Category Archives: Blog

Your blog category

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ; ಅವಿವಾಹಿತರು ಅರ್ಹರು – Kannada News | Indian Navy IT Officer Recruitment 2027: SSC Posts, Apply Now!

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶImage Credit source: Ai generated

ಕೇರಳದಲ್ಲಿರುವ ಪ್ರತಿಷ್ಠಿತ ಭಾರತೀಯ ನೌಕಾ ಅಕಾಡೆಮಿ (INA), 2027ರ ಜನವರಿ ಬ್ಯಾಚ್‌ಗಾಗಿ ಮಾಹಿತಿ ತಂತ್ರಜ್ಞಾನ (IT) ವಿಭಾಗದಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ (SSC) ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 15 ಹುದ್ದೆಗಳು ಲಭ್ಯವಿದ್ದು, ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶ ಸೇವೆ ಮಾಡುವ ಜೊತೆಗೆ ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ಇಂಟರ್ಮೀಡಿಯೇಟ್ ಹಂತದಲ್ಲಿ ಇಂಗ್ಲಿಷ್ ವಿಷಯದಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಪಡೆದಿರಬೇಕು. ಇದರೊಂದಿಗೆ ಕಂಪ್ಯೂಟರ್ ಸೈನ್ಸ್, ಐಟಿ, ಸಾಫ್ಟ್‌ವೇರ್ ಸಿಸ್ಟಮ್ಸ್, ಡೇಟಾ ಅನಾಲಿಟಿಕ್ಸ್ ಅಥವಾ ಎಐ ವಿಷಯದಲ್ಲಿ ಬಿಇ, ಬಿಟೆಕ್, ಬಿಸಿಎ ಅಥವಾ ಎಂಸಿಎ ಪದವಿಯನ್ನು ಶೇ. 60ರಷ್ಟು ಅಂಕಗಳೊಂದಿಗೆ ಪೂರೈಸಿರಬೇಕು. ಅಭ್ಯರ್ಥಿಗಳು ಜನವರಿ 1, 2002 ಮತ್ತು ಜುಲೈ 1, 2007 ರ ನಡುವೆ ಜನಿಸಿರಬೇಕು. ಪ್ರಸ್ತುತ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಪರೀಕ್ಷೆಯಿಲ್ಲದೆ ನೇರ ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಉತ್ತೀರ್ಣರಾದವರಿಗೆ ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ. ಎನ್‌ಸಿಸಿ (NCC) ‘C’ ಪ್ರಮಾಣಪತ್ರ ಹೊಂದಿರುವವರಿಗೆ ಕಟ್‌ಆಫ್ ಅಂಕಗಳಲ್ಲಿ ಶೇ. 5ರಷ್ಟು ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ವೇತನ ಶ್ರೇಣಿ ಮತ್ತು ತರಬೇತಿ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಅಂದಾಜು ರೂ. 56,100 ಆರಂಭಿಕ ವೇತನದೊಂದಿಗೆ ಇತರೆ ಸರ್ಕಾರಿ ಸವಲತ್ತುಗಳು ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಕೇರಳದ ಎಜಿಮಲಾದಲ್ಲಿ 6 ವಾರಗಳ ಕಾಲ ಕಠಿಣ ತರಬೇತಿ ಇರಲಿದ್ದು, ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳು ಮದುವೆಯಾಗುವಂತಿಲ್ಲ. ಒಂದು ವೇಳೆ ನಿಯಮ ಮೀರಿ ಮದುವೆಯಾದರೆ ಅಂತಹವರನ್ನು ತರಬೇತಿಯಿಂದ ವಜಾಗೊಳಿಸಲಾಗುತ್ತದೆ. ಆರಂಭಿಕ ಸೇವಾ ಅವಧಿಯು 10 ವರ್ಷಗಳಾಗಿದ್ದು, ಅಗತ್ಯಕ್ಕೆ ಅನುಗುಣವಾಗಿ ಇನ್ನೂ 4 ವರ್ಷಗಳವರೆಗೆ ವಿಸ್ತರಿಸುವ ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಆಸಕ್ತರು ಮೇ 16 ರಿಂದ ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನಾಂಕವಾಗಿರುತ್ತದೆ. ಐಟಿ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಯುವಕ-ಯುವತಿಯರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಟವಾಡುತ್ತಿದ್ದ ಮಕ್ಕಳ ಮೇಲೆ ಕುಸಿದ ಮನೆಯ ಗೋಡೆ: ಓರ್ವ ಬಾಲಕಿ ಸಾವು, ಮತ್ತಿಬ್ಬರಿಗೆ ಗಾಯ – Kannada News | Yadgir Tragedy: 8 Year Old Girl Dies in Wall Collapse After Heavy Rains

ಯಾದಗಿರಿ, ಮೇ 12: ವರುಣನ ಆರ್ಭಟಕ್ಕೆ ಮನೆ ಗೋಡೆ ಕುಸಿದು ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ಅಕ್ಷತಾ(8) ಮೃತ ದುರ್ದೈವಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಖ್ಯಾಂಶಗಳು

  • ಮನೆ ಗೋಡೆ ಕುಸಿದು ಬಾಲಕಿ ದಾರುಣ ಸಾವು
  • ವಡಗೇರಾದ ತುಮಕೂರು ಗ್ರಾಮದಲ್ಲಿ ಘಟನೆ
  • 8 ವರ್ಷದ ಬಾಲಕಿ ಅಕ್ಷತಾ ಮೃತ ದುರ್ದೈವಿ

ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!

ಸಿದ್ದಪ್ಪ ಎಂಬುವರಿಗೆ ಸೇರಿದ ಮನೆಯ ಅಡುಗೆ ಕೋಣೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೋಡೆ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದ ಮಕ್ಕಳಾದ ಸಂಗೀತಾ ಹಾಗೂ ಭೂಮಿಕಾಳನ್ನ ಸುರಕ್ಷಿತವಾಗಿ ಹೊರ ತೆಗೆಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಕ್ಷತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮೊನ್ನೆ ಗ್ರಾಮದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಈ ವೇಳೆ ನೀರಿನಲ್ಲಿ ನೆಂದಿದ್ದ ಅಡುಗೆ ಕೋಣೆಯ ಗೋಡೆ ಅಲುಗಾಡುವ ಹಂತಕ್ಕೆ ಬಂದಿತ್ತು. ಗಾಳಿಯ ಅಬ್ಬರಕ್ಕೆ ಕೋಣೆಯ ತಗಡಿನ ಮೇಲ್ಛಾವಣಿ ಹಾರಹೋಗಿತ್ತು. ಹೀಗಾಗಿ ಮನೆಯವರು ಅಡುಗೆ ಕೋಣೆಯನ್ನು ಬೇರೆಡೆಗೆ ಶಿಫ್ಟ್​​ ಮಾಡಿದ್ದರು. ಆದರೆ ಅದೇ ಜಾಗದಲ್ಲಿ ಮಕ್ಕಳು ಆಟ ಆಡುವ ವೇಳೆ ಗೋಡೆ ಕುಸಿದ ಪರಿಣಾಮ ಓರ್ವ ಬಾಲಕಿಯ ಸಾವಾಗಿದೆ.

ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿ.ಪಂ.CEO ಲವೀಶ್ ಒರಡಿಯಾ ಮತ್ತು SP ಪೃಥ್ವಿಕ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬದುಕಿ ಬಾಳಬೇಕಿದ್ದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾವುದೇ ಅನಾಹುತ ಆಗಬಾರದೆಂದು ಮುನ್ನೆಚ್ಚರಿಕೆಯಿಂದ ಅಡುಗೆ ಮನೆಯನ್ನೇ ಬೇರೆಡೆ ಶಿಫ್ಟ್​​ ಮಾಡಿದ್ದರೂ ವಿಧಿಯಾಟಕ್ಕೆ ಬಾಲಕಿಯ ಸಾವಾಗಿರೋದು ಗ್ರಾಮಸ್ಥರಿಗೂ ಆಘಾತ ಉಂಟುಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Gold Rates: ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 12: ಕಳೆದ ಕೆಲ ದಿನಗಳಿಂದ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಈಗ ಭರ್ಜರಿ ಏರಿಕೆ ಕಂಡಿದೆ. ಇಂದು ಮಂಗಳವಾರ ಬಂಗಾರದ ದರದಲ್ಲಿ ಗ್ರಾಮ್​ಗೆ 170 ರೂ ಹೆಚ್ಚಳವಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಗ್ರಾಮ್​ಗೆ ಅದರ ಬೆಲೆಯಲ್ಲಿ 15 ರೂ ಹಿಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 12ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,398 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,115 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,410 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,398 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,115 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,115 ರೂ
  • ಚೆನ್ನೈ: 14,330 ರೂ
  • ಮುಂಬೈ: 14,115 ರೂ
  • ದೆಹಲಿ: 14,130 ರೂ
  • ಕೋಲ್ಕತಾ: 14,115 ರೂ
  • ಕೇರಳ: 14,115 ರೂ
  • ಅಹ್ಮದಾಬಾದ್: 14,120 ರೂ
  • ಜೈಪುರ್: 14,130 ರೂ
  • ಲಕ್ನೋ: 14,130 ರೂ
  • ಭುವನೇಶ್ವರ್: 14,115 ರೂ

ಇದನ್ನೂ ಓದಿ: ಎಐನಿಂದ ಉದ್ಯೋಗಗಳು ಹೋಗೋದು ಸುಳ್ಳಾ? ಕೆಲಸ ಸೇರುವ ಸಮಯ ಇದು ಎನ್ನುತ್ತಾರೆ ಜೆನ್ಸೆನ್ ಹುವಾಂಗ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 573 ರಿಂಗಿಟ್ (13,916 ರುಪಾಯಿ)
  • ದುಬೈ: 528.50 ಡಿರಾಮ್ (13,747 ರುಪಾಯಿ)
  • ಅಮೆರಿಕ: 147.50 ಡಾಲರ್ (14,091 ರುಪಾಯಿ)
  • ಸಿಂಗಾಪುರ: 187.30 ಸಿಂಗಾಪುರ್ ಡಾಲರ್ (14,076 ರುಪಾಯಿ)
  • ಕತಾರ್: 523.50 ಕತಾರಿ ರಿಯಾಲ್ (13,722 ರೂ)
  • ಸೌದಿ ಅರೇಬಿಯಾ: 536 ಸೌದಿ ರಿಯಾಲ್ (13,649 ರುಪಾಯಿ)
  • ಓಮನ್: 56.10 ಒಮಾನಿ ರಿಯಾಲ್ (13,922 ರುಪಾಯಿ)
  • ಕುವೇತ್: 43.34 ಕುವೇತಿ ದಿನಾರ್ (13,521 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 290 ರೂ
  • ಚೆನ್ನೈ: 300 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 290 ರೂ
  • ಜೈಪುರ್: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 300 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ಫಿಟ್​​ನೆಸ್​​ ಗುಟ್ಟೇನು? ಖಾಸಗಿ ಟ್ರೈನರ್ ಹಂಚಿಕೊಂಡ ಕುತೂಹಲಕಾರಿ ಮಾಹಿತಿ – Kannada News | Thalapathy Vijay’s personal trainer talks about Vijay’s food and workout

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಸಿನಿಮಾ ನಟನಾಗಿ ಅದ್ಧೂರಿ ಯಶಸ್ಸು ಅವರಿಗೆ ದೊರೆತಿದೆ. ವಿಜಯ್ ಅವರು ತಮಿಳುನಾಡಿನ ಸಾಂಪ್ರದಾಯಿಕ ರಾಜಕಾರಣಿಗಳಂತೆ ಅಲ್ಲದೆ, ಸಾಕಷ್ಟು ಫಿಟ್ ಆಗಿರುವ, ವಯಸ್ಸೂ ಇರುವ ಸಿಎಂ ಆಗಿದ್ದಾರೆ. ವಿಜಯ್ ಅವರಿಗೆ ಈಗ 50ರ ವಯಸ್ಸು, ಜಯಲಲಿತಾ ಬಿಟ್ಟರೆ ಅತಿ ಕಡಿಮೆ ವಯಸ್ಸಿಗೆ ತಮಿಳುನಾಡು ಸಿಎಂ ಆದವರು ವಿಜಯ್. 50ರ ಹರೆಯದಲ್ಲೂ ಅವರು 30ರ ಹರೆಯದವರಂತೆ ವಿಜಯ್ ಕಾಣುತ್ತಾರೆ. ಸಿನಿಮಾನಲ್ಲಿ ಫಿಟ್​​ನೆಸ್ ಬಹಳ ಮುಖ್ಯ, ಹಾಗೆಯೇ ರಾಜಕಾರಣಕ್ಕೂ ಸಹ. ವಿಜಯ್ ತಮ್ಮ ಫಿಟ್​​ನೆಸ್ ಹೇಗೆ ಮೇಂಟೇನ್ ಮಾಡುತ್ತಾರೆ, ಪ್ರತಿದಿನ ಅವರು ತಿನ್ನುವ ಆಹಾರ ಏನು? ಮಾಡುವ ವ್ಯಾಯಾಮಗಳೇನು? ಅವರ ಖಾಸಗಿ ಟ್ರೈನರ್ ನರೇಶ್ ಕುಮಾರ್ ಈ ಬಗ್ಗೆ ಮಾತನಾಡಿದ್ದಾರೆ.

ವಿಜಯ್ ಅವರ ಖಾಸಗಿ ಟ್ರೈನರ್ ನರೇಶ್ ಕುಮಾರ್ ಹೇಳಿರುವಂತೆ, ವಿಜಯ್ ಅವರು ತಮ್ಮ ಆಹಾರದ ವಿಷಯದಲ್ಲಿ ಅತೀ ಹೆಚ್ಚು ಶಿಸ್ತು ಪಾಲಿಸುತ್ತಾರೆ. ಅವರು ಅತಿಯಾಗಿ ತಿನ್ನುವುದಿಲ್ಲ, ಬಹಳ ಹಿತವಾಗಿ ಮಿತವಾಗಿ ತಿನ್ನುತ್ತಾರೆ. ವಿಶೇಷವಾಗಿ ಕರಿದ ಪದಾರ್ಥಗಳಿಂದ ದೂರವಿರುತ್ತಾರೆ. ಪ್ರೋಟೀನ್ ಸಮೃದ್ಧವಾಗಿರುವ ಆಹಾರ ಮತ್ತು ತಾಜಾ ತರಕಾರಿಗಳಿಗೆ ಅವರು ಹೆಚ್ಚಿನ ಆದ್ಯತೆ ನೀಡುತ್ತಾರಂತೆ. ರಾತ್ರಿ 7 ಗಂಟೆಯೊಳಗೆ ತಮ್ಮ ಊಟವನ್ನು ಮುಗಿಸುವುದು ಅವರ ಪ್ರಮುಖ ಆರೋಗ್ಯ ಸೂತ್ರಗಳಲ್ಲಿ ಒಂದು ಎಂದಿದ್ದಾರೆ ಅವರು.

ವಿಜಯ್ ಅವರಿಗೆ ಬಲ್ಕ್ ಬಾಡಿ ಬಿಲ್ಡಿಂಗ್​​ನಲ್ಲಿ ವಿಶ್ವಾಸವಿಲ್ಲವಂತೆ. ಅವರು ಆರೋಗ್ಯಕ್ಕಾಗಿ ಜಿಮ್ ಮಾಡುತ್ತಾರಂತೆ. ವಿಜಯ್ ಗಂಟೆಗಟ್ಟಲೆ ಜಿಮ್​​ನಲ್ಲಿ ಕಳೆಯುವುದಿಲ್ಲ ಬದಲಿಗೆ ವ್ಯವಸ್ಥಿತವಾಗಿ ತಮ್ಮ ದೇಹದ ಆರೋಗ್ಯ ಮತ್ತು ಫ್ಲೆಕ್ಸಿಬಿಲಿಟಿಗೆ ಬೇಕಾದ ವ್ಯಾಯಾಮಗಳನ್ನಷ್ಟೆ ಮಾಡುತ್ತಾರೆ. ಪ್ರತಿದಿನ ಕಾರ್ಡಿಯೋ ವ್ಯಾಯಾಮಗಳು ಮತ್ತು ವೇಯ್ಟ್ ಲಿಫ್ಟಿಂಗ್ ತಪ್ಪದೇ ಮಾಡುತ್ತಾರಂತೆ ವಿಜಯ್. ಶೂಟಿಂಗ್ ಎಷ್ಟೇ ತಡವಾದರೂ ಅಥವಾ ಎಷ್ಟೇ ದಣಿದಿದ್ದರೂ, ಅವರು ವ್ಯಾಯಾಮವನ್ನು ಮಾತ್ರ ಕೈಬಿಡುವುದಿಲ್ಲವಂತೆ.

ಇದನ್ನೂ ಓದಿ:ವಿಜಯ್ ಸೂಟು-ಸ್ಟಾಲಿನ್ ಪಂಚೆ: ಅಣ್ಣಾಮಲೈ ಸಖತ್ ಟಾಂಗ್

ಫಿಟ್‌ನೆಸ್ ಎನ್ನುವುದು ಕೇವಲ ದೈಹಿಕವಷ್ಟೇ ಅಲ್ಲ, ಅದು ಮಾನಸಿಕ ಶಿಸ್ತಿನಿಂದ ಬರುತ್ತದೆ ಎಂದು ನರೇಶ್ ವಿವರಿಸಿದ್ದಾರೆ. ವಿಜಯ್ ಅವರಿಗೆ ತಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇದೆ. ಸಕ್ಕರೆ ಅಂಶವಿರುವ ಪದಾರ್ಥಗಳನ್ನು ಮತ್ತು ಜಂಕ್ ಫುಡ್‌ಗಳನ್ನು ಅವರು ಸಂಪೂರ್ಣವಾಗಿ ತ್ಯಜಿಸಿದ್ದಾರೆ. ಸಿನಿಮಾ ಪಾತ್ರಗಳಿಗೆ ತಕ್ಕಂತೆ ತಮ್ಮ ದೇಹವನ್ನು ಹೇಗೆ ಬದಲಾಯಿಸಿಕೊಳ್ಳಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ.

ವಿಜಯ್ ನಟನೆಯ ‘ಮಾಸ್ಟರ್’ ಸಿನಿಮಾ ಕೆಲ ವರ್ಷಗಳ ಹಿಂದಷ್ಟೆ ಬಂದಿತ್ತು. ಆ ಸಿನಿಮಾನಲ್ಲಿ ಅವರು ಶರ್ಟ್​​ಲೆಸ್ ಆಗಿ ಸಹ ಕಾಣಿಸಿಕೊಂಡಿದ್ದರು. ವಿಜಯ್ ಅವರು ಸಿಕ್ಸ್ ಪ್ಯಾಕ್ ಮಾಡಿಲ್ಲವಾದರೂ ಬೊಜ್ಜು ರಹಿತದವಾದ ಫಿಟ್ ಆಗಿರುವ ದೇಹವನ್ನು ಮೇಂಟೇನ್ ಮಾಡಿದ್ದಾರೆ. ದಿನಪೂರ್ತಿ ದಣಿಯದೆ, ಉತ್ಸಾಹ, ಉಲ್ಲಾಸದಿಂದ ಓಡಾಡುತ್ತಿರಲು ಫಿಟ್​​ನೆಸ್​​ನ ಅವಶ್ಯಕತೆ ಇದೆ. ಸಿನಿಮಾಕ್ಕಾಗಿ ಮಾಡಿದ ವ್ಯಾಯಾಮ, ಕಸರತ್ತು ವಿಜಯ್ ಅವರಿಗೆ ರಾಜಕೀಯದಲ್ಲಿ ಖಂಡಿತ ನೆರವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Office Desk Vastu: ವೃತ್ತಿಜೀವನದ ಯಶಸ್ಸಿಗೆ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನಿಡಿ – Kannada News | Office Desk Vastu: Boost Career Growth and Positive Energy at Your Workplace

ವೃತ್ತಿಜೀವನದ ಯಶಸ್ಸಿಗೆ ವಾಸ್ತುImage Credit source: Pinterest

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರ ಎಷ್ಟು ಮುಖ್ಯವೋ ಹಾಗೆಯೇ ನಿಮ್ಮ ಕೆಲಸದ ಸ್ಥಳಗಳಲ್ಲಿಯೂ ಕೂಡ ವಾಸ್ತು ಅಷ್ಟೇ ಮುಖ್ಯ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಕೆಲಸ ಮಾಡುವ ಸ್ಥಳವು ನಮ್ಮ ಏಳಿಗೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಆದ್ದರಿಂದ ಆಫೀಸ್ ಡೆಸ್ಕ್ ಮೇಲೆ ಈ ಕೆಲವು ವಸ್ತುಗಳನ್ನು ಇರಿಸುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ.

ಗಣೇಶ ಅಥವಾ ಲಕ್ಷ್ಮಿಯ ಸಣ್ಣ ವಿಗ್ರಹ:

ಕೆಲಸದ ಸ್ಥಳದಲ್ಲಿ ವಿಘ್ನನಿವಾರಕ ಗಣೇಶನ ಸಣ್ಣ ವಿಗ್ರಹವನ್ನು ಇಡುವುದು ಅತ್ಯಂತ ಶುಭ. ಇದು ಅಡೆತಡೆಗಳನ್ನು ನಿವಾರಿಸಿ ಹೊಸ ಅವಕಾಶಗಳನ್ನು ತರುತ್ತದೆ. ಹಾಗೆಯೇ ಲಕ್ಷ್ಮಿಯ ಕೃಪೆಯಿಂದ ಆರ್ಥಿಕ ಲಾಭವಾಗುತ್ತದೆ ಎಂದು ನಂಬಲಾಗಿದೆ.

ಬಿದಿರಿನ ಗಿಡ (Bamboo Plant):

ಆಫೀಸ್ ಟೇಬಲ್ ಮೇಲೆ ಸಣ್ಣ ಬಿದಿರಿನ ಗಿಡವನ್ನು ಇಡುವುದು ವಾಸ್ತುವಿನಲ್ಲಿ ಬಹಳ ಜನಪ್ರಿಯ. ಇದು ಅದೃಷ್ಟದ ಸಂಕೇತವಾಗಿದ್ದು, ಸುತ್ತಮುತ್ತಲಿನ ನಕಾರಾತ್ಮಕತೆಯನ್ನು ಹೋಗಲಾಡಿಸಿ ಕೆಲಸದಲ್ಲಿ ಏಕಾಗ್ರತೆ ಹೆಚ್ಚಿಸಲು ಸಹಾಯ ಮಾಡುತ್ತದೆ.

ಸ್ಫಟಿಕದ ಪಿರಮಿಡ್ (Crystal Pyramid):

ಮೇಜಿನ ಮೇಲೆ ಸ್ಫಟಿಕದ (Crystal) ಪಿರಮಿಡ್ ಇಡುವುದರಿಂದ ಧನಾತ್ಮಕ ಶಕ್ತಿಯು ಕೇಂದ್ರೀಕೃತವಾಗುತ್ತದೆ. ಇದು ನಿಮ್ಮಲ್ಲಿನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಸವಾಲುಗಳನ್ನು ಎದುರಿಸುವ ಶಕ್ತಿ ನೀಡುತ್ತದೆ.

ಓಡುವ ಕುದುರೆಗಳ ಚಿತ್ರ ಅಥವಾ ಪ್ರತಿಮೆ:

ಓಡುತ್ತಿರುವ ಕುದುರೆಗಳು ವೇಗ ಮತ್ತು ಪ್ರಗತಿಯ ಸಂಕೇತ. ಮೇಜಿನ ಮೇಲೆ ಅಥವಾ ಎದುರಿನ ಗೋಡೆಯ ಮೇಲೆ ಏಳು ಓಡುವ ಕುದುರೆಗಳ ಚಿತ್ರವನ್ನು ಇಡುವುದರಿಂದ ವೃತ್ತಿಜೀವನದಲ್ಲಿ ವೇಗವಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ.

ತಾಜಾ ಹೂವುಗಳು:

ಯಾವಾಗಲೂ ಮೇಜಿನ ಮೇಲೆ ತಾಜಾ ಹೂವುಗಳನ್ನು (ವಿಶೇಷವಾಗಿ ಹಳದಿ ಅಥವಾ ಬಿಳಿ ಬಣ್ಣದ ಹೂವುಗಳು) ಇಡುವುದರಿಂದ ಮನಸ್ಸು ಪ್ರಫುಲ್ಲವಾಗಿರುತ್ತದೆ. ಆದರೆ ಹೂವುಗಳು ಬಾಡಿಹೋದ ತಕ್ಷಣ ಅವುಗಳನ್ನು ತೆಗೆದುಹಾಕಬೇಕು.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ದಿಕ್ಸೂಚಿ (Compass):

ನಿಮ್ಮ ಮೇಜಿನ ಉತ್ತರ ದಿಕ್ಕಿನಲ್ಲಿ ಸಣ್ಣ ದಿಕ್ಸೂಚಿಯನ್ನು ಇಡುವುದು ವೃತ್ತಿಜೀವನದ ಬೆಳವಣಿಗೆಗೆ ಪೂರಕವಾಗಿದೆ. ಇದು ನಿಮಗೆ ಹೊಸ ದಾರಿಗಳನ್ನು ತೋರಿಸುತ್ತದೆ ಎಂದು ನಂಬಲಾಗಿದೆ.

ಕೆಲವು ಪ್ರಮುಖ ನಿಯಮಗಳು:

ನಿಮ್ಮ ಮೇಜು ಯಾವಾಗಲೂ ಅಚ್ಚುಕಟ್ಟಾಗಿರಲಿ. ಅನಗತ್ಯ ಕಾಗದಪತ್ರಗಳು ಅಥವಾ ಹಳೆಯ ಫೈಲ್‌ಗಳನ್ನು ರಾಶಿ ಹಾಕಬೇಡಿ. ಕೆಲಸ ಮಾಡುವಾಗ ನಿಮ್ಮ ಮುಖವು ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿರುವುದು ವಾಸ್ತು ಪ್ರಕಾರ ಅತ್ಯಂತ ಶ್ರೇಷ್ಠ. ಪೆನ್ ಸ್ಟ್ಯಾಂಡ್ ಅಥವಾ ಕನ್ನಡಿ ಒಡೆದಿದ್ದರೆ ತಕ್ಷಣ ಬದಲಾಯಿಸಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:19 am, Tue, 12 May 26

Source link

ಆಡಳಿತ ವೈಫಲ್ಯ: ಪ್ರಧಾನಿ ಮೋದಿಯ ಟೀಕಿಸಿದ ಸಿಎಂ ಸಿದ್ದರಾಮಯ್ಯಗೆ ಅಂಕಿಅಂಶ ಸಮೇತ ತಿರುಗೇಟು ಕೊಟ್ಟ ಪ್ರಲ್ಹಾದ್ ಜೋಶಿ – Kannada News | Pralhad Joshi Slams CM Siddaramaiah Over PM Modi’s Bengaluru Speech Criticism; Highlights Karnataka’s Debt Crisis

ಪ್ರಧಾನಿ ಮೋದಿ, ಪ್ರಲ್ಹಾದ್ ಜೋಶಿ ಹಾಗೂ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)Image Credit source: TV9 Network

ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಬೆಂಗಳೂರಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ನಡುವೆ ವಾಕ್ಸಮರ ತಾರಕಕ್ಕೇರಿದೆ. ಪ್ರಧಾನಿ ಮೋದಿ ಭಾಷಣವು ‘ಸುಳ್ಳು ಮತ್ತು ದ್ವೇಷದಿಂದ ಕೂಡಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದರೆ, ಇದಕ್ಕೆ ಪ್ರತಿಯಾಗಿ ಪ್ರಲ್ಹಾದ್ ಜೋಶಿ ಅವರು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಪಟ್ಟಿ ಮಾಡುವ ಮೂಲಕ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಜಾಹೀರಾತುಗಳ ಹಿಂದೆ ಅಡಗಿರುವ ಕಾಂಗ್ರೆಸ್ ಸರ್ಕಾರದ ಅಸಲಿಯತ್ತು ಈಗ ಬಯಲಾಗಿದೆ ಎಂದು ಜೋಶಿ ಲೇವಡಿ ಮಾಡಿದ್ದಾರೆ.

ಮುಖ್ಯಾಂಶಗಳು

  • ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ‘ಗ್ಯಾರಂಟಿ ಆಧಾರಿತ ಸಾಲದ ಬಲೆ’ಗೆ ತಳ್ಳಿದೆ: ಪ್ರಲ್ಹಾದ್ ಜೋಶಿ ಆರೋಪ.
  • ರಾಜ್ಯದ ಸಾಲದ ಹೊರೆ ಹೆಚ್ಚುತ್ತಿದೆ, ರಸ್ತೆಗಳು ಗುಂಡಿಮಯವಾಗಿವೆ, ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಯಾಗಿಲ್ಲ: ಕೇಂದ್ರ ಸಚಿವ ಟೀಕೆ.
  • ಸಿದ್ದರಾಮಯ್ಯ ಸರ್ಕಾರವು ಜನರ ಮೇಲೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಹೊರೆ ಹೊರಿಸುತ್ತಿದೆ: ಜೋಶಿ ಕಿಡಿ

ಕಾಂಗ್ರೆಸ್ ಆಡಳಿತಕ್ಕೆ ಜೋಶಿ ಚಾಟಿ

ಸಿದ್ದರಾಮಯ್ಯ ಟೀಕೆಗಳಿಗೆ ತಿರುಗೇಟು ನೀಡಿದ ಪ್ರಲ್ಹಾದ್ ಜೋಶಿ, ‘ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಕಾಂಗ್ರೆಸ್ ಹದಗೆಡಿಸಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಕಾಂಗ್ರೆಸ್ ಸಚಿವರು ಶಾಸಕರನ್ನು ಎಣಿಸುವುದರಲ್ಲೇ (ಪಕ್ಷದೊಳಗಿನ ಅಧಿಕಾರ ಹಂಚಿಕೆ ಕಿತ್ತಾಟ ಉಲ್ಲೇಖಿಸಿ) ನಿರತರಾಗಿದ್ದಾರೆ’ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿವೆ ಮತ್ತು ಗುತ್ತಿಗೆದಾರರು ಬಿಲ್ ಪಾವತಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಆಡಳಿತ ಹಳಿ ತಪ್ಪಿರುವುದಕ್ಕೆ ಸಾಕ್ಷಿ ಎಂದು ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ 48 ಅಗತ್ಯ ವಸ್ತುಗಳ ಬೆಲೆ ಏರಿಕೆ: ಜೋಶಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಲು, ಇಂಧನ, ವಿದ್ಯುತ್ ಸೇರಿದಂತೆ ಸುಮಾರು 48 ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆಯಾಗಿದೆ ಎಂದು ಜೋಶಿ ಆರೋಪಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತದೆ, ಆದರೆ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಭಾರಿ ಹೊರೆ ಹೊರಿಸುತ್ತಿದೆ. ಇದು ಜನರಿಗೆ ಮಾಡಿದ ದ್ರೋಹ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯವರು ದೇಶದ ಹಿತದೃಷ್ಟಿಯಿಂದ ನೀಡಿದ ಕರೆಗಳನ್ನು ಸಿದ್ದರಾಮಯ್ಯ ಅವರು ಲೇವಡಿ ಮಾಡುತ್ತಿರುವುದು ಅವರ ಜವಾಬ್ದಾರಿಯಿಲ್ಲದ ನಾಯಕತ್ವವನ್ನು ತೋರಿಸುತ್ತದೆ ಎಂದು ಜೋಶಿ ಆಕ್ಷೇಪಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದ ಖಜಾನೆ ಲೂಟಿ ಮಾಡುತ್ತಿದೆ ಕಾಂಗ್ರೆಸ್, ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ: ಮೋದಿ ವ್ಯಂಗ್ಯ!

ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತದ ಆರ್ಥಿಕತೆ ಕುಸಿತ ಕಂಡಿದ್ದನ್ನು ನೆನಪಿಸಿದ ಜೋಶಿ, ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ. ಬೇರೆಯವರನ್ನು ಪ್ರಶ್ನೆ ಮಾಡುವ ಮುನ್ನ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಒಳಗಿನ ಅಧಿಕಾರ ದಾಹ, ಕಿತ್ತಾಟ ಮತ್ತು ಆಡಳಿತದ ಪಾರ್ಶ್ವವಾಯುವಿಗೆ ಉತ್ತರ ನೀಡಲಿ ಎಂದು ಅವರು ಸವಾಲು ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಾನು, ವಿಜಯ್, ಸ್ಪೀಕರ್ ಒಂದೇ ಕಾಲೇಜಲ್ಲಿ ಓದಿದವರು’: ಕಾಲೇಜು ದಿನಗಳ ವಿಧಾನಸಭೆಯಲ್ಲಿ ನೆನಪಿಸಿದ ಉದಯನಿಧಿ ಹೇಳಿದ್ದೇನು ನೋಡಿ!

ಚೆನ್ನೈ, ಮೇ 12: ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಹಳೆಯ ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ್ದು ಗಮನ ಸೆಳೆದಿದೆ. ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ವಿಜಯ್ ಅವರ ಕಾಲೆಳೆಯುತ್ತಲೇ, ತಮಿಳುನಾಡು ರಾಜಕೀಯದಲ್ಲಿ ಡಿಎಂಕೆ ಎಷ್ಟು ಅನುಭವಿ ಪಕ್ಷ ಎಂಬ ಸಂದೇಶವನ್ನೂ ರವಾನಿಸಿದರು.

‘ನಾನು, ಸಿಎಂ ವಿಜಯ್ ಮತ್ತು ಸ್ಪೀಕರ್ ಪ್ರಭಾಕರ್ ಎಲ್ಲರೂ ಒಂದೇ ಕಾಲೇಜಿನಲ್ಲಿ ಓದಿದವರು. ಆದರೆ ಆಡಳಿತದ ವಿಷಯಕ್ಕೆ ಬಂದರೆ ಡಿಎಂಕೆ ‘ಸೀನಿಯರ್ ಬ್ಯಾಚ್’. ಆಡಳಿತ ಹೇಗೆ ನಡೆಸಬೇಕು ಎಂಬುದನ್ನು ನಾವು ನಿಮಗೆ ಕಲಿಸಲು ಸಿದ್ಧರಿದ್ದೇವೆ’ ಎಂದು ಉದಯನಿಧಿ ಸ್ಟಾಲಿನ್ ಸಿಎಂ ವಿಜಯ್ ಉದ್ದೇಶಿಸಿ ಹೇಳಿದರು. ಇದೇ ವೇಳೆ, ವಿಜಯ್ ತುಟಿಯಂಚಿನಲ್ಲಿ ಕಿರು ನಗು ಮೂಡಿದ್ದು ಕಾಣಿಸಿತು. ಈ ಮಾತಿನ ಮೂಲಕ ವಿಜಯ್ ಅವರು ರಾಜಕೀಯಕ್ಕೆ ಹೊಸಬರು ಮತ್ತು ಡಿಎಂಕೆ ಅನುಭವದ ಮುಂದೆ ಇನ್ನೂ ಕಲಿಯುವುದು ಸಾಕಷ್ಟಿದೆ ಎಂದು ಉದಯನಿಧಿ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ! – Kannada News | Public Positively Responds To PM Modi’s Appeal To Save Fuel, Uses Public Transport

ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಾದ ಮೆಟ್ರೋ ಮತ್ತು ಬಸ್‌ಗಳನ್ನು ಹೆಚ್ಚಾಗಿ ಉಪಯೋಗಿಸುವಂತೆ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.

ಬೆಂಗಳೂರಿನ ಪ್ರಯಾಣಿಕ ಮಂಜುನಾಥ್ ಅವರು ಪ್ರಧಾನಿಯವರ ಸಲಹೆ ಪಾಲಿಸಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರು ತಮ್ಮ ಬೈಕ್ ಬಿಟ್ಟು ಮೆಟ್ರೋದಲ್ಲಿ ಕಚೇರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ಬಳಸುವುದರಿಂದ ವೈಯಕ್ತಿಕವಾಗಿ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಅಲ್ಲದೆ, ದೇಶದ ಇಂಧನ ಆಮದನ್ನು ಕಡಿಮೆ ಮಾಡಲು ಇದು ಸಹಕಾರಿಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳು ಮತ್ತು ಇಂಧನದ ಬೆಲೆ ಏರಿಕೆಗಳನ್ನು ಗಮನಿಸಿದಾಗ, ಈ ಸಲಹೆ ದೇಶದ ಆರ್ಥಿಕತೆಗೆ ಅತ್ಯಂತ ಮಹತ್ವದ್ದು ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿಯವರ ಸಲಹೆಗಳು ದೇಶಕ್ಕೆ ಮತ್ತು ಜನರಿಗೆ ಒಳ್ಳೆಯದನ್ನೇ ಹೇಳುತ್ತವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಬಳಕೆ ಇಂಧನ ಉಳಿತಾಯಕ್ಕೆ ಉತ್ತಮ ಮಾರ್ಗವಾಗಿದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದ್ರಾಸ್ ಹೈಕೋರ್ಟ್‌ನಿಂದ TVK ಶಾಸಕ ಶ್ರೀನಿವಾಸ ಸೇತುಪತಿಗೆ ಶಾಕ್: ವಿಶ್ವಾಸ ಮತ ಯಾಚನೆಯಲ್ಲಿ ಭಾಗವಹಿಸದಂತೆ ನಿರ್ಬಂಧ – Kannada News | Madras High Court Restrains TVK MLA Srinivasa Sethupathi From Floor Test Amidst Ballot Irregularity Claims

ಚೆನ್ನೈ, ಮೇ 12: ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮದ್ರಾಸ್ ಹೈಕೋರ್ಟ್ ತಿರುಪತ್ತೂರು ಕ್ಷೇತ್ರದ ಟಿವಿಕೆ ಶಾಸಕ ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ವಿಶ್ವಾಸ ಮತ ಯಾಚನೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದೆ. ಈ ಆದೇಶವು ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಮಹತ್ವ ಪಡೆದಿದೆ. ಪೆರಿಯಾ ಕೃಪನ್ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಶ್ರೀನಿವಾಸ ಸೇತುಪತಿ ವಿರುದ್ಧ ಅಂಚೆ ಮತಪತ್ರಗಳಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿದ್ದರು. ತಿರುಪತ್ತೂರು ವಿಧಾನಸಭಾ ಕ್ಷೇತ್ರ ಸಂಖ್ಯೆ 185ರ ಮತಗಳನ್ನು ಬೆಲ್ಲೂರು ಜಿಲ್ಲೆಯ ತಿರುಪತ್ತೂರು ಕ್ಷೇತ್ರ ಸಂಖ್ಯೆ 50ಕ್ಕೆ ತಪ್ಪಾಗಿ ವರ್ಗಾಯಿಸಲಾಗಿದೆ ಎಂಬುದು ಅರ್ಜಿಯಲ್ಲಿದ್ದ ಪ್ರಮುಖ ಆಪಾದನೆಯಾಗಿತ್ತು.ಚುನಾವಣಾ ಆಯೋಗವು ಆರಂಭದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಮದ್ರಾಸ್ ಹೈಕೋರ್ಟ್ ಪೆರಿಯಾ ಕೃಪನ್ ಅವರ ದೂರನ್ನು ಬೆಂಬಲಿಸಲು ಸಾಕಷ್ಟು ಪುರಾವೆಗಳಿವೆ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಶ್ರೀನಿವಾಸ ಸೇತುಪತಿ ಅವರು ವಿಶ್ವಾಸ ಮತ ಯಾಚನೆಯಲ್ಲಿ ಪಾಲ್ಗೊಳ್ಳಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೆ, ಎಲ್ಲಾ ಅಂಚೆ ಮತಪತ್ರಗಳನ್ನು ಸುರಕ್ಷಿತವಾಗಿಡಲು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಲು ಸಹ ನ್ಯಾಯಾಲಯ ಸೂಚಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ರಾಜ ಸಾಬ್’ ಸಣ್ಣ ಸಿನಿಮಾ ಎಂದ ಕಾಮಿಡಿಯನ್; ಶುರುವಾಯ್ತು ಟೀಕೆ – Kannada News | Sapthagiri’s ‘Small Film’ Comment on Prabhas’s ‘The Raja Saab’ Sparks Major Fan Outcry

ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯನಟ ಸಪ್ತಗಿರಿ ಅವರು ಇತ್ತೀಚೆಗೆ ತಮ್ಮ ‘ಪುರುಷ’ ಚಿತ್ರದ ಪ್ರಚಾರದ ವೇಳೆ ನೀಡಿದ ಹೇಳಿಕೆಯೊಂದು ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ‘ದಿ ರಾಜಾ ಸಾಬ್’ ಚಿತ್ರವನ್ನು ಸಪ್ತಗಿರಿ ಅವರು ‘ಸಣ್ಣ ಸಿನಿಮಾ’ ಎಂದು ಕರೆದಿದ್ದಾರೆ. ಪ್ರಭಾಸ್ ಅವರಂತಹ ಪ್ಯಾನ್ ಇಂಡಿಯಾ ಸ್ಟಾರ್ ಚಿತ್ರವನ್ನು ಹೀಗೆ ಹಗುರವಾಗಿ ಬಿಂಬಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮಾಧ್ಯಮಗೋಷ್ಠಿಯಲ್ಲಿ ತಮ್ಮ ಸಿನಿಮಾ ಜರ್ನಿ ಬಗ್ಗೆ ಮಾತನಾಡಿದ ಸಪ್ತಗಿರಿ, ‘ನಾನು ಈಗ ಕೇವಲ ಹಣಕ್ಕಾಗಿ ನಟಿಸುತ್ತಿಲ್ಲ, ವೃತ್ತಿಪರ ತೃಪ್ತಿಗಾಗಿ ಪಾತ್ರಗಳನ್ನು ಆರಿಸಿಕೊಳ್ಳುತ್ತಿದ್ದೇನೆ. ಇತ್ತೀಚೆಗೆ ಸರಸ್ವತಿ, ದಿ ರಾಜಾ ಸಾಬ್ ಮತ್ತು ಕೊಕ್ಕರೊಕೊದಂತಹ ಚಿತ್ರಗಳನ್ನು ಮಾಡಿದ್ದೇನೆ. ಇವು ಸಣ್ಣ ಪ್ರಮಾಣದ ಚಿತ್ರಗಳಾದ ಕಾರಣ ಜನರನ್ನು ಸರಿಯಾಗಿ ತಲುಪಲಿಲ್ಲ. ಅದೇ ದೊಡ್ಡ ಚಿತ್ರಗಳಾಗಿದ್ದರೆ ಅವುಗಳ ವ್ಯಾಪ್ತಿ ಚೆನ್ನಾಗಿರುತ್ತಿತ್ತು’ ಎಂದಿದ್ದಾರೆ. ಪ್ರಭಾಸ್ ಅವರ ಬಿಗ್ ಬಜೆಟ್ ಸಿನಿಮಾವನ್ನು ಸಣ್ಣ ಚಿತ್ರಗಳ ಸಾಲಿಗೆ ಸೇರಿಸಿದ ಅವರ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಆಗುತ್ತಿವೆ.

ಇನ್ನು ಸಪ್ತಗಿರಿ ಅವರ ವೃತ್ತಿಜೀವನದ ಬಗ್ಗೆ ನೋಡುವುದಾದರೆ, ‘ಜಬರ್ದಸ್ತ್’ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಇವರು, ನಂತರ ಹಾಸ್ಯನಟರಾಗಿ ‘ವೆಂಕಟಾದ್ರಿ ಎಕ್ಸ್‌ಪ್ರೆಸ್’, ‘ದೃಶ್ಯಂ’ನಂತಹ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದರು. ನಾಯಕನಾಗಿ ‘ಸಪ್ತಗಿರಿ ಎಲ್‌ಎಲ್‌ಬಿ’ಯಂತಹ ಸಿನಿಮಾಗಳಲ್ಲಿ ಅದೃಷ್ಟ ಪರೀಕ್ಷೆ ನಡೆಸಿದರೂ ಅವು ಕೈ ಹಿಡಿಯಲಿಲ್ಲ. ಹೀಗಾಗಿ ಮತ್ತೆ ಪೋಷಕ ನಟ ಮತ್ತು ಹಾಸ್ಯನಟನಾಗಿ ಬ್ಯುಸಿಯಾಗಿದ್ದಾರೆ. ಚಿತ್ರರಂಗಕ್ಕೆ ಬಂದು 18 ವರ್ಷ ಕಳೆದರೂ ತಮಗೆ ಇನ್ನೂ ಸರಿಯಾದ ಬ್ರೇಕ್ ಸಿಕ್ಕಿಲ್ಲ ಎಂಬ ಅಸಮಾಧಾನ ಅವರ ಮಾತಿನಲ್ಲಿ ವ್ಯಕ್ತವಾಯಿತು.

ಇದನ್ನೂ ಓದಿ: ‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

ಸದ್ಯ ಸಪ್ತಗಿರಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಪುರುಷ’ ಸಿನಿಮಾ ಮೇ 22 ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಯಶಸ್ಸಿನ ನಿರೀಕ್ಷೆಯಲ್ಲಿರುವ ಅವರು, ಹೊಸ ರೀತಿಯ ಭಾವನಾತ್ಮಕ ಪಾತ್ರಗಳನ್ನು ಮಾಡಲು ಬಯಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ, ರಾಜಾ ಸಾಬ್ ಚಿತ್ರದ ಬಗ್ಗೆ ಅವರು ನೀಡಿದ ಹೇಳಿಕೆ ಮಾತ್ರ ಪ್ರಭಾಸ್ ಅಭಿಮಾನಿಗಳನ್ನು ಕೆರಳಿಸಿದ್ದು, ಸಪ್ತಗಿರಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಾರೆಯೇ ಎಂದು ಕಾದು ನೋಡಬೇಕಿದೆ. ಅವರ ಕ್ಷಮೆಗೆ ಆಗ್ರಹ ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link