Category Archives: Blog

Your blog category

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ – Kannada News | NEET UG Scam: CBI Raids Nashik, Major Breakthrough in Paper Leak Investigation

ದೆಹಲಿ, ಮೇ.12: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಈಗ ಮಹಾರಾಷ್ಟ್ರದ ನಾಸಿಕ್ ನಗರದ ಲಿಂಕ್ ಇರುವುದು ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಅಧಿಕಾರಿಗಳು ನಾಸಿಕ್‌ನಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವಲ್ಲಿ ಅಥವಾ ಹಣಕಾಸಿನ ವ್ಯವಹಾರ ಕುದುರಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ನಾಸಿಕ್‌ನಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯ ಪತ್ರಿಕೆಯು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗದೆ, ನಾಸಿಕ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಹಂಚಿಕೆಯಾಗಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಶಂಕಿತನ ಮೊಬೈಲ್ ಮತ್ತು ಲಾಪ್ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಾಟ್ಸಾಪ್ ಸಂದೇಶಗಳ ಮೂಲಕ ಪತ್ರಿಕೆ ಸೋರಿಕೆಯಾಗಿರುವ ದತ್ತಾಂಶಗಳನ್ನು ಸಿಬಿಐ ಸಂಗ್ರಹಿಸುತ್ತಿದೆ. ಈಗಾಗಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಹೊಸ ನಂಟಿನಿಂದಾಗಿ ಇನ್ನಷ್ಟು ದೊಡ್ಡ ವ್ಯಕ್ತಿಗಳು ಸಿಬಿಐ ಬಲೆಗೆ ಬೀಳುವ ಸಾಧ್ಯತೆಯಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯಪುರ: ಬೀದಿನಾಯಿಗಳ ಹಾವಳಿ ಬೆನ್ನಲ್ಲೇ ದುಷ್ಕರ್ಮಿಗಳಿಂದ ವಿಷಪ್ರಾಶನ; 6 ಶ್ವಾನಗಳು ಸಾವು – Kannada News | Vijayapura Stray Dog Menace Sparks Outrage After Miscreants Poison 6 Dogs

ವಿಜಯಪುರ, ಮೇ 12: ನಗರದಲ್ಲಿ ಬೀದಿನಾಯಿಗಳ (street dogs) ಹಾವಳಿ ಮುಂದುವರಿದಿರುವ ಬೆನ್ನಲ್ಲೇ ದುಷ್ಕರ್ಮಿಗಳು ಬೀದಿನಾಯಿಗಳಿಗೆ ವಿಷಾಹಾರ ನೀಡಿದ್ದು, ಆರು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟಿರುವ (death) ಆತಂಕಕಾರಿ ಘಟನೆ ಶಾಂತಿ ನಗರದಲ್ಲಿ ನಡೆದಿದೆ. ಎರಡು ನಾಯಿಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಶಾಂತಿ ನಗರದಲ್ಲಿ ಈವರೆಗೆ ನಾಯಿಗಳ ದಾಳಿ ಪ್ರಕರಣ ವರದಿಯಾಗದಿದ್ದರೂ ವಿಷಾಹಾರ ನೀಡಿರುವುದು ಮಾತ್ರ ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಷ ಹಾಕಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.

ಮುಖ್ಯಾಂಶಗಳು

  • ವಿಜಯಪುರದಲ್ಲಿ ಬೀದಿನಾಯಿಗಳಿಗೆ ವಿಷಾಹಾರ
  • ಅಪರಿಚಿತರ ಅಮಾನವೀಯ ಕೃತ್ಯಕ್ಕೆ ಪ್ರಾಣಿಪ್ರಿಯರು ಆಕ್ರೋಶ
  • ಶ್ವಾನಪಾಲನಾ ಕೇಂದ್ರ ನಿರ್ಮಾಣಕ್ಕೆ ಆಗ್ರಹ

ಮೂರು ವರ್ಷದ ಬಾಲಕನ ಮೇಲೆ ಬೀದಿನಾಯಿ ದಾಳಿ

ಮೇ 6ರಂದು ರಾಜಕುಮಾರ ಲೇಔಟ್​​ನಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿತ್ತು. ಕಚ್ಚಿಕೊಂಡು ಎಳೆದುಕೊಂಡು ಹೋಗಿದ್ದ ಶ್ವಾನದಿಂದ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದರು. ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ಮಧ್ಯೆ ಬಾಲಕ ಹೋರಾಡುತ್ತಿದ್ದಾನೆ.

ಇದನ್ನೂ ಓದಿ: ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ

ಈ ನಡುವೆ ಇಂದು ಶಾಂತಿ ನಗರದಲ್ಲಿ ಬೀದಿನಾಯಿಗಳಿಗೆ ವಿಷಪ್ರಾಶನ ಮಾಡಲಾಗಿದೆ. ಅಪರಿಚಿತರಿಂದ ಬೀದಿ ನಾಯಿಗಳಿಗೆ ವಿಷಾಹಾರ ನೀಡಲಾಗಿದ್ದು, 6 ಬೀದಿನಾಯಿಗಳು ಪ್ರಾಣ ಬಿಟ್ಟಿವೆ. ಈ ಶಾಂತಿ ನಗರದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಯಾವುದೇ ಬೀದಿನಾಯಿಗಳು ಕಚ್ಚಿಲ್ಲ, ದಾಳಿ ಮಾಡಿಲ್ಲ, ಆದರೂ ವಿಷ ಹಾಕಿರುವುದಕ್ಕೆ ಪ್ರಾಣಿ ಪ್ರಿಯರು ತೀವ್ರ ಅಸಮಾಧಾನ ಹೊರ ಹಾಕಿದ್ಧಾರೆ.

ಅಸ್ವಸ್ಥ ನಾಯಿಗಳನ್ನ ಕಸದ ವಾಹನದಲ್ಲಿ ಹಾಕಿದ ಆರೋಪ

ಇನ್ನು ಕಳೆದ ಕೆಲ ದಿನಗಳ ಹಿಂದೆ ಯಾರೋ ಅಪರಚಿತರು ಬೀದಿನಾಯಿಗಳಿಗೆ ವಿಷ ಹಾಕಿ ಹೋಗಿದ್ದರಂತೆ. ಆಗ 2 ಬೀದಿನಾಯಿಗಳು ಅಸುನೀಗಿದ್ದವು. ನಿನ್ನೆ ರಾತ್ರಿ ಮತ್ತೆ ಬೀದಿನಾಯಿಗಳಿಗೆ ವಿಷಾಹಾರ ನೀಡಲಾಗಿದೆ. ಆ ಮೂಲಕ 6 ಬೀದಿನಾಯಿಗಳನ್ನು ವಿಷಾಹಾರ ಹಾಕಿ ಕೊಲ್ಲಲಾಗಿದೆ. ವಿಷಹಾರ ತಿಂದ ಕೆಲ ಬೀದಿನಾಯಿಗಳು ತೀವ್ರ ಅಸ್ವಸ್ಥವಾಗಿದ್ದವು. ಆದರೆ ಅಸ್ವಸ್ಥಗೊಂಡ ಬೀದಿನಾಯಿಗಳನ್ನು ಪಾಲಿಕೆಯವರು, ಪಶುಸಂಗೋಪನೆ ಇಲಾಖೆ ಸಿಬ್ಬಂದಿ, ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಬದಲು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಕಸದ ವಾಹನದಲ್ಲಿ ಎಸೆದಿದ್ದಾರೆ. ಇದು ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಜೀವಂತವಿರುವ ಬೀದಿನಾಯಿಯನ್ನು ನಿರ್ದಯವಾಗಿ ಕಸದ ವಾಹನದಲ್ಲಿ ಹಾಕಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ: ಮಕ್ಕಳು, ವೃದ್ಧರ ಮೇಲೆ ಮನಸೋ ಇಚ್ಛೆ ದಾಳಿ

ಬೀದಿನಾಯಿಗಳ ನಿಯಂತ್ರಣ, ಸಾಗಾಟ, ಪಾಲನೆಗೆ ಸುಪ್ರೀಂ ಕೋರ್ಟ್ ನಿಯಮಗಳ ಪ್ರಕಾರ ಮಾಡಬೇಕಿದೆ. ಆದರೆ ಪಾಲಿಕೆ ಸಿಬ್ಬಂದಿ ಹಾಗೂ ಸಂಬಂಧಿಸಿದ ಇಲಾಖೆ ಸಿಬ್ಬಂದಿ ಸುಪ್ರೀಂ ಕೋರ್ಟ್ ಸೂಚನೆಗಳನ್ನು ಪಾಲಿಸುತ್ತಿಲ್ಲ. ಬೀದಿನಾಯಿಗಳಿಗೆ ವಿಷ ಹಾಕಿದವರ ಮೇಲೆ ಕಾನೂನು ಕ್ರಮತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಶ್ವಾನಪಾಲನಾ ಕೇಂದ್ರಕ್ಕೆ 2ಕೋಟಿ ರೂ ಅನುದಾನ 

ಒಂದೆಡೆ ಬೀದಿನಾಯಿಗಳು ದಾಳಿ ಮಾಡುತ್ತಿದ್ದರೆ, ಮತ್ತೊಂದೆಡೆ ಮಾನವೀಯತೆ ಮರೆತು ಬೀದಿನಾಯಿಗಳಿಗೆ ವಿಷಾಹಾರ ಹಾಕಿ ಕೊಲ್ಲಲಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಶ್ವಾನ ಪಾಲನಾ ಕೇಂದ್ರ ನಿರ್ಮಾಣ ಮಾಡಬೇಕಿದೆ. ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಶ್ವಾನಪಾಲನಾ ಕೇಂದ್ರಕ್ಕೆ 2ಕೋಟಿ ರೂ ಅನುದಾನ ಮಂಜೂರು ಮಾಡಿದ್ದಾರೆ. ನಿರ್ಮಾಣ ಕಾಮಗಾರಿ ಆದಷ್ಟು ಬೇಗ ಮುಗಿಸಿ ಬೀದಿನಾಯಿಗಳಿಗೆ ಆಶ್ರಯ ನೀಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ: ಸಾರ್ವಜನಿಕರು, ಸಿಬ್ಬಂದಿ ಮೊಬೈಲ್​​ ಟಾರ್ಚೇ ಇಲ್ಲಿ ಬೆಳಕು! – Kannada News | Electricity Cut Over Rupees 3,000 Dues, Gadag Government Office Left in Darkness for 8 Months

ದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ

ಗದಗ, ಮೇ 12: ಗೃಹ ಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ, ಇದರಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ರಾಜ್ಯ ಸರ್ಕಾರವೇನೋ ಗರ್ವದಿಂದ ಹೇಳಿಕೊಳ್ಳುತ್ತಿದೆ. ಆದರೆ ಇದೇ ಸರ್ಕಾರದ ಅಡಿಯಲ್ಲಿ ಬರುವ ಗದಗದ ಕಚೇರಿಯೊಂದು ಒಂದೆರಡಲ್ಲ ಬರೋಬ್ಬರಿ 8 ತಿಂಗಳಿನಿಂದ ಕತ್ತಲೆ ಭಾಗ್ಯದಲ್ಲಿದೆ. ಬಿಲ್​​ ಪಾವತಿಸದೇ ಇರುವ ಕಾರಣ ವಿದ್ಯುತ್​​ ಸಂಪರ್ಕ ಕಡಿತಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿಯೇ ದಿನನಿತ್ಯದ ವ್ಯವಹಾರ ನಿರ್ವಹಿಸಬೇಕಾದ ಸ್ಥಿತಿ ಇದೆ.

ಬಿಲ್ ಪಾವತಿಸದ ಹಿನ್ನೆಲೆ  ಲಕ್ಷ್ಮೇಶ್ವರದ ಭೂದಾಖಲೆ ಮತ್ತು ನಗರ ಸರ್ವೇ ಕಚೇರಿಯ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಕಡಿತಗೊಳಿಸಿದೆ. ಅಧಿಕಾರಿಗಳ ಪ್ರಕಾರ, ಸುಮಾರು 3,000 ವಿದ್ಯುತ್ ಬಿಲ್ ಬಾಕಿಯಿದೆ. ಹೆಸರು ಬಹಿರಂಗಪಡಿಸದ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ಸುಮಾರು ಎಂಟು ತಿಂಗಳ ಹಿಂದೆ ಕಡಿತಗೊಂಡಿರುವ ವಿದ್ಯುತ್​​ ಸಂಪರ್ಕ ಇನ್ನೂ ಮರಳಿ ಬಂದಿಲ್ಲ. ಆಗಿನಿಂದ ಸಿಬ್ಬಂದಿ ಹಾಗೂ ಸಾರ್ವಜನಿಕರು ಕತ್ತಲೆಯಲ್ಲೇ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿರುವ ಲಕ್ಷ್ಮೇಶ್ವರ ಈಗ ತಾಲೂಕು ಕೇಂದ್ರವಾಗಿದ್ದರೂ, ಭೂದಾಖಲೆ ಕಚೇರಿಯಲ್ಲಿ ಮೂಲ ಸೌಲಭ್ಯಗಳ ಕೊರತೆ ತಾಂಡವವಾಡುತ್ತಿದೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ.

ಇದನ್ನೂ ಓದಿ: ಮುಸುಕುದಾರಿ ಗ್ಯಾಂಗ್​​​​​​ನ​​​ ಹೆಡೆಮುರಿ ಕಟ್ಟಿದ ಖಾಕಿ; 1.26 ಕೋಟಿ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ

ಕಚೇರಿಯ ಸಂಪೂರ್ಣ ಕೆಲಸವನ್ನು ಕೇವಲ ಇಬ್ಬರು ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದ್ದು, ಜಮೀನು ಹಾಗೂ ಆಸ್ತಿ ಅಳತೆ, ಗಡಿ ಗುರುತು, ನಕ್ಷೆ ತಯಾರಿ, ಹಳೆಯ ಸರ್ವೇ ದಾಖಲೆಗಳ ನಿರ್ವಹಣೆ, ಸರ್ವೇ ನಂಬರ್ ಮತ್ತು ಆಸ್ತಿ ಕಾರ್ಡ್ ವಿತರಣೆ, ನಗರ ಪ್ರದೇಶಗಳ ಖಾಸಗಿ ಹಾಗೂ ಸರ್ಕಾರಿ ಜಮೀನುಗಳ ಅಳತೆ ಸೇರಿದಂತೆ ಹಲವು ಪ್ರಮುಖ ಕಾರ್ಯಗಳು ಈ ಕಚೇರಿಯಲ್ಲಿ ನಡೆಯುತ್ತವೆ. ಸರ್ಕಾರ ಭೂ ದಾಖಲೆ ಹಾಗೂ ಸರ್ವೇ ನಕ್ಷೆಗಳ ಡಿಜಿಟಲೀಕರಣದ ಬಗ್ಗೆ ಹೇಳುತ್ತಿದ್ದರೂ, ಕಚೇರಿಯಲ್ಲಿ ಇನ್ನೂ ಕೈಬರಹದ ನಕ್ಷೆಗಳನ್ನೇ ನೀಡಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕಚೇರಿಯಲ್ಲಿ ಕಂಪ್ಯೂಟರ್ ಅಥವಾ ಸಮರ್ಪಕ ಡಿಜಿಟಲ್ ಸೌಲಭ್ಯಗಳೇ ಇಲ್ಲದ ಕಾರಣ ಸಿಬ್ಬಂದಿ ತಮ್ಮ ವೈಯಕ್ತಿಕ ಮೊಬೈಲ್‌ಗಳ ಮೂಲಕ ಅರ್ಜಿಗಳನ್ನು ಪರಿಶೀಲಿಸಿ, ನಕ್ಷೆ ಹಾಗೂ ಸರ್ವೇ ಮಾಹಿತಿಗಳನ್ನು ನೋಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಷ್ಕರಿಸಿ ತಾಲೂಕಿನ ಜನರಿಗೆ ಉತ್ತಮ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:03 pm, Tue, 12 May 26

Source link

ಮದುವೆ ಆಗಿ ನಾಲ್ಕೇ ವರ್ಷಕ್ಕೆ ಖ್ಯಾತ ನಟಿ ಮೌನಿ ರಾಯ್ ಸಂಸಾರದಲ್ಲಿ ಬಿರುಕು – Kannada News | Mouni Roy and Suraj Nambiar unfollow each other on Instagram Divorce rumours viral

ಖ್ಯಾತ ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಈ ದಂಪತಿ, ತಮ್ಮ ಪ್ರವಾಸ ಮತ್ತು ಸಂತೋಷದ ಕ್ಷಣಗಳ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಈಗ ದಿಢೀರನೆ ಅನ್‌ಫಾಲೋ ಮಾಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೌನಿ ಮತ್ತು ಸೂರಜ್ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಸೂರಜ್ ಅವರು ತಮ್ಮ ಪ್ರೊಫೈಲ್‌ನಿಂದ ಮದುವೆಯ ಕೆಲವು ಫೋಟೋಗಳನ್ನು ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಆದರೆ ಮೌನಿ ರಾಯ್ ಅವರ ಪ್ರೊಫೈಲ್‌ನಲ್ಲಿ ಇಂದಿಗೂ ಮದುವೆಯ ಚಿತ್ರಗಳು ಲಭ್ಯವಿವೆ. ಮೂಲಗಳ ಪ್ರಕಾರ, ಇಬ್ಬರೂ ಸದ್ಯ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸೂರಜ್ ನಂಬಿಯಾರ್ ಮೂಲತಃ ಬೆಂಗಳೂರಿನ ಜೈನ್ ಕುಟುಂಬಕ್ಕೆ ಸೇರಿದವರು. ದುಬೈನಲ್ಲಿ ಹೂಡಿಕೆ ಬ್ಯಾಂಕರ್ ಮತ್ತು ಉದ್ಯಮಿಯಾಗಿ ನೆಲೆಸಿರುವ ಸೂರಜ್ ಮತ್ತು ಮೌನಿ 2022ರ ಜನವರಿಯಲ್ಲಿ ಗೋವಾದಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದರು. ಮಲಯಾಳಿ ಮತ್ತು ಬಂಗಾಳಿ ಸಂಪ್ರದಾಯದಂತೆ ಇವರ ಮದುವೆ ನಡೆದಿತ್ತು. ಅನೇಕ ಸೆಲೆಬ್ರಿಟಿಗಳು ಆ ಮದುವೆಗೆ ಸಾಕ್ಷಿಯಾಗಿದ್ದರು.

ಈ ಎಲ್ಲ ವದಂತಿಗಳ ಬಗ್ಗೆ ಮೌನಿ ರಾಯ್ ಆಗಲಿ ಅಥವಾ ಸೂರಜ್ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಮೌನಿ ರಾಯ್ ಅವರು ಸದ್ಯ ವರುಣ್ ಧವನ್ ಜೊತೆ ಅಭಿನಯಿಸಿದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರದ ಬಿಡುಗಡೆಯ ತಯಾರಿಯಲ್ಲಿದ್ದಾರೆ.

ಇದನ್ನೂ ಓದಿ: ಅತಿಥಿಯಾಗಿ ಕರೆದು ಕಿರುಕುಳ ನೀಡಿದ ಅಂಕಲ್ಸ್: ನಟಿ ಮೌನಿ ರಾಯ್​ಗೆ ಕೆಟ್ಟ ಅನುಭವ

ಅಭಿಮಾನಿಗಳು ಮಾತ್ರ ‘ಇಷ್ಟು ಸುಂದರವಾದ ಜೋಡಿ ಬೇರೆಯಾಗಬಾರದು’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇದು ಕೇವಲ ಸಣ್ಣ ಮುನಿಸೋ ಅಥವಾ ನಿಜವಾದ ವಿಚ್ಛೇದನವೋ ಎಂಬುದು ಕಾಲವೇ ಉತ್ತರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರಧಾನಿ ಮೋದಿ ನೀಡಿದ ‘ಮಿತವ್ಯಯ ಮಂತ್ರ’ದ ಹಿಂದಿನ ಲೆಕ್ಕಾಚಾರವೇನು? 23 ಲಕ್ಷ ಕೋಟಿ ರೂ. ಉಳಿತಾಯಕ್ಕೆ ಸಜ್ಜಾಗುತ್ತಿದೆ ಭಾರತ! – Kannada News | Indias Forex Challenge: Modis Plan to Curb Gold, Fuel Imports

ದೆಹಲಿ, ಮೇ.12: ದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿರುವ ಆರ್ಥಿಕ ಶಿಸ್ತಿನ ಕರೆ ಕೇವಲ ಸಲಹೆಯಲ್ಲ, ಅದು 23 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಉಳಿತಾಯದ ಮಾಸ್ಟರ್ ಪ್ಲಾನ್. ಜಾಗತಿಕ ಯುದ್ಧ ಮತ್ತು ಅನಿಶ್ಚಿತತೆಯ ನಡುವೆ ಭಾರತದ ವಿದೇಶಿ ವಿನಿಮಯ ಸಂಗ್ರಹವನ್ನು ರಕ್ಷಿಸಲು ಪ್ರಧಾನಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ಆರ್‌ಬಿಐ ದತ್ತಾಂಶದಂತೆ, ಫೆಬ್ರವರಿಯಲ್ಲಿ 728 ಶತಕೋಟಿ ಡಾಲರ್ ಇದ್ದ ವಿದೇಶಿ ವಿನಿಮಯ ಸಂಗ್ರಹವು ಏಪ್ರಿಲ್ ವೇಳೆಗೆ 691 ಶತಕೋಟಿ ಡಾಲರ್ಗೆ ಕುಸಿದಿದೆ. ರಫ್ತಿಗಿಂತ ಆಮದು ಹೆಚ್ಚಾಗುತ್ತಿರುವುದು (Current Account Deficit – CAD) ಇದಕ್ಕೆ ಮುಖ್ಯ ಕಾರಣ. 2026ರ ವೇಳೆಗೆ ಈ ಕೊರತೆಯು 8.05 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಬಹುದು ಎಂದು ಐಎಂಎಫ್ ಎಚ್ಚರಿಸಿದೆ. ಇದನ್ನು ತಡೆಯಲು ಮೋದಿ ಅವರು ಮೂರು ಪ್ರಮುಖ ವಲಯಗಳ ಮೇಲೆ ಕಣ್ಣಿಟ್ಟಿದ್ದಾರೆ.

ಇಲ್ಲಿದೆ ನೋಡಿ ಸಂಪೂರ್ಣ ವಿಡಿಯೋ


ಭಾರತವು ವಿಶ್ವದ 2ನೇ ಅತಿದೊಡ್ಡ ಚಿನ್ನದ ಆಮದುದಾರ ರಾಷ್ಟ್ರ. 2026ರಲ್ಲಿ 6.75 ಲಕ್ಷ ಕೋಟಿ ರೂ. ಮೌಲ್ಯದ ಚಿನ್ನ ಆಮದು ಮಾಡಿಕೊಳ್ಳಲಾಗಿದೆ. ಚಿನ್ನ ಖರೀದಿಸಲು ಡಾಲರ್ ಬಳಸುವುದರಿಂದ ರೂಪಾಯಿ ಮೌಲ್ಯ ಕುಸಿಯುತ್ತದೆ. ಚಿನ್ನದ ಖರೀದಿ ಕಡಿಮೆ ಮಾಡಿದರೆ 2 ರಿಂದ 3 ಲಕ್ಷ ಕೋಟಿ ರೂ. ಉಳಿತಾಯ ಸಾಧ್ಯ. ಭೌತಿಕ ಚಿನ್ನದ ಬದಲು ಸಾವರಿನ್ ಗೋಲ್ಡ್ ಬಾಂಡ್ (SGB) ಕಡೆಗೆ ಜನರನ್ನು ಸೆಳೆಯುವುದು ಸರ್ಕಾರದ ಉದ್ದೇಶ.

ಇದನ್ನೂ ಓದಿ: ಆನ್​​ಲೈನ್​​ ತರಗತಿಗೆ ಅಪಸ್ವರ: ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ

ಭಾರತವು ವಾರ್ಷಿಕವಾಗಿ 17 ಲಕ್ಷ ಕೋಟಿ ರೂ. ಮೌಲ್ಯದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಪಶ್ಚಿಮ ಏಷ್ಯಾದ ಯುದ್ಧಗಳಿಂದಾಗಿ ತೈಲ ಬೆಲೆ ಏರುತ್ತಿರುವುದು ಆರ್ಥಿಕತೆಗೆ ಹೊರೆಯಾಗಿದೆ. ವರ್ಕ್ ಫ್ರಮ್ ಹೋಮ್, ಸಾರ್ವಜನಿಕ ಸಾರಿಗೆ ಬಳಕೆ ಮತ್ತು ಇಂಧನ ಮಿತಬಳಕೆಯ ಮೂಲಕ ಡಾಲರ್ ಹೊರಹರಿವನ್ನು ತಗ್ಗಿಸುವುದು. ಕಳೆದ ವರ್ಷ 1.83 ಲಕ್ಷ ಕೋಟಿ ರೂ. ಮೌಲ್ಯದ ಎಣ್ಣೆ ಆಮದು ಮಾಡಿಕೊಳ್ಳಲಾಗಿದೆ. ಇದರ ಮಿತಬಳಕೆಯಿಂದ ಆರ್ಥಿಕ ಮತ್ತು ದೈಹಿಕ ಆರೋಗ್ಯ ಎರಡೂ ಸುಧಾರಿಸುತ್ತದೆ. 1.34 ಲಕ್ಷ ಕೋಟಿ ರೂ. ಮೌಲ್ಯದ ರಸಗೊಬ್ಬರ ಆಮದನ್ನು ಸಾವಯವ ಕೃಷಿಯ ಮೂಲಕ ಕಡಿಮೆ ಮಾಡಲು ಪ್ರಧಾನಿ ಕರೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:38 pm, Tue, 12 May 26

Source link

ಲಾರೆನ್ಸ್ ಬಿಷ್ಣೋಯಿ ಕುರಿತ ಡಾಕ್ಯುಸೀರೀಸ್, ಹೈಕೋರ್ಟ್ ಮಹತ್ವದ ಆದೇಶ – Kannada News | Docuseries about criminal Lawrence Bishnoi HC gives order

ಹಲವು ಕೊಲೆ, ಸುಲಿಗೆ, ಬೆದರಿಕೆ ಇನ್ನೂ ಹತ್ತು ಹಲವು ಪ್ರಕರಣಗಳಲ್ಲಿ ಆರೋಪಿ ಮತ್ತು ಕೆಲ ಪ್ರಕರಣಗಳಲ್ಲಿ ಅಪರಾಧಿ ಸಹ ಆಗಿರುವ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಜೀವನವನ್ನು ಆಧರಿಸಿದ ಸಾಕ್ಷ್ಯಚಿತ್ರ (Docuseries) ಬಿಡುಗಡೆ ಕುರಿತಂತೆ ಪಂಜಾಬ್ ಮತ್ತು ಹರಿಯಾಣ ನ್ಯಾಯಾಲಯ ಆದೇಶವೊಂದನ್ನು ನೀಡಿದೆ. ‘ಲಾರೆನ್ಸ್ ಆಫ್ ಪಂಜಾಬ್’ (Lawrence of Punjab) ಡಾಕ್ಯು ಸೀರೀಸ್ ಕಳೆದ ತಿಂಗಳು ಬಿಡುಗಡೆ ಆಗಬೇಕಿತ್ತು. ಆದರೆ ಖುದ್ದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಪಂಜಾಬ್ ಪೊಲೀಸರು ಈ ಡಾಕ್ಯು ಸೀರೀಸ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಇದರ ಬಿಡುಗಡೆ ತಡೆದಿದ್ದರು. ಆದರೆ ಈಗ ಹೈಕೋರ್ಟ್, ಡಾಕ್ಯು ಸೀರೀಸ್ ಬಿಡುಗಡೆಗೆ ಅನುಮತಿ ನೀಡಿದೆ.

ಜೀ ಎಂಟರ್ಟೈನ್​​ಮೆಂಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ, ಆದರೆ ಎರಡು ಮುಖ್ಯ ಬದಲಾವಣೆಗಳನ್ನು ಮಾಡಲು ಹೇಳಿದೆ. ಡಾಕ್ಯು ಸರಣಿಯ ಹೆಸರಿನಿಂದ ಲಾರೆನ್ಸ್ ಬಿಷ್ಣೋಯಿ ಮತ್ತು ಪಂಜಾಬ್ ಹೆಸರನ್ನು ತೆಗೆಯುವಂತೆ ನ್ಯಾಯಾಲಯವು ಆದೇಶಿಸಿದೆ. ಶೀರ್ಷಿಕೆಯು ಒಂದು ನಿರ್ದಿಷ್ಟ ರಾಜ್ಯದ (ಪಂಜಾಬ್) ಹೆಸರನ್ನು ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಾಲಯವು, ಈ ಶೀರ್ಷಿಕೆಯು ರಾಜ್ಯದ ಇಮೇಜ್‌ಗೆ ಧಕ್ಕೆ ತರಬಹುದು ಮತ್ತು ಗ್ಯಾಂಗ್‌ಸ್ಟರ್ ಹೆಸರನ್ನು ಶೀರ್ಷಿಕೆಯಲ್ಲಿ ಬಳಸುವುದು ಸೂಕ್ತವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Zee5 ಪರ ವಕೀಲರು ನ್ಯಾಯಾಲಯದ ಈ ಸಲಹೆಯನ್ನು ಒಪ್ಪಿಕೊಂಡಿದ್ದು, ಶೀರ್ಷಿಕೆಯನ್ನು ಬದಲಾಯಿಸಲು ಸಮ್ಮತಿಸಿದ್ದಾರೆ. ಈ ಸರಣಿಯು ಅಪರಾಧ ಜಗತ್ತಿನ ಕರಾಳ ಮುಖವನ್ನು ತೋರಿಸುವ ಉದ್ದೇಶ ಹೊಂದಿದೆಯೇ ಹೊರತು, ಅಪರಾಧಿಯನ್ನು ವೈಭವೀಕರಿಸುವ ಉದ್ದೇಶ ಹೊಂದಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ:ಕೊಲೆಗಾರನಿಗೆ ನಾಯಕನ ಪಟ್ಟ: ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ನಿಷೇಧ

ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಇಂತಹ ವಿವಾದಿತ ವ್ಯಕ್ತಿಯ ಕುರಿತಾದ ಸರಣಿಯು ಬಿಡುಗಡೆಗೆ ಮುನ್ನವೇ ಈ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದು, ಈಗ ನ್ಯಾಯಾಲಯದ ಸೂಚನೆಯಂತೆ ಹೆಸರನ್ನು ಬದಲಾಯಿಸಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

‘ಲಾರೆನ್ಸ್ ಆಫ್ ಬಿಷ್ಣೋಯಿ’ ಡಾಕ್ಯು ಸೀರೀಸ್ ಏಪ್ರಿಲ್ 27ರಂದು ಬಿಡುಗಡೆ ಆಗಬೇಕಿತ್ತು. ಈಗಾಗಲೇ ಬಿಡುಗಡೆ ಆಗಿರುವ ಟ್ರೈಲರ್​​ನಲ್ಲಿ ತೋರಿಸಿರುವಂತೆ ಕೆಲವು ಪೊಲೀಸ್ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಪಂಜಾಬ್​ನ ಭೂತಕ ಗ್ಯಾಂಗ್​​ಗಳು ಹಾಗೂ ಲಾರೆನ್ಸ್ ಬಿಷ್ಣೋಯಿ ಬಗ್ಗೆ ಮಾತನಾಡಿದ್ದಾರೆ. ಬಿಷ್ಣೋಯಿಯನ್ನು ಅದ್ಧೂರಿ ಹಿನ್ನೆಲೆ ಸಂಗೀತದೊಂದಿಗೆ ‘ಹೀರೋ’ ರೀತಿ ತೋರಿಸಿರುವ ದೃಶ್ಯಗಳು ಸಹ ಟ್ರೈಲರ್​​ನಲ್ಲಿವೆ. ಆದರೆ ಈಗ ನ್ಯಾಯಾಲಯ ಅನುಮತಿ ನೀಡಿರುವ ಕಾರಣ ಡಾಕ್ಯು ಸರಣಿ ಜೀ5 ನಲ್ಲಿ ಶೀಘ್ರವೇ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಶ್ರೇಯಸ್ ಅಯ್ಯರ್ ಅವರ ಒಂದು ನಿರ್ಧಾರ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣವಾಯಿತೇ? – Kannada News | Shreyas Iyer explains why Chahal didn’t bowl a single over vs Delhi Capitals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು.

ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್​ ಗಳಿಸಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ ಒಂದು ನಿರ್ಧಾರವು ಚರ್ಚೆಗೆ ಕಾರಣವಾಗಿದೆ. ಅದೇನೆಂದರೆ ಯುಜ್ವೇಂದ್ರ ಚಹಲ್​ಗೆ ಓವರ್ ನೀಡದಿರುವುದು.

ಈ ಪಂದ್ಯದ ಮಧ್ಯಂತರ ಹಂತದಲ್ಲಿ ಸ್ಪಿನ್ನರ್‌ಗಳ ನೆರವು ಪಡೆಯುವ ಅವಕಾಶವಿದ್ದರೂ ಶ್ರೇಯಸ್ ಅಯ್ಯರ್ ಕೇವಲ ವೇಗಿಗಳನ್ನೇ ಅವಲಂಬಿಸಿದರು. ಇದಾಗ್ಯೂ ಚಹಲ್ ಅವರಿಗೆ ಒಂದೇ ಒಂದು ಓವರ್ ನೀಡಿರಲಿಲ್ಲ.

ಅಯ್ಯರ್ ನೀಡಿದ ಕಾರಣವೇನು?

ಈ ಪಂದ್ಯದ ನಂತರ ಮಾತನಾಡಿದ ಶ್ರೇಯಸ್ ಅಯ್ಯರ್, ಚಹಲ್ ಅವರನ್ನು ಬಳಸದಿರುವುದಕ್ಕೆ ಪಿಚ್‌ನ ಸ್ವರೂಪವೇ ಕಾರಣ ಎಂದು ಸಮರ್ಥಿಸಿಕೊಂಡಿದ್ದಾರೆ. “ಧರ್ಮಶಾಲಾದ ಈ ಪಿಚ್‌ನಲ್ಲಿ ವೇಗಿಗಳಿಗೆ ಹೆಚ್ಚಿನ ನೆರವು ಸಿಗುತ್ತಿತ್ತು. ಚೆಂಡು ಅನಿರೀಕ್ಷಿತವಾಗಿ ಬೌನ್ಸ್ ಆಗುತ್ತಿತ್ತು ಮತ್ತು ಮೂಮೆಂಟ್ ಇತ್ತು. ನಮ್ಮ ವೇಗಿಗಳು ಸರಿಯಾದ ಲೈನ್ ಮತ್ತು ಲೆಂಗ್ತ್‌ನಲ್ಲಿ ಬೌಲಿಂಗ್ ಮಾಡಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು,” ಎಂದು ಹೇಳಿದ್ದಾರೆ

“ನಾವು 210 ರನ್ ಗಳಿಸಿದ್ದೆವು, ಇದು ಈ ಪಿಚ್‌ನಲ್ಲಿ ಪಾರ್ ಸ್ಕೋರ್‌ಗಿಂತ 30 ರನ್ ಹೆಚ್ಚೇ ಆಗಿತ್ತು. ಆದರೆ ನಮ್ಮ ಬೌಲರ್‌ಗಳು ‘ಹಾರ್ಡ್ ಲೆಂಗ್ತ್’ ಎಸೆಯುವಲ್ಲಿ ಮತ್ತು ಕ್ಷೇತ್ರರಕ್ಷಣೆಯಲ್ಲಿ ವಿಫಲರಾದರು,” ಎಂದು ಶ್ರೇಯಸ್ ಅಯ್ಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂದರೆ ಪಿಚ್​ನ ಸ್ವರೂಪವು ಸ್ಪಿನ್ನರ್​ಗೆ ನೆರವಾಗುವಂತಿರಲಿಲ್ಲ. ಹೀಗಾಗಿಯೇ ನಾನು ಯುಜ್ವೇಂದ್ರ ಚಹಲ್​ಗೆ ಓವರ್ ನೀಡಲಿಲ್ಲ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

ಅಲ್ಲದೆ, ಡೆಲ್ಲಿ ಕ್ಯಾಪಿಟಲ್ಸ್ ಪರ ಅಕ್ಷರ್ ಪಟೇಲ್ ಮತ್ತು ಡೇವಿಡ್ ಮಿಲ್ಲರ್ ಕ್ರೀಸ್‌ನಲ್ಲಿದ್ದಾಗ ಚಹಲ್ ಅವರನ್ನು ಬೌಲಿಂಗ್‌ಗೆ ತರುವುದು ಅಪಾಯಕಾರಿ ಎಂದು ಅಯ್ಯರ್ ಭಾವಿಸಿದ್ದರು. ಎಡಗೈ ಬ್ಯಾಟರ್‌ಗಳು ಲೆಗ್ ಸ್ಪಿನ್ನರ್ ವಿರುದ್ಧ ಸುಲಭವಾಗಿ ರನ್ ಗಳಿಸಬಹುದು ಎಂಬ ಲೆಕ್ಕಾಚಾರ ಅವರದ್ದಾಗಿತ್ತು.

ಇದನ್ನೂ ಓದಿ: ವಿರಾಟ್ ಕೊಹ್ಲಿ ಟೆಸ್ಟ್​ ನಿವೃತ್ತಿಗೆ ಒಂದು ವರ್ಷ; ಕಂಬ್ಯಾಕ್ ಅಸಾಧ್ಯ

ಇದಾಗ್ಯೂ ವೇಗಿಗಳು ದುಬಾರಿಯಾದಾಗಲೂ ಯುಜ್ವೇಂದ್ರ ಚಹಲ್ ಅವರಿಗೆ ಚೆಂಡು ನೀಡದಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ತಂಡದಲ್ಲಿದ್ದರೂ ಪಂದ್ಯ ಕೈ ತಪ್ಪುವ ಭೀತಿ ಎದುರಾದಗಲೂ ಪಂಜಾಬ್ ಕಿಂಗ್ಸ್ ತಂಡದ ನಾಯಕ ಯುಜ್ವೇಂದ್ರ ಚಹಲ್​ನನ್ನು ಕಡೆಗಣಿಸಿದ್ದು ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

Source link

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ ಹಾಗೂ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | NEET Paper Leak Case: 45 Detained for Questioning; CM Vijay Closes 717 Liquor Shops and Other Major News Updates

ಜೈಪುರ/ನವದೆಹಲಿ, ಮೇ 12: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು ಸದ್ಯ ಪೊಲೀಸ್ ಕಸ್ಟಡಿಯಲ್ಲೇ ಇರಿಸಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲು ಆದೇಶಿಸಿದ್ದು, ಶೀಘ್ರದಲ್ಲೇ ಈ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಈ ಜಾಲದ ಮೂಲವನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗಳು ಮುಂದಾಗಿವೆ.

ಮುಖ್ಯಾಂಶಗಳು

  • ರಾಜಸ್ಥಾನದಲ್ಲಿ ನೀಟ್ ಹಗರಣಕ್ಕೆ ಸಂಬಂಧಿಸಿದಂತೆ 45 ಜನರ ವಿಚಾರಣೆ; ಸಿಬಿಐ ತನಿಖೆ ಶೀಘ್ರ ಆರಂಭ.
  • ಎರಡನೇ ಬಾರಿಗೆ ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ.
  • ತಮಿಳುನಾಡಿನಲ್ಲಿ ಸಿಎಂ ವಿಜಯ್ ಆದೇಶದಂತೆ 717 ಮದ್ಯದ ಅಂಗಡಿಗಳ ಬಂದ್; ಕರ್ನಾಟಕದಲ್ಲಿ ಹೊಸ ಅಬಕಾರಿ ನೀತಿ ಜಾರಿ.

ಅಸ್ಸಾಂನಲ್ಲಿ ಹಿಮಂತ ಬಿಸ್ವಾ ಆಡಳಿತ ಶುರು

ಅಸ್ಸಾಂನಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಇತ್ತ ದಕ್ಷಿಣ ಭಾರತದ ತಮಿಳುನಾಡಿನಲ್ಲಿ ನಟ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ತಮ್ಮ ಮೊದಲ ಕಟ್ಟುನಿಟ್ಟಿನ ಕ್ರಮವಾಗಿ ದೇವಸ್ಥಾನ ಮತ್ತು ಶಾಲೆಗಳ ಸಮೀಪವಿರುವ 717 ‘ಟಾಸ್ಮಾಕ್’ ಸಾರಾಯಿ ಅಂಗಡಿಗಳನ್ನು ಮುಚ್ಚುವಂತೆ ಐತಿಹಾಸಿಕ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಅಬಕಾರಿ ಬದಲಾವಣೆ

ತಮಿಳುನಾಡಿನಲ್ಲಿ ಮದ್ಯದ ಅಂಗಡಿಗಳು ಬಂದ್ ಆಗುತ್ತಿದ್ದರೆ, ಇತ್ತ ಕರ್ನಾಟಕದಲ್ಲಿ ಮೇ 11 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬಂದಿದೆ. ಈ ನೀತಿಯ ಅನ್ವಯ ಕಡಿಮೆ ಬೆಲೆಯ ಮದ್ಯದ ದರದಲ್ಲಿ ಶೇ 20 ರಿಂದ 30 ರಷ್ಟು ಏರಿಕೆಯಾಗಿದ್ದು, ಪ್ರೀಮಿಯಂ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಇದು ಮದ್ಯಪ್ರಿಯರಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.

ಇದನ್ನೂ ಓದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ

ಅಬಕಾರಿ ತೆರಿಗೆಯನ್ನು ಮದ್ಯದ ಪ್ರಮಾಣಕ್ಕಿಂತ ಹೆಚ್ಚಾಗಿ ಆಲ್ಕೋಹಾಲ್ ಅಂಶದ ಮೇಲೆ ವಿಧಿಸುತ್ತಿರುವುದು ಈ ಬದಲಾವಣೆಗೆ ಪ್ರಮುಖ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆನ್​​ಲೈನ್​​ ತರಗತಿಗೆ ಅಪಸ್ವರ: ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ

ಬೆಂಗಳೂರು, ಮೇ 12: ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡುವ ಪ್ರಧಾನ ಮಂತ್ರಿಗಳ ಇತ್ತೀಚಿನ ಹೇಳಿಕೆಯನ್ನು ಖಾಸಗಿ ಶಾಲಾ ಒಕ್ಕೂಟ ಖಂಡಿಸಿದೆ. ಶಾಲಾ ಶಿಕ್ಷಣದಲ್ಲಿ ಭೌತಿಕ ತರಗತಿಗಳು ಅತ್ಯಗತ್ಯ. ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ 500 ದಿನಗಳ ಕಾಲ ಮಕ್ಕಳಿಗೆ ಆದ ಕಲಿಕೆಯ ನಷ್ಟ ಮತ್ತು ಅನ್ಯಾಯವನ್ನು ಸರಿಪಡಿಸಲು ಇಂದಿಗೂ ಸಾಧ್ಯವಾಗಿಲ್ಲ. ಶಾಲಾ ಶಿಕ್ಷಣದಲ್ಲಿ ಆನ್‌ಲೈನ್ ವ್ಯವಸ್ಥೆಯು ಭೌತಿಕ ತರಗತಿಗಳಿಗೆ ಪರ್ಯಾಯವಲ್ಲ. ಕಲಿಕೆಯ ವಿಧಾನಕ್ಕೆ ಭೌತಿಕ ತರಗತಿಗಳು ಅನಿವಾರ್ಯವಾಗಿವೆ. ಆನ್‌ಲೈನ್ ಶಿಕ್ಷಣವು ಹೆಚ್ಚುವರಿ ಅಥವಾ ಉನ್ನತ ಶಿಕ್ಷಣಕ್ಕೆ ಅನ್ವಯವಾಗಬಹುದಾದರೂ, ಶಾಲಾ ಶಿಕ್ಷಣಕ್ಕೆ ಇದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

NEET Exam 2026: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ – Kannada News | NEET UG 2026 Paper Leak: Minister Madhu Bangarappa Slams Central Govt Over ‘Failed Administration’; Challenges R Ashoka

ಬೆಂಗಳೂರು, ಮೇ 12: ನೀಟ್ ಯುಜಿ 2026 ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೇಂದ್ರ ಸರ್ಕಾರದ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ರಾಜ್ಯ ಸರ್ಕಾರದಲ್ಲಿ ಆಗಿದೆಯೇ ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಈ ಪ್ರಶ್ನೆ ಕೇಳಿ ಎಂದು ಸವಾಲು ಹಾಕಿದರು. ಸತತ ಎರಡನೇ ವರ್ಷವೂ ಇಂತಹ ಅವ್ಯವಸ್ಥೆ ನಡೆದಿರುವುದು ಮಕ್ಕಳ ಭವಿಷ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ವಿದ್ಯಾರ್ಥಿಗಳು ಉತ್ತಮ ವ್ಯವಸ್ಥೆ ಇಲ್ಲದಿದ್ದರೂ ಕಷ್ಟಪಟ್ಟು ಓದಿ ಉತ್ತಮ ಫಲಿತಾಂಶ ನೀಡಲು ಪ್ರಯತ್ನಿಸಿದ್ದಾರೆ. ಆದರೆ ಕೇಂದ್ರದ ‘ಅವ್ಯವಸ್ಥೆ ಮತ್ತು ಹೊಲಸು ಅಡ್ಮಿನಿಸ್ಟ್ರೇಷನ್’ ಕಾರಣದಿಂದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಸಚಿವರು ಬಲವಾಗಿ ಪ್ರತಿಪಾದಿಸಿದರು. ತಮಟೆ ಹೊಡೆದು ದೀಪ ಹಚ್ಚುವವರಿಗೆ ಇನ್ನೇನು ಹೇಳಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link