Headlines

TV9 Kannada News Live: ಪರೀಕ್ಷೆ ರದ್ದಾಗಿದ್ದಕ್ಕೆ ವಿದ್ಯಾರ್ಥಿಗಳು ಬೇಸರ; ಜ್ಯೋತಿಷಿಗೆ ಗಿಫ್ಟ್ ನೀಡಿದ ಸಿಎಂ ವಿಜಯ್ – Kannada News | TV9 Kannada News Live: Students upset Over NEET Exam Cancellation; CM Vijay Gives Gifts to Astrologer

ಬೆಂಗಳೂರು, ಮೇ 12: ಮೇ 3ರಂದು ದೇಶಾದ್ಯಂತ ನಡೆದ NEET-UG ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಶೀಘ್ರದಲ್ಲೇ ಹೊಸ ದಿನಾಂಕ ನಿಗದಿ ಮಾಡಲಾಗುವುದು ಎಂದು ಅದು ಹೇಳಿದೆ. ನೀಟ್ ಪರೀಕ್ಷೆ ರದ್ದಾಗಿರೋದಕ್ಕೆ ರಾಜ್ಯದ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯದ ಸಚಿವರೂ ಆಕ್ರೋಶ ಹೊರಹಾಕಿದ್ದಾರೆ. ನೀಟ್​ ಪರೀಕ್ಷೆ ರದ್ದಾಗಿರುವುದರಿಂದ ಆಘಾತ ಆಗಿದೆ ಎಂದು ಉನ್ನತ ಶಿಕ್ಷಣ ಸಚಿವ…

Read More

ಈವರೆಗೆ ಇದ್ದದ್ದು ಕಷ್ಟ ಅಲ್ಲ, ಮುಂದೆ ಕಾದೈತಾ ದೊಡ್ಡ ಸಂಕಷ್ಟ? ಉದಯ್ ಕೋಟಕ್ ಕೊಟ್ಟಿದ್ದಾರೆ ದೊಡ್ಡ ಎಚ್ಚರಿಕೆ – Kannada News | Uday Kotak Warns: West Asia Crisis to Hit India Economy Hard; Oil Prices Loom

ನವದೆಹಲಿ, ಮೇ 12: ಪ್ರಖ್ಯಾತ ಉದ್ಯಮಿ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಸ್ಥಾಪಕ ಉದಯ್ ಕೋಟಕ್ (Uday Kotak) ಅವರು ಪಶ್ಚಿಮ ಏಷ್ಯಾದಲ್ಲಿ (ವಿಶೇಷವಾಗಿ ಅಮೆರಿಕ ಮತ್ತು ಇರಾನ್ ನಡುವೆ) ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಭಾರತದ ಆರ್ಥಿಕತೆಯ ಮೇಲೆ ಬೀರುವ ಭೀಕರ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿನಗರಿಯಲ್ಲಿ ನಡೆದ ‘ಸಿಐಐ ವಾರ್ಷಿಕ ಸಮ್ಮೇಳನ 2026’ರಲ್ಲಿ ಮಾತನಾಡಿದ ಅವರು, ಭಾರತಕ್ಕೆ ದೊಡ್ಡ ಮಟ್ಟದ ಆರ್ಥಿಕ ಆಘಾತ ಎದುರಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಧ್ಯಪ್ರಾಚ್ಯದಲ್ಲಿ…

Read More

ಟೈಫಾಯ್ಡ್ ಪ್ರಕರಣಗಳ ಹೆಚ್ಚಳ: ಮಕ್ಕಳಲ್ಲಿ ಈ ಲಕ್ಷಣ ಕಂಡುಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ – Kannada News | Typhoid Care For Kids: Treatment, Diet, and Recovery Timeline

ಬದಲಾಗುತ್ತಿರುವ ಹವಾಮಾನದಲ್ಲಿ, ಮಕ್ಕಳಲ್ಲಿ ಟೈಫಾಯ್ಡ್ (Typhoid) ಜ್ವರದ ಅಪಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆದರೆ ಅನೇಕ ಸಂದರ್ಭಗಳಲ್ಲಿ, ಪೋಷಕರಿಗೆ ತಮ್ಮ ಮಗುವಿಗೆ ಈ ಜ್ವರವಿದೆ ಎಂದು ಆರಂಭದಲ್ಲಿ ತಿಳಿಯುವುದಿಲ್ಲ. ಇದರಿಂದ ಆರೋಗ್ಯ ಸಮಸ್ಯೆ ಮತ್ತಷ್ಟು ಅಪಾಯಕಾರಿಯಾಗಬಹುದು. ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದರಿಂದ ಸಾಧ್ಯವಾದಷ್ಟು ಈ ಜ್ವರವನ್ನು ನಿಯಂತ್ರಿಸಬಹುದಾಗಿದೆ. ಡಾ. ವಿಪಿನ್‌ಚಂದ್ರ ಉಪಾಧ್ಯಾಯ ಅವರು ಹೇಳುವ ಪ್ರಕಾರ, ಟೈಫಾಯ್ಡ್ ಒಂದು ಬ್ಯಾಕ್ಟೀರಿಯಾ ಸೋಂಕು. ಇದು ಕಲುಷಿತ ನೀರು ಮತ್ತು ಅಶುದ್ಧ ಆಹಾರದ ಮೂಲಕ ಹರಡುತ್ತದೆ. ಮಕ್ಕಳ ರೋಗನಿರೋಧಕ ಶಕ್ತಿ…

Read More

ಮೌನಿ ರಾಯ್ ರೀತಿಯೇ ಸೂರಜ್ ಖಾತೆ ಅನ್​ಫಾಲೋ ಮಾಡಿದ ದಿಶಾ ಪಟಾಣಿ; ಹೆಚ್ಚಿತು ಅನುಮಾನ – Kannada News | Mouni Roy Suraj Nambiar separation Disha Patani unfollows Suraj deletes Instagram account

ಬಾಲಿವುಡ್‌ನ ಖ್ಯಾತ ನಟಿ, ‘ನಾಗಿಣಿ’ ಖ್ಯಾತಿಯ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಅವರ ಸುಂದರ ದಾಂಪತ್ಯದಲ್ಲಿ ಬಿರುಕು ಮೂಡಿದೆಯೇ? ಇಂತಹದೊಂದು ಪ್ರಶ್ನೆ ಈಗ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಸೂರಜ್ ನಂಬಿಯಾರ್ (Suraj Nambiar) ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿರುವುದು ಈ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಮೊದಲು ಸೂರಜ್ ಅವರ ಇನ್​ಸ್ಟಾಗ್​ರಾಮ್ ಖಾತೆಯನ್ನು ಮೌನಿ ರಾಯ್ ಅನ್​ಫಾಲೋ ಮಾಡಿದರು. ಬಳಿಕ ಮೌನಿ ರಾಯ್ ಅವರ…

Read More

I4C ಮತ್ತು RBIH ಮಧ್ಯೆ ಒಪ್ಪಂದ; ಭಾರತೀಯರಿಗೆ ಅತ್ಯಾಧುನಿಕ ಸೈಬರ್ ರಕ್ಷಾ ಕವಚ: ಅಮಿತ್ ಶಾ ಘೋಷಣೆ – Kannada News | Amit Shah: AI to Boost India’s Cyber Security, Target Mule Accounts with I4C RBIH

ನವದೆಹಲಿ, ಮೇ 12: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸೈಬರ್ ಸುರಕ್ಷಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯನ್ನು ಘೋಷಿಸಿದ್ದಾರೆ. ಸೈಬರ್ ಅಪರಾಧಗಳನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿರುವ I4C (Indian Cyber Crime Coordination Centre) ಮತ್ತು ರಿಸರ್ವ್ ಬ್ಯಾಂಕ್‌ನ ಅಂಗಸಂಸ್ಥೆಯಾದ RBIH (Reserve Bank Innovation Hub) ನಡುವೆ ಮಹತ್ವದ ಒಪ್ಪಂದ (MoU) ಏರ್ಪಟ್ಟಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಒಪ್ಪಂದದ ಬಗ್ಗೆ…

Read More

ಬೆಚ್ಚಿಬೀಳಿಸುವ ಘಟನೆ: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ದಾರುಣ ಸಾವು! – Kannada News | Fatal E Bike Battery Explosion in Bengaluru: Is Your EV Safe While Charging?

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವ ಮತ್ತೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಮನೆಯೊಳಗೆ ಇ-ಬೈಕ್ ಚಾರ್ಜ್‌ಗೆ ಹಾಕಿ ಮಲಗಿದ್ದ ವೃದ್ಧರೊಬ್ಬರು ಬ್ಯಾಟರಿ ಸ್ಫೋಟಗೊಂಡ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಗರದ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಸಿ ಟೌನ್ ನಿವಾಸಿ ಲೂಥ್ ನಾಥನ್ (62) ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ನಾಥನ್ ಅವರು ತಮ್ಮ ಎಲೆಕ್ಟ್ರಿಕ್ ಬೈಕ್ ಅನ್ನು ಮನೆಯ ಹಾಲ್‌ನಲ್ಲಿ ಚಾರ್ಜ್‌ಗೆ ಹಾಕಿ ಅಲ್ಲೇ ಮಲಗಿದ್ದರು. ತಡರಾತ್ರಿ ಚಾರ್ಜ್ ಆಗುತ್ತಿದ್ದ ವೇಳೆ ಬ್ಯಾಟರಿ…

Read More

ಸಚಿವರ ಪ್ರಯಾಣ, ಔತಣಕೂಟದ ಮೇಲೆ ನಿರ್ಬಂಧ; ತನ್ನ ಸರ್ಕಾರದಿಂದಲೇ ಬದಲಾವಣೆ ಆರಂಭಿಸಲು ಮೋದಿ ಪ್ಲಾನ್ – Kannada News | Curbs On Minister’s Travel, Online Seminars’ PM Modi government is planning Austerity initiatives

ನವದೆಹಲಿ, ಮೇ 12: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಸಾರಿದ ನಂತರ ಅದರ ಪರಿಣಾಮವನ್ನು ಇಡೀ ಜಗತ್ತೇ ಅನುಭವಿಸುವಂತಾಯಿತು. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಗರಿಕರು ಕಠಿಣ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಎಂದು ಸಲಹೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟದಲ್ಲಿ ಯಾವೆಲ್ಲ ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರಂತೆ. ಅದರ ಪ್ರಕಾರ,…

Read More

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ಸಿಎಂ ವಿಜಯ್ – Kannada News | Tamil Nadu CM Vijay meets rebel AIADMK leaders who are Supporting TVK ahead of floor test

ಚೆನ್ನೈ, ಮೇ 12: ತಮಿಳುನಾಡು ವಿಧಾನಸಭೆಯಲ್ಲಿ ನಾಳೆ ನಡೆಯಲಿರುವ ನಿರ್ಣಾಯಕವಾದ ಬಹುಮತ ಸಾಬೀತಿಗೂ ಮುನ್ನ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ (CM Vijay) ಇಂದು ಎಐಎಡಿಎಂಕೆ ಬಂಡಾಯ ನಾಯಕರಾದ ಸಿ.ವಿ ಷಣ್ಮುಗಂ ಮತ್ತು ಎಸ್‌.ಪಿ ವೇಲುಮಣಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಣವು 30 ಶಾಸಕರ ಬೆಂಬಲವನ್ನು ಹೊಂದಿದ್ದು, ಇವರು ನಾಳೆಯ ವಿಶ್ವಾಸಮತಯಾಚನೆ ವೇಳೆ ಟಿವಿಕೆಗೆ ತನ್ನ ಬೆಂಬಲವನ್ನು ನೀಡುವುದಾಗಿ ಘೋಷಿಸಿರುವುದರಿಂದ ಈ ಭೇಟಿ ಹೆಚ್ಚಿನ ರಾಜಕೀಯ ಮಹತ್ವವನ್ನು ಪಡೆದುಕೊಂಡಿದೆ. ಇಂದು ಮೊದಲ ಬಾರಿಗೆ…

Read More

ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್ – Kannada News | Rajinikanth refuses to comment on Vijay becoming Tamil Nadu CM at Chennai airport

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ತಮ್ಮ ರಾಜಕೀಯ ಜೀವನದ ಮೊದಲ ಪ್ರಯತ್ನದಲ್ಲೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಈ ರೀತಿ ಸಾಧನೆ ಮಾಡಿದ ವಿಜಯ್ ಕುರಿತು ಕೇಳಲಾದ ಪ್ರಶ್ನೆಗೆ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಯಾವುದೇ ಉತ್ತರ ನೀಡಿಲ್ಲ. ಬದಲಿಗೆ, ಅವರು ಮೌನಕ್ಕೆ ಶರಣಾಗಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಅವರು ತಮಿಳುನಾಡಿನ…

Read More

ಉತ್ತರ ಭಾರತದತ್ತ ಹೊರಟಿತೇಕೆ ತೆಲುಗು ಚಿತ್ರರಂಗ, ‘ಪುಷ್ಪ’ ಬಳಿಕ ಈಗ ‘ಪೆದ್ದಿ’ – Kannada News | Ram Charan starrer Peddi movie to host grand promotional event at Bhopal

ತೆಲುಗು ಚಿತ್ರರಂಗ (Tollywood), ಭಾರತದ ಅತ್ಯಂತ ಲಾಭದಾಯಕ ಚಿತ್ರರಂಗ. ಇತರೆ ಚಿತ್ರರಂಗಗಳಿಗೆ ಹೋಲಿಸಿದರೆ ಇಲ್ಲಿ ಗೆಲ್ಲುವ ಚಿತ್ರಗಳ ಸರಾಸರಿ ಸಂಖ್ಯೆ ಹೆಚ್ಚು. ತೆಲುಗು ಸಿನಿಮಾಗಳು ಭಾರಿ ದೊಡ್ಡ ಮೊತ್ತದ ಹಣವನ್ನೂ ಸಹ ಗಳಿಕೆ ಮಾಡುತ್ತವೆ. ಮಾತ್ರವಲ್ಲದೆ ತೆಲುಗು ಚಿತ್ರರಂಗ ಹೆಚ್ಚು ವರ್ಸಟೈಲ್ ಚಿತ್ರರಂಗ. ಇಲ್ಲಿ ಎಲ್ಲ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತದೆ. ವಿವಿಧ ಸ್ಥರಗಳ ಟಾಪ್ ನಾಯಕರುಗಳಿದ್ದಾರೆ. ಭಾರಿ ನಿರ್ಮಾಪಕರ ಸಂಖ್ಯೆಯೂ ಸಹ ದೊಡ್ಡದಾಗಿಯೇ ಇದೆ. ಇತ್ತೀಚೆಗೆ ತೆಲುಗು ಚಿತ್ರರಂಗ ನಿಧಾನಕ್ಕೆ ಉತ್ತರ ಭಾರತದತ್ತ ಹೆಜ್ಜೆ ಹಾಕುತ್ತಿದೆ….

Read More