Category Archives: Blog

Your blog category

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು

ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಮಾಹಿತಿ ಅಪ್ಡೇಟ್​​ ಆಗುತ್ತಿದೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಲಹರಣಕ್ಕೆ ಹೊಸ ದಾರಿ ಕಂಡುಕೊಳ್ಳುವರು – Kannada News | Horoscope 15 February 2026; Dina Rashi Bhavishya Today, Checkout the details here

ಮೇಷ ರಾಶಿ:

ಮುಖಂಡದರಾಗಿ ಕರೆದೊಯ್ಯುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು.

ವೃಷಭ ರಾಶಿ:

ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯಿಂದ ಮನಸ್ಸಿಗೆ ಕಿರಿಕಿರಿ. ಯಾರ ಬಳಿಯೋ ಹಣವನ್ನು ಹೊಂದಿಸಿ ಮಿತ್ರರಿಗೆ ಕೊಡುವಿರಿ. ನಿಮ್ಮ ಬಣ್ಣದ ಮಾತುಗಳು ಕೆಲವು ಅವಧಿಗೆ ಮಾತ್ರ ಸೀಮಿತ. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು.

ಮಿಥುನ ರಾಶಿ:

ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿಕೊಳ್ಳಿ. ನಿಮಗೆ ಬೇಕಾದ ಹಣವು ಸರಿಯಾದ ಸಮಯಕ್ಕೆ ಸಿಗದೆ ಆಂತಕವಾಗುವುದು. ನಿಮ್ಮ ಪಾವಿತ್ರ್ಯಯನ್ನು ಉಳಿಸಿಕೊಳ್ಳಲಾಹದು.‌ ಅಪರಿಚಿತರು ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವರು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ನಿಮಗೆ ಯಾರ ಬೆಂಬಲದಿದ್ದರೂ ಕಾರ್ಯವನ್ನು ಮಾಡುವವರು ನೀವೇ. ಬರಬೇಕಾದ ಪೂರ್ಣವಾಗಿ ಬಾರದು.

ಕರ್ಕಾಟಕ ರಾಶಿ:

ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಿಂದ ಇರುವಿರಿ. ನಿಮ್ಮ ಬಗ್ಗೆ ನಿಮಗೇ ಪೂರ್ಣ ಪ್ರಮಾಣದ ನಂಬಿಕೆ ಸಾಲದು. ನೌಕರರಿಂದ ಕೆಟ್ಟ ಹೆಸರು ಬರಬಹುದು. ಹೂಡಿಕೆಯನ್ನು ಮಾಡಿ ಒತ್ತಡವನ್ನು ಅನುಭವಿಸಬೇಕಾಗುವುದು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಕೃತಜ್ಞೆಯನ್ನು ಅರ್ಪಿಸುವ ಮನೋಭಾವವಿರದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆ ಕಾಣಿಸುವುದು.

ಸಿಂಹ ರಾಶಿ:

ಅಧ್ಯಾತ್ಮದಿಂದ ಏನೋ ಕಲ್ಪನೆಗಳನ್ನು ಮಾಡಿಕೊಳ್ಳುವಿರಿ. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಇಂದು ಸಹೋದರರ ನಡುವೆ ವಾಗ್ವಾದವು ಅಗಲಿದ್ದು ಹಿರಿಯ ಮಧ್ಯಸ್ತಿಕೆಯಿಂದ ಶಾಂತವಾಗುವುದು.

ಕನ್ಯಾ ರಾಶಿ:

ಮನೆಯ ವಾತಾವರಣದಿಂದ ನಿಮ್ಮ ವೃತ್ತಿಯೂ ಸರಿಯಾಗಿರದು.‌ ವ್ಯಾಪರದಿಂದ ಆದ ಲಾಭವು ನಿಮಗೆ ಇನ್ನಷ್ಟು ಉತ್ಸಾಹವನ್ನು ವರ್ಧಿಸುವುದು. ಸಹೋದರಿಯ ವಿವಾಹದ ಜವಾಬ್ದಾರಿಯು ಇರಲಿದೆ. ನಿಮ್ಮ ವ್ರತಕ್ಕೆ ಭಂಗ ಬರುವ ಸಾಧ್ಯತೆ ಇದೆ. ಅಪರಿಚಿತರು ನಿಮ್ಮಿಂದ ಹಣವನ್ನು ಕೇಳಬಹುದು. ಪರರಿಗೆ ನೋವಾಗದಂತೆ ಸ್ಪಂದಿಸುವಿರಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನೆಲ್ಲವನ್ನೂ ಹೇಳುವಿರಿ.

ತುಲಾ ರಾಶಿ:

ಹಳೆಯ ಸಂಬಂಧವು ಮತ್ತೆ ಚಿಗುರಬಹುದು. ಆಕಸ್ಮಿಕವಾಗಿ ಶುಭ ಸಮಾಚಾರವು ಬರಬಹುದು ಎಂಬ ನಿರೀಕ್ಷೆಯು ಸುಳ್ಳಾಗುವುದು. ಏನು ಬೇಕಾದರೂ ಮಾಡಬಹುದು, ಆದರೆ ಏನೂ ಆಗದು. ನಿಮ್ಮ ಮಾತುಗಳು ಖಾರವಾಗುವುದು. ಕೋಪಕ್ಕೆ ಸರಿಯಾದ ಕಾರಣವಿರಲಿ. ನಿಮ್ಮ ಕರ್ಮವೇ ನಿಮಗೆ ಹಿಂದಿರುಗಿ ಬರುವಂತೆ ಕಾಣಿಸುವುದು. ನಿಮ್ಮ ಜವಾಬ್ದಾರಿಯ ಕಾರ್ಯಕ್ಕೆ ಕೆಲವು ಅಡೆತಡೆಗಳು ಬರಬಹುದು.

ವೃಶ್ಚಿಕ ರಾಶಿ:

ಯಾವುದೇ ನಿರೀಕ್ಷೆಯನ್ನು ಇಟ್ಟುಕೊಳ್ಳದೇ ಕರ್ತವ್ಯಪರರಾಗಿ ಕಾರ್ಯವನ್ನು ಮಾಡಿ. ಅನಿರೀಕ್ಷಿತ ಧನಾಗಮನವು ನಿಮ್ಮ ಕಾರ್ಯಗಳಿಗೆ ಸರಿಯಾಗಿ ದೊರೆತಂತೆ ಆಗುವುದು. ಈ ದಿನಗಳಲ್ಲಿ ವ್ಯವಹಾರದಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲದಿದ್ದರೆ, ತಾಳ್ಮೆಯಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ಅಪರಿಚಿತ ಕರೆ ಮನಸ್ಸು ಹಾಳಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ.

ಧನು ರಾಶಿ:

ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ. ಸಿಹಿ ಎಷ್ಟೇ ಇಷ್ಟವಾದರೂ ಮಿತಿಯಲ್ಲಿ ಸೇವಿಸಿದರೆ ಆಪತ್ತಿಲ್ಲ. ನಿಮ್ಮ ಆಸ್ತಿಗೆ ಸಂಬಂಧಿಸಿದ ಕಾರ್ಯಗಳಿಗೆ ಹೆಚ್ಚು ಓಡಾಟವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬಂದರೂ ಅದನ್ನು ನಗಣ್ಯ ಮಾಡುವಿರಿ. ನಿಮ್ಮ ಧಾರ್ಮಿಕ ಶ್ರದ್ಧೆಗೆ ಇನ್ನಷ್ಟು ಬಲವು ಬರಲಿದೆ. ನಿಮ್ಮ ಪ್ರತಿಭೆಯನ್ನು ತೋರಿಸಲು ಸಂಕೋಚವಾಗುವುದು. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ.

ಮಕರ ರಾಶಿ:

ನೀವು ಯಾವುದನ್ನೂ ಗುಟ್ಟಾಗಿ ಇಡಲಾರಿರಿ. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ನೀವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಖರ್ಚನ್ನು ನಿಮ್ಮ ಯೋಜನೆಯು ತೆಗೆದುಕೊಂಡಿದ್ದು ನಿಮಗೆ ಚಿಂತೆಯಾಗಬಹುದು. ಯಾವುದೋ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ. ಕರಕುಶಲ ವಸ್ತುಗಳ ಮಾರಾಟವನ್ನು ನೀವು ಮಾಡಲು ಉತ್ಸಾಹದಿಂದ ಇರುವಿರಿ. ಕಛೇರಿಯ ಕೆಲಸದಲ್ಲಿ ಮೇಲಧಿಕಾರಿಗಳಿಂದ ಅಕ್ಷೇಪವು ಬರಬಹುದು.

ಕುಂಭ ರಾಶಿ:

ಸೌಂದರ್ಯದಿಂದ ಸ್ತ್ರೀಯರು ಆಕರ್ಷಕವಾಗಿ ಕಾಣುವಿರಿ. ಸಣ್ಣ ವ್ಯವಹಾರಗಳಿಂದ ನೀವು ಹೆಚ್ಚಿನ ಲಾಭವನ್ನು ಪಡೆಯುವಿರಿ. ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ಎಂತಹ ಕಷ್ಟದಲ್ಲಿಯೂ ನೀವು ನಿಮ್ಮವರನ್ನು ಬಿಟ್ಟುಕೊಡಲಾರಿರಿ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ. ನಿಮ್ಮಲ್ಲಿ ಯಾರೂ ಸಾಧಿಸದಿರುವ ಹಾಗೂ ತಾನು ಸಾಧಿಸಿದೆನೆಂಬ ತೃಪ್ತಿ.

ಮೀನ ರಾಶಿ:

ಹೊಸ ಆರ್ಥಿಕ ವ್ಯವಹಾರಕ್ಕೆ ಮೊದಲು ಕಾನೂನಿನ ಜ್ಞಾನ ಅಗತ್ಯ. ವ್ಯಾಪಾರವನ್ನು ನೀವು ವಿಸ್ತಾರ ಮಾಡಿಕೊಳ್ಳುವ ಯೋಜನೆಯನ್ನು ಹೊಂದುವಿರಿ. ಪ್ರಭಾವೀ ವ್ಯಕ್ತಿಗಳ ಬಗ್ಗೆ ನಿಮಗೆ ಮುಜುಗರವಾಗಬಹುದು. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು. ದಾಂಪತ್ಯದಲ್ಲಿ ನಂಬಿಕೆ ಹೆಚ್ಚಾಗುವುದು. ಆದಾಯದ ಮೂಲದಲ್ಲಿ ಬದಲಾವಣೆಯಾಗಲಿದೆ. ಕೆಲವನ್ನು ನೀವು ಬೇಕೆಂದೇ ಬಿಟ್ಟುಕೊಳ್ಳುವಿರಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ವಜ್ರ, ಕರಣ : ತೈತಿಲ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 27 pm, ಇಂದಿನ ಶುಭಾಶುಭ ಕಾಲ : ರಾಹು 17:11 – 18:28, ಯಮಗಂಡ ಕಾಲ 12:39 – 14:06, ಗುಳಿಕ ಕಾಲ 15:33 – 17:01

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 15ರ ದಿನಭವಿಷ್ಯ – Kannada News | February 15th Sunday Horoscope: Birth Numbers 1,2,3 Daily Forecast and Life Advice

ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ, ಶೈಕ್ಷಣಿಕವಾಗಿ ಬಹಳ ಮುಖ್ಯವಾದ ಪರೀಕ್ಷೆಗಳನ್ನು ಇನ್ನೇನು ಎದುರಿಸಲಿದ್ದೀರಿ ಎಂದಾದಲ್ಲಿ ಗ್ರೀನ್ ಅವೆಂಚೂರಿಯನ್ ಸ್ಟೋನ್ ಬಳಸಿ. ಇನ್ನು ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದೀರಿ ಅಂಥವರಿಗೂ ಈ ಸ್ಟೋನ್ ಸೂಕ್ತ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಯಾರು ಹಳೇ ನಾಣ್ಯ, ಅಂಚೆ ಚೀಟಿ ಅಥವಾ ಪುರಾತನ ವಸ್ತುಗಳ ಖರೀದಿ ಹಾಗೂ ಮಾರಾಟವನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುತ್ತೀರೋ ಅಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಸಾಧ್ಯತೆ ಇದೆ. ಕ್ಯಾಟರಿಂಗ್ ಮಾಡುತ್ತಿರುವವರು ದಿಢೀರನೆ ನಾನಾ ಸವಾಲುಗಳನ್ನು ಎದುರಿಸುವಂತಾಗಲಿದೆ. ಕೆಲಸಕ್ಕೆ ಬರುವುದಾಗಿ ಮಾತು ನೀಡಿದ್ದಂಥ ವ್ಯಕ್ತಿಗಳು ಏಕಾಏಕಿ ತಮ್ಮಿಂದ ಬರುವುದಕ್ಕೆ ಸಾಧ್ಯವಿಲ್ಲ ಎಂದುಬಿಡಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಮಸಾಲೆಯುಕ್ತ ಆಹಾರ ಪದಾರ್ಥಗಳಿಂದ ಈ ದಿನ ಸಾಧ್ಯವಾದಷ್ಟೂ ದೂರದಲ್ಲಿ ಇರುವುದು ಕ್ಷೇಮ. ಬಾಯಿ ರುಚಿಗೆ ಬಿದ್ದಲ್ಲಿ ಹೊಟ್ಟೆ ನೋವು, ಹೊಟ್ಟೆಯುಬ್ಬರ ಅಥವಾ ಹೊಟ್ಟೆಯುರಿ ಇಂಥ ಆರೋಗ್ಯ ಸಮಸ್ಯೆಗಳಿಂದ ಬಳಲುವಂತೆ ಆಗಲಿದೆ. ಈ ಹಿಂದೆ ಬಹಳ ಹಣ ಖರ್ಚು ಮಾಡಿ, ಖರೀದಿಸಿ ತಂದಂಥ ಸಲಕರಣೆ ಅಥವಾ ಉಪಕರಣಗಳು ಏನಾದರೊಂದು ಸಮಸ್ಯೆ ತರಬಹುದು. ತಕ್ಷಣಕ್ಕೆ ಇದಕ್ಕೆ ಏನು ಪರಿಹಾರ ಎಂಬುದು ತಿಳಿಯದೆ ಬೇಸರ ಪಡುವಂತೆ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಏಕ ಕಾಲಕ್ಕೆ ಹಲವು ಕೆಲಸಗಳನ್ನು ನಿಗಾ ಮಾಡಬೇಕಾದ ಸನ್ನಿವೇಶ ಎದುರಾಗಲಿದೆ. ಇದು ಒತ್ತಡವಾಗಿ ಮಾರ್ಪಡಲಿದೆ. ಇನ್ನು ಮಕ್ಕಳಿರುವವರಿಗೆ ಅವರ ಆರೋಗ್ಯ ಸ್ಥಿತಿಯು ಏಕಾಗ್ರತೆಯಿಂದ ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲದಂಥ ಸ್ಥಿತಿಯನ್ನು ಸೃಷ್ಟಿ ಮಾಡಲಿವೆ. ನೀವು ಬಹಳ ಆಸ್ಥೆ ವಹಿಸಿ, ಶ್ರಮ ಪಟ್ಟು ಮಾಡಿದ ಪ್ರಾಜೆಕ್ಟ್- ಕಾರ್ಯಗಳ ಬಗ್ಗೆ ಇತರರು ಉದಾಸೀನ- ಉಡಾಫೆಯಿಂದ ಮಾತನಾಡಿದರು ಎಂಬುದು ಸಿಟ್ಟಿಗೆ ಕಾರಣವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Published On – 12:15 am, Sun, 15 February 26

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 15ರ ದಿನಭವಿಷ್ಯ

ನಿಮಗೆ ಹತ್ತಿರದಲ್ಲಿ ಇರುವಂಥ ದಕ್ಷಿಣಾಮೂರ್ತಿ ದೇವಾಲಯಕ್ಕೆ ಹೋಗಿಬನ್ನಿ. ತಪ್ಪು ತಿಳಿವಳಿಕೆಯಿಂದ ದೂರವಾಗಿರುವಂಥ ಸ್ನೇಹ- ಸಂಬಂಧಗಳು ಮತ್ತೆ ಸರಿಹೋಗುವಂಥ ಅವಕಾಶಗಳು ಉದ್ಭವ ಆಗುತ್ತವೆ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದು ಕೂಡ ನಿವಾರಣೆ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಸಾಮರ್ಥ್ಯವೇ ಕುಂದಿದೆಯಾ ಅಥವಾ ಆಲೋಚನೆ ಮಾಡುವ ವಿಧಾನದಲ್ಲಿ ಹಿಂದುಳಿಯುತ್ತಿದ್ದೀರಾ ಎಂದೆಲ್ಲ ಯೋಚನೆ ಮೂಡುವುದಕ್ಕೆ ಶುರುವಾಗಲಿದೆ. ಬಹಳ ದಿವಸದ ಹಿಂದೆ ನಿಮಗೆ ಮಾಡಿ ಮುಗಿಸಲು ಹೇಳಿದಂಥ ಮುಖ್ಯವಾದ ಕೆಲಸವೊಂದನ್ನು ಮರೆತ ಕಾರಣಕ್ಕೆ ಮುಜುಗರ ಎದುರಿಸುವಂಥ ಪರಿಸ್ಥಿತಿ ಬರಲಿದೆ. ಯಾರು ವೈದ್ಯಕೀಯ ವೃತ್ತಿಯಲ್ಲಿ ಇರುತ್ತೀರೋ ಅಂಥವರು ಸ್ವಂತ ಕ್ಲಿನಿಕ್ ಅಥವಾ ಆಸ್ಪತ್ರೆ ಶುರು ಮಾಡುವ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಉದ್ಯೋಗಕ್ಕಾಗಿ ಬಹಳ ಸಮಯದಿಂದ ಪ್ರಯತ್ನವನ್ನು ಪಡುತ್ತಿರುವವರು ತಮ್ಮ ತೀರ್ಮಾನವನ್ನು ಬದಲಾಯಿಸಿಕೊಂಡು ಸ್ವಂತ ಉದ್ಯಮ- ವ್ಯವಹಾರವನ್ನು ಶುರು ಮಾಡುವ ಬಗ್ಗೆಯೋ ಅಥವಾ ಕಮಿಷನ್ ಆಧಾರದಲ್ಲಿ ಆದಾಯ ತರುವಂಥದ್ದನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶಗಳಿವೆ. ಕೃಷಿಕರಿಗೆ ಈಗ ಇರುವುದರ ಜೊತೆಗೆ ಹೆಚ್ಚುವರಿಯಾಗಿ ಭೂಮಿಯನ್ನು ಭೋಗ್ಯಕ್ಕೋ ಸ್ವಂತಕ್ಕೋ ಖರೀದಿಸಿ ಹೊಸ ಬೆಳೆಗಳನ್ನು ಬೆಳೆಯಬೇಕು ಎಂಬ ಆಲೋಚನೆ ಮೂಡಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಕಾರಣವೇ ಇಲ್ಲದೆ ತುಂಬ ಸಂತೋಷವಾಗಿ ಇರುವಂತೆ ನಿಮಗೆ ಎನಿಸಲಿದೆ. ಧಾರ್ಮಿಕ ಪ್ರವಚನಕಾರರು, ಜ್ಯೋತಿಷಿಗಳು, ದೇವಾಲಯದ ಪಾರುಪತ್ತೇದಾರರು ಆಗಿರುವಂಥವರಿಗೆ ಸನ್ಮಾನ, ಗೌರವಗಳು ದೊರೆಯುವ ದಿನ ಇದಾಗಿರಲಿದೆ. ಈ ಹಿಂದೆ ನೀವು ಶ್ರಮಪಟ್ಟು ಉಳಿಸಿಕೊಂಡಂಥ ಸ್ಥಳವೋ ಇತರರ ಜೊತೆಗೆ ವಾದ ಹೂಡಿಯಾದರೂ ಗಳಿಸಿಕೊಂಡಂಥ ಸ್ಥಾನ-ಮಾನದ ಹೆಚ್ಚುಗಾರಿಕೆ ಏನು ಎಂಬ ಬಗ್ಗೆ ಇತರರಿಗೆ ಗೌರವ ಮೂಡಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ

ಈ ದಿನ ರುದ್ರ- ಚಮಕದ ಶ್ರವಣವನ್ನು ಮಾಡಿ. ಈಶ್ವರನಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ನಿಮ್ಮನ್ನು ಕಾಡುತ್ತಿರುವ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ನಿಮ್ಮ ಇನ್ ಟ್ಯೂಷನ್ ಜಾಗ್ರತೆ ಆಗುವುದರಿಂದ ಹಲವು ರೀತಿಯ ಅನುಕೂಲಗಳಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಇತರರ ಕಣ್ಣಿಗೆ ಅಥವಾ ದೃಷ್ಟಿ- ಆಲೋಚನೆಗೆ ದಕ್ಕದ ಕೆಲವು ಸಂಗತಿ-ವಸ್ತು, ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಎಷ್ಟು ಬೇಗ ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಪ್ರತಿಕ್ರಿಯೆ ನೀಡುತ್ತೀರೋ ಅಷ್ಟು ಒಳ್ಳೆಯದು. ಇಷ್ಟು ಸಮಯ ನೀವು ಯಾವುದನ್ನು ವ್ಯರ್ಥ ಹೂಡಿಕೆ ಅಂದುಕೊಂಡಿದ್ದಿರೋ ಅದರಲ್ಲಿ ನಿಮ್ಮ ಅಸಲು ದೊರೆಯಬಹುದು ಅಥವಾ ಹಾಕಿದ್ದ ಅಸಲಿನ ಮೊತ್ತಕ್ಕಿಂತ ಸ್ವಲ್ಪ ಹೆಚ್ಚು ಕೈ ಸೇರುವ ಸಾಧ್ಯತೆ ಗೋಚರಿಸಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನನಗೆ ಯಾರ ಸಹಾಯವೂ ಬೇಡ ಎಂದು ನಿಮ್ಮೆದುರು ಮಾತನಾಡಿದ್ದ ವ್ಯಕ್ತಿ ಈಗ ತಾನು ಬಹಳ ಕಷ್ಟದಲ್ಲಿ ಇರುವುದಾಗಿಯೂ ಈ ಹಿಂದೆ ತಾನಾಡಿದ ಮಾತುಗಳನ್ನು ಮರೆತು ಸಹಾಯ ಮಾಡುವಂತೆಯೂ ಕೇಳಿಕೊಂಡು ಬರಲಿದ್ದಾರೆ. ಇನ್ನು ನಿಮ್ಮ ಉಳಿತಾಯದ ಹಣವನ್ನು ತೆಗೆದುಕೊಂಡು, ಅದನ್ನು ಷೇರು ಮಾರುಕಟ್ಟೆಯಲ್ಲಿನ ಷೇರುಗಳ ಮೇಲೆಯೋ ಅಥವಾ ಮ್ಯೂಚುವಲ್ ಫಂಡ್ ಮೇಲೋ ಹೂಡಿಕೆ ಮಾಡಬೇಕು ಎಂದು ಗಂಭೀರವಾಗಿ ಆಲೋಚನೆಯನ್ನು ಆರಂಭಿಸಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಲೈಬ್ರರಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಜವಾಬ್ದಾರಿಗಳನ್ನು ವಹಿಸಬಹುದು. ಬಾಡಿಗೆ ಮನೆಯಲ್ಲಿ ವಾಸ ಇರುವಂಥವರು ಈಗ ಇರುವ ಮನೆಯನ್ನು ಬಿಟ್ಟು ಬೇರೆ ಕಡೆ ಹೋಗಬೇಕು ಎಂದುಕೊಳ್ಳಲಿದ್ದೀರಿ. ಮಕ್ಕಳ ಶಿಕ್ಷಣ ಹಾಗೂ ಶಾಲೆ ಸಲುವಾಗಿ ಹಣ- ಸಮಯವನ್ನು ಮೀಸಲಿಟ್ಟು ಕೆಲವು ಹೊಸ ಕೆಲಸಗಳನ್ನು ಶುರು ಮಾಡಲಿದ್ದೀರಿ. ದಿನದ ಕೊನೆಗೆ ಸಮಾಧಾನ ಆಗುವ ಕೆಲವು ಬೆಳವಣಿಗೆಗಳು ಆಗಲಿವೆ.

ಲೇಖನ- ಸ್ವಾತಿ ಎನ್.ಕೆ.

Source link

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಕುಣಿಗಲ್​ನಲ್ಲಿ ಪತ್ತೆ – Kannada News | Hassan Missing Woman Found Alive in Kunigal: Big Twist in Case Solved

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರ ನಿದ್ದೆಗೆಡಿಸಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸ್​ ಮೂಲಗಳು ಖಚಿತಪಡಿಸಿವೆ.

ಮತ್ತಷ್ಟು ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

ಪ್ರೇಮಿಗಳ ದಿನವೇ ದುರಂತ; ಕಾರಿನೊಳಗೆ ಪ್ರೇಯಸಿಯನ್ನು ಕೊಂದು ತಾನೂ ಶೂಟ್ ಮಾಡಿಕೊಂಡ ಪ್ರೇಮಿ – Kannada News | Man Kills Girlfriend Then shoots himself Inside Parked Car In Noida on Valentine’s Day

ನೋಯ್ಡಾ, ಫೆಬ್ರವರಿ 14: ಉತ್ತರ ಪ್ರದೇಶದ ನೋಯ್ಡಾದಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಪ್ರೇಯಸಿಯ ಮೇಲೆ ಗುಂಡು (Firing) ಹಾರಿಸಿ ಕೊಂದು, ಲಾಕ್ ಮಾಡಿದ ಕಾರಿನೊಳಗೆ ತನಗೆ ತಾನೇ ಶೂಟ್ ಮಾಡಿಕೊಂಡಿದ್ದಾನೆ. ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಪತ್ತೆಯಾಗಿವೆ. ಇಂದು ಬೆಳಿಗ್ಗೆ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಈ ಸಾವಿನ ವಿಷಯ ಗೊತ್ತಾಗಿದೆ. ಆ ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು.

ಮೃತರನ್ನು ದೆಹಲಿಯ ತ್ರಿಲೋಕಪುರಿಯ ನಿವಾಸಿ 32 ವರ್ಷದ ಸುಮಿತ್ ಮತ್ತು ನೋಯ್ಡಾದ ಸೆಕ್ಟರ್ 101ರ ನಿವಾಸಿ 26 ವರ್ಷದ ರೇಖಾ ಎಂದು ಗುರುತಿಸಲಾಗಿದೆ. ಅವರ ಕುಟುಂಬಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅವರಿಬ್ಬರೂ ಶುಕ್ರವಾರದಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದ್ದು, ಅವರ ಕುಟುಂಬಸ್ಥರು ನಾಪತ್ತೆಯಾದ ಬಗ್ಗೆ ದೂರುಗಳನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ನೋಯ್ಡಾದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತೆ ಮನಿಷಾ ಸಿಂಗ್ ಅವರ ಪ್ರಕಾರ, ಇಬ್ಬರ ತಲೆಗೂ ಗುಂಡೇಟಿನ ಗಾಯಗಳಾಗಿದ್ದು, ಆ ವ್ಯಕ್ತಿಯ ಕೈಯಲ್ಲಿ ಒಂದು ಪಿಸ್ತೂಲ್ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಿಂದ ಇದು ಕೊಲೆ-ಆತ್ಮಹತ್ಯೆಯ ಪ್ರಕರಣ ಎಂದು ತಿಳಿದುಬಂದಿದೆ. ಆ ವ್ಯಕ್ತಿ ಮೊದಲು ಮಹಿಳೆಯನ್ನು ಕೊಂದು ತನಗೆ ತಾನೇ ಶೂಟ್ ಮಾಡಿಕೊಂಡಿದ್ದಾನೆ.

ಅವರಿಬ್ಬರೂ ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದರು. ಮದುವೆಯ ಕಾರಣಕ್ಕೆ ಗಲಾಟೆ ನಡೆದಿರಬಹುದು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್ – Kannada News | T20 World Cup 2026: Markram’s Record Half Century Powers South Africa win Over New Zealand

ಟಿ20 ವಿಶ್ವಕಪ್ 2026 (T20 World Cup 2026) ರ 24 ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ (South Africa vs New Zealand) ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಒಟ್ಟು 175 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ನಾಯಕ ಐಡೆನ್ ಮಾರ್ಕ್ರಾಮ್ ಅವರ ದಾಖಲೆಯ ಅರ್ಧಶತಕದ ನೆರವಿನಿಂದ 17.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

ಮಧ್ಯಮ ಓವರ್​ಗಳಲ್ಲಿ ಎಡವಿದ ಕಿವೀಸ್

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಉತ್ತಮ ಆರಂಭವನ್ನು ನೀಡಿತು. ಟಿಮ್ ಸೀಫರ್ಟ್ ಮತ್ತು ಫಿನ್ ಅಲೆನ್ ಆರಂಭಿಕರಾಗಿ 33 ರನ್‌ಗಳ ಜೊತೆಯಾಟವನ್ನು ನೀಡಿದರು. ಆದಾಗ್ಯೂ ಟಿಮ್ ಸೀಫರ್ಟ್ ಮತ್ತು ರಚಿನ್ ರವೀಂದ್ರ ಇಬ್ಬರೂ ತಲಾ 13 ರನ್ ಗಳಿಸಿ ಔಟಾದರು. ಅಲೆನ್ ಕೂಡ 31 ರನ್​ಗಳಿಗೆ ಸುಸ್ತಾದರೆ ಗ್ಲೆನ್ ಫಿಲಿಪ್ಸ್ 1 ರನ್ ಗಳಿಸಿ ಔಟಾದರು. ನಂತರ ಮಾರ್ಕ್ ಚಾಪ್ಮನ್ ಮತ್ತು ಡ್ಯಾರೆಲ್ ಮಿಚೆಲ್ ನಿರ್ಣಾಯಕ ಪಾಲುದಾರಿಕೆಯನ್ನು ನೀಡಿದರು. ಇವರಿಬ್ಬರು 44 ಎಸೆತಗಳಲ್ಲಿ ಐದನೇ ವಿಕೆಟ್‌ಗೆ 74 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು

ಮಾರ್ಕೊ ಯಾನ್ಸೆನ್ 4 ವಿಕೆಟ್

ಚಾಪ್‌ಮನ್ 48 ಮತ್ತು ಡ್ಯಾರೆಲ್ 32 ರನ್ ಗಳಿಸಿದರೆ, ನಾಯಕ ಮಿಚೆಲ್ ಸ್ಯಾಂಟ್ನರ್ 4 ರನ್ ಗಳಿಸಿ ಔಟಾದರು. ಜೇಮ್ಸ್ ನೀಶಮ್ ಮತ್ತು ಮ್ಯಾಟ್ ಹೆನ್ರಿ ಎಂಟನೇ ವಿಕೆಟ್‌ಗೆ 20 ಎಸೆತಗಳಲ್ಲಿ 30 ರನ್‌ಗಳ ಅಜೇಯ ಪಾಲುದಾರಿಕೆಯನ್ನು ಹಂಚಿಕೊಂಡರು. ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್ 4 ವಿಕೆಟ್ ಪಡೆದರೆ, ಲುಂಗಿ ಎನ್‌ಗಿಡಿ, ಕೇಶವ್ ಮಹಾರಾಜ್ ಮತ್ತು ಕಾರ್ಬಿನ್ ಬಾಷ್ ತಲಾ 1 ವಿಕೆಟ್ ಪಡೆದರು.

IND vs PAK Probable Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಖಚಿತ

ಐಡೆನ್ ಮಾರ್ಕ್ರಾಮ್ ದಾಖಲೆಯ ಅರ್ಧಶತಕ

176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಸ್ಫೋಟಕ ಆರಂಭ ಸಿಕ್ಕಿತು. ಅದರಲ್ಲೂ ನಾಯಕ ಐಡೆನ್ ಮಾರ್ಕ್ರಾಮ್ 44 ಎಸೆತಗಳಲ್ಲಿ ಅಜೇಯ 86 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಮಾತ್ರವಲ್ಲದೆ ಮಾರ್ಕ್ರಾಮ್ ಟಿ20 ವಿಶ್ವಕಪ್‌ನಲ್ಲಿ ಆಫ್ರಿಕಾ ಪರ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಉಳಿದಂತೆ ಡೇವಿಡ್ ಮಿಲ್ಲರ್ ಕೂಡ 17 ಎಸೆತಗಳಲ್ಲಿ ಅಜೇಯ 24 ರನ್ ಗಳಿಸಿದರು. ಕ್ವಿಂಟಾನ್ ಡಿ ಕಾಕ್ 20, ರಿಯಾನ್ ರಿಕಲ್ಟನ್ 21 ಹಾಗೂ ಡೆವಾಲ್ಡ್ ಬ್ರೆವಿಸ್ 21 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊನೆಗೂ ಸಿಕ್ತು ‘ರಿಚರ್ಡ್ ಆಂಟೊನಿ’ ಸಿನಿಮಾ ಅಪ್​​ಡೇಟ್, ಶೂಟಿಂಗ್ ಯಾವಾಗ ಶುರು? – Kannada News | Pramod Shetty said Rakshit Shetty will start Richard Antony movie shoot soon

ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ‘ರಿಚರ್ಡ್ ಆಂಟೊನಿ’ ಸಹ ಒಂದು. ರಕ್ಷಿತ್ ಶೆಟ್ಟಿ (Rakshit Shetty) ಅವರು ನಿರ್ದೇಶಿಸಲಿರುವ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಣೆಯಾಗಿ ವರ್ಷಗಳು ಕಳೆದಿವೆ. ಆದರೆ ಸಿನಿಮಾದ ಯಾವುದೇ ಅಪ್​​​ಡೇಟ್ ಹೊರಬಿದ್ದಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ‘ರಿಚರ್ಡ್ ಆಂಟೊನಿ’ ಸಿನಿಮಾದ ಕತೆ ಮತ್ತು ಚಿತ್ರಕತೆ ಹೆಣೆಯುವಲ್ಲಿ ರಕ್ಷಿತ್ ಶೆಟ್ಟಿ ಬ್ಯುಸಿ ಆಗಿದ್ದಾರೆ. ಸಿನಿಮಾದ ಕತೆಯಲ್ಲಿ ಬ್ಯುಸಿ ಆಗಿರುವ ಕಾರಣಕ್ಕೆ ರಕ್ಷಿತ್ ಶೆಟ್ಟಿ ಹೊರಗೆಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಆದರೆ ಇದೀಗ ಕೊನೆಗೂ ಸಿನಿಮಾದ ಬಗ್ಗೆ ದೊಡ್ಡ ಅಪ್​ಡೇಟ್ ಒಂದು ದೊರೆತಿದೆ.

ಶೆಟ್ಟಿ ಗ್ಯಾಂಗ್​​ನಲ್ಲಿ ಒಬ್ಬರಾಗಿರುವ ಪ್ರಮೋದ್ ಶೆಟ್ಟಿ ಇತ್ತೀಚೆಗೆ ತಮ್ಮ ನಟನೆಯ ‘ಶೇಷ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ‘ರಿಚರ್ಡ್ ಆಂಟೊನಿ’ ಸಿನಿಮಾದ ಬಗ್ಗೆ ಮಾತನಾಡಿದರು. ‘ರಿಚರ್ಡ್ ಅಂಟೊನಿ’ ಸಿನಿಮಾದ ಚಿತ್ರಕತೆ ರೆಡಿ ಆಗುತ್ತಿದೆ. ನಾವು ಶೀಘ್ರವೇ ಪ್ರೀ ಪ್ರೊಡಕ್ಷನ್ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೇವೆ. ಇನ್ನು ಎರಡು ಮೂರು ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಸಹ ಪ್ರಾರಂಭ ಆಗಲಿದೆ’ ಎಂದಿದ್ದಾರೆ ಪ್ರಮೋದ್ ಶೆಟ್ಟಿ. ಮಾತ್ರವಲ್ಲದೆ, ‘ರಿಚರ್ಡ್ ಆಂಟೊನಿ’ ಸಿನಿಮಾನಲ್ಲಿ ತಾವು ಸಹ ರಕ್ಷಿತ್ ಶೆಟ್ಟಿ ಜೊತೆಗೆ ನಟಿಸುತ್ತಿರುವುದಾಗಿಯೂ ಹೇಳಿದ್ದಾರೆ.

ಇದನ್ನೂ ಓದಿ:ನೇಮೋತ್ಸವದಲ್ಲಿ ಭಕ್ತಿಯಿಂದ ಪಾಲ್ಗೊಂಡ ನಟ ರಕ್ಷಿತ್ ಶೆಟ್ಟಿ

ಶೆಟ್ಟಿ ಗ್ಯಾಂಗ್​​ನ ಎಲ್ಲ ಸದಸ್ಯರು ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಮೋದ್ ಶೆಟ್ಟಿ, ‘ರಾಜ್‌ ಬಿ ಶೆಟ್ಟಿ ಅವರದ್ದು ಪ್ರತಿ ತಿಂಗಳು ಒಂದೊಂದು ಸಿನಿಮಾ ಬಿಡುಗಡೆ ಆಗ್ತಿದೆ. ಮಲಯಾಳಂ ಚಿತ್ರರಂಗದಲ್ಲೂ ಬ್ಯುಸಿ ಆಗಿದ್ದಾನೆ. ರಿಷಬ್‌ಗೆ ತೆಲುಗು ಚಿತ್ರರಂಗದಲ್ಲಿ ಆಫರ್‌ ಇರುವುದರಿಂದ ಅಲ್ಲಿ ಬ್ಯುಸಿ ಇದ್ದಾನೆ. ರಕ್ಷಿತ್‌, ಕತೆ ಬರೆದುಕೊಂಡು ಕೂತಿದ್ದ, ಇನ್ನೇನು ಮೂರು ತಿಂಗಳಲ್ಲಿ ಶೂಟಿಂಗ್‌ ಶುರು ಮಾಡ್ತಾನೆ. ಎಲ್ಲರೂ ವೈಯಕ್ತಿಕವಾಗಿ ಬ್ಯುಸಿಯಿದ್ದಾರೆ. ಪುರುಸೊತ್ತಿದ್ದಾಗ ಸಿಗ್ತೀವಿ. ಎಲ್ಲಾ ಸಿನಿಮಾ ಕೂಡ ಒಟ್ಟಿಗೆ ಮಾಡ್ತಾ ಇದ್ರೆ ಜನಕ್ಕೆ ಬೋರ್‌ ಆಗುತ್ತೆ’ ಎಂದಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ರಕ್ಷಿತ್ ಶೆಟ್ಟಿ ಕಾಣೆಯಾಗಿದ್ದಾರೆ. ‘ರಿಚರ್ಡ್ ಆಂಟೊನಿ’ ಸಿನಿಮಾವನ್ನು ಅವರು ಘೋಷಿಸಿ ವರ್ಷಗಳೇ ಕಳೆದಿವೆ. ಸಿನಿಮಾದ ಘೋಷಣೆ ಆದಾಗ ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡುವುದಾಗಿ ಹೇಳಿತ್ತು. ಆದರೆ ಚಿತ್ರಕತೆ ತಡವಾದ ಕಾರಣದಿಂದಾಗಿ ಎಲ್ಲವೂ ಅದಲು-ಬದಲಾಗಿದೆ ಎನ್ನಲಾಗುತ್ತಿದೆ. ಇನ್ನು ‘ರಿಚರ್ಡ್ ಆಂಟೊನಿ’ ಸಿನಿಮಾ, ರಕ್ಷಿತ್ ಶೆಟ್ಟಿ ಅವರೇ ನಿರ್ದೇಶಿಸಿದ್ದ ‘ಉಳಿದವರು ಕಂಡಂತೆ’ ಸಿನಿಮಾದ ಪ್ರೀಕ್ವೆಲ್ ಆಗಿದೆ. ‘ಉಳಿದವರು ಕಂಡಂತೆ’ ಸಿನಿಮಾದ ರಿಚ್ಚಿ ಅಲಿಯಾಸ್ ರಿಚರ್ಡ್ ಆಂಟೊನಿ ಪಾತ್ರದ ಕತೆಯನ್ನು ‘ರಿಚರ್ಡ್ ಆಂಟೊನಿ’ ಸಿನಿಮಾ ಒಳಗೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ – Kannada News | Former CM BS Yediyurappa Receives TV9 Lifetime Achievement Award 2026 at Nava Nakshatra Sanmana

ಬೆಂಗಳೂರು, ಫೆಬ್ರವರಿ 14: ಟಿವಿ9 ನವ ನಕ್ಷತ್ರ ಪ್ರಶಸ್ತಿ 2026 (Nava Nakshatra Award 2026) ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೀವಮಾನ ಶ್ರೇಷ್ಠ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ವೇಳೆ ತಮ್ಮ 55 ವರ್ಷಗಳ ಸಾರ್ವಜನಿಕ ಜೀವನವನ್ನು ಸ್ಮರಿಸಿದ ಯಡಿಯೂರಪ್ಪ, ಈ ಗೌರವವನ್ನು ಕರ್ನಾಟಕದ ಜನತೆಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಸಮರ್ಪಿಸಿದರು. ಅಧಿಕಾರವಿರಲಿ, ಇಲ್ಲದಿರಲಿ, ರೈತರು ಮತ್ತು ಶೋಷಿತರ ಪರವಾಗಿ ದುಡಿಯುವ ತಮ್ಮ ಸಂಕಲ್ಪವನ್ನು ಅವರು ಪುನರುಚ್ಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಟಿವಿ9 ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. ತಮ್ಮ 55 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಸಾಧನೆ ಮಾಡಿರುವುದಕ್ಕೆ ನಾಡಿನ ಜನರ ಹಾಗೂ ರೈತರ ಪ್ರೀತಿ, ಅಭಿಮಾನ ಮತ್ತು ಆಶೀರ್ವಾದವೇ ಕಾರಣ ಎಂದರು. ಜೀವನದ ಸಿಂಹಾವಲೋಕನ ಮಾಡಿಕೊಂಡಾಗ ತಮ್ಮ ಶ್ರಮ ಜೀವನದ ಬಗ್ಗೆ ತೃಪ್ತಿ ಮೂಡಿದೆ ಎಂದರು. ಆರ್‌ಎಸ್‌ಎಸ್ ಸ್ವಯಂಸೇವಕನಾಗಿ, ಜನಸಂಘ ಕಾರ್ಯಕರ್ತನಾಗಿ, ಪುರಸಭಾ ಸದಸ್ಯನಾಗಿ, ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಜನಬೆಂಬಲವೇ ತಮ್ಮ ಶ್ರೀರಕ್ಷೆಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರತಿ ವರ್ಷದಂತೆ ಈ ಬಾರಿಯೂ ಟಿವಿ9 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಸಾಧಕರನ್ನು ಸನ್ಮಾನಿಸಿದೆ. ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮತ್ತು ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link