು ಸಾಧ್ಯ. ಹೀಗೆ ಒಬ್ಬ ವ್ಯಕ್ತಿ ಶ್ರೀಮಂತಿಕೆಯನ್ನು ಗಳಿಸುವ ಮುನ್ನ ಆತನ ನಡವಳಿಕೆ, ಆಲೋಚನಾ ವಿಧಾನಗಳಲ್ಲಿ ಒಂದಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆಯಂತೆ. ಈ ಸಕಾರಾತ್ಮಕ ಬದಲಾವಣೆಗಳು ಕಂಡುಬಂದರೆ ಮಾತ್ರ ಒಬ್ಬ ವ್ಯಕ್ತಿ ಶ್ರೀಮಂತನಾಗಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಶ್ರೀಮಂತಿಕೆಯನ್ನು ಗಳಿಸುವ ವ್ಯಕ್ತಿಯಲ್ಲಿ ಯಾವೆಲ್ಲಾ ಬದಲಾವಣೆಗಳು ಗೋಚರಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಶ್ರೀಮಂತರಾಗುವ ಮುನ್ನ ಈ ಬದಲಾವಣೆಗಳು ಕಾಣಿಸುತ್ತವೆ:

ಸಮಯದ ಸದುಪಯೋಗ: ಸಮಯವನ್ನು ಗೌರವಿಸುವವರಿಗೆ ಯಶಸ್ಸು ಲಭಿಸುತ್ತದೆ ಎಂದು ಚಾಣಕ್ಯ ಹೇಳುತ್ತಾರೆ. ಶ್ರೀಮಂತರಾಗುವ ಜನರು ಅನಗತ್ಯ ಕೆಲಸಗಳು, ಕೆಟ್ಟ ಅಭ್ಯಾಸಗಳು ಮತ್ತು ಸಮಯ ವ್ಯರ್ಥ ಮಾಡುವ ಜನರಿಂದ ದೂರವಿರುತ್ತಾರೆ. ಅವರು ಪ್ರತಿ ದಿನ ಮತ್ತು ಪ್ರತಿ ನಿಮಿಷವನ್ನು ಹೇಗೆ ಸದುಪಯೋಗಪಡಿಸಿಕೊಳ್ಳುವುದು ಎಂಬುದರ ಮೇಲೆ ಕೇಂದ್ರೀಕರಿಸುತ್ತಾರೆ. ಅವರು ವಿಳಂಬ ಮಾಡದೆ, ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸುತ್ತ ಗಮನಹರಿಸುತ್ತಾರೆ.

ಮನಸ್ಥಿತಿಯಲ್ಲಿ ಸಂಪೂರ್ಣ ಬದಲಾವಣೆ: ಒಬ್ಬ ವ್ಯಕ್ತಿಯು ಸಂಪತ್ತನ್ನು ಗಳಿಸುವತ್ತ ಹೆಜ್ಜೆ ಹಾಕಿದಾಗ, ಆತನ ಮನಸ್ಥಿತಿ ಸಂಪೂರ್ಣವಾಗಿ ಬದಲಾಗುತ್ತದೆ. ಆತ ಅನಗತ್ಯ ಸಂಘರ್ಷಗಳಿಗೆ ಆದ್ಯತೆ ನೀಡುವುದಿಲ್ಲ. ಭವಿಷ್ಯದಲ್ಲಿ ಉತ್ತಮ ಜೀವನವನ್ನು ನಡೆಸುವತ್ತ ಗಮನ ಕೇಂದ್ರೀಕರಿಸುತ್ತಾನೆ. ಮುಖ್ಯವಾಗಿ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಹೆದರುವುದಿಲ್ಲ, ಆತ್ಮವಿಶ್ವಾಸದಿಂದ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುತ್ತಾನೆ. ಮನಸ್ಥಿತಿಯ ಬದಲಾವಣೆ ಖಂಡಿತವಾಗಿಯೂ ಯಶಸ್ಸನ್ನು ತಂದುಕೊಡುತ್ತದೆ ಎಂದು ಚಾಣಕ್ಯರು ಹೇಳುತ್ತಾರೆ.

ನಿರಂತರ ಕಲಿಕೆ: ಜೀವನದಲ್ಲಿ ಯಶಸ್ವಿಯಾಗಲು ಬಯಸುವವರು ಮೊದಲು ತಮ್ಮನ್ನು ತಾವು ಸುಧಾರಿಸಿಕೊಳ್ಳುತ್ತಾರೆ. ಶ್ರೀಮಂತರಾಗುವ ಮೊದಲು, ಅವರು ತಮ್ಮ ಜ್ಞಾನ, ಕೌಶಲ್ಯ ಮತ್ತು ಅನುಭವವನ್ನು ಹೆಚ್ಚಿಸಿಕೊಳ್ಳುವತ್ತ ಗಮನ ಹರಿಸುತ್ತಾರೆ. ಅವರು ಹೊಸ ವಿಷಯಗಳನ್ನು ಕಲಿಯಲು ಎಂದಿಗೂ ಹಿಂಜರಿಯುವುದಿಲ್ಲ. ತಮ್ಮ ತಪ್ಪುಗಳಿಂದಲೂ ಪಾಠ ಕಲಿಯುತ್ತಾರೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.

ಇದನ್ನೂ ಓದಿ: ತಪ್ಪುಗಳಿಂದ ನೀವು ನಗೆಪಾಟಲಿಗೆ ಈಡಾಗುತ್ತೀರಿ ಎಚ್ಚರ!

ಸಜ್ಜನರ ಸಹವಾಸ: ನಾವು ಯಾವ ರೀತಿಯ ಜನರೊಂದಿಗೆ ಸ್ನೇಹ ಬೆಳೆಸಿಕೊಳ್ಳುತ್ತೇವೆಯೋ ಅದು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಚಾಣಕ್ಯರು ಹೇಳುತ್ತಾರೆ. ಶ್ರೀಮಂತರಾಗುವ ಮೊದಲು, ಜನರು ತಮ್ಮನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ತಮಗೆ ಪ್ರೇರಣೆ ನೀಡುವ ಜನರೊಂದಿಗೆ ಸ್ನೇಹವನ್ನು ಹುಡುಕುತ್ತಾರೆ. ನಕಾರಾತ್ಮಕ ಆಲೋಚನೆಗಳನ್ನು ಹೊಂದಿರುವ ಜನರು, ಸೋಮಾರಿಗಳಿಂದ ದೂರವಿರುತ್ತಾರೆ.

ಉಳಿತಾಯ ಮತ್ತು ಖರ್ಚು ನಿಯಂತ್ರಣ: ಶ್ರೀಮಂತರಾಗಲಿರುವ ಜನರು ಆಡಂಬರದ ವಸ್ತುಗಳಿಗೆ ಖರ್ಚು ಮಾಡುವುದನ್ನು, ದುಡ್ಡು ಪೋಲು ಮಾಡುವುದನ್ನು ನಿಲ್ಲಿಸುತ್ತಾರೆ.  ಹಣವನ್ನು ವ್ಯರ್ಥ ಮಾಡದೆ ಉಳಿಸುವುದು ಮತ್ತು ಸರಿಯಾದ ರೀತಿಯಲ್ಲಿ ಹೂಡಿಕೆ ಮಾಡುವಂತಹ ಅಭ್ಯಾಸಗಳನ್ನು ಬೆಳೆಸಿಕೊಳ್ಳುವವರು ಮಾತ್ರ ಶ್ರೀಮಂತರಾಗಲು ಸಾಧ್ಯ ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

India Post Recruitment 2026: ಅಂಚೆ ಇಲಾಖೆಯಲ್ಲಿ 25,000 ಕ್ಕೂ ಅಧಿಕ ಉದ್ಯೋಗವಕಾಶ; ಶೀರ್ಘದಲ್ಲೇ ಅಧಿಸೂಚನೆ ಬಿಡುಗಡೆ – Kannada News | India Post GDS Recruitment 2026: 25,000+ Vacancies for 10th Pass

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಪ್ರಮುಖ ಸುದ್ದಿ. ಅಂಚೆ ಇಲಾಖೆಯಾದ ಇಂಡಿಯಾ ಪೋಸ್ಟ್, 2026 ರ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇಲ್ಲಿದೆ. ವರದಿಗಳ ಪ್ರಕಾರ, ಅಂಚೆ ಇಲಾಖೆಯು 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕರನ್ನು ನೇಮಿಸಿಕೊಳ್ಳಲಿದೆ. ಇದಕ್ಕಾಗಿ ಸಿದ್ಧತೆಗಳು ಪ್ರಾರಂಭವಾಗಿವೆ, ದೇಶಾದ್ಯಂತ 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಈ ವಾರ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಈ ತಿಂಗಳು ಪ್ರಾರಂಭವಾಗಲಿದೆ.

ಜನವರಿ 20 ರ ನಂತರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ:

ಅಂಚೆ ಇಲಾಖೆಯಾದ ಇಂಡಿಯಾ ಪೋಸ್ಟ್, 2026 ರಲ್ಲಿ 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕರನ್ನು (GDS) ನೇಮಕ ಮಾಡಿಕೊಳ್ಳಲು ಯೋಜಿಸುತ್ತಿದೆ. GDS ನೇಮಕಾತಿ 2026 ರ ತಾತ್ಕಾಲಿಕ ಸಮಯದ ಪ್ರಕಾರ, ಜನವರಿ 14 ರ ನಂತರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಬಹುದು, ಗ್ರಾಮೀಣ ಡಾಕ್ ಸೇವಕ ನೇಮಕಾತಿ 2026 ರ ಅರ್ಜಿ ಪ್ರಕ್ರಿಯೆಯು ಜನವರಿ 20 ರ ನಂತರ ಪ್ರಾರಂಭವಾಗುವ ಸಾಧ್ಯತೆಯಿದೆ. ಫೆಬ್ರವರಿ ಮೊದಲ ವಾರದವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಮೊದಲ ಪಟ್ಟಿಯನ್ನು ಫೆಬ್ರವರಿ ಕೊನೆಯ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದೆ.

ಈ ಹುದ್ದೆಗಳಿಗೆ ನೇಮಕಾತಿ:

ಭಾರತೀಯ ಅಂಚೆಯು ಗ್ರಾಮೀಣ ಡಾಕ್ ಸೇವಕ (GDS) ನೇಮಕಾತಿಯ ಅಡಿಯಲ್ಲಿ ಎರಡು ವಿಭಾಗಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತದೆ, ಇದರ ಅಡಿಯಲ್ಲಿ GDS ನೇಮಕಾತಿಯು ಶಾಖೆ ಪೋಸ್ಟ್ ಮಾಸ್ಟರ್ (BPM), ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ (ABPM)/ಡಾಕ್ ಸೇವಕ್ ಅನ್ನು ಒಳಗೊಂಡಿದೆ.

10ನೇ ತರಗತಿ ತೇರ್ಗಡೆಯಾದವರು ಅರ್ಹರು:

10 ನೇ ತರಗತಿಯಲ್ಲಿ ಉತ್ತೀರ್ಣರಾದವರು ಇಂಡಿಯಾ ಪೋಸ್ಟ್ ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. 10 ನೇ ತರಗತಿಯಲ್ಲಿ ಗಣಿತ ಕಡ್ಡಾಯವಾಗಿದೆ. ನೀವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯ ಜ್ಞಾನ ಮತ್ತು ಮೂಲಭೂತ ಕಂಪ್ಯೂಟರ್ ಕೌಶಲ್ಯಗಳು ಅಗತ್ಯವಾಗಿವೆ. ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಜಿಡಿಎಸ್ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಭಾರತ ಅಂಚೆ ಗ್ರಾಮೀಣ ಡಾಕ್ ಸೇವಕ ನೇಮಕಾತಿಗೆ ಆಯ್ಕೆ ಪ್ರಕ್ರಿಯೆಯು ಅರ್ಹತೆ ಆಧಾರಿತವಾಗಿದೆ. ಸ್ಥಾಪಿತ ನಿಯಮಗಳ ಪ್ರಕಾರ, ಗ್ರಾಮೀಣ ಡಾಕ್ ಸೇವಕ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರ 10 ನೇ ತರಗತಿಯ ಶ್ರೇಣಿಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, ಗ್ರಾಮೀಣ ಡಾಕ್ ಸೇವಕ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಗೆ 10 ನೇ ತರಗತಿಯ ಶ್ರೇಣಿಗಳು ಪ್ರಾಥಮಿಕ ಆಧಾರವಾಗಿದೆ.

ಎಷ್ಟು ಸಂಬಳ ಸಿಗಲಿದೆ?

ದಿಯಾ ಪೋಸ್ಟ್ ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಶಾಖಾ ಪೋಸ್ಟ್ ಮಾಸ್ಟರ್‌ಗಳಾಗಿ (ಬಿಪಿಎಂ) ನೇಮಿಸಿಕೊಳ್ಳಲಾಗುತ್ತದೆ ಮತ್ತು ಅವರಿಗೆ ಮಾಸಿಕ 12,000 ರಿಂದ 29,000 ರೂಪಾಯಿಗಳ ವೇತನ ಸಿಗುತ್ತದೆ. ಅದೇ ರೀತಿ, ಸಹಾಯಕ ಶಾಖಾ ಪೋಸ್ಟ್ ಮಾಸ್ಟರ್‌ಗಳು (ಎಬಿಪಿಎಂಗಳು) / ಅಂಚೆ ಸೇವಕರು ಮಾಸಿಕ 10,000 ರಿಂದ 24,000 ರೂಪಾಯಿಗಳ ವೇತನ ಸಿಗುತ್ತದೆ. ಇದರ ಜೊತೆಗೆ ಭತ್ಯೆಗಳನ್ನು ಪಾವತಿಸಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:56 pm, Tue, 13 January 26

Source link

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ – Kannada News | Indian army warning to pakistan over recent drone activities in jammu and kashmir

ನವದೆಹಲಿ, ಜನವರಿ 13: ಪಾಕಿಸ್ತಾನದೊಂದಿಗೆ ಇಂದು ಡಿಜಿಎಂಒ ಮಟ್ಟದ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನದ (Pakistan) ಕಡೆಯಿಂದ ಬರುವ ಡ್ರೋನ್‌ಗಳ ಬಗ್ಗೆ ಕಳವಳ ವ್ಯಕ್ತವಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಹಾಗೇ, ಭಾರತದೊಳಗೆ ಡ್ರೋನ್ ಚಟುವಟಿಕೆ ನಿಲ್ಲಿಸಲು ಪಾಕ್​​ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ನೌಶೇರಾ-ರಾಜೌರಿ ವಲಯದಲ್ಲಿ ಡ್ರೋನ್‌ಗಳು ಪತ್ತೆಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ಉಪೇಂದ್ರ ದ್ವಿವೇದಿ, ಮೇ 10ರಿಂದ ಪಶ್ಚಿಮ ಫ್ರಂಟ್, ಜಮ್ಮು ಮತ್ತು ಕಾಶ್ಮೀರ ಸೂಕ್ಷ್ಮ ಪ್ರದೇಶಗಳಾಗಿ ಉಳಿದಿವೆ. ಭದ್ರತಾ ಪಡೆಗಳು 31 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದರಿಂದ ಅಲ್ಲಿನ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದೆ. 2025ರಲ್ಲಿ ಆಪರೇಷನ್ ಮಹಾದೇವ್‌ನಲ್ಲಿ ಮೂವರು ಪಹಲ್ಗಾಮ್ ದಾಳಿಯ ಅಪರಾಧಿಗಳನ್ನು ತಟಸ್ಥಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

“ಪಾಕಿಸ್ತಾನದ 8 ಭಯೋತ್ಪಾದಕ ಶಿಬಿರಗಳು ಇನ್ನೂ ಸಕ್ರಿಯವಾಗಿವೆ. 6 ಎಲ್‌ಒಸಿಯತ್ತ ಮುಖ ಮಾಡಿವೆ ಮತ್ತು 2 ಅಂತಾರಾಷ್ಟ್ರೀಯ ಗಡಿಯಲ್ಲಿವೆ. ಪಾಕಿಸ್ತಾನಿ ಪಡೆಗಳು ಒಳಗೆ ನುಸುಳಲು ಪ್ರಯತ್ನಿಸಿದರೆ, ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಸೂಕ್ಷ್ಮವಾಗಿದೆ. ಆದರೆ ಅಲ್ಲಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಭಾರತದೊಳಗೆ ಹಾರಿದ ಡ್ರೋನ್‌ಗಳು ತುಂಬಾ ಚಿಕ್ಕದಾಗಿದ್ದು, ಲೈಟ್​​ಗಳನ್ನು ಆನ್ ಮಾಡಿ ಒಳಗೆ ಬಂದಿದ್ದವು. ಅವು ತೀರಾ ಎತ್ತರದಲ್ಲಿ ಹಾರಿಲ್ಲ ಎಂದು ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಜನವರಿ 10ರಂದು ಸುಮಾರು 6 ಡ್ರೋನ್‌ಗಳು ಕಾಣಿಸಿಕೊಂಡವು, ಜನವರಿ 11 ಮತ್ತು 12ರಂದು 2ರಿಂದ 3 ಡ್ರೋನ್‌ಗಳು ಕಾಣಿಸಿಕೊಂಡವು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ: ಪಿಣರಾಯಿಗೆ ಸಿದ್ದರಾಮಯ್ಯ ಕರೆ ಮಾಡುವರೇ? – Kannada News | Kerala Police Stops Karnataka Ayyappa devotees vehicles In erumeli, maladharis Protest

ಎರುಮಲೈ(ಕೇರಳ), ಜನವರಿ 13):   ಹಲವು ದಿನಗಳ ಕಾಲ ಅಯ್ಯಪ್ಪನ ಮಾಲೆ ಧರಿಸಿ ( Ayyappa devotees )ವ್ರತ ಮಾಡಿ ಇದೀಗ ಮಕರ ಜ್ಯೋತಿ ನೋಡಲು ದೇಶದ ಮೂಲೆ ಮೂಲೆಗಳಿಂದ ಶಬರಿಮಲೆಯತ್ತ ಹೊರಟ್ಟಿದ್ದಾರೆ. ಆದ್ರೆ,  ಕರ್ನಾಟಕದ ಶಬರಿಮಲೆ (Shabarimale) ಯಾತ್ರಿಗಳಿಗೆ ಕೇರಳದಲ್ಲಿ ನಿರ್ಬಂಧಿಸಲಾಗಿದೆ. ಕರ್ನಾಟಕದ ಅಯ್ಯಪ್ಪ ಭಕ್ತ ವಾಹನಗಳನ್ನು ಶಬರಿಮಲೆಯಿಂದ 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ. ಚಿಕ್ಕಮಗಳೂರು, ಬಾಗಲಕೋಟೆ, ಶಿವಮೊಗ್ಗ, ಸೇರಿದಂತೆ ವಿವಿಧ ಜಿಲ್ಲೆಯಿಂದ ತೆರಳಿದ ಅಯ್ಯಪ್ಪ ಮಾಲಾಧಾರಿಗಳು ಕಂಗಾಲಾಗಿದ್ದು, ಟಿಪಿ ಕಟ್ಟಿ ಬಂದರೂ ಸಹ ನಮ್ಮ ವಾಹನಗಳನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಕೇರಳ ಪೊಲೀಸರ ವಿರುದ್ಧ ಅಯ್ಯಪ್ಪ ಭಕ್ತರು ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ್ದು, ಕೇರಳ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೈ ಯಾತ್ರೆ ಕೈಗೊಳ್ಳುತ್ತಾರೆ. ಲಕ್ಷಾಂತರ ಭಕ್ತರು ಕೇರಳದ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ತಮ್ಮ ವ್ರತವನ್ನು ಪೂರ್ಣಗೊಳಿಸುತ್ತಾರೆ. ರಾಜ್ಯದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕರ್ನಾಟಕದಿಂದ ವಾಹನ ಮಾಡಿಕೊಂಡು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. ಆದ್ರೆ ಕೇರಳದಲ್ಲಿ ಕರ್ನಾಟಕ ನೋಂದಣಿ ವಾಹನಗಳಿಗೆ ನಿರ್ಬಂಧ ಹೇರಿರುವ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಅಯ್ಯಪ್ಪಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಾಹನ ಬಾಡಿಗೆ ಮಾಡಿಕೊಂಡು ಬಂದಿದ್ದೇವೆ. ಮತ್ತೆ ಕೇರಳ ಬಸ್ ಗಳಿಗೆ ಹಣ ಕೊಟ್ಟು ಹೋಗಬೇಕು ಅಂತಿದ್ದಾರೆ. ಇದು ಕೇರಳ ಸರಕಾರದಿಂದ ನಮ್ಮ ಮೇಲಾಗ್ತಿರುವ ದೌರ್ಜನ್ಯ. ಇದರಿಂದ ಕೂಡಲೇ ಸಿಎಂ ಸಿದ್ದರಾಮಯ್ಯನವರು ಕೇರಳ ಸರಕಾರದ‌ ಜೊತೆ ಮಾತಾಡಿ ನಮ್ಮ ವಾಹನ ಬಿಡಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​ – Kannada News | Mangaluru CCB Busts Drug Racket, Arrests Ugandan Woman in Bengaluru; Seizes 4 Crore Worth of MDMA

ಮಂಗಳೂರು, ಜನವರಿ 13: ಆರು​ ಪೆಡ್ಲರ್​ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್​​ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಕುಂದಾಪುರದ ಮೊಹಮ್ಮದ್ ಶಿಯಾಬ್ ಅಲಿಯಾಸ್​​ ಶಿಯಾಬ್, ಉಳ್ಳಾಲ ಕಳ್ಳರ ಕೋಡಿ ನಿವಾಸಿ ಮೊಹಮ್ಮದ್ ನೌಷದ್ , ಬೆಂಗ್ರೆ ನಿವಾಸಿ ಇಮ್ರಾನ್ ಅಲಿಯಾಸ್​​ ಇಂಬ, ಬಂಟ್ವಾಳದ ನಿಸಾರ್ ಅಹಮ್ಮದ್, ಕಾಪು ನಿವಾಸಿ ಮೊಹಮ್ಮದ್ ಇಕ್ಬಾಲ್ ಮತ್ತು ಪಡುಬಿದ್ರೆ ನಿವಾಸಿ ಶೆಹರಾಜ್ ಶಾರೂಕ್ ಎಂಬ ಡ್ರಗ್ ಪೆಡ್ಲರ್​​ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳು ಜಲಿಯಾಳಿಂದ ಡ್ರಗ್ಸ್ ಪಡೆದು ಮಂಗಳೂರಲ್ಲಿ ಮಾರುತ್ತಿದ್ದ ವಿಚಾರ ತನಿಖೆ ವೇಳೆ ಗೊತ್ತಾಗಿತ್ತು. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಲ್ಲಿ ಸಿಸಿಬಿ ರೇಡ್​ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ಸ್​​ ಫ್ಯಾಕ್ಟರಿ ರಾಜಧಾನಿ ಆಯ್ತಾ ಬೆಂಗಳೂರು?; 55.88 ಕೋಟಿ ರೂ. ಮೌಲ್ಯದ MDMA ಸೀಜ್​​

ಉಗಾಂಡದ ಜಲಿಯಾ ಯಾರಿಗೂ ಅನುಮಾನ ಬಾರದಂತೆ ಎಂಡಿಎಂ ಸಾಗಾಟಕ್ಕೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದಳು. ಮಾಲ್‌ಗಳು ಅಥವಾ ಟೆಕ್ಸ್‌ ಟೈಲ್​​ಗಳಿಂದ ಪುರುಷರ ಹೊಸ ಶರ್ಟ್​ಗಳನ್ನು ಖರೀದಿಸಿ ಅದನ್ನು ಮೆಲ್ಲಗೆ ಬಿಡಿಸಿ ಅದರೊಳಗೆ ಅಂದಾಜು 300 ಗ್ರಾಂ ಎಂಡಿಎಂಎ ಪ್ಯಾಕ್ ಇಟ್ಟು ಸೂಟ್ ಕೇಸ್​​ನಲ್ಲಿ ತುಂಬುತ್ತಿದ್ದಳು. ಮೇಲ್ನೋಟಕ್ಕೆ ಇದು ಅಂದವಾಗಿ ಶರ್ಟ್ ಜೋಡಿಸಿಟ್ಟ ಸೂಟ್ ಕೇಸ್​​ನಂತೆ ಕಾಣುತ್ತಿತ್ತು. ಶರ್ಟ್ ಬಿಡಿಸಿ ನೋಡಿದರೆ ಆದರೊಳಗೆ ಎಂಡಿಎಂ ಪ್ಯಾಕೇಟ್​​ಗಳು ಇರುತ್ತಿದ್ದವು. ಇನ್ನು ಜಲಿಯಾ ಉಗಾಂಡದಿಂದ ಬಂದು ಭಾರತದಲ್ಲಿ ಅಕ್ರಮವಾಗಿ ವಾಸವಿದ್ದಳು ಎಂಬ ವಿಚಾರವೂ ಬಯಲಾಗಿದೆ. ಆ ಮೂಲಕ ಮಂಗಳೂರಿಗೆ ಸರಬರಾಜಾಗುತ್ತಿದ್ದ ಡ್ರಗ್ಸ್​​ ಜಾಲದ ಒಂದು ಪ್ರಮುಖ ಕೊಂಡಿ ಕಳಚಿದೆ. ಅದರೆ ಇಂತಹ ನುರಾರು ಮಂದಿ ಇರುವ ಅನುಮಾನವಿದ್ದು, ಅವರ ಪತ್ತೆಯನ್ನೂ ಶೀಘ್ರಮಾಡಿ ತಕ್ಕ ಶಾಸ್ತಿ ನೀಡಬೇಕೆಂಬ ಆಗ್ರಹ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:34 pm, Tue, 13 January 26

Source link