Category Archives: Blog

Your blog category

ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಧ್ವನಿ ಇಲ್ಲ? ‘ಏಕ್ ದಿನ್’ ಸೋಲಿನ ಬಳಿಕ ನಟಿಗೆ ಮತ್ತೊಂದು ಹಿನ್ನಡೆ – Kannada News | Sai Pallavi Ramayana dubbing controversy Hindi accent criticism after Ek Din

ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಸೀತಾ ಪಾತ್ರಧಾರಿ ಸಾಯಿ ಪಲ್ಲವಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಸಾಯಿ ಪಲ್ಲವಿ (Sai Pallavi) ಅವರ ಹಿಂದಿ ಉಚ್ಚಾರಣೆಯ ಬಗ್ಗೆ ಕೇಳಿಬರುತ್ತಿರುವ ಟೀಕೆಗಳ ಹಿನ್ನೆಲೆಯಲ್ಲಿ, ಚಿತ್ರತಂಡವು ಅವರ ಪಾತ್ರಕ್ಕೆ ಬೇರೆಯವರಿಂದ ಡಬ್ ಮಾಡಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಇದರಿಂದ ಹಿಂದಿ ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರಿಗೆ ಕೊಂಚ ಹಿನ್ನಡೆ ಆದಂತೆ ಆಗಲಿದೆ. ಅಲ್ಲದೇ, ಅವರ ಅಭಿಮಾನಿಗಳಿಗೆ ಖಂಡಿತಾ ಬೇಸರ ಆಗಲಿದೆ.

ಸಾಯಿ ಪಲ್ಲವಿ ಅಭಿನಯದ ‘ಏಕ್ ದಿನ್’ ಚಿತ್ರದ ಪ್ರಚಾರದ ವೇಳೆ ಅವರ ಹಿಂದಿ ಉಚ್ಚಾರಣೆಯಲ್ಲಿ ತಮಿಳು ಶೈಲಿ ಎದ್ದು ಕಾಣುತ್ತಿತ್ತು. ಈ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ನೆಟ್ಟಿಗರು ಸಾಯಿ ಪಲ್ಲವಿ ಅವರನ್ನು ಟ್ರೋಲ್ ಮಾಡಲು ಶುರು ಮಾಡಿದ್ದರು. ‘ಹಿಂದಿಯ ಮೂಲ ಪದಗಳನ್ನೇ ಸರಿಯಾಗಿ ಉಚ್ಚರಿಸಲು ಬಾರದ ನಟಿಯನ್ನು ಸೀತಾ ಮಾತೆಯ ಪಾತ್ರಕ್ಕೆ ಆಯ್ಕೆ ಮಾಡಿದ್ದೇಕೆ?’ ಎಂದು ಹಲವರು ಪ್ರಶ್ನಿಸಿದ್ದರು.

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಒಂದು ಸಾಂಸ್ಕೃತಿಕ ಮಹತ್ವವಿರುವ ಚಿತ್ರವಾಗಿದೆ. ಇದರಲ್ಲಿ ಭಾಷೆ ಅತ್ಯಂತ ಶುದ್ಧವಾಗಿ ಮತ್ತು ಸ್ಪಷ್ಟವಾಗಿರಬೇಕು ಎಂಬುದು ತಂಡದ ಆಶಯ. ‘ಏಕ್ ದಿನ್’ ಚಿತ್ರದಲ್ಲಿ ಸಾಯಿ ಪಲ್ಲವಿ ಅವರ ಪಾತ್ರವು ತಮಿಳು ಹಿನ್ನೆಲೆಯದ್ದಾಗಿದ್ದರಿಂದ ಅಲ್ಲಿನ ಉಚ್ಚಾರಣೆ ಹೊಂದಿಕೆಯಾಗಿತ್ತು. ಆದರೆ ‘ರಾಮಾಯಣ’ ಸಿನಿಮಾದಲ್ಲಿ ಸೀತಾ ದೇವಿಯ ಪಾತ್ರಕ್ಕೆ ಅತ್ಯಂತ ಪರಿಷ್ಕೃತ ಹಿಂದಿ ಬೇಕಿರುವುದರಿಂದ, ವೃತ್ತಿಪರ ಡಬ್ಬಿಂಗ್ ಕಲಾವಿದರಿಂದ ಧ್ವನಿ ಕೊಡಿಸಲು ನಿರ್ಮಾಪಕರು ಚಿಂತಿಸುತ್ತಿದ್ದಾರೆ ಎಂದು ವರದಿ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ಪರವಾಗಿ ಕೆಲವರು ಬ್ಯಾಟಿಂಗ್ ಮಾಡುತ್ತಿದ್ದರೆ, ಇನ್ನು ಕೆಲವರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ‘ಸಾಯಿ ಪಲ್ಲವಿ ಅವರ ನಟನೆ ಅದ್ಭುತವಾಗಿದೆ, ಭಾಷೆಯೊಂದೇ ಅಡೆತಡೆಯಾಗಬಾರದು’ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ‘ಇಷ್ಟು ದೊಡ್ಡ ಚಿತ್ರಕ್ಕೆ ಭಾಷೆಯ ಮೇಲೆ ಹಿಡಿತವಿರುವ ನಟಿಯನ್ನು ಆಯ್ಕೆ ಮಾಡಬೇಕಿತ್ತು’ ಎಂದು ಟೀಕಾಕಾರರು ವಾದಿಸುತ್ತಿದ್ದಾರೆ.

ಇದನ್ನೂ ಓದಿ: ಚೇತರಿಕೆ ಕಾಣದ ಸಾಯಿ ಪಲ್ಲವಿ ಸಿನಿಮಾ; ನಿರ್ಮಾಪಕ ಆಮಿರ್​ಗೆ ನಷ್ಟ?

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ಶ್ರೀರಾಮನಾಗಿ ನಟಿಸುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ರಾವಣನಾಗಿ ಅಭಿನಯಿಸುತ್ತಿದ್ದಾರೆ. ಸನ್ನಿ ಡಿಯೋಲ್ ಅವರಿಗೆ ಹನುಮಂತನ ಪಾತ್ರ ನೀಡಲಾಗಿದೆ. ರವಿ ದುಬೆ ಅವರು ಲಕ್ಷ್ಮಣನಾಗಿ ಕಾಣಿಸಿಕೊಳ್ಳಲಿದ್ದಾರೆ. ದೀಪಾವಳಿ ಹಬ್ಬದ ಸಮಯದಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ ಗೊತ್ತಾ? – Kannada News | Money Mindset: Worrying Constantly about Money can lead you to negativity

ಹಗಲು ರಾತ್ರಿ ಹಣದ ಚಿಂತೆ ಮಾಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಣವು ಜೀವನಕ್ಕೆ ಅವಶ್ಯಕವಾದರೂ, ಅದರ ಅತಿಯಾದ ಚಿಂತೆ ವ್ಯಕ್ತಿಯ ಬದುಕಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಶಾಸ್ತ್ರಗಳು “ಅತಿ ಸರ್ವತ್ರ ವರ್ಜಯೇತ್” ಎಂದು ಹೇಳುತ್ತವೆ, ಅಂದರೆ ಯಾವುದೇ ವಿಷಯದಲ್ಲಿ ಅತಿರೇಕ ಸಲ್ಲದು. ಬೆಳಗ್ಗಿನಿಂದ ಸಾಯಂಕಾಲದವರೆಗೆ ಕೇವಲ ಹಣ, ಹಣ ಎಂದು ಚಿಂತಿಸುವುದು ಜ್ಯೋತಿಷ್ಯದ ಪ್ರಕಾರ ದೋಷಗಳಿಗೆ ಕಾರಣವಾಗುತ್ತದೆ.

ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ, ಅರ್ಥವು ಧರ್ಮದ ನಂತರ ಬರುತ್ತದೆ. ಧರ್ಮದಿಂದ ಹಣ ಸಂಪಾದಿಸಿ, ಆ ಆಸೆಯಿಂದ ಮೋಕ್ಷದೆಡೆ ಸಾಗಬೇಕು. ಆದರೆ, ಹಣದ ಅತಿಯಾದ ವ್ಯಾಮೋಹವು ಸುಖ ಸಂತೋಷಗಳಿಗೆ ದೂರ ಮಾಡಿ, ಸಂಬಂಧಗಳನ್ನು ಹಾಳು ಮಾಡುತ್ತದೆ ಮತ್ತು ದೈವಬಲವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ದೇಹದ ಅಂಗಾಂಗ ವೈಫಲ್ಯದಂತಹ ಆರೋಗ್ಯ ಸಮಸ್ಯೆಗಳಿಗೂ ಇದು ಕಾರಣವಾಗಬಹುದು ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

RCB vs KKR ಪಂದ್ಯಕ್ಕೆ 5 ಆಟಗಾರರು ಅಲಭ್ಯ!

Source link

ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ – Kannada News | Belagavi, Bagalkote, Mangaluru Hit by Severe Storms: Uprooted Trees, Power Cuts and Traffic Disruption

ಬೆಳಗಾವಿ, ಮೇ 13: ಬೆಳಗಾವಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ರಭಸಕ್ಕೆ ಬೃಹತ್ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಸಂಚಾರಕ್ಕೆ ತೀವ್ರ ಅಡ್ದಿಯಾಗಿದೆ. ರಸ್ತೆಗಳ ಮೇಲೆ ಬಿದ್ದ ಮರಗಳಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಬಾಗಲಕೋಟೆಯ ಬಾದಾಮಿಯಲ್ಲೂ ಇದೇ ರೀತಿಯ ಸನ್ನಿವೇಶವಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಾಗಲಕೋಟೆ-ಬಾದಾಮಿ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಮಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಬೈಕುಗಳನ್ನು ರಸ್ತೆ ಬದಿ ನಿಲ್ಲಿಸಿ ನಡೆದುಕೊಂಡು ಹೋಗಬೇಕಾಯಿತು. ಕಾರವಾರ ಮತ್ತು ಹುಬ್ಬಳ್ಳಿಯಲ್ಲೂ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಿಂದಾದ ಹಾನಿಯು ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟುಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿ, ಚಿಕ್ಕಮಗಳೂರು ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ – Kannada News | Heavy Rain Havoc in Karnataka: Trees Uprooted, Power Lines Damaged and Crop Loss Reported Across Districts

ಚಿಕ್ಕಮಗಳೂರಿನಲ್ಲಿ ಮಳೆImage Credit source: tv9

ಬೆಂಗಳೂರು, ಮೇ 13: ಕರ್ನಾಟಕದ (Karnataka) ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಬಿರುಗಾಳಿ ಸಹಿತ ಸುರಿದ ಮಳೆ ಅಪಾರ ಹಾನಿ ಉಂಟುಮಾಡಿದೆ. ಬೆಳಗಾವಿ, ಚಿಕ್ಕಮಗಳೂರು, ಬಾಗಲಕೋಟೆ ಮತ್ತು ಹಾವೇರಿ ಸೇರಿದಂತೆ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗಾವಿ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ ಸಹಿತ ಸುರಿದ ವರ್ಷಧಾರೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಬಿರುಗಾಳಿ ಮಳೆಗೆ ಬೃಹತ್ ಮರಗಳು ರಸ್ತೆಗೆ ಉರುಳಿ ವಾಹನ ಸಂಚಾರ ಸ್ಥಗಿತಗೊಂಡಿದೆ.
  • ಚಿಕ್ಕಮಗಳೂರಿನಲ್ಲಿ ವಿದ್ಯುತ್ ಕಂಬಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ.
  • ಹಾವೇರಿ ಮತ್ತು ದಾವಣಗೆರೆಯಲ್ಲಿ ನೂರಾರು ಅಡಕೆ ಮತ್ತು ಬಾಳೆ ಮರಗಳು ನಾಶವಾಗಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ರಾಜ್ಯಾದ್ಯಂತ ಮಳೆ ಅವಾಂತರ

ಬೆಳಗಾವಿ ಜಿಲ್ಲೆಯ ಕಕ್ಕೇರಿ ಗ್ರಾಮದಲ್ಲಿ ರಸ್ತೆ ಬದಿಯ ಬೃಹತ್ ಮರವೊಂದು ನೆಲಕ್ಕುರುಳಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ರಸ್ತೆಯಲ್ಲೂ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು, ನಂತರ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ತೆರವುಗೊಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಳ್ಳಿಯಲ್ಲಿ ವಿದ್ಯುತ್ ತಂತಿಗಳು ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದ್ದು, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಕಳಸ ಮತ್ತು ಕೊಪ್ಪ ತಾಲೂಕುಗಳಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಬಾರ್ಗಲ್ ಗ್ರಾಮವೊಂದರಲ್ಲೇ 30ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಬಾಗಲಕೋಟೆಯ ಬಾದಾಮಿಯಲ್ಲೂ ಧಾರಾಕಾರ ಮಳೆಗೆ ಮರಗಳು ಉರುಳಿ ಸಂಚಾರ ಅಸ್ತವ್ಯಸ್ತವಾಗಿತ್ತು.

ಕಂಗಾಲಾದ ಅನ್ನದಾತ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿಯಲ್ಲಿ 200ಕ್ಕೂ ಹೆಚ್ಚು ಅಡಕೆ ಮರಗಳು ನಾಶವಾಗಿದ್ದು, ಕೋಳಿ ಶೆಡ್ ಕುಸಿದು ಬಿದ್ದಿದೆ. ಇದರಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದ್ದು, ಸಂತ್ರಸ್ತರು ಸರ್ಕಾರದ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ!

ದಾವಣಗೆರೆಯ ಕೆರೆಯಾಗಲಹಳ್ಳಿಯಲ್ಲೂ ಬಾಳೆ ಮತ್ತು ಅಡಕೆ ತೋಟಗಳು ನಾಶವಾಗಿದ್ದು, ಶಾಸಕ ಬಸವಂತಪ್ಪ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾರ್ಯ ವೈಫಲ್ಯ, ಅತಿಯಾದ ಹತಾಶೆ – Kannada News | Horoscope May 13 Wednesday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ಪ್ರಾಮಾಣಿಕತೆ ಇತರರ ಗಮನ ಸೆಳೆಯುತ್ತದೆ. ಕೆಲಸದಲ್ಲಿ ಚಿಕ್ಕ ವಿಳಂಬ ಸಂಭವಿಸಬಹುದು, ತಾಳ್ಮೆಯಿಂದಿರಿ. ನಿಮ್ಮ ಯೋಜನೆಗಳಿಗೆ ಪೂರಕವಾದ ಅವಕಾಶಗಳು ಎದುರಾಗಬಹುದು. ಮನೆಯ ಕೆಲಸವನ್ನು ಬೇರೆಯವರಿಗೆ ಹೇಳಿದರೂ ನೀವೇ ಮಾಡಬೇಕಾಗುವುದು. ಇಂದು ಹೊಸ ಕಲಿಕೆಯ ಹಂಬಲವಿರಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ.

ವೃಷಭ ರಾಶಿ:

ಆದಷ್ಟು ನೆಮ್ಮದಿ ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳಿ. ಹಣಕಾಸು ಪರಿಸ್ಥಿತಿ ಸ್ಥಿರವಾಗಿರುತ್ತದೆ. ನಿಮ್ಮ ಆದರ್ಶಗಳ ಬಗ್ಗೆ ಯೋಚನೆ ಮಾಡುವ ದಿನ. ಸ್ನೇಹಿತರಿಂದ ಪ್ರೇರಣಾ ಮಾತುಗಳು ಸಿಗಬಹುದು. ವ್ಯವಸ್ಥೆ ಸರಿಯಾಗಲು ಎಲ್ಲ ಪ್ರಯೋಗವನ್ನೂ ಮಾಡಿ ಬತ್ತಳಿಕೆ ಖಾಲಿ ಮಾಡಿಕೊಳ್ಳುವಿರಿ. ಬದಲಾವಣೆಯ ಶಕ್ತಿ ಇವತ್ತು ನಿಮ್ಮ ಪಕ್ಕದಲ್ಲಿದೆ. ಉದ್ವೇಗಕ್ಕೆ ಒಳಗಾಗದೇ ಕಾರ್ಯಗಳನ್ನು ನಿರ್ವಹಿಸಿ. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ.

ಮಿಥುನ ರಾಶಿ:

ಇಂದು ಅನಿರೀಕ್ಷಿತವಾಗಿ ಅಮೂಲ್ಯವಾದ ವಸ್ತುವೊಂದು ಸಿಗಲಿದೆ. ಆದಾಯ ಅಧಿಕ ಹಾಗೂ ಹಣವನ್ನು ಪಡೆಯಲು ಕಷ್ಟಪಡುವಿರಿ. ಆರ್ಥಿಕವಾಗಿ ಸ್ವಲ್ಪ ಕಿರಿಕಿರಿ ಉಂಟಾಗಬಹುದು, ತಾಳ್ಮೆ ಇರಲಿ. ಇಂದು ನಿಮ್ಮ ಮಾತುಗಳು ಪರಿಣಾಮಕಾರಿ ಆಗಬಲ್ಲವು ಜವಾಬ್ದಾರಿಯಿಂದ ಮಾತನಾಡಿ. ಕೆಲವರಿಂದ ಭೀತಿಯಾಗುವುದು. ಗೊಂದಲವನ್ನು ನೀವು ಮೀರುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು.

ಕರ್ಕಾಟಕ ರಾಶಿ:

ನಿಮ್ಮ ಮೇಲೆ ಉಂಟಾದ ಅಪನಂಬಿಕೆಯನ್ನು ದೂರಮಾಡಿಕೊಳ್ಳಲು ಪ್ರಯತ್ನಿಸುವಿರಿ. ತಾಳ್ಮೆಯ ಪರೀಕ್ಷೆ ಇಂದಾಗನಹುದು. ಕೆಲಸದ ಒತ್ತಡ ಹೆಚ್ಚಾಗಿ ತೋರುತ್ತಾದರೂ, ನೀವು ಅದನ್ನು ಶ್ರದ್ಧೆಯಿಂದ ನಿಭಾಯಿಸಬಹುದು. ಹಣಕಾಸು ವಿಚಾರದಲ್ಲಿ ಚುರುಕಾಗಿ ಯೋಚಿಸಿ. ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿ. ಯಾವಿದೇ ವ್ಯವಸ್ಥೆಯಲ್ಲಿ ಮುಂದುವರಿಯಲು ಇಷ್ಟವಾಗದು. ವ್ಯಂಗ್ಯ ಮಾತುಗಳನ್ನು ಆಡಿ ಯಾರಿಂದಲೂ ಏನನ್ನೂ ನಿರೀಕ್ಷಿಸಲಾಗದು.

ಸಿಂಹ ರಾಶಿ:

ಕೆಲಸದಲ್ಲಿ ನಿಮ್ಮ ಶ್ರಮ ಗುರುತಿಸಲ್ಪಡುತ್ತದೆ. ಹಣಕಾಸು ಸ್ಥಿತಿ ಸ್ಥಿರವಾಗಿರುತ್ತದೆ. ನಿಮ್ಮ ಗೆಲವು ತೃಪ್ತಿದಾಯಕವಾಗಿರದು. ಕುಟುಂಬದೊಂದಿಗಿನ ಸಂಬಂಧ ಬಲವಾಗುತ್ತದೆ. ಆತ್ಮವಿಶ್ವಾಸದಿಂದ ಮಾತನಾಡಿ. ಅದು ನಿಮಗೆ ಮುನ್ನಡೆಯಲು ಮಾರ್ಗವಾಗುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಬರುತ್ತದೆ. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಯಾರ ಮೇಲೇ ರೇಗದೇ ಇರುವುದು ನಿಮಗೆ ಇಷ್ಟವಾದೀತು.

ಕನ್ಯಾ ರಾಶಿ :

ವಿದ್ಯಾರ್ಥಿಗಳಿಗೆ ಗೊಂದಲವಿರಲಿದೆ. ಹೊಸ ಉದ್ಯೋಗಕ್ಕೆ ಸೇರುವವರಿಗೆ ಅವಕಾಶಗಳು ಸಿಗಲಿವೆ. ಬಂಧುಗಳು ನಿಮ್ಮನ್ನು ಬೇಸರಿಸುವರು. ಆತ್ಮವಿಶ್ವಾಸ ಹೆಚ್ಚಾಗಲು ಕೆಲವು ಸಣ್ಣ ಜವಾಬ್ದಾರಿಗಳನ್ನು ಹೊರಬೇಗುತ್ತದೆ. ಹಳೆ ಯೋಜನೆಯ ವ್ಯವಹಾರವನ್ನು ಮುಗಿಸಿಕೊಳ್ಳುವಿರಿ. ಮನಸ್ಸಿನಲ್ಲಿ ಹಳೆಯ ನೆನಪುಗಳು ಬರುವ ಸಾಧ್ಯ. ಮಕ್ಕಳ ಅನಾರೋಗ್ಯದಿಂದ ನೀವು ಆತಂಕಕ್ಕೆ ಒಳಗಾಗುವಿರಿ. ವಿದೇಶೀ ವ್ಯಾಪಾರದಲ್ಲಿ ಅನಿಶ್ಚಿತತೆ ನಿಮ್ಮನ್ನು ಕಾಡಬಹುದು.

ತುಲಾ ರಾಶಿ:

ಪಾಲುದಾರಿಕೆಯಲ್ಲಿ ಉಂಟಾಗುವ ಕಲಹವನ್ನು ಆರಂಭದಲ್ಲಿಯೇ ನಿಲ್ಲಿಸಿ. ಯೋಜನೆಗಳು ನಿಧಾನವಾಗಿಯೇ ಮುಂದುವರಿಯಿಲಿ. ಗಡಿಬಿಡಿಯನ್ನು ಮಾಡಿಕೊಳ್ಳುವುದು ಬೇಡ. ಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ. ಹಣಕಾಸಿನಲ್ಲಿ ನಿರೀಕ್ಷೆಗಿಂತ ಹೆಚ್ಚು ಖರ್ಚು ಆಗಬಹುದು. ಹಳೆಯ ಸ್ನೇಹಿತನಿಂದ ಸಿಹಿ ಸುದ್ದಿ ಬರುತ್ತದೆ. ಸ್ತ್ರೀಯರು ಆಭರಣಗಳನ್ನು ಜತನದಿಂದ ಕಾಪಾಡಿಕೊಳ್ಳಿ. ಚರಾಸ್ತಿಯು ಬೇಜವಾಬ್ದಾರಿಯಿಂದ ಅನ್ಯರ ಪಾಲಾಗಬಹುದು.

ವೃಶ್ಚಿಕ ರಾಶಿ:

ನೂತನ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಯಂತ್ರಗಳಿಂದ ನಿಮಗೆ ನೋವಾಗುವ ಸಾಧ್ಯತೆ ಇದೆ. ದೂರದ ಪ್ರದೇಶಗಳಿಗೆ ಹೋಗಿ ನಿರಾಸೆ ಆಗಬಹುದು. ಮಾತಿನ ಪರಿಣಾಮ ಇಂದು ಹೆಚ್ಚಾಗಬಹುದು. ಜವಾಬ್ದಾರಿಯುತವಾಗಿ ಮಾತನಾಡಿ. ಉತ್ಸಾಹದಿಂದ ಕೆಲಸಗಳನ್ನು ಆರಂಭಿಸಿ. ನಿಮ್ಮ ಸಂಗಾತಿಯ ಮೇಲೆ ಕಛೇರಿಯಲ್ಲಿ ಆದ ವೈಮನಸ್ಯದಿಂದ ಮುನಿಸಿಕೊಳ್ಳಬಹುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆದುಕೊಳ್ಳಿ.

ಧನು ರಾಶಿ:

ಹಿಂದುಳಿದ ಕಾರ್ಯಗಳು ಪ್ರಗತಿಯನ್ನು ಕಾಣುವುವು. ಲಾಭವನ್ನು ಪಡೆಯಲು ನೂತನ ಯೋಜನೆಯನ್ನು ಮಾಡುವಿರಿ. ಆರ್ಥಿಕ ವಿಚಾರದಲ್ಲಿ ಬೌದ್ಧಿಕ ಸಮತೋಲನ ಅಗತ್ಯ. ಸೃಜನಾತ್ಮಕ ಕೆಲಸಗಳಲ್ಲಿ ನಿರತರಾಗಬಹುದು. ಇಂದು ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಅಲ್ಪ ಧನವನ್ನು ಕಳೆದುಕೊಳ್ಳುವಿರಿ. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು.

ಮಕರ ರಾಶಿ:

ನಿಮ್ಮ ನಡುವೆ ಪರಸ್ಪರ ಕಾಳಜಿಯು ಗೊತ್ತಾಗುವ ಸಾಧ್ಯತೆ ಇದೆ. ದುಃಖಗಳನ್ನು ಬಿಟ್ಟು ಹೊಸ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ. ಈ ದಿನ ಮನಸ್ಸು ಲಘುವಾಗುತ್ತದೆ. ಅನಾವಶ್ಯಕ ಖರ್ಚು ತಪ್ಪಿಸಿಕೊಳ್ಳಿ. ನಿರ್ಧಾರ ತೆಗೆದುಕೊಳ್ಳುವ ಮೊದಲು ಶಾಂತವಾಗಿ ಯೋಚಿಸಿ. ಸ್ನೇಹಿತನೊಂದಿಗೆ ಕಲಹವಾಗುವ ಸಾಧ್ಯತೆ ಇದೆ, ತಾಳ್ಮೆ ಇರಲಿ. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ.

ಕುಂಭ ರಾಶಿ:

ಹಣಕಾಸು ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ. ಕೆಲಸದ ಒತ್ತಡ ಕಡಿಮೆಯಾಗಬಹುದು. ಹೊಸ ಗುರಿಗಳ ಬಗ್ಗೆ ಯೋಚಿಸಲು ಶುಭ ಸಮಯ. ಅವಕಾಶಗನ್ನು ಯಾರಿಗೂ ಬಿಟ್ಟುಕೊಡದೇ ನೀವೇ ಅನುಭವಿಸಿ. ಭೂಮಿಯನ್ನು ಕಳೆದುಕೊಳ್ಳುವ ಸಂದರ್ಭ ಬರುವುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು.

ಮೀನ ರಾಶಿ:

ಅಂದುಕೊಂಡ ಕೆಲಸಗಳು ಸುಗಮವಾಗಿ ಸಾಗಲಿ‌ ಎಂದು ದೇವರಲ್ಲಿ ಪ್ರಾರ್ಥಿಸಿ. ದೂರದ ಊರಿಗೆ ಕಾರ್ಯದ ಕಾರಣ ಪ್ರಯಾಣ ಮಾಡುವ ಸಂಭವವಿದೆ. ಉದ್ಯೋಗವನ್ನು ಕರಗತ ಮಾಡಿಕೊಂಡು ಲೀಲಾಜಾಲವಾಗಿ ಮಾಡಿ ಮುಗಿಸುವಿರಿ. ಮಕ್ಕಳು ನಿಮಗೆ ಶುಭವಾರ್ತೆಯನ್ನು ಕೇಳಿಸುವರು‌. ದಾಂಪತ್ಯದ ಸುಖಜೀವನವು ಅನುಭವಕ್ಕೆ ಬರಲಿದೆ. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಇಂದಿನ ಬಹುಪಾಲು ಸಮಯವನ್ನು ಬೇರೆ ಯಾವುದೋ ಚಿಂತನೆಯಲ್ಲಿ ಕಳೆಯುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ವಿಷ್ಕಂಭ, ಕರಣ : ಕೌಲವ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:31 – 13:56, ಯಮಗಂಡ ಕಾಲ 07:34 – 09:10, ಗುಳಿಕ ಕಾಲ 10:45 – 12:21

-ಲೋಹಿತ ಹೆಬ್ಬಾರ್ – 8762924271 (what’s app only)

Source link

IPL 2026: ಟೈಟಾನ್ಸ್ ಮುಂದೆ ಮಕಾಡೆ ಮಲಗಿದ ಸನ್​ರೈಸರ್ಸ್​ – Kannada News | IPL 2026: GT vs SRH Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ.

ಇದಾಗ್ಯೂ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಜವಾಬ್ದಾರಿಯುತ ಇನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 42 ಎಸೆತಗಳಲ್ಲಿ 61 ರನ್​ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ವಾಷಿಂಗ್ಟನ್ ಸುಂದರ್ 33 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್ ಕಲೆಹಾಕಿತು.

169 ರನ್​​ಗಳ ಗುರಿ:

169 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಮೊದಲ ಓವರ್​ನಲ್ಲೇ ಟ್ರಾವಿಡ್ ಹೆಡ್ (0) ವಿಕೆಟ್ ಕಬಳಿಸಿ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಕಗಿಸೊ ರಬಾಡ ಎಸೆತಗಳಲ್ಲಿ ಅಭಿಷೇಕ್ ಶರ್ಮಾ (6) ಹಾಗೂ ಇಶಾನ್ ಕಿಶನ್ (11) ಔಟಾದರು. ಈ ಆಘಾತದಿಂದ ಪಾರಾಗುವ ಮುನ್ನ ಸ್ಮರಣ್ ರವಿಚಂದ್ರನ್ (9) ಹಾಗೂ ಸಲೀಲ್ ಅರೋರಾ (16) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಹೆನ್ರಿಕ್ ಕ್ಲಾಸೆನ್ ಕೂಡ ವಿಕೆಟ್ ಕೈಚೆಲ್ಲಿದರು.

ಆ ಬಳಿಕ ಬಂದ ನಿತೀಶ್ ಕುಮಾರ್ ರೆಡ್ಡಿ 2 ರನ್​ಗಳಿಸಿ ಔಟಾದರೆ, ಪ್ಯಾಟ್ ಕಮಿನ್ಸ್ 19 ರನ್​ಗಳಿಸಿ ಇನಿಂಗ್ಸ್ ಕೊನೆಗೊಳಿಸಿದರು. ಪರಿಣಾಮ ಸನ್​ರೈಸರ್ಸ್ ಹೈದರಾಬಾದ್ ತಂಡವು 14.5 ಓವರ್​ಗಳಲ್ಲಿ ಕೇವಲ 86 ರನ್​ಗಳಿಗೆ ಆಲೌಟ್ ಆಗಿದೆ.

ಇದನ್ನೂ ಓದಿ: ಇದುವೇ ನನ್ನ ಏಕೈಕ ಗುರಿ: ಮನದಿಂಗಿತ ಬಿಟ್ಟಿಟ್ಟ ಕೃನಾಲ್ ಪಾಂಡ್ಯ

ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 82 ರನ್​ಗಳ ಭರ್ಜರಿ ಜಯ ಸಾಧಿಸಿ ಮತ್ತೆರಡು ಅಂಕಗಳನ್ನು ತನ್ನದಾಗಿಸಿಕೊಂಡಿದೆ. ಈ ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದ್ದು, 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಕ್ ಕ್ಲಾಸೆನ್, ಸಲೀಲ್ ಅರೋರಾ, ನಿತೀಶ್ ಕುಮಾರ್ ರೆಡ್ಡಿ, ಸ್ಮರಣ್ ರವಿಚಂದ್ರನ್, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ನಿಶಾಂತ್ ಸಿಂಧು, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್.

Source link

ನಾಳೆ ವಿಜಯ್ ಸರ್ಕಾರದ ಭವಿಷ್ಯ ನಿರ್ಧಾರ; ವಿಶ್ವಾಸಮತ ಯಾಚನೆ ವೇಳೆ ಮತದಾನ ಹೇಗೆ ನಡೆಯುತ್ತದೆ? – Kannada News | Tamil Nadu CM Joseph Vijay to Move Confidence Motion on Wednesday trust vote Floor Test

ಚೆನ್ನೈ, ಮೇ 12: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (Vijay) ನೇತೃತ್ವದ ಟಿವಿಕೆ ಸರ್ಕಾರದ ವಿರುದ್ಧ ನಾಳೆ (ಮೇ 13) ಬೆಳಿಗ್ಗೆ 9.30ಕ್ಕೆ ವಿಶ್ವಾಸಮತ ಯಾಚನೆ ಮಾಡಲಾಗುವುದು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಇಲ್ಲಿಯವರೆಗೆ ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರಕ್ಕೆ ಸಾಕಷ್ಟು ಬೆಂಬಲವಿದೆ. ಹೀಗಾಗಿ, ನಾಳೆ ವಿಜಯ್ ಬಹುಮತ ಸಾಬೀತುಪಡಿಸುವ ಸಾಧ್ಯತೆ ಹೆಚ್ಚಾಗಿದೆ. ಇಲ್ಲದಿದ್ದರೆ ವಿಜಯ್ ಅವರ ನೂತನ ಸರ್ಕಾರ ಪತನವಾಗಲಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದ ನಂತರ, ಯಾರಿಗೂ ಬಹುಮತ ಸಿಗದಿದ್ದಾಗ, ಟಿವಿಕೆ ನಾಯಕ ವಿಜಯ್ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕನ್ನು ಪಡೆದುಕೊಂಡಿದ್ದರು. ಆದರೆ, ಸರ್ಕಾರ ರಚಿಸಲು ಬೆಂಬಲದ ಕೊರತೆಯಿಂದಾಗಿ ರಾಜ್ಯಪಾಲರು ಅದರ ವಿನಂತಿಯನ್ನು ಪದೇ ಪದೇ ತಿರಸ್ಕರಿಸಿದ್ದರು.

ಇದನ್ನೂ ಓದಿ: ಟಿವಿಕೆ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಯನ್ನೇ ಸರ್ಕಾರದ ವಿಶೇಷ ಅಧಿಕಾರಿಯಾಗಿ ನೇಮಿಸಿದ ಸಿಎಂ ವಿಜಯ್

ದೀರ್ಘ ಹೋರಾಟದ ನಂತರ, ಕಾಂಗ್ರೆಸ್, ವಿವಿಐಪಿ, ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ (ಮಾರ್ಕ್ಸ್​​​ವಾದಿ) ಮತ್ತು ಇಂಡಿಯನ್ ಮುಸ್ಲಿಂ ಲೀಗ್‌ನಂತಹ ಪಕ್ಷಗಳ ಬೆಂಬಲದೊಂದಿಗೆ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ, ರಾಜ್ಯಪಾಲರು ಟಿವಿಕೆಗೆ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ಮೇ 13ರ ಗಡುವನ್ನು ನಿಗದಿಪಡಿಸಿದ್ದರು.

ಹೀಗಾಗಿ, ನಾಳೆ ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿ ವಿಜಯ್ ಸರ್ಕಾರದ ವಿರುದ್ಧ ವಿಶ್ವಾಸಮತ ಯಾಚನೆ ಮಾಡಲಾಗುವುದು. ವಿಧಾನಸಭೆಯ ಸದಸ್ಯರು ತಮ್ಮ ಮತಗಳನ್ನು ಚಲಾಯಿಸಲಿದ್ದಾರೆ.

ಇದನ್ನೂ ಓದಿ: ವಿಜಯ್ ಸಿಎಂ ಆಗುವ ಕನಸು ಇಂದು, ನಿನ್ನೆಯದಲ್ಲ; 15 ವರ್ಷಗಳ ಹಿಂದೆಯೇ ಸೂಚನೆ ಕೊಟ್ಟಿದ್ದ ನಟ

ಮತದಾನ ಹೇಗೆ ನಡೆಯುತ್ತದೆ?:

ವಿಧಾನಸಭೆಯ ಸ್ಪೀಕರ್ ಆಡಳಿತ ಪಕ್ಷಕ್ಕೆ ಬೆಂಬಲ ಕೋರಲು ಅವಕಾಶ ನೀಡಿದ ನಂತರ, ಸದನದ ಎಲ್ಲಾ ಬಾಗಿಲುಗಳನ್ನು ಮತದಾನಕ್ಕಾಗಿ ಮುಚ್ಚಲಾಗುತ್ತದೆ. ನಂತರ, ಸದನದಲ್ಲಿ ಇರುವ ಶಾಸಕರನ್ನು ಮಾತ್ರ ಮತದಾನದ ಸಮಯದಲ್ಲಿ ಎಣಿಸಲಾಗುತ್ತದೆ. ಇದಕ್ಕಾಗಿ, ಅವರನ್ನು 6 ಗುಂಪುಗಳಾಗಿ ವಿಂಗಡಿಸಿ ಧ್ವನಿ ಮತ ಚಲಾಯಿಸಲಾಗುತ್ತದೆ.

ಮತದಾನದಲ್ಲಿ ಭಾಗವಹಿಸುವ ಒಟ್ಟು ಸದಸ್ಯರಲ್ಲಿ ಶೇ. 50ಕ್ಕಿಂತ ಹೆಚ್ಚು ಸದಸ್ಯರು, ಉದಾಹರಣೆಗೆ 230ರಲ್ಲಿ 118 ಸದಸ್ಯರು ಟಿವಿಕೆ ಸರ್ಕಾರವನ್ನು ಬೆಂಬಲಿಸಿದರೆ ಮಾತ್ರ ಬಹುಮತ ಸಾಬೀತಾಗಿದೆ ಎಂದು ಪರಿಗಣಿಸಲಾಗುತ್ತದೆ. ಮತದಾನ ಮುಗಿದ ನಂತರ, ಸ್ಪೀಕರ್ ಅಧಿಕೃತವಾಗಿ ಎಣಿಕೆಯ ಮೂಲಕ ಪಡೆದ ಅಂತಿಮ ಫಲಿತಾಂಶವನ್ನು ಘೋಷಿಸುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ಸೆಖೆಗೆ ಬೆದರಿ ಕೆಫೆ ಸೇರುತ್ತಿದ್ದಾರೆ ಟೆಕ್ಕಿಗಳು! ದಿನಕ್ಕೆ 800 ರೂ. ಖರ್ಚು ಮಾಡಿದ್ರೂ ಎಸಿ ಅಂದ್ರೆ ಪ್ರಾಣ! – Kannada News | Viral Post Highlights the High Cost of ‘Work From Cafe’ in Sweltering Bengaluru

ಬೆಂಗಳೂರು, ಮೇ,12: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷ ಬಿಸಿಲಿನ ತಾಪ ದಾಖಲೆ ಮಟ್ಟದಲ್ಲಿದೆ. ಮನೆಯಲ್ಲಿ ಕುಳಿತು ಕೆಲಸ ಮಾಡುವ ಉದ್ಯೋಗಿಗಳಿಗೆ ಸೆಖೆ ತಾಳಲಾರದೆ ಈಗ ಹೊಸ ಟ್ರೆಂಡ್ ಶುರುವಾಗಿದೆ. ಅದೇ ‘ವರ್ಕ್ ಫ್ರಮ್ ಕೆಫೆ’ (Work From Cafe). ಇತ್ತೀಚೆಗೆ ಬೆಂಗಳೂರಿನ ಯುವತಿಯೊಬ್ಬಳು ಹಂಚಿಕೊಂಡಿರುವ ಕೆಫೆ ಖರ್ಚಿನ ವಿವರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಯುವತಿ, ತಾನು ಮನೆಯಲ್ಲಿ ಸೆಖೆ ತಡೆಯಲಾಗದೆ ಕೆಫೆಗೆ ಹೋಗಿ ಕೆಲಸ ಮಾಡಿದ್ದಾಗಿ ತಿಳಿಸಿದ್ದಾಳೆ.ಈ ರೀತಿಯಲ್ಲಿ ಮಾಡಿದ ಕಾರಣ ಒಂದು ದಿನದ ತಿಂಡಿ, ಊಟ ಮತ್ತು ಕಾಫಿಗೆ ಸುಮಾರು 800 ರೂಪಾಯಿ ಖರ್ಚಾಗಿದೆ. ಇಷ್ಟೊಂದು ಹಣ ಖರ್ಚಾದರೂ ಆಕೆಗೆ ಬೇಸರವಿಲ್ಲ. ಯಾಕೆಂದರೆ, ದಿನವಿಡೀ ಸಿಗುವ ಹವಾನಿಯಂತ್ರಿತ (AC) ವ್ಯವಸ್ಥೆಯೇ ಅತಿದೊಡ್ಡ ಸಮಾಧಾನ ಎಂದು ಆಕೆ ಹೇಳಿಕೊಂಡಿದ್ದಾಳೆ. ಬೆಂಗಳೂರಿನ ಹರ್ಲೀನ್ ಕೆಫೆಯಲ್ಲಿ ಪ್ರತಿದಿನ ಈ ಕೆಲಸ ಮಾಡುತ್ತೇನೆ. ಬೆಳಿಗ್ಗೆ ತಿಂಡಿ, ಊಟ, ಕಾಫಿ ಎಲ್ಲವೂ ಸೇರಿ 700 ರೂ ಆಗುತ್ತದೆ. ದಿನದ ಕೊನೆಯಲ್ಲಿ 800 ರೂ. ಖರ್ಚಾಗುತ್ತದೆ ಎಂದು ಹೇಳಿದ್ದಾಳೆ.

ಇಲ್ಲಿದೆ ನೋಡಿ ವಿಡಿಯೋ:

ಈ ಪೋಸ್ಟ್​​ನಲ್ಲಿ ಯಾವುದೇ ಕಾರಣಕ್ಕೂ ಕೆಲಸ ನಿಲ್ಲಬಾರದು ಎಂದು ಬರೆದುಕೊಂಡಿದ್ದಾಳೆ. ಇನ್ನು ಈ ವಿಡಿಯೋದಲ್ಲಿ ಆಕೆ, ಕೆಲಸ ಮಾಡುವುದನ್ನು ಕಾಫಿ ಮತ್ತು ಆಹಾರವನ್ನು ಆರ್ಡರ್ ಮಾಡುವಾಗ ಮತ್ತು ಹಗಲಿನಲ್ಲಿ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳುವಾಗ ಶಾಂತವಾದ ಕೆಫೆ ವಾತಾವರಣವನ್ನು ಆನಂದಿಸುವುದನ್ನು ತೋರಿಸಲಾಗಿದೆ. ಈ ವಿಡಿಯೋ ಬೆಂಗಳೂರಿನ ಅನೇಕ ಕೆಲಸ ಮಾಡುವ ವೃತ್ತಿಪರರನ್ನು, ವಿಶೇಷವಾಗಿ ವರ್ಕ್​​ ಫ್ರಮ್​​ ಹೋಂ ಮಾಡುವವರಿಗೆ ಇದೊಂದು ಪರ್ಯಯ ವ್ಯವಸ್ಥೆಯಾಗಿತ್ತು. ಇದು ಕೆಲವರಿಗೆ ಪರಿಸರದ ಬದಲಾವಣೆ, ಉತ್ತಮ ಗಮನ ಮತ್ತು ಸೌಕರ್ಯವನ್ನು ನೀಡುತ್ತವೆ. ಇನ್ನು ಕೆಲವರಿಗೆ, ಪ್ರತಿದಿನ ಕೆಫೆಯಿಂದ ಕೆಲಸ ಮಾಡುವ ವೆಚ್ಚವು ಕಳವಳಕಾರಿಯಾಗಿಯೇ ಉಳಿದಿದೆ.

ಇದನ್ನೂ ಓದಿ: ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ

ಈ ಪೋಸ್ಟ್ ನೋಡಿದ ಹಲವು ಬೆಂಗಳೂರಿಗರು ತಮಗೂ ಇದೇ ಪರಿಸ್ಥಿತಿ ಎದುರಾಗಿದೆ ಎಂದು ಕಮೆಂಟ್ ಮಾಡಿದ್ದಾರೆ. “ಮನೆಯಲ್ಲಿ ಎಸಿ ಹಾಕಿದರೆ ಕರೆಂಟ್ ಬಿಲ್ ಜಾಸ್ತಿ ಬರುತ್ತದೆ, ಅದಕ್ಕಿಂತ ಕೆಫೆ ಉತ್ತಮ” ಎಂದು ಕೆಲವರು ಹೇಳಿದರೆ, “ದಿನಕ್ಕೆ 800 ರೂಪಾಯಿ ಅಂದರೆ ತಿಂಗಳಿಗೆ ದೊಡ್ಡ ಮೊತ್ತವಾಗುತ್ತದೆ, ಇದು ಸಾಮಾನ್ಯರಿಗಲ್ಲ” ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆಯಾಗಿ, ಬೆಂಗಳೂರಿನ ಉದ್ಯೋಗಿಗಳಿಗೆ ಈಗ ‘ಹಸಿವಿಗಿಂತ ಎಸಿ’ ಮುಖ್ಯ ಎನ್ನುವಂತಾಗಿದೆ!

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ವಿಶೇಷ ಅನುಮತಿ ನೀಡಿದ ಸಿಎಂ ವಿಜಯ್ – Kannada News | Tamil Nadu CM Vijay grants special permission for Suriya Trisha starrer Karuppu 9 AM shows

ಕಾಲಿವುಡ್‌ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಕರುಪ್ಪು’ (Karuppu) ಸಿನಿಮಾ ಮೇ 14ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಸಿನಿಮಾದಲ್ಲಿ ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಚಿತ್ರದ ಬಿಡುಗಡೆ ಸಮಯದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Tamil Nadu CM Vijay) ಅವರು ಚಿತ್ರತಂಡಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಮೊದಲ ಪ್ರದರ್ಶನ ಮಾಡಲು ವಿಜಯ್ ಅವರು ಅನುಮತಿ ನೀಡಿದ್ದಾರೆ. ವಿಜಯ್ ಜೊತೆ ತ್ರಿಶಾ (Trisha) ಅವರು ಆಪ್ತತೆ ಹೊಂದಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ.

ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಮುಂಜಾನೆಯ ಪ್ರದರ್ಶನಗಳಿಗೆ ಕಟ್ಟುನಿಟ್ಟಿನ ನಿಯಮಗಳಿವೆ. ಆದರೆ, ಆರ್.ಜೆ. ಬಾಲಾಜಿ ನಿರ್ದೇಶನದ ‘ಕರುಪ್ಪು’ ಚಿತ್ರದ ಕ್ರೇಜ್ ಪರಿಗಣಿಸಿ, ಮುಖ್ಯಮಂತ್ರಿ ವಿಜಯ್ ಅವರು ಮೇ 14ರಿಂದ ಬೆಳಿಗ್ಗೆ 9 ಗಂಟೆಗೆ ವಿಶೇಷ ಪ್ರದರ್ಶನಗಳನ್ನು ನಡೆಸಲು ಅನುಮತಿ ನೀಡಿದ್ದಾರೆ. ಇದರಿಂದ ಸೂರ್ಯ ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ.

ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ಈ ಕುರಿತು ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸಿಎಂ ವಿಜಯ್ ಅವರು ಕಡತಕ್ಕೆ ಸಹಿ ಹಾಕುತ್ತಿರುವ ಫೋಟೋವನ್ನು ಹಂಚಿಕೊಂಡಿರುವ ನಿರ್ಮಾಪಕರು, ‘ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ತಿರು ಜೋಸೆಫ್ ವಿಜಯ್ ಅವರಿಗೆ ಧನ್ಯವಾದಗಳು. ನಿಮ್ಮ ವಿಶೇಷ ಅನುಮತಿಯಿಂದ ಮೇ 14ರಿಂದ ಬೆಳಿಗ್ಗೆ 9 ಗಂಟೆಗೆ ಮೊದಲ ಪ್ರದರ್ಶನ ಆರಂಭವಾಗಲಿದೆ’ ಎಂದು ಬರೆದುಕೊಂಡಿದ್ದಾರೆ.

ಕಳೆದ ವಾರವಷ್ಟೇ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಜಯ ದಾಖಲಿಸಿದಾಗ, ನಟ ಸೂರ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸಿದ್ದರು. ‘ತಮಿಳುನಾಡು ಜನರು ನನ್ನ ಗೆಳೆಯ ವಿಜಯ್ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ. ಅವರ ರಾಜಕೀಯ ಜೀವನ ಯಶಸ್ವಿಯಾಗಲಿ’ ಎಂದು ಸೂರ್ಯ ಹಾರೈಸಿದ್ದರು. ಇದೀಗ ವಿಜಯ್ ಅವರು ಸಿಎಂ ಆದ ನಂತರ ಸೂರ್ಯ ಅವರ ಚಿತ್ರಕ್ಕೆ ಬೆಂಬಲ ಸೂಚಿಸಿರುವುದು ಇಬ್ಬರ ನಡುವಿನ ಆತ್ಮೀಯತೆಯನ್ನು ಎತ್ತಿ ತೋರಿಸಿದೆ.

ಇದನ್ನೂ ಓದಿ: ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ

‘ಕರುಪ್ಪು’ ಚಿತ್ರವನ್ನು ಎಸ್.ಆರ್. ಪ್ರಭು ಮತ್ತು ಎಸ್.ಆರ್. ಪ್ರಕಾಶ್ ಬಾಬು ನಿರ್ಮಿಸಿದ್ದು, ಸೂರ್ಯ ಅವರು ಭಿನ್ನವಾದ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದ್ದರಿಂದ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದ ಮೂಲಕ ತ್ರಿಶಾ ಮತ್ತು ಸೂರ್ಯ ದೀರ್ಘಕಾಲದ ನಂತರ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link