Category Archives: Blog

Your blog category

ಹೀಗಾದ್ರೆ ಪಂಜಾಬ್ ಪ್ಲೇಆಫ್​ಗೇರಲ್ಲ; ಈ ತಂಡಗಳು ಸೋತರೆ ಮಾತ್ರ ಚಾನ್ಸ್ – Kannada News | Punjab Kings IPL Playoff: How Other Teams’ Losses Can Save PBKS Season

ಐಪಿಎಲ್​ನ ಈ ಸೀಸನ್​ ಅಲ್ಲಿ ಪಂಜಾಬ್ ಕಿಂಗ್ಸ್ ಸತತ ಐದು ಸೋಲುಗಳನ್ನು ಕಂಡಿದೆ. ಟೂರ್ನಿಯ ಆರಂಭದಲ್ಲಿ ಅಬ್ಬರಿಸಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಶ್ರೇಯಸ್ ಅಯ್ಯರ್ ಪಡೆ ನಂತರ ಎಡವಿದೆ. ಸದ್ಯಕ್ಕೆ ಈ ತಂಡ ನಾಲ್ಕನೇ ಸ್ಥಾನದಲ್ಲಿದ್ದರೂ, ಪ್ಲೇ-ಆಫ್ ಹಾದಿ ಮಾತ್ರ ಅಂದುಕೊಂಡಷ್ಟು ಸುಲಭವಾಗಿಲ್ಲ. ಈಗ ಮುಂದಿನ ಎರಡು ಪಂದ್ಯಗಳನ್ನು ಗೆದ್ದರೂ ಅಧಿಕೃತವಾಗಿ ಮುಂದಿನ ಹಂತಕ್ಕೇರುತ್ತಾರೆ ಎಂಬ ಗ್ಯಾರಂಟಿ ಇಲ್ಲ. ಪಂಜಾಬ್ ತಂಡಕ್ಕೆ ಗೆಲುವಷ್ಟೇ ಅಲ್ಲ, ಅದೃಷ್ಟವೂ ಬೇಕಿದೆ.

ಸೀಸನ್‌ನ ಮೊದಲಾರ್ಧದಲ್ಲಿ ಸತತ ಆರು ಗೆಲುವುಗಳೊಂದಿಗೆ ಬೀಗುತ್ತಿದ್ದ ಪಂಜಾಬ್ ತಂಡಕ್ಕೆ ಎರಡನೇ ಹಂತದಲ್ಲಿ ಅದೃಷ್ಟ ಕೈಕೊಟ್ಟಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿ ಅಂಕ ಹಂಚಿಕೆಯಾಗಿದ್ದು ತಂಡಕ್ಕೆ ಹಿನ್ನಡೆಯಾಯಿತು. ಸದ್ಯ 13 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಪಂಜಾಬ್, ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ ಇತರ ತಂಡಗಳ ಫಲಿತಾಂಶದ ಮೇಲೆ ಕಣ್ಣಿಡಬೇಕಾದ ಅನಿವಾರ್ಯತೆ ಇದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಗೆಲುವುಗಳೊಂದಿಗೆ (16 ಅಂಕ) ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. +1.053 ರನ್‌ರೇಟ್ ಹೊಂದಿರುವುದು ತಂಡದ ಪ್ಲಸ್ ಪಾಯಿಂಟ್. ಅಷ್ಟೇ ಅಂಕ ಹೊಂದಿರುವ ಗುಜರಾತ್ ಟೈಟಾನ್ಸ್ ಎರಡನೇ ಸ್ಥಾನದಲ್ಲಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಪಂಜಾಬ್​​ಗೆ ಬಾಕಿ ಇರೋದು ಇನ್ನು ಎರಡು ಪಂದ್ಯಗಳು ಮಾತ್ರ. ಅದೆರಡೂ ಪಂದ್ಯ ಗೆದ್ದರೆ ತಂಡದ ಅಂಕ 17 ಆಗಲಿದೆ. 5 ಹಾಗೂ ಆರನೇ ಸ್ಥಾನದಲ್ಲಿರುವ ಸಿಎಸ್​​ಕೆ ಹಾಗೂ ಆರ್​​ಆರ್​ ತಂಡ ತಲಾ 12 ಅಂಕ ಗಳಿಸಿವೆ. ಈ ತಂಡಗಳಿಗೆ ಇರೋದು ತಲಾ ಮೂರು ಪಂದ್ಯಗಳು. ಹೀಗಾಗಿ, ಎರಡೂ ತಂಡಗಳು ಮೂರಕ್ಕೆ ಮೂರು ಪಂದ್ಯ ಗೆದ್ದರೆ 18 ಅಂಕ ಆಗಲಿವೆ.ಆರ್​​ಸಿಬಿ ಸೇರಿದಂತೆ ಟಾಪ್ ಆರರಲ್ಲಿರುವ ಬಹುತೇಕ ಎಲ್ಲಾ ತಂಡಗಳ ಸೋಲು ಪಂಜಾಬ್​​ಗೆ ಪ್ಲಸ್ ಆಗಲಿದೆ.

ಇದನ್ನೂ ಓದಿ: ನಾಯಕನಾಗಿ ಚೊಚ್ಚಲ ಪಂದ್ಯದಲ್ಲಿ ಗೆದ್ದ ಬುಮ್ರಾ; ಪಂಜಾಬ್​ಗೆ ಸತತ 5ನೇ ಸೋಲು

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ ಮಂಕಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮುಂಬೈ ತಂಡ ಎಲಿಮಿನೇಟ್ ಆಗಿರುವುದರಿಂದ ಪಂಜಾಬ್ ವಿರುದ್ಧದ ಪಂದ್ಯ ಗೆದ್ದರೂ ಯಾವುದೇ ಬದಲಾವಣೆ ಇಲ್ಲ. ಆದರೆ, ಪಂಜಾಬ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:46 am, Fri, 15 May 26

Source link

ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​​ – Kannada News | Karnataka Rain Update: Hailstorm in Gadag and Koppal, Heavy rain in Bengaluru

ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ!

ಬೆಂಗಳೂರು, ಮೇ 15: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ (Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರು ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಾಂಶಗಳು

  • ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ
  • ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆ, ಆರೆಂಜ್ ಅಲರ್ಟ್​
  • ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡಿನ ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ನೀಡಲಾಗಿದೆ. ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು ಮತ್ತು ಮೈಸೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮಂಡ್ಯ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Petrol, Diesel Prices Hike: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ – Kannada News | Petrol, Diesel price hike by Rs 3 Per Litre, Fuel Prices Hiked in Karnataka, India Breaking news

ನವದೆಹಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಡಿಸೇಲ್ ಬೆಲೆ ಈವರೆಗೆ ಪ್ರತಿ ಲೀಟರ್​ಗೆ 90.98 ರೂ. ಇದ್ದದ್ದು, ಇನ್ಮುಂದೆ 94.10 ರೂ. ಆಗಲಿದೆ. ಪೆಟ್ರೋಲ್ ದರ – 106.17 ರೂ. ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಹಿನ್ನೆಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್​​, ಡೀಸೆಲ್ ದರ ಏರಿಕೆ ನಿರ್ಧಾರ ಪ್ರಕಟಿಸಿವೆ.

(ಮಾಹಿತಿ ಅಪ್​ಡೇಟ್ ಆಗಲಿದೆ)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 7:04 am, Fri, 15 May 26

Source link

ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು? – Kannada News | Ranveer’s Dhurandhar 2 OTT Release: Uncut Version and 1796 Cr Box Office Global Collection

ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರವೇ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಈ ಸಿನಿಮಾ ಏಕಕಾಲದಲ್ಲಿ ಎರಡು ವಿಭಿನ್ನ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಥಿಯೇಟರ್​​ನಲ್ಲಿ ಈ ಸಿನಿಮಾದ ಕಲೆಕ್ಷನ್ ಬಹುತೇಕವಾಗಿ ಕೊನೆಗೊಂಡಂತೆ ಆಗಿದೆ. ಹಾಗಾದರೆ ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿತು ಎಂಬುದರ ಲೆಕ್ಕ ಇಲ್ಲಿದೆ.

1. ‘ಧುರಂಧರ್ 2’ ಒಟಿಟಿಗೆ ಬರಲು ರೆಡಿ

2. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್

3. ರಣವೀರ್ ಸಿಂಗ್​​ಗೆ ದೊಡ್ಡ ಜಯ

ಭಾರತದಲ್ಲಿ ಜಿಯೋ ಹಾಟ್​ಸ್ಟಾರ್ ಸಂಸ್ಥೆ ಬರೋಬ್ಬರಿ 150 ಕೋಟಿ ರೂಪಾಯಿಗಳಿಗೆ ಒಟಿಟಿ ಹಕ್ಕನ್ನು ಖರೀದಿಸಿದೆ ಎನ್ನಲಾಗಿದೆ. ಭಾರತೀಯ ಪ್ರೇಕ್ಷಕರು ಜಿಯೋಹಾಟ್‌ಸ್ಟಾರ್‌ನಲ್ಲಿ ಮಾತ್ರ ಈ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಮೊದಲ ಭಾಗ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದ್ದರಿಂದ, ಎರಡನೇ ಭಾಗವೂ ಅಲ್ಲಿಯೇ ಬರಬಹುದು ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಈ ಸುದ್ದಿ ಅಚ್ಚರಿ ಮೂಡಿಸಿದೆ. ಭಾರತದ ಹೊರಗಿನ ಪ್ರೇಕ್ಷಕರಿಗಾಗಿ ನೆಟ್‌ಫ್ಲಿಕ್ಸ್ ಈ ಚಿತ್ರವನ್ನು ಪ್ರಸಾರ ಮಾಡಲಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ‘ಧುರಂದರ್: ದಿ ರಿವೇಂಜ್ (ರಾ ಆ್ಯಂಡ್ ಅನ್​​ಸಿನ್) ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಅಂದರೆ, ಥಿಯೇಟರ್‌ನಲ್ಲಿ ಬಿಡುಗಡೆಯಾದ ಆವೃತ್ತಿಗಿಂತ ಒಟಿಟಿ ಆವೃತ್ತಿ ಹೆಚ್ಚು ರೋಚಕವಾಗಿರಲಿದೆ: ಚಿತ್ರಮಂದಿರದಲ್ಲಿ 3 ಗಂಟೆ 49 ನಿಮಿಷಗಳಿದ್ದ ಈ ಸಿನಿಮಾ, ಒಟಿಟಿಯಲ್ಲಿ 3 ಗಂಟೆ 52 ನಿಮಿಷಗಳ ಕಾಲ ಇರಲಿದೆ. ಸೆನ್ಸಾರ್ ಮಂಡಳಿಯಿಂದ ಕತ್ತರಿ ಬಿದ್ದಿದ್ದ ಹಿಂಸಾತ್ಮಕ ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಈ ಆವೃತ್ತಿಯಲ್ಲಿ ಮರುಸೇರ್ಪಡೆ ಮಾಡಲಾಗಿದೆ. ಇಂದು ಸಿನಿಮಾ ಪ್ರಸಾರ ಆಗುವ ಸಾಧ್ಯತೆ ಇದೆ.

ಒಟ್ಟಾರೆ ಗಳಿಕೆ

‘ಧುರಂಧರ್ 2’ ಸಿನಿಮಾ ಭಾರತಾದ್ಯಂತ 1369 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಹಾಗೂ 1,144.56 ನೆಟ್ ಕಲೆಕ್ಷನ್ ಮಾಡಿದೆ. ವಿಶ್ವಾದ್ಯಂತ ಈ ಚಿತ್ರದ ಗ್ರಾಸ್ ಕಲೆಕ್ಷನ್ 1,796.51 ಕೋಟಿ ರೂಪಾಯಿ ಆಗಿದೆ. ಹೆಚ್ಚುವರಿಯಾಗಿ 10-20 ಕೋಟಿ ರೂಪಾಯಿ ಸೇರ್ಪಡೆಯಾಗಬಹುದು ಅಷ್ಟೇ ಎಂದು ಅಂದಾಜಿಸಲಾಗಿದೆ. ‘ಬಾಹುಬಲಿ 2’ ಚಿತ್ರದ ಒಟ್ಟಾರೆ ಗಳಿಕೆ 1,810 ಕೋಟಿ ರೂಪಾಯಿ ಇದೆ. ಇದನ್ನು ಈ ಚಿತ್ರಕ್ಕೆ ಬೀಟ್ ಮಾಡಲಾಗುತ್ತದೆಯೇ ಎಂಬುದು ಸದ್ಯದ ಪ್ರಶ್ನೆ.

ಇದನ್ನೂ ಓದಿ: ‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ

ಆದಿತ್ಯ ಧರ್ ನಿರ್ದೇಶನದ ಈ ಆಕ್ಷನ್ ಡ್ರಾಮಾ, ದೊಡ್ಡ ಮಟ್ಟದ ತಾರಾಗಣವನ್ನು ಹೊಂದಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಜಿಯೋ ಹಾಟ್​​ಸ್ಟಾರ್ ಸಂಸ್ಥೆ ಇದನ್ನು ನಿರ್ಮಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:04 am, Fri, 15 May 26

Source link

ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ – Kannada News | Indian Cargo Ship MV Haji Ali Sinks After Suspected Drone Attack in Omani Waters

ನವದೆಹಲಿ, ಮೇ 15: ಓಮನ್ ಪ್ರಾದೇಶಿಕ ಜಲವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಭಾರತೀಯ ಸರಕು ಸಾಗಣೆ ನೌಕೆಯ (Indian Ship) ಮೇಲೆ ಶಂಕಿತ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆದಿದೆ. ಪರಿಣಾಮವಾಗಿ ಹಡಗು ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ದಾಳಿಯ ಹಿಂದೆ ಇರಾನ್ (Iran) ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮಾರ್ಚ್ ತಿಂಗಳಿನಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಇದೀಗ ಹಾರ್ಮುಜ್ ಸುತ್ತಲಿನ ಪ್ರದೇಶವೂ ಸಂಚಾರಕ್ಕೆ ಸುರಕ್ಷಿತವಲ್ಲ ಎಂಬುದು ದೃಢಪಟ್ಟಿದೆ.

ಮುಖ್ಯಾಂಶಗಳು

  • ಮುಳುಗಡೆಯಾದ ಹಡಗನ್ನು ಎಂವಿ ಹಾಜಿ ಅಲಿ (MV Haji Ali) ಎಂದು ಗುರುತಿಸಲಾಗಿದೆ.
  • ಹಡಗು ಸೋಮಾಲಿಯಾದಿಂದ ಶಾರ್ಜಾಕ್ಕೆ ಜಾನುವಾರುಗಳನ್ನು ಸಾಗಿಸುತ್ತಿತ್ತು
  • ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಿಗ್ಬಂಧನ ವಿಧಿಸಿದ ನಂತರ ಅಮೆರಿಕ ನೌಕಾಪಡೆ ಸೂಚಿಸಿದ ಹೊಸ ಸುರಕ್ಷಿತ ಮಾರ್ಗದಲ್ಲಿ ಈ ಹಡಗು ಚಲಿಸುತ್ತಿತ್ತು.

ಸುಮಾರು 57 ಮೀಟರ್ ಉದ್ದವಿರುವ ಎಂವಿ ಹಾಜಿ ಅಲಿ ಹಡಗು ಮೇ 13 ರಂದು ಮುಂಜಾನೆ 3:30 ರ ಸುಮಾರಿಗೆ ಓಮನ್ ಕರಾವಳಿಯ ಲಿಮಾ ಸಮೀಪ ಸಂಚರಿಸುತ್ತಿದ್ದಾಗ ದಾಳಿ ನಡೆದಿದೆ. ಇರಾನ್ ಹಾರ್ಮುಜ್ ಜಲಸಂಧಿಯ ಪ್ರಮುಖ ಮಾರ್ಗಗಳನ್ನು ನಿರ್ಬಂಧಿಸಿದ ನಂತರ, ಹಡಗುಗಳು ಸುರಕ್ಷಿತ ಸಂಚಾರಕ್ಕಾಗಿ ಹೊಸ ಮಾರ್ಗವನ್ನು ಬಳಸುತ್ತಿದ್ದವು. ಆದರೆ, ಕಳೆದ ಹತ್ತು ದಿನಗಳಲ್ಲಿ ಇದೇ ಮಾರ್ಗದಲ್ಲಿ ಐದು ದಾಳಿಗಳು ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಹಾರ್ಮುಜ್ ಜಲಸಂಧಿಯ ವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಘೋಷಿಸಿರುವ ಇರಾನ್

ಇತ್ತೀಚಿನ ದಿನಗಳಲ್ಲಿ ಇರಾನ್ ಹಾರ್ಮುಜ್ ಜಲಸಂಧಿಯ ವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಘೋಷಿಸಿದ್ದು, ಈ ಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ. ಫೆಬ್ರವರಿ ಅಂತ್ಯದಿಂದ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ಕಾರ್ಯಾಚರಣೆಗಳ ಹಿನ್ನೆಲೆಯಲ್ಲಿ, ಇರಾನ್ ಇದುವರೆಗೆ 36ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳ ಮೇಲೆ ಪ್ರತಿದಾಳಿ ನಡೆಸಿದೆ. ಇರಾನ್​ ಐಆರ್​​ಜಿಸಿ ಪಡೆಗಳ ನೂರಾರು ಬೋಟ್​ಗಳು ಈ ಭಾಗದಲ್ಲಿ ಗಸ್ತು ತಿರುಗುತ್ತಿರುವುದು ಉಪಗ್ರಹ ಚಿತ್ರಗಳಿಂದ ದೃಢಪಟ್ಟಿದೆ.

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ (ಮೇ 15) ಮೇ 20ರವರೆಗೂ ಐದು ದೇಶಗಳ ವಿದೇಶ ಪ್ರವಾಸ ಕೈಗೊಳ್ತಿದ್ದಾರೆ. ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ಭೇಟಿ ನೀಡಲಿದ್ದು, ಆಯಾ ದೇಶಗಳ ಉನ್ನತ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಯುದ್ಧ ಕೊನೆಗೊಳಿಸಲು ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಟ್ರಂಪ್

ಕೊಲ್ಲಿ ಕಾಳಗದಿಂದಾಗಿ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಏರುಪೇರಾಗುತ್ತಿರುವ ಬೆನ್ನಲ್ಲೇ ಮೋದಿ, ಯುಎಇ ಭೇಟಿ ಗಮರ್ನಾಹವಾಗಿದೆ. ಭಾರತದ ಇಂಧನ ಸ್ಥಿರತೆ, ದೀರ್ಘಾವಧಿಯ ತೈಲ ಪೂರೈಕೆ ಮತ್ತು ಮೂಲಸೌಕರ್ಯಗಳಲ್ಲಿ ಯುಎಇ ಹೂಡಿಕೆ ಖಚಿತಪಡಿಸಿಕೊಳ್ಳಲು ಈ ಭೇಟಿ ನೆರವಾಗಲಿದೆ. ಇನ್ನು, ಯುರೋಪ್ ಜೊತೆ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ, ಗ್ರೀನ್ ಹೈಡ್ರೋಜನ್, ಸೆಮಿಕಂಡಕ್ಟರ್‌ಗಳು, ಕೃತಕ ಬುದ್ಧಿಮತ್ತೆ, ರಕ್ಷಣಾ ವಲಯದ ಉತ್ಪಾದನೆ ಮತ್ತು ಕ್ಲೀನ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸಲು ಯುರೋಪ್ ನಾಯಕರೊಂದಿಗೆ ಮೋದಿ ಚರ್ಚಿಸಲಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Horoscope Today: ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 15, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಕ್ರವಾರವು ಪರಾಭವನಾ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ಮತ್ತು ಅಶ್ವಿನಿ ನಕ್ಷತ್ರದ ವಿಶೇಷ ದಿನವಾಗಿದೆ. ಅಂತರಾಷ್ಟ್ರೀಯ ಕುಟುಂಬ ದಿನವೂ ಆಗಿರುವ ಇಂದು, ಬೆಳಗಿನ ಜಾವ 6 ಗಂಟೆ 28 ನಿಮಿಷಕ್ಕೆ ಸೂರ್ಯನು ವೃಷಭ ರಾಶಿಗೆ ಪ್ರವೇಶಿಸುವುದರಿಂದ ವೃಷಭ ಸಂಕ್ರಾಂತಿಯ ಪರ್ವಕಾಲವಿರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

 

Source link

Daily Devotional: ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ? – Kannada News | Why You Should Not Plant Drumstick Tree Near Your House: Astrology and Scientific Reasons

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನುಗ್ಗೆ ಸೊಪ್ಪು, ಕಾಯಿ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ. ಆದರೆ, ಈ ನುಗ್ಗೆ ಮರವನ್ನು ಮನೆಯ ಅಂಗಳದಲ್ಲಿ ಅಥವಾ ಮನೆಯ ಹತ್ತಿರ ಬೆಳೆಸುವುದು ಶುಭವಲ್ಲ ಎಂದು ಶಾಸ್ತ್ರಗಳು ಮತ್ತು ವೈಜ್ಞಾನಿಕ ವಿಶ್ಲೇಷಣೆಗಳು ಹೇಳುತ್ತವೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ಸೇರಿದಂತೆ ಯಾವುದೇ ದಿಕ್ಕಿನಲ್ಲಿ ನುಗ್ಗೆ ಮರ ಇರುವುದು ಅಶುಭ. ಇದು ವಾಸ್ತು ದೋಷಗಳಿಗೆ ಕಾರಣವಾಗಬಹುದು. ವೈಜ್ಞಾನಿಕವಾಗಿ ನೋಡಿದರೆ, ನುಗ್ಗೆ ಮರವು ಉಷ್ಣಾಂಶದ ಮರವಾಗಿದ್ದು, ಅದರ ಕಾಂಡವು ತೆಳುವಾಗಿರುತ್ತದೆ. ಇದರಿಂದ ಮಕ್ಕಳು ಅಥವಾ ಯಾರಾದರೂ ಹತ್ತಿದಾಗ ಮುರಿದು ಬೀಳುವ ಸಾಧ್ಯತೆ ಇರುತ್ತದೆ. ಇದರ ಆಯಸ್ಸು ಸಹ ಕಡಿಮೆ. ನಂಬಿಕೆಗಳ ಪ್ರಕಾರ, ಇದು ನಕಾರಾತ್ಮಕ ಶಕ್ತಿಗಳನ್ನು, ಪೂರ್ವಪ್ರೇತಗಳನ್ನು ಆಕರ್ಷಿಸುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ.

 

Source link

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಎಲ್ಲದಕ್ಕೂ ಅತಿಯಾಗಿ ಬಳಸಿಕೊಳ್ಳುವರು – Kannada News | Horoscope May 15 Friday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಷ್ಟವಿಲ್ಲದ ವಿಚಾರಗಳೇ ನಿಮ್ಮ ಸುತ್ತ ಮಾತನಾಡಿ ಮಾನಸಿಕ ಹಿಂಸೆ ಕೊಡುವರು. ಇಂದು ಸ್ವಲ್ಪ ಮಟ್ಟಿಗೆ ಆರ್ಥಿಕ ಬೆಳವಣಿಗೆ ಕಾಣಿಸಿ ಸಮಾಧಾನವಾಗುವುದು. ಹಣಕಾಸು ಯೋಜನೆಗಳಲ್ಲಿ ಸ್ಪಷ್ಟತೆ ಇರಲಿ. ನಿದ್ದೆಯ ಕೊರತೆ ದೈನಂದಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವರ‌ ಮಾತಿನಿಂದ ನಿಮ್ಮ ವ್ಯಕ್ತಿತ್ವವು ಬದಲಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು.

ವೃಷಭ ರಾಶಿ:

ಆಹಾರ ವ್ಯತ್ಯಾಸದಿಂದ ಉದರ ಬಾಧೆ ಹೆಚ್ಚಾಗುವುದು. ಹಿರಿಯರ‌ ಸೇವೆಯ ಬಗ್ಗೆ ಹೆಮ್ಮೆ ಇರಲಿದೆ. ಸರ್ಕಾರದ ಉದ್ಯೋಗದಲ್ಲಿ ಹೊಸ ಜವಾಬ್ದಾರಿಯನ್ನು ಪಡೆಯಬೇಕಾಗುವುದು. ಉದ್ಯೋಗದಲ್ಲಿ ಸಣ್ಣ ಯತ್ನದಿಂದಲೇ ದೊಡ್ಡ ಫಲ ಸಿಗಬಹುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡೀತು. ಯಾರನ್ನೂ ಅಪಮಾನ ಮಾಡುವುದು ಬೇಡ. ಅಪ್ರಯೋಜಕ ಮಾತುಗಳಿಗೆ ಕಿವಿಯಾಗುವಿರಿ.

ಮಿಥುನ ರಾಶಿ:

ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯ ಕಾರಣ ಕಾರ್ಯವು ಸೂಚಿಸದೇ ಬಹಳ ಜಡರಾಗುವಿರಿ‌. ಹಣ ನಷ್ಟದಿಂದ ಚಿಂತೆ ಆಗಬಹುದಾದರೂ ಶೀಘ್ರವೇ ಪರಿಹಾರ ಕಂಡುಬರಲಿದೆ. ನಿಮಗೆ ಸರಿಕಂಡ ಕಾರ್ಯವನ್ನು ಯಾವುದೇ ಹಿಂಜರಿಕೆ ಇಲ್ಲದೇ ಮಾಡುವಿರಿ. ಸ್ನೇಹಿತರಿಂದ ಸಣ್ಣ ಹಾಸ್ಯದ ಸಂದರ್ಭಗಳು ಒತ್ತಡ ತಗ್ಗಿಸಬಲ್ಲವು. ದಿನದ ಅಂತ್ಯದಲ್ಲಿ ಆನಂದದ ಕ್ಷಣಗಳು ನಿಮ್ಮನ್ನು ಹತ್ತಿರದಿಂದ ತಲುಪುತ್ತವೆ. ವ್ಯಕ್ತಿತ್ವದ ಬಗ್ಗೆ ಇತರರು ಹೆಮ್ಮೆಪಡುವರು. ಉದ್ಯಮವನ್ನು ಅನ್ಯ ಮಾರ್ಗದಲ್ಲಿ ಮುಂದುವರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ.

ಕರ್ಕಾಟಕ ರಾಶಿ:

ಮಕ್ಕಳಿಗಾಗಿ ವಿಶೇಷ ಅಡುಗೆಯನ್ನು ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಕಲ್ಪನೆಯ ಶಕ್ತಿ ಹೆಚ್ಚಾಗುತ್ತದೆ, ಆದರೆ ಅದು ದುರ್ಬಳಕೆಗೆ ಕಾರಣವಾಗಬಾರದು. ಕೆಲಸದಲ್ಲಿ ಗಮನ ಹರಿಸುವ ಅಗತ್ಯವಿದೆ. ವಾಹನ‌ ದುರಸ್ತಿ ಅನಿರೀಕ್ಷಿತವಾಗಬಹುದು. ಖರ್ಚು ನಿಯಂತ್ರಣ ಮಾಡದಿದ್ದರೆ ಹಣಕಾಸಿನಲ್ಲಿ ಅಸ್ವಸ್ಥತೆ ಉಂಟಾಗಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ಓಡಾಟವನ್ನು ಮಾಡಬೇಕಾಗುವುದು. ಅಸೂಯೆಯ ಕಾರಣ ದ್ವೇಷಭಾವವು ಸಹೋದ್ಯೋಗಿಯ ಬಗ್ಗೆ ನಿಮ್ಮಲ್ಲಿ ಮೂಡಬಹುದು.

ಸಿಂಹ ರಾಶಿ:

ನಿಮ್ಮನ್ನು ಉಪಯೋಗಿಸಿಕೊಳ್ಳುವವರ ಜೊತೆ ವಾಗ್ವಾದ. ಕಠಿಣ ಪರಿಶ್ರಮ ಇಂದು ಫಲ ನೀಡಲಿದೆ. ಉದ್ಯೋಗದಲ್ಲಿ ಉನ್ನತಿ ಅಥವಾ ಬದಲಾವಣೆಯ ಸೂಚನೆ ಇದೆ. ಹಣಕಾಸಿನಲ್ಲಿ ಲಾಭದ ಸಂದರ್ಭ ಎದುರಾಗಬಹುದು. ಕುಟುಂಬದಲ್ಲಿ ಸಣ್ಣ ಸಂಗತಿಗಳು ಸಂತೋಷ ನೀಡಬಹುದು. ಮನೋರಂಜನೆಗೆ ನಿಮಗೆ ಸಮಯವು ಸಿಗುವುದು. ಇನ್ನೊಬ್ಬರ ಕೆಲಸದ ಹೊರೆಯೂ ನಿಮಗೆ ಬರಲಿದೆ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು.

ಕನ್ಯಾ ರಾಶಿ:

ಉದ್ಯೋಗದಲ್ಲಿ ಒತ್ತಡ ನಿವಾರಣೆಯನ್ನು ನೀವೇ ಸ್ವತಃ ಮಾಡಿಕೊಳ್ಳಬೇಕಾಗುವುದು. ಮಾತುಗಳು ಇನ್ನೊಬ್ಬರ ಮೇಲೆ ಪರಿಣಾಮ ಬೀರಬಹುದು, ಆದ್ದರಿಂದ ಎಚ್ಚರಿಕೆಯಿಂದ ಮಾತನಾಡಿ. ಒಪ್ಪಂದಗಳಿಂದ‌ ಜಾರಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಪಡೆಯುವ ಸಂಭವ. ಹಣಕಾಸಿನಲ್ಲಿ ಜ್ಞಾನದಿಂದ ನಿರ್ವಹಣೆ ಅಗತ್ಯವಿದೆ. ಸಂಗಾತಿಯ ಆರೋಗ್ಯವನ್ನು ನೋಡಿಕೊಳ್ಳುವ ಭರದಲ್ಲಿ ಕೆಲವು ಕಾರ್ಯಗಳನ್ನು ಮರೆಯಬಹುದು. ಪಾಲುದಾರಿಕೆಯಲ್ಲಿ ಆದ ಮನಸ್ತಾಪವನ್ನು ಮುಂದುವರಿಸದೇ ಸುಮ್ಮನಿರಿ.

ತುಲಾ ರಾಶಿ:

ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ. ಹಣಕಾಸು ಪ್ರಗತಿಗೆ ಯೋಗ್ಯ ಸಮಯ. ಸರ್ವತೋಮುಖ ವಿಕಾಸಕ್ಕೆ ಸಮಯ ಸಾಕಾಗದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಬಹುದು. ಆರೋಗ್ಯದಲ್ಲಿ ಒತ್ತಡದ ಕಾರಣ ತಲೆನೋವು ಉಂಟಾಗಲಿದೆ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ.

ವೃಶ್ಚಿಕ ರಾಶಿ:

ಉದ್ಯೋಗದಲ್ಲಿ ನೀವು ಬಹಳ ಪ್ರಾಮಾಣಿಕವಾಗಿ ಇರುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಬೆಳವಣಿಯಾಗುವುದು ಖುಷಿ ಕೊಡುವುದು. ಒತ್ತಡ ಹೆಚ್ಚಾದರೂ ಅದು ನಿಮ್ಮ ಉತ್ಸಾಹದ ಮೇಲೆ ಪರಿಣಾಮ ಬೀರದು. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ಆಸ್ತಿಯಲ್ಲಿ ಪಾಲುದಾರಿಕೆಯು ನಿಮಗೆ ಸಮಾಧಾನ ಕೊಡದು.

ಧನು ರಾಶಿ:

ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉದ್ಯೋಗ ಲಾಭವಾಗಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರತಿಭೆ ಗುರುತಿಸಲ್ಪಡುತ್ತದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗುತ್ತದೆ. ಇಂದು ಕೈ ಹಾಕಿದ ಹೊಸ ಕೆಲಸ ಶುಭದಾಯಕವಾಗಬಹುದು. ರಾಜಕೀಯದಲ್ಲಿ ಕೈಜೋಡಿಸುವ ಬಗ್ಗೆ ಕುತೂಹಲವಿರುವುದು. ಸಾಮಾಜಿಕ ಕಾರ್ಯವು ನಿಮ್ಮನ್ನು ಸೆಳೆಯುವುದು. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು.

ಮಕರ ರಾಶಿ:

ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ನಿಮಗೆ ಅನಾನುಕೂಲ ಉಂಟಾಗುವುದು. ಇಂದು ಸೃಜನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡುವ ದಿನ. ವಿದ್ಯಾರ್ಥಿಗಳಿಗೆ ಉತ್ತಮ ಅಭ್ಯಾಸದಿಂದ ಲಾಭ. ಹಣಕಾಸಿನಲ್ಲಿ ಖರ್ಚು ಹೆಚ್ಚಾಗಬಹುದು. ಇಂದು ನಿಮ್ಮ ನಿರ್ಧಾರಗಳು ಉತ್ತಮ ಫಲ ನೀಡಲಿವೆ. ಮೇಲಧಿಕಾರಿಗಳ ಜೊತೆಗಿನ ಸಲುಗೆಯು ದುರುಪಯೋಗ ಆಗಬಹುದು. ವ್ಯವಹಾರದಲ್ಲಿ ಚುರುಕು ಸಾಲದು. ನಿಮ್ಮ ಸರಳತೆಯು ಜೊತೆಗಾರರಿಗೆ ಇಷ್ಟವಾಗುವುದು.

ಕುಂಭ ರಾಶಿ:

ನೆರೆ ಹೊರೆಯವರು ನಿಮಗೆ ಸಹಕಾರ ನೀಡದೇ ಕಷ್ಟವಾಗುವುದು. ಸಂಗಾತಿಯ ಜೊತೆ ಭಾವನೆಗಳನ್ನು ವ್ಯಕ್ತಪಡಿಸಲು ಉತ್ತಮ ದಿನ. ಕೆಲಸದಲ್ಲಿ ನೀವು ನಿರೀಕ್ಷಿಸುವ ಪ್ರಗತಿ ಕಾಣಬಹುದು. ಹಣಕಾಸಿನಲ್ಲಿ ಬುದ್ಧಿವಂತಿಕೆ ಅಗತ್ಯವಿದೆ. ನಿಮಗೆ ಕಾರ್ಯಗಳು ನಿಮಗೆ ತೃಪ್ತಿಯನ್ನು ಕೊಡುವಂತಿರಲಿ. ಆತುರದಲ್ಲಿ ಯಾವ ನಿರ್ಧಾರಕ್ಕೂ ಬರದೇ, ತಾಳ್ಮೆಯಿಂದ ಎಲ್ಲವೂ ತಿಳಿಯಾದಮೇಲೆ ನಿರ್ಧರಿಸಿ. ಎಲ್ಲವೂ ಸರಿಯಾಗುವುದು.

ಮೀನ ರಾಶಿ:

ಕೆಟ್ಟ ವಾಹನದ ಚಾಲನೆಯಿಂದ ಅಪಘಾತ ಸಂಭವಿಸಬಹುದು. ನ್ಯಾಯಾಲಯದ ಬಗ್ಗೆ ನಿಮಗೆ ಬಹಳ ಚಿಂತೆ‌ ಕಾಡುವುದು. ನಿಮ್ಮ ಹಣಕಾಸಿನ ಸ್ಥಿತಿಯನ್ನು ಹೇಳಿಕೊಳ್ಳಲು ಇಷ್ಟವಾಗದು. ಹೊಸ ಯೋಚನೆಗಳು ಬೆಳಕಿಗೆ ಬರುತ್ತವೆ. ಉದ್ಯೋಗದಲ್ಲಿ ಹೊಸ ಯೋಜನೆ ಆರಂಭವಾಗುವ ಯೋಗವಿದೆ. ಹಣಕಾಸಿನಲ್ಲಿ ನೂತನ ಆದಾಯದ ಮಾರ್ಗಗಳು ರೂಪುಗೊಳ್ಳಬಹುದು. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:21, ಯಮಗಂಡ ಕಾಲ 15:32 – 17:08, ಗುಳಿಕ ಕಾಲ 07:34 – 09:10

-ಲೋಹಿತ ಹೆಬ್ಬಾರ್ – 8762924271 (what’s app only)

Source link

PBKS vs MI: ನಾಯಕನಾಗಿ ಚೊಚ್ಚಲ ಪಂದ್ಯದಲ್ಲಿ ಗೆದ್ದ ಬುಮ್ರಾ; ಪಂಜಾಬ್​ಗೆ ಸತತ 5ನೇ ಸೋಲು – Kannada News | IPL 2026: Tilak Varma’s Heroics Secure MI Win vs PBKS; Bumrah’s Captaincy Debut Triumph

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯ ಪ್ಲೇಆಫ್ ದೃಷ್ಟಿಯಿಂದ ಆತಿಥೇಯ ಪಂಜಾಬ್​ಗೆ ಅತ್ಯಂತ ನಿರ್ಣಾಯಕವಾಗಿತ್ತು. ಆದರೆ ಪಂಜಾಬ್ ಗೆಲುವಿನ ಕನಸಿಗೆ ನೀರೆರೆಚಿದ ತಿಲಕ್ ವರ್ಮಾ ಏಕಾಂಗಿಯಾಗಿ ನಿಂತು ಮುಂಬೈ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಪ್ಲೇಆಫ್ ರೇಸ್​ನಿಂದ ಮುಂಬೈ ಅಧಿಕೃತವಾಗಿ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿತ್ತು. ಆದರೆ ಮೊಟ್ಟ ಮೊದಲ ಬಾರಿಗೆ ಮುಂಬೈ ತಂಡದ ನಾಯಕತ್ವವಹಿಸಿಕೊಂಡಿದ್ದ ಜಸ್ಪ್ರೀತ್ ಬುಮ್ರಾ ತಮ್ಮ ನಾಯಕತ್ವದ ಮೊದಲ ಪಂದ್ಯದಲ್ಲೇ ಸತತ ಸೋಲುಗಳಿಂದ ಕಂಗೆಟ್ಟಿದ್ದ ತಂಡಕ್ಕೆ ಗೆಲುವಿನ ರುಚಿ ತೋರಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 201 ರನ್ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಮುಂಬೈ ತಂಡ 20ನೇ ಓವರ್​ನ 5ನೇ ಎಸೆತದಲ್ಲಿ ಗೆಲುವಿನ ದಡ ಮುಟ್ಟಿತು.

Published On – 11:37 pm, Thu, 14 May 26

Source link

ಇಂಧನ ಉಳಿಸಲು ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಮುಂಬೈ, ಮೇ 14: ಪ್ರಧಾನಿ ನರೇಂದ್ರ ಮೋದಿ (PM Modi) ಇಂಧನ ಬಳಕೆ ಕಡಿಮೆ ಮಾಡುವಂತೆ ಮನವಿ ಮಾಡಿದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಕಾರು ಹಾಗೂ ಬೆಂಗಾವಲು ವಾಹನವನ್ನು ಬಿಟ್ಟು ಬೈಕ್​ನಲ್ಲೇ ಇಂದು ವಿಧಾನ ಭವನಕ್ಕೆ ಆಗಮಿಸಿದ್ದಾರೆ. ಹೊಸದಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಸಮಾರಂಭಕ್ಕೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್​ನಲ್ಲಿ ಸಿಎಂ ಫಡ್ನವೀಸ್​ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link