Category Archives: Blog

Your blog category

ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ – Kannada News | Chamarajanagar: Scramble for Deputy Director’s post as officers vie for the chair

ಚಾಮರಾಜನಗರ, ಡಿಸೆಂಬರ್​ 18: ಕರ್ನಾಟಕದಾದ್ಯಂತ (Karnataka) ಸಿಎಂ ಮತ್ತು ಡಿಸಿಎಂ ಕುರ್ಚಿ ಕಾದಾಟ ಒಂದೆಡೆಯಾದರೆ, ಇತ್ತ ಗಡಿನಾಡು ಚಾಮರಾಜನಗರದಲ್ಲೂ (Chamarajanagar) ಒಂದೇ ಕುರ್ಚಿಗಾಗಿ ಕಾದಾಟ ಜೋರಾಗಿದೆ. ಒಂದು ಕುರ್ಚಿಗಾಗಿ ಇಬ್ಬಿಬ್ಬರು ಅಧಿಕಾರಿಗಳು ಪಟ್ಟು ಹಿಡಿದು ಕುಳಿತಿದ್ದಾರೆ. ನಾನು ರಿಲೀವ್ ಆಗಿಲ್ಲ, ಕೋರ್ಟ್ ಸ್ಟೇ ಕೊಟ್ಟಿದೆ ಅಂತ ಒಬ್ಬರು, ಸರ್ಕಾರ ನನಗೆ ಆದೇಶ ನೀಡಿದೆ ಅಂತ ಮತ್ತೊಬ್ಬರು ಹೇಳುತ್ತಿದ್ದಾರೆ. ಸದ್ಯ ಇದು ಜನರ ನಗೆ ಪಾಟಲಿಗೆ ಕಾರಣವಾಗಿದೆ.

ರಾಜ್ಯಾದ್ಯಂತ ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಸಿಎಂ ಕುರ್ಚಿ ಕಾದಾಟ ಚರ್ಚೆ ನಡೆಯುತ್ತಿರುವ ವಿಚಾರ. ಸಿಎಂ ಅವರು ಆಗುತ್ತಾರೆ, ಇವರ ಆಗುತ್ತಾರೆ ಎನ್ನುವ ಚರ್ಚೆ ಮಧ್ಯೆ ಡಿನ್ನರ್ ಪಾಲಿಟಿಕ್ಸ್ ಸುದ್ದಿ ನೋಡಿ ರಾಜ್ಯದ ಜನ ಒಂದೆಡೆ ರೋಸಿ ಹೋಗಿದ್ದಾರೆ. ಆದರೆ ಅದೇ ರೀತಿ ಒಂದು ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ಕಿರಿಕ್ ಮಾಡಿಕೊಂಡು ಇದೀಗ ನಗೆ ಪಾಟಲಿಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್; ಪಚ್ಚೆದೊಡ್ಡಿ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಧಿಕಾರಿ

ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕನ ಕುರ್ಚಿಗೆ ಇಬ್ಬರು ಅಧಿಕಾರಿಗಳು ಟವೆಲ್ ಹಾಕಿದ್ದಾರೆ. ಸುರೇಶ್​ ಮತ್ತು ಚೆಲುವರಾಜ್​​​ ಇವರೇ ಆ ಅಧಿಕಾರಿಗಳು. ಇವರಿಬ್ಬರ ಕಿತ್ತಾಟದಿಂದ ಅಸಲಿಗೆ ನಿಜವಾದ ಉಪ ನಿರ್ದೇಶಕ ಯಾರಪ್ಪ ಅಂತ ಸಾರ್ವಜನಿಕರು ತಲೆಕೆಡೆಸಿಕೊಂಡಿದ್ದಾರೆ.

ಐದು ತಿಂಗಳಿಗೆ ವರ್ಗಾವಣೆ

ಅಸಲಿಗೆ ಆಗಿದ್ದೇನು ಅಂದರೆ, ಕಳೆದ 5 ತಿಂಗಳ ಹಿಂದೆ ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾಗಿ ಸುರೇಶ್ ಚಾರ್ಜ್ ತೆಗೆದುಕೊಂಡಿದ್ದರು. ಐದು ತಿಂಗಳು ಕಳೆಯುವುದರೊಳಗೆ ಏನಾಯ್ತೋ ಏನೋ ಕೆಲ ಆರೋಪಗಳು ಕೇಳಿಬಂದ ಬೆನ್ನಲ್ಲೇ ಸುರೇಶ್​ರನ್ನ ರಾಜ್ಯ ಸರ್ಕಾರ ಚಾಮರಾಜನಗರದಿಂದ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಿತ್ತು.

ಖಾಲಿ ಇರುವ ಉಪ ನಿರ್ದೇಶಕರ ಸ್ಥಾನ ಮಹಿಳಾ ರಕ್ಷಣಾಧಿಕಾರಿ ಚೆಲುವರಾಜ್​​ರನ್ನ ಪ್ರಭಾರವಾಗಿ ಆಯ್ಕೆಆಡಿ ಆದೇಶ ಹೊರಡಿಸಿದೆ. ಆದರೆ ನಾನಿನ್ನು ಬಂದು 5 ತಿಂಗಳಾಗಿದೆ ಈ ವರ್ಗಾವಣೆ ನ್ಯಾಯ ಸಮ್ಮತವಲ್ಲ ಎಂದು ಕೆಇಟಿಗೆ ಹೋಗಿದ್ದರು. ಕೆಇಟಿಗೆ ಹೋಗಿ ಅದಕ್ಕೆ ಸ್ಟೇ ಕೂಡ ತಂದಿದ್ದಾರೆ. ಇಷ್ಟರ ಒಳಗಾಗಿ ಚೆಲುವರಾಜ್ ಸಿಇಓ ಗೆ ಆದೇಶ ಪ್ರತಿ ನೀಡಿ ಅವರ ಒಪ್ಪಿಗೆಯೂ ಪಡೆಯದೆ ಇತ್ತ ಸುರೇಶ್​ರಿಂದ ಅಧಿಕಾರವನ್ನ ಸಹ ಪಡೆಯದೆ ಏಕಾಏಕಿ ಉಪ ನಿರ್ದೇಶಕರಾಗಿ ಸ್ವತಃ ಅಧಿಕಾರ ವಹಿಸಿಕೊಂಡಿದ್ದಾರೆ.

ಇದು ನ್ಯಾಯ ಸಮ್ಮತವಲ್ಲ ಎಂದ ಅಧಿಕಾರಿ

ಕೋರ್ಟ್ ಸ್ಟೇ ನೀಡಿದೆ. ನಾನು ರಿಲೀವ್ ಕೂಡ ಆಗಿಲ್ಲ, ಸಿಇಓ ಹಾಗೂ ಡಿಸಿ ಕೆಲ ಕಾರ್ಯಗಳು ಮುಗಿದ ಬಳಿಕ ರಿಲೀವ್ ಆಗಿ ಅಂತ ಹೇಳಿದ ಬಳಿಕವು ಚೆಲುವರಾಜ್ ಅದು ಹೇಗೆ ಅಧಿಕಾರ ವಹಿಸಿಕೊಂಡರು, ಇದು ನ್ಯಾಯ ಸಮ್ಮತವಲ್ಲ ಹಾಗಾಗಿ ನಾನೇ ಮುಂದುವರೆಯುತ್ತೇನೆ ಎಂದು ಇಂದು ಕಚೇರಿಗೆ ಬಂದ ಸುರೇಶ್, ಕುರ್ಚಿ ಮೇಲೆ ಕುಳಿತು ತಮ್ಮ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ: ಈ ಊರಿನ ಮಕ್ಕಳು ಶಾಲೆಗೆ 14 ಕಿಮೀ ನಡೆದೇ ಹೋಗಬೇಕು! ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು

ಸದ್ಯ ನ್ಯಾಯಾಲಯ ವರ್ಗಾವಣೆ ಆದೇಶ ತಡೆ ಹಿಡಿದಿದ್ದು, ಯಥಾಸ್ಥಿತಿ ಕಾಪಾಡಿಕೊಳ್ಳವಂತೆ ಆದೇಶಿಸಿದೆ. ಇನ್ನು ಸಿಇಓ ಗಮನಕ್ಕೆ ತಾರದೆ ಚೆಲುವರಾಜ್ ಅಧಿಕಾರ ಸ್ವೀಕರಿಸಿದನ್ನ ಪ್ರಶ್ನಿಸಿ ಸಿಇಓ ನೋಟಿಸ್ ನೀಡಿದ್ದಾರೆ. ಒಟ್ಟಿನಲ್ಲಿ ಒಂದು ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ನಂದು ಅಂತ ಕಿತ್ತಾಡಿದ್ದು, ಮಾತ್ರ ನಿಜಕ್ಕೂ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು – Kannada News | A Gang Arrested In Bengaluru Who Escaped after Murder of rowdy sheeter Mahesh at Pandavapura

ಮಂಡ್ಯ, (ಡಿಸೆಂಬರ್ 18): ಬೆದರಿಕೆ ಹಾಕಿದ್ದ ರೌಡಿ ಶೀಟರ್ ​​​ನನ್ನೇ (rowdy sheeter )ಹತ್ಯೆ ಮಾಡಲಾಗಿದೆ. ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅಮೃತಿ ಗ್ರಾಮದ ಬಳಿ ಕಳೆದ ನವೆಂಬರ್ 29ರಂದು ರೌಡಿ ಶೀಟರ್ ಮಹೇಶ್ ಎಂಬಾತನ ಭೀಕರ ಹತ್ಯೆ ಮಾಡಲಾಗಿದ್ದು, ತಲೆಮರಿಸಿಕೊಂಡಿದ್ದ ಹಂತಕರು ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಸವರಾಜು, ಶಶಾಂಕ್‌, ಹೇಮಂತ್ ಕುಮಾರ್, ಸುಮಂತ್ ಬಂಧಿತರು. ಈ ಸ್ನೇಹಿತರ ಗುಂಪಿಗೆ ರೌಡಿ ಶೀಟರ್ ಮಹೇಶ್, ಕೆಲ ಹಲವು ದಿನಗಳಿಂದ ಟಾರ್ಚರ್ ಕೊಡುತ್ತಾ ಕೊನೆಗೆ ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಆತಂಕಗೊಂಡ ಗ್ಯಾಂಗ್, ​ ಪ್ಲ್ಯಾನ್ ಮಾಡಿ ಸಿಮಿಮಾ ಸ್ಟೈಲ್​​​ನಲ್ಲೇ ರೌಡಿ ಶೀಟರ್​​​ ಮಹೇಶನನ್ನೇ ಕೊಲೆ ಮಾಡಿ ತಲೆಮರಿಸಿಕೊಂಡಿದ್ದರು. ಇದೀಗ ಬೆಂಗಳೂರಿನ ಲಾಡ್ಜ್​​​ನಲ್ಲಿ ತಂಗಿದ್ದ ಹಂತಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿನಿಮಾ ಸ್ಟೈಲ್ ನಲ್ಲಿ ರೌಡಿಶೀಟರ್ ಹತ್ಯೆ

ಕೊಲೆಯಾದ ಮಹೇಶ ಲಕ್ಷ್ಮೀಸಾಗರದ ನಿವಾಸಿ. ಹಲವು ವರ್ಷಗಳಿಂದ ರೌಡಿ ಚಟುವಟಿಕೆಯಲ್ಲಿ ತೊಡಗಿದ್ದ. ಈತನ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದವು. ಅಷ್ಟೆಯಲ್ಲ 2023ರಲ್ಲಿ ಈತನನ್ನ ಪೊಲೀಸರು ಗಡಿಪಾರು ಮಾಡಿದ್ದದರು. ಗಡಿಪಾರು ಅವಧಿ ಮುಗಿದ ಬಳಿಕ ಬೆಂಗಳೂರಿನಲ್ಲಿ ಆಟೋ ಓಡಿಸುತ್ತಿದ್ದ. ಆದ್ರೆ, ಕೊಲೆಯಾಗುವ ಮೂರು ದಿನದ ಹಿಂದಷ್ಟೆ ಊರಿಗೆ ಬಂದಿದ್ದ. ನವೆಂಬರ್ 28ರಂದು ಸಮೀಪದ ಜಕ್ಕನಹಳ್ಳಿಯ ಬಾರ್ ವೊಂದರಲ್ಲಿ ಪಾರ್ಟಿ ಮಾಡಿ ಸ್ನೇಹಿತರಾದ ಕಿರಣ್ ಹಾಗೂ ಮರೀಗೌಡ ಜೊತೆಗೆ ಒಂದೇ ಬೈಕ್ ನಲ್ಲಿ ಊರಿಗೆ ಹೊಟ್ಟಿದ್ದ. ಅಮೃತಿ ಬಳಿಗೆ ಬರ್ತಿದ್ದಂತೆ ಮಾರುತಿ ಓಮ್ನಿಯಲ್ಲಿ ಅಟ್ಯಾಕ್ ಮಾಡಿದ್ದ ಗ್ಯಾಂಗ್​, ಸಿನಿಮಾ ಸ್ಟೈಲ್ ನಲ್ಲಿ ಮೊದಲು ಬೈಕ್ ಗೆ ಗುದ್ದಿ ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು.

ಇದನ್ನೂ ಓದಿ: ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ

ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಹಂತಕರು

ಭೀಮಾ ಅಲಿಯಾಸ್ ಚಂದ್ರಶೇಖರ, ಬಸವರಾಜು, ಶಶಾಂಕ್‌, ಹೇಮಂತ್ ಕುಮಾರ್, ಸುಮಂತ್ ಸಿನಿಮಾ ಸ್ಟೈಲ್ ನಲ್ಲಿ ಮೊದಲು ಬೈಕ್ ಗೆ ಕಾರಿನಲ್ಲಿ ಡಿಕ್ಕಿ ಹೊಡೆಸಿ ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಮೇಲುಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾಗ ಮಹೇಶ ಇನ್ನೂ ಬದುಕಿದ್ದ. ತಕ್ಷಣ ಆತನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮಹೇಶ ಮೃತಪಟ್ಟಿದ್ದ. ಇನ್ನು ಪ್ರಕರಣ ದಾಖಲಿಸಿಕೊಂಡು ಮೇಲುಕೋಟೆ ಪೊಲೀಸರು ತನಿಖೆ ಕೈಗೊಳ್ಳುತ್ತಿದ್ದಂತೆಯೇ ಎ1 ಆರೋಪಿ ಭೀಮ ನ್ಯಾಯಾಲಯದಲ್ಲಿ ಶರಣಾಗಿದ್ದ. ಆತನನ್ನ ಕಸ್ಟಡಿಗೆ ಪಡೆದ ಪೊಲೀಸರು ಮತ್ತಷ್ಟು ತನಿಖೆ ಚುರುಕುಗೊಳಿಸಿದಾಗ ಉಳಿದ ಹಂತಕರು ಬೆಂಗಳೂರಿನಲ್ಲಿರುವುದು ಗೊತ್ತಾಗಿದೆ. ಕೂಡಲೇ ಬೆಂಗಳೂರಿಗೆ ತೆರಳಿ ಕಾರ್ಯಚರಣೆ ನಡೆಸಿದಾಗ ಹಂತಕರು ಜಿಗಿಣಿಯ ಲಾಡ್ಜ್​​ವೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ. ಇದರೊಂದಿಗೆ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಬಸವರಾಜು, ಶಶಾಂಕ್‌, ಹೇಮಂತ್ ಕುಮಾರ್, ಸುಮಂತ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆ ಮಾಡಲು ಕಾರಣವೇನು?

ಇನ್ನು ಲಕ್ಷ್ಮೀಸಾಗರದ ಮತ್ತೊಬ್ಬ ರೌಡಿಶೀಟರ್ ರೋಹಿತ ಎಂಬಾತನ ಜೊತೆಗೆ ಭೀಮ ಸ್ನೇಹ ಬೆಳೆಸಿದ್ದಕ್ಕೆ ಮಹೇಶ ದ್ವೇಷ ಮಾಡಲು ಶುರು ಮಾಡಿದ್ದ. ಇದೇ ವಿಚಾರವಾಗಿ ಭೀಮ ಹಾಗೂ ಬಸವರಾಜುಗೆ ಎರಡ್ಮೂರು ಬಾರಿ ಮಹೇಶ ಹಲ್ಲೆ ಮಾಡಿದ್ದ. ಅಷ್ಟೇ ಅಲ್ಲ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡ ಭೀಮ ಹಾಗೂ ಬಸವರಾಜು ಸ್ಕೆಚ್​​ ಹಾಕಿ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

ಒಟ್ಟಿನಲ್ಲಿ ಗಡಿಪಾರಾದ ಬಳಿಕವೂ ಬುದ್ಧಿ ಕಲಿಯದೆ ರೌಡಿಸಂ ಮುಂದುವರೆಸಿದ್ದ ಮಹೇಶ ಕೊಲೆಯಾಗಿದ್ರೆ, ಅತ್ತ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು ಮಚ್ಚು ಹಿಡಿದು ಜೈಲು ಸೇರಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ… – Kannada News | What Happens When You Quit Meat for 30 Days?

ಮಾಂಸಾಹಾರ (Meat) ಸೇವನೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಆದರೆ ಇತ್ತೀಚಿನ ದಿನಗಳಲ್ಲಿ ಒಂದಿಷ್ಟು ಜನ ಮಾಂಸಾಹಾರ ಸೇವನೆಯಿಂದ ಹಿಂದೆ ಸರಿಯುತ್ತಿದ್ದಾರೆ. ಅದರ ಬದಲಾಗಿ ಸಸ್ಯಹಾರಿಗಳಾಗುತ್ತಿದ್ದಾರೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಮಾಂಸಾಹಾರ ತ್ಯಜಿಸಬೇಕೇ ಅಥವಾ ಬೇಡವೇ ಎಂಬ ಗೊಂದಲ ಕೆಲವರದ್ದು. ನಿಯಮಿತವಾಗಿ ಮಾಂಸಾಹಾರ ತಿನ್ನುವ ನೀವು 30 ದಿನಗಳು ಅಂದರೆ ಒಂದು ತಿಂಗಳು ಮಾಂಸವನ್ನು ಸೇವಿಸದಿದ್ದರೆ ಅದು ನಿಮ್ಮ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹಾಗಾದರೆ ಈ ಸ್ಟೋರಿ ಓದಿ, ಆ ಮೂಲಕ ಇದರಿಂದ ಸಿಗುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

30 ದಿನಗಳ ಕಾಲ ಮಾಂಸ ಸೇವಿಸದಿದ್ದರೆ ಏನಾಗುತ್ತದೆ?

ಉರಿಯೂತ ಕಡಿಮೆಯಾಗುತ್ತದೆ: ಸಂಸ್ಕರಿಸಿದ ಮಾಂಸ ಮತ್ತು ಕೆಂಪು ಮಾಂಸಗಳಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕವಾಗಿರುತ್ತವೆ. ಪ್ರತಿನಿತ್ಯ ಮಾಂಸ ಸೇವನೆ ಮಾಡುವುದು ಉರಿಯೂತಕ್ಕೆ ಕಾರಣವಾಗಬಹುದು.

ಶಕ್ತಿ ಕಡಿಮೆಯಾಗಬಹುದು: ಮಾಂಸ ಸೇವನೆಯನ್ನು ನಿಲ್ಲಿಸುವುದರಿಂದ ನಿಮ್ಮ ಶಕ್ತಿಯ ಮಟ್ಟ ಕುಸಿಯಬಹುದು. ದಣಿದ ಅನುಭವವಾಗಬಹುದು. ಹಾಗಾಗಿ ನೀವು ಬೇರೆ ರೀತಿಯಲ್ಲಿ ನಿಮ್ಮ ಪ್ರೋಟೀನ್ ಸೇವನೆಯನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ.

ಕರುಳಿನ ಆರೋಗ್ಯ ಕಾಪಾಡಬಹುದು: ಮಾಂಸವನ್ನು ಒಂದು ತಿಂಗಳ ಕಾಲ ತ್ಯಜಿಸುವ ಮೂಲಕ ನಿಮ್ಮ ಕರುಳಿನ ಆರೋಗ್ಯವು ಸುಧಾರಿಸಿಕೊಳ್ಳಬಹುದು. ಇವುಗಳ ಬದಲು ಧಾನ್ಯಗಳ ಸೇವನೆ ಮಾಡಬಹುದು. ಇದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತದೆ.

ಮಲಬದ್ಧತೆಗೆ ಮುಕ್ತಿ ನೀಡುತ್ತದೆ: ಮಾಂಸವನ್ನು ಕಡಿಮೆ ಮಾಡಿ ಧಾನ್ಯ, ತರಕಾರಿ ಮತ್ತು ದ್ವಿದಳ ಧಾನ್ಯಗಳಂತಹ ಹೆಚ್ಚಿನ ಸಸ್ಯ ಆಧಾರಿತ ಆಹಾರಗಳ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆಗೆ ಮುಕ್ತಿ ಸಿಗುತ್ತದೆ.

ಇದನ್ನೂ ಓದಿ: 21 ದಿನ ಒಂದು ಕಪ್ ದಾಳಿಂಬೆ ಹಣ್ಣನ್ನು ತಿನ್ನುವ ಚಾಲೆಂಜ್: ಸಂಶೋಧನೆಯಿಂದ ಆಶ್ಚರ್ಯಕಾರಿ ಮಾಹಿತಿ ಬಹಿರಂಗ

ಒಮ್ಮೆಲೇ ಮಾಂಸಾಹಾರ ಬಿಟ್ಟರೆ ಏನಾಗಬಹುದು?

ನೀವು ಇದ್ದಕ್ಕಿದ್ದಂತೆ ಮಾಂಸ ಸೇವನೆಯನ್ನು ಕಡಿಮೆ ಮಾಡಿದರೆ ಅಪಾಯವೂ ಆಗಬಹುದು. ಹಾಗಾಗಿ ಒಮ್ಮೆಲೇ ಬಿಡುವುದು ಒಳ್ಳೆಯದಲ್ಲ. ಜೊತೆಗೆ ಮಾಂಸಾಹಾರದ ಬದಲು ಸಮತೋಲಿತ ಆಹಾರವನ್ನು ಕಾಪಾಡಿಕೊಳ್ಳುವುದು ಒಳ್ಳೆಯದು. ಇದರಿಂದ ಪ್ರೋಟೀನ್ ಕೊರತೆಯಾಗುವುದಿಲ್ಲ. ಇಲ್ಲವಾದಲ್ಲಿ ಮೂಳೆ ದುರ್ಬಲವಾಗುವ ಅಪಾಯ ಹೆಚ್ಚಾಗಿರುತ್ತದೆ. ಆದ್ದರಿಂದ, ಆರೋಗ್ಯ ಕಾಪಾಡಿಕೊಳ್ಳಲು, ಮಾಂಸಕ್ಕೆ ಸರಿಸಮನಾದ ಆಹಾರಗಳನ್ನು ಸೇವನೆ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು – Kannada News | Balaramana Dinagalu movie audio rights sold to T Series for this amount

ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ. ಬಿಡುಗಡೆಗೆ ಸಜ್ಜಾಗುತ್ತಿರುವ ಈ ಸಿನಿಮಾಗೆ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ‘ಶುರು ಶುರು..’ ಎಂಬ ಹಾಡಿನ ಮೂಲಕ ಪ್ರಚಾರ ಶುರುವಾಗಿದೆ. ಈ ಸಿನಿಮಾಗೆ ಕೆ.ಎಂ. ಚೈತನ್ಯ ಅವರು ನಿರ್ದೇಶನ ಮಾಡಿದ್ದಾರೆ. 18 ವರ್ಷಗಳ ಹಿಂದೆ ಕೆ.ಎಂ. ಚೈತನ್ಯ ಅವರ ನಿರ್ದೇಶನದಲ್ಲಿ ‘ಆ ದಿನಗಳು’ ಸಿನಿಮಾ ಮೂಡಿಬಂದಿತ್ತು. ಈಗ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಮಾಡಿದ್ದಾರೆ.

ಈ ಸಿನಿಮಾಗೆ ಪದ್ಮಾವತಿ ಜಯರಾಮ್ ಹಾಗೂ ಶ್ರೇಯಸ್ ಬಂಡವಾಳ ಹೂಡಿದ್ದಾರೆ. ಇದು ವಿನೋದ್ ಪ್ರಭಾಕರ್ ನಟನೆಯ 25ನೇ ಸಿನಿಮಾ ಎಂಬುದು ವಿಶೇಷ. ಅವಿನಾಶ್, ಅತುಲ್ ಕುಲಕರ್ಣಿ, ವಿನಯ್ ಗೌಡ, ಆಶಿಶ್ ವಿದ್ಯಾರ್ಥಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಸಂತೋಷ್ ನಾರಾಯಣನ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗ ಬಿಡುಗಡೆ ಆಗಿರುವ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಸಂಚಿತ್ ಹೆಗ್ಡೆ ಮತ್ತು ಪುಣ್ಯ ಅವರು ಧ್ವನಿ ನೀಡಿದ್ದಾರೆ.

ಇದು ‘ಆ ದಿನಗಳು’ ಸಿನಿಮಾದ ಸೀಕ್ವೆಲ್ ಅಲ್ಲ ಎಂದು ನಿರ್ದೇಶಕ ಕೆ.ಎಂ. ಚೈತನ್ಯ ಅವರು ಸ್ಪಷ್ಟಪಡಿಸಿದ್ದಾರೆ. ‘ಇದು ಒಂದು ಕಾಲ್ಪನಿಕ ಕತೆ ಇರುವ ಸಿನಿಮಾ’ ಎಂದು ಅವರು ಹೇಳಿದ್ದಾರೆ. ಈ ಸಿನಿಮಾದ ಆಡಿಯೋ ಹಕ್ಕುಗಳನ್ನು ಟಿ-ಸಿರೀಸ್ ಕಂಪನಿಯು ದೊಡ್ಡ ಮೊತ್ತಕ್ಕೆ ಖರೀದಿಸಿದೆ. ‘ಮತ್ತೊಂದು ಸಿನಿಮಾ ನಿರ್ಮಾಣ ಮಾಡುವಷ್ಡು ಹಣ ನೀಡಿದ್ದಾರೆ’ ಎಂದು ನಿರ್ಮಾಪಕ ಶ್ರೇಯಸ್ ಹೇಳಿದ್ದಾರೆ.

‘ಶುರು ಶುರು..’ ಹಾಡು:

ಮೂಲಗಳ ಪ್ರಕಾರ, 3 ಕೋಟಿ 75 ಲಕ್ಷ ರೂಪಾಯಿಗೆ ‘ಬಲರಾಮನ ದಿನಗಳು’ ಸಿನಿಮಾದ ಆಡಿಯೋ ರೈಟ್ಸ್ ಮಾರಾಟ ಆಗಿದೆ. ‘ನನ್ನ ವೃತ್ತಿ ಜೀವನದ 25 ಸಿನಿಮಾಗಳಲ್ಲಿ ಆಡಿಯೋಗೆ ಗರಿಷ್ಠ ಮೊತ್ತ ಪಡೆದ ಮೊದಲ ಚಿತ್ರ ಇದು. ಈ ಸಿನಿಮಾದಲ್ಲಿ ನನ್ನ ಪಾತ್ರ ಚೆನ್ನಾಗಿ ಮೂಡಿಬಂದಿದೆ’ ಎಂದಿದ್ದಾರೆ ವಿನೋದ್ ಪ್ರಭಾಕರ್. ನಟಿ ಪ್ರಿಯಾ ಆನಂದ್ ಅವರು ಕನ್ನಡದಲ್ಲಿ ನಟಿಸಿದ 5ನೇ ಸಿನಿಮಾ ಇದು.

ಇದನ್ನೂ ಓದಿ: ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ಗೆ ಗೃಹ ಸಚಿವರ ಶುಭಾಶಯ

ವಿನಯ್ ಗೌಡ ಅವರು ಈ ಸಿನಿಮಾದಲ್ಲಿ ಕತ್ತಿ ಎನ್ನುವ ಪಾತ್ರ ಮಾಡಿದ್ದಾರೆ. ಪರಭಾಷಾ ನಟಿ ಪ್ರಿಯಾ ಆನಂದ್ ಅವರು ಕನ್ನಡದಲ್ಲೇ ಮಾತನಾಡಿ ಮೆಚ್ಚುಗೆ ಪಡೆದರು. ಈ ಮೊದಲು ಪುನೀತ್ ರಾಜ್​​ಕುಮಾರ್ ಜೊತೆ ‘ರಾಜಕುಮಾರ’ ಸಿನಿಮಾದಲ್ಲಿ ಅವರು ನಟಿಸಿದ್ದರು. ತಾವು ಕನ್ನಡ ಕಲಿಯಲು ಪುನೀತ್ ರಾಜ್​​ಕುಮಾರ್ ಕಾರಣ ಎಂದು ಅವರು ಹೇಳಿದರು. ನಿರ್ಮಾಪಕಿ ಪದ್ಮಾವತಿ ಜಯರಾಮ್ ಮಾತನಾಡಿ, ‘ಕುಟುಂಬದ ಜೊತೆ ಕುಳಿತು ನೋಡುವ ಸಿನಿಮಾ ಮಾಡಿದ್ದೇವೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾಂಗ್ರೆಸ್ ಪ್ರತಿಭಟನೆಯಲ್ಲೇ ASI ಮಾಂಗಲ್ಯ ಸರ ಕಳವು, ಲೇಡಿ ಪೊಲೀಸ್ ಚೈನ್ ಕದ್ದ ಆ ಕೈ ಯಾವುದು? – Kannada News | Kote Station Lady Police ASI Gold mangalsutra theft In Shivamogga During Congress protest

ಶಿವಮೊಗ್ಗ, (ಡಿಸೆಂಬರ್ 18): ಕಾಂಗ್ರೆಸ್ ಪ್ರತಿಭಟನೆಯ (Congress Protest) ಬಂದೋಬಸ್ತ್ ವೇಳೆ, ಕರ್ತವ್ಯ ನಿರತ ಮಹಿಳಾ ಪೊಲೀಸ್ (Lady Police)  ಅಧಿಕಾರಿಯೊಬ್ಬರ 60 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನವಾಗಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರ ಮೇಲೆ ಇಡಿ ಮೇಲೆ ಪ್ರಭಾವ ಬೀರಿ ಅನಗತ್ಯ ಆರೋಪ ಸೃಷ್ಟಿಸಿರುವುದು ಹಾಗೂ ಮನ್ರೇಗಾ ಹೆಸರು ಬದಲಾವಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು (ಡಿಸೆಂಬರ್ 18) ಬೆಳಗ್ಗೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಪೊಲೀಸರು ಮಧ್ಯೆ ಪ್ರವೇಶಿಸಿದ್ದು, ಪ್ರತಿಭಟನೆಕಾರರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಇದರಿಂದ ಸ್ಥಳದಲ್ಲಿ ಹೈಡ್ರಾಮಾವೇ ನಡೆದಿದ್ದು, ತಳ್ಳಾಟ ನೂಕಾಟದಲ್ಲಿ ಬಂದೋಬಸ್ತ್ ನಲ್ಲಿದ್ದ ಮಹಿಳಾ ಎಎಸ್ಐ ಅಮೃತಬಾಯಿ ಅವರ ಕೊರಳಿನಲ್ಲಿದ್ದ  ಬಂಗಾರದ ತಾಳಿಯನ್ನೇ ಕಿರಾತಕರು ಎಗರಿಸಿದ್ದಾರೆ. ಈ ಘಟನೆಯಿಂದ ಆಘಾತಕ್ಕೊಳಗಾದ ಅಧಿಕಾರಿ ಸ್ಥಳದಲ್ಲೇ ಕಣ್ಣೀರು ಹಾಕಿದ್ದು, ಈ ಸಂಬಂಧ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಮಾಂಗಲ್ಯ ಸರ ಕಳೆದುಕೊಂಡು ಕಣ್ಣೀರಿಟ್ಟ ಎಎಸ್​​ಐ

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಬಂದೋಬಸ್ತ್‌ನಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಎಎಸ್ಐ ಆಗಿರುವ ಅಮೃತಾ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಈ ವೇಳೆ ಎಎಸ್‍ಐ ಅಮೃತಾಬಾಯಿಯವರ ಕೊರಳಲ್ಲಿ ಇದ್ದ 60 ಗ್ರಾಂ ತೂಕದ 8 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳ್ಳತನವಾಗಿದೆ. ಮಾಂಗಲ್ಯ ಸರ ಕಳುವಾಗಿರುವುದು ತಿಳಿಯುತ್ತಿದ್ದಂತೆಯೇ ಎಎಸ್‌ಐ ಅಮೃತಾ ಅವರು ಸ್ಥಳದಲ್ಲೇ ಕಣ್ಣೀರಿಟ್ಟರು.ಕರ್ತವ್ಯ ನಿರತ ಅಧಿಕಾರಿಯೊಬ್ಬರ ಸರವೇ ಕಳುವಾಗಿರುವುದು ಇಲಾಖೆಗೆ ಮತ್ತು ಸಹೋದ್ಯೋಗಿಗಳಿಗೆ ಭಾರೀ ಮುಜುಗರ ಹಾಗೂ ಆತಂಕ ತಂದಿದೆ. ಕೂಡಲೇ ಸ್ಥಳದಲ್ಲಿದ್ದ ಇತರೆ ಪೊಲೀಸ್ ಅಧಿಕಾರಿಗಳು ಅಮೃತಾ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಪ್ರಯತ್ನ ಮಾಡಿದರು.

ಇದನ್ನೂ ನೋಡಿ: Shivamogga: ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಪೊಲೀಸರು ಎಂಬ ಭಯವೂ ಇಲ್ಲವೇ?

ಪೊಲೀಸರನ್ನೇ ದೋಚಿರುವುದು ಅಚ್ಚರಿಗೆ ಕಾರಣವಾಗಿದ್ದು, ಖದೀಮರಿಗೆ ಪೊಲೀಸರು ಎಂಬ ಭಯವೂ ಇಲ್ಲದಂತಾಗಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಾಗಿದೆ.  ಯಾಕಂದ್ರೆ ಓರ್ವ ಮಹಿಳಾ ಪೊಲೀಸ್​ ಕುತ್ತಿಗೆ ಕೈಹಾಕಿ ಕದ್ದಿರುವುದು ಅಂದ್ರೆ ಸಾಮಾನ್ಯ ಅಲ್ಲ. ಮೊದಲೇ ಕರ್ನಾಟಕದಲ್ಲಿ ಅಪರಾಧ ಚಟುವಟಕೆಗಳು ಎಗ್ಗಿಲ್ಲದೇ ನಡೆದಿದ್ದು, ಕೆಲ ಅಪರಾಧ ಪ್ರಕರಣಲ್ಲಿ ಪೊಲೀಸರು ಸಹ ಶಾಮೀಲಾಗಿರುವ ಉದಾಹರಣೆಗಳು ಇವೆ. ಇಂತಹ ಸಂದರ್ಭದಲ್ಲಿ ಮಹಿಳಾ ಪೊಲೀಸ್​ ಸರ ಕದ್ದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.​

ಇನ್ನು ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ಪೊಲೀಸರು ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.ಪ್ರತಿಭಟನೆಯ ವೇಳೆ ಸೆರೆಹಿಡಿಯಲಾದ ವಿಡಿಯೋ ತುಣುಕುಗಳು ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಕಾಂಗ್ರೆಸ್ ಪ್ರತಿಭಟನೆಯ ಗದ್ದಲದ ನಡುವೆ ಈ ದುಷ್ಕೃತ್ಯ ಎಸಗಿದವರು ಯಾರು? ಪ್ರತಿಭಟನೆಯಲ್ಲಿದ್ದವರೇ ಕದ್ದರೇ ಅಥವಾ ಬೇರೆ ಕಳ್ಳ ಗುಂಪಿನಲ್ಲಿ ನುಸುಳಿ ಕದ್ದುಕೊಂಡು ಹೋಗಿದ್ದಾನೆಯೇ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:25 pm, Thu, 18 December 25

Source link

ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ – Kannada News | Dharwad Karnataka University: New Vice Chancellor takes bold steps to protect hundreds of acres of land

ಧಾರವಾಡ ಕರ್ನಾಟಕ ವಿವಿ, ಕುಲಪತಿ ಪ್ರೊ. ಎ.ಎಂ. ಖಾನ್

ಧಾರವಾಡ, ಡಿಸೆಂಬರ್​​ 18: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪೈಕಿ ಧಾರವಾಡ ಕರ್ನಾಟಕ ವಿವಿ (Karnatak University) ಕೂಡ ಒಂದು. ಈ ವಿಶ್ವವಿದ್ಯಾಲಯಕ್ಕೆ ಸೇರಿದ ನೂರಾರು ಎಕರೆ ಜಮೀನಿದೆ (land). ಆದರೆ ಇತ್ತೀಚಿನ ವರ್ಷಗಳಲ್ಲಿ ಅದರ ನಿರ್ವಹಣೆ ಮಾಡಲಾಗದೆ ಅನೇಕರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಈ ಅತಿಕ್ರಮಣ ತೆರವು ಮಾಡಲು ಹೋದರೆ ಸಾಕಷ್ಟು ಸಮಸ್ಯೆಯಾಗುತ್ತಲೇ ಇದೆ. ಆದರೂ ಇದೀಗ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ವಿವಿಯ ಕುಲಪತಿ ಹೊಸ ರೀತಿಯ ಸರ್ವೆ ಮಾಡಿಸಿ, ತಮ್ಮ ಅವಧಿಯಲ್ಲಿ ಅದಕ್ಕೆ ಬೇಲಿ ಹಾಕಿ ರಕ್ಷಣೆ ಮಾಡಲು ಮುಂದಾಗಿದ್ಧಾರೆ.

ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯ. ಹಸಿರಿನಿಂದ ಕಂಗೊಳಿಸುವ ಈ ವಿಶ್ವವಿದ್ಯಾಲಯಕ್ಕೆ ಒಟ್ಟು 880 ಎಕರೆ ಜಮೀನಿದೆ. ಆದರೆ ಆ ಜಮೀನಿನ ರಕ್ಷಣೆಯೇ ವಿಶ್ವವಿದ್ಯಾಲಯಕ್ಕೆ ದೊಡ್ಡ ಸವಾಲಾಗಿದೆ. ಅನೇಕ ಕಡೆಗಳಲ್ಲಿ ವಿವಿಯ ಜಮೀನಿನ ಅತಿಕ್ರಮಣವಾಗಿ, ಅಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅಂಥ ಜಾಗವನ್ನು ಮರಳಿ ತೆಗೆದುಕೊಳ್ಳಲು ವಿವಿಯ ಅಧಿಕಾರಿಗಳು ಹೋದರೆ ಸಾಕಷ್ಟು ಗಲಾಟೆಗಳು ನಡೆದಿವೆ.

ಇದನ್ನೂ ಓದಿ: Guest Lecturer Jobs: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವುದು ಹೇಗೆ?

ಹೀಗಾಗಿ ಯಾವೊಬ್ಬ ಕುಲಪತಿಯೂ ಇದರ ತಂಟೆಗೆ ಹೋಗದೇ, ತಾವಾಯಿತು ತಮ್ಮ ಅಧಿಕಾರವಾಯಿತು ಅಂತಾ ಇದ್ದುಬಿಟ್ಟಿದ್ದರು. ಆದರೆ ಇತ್ತೀಚಿಗೆ ಅಧಿಕಾರ ಸ್ವೀಕರಿಸಿರುವ ಕುಲಪತಿ ಪ್ರೊ. ಎ.ಎಂ. ಖಾನ್ ಅವರು ವಿಶ್ವವಿದ್ಯಾಲಯದ ಎಲ್ಲ ಆಸ್ತಿಗಳ ರಕ್ಷಣೆಗೆ ಮುಂದಾಗಿದ್ಧಾರೆ. ಮೂಲತಃ ಇದೇ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿರುವ ಪ್ರೊ. ಖಾನ್, ತಮ್ಮ ಅವಧಿಯಲ್ಲಿ ಈ ಕೆಲಸವನ್ನು ಮಾಡಿಯೇ ತೀರಬೇಕು ಅಂತಾ ನಿರ್ಧರಿಸಿದ್ದಾರೆ. ಇದಕ್ಕಾಗಿ ಹೊಸ ಬಗೆಯ ತಂತ್ರಜ್ಞಾನವನ್ನು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ.

ಧಾರವಾಡ ನಗರದ ಅನೇಕ ಕಡೆಗಳಲ್ಲಿ ಈ ವಿಶ್ವವಿದ್ಯಾಲಯದ ಆಸ್ತಿ ವಿಸ್ತರಿಸಿದೆ. ಒಂದೇ ಕಡೆಯಲ್ಲಿ ಜಮೀನು ಇದ್ದರೆ ರಕ್ಷಣೆ ಹಾಗೂ ನಿರ್ವಹಣೆ ತುಂಬಾನೇ ಸರಳ. ಆದರೆ ಅನೇಕ ಕಡೆಗಳಲ್ಲಿ ಆಸ್ತಿ ಇರುವುದರಿಂದ ಅವುಗಳನ್ನು ಗುರುತಿಸಿ, ಅವುಗಳ ಗಡಿ ಗುರುತಿಸಿ ಬೇಲಿಯನ್ನು ಅಳವಡಿಸುವುದು ತುಂಬಾನೇ ಕಷ್ಟ. ಅದಾಗಲೇ ಸ್ಥಳೀಯರು ಅದನ್ನು ಅತಿಕ್ರಮಣ ಮಾಡಿಕೊಂಡಿದ್ದರಿಂದ ಅವರನ್ನು ಅಲ್ಲಿಂದ ಒಕ್ಕಲೆಬ್ಬಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ಇದೀಗ ಡ್ರೋನ್ ಮೂಲಕ ವಿಶ್ವವಿದ್ಯಾಲಯದ ಸರ್ವೆ ನಡೆಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಸರ್ವೆ ಇಲಾಖೆಯೊಂದಿಗೆ ಸಂವಹನ ನಡೆಸಿ, ವೈಜ್ಞಾನಿಕವಾದ ಸರ್ವೆ ಮಾಡಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಅತಿಕ್ರಮಣ ಮಾಡಿದವರು ಕೂಡ ಹೆಚ್ಚಿಗೆ ಮಾತನಾಡಲು ಬರುವುದಿಲ್ಲ ಎನ್ನುವುದು ಇದರ ಹಿಂದಿರುವ ಉದ್ದೇಶ. ನಗರದ ಹೃದಯ ಭಾಗದಲ್ಲಿಯೂ ವಿಶ್ವವಿದ್ಯಾಲಯದ ಸಾಕಷ್ಟು ಆಸ್ತಿ ಇವೆ. ಸಣ್ಣ ಜಮೀನಿಗೆ ಅದಾಗಲೇ ಕಾಂಪೌಂಡ್ ಇಲ್ಲವೇ ತಂತಿ ಬೇಲಿಯ ರಕ್ಷಣೆ ಇದೆ. ಆದರೆ ದೊಡ್ಡ ಜಮೀನಿಗೆ ಈ ರಕ್ಷಣೆ ನೀಡಲು ವಿಶ್ವವಿದ್ಯಾಲಯಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಅಂಥ ಜಮೀನುಗಳು ಅತಿಕ್ರಮಣಗೊಂಡಿವೆ. ಇನ್ನು ನೂತನ ಕುಲಪತಿಗಳ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಒಂದು ವಿಶ್ವವಿದ್ಯಾಲಯಕ್ಕೆ ಎಷ್ಟು ಜಮೀನಿದ್ದರೂ ಕಡಿಮೆಯೇ. ಅದು ನಿರಂತರವಾಗಿ ವಿಸ್ತರಣೆಯಾಗುತ್ತಾ ಹೋಗುವ ಜ್ಞಾನ ಕೇಂದ್ರ. ಹೀಗಾಗಿ ಇರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಯಾರಿಗೂ ಬಿಟ್ಟುಕೊಡಬಾರದು ಅನ್ನೋದು ಸ್ಥಳೀಯರ ಅಭಿಪ್ರಾಯ.

ಇದನ್ನೂ ಓದಿ: ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ

ವಿವಿ ಭೂಮಿಯ ಅತಿಕ್ರಮಣದ ಅನೇಕ ಪ್ರಕರಣಗಳು ಅದಾಗಲೇ ನ್ಯಾಯಾಲಯದ ಮೆಟ್ಟಿಲೇರಿವೆ. ಇದಕ್ಕೆ ಕಾರಣ ಹಿಂದೆ ಕಾರ್ಯನಿರ್ವಹಿಸಿದ ವಿವಿ ಕುಲಪತಿಗಳು ಹಾಗೂ ಸಿಬ್ಬಂದಿ. ಅತಿಕ್ರಮಣ ತೆರವು ವೇಳೆ ರಾಜಕೀಯ ನಾಯಕರು ಕೂಡ ಪ್ರಭಾವ ಬೀರುತ್ತಾರೆ. ಹೀಗಾಗಿ ಅಧಿಕಾರಿಗಳಿಗೂ ಕೂಡ ಇದನ್ನು ತಡೆಯುವುದು ತುಂಬಾನೇ ಕಷ್ಟ. ಆದರೆ ಇದೀಗ ನೂತನ ಕುಲಪತಿಗಳ ಗಟ್ಟಿ ನಿರ್ಧಾರದಿಂದಾಗಿ ಕೈಬಿಟ್ಟು ಹೋಗಿರುವ ಆಸ್ತಿ ಮರಳಿ ಬರುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ – Kannada News | Bengaluru Pub Fight: Request for Girls Mobile Number Sparks Violence, Two Cases Filed

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಘಟನೆ ಏನು?

ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು ಮೊಬೈಲ್​​ ನಂಬರ್​​ ನೀಡಲು ನಿರಾಕರಿಸಿರುವ ಕಾರಣಕ್ಕೆ ಅವರ ಜೊತೆಗೆ ಉಮೇಶ್​​ ಅಸಭ್ಯವರ್ತನೆ ತೋರಿದ್ದಾರೆ. ಘಟನೆ ಬಗ್ಗೆ ಪಬ್​​ ಸಿಬ್ಬಂದಿಗೆ ಹೇಮಂತ್​​ ದೂರು ನೀಡಿದ್ದು, ಆ ಬಳಿಕ ಉಮೆಶ್​​ ಟೇಬಲ್​​ನ ಪಬ್​​ನವರು ಬೇರೆಡೆಗೆ ಶಿಫ್ಟ್​​ ಮಾಡುವ ಮೂಲಕ ಪರಿಸ್ಥಿತಿ ಶಾಂತಗೊಳಿಸಿದ್ದರು. ಆದ್ರೆ ಪಾರ್ಟಿ ಮುಗಿಸಿ ಪಬ್​​ನಿಂದ ಹೊರಬರುವಾಗ ಉಮೆಶ್​ ಮತ್ತೆ ಹೇಮಂತ್​​​ಗೆ ಬೈದಿದ್ದು ರಾದ್ಧಾಂತಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​; ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ಉಮೇಶ್​​ ಮಾತಿನಿಂದ ಹೇಮಂತ್​​ ಕೂಡ ಸಿಟ್ಟಾಗಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋಗಿದೆ. ಆಕ್ರೋಶಭರಿತರಾಗಿದ್ದ ಹೇಮಂತ್​​ ಉಮೇಶ್​​ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಪಬ್ ಬಳಿಗೆ ಕೆಲ ಹುಡುಗರನ್ನು ಕರೆಸಿ ಮತ್ತೆ ಅಟ್ಯಾಕ್​​ಗೆ ಮುಂದಾಗಿದ್ದಾರೆ. ಈ ವೇಳೆ ದೊಡ್ಡ ಗಲಾಟೆ ನಡೆಯದಂತೆ ಪಬ್ ಸಿಬ್ಬಂದಿ ಮತ್ತು ಸ್ಥಳಕ್ಕೆ ಬಂದ ಜ್ಞಾನಭಾರತಿ ಪೊಲೀಸರು ತಡೆದಿದ್ದಾರೆ. ಬಳಿಕ ಹೇಮಂತ್ ತನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಉಮೇಶ್ ದೂರು ನೀಡಿದ್ದರೆ, ಅಸಭ್ಯ ವರ್ತನೆ ಆರೋಪದಡಿ ಉಮೇಶ್ ವಿರುದ್ಧ ಹೇಮಂತ್​​ ಜೊತೆಗಿದ್ದ ಯುವತಿಯರು ಕೂಡ ಪ್ರತಿದೂರು ದಾಖಲಿಸಿದ್ದಾರೆ. ಇಬ್ಬರ ದೂರಿನ ಅನ್ವಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ – Kannada News | PM Narendra Modi returns New Delhi after successfully concluding his Oman visit

ನವದೆಹಲಿ, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿ (PM Modi Oman Visit) ಓಮನ್​ಗೆ ತಮ್ಮ ಐತಿಹಾಸಿಕ ಭೇಟಿಯನ್ನು ಮುಗಿಸಿ ದೆಹಲಿಗೆ ವಾಪಾಸ್ ಹೊರಟಿದ್ದಾರೆ. ಈ ವೇಳೆ ಓಮನ್ ಸುಲ್ತಾನರ ಸಹೋದರ ‘ನಮಸ್ತೆ’ ಎಂದು ಕೈ ಮುಗಿದು, ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬೀಳ್ಕೊಟ್ಟಿದ್ದಾರೆ. ನಿನ್ನೆ (ಬುಧವಾರ) ಇಥಿಯೋಪಿಯಾದಿಂದ ಪ್ರಧಾನಿ ಮೋದಿ ಓಮನ್​ಗೆ ಆಗಮಿಸಿದ್ದರು. ಒಟ್ಟು 3 ದೇಶಗಳ ಪ್ರವಾಸ ಮುಗಿಸಿರುವ ಪ್ರಧಾನಿ ಮೋದಿ 4 ದಿನಗಳ ಬಳಿಕ ಇದೀಗ ದೆಹಲಿಗೆ ವಾಪಾಸಾಗುತ್ತಿದ್ದಾರೆ.

ಓಮನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರ ಸಹೋದರ ಮತ್ತು ಸುಲ್ತಾನರ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳಿದರು. ಎರಡೂ ದೇಶಗಳ ನಡುವಿನ ಐತಿಹಾಸಿಕ ಸಂಬಂಧ ಮತ್ತು ಅವರ ಆತ್ಮೀಯ ಸೌಹಾರ್ದತೆಯನ್ನು ಎತ್ತಿ ತೋರಿಸುತ್ತಾ, ಇಬ್ಬರೂ ನಾಯಕರು ಕೈಕುಲುಕಿ ಪರಸ್ಪರ ಅಪ್ಪಿಕೊಂಡರು. ಓಮನ್ ಉಪ ಪ್ರಧಾನಿ ಕೂಡ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳುವಾಗ ಸಾಂಪ್ರದಾಯಿಕ ಭಾರತೀಯ ಶೈಲಿಯಲ್ಲಿ ಕೈ ಮುಗಿದು ನಮಸ್ಕರಿಸಿ ಬೀಳ್ಕೊಟ್ಟಿದ್ದು ವಿಶೇಷವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ – Kannada News | Modi Modi Slogans in PM Modi interaction with Indian community and students at Maitri Parv in Oman

ಮಸ್ಕತ್, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿಯವರ (PM Modi Oman Visit) ಹವಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಜೋರಾಗೇ ಇದೆ. ಓಮನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಸ್ಕತ್​ನಲ್ಲಿ ಭಾರತೀಯ ಸಮುದಾಯದ ಸದಸ್ಯರು ಮತ್ತು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಅಲ್ಲಿ ಯಾವ ಮಟ್ಟಿಗಿನ ನಮೋ ಕ್ರೇಜ್ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅನಿವಾಸಿ ಭಾರತೀಯರು “ಮೋದಿ, ಮೋದಿ”, “ಭಾರತ್ ಮಾತಾ ಕಿ ಜೈ” ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು. ಇದನ್ನು ನೋಡಿ ಪ್ರಧಾನಿ ಮೋದಿ ಕೂಡ ಸಂತಸಗೊಂಡರು. ‘ಮೈತ್ರಿ ಪರ್ವ್’ ಎಂಬ ಹೆಸರಿನ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್‌ನಲ್ಲಿರುವ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಬಳಿಕ ಅಲ್ಲಿ ಸೇರಿದ್ದ ಭಾರತೀಯರು ಪ್ರಧಾನಿ ಮೋದಿಯವರ ಜೊತೆ ಫೋಟೋ ತೆಗೆಸಿಕೊಂಡು, ಶೇಕ್ ಹ್ಯಾಂಡ್ ಮಾಡಿ, ತಬ್ಬಿಕೊಂಡು ತಮ್ಮ ಖುಷಿಯನ್ನು ವ್ಯಕ್ತಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು – Kannada News | Bengaluru tragedy: Child dies after bricks fall from an under construction building

ಬೆಂಗಳೂರು, ಡಿಸೆಂಬರ್​ 18: ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು (child) ಸಾವನ್ನಪ್ಪಿರುವಂತಹ (death) ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ಸಂಭವಿಸಿದೆ. ಶ್ರೀಶೈಲ್ ಎಂಬುವವರ ಪುತ್ರಿ ಮನುಶ್ರೀ ಅಲಿಯಾಸ್ ಪಾರು(4) ಸಾವನ್ನಪ್ಪಿರುವ ಮಗು. ಮತ್ತಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್‌ಎಎಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ವಿಜಯಪುರ ಜಿಲ್ಲೆಯವರು. ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿ ಸಿಮೆಂಟ್ ಶೀಟ್​​ನ ಶೆಡ್‌ನಲ್ಲಿ ಕುಟುಂಬ ವಾಸವಾಗಿತ್ತು. ಗಾಯಾಳು ಮಕ್ಕಳಾದ ಶ್ರಿಯನ್ (6) ಮತ್ತು ಶೇಖರ್(5)ರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆ ಮಾಲೀಕನ ವಿರುದ್ಧ ನಿರ್ಲಕ್ಷ್ಯ ಆರೋಪ

ನಿರ್ಮಾಣ ಹಂತದ ಕಟ್ಟಡ ಶ್ರೀನಿವಾಸುಲು ಎಂಬುವವರಿಗೆ ಸೇರಿದೆ. ನಿರ್ಮಾಣ ವೇಳೆ ಅಗತ್ಯವಾದ ಸುರಕ್ಷತಾ ಕ್ರಮಗಳು ಹಾಗೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. 4ನೇ ಮಹಡಿ ಮೇಲಿಂದ ಸುಮಾರು 10 ರಿಂದ 12 ಸಿಮೆಂಟ್ ಇಟ್ಟಿಗೆ ಬಿದ್ದಿವೆ. ಇಟ್ಟಿಗೆ ಬಿದ್ದ ರಭಸಕ್ಕೆ ಮನೆಯ ಶೀಟ್‌ ಸಂಪೂರ್ಣ ಧ್ವಂಸವಾಗಿದೆ. ಮನೆಯಲ್ಲಿದ್ದ ಮಗುವಿನ ಮೇಲೆ ಬಿದ್ದ ಪರಿಣಾಮ ಮೃತಪಟ್ಟಿದೆ.

ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಸಮೀಪದ ವಣಕನಹಳ್ಳಿ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಆಕಾಶ್(23) ದುರ್ಮರಣ.

ಇದನ್ನೂ ಓದಿ: Dharwad: ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಯುವತಿ; ಸಿಕ್ಕಿದ್ದು ಎರಡೆರಡು ಡೆತ್​​ನೋಟ್​​!

ಆಕಾಶ್ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ಶವವನ್ನು ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆನೇಕಲ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹತ್ತು ಅಡಿ ಹಾರಿದ ಕಾರು: ಇಬ್ಬರು ಅದೃಷ್ಟವಶಾತ್ ಪಾರು

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಹತ್ತು ಅಡಿ ಹಾರಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮಿತ್ರ ದ್ರೋಹ: ತಂಗಿ ಜೊತೆ ಲವ್ವಿಡವ್ವಿ; ಗೆಳೆಯನಿಗೆ ಚಟ್ಟ ಕಟ್ಟಿದ ಸ್ನೇಹಿತರು

ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಡಿವೈಡರ್​​ಗೆ ಡಿಕ್ಕಿಯಾಗಿ ಹತ್ತು ಅಡಿ ಕಾರು ಹಾರಿದೆ. ಕಾರಿನ ರಸ್ತೆ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:19 pm, Thu, 18 December 25

Source link