Category Archives: Blog

Your blog category

ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ – Kannada News | Dharwad Child Abduction: Kids Rescued After Abductor Bike Accident in Dandeli

ಮಕ್ಕಳನ್ನ ಕಿಡ್ನ್ಯಾಪ್‌ ಮಾಡಿದ್ದ ವ್ಯಕ್ತಿ

ಧಾರವಾಡ, ಜನವರಿ 12: ಎಂದಿನಂತೆ ಆ ಮಕ್ಕಳು (Children) ಶಾಲೆಗೆ ಹೋಗಿದ್ದರು. ಎಂದಿನಂತೆಯೇ ಮಧ್ಯಾಹ್ನದ ಊಟವನ್ನೂ ಮಾಡಿದ್ದರು. ಬಳಿಕ ಆ ಎರಡೂ ಮಕ್ಕಳು ನಾಪತ್ತೆಯಾಗಿದ್ದರು. ಮಧ್ಯಾಹ್ನದ ಬಳಿಕ ತರಗತಿಗೆ ಬರದೇ ಇರೋದ್ರಿಂದಾಗಿ ಶಿಕ್ಷಕರು ಅವರ ಪೋಷಕರಿಗೆ ಫೋನ್ ಮಾಡಿ ಮಕ್ಕಳು ಮನೆಗೆ ಬಂದಿದ್ದಾರೆಯೇ ಅಂತಾ ಕೇಳಿದಾಗಲೇ ಆ ಮಕ್ಕಳು ಶಾಲೆಯಲ್ಲಿಯೂ ಇಲ್ಲ, ಮನೆಗೂ ಹೋಗಿಲ್ಲ ಅನ್ನೋದು ಗೊತ್ತಾಗಿದ್ದು. ಕೂಡಲೇ ಶಾಲೆಗೆ ಸಿಸಿಟಿವಿ ಕ್ಯಾಮೆರಾ ನೋಡಿದರೆ ಅವರಿಬ್ಬರನ್ನೂ ಓರ್ವ ವ್ಯಕ್ತಿ ತನ್ನ ಬೈಕ್ ಮೇಲೆ ಕರೆದೊಯ್ದಿರೋದು ಗೊತ್ತಾಗಿದೆ. ಇದೀಗ ಅಪಹರಣಕಾರ (Kidnap) ಸಿಕ್ಕಿಬಿದ್ದಿದ್ದು, ಮಕ್ಕಳು ಪಕ್ಕದ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಇದೆಲ್ಲಾ ನಡೆದಿದ್ದು ವಿದ್ಯಾಕಾಶಿ ಧಾರವಾಡದಲ್ಲಿ.

ನಡೆದದ್ದೇನು?

ಲಕ್ಷ್ಮೀ ಕರೆಯಪ್ಪನವರ್ ಹಾಗೂ ಅನ್ವರ್ ದೊಡ್ಡಮನಿ ಧಾರವಾಡದ ಕಮಲಾಪುರ ಬಡಾವಣೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿರು ವಿದ್ಯಾರ್ಥಿಗಳು. ಇಂದು ಎಂದಿನಂತೆ ಶಾಲೆಗೆ ಬಂದಿದ್ದರು. ಮಧ್ಯಾಹ್ನದ ಬಿಸಿಯೂಟವನ್ನೂ ಸೇವಿಸಿದ್ದರು. ಈ ವೇಳೆ ಶಾಲೆಗೆ ಬಂದ ಓರ್ವ ವ್ಯಕ್ತಿ ಮೊದಲು ಅನ್ವರ್ ನನ್ನು ಕರೆದು ಮಾತನಾಡಿಸಿದ್ಧಾನೆ. ಅನ್ವರ್​ಗೆ ಆತ ಪರಿಚಯವಿದ್ದಿದ್ದಕ್ಕೆ ಉಳವಿ ಬಸಪ್ಪ ದೇವಸ್ಥಾನದ ಜಾತ್ರೆಗೆ ಹೋಗೋಣ ಬರುತ್ತೀಯಾ ಅಂತಾ ಕೇಳಿದ್ದಾನೆ. ಆ ಮುಗ್ಧ ಬಾಲಕ ಬರುತ್ತೇನೆ ಅಂತಾ ಹೇಳಿದಾಗ ಪಕ್ಕದಲ್ಲಿಯೇ ಇದ್ದ ಲಕ್ಷ್ಮೀಯನ್ನು ಕೂಡ ಕೇಳಿದ್ದಾನೆ. ಆ ಬಾಲಕಿ ಕೂಡ ಬರೋದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಬಾಲಕಿಗೆ ಕಿರುಕುಳ, ಹಲ್ಲೆ

ಕೂಡಲೇ ಇಬ್ಬರನ್ನೂ ಹತ್ತಿಸಿಕೊಂಡ ಆ ವ್ಯಕ್ತಿ ಅಲ್ಲಿಂದ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಯಾವಾಗ ಮಧ್ಯಾಹ್ನದ ಬಳಿಕ ತರಗತಿಯಲ್ಲಿ ಇಬ್ಬರು ಮಕ್ಕಳು ಕಾಣಲಿಲ್ಲವೋ ಶಿಕ್ಷಕರು ಅವರಿಬ್ಬರ ಪೋಷಕರಿಗೆ ಫೋನ್ ಮಾಡಿ, ಮಕ್ಕಳು ಮನೆಗೆ ಬಂದಿದ್ದಾರಾ ಅಂತಾ ಕೇಳಿದ್ದಾರೆ. ಆಗ ಮನೆಗೆ ಬಂದಿಲ್ಲ ಅನ್ನೋದು ಗೊತ್ತಾಗುತ್ತಿದ್ದಂತೆಯೇ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದು, ವ್ಯಕ್ತಿಯೊಬ್ಬ ಇಬ್ಬರು ಮಕ್ಕಳನ್ನು ಬೈಕ್​​ನಲ್ಲಿ ಹತ್ತಿಸಿಕೊಂಡು ಅಲ್ಲಿಂದ ಪರಾರಿಯಾಗಿರುವುದು ಗೊತ್ತಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆ ಪೊಲೀಸರು ಎಲ್ಲಾ ಕಡೆ ಮಾಹಿತಿ ರವಾನಿಸಿದ್ಧಾರೆ. ಇದೇ ವೇಳೆ ಈ ಮಾಹಿತಿ ಸಿಗುತ್ತಿದ್ದಂತೆಯೇ ಶಾಲೆಗೆ ಆಗಮಿಸಿದ ಅನೇಕ ಪೋಷಕರು ಶಾಲೆಯ ಮುಂದೆ ಜಮಾವಣೆಗೊಂಡರು. ಈ ವೇಳೆ ಎಲ್ಲರ ಮುಖದಲ್ಲಿಯೂ ಆತಂಕ ಎದ್ದು ಕಾಣುತ್ತಿತ್ತು. ಇನ್ನು ಅಪಹರಣಗೊಂಡ ಮಕ್ಕಳ ಪೋಷಕರಂತೂ ತಮ್ಮ ಮಕ್ಕಳು ಎಲ್ಲಿದ್ದಾರೋ? ಹೇಗಿದ್ದಾರೋ? ಅನ್ನೋ ಆತಂಕದಲ್ಲಿಯೇ ಇದ್ದರು.

ಮಕ್ಕಳು ಸಿಕ್ಕಿದ್ಹೇಗೆ?

ಇನ್ನು ಇದೇ ವೇಳೆ ಪೊಲೀಸರಿಗೆ ಮಾಹಿತಿಯೊಂದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಬಳಿ ಬೈಕ್ ವೊಂದು ರಸ್ತೆ ಬದಿಯ ಗುಂಡಿಯಲ್ಲಿ ಬಿದ್ದಿದ್ದು, ಬೈಕ್ ಮೇಲೆ ಓರ್ವ ವ್ಯಕ್ತಿ ಹಾಗೂ ಇಬ್ಬರು ಮಕ್ಕಳಿರುವ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ದಾಂಡೇಲಿ ಪೊಲೀಸರು ವ್ಯಕ್ತಿಯ ವಿಚಾರಣೆ ನಡೆಸಿದಾಗ ಆತ ಧಾರವಾಡ ನಗರದ ಅಬ್ದುಲ್ ಕರೀಂ ಮೇಸ್ತ್ರಿ ಅನ್ನೋದು ಖಚಿತವಾಗಿದೆ. ಅಪಘಾತದಲ್ಲಿ ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು

ಇದೀಗ ಉಪನಗರ ಠಾಣೆ ಪೊಲೀಸರು ಪೋಷಕರಿಂದ ದೂರನ್ನು ಪಡೆದಿದ್ದು, ದಾಂಡೇಲಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಅಬ್ದುಲ್ ಕರೀಂ ಯಾವ ಕಾರಣಕ್ಕೆ ಈ ಎರಡೂ ಮಕ್ಕಳನ್ನು ಅಪಹರಣ ಮಾಡಿದ ಅನ್ನೋದರ ಬಗ್ಗೆ ಖಾಕಿ ತನಿಖೆ ಮುಂದುವರೆಸಿದ್ದಾರೆ. ಒಟ್ಟಿನಲ್ಲಿ ಅಪಘಾತವೊಂದು ಎರಡೂ ಮಕ್ಕಳನ್ನು ಪತ್ತೆ ಹಚ್ಚಲು ಕಾರಣವಾಗಿದ್ದು ಮಾತ್ರ ವಿಚಿತ್ರ ಸಂಗತಿಯೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನನ್ನನ್ನು ಮುಟ್ಟಿದರೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ – Kannada News | If you Touch me I will set entire police station on fire Bajrang Dal man threatens police in Rampur

ರಾಂಪುರ, ಜನವರಿ 12: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಬಜರಂಗದಳದ ಕಾರ್ಯಕರ್ತ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಸೂರಜ್ ಪಟೇಲ್ ಎಂಬ ವ್ಯಕ್ತಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳನ್ನು ಬಳಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. “ನನ್ನನ್ನು ಮುಟ್ಟಿ ನೋಡಿ, ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸೂರಜ್ ಪಟೇಲ್ ಪೂರ್ವಾನುಮತಿ ಇಲ್ಲದೆ ಪೊಲೀಸ್ ಠಾಣೆಗೆ ಬಂದು ಆ ಸಮಯದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಸುಹೈಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಬೇಕೆಂದು ಹಠ ಹಿಡಿದಾಗ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ತನಿಖಾಧಿಕಾರಿ ಅಥವಾ ಕರ್ತವ್ಯ ಅಧಿಕಾರಿಯನ್ನು ಸಂಪರ್ಕಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಆಕ್ರೋಶಗೊಂಡರು. ಈ ಘಟನೆಯನ್ನು ಸ್ಥಳದಲ್ಲಿದ್ದ ಯಾರೋ ಒಬ್ಬರು ರೆಕಾರ್ಡ್ ಮಾಡಿದ್ದಾರೆ. ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಆರ್​ಸಿಬಿ ಸೇರಿದಂತೆ ಈ 3 ಪಂದ್ಯಗಳಿಗೆ ಸ್ಟೇಡಿಯಂಗೆ ವೀಕ್ಷಕರ ಪ್ರವೇಶ ನಿಷೇಧ

Source link

ನೀವು ಕೆಲಸ ಮಾಡುವಾಗ ಕುಳಿತುಕೊಳ್ಳುವಂತಹ ಭಂಗಿಯಿಂದಲೂ ಬರಬಹುದು ಬೆನ್ನು ನೋವು ಎಚ್ಚರಿಕೆ ನೀಡಿದ ಡಾ ಅಜಯ್‌ ಹೆಗ್ಡೆ – Kannada News | Back Pain Relief for Office Workers

Dr. Ajay Hegde On Back Pain From Sitting

ಇತ್ತೀಚಿನ ವರ್ಷಗಳಲ್ಲಿ ಡೆಸ್ಕ್‌ನಲ್ಲೇ ಕುಳಿತು ಕೆಲಸ ಮಾಡುವ ವೃತ್ತಿಪರರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ದಿನಕ್ಕೆ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವ ಉದ್ಯೋಗಿಗಳು ಸರಿಯಾದ ಭಂಗಿಯ ಬದಲು ಮನಸ್ಸಿಗೆ ಬಂದಂತೆ ಕುಳಿತುಕೊಂಡಿರುತ್ತಾರೆ. ಇದರ ಜೊತೆಗೆ, ಕೆಲಸ ಮಾಡುವ ಸ್ಥಳ ಅಥವಾ ಆಫೀಸ್ ತಲುಪುವುದಕ್ಕಾಗಿ ಕೆಟ್ಟ ಕೆಟ್ಟ ರಸ್ತೆಗಳಲ್ಲಿ ಎರಡು ಮೂರು ಗಂಟೆಗಳ ಕಾಲ ಸಂಚರಿಸುತ್ತಾರೆ. ಹೀಗೆ ನಮ್ಮ ಮಧ್ಯೆ ಇರುವ ಅತ್ಯಧಿಕ ಜನ ತಮ್ಮ ದಿನದ ಹೆಚ್ಚಿನ ಅವಧಿಯನ್ನು ಕುಳಿತುಕೊಂಡೇ ಕಳೆಯುತ್ತಾರೆ. ಹಾಗಾಗಿ ಕುಳಿತುಕೊಳ್ಳುವ ಭಂಗಿ ಸರಿಯಾಗಿ ಇಲ್ಲದಿದ್ದರೆ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದರ ಬಗ್ಗೆ ಸರ್ಜಾಪುರ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್‌- ನ್ಯೂರೊ ಸ್ಪೈನ್‌ ಸರ್ಜರಿ ಡಾ ಅಜಯ್‌ ಹೆಗ್ಡೆ (Dr. Ajay Hegde) ಅವರು ಈ ಕುರಿತು ಕೆಲವು ವಿಷಯಗಳನ್ನು ಟಿವಿ9 ಕನ್ನಡ ಜೊತೆ ಹಂಚಿಕೊಂಡಿದ್ದು ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಡಾ ಅಜಯ್‌ ಹೆಗ್ಡೆ ಹೇಳುವ ಪ್ರಕಾರ, ಒಂದೇ ಜಾಗದಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದು ಅಥವಾ ನಿಂತುಕೊಳ್ಳುವುದು, ದೇಹಕ್ಕೆ ಮತ್ತು ಭಂಗಿಗೆ ಪೂರಕವಲ್ಲದ ವಿನ್ಯಾಸ ಮತ್ತು ಚಲನಶೀಲತೆಯ ಕೊರತೆ, ಭಂಗಿಯ ಅಸಮತೋಲನ ಸೇರಿದಂತೆ ದಿನನಿತ್ಯ ರೂಢಿಸಿಕೊಂಡ ಹಲವಾರು ಅಭ್ಯಾಸಗಳು ಸ್ನಾಯು ಮತ್ತು ಮೂಳೆಗೆ ಸಂಬಂಧ ಪಟ್ಟ ಕಾಯಿಲೆಗಳಿಗೆ ಕಾರಣವಾಗುತ್ತದೆ. ಇವುಗಳಲ್ಲಿ ಹರ್ನಿಯೇಟೆಡ್ ಡಿಸ್ಕ್, ಕಾರ್ಪಲ್ ಟನಲ್ ಸಿಂಡ್ರೋಮ್ ಮತ್ತು ದೀರ್ಘಕಾಲದ ಬೆನ್ನು ನೋವು ಪ್ರಮುಖವಾಗಿವೆ. ವಿಶೇಷವಾಗಿ ಯುವ ಜನತೆಯಲ್ಲಿ ಕುತ್ತಿಗೆ ನೋವು, ಭುಜದ ಬಿಗಿತದಂತಹ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವುದನ್ನು ಆರೋಗ್ಯ ತಜ್ಞರು ಗಮನಿಸಿದ್ದಾರೆ ಎಂದು ಹೇಳಿದ್ದಾರೆ.

ಬೆನ್ನು ನೋವಿನ ಸಮಸ್ಯೆ ಹೆಚ್ಚಳಕ್ಕೆ ಕಾರಣವೇನು?

  • ಕೊರೊನಾ ಸಾಂಕ್ರಾಮಿಕ ಕಡಿಮೆಯಾದ ನಂತರ ಉದ್ಯೋಗಿಗಳು ಮತ್ತೆ ಪುನಃ ಆಫೀಸ್ ಗಳಿಗೆ ಹೋಗಲು ಆರಂಭಿಸಿದ್ದು ಸಹಜವಾಗಿ ಪ್ರಯಾಣವನ್ನು ಪುನರಾರಂಭಿಸಿದ್ದಾರೆ. ಈ ಬದಲಾವಣೆಯು ಬೆನ್ನು ನೋವಿನ ಸಮಸ್ಯೆ 10 ರಿಂದ 30% ರಷ್ಟು ಹೆಚ್ಚಳಕ್ಕೆ ಕಾರಣವಾಗಿದೆ.
  • ಸ್ಥಿರವಾಗಿ ಕುಳಿತುಕೊಳ್ಳುವುದು, ದೀರ್ಘ ಪ್ರಯಾಣ ಮಾಡುವುದು ಮತ್ತು ಹೆಚ್ಚಿನ ಒತ್ತಡದಿಂದ ಸ್ನಾಯು- ಮೂಳೆಗೆ ಸಂಬಂಧಿಸಿದ ಕಾಯಿಲೆಗಳ ಹೆಚ್ಚಳಕ್ಕೆ ಕಾರಣವಾಗಿದೆ. ಕೇವಲ ವೃತ್ತಿಪರರು ಮಾತ್ರವಲ್ಲದೇ, ವಿದ್ಯಾರ್ಥಿಗಳು ಮತ್ತು ವಯಸ್ಕರನ್ನೂ ಸಹ ಈ ರೀತಿಯ ಸಮಸ್ಯೆ ವ್ಯಾಪಕವಾಗಿ ಬಾಧಿಸುತ್ತಿವೆ.
  • ವಾರಕ್ಕೆ 40 ಗಂಟೆಗಳಿಗಿಂತ ಹೆಚ್ಚು ಸಮಯ ಕುಳಿತು ಕೆಲಸ ಮಾಡುವವರು ಮತ್ತು ದೀರ್ಘ ಪ್ರಯಾಣ ಮಾಡುವವರಲ್ಲಿ ಈ ರೀತಿಯ ಸ್ನಾಯು- ಮೂಳೆಗಳ ನೋವು ಹೆಚ್ಚಾಗಿ ಕಂಡುಬರುತ್ತಿದೆ.

ಇದನ್ನೂ ಓದಿ: ಮುಟ್ಟು ನಿಲ್ಲುವ ಅವಧಿಯಲ್ಲಿ ಮಹಿಳೆಯರು ತಪ್ಪದೆ ಈ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ಡಾ. ಸಂಹಿತಾ

ಈ ಸಮಸ್ಯೆ ತಡೆಯಲು ಮಾರ್ಗೋಪಾಯಗಳು:

ದೈನಂದಿನ ಪ್ರಯಾಣದಿಂದಾಗುವ ಸಮಸ್ಯೆಗಳನ್ನು ಕಡಿಮೆ ಮಾಡಲು ರಸ್ತೆಗಳ ಗುಣಮಟ್ಟವನ್ನು ಸುಧಾರಿಸುವುದು ಮುಖ್ಯ. ಜೊತೆಗೆ ಕಚೇರಿಗಳಲ್ಲಿ ಸಮಯ ಸಿಕ್ಕಾಗ ವಿರಾಮ ತೆಗೆದುಕೊಂಡು ಸ್ವಲ್ಪ ಚಲಿಸಬೇಕು. ಒಂದೇ ಕಡೆಯಲ್ಲಿ ಗಂಟೆಗಟ್ಟಲೆ ಕುಳಿತುಕೊಳ್ಳುವುದಕ್ಕಿಂತ ಗಂಟೆಗೊಮ್ಮೆಯಾದರೂ ಎದ್ದು ತಿರುಗಾಡುವುದು ಒಳ್ಳೆಯದು. ಸಾಧ್ಯವಾದಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆ ಮಾಡುವುದು. ಒಟ್ಟಾರೆ, ಬೆಂಗಳೂರಿನಲ್ಲಿ ಕೆಲಸ ಮತ್ತು ಪ್ರಯಾಣ ಸೇರಿದಂತೆ ದೈನಂದಿನ ಒತ್ತಡಗಳು ನಗರದ ಉದ್ಯೋಗಿಗಳ ಆರೋಗ್ಯ ಮತ್ತು ಭಂಗಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇದನ್ನು ಎದುರಿಸಲು ಕೆಲವು ಬದಲಾವಣೆ ಮಾಡಿಕೊಳ್ಳುವುದು ಬಹಳ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಚ್ಛಾಟಿತ ಶಾಸಕನ ಸಂಪರ್ಕದಲ್ಲಿದ್ಯಾ ಬಿಜೆಪಿ ಹೈಕಮಾಂಡ್​?: ಯತ್ನಾಳ್​​ ಸ್ಫೋಟಕ ಹೇಳಿಕೆ – Kannada News | Expelled BJP MLA Yatnal said he is in touch with high command leaders

ವಿಜಯಪುರ, ಜನವರಿ 12: ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೊಸ ಬಾಂಬ್​​ ಸಿಡಿಸಿದ್ದಾರೆ. ಹೈಕಮಾಂಡ್​​ ನಾಯಯಕರು ತಮ್ಮ ಜೊತೆ ನೇರ ಸಂಪರ್ಕದಲ್ಲಿ ಇರೋದಾಗಿ ಯತ್ನಾಳ್​​ ಹೇಳಿರೋದೀಗ ಭಾರಿ ಕುತೂಹಲ ಕೆರಳಿಸಿದೆ. ವಿಜಯಪುರ ಶಾಸಕ ಮರಳಿ ಬಿಜೆಪಿಗೆ ಬರ್ತಾರಾ ಎನ್ನುವ ಪ್ರಶ್ನೆಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿತ್ತು. ಈ ನಡುವೆ ಉಚ್ಛಾಟಿತ ನಾಯಕನ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ.
ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತೂ ಶಾಸಕ ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ.  ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡೋದಾಗಿ ತಿಳಿಸಿದ್ದಾರೆ. ಅಲ್ಲದೆ, ಪಕ್ಷದ ಅಭ್ಯರ್ಥಿಗಳು ಆಹ್ವಾನಿಸಿದರೆ ಪ್ರಚಾರಕ್ಕೂ ಹೋಗಲು ಸಿದ್ಧವಿರುವುದಾಗಿ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಖಂಡಿಸಿದ ಜರ್ಮನ್ ಚಾನ್ಸೆಲರ್ ಮೆರ್ಜ್ – Kannada News | PM Modi and German Chancellor Friedrich Merz condemn Pahalgam attack and Delhi blast

ನವದೆಹಲಿ, ಜನವರಿ 12: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನವೆಂಬರ್ 10ರ ದೆಹಲಿ ಸ್ಫೋಟವನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ (UN) ಚಾರ್ಟರ್ ಪ್ರಕಾರ “ಸಮಗ್ರ ಮತ್ತು ನಿರಂತರ ರೀತಿಯಲ್ಲಿ” ಭಯೋತ್ಪಾದನೆಯನ್ನು ಎದುರಿಸಲು ಸಂಘಟಿತ ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಕರೆ ನೀಡಿದರು.

ಭಾರತ ಮತ್ತು ಜರ್ಮನಿ ಜಂಟಿಯಾಗಿ ನೇತೃತ್ವದ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮದ (ಐಪಿಒಐ) ಸಾಮರ್ಥ್ಯ ವೃದ್ಧಿ ಮತ್ತು ಸಂಪನ್ಮೂಲ ಹಂಚಿಕೆ ಸ್ತಂಭದ ಅಡಿಯಲ್ಲಿ ಚಟುವಟಿಕೆಗಳನ್ನು ಒಳಗೊಂಡಂತೆ ಈ ಪ್ರದೇಶದಲ್ಲಿ ಬರ್ಲಿನ್‌ನ ನಿರಂತರ ಪ್ರಕ್ರಿಯೆಗಳನ್ನು ಭಾರತ ಸ್ವಾಗತಿಸಿದೆ.

ಇದನ್ನೂ ಓದಿ: ಜರ್ಮನಿ ಅಧ್ಯಕ್ಷ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿಯಿಂದ ಸಿಇಒಗಳ ಸಭೆ

“ಯುಎನ್ 1267 ನಿರ್ಬಂಧಗಳ ಸಮಿತಿಯಲ್ಲಿ ಪಟ್ಟಿ ಮಾಡಲಾದವುಗಳನ್ನು ಒಳಗೊಂಡಂತೆ ಭಯೋತ್ಪಾದಕರು ಮತ್ತು ಭಯೋತ್ಪಾದಕ ಘಟಕಗಳ ವಿರುದ್ಧ ಸಹಕಾರವನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಭಯೋತ್ಪಾದಕ ಸುರಕ್ಷಿತ ತಾಣಗಳು ಮತ್ತು ಮೂಲಸೌಕರ್ಯವನ್ನು ನಿರ್ಮೂಲನೆ ಮಾಡಲು ಹಾಗೂ ಅಂತಾರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಭಯೋತ್ಪಾದಕ ಜಾಲಗಳು ಮತ್ತು ಹಣಕಾಸು ಅಡ್ಡಿಪಡಿಸಲು ಎರಡೂ ದೇಶಗಳು ಕೆಲಸ ಮಾಡುವುದನ್ನು ಮುಂದುವರಿಸಲು ಕರೆ ನೀಡಿವೆ” ಎಂದು ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಮುಂದಿನ ವರ್ಷ ದೆಹಲಿಗೆ ಟ್ರಂಪ್ ಭೇಟಿ ಸಾಧ್ಯತೆ, ಭಾರತ ನಮ್ಮ ಅತ್ಯಗತ್ಯ ಪಾಲುದಾರ; ಅಮೆರಿಕದ ರಾಯಭಾರಿ ಹೇಳಿದ್ದೇನು?

ಭಾರತ ಮತ್ತು ಜರ್ಮನ್ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಮೆರ್ಜ್ ಇಂದು 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ತಮ್ಮ ಭೇಟಿಯ ಮೊದಲ ದಿನದಂದು ಮೆರ್ಜ್ ಅಹಮದಾಬಾದ್‌ನಲ್ಲಿರುವ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು. ನಂತರ, ಅವರು ಮತ್ತು ಪ್ರಧಾನಿ ಮೋದಿ ಸಬರಮತಿ ನದಿ ದಂಡೆಗೆ ಭೇಟಿ ನೀಡಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿದರು.

ಇದರ ನಂತರ, ಇಬ್ಬರು ನಾಯಕರು ದ್ವಿಪಕ್ಷೀಯ ಸಭೆ ನಡೆಸಿದರು, ಈ ಸಂದರ್ಭದಲ್ಲಿ ಅವರು ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿನ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಹಾಗೇ, ಭಯೋತ್ಪಾದನೆ ಮಾನವೀಯತೆಗೆ ಗಂಭೀರ ಬೆದರಿಕೆ ಎಂದು ಇಬ್ಬರೂ ಅಭಿಪ್ರಾಯಪಟ್ಟರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ SP – Kannada News | Shidlaghatta Police Arrests Andra Pradesh Woman For theft 240 gram Gold In Chikkaballapur

ಚಿಕ್ಕಬಳ್ಳಾಪುರ, (ಜನವರಿ 12): ಕೆಎಸ್​​ಆರ್​​ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂದ್ರ ಪ್ರದೇಶದ ಕುಪ್ಪಂ ಮೂಲದ ಮೀನಾಕ್ಷಿಯನ್ನ ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ.. – Kannada News | Bigg Boss Kannada Season 12 Ashwini Gowda wants her fans to call with these titles

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಫಿನಾಲೆ (Bigg Boss Kannada Finale) ವಾರಕ್ಕೆ ಕಾಲಿಟ್ಟಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಟಾಸ್ಕ್ ಇಲ್ಲ. ಆದರೆ ಕೆಲವು ಚಟುವಟಿಕೆಗಳನ್ನು ನೀಡಲಾಗಿದೆ. ಅಭಿಮಾನಿಗಳು ನಿಮ್ಮನ್ನು ಯಾವ ಬಿರುದುಗಳಿಂದ ಗುರುತಿಸಬೇಕು ಎಂಬ ಇಚ್ಛೆ ಇದೆ ಎಂದು ಸ್ಪರ್ಧಿಗಳಿಗೆ ಬಿಗ್ ಬಾಸ್ ಕೇಳಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರು ತಮ್ಮ ಆಯ್ಕೆಗಳನ್ನು ತಿಳಿಸಿದ್ದಾರೆ. ‘ಛಲಗಾರ್ತಿ ಅಶ್ವಿನಿ, ಹಠವಾದಿ ಅಶ್ವಿನಿ, ಕಿಚ್ಚು ಅಶ್ವಿನಿ, ಬೆಂಕಿ ಅಶ್ವಿನಿ, ಖಡಕ್ ಅಶ್ವಿನಿ’ ಎಂಬಿತ್ಯಾದಿ ಬಿರುದುಗಳನ್ನು ಅಶ್ವಿನಿ ಗೌಡ ಅವರು ಸೂಚಿಸಿದ್ದಾರೆ. ಗಿಲ್ಲಿ ನಟ (Gilli Nata) ಅವರು ‘ಪಳಾರ್ ಗಿಲ್ಲಿ, ಕಲಾಕಾರ್ ಗಿಲ್ಲಿ, ಕಿತಾಪತಿ ಕಿಂಗ್, ಮಾತಿನ ಮಲ್ಲ’ ಎಂಬಿತ್ಯಾದಿ ಬಿರುದುಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ವೀಕ್ಷಕರ ಕೌತುಕ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ – Kannada News | Bengaluru: Mother Caught Hiding Mobile Phone in Private Parts While Visiting Son at Parappana Agrahara Jail

ಬೆಂಗಳೂರು, ಜನವರಿ 12: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಇತ್ತೀಚೆಗೆ ಪರಿಶೀಲನೆ ನಡೆಸಿದ್ದಾಗ ಮೊಬೈಲ್ (Mobile)​ ಹಾಗೂ ಸಿಮ್​ ಕಾರ್ಡ್​ಗಳು ಪತ್ತೆಯಾಗಿದ್ದವು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಜೈಲಿನಲ್ಲಿರುವ ಮಗನ ಭೇಟಿಗೆ ಬಂದಿದ್ದ ತಾಯಿ ತಮ್ಮ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದಿದ್ದಾರೆ. ಸದ್ಯ ತಾಯಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ಜೈಲಿನಲ್ಲಿರುವ ಮಗ ಭರತ್​​ನನ್ನು ನೋಡಲು ತಾಯಿ ಲಕ್ಷ್ಮೀ ನರಸಮ್ಮ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದರು. ವಿಸಿಟರ್ ಪಾಸ್ ಪಡೆದುಕೊಂಡು ಬಂದಿದ್ದ ಲಕ್ಷ್ಮೀ ನರಸಮ್ಮರನ್ನು ತಪಾಸಣೆ ಮಾಡಿದಾಗ ಗುಪ್ತಾಂಗದಲ್ಲಿ ಮೊಬೈಲ್​ ಇಟ್ಕೊಂಡು ಬಂದಿದ್ದು ಪತ್ತೆ ಆಗಿದೆ.

ಎಫ್​ಐಆರ್​ನಲ್ಲಿ ಏನಿದೆ?

ಕೇಂದ್ರ ಕಾರಾಗೃಹದ ಪ್ರಭಾರ ಅಧೀಕ್ಷಕ ಪರಮೇಶ್ ಹೆಚ್.ಎ ಅವರ ತಮ್ಮ ಸಂಸ್ಥೆಯ ಸಿಬ್ಬಂದಿ ಕು. ವಸಂತಮ್ಮ ವೀಕ್ಷಕಿ ಮುಖ್ಯ ವೀಕ್ಷಕರು ಮುಖಾಂತರ ಕಳುಹಿಸಿದ ದೂರಿನ ಸಾರಾಂಶವೇನೆಂದರೆ ಕೇಂದ್ರ ಕಾರಾಗೃಹದ ಮುಖ್ಯದ್ವಾರದ ಹೊರಗೆ ಎಡಭಾಗದಲ್ಲಿರುವ ತಪಾಸಣಾ ವಿಭಾಗ-01 (ಸಾಮಾನ್ಯ ಸಂದರ್ಶನ ವಿಭಾಗ) ಬಂದಿಗಳ ಸಂದರ್ಶನಕ್ಕೆ ಬರುವ ಸಾರ್ವಜನಿಕರನ್ನು ಮತ್ತು ಅವರು ತರುವಂತಹ ವಸ್ತುಗಳನ್ನು ತಪಾಸಣೆ ಮಾಡಲು ಸಾಮಾನ್ಯ ಕರ್ತವ್ಯಕ್ಕೆ ಕೆಎಸ್​ಐಎಸ್​ಎಫ್ ಮತ್ತು ಸಿಬ್ಬಂದಿಯನ್ನು  ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್​​ ಕುಮಾರ್​​ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ

ಜನವರಿ 02ರಂದು ಸಮಯ ಸುಮಾರು ಮಧ್ಯಾಹ್ನ 12:10 ಗಂಟೆಗೆ ಸಾಮಾನ್ಯ ಸಂದರ್ಶನಕ್ಕೆ ಲಕ್ಷ್ಮೀ ನರಸಮ್ಮ (38) ಅವರು ವಿಸಿಟರ್ ಪಾಸ್ ಪಡೆದುಕೊಂಡು 9689/2205 ವಿಚಾರಣಾಧೀನಾ ಸಂಖ್ಯೆ ಹೊಂದಿರುವ ಭರತ್ ಎಂಬ ಕಾರಾಗೃಹ ಬಂದಿಯ ಸಂದರ್ಶನಕ್ಕೆ ಬಂದ ಸಂದರ್ಭದಲ್ಲಿ ತಪಾಸಣಾ ಕರ್ತವ್ಯದಲ್ಲಿದ್ದ ಆಶಾರಾಣಿ ವೈ ಎನ್, ತಪಾಸಣಾ ಕೊಠಡಿಗೆ ಕರೆದುಕೊಂಡು ಹೋಗಿ ಭೌತಿಕವಾಗಿ ತಪಾಸಣೆ ನಡೆಸಿದಾಗ, ಖಾಸಗಿ ಭಾಗದೊಳಗೆ ಒಂದು ಸಂಖ್ಯೆಯ ಬೇಸಿಕ್ ಕಂಪನಿಯ ನೀಲಿ ಬಣ್ಣದ ಮೊಬೈಲ್ (ಸಿಮ್ ಸಹಿತ) ಪತ್ತೆ ಆಗಿದೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ಅಲೋಕ್​​ ಕುಮಾರ್​​ : ದಾಸನ ಬಗ್ಗೆ ಹೇಳಿದ್ದಿಷ್ಟು

ಮಹಿಳೆಯು ಕಾರಾಗೃಹದ ನಿಯಮ ಉಲ್ಲಂಘನೆ ಮಾಡಿ ಕೆಎಸ್​ಐಎಸ್​ಎಫ್​ ಸಿಬ್ಬಂದಿಯವರ ಕಣ್ಣಪ್ಪಿಸಿ ಕಾರಾಗೃಹದ ಒಳಗಡೆ ನಿಷೇಧಿತ ವಸ್ತು, ಸಾಗಿಸಲು ಪ್ರಯತ್ನಿಸಿರುವುದರಿಂದ ಲಕ್ಷ್ಮೀ ನರಸಮ್ಮ ಮತ್ತು ವಿಚಾರಣಾ ಬಂದಿ ಭರತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NZ: ತಂಡಕ್ಕೆ ಆಯ್ಕೆಯಾದರೂ ಆಯುಷ್ ಬದೋನಿಗೆ ಆಡುವ ಅವಕಾಶವಿಲ್ಲ – Kannada News | IND vs NZ 2nd ODI: Sundar Injury Blow, Reddy Set for Rajkot Debut; Kohli Eyes Ton

ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೂ, ದೆಹಲಿ ನಾಯಕ ಆಯುಷ್ ಬದೋನಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ. ಎರಡನೇ ಪಂದ್ಯದಲ್ಲಿ ಆಯುಷ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆಗಳಿಲ್ಲ. ತಂಡದ ಆಡಳಿತ ಮಂಡಳಿಯು ಬಡೋನಿಗಿಂತ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಆದ್ಯತೆ ನೀಡಲಿದೆ ಎಂದು ವರದಿಯಾಗಿದ್ದು, ಮುಂದಿನ ಏಕದಿನ ಪಂದ್ಯದಲ್ಲಿ ಅವರು ಆಡುವುದನ್ನು ಕಾಣಬಹುದು.

Source link