ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿ ಲಾಕ್​​ ಆದ ಗ್ಯಾಂಗ್ – Kannada News | Bengaluru Robbery Gang Caught, Kengeri Police Arrest Repeat Offenders

ಬೆಂಗಳೂರು, ಜನವರಿ 13: ಮೂವತ್ತು ಹೆಚ್ಚು ರಾಬರಿ ಮಾಡಿದ್ದ ಖತರ್ನಾಕ್​​ ಗ್ಯಾಂಗ್​​ನ ಖೆಡ್ಡಾಕೆ ಕೆಡವುವಲ್ಲಿ ಬೆಂಗಳೂರಿನ ಕೆಂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಹೊಸ ವರ್ಷದ ಹಿಂದಿನ ದಿನ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿದ್ದ 1 ಲಕ್ಷ ರೂಪಾಯಿ ದರೋಡೆ ಮಾಡಿತ್ತು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳು ಈ ಹಿಂದೆ ಇಂತಹುದೇ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದರು ಎಂಬುದು ಕೂಡ ತನಿಖೆ ವೇಳೆ ಬಯಲಾಗಿದೆ.  ಗ್ಯಾಂಗ್​​ಗಿದೆ ಕರಾಳ ಇತಿಹಾಸ! ಬಂಧಿತ ಆರೋಪಿಗಳಾದ ಸುರೇಶ್ ಅಲಿಯಾಸ್​​ ಸೂರಿ, ಶಶಿಕುಮಾರ್…

Read More

Blinkit:ಹತ್ತು ನಿಮಿಷಗಳಲ್ಲಿ ಮನೆ ಮನೆಗೆ ಡೆಲಿವರಿ ವ್ಯವಸ್ಥೆ ಕೈಬಿಟ್ಟ ಬ್ಲಿಂಕಿಟ್ – Kannada News | Speed Meets Scrutiny: Blinkit Drops 10 Minute Promise After Govt Nudge

ನವದೆಹಲಿ, ಜನವರಿ 13: ಕೇವಲ ಹತ್ತು ನಿಮಿಷಗಳಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್(Blinkit) ಕೈಬಿಟ್ಟಿದೆ. ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಇತ್ತೀಚಿಗೆ ಡಿ. 31ರಂದು ಸ್ವಿಗ್ಗಿ, ಜೊಮ್ಯಾಟೋ, ಪ್ಲಿಪ್​ಕಾರ್ಟ್, ಬ್ಲಿಂಕಿಟ್ ಸೇರಿ ಆನ್​ಲೈನ್​ ಆ್ಯಪ್​ಗಳ ಗಿಗ್​ ಕಾರ್ಮಿಕರು ಮುಷ್ಕರ ನಡೆಸಿದ್ದರು. ಮುಷ್ಕರ ಅಷ್ಟೇನೂ ಪ್ರಭಾವ ಬೀರದಿದ್ದರು, ಕೆಲವು ಬದಲಾವಣೆ ಮಾಡಲು ಕಂಪನಿಗಳು ಒಪ್ಪಿಕೊಂಡಿತ್ತು. ಇನ್ನು ಕಾರ್ಮಿಕರು 10 ನಿಮಿಷಗಳ ವಿತರಣಾ ಆಯ್ಕೆಯನ್ನು ತೆಗೆಯುವಂತೆ ಬೇಡಿಕೆಯನ್ನು ಇಟ್ಟಿದ್ದರು. ಹತ್ತು ನಿಮಿಷಗಳ ವಿತರಣಾ ಮಾದರಿಯಿಂದಾಗಿ…

Read More

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ: ನೋಡುತ್ತಾ ನಿಂತ ವಾಹನ ಸವಾರರು! – Kannada News | Massive Lone Elephant Walks Onto Road Near Male Mahadeshwara Hills, Motorists Stop to Watch

ಚಾಮರಾಜನಗರ, ಜನವರಿ 13: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ರಾಮಾಪುರ ರಸ್ತೆಯಲ್ಲಿ ಬೃಹತ್ ಗಾತ್ರದ ಒಂಟಿ ಸಲಗ ರಸ್ತೆ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಏಕಾಏಕಿ ಬಂದ ಒಂಟಿ ಸಲಗವನ್ನು ನೋಡಲು ಕೆಲಕಾಲ ವಾಹನ ಸವಾರರು ಮತ್ತು ಮಾದಪ್ಪನ ಭಕ್ತರು ರಸ್ತೆಯಲ್ಲೇ ನಿಂತಿದ್ದಾರೆ. ಹನೂರಿನಿಂದ ರಾಮಾಪುರಕ್ಕೆ ತೆರಳುವ ಮಾರ್ಗದಲ್ಲಿ ಪ್ರತಿದಿನವೂ ಒಂಟಿ ಸಲಗ ಸೇರಿದಂತೆ ಕೆಲ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದು ಸಾಮಾನ್ಯವಾಗಿದೆ. ಕಾಡಾನೆಗಳು ಪ್ರತಿದಿನ ನೀರು ಕುಡಿಯಲು ಈ ಭಾಗಕ್ಕೆ ಆಗಮಿಸುತ್ತಿವೆ…

Read More

‘ಟಾಕ್ಸಿಕ್’ಗೆ ಮತ್ತೊಂದು ಸಂಕಷ್ಟ: ಸಿಬಿಎಫ್​​ಸಿಗೆ ದೂರು ಸಲ್ಲಿಕೆ – Kannada News | Complaint to CBFC about Yash starrer Toxic movie teaser

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಟೀಸರ್ ಬಗ್ಗೆ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಟೀಸರ್ ತುಂಬಾ ಹಾಟ್ ಆಯ್ತೆಂದು ಕೆಲವರು, ಅನವಶ್ಯಕ ಹಾಟ್ ದೃಶ್ಯ ಸೇರಿಸಲಾಗಿದೆ ಎಂದು ಮತ್ತೊಬ್ಬರು. ಇನ್ನು ಕೆಲವರು ಟೀಸರ್​ನ ಪರವಾಗಿಯೂ ವಾದ ಮಂಡಿಸುತ್ತಿದ್ದಾರೆ. ಇದೆಲ್ಲದರ ಮಧ್ಯೆ, ಸಿನಿಮಾದ ವಿರುದ್ಧ ದೂರುಗಳು ದಾಖಲಾಗಲು ಆರಂಭವಾಗಿವೆ. ನಿನ್ನೆ ‘ಟಾಕ್ಸಿಕ್’ ಸಿನಿಮಾ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಾಗಿತ್ತು. ಮಕ್ಕಳ ಆಯೋಗವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ….

Read More

Video: ನಾಯಿ ಮರಿಗಳ ಹೆಜ್ಜೆ ಗುರುತಿನಿಂದ ಮನೆ ಬಾಗಿಲನ್ನು ಅಲಂಕರಿಸಿದ ಯುವತಿಯರು – Kannada News | Young woman find different ways to decorate their doorsteps

ಮನೆಯನ್ನು ಸುಂದರವಾಗಿ ಅಲಂಕರಿಸುವುದರಲ್ಲಿ ಹೆಂಗಳೆಯರು ಎತ್ತಿದ ಕೈ. ಹೀಗಾಗಿ ಬಿಸಾಡುವ ವಸ್ತುಗಳನ್ನು ಬಳಸಿ ಸುಂದರವಾದ ಅಲಂಕಾರಿಕ ಸಾಮಗ್ರಿಗಳನ್ನು (decorative items) ತಯಾರಿಸುತ್ತಾರೆ. ಆದರೆ ಈ ಯುವತಿಯರು (young woman’s) ಮನೆ ಬಾಗಿಲನ್ನು ಅಲಂಕರಿಸಲು ಮನೆಯ ಮುದ್ದಿನ ನಾಯಿಮರಿಗಳನ್ನು ಬಳಸಿದ್ದಾರೆ. ಅದೇಗೆ ಅಂತೀರಾ?, ಈ ಕುರಿತಾದ ಸ್ಟೋರಿ ಓದಿ. Puran8200singh ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಯುವತಿಯರಿಬ್ಬರೂ ತಮ್ಮ ಮನೆಯ ಬಾಗಿಲನ್ನು ಅಲಂಕರಿಸುತ್ತಿರುವುದನ್ನು ತೋರಿಸಲಾಗಿದೆ. ಆದರೆ ಈ ಇಬ್ಬರೂ ಯುವತಿಯರು ಅಳವಡಿಸಿಕೊಂಡ ವಿಧಾನದ ಬಗ್ಗೆ ನೀವು ಊಹೆ…

Read More

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು – Kannada News | Woman Killed in Wild Elephant Attack in Sakleshpur, Hassan; Villagers Protest Against Forest Department

ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ…

Read More

ಬೀದಿ ನಾಯಿಗಳು ಕಚ್ಚಿದ್ರೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ – Kannada News | Supreme Court: Govt Liable for Street Dog Bite Compensation in India

ನವದೆಹಲಿ, ಜನವರಿ 13: ಬೀದಿನಾಯಿ(Stray Dog)ಗಳ ಕಡಿತದಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಸರ್ಕಾರವೇ ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್​ ಹೇಳಿದೆ. ಬೀದಿ ನಾಯಿಗಳಿಂದ ಮಕ್ಕಳು ಮತ್ತು ವೃದ್ಧ ಸಾವನ್ನಪ್ಪಿದರೆ ಅಥವಾ ಗಾಯಗೊಂಡರೆ ಯಾರು ಹೊಣೆಗಾರರಾಗಬೇಕು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು. 9 ವರ್ಷದ ಮಗುವಿನ ಸಾವನ್ನು ಉಲ್ಲೇಖಿಸಿ, ನಾಯಿ ಪ್ರಿಯರ ಸಂಘಟನೆಗಳು ಪೋಷಿಸುವ ಬೀದಿ ನಾಯಿಗಳಿಂದ…

Read More

Video: ತನ್ನ ಸ್ನೇಹಿತೆಯ ಜತೆಗೆ ರಸ್ತೆ ದಾಟಲು ಹರಸಾಹಸ ಪಡುತ್ತಿರುವ ವಿದೇಶಿ ಮಹಿಳೆ – Kannada News | Foreign woman says you don’t cross the road in India, you negotiate with destiny 

ಬೆಂಗಳೂರು, ಜನವರಿ 13: ರಸ್ತೆಯ ತುಂಬಾ ಗಿಜಿಗುಟ್ಟುವ ವಾಹನಗಳು, ಒಂದರ ಹಿಂದೆ ಒಂದರಂತೆ ಸಾಲಾಗಿ ಬಂದು ಬಿಟ್ಟರೆ ಮುಗಿದೇ ಹೋಯ್ತು. ಎಷ್ಟೇ ಆರಾಮಾಗಿ ರಸ್ತೆ ದಾಟುವವರು ಒಂದು ಕ್ಷಣ ಕಸಿವಿಸಿಗೊಳ್ಳುತ್ತಾರೆ. ಇನ್ನು ಬೆಂಗಳೂರಿನ (Bengaluru) ಸಂಚಾರ ದಟ್ಟಣೆಯ ನಡುವೆ ರಸ್ತೆ ದಾಡುವ ಬಗ್ಗೆ ಕೇಳಬೇಕೇ. ಇಲ್ಲೊಬ್ಬ ವಿದೇಶಿ ಮಹಿಳೆಯದು (foreign woman) ಇದೇ ರೀತಿಯ ಪರಿಸ್ಥಿತಿ. ವಿದೇಶಿ ಮಹಿಳೆಯೂ ತನ್ನ ಸ್ನೇಹಿತೆಯ ಜತೆಗೆ ಬೆಂಗಳೂರಿನಲ್ಲಿ ಜನದಟ್ಟಣೆಯ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದೇಶಿ ಮಹಿಳೆಯ…

Read More

ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ: ಸಿನಿಮಾ ಸ್ಟೈಲ್​​ನಲ್ಲಿ ನಡೀತು ಹತ್ಯೆ! – Kannada News | Husband Kills Wife After Sabarimala Visit Over Second Marriage Row

ಆರೋಪಿ ಕುಮಾರ್​​ ಮತ್ತು ಮೃತ ಮಹಿಳೆ ರಾಧಾ. ಹಾಸನ, ಜನವರಿ 13: ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ‌ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ರಾಧಾ(40) ಮೃತ ದುರ್ದೈವಿಯಾಗಿದ್ದು, ಶವವನ್ನು ಪತಿ ನದಿಗೆ ಎಸೆದಿದ್ದ ಎನ್ನಲಾಗಿದೆ. ಜನವರಿ 10ರರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ತನ್ನ ಮೇಲೆ ಕುಮಾರ ಅನುಮಾನ…

Read More

ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?: ಹಾಸನದಲ್ಲೊಂದು ಡೆಡ್ಲಿ ಮರ್ಡರ್​​

ಹಾಸನ, ಜನವರಿ 13: ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಪತಿ ಕುಮಾರ್ ತನ್ನ ಮೊದಲ ಪತ್ನಿ ರಾಧಮ್ಮಳನ್ನು ಹತ್ಯೆ ಮಾಡಿರುವ ಘಟನೆ ಸಂಬಂಧ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದ ದಿನವೇ ಕುಮಾರ್, ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ರಾಧಾಳನ್ನು ಕೊಲೆ ಮಾಡಿದ್ದ. ಕುಮಾರ್ ಮತ್ತು ರಾಧಾ ದಂಪತಿಗೆ ವಿಶ್ವಾಸ್ ಎಂಬ ಮಗನಿದ್ದಾನೆ. ಕಳೆದ ಕೆಲ ವರ್ಷಗಳಿಂದ ಪತಿ ಕುಮಾರ್‌ನಿಂದ ರಾಧಾ ಪತ್ಯೇಕ ವಾಸವಿದ್ದು, ಹಾಸನದಲ್ಲಿ ಕೆಲಸ ಮಾಡಿಕೊಂಡು ಸ್ವತಂತ್ರವಾಗಿ ಜೀವನ ನಡೆಸುತ್ತಿದ್ದಳು….

Read More