Category Archives: Blog

Your blog category

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ – Kannada News | Congress TD Rajegowda moves Supreme Court challenging his ouster as Sringeri MLA after vote recount

ನವದೆಹಲಿ.ಚಿಕ್ಕಮಗಳೂರು, (ಮೇ 08): ಶೃಂಗೇರಿ ವಿಧಾನಸಭೆ (sringeri assembly constituency) ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್ ಟಿಡಿ ರಾಜೇಗೌಡ ( TD Rajegowda) ಅವರು ಸುಪ್ರೀಂಕೋರ್ಟ್​ (supreme court)  ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕಾನೂನೂ ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ವೇಳೆ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದೀಗ ರಾಜೇಗೌಡ ಸಹ ಮರು ಎಣಿಕೆಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ತ್ವರಿತ ವಿಚಾರಣೆಗೆ ಕೋರಿಕೆಯನ್ನು ಪರಿಗಣಿಸುವುದಾಗಿ ಹೇಳಿದೆ.

  • ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ವಿವಾದ
  • ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ ಟಿ.ಡಿ ರಾಜೇಗೌಡ
  • ಮರು ಎಣಿಕೆಗೆ ಆದೇಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ
  • ಮೇ 11 ರಂದು ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡುವಂತೆ ವಕೀಲ ದೇವದತ್ ಕಾಮತ್ ಮೂಲಕ ಅರ್ಜಿ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಬಿಜೆಪಿಯ ಡಿಎನ್‌ ಜೀವರಾಜ್ ಅವರು ಹೈಕೋರ್ಟ್​​ ಮೆಟ್ಟಿಲೇರಿದ್ದು, ಸುಮಾರು ಎರಡುವರೆ ವರ್ಷಗಳ ಸತತ ವಿಚಾರಣೆ ಬಳಿಕ ಅಂತಿಮವಾಗಿ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಬಳಿಕ ಕೋರ್ಟ್ ಆದೇಶದಂತೆ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಅವರು ಗೆಲುವು ಸಾಧಿಸಿದ್ದು, ನಿನ್ನೆ (ಮೇ 07) ಪ್ರಮಾಣ ವಚನ ಸ್ವೀಕರಿಸಿದರು.  ಇದರ ಬೆನ್ನಲ್ಲೇ ಇದೀಗ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್​​​ನ ರಾಜೇಗೌಡ ಸಹ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ‌ ಮತ ಎಣಿಕೆ ವಿವಾದ: ಜೋರಾದ ಅಣೆ ಪ್ರಮಾಣ ರಾಜಕೀಯ

ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಮರುಎಣಿಕೆ ಪ್ರಕ್ರಿಯೆಯನ್ನು ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ರಾಜೇಗೌಡ ಪರ ವಕೀಲ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದಾರೆ. ಈ ವಾದ ಆಲಿಸಿದ ಸುಪ್ರೀಂಕೋರ್ಟ್, ನಾವು ಇಂತಹ ವಿಷಯಗಳಲ್ಲಿ ತಡೆಯಾಜ್ಞೆ ನೀಡುತ್ತೇವೆ. ಆದರೆ ನಿಮ್ಮ ವಿಷಯವನ್ನು ನಾವು ಪರಿಶೀಲಿಸುತ್ತೇವೆ ಎಂದು ತಿಳಿಸಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್​​​ನ ಟಿಡಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರನ್ನು 201 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದರು. ಆದ್ರೆ, ಕಾನೂನು ಹೋರಾಟ ನಡೆಸಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ; ಹೇಗೆ ಗೊತ್ತಾ? – Kannada News | Now File BESCOM Electricity Complaints Through Social Media: Here’s How

ಬೆಂಗಳೂರು, ಮೇ 08: ಯಾವುದೇ ರೀತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕೂಡಲೇ ಬೆಸ್ಕಾಂ 24×7 ಸಹಾಯವಾಣಿ 1912ಕ್ಕೆ ಕರೆ ಮಾಡುತ್ತೇವೆ. ಸಂಪರ್ಕ ಸಾಧ್ಯವಾಗದಿದ್ದರೆ ಹೇಗೆ ಎಂಬ  ಚಿಂತೆ ಎದುರಾಗಿತ್ತು. ಆದರೆ ಇದೀಗ ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಅಥವಾ ಎಕ್ಸ್ (ಟ್ವಿಟರ್) ಖಾತೆ ಮೂಲಕ ದೂರು ಸಲ್ಲಿಸಬಹುದಾಗಿದೆ. ಆ ಮೂಲಕ ಯಾವುದೇ ಸಮಸ್ಯೆಗಳಿದ್ದರೂ ಸೋಶಿಯಲ್ ಮೀಡಿಯಾ (Social media) ಮೂಲಕ ದೂರು ನೀಡುವಂತೆ ಬೆಸ್ಕಾಂ (BESCOM) ಗ್ರಾಹಕರಿಗೆ ಮನವಿ ಮಾಡಿದೆ.

ಮುಖ್ಯಾಂಶಗಳು

  • ಸೋಶಿಯಲ್ ಮೀಡಿಯಾ ಮೂಲಕವೂ ಬೆಸ್ಕಾಂಗೆ ದೂರು ಸಲ್ಲಿಸಬಹುದು.
  • ಪ್ರತಿ ಜಿಲ್ಲೆಗಳಿಗೆ ವಿಶೇಷ ವಾಟ್ಸ್‌ಆ್ಯಪ್‌ ಸಹಾಯವಾಣಿ ಲಭ್ಯ.
  • ಗ್ರಾಹಕರ ನೆರವಿಗೆ ಸನ್ನದ್ಧವಾದ ಬೆಸ್ಕಾಂ.

ದೂರು ನೀಡುವುದೇಗೆ?

ದೂರು ನೀಡುವಾಗ ಗ್ರಾಹಕರು ತಮ್ಮ ಐಡಿ, ನಿಖರವಾದ ವಿಳಾಸ ಮತ್ತು ಸಮಸ್ಯೆಯ ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಬೇಕು. ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ, ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗೆ ಕಳುಹಿಸುವ ಮೂಲಕ ತ್ವರಿತ ಪರಿಹಾರ ಪಡೆಯಬಹುದಾಗಿದೆ.

ಬೆಸ್ಕಾಂ ಟ್ವೀಟ್​

ಇನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್​ ಆಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ಮೂಲಕ ದೂರುಗಳನ್ನು ಸ್ವೀಕರಿಸಲು ಮುಂದಾಗಿದೆ. ಮಳೆಗಾಲದ ತುರ್ತು ಸಮಯದಲ್ಲಿ 1912 ಸಹಾಯವಾಣಿ ಕರೆ ಸಂಪರ್ಕ ಸಾಧ್ಯವಾಗದಿದ್ದರೆ ಗ್ರಾಹಕರು ಬೆಸ್ಕಾಂನ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್  facebook.com/bescomblr ಮತ್ತು ಎಕ್ಸ್ (ಟ್ವಿಟರ್) x.com/NammaBESCOM ಮೂಲಕ ದೂರು ಸಲ್ಲಿಸಿ ಶೀಘ್ರ ಪರಿಹಾರ ಪಡೆಯಬಹುದಾಗಿದೆ.

ಜಿಲ್ಲಾವಾರು ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳು

ಬೆಂಗಳೂರು ನಗರ ಜಿಲ್ಲೆ ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013 ಮತ್ತು ಉತ್ತರ ವೃತ್ತ: 8277884014. ಕೋಲಾರ: 8277884015, ಚಿಕ್ಕಬಳ್ಳಾಪುರ: 8277884016, ಬಿಆರ್​ಸಿ: 8277884017, ತುಮಕೂರು: 8277884019, ದಾವಣಗೆರೆ: 8277884021, ಚಿತ್ರದುರ್ಗ: 8277884020, ರಾಮನಗರ: 8277884018.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:45 pm, Fri, 8 May 26

Source link

DC vs KKR: 250, 500, 1000..! ಐಪಿಎಲ್‌ನಲ್ಲಿ ರಾಹುಲ್ ಐತಿಹಾಸಿಕ ಸಾಧನೆ – Kannada News | KL Rahul’s Historic IPL 2026: 250 T20s, 500 Boundaries and 3 Team 1000 Run Record

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡದ ಪರ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್‌ ಉತ್ತಮ ಆರಂಭ ಪಡೆದರಾದರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು (PC- DC X).

ಆದಾಗ್ಯೂ ಈ ಪಂದ್ಯ ಕೆಎಲ್ ರಾಹುಲ್​ಗೆ ಬಹಳ ವಿಶೇಷವಾಗಿತ್ತು. ಏಕೆಂದರೆ ರಾಹುಲ್​ಗೆ ಇದು 250 ನೇ ಟಿ20 ಪಂದ್ಯವಾಗಿತ್ತು. ಈ ಪಂದ್ಯದಲ್ಲಿ 14 ಎಸೆತಗಳನ್ನು ಎದುರಿಸಿದ ರಾಹುಲ್ 23 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್​ನಲ್ಲಿ ನಾಲ್ಕು ಬೌಂಡರಿಗಳು ಸೇರಿದ್ದವು. ಈ 4 ಬೌಂಡರಿಗಳ ಮೂಲಕ ರಾಹುಲ್ ಐಪಿಎಲ್‌ನಲ್ಲಿ ವಿಶೇಷ ಮೈಲಿಗಲ್ಲನ್ನು ದಾಟಿದರು (PC- DC X).

ಈ ನಾಲ್ಕು ಬೌಂಡರಿಗಳೊಂದಿಗೆ ರಾಹುಲ್ ಐಪಿಎಲ್‌ನಲ್ಲಿ 500 ಬೌಂಡರಿಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 7 ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಐಪಿಎಲ್‌ನಲ್ಲಿ ಇದುವರೆಗೆ 156 ಪಂದ್ಯಗಳನ್ನಾಡಿರುವ ರಾಹುಲ್ 232 ಸಿಕ್ಸರ್‌ಗಳನ್ನು ಸಹ ಹೊಡೆದಿದ್ದಾರೆ (PC- DC X).

ಹಾಗೆಯೇ ಈ ಪಂದ್ಯದಲ್ಲಿ 23 ರನ್​ಗಳ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರ 1000 ರನ್‌ಗಳನ್ನು ಸಹ ಪೂರ್ಣಗೊಳಿಸಿದರು. ಇದು ಡೆಲ್ಲಿ ಪರ ವೇಗವಾಗಿ 1000 ರನ್‌ಗಳನ್ನು ಪೂರೈಸಿದ ದಾಖಲೆಯಾಗಿದೆ (PC- DC X).

ಕೆಎಲ್ ರಾಹುಲ್ ಈ ಹಿಂದೆ ಪಂಜಾಬ್ ಮತ್ತು ಲಕ್ನೋ ತಂಡಗಳ ಪರವೂ 1000 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್‌ನಲ್ಲಿ ಮೂರು ವಿಭಿನ್ನ ತಂಡಗಳ ಪರ 1000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ (PC- DC X).

Published On – 8:48 pm, Fri, 8 May 26

Source link

ಬಂಗಾಳದ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ – Kannada News | Suvendu Adhikari Meets Governor RN Ravi Stakes Claim To Form Government In West Bengal

ಕೊಲ್ಕತ್ತಾ, ಮೇ 8: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ಗಂಟೆಗಳ ಬಳಿಕ ಪಶ್ಚಿಮ ಬಂಗಾಳದ ನಿಯೋಜಿತ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ಸಂಜೆ ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದ್ದ ಬಿಜೆಪಿಗೆ ರಾಜ್ಯದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿತು. ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವು ನಾಳೆ (ಶನಿವಾರ) ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಹಲವಾರು ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Blood Test Before Marriage: Thalassemia Risk, Genetics, and Prevention

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಥಲಸ್ಸೆಮಿಯಾ (Thalassemia) ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಥಲಸ್ಸೆಮಿಯಾ ಒಂದು ಆನುವಂಶಿಕ (inherited) ರಕ್ತದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಆರೋಗ್ಯಕರ ಹಿಮೋಗ್ಲೋಬಿನ್ ಅಥವಾ ಕೆಂಪು ರಕ್ತ ಕಣಗಳನ್ನು ಉತ್ಪಾದಿಸದ ಸ್ಥಿತಿಯಾಗಿದೆ ಅಂದರೆ ದೇಹದಲ್ಲಿ ಸಮರ್ಪಕ ಪ್ರಮಾಣದ ಹೀಮೋಗ್ಲೋಬಿನ್ ಉತ್ಪತ್ತಿಯಾಗುವುದಿಲ್ಲ. ಈ ರೀತಿ ಹೀಮೋಗ್ಲೋಬಿನ್ ಕಡಿಮೆಯಾಗುವುದರಿಂದ ದೇಹದ ಅಂಗಾಂಗಗಳಿಗೆ ಬೇಕಾದಷ್ಟು ಆಮ್ಲಜನಕ ತಲುಪದೇ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವೈದ್ಯರ ಪ್ರಕಾರ, ಈ ಕಾಯಿಲೆ ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ತಂದೆ- ತಾಯಿ ಇಬ್ಬರೂ ಥಲಸ್ಸೆಮಿಯಾ ಟ್ರೈಟ್ ಹೊಂದಿದ್ದರೆ, ಮಗುವಿಗೆ ಗಂಭೀರ ಥಲಸ್ಸೆಮಿಯಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಈ ಕಾರಣದಿಂದ ವಿವಾಹಕ್ಕೂ ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಜ್ಞರು ಸಲಹೆ ನೀಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಇದ್ದಾಗ ಯಾವ ರೀತಿ ಲಕ್ಷಣಗಳು ಕಂಡುಬರುತ್ತದೆ, ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಥಲಸ್ಸೆಮಿಯಾದ ಪ್ರಮುಖ ಲಕ್ಷಣಗಳು:

ಸಾಮಾನ್ಯವಾಗಿ ಥಲಸ್ಸೆಮಿಯಾ ಇರುವ ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ರಕ್ತಹೀನತೆ, ದೌರ್ಬಲ್ಯ, ಬೇಗ ದಣಿವು, ತೂಕ ಮತ್ತು ಎತ್ತರ ಸರಿಯಾಗಿ ಬೆಳೆಯದಿರುವುದು, ಚರ್ಮ ಬಿಳಿಯಾಗುವುದು ಹಾಗೂ ಉಸಿರಾಟದ ತೊಂದರೆ ಕಾಣಿಸಬಹುದು. ಕೆಲವು ಮಕ್ಕಳಲ್ಲಿ ಮುಖದ ಎಲುಬುಗಳ ಆಕಾರದಲ್ಲೂ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಗಂಭೀರ ಥಲಸ್ಸೆಮಿಯಾ ಹೊಂದಿರುವವರಿಗೆ ನಿಯಮಿತವಾಗಿ ರಕ್ತ ಹೇರಿಕೆ (Blood Transfusion) ಮಾಡಬೇಕಾಗುತ್ತದೆ. ಚಿಕಿತ್ಸೆ ವಿಳಂಬವಾದರೆ ಹೃದಯ, ಯಕೃತ್ತು ಮತ್ತು ಇತರ ಅಂಗಾಂಗಗಳ ಮೇಲೆ ಪರಿಣಾಮ ಬೀಳಬಹುದು.

ಚಿಕಿತ್ಸೆ ಮತ್ತು ಮುನ್ನೆಚ್ಚರಿಕೆ:

ವೈದ್ಯರ ಪ್ರಕಾರ, ಥಲಸ್ಸೆಮಿಯಾಗೆ ಸಂಪೂರ್ಣ ಚಿಕಿತ್ಸೆ ಕೆಲವು ಸಂದರ್ಭಗಳಲ್ಲಿ ಮಾತ್ರ ಸಾಧ್ಯ. ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಮೂಲಕ ಕೆಲವರಿಗೆ ಶಾಶ್ವತ ಪರಿಹಾರ ದೊರೆಯಬಹುದು. ಆದರೆ ಹೆಚ್ಚಿನ ರೋಗಿಗಳಿಗೆ ನಿಯಮಿತ ಚಿಕಿತ್ಸೆ ಮತ್ತು ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗುತ್ತದೆ. ಸಮತೋಲನ ಆಹಾರ, ಐರನ್ ಮಟ್ಟದ ಮೇಲ್ವಿಚಾರಣೆ ಮತ್ತು ಸಮಯಕ್ಕೆ ಸರಿಯಾದ ವೈದ್ಯಕೀಯ ಪರೀಕ್ಷೆಗಳು ರೋಗ ನಿಯಂತ್ರಣದಲ್ಲಿ ಸಹಾಯ ಮಾಡುತ್ತವೆ. ಮುಖ್ಯವಾಗಿ, ಮದುವೆಗೆ ಮೊದಲು ಥಲಸ್ಸೆಮಿಯಾ ಸ್ಕ್ರೀನಿಂಗ್ ಮಾಡಿಸುವುದು ಈ ಕಾಯಿಲೆ ತಡೆಯಲು ಪರಿಣಾಮಕಾರಿ ಮಾರ್ಗವೆಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಿಂಗ್ ಕೊಹ್ಲಿ ವಿಕೆಟ್ ಕಿತ್ತ ಯುವ ವೇಗಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ – Kannada News | IPL 2026 Star Prince Yadav to Replace Bumrah in India T20 Squad?

2026 ರ ಐಪಿಎಲ್‌ನಲ್ಲಿ (IPL 2026) ಲಕ್ನೋ ಸೂಪರ್‌ಜೈಂಟ್ಸ್ (LSG) ತಂಡದ ಪ್ರದರ್ಶನ ಅಷ್ಟೇನೂ ಉತ್ತಮವಾಗಿಲ್ಲ. ಆಡಿರುವ 10 ಪಂದ್ಯಗಳಲ್ಲಿ ತಂಡ 7 ಪಂದ್ಯಗಳನ್ನು ಸೋತು, ಪ್ಲೇಆಫ್ ರೇಸ್​​ನಿಂದ ಭಾಗಶಃ ಹೊರಬಿದ್ದಿದೆ. ಆದಾಗ್ಯೂ ತಂಡದ ಪರ ಯುವ ವೇಗದ ಬೌಲರ್ ಪ್ರಿನ್ಸ್ ಯಾದವ್ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಆಡಿರುವ 10 ಪಂದ್ಯಗಳಲ್ಲಿ ಪ್ರಿನ್ಸ್ ಯಾದವ್ ಕಡಿಮೆ ಎಕಾನಮಿ ರೇಟ್​​ನಲ್ಲಿ ರನ್ ಬಿಟ್ಟುಕೊಡುವುದರ ಜೊತೆಗೆ ಅವಶ್ಯಕ ಸಮಯದಲ್ಲಿ ವಿಕೆಟ್​ಗಳನ್ನು ತೆಗೆದುಕೊಟ್ಟಿದ್ದಾರೆ. ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ತಂಡ ಗೆಲುವು ಸಾಧಿಸುವಲ್ಲಿ ಪ್ರಿನ್ಸ್ ಯಾದವ್ (Prince Yadav) ಅವರ ಪ್ರದರ್ಶನ ಪ್ರಮುಖ ಪಾತ್ರವಹಿಸಿತ್ತು. ಈ ಪಂದ್ಯದಲ್ಲಿ ಅವರು ಪ್ರಮುಖ 3 ವಿಕೆಟ್‌ಗಳನ್ನು ಕಬಳಿಸಿದ್ದರು.

ಹೀಗಾಗಿ ಈ ಆವೃತ್ತಿಲ್ಲಿ ಅಮೋಘ ಪ್ರದರ್ಶನ ನೀಡಿರುವ ಪ್ರಿನ್ಸ್ ಯಾದವ್​ಗೆ ಇಷ್ಟರಲ್ಲೇ ಟೀಂ ಇಂಡಿಯಾದ ಕದ ತೆರೆಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಅದರಲ್ಲೂ ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿರುವಂತಹ ಬೌಲರ್ ಎನಿಸಿಕೊಂಡಿರುವ ಪ್ರಿನ್ಸ್ ಯಾದವ್ ಟೀಂ ಇಂಡಿಯಾದ ಮುಂದಿನ ಟಿ20 ಸರಣಿಯಲ್ಲೇ ತಂಡದ ಪರ ಆಡುವುದನ್ನು ಕಾಣಬಹುದು. ಆದಾಗ್ಯೂ ಪ್ರಿನ್ಸ್ ಯಾದವ್ ಟಿ20 ತಂಡದಲ್ಲಿ ಯಾರ ಸ್ಥಾನವನ್ನು ತುಂಬಲಿದ್ದಾರೆ ಎಂಬ ಪ್ರಶ್ನೆ ಬಂದಾಗ ಅದಕ್ಕೆ ಉತ್ತರವೂ ಸಿದ್ಧವಾಗಿದ್ದು, ಅವರು ಜಸ್ಪ್ರೀತ್ ಬುಮ್ರಾ ಅವರ ಸ್ಥಾನವನ್ನು ತುಂಬಲಿದ್ದಾರೆ ಎಂದು ವರದಿಯಾಗಿದೆ.

ಬುಮ್ರಾ ಬದಲಿಗೆ ಪ್ರಿನ್ಸ್ ಯಾದವ್ ಆಯ್ಕೆ

ಮಾಧ್ಯಮ ವರದಿಗಳ ಪ್ರಕಾರ, 2026 ರ ಟಿ20 ವಿಶ್ವಕಪ್‌ ಬಳಿಕ, ಬಿಸಿಸಿಐ ಮತ್ತು ತಂಡದ ಆಡಳಿತವು ಜಸ್ಪ್ರೀತ್ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ನೀಡಲು ಮುಂದಾಗಿದೆ. ಅದರ ಪ್ರಕಾರ ಮುಂದಿನ 18 ರಿಂದ 24 ತಿಂಗಳುಗಳ ಕಾಲ ಬುಮ್ರಾ ಅವರಿಗೆ ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ವಿಶ್ರಾಂತಿ ನೀಡಿ, ಟೆಸ್ಟ್ ಕ್ರಿಕೆಟ್ (ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್) ಮತ್ತು 2027 ರ ಏಕದಿನ ವಿಶ್ವಕಪ್‌ನತ್ತ ಗಮನಹರಿಸಲು ಅನುವು ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಹೀಗಾಗಿ ಪ್ರಮುಖವಲ್ಲದ ಏಕದಿನ ಸರಣಿಗಳಿಂದಲೂ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎನ್ನಲಾಗುತ್ತಿದೆ.

ಇಂತಹ ಪರಿಸ್ಥಿತಿಯಲ್ಲಿ, ಜಸ್ಪ್ರೀತ್ ಬುಮ್ರಾ ಬದಲಿಗೆ ಪ್ರಿನ್ಸ್ ಯಾದವ್ ಅವರನ್ನು ಭಾರತ ಟಿ20 ತಂಡದಲ್ಲಿ ಆಡಿಸಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ. ಮೇಲೆ ಹೇಳಿದಂತೆ 2026 ರ ಐಪಿಎಲ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಪ್ರಿನ್ಸ್ ಯಾದವ್ ಶೀಘ್ರದಲ್ಲೇ ಭಾರತೀಯ ತಂಡಕ್ಕೆ ಪಾದಾರ್ಪಣೆ ಮಾಡಬಹುದು. ಇದು ಪ್ರಿನ್ಸ್ ಯಾದವ್ ಅವರ ಎರಡನೇ ಐಪಿಎಲ್ ಸೀಸನ್ ಆಗಿದ್ದು, ಈ ಸೀಸನ್​ನಲ್ಲಿ ಅವರು ಲಕ್ನೋ ತಂಡದ ಪರ 10 ಪಂದ್ಯಗಳಲ್ಲಿ 16 ವಿಕೆಟ್ ಕಬಳಿಸಿದ್ದಾರೆ. ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:11 pm, Fri, 8 May 26

Source link

Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ – Kannada News | TVK Chief Vijay to take oath as Tamil Nadu CM tomorrow at 11 am gets Governors nod to form government

ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನಾಳೆಯಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಇಂದು ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ನಾಳೆಯೇ (ಶನಿವಾರ) ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) 118 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಹಾಗೂ ಇತರೆ ಎಡಪಕ್ಷಗಳ ಬೆಂಬಲ ಸೇರಿ ವಿಜಯ್ ಅವರಿಗೆ ಇರುವ ಬೆಂಬಲದ ಸಂಖ್ಯೆ 121 ಆಗಿದೆ. ಹೀಗಾಗಿ, ವಿಜಯ್ ಅವರು ನಾಳೆ, ಅಂದರೆ ಮೇ 9ರ ಬೆಳಿಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಸಮಾರಂಭಕ್ಕೆ ಭಾರೀ ಸಿದ್ಧತೆಗಳು ಆರಂಭವಾಗಿದೆ.

Published On – 7:55 pm, Fri, 8 May 26

Source link

Kailasagiri Hill: ರಾತ್ರಿಯ ವೇಳೆ ಬೆಳಗಲಿದೆ ಶಿವನ ದಿವ್ಯ ಆಯುಧ; ಕೈಲಾಸಗಿರಿಯ ಮೇಲೆ 2.5 ಕೋಟಿ ವೆಚ್ಚದ ಬೃಹತ್ ತ್ರಿಶೂಲ ನಾಳೆ ಉದ್ಘಾಟನೆ – Kannada News | Kailasagiri Hill: Vizag’s 65ft Trishul – New Must Visit Tourist Attraction in Visakhapatnam

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪ್ರವಾಸೋದ್ಯಮ ಭೂಪಟದಲ್ಲಿ ಕೈಲಾಸಗಿರಿ ಬೆಟ್ಟವು ಈಗಾಗಲೇ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಇದೀಗ ಈ ಪ್ರಸಿದ್ಧ ತಾಣದ ಮುಕುಟಕ್ಕೆ ಮತ್ತೊಂದು ಸುಂದರ ಗರಿ ಸೇರ್ಪಡೆಯಾಗಿದೆ. ಪ್ರವಾಸಿಗರನ್ನು ಮಂತ್ರಮುಗ್ಧಗೊಳಿಸಲು 65 ಅಡಿ ಎತ್ತರದ ಬೃಹತ್‌ ಮತ್ತು ಅತ್ಯಾಧುನಿಕ ‘ತ್ರಿಶೂಲ‘ ಕೈಲಾಸಗಿರಿಯ ಮೇಲೆ ತಲೆ ಎತ್ತಿ ನಿಂತಿದೆ. ಶನಿವಾರ (ಮೇ 9) ನಡೆಯಲಿರುವ ಅಧಿಕೃತ ಉದ್ಘಾಟನಾ ಸಮಾರಂಭದಲ್ಲಿ ಸಚಿವ ನಾರಾಯಣ್ ಮತ್ತು ವಿಎಂಆರ್‌ಡಿಎ ಅಧ್ಯಕ್ಷ ಪ್ರಣವ್ ಗೋಪಾಲ್ ಭಾಗವಹಿಸಲಿದ್ದು, ವೈಜಾಗ್ ಪ್ರವಾಸಿಗರಿಗೆ ಈ ವಾರಾಂತ್ಯದಿಂದಲೇ ಹೊಸ ಅನುಭವ ಸಿಗಲಿದೆ.

ವೈಜಾಗ್‌ನ ಹೊಸ ಸಂಕೇತ 65 ಅಡಿಯ ಬೃಹತ್ ತ್ರಿಶೂಲ:

ವಿಶಾಖಪಟ್ಟಣಂ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (VMRDA) ಕೈಲಾಸಗಿರಿ ಬೆಟ್ಟದ ಮೇಲೆ ಈ ಬೃಹತ್ ತ್ರಿಶೂಲವನ್ನು ಸ್ಥಾಪಿಸಿದೆ. ಶಿವ ಮತ್ತು ಪಾರ್ವತಿಯ ವಿಗ್ರಹಗಳ ಪಕ್ಕದಲ್ಲೇ ನಿರ್ಮಾಣವಾಗಿರುವ ಈ ತ್ರಿಶೂಲವು 65 ಅಡಿ ಎತ್ತರವಿದೆ. ಇದರ ವಿಶೇಷತೆಯೆಂದರೆ, ವಿಶಾಖಪಟ್ಟಣಂ ನಗರದ ಯಾವುದೇ ಮೂಲೆಯಿಂದ ಕೈಲಾಸಗಿರಿಯತ್ತ ಕಣ್ಣು ಹಾಯಿಸಿದರೂ ಈ ತ್ರಿಶೂಲ ಭವ್ಯವಾಗಿ ಗೋಚರಿಸುತ್ತದೆ.

2.50 ಕೋಟಿ ರೂ. ವೆಚ್ಚದ ಯೋಜನೆ:

ಸುಮಾರು 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ. ಈ ಬೃಹತ್ ತ್ರಿಶೂಲದ ವಿನ್ಯಾಸವನ್ನು ಪುಣೆಯಲ್ಲಿ ಸಿದ್ಧಪಡಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗಿದೆ. ಅರೆಪಾರದರ್ಶಕ ಫೈಬರ್ ಬಲವರ್ಧಿತ ಪ್ಲಾಸ್ಟಿಕ್‌ನಿಂದ (Fiber Reinforced Plastic) ಇದನ್ನು ತಯಾರಿಸಲಾಗಿದ್ದು, ಕರಾವಳಿ ತೀರದಲ್ಲಿ ಸಂಭವಿಸುವ ಬಲವಾದ ಗಾಳಿ ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಇದು ಹೊಂದಿದೆ ಎಂದು ಹೇಳಲಾಗುತ್ತಿದೆ.

ರಾತ್ರಿಯ ವೇಳೆಯಲ್ಲಿ ಬೆಳಗಲಿದೆ ಶಿವನ ಆಯುಧ:

ಹಗಲಿಗಿಂತಲೂ ರಾತ್ರಿಯ ಸಮಯದಲ್ಲಿ ಈ ತ್ರಿಶೂಲದ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ತ್ರಿಶೂಲದ ಮೇಲ್ಭಾಗದಲ್ಲಿ 25 ಅಡಿ ಎತ್ತರದ ಗುಮ್ಮಟವಿದ್ದು, ಅದರ ಮೇಲೆ 110 ವ್ಯಾಟ್‌ನ ಶಕ್ತಿಯುತ ಎಲ್‌ಇಡಿ (LED) ಬಲ್ಬ್‌ಗಳನ್ನು ಅಳವಡಿಸಲಾಗಿದೆ. ಕಡು ಕತ್ತಲೆಯಲ್ಲಿಯೂ ಬೆಟ್ಟದ ಮೇಲೆ ಬೆಳಗುವ ಈ ತ್ರಿಶೂಲವು ಸಮುದ್ರ ತೀರದ ಪ್ರವಾಸಿಗರಿಗೆ ದಿವ್ಯ ಅನುಭವವನ್ನು ನೀಡಲಿದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಸೆಲ್ಫಿ ಪ್ರಿಯರಿಗಾಗಿ ವಿಶೇಷ ವೇದಿಕೆ:

ಪ್ರವಾಸಿಗರ ಅನುಕೂಲಕ್ಕಾಗಿ ತ್ರಿಶೂಲದ ಸುತ್ತಲೂ 30 ಅಡಿ ಅಗಲದ ಸುಂದರ ವೇದಿಕೆಯನ್ನು ನಿರ್ಮಿಸಲಾಗಿದೆ. ಇಲ್ಲಿ ಪ್ರವಾಸಿಗರು ಆರಾಮವಾಗಿ ವಿಶ್ರಾಂತಿ ಪಡೆಯಬಹುದು ಮತ್ತು ಸುಂದರವಾದ ಸೆಲ್ಫಿಗಳನ್ನು ತೆಗೆದುಕೊಳ್ಳಬಹುದು. ವಿಶೇಷವೆಂದರೆ, ಈ ತ್ರಿಶೂಲವನ್ನು ವೀಕ್ಷಿಸಲು ಪ್ರವಾಸಿಗರಿಗೆ ಯಾವುದೇ ಪ್ರವೇಶ ಶುಲ್ಕವನ್ನು ವಿಧಿಸಲಾಗುವುದಿಲ್ಲ, ಇದು ಸಂಪೂರ್ಣ ಉಚಿತವಾಗಿದೆ.

ಕೈಲಾಸಗಿರಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ:

ಕೈಲಾಸಗಿರಿಯಲ್ಲಿ ಈಗಾಗಲೇ ರೋಪ್‌ವೇ, ಗಾಜಿನ ಸೇತುವೆ, ಟಾಯ್ ಟ್ರೈನ್ ಮತ್ತು ವಸ್ತುಸಂಗ್ರಹಾಲಯಗಳಂತಹ ಆಕರ್ಷಣೆಗಳಿವೆ. ಈಗ ಸೇರ್ಪಡೆಯಾಗಿರುವ ಈ ತ್ರಿಶೂಲವು ಆಧ್ಯಾತ್ಮಿಕತೆ ಮತ್ತು ಪ್ರವಾಸೋದ್ಯಮ ಎರಡನ್ನೂ ಬೆಸೆಯುವ ಪ್ರಯತ್ನವಾಗಿದೆ. ಪ್ರತಿ ವರ್ಷ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಈ ಬೆಟ್ಟಕ್ಕೆ, ಈ ಹೊಸ ಯೋಜನೆಯಿಂದಾಗಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK Chief Vijay reaches Lok Bhavan to meet Governor for third Time

ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಕೊನೆಗೂ ಕಾಲ ಕೂಡಿಬಂದಿದೆ. ಟಿವಿಕೆ ಮುಖ್ಯಸ್ಥ ವಿಜಯ್ (Vijay) ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ಲೋಕಭವನಕ್ಕೆ ಆಗಮಿಸಿದ್ದಾರೆ. ಬಹುಮತ ಸಾಬೀತುಪಡಿಸಲು 118 ಶಾಸಕರ ಬೆಂಬಲ ಪತ್ರವನ್ನು ವಿಜಯ್ ಅವರು ರಾಜ್ಯಪಾಲರಿಗೆ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಠ ಬಿಡದ ‘ದ್ರೌಪದಿ’ಗೆ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಪಟ್ಟ, ಯಾರು ಈ ರೂಪಾ ಗಂಗೂಲಿ? – Kannada News | Roopa Ganguly to became West Bengal DCM, Who is she what is her background

ಕೌರವರ ಪತನಕ್ಕಾಗಿ ಪಣತೊಟ್ಟು ಮುಡಿ ಕಟ್ಟದೆ ಕಾದಿದ್ದಳು ಮಹಾಭಾರತದ ದ್ರೌಪದಿ. ಅದೇ ಹಠದಿಂದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪತನಕ್ಕಾಗಿ ದಶಕದಿಂದ ಕಾದಿದ್ದ ‘ದ್ರೌಪದಿ’ಗೆ ಈಗ ಪಶ್ಚಿಮ ಬಂಗಾಳದ (west Bengal) ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ ಬಿಜೆಪಿ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿದಿದೆ. ಸತತ ಹೊರಾಟ, ಪ್ರಯತ್ನಗಳ ಬಳಿಕ ಕೊನೆಗೂ ಮಮತಾ ಬ್ಯಾನರ್ಜಿಯನ್ನು ಕುರ್ಚಿಯಿಂದ ಕೆಳಗಿಳಿಸಿರುವ ಬಿಜೆಪಿ ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುವೇಂದು ಅಧಿಕಾರಿ ಇದೀಗ ಪಶ್ಚಿಮ ಬಂಗಾಳದ ಮೊಟ್ಟ ಮೊದಲ ಬಿಜೆಪಿ ಸಿಎಂ ಆಗಲಿದ್ದಾರೆ. ಮಾತ್ರವಲ್ಲದೆ, ಇಬ್ಬರನ್ನು ಡಿಸಿಎಂ ಅನ್ನಾಗಿ ಸಹ ಆಯ್ಕೆ ಮಾಡಲಾಗಿದ್ದು, ಅವರಲ್ಲಿ ಒಬ್ಬರು ನಟಿ ರೂಪಾ ಗಂಗೂಲಿ.

ರೂಪಾ ಗಂಗೂಲಿ ಎಂದರೆ ಹೆಚ್ಚು ಜನರಿಗೆ ತಿಳಿಯಲಿಕ್ಕಿಲ್ಲ, ಆದರೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ‘ಮಹಾಭಾರತ’ ಧಾರಾವಾಹಿಯ ದ್ರೌಪದಿ ಎಂದರೆ ಥಟ್ಟನೆ ನೆನಪಾಗುತ್ತದೆ. ಅದೇ ‘ದ್ರೌಪದಿ’ ಪಾತ್ರಧಾರಿ ರೂಪಾ ಗಂಗೂಲಿ ಈಗ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ. ರೂಪಾ ಗಂಗೂಲಿ ಅವರದ್ದು ಟಿವಿ ಮತ್ತು ಸಿನಿಮಾ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು. ರಾಜಕೀಯಕ್ಕೆ ಕಾಲಿಟ್ಟಮೇಲೂ ನಟನೆ ಮುಂದುವರೆಸಿದ್ದ ರೂಪಾ ಗಂಗೂಲಿ ಅವರಿಗೆ ಈಗಲೂ  ಸಿನಿಮಾ ರಂಗದಲ್ಲಿ ಬಹಳ ಬೇಡಿಕೆ ಇದೆ. ಆದರೆ ಈಗ ಉಪ ಮುಖ್ಯಮಂತ್ರಿ ಆದ ಬಳಿಕ ಅವರು ನಟನೆ ಮುಂದುವರೆಸುತ್ತಾರೋ ಇಲ್ಲವೋ ನೋಡಬೇಕು.

ರಾಜಕೀಯ ಜರ್ನಿ

ರೂಪಾ ಗಂಗೂಲಿ ಸಿನಿಮಾ ರಂಗದಲ್ಲಿ ಸೌಮ್ಯ, ಸುಂದರ ನಾಯಕಿಯಾಗಿ ಕಾಣಿಸಿಕೊಂಡಿದ್ದೇ ಹೆಚ್ಚು, ಆದರೆ ರಾಜಕೀಯದಲ್ಲಿ ಅವರದ್ದು ಹೋರಾಟದ ಹಾದಿ. 2015 ರಲ್ಲಿ ಬಿಜೆಪಿ ಸೇರುವ ಮೂಲಕ ಅವರು ರಾಜಕೀಯಕ್ಕೆ ಪದಾರ್ಪಣೆ ಮಾಡಿದರು. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಹವಾ ಬಲು ಜೋರಾಗಿದ್ದ ಕಾಲವದು. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಯಾವ ಕಾಲದಲ್ಲೂ ಸುಲಭವಾಗಿರಲಿಲ್ಲ. ರಾಜಕೀಯ ಹಿಂಸಾಚಾರವಂತೂ ‘ಸಾಮಾನ್ಯ’ ಎಂಬಂತಿತ್ತು, ಅಂಥಹಾ ಸಮಯದಲ್ಲೂ ಗಟ್ಟಿ ಮನಸ್ಸು ಮಾಡಿ, ದೊಡ್ಡ ಪಕ್ಷದ ವಿರುದ್ಧ ಪಕ್ಷ ಸಂಘಟನೆ ಶುರು ಮಾಡಿದರು ರೂಪಾ ಗಂಗೂಲಿ.

2015 ರಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಆದ ರೂಪಾ ಗಂಗೂಲಿ, 2016 ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರು. ಆದರೆ ಛಲ ಬಿಡದೆ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು ರೂಪಾ. ಅದೇ ವರ್ಷ ಮೇ ತಿಂಗಳಲ್ಲಿ ಚುನಾವಣಾ ಹಿಂಸಾಚಾರದ ಸಂತ್ರಸ್ತರನ್ನು ಭೇಟಿಯಾಗಿ ಮರಳಿ ಬರುವಾಗ ಟಿಎಂಸಿ ಕಾರ್ಯಕರ್ತರು ರೂಪಾ ಅವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದರು. ಹಲ್ಲೆಯಲ್ಲಿ ರೂಪಾ ಅವರ ತಲೆಗೆ ಗಂಭೀರ ಪೆಟ್ಟಾಗಿತ್ತು. ಅವರು ಆಸ್ಪತ್ರೆ ಸಹ ಸೇರಿದರು. ಅದೇ ವರ್ಷ ಅವರನ್ನು ರಾಜ್ಯಸಭೆಗೆ ನಾಮಿನೇಟ್ ಮಾಡಿ ಕಳಿಸಿತು ಬಿಜೆಪಿ. 2022 ರಲ್ಲಿ ತಮ್ಮ ಅವಧಿ ಮುಗಿಸಿದ ರೂಪಾ, ಈಗ ಮತ್ತೆ ಚುನಾವಣೆ ಸ್ಪರ್ಧಿಸಿ ಗೆದ್ದಿಲ್ಲದೆ, ಉಪ ಮುಖ್ಯಮಂತ್ರಿ ಸಹ ಆಗಲಿದ್ದಾರೆ.

ವೈಯಕ್ತಿಕ ಜೀವನ

ಇನ್ನು ರೂಪಾ ಅವರ ವೈಯಕ್ತಿಕ ಜೀವನ ಗಮನಿಸುವುದಾದರೆ ರೂಪಾ ಅವರು ಎಂಜಿನಿಯರ್ ಒಬ್ಬರನ್ನು 1992 ರಲ್ಲಿ ವಿವಾಹವಾಗಿ ಅವರಿಂದ ಒಂದು ಗಂಡು ಮಗುವನ್ನೂ ಪಡೆದರು. ಆದರೆ 2007 ರಲ್ಲಿ ಇಬ್ಬರೂ ವಿಚ್ಛೇದನ ಪಡೆದು ದೂರಾದರು. ಬಳಿಕ ರೂಪಾ ಅವರು ಬೆಂಗಾಲಿ ಗಾಯಕ ದಿವ್ಯೇಂದು ಮುಖರ್ಜಿ ಜೊತೆಗೆ ಲಿವಿನ್ ರಿಲೇಷನ್​​ನಲ್ಲಿದ್ದರು. ರೂಪಾ ಮತ್ತು ದಿವ್ಯೇಂದು ಮುಂಬೈನಲ್ಲಿ ಒಟ್ಟಿಗೆ ಹಲವು ವರ್ಷ ಇದ್ದರು. ಬಳಿಕ ಇಬ್ಬರೂ ದೂರಾದರು. ಆದರೆ ಆ ಬಳಿಕವೂ ಅವರು ಗೆಳೆತನ ಕಾಪಾಡಿಕೊಂಡಿದ್ದಾರೆ. ಪ್ರಸ್ತುತ ರೂಪಾ ಅವರು ಒಂಟಿ. ಪುತ್ರ ಜೊತೆಗಿದ್ದಾನೆ.

ಸಿನಿಮಾ ಜರ್ನಿ

ರೂಪಾ ಗಂಗೂಲಿ ಅದ್ಭುತ ನಟಿಯಾಗಿದ್ದವರು. ಟಿವಿ ಧಾರಾವಾಹಿ ಮಾತ್ರವೇ ಅಲ್ಲದೆ ಹಿಂದಿ, ಕನ್ನಡ, ತೆಲುಗು, ಒಡಿಯಾ, ಮಲಯಾಳಂ, ಮರಾಠಿ, ಬೆಂಗಾಲಿ, ಅಸ್ಸಾಮಿ ಹೀಗೆ ಹಲವಾರು ಭಾಷೆಯ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ವಿಷ್ಣುವರ್ಧನ್ ಜೊತೆಗೆ ‘ಪೊಲೀಸ್ ಮತ್ತು ದಾದ’, ‘ಕದನ’, ‘ಸಿಬಿಐ ವಿಜಿ’, ‘ಬಹದ್ಧೂರ್ ಹೆಣ್ಣು’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗಲೂ ಅವರ ಕೈಯಲ್ಲಿ ಮೂರು ಸಿನಿಮಾಗಳಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link