Headlines

Mother’s Day 2026: ಗರ್ಭದಲ್ಲೇ ಸಂಸ್ಕಾರ ನೀಡುವ ಶಕ್ತಿ ತಾಯಿಯದ್ದು; ಹಿಂದೂ ಧರ್ಮದ ದೃಷ್ಟಿಯಲ್ಲಿ ಮಾತೃತ್ವದ ಮಹತ್ವ – Kannada News | Sacred Mother in Hinduism: Matru Devo Bhava and Her Divine Influence

ಹಿಂದೂ ಧರ್ಮದಲ್ಲಿ ತಾಯಿಗೆ ಅತ್ಯುನ್ನತ ಮತ್ತು ಪವಿತ್ರವಾದ ಸ್ಥಾನ ನೀಡಲಾಗಿದೆ. ಸನಾತನ ಸಂಸ್ಕೃತಿಯ ಪ್ರಕಾರ, ತಾಯಿಯು ಕೇವಲ ಕುಟುಂಬದ ಸದಸ್ಯೆಯಲ್ಲ, ಬದಲಿಗೆ ಮನೆಯ ಬೆಳಗುವ ದೀಪ ಮತ್ತು ‘ಪ್ರತ್ಯಕ್ಷ ದೈವ’. “ಮಾತೃ ದೇವೋ ಭವ” ಎಂಬ ವೇದವಾಕ್ಯವು ಅತಿಥಿ ಅಥವಾ ದೇವರಿಗಿಂತ ಮೊದಲು ತಾಯಿಯನ್ನು ಪೂಜಿಸಬೇಕು ಎಂದು ಕಲಿಸುತ್ತದೆ. ಮಗುವಿಗೆ ಜನ್ಮ ನೀಡಿ, ಪೋಷಿಸಿ, ಸಂಸ್ಕಾರ ನೀಡುವ ತಾಯಿಯನ್ನು ಮಗುವಿನ ‘ಪ್ರಥಮ ಗುರು’ ಎಂದು ಪರಿಗಣಿಸಲಾಗುತ್ತದೆ. ತಾಯಿಯ ಪ್ರೀತಿ ಮತ್ತು ತ್ಯಾಗವು ದೈವಿಕ ಗುಣಗಳಿಗೆ ಸಮಾನವೆಂದು ಶಾಸ್ತ್ರಗಳು…

Read More

ಸೋಮನಾಥ ದೇಗುಲ: ಸರ್ದಾರ್ ಪಟೇಲರ ಕನಸು, ಭಾರತದ ಹೆಮ್ಮೆ, ಅಖಂಡತೆಯ ಸಂಕೇತ – ಪಿಎಂ ಮೋದಿ ಲೇಖನ – Kannada News | Somnath Temple, Sardar Patel’s Dream, India’s Pride, Symbol of Integrity, PM Modi blog

ಸೋಮನಾಥನ ಸನ್ನಿಧಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಈ ವರ್ಷದ ಆರಂಭದಲ್ಲಿ ಸೋಮನಾಥ್ ಸ್ವಾಭಿಮಾನಪರ್ವ (Somnath Swabiman Parv) ಕಾರ್ಯಕ್ರಮಕ್ಕಾಗಿ ಸೋಮನಾಥ್​ಗೆ ಹೋಗಿದ್ದೆ. ಸೋಮನಾಥ ಮಂದಿರದ ಮೇಲೆ ಆದ ದಾಳಿಗೆ ಒಂದು ಸಾವಿರ ವರ್ಷ ಗತಿಸಿದ ಸಂದರ್ಭವದು. ಈಗ ಮತ್ತೊಮ್ಮೆ ಮೇ 11ಕ್ಕೆ ಅಲ್ಲಿಗೆ ಹೋಗುತ್ತಿದ್ದೇನೆ. 75 ವರ್ಷದ ಹಿಂದೆ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಈ ಮಂದಿರದ ಪುನರ್ನಿರ್ಮಾಣ ಮಾಡಿದ ಪುಣ್ಯ ಸಂದರ್ಭವದು. ಸೋಮನಾಥದ ಧ್ವಂಸ ಮತ್ತು…

Read More

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ! – Kannada News | Business Titan Donates Rs 2.50 Cr Gold Crown to Anjanadri Hill; Janardhana Reddy Attends Rituals

ಕೊಪ್ಪಳ, ಮೇ 08: ಬಂಗಾರದ ಬೆಲೆ ಗಗನಕ್ಕೇರಿದರೂ ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ದೇಣಿಗೆ ನೀಡಿದ್ದಾರೆ. ಎಎಂಆರ್ (AMR) ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ನೇತೃತ್ವದಲ್ಲಿ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆ ಅರ್ಪಣೆ ಮಾಡಲಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಸಹ ಈ ವೇಳೆ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಿರುಪತಿ ಮಾದರಿಯಲ್ಲಿ ದೇವಸ್ಥಾನ ಅಭಿವೃದ್ಧಿಯಾಗಬೇಕು ಎಂಬ…

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು: ಅನಾರೋಗ್ಯದಿಂದ ಮೃತಪಟ್ಟ ‘ಶಿವಾನಿ’ – Kannada News | Bannerghatta Giraffe Shivani Dies: Illness Claims Popular Bengaluru Zoo Attraction

ಬೆಂಗಳೂರು, ಮೇ 08: ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಜಿರಾಫೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರೆಳೆದಿದ್ದು, ಅನಾರೋಗ್ಯದಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ ಎನ್ನಲಾಗಿದೆ. ಅಂತಿಮವಾಗಿ ಕರುಳು ಸುತ್ತಿಕೊಂಡು ರಕ್ತಪರಿಚಲನೆ ಆಗದೆ ಜಿರಾಫೆ ಮೃತಪಟ್ಟಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರು ಕಳೆದ…

Read More

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್ – Kannada News | Ram Charan’s Peddi Movie beats Pawan Kalyan’s OG movie record

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್​​ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್…

Read More

ಚಾಮರಾಜನಗರ: ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ! ವಿಡಿಯೋ ಇಲ್ಲಿದೆ ನೋಡಿ – Kannada News | Viral Video: Monkey Visits Salon in Chamarajanagar for Hair Styling; Shakes Hands with Barber Before Leaving

ಚಾಮರಾಜನಗರ, ಮೇ 8: ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಗ್ರಾಮದಲ್ಲಿ ವಿಚಿತ್ರ ಹಾಗೂ ಅಚ್ಚರಿಯ ಘಟನೆಯೊಂದು ನಡೆದಿದೆ. ಇಲ್ಲಿನ ದೇವರಾಜ್ ಎಂಬುವವರ ಸಲೂನ್‌ಗೆ ಮಂಗವೊಂದು ಬಂದು, ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡು ಎಲ್ಲರ ಗಮನ ಸೆಳೆದಿದೆ. ದಿನನಿತ್ಯ ಸಲೂನ್ ಬಳಿ ಬರುತ್ತಿದ್ದ ಈ ಮಂಗ, ಒಳಗೆ ಬಂದು ಕನ್ನಡಿಯಲ್ಲಿ ತನ್ನನ್ನು ತಾನು ನೋಡಿಕೊಳ್ಳುತ್ತಿತ್ತು. ಎಷ್ಟೇ ಗದರಿಸಿದರೂ ಕ್ಷೌರಿಕನ ಕೆಲಸ ಮುಗಿಯುವ ವರೆಗೂ ಅಲ್ಲಿಂದ ಕದಲುತ್ತಿರಲಿಲ್ಲ. ಮಂಗನ ಈ ನಡೆ ಗಮನಿಸಿದ ಸಲೂನ್ ಮಾಲೀಕ ದೇವರಾಜ್, ಪ್ರೀತಿಯಿಂದ ಅದರ ತಲೆ…

Read More

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 50ಕ್ಕೂ ಹೆಚ್ಚು ನವಿಲುಗಳ ಸಾವು! – Kannada News | Bird Flu Scare in Tumakuru: Over 54 Peacocks Dead; Chicken Lab Reports Negative

ತುಮಕೂರು, ಮೇ 08: ಜಿಲ್ಲೆಯಲ್ಲಿ ಹಕ್ಕಿ ಜ್ವರದ (Bird Flu) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ 44 ನವಿಲುಗಳು ಮತ್ತು 30 ಕೋಳಿಗಳು ಸಾವನ್ನಪ್ಪಿದ್ದವು. ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವೆಂದು ಲ್ಯಾಬ್ ವರದಿ ದೃಢಪಡಿಸಿತ್ತು. ಕೋಳಿಗಳ ಸಾವಿಗೆ ಸಂಬಂಧಿಸಿದಂತೆ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತಷ್ಟು ನವಿಲುಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಮುಖ್ಯಾಂಶಗಳು ತುಮಕೂರು ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 54ಕ್ಕೂ ಅಧಿಕ ನವಿಲುಗಳ…

Read More

Amazon Summer Sale: ಅಮೆಜಾನ್​ನಲ್ಲಿ ಶುರುವಾಯಿತು ಸಮ್ಮರ್ ಸೇಲ್: ಸ್ಮಾರ್ಟ್‌ಫೋನ್‌ಗಳಿಂದ ಟಿವಿಗಳವರೆಗೆ ಎಲ್ಲವೂ ಅಗ್ಗ – Kannada News | Amazon Great Summer Sale Start platform offer huge discounts on smartphones and others

ಬೆಂಗಳೂರು (ಮೇ. 08): ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ (Amazon Summer Sale) ಇಂದಿನಿಂದ ಅಂದರೆ ಮೇ 8 ರಂದು ಎಲ್ಲಾ ಬಳಕೆದಾರರಿಗೆ ಪ್ರಾರಂಭವಾಗಿದೆ. ಪ್ರೈಮ್ ಸದಸ್ಯರಿಗೆ, ಈ ಸೇಲ್ ನಿನ್ನೆ, ಮೇ 7 ರಂದು ಲೈವ್ ಆಗಿತ್ತು. ಇ-ಕಾಮರ್ಸ್ ಕಂಪನಿಯು ಪ್ರೈಮ್ ಸದಸ್ಯರಿಗೆ ಆರಂಭಿಕ ಪ್ರವೇಶವನ್ನು ನೀಡುತ್ತದೆ. ವರ್ಷದ ಈ ಮೊದಲ ಪ್ರಮುಖ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್ ಟಿವಿಗಳವರೆಗೆ ಎಲ್ಲವೂ ರಿಯಾಯಿತಿಯಲ್ಲಿ ಲಭ್ಯವಿದೆ. ಮತ್ತೊಂದೆಡೆ ಫ್ಲಿಪ್‌ಕಾರ್ಟ್ ನಾಳೆಯಿಂದ, ಮೇ 9 ರಂದು ಹೊಸ ಸೇಲ್ ಅನ್ನು…

Read More

ದಳಪತಿ ವಿಜಯ್ ಜೀವನದಲ್ಲಿ ನಿಜವಾಯ್ತು ‘ಸರ್ಕಾರ್’ ಸಿನಿಮಾದ ದೃಶ್ಯ – Kannada News | Thalapathy Vijay’s CM Bid: DMK AIADMK Alliance to Block TVK in Tamil Nadu Politics?

ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಇತ್ತೀಚೆಗೆ ತಮಿಳುನಾಡು ರಾಜಕೀಯ ಸುದ್ದಿಯಲ್ಲಿದೆ. ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಮ್ (ಟಿವಿಕೆ) ಪಕ್ಷವು ಐತಿಹಾಸಿಕ ಗೆಲುವು ಸಾಧಿಸಿದೆ. ಟಿವಿಕೆ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದಿದೆ. ಆದಾಗ್ಯೂ, ವಿಜಯ್ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಏರ್ಪಡಲಿದೆ ಎಂಬ ವದಂತಿಗಳಿವೆ. ಈ ಎರಡು ವಿರೋಧ ಪಕ್ಷಗಳ ನಡುವಿನ ಮೈತ್ರಿಯ ಸುದ್ದಿ ಎಷ್ಟು ನಿಜ ಎಂಬುದು ಸ್ಪಷ್ಟವಾಗಿಲ್ಲವಾದರೂ, ದಳಪತಿ ವಿಜಯ್ ಮುಖ್ಯಮಂತ್ರಿಯಾಗುವ ಪ್ರಯಾಣ ಸುಲಭವಲ್ಲ…

Read More

ಮಿತಿಮೀರಿದ ಆಟಗಾರರ ವರ್ತನೆ; ಶಿಸ್ತುಕ್ರಮದ ಎಚ್ಚರಿಕೆ ಕೊಟ್ಟ ಬಿಸಿಸಿಐ – Kannada News | IPL Discipline Crackdown: BCCI Warns Players and Owners on Misconduct Rules

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆಟಗಾರರಿಂದ ಪದೇ ಪದೇ ಶಿಸ್ತು ಉಲ್ಲಂಘನೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಆಟಗಾರರು ಮತ್ತು ಅಧಿಕಾರಿಗಳ ಕೊಠಡಿಗಳಿಗೆ ಅನಧಿಕೃತ ವ್ಯಕ್ತಿಗಳ ಭೇಟಿ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ‘ನಾವು ಸುಮ್ಮನೆ ಕುಳಿತಿಲ್ಲ, ನಿಯಮ ಮೀರಿದರೆ ಕಠಿಣ ಶಿಕ್ಷೆ ಖಚಿತ’ ಎಂದು ಎಚ್ಚರಿಸಿದ್ದಾರೆ. ಕೆಲವು ತಂಡಗಳ ಆಟಗಾರರು ಮತ್ತು ಫ್ರಾಂಚೈಸಿಗಳು ಬಿಸಿಸಿಐ ನಿಗದಿಪಡಿಸಿದ ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಮರೆತಿವೆ ಎಂಬ ಆರೋಪ ಕೇಳಿಬಂದಿದೆ….

Read More