ಬೆಂಗಳೂರು, ಮೇ 16: ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಾಯಚೂರು, ಮೇ 16: ಕಾವಿ ಬಟ್ಟೆ ಹಾಕಿಕೊಂಡು, ಸಾಧು ಸಂತರಂತೆ ಬಂದು ನಿಮ್ಮನ್ನ ಹಾಡಿ ಹೊಗಳುವವರನ್ನು ನಂಬುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಯಚೂರಿನ (Raichur) ಸಿಂಧನೂರು ನಗರದಲ್ಲಿ ನಡೆದ ಘಟನೆಯೇ ಸಾಕ್ಷಿ. ನಗರದಲ್ಲಿ ಸಾಧು ಸಂತರ ಸೋಗಿನಲ್ಲಿ ಬಂದು, ಹೂವುಗಳನ್ನು ನೀಡಿ, ಸಮ್ಮೋಹನ (Hypnotize) ಮಾಡುವ ಮೂಲಕ ಸಾರ್ವಜನಿಕರ ಹಣ ಮತ್ತು ಚಿನ್ನಾಭರಣಗಳನ್ನು ದೋಚುತ್ತಿರುವ ಖದೀಮರ ಕೃತ್ಯ ಈಗ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಸಿಕ್ಕಿದೆ. ಧರ್ಮ, ಭಕ್ತಿ ಮತ್ತು ಸತ್ಕಾರದ ಹೆಸರಿನಲ್ಲಿ ಜನರನ್ನು ಮಂಕುಬೂದಿ ಎರಚಿ ಲೂಟಿ ಮಾಡುವ ‘ಖದೀಮ ಸಾಧುಗಳ’ ಗ್ಯಾಂಗ್ ಈಗ ಜಿಲ್ಲೆಯಲ್ಲಿ ತೀವ್ರ ಆತಂಕ ಮೂಡಿಸಿದೆ.
ಹೂವಿನ ವಾಸನೆ ತೋರಿಸಿ ಮೆಡಿಕಲ್ ಮಾಲೀಕನಿಗೆ ಮಂಕುಬೂದಿ ಎರಚಿದ ವಂಚಕರು.
ಹತ್ತು ಸಾವಿರ ನಗದು, ಬಂಗಾರದ ಉಂಗುರ ದೋಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ.
ಸತ್ಕಾರ ಮಾಡಿದ್ದಕ್ಕೆ ಸಿಕ್ಕಿದ್ದೇನು?
ಸಿಂಧನೂರು ನಗರದ ಪ್ರಮುಖ ರಸ್ತೆಯಲ್ಲಿರುವ ‘ಸಾಯಿ ಮೆಡಿಕಲ್ಸ್’ ಫಾರ್ಮಸಿಗೆ ಸಾಧುವೊಬ್ಬರು ಆಗಮಿಸಿದ್ದರು. ಬಿಸಿಲಿನ ಬೇಗೆಯಿಂದ ಬಳಲಿದ್ದ ಆ ಸಾಧು, ಕುಡಿಯಲು ನೀರು ಕೇಳಿದ್ದಾರೆ. ಮೆಡಿಕಲ್ ಅಂಗಡಿಯ ಮಾಲೀಕರಾದ ವಿಷ್ಣುದತ್ತು ಮಾನವೀಯತೆ ಮತ್ತು ಸಾಧುಗಳ ಮೇಲಿನ ಭಕ್ತಿಯಿಂದ ತಕ್ಷಣವೇ ಫ್ರಿಡ್ಜ್ನಿಂದ ತಣ್ಣನೆಯ ನೀರನ್ನು ತಂದುಕೊಟ್ಟು ಸತ್ಕರಿಸಿದ್ದಾರೆ. ನೀರು ಕುಡಿದ ಸಾಧು, ಮಾಲೀಕರ ಭಕ್ತಿಗೆ ಮೆಚ್ಚುಗೆ ಸೂಚಿಸುವಂತೆ ನಟಿಸಿದ್ದಾನೆ. ನಿನಗೆ ಮತ್ತು ನಿನ್ನ ಮಕ್ಕಳಿಗೆ ಒಳಿತಾಗಲಿದೆ. ನಿಮ್ಮ ಸಂಕಷ್ಟಗಳೆಲ್ಲವೂ ದೂರಾಗಲಿವೆ ಎಂದು ಹರಸುತ್ತಾ ತನ್ನ ಕೈಯಲ್ಲಿದ್ದ ಎರಡು ಹೂವುಗಳನ್ನು ವಿಷ್ಣುದತ್ತು ಅವರ ಕೈಗೆ ನೀಡಿದ್ದಾನೆ.
ಹೂವು ಮೂಸುತ್ತಿದ್ದಂತೆ ಏನಾಯ್ತು?
ಸಾಧು ನೀಡಿದ ಆ ಎರಡು ಹೂವುಗಳ ವಾಸನೆ ತಗುಲಿದ ಕೆಲವೇ ಕ್ಷಣಗಳಲ್ಲಿ ಮಾಲೀಕ ಪ್ರಜ್ಞೆ ತಪ್ಪಿದವರಂತೆ, ಮಂಕು ಬಡಿದ ಸ್ಥಿತಿಗೆ ತಲುಪಿದ್ದಾರೆ. ತಮಗೆ ಅರಿವಿಲ್ಲದಂತೆಯೇ ಸಮ್ಮೋಹನಕ್ಕೆ ಒಳಗಾದ ಮಾಲೀಕರು, ಖುದ್ದು ತಾವೇ ತಮ್ಮ ಜೇಬಿನಲ್ಲಿದ್ದ 10 ಸಾವಿರ ರೂಪಾಯಿ ನಗದು ಹಣ ಮತ್ತು ಕೈಯಲ್ಲಿದ್ದ ಬೆಲೆಬಾಳುವ ಬಂಗಾರದ ಉಂಗುರವನ್ನು ಬಿಚ್ಚಿ ಆ ಖದೀಮ ಸಾಧುವಿನ ಕೈಗೆ ಕೊಟ್ಟಿದ್ದಾರೆ. ಹಣ ಮತ್ತು ಚಿನ್ನವನ್ನು ಲೂಟಿ ಮಾಡಿದ ಆ ಸಾಧು, ಅಲ್ಲಿಂದ ಕ್ಷಣಾರ್ಧದಲ್ಲಿ ಕಾಲ್ಕಿತ್ತಿದ್ದಾನೆ. ಕೆಲ ಹೊತ್ತಿನ ಬಳಿಕ ವಿಷ್ಣುದತ್ತು ಅವರು ಸಂಪೂರ್ಣ ಪ್ರಜ್ಞಾವಸ್ಥೆಗೆ ಬಂದಾಗ ತಮಗೆ ವಂಚನೆಯಾಗಿರುವುದು ಅರಿವಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಜಾಲ
ಈ ವಿಚಿತ್ರ ಲೂಟಿ ಪ್ರಕರಣದ ಕುರಿತು ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಾಗಿದೆ. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಸಾಯಿ ಮೆಡಿಕಲ್ಸ್ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಸಾಧುಗಳ ಸೋಗಿನಲ್ಲಿರುವ ಖದೀಮರ ಇಡೀ ತಂಡ ನಗರದಾದ್ಯಂತ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಪತ್ತೆಯಾಗಿದೆ. ಈ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸೂಪರ್ ಹಿಟ್ ವೆಬ್ ಸರಣಿ ‘ಮನಿ ಹೈಸ್ಟ್’ನ ಜನಪ್ರಿಯ ಪಾತ್ರ ‘ಬರ್ಲಿನ್’ ಅನ್ನು ಪ್ರಧಾನವಾಗಿರಿಸಿ ಈಗಾಗಲೇ ಒಂದು ವೆಬ್ ಸರಣಿ ಬಿಡುಗಡೆ ಆಗಿದ್ದು, ಇದೀಗ ಅದೇ ವೆಬ್ ಸರಣಿಯ ಎರಡನೇ ಸೀಸನ್ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಿದೆ.
ರಣ್ವೀರ್ ಸಿಂಗ್ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್ 2’ ಕೊನೆಗೂ ಒಟಿಟಿಗೆ ಬಂದಿದೆ ಆದರೆ ಭಾರತದಲ್ಲಿ ಅಲ್ಲ. ‘ಧುರಂಧರ್ 2’ ಈ ವಾರ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಿದ್ದು, ಭಾರತದ ಹೊರತಾಗಿ ಬೇರೆ ದೇಶದವರು ಮಾತ್ರ ಸಿನಿಮಾ ನೋಡಬಹುದಾಗಿದೆ.
‘ಎಕ್ಸಾಮ್’ ಒಂದು ಸಸ್ಪೆನ್ಸ್ ಥ್ರಿಲ್ಲರ್ ತಮಿಳು ವೆಬ್ ಸರಣಿ ಆಗಿದ್ದು, ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ಕುರಿತ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗ ನೀಟ್ನ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಸಮಯದಲ್ಲಿ ಇದೊಂದು ಒಳ್ಳೆಯ ವೀಕ್ಷಣೆ ಆಗಬಹುದು. ಈ ವೆಬ್ ಸರಣಿ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಲಭ್ಯವಿದೆ.
ರಣ್ದೀಪ್ ಹೂಡ ನಟನೆಯ ‘ಇನ್ಸ್ಪೆಕ್ಟರ್ ಅವಿನಾಶ್’ ಮೊದಲ ಸೀಸನ್ ಜನಪ್ರಿಯತೆ ಗಳಿಸಿತ್ತು. ಇದೀಗ ಮತ್ತಷ್ಟು ಆಕ್ಷನ್ ಮತ್ತು ಥ್ರಿಲ್ಲರ್ ಅಂಶಗಳ ಜೊತೆಗೆ ಈ ಸೀಸನ್ ಮತ್ತೆ ಮರಳಿ ಬಂದಿದೆ. ಇದೀಗ ಈ ಸರಣಿಯನ್ನು ಜಿಯೋ ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ.
ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಹಾಲಿವುಡ್ ಸಿನಿಮಾ ‘ಪ್ರಾಜೆಕ್ಟ್ ಹೇಮ್ ಮೇರಿ’ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಸೂಪರ್ ಸ್ಟಾರ್ ರ್ಯಾನ್ ಗಾಸ್ಲಿಂಗ್ ನಟನೆಯ ಈ ಸಿನಿಮಾವನ್ನು ಆಪಲ್ ಟಿವಿ, ಪ್ರೈಂ ವಿಡಿಯೋನಲ್ಲಿ ಇದೀಗ ವೀಕ್ಷಿಸಬಹುದಾಗಿದೆ.
ಸೈಫ್ ಅಲಿ ಖಾನ್ ನಟಿಸಿರುವ ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ ‘ಕರ್ತವ್ಯ’ ಇದೀಗ ನೇರವಾಗಿ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಿದೆ. ಪೊಲೀಸ್ ಒಬ್ಬ ತನ್ನ ಕುಟುಂಬ ಮತ್ತು ಕರ್ತವ್ಯದ ನಡುವೆ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾ ನಿರ್ಮಾಣ ಮಾಡಿರುವುದು ಶಾರುಖ್ ಖಾನ್ ಮತ್ತು ಅವರ ಪತ್ನಿ ಗೌರಿ ಖಾನ್.
ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ (Virat Kohli), ತಮ್ಮ ಹಠಾತ್ ನಿವೃತ್ತಿಯ ಹಿಂದಿನ ಅಸಲಿ ಕಾರಣವನ್ನು ಕೊನೆಗೂ ಬಹಿರಂಗಪಡಿಸಿದ್ದಾರೆ. ಆರ್ಸಿಬಿ (RCB) ಪಾಡ್ಕಾಸ್ಟ್ನಲ್ಲಿ ಕ್ರೀಡಾ ನಿರೂಪಕಿ ಮಯಾಂತಿ ಲ್ಯಾಂಗರ್ ಅವರೊಂದಿಗೆ ಮಾತನಾಡಿದ ಕೊಹ್ಲಿ, ತಂಡದ ಒಳಗಿನ ಗೊಂದಲಮಯ ವಾತಾವರಣ ಮತ್ತು ಗೌರವದ ಕೊರತೆಯೇ ತಮ್ಮ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಪರೋಕ್ಷವಾಗಿ ಮ್ಯಾನೇಜ್ಮೆಂಟ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನಿವೃತ್ತಿಯ ಹಿಂದಿನ ಕಹಿ ಸತ್ಯ:
2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ನಂತರ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ಹಠಾತ್ ವಿದಾಯ ಹೇಳಿದ್ದರು. ಆರ್ಸಿಬಿ ಪಾಡ್ಕಾಸ್ಟ್ನಲ್ಲಿ ಆ ದಿನಗಳನ್ನು ನೆನೆದ ಕೊಹ್ಲಿ, “ನನ್ನ ಮೇಲೆ ಮತ್ತು ನನ್ನ ಆಟದ ಮೇಲೆ ನಂಬಿಕೆ ಇಲ್ಲದ ವಾತಾವರಣದಲ್ಲಿ ನನಗೆ ಮುಂದುವರಿಯಲು ಸಾಧ್ಯವಿರಲಿಲ್ಲ. ನನ್ನ ಸಾಮರ್ಥ್ಯ ಮತ್ತು ತಂಡಕ್ಕೆ ನಾನೇನು ಎಂಬ ಮೌಲ್ಯವನ್ನು ಪದೇ ಪದೇ ಸಾಬೀತುಪಡಿಸಬೇಕಾದ ಪರಿಸ್ಥಿತಿ ಬಂದರೆ, ನಾನು ಆ ಜಾಗದಲ್ಲಿ ಇರಲು ಇಷ್ಟಪಡುವುದಿಲ್ಲ. ಟೆಸ್ಟ್ ಕ್ರಿಕೆಟ್ ಬಿಡುವುದು ಸುಲಭವಾಗಿರಲಿಲ್ಲ, ಆದರೆ ಆ ಸಮಯದಲ್ಲಿ ಆ ನಿರ್ಧಾರವೇ ಸರಿಯಾಗಿತ್ತು. ಏಕೆಂದರೆ ಎಲ್ಲಕ್ಕಿಂತ ಸ್ವಾಭಿಮಾನವೇ ಮುಖ್ಯ” ಎಂದು ನೇರವಾಗಿ ಹೇಳುವ ಮೂಲಕ ಗೌರವ ಸಿಗದ ಕಡೆ ಇರಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸಿಗಬೇಕಾದ ಗೌರವ ಸಿಗುತ್ತಿರಲಿಲ್ಲ ಎಂಬುದು ಬಹಿರಂಗವಾಗಿದೆ. ಅಲ್ಲದೆ ಟೆಸ್ಟ್ ನಿವೃತ್ತಿಗೆ ಮ್ಯಾನೇಜ್ಮೆಂಟ್ ಹಾಗೂ ಕೋಚ್ ಕಡೆಯಿಂದ ಅವರ ಮೇಲೆ ಒತ್ತಡಗಳಿದ್ದವು ಎಂಬ ಎಂಬ ವಿಚಾರ ಕೂಡ ಮತ್ತೆ ಮುನ್ನಲೆಗೆ ಬಂದಿದೆ. ಇದಾಗ್ಯೂ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.
2027ರ ವಿಶ್ವಕಪ್ ಆಡ್ತಾರಾ?
ಪ್ರಸ್ತುತ ಭಾರತ ಏಕದಿನ ತಂಡದಲ್ಲಿ ತಮ್ಮ ಸ್ಥಾನದ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ಕೊಹ್ಲಿ ತೀಕ್ಷ್ಣವಾಗಿ ಉತ್ತರಿಸಿದ್ದಾರೆ. “ನಾನು ನನ್ನ ವೃತ್ತಿಜೀವನದ ಅಂತಹ ಹಂತದಲ್ಲಿದ್ದೇನೆ, ಇಲ್ಲಿ ನಾನು ಯಾರಿಗೂ ನನ್ನ ಯೋಗ್ಯತೆ ಅಥವಾ ತಂಡಕ್ಕೆ ನನ್ನ ಮೌಲ್ಯ ಏನು ಎಂಬುದನ್ನು ಪದೇ ಪದೇ ಸಾಬೀತುಪಡಿಸುವ ಅಗತ್ಯವಿಲ್ಲ”.
“ನನಗೆ 2027ರ ವಿಶ್ವಕಪ್ನಲ್ಲಿ ಭಾರತವನ್ನು ಮುನ್ನಡೆಸುವ ಆಸೆಯಿದೆ. ಆದರೆ, ಅದಕ್ಕೆ ಒಂದು ಷರತ್ತಿದೆ. ಪ್ರತಿ ವಾರವೂ ನನ್ನ ಬ್ಯಾಟಿಂಗ್ ಶೈಲಿಯನ್ನು ಪ್ರಶ್ನಿಸುವ ಅಥವಾ ಹೊಗಳುವ ವಾತಾವರಣ ನನಗೆ ಬೇಡ. ತಂಡದ ಮ್ಯಾನೇಜ್ಮೆಂಟ್ ನನ್ನನ್ನು ಸಂಪೂರ್ಣವಾಗಿ ಗೌರವಿಸುತ್ತದೆ ಮತ್ತು ನನ್ನ ಅವಶ್ಯಕತೆ ಇದೆ ಎಂದು ಭಾವಿಸಿದರೆ ಮಾತ್ರ ನಾನು ಆಡುತ್ತೇನೆ” ವಿರಾಟ್ ಕೊಹ್ಲಿ ಎಂದಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ ವಿರಾಟ್ ಕೊಹ್ಲಿ ಅವರ ಈ ಮಾತುಗಳು ಕೇವಲ ಒಂದು ಸಂದರ್ಶನವಲ್ಲ, ಅದು ಒಬ್ಬ ದಿಗ್ಗಜ ಆಟಗಾರನ ಸ್ವಾಭಿಮಾನದ ಧ್ವನಿ. ಟೆಸ್ಟ್ ಕ್ರಿಕೆಟ್ನಿಂದ ದೂರ ಸರಿದರೂ, ಐಪಿಎಲ್ 2026 ರಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಟೀಕಾಕಾರರಿಗೆ ಮೈದಾನದಲ್ಲೇ ಉತ್ತರ ನೀಡುತ್ತಿದ್ದಾರೆ.
ತಮ್ಮ ವೃತ್ತಿಜೀವನದ ಅಂತಿಮ ಹಂತದಲ್ಲಿರುವ ಕೊಹ್ಲಿಗೆ ಈಗ ರನ್ ಗಳಿಸುವುದಕ್ಕಿಂತ ತಂಡದಲ್ಲಿ ಸಿಗುವ ಗೌರವ ಮತ್ತು ನಂಬಿಕೆ ಮುಖ್ಯವಾಗಿದೆ. ಮ್ಯಾನೇಜ್ಮೆಂಟ್ ಇವರ ಈ ಷರತ್ತಿಗೆ ಗೌರವ ನೀಡಿದರೆ, 2027ರ ವಿಶ್ವಕಪ್ನಲ್ಲಿ ‘ಕಿಂಗ್ ಕೊಹ್ಲಿ’ ಮತ್ತೊಮ್ಮೆ ಭಾರತಕ್ಕೆ ಕಿರೀಟ ತೊಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ.
ಬೆಂಗಳೂರು, ಮೇ 16: ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಪತ್ತೆಯಾದ ವಸ್ತುವಿನ ಕುರಿತು ಪೊಲೀಸರ ತನಿಖೆಯಿಂದ ಹೊಸ ಮಾಹಿತಿ ಹೊರಬಿದ್ದಿದೆ. ಆರಂಭದಲ್ಲಿ ಜಿಲೆಟಿನ್ ಕಡ್ಡಿಗಳು ಎಂದು ಭಾವಿಸಲಾಗಿದ್ದರೂ, ಇದು ಅಮೋನಿಯಂ ನೈಟ್ರೇಟ್ ಜೆಲ್ ಎಂದು ದೃಢಪಟ್ಟಿದೆ. ಅಮೋನಿಯಂ ನೈಟ್ರೇಟ್ ಎಂಬುದು ಸ್ಪೋಟಕಗಳಲ್ಲಿ ಬಳಸುವ ಅಪಾಯಕಾರಿ ವಸ್ತುವಾಗಿದ್ದು, ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಘಟನೆಯು ಮೇ 9ರ ರಾತ್ರಿ 8:05 ರಿಂದ ಮೇ 10ರ ಬೆಳಗ್ಗೆ 7:00 ಗಂಟೆಯ ನಡುವೆ, ಅಂದರೆ ಸುಮಾರು 11 ಗಂಟೆಗಳ ಅವಧಿಯಲ್ಲಿ ನಡೆದಿದೆ ಎಂದು ಅಂದಾಜಿಸಲಾಗಿದೆ. ಈ ಅವಧಿಯಲ್ಲಿ ಸ್ಥಳದಲ್ಲಿ ಪೊಲೀಸರ ಗಸ್ತು ಇರಲಿಲ್ಲ. ಸಿಸಿಟಿವಿ ಕ್ಯಾಮೆರಾಗಳು ಕೂಡ ಇಲ್ಲದಿರುವುದು ತನಿಖೆಗೆ ಸವಾಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ತಾಂತ್ರಿಕ ವಿಶ್ಲೇಷಣೆಗಳನ್ನು ಅವಲಂಬಿಸಿದ್ದಾರೆ. ಸ್ಪೋಟಕಕ್ಕೆ ಯಾವುದೇ ಡಿಟೋನೇಟರ್ಗಳು ಸಿಗದ ಕಾರಣ, ಸ್ಫೋಟದ ಸಾಧ್ಯತೆ ಕಡಿಮೆ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಡೆಂಗ್ಯೂ (Dengue) ಜ್ವರ ಈಡೀಸ್ ಈಜಿಪ್ಟಿ ಜಾತಿಯ ಹೆಣ್ಣು ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಗಂಭೀರ ಕಾಯಿಲೆಯಾದ್ದು, ಇದರ ಸಣ್ಣ ನಿರ್ಲಕ್ಷ್ಯ ಕೂಡ ಜೀವಕ್ಕೆ ಮಾರಕವಾಗಿದೆ. ಈ ಜ್ವರದ ಲಕ್ಷಣ ಆರಂಭದಲ್ಲಿ ತುಂಬಾನೇ ಸೂಕ್ಷ್ಮವಾಗಿರುತ್ತದೆ. ಆನಂತರದಲ್ಲಿ ವಿಪರೀತ ತಲೆನೋವು, ಅತಿಯಾದ ಮೈಕೈ ನೋವು, ಕೀಲು ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಈ ಜ್ವರದ ರೋಗಲಕ್ಷಣಗಳನ್ನು ಆರಂಭದಲ್ಲಿ ತಿಳಿದುಕೊಂಡು ಸೂಕ್ತ ಚಿಕಿತ್ಸೆಗಳನ್ನು ಪಡೆದುಕೊಳ್ಳದಿದ್ದರೆ, ಶ್ವಾಸಕೋಶ, ಲಿವರ್ ಇತ್ಯಾದಿ ದೇಹದ ಪ್ರಮುಖ ಅಂಗಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡು ಇದು ಜೀವಕ್ಕೆ ಮಾರಕವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಮಾರಣಾಂತಿಕ ಕಾಯಿಲೆ, ಇದರ ರೋಗ ಲಕ್ಷಣಗಳು ಹಾಗೂ ಸೂಕ್ತ ರೋಗ ನಿರ್ಣಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.
ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವವೇನು?
ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸುವ ಉದ್ದೇಶವೇನು?
ಡೆಂಗ್ಯೂ ಎಂಬ ಗಂಭೀರ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತದೆ.
ಡೆಂಗ್ಯೂ ತಡೆಗಟ್ಟುವ ಕ್ರಮಗಳು, ರೋಗಲಕ್ಷಣಗಳನ್ನು ಗುರುತಿಸುವುದು ಮತ್ತು ಸೂಕ್ತ ಚಿಕಿತ್ಸೆ ಪಡೆಯುವ ಬಗ್ಗೆ ಜಾಗೃತಿ ಮೂಡಿಸಲು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಡೆಂಗ್ಯೂ ದಿನದಂದು, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ, ಡೆಂಗ್ಯೂ ಲಕ್ಷಣಗಳು, ಅದರ ಹರಡುವಿಕೆ ಮತ್ತು ತಡೆಗಟ್ಟುವ ಕ್ರಮಗಳನ್ನು ಚರ್ಚಿಸಲಾಗುತ್ತದೆ.
ಡೆಂಗ್ಯೂ ಜ್ವರದ ಲಕ್ಷಣಗಳೇನು?
ಡೆಂಗ್ಯೂ ಲಕ್ಷಣಗಳು ಸೌಮ್ಯ ಅಥವಾ ತೀವ್ರವಾಗಿರಬಹುದು. ಸೋಂಕು ತಗುಲಿದ ನಾಲ್ಕರಿಂದ ಏಳು ದಿನಗಳಲ್ಲಿ ಸೌಮ್ಯ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ತಲೆನೋವು, ಜ್ವರ, ಸ್ನಾಯು, ಮೂಳೆ ಮತ್ತು ಕೀಲು ನೋವು, ವಾಂತಿ, ಕಣ್ಣು ನೋವು ಕಾಣಿಸಿಕೊಳ್ಳುತ್ತದೆ.
ಡೆಂಗ್ಯೂ ಜ್ವರ ಉಲ್ಬಣಗೊಂಡರೆ, ದೇಹದಲ್ಲಿ ಪ್ಲೇಟ್ಲೆಟ್ ಎಣಿಕೆಗಳು ಕಡಿಮೆಯಾಗಲು ಪ್ರಾರಂಭಿಸುತ್ತವೆ. ಇದಲ್ಲದೆ ತೀವ್ರ ಹೊಟ್ಟೆ ನೋವು, ನಿರಂತರ ವಾಂತಿ, ಒಸಡುಗಳು ಅಥವಾ ಮೂಗಿನಿಂದ ರಕ್ತಸ್ರಾವ, ಮೂತ್ರ, ಮಲ ಅಥವಾ ವಾಂತಿಯಲ್ಲಿ ರಕ್ತ, ಉಸಿರಾಟದ ತೊಂದರೆ, ಸುಸ್ತು, ಕಿರಿಕಿರಿ ಅಥವಾ ಚಡಪಡಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.
ಶನಿ ಜಯಂತಿಯು ಶನಿದೇವನ ಜನ್ಮದಿನವಾಗಿ ಆಚರಿಸಲ್ಪಡುವ ಪ್ರಮುಖ ಹಬ್ಬವಾಗಿದೆ. ಜೇಷ್ಠ ಮಾಸದಲ್ಲಿ ಶನಿವಾರ ಬರುವ ಅಮಾವಾಸ್ಯೆಯನ್ನು ಶನಿ ಜಯಂತಿ ಎಂದು ಆಚರಿಸಲಾಗುತ್ತದೆ. ಉದಾಹರಣೆಗೆ, 2026ರ ಮೇ 16ರಂದು ಬಂದ ಈ ಜೇಷ್ಠ ಅಮಾವಾಸ್ಯೆ, ಅಂದರೆ ಬಾದಾಮಿ ಅಮಾವಾಸ್ಯೆ, ಶನಿ ದೋಷ ನಿವಾರಣೆಗೆ ಅತ್ಯಂತ ಪ್ರಶಸ್ತವಾಗಿದೆ. ಅಮಾವಾಸ್ಯೆಯು ಬೆಳಗ್ಗೆ 5:11ಕ್ಕೆ ಪ್ರಾರಂಭವಾಗಿ, ಮರುದಿನ ಬೆಳಗ್ಗೆ 1:30ಕ್ಕೆ ಕೊನೆಗೊಳ್ಳುತ್ತದೆ. ಈ ದಿನದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.
ಗುರೂಜಿಯವರು ಹೇಳುವಂತೆ, ಶನಿ ಭಗವಾನನನ್ನು ನ್ಯಾಯಕಾರಕ ಹಾಗೂ ಕರ್ಮಫಲದಾತ ಎಂದು ಪರಿಗಣಿಸಲಾಗಿದೆ. ನಮ್ಮ ಜನ್ಮ ಕುಂಡಲಿಯಲ್ಲಿ ಸಾಡೆ ಸಾತಿ, ಅರ್ಧಾಷ್ಟಮ ಶನಿ, ಅಷ್ಟಮ ಶನಿ, ಪಂಚಮ ಶನಿ ಅಥವಾ ಶನಿ ದೃಷ್ಟಿ ಇರುವವರು ಆಗಾಗ ಎದುರಿಸುವ ಸ್ಪೀಡ್ ಬ್ರೇಕರ್ಗಳಂತಹ ಅಡೆತಡೆಗಳಿಂದ ಮುಕ್ತಿ ಪಡೆಯಲು ಈ ಶನಿ ಜಯಂತಿ ಅತ್ಯಂತ ಪವಿತ್ರ ದಿನ.
ಶನಿದೋಷ ನಿವಾರಣೆಗಾಗಿ ಹಲವು ವಿಧಿ ವಿಧಾನಗಳನ್ನು ಅನುಸರಿಸಬಹುದು. ಉಪವಾಸ, ಧ್ಯಾನ, ಪೂಜೆ, ಹಾಗೂ ದಾನ ಕಾರ್ಯಗಳನ್ನು ಮಾಡುವುದು ಶುಭ. ಸಾಸಿವೆ ಎಣ್ಣೆ, ಎಳ್ಳೆಣ್ಣೆ, ಎಳ್ಳಿನ ಬತ್ತಿ ದೀಪಗಳನ್ನು ಶನಿ ದೇವಸ್ಥಾನದಲ್ಲಿ ಹಚ್ಚುವುದು, ಶನಿ ಅಷ್ಟೋತ್ತರ ಸ್ಮರಣೆ ಮಾಡುವುದು, ಶನಿಗೆ ವಸ್ತ್ರ ಮತ್ತು ನೈವೇದ್ಯ ಅರ್ಪಿಸುವುದು ಗ್ರಹಕಾಟಗಳನ್ನು ಕಡಿಮೆ ಮಾಡುತ್ತದೆ. ಈ ದಿನ, ಹನುಮಾನ್ ಮತ್ತು ವೆಂಕಟೇಶ್ವರ ಸ್ವಾಮಿ ದರ್ಶನ ಮಾಡುವುದೂ ಸಹ ಶನಿ ದೇವರ ಪ್ರೀತಿಗೆ ಪಾತ್ರರಾಗಲು ಸಹಕಾರಿ. ಸಾಡೆಸಾತಿ, ಆರೋಗ್ಯ ಸಮಸ್ಯೆ ಅಥವಾ ಶಸ್ತ್ರಚಿಕಿತ್ಸೆಯಲ್ಲಿ ಅಡೆತಡೆಗಳಿರುವವರು ತಮ್ಮ ಹೆಸರಿನಲ್ಲಿ ಅರ್ಚನೆ ಮಾಡಿಸುವುದೂ ಫಲಪ್ರದ.
ಶನಿ ದೋಷ ನಿವಾರಣೆಗೆ ಒಂದು ವಿಶಿಷ್ಟ ತಂತ್ರವನ್ನು ವಿವರಿಸಲಾಗಿದೆ. ಒಂದು ಬಿಡಿಸಿದ ತೆಂಗಿನಕಾಯಿಯನ್ನು ತೆಗೆದುಕೊಂಡು ಅದನ್ನು ಪೂರ್ಣವಾಗಿ ಕಪ್ಪು ಹತ್ತಿ ಬಟ್ಟೆಯಿಂದ ಸುತ್ತಿ. ನಂತರ ಮೂರು ಎಳೆಯ ದಾರಗಳನ್ನು (ಕಪ್ಪು, ಬಿಳಿ, ಕೆಂಪು) ಆ ತೆಂಗಿನಕಾಯಿಗೆ ಸುತ್ತಿ. ಈ ತೆಂಗಿನಕಾಯಿಯನ್ನು ಎರಡೂ ಕೈಗಳಿಂದ ಹಿಡಿದು, ಪೂರ್ವಕ್ಕೆ ಅಭಿಮುಖವಾಗಿ ನಿಂತು, ನಿಮ್ಮ ತಲೆಯ ಸುತ್ತ ಎಂಟು ಬಾರಿ ಅಪ್ರದಕ್ಷಿಣಾಕಾರವಾಗಿ ತಿರುಗಿಸಿ. ನಂತರ, ಇದನ್ನು ಶನಿ ದೇವಸ್ಥಾನಕ್ಕೆ ಕೊಂಡೊಯ್ದು, ದೇವಸ್ಥಾನದ ಪ್ರಾಕಾರವನ್ನು ಎಂಟು ಬಾರಿ ಪ್ರದಕ್ಷಿಣೆ ಹಾಕಿ. ದೇವಸ್ಥಾನದ ಹೊರಗೆ ಆ ತೆಂಗಿನಕಾಯಿಯನ್ನು ಒಡೆದು, ಅದರ ಮೇಲಿದ್ದ ಬಟ್ಟೆಯನ್ನು (ಎಳ್ಳೆಣ್ಣೆಯಲ್ಲಿ ಅದ್ದಿದ್ದರೆ ಉತ್ತಮ) ಅಲ್ಲಿ ಉರಿಯುತ್ತಿರುವ ದೀಪಕ್ಕೆ ಹಾಕಿ. ಸ್ವಲ್ಪ ಸಮಯ ಅಲ್ಲೇ ಕುಳಿತುಕೊಂಡು, ಓಂ ಶಂ ಶನೇಶ್ಚರಾಯ ನಮಃ ಮಂತ್ರವನ್ನು 17 ಅಥವಾ 26 ಬಾರಿ ಜಪಿಸಿ, ನೇರವಾಗಿ ಮನೆಗೆ ಹಿಂದಿರುಗಿ. ಈ ವಿಧಾನದಿಂದ ಶನಿ ಕಾಟ ಕಡಿಮೆಯಾಗುತ್ತದೆ.
ಇದಲ್ಲದೆ, ಸಾಸಿವೆ ಎಣ್ಣೆ, ಎಳ್ಳೆಣ್ಣೆ ಅಥವಾ ಎಳ್ಳಿನ ಉಂಡೆಗಳನ್ನು ನೈವೇದ್ಯವಾಗಿ ಇಡಬಹುದು. ಸಣ್ಣ ಕಪ್ಪು ಬಟ್ಟೆಯನ್ನು ಜೋಬಿನಲ್ಲಿ ಇಟ್ಟುಕೊಂಡು, ಸಂಧ್ಯಾಕಾಲದಲ್ಲಿ ಅದನ್ನು ಎಲ್ಲಾದರೂ ಬಿಸಾಡುವುದರಿಂದಲೂ ಶುಭವಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪಂಚಮಿ, ವೆಂಕಟೇಶ್, ಗಂಗಾ ಮಲ್ಲೇಶ್ ನಾಯ್ಕ ಹಾಗೂ ಜಗದೀಶImage Credit source: tv9
ದಾವಣಗೆರೆ, ಮೇ 16: ದಾವಣಗೆರೆ (Davanagere) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ಹಣ ಹಾಗೂ ಕೌಟುಂಬಿಕ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮುಖ್ಯಾಂಶಗಳು
ಹನಿಟ್ರ್ಯಾಪ್ ಗ್ಯಾಂಗ್ನ ಐವರನ್ನು ಬಂಧಿಸಿದ ಪೊಲೀಸರು.
₹10.20 ಲಕ್ಷ ಮೌಲ್ಯದ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ್ದಇನ್ನೋವಾ ಕಾರು ವಶಕ್ಕೆ.
ಶ್ರೀಮಂತ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ ಮಾಡಿದ್ದ ಗ್ಯಾಂಗ್.
ಹನಿಟ್ರ್ಯಾಪ್ ಪ್ರಕರಣದ ವಿವರ
ಪಂಚಮಿ (34), ಜಗದೀಶ (35), ಗಂಗಾ ಮಲ್ಲೇಶ್ ನಾಯ್ಕ (25) ಹಾಗೂ ವೆಂಕಟೇಶ್ (30) ಎಂಬವರೇ ಹನಿಟ್ರ್ಯಾಪ್ ಕೇಸ್ನಲ್ಲಿ ಬಂಧಿತರಾದವರು. ಈ ಕಿಲಾಡಿ ಗ್ಯಾಂಗ್ ಮೊದಲು ಶ್ರೀಮಂತ ಹಿನ್ನೆಲೆಯುಳ್ಳ ಯುವಕರನ್ನು ಟಾರ್ಗೆಟ್ ಮಾಡುತ್ತಿತ್ತು. ಗ್ಯಾಂಗ್ನ ಸದಸ್ಯೆ ಪಂಚಮಿ (34) ಎಂಬಾಕೆ ಶ್ರೀಮಂತ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಹರಿಹರ ತಾಲೂಕಿನ ಶಿವನಹಳ್ಳಿ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾಳೆ. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಜಗದೀಶ, ಗಂಗಾ ಮಲ್ಲೇಶ್ ನಾಯ್ಕ, ವೆಂಕಟೇಶ್ ಹಾಗೂ ಮತ್ತೊಬ್ಬ ಆರೋಪಿ ಧಾವಿಸಿ ಬಂದು ಯುವಕನ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಇಡೀ ಗ್ಯಾಂಗ್ ಅನ್ನು ಜೈಲಿಗಟ್ಟಿದ್ದಾರೆ. ಈ ತಂಡ ಇನ್ನೂ ಹಲವು ಯುವಕರಿಗೆ ವಂಚಿಸಿರುವ ಶಂಕೆ ಇದ್ದು, ತನಿಖೆ ಚುರುಕುಗೊಂಡಿದೆ.
ಚನ್ನಗಿರಿಯ ನಲ್ಲೂರು ಗ್ರಾಮದಲ್ಲಿ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಅತಾವುಲ್ಲಾ (46) ಎಂಬುವವರನ್ನು ತಡರಾತ್ರಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅಡಿಕೆ ಕತ್ತರಿಸುವ ಕತ್ತಿ ಹಾಗೂ ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹಳೇ ಕಾರುಗಳ ವ್ಯಾಪಾರ ಮಾಡುತ್ತಿದ್ದ ಅತಾವುಲ್ಲಾ, ಭದ್ರಾವತಿ ತಾಲೂಕಿನ ಕಾಗೆಕೋಡುಮಗ್ಗಿ ಗ್ರಾಮದ ತನ್ನ ಸೋದರತ್ತೆಯ ಮಗಳ ಬಳಿ 2 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ.
ಸಾಲದ ಹಣದ ವಿವಾದ ಒಂದೆಡೆಯಾದರೆ, ಸೋದರತ್ತೆಯ ಮಗಳನ್ನು ಬಿಟ್ಟು ಅತಾವುಲ್ಲಾ ಬೇರೆ ಯುವತಿಯನ್ನು ಮದುವೆಯಾಗಿದ್ದಕ್ಕೆ ಸೋದರತ್ತೆ ತೀವ್ರ ದ್ವೇಷ ಸಾಧಿಸುತ್ತಿದ್ದಳು. ಇದೇ ಹಳೇ ದ್ವೇಷದ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಶೇಖ್ ದಸ್ತುಗಿರಿ ಹಾಗೂ ಜಬೀವುಲ್ಲಾ ಎಂಬ ಹಂತಕರಿಗೆ ಸುಪಾರಿ ಕೊಟ್ಟು ಈ ಕೊಲೆ ಮಾಡಿಸಲಾಗಿದೆ ಎಂಬುದು ತಿಳಿದುಬಂದಿದೆ. ಸದ್ಯ ಚನ್ನಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಜಾಲ ಬೀಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗಷ್ಟೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು, ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅವರ ಸಹೋದರ ಮೆಗಾಸ್ಟಾರ್ ಚಿರಂಜೀವಿ, ಅಲ್ಲು ಅರ್ಜುನ್ ಇನ್ನೂ ಹಲವರು ಟ್ವೀಟ್ ಮಾಡಿ ಶೀಘ್ರ ಗುಣಮುಖವಾಗುವಂತೆ ಕೋರಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ವೈದ್ಯರ ಸಲಹೆಯಂತೆ ಕೆಲ ವಾರ ವಿಶ್ರಾಂತಿಯನ್ನೂ ಪಡೆದಿದ್ದರು. ಇದೀಗ ಶಸ್ತ್ರಚಿಕಿತ್ಸೆ ಬಳಿಕ ಮೊದಲ ಬಾರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಪವನ್ ಕಲ್ಯಾಣ್, ತಮಗಾಗಿದ್ದ ಆರೋಗ್ಯ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ.
ತಮ್ಮ ಜನಸೇನಾ ಪಕ್ಷದ ಸಭೆಯಲ್ಲಿ ಭಾಗಿ ಆಗಿದ್ದ ಪವನ್ ಕಲ್ಯಾಣ್, ತಮಗಾಗಿದ್ದ ಆರೋಗ್ಯ ಸಮಸ್ಯೆ ಬಗ್ಗೆ ವಿವರಿಸಿದರು. ‘ಕೋವಿಡ್ ಸಮಯದಲ್ಲಿ ನನಗೆ ಶ್ವಾಸಕೋಶದ ಸೋಂಕು ಆಗಿತ್ತು. ಅದು ಪೂರ್ಣವಾಗಿ ಗುಣವಾಗಿರಲಿಲ್ಲ. ಅದರ ಜೊತೆಗೆ ಚುನಾವಣೆಗೆ ಮುಂಚೆ ಸುಮಾರು ಒಂದೂವರೆ ವರ್ಷದ ಕಾಲ ದೂಳಿನಲ್ಲಿ ಓಡಾಟ, ವಿಶ್ರಾಂತಿ ಇಲ್ಲದ ಪ್ರಚಾರ ಇನ್ನಿತರೆಗಳಿಂದ ಆರೋಗ್ಯದಲ್ಲಿ ವ್ಯತ್ಯಾಸಗಳಾಗಿದ್ದವು’ ಎಂದರು.
‘ದೂಳಿನಲ್ಲಿ ಸಾಕಷ್ಟು ತಿರುಗಿ ಸೈನಸ್ ನಲ್ಲಿ ದೂಳು ಜಮೆಯಾಗಿ ಅಲ್ಲಿ ಗಟ್ಟಿಯಾಗಿಬಿಟ್ಟಿತ್ತು. ಇದರಿಂದ ಎಡಗಣ್ಣಿನ ಪಕ್ಕ ಪದೇ ಪದೇ ಊತ ಬರುತ್ತಿತ್ತು. ಒಂದು ಹಂತದಲ್ಲಂತೂ ಕಣ್ಣಿನ ದೃಷ್ಟಿ ಮಂದವಾಗಿತ್ತು, ಹಾಗೂ ಎಡಗಡೆ ಕಣ್ಣು ತಿರುಗಿಸಿದರೆ ಏನೂ ಕಾಣುತ್ತಲೇ ಇರಲಿಲ್ಲ. ಇದರ ಜೊತೆಗೆ ದೇಹದ ಕೆಲವೆಡೆ ಮಾಂಸಖಂಡಗಳು ಹರಿದಿವೆ, ಕೆಲ ಮೂಳೆಗಳಲ್ಲಿ ಬಿರುಕು ಮೂಡಿದೆ ಎಂಬುದು ಸಹ ಗೊತ್ತಾಯ್ತು’ ಎಂದಿದ್ದಾರೆ ಪವನ್.
‘ನಾನು ಹೋದಲ್ಲೆಲ್ಲ ಅಭಿಮಾನಿಗಳು ಕೈ ಕುಲುಕುವುದು, ಕೈ ಕೊಟ್ಟರೆ ಎಳೆಯುವುದು ಮಾಡುತ್ತಾರೆ ಅದು ಅವರ ಪ್ರೀತಿ, ಆದರೆ ಅದರಿಂದ ನನಗೆ ಎರಡೂ ಭುಜಗಳಲ್ಲಿ ಮಾಂಸಖಂಡಗಳು ತುಸು ಹರಿದಿದ್ದು, ಮೂಳೆಗಳಲ್ಲಿ ಸಣ್ಣ ಬಿರುಕುಗಳು ಮೂಡಿವೆ. ಆದರೆ ಜೊತೆಗೆ ಕೆಲವು ಭಾಗಗಳಲ್ಲಿ ಅಸಹನೀಯ ನೋವು ಸಹ ಇತ್ತು. ಆದರೆ ನಾನು ಮೊದಲಿನಿಂದಲೂ ಮಾರ್ಷಲ್ ಆರ್ಟ್ಸ್ ತರಬೇತಿ, ವ್ಯಾಯಾಮಗಳನ್ನು ಮಾಡುತ್ತಿದ್ದರಿಂದ ದೇಹ ತಡೆದುಕೊಂಡಿದೆ’ ಎಂದು ಪವನ್ ಕಲ್ಯಾಣ್ ಹೇಳಿದರು.
ವೈದ್ಯರ ಹಾಗಾಗಿ ಎಲ್ಲ ಕಾರ್ಯಕ್ರಮವನ್ನು ರದ್ದು ಮಾಡಿ, ಚಿಕಿತ್ಸೆಗೆ ಒಳಗಾದೆ. ಈಗ ಸುಮಾರು ಒಂದು ತಿಂಗಳ ಬಳಿಕ ನಾನು ಇಲ್ಲಿಗೆ ಬಂದಿದ್ದೇನೆ. ಜನರ ಪ್ರೀತಿಯಿಂದ ಸಮಸ್ಯೆ ಆದರೆ ನನಗೆ ನೋವೆನಿಸುವುದಿಲ್ಲ ಏಕೆಂದರೆ ಆ ನೋವನ್ನು ಹೋಗಲಾಡಿಸುವುದು ಸಹ ಜನರೇ’ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ. ಆರೋಗ್ಯ ಈಗ ಸಾಕಷ್ಟು ಸುಧಾರಿಸಿದ್ದು, ಇನ್ನು ಮುಂದೆ ರಾಜಕೀಯದಲ್ಲಿ ಸಕ್ರಿಯರಾಗಿರುವುದಾಗಿ ಪವನ್ ಕಲ್ಯಾಣ್ ಹೇಳಿದ್ದಾರೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ವಿವಾದಗಳು ಮುಂದುವರೆದಿದೆ. ಈ ವಿವಾದಗಳ ಪಟ್ಟಿಗೆ ಹೊಸ ಸೇರ್ಪಡೆ ಅರ್ಷದೀಪ್ ಸಿಂಗ್ ಅವರ ನಿಂದನೆ. ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯಕ್ಕೂ ಮುನ್ನ ಅರ್ಷದೀಪ್ ಸಿಂಗ್, ತಿಲಕ್ ವರ್ಮಾ ಅವರನ್ನು ಮೈ ಬಣ್ಣವನ್ನು ಪ್ರಸ್ತಾಪಿಸಿ ಕರೆಯುತ್ತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೈರಲ್ ವೀಡಿಯೊದಲ್ಲೇನಿದೆ?
ಅರ್ಷದೀಪ್ ಸಿಂಗ್ ತಮ್ಮದೇ ಆದ ಸ್ನ್ಯಾಪ್ಚಾಟ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತಿಲಕ್ ವರ್ಮಾ ಅವರನ್ನು ಉದ್ದೇಶಿಸಿ, “ಓಯ್ ಅಂಧೇರೇ (ಕತ್ತಲೆಯೇ), ಸನ್ಸ್ಕ್ರೀನ್ ಹಚ್ಚಿಕೊಂಡಿದ್ದೀಯಾ?” ಎಂದು ಕೇಳಿದ್ದಾರೆ.
ಅಷ್ಟೇ ಅಲ್ಲದೆ ಕ್ಯಾಮೆರಾವನ್ನು ಸಹ ಆಟಗಾರ ನಮನ್ ಧೀರ್ ಕಡೆಗೆ ತಿರುಗಿಸಿ, ಅವರೇ ಪಂಜಾಬ್ನ ನಿಜವಾದ ‘ನೂರ್’ (ಕಾಂತಿ) ಎಂದು ಹೊಗಳಿದ್ದಾರೆ.
ಇಲ್ಲಿ ಅರ್ಷದೀಪ್ ಸಿಂಗ್ ಪಂಜಾಬಿ ಭಾಷೆಯಲ್ಲಿ ಅಂಧೇರೇ ಅಂದಿರುವುದು ಕರಿಯ ಎಂಬಾರ್ಥದಲ್ಲಿ. ಅಂದರೆ ಮೈ ಬಣ್ಣವನ್ನು ಪ್ರಸ್ತಾಪಿಸಿ ಹೀಯಾಳಿಸಿರುವುದು ಸ್ಪಷ್ಟ.
— Out Of Context Cricket (@GemsOfCricket) May 14, 2026
ಅರ್ಷದೀಪ್ ಸಿಂಗ್ ಅವರ ಈ ಮಾತಿನಿಂದ ತಿಲಕ್ ವರ್ಮಾ ಮುಜುಗರಕ್ಕೊಳಗಾದಂತೆ ಕಂಡರೂ, ಪರಿಸ್ಥಿತಿಯನ್ನು ಶಾಂತವಾಗಿ ನಿಭಾಯಿಸಿದ್ದಾರೆ. “ನಾನು ಈಗಾಗಲೇ ಸನ್ಸ್ಕ್ರೀನ್ ಹಚ್ಚಿಕೊಂಡಿದ್ದೇನೆ, ನಾಳಿನ ಪಂದ್ಯದ ಕಡೆ ಗಮನ ಕೊಡೋಣ” ಎಂದು ಹೇಳಿ ಅಲ್ಲಿಂದ ತೆರಳಿದ್ದಾರೆ.
ನೆಟ್ಟಿಗರ ತೀವ್ರ ಆಕ್ರೋಶ:
ಟ್ವಿಟರ್ (X) ಮತ್ತು ಇನ್ಸ್ಟಾಗ್ರಾಮ್ನಲ್ಲಿ ಕ್ರಿಕೆಟ್ ಪ್ರೇಮಿಗಳು ಅರ್ಷದೀಪ್ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡ್ರೆಸ್ಸಿಂಗ್ ರೂಮ್ ತಮಾಷೆಯ ಹೆಸರಿನಲ್ಲಿ ಇಂತಹ ವರ್ಣಭೇದದ ಕಾಮೆಂಟ್ಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಇಂತಹ ಸೂಕ್ಷ್ಮ ವಿಷಯಗಳಲ್ಲಿ ಆಟಗಾರರಿಗೆ ಸಾಮಾಜಿಕ ಜಾಲತಾಣಗಳ ಬಳಕೆಯ ಬಗ್ಗೆ ತರಬೇತಿ ನೀಡಬೇಕು ಮತ್ತು ಬಿಸಿಸಿಐ ಅರ್ಷದೀಪ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.
ಬ್ಯಾಟ್ ಮೂಲಕ ಉತ್ತರ:
ಅರ್ಷದೀಪ್ ಸಿಂಗ್ ಮಾತುಗಳ ಮೂಲಕ ವಿವಾದ ಸೃಷ್ಟಿಸಿದರೆ, ತಿಲಕ್ ವರ್ಮಾ ತಮ್ಮ ಬ್ಯಾಟ್ ಮೂಲಕವೇ ತಕ್ಕ ಉತ್ತರ ನೀಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ ಭರ್ಜರಿ 6 ಸಿಕ್ಸರ್ಗಳ ನೆರವಿನಿಂದ ಅಜೇಯ 75 ರನ್ ಚಚ್ಚಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ನೀಡಿದ 201 ರನ್ಗಳ ಗುರಿ ಬೆನ್ನತ್ತುವ ಮೂಲಕ ತಿಲಕ್ ವರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ 6 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟಿದ್ದಾರೆ.