Category Archives: Blog

Your blog category

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ – Kannada News | Dharmasthala Case: Punyakshetra Sanrakshana Samiti Urges Government to Release SIT Interim Report

ಬೆಂಗಳೂರು, ಜೂನ್​​ 17: ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧ ಷಡ್ಯಂತ್ರ, ಅಪಪ್ರಚಾರ ಪ್ರಕರಣದಲ್ಲಿ ಅನೇಕರ ಚಾರಿತ್ರ್ಯ ಹನನವನ್ನು ನೋಡಿದ್ದೇವೆ. ಇಂದು ಷಡ್ಯಂತ್ರ ಹೊರ ಬಂದಿದೆ. ಅದೇ ರೀತಿ ರಾಜ್ಯದ ಬೇರೆ ಬೇರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ನಡೆದಿತ್ತು. ಬೇರೆ ಬೇರೆ ಮೂಲಗಳಿಂದ ಹಣದ ಬಂದಿತ್ತು. ನಾವು ಜನಾಗ್ರಹ ಸಭೆಗಳನ್ನು ಮಾಡುತ್ತೇವೆ. ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಕೇಂದ್ರ ಸರ್ಕಾರದ ಬಳಿ ಹೋಗುತ್ತೇವೆ ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಮುಖ್ಯಾಂಶಗಳು

  • ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ
  • ಬೆಂಗಳೂರಿನಲ್ಲಿ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ಸುದ್ದಿಗೋಷ್ಠಿ
  • ಷಡ್ಯಂತ್ರ ಹೊರ ಬಂದಿದೆ ಎಂದ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ

ಚಕ್ರವರ್ತಿ ಸೂಲಿಬೆಲೆ ಹೇಳಿದ್ದಿಷ್ಟು 

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ವಿಚಾರವಾಗಿ ಇಂದು ನಗರದಲ್ಲಿ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಒಂದು ತಂಡ ಸಿದ್ದರಾಮಯ್ಯನ ಸುತ್ತಮುತ್ತ ಓಡಾಡಿಕೊಂಡು ಎಸ್ಐಟಿ ರಚನೆ ಮಾಡಿಸಿದ್ದರು. ನನಗೆ ಆಮಿಷ ಒಡ್ಡಲಾಯಿತು ಅಂತಾ ಕೋರ್ಟ್​ನಲ್ಲಿ ಚಿನ್ನಯ್ಯ ಹೇಳುತ್ತಿದ್ದಾನೆ. ಇದು ನೇರವಾಗಿ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರಕ್ಕೆ ಮೋಸ ಅಲ್ಲ, 7 ಕೋಟಿ ಜನರಿಗೆ ಮಾಡುತ್ತಿರುವ ಮೋಸ ಎಂದರು.

ಇದನ್ನೂ ಓದಿ: ಧರ್ಮಸ್ಥಳ ಕೇಸ್​: ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ರಹಸ್ಯ ರಿವೀಲ್

ಇನ್ನು ನಿನ್ನ ತಬ್ಬಿಕೊಳ್ಳುತ್ತೇನೆ ಎಂದು ಚಿನ್ನಯ್ಯಗೆ ನಟ ಪ್ರಕಾಶ್ ರಾಜ್ ಹೇಳಿದ್ದರಂತೆ. ಅವರ ಉದ್ದೇಶ ಏನಿತ್ತು, ಏಕೆ ಹಾಗೆ ಹೇಳಿದ್ದಾರೆ ಗೊತ್ತಿಲ್ಲ. ಚಿನ್ನಯ್ಯನಿಗೆ ಪ್ರೇರಣೆ ಕೊಟ್ಟ ಪ್ರಕಾಶ್ ರಾಜ್ ವೀರೇಂದ್ರ ಹೆಗ್ಗಡೆಗೆ ಜಂಟಲ್ ಮ್ಯಾನ್ ಎನ್ನುತ್ತಾರೆ. ಜನರ ಆಸ್ತಿಕತೆಯ ಮೇಲೆ ಆಗಿರುವ ಆಘಾತಕ್ಕೆ ಪ್ರಕಾಶ್ ರಾಜ್ ಕ್ಷಮೆ ಕೇಳುತ್ತಾರಾ? ಪ್ರಕಾಶ್ ರಾಜ್ ಕರೆ ಮಾಡಿದ್ದನ್ನು ವರದಿಯಲ್ಲಿ ದಾಖಲಿಸಿದ್ದಾರಾ? ರಾಜ್ಯ ಸರ್ಕಾರ SIT ಮಧ್ಯಂತರ ವರದಿ ಬಹಿರಂಗ ಮಾಡಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಎಲ್ಲಿದೆ ಮೂಳೆಗಳ ರಾಶಿ? ವಸಂತ್​ ಗಿಳಿಯಾರ್ ಪ್ರಶ್ನೆ

ವಸಂತ್​ ಗಿಳಿಯಾರ್ ಮಾತನಾಡಿದ್ದು, ನಾವು ಧರ್ಮಸ್ಥಳ ಪರವಾದ ಪಿಆರ್​ಓ ಅಲ್ಲ. ಧರ್ಮಸ್ಥಳದವರು ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಟ್ಟಿರಬಹುದು. ಮೂಳೆಗಳ ರಾಶಿ ಸಿಕ್ಕಿದೆ ಎಂದು ಯೂಟ್ಯೂಬ್​​ನಲ್ಲಿ ವರದಿ ಮಾಡಿದರು. ಎಲ್ಲಿದೆ ಮೂಳೆಗಳ ರಾಶಿ? ಸುಳ್ಳು ವರದಿಯನ್ನು ಎಸ್ಐಟಿ ತಡೆ ಹಾಕಿದ್ದರೆ ಇಷ್ಟು ಡ್ಯಾಮೇಜ್ ಆಗುತ್ತಿರಲಿಲ್ಲ. ಷಡ್ಯಂತ್ರ ಮಾಡಿದವರು ಕೆಲವು ಯೂಟ್ಯೂಬರ್​ಗಳನ್ನು ಹಣ ಕೊಟ್ಟು ಸಾಕಿಕೊಂಡಿದ್ದಾರೆ. ಎಲ್ಲರೂ ಇದ್ದಿದ್ದು ಷಡ್ಯಂತ್ರ ಕೂಟದ ಮನೆಯಲ್ಲೇ. ಎಸ್ಐಟಿ ಮಧ್ಯಂತರ ವರದಿಯನ್ನು ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಅಂದು ನಾವು ಮಾಡಿರುವ ಆರೋಪಗಳು ನಿಜ ಅಂತಾ ಸಾಬೀತಾಗಿದೆ. ಇದರಲ್ಲಿ ಖಳ ನಟ ಅಥವಾ ಚಿತ್ರನಟ ಪ್ರಕಾಶ್ ರಾಜ್ ಹೆಸರು ಕೂಡ ಕೇಳಿಬಂದಿದೆ. ಚಿನ್ನಯ್ಯ ಜೊತೆ ಮಾತಾಡಿದ್ದು ನಿಜ ಅಂತಾ ಪ್ರಕಾಶ್ ರಾಜ್ ಒಪ್ಪಿಕೊಂಡಿದ್ದಾರೆ. ಎಸ್ಐಟಿ ಮುಖ್ಯಸ್ಥ ಮೊಹಂತಿ ಜೊತೆ ಮಾತನಾಡಿದ್ದನ್ನು ಒಪ್ಪಿಕೊಂಡಿದ್ದಾರೆ. ಗೃಹ ಸಚಿವರಾಗಿದ್ದ ಡಾ. ಜಿ ಪರಮೇಶ್ವರ್ ಮುಚ್ಚಿಟ್ಟ ಸತ್ಯವನ್ನು ಪ್ರಿಯಾಂಕ್ ಖರ್ಗೆ ಬಯಲು ಮಾಡಬೇಕು ಎಂದರು.

ಚಿನ್ನಯ್ಯಗೆ ಹೆಡ್ ಫೋನ್ ಮೂಲಕ ಡೈರೆಕ್ಷನ್ ನೀಡುತ್ತಿದ್ದರು

ನನ್ನ ಕಿವಿಗೆ ಹೆಡ್ ಫೋನ್ ಹಾಕಲಾಗಿತ್ತು ಅಂತಾ ರಿಟ್ ಅರ್ಜಿಯಲ್ಲಿ ಚಿನ್ನಯ್ಯ ಹೇಳಿದ್ದಾನೆ. ಮಾಸ್ಕ್ ಹಾಕಿದ್ದ ರಹಸ್ಯವೇ ಹೆಡ್ ಫೋನ್ ಹಾಕಿರುವುದು. ಅಂದು ಗುಂಡಿ ಅಗೆಯುವ ವೇಳೆ ಚಿನ್ನಯ್ಯ ಅತ್ತಿತ್ತ ಓಡಾಡುತ್ತಿದ್ದ. ಆಗ ಆತನಿಗೆ ಹೆಡ್ ಫೋನ್ ಮೂಲಕ ಡೈರೆಕ್ಷನ್ ಕೊಡುತ್ತಿದ್ದರು ಎನ್ನುವುದು ಈಗ ಸ್ಪಷ್ಟ ಆಗಿದೆ. ಎಡಪಂಥೀಯ ಚಿಂತಕರೇ ಎಸ್ಐಟಿಯನ್ನು ಮುನ್ನಡೆಸುವ ರೀತಿಯಲ್ಲಿ ಕಂಡುಬರುತ್ತಿದೆ. ಚಿನ್ನಯ್ಯ ಜೊತೆ ಮಾತಾಡಬೇಡಿ ಎಂದು ಪ್ರಣಬ್ ಮೊಹಂತಿ ಹೇಳಿದ್ದರು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಚಿನ್ನಯ್ಯ ಜೊತೆ ಪ್ರಕಾಶ್ ರಾಜ್ ಸಂಪರ್ಕದಲ್ಲಿರುವುದು ಗೊತ್ತಾದ ಕೂಡಲೇ ಪ್ರಣಬ್ ಮೊಹಂತಿ ನೋಟಿಸ್ ಕೊಡಬೇಕಿತ್ತಲ್ವಾ ಎಂದು ವಸಂತ್​ ಗಿಳಿಯಾರ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌: ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಮಾಡವಂತೆ ಎಸ್​ಐಟಿಗೆ ಗಿರೀಶ್ ಮಟ್ಟಣ್ಣನವರ್​​ ದೂರು

ನಾವು ಎಸ್ಐಟಿ ಮುಖ್ಯಸ್ಥರ ಮೇಲೆ ಆರೋಪ ಮಾಡುತ್ತಿಲ್ಲ. ಪ್ರಣಬ್ ಮೊಹಂತಿ ನನಗೆ ಸೂಚಿಸಿದ್ದರು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಇದೇ ಪ್ರಕಾಶ್ ರಾಜ್ ತಮ್ಮ ನಿರ್ದಿಗಂತ ನಾಟಕದಲ್ಲಿ ಧರ್ಮಾಧಿಕಾರಿಗಳನ್ನು ತುಚ್ಛವಾಗಿ ತೋರಿಸಿದ್ದಾರೆ. ಪ್ರಕಾಶ್ ರಾಜ್ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದಾಗ ನಾವು ಪ್ರಶ್ನೆ ಮಾಡಿದ್ದೇವೆ ಎಂದರು.

ಸರ್ಕಾರ ಸೂಕ್ತ ತನಿಖೆ ನಡೆಸಬೇಕು: ವಿಕಾಸ್ ಕುಮಾರ್ ಪುತ್ತೂರು

ವಿಕಾಸ್ ಕುಮಾರ್ ಪುತ್ತೂರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯ ಎಂಬ ವ್ಯಕ್ತಿ ಷಡ್ಯಂತ್ರ ಆಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಷಡ್ಯಂತ್ರದ ಸೂತ್ರಧಾರಿ ಯಾರು ಎಂದು ಬಯಲಾಗಬೇಕಿದೆ. ಈ ಪ್ರಕರಣವನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂಬ ಅನುಮಾನ ಇದೆ. ಹೊಸ ಗೃಹ ಸಚಿವರು ಎಲ್ಲವನ್ನೂ ಬಹಿರಂಗಪಡಿಸಲಿ. ಎಡಪಂಥೀಯರ ಮನವಿಯಂತೆ ಎಸ್ಐಟಿ ರಚಿಸಲಾಗಿದೆ ಎಂದು ಅಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಹೇಳಿದ್ದರು. ಆ ಎಡಪಂಥೀಯರು ಯಾರು ಅಂತಾ ಬಹಿರಂಗವಾಗಲಿ. ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:18 pm, Wed, 17 June 26

Source link

ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು – Kannada News | Resign if you want to switch Sanjay Raut challenges rebel MPs of Uddhav Thackeray Shiv Sena

ನವದೆಹಲಿ, ಜೂನ್ 17: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಬಿರುಕು ಮೂಡಲಿದೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ಬಣದ ಪ್ರಮುಖ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ (Sanjay Raut) ಇಂದು ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂಡಾಯಗಾರರಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಪಕ್ಷಾಂತರ ಮಾಡಬೇಕೆಂಬ ಆಲೋಚನೆ ಇರುವವರು ಮೊದಲು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಲಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಈ ಬೆಳವಣಿಗೆಯು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಶಿವಸೇನೆ ಠಾಕ್ರೆ ಬಣದ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಹಗಲಿರುಳು ಶ್ರಮಿಸಿ ಇವರನ್ನು ಲೋಕಸಭೆಗೆ ಗೆಲ್ಲಿಸಿದ್ದಾರೆ. ಉದ್ಧವ್ ಠಾಕ್ರೆ ಅವರ ನಾಯಕತ್ವ ಹಾಗೂ ಪಕ್ಷದ ಚಿಹ್ನೆಯಡಿ ಗೆದ್ದು ಬಂದಿರುವ ಸಂಸದರು, ಈಗ ಪಕ್ಷದಲ್ಲಿ ಇರಲು ಇಷ್ಟವಿಲ್ಲದಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಗುಡುಗಿದ್ದಾರೆ. ಆಶ್ಚರ್ಯದ ಸಂಗತಿಯೆಂದರೆ, ಉದ್ಧವ್ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ ಕೇವಲ ಮೂವರು (ಅರವಿಂದ್ ಸಾವಂತ್, ಅನಿಲ್ ದೇಸಾಯಿ ಮತ್ತು ರಾಜಾಭಾವು ವಾಜೆ) ಮಾತ್ರ ಸಂಜಯ್ ರಾವತ್ ಅವರ ಈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಉದ್ಧವ್ ಠಾಕ್ರೆಯವರ ಶಿವಸೇನೆಯಲ್ಲಿ ಬಿರುಕು; ಪ್ರತ್ಯೇಕ ಗುಂಪು ರಚಿಸುತ್ತಾರಾ ಯುಟಿಬಿ ಸಂಸದರು?

ನಮ್ಮ ಪಕ್ಷದ ಸಂಸದರನ್ನು ಸೆಳೆಯಲು ವಿರೋಧಿ ಬಣಗಳು ಮತ್ತು ತೃತೀಯ ಶಕ್ತಿಗಳು ಹಣದ ಹೊಳೆಯನ್ನೇ ಹರಿಸುತ್ತಿವೆ ಎಂದು ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಪಕ್ಷದ ಸಂಸದರನ್ನು ಖರೀದಿಸಲು ತಲಾ 50 ಕೋಟಿ ರೂ. ಹಾಗೂ ಇತರೆ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಿದೆ. ಕೆಲವು ಸಂಸದರನ್ನು ರಹಸ್ಯವಾಗಿ ಕರೆದೊಯ್ಯಲು ಈಗಾಗಲೇ ವಿಶೇಷ ಚಾರ್ಟರ್ಡ್ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.

ಪಕ್ಷದ ‘ವಿಪ್’ ಈಗಲೂ ಜಾರಿಯಲ್ಲಿದೆ. ಪಕ್ಷದ ಅಸ್ತಿತ್ವದ ಕಾನೂನು ಹೋರಾಟ ಮುಂದುವರಿದಿದ್ದು, ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಕುರಿತು ಲೋಕಸಭಾ ಸ್ಪೀಕರ್ ಅವರಿಗೆ ಅಧಿಕೃತ ಪತ್ರ ಬರೆಯಲಾಗಿದೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್‌ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್‌ – Kannada News | Bengaluru: Auto driver receives money from passengers by showing QR code on smartwatch

ಬೆಂಗಳೂರು, ಜೂನ್ 17: ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಜನರು ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸುತ್ತಾರೆ. ಈ ಆಟೋ ಚಾಲಕನ ಐಡಿಯಾ ಮಾತ್ರ ವಿಭಿನ್ನವಾಗಿದೆ. ಹೌದು, ಆಟೋದಲ್ಲಿ ಸೀಟಿನ ಹಿಂದೆ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ತನ್ನ ಆಟೋದಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಹೊಸ ಐಡಿಯಾವನ್ನು ಕಂಡುಕೊಂಡಿದ್ದಾನೆ. ಬೆಂಗಳೂರಿನ (Bengaluru) ಈ ಆಟೋ ಚಾಲಕನ ಕೈಯಲ್ಲಿರುವ ಸ್ಮಾರ್ಟ್ ವಾಚ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸ್ಮಾರ್ಟ್‌ವಾಚ್‌ನ ಸ್ಕ್ರೀನ್ ಮೇಲೆ ಕ್ಯೂಆರ್ ಕೋಡ್‌ನ್ನು ಅಳವಡಿಸಿಕೊಂಡಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಈ ಆಟೋ ಚಾಲಕನ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ.

ಹೇಮಂತ್ (Hemant) ಎಂಬ ಬಳಕೆದಾರರು ತಮ್ಮ ಎಕ್ಸ್ ಖಾತೆಯಲ್ಲಿ ಬೆಂಗಳೂರಿನ ಆಟೋಚಾಲಕ ಸ್ಮಾರ್ಟ್ ಟ್ರಿಕ್ಸ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ಇಂದು ಇಂದಿರಾ ನಗರದಿಂದ ಕೋರಮಂಗಲಕ್ಕೆ ಆಟೋದಲ್ಲಿ ಬಂದೆ. ಆಟೋದಿಂದ ಇಳಿಯುವ ವೇಳೆಗೆ ಕ್ಯೂಆರ್ ಕೋಡ್ ಕೇಳಿದೆ. ಆಟೋ ಚಾಲಕ ತನ್ನ ಕೈಯನ್ನು ಎತ್ತಿ ಹಿಡಿದ. ಕ್ಯೂಆರ್ ಕೋಡ್ ಆತನ ಸ್ಮಾರ್ಟ್‌ವಾಚ್‌ನಲ್ಲಿದ್ದನ್ನು ಕಂಡು ಶಾಕ್ ಅದೆ. ಚಾಲಕನ ಸ್ಮಾರ್ಟ್‌ ಐಡಿಯಾಕ್ಕೆ ಫಿದಾ ಆದೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಎಚ್ಎಸ್ಆರ್ ಲೇಔಟ್‌ನ 1BHK ನಲ್ಲಿ ವಾಸಿಸುವ ಮಹಿಳೆಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬೆಂಗಳೂರಿನ ಆಟೋ ಚಾಲಕರು ಯಾವುದರಲ್ಲೂ ಕಡಿಮೆಯಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಸ್ಮಾರ್ಟ್ ವಾಚ್ ಗೆ ಕ್ಯೂ ಆರ್ ಕೋಡ್ ಅಳವಡಿಸಿಕೊಂಡದ್ದನ್ನು ನೋಡಿ ಅಚ್ಚರಿಯಾಯ್ತು. ತಂತ್ರಜ್ಞಾನವನ್ನು ಎಲ್ಲರೂ ಒಳ್ಳೆಯದ್ದಕ್ಕೆ ಬಳಸಿಕೊಳ್ಳಲಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಸ್ಮಾರ್ಟ್ ವಾಚ್ ಗೆ ಕ್ಯೂ ಆರ್ ಕೋಡ್ ಅಳವಡಿಸಿಕೊಳ್ಳಲು ಎಷ್ಟು ಖರ್ಚು ಆಯ್ತು ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇರೆಯವರ ಖಾಸಗಿ ಚಿತ್ರ,ವಿಡಿಯೋ ಶೇರ್​ ಮಾಡಿದ್ರೆ ಕೇಸ್ ಫಿಕ್ಸ್: ಎಫ್ಐಆರ್ ಮಾರ್ಗಸೂಚಿ ಹೀಗಿದೆ – Kannada News | Karnataka police mandate FIRs in cases of non consensual sharing of intimate images, DG IGP Order Details

Dr. M. A. Saleem

ಬೆಂಗಳೂರು, (ಜೂನ್ 17): ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್  ಮಾಡುವವರಿಗೆ ತಕ್ಕ ಶಾಸ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ.  ವ್ಯಕ್ತಿಯ ಅನುಮತಿ ಪಡೆದುಕೊಳ್ಳದೆ ಅವರ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ಸಂಬಂಧಿಸಿದಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ( DG-IGP Dr.M.A.Saleem) ಅವರು ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ವಿಸ್ತತವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪೊಲೀಸರು ನಾನಾ ಕಾರಣಗಳನ್ನು ನೀಡಿ ಎಫ್‌ ಐ ಆರ್ ದಾಖಲು ಮಾಡಲು ವಿಳಂಬ ಮಾಡಿದರೆ ಸೂಕ್ತ ರೀತಿಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಬೇರೆಯವರ ಖಾಸಗಿ ಚಿತ್ರ ಶೇರ್​ ಮಾಡಿದ್ರೆ FIR​ ದಾಖಲಿಸಲು ಸೂಚನೆ
  • ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ
  • ಇಂತಹ ದೂರುಗಳನ್ನು ದಾಖಲಿಸಲು ಪೊಲೀಸರು ನಿರಾಕರಿಸುವಂತಿಲ್ಲ
  • ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಮೊದಲು ಒಪ್ಪಿದ್ದರು ಅನ್ನೋ ಕಾರಣ ಕೊಟ್ಟು
    ಪೊಲೀಸರು ದೂರು ಸ್ವೀಕರಿಸದೇ ಇರಬಾರದು

ಸಂತ್ರಸ್ತರು ಮೊದಲು ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಒಪ್ಪಿದ್ದರು ಎಂದ ಮಾತ್ರಕ್ಕೆ ಇಂತ ಕಾರಣ ಕೊಟ್ಟು ದೂರು ಸ್ವೀಕರಿಸದೇ ಇರಬಾರದು. ಚಿತ್ರೀಕರಣದ ಒಪ್ಪಿಗೆಗೂ ಮತ್ತು ಹಂಚಿಕೆ ಅಥವಾ ಪ್ರಸಾರದ ಒಪ್ಪಿಗೆಗೂ ವ್ಯತ್ಯಾಸವಿದೆ. ಇದು ಕಾನೂನು ಪ್ರಕಾರ ಸಂಜ್ಞೆಯ ಅಪರಾಧವಾಗುತ್ತದೆ. ಹೀಗಾಗಿ ಬೇರೆಯವರ ಖಾಸಗಿ ಚಿತ್ರ ವೈರಲ್ ಮಾಡುವವರ ವಿರುದ್ಧ ಎಫ್​​​ಐಆರ್ ದಾಖಲಿಸುವಂತೆ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ

ಆಪ್ತ ವಿಷಯಗಳನ್ನು ಬಳಸಿಕೊಂಡು ಹಣ, ಲೈಂಗಿಕ ಅನುಕೂಲ ಅಥವಾ ಬೇರೆ ಲಾಭಕ್ಕಾಗಿ ಬೆದರಿಕೆ, ಸುಲಿಕೆ ನಡೆಸುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಮಾಡಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಬಿಎನ್‌ಎಸ್ -2023ರ ಅಡಿಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಸಂಬಂಧಿತ ಸೆಕ್ಷನ್ ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲು ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇಂತಹ ಪ್ರಕರಣಗಲ್ಲಿ ಎಲ್ಲಾ ಡಿಜಿಟಲ್ ಸಾಕ್ಷ್ಯವನ್ನು ಗೌಪ್ಯವಾಗಿ ಸಂರಕ್ಷಿಸಬೇಕು. ಅಷ್ಟೇ ಅಲ್ಲದೆ, ಸಂತ್ರಸ್ತರ ಗುರುತು ಗೌಪ್ಯವಾಗಿ ಇರುವಂತೆ ನೋಡಿಕೊಳ್ಳಬೇಕಾಗಿದೆ. ಜೊತೆಗೆ ದೂರುದಾರರನ್ನು ಸೂಕ್ಷ್ಮವಾಗಿ ನಡೆಸಿಕೊಳ್ಳುವಂತೆಯೂ ಮಾರ್ಗಸೂಚಿಯಲ್ಲಿ ಉಲ್ಲೇಖ ಮಾಡಲಾಗಿದೆ. ದೂರುದಾರರನ್ನು ಅವಮಾನ ಮಾಡುವುದನ್ನು ತಪ್ಪಿಸಬೇಕು ಹಾಗೂ ಸಂತ್ರಸ್ತೆಯ ದೂರನ್ನು ಮಹಿಳಾ ಅಧಿಕಾರಿಯೇ ದಾಖಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.

ಆದೇಶದಲ್ಲೇನಿದೆ?

ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ ವಿಳಂಬ ಅಥವಾ ನಿರಾಕರಣೆ ಮಾಡಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ, ಈ ಆದೇಶದಲ್ಲಿ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರೆ ಪ್ರಸಾರಕ್ಕೂ ಒಪ್ಪಿಗೆ ನೀಡಿದಂತೆ ಅಲ್ಲ ಎಂಬ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಒಬ್ಬ ವ್ಯಕ್ತಿ ಚಿತ್ರ ಸೆರೆಹಿಡಿಯಲು ಒಪ್ಪಿಗೆ ನೀಡಿದ್ದರೂ ಅದನ್ನು ಹಂಚಲು ಅಥವಾ ಪ್ರಸಾರ ಮಾಡಲು ಒಪ್ಪಿಗೆ ನೀಡದಿದ್ದರೆ ಅದು ಕಾಗ್ನಿಜೆನ್ಸ್ ಅಪರಾಧವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 77ರಂತೆ ಗೌಪ್ಯತೆ ಉಲ್ಲಂಘನೆಗೆ ಸಂಬಂಧಿಸಿದ ವಿಧಿಗಳು, ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 66(ಇ), 67 ಮತ್ತು 67(ಎ)ಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಮಹಿಳಾ ಸಂತ್ರಸ್ತರಿದ್ದಲ್ಲಿ 77ರ ವಿಧಿಯ ಜೊತೆಗೆ ಐಟಿ ಕಾಯ್ದೆಯ ಸೆಕ್ಷನ್ ಗಳನ್ನು ಸೇರಿಸಿ ಎಫ್‌ಐಆರ್ ಕಡ್ಡಾಯವಾಗಿ ನೋಂದಣಿ ಮಾಡಬೇಕೆಂದು ನಿರ್ದೇಶಿಸಲಾಗಿದೆ.

ಬ್ಲಾಕ್‌ಮೇಲ್ ವೀಡಿಯೊಗಳು, ಸೆಕ್ಸ್ಟೋರ್ಷನ್, ರಿವೆಂಜ್ ಪೋರ್ನೋಗ್ರಫಿ ಮುಂತಾದ ಪ್ರಕರಣಗಳಲ್ಲಿ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಪೀಡಿತರು ಮೊದಲು ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣಕ್ಕೆ ದೂರು ನಿರಾಕರಿಸಬಾರದು. ಅಪರಾಧ ಸ್ಥಳೀಯ ವ್ಯಾಪ್ತಿಯ ಹೊರಗೆ ನಡೆದಿದ್ದರೆ ಝೀರೋ ಎಫ್‌ಐಆರ್ ದಾಖಲಿಸಿ ಸಂಬಂಧಿತ ಠಾಣೆಗೆ ವರ್ಗಾಯಿಸಬೇಕು/

ಅಪರಾಧ ವಿಷಯವನ್ನು ತಕ್ಷಣ ತೆಗೆದುಹಾಕಲು ಐಟಿ ನಿಯಮಗಳ ಪ್ರಕಾರ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್ ನೀಡಬೇಕು ಮತ್ತು ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಕಾನೂನುಬದ್ಧವಾಗಿ ಸಂರಕ್ಷಿಸಬೇಕು. ಪೀಡಿತರ ಗುರುತು ಗೌಪ್ಯವಾಗಿರಬೇಕು, ಮಹಿಳಾ ಸಂತ್ರಸ್ತೆಯ ದೂರುಗಳನ್ನು ಮಹಿಳಾ ಅಧಿಕಾರಿಗಳು ದಾಖಲಿಸುವಂತೆ ಸೂಚಿಸಲಾಗಿದೆ.

ತನಿಖಾಧಿಕಾರಿಗಳು ಸೈಬರ್ ಕ್ರೈಂ ಘಟಕಗಳೊಂದಿಗೆ ಸಮನ್ವಯತೆ ಸಾಧಿಸಿ ತಾಂತ್ರಿಕ ತನಿಖೆ ಹಾಗೂ ಫೋರೆನ್ಸಿಕ್ ವಿಶ್ಲೇಷಣೆ ನಡೆಸಬೇಕು. ಎಫ್‌ಐಆರ್ ನೋಂದಣಿ ಮಾಡದಿರುವುದು ಅಥವಾ ಪೂರ್ವಾನುಮತಿ ಎಂಬ ತಪ್ಪು ಕಾರಣದಿಂದ ವಿಳಂಬ ಮಾಡಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶದಲ್ಲಿ ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಕಲ್ಕಿ 2’ ಚಿತ್ರದಲ್ಲಿ ಆಲಿಯಾ ಭಟ್, ಸಾಯಿ ಪಲ್ಲವಿ ನಟಿಸ್ತಾರಾ? ಉತ್ತರಿಸಿದ ನಿರ್ದೇಶಕ ನಾಗ್ ಅಶ್ವಿನ್ – Kannada News | Kalki 2898 AD director Nag Ashwin clarifies rumours on Alia Bhatt Sai Pallavi joining Kalki 2

‘ರೆಬೆಲ್ ಸ್ಟಾರ್’ ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ ಚಿತ್ರದ ಸೀಕ್ವೆಲ್ (Kalki 2) ಕುರಿತು ದಿನಕ್ಕೊಂದು ಹೊಸ ಗಾಸಿಪ್‌ಗಳು ಹುಟ್ಟಿಕೊಳ್ಳುತ್ತಿವೆ. ಚಿತ್ರದಿಂದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊರನಡೆದ ಬಳಿಕ ಅವರ ಜಾಗಕ್ಕೆ ಆಲಿಯಾ ಭಟ್ (Alia Bhatt) ಅಥವಾ ಸಾಯಿ ಪಲ್ಲವಿ ಬರಲಿದ್ದಾರೆ ಎಂಬ ಬಲವಾದ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಿರ್ದೇಶಕ ನಾಗ್ ಅಶ್ವಿನ್ (Nag Ashwin) ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ.

ಕಳೆದ ವರ್ಷ ‘ವೈಜಯಂತಿ ಮೂವೀಸ್’ ಸಂಸ್ಥೆಯು ದೀಪಿಕಾ ಪಡುಕೋಣೆ ಅವರೊಂದಿಗೆ ಒಪ್ಪಂದ ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕೃತವಾಗಿ ಪ್ರಕಟಿಸಿತ್ತು. ಚಿತ್ರದ ಕಥೆಯಲ್ಲಿ ದೀಪಿಕಾ ನಿರ್ವಹಿಸಿದ್ದ ಸುಮತಿ ಎಂಬ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದರಿಂದ, ಮುಂದಿನ ಭಾಗದಲ್ಲಿ ಈ ಪಾತ್ರದ ಗತಿ ಏನು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿತ್ತು. ಇದೇ ಕಾರಣಕ್ಕೆ ಸುಮತಿ ಪಾತ್ರಕ್ಕೆ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಮತ್ತೊಂದೆಡೆ ಆಲಿಯಾ ಭಟ್ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ ಎಂಬ ವರದಿಗಳು ಬಂದಿದ್ದವು.

ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ನಾಗ್ ಅಶ್ವಿನ್, ‘ಕಲ್ಕಿ 2 ಚಿತ್ರದಲ್ಲಿ ಸುಮತಿ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬುದನ್ನು ನಾವು ಅಧಿಕೃತವಾಗಿ ಘೋಷಿಸಬೇಕಿದೆ. ಸದ್ಯಕ್ಕೆ ಕೇಳಿಬರುತ್ತಿರುವ ಸುದ್ದಿಗಳೆಲ್ಲವೂ ಕೇವಲ ಊಹಾಪೋಹಗಳಷ್ಟೇ. ಆದರೆ ಕಥೆಯಲ್ಲಿ ಸುಮತಿ ಪಾತ್ರ ಖಂಡಿತವಾಗಿಯೂ ಇರಲಿದೆ. ಅದು ಅತ್ಯಂತ ಪ್ರಮುಖವಾದ ಪಾತ್ರವಾಗಿರುವುದರಿಂದ ಅದನ್ನು ಕಥೆಯಿಂದ ತೆಗೆದುಹಾಕಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಫ್ಯಾನ್ಸ್ ವಲಯದಲ್ಲಿ ಕೆಲವು ಗಾಸಿಪ್​ಗಳು ಹರಿದಾಡಿವೆ. ನಿರ್ದೇಶಕರ ಹೇಳಿಕೆಯ ಬೆನ್ನಲ್ಲೇ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತಿದ್ದಾರೆ. ಆಲಿಯಾ ಭಟ್ ಅವರು ದೀಪಿಕಾ ಅವರ ಸುಮತಿ ಪಾತ್ರವನ್ನು ರೀಪ್ಲೇಸ್ ಮಾಡುತ್ತಿಲ್ಲ, ಬದಲಿಗೆ ಕಲ್ಕಿ ಪುರಾಣದಲ್ಲಿ ಬರುವ ವೈಷ್ಣೋದೇವಿ ಎಂಬ ಸಂಪೂರ್ಣ ಹೊಸ ಹಾಗೂ ಶಕ್ತಿಶಾಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಪಾರ್ಟ್ 2 ಪ್ರಭಾಸ್ ಸಿನಿಮಾ ಅಲ್ಲ, ಕಮಲ್ ಹಾಸನ್ ಸಿನಿಮಾ

ಕಲ್ಕಿಯ ತಾಯಿಯಾದ ಸುಮತಿ ಪಾತ್ರಕ್ಕೆ ಸಾಯಿ ಪಲ್ಲವಿ ಅಥವಾ ಆಲಿಯಾ ಭಟ್ ಇಬ್ಬರಲ್ಲಿ ಒಬ್ಬರನ್ನು ನೇರವಾಗಿ ರೀಕಾಸ್ಟ್ ಮಾಡುವ ಸಾಧ್ಯತೆಯೂ ಇದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಸದ್ಯ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರ ಕಾಂಬಿನೇಷನ್‌ನಲ್ಲಿ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ನಟಿಯರ ಅಧಿಕೃತ ಆಯ್ಕೆಯ ಬಗ್ಗೆ ಚಿತ್ರತಂಡ ಶೀಘ್ರದಲ್ಲೇ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೇಲ್ಮನೆ ಮೇಲಾಟ: ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು – Kannada News | bjp expelled MLAs ST Somashekar And Shivaram Hebbar In Congress Camp at Resort ahead of MLC polls

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಇದರ ಮಧ್ಯೆ ಬಿಜೆಪಿಯ ಉಚ್ಛಾಟಿತ ಶಾಸಕರಾದ ಎಸ್​​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳೆಯದಲ್ಲಿ ಗುರುತಿಸಿಕೊಂಡಿರುವುದು ಸಂಚಲನಕ್ಕೆ ಕಾರಣವಾಗಿದೆ.

ಹೌದು….ಏಳನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದ್ದು, ಕೆಲ ಜೆಡಿಎಸ್ ಹಾಗೂ ಬಿಜೆಪಿಯಿಂದ ಗೆದ್ದಿರುವ ಶಾಸಕರನ್ನು ಸೆಳೆಯು ಯತ್ನ ನಡೆಸಿದೆ. ಇದರ ನಡುವೆ ಬಿಜೆಪಿಯ ಇಬ್ಬರು ಉಚ್ಛಾಟಿತ ಶಾಸಕರು, ಕಾಂಗ್ರೆಸ್​​​​​ ಶಾಸಕರಿರುವ ವಂಡರ್​​​ ಲಾ ರೆಸಾರ್ಟ್​​​ ನಲ್ಲಿ ಕಾಣಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Vasthu Tips: ಅಡುಗೆಮನೆಗೆ ಯಾವ ಬಣ್ಣ ಬಳಿಯಬೇಕು? ಅದೃಷ್ಟ ಬದಲಾಯಿಸಬಲ್ಲವು ಈ ಕಲರ್ಸ್! – Kannada News | Best Vastu Colors for Kitchen: Design for Harmony and Wellness at Home

ಅಡುಗೆಮನೆಗೆ ಯಾವ ಬಣ್ಣ ಬಳಕೆಯಾಗಬೇಕು?Image Credit source: Pinterest

ಅಡುಗೆಮನೆಯು ಕೇವಲ ಅಡುಗೆ ಮಾಡುವ ಸ್ಥಳವಲ್ಲ, ಬದಲಿಗೆ ಇದು ಇಡೀ ಕುಟುಂಬದ ಆರೋಗ್ಯ ಮತ್ತು ಯೋಗಕ್ಷೇಮವನ್ನು ನಿರ್ಧರಿಸುವ ಪ್ರಮುಖ ಕೋಣೆಯಾಗಿದೆ. ವಾಸ್ತು ಶಾಸ್ತ್ರದಲ್ಲಿ ಅಡುಗೆಮನೆಯನ್ನು ಮನೆಯ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅಡುಗೆಮನೆಗೆ ಸರಿಯಾದ ದಿಕ್ಕನ್ನು ಆಯ್ಕೆ ಮಾಡುವುದರ ಜೊತೆಗೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ಬಣ್ಣಗಳ ಆಯ್ಕೆಗೆ ವಿಶೇಷ ಗಮನ ನೀಡುವುದು ಅತ್ಯಗತ್ಯ. ವಾಸ್ತು ನಂಬಿಕೆಗಳ ಪ್ರಕಾರ, ಅಡುಗೆಮನೆಗೆ ಸೂಕ್ತವಾದ ಬಣ್ಣಗಳನ್ನು ಆರಿಸುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.

ಅಡುಗೆಮನೆಯ ಬಣ್ಣಗಳ ಮಹತ್ವ:

ವಾಸ್ತು ಪ್ರಕಾರ, ಬಣ್ಣಗಳು ವ್ಯಕ್ತಿಯ ಮನಸ್ಸು, ನಡವಳಿಕೆ ಮತ್ತು ಮನೆಯ ವಾತಾವರಣದ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಅಡುಗೆಮನೆಯಲ್ಲಿ ಬಳಸುವ ಬಣ್ಣಗಳು ಚೈತನ್ಯದಾಯಕ, ಶಾಂತಗೊಳಿಸುವ ಅಥವಾ ಸ್ಪೂರ್ತಿದಾಯಕ ವಾತಾವರಣವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿರುತ್ತವೆ. ಆದ್ದರಿಂದ, ಅಡುಗೆಮನೆಯ ಗೋಡೆಗಳು ಮತ್ತು ಒಳಾಂಗಣ ಅಲಂಕಾರಕ್ಕೆ ಸರಿಯಾದ ಬಣ್ಣಗಳನ್ನು ಆಯ್ಕೆ ಮಾಡುವುದು ಅತ್ಯಗತ್ಯವೆಂದು ಪರಿಗಣಿಸಲಾಗಿದೆ.

ಕೇಸರಿ ಮತ್ತು ಬಿಳಿ ಬಣ್ಣದ ವಿಶೇಷತೆ:

ವಾಸ್ತು ಪ್ರಕಾರ, ಕೇಸರಿ ಬಣ್ಣವು ಶಕ್ತಿ, ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ಸಂಕೇತಿಸುತ್ತದೆ. ಇದು ಮನೆಯಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಮತ್ತು ಸಂಬಂಧಗಳನ್ನು ಬಲಪಡಿಸಲು ಸಹಾಯಕವಾಗಿದ್ದು, ಪೂರ್ವ ದಿಕ್ಕಿನಲ್ಲಿರುವ ಅಡುಗೆಮನೆಗಳಿಗೆ ಈ ಬಣ್ಣವನ್ನು ವಿಶೇಷವಾಗಿ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮತ್ತೊಂದೆಡೆ, ಬಿಳಿ ಬಣ್ಣವು ಶುದ್ಧತೆ, ಸರಳತೆ ಮತ್ತು ಶಾಂತಿಯನ್ನು ಸಂಕೇತಿಸುತ್ತದೆ. ಇದು ಅಡುಗೆಮನೆಗೆ ಸ್ವಚ್ಛ ಮತ್ತು ಉತ್ತಮ ನೋಟವನ್ನು ನೀಡುವುದಲ್ಲದೆ, ಮನೆಯಲ್ಲಿ ಶಾಂತಿಯುತ ವಾತಾವರಣವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ವಾಯುವ್ಯ ದಿಕ್ಕಿನಲ್ಲಿರುವ ಅಡುಗೆಮನೆಗಳಿಗೆ ಬಿಳಿ ಬಣ್ಣವು ವಿಶೇಷವಾಗಿ ಉತ್ತಮವಾಗಿದೆ.

ಇದನ್ನೂ ಓದಿ: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ!

ಹಸಿರು ಮತ್ತು ಗುಲಾಬಿ ಬಣ್ಣದ ಮಹತ್ವ:

ಹಸಿರು ಬಣ್ಣವು ಪ್ರಕೃತಿ ಮತ್ತು ಸಮತೋಲನದ ಸಂಕೇತವಾಗಿದೆ. ಇದು ಕಣ್ಣುಗಳಿಗೆ ಹಿತಕರವಾಗಿದ್ದು, ಅಡುಗೆಮನೆಗೆ ತಾಜಾತನ ಮತ್ತು ಶಾಂತಿಯನ್ನು ತರುತ್ತದೆ ಹಾಗೂ ಉಲ್ಲಾಸಕರ ವಾತಾವರಣವನ್ನು ಸೃಷ್ಟಿಸುತ್ತದೆ. ಇನ್ನು ಗುಲಾಬಿ ಬಣ್ಣವನ್ನು ಪ್ರೀತಿ, ವಾತ್ಸಲ್ಯ ಮತ್ತು ಕುಟುಂಬ ಸಂಬಂಧಗಳ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ, ಗುಲಾಬಿ ಬಣ್ಣವು ಕುಟುಂಬ ಸದಸ್ಯರ ನಡುವೆ ಅನ್ಯೋನ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದ್ದರಿಂದ ನಿಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುವ ಸ್ಥಳಕ್ಕೆ ಈ ಬಣ್ಣವು ಅತ್ಯುತ್ತಮ ಆಯ್ಕೆಯಾಗಿದೆ.

ಕಿತ್ತಳೆ, ಇಟ್ಟಿಗೆ ಕೆಂಪು, ಕಂದು ಮತ್ತು ಹಳದಿ ಬಣ್ಣಗಳು:

ಕಿತ್ತಳೆ ಮತ್ತು ಇಟ್ಟಿಗೆ ಕೆಂಪು ಬಣ್ಣಗಳು ಶಕ್ತಿ ಮತ್ತು ಉತ್ಸಾಹವನ್ನು ಸಂಕೇತಿಸುತ್ತವೆ. ಈ ಬಣ್ಣಗಳು ಅಡುಗೆಮನೆಯಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡುತ್ತವೆ ಮತ್ತು ಇವು ವಿಶೇಷವಾಗಿ ಆಗ್ನೇಯ ದಿಕ್ಕಿನಲ್ಲಿರುವ (South-East) ಅಡುಗೆಮನೆಗಳಿಗೆ ಹೆಚ್ಚು ಸೂಕ್ತವಾಗಿವೆ. ಅದೇ ರೀತಿ, ಕಂದು ಬಣ್ಣವು ಉಷ್ಣತೆ ಮತ್ತು ಸ್ಥಿರತೆಯನ್ನು ನೀಡಿದರೆ, ಹಳದಿ ಬಣ್ಣವನ್ನು ಸಂತೋಷ ಮತ್ತು ಉತ್ಸಾಹದ ಸಂಕೇತವೆಂದು ಪರಿಗಣಿಸಲಾಗುತ್ತದೆ. ನೈಸರ್ಗಿಕ ಬೆಳಕು ವಿರಳವಾಗಿರುವ ಅಥವಾ ಕತ್ತಲೆಯಾಗಿರುವ ಅಡುಗೆಮನೆಯ ವಾತಾವರಣವನ್ನು ಹಳದಿ ಬಣ್ಣವು ಜೀವಂತಗೊಳಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ.

ಮುಖ್ಯಾಂಶಗಳು

  • ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು
  • ಕುಟುಂಬಸ್ಥರು, ಸ್ನೇಹಿತರಿಗೆ ಅಚ್ಚರಿ ಮೂಡಿಸಿದ ಬಾಡಿ ಬಿಲ್ಡರ್ ಸಾವು
  • ಮುಗಿಲು ಮುಟ್ಟಿದ ಕುಟುಂಬ ಸದಸ್ಯರ ಆಕ್ರಂದನ

ನಡೆದಿದ್ದೇನು?

ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಬಂದಿದ್ದ ಸುಶೀಲಕುಮಾರ್, ಸಂಜೆ ಎಂದಿನಂತೆ ಜಿಮ್‌ಗೆ ಹೊರಡಲು ಸಿದ್ಧರಾಗಿದ್ದರು. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ತಾಯಿಯನ್ನ ಕೆಲಸಕ್ಕೆ ಬಿಡಲು ಮುಂದಾಗಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ತಲೆಸುತ್ತು ಬಂದಿದೆ. ಬಿಪಿ ಲೋ ಆಗಿರುವುದು ಕಂಡುಬಂದಿದೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಸುಶೀಲಕುಮಾರ್ ಕೊನೆಯುಸಿರೆಳೆದಿದ್ದಾರೆ. ಹೆತ್ತ ತಾಯಿಯ ಕಣ್ಣೆದುರೇ ಮಗನ ಜೀವ ಹೋಗಿರುವುದು ಮಾತ್ರ ಎಂಥವರಿಗಾದರೂ ಕಣ್ಣೀರು ಬರುತ್ತವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು

ಸುಶೀಲಕುಮಾರ್​ಗೆ ಯಾವುದೇ ಒಂದು ಕೆಟ್ಟ ಹವ್ಯಾಸಗಳಿರಲಿಲ್ಲ. ಕಠಿಣ ಪರಿಶ್ರಮವನ್ನೇ ನಂಬಿದ್ದರು. ರಾಜ್ಯ, ರಾಷ್ಟ್ರೀಯ ಸ್ಪರ್ಧೆಗಳಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ದಿನಕ್ಕೆ ಎರಡು ಸಲ ಜಿಮ್​ಗೆ ಹೋಗುತ್ತಿದ್ದರು. ತನ್ನ ಬಳಿ ತರಬೇತಿ ಪಡೆಯಲು ಬರುತ್ತಿದ್ದ ಯುವಕರಿಗೆ ಶಿಸ್ತಿನ ಪಾಠ ಮಾಡುತ್ತಿದ್ದರು. ದಾವಣಗೆರೆಯಲ್ಲಿ ಹೆಸರು ಮಾಡಿದ್ದ ಯುವಕ ಇಂದು ನೋಡುನೋಡುತ್ತಿದಂತೆ ಇಲ್ಲವಾಗಿರುವುದು ದುರದೃಷ್ಟಕರ.

ಇನ್ನು ಸುಶೀಲಕುಮಾರ್​ಗೆ ತಾಯಿ ಎಂದರೆ ಬಹಳ ಇಷ್ಟ. ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ತಾಯಿ ಬಗ್ಗೆ ಅಪಾರ ಪ್ರೀತಿ ತೋರುವ ನೂರಾರು ವಿಡಿಯೋಗಳು ಇವೆ. ಆದರೆ ಎದೆಯೆತ್ತರಕ್ಕೆ ಬೆಳೆದ ಮಗ ತಮ್ಮ ಕಣ್ಣ ಮುಂದೆ ಸಾವನ್ನಪ್ಪಿರುವುದು ಕಂಡು ತಾಯಿ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಹಾಸನದ ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧ: ಇದುವೇ ಮುಖ್ಯ ಕಾರಣ ಅಂತಿದ್ದಾರೆ ತಜ್ಞರು!

ಇತ್ತೀಚಿನ ದಿನಗಳಲ್ಲಿ ಯುವಕರು ಹೀಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗಷ್ಟೇ ಜಗಳೂರಿನಲ್ಲಿ 9 ವರ್ಷದ ಶಾಲಾ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದ. ಸುಶೀಲಕುಮಾರ್ ಅವರಂತಹ ಸದೃಢ ಯುವಕರ ಸಾವಿಗೆ ನಿಖರ ಕಾರಣ ಏನೆಂಬುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:09 pm, Wed, 17 June 26

Source link

IND vs AFG: 14 ಬೌಂಡರಿ, 4 ಸಿಕ್ಸರ್ ಸಹಿತ 2ನೇ ಏಕದಿನ ಶತಕ ಚಚ್ಚಿದ ಇಶಾನ್ ಕಿಶನ್ – Kannada News | Ishan Kishan’s Second ODI Century: India vs Afghanistan Thriller at Lucknow’s Ekana Stadium

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದಲ್ಲಿ ಭಾರತದ ಪಾಳಯದಿಂದ ಸಿಡಿದ ಎರಡನೇ ಶತಕ ಇದಾಗಿದೆ. ಕಿಶನ್​ಗೂ ಮೊದಲು ನಾಯಕ ಶುಭ್​ಮನ್ ಗಿಲ್ ತಮ್ಮ ಏಕದಿನ ವೃತ್ತಜೀವನದ 9ನೇ ಶತಕ ಸಿಡಿಸಿದರೆ, ಇದೀಗ ಇಶಾನ್ ಕಿಶನ್ ಕೂಡ ತಮ್ಮ ಏಕದಿನ ವೃತ್ತಜೀವನದ ಎರಡನೇ ಶತಕವನ್ನು ಬಾರಿಸಿದರು. ಕಿಶನ್ ಕೇವಲ 71 ಎಸೆತಗಳಲ್ಲಿ 14 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ತಮ್ಮ ಶತಕ ಪೂರೈಸಿದರು.

Published On – 3:56 pm, Wed, 17 June 26

Source link

ಒಂದು ಇನ್​​ಸ್ಟಾಗ್ರಾಂ ರೀಲ್​ ಹಾಕಿದರೆ ಓರಿಗೆ ಬರುವ ಹಣ ಎಷ್ಟು ಲಕ್ಷ ಗೊತ್ತೆ? – Kannada News | Orry reveled his income source says he earn 76 lakh rs just for one reel

ಓರಿ, ಸಾಮಾಜಿಕ ಜಾಲತಾಣದಲ್ಲಿ (Social Media) ಬಲು ವೈರಲ್ ವ್ಯಕ್ತಿ. ಚಿತ್ರ ವಿಚಿತ್ರ ಬಟ್ಟೆಗಳನ್ನು ಹಾಕಿಕೊಂಡು, ಸಿನಿಮಾ ಸೆಲೆಬ್ರಿಟಿಗಳ ಎದೆಯ ಮೇಲೆ ಕೈಇಟ್ಟು ಫೋಟೊ, ವಿಡಿಯೋ ಮಾಡಿ ಅಪ್​​ಲೋಡ್ ಮಾಡುವ ಓರಿ ತನ್ನ ಭಿನ್ನ ವ್ಯಕ್ತಿತ್ವ, ವಿಚಿತ್ರತನದಿಂದಲೇ ಬಲು ಜನಪ್ರಿಯರು. ಬಲು ಜನಪ್ರಿಯ ಇನ್​​ಫ್ಲ್ಯುಯೆನ್ಸರ್ ಎನಿಸಿಕೊಂಡಿರುವ ಈ ಓರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರಗಳನ್ನು ಹಾಕಿಕೊಂಡೇ ತಿಂಗಳಿಗೆ ಕೋಟ್ಯಂತರ ರೂಪಾಯಿ ಹಣ ಗಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಖುದ್ದು ಓರಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ‘ಲರ್ನ್ ಬೈ ಕೆಕೆ ಕ್ರಿಯೇಟ್’ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಓರಿ, ತಮ್ಮ ಆದಾಯದ ಬಗ್ಗೆ ಮಾತನಾಡಿದ್ದಾರೆ. ತಮ್ಮ ಆದಾಯದ ಬಹುಪಾಲು ಬ್ರ್ಯಾಂಡ್ ಪ್ರೊಮೋಷನ್ ಮತ್ತು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದರಿಂದ ಬರುತ್ತದೆ ಎಂದು ಓರಿ ಹೇಳಿದ್ದಾರೆ. ‘ಕಳೆದ ತಿಂಗಳು ನಾನು ಕೇವಲ ಒಂದು ಡೀಲ್‌ನಿಂದ, ಅಂದರೆ ಒಂದೇ ಒಂದು ರೀಲ್ ಹಾಕಿ 76 ಲಕ್ಷ ರೂಪಾಯಿಗಳನ್ನು ಗಳಿಸಿದ್ದೇನೆ’ ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ಓರಿ ತಮ್ಮ ಆನ್‌ಲೈನ್ ಜನಪ್ರಿಯತೆಯನ್ನು ವ್ಯಾಪಾರವನ್ನಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನದ ಊಟ, ರಾತ್ರಿಯ ಊಟ, ಹುಟ್ಟುಹಬ್ಬದ ಪಾರ್ಟಿಗಳು, ಮದುವೆಗಳು ಮತ್ತು ಇತರ ಸಾಮಾಜಿಕ ಸಮಾರಂಭಗಳಲ್ಲಿ ಭಾಗವಹಿಸಲು ಅವರು 15 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಶುಲ್ಕ ವಿಧಿಸುತ್ತಾರಂತೆ ಈ ಬಗ್ಗೆ ಖುದ್ದು ಅವರೇ ಹೇಳಿಕೊಂಡಿದ್ದಾರೆ. ‘15 ರಿಂದ 25 ಲಕ್ಷ ರೂಪಾಯಿಗಳಿಗೆ ನೀವು ನನ್ನನ್ನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ಖರೀದಿಸಬಹುದು. ನಾನು ನಿಮ್ಮ ಮದುವೆಗೆ ಬರುತ್ತೇನೆ, ಹುಟ್ಟುಹಬ್ಬಕ್ಕೆ ಬರುತ್ತೇನೆ. ನಾವು ಬಾಲ್ಯದ ಸ್ನೇಹಿತರಂತೆ ವರ್ತಿಸುತ್ತೇನೆ, ನಿಮ್ಮೊಂದಿಗೆ ಸಮಯ ಕಳೆಯುತ್ತೇನೆ, ನಿಮ್ಮ ಪೋಷಕರೊಂದಿಗೆ ಕುಳಿತು ಮಾತನಾಡುತ್ತೇನೆ, ಮತ್ತು ನೀವು ಬಯಸಿದಂತೆ ಎಲ್ಲರೊಂದಿಗೆ ಬೆರೆಯುತ್ತೇನೆ. ನನ್ನನ್ನು ‘ಖರೀದಿಸಿದವರಿಗೆ’ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಪ್ರಿಯತೆ ಸಿಗುತ್ತದೆ’ ಎಂದು ಓರಿ ತಮ್ಮ ಬ್ಯುಸಿನೆಸ್ ವಿವರಿಸಿದ್ದಾರೆ.

ಇದನ್ನೂ ಓದಿ:‘ಕಲ್ಕಿ 2898 ಎಡಿ’ ಪಾರ್ಟ್ 2 ಪ್ರಭಾಸ್ ಸಿನಿಮಾ ಅಲ್ಲ, ಕಮಲ್ ಹಾಸನ್ ಸಿನಿಮಾ

ಓರಿಯ ನಿಜವಾದ ಹೆಸರು ಓರ್ಹಾನ್ ಅವತ್ರಾಮಣಿ, ಇನ್‌ಸ್ಟಾಗ್ರಾಮ್‌ನಲ್ಲಿ 25 ಲಕ್ಷಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದಾರೆ. ಅವರು ಬಾಲಿವುಡ್ ಸೆಲೆಬ್ರಿಟಿಗಳೊಂದಿಗೆ ಪಾರ್ಟಿ ಮಾಡುವುದರಲ್ಲಿ ಮತ್ತು ಹೈ-ಪ್ರೊಫೈಲ್ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಜಾನ್ಹವಿ ಕಪೂರ್, ಖುಷಿ ಕಪೂರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳೊಂದಿಗೆ ಓರಿ ಫೋಟೋಗಳಿಗೆ ಪೋಸ್ ನೀಡುತ್ತಿರುತ್ತಾರೆ. ವಿಶೇಷವಾಗಿ ಸೆಲೆಬ್ರಿಟಿಗಳ ಎದೆಯ ಮೇಲೆ ಕೈ ಇಟ್ಟು ಅವರು ನೀಡುವ ಸಿಗ್ನೇಚರ್ ಪೋಸ್‌ನಿಂದ ಅವರು ಹೆಚ್ಚು ಖ್ಯಾತಿ ಗಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:58 pm, Wed, 17 June 26

Source link