Headlines

“ನಾವು ಯಾವಾಗ ಇರ್ತೀವೋ ಗೊತ್ತಿಲ್ಲ..”: ಸಾವಿನ ಬಗ್ಗೆ ಸುಳಿವು ನೀಡಿದ್ದ ಸಚಿವ ಸುಧಾಕರ್ – Kannada News | Minister D. Sudhakar’s Last Speech Goes Viral: “Life is Like a Bulb, It May Switch Off Anytime

ಚಿತ್ರದುರ್ಗ ಮೇ.11: ಕರ್ನಾಟಕ ಸರ್ಕಾರದ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ನಂತರ, ಅವರು ಇತ್ತೀಚೆಗೆ ಶಾರದಾ ಆಶ್ರಮದ ಭೂಮಿಪೂಜೆ ವೇಳೆ ಆಡಿದ್ದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಜೀವನದ ಕ್ಷಣಿಕತೆಯ ಬಗ್ಗೆ ಅವರು ಆಡಿದ್ದ ಈ ಮಾತುಗಳು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿವೆ. “ನಾವು ಇವತ್ತು ಇರ್ತೀವೋ ಇಲ್ಲವೋ ಗೊತ್ತಿಲ್ಲ. ನಮ್ಮ ಜೀವನ ಒಂದು ರೀತಿ ಬಲ್ಬ್ ಇದ್ದಂತೆ, ಯಾವಾಗ ಸ್ವಿಚ್ ಆಫ್ ಆಗುತ್ತೋ ಗೊತ್ತಿಲ್ಲ” ಎಂದು ಹೇಳುವ ಮೂಲಕ…

Read More

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ! – Kannada News | Security Breach: Explosives Found on PM Modi’s Route Near Art of Living in Bengaluru

ರಾಮನಗರ, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು (Explosive) ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9ಗೆ ಲಭ್ಯವಾಗಿದೆ. ಮುಖ್ಯಾಂಶಗಳು ಮೋದಿ ಬರುವ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಪತ್ತೆಯಾಗಿ ಆತಂಕ.  ಪೊಲೀಸ್ ಪೇದೆಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ; ಬಾಂಬ್ ಸ್ಕ್ವಾಡ್‌ನಿಂದ ತೀವ್ರ ತಪಾಸಣೆ….

Read More

Suryakumar Yadav: ನಮ್ಮ ಸೋಲಿಗೆ ಇಂದೊಂದೇ ಕಾರಣ! – Kannada News | Suryakumar yadav post match interview After RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 20ನೇ ಓವರ್​ನ ಕೊನೆಯ ಎಸೆತದಲ್ಲಿ ಚೇಸ್ ಮಾಡಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಸೋಲಿನ ಬಳಿಕ…

Read More

ಲೈವ್​​​ನಲ್ಲೇ ಕಣ್ಣೀರು ಹಾಕಿದ ಕಿಯಾರಾ ಅಡ್ವಾಣಿ – Kannada News | Kiara Advani Gets Emotional About Her Post Pregnancy Journey and the Importance of Self Love

ತಾಯಿಯಾದ ನಂತರದ ಜರ್ನಿ ಬಗ್ಗೆ ಕಿಯಾರಾ ರಾಜ್ ಶಮಾನಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ‘ನಾವು ಜೀವನಪೂರ್ತಿ ಇತರರಿಗಾಗಿ ಬದುಕುತ್ತೇವೆ, ಆದರೆ ನಮ್ಮೊಂದಿಗೆ ನಾವು ಹೊಂದಿರಬೇಕಾದ ಸಂಬಂಧವನ್ನು ಮರೆತುಬಿಡುತ್ತೇವೆ. ಈಗ ನಾನು ಅಂತಿಮವಾಗಿ ನನಗಾಗಿ ಸಮಯ ಮೀಸಲಿಡುವುದನ್ನು ಕಲಿಯುತ್ತಿದ್ದೇನೆ’ ಎಂದು ಕಿಯಾರಾ ಕಣ್ಣೀರು ಹಾಕಿದ್ದಾರೆ.  ಈ ಬದಲಾವಣೆಯು ಅವರ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದೆಂದು ಅವರು ಹೇಳಿಕೊಂಡಿದ್ದಾರೆ. 2025ರ ಜುಲೈ 15ರಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದರು. ಸರಾಯ ಎಂದು ಮಗುವಿಗೆ ಹೆಸರು ಇಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

‘ಟಾಕ್ಸಿಕ್’ ಶೂಟಿಂಗ್ ವೇಳೆ ವ್ಯಾನ್ ಅಲ್ಲಿ ಕುಳಿತು ಹೊಟ್ಟೆಯಲ್ಲಿರೋ ಮಗು ಜೊತೆ ಮಾತನಾಡುತ್ತಿದ್ದ ಕಿಯಾರಾ – Kannada News | Kiara Advani’s Motherhood Journey: Filming ‘Toxic’ Pregnant, Emotional Battles and Sidharth’s Support

ಬಾಲಿವುಡ್ ಸುಂದರಿ ಕಿಯಾರಾ ಅಡ್ವಾಣಿ ಈಗ ಕೇವಲ ನಟಿಯಲ್ಲ, ಅವರು ತಾಯಿ ಕೂಡ ಹೌದು. ಕಳೆದ ವರ್ಷ ಜುಲೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಕಿಯಾರಾ ಬಣ್ಣದ ಲೋಕದಿಂದ ತುಸು ದೂರವಿದ್ದರು. ಇದೀಗ ತಾಯ್ತನದ ನಂತರದ ತಮ್ಮ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿರುವ ಅವರು, ಆ ನೋವು ಮತ್ತು ಸವಾಲುಗಳನ್ನು ನೆನೆದು ಸಂದರ್ಶನದ ವೇಳೆ ಕಣ್ಣೀರಿಟ್ಟಿದ್ದಾರೆ. 1. ಟಾಕ್ಸಿಕ್ ಶೂಟಿಂಗ್​​ನಲ್ಲಿ ಭಾಗಿ ಆಗಿದ್ದ ಕಿಯಾರಾ 2. ಪ್ರೆಗ್ನೆಂಟ್ ಆಗಿಯೇ ಶೂಟ್ ಮಾಡಿದ್ದ…

Read More

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ! – Kannada News | Belagavi Farmer’s Son Basavaraj Kempawad Secures AIR 1 in UPSC IFS Exam

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ! ಬೆಳಗಾವಿ, ಮೇ 11: ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದಲ್ಲಿ ರೈತನ ಮಗನಾದ ಬಸವರಾಜ್ ಧರೇಪ್ಪ ಕೆಂಪವಾಡ UPSC ನಡೆಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದು, ಇಡೀ ರಾಜ್ಯಕ್ಕೆ, ವಿಶೇಕ್ಷವಾಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಶುಕ್ರವಾರ ಪ್ರಕಟವಾದ ಫಲಿತಾಂಶದಲ್ಲಿ ಬಸವರಾಜ್ ಈ ಮಹೋನ್ನತ ಸಾಧನೆ ಮಾಡಿದ್ದಾರೆ. ಒಬ್ಬ ಸಾಮಾನ್ಯ ರೈತನ ಮಗನಾಗಿ, ಗ್ರಾಮೀಣ ಹಿನ್ನೆಲೆಯಿಂದ ಬಂದು ಈ ಸಾಧನೆ…

Read More

ಮುಂಬೈ ಇಂಡಿಯನ್ಸ್​​ಗೆ ಮಧ್ಯ ಬೆರಳು ತೋರಿಸಿದ ಟಿಮ್ ಡೇವಿಡ್ – Kannada News | RCB vs MI: Tim David shows middle finger

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಿಮ್ ಡೇವಿಡ್ ಅಶ್ಲೀಲವಾಗಿ ಸಂಭ್ರಮಿಸಿದ್ದಾರೆ. ಅದು ಸಹ ಮುಂಬೈ ಇಂಡಿಯನ್ಸ್ ತಂಡವನ್ನು ಗುರಿಯಾಗಿಸಿಕೊಂಡು. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 15 ರನ್​ಗಳು ಬೇಕಿತ್ತು. ಅದರಂತೆ ಅಂತಿಮ ಎಸೆತದಲ್ಲಿ 2 ರನ್​ಗಳ ಅವಶ್ಯಕತೆ…

Read More

9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ: ಟ್ರಂಪ್-ಕ್ಸಿ ಜಿನ್‌ಪಿಂಗ್ ಮಹತ್ವದ ಮಾತುಕತೆ! – Kannada News | US China Summit: Trump & Xi Jinping Discuss Trade, Taiwan and Middle East Crisis

ಬೀಜಿಂಗ್, ಮೇ.11: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 13 ರಿಂದ 15 ರವರೆಗೆ ಚೀನಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಪ್ರಕಟಿಸಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಅಮೆರಿಕ ಅಧ್ಯಕ್ಷರೊಬ್ಬರು ಚೀನಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿಯು ಅತ್ಯಂತ ನಿರ್ಣಾಯಕ ಸಮಯದಲ್ಲಿ ನಡೆಯುತ್ತಿದೆ. ಪ್ರಸ್ತುತ ಅಮೆರಿಕ-ಇಸ್ರೇಲ್-ಇರಾನ್ ನಡುವೆ ಸುದೀರ್ಘ ಯುದ್ಧ ನಡೆಯುತ್ತಿದ್ದು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಜಾಗತಿಕ…

Read More

ವಿಜಯ್ ಪ್ರಮಾಣವಚನ ಸ್ವೀಕರಿಸುವಾಗ ಭಾವುಕರಾದ ತ್ರಿಷಾ ಕೃಷ್ಣನ್ – Kannada News | Thalapathy Vijay CM: Trisha Krishnan’s Emotional Presence at Oath Ceremony Goes Viral

ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಬದಲಾವಣೆ ಆಗಿದೆ. ನಟ ವಿಜಯ್ ದಳಪತಿ ನೇರವಾಗಿ ರಾಜಕೀಯ ಪ್ರವೇಶಿಸಿದರು ಮತ್ತು ಅವರ ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿತು. ದಳಪತಿ ವಿಜಯ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಕಣ್ಣುಗಳು ಈ ಪ್ರಮಾಣ ವಚನ ಸಮಾರಂಭದ ಮೇಲೆ ಇದ್ದವು. ವೇದಿಕೆ ಮೇಲೆ ವಿಜಯ್ ಪ್ರಮಾಣ ವಚನ ಸ್ವೀಕರಿಸುವಾಗ ತ್ರಿಷಾ ಭಾವುಕರಾದರು. ವಿಜಯ್ ದಳಪತಿ ಅವರ ಗೆಳತಿ ಎಂದು ಹೇಳಲಾಗುವ ತ್ರಿಶಾ ಕೃಷ್ಣನ್ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದರು. ವಿಜಯ್ ಮತ್ತು…

Read More

ಈ ಗೆಲುವಿಗೆ ನಾವು ಅರ್ಹರಲ್ಲ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ! – Kannada News | Rajat patidar post match interview after RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ 2 ರನ್​ ಬಾರಿಸಿ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ…

Read More