Headlines

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ – Kannada News | Belagavi: DK Shivakumar PS car involved in accident; biker dies, car overturns on impact

ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್​ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್​ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ…

Read More

ಕರಾವಳಿಗರು ಬೆಂಕಿ ಹಚ್ಚೋರು ಎಂದ ಸಚಿವ ಭೈರತಿ ಸುರೇಶ್ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | Karavali MLAs Angry On Minister Byrathi Suresh for controversy statement On coastal during hate speech bill

ಬೆಳಗಾವಿ (ಡಿಸೆಂಬರ್ .18): ಕರಾವಳಿ ಭಾಗದ ಬಿಜೆಪಿ ಶಾಸಕರ ವಿರುದ್ಧ ‘ಬೆಂಕಿ ಹಚ್ಚುವವರು’ ಎಂದು ಸಚಿವ ಬೈರತಿ ಸುರೇಶ್ (Byarathi Suresh) ಅವರು ಹೇಳಿರುವುದು ಸದನದಲ್ಲಿ ಕಿಚ್ಚನ್ನು ಹೊತ್ತಿಸಿದೆ. ಸುವರ್ಣಸೌಧದ ವಿಧಾನಸಭೆಯಲ್ಲಿಂದು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕಕ್ಕೆ (Hate Speech Bill) ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಭಾವಿಗಿಳಿದು ಪ್ರತಿಭಟನೆ ನಡೆಸಿದರು. ಹೀಗೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಜೋರಾಗಿ ಮಾತಿನ ಸಮರ ನಡೆಯುತ್ತಿರುವಾಗಲೇ ಸಚಿವ…

Read More

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು – Kannada News | Yogaraj Bhat speech in Landlord Kannada movie song release event

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ (Landlord) ಸಿನಿಮಾದ ‘ನಿಂಗವ್ವ ನಿಂಗವ್ವ..’ ಹಾಡು ರಿಲೀಸ್ ಆಗಿದೆ. ಈ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಪ್ರೇಮ್, ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ತರುಣ್ ಸುಧೀರ್, ಸೋನಲ್ ಮೊಂತೆರೋ ಭಾಗಿ ಆಗಿದ್ದರು. ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಯೋಗರಾಜ್ ಭಟ್ (Yogaraj Bhat) ಅವರು ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಕಂಠದಲ್ಲಿ ಹಾಡು ಮೂಡಿಬಂದಿದೆ. ಸಾಂಗ್ ರಿಲೀಸ್ ವೇಳೆ ಯೋಗರಾಜ್ ಭಟ್…

Read More

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್ – Kannada News | After Bastian pub now IT Raid on Shilpa Shetty Mumbai home in Rs 60 Cr fraud case

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಕುಟುಂಬದ ಮೇಲೆ ಹಲವಾರು ಕೇಸ್​​ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ (ಡಿಸೆಂಬರ್ 18) ಈ ಘಟನೆ ನಡೆದಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ…

Read More

ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ – Kannada News | I Wont feed baby throw it to dustbin woman refuses to accept Newborn Baby in Hospital know why

ಗೋರಖ್​ಪುರ, ಡಿಸೆಂಬರ್ 18: ‘ಹೆತ್ತ ತಾಯಿಗೆ ಹೆಗ್ಗಣವೂ ಮುದ್ದು’ ಎಂಬ ಗಾದೆ ಮಾತೊಂದಿದೆ. ತಾಯಿ ಎಂಥದ್ದೇ ಪರಿಸ್ಥಿತಿ ಬಂದರೂ ತಾನು ಹೆತ್ತ ಮಗುವನ್ನು ಬಿಟ್ಟುಕೊಡುವುದಿಲ್ಲ, ಅದಕ್ಕೆ ತೊಂದರೆಯಾದರೆ ಸಹಿಸುವುದೂ ಇಲ್ಲ. ಆದರೆ, ಗೋರಖ್‌ಪುರದ (Gorakhpur) ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಕೆ ಹೆರಿಗೆಯ ನಂತರ ಮಗುವಿಗೆ ಹಾಲುಣಿಸಲು ನಿರಾಕರಿಸಿದಳು. ಇದು ವೈದ್ಯರಿಗೆ ಆಘಾತ ಉಂಟುಮಾಡಿದೆ. ಆಕೆಯ ಮನೆಯವರು, ವೈದ್ಯರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಆಕೆ ಅದಕ್ಕೆ ಒಪ್ಪಲಿಲ್ಲ. “ಈ ಮಗು ವಿಶ್ವಾಸದ್ರೋಹಿಯಾದ ನನ್ನ…

Read More

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ – Kannada News | Congress leader accused of selling ration rice in the black market

ಬೆಂಗಳೂರು, ಡಿಸೆಂಬರ್​ 18: ಬಿಪಿಎಲ್​​ ಕಾರ್ಡ್​​ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್​ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ…

Read More

ಸದನದಲ್ಲಿ ಚರ್ಚೆ ಬೆನ್ನಲ್ಲೇ ಶಕ್ತಿ ಯೋಜನೆ ಹಣ ಬಾಕಿ ರಿಲೀಸ್: ಯಾವ ನಿಗಮಕ್ಕೆ ಎಷ್ಟು? – Kannada News | Karnataka: Shakti Yojana grant released; 441 crore disbursed to four corporations

ಬೆಂಗಳೂರು, ಡಿಸೆಂಬರ್​ 18: ಸರ್ಕಾರಿ ಬಸ್​​ಗಳಲ್ಲಿ ಲಕ್ಷಾಂತರ ನಾರಿಮಣಿಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಮಹಿಳೆಯರು, ವಿದ್ಯಾರ್ಥಿನಿಯರು ಸೇರಿದಂತೆ ಹಲವರ ಬದುಕಿಗೆ ಶಕ್ತಿಯೋಜನೆಯೇ (shakti yojana) ಆಸರೆ ಆಗಿದೆ. ಆದರೆ ಯೋಜನೆಯೇ ಸಾರಿಗೆ ಇಲಾಖೆಯನ್ನ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಈ ಬಗ್ಗೆ ಸದನದಲ್ಲಿ ಕೂಡ ಚರ್ಚೆಯಾಗಿದ್ದು, ಅದರ ಬೆನ್ನಲ್ಲೇ ಇದೀಗ ಸರ್ಕಾರ ಶಕ್ತಿ ಯೋಜನೆಗೆ ಅನುದಾನ ಬಿಡುಗಡೆ ಮಾಡಿದೆ. 4 ನಿಗಮಗಳಿಗೆ 441 ಕೋಟಿ ರೂ. ಅನುದಾನ (grant) ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಸಾವಿರಾರು ಕೋಟಿ…

Read More

ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಭೂಮಿ ಎಲ್ಲಿ? ಹೇಗಿದೆ ನೋಡಿ – Kannada News | BJP Alleged land grab in Kolar Against Minister Krishna Byre Gowda, here Is land details

ಕೋಲಾರ, (ಡಿಸೆಂಬರ್ 18):  ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್‌ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್‌ ಇಮೇಜ್‌ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರ ಹುಟ್ಟೂರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿನ ಸರ್ವೆ ನಂಬರ್‌ 46 ಮತ್ತು 47ರಲ್ಲಿ . ಇದೇ ಸರ್ವೇ ನಂಬರ್‌ನಲ್ಲೇ ಸಚಿವರ ಹೆಸರಿನಲ್ಲಿ 21 ಎಕರೆ ಜಮೀನಿದೆ. ಆದ್ರೆ, ಇದು ಸ್ಮಶಾನ…

Read More

‘ಚಾರ್ಜ್​ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್​ ಭಾರದ್ವಾಜ್ – Kannada News | Venkat Bharadwaj completes Chargesheet and Rakky movie shooting in 2025

ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ಬ್ಯಾಕ್ ಟು ಬ್ಯಾಕ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. 2025ರಲ್ಲಿ ಅವರು ಸೂಪರ್ ಫಾಸ್ಟ್ ಆಗಿ ಕೆಲಸ ಮಾಡಿದ್ದಾರೆ. ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ 2 ಸಿನಿಮಾಗಳು 2025ರಲ್ಲಿ ಬಿಡುಗಡೆ ಆದವು. ಅಲ್ಲದೇ ಇದೇ ವರ್ಷ ಅವರು ಇನ್ನೆರಡು ಸಿನಿಮಾಗಳ ಶೂಟಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೌದು, ವೆಂಕಟ್ ಭಾರದ್ವಜ್ ಆ್ಯಕ್ಷನ್-ಕಟ್ ಹೇಳಿದ ‘ಹೈನಾ’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಯಿತು. ಬಳಿಕ ನವೆಂಬರ್ ತಿಂಗಳಲ್ಲಿ ‘ಹೇ ಪ್ರಭು’ ಸಿನಿಮಾ…

Read More

ಬಾಬಾ ರಾಮದೇವ್ ಅವರ ದೇಸೀ ಬಾಜ್ರಾ ಪಿಜ್ಜಾ; ಈ ಚಳಿಗಾಲದ ಸೂಪರ್​ಫುಡ್ ತಯಾರಿಸುವ ಕ್ರಮ – Kannada News | Baba Ramdev shares recipe of Pizza made with Bajra for healthy winter snack

ಯೋಗ ಗುರು ಮತ್ತು ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಬಹಳ ಹಿಂದಿನಿಂದಲೂ ಆಯುರ್ವೇದವನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಸ್ಥಳೀಯ ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವಂತೆ ನಿರಂತರವಾಗಿ ಶಿಫಾರಸು ಮಾಡುತ್ತಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಫಿಟ್‌ನೆಸ್‌ಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ರಾಮದೇವ್ ಸ್ವತಃ ಸೇವಿಸುವ ಅನೇಕ ಆರೋಗ್ಯಕರ ಆಹಾರಗಳ ಪಾಕವಿಧಾನಗಳನ್ನು ಸಹ ಅವರು ಹಂಚಿಕೊಳ್ಳುತ್ತಾರೆ. ಸಾಂಪ್ರದಾಯಿಕ ಚಳಿಗಾಲದ ಧಾನ್ಯಗಳು ಮತ್ತು ತರಕಾರಿಗಳು ದೇಹವನ್ನು ಒಳಗಿನಿಂದ ಬಲಪಡಿಸುತ್ತವೆ ಮತ್ತು ರೋಗಗಳಿಂದ ರಕ್ಷಿಸಲು…

Read More