ಕೇಂದ್ರೀಯ ವಿದ್ಯಾಲಯಗಳ ವಸ್ತ್ರಸಂಹಿತೆ ವಿರೋಧಿಸಬೇಕಲ್ವಾ? ಹಿಜಾಬ್ ವಿರೋಧಿಸಿದ ಬಿಜೆಪಿಗರಿಗೆ ಸಿಎಂ ತಿರುಗೇಟು – Kannada News | Hijab Row In Karnataka: CM Siddaramaiah Hits back at BJP Leaders
ಬೆಂಗಳೂರು, (ಮೇ 14): ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School And Colleges) ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ. ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ.ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ ಇದರಿಂದ ನೋವಾಗಿರುವುದು ಸಹಜವೇ ಆಗಿದೆ. ಅವರು ಮೊದಲು ತಮ್ಮೊಳಗೆ ಇಣುಕಿ ಆತ್ಮವಿಮರ್ಶೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹಿಜಾಬ್ ಗೆ (Hijab) ಅನುಮತಿ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ….