Category Archives: Blog

Your blog category

ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ – Kannada News | Clash Erupts Between MLA Kottur Manjunath and Minister K.H. Muniyappa Factions at Kolar Congress Office

ಕೋಲಾರ, ಜೂನ್​​ 14: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಖಂಡರ ಮಹತ್ವದ ಸಭೆಯು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಬಿ.ಕೆ.ಹರಿಪ್ರಸಾದ್​​ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಹೆಚ್.ಮುನಿಯಪ್ಪ ಬಣಗಳ ನಡುವೆ ಗಲಾಟೆ ನಡೆದಿದೆ. ಶಾಸಕರು ಹಾಗೂ ಇತರ ಹಿರಿಯ ಮುಖಂಡರ ಸಮ್ಮುಖದಲ್ಲೇ ಬಣ ರಾಜಕೀಯದ ಜಗಳ ಬಹಿರಂಗಗೊಂಡಿದೆ. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕೆ.ಹೆಚ್.ಮುನಿಯಪ್ಪ ಬಣದ ಮಂಜುನಾಥ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್ ನಡುವೆ ವಾಗ್ವಾದ ತಾರಕಕ್ಕೇರಿದೆ. ಈ ವೇಳೆ ಮುಖಂಡರು ಅವಾಚ್ಯ ಪದಗಳಿಂದ ಬೈದಾಡಿಕೊಂಡರು. ಸಭೆ ನಂತರವೂ ಕಚೇರಿ ಹೊರಗೂ ಮಾತಿನ ಚಕಮಕಿ ಉಂಟಾಗಿದೆ. ಶಾಸಕ ಕೆ.ವೈ ನಂಜೇಗೌಡ, ಕೊತ್ತೂರು ಮಂಜುನಾಥ್ ಮತ್ತು MLC ಅನಿಲ್ ಕುಮಾರ್ ಸಭೆಯಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್ – Kannada News | DK Shivakumar Delhi Met success: Union Governmnet give Premotion Soon to Bengaluru orange metro line

ಬೆಂಗಳೂರು, (ಜೂನ್ 14): ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್‌ಗೆ (Orange Line Metro) ಶಂಕುಸ್ಥಾಪನೆ ಮಾಡಿದ್ದರು. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಬಂಧ ಇಲ್ಲಿಯವರೆಗೆ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೊನ್ನೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ ಮಾಡಿ ಡಬಲ್ ಡೆಕ್ಕರ್ ಕಂ ಮೆಟ್ರೋಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದು, ಸದ್ಯದಲ್ಲೇ ಇದಕ್ಕೆ ಗ್ರೀನ್ ಸಿಗ್ನಲ್ ‌ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಖ್ಯಾಂಶಗಳು

  • ಕೇಂದ್ರದಿಂದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಸಿಗಲಿದೆ ಗುಡ್ ನ್ಯೂಸ್
  • ಆರೆಂಜ್ ಲೈನ್ ಮೆಟ್ರೋ ಮಾರ್ಗದಲ್ಲೂ ಬರಲಿದೆ ಡಬಲ್ ಡೆಕ್ಕರ್ ಫ್ಲೈ ಓವರ್
  • ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ

ಜೆ.ಪಿ ನಗರ ನಾಲ್ಕನೇ ಹಂತದಿಂದ ಕೆಂಪಾಪುರ, ಹೊಸಹಳ್ಳಿ ಟು ಕಡಬಗೆರೆ.ಆರೆಂಜ್ ಲೈನ್ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಆಗಸ್ಟ್- 10 ರಂದು ಶಂಕುಸ್ಥಾಪನೆ ಮಾಡಿದ್ದರು. ಆದರೆ ಇಲ್ಲಿಯವರೆಗೆ ಮೆಟ್ರೋ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಇದಕ್ಕೆ ಪ್ರಮುಖ ಕಾರಣ ಅಂದರೆ, ರಾಜ್ಯ ಸರ್ಕಾರ ಈ ಮಾರ್ಗದಲ್ಲಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಮೆಟ್ರೋ ಜೊತೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ಇದಕ್ಕೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಅಸಮಾಧಾನ ವ್ಯಕ್ತಪಡಿಸಿತ್ತು. ಇದರಿಂದ ಮೆಟ್ರೋ ಪ್ರಯಾಣಿಕರ ಮೇಲೆ ಪರಿಣಾಮ ಬೀರಳಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಿದ್ರೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತದೆ ಅನ್ನೋ ಕಾರಣ ನೀಡಿತ್ತು. ಆದರೆ ಇದೀಗ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ ಮಾಡಿ ಡಬಲ್ ಡೆಕ್ಕರ್ ಕಂ ಮೆಟ್ರೋಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದು, ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಒಂದು ಭೇಟಿ, ಹತ್ತಾರು ಬೇಡಿಕೆ: ಪ್ರಧಾನಿ ಮೋದಿ ಮುಂದೆ ಡಿಕೆಶಿ ಇಟ್ಟ ಬೇಡಿಕೆಗಳಾವುವು? ಇಲ್ಲಿದೆ ಪಟ್ಟಿ

ಇನ್ನೂ ಮೆಟ್ರೋ 3ನೇ ಹಂತದಲ್ಲಿ ಎರಡು ಮಾರ್ಗಗಳಿದ್ದು, ಜೆಪಿ ನಗರ 4ನೇ ಹಂತದಿಂದ-ಕೆಂಪಾಪುರ ಒಟ್ಟು 32.5 ಕಿಮೀ ಉದ್ದದ ಮಾರ್ಗ.ಹೊಸಹಳ್ಳಿಯಿಂದ ಮಾಗಡಿ ರಸ್ತೆಯಾಗಿ ಕಡಬಗೆರೆ ಒಟ್ಟು 12.15 ಕಿಮೀ. ಉದ್ದವನ್ನು ಹೊಂದಿದೆ. ಈ ಬಗ್ಗೆ ಮಾತನಾಡಿದ ಸ್ಥಳೀಯ ನಿವಾಸಿ, ನಮ್ಮ ಮನೆಯ ಮುಂಭಾಗದಲ್ಲಿ ಮೆಟ್ರೋ ಕಂ ಡಬಲ್ ಡೆಕ್ಕರ್ ಫ್ಲೈ ಹಾದು ಹೋಗುವುದು ತುಂಬಾ ಸಂತೋಷದ ವಿಷ್ಯ. ಇದರಿಂದ ರಿಂಗ್ ರೋಡ್ ನಲ್ಲಿ ಟ್ರಾಫಿಕ್ ಸಮಸ್ಯೆ ‌ಕಂಟ್ರೊಲ್ ಆಗಲಿದೆ, ವಾಯುಮಾಲಿನ್ಯದ ಪ್ರಮಾಣವು ಕಡಿಮೆ ಆಗಲಿದೆ. ಜನರು ಸಂಚಾರ ಮಾಡಲು ಸಾಕಷ್ಟು ಸಹಾಯ ಆಗಲಿದೆ. ಪೀಣ್ಯದಲ್ಲಿರುವ ಸಾವಿರಾರು ಇಂಡಸ್ಟ್ರಿಗಳಿದ್ದು, ಕೆಲಸಕ್ಕೆ ಹೋಗುವವರಿಗೆ ಅನುಕೂಲವಾಗಲಿದೆ ಅಂತಾರೇ.

ಒಟ್ನಲ್ಲಿ ಆರೆಂಜ್ ಲೈನ್‌ ಮೆಟ್ರೋ ಮಾರ್ಗದಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲು ಸದ್ಯದಲ್ಲೇ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಲಿದ್ದು, ಇದರಿಂದ ಔಟರ್ ರಿಂಗ್ ರೋಡ್ ನಿವಾಸಿಗಳಿಗೆ ಮತ್ತು ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:59 pm, Sun, 14 June 26

Source link

IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್

Source link

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು. ಇತ್ತೀಚೆಗೆ ಕೇರಳದ ಪ್ರಮುಖ ದೇವಾಲಯಗಳು ಸೇರಿದಂತೆ ದೇಶದ ಹಲವೆಡೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇದೀಗ ಕೊಲ್ಲೂರು ದೇವಿಯ ದರ್ಶನ ಪಡೆದಿದ್ದಾರೆ. ಇನ್ನು ಇತ್ತೀಚೆಗೆ ತಮಿಳುನಾಡು ಸಿಎಂ ವಿಜಯ್ ಕೂಡ  ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು: ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್​ – Kannada News | Police Bribery Case: PSI and Two Constables Arrested by Jaipur ACB

ಉಳ್ವಪ್ಪ, PSI ಅನಿತಾ, ಯತೀಶ್ ಕುಮಾರ್Image Credit source: tv9 kannada

ಬೆಂಗಳೂರು, ಜೂನ್​ 14: ನ್ಯಾಯ ಕೊಡಿಸುವಲ್ಲಿ ಕರ್ನಾಟಕ (Karnataka) ಪೊಲೀಸ್ ದೇಶದಲ್ಲೇ ನಂಬರ್ ಒನ್. ಆದರೆ ಬೆಂಗಳೂರಿನ ಮೂವರು ಪೊಲೀಸರು ಜೈಪುರದಲ್ಲಿ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿ‌ಯನ್ನು ಬಂಧಿಸಲು ಹೋಗಿದ್ದವರು ಲಂಚ ಸ್ವೀಕರಿಸುತ್ತಿದ್ದಾಗ ಅಲ್ಲಿನ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾರೆ.

ಮುಖ್ಯಾಂಶಗಳು

  • ಜೈಪುರದಲ್ಲಿ ಬೆಂಗಳೂರಿನ ಮೂವರು ಪೊಲೀಸರು ಎಸಿಬಿ ಬಲೆಗೆ
  • 40 ಸಾವಿರ ರೂ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪೊಲೀಸರು
  • ಜೈಪುರ ಎಸಿಬಿ‌ ಎಎಸ್​ಪಿ ಭೂಪೇಂದ್ರ ಚೌಧರಿ ನೇತೃತ್ವದಲ್ಲಿ ದಾಳಿ

ವರದಕ್ಷಿಣೆ ಪ್ರಕರಣದ ತನಿಖೆಗಾಗಿ ಜೈಪುರಕ್ಕೆ ತೆರಳಿದ್ದ ಪೊಲೀಸರು

ದೊಡ್ಡ ದೊಡ್ಡ ಪ್ರಕರಣದಲ್ಲಿ ಸುಮ್ಮನಾಗುವ ಪೊಲೀಸರು ವರದಕ್ಷಿಣೆ ಪ್ರಕರಣದಲ್ಲಿ ರಾಜಸ್ಥಾನಕ್ಕೆ ಹೋಗಿದ್ದರು. ಆರೋಪಿಯನ್ನ ಬಂಧಿಸಿ ಕರೆದುಕೊಂಡು ಬರುವುದನ್ನು ಬಿಟ್ಟು ಹಣ ಮಾಡಲು ಮುಂದಾಗಿದ್ದರು. ಆರೋಪಿ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಆರೋಪಿ ಇದನ್ನು ಬಂಡವಾಳ ಮಾಡಿಕೊಂಡು ಜೈಪುರ್ ಎಸಿಬಿಗೆ ದೂರು ನೀಡಿದ್ದಾನೆ. ದೂರಿನ‌ ಮೇಲೆ ಕಾರ್ಯಾಚರಣೆ ನಡೆಸಿದ ಎಸಿಬಿ ರಾಜ್ಯದ ಪಿಎಸ್​​ಐ ಸೇರಿ ಮೂವರನ್ನ ಬಂಧಿಸಿದ್ದಾರೆ.

2 ಲಕ್ಷ ರೂ ಲಂಚಕ್ಕೆ ಬೇಡಿಕೆ

ವರದಕ್ಷಿಣೆ ಪ್ರಕರಣದ ತನಿಖೆಗಾಗಿ ಹೆಚ್​ಎಎಲ್ ಪೊಲೀಸ್ ಠಾಣೆಯ ಸಬ್-ಇನ್‌ಸ್ಪೆಕ್ಟರ್ ಅನಿತಾ, ಕಾನ್ಸ್‌ಟೇಬಲ್​​ ಯತೀಶ್ ಕುಮಾರ್, ಉಳ್ವಪ್ಪ ತೆರಳಿದ್ದರು‌. ಆರೋಪಿಯನ್ನು ಬಂಧಿಸಿದ ಇವರು ದುಡ್ಡು ಕೊಟ್ಟರೆ ಬಿಡುವುದಾಗಿ ಹೇಳಿದ್ದಾರೆ. ಪ್ರಕರಣದಲ್ಲಿ ನೆರವು ನೀಡುವುದಾಗಿ ಹೇಳಿ 2 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಪೊಲೀಸರಿಗೆ ಸರಿಯಾದ ಪಾಠ ಕಲಿಸಿದ ಆರೋಪಿ

ಬೆಂಗಳೂರು ಪೊಲೀಸರ ವಸೂಲಿ ಬಾಜಿಯಿಂದ ಬೇಸತ್ತ ಆರೋಪಿ, ತಕ್ಷಣ ಜೈಪುರ ಎಸಿಬಿ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದ. ದೂರು ಸ್ವೀಕರಿಸಿದ ರಾಜಸ್ಥಾನ ಎಸಿಬಿ ಟೀಂ, ಪ್ರಾಥಮಿಕ ತನಿಖೆ ನಡೆಸಿ ಬೆಂಗಳೂರು ಪೊಲೀಸರಿಗೆ ಬಲೆ ಬೀಸಿತ್ತು. ಜೈಪುರದ ಗಂಗೌರ್ ಹೋಟೆಲ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 40 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಸ್​​ಐ ಅನಿತಾ ಸೇರಿ ಮೂವರು ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ. ಡಿಐಜಿ ಓಂ ಪ್ರಕಾಶ್ ಮೀನಾ ಅವರ ಮೇಲ್ವಿಚಾರಣೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಭೂಪೇಂದ್ರ ಚೌಧರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ನಕ್ಸಲ್ ಚಟುವಟಿಕೆಗೆ ಬೆಂಗಳೂರಲ್ಲಿ ಹಣಕಾಸು ವಹಿವಾಟು: ರಾಜ್ಯದ ನಾಲ್ವರು ಸೇರಿ 7 ಜನರ ವಿರುದ್ಧ ಎಫ್​ಐಆರ್​

ಒಟ್ಟಾರೆ ಇಡೀ ದೇಶದಲ್ಲಿ ಬೆಂಗಳೂರು ಪೊಲೀಸರ ಗೌರವ 40 ಸಾವಿರ ರೂ.ಕ್ಕೆ ಹರಾಜಾಗಿದೆ‌. ಇನ್ನಾದ್ರೂ ಪೊಲೀಸ್ ಇಲಾಖೆ ಆರೋಪಿಗಳ ಬಳಿ ಕೈ ಒಡ್ಡೋದನ್ನ ನಿಲ್ಲಿಸಬೇಕಿದೆ. ಸದ್ಯ ಮೂವರು ಪೊಲೀಸರನ್ನ ಬಂಧಿಸಿರುವ ಜೈಪುರ ಎಸಿಬಿ ಟೀಂ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.

ವರದಿ: ವಿಕಾಸ್ ಟಿವಿ9 ಬೆಂಗಳೂರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಶ್ಮಿಕಾ ಮಂದಣ್ಣ ಹೊಸ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ – Kannada News | Rashmika, Kriti, Shahid starrer Cocktail 2 movie gets A certificate

ರಶ್ಮಿಕಾ ಮಂದಣ್ಣ (Rashmika Mandanna) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟಿ. ಹಲವು ದೊಡ್ಡ ಸ್ಟಾರ್​ಗಳ ಜೊತೆಗೆ ರಶ್ಮಿಕಾ ನಟಿಸುತ್ತಿದ್ದಾರೆ. ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್​​ನ ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ಆದರೆ ರಶ್ಮಿಕಾ ಮಂದಣ್ಣ ‘ಫ್ಯಾಮಿಲಿ ನಟಿ’ ಎಂದೇ ಹೆಸರು ಮಾಡಿದ್ದಾರೆ. ಅವರಿಗೆ ಸಿಗುವ ಪಾತ್ರಗಳು ಸಹ ಗೃಹಸ್ಥೆ, ಸಂಭಾವಿತ ಗರ್ಲ್​​ಫ್ರೆಂಡ್ ಇಂಥಹುವೇ. ‘ಅನಿಮಲ್’ ಅಂಥಹಾ ಸಿನಿಮಾನಲ್ಲೂ ಸಹ ರಶ್ಮಿಕಾ ಅವರದ್ದು ‘ಒಳ್ಳೆಯ ಪತ್ನಿ’ಯ ಪಾತ್ರವೇ ಆಗಿತ್ತು. ಆದರೆ ಇದೀಗ ರಶ್ಮಿಕಾ, ಹೊಸ ಸಿನಿಮಾನಲ್ಲಿ ತುಸು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದು, ಇದೇ ಕಾರಣಕ್ಕೆ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ದೊರೆತಿದೆ.

ರಶ್ಮಿಕಾ ನಟಿಸುವ ಸಿನಿಮಾಗಳಿಗೆ ‘ಎ’ ಪ್ರಮಾಣ ಪತ್ರ ಸಿಗುವುದು ಅಪರೂಪದಲ್ಲಿ ಅಪರೂಪ. ಈ ಹಿಂದೆ ‘ಅನಿಮಲ್’ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರವನ್ನು ಸಿಬಿಎಫ್​​ಸಿ ನೀಡಿತ್ತು. ಆದರೆ ಆ ಸಿನಿಮಾನಲ್ಲಿ ರಶ್ಮಿಕಾ ಅವರದ್ದು ಸಂಭಾವಿತ ಗೃಹಿಣಿಯ ಪಾತ್ರವೇ ಆಗಿತ್ತು. ಆದರೆ ಇದೀಗ ರಶ್ಮಿಕಾ ನಟಿಸಿರುವ ಹೊಸ ಸಿನಿಮಾ ‘ಕಾಕ್​​ಟೇಲ್ 2’ಗೆ ಸಿಬಿಎಫ್​​ಸಿ ‘ಎ’ ಪ್ರಮಾಣ ಪತ್ರ ನೀಡಿದೆ. 18 ವರ್ಷಕ್ಕೂ ಹೆಚ್ಚಿನ ವಯಸ್ಸಿನವರು ಮಾತ್ರವೇ ಈ ಸಿನಿಮಾ ವೀಕ್ಷಿಸಬಹುದಾಗಿದೆ.

‘ಕಾಕ್​​ಟೇಲ್ 2’ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ದೊರಕುವ ಮೂಲಕ ರಶ್ಮಿಕಾ ಮಂದಣ್ಣ ವೃತ್ತಿ ಜೀವನದಲ್ಲಿ ಎರಡನೇ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ದೊರೆತಂತಾಗಿದೆ. ಈ ಹಿಂದೆ ರಶ್ಮಿಕಾ ನಾಯಕಿಯಾಗಿದ್ದ ‘ಅನಿಮಲ್’ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ದೊರೆತಿತ್ತು. ಆದರೆ ಆ ಸಿನಿಮಾನಲ್ಲಿ ರಶ್ಮಿಕಾ ಅವರದ್ದು ಗ್ಲಾಮರಸ್ ಪಾತ್ರ ಆಗಿರಲಿಲ್ಲ. ಆದರೆ ‘ಕಾಕ್​​ಟೇಲ್ 2’ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಜೊತೆಗೆ ನಟಿ ಕೃತಿ ಸನೊನ್ ಸಹ ಸಿನಿಮಾನಲ್ಲಿದ್ದು, ಅವರೂ ಸಹ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ನೀಡಲಾಗಿದೆ.

ಈ ಸಿನಿಮಾ ತ್ರಿಕೋನ ಪ್ರೇಮಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಶಾಹಿದ್ ಕಪೂರ್ ನಾಯಕ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಶಾಹಿದ್ ಕಪೂರ್, ರಶ್ಮಿಕಾ ಮತ್ತು ಕೃತಿ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಆದರೆ ಈ ನಡುವೆ ಮೂವರೂ ಪ್ರವಾಸಕ್ಕೆ ತೆರಳಿ ಒಬ್ಬರನ್ನೊಬ್ಬರು ಹೆಚ್ಚು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಕೊನೆಗೆ ಶಾಹಿದ್ ಯಾರನ್ನು ಒಪ್ಪಿಕೊಳ್ಳುತ್ತಾರೆ, ಅಥವಾ ಕತೆಯಲ್ಲಿ ಟ್ವಿಸ್ಟ್ ಏನಾದರೂ ಬರುತ್ತದೆಯೇ ಎಂಬುದು ಸಿನಿಮಾದ ಕತೆ.

ಇದನ್ನೂ ಓದಿ:ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ

ಈ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನೋನ್ ಲೆಸ್ಬಿಯನ್ ಕಪಲ್ ಆಗಿ ನಟಿಸಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಚಿತ್ರತಂಡ ಇದನ್ನು ಅಲ್ಲಗಳೆದಿದೆಯಾದರೂ ಈಗ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ದೊರೆತಿರವುದು ನೋಡಿ ಕೆಲ ನೆಟ್ಟಿಗರು ಮತ್ತೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸಿನಿಮಾವನ್ನು ಹೋಮಿ ಅದಜಾನಿಯಾ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡಿರುವುದು ದಿನೇಶ್ ವಿಜನ್. ಕತೆ ಬರೆದಿರುವುದು ಲವ್ ರಂಜನ್. ಸಿನಿಮಾ ಜೂನ್ 19ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ವಿರುದ್ಧ ಮೊದಲ ಎಸೆತದಲ್ಲೇ ವಿಶ್ವ ದಾಖಲೆ ಸೃಷ್ಟಿಸಿದ ಶಫಾಲಿ ವರ್ಮಾ – Kannada News | Shafali Verma’s World Record Six vs Pakistan: India’s T20 WC 2026 Campaign Begins with a Bang!

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More

Source link

ಪಾಕ್ ವಿರುದ್ಧ ಮೊದಲ ಎಸೆತದಲ್ಲೇ ವಿಶ್ವ ದಾಖಲೆ ಸೃಷ್ಟಿಸಿದ ಶಫಾಲಿ ವರ್ಮಾ – Kannada News | Womens t20 world cup 2026 shafali verma first ball six vs pakistan

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More

Source link

ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ: ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್..! – Kannada News | Bengaluru condiments association Calls Shop Bandh On June 18th Over rowdies harassment

ಬೆಂಗಳೂರು, (ಜೂನ್ 14): ಪೋಲಿಸರು (Police), ಜಿಬಿಎ ಅಧಿಕಾರಿಗಳು, ಆರೋಗ್ಯ ಇಲಾಖೆ ಸೇರಿದಂತೆ ಪ್ರಮುಖವಾಗಿ ಪುಡಿ ರೌಡಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತೆ ಆಗ್ರಹಿಸಿ, ಸಿಲಿಕಾನ್ ಸಿಟಿ ಬೆಂಗಳೂರಿನ ಬೇಕರಿ-ಕಾಂಡಿಮೆಂಟ್ಸ್, ಬೀಡಾ ಅಂಗಡಿ, ಸಣ್ಣಪುಟ್ಟ ವ್ಯಾಪಾರಿಗಳು ಗುರುವಾದಿಂದ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೌದು….ಪುಡಿರೌಡಿಗಳ ಕಿರುಕುಳಕ್ಕೆ ಬೇಸತ್ತು ಬೇಕರಿ ಕಾಂಡಿಮೆಂಟ್ಸ್ ಅಸೋಸಿಯೇಷನ್ (Bengaluru condiments association), ಜೂನ್ 18ರಂದು ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳು ಬಂದ್ಗೆ ಕರೆ ನೀಡಿದೆ. ಈ ಮೂಲಕ ರೌಡಿಗಳ ದಾಂಧಲೆಗಳಿಗೆ ಬ್ರೇಕ್ ಹಾಕುವಂತೆ ಒತ್ತಾಯಿಸಿದೆ.

ಮುಖ್ಯಾಂಶಗಳು

  • ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾದ ಪುಡಿರೌಡಿಗಳ ಕಿರಿಕಿರಿ
  • ಅಧಿಕಾರಿಗಳು, ಪುಡಿರೌಡಿಗಳ ಕಿರುಕುಳ ತಪ್ಪಿಸಲು ಕಾಂಡಿಮೆಂಟ್ಸ್ ವ್ಯಾಪಾರಿಗಳು ಆಗ್ರಹ
  • ಗುರುವಾರ ಬೆಂಗಳೂರಿನಲ್ಲಿ ಬೇಕರಿ-ಕಾಂಡಿಮೆಂಟ್ಸ್ ಬಂದ್

ಹೆಚ್ಚಾದ ಪುಡಿರೌಡಿಗಳ ಹಾವಳಿ

ಇತ್ತೀಚೆಗೆ ರಾಜಧಾನಿ ಬೆಂಗಳೂರಲ್ಲಿ ಪುಡಿರೌಡಿಗಳ ಹಾವಳಿ ಹೆಚ್ಚಾಗಿದೆ. ಹಫ್ತಾ ವಸೂಲಿ ಮಾಡುವುದು ಹಣ ಕೊಡದೆ ಇದ್ರೆ ಹಲ್ಲೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ಜೊತೆಯಲ್ಲಿ ಪೋಲಿಸರು, ಜಿಬಿಎ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳ ಹಿಂಸೆ ಬೇರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವಂತೆ ಬೆಂಗಳೂರಿನ ಬೇಕರಿ- ಕಾಂಡಿಮೆಂಟ್ಸ್,ಬೀಡಾ ಅಂಗಡಿ, ಸಣ್ಣಪುಟ್ಟ ವ್ಯಾಪಾರಿಗಳು, ಗುರುವಾದಿಂದ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಗುರುವಾರದಂದು ನಗರದಲ್ಲಿ ಹಾಲು,ಟೀ,ಕಾಫಿ, ಬ್ರೇಡ್, ಬನ್, ಹಣ್ಣು, ತರಕಾರಿ, ಊಟ-ತಿಂಡಿ ಸಿಗೋದು ಬಹುತೇಕ ಡೌಟ್ ಎನ್ನಲಾಗ್ತಿದೆ. ಗುರುವಾರ ಬೆಳಿಗ್ಗೆ 5 ಗಂಟೆಯಿಂದ ಬೆಂಗಳೂರಿನ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿದ್ಯಂತೆ.ಬದುಕಲು ಅವಕಾಶ ಕೊಡಿ ಇಲ್ಲ ಒಂದು ತೊಟ್ಟು ವಿಷ ಕೊಡಿ ಎಂದು ಪ್ರತಿಭಟನೆಗೆ ಮುಂದಾಗಿರುವ ಬೇಕರಿ- ಕಾಂಡಿಮೆಂಟ್ಸ್ ಮಾಲೀಕರು.

ಇದನ್ನೂ ಓದಿ: ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ

ಇನ್ನೂ ಬೆಂಗಳೂರಿನಲ್ಲಿ ಬೇಕರಿ, ಕಾಂಡಿಮೆಂಟ್ಸ್, ಬೀಡಾ ಅಂಗಡಿ, ಚಿಲ್ಲರೆ ಅಂಗಡಿ, ಬೀದಿಬದಿ ವ್ಯಾಪಾರಿಗಳು, ಮೊಬೈಲ್ ಕ್ಯಾಂಟೀನ್ ಸೇರಿ ಒಟ್ಟು ಸುಮಾರು 58 ಸಾವಿರ ಅಂಗಡಿಗಳಿವೆ. ಈ ಎಲ್ಲಾ ವ್ಯಾಪಾರಿಗಳು ಮುಷ್ಕರಕ್ಕೆ ಬೆಂಬಲ ನೀಡಿದ್ದು, ಜೂನ್ 18ರಂದು   ಅಂಗಡಿ ಕ್ಲೋಸ್ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಬೆಳಿಗ್ಗೆ 5 ರಿಂದ ರಾತ್ರಿ11 ಗಂಟೆಯವರೆಗೆ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ವ್ಯಾಪಾರಿಗಳ ಪ್ರಮುಖ ಬೇಡಿಕೆಗಳು

ತಂಬಾಕು ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಕೊಡಿ,ಇಲ್ಲ ಉತ್ಪನ್ನಗಳನ್ನು ಸಂಪೂರ್ಣ ನಿಷೇಧಿಸಬೇಕು, ಬೇಕರಿ ಕಾಂಡಿಮೆಂಟ್ಸ್ ಮಾಲೀಕರು ಹಣ ಕೊಟ್ಟು ಖರೀದಿ ಮಾಡಿದ ಅ ವಸ್ತುಗಳನ್ನು ಅಧಿಕಾರಿಗಳು ಸೀಜ್ ಮಾಡ್ತಿದ್ದಾರೆ ಅದನ್ನು ನಿಲ್ಲಿಸಬೇಕು. ಹಾಗೇ ಅಧಿಕಾರಿಗಳ ದರ್ಪ ನಿಲ್ಲಿಸಬೇಕು. ಪುಡಿ ರೌಡಿಗಳ ರೌಡಿಸಂ ಕಡಿವಾಣ ಹಾಕಬೇಕು.

ಈ ಬಗ್ಗೆ ಮಾತನಾಡಿದ ವ್ಯಾಪಾರಿ, ಇತ್ತೀಚೆಗೆ ಬೇಕರಿ ಕಾಂಡಿಮೆಂಟ್ಸ್ ಮಾಲೀಕರಿಗೆ ಕಿರುಕುಳ ಹೆಚ್ಚಾಗಿದೆ. ಹಣ ಕೊಡದೆ ಕಿರುಕುಳ ಕೊಡ್ತಾರೆ. ಇದರಿಂದ ಗುರುವಾರ ಎಲ್ಲಾ ಸಣ್ಣಪುಟ್ಟ ವ್ಯಾಪಾರಿಗಳು ಸೇರಿಕೊಂಡು ಅಂಗಡಿ ಕ್ಲೋಸ್ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಬೆಳಿಗ್ಗೆ 5 ರಿಂದ ರಾತ್ರಿ11 ಗಂಟೆಯವರೆಗೆ ಮುಷ್ಕರ ಮಾಡುತ್ತೇವೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

World Wind Day 2026: ವಿಶ್ವ ಪವನ ದಿನಾಚರಣೆಯ ಉದ್ದೇಶವೇನು? – Kannada News | World Wind Day 2026: Purpose of World Wind Day

ಪವನ (Wind) ಶಕ್ತಿಯು ಶುದ್ಧ, ನವೀಕರಿಸಬಹುದಾದ ಮತ್ತು ಹೇರಳವಾದ ಶಕ್ತಿಯ ನೈಸರ್ಗಿಕ ಮೂಲವಾಗಿದ್ದು, ಇದರಿಂದ ಶಕ್ತಿಯನ್ನು ಉತ್ಪಾದಿಸಬಹುದು ಅಲ್ಲದೆ ಇದು ಹವಾಮಾನ ಬದಲಾವಣೆಯನ್ನು ತಗ್ಗಿಸುವಲ್ಲಿ, ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯ ಉಳಿವಿಗೂ ಗಾಳಿ ಬೇಕೇ ಬೇಕು. ಶುದ್ಧ ಗಾಳಿಯ ಮಹತ್ವವನ್ನು ಸಾರಲು, ಈ ಪವನ ಶಕ್ತಿಯ ವಿವಿಧ ಉಪಯೋಗ ಮತ್ತು ಅದರ ಸರಿಯಾದ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್ 15 ರಂದು‌ ವಿಶ್ವ ವಾಯು ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಗಾಳಿ ದಿನದ ಇತಿಹಾಸವೇನು?

ಯುರೋಪಿಯನ್ ವಿಂಡ್‌ ಎನರ್ಜಿ ಅಸೋಸಿಯೇಷನ್ (EWEA) 2007 ರಲ್ಲಿ ಮೊದಲ ಬಾರಿಗೆ ಈ ದಿನವನ್ನು ಆಚರಿಸಿತು. ನಂತರ, 2009 ರಲ್ಲಿ  ಈ ಸಂಘಟನೆ ಗ್ಲೋಬಲ್‌ ವಿಂಡ್‌ ಎನರ್ಜಿ ಕೌನ್ಸಿಲ್ (GWEC) ಸಹಭಾಗಿತ್ವದಲ್ಲಿ ಈ ದಿನವನ್ನು ವಿವಿಧ ಕಾರ್ಯಕ್ರಮಗಳ ಜೊತೆಗೆ  ಜಾಗತಿಕವಾಗಿ ಆಚರಿಸಲು ಪ್ರಾರಂಭಿಸಿತು. ಎರಡೂ ಸಂಸ್ಥೆಗಳು ಈ ದಿನದಂದು ಶುದ್ಧ ಗಾಳಿಯ ಮಹತ್ವದ ಬಗ್ಗೆ ಮತ್ತು ವಾತಾವರಣದಲ್ಲಿನ ಇಂಗಾಲದ ಪ್ರಮಾಣವನ್ನು ಕಡಿಮೆ ಮಾಡಲು ಜನರಿಗೆ ಅರಿವು ಮೂಡಿಸಲಾಗುತ್ತದೆ.

ಇದನ್ನೂ ಓದಿ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನೆರವಾಗಿ

ವಿಶ್ವ ಗಾಳಿ ದಿನದ ಮಹತ್ವವೇನು?

  • ಪವನ ಶಕ್ತಿಯ ಮಹತ್ವ ಹಾಗೂ ಅದರ ಸರಿಯಾದ ಬಳಕೆಯ ಬಗ್ಗೆ ಜಾಗೃತಿಯನ್ನು ಮೂಡಿಸಲು ವಿಶ್ವ ವಾಯು ದಿನವನ್ನು ಅಚರಿಸಲಾಗುತ್ತದೆ.
  • ಈ ದಿನದಂದು, ದೈನಂದಿನ ಜೀವನದಲ್ಲಿ ಪವನ ಶಕ್ತಿಯನ್ನು ಬಳಸಲು, ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ಪವನ ಶಕ್ತಿ ಉತ್ಪಾದನಾ ವಲಯದಲ್ಲಿ ಉದ್ಯೋಗವನ್ನು ಉತ್ತೇಜಿಸಲು ಪ್ರಪಂಚದಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
  • ಇಂದಿನ ಕಾಲದಲ್ಲಿ, ನೀರು, ಗಾಳಿ, ಸೌರ ಮತ್ತು ಇತರ ನೈಸರ್ಗಿಕ ಅಸಾಂಪ್ರದಾಯಿಕ ಶಕ್ತಿಯ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರಕೃತಿಯನ್ನು ನಾಶಮಾಡುವ ಬದಲು, ವಿಜ್ಞಾನವು ನೈಸರ್ಗಿಕ ಸಂಪನ್ಮೂಲಗಳ ಉತ್ತಮ ಬಳಕೆಯತ್ತ ಸಾಗುತ್ತಿದೆ. ಗಾಳಿಯ ಶಕ್ತಿ ಮತ್ತು ಅದನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಕುರಿತು ಜಾಗೃತಿ ಮೂಡಿಸಲು ವಿಶ್ವ ಪವನ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link