Category Archives: Blog

Your blog category

ಸುವೇಂದು ಅಧಿಕಾರಿಯೇ ದುಷ್ಕರ್ಮಿಗಳ ಗುರಿ? ಹೆಚ್ಚಾಯ್ತು ಅನುಮಾನ – Kannada News | Was Suvendu Adhikari the Real Target? Suspicion Deepens After PA Chandranath’s Murder in West Bengal

ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಪ್ರಭಾವಿ ನಾಯಕ ಸುವೆಂದು ಅಧಿಕಾರಿ ಆಪ್ತ ಚಂದ್ರನಾಥ್ ರಥ್ ಹತ್ಯೆಯಾಗಿದ್ದಾರೆ. ಅವರನ್ನು ಬುಧವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ, ಅಸಲಿಗೆ ದುಷ್ಕರ್ಮಿಗಳ ಗುರಿ ಸುವೇಂದು ಅಧಿಕಾರಿಯೇ ಆಗಿದ್ದರೇ ಎಂಬ ಅನುಮಾನ ಇದೀಗ ಬಲವಾಗಿದೆ. ಅಲ್ಲದೆ, ಈ ಘಟನೆಯು ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಉತ್ತರ 24 ಪರಗಣ ಜಿಲ್ಲೆಯ ಮಧ್ಯಗ್ರಾಮದಲ್ಲಿ ಬುಧವಾರ ತಡರಾತ್ರಿ ಚಂದ್ರನಾಥ್ ಕಾರಿನಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದಾಗ, ಎಂಟು ಮಂದಿ ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಏರ್ಪೋರ್ಟ್ ಬಳಿ ಕಾರನ್ನು ಅಡ್ಡಗಟ್ಟಿದ ಹಂತಕರು, ಚಂದ್ರನಾಥ್ ಅವರ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುರಿ ಇಟ್ಟು ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ. ಅತಿ ಹತ್ತಿರದಿಂದ ಗುಂಡು ತಗುಲಿದ ಪರಿಣಾಮ ಚಂದ್ರನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಹತ್ಯೆಯು ಪೂರ್ವಯೋಜಿತವಾಗಿದ್ದು, ಇದಕ್ಕಾಗಿ ಆಸ್ಟ್ರಿಯಾ ಮೂಲದ ಪಿಸ್ತೂಲ್ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸುವೆಂದು ಅಧಿಕಾರಿ ಅವರ ಪರವಾಗಿ ಭವಾನಿಪುರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದ ಚಂದ್ರನಾಥ್ ಅವರನ್ನೇ ಟಾರ್ಗೆಟ್ ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

16 ಕ್ಯಾಚ್​ಗಳು… ಪಂಜಾಬ್ ಕಿಂಗ್ಸ್‌ನ ಫೀಲ್ಡರ್​ಗಳಿಂದ ಕಂಗೆಟ್ಟ ಚಹಲ್! – Kannada News | Yuzvendra Chahal’s Nightmare: 16 Chances Created, 8 Catches Dropped!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮಿಂಚಿದ್ದ ಪಂಜಾಬ್ ಕಿಂಗ್ಸ್​ ತಂಡವು ದ್ವಿತೀಯಾರ್ಧದಲ್ಲಿ ಹ್ಯಾಟ್ರಿಕ್ ಸೋಲನುಭವಿಸಿದೆ. ಈ ಸೋಲುಗಳಿಗೆ ಮುಖ್ಯ ಕಾರಣ ಪಂಜಾಬ್ ಕಿಂಗ್ಸ್​ ಫೀಲ್ಡರ್​ಗಳ ಕಳಪೆ ಪ್ರದರ್ಶನ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಹೀಗೆ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು ಕ್ಯಾಚ್ ಕೈಚೆಲ್ಲುತ್ತಿರುವುದು ಯುಜ್ವೇಂದ್ರ ಚಹಲ್ ಓವರ್​ನಲ್ಲಿ ಎಂಬುದು ಇಲ್ಲಿ ವಿಶೇಷ.

ಚಹಲ್​ನ ದುರಾದೃಷ್ಟ:

ಈ ಬಾರಿಯ ಸೀಸನ್‌ನಲ್ಲಿ ಯುಜ್ವೇಂದ್ರ ಚಹಲ್ ಇದುವರೆಗೆ ಒಟ್ಟು 16 ಕ್ಯಾಚಿಂಗ್ ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಆದರೆ ಅಚ್ಚರಿಯೆಂದರೆ, ಈ ಪೈಕಿ 8 ಕ್ಯಾಚ್‌ಗಳನ್ನು ಫೀಲ್ಡರ್‌ಗಳು ಕೈಬಿಟ್ಟಿದ್ದಾರೆ. ಅಂದರೆ ಇಲ್ಲಿ ಚಹಲ್​​ಗೆ 8 ವಿಕೆಟ್​ಗಳು ನಷ್ಟವಾಗಿವೆ. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಎದುರಾಳಿ ಬ್ಯಾಟರ್​ಗಳು ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣರಾಗಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ  ಯುಜ್ವೇಂದ್ರ ಚಹಲ್ ಅವರಿಗೆ ಬರಬೇಕಿದ್ದ ವಿಕೆಟ್‌ಗಳು ಕೈತಪ್ಪಿದವು. ಚಹಲ್ ಅವರ ಬೌಲಿಂಗ್‌ನಲ್ಲಿ ಪ್ರಮುಖವಾಗಿ ಈ ಕೆಳಗಿನ ಆಟಗಾರರು ಸುಲಭ ಕ್ಯಾಚ್ ಹಾಗೂ ಸ್ಟಂಪಿಂಗ್ ಕೈಬಿಟ್ಟಿದ್ದರು.

  • ಶಶಾಂಕ್ ಸಿಂಗ್: ಚಹಲ್ ಎಸೆದ 8.4ನೇ ಓವರ್‌ನಲ್ಲಿ ಹೆನ್ರಿಕ್ ಕ್ಲಾಸೆನ್ ನೀಡಿದ ಅತ್ಯಂತ ಸುಲಭವಾದ ಕ್ಯಾಚ್ ಅನ್ನು ‘ಡೀಪ್ ಬ್ಯಾಕ್‌ವರ್ಡ್ ಸ್ಕ್ವೇರ್ ಲೆಗ್’ನಲ್ಲಿ ಶಶಾಂಕ್ ಸಿಂಗ್ ಕೈಬಿಟ್ಟರು. ಈ ವೇಳೆ ಕೇವಲ 9 ರನ್ ಗಳಿಸಿದ್ದ ಕ್ಲಾಸೆನ್ ನಂತರ 69 ರನ್ ಬಾರಿಸಿ ಪಂದ್ಯದ ಗತಿಯನ್ನೇ ಬದಲಿಸಿದರು.
  • ಲಾಕಿ ಫರ್ಗುಸನ್: ಚಹಲ್ ಎಸೆದ 11ನೇ ಓವರ್‌ನಲ್ಲಿ ಇಶಾನ್ ಕಿಶನ್ ನೀಡಿದ ಕ್ಯಾಚ್ ಅನ್ನು ಫರ್ಗುಸನ್ ಕೈಚೆಲ್ಲಿದರು. ಈ ಜೀವದಾನವನ್ನು ಬಳಸಿಕೊಂಡ ಇಶಾನ್ ಕಿಶನ್ ಈ ಮ್ಯಾಚ್​ನಲ್ಲಿ 55 ರನ್​ ಚಚ್ಚಿದರು.
  • ಪ್ರಭ್‌ಸಿಮ್ರಾನ್ ಸಿಂಗ್: ಇದೇ ಪಂದ್ಯದಲ್ಲಿ ಚಹಲ್ ಎಸೆತವೊಂದರಲ್ಲಿ ಇಶಾನ್ ಕಿಶನ್ ಅವರನ್ನು ಸ್ಟಂಪಿಂಗ್ ಮಾಡುವ ಅವಕಾಶವನ್ನೂ ವಿಕೆಟ್ ಕೀಪರ್ ಪ್ರಭ್‌ಸಿಮ್ರಾನ್ ಸಿಂಗ್ ಕೈಚೆಲ್ಲಿ ಕೊಂಡರು.
  • ಕೂಪರ್ ಕೊನೊಲಿ: ಲಾಕಿ ಫರ್ಗುಸನ್ ಎಸೆತದಲ್ಲಿ ಇಶಾನ್ ಕಿಶನ್ ನೀಡಿದ ಮತ್ತೊಂದು ಕ್ಯಾಚ್​ ಅನ್ನು ಕೂಪರ್ ಕೊನೊಲಿ ಕೈಚೆಲ್ಲಿದ್ದರು.

ಹತಾಶೆಯ ಪರಾಕಾಷ್ಠೆ:

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಪಡೆಯಲು ಯುಜ್ವೇಂದ್ರ ಚಹಲ್ ಹಲವು ಅವಕಾಶಗಳನ್ನು ಸೃಷ್ಟಿಸಿದರೂ ಪಂಜಾಬ್ ಕಿಂಗ್ಸ್​ ಫೀಲ್ಡರ್​ಗಳು ಈ ಅವಕಾಶಗಳನ್ನು ಕೈಚೆಲ್ಲಿದ್ದರು. ಇದರಿಂದ ಚಹಲ್ ಅವರ ಮುಖದಲ್ಲಿ ಹತಾತೆ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ: Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ!

ಅಂದರೆ ಕಳೆದ 10 ಪಂದ್ಯಗಳಲ್ಲಿ ಯುಜ್ವೇಂದ್ರ ಚಹಲ್ 16 ಅವಕಾಶಗಳನ್ನು ಸೃಷ್ಟಿಸಿದರೂ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು ಹಿಡಿದಿರುವುದು ಕೇವಲ 8 ಕ್ಯಾಚ್​ಗಳನ್ನು ಮಾತ್ರ. ಇನ್ನುಳಿದ 8 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಅಂದರೆ ಇಲ್ಲಿ ಚಹಲ್ ಸ್ಪಿನ್ ಮೋಡಿ ಮಾಡುತ್ತಿದ್ದರೂ ಫೀಲ್ಡರ್​ಗಳಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿಲ್ಲ.

ಯಾರು ‘ವಿಲನ್’!

ಈ ಸೀಸನ್‌ನಲ್ಲಿ ಯುಜ್ವೇಂದ್ರ ಚಹಲ್ ಬೌಲಿಂಗ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಕೈಬಿಟ್ಟಿರುವುದು ಶಶಾಂಕ್ ಸಿಂಗ್. ಅವರು ಈವರೆಗೆ ಒಟ್ಟು ನಾಲ್ಕು ಕ್ಯಾಚ್‌ಗಳನ್ನು ಕೈಚೆಲ್ಲುವ ಮೂಲಕ ಚಹಲ್ ಅವರ ವಿಕೆಟ್ ಸಂಖ್ಯೆ ಏರಿಕೆಯಾಗದಂತೆ ತಡೆದಿದ್ದಾರೆ.

ಇತ್ತ ಪಂಜಾಬ್ ಕಿಂಗ್ಸ್​ ಫೀಲ್ಡಿಂಗ್​ಗಳಿಂದ ಉತ್ತಮ ಬೆಂಬಲವಿಲ್ಲದಿದ್ದರೂ ಚಹಲ್ ವೈಯಕ್ತಿಕವಾಗಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದಾರೆ.  ಅಂದರೆ ಈ ಬಾರಿ ಪಡೆದ 8 ವಿಕೆಟ್​​ಗಳ ಮೂಲಕ ಭಾರತದಲ್ಲಿ 300 ಟಿ20 ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಐಪಿಎಲ್​ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರುವ ಯುಜ್ವೇಂದ್ರ ಚಹಲ್​ (229+ ವಿಕೆಟ್), ಫೀಲ್ಡರ್‌ಗಳ ಸಹಕಾರಯೊಂದಿಗೆ ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಿತ್ತು. ಆದರೆ ಕಳಪೆ ಫೀಲ್ಡಿಂಗ್ ಕಾರಣ 8 ವಿಕೆಟ್​ಗಳು ಕೈ ತಪ್ಪಿದೆ. ಈ ವಿಕೆಟ್​ಗಳ ಕೈ ತಪ್ಪುವಿಕೆಯೊಂದಿಗೆ ಪಂಜಾಬ್ ಕಿಂಗ್ಸ್​ ಸೋಲಿನತ್ತ ಮುಖ ಮಾಡುತ್ತಿರುವುದು ಮಾತ್ರ ವಿಪರ್ಯಾಸ.

Source link

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ – Kannada News | Prabhas’ Spirit Movie Release Date Confirmed: Next year March 5 No Delay Rumors

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಮತ್ತು ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಸಲ್ಮಾನ್ ಖಾನ್ ನಟನೆಯ ದೊಡ್ಡ ಸಿನಿಮಾವೊಂದು ಇದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಕಾರಣ, ‘ಸ್ಪಿರಿಟ್’ ತನ್ನ ರಿಲೀಸ್ ಡೇಟ್ ಬದಲಿಸಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಚಿತ್ರತಂಡ ಈಗ ಈ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದೆ ಎಂದು ವರದಿ ಆಗಿದೆ.

1.ಮಾರ್ಚ್ 5, 2027ರಂದೇ ‘ಸ್ಪಿರಿಟ್’ ರಿಲೀಸ್ ಅಧಿಕೃತ

2.ಸಲ್ಮಾನ್ ಖಾನ್ ಸಿನಿಮಾ ಕಾರಣಕ್ಕೆ ಸಿನಿಮಾ ಮುಂದೂಡಿಕೆ ವದಂತಿ ಸುಳ್ಳು

3.ಪೊಲೀಸ್ ಆಫೀಸರ್ ಪಾತ್ರದಲ್ಲಿ ಪ್ರಭಾಸ್ ಅಬ್ಬರ

‘ಸ್ಪಿರಿಟ್’ ಸಿನಿಮಾ ಈ ಹಿಂದೆ ಘೋಷಿಸಿದಂತೆ 2027ರ ಮಾರ್ಚ್ 5ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯ ಚಿತ್ರದ ಶೂಟಿಂಗ್ ಪ್ಲಾನ್ ಮಾಡಿದಂತೆಯೇ ಭರದಿಂದ ಸಾಗುತ್ತಿದ್ದು, ಯಾವುದೇ ಕಾರಣಕ್ಕೂ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇರುವುದಿಲ್ಲ ಎಂದು ತಂಡ ಸ್ಪಷ್ಟಪಡಿಸಿದೆ. ಈ ಮೂಲಕ ಸಲ್ಮಾನ್ ಖಾನ್ ಸಿನಿಮಾದಿಂದಾಗಿ ಪ್ರಭಾಸ್ ಸಿನಿಮಾ ಹಿಂದೆ ಸರಿಯಲಿದೆ ಎಂಬ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದೆ.

ಪ್ರಭಾಸ್ ಅವರಿಗೆ ಬಾಲಿವುಡ್​ಗಿಂತ ಹೆಚ್ಚಿನ ಅಭಿಮಾನಿ ಬಳಗ ದಕ್ಷಿಣ ಭಾರತದಲ್ಲಿ ಇದೆ. ಟಾಲಿವುಡ್ ಅಲ್ಲಿ ಅವರನ್ನು ಆರಾಧಿಸುವವರು ಬಹಳಷ್ಟು ಮಂದಿ ಇದ್ದಾರೆ. ಹೀಗಾಗಿ, ಹಿಂದಿಯಲ್ಲಿ ರಿಲೀಸ್ ಆಗುವ ಸಿನಿಮಾ ಬಗ್ಗೆ ಅವರು ಹೆದರುವ ಅಗತ್ಯವೇ ಇಲ್ಲ ಎಂಬುದು ತಂಡದ ಅಭಿಪ್ರಾಯ.

ಇದನ್ನೂ ಓದಿ: ಮುಂಬೈನಲ್ಲಿ ಪ್ರಭಾಸ್ ಕ್ರೇಜ್ ಹೇಗಿದೆ? ಸ್ವಂತ ಅನುಭವ ವಿವರಿಸಿದ ಕರಣ್ ಜೋಹರ್

ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಮೊದಲ ಬಾರಿಗೆ ಒಂದಾಗುತ್ತಿರುವ ಈ ಚಿತ್ರದ ಮೇಲೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಇದೆ. ಇದರಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಬಾಲಿವುಡ್ ನಟಿ ತೃಪ್ತಿ ದಿಮ್ರಿ ಈ ಚಿತ್ರದ ನಾಯಕಿಯಾಗಿದ್ದು, ಮೊದಲ ಬಾರಿಗೆ ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿವೇಕ್ ಒಬೆರಾಯ್ ಪ್ರಮುಖ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಲ್ಮಾನ್ ಸಿನಿಮಾ ಯಾವುದು?

ಸಲ್ಮಾನ್ ಹೊಸ ಸಿನಿಮಾಗೆ ತಾತ್ಕಾಲಿಕವಾಗಿ ‘ಎಸ್​​ವಿಸಿ 63’ ಎಂದು ಹೆಸರು ಇಡಲಾಗಿದೆ. 2027ರ ಈದ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರಲಿದೆ. ಈ ಸಿನಿಮಾಗೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷ ಎಂದರೆ ಈ ಮೊದಲು ಅವರು ಪ್ರಭಾಸ್ ಜೊತೆ ಸಿನಿಮಾ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ! – Kannada News | Pat Cummins said Good to see the Aussies do well

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ 59 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಇದಾಗ್ಯೂ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 33 ರನ್​ಗಳಿಂದ ಸೋಲನುಭವಿಸಿತು.

ಈ ಗೆಲುವಿನ ಬಳಿಕ ಮಾತನಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್, ಕೂಪರ್ ಕೊನೊಲಿ ಅವರ ಆಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

“ಇದು ಕೂಪರ್ ಕೊನೊಲಿ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇದು ಅವರಿಗೆ ಉತ್ತಮ ಫಲಿತಾಂಶ. ಒಬ್ಬ ಆಸ್ಟ್ರೇಲಿಯನ್ ಆಟಗಾರ ಇಷ್ಟು ಅದ್ಭುತವಾಗಿ ಆಡುವುದನ್ನು ನೋಡುವುದು ಖುಷಿ ನೀಡುತ್ತದೆ. ಕೂಪರ್ ಕೊನೊಲಿ ಆಟ ಆಸ್ಟ್ರೇಲಿಯಾ ತಂಡಕ್ಕೂ ಶುಭ ಸಂಕೇತ” ಎಂದು ಪ್ಯಾಟ್ ಕಮಿನ್ಸ್ ಹಾಡಿ ಹೊಗಳಿದ್ದಾರೆ.

ಇಲ್ಲಿ ಕೂಪರ್ ಕೊನೊಲಿ ಎದುರಾಳಿ ತಂಡದ ಆಟಗಾರನಾಗಿದ್ದರೂ ಆಸ್ಟ್ರೇಲಿಯಾದವ ಅತ್ಯುತ್ತಮವಾಗಿ ಆಡಿರುವುದನ್ನು ನೋಡಿ ಪ್ಯಾಟ್ ಕಮಿನ್ಸ್​ಗೆ ಖುಷಿಯಾಗಿದೆ. ಏಕೆಂದರೆ ಕೊನೊಲಿ ಆಸ್ಟ್ರೇಲಿಯಾ ತಂಡದ ಭರವಸೆಯ ದಾಂಡಿಗ. ಇದೇ ರೀತಿ ಪ್ರದರ್ಶನ ನೀಡಿದರೆ ಅದರಿಂದ ಆಸ್ಟ್ರೇಲಿಯಾ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂಬುದು ಕಮಿನ್ಸ್ ಅವರ ಅಭಿಮತ.

ಇದನ್ನೂ ಓದಿ: ಅಭಿಷೇಕ್ ಆರ್ಭಟಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

ಇನ್ನು ಈ ಪಂದ್ಯದಲ್ಲಿ ಶತಕ ಸಿಡಿಸುವುದರೊಂದಿಗೆ ಕೂಪರ್ ಕೊನೊಲಿ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆ ಯಾವುದೆಂದರೆ…

  •  ಕಿರಿಯ ಶತಕವೀರ: 22 ವರ್ಷದ ಕೊನೊಲಿ, ಐಪಿಎಲ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಓವರ್‌ಸೀಸ್ ಆಟಗಾರ ಎನಿಸಿಕೊಂಡರು.
  • ಬ್ರಾಡ್‌ಮನ್ ಪ್ರಶಸ್ತಿ ವಿಜೇತ: ಈ ವರ್ಷದ ಆರಂಭದಲ್ಲೇ ‘ಬ್ರಾಡ್‌ಮನ್ ಯಂಗ್ ಕ್ರಿಕೆಟರ್ ಆಫ್ ದಿ ಇಯರ್’ ಪ್ರಶಸ್ತಿ ಪಡೆದಿದ್ದ ಕೊನೊಲಿ, ಈಗ ಐಪಿಎಲ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.
  • ಏಕಾಂಗಿ ಹೋರಾಟ: ಹೈದರಾಬಾದ್ ನೀಡಿದ್ದ 235 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪರ ಕೊನೊಲಿ ಒಬ್ಬರೇ ಹೋರಾಟ ನಡೆಸಿದರು. ಈ ಏಕಾಂಗಿ ಹೋರಾಟಕ್ಕೆ ಪ್ಯಾಟ್ ಕಮಿನ್ಸ್ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಅಗ್ರಸ್ಥಾನಕ್ಕೇರಿದ ಎಸ್​ಆರ್​​ಹೆಚ್​:

ಪಂಜಾಬ್ ಕಿಂಗ್ಸ್​ ವಿರುದ್ಧದ ಗೆಲುವಿನೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಲ್ಲದೆ ಮುಂದಿನ 3 ಪಂದ್ಯಗಳಲ್ಲಿ ಎಸ್​ಆರ್​​ಹೆಚ್ ತಂಡ ಒಂದು ಗೆಲುವು ಸಾಧಿಸಿದರೆ ಪ್ಲೇಆಫ್ ಆಡುವುದು ಸಹ ಖಚಿತವಾಗಲಿದೆ.

Source link

ಪಿಣರಾಯಿ ವಿಜಯನ್ ಕೇರಳ ಸಿಎಂ ಹುದ್ದೆಯಿಂದ ನಿರ್ಗಮಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಹೆಸರಿಗೆ ಮತ್ತೊಂದು ದಾಖಲೆ! – Kannada News | CM Siddaramaiah Now India’s Oldest Chief Minister After Pinarayi Vijayan Resigns; Breaks Karnataka Records

ಬೆಂಗಳೂರು, ಮೇ 7: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ (LDF) ಪರಾಜಯಗೊಂಡ ಕಾರಣ 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿಣರಾಯಿ ವಿಜಯನ್ ನಿರ್ಗಮನದೊಂದಿಗೆ, ಕರ್ನಾಟಕದ ಮುಖ್ಯಮಂತ್ರಿ, 78 ವರ್ಷ ವಯಸ್ಸಿನ ಸಿದ್ದರಾಮಯ್ಯ (Siddaramaiah) ಈಗ ದೇಶದ ಅತ್ಯಂತ ಹಿರಿಯ (Oldest CM) ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಸಿದ್ದರಾಮಯ್ಯ ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲು ಎನ್ನಬಹುದು.

ಮುಖ್ಯಾಂಶಗಳು

  • 78 ವರ್ಷ 9 ತಿಂಗಳ ಪ್ರಾಯದ ಸಿದ್ದರಾಮಯ್ಯ ಈಗ ಭಾರತದ ಅತ್ಯಂತ ಹಿರಿಯ ಮುಖ್ಯಮಂತ್ರಿ.
  • ಡಿ. ದೇವರಾಜ ಅರಸು ದಾಖಲೆ ಮುರಿದು ಕರ್ನಾಟಕದ ಸುದೀರ್ಘ ಕಾಲದ ಸಿಎಂ ಎಂಬ ಕೀರ್ತಿಗೆ ಈಗಾಗಲೇ ಭಾಜನರಾಗಿರುವ ಸಿದ್ದರಾಮಯ್ಯ.
  • 17 ಬಾರಿ ರಾಜ್ಯ ಬಜೆಟ್ ಮಂಡಿಸಿದ ಅಪರೂಪದ ದಾಖಲೆಯೂ ಸಿದ್ದರಾಮಯ್ಯ ಹೆಸರಿನಲ್ಲಿದೆ.

ವಯಸ್ಸಿನ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ ಮೊದಲಿಗ

ಪ್ರಸ್ತುತ ದೇಶದ ಮುಖ್ಯಮಂತ್ರಿಗಳ ಪಟ್ಟಿಯನ್ನು ಗಮನಿಸಿದರೆ, ಸಿದ್ದರಾಮಯ್ಯ (78) ಅವರ ನಂತರ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು (75), ಮಿಜೋರಾಂನ ಲಾಲ್ದುಹೊಮಾ (74) ಮತ್ತು ನಾಗಾಲ್ಯಾಂಡ್‌ನ ನೆಫಿಯು ರಿಯೊ (74) ಅವರು ಹಿರಿಯರ ಸಾಲಿನಲ್ಲಿ ನಿಲ್ಲುತ್ತಾರೆ. ಇನ್ನು ಅರುಣಾಚಲ ಪ್ರದೇಶದ ಪೆಮಾ ಖಂಡು (46) ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು 1983 ರಲ್ಲಿ ತಮ್ಮ 36 ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಅಂದಿನಿಂದ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಮತ್ತು ಈಗ ಎರಡನೇ ಬಾರಿಗೆ ಸಿಎಂ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಯಡಿಯೂರಪ್ಪ ದಾಖಲೆ ಬ್ರೇಕ್

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಅತಿ ಹಿರಿಯ ವಯಸ್ಸಿನಲ್ಲಿ ಸಿಎಂ ಹುದ್ದೆ ಅಲಂಕರಿಸಿದ ದಾಖಲೆಯೂ ಈಗ ಸಿದ್ದರಾಮಯ್ಯ ಅವರ ಪಾಲಾಗಿದೆ. ಈ ಹಿಂದೆ ಬಿಜೆಪಿ ಪ್ರಭಾವಿ ನಾಯಕ ಬಿಎಸ್ ಯಡಿಯೂರಪ್ಪ 2021 ರಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅವರಿಗೆ 78 ವರ್ಷ 5 ತಿಂಗಳು ವಯಸ್ಸಾಗಿತ್ತು. ಈಗ ಸಿದ್ದರಾಮಯ್ಯಗೆ ಅದಕ್ಕಿಂತಲೂ ಹೆಚ್ಚಿನ ವಯಸ್ಸು. ಆ ಮೂಲಕ ಕರ್ನಾಟಕದ ಅತ್ಯಂತ ಹಿರಿಯ ಸಿಎಂ ಎನಿಸಿಕೊಂಡಿದ್ದಾರೆ. ಹೋಲಿಕೆ ಮಾಡಿದರೆ, ಎಸ್.ಎಂ. ಕೃಷ್ಣ 72ನೇ ವಯಸ್ಸಿನಲ್ಲಿ ಮತ್ತು ಜೆ.ಎಚ್. ಪಟೇಲ್ 69ನೇ ವಯಸ್ಸಿನಲ್ಲಿ ಅಧಿಕಾರದಿಂದ ನಿರ್ಗಮಿಸಿದ್ದರು. ಆರ್. ಗುಂಡೂರಾವ್ ಅವರು 43 ನೇ ವಯಸ್ಸಿನಲ್ಲಿ ರಾಜ್ಯದ ಅತ್ಯಂತ ಕಿರಿಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಸುದೀರ್ಘ ಕಾಲದ ಮುಖ್ಯಮಂತ್ರಿ

ಸಿದ್ದರಾಮಯ್ಯ ಅವರು ಕೇವಲ ವಯಸ್ಸಿನಲ್ಲಿ ಮಾತ್ರವಲ್ಲದೆ, ಅಧಿಕಾರಾವಧಿಯಲ್ಲೂ ದಾಖಲೆ ಬರೆದಿದ್ದಾರೆ. ಡಿ. ದೇವರಾಜ ಅರಸು ಅವರು ಒಟ್ಟು 7 ವರ್ಷ 239 ದಿನಗಳ ಕಾಲ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ಅವರು 2013 ರಿಂದ 2018 ರವರೆಗೆ ಪೂರ್ಣ ಅವಧಿ ಮುಗಿಸಿ, ಮೇ 2023 ರಿಂದ ಮತ್ತೆ ಅಧಿಕಾರದಲ್ಲಿದ್ದಾರೆ. ಈ ಮೂಲಕ ಅರಸು ಅವರ ಸುದೀರ್ಘ ಕಾಲದ ಅಧಿಕಾರಾವಧಿಯ ದಾಖಲೆಯನ್ನು ಸಿದ್ದರಾಮಯ್ಯ ಹಿಂದಿಕ್ಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇದೊಂದು ಪೂರ್ವ ಯೋಜಿತ ಕೊಲೆ, ಆಪ್ತ ಚಂದ್ರನಾಥ್ ರಥ್ ಸಾವಿನ ಬಗ್ಗೆ ಸುವೇಂದು ಅಧಿಕಾರಿ ಮಾತು – Kannada News | Suvendu Adhikari’s PA Murdered in West Bengal: Adhikari Calls it Pre Planned Killing

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಬಾರಿಸಿ ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ರಥ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದು ಪೂರ್ವ ಯೋಜಿತ ಕೊಲೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಎರಡು-ಮೂರು ದಿನಗಳಿಂದ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂದರು.

ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಪ್ರದೇಶದ ದೊಹರಿಯಾದಲ್ಲಿ ಈ ಘಟನೆ ನಡೆದಿದೆ. 41 ವರ್ಷದ ಚಂದ್ರನಾಥ್ ರಥ್ ಅವರು ಸಾರ್ವಜನಿಕ ರಸ್ತೆಯಲ್ಲಿ ಹೋಗುತ್ತಿದ್ದಾಗ ಸಂಚು ರೂಪಿಸಿದ್ದ ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ರಥ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ತಮ್ಮ ಆಪ್ತ ಸಹಾಯಕರನ್ನು ಕಳೆದುಕೊಂಡ ಆಘಾತದಲ್ಲಿರುವ ಸುವೇಂದು ಅಧಿಕಾರಿ, ಇದೊಂದು ನಿರ್ದಯ ಮತ್ತು ಪೂರ್ವ ಯೋಜಿತ ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಹಂತಕರು ಕಳೆದ 2-3 ದಿನಗಳಿಂದ ರಥ್ ಅವರ ಚಲನವಲನದ ಮೇಲೆ ಕಣ್ಣಿಟ್ಟಿದ್ದರು . ಕೊಲೆಗೆ ಸಂಪೂರ್ಣ ಸ್ಕೆಚ್ ಹಾಕಲಾಗಿತ್ತು. ಬಂಗಾಳ ಪೊಲೀಸ್ ಮಹಾನಿರ್ದೇಶಕರು (DGP) ಕೂಡ ಇದು ಯೋಜಿತ ಕೃತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಂಗಾಳದಲ್ಲಿ ಕೇಸರಿ ಯುಗಾರಂಭ: ಮೇ 9 ರಂದು ಬಿಜೆಪಿ ಸರ್ಕಾರದ ಪಟ್ಟಾಭಿಷೇಕ, ಸಿಎಂ ರೇಸ್‌ನಲ್ಲಿ ಸುವೇಂದು ಅಧಿಕಾರಿ ಮುಂಚೂಣಿ

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ವಿರುದ್ಧ ಕಿಡಿಕಾರಿದ ಸುವೇಂದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿದರು. ಇದು ಟಿಎಂಸಿಯ ಮಹಾಜಂಗಲ್ ರಾಜ್ಗೆ ಸಾಕ್ಷಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಅಪರಾಧಿಗಳನ್ನು ನಿರ್ನಾಮ ಮಾಡುವುದು ಖಚಿತ. ಆದರೆ, ಕಾರ್ಯಕರ್ತರು ಸಮಾಧಾನದಿಂದಿರಬೇಕು, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಅವರು ಮನವಿ ಮಾಡಿದರು.

ಈ ಹತ್ಯೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಮಾಹಿತಿ ನೀಡಲಾಗಿದೆ. ಕೇಂದ್ರ ಸಚಿವೆ ಸುಕಾಂತ ಮಜುಂದಾರ್ ಈಗಾಗಲೇ ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಪೊಲೀಸರು ಘಟನಾ ಸ್ಥಳದಲ್ಲಿ ಕೆಲವು ಪ್ರಮುಖ ಪುರಾವೆಗಳನ್ನು ಸಂಗ್ರಹಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

294 ಸ್ಥಾನಗಳ ಪೈಕಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಅಪ್ರತಿಮ ಬಹುಮತ ಸಾಧಿಸಿದೆ. ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ. ಮೇ 9 ರಂದು ಬಿಜೆಪಿ ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲಿದೆ. ಸೋಲಿನ ಹೊರತಾಗಿಯೂ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ನಿರಾಕರಿಸುತ್ತಿದ್ದಾರೆ ಮತ್ತು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ನಡೆಯುತ್ತಿರುವಾಗಲೇ ಈ ಹತ್ಯೆ ನಡೆದಿರುವುದು ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಸ್ತೆ ಬದಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತು ಬಿಟ್ಟು ಹೋಗ್ತೀರಾ? ಹಾಗಿದ್ರೆ ಈ ಸಿಸಿಟಿವಿ ವಿಡಿಯೋ ನೋಡಲೇಬೇಕು – Kannada News | Bengaluru Crime: Thieves Break Car Window, Steal Electronics and TV in Ashok Nagar; Incident Caught on CCTV

ಬೆಂಗಳೂರು, ಮೇ 7: ರಾಜಧಾನಿ ಬೆಂಗಳೂರಿನ ರಸ್ತೆ ಪಕ್ಕದಲ್ಲಿ ಕಾರು ಪಾರ್ಕ್ ಮಾಡಿ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿಯೇ ಬಿಟ್ಟು ಹೋಗುವವರು ಎಚ್ಚೆತ್ತುಕೊಳ್ಳಬೇಕಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳೆದ ತಿಂಗಳು ನಡೆದ ಈ ಘಟನೆಯಲ್ಲಿ, ಕಾರಿನ ಮಾಲೀಕರು ರಾತ್ರಿ ಟಿವಿ ಹಾಗೂ ಕೆಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಗೆ ತೆರಳಿದ್ದರು. ಬೆಳಿಗ್ಗೆ 7 ಗಂಟೆಗೆ ಬಂದು ನೋಡಿದಾಗ ಕಾರಿನ ಗಾಜು ಒಡೆದಿರುವುದು ಹಾಗೂ ಒಳಗಿದ್ದ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಮತ್ತೊಂದು ಕಾರಿನಲ್ಲಿ ಬಂದ ಕಿಡಿಗೇಡಿಗಳು ಈ ಕೃತ್ಯ ಎಸಗಿರುವುದು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರಿಗಾಗಿ ಶೋಧ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

LSG vs RCB: ಐಪಿಎಲ್​ನಲ್ಲಿಂದು ಆರ್‌ಸಿಬಿ-ಲಕ್ನೋ ಮುಖಾಮುಖಿ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನೆಲ್ಲ ಆಗಲಿದೆ? – Kannada News | Lucknow RCB clash in IPL 2026 today What will happen to the points table if Bengaluru wins?

ಬೆಂಗಳೂರು (ಮೇ. 07): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 50 ನೇ ಪಂದ್ಯವು ಗುರುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ನಡುವೆ ನಡೆಯಲಿದೆ. ಈ ಹಿಂದೆ ಏಪ್ರಿಲ್ 15 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಆರ್‌ಸಿಬಿ, ರಜತ್ ಪಾಟಿದಾರ್ ಅವರ ಅದ್ಭುತ ಇನ್ನಿಂಗ್ಸ್‌ನಿಂದ ಎಲ್‌ಎಸ್‌ಜಿಯನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಇದೀಗ ಇಂದು ಮತ್ತೊಂದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಲಕ್ನೋ

ಕಳಪೆ ಫಾರ್ಮ್ ನಿಂದ ಬಳಲುತ್ತಿರುವ ಎಲ್​ಎಸ್​ಜಿ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಇದುವರೆಗಿನ ಒಂಬತ್ತು ಪಂದ್ಯಗಳಲ್ಲಿ ಏಳರಲ್ಲಿ ಸೋತಿದೆ. ಆರು ಪಂದ್ಯಗಳ ಸತತ ಸೋಲಿನ ನಂತರ ತಂಡ ಈ ಪಂದ್ಯವನ್ನು ಪ್ರವೇಶಿಸಲಿದೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ ಆರು ವಿಕೆಟ್‌ಗಳ ಸೋಲು ಅನುಭವಿಸಿದೆ. ಪ್ಲೇಆಫ್ ತಲುಪುವ ಅವರ ಭರವಸೆ ಬಹುತೇಕ ಮುಗಿದಿರುವುದರಿಂದ, ತಂಡವು ಪ್ರವಾಸಿ ತಂಡದ ವಿರುದ್ಧ ಬಲಿಷ್ಠ ಪ್ರದರ್ಶನ ನೀಡುವ ಗುರಿಯನ್ನು ಹೊಂದಿದೆ.

ಆರ್‌ಸಿಬಿ 9 ಪಂದ್ಯಗಳಲ್ಲಿ 6 ರಲ್ಲಿ ಗೆದ್ದಿದೆ

ಮತ್ತೊಂದೆಡೆ, ಆರ್‌ಸಿಬಿ ಪ್ಲೇಆಫ್ ತಲುಪಲು ಕೆಲವೇ ಹೆಜ್ಜೆಗಳ ದೂರದಲ್ಲಿದೆ. ಒಂಬತ್ತು ಪಂದ್ಯಗಳಲ್ಲಿ ಆರರಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯವನ್ನು ಪ್ರವೇಶಿಸಲಿದೆ. ಲಕ್ನೋ ಸೂಪರ್ ಜೈಂಟ್ಸ್ ಅನ್ನು ಸೋಲಿಸುವ ಮೂಲಕ ತಮ್ಮ ಮುನ್ನಡೆಯನ್ನು ಬಲಪಡಿಸುವ ಮತ್ತು ಪ್ಲೇಆಫ್‌ಗೆ ಹತ್ತಿರವಾಗುವ ಗುರಿಯನ್ನು ತಂಡ ಹೊಂದಿದೆ.

SRH vs PBKS: ಸತತ ಮೂರನೇ ಸೋಲು: ಪಂದ್ಯ ಸೋತಿದ್ದರಿಂದ ಕೋಪಗೊಂಡ ಶ್ರೇಯಸ್ ಅಯ್ಯರ್, ಏನು ಹೇಳಿದ್ರು ನೋಡಿ

ಲಕ್ನೋ ಮತ್ತು ಆರ್‌ಸಿಬಿಯ ಹೆಡ್ ಟು ಹೆಡ್ ದಾಖಲೆ

ಹೆಡ್-ಟು-ಹೆಡ್ ದಾಖಲೆಯಲ್ಲಿ ಆರ್‌ಸಿಬಿ ಎಲ್‌ಎಸ್‌ಜಿಗಿಂತ ಮೇಲುಗೈ ಸಾಧಿಸಿದೆ. ಬೆಂಗಳೂರು ಇಲ್ಲಿಯವರೆಗೆ ಪಂತ್ ಪಡೆಯ ವಿರುದ್ಧ ಏಳು ಪಂದ್ಯಗಳನ್ನು ಆಡಿದೆ, ಅವುಗಳಲ್ಲಿ ಐದು ಪಂದ್ಯಗಳನ್ನು ಆರ್​ಸಿಬಿ ಗೆದ್ದರೆ, ಸೂಪರ್ ಜೈಂಟ್ಸ್ ಕೇವಲ ಎರಡು ಬಾರಿ ಮಾತ್ರ ಗೆದ್ದಿದೆ.

ಪಂದ್ಯಕ್ಕೆ ಎರಡೂ ತಂಡಗಳು ಇಂತಿವೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಟಿಮ್ ಡೇವಿಡ್, ಜಾಕೋಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಜೋಶ್ ಹ್ಯಾಜಲ್‌ವುಡ್, ನುವಾನ್ ತುಷಾರ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ರಸಿಖ್ ದಾರ್, ಭುವನೇಶ್ವರ್ ಕುಮಾರ್, ಜೋರ್ಡಾನ್ ಕಾಕ್ಸ್, ವೆಂಕಟ್ ಸಿಂಗ್, ಸುಯಶ್ ಲ್ಯೂನ್ ಕಾಕ್ಸ್, ವೆಂಕಟ್ ಸಿಂಗ್ ಶರ್ಮಾ, ಭುವನೇಶ್ವರ್ ಕುಮಾರ್ ಕಾನಿಷ್ಕ್ ಚೌಹಾಣ್, ಅಭಿನಂದನ್ ಸಿಂಗ್, ಮಂಗೇಶ್ ಯಾದವ್, ಫಿಲ್ ಸಾಲ್ಟ್, ಸಾತ್ವಿಕ್ ದೇಸ್ವಾಲ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ (ನಾಯಕ), ಏಡೆನ್ ಮರ್ಕ್ರಾಮ್, ಹಿಮ್ಮತ್ ಸಿಂಗ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಮುಕುಲ್ ಚೌಧರಿ, ಅಕ್ಷತ್ ರಘುವಂಶಿ, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಅರ್ಶಿನ್ ಕುಲಕರ್ಣಿ, ವನಿಂದು ಹಸರಂಗ, ಅಯ್ ಖಾನ್ ಕುಲಕರ್ಣಿ, ಅಯ್ ಖಾನಮಿ ಬಸಾಮದ್ ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಆಕಾಶ್ ಸಿಂಗ್, ಪ್ರಿನ್ಸ್ ಯಾದವ್, ಅರ್ಜುನ್ ತೆಂಡೂಲ್ಕರ್, ಅನ್ರಿಚ್ ನಾರ್ಟ್ಜೆ, ನಮನ್ ತಿವಾರಿ, ಮಯಾಂಕ್ ಯಾದವ್, ಮೊಹ್ಸಿನ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಏಕಾಏಕಿ ಸರ್ಜರಿಗೆ ಒಳಗಾದ ಅಕ್ಷಯ್ ಕುಮಾರ್; ಅಂಥದ್ದೇನಾಯ್ತು? – Kannada News | Akshay Kumar Undergoes Eye Surgery; Takes Filming Break After Kerala Shoot

ಬಾಲಿವುಡ್‌ನ ನಟ ಅಕ್ಷಯ್ ಕುಮಾರ್ (Akshay Kumar) ಸದಾ ಸಿನಿಮಾ ರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಒಂದು ದಿನವೂ ಬಿಡದೇ ಶೂಟ್ ಮಾಡುತ್ತಾರೆ. ಆದರೆ, ಈಗ ಅವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಸದ್ಯ ಅವರು ಚಿತ್ರೀಕರಣದಿಂದ ವಿರಾಮ ಪಡೆದಿದ್ದಾರೆ. ಪ್ರಿಯದರ್ಶನ್ ನಿರ್ದೇಶನದ ‘ಭೂತ್ ಬಂಗ್ಲಾ’ ಚಿತ್ರದ ಯಶಸ್ಸಿನ ಅಲೆಯಲ್ಲಿರುವ ಅಕ್ಷಯ್, ಒಂದು ಬ್ರೇಕ್ ಪಡೆದಿದ್ದಾರೆ. ಅನೀಸ್ ಬಾಜ್ಮಿ ನಿರ್ದೇಶನದ ಮುಂದಿನ ಚಿತ್ರದ ಶೂಟ್​​ಗೂ ಮೊದಲು ಅವರು ಈ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.

1.ಮೇ 6ರಂದು ಅಕ್ಷಯ್ ಕುಮಾರ್‌ಗೆ ಕಣ್ಣಿನ ಶಸ್ತ್ರಚಿಕಿತ್ಸೆ

2.ಕೇರಳದಲ್ಲಿ ಅನೀಸ್ ಬಾಜ್ಮಿ ಚಿತ್ರದ ಶೂಟಿಂಗ್ ಮುಕ್ತಾಯ.

3. 15 ವರ್ಷಗಳಿಂದ ಸಮೋಸಾ ತ್ಯಜಿಸಿರುವ ‘ಖಿಲಾಡಿ’ ನಟ

ಮೇ 6ರ ಬೆಳಿಗ್ಗೆ ಅಕ್ಷಯ್ ಕುಮಾರ್ ಅವರಿಗೆ ದೃಷ್ಟಿ ದೋಷ ನಿವಾರಣೆಗಾಗಿ ಸಣ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕೇರಳದಲ್ಲಿ ನಡೆಯುತ್ತಿದ್ದ ಶೂಟಿಂಗ್ ಮುಗಿದ ಬಳಿಕೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರ ಸಲಹೆಯಂತೆ ಚೇತರಿಸಿಕೊಳ್ಳಲು ಅವರಿಗೆ ಕೆಲ ದಿನಗಳ ವಿಶ್ರಾಂತಿಯ ಅಗತ್ಯವಿದೆ. ಇತ್ತೀಚೆಗೆ ಕೆರಳದ ಗ್ಯಾಪ್ ರೋಡ್ ಅಲ್ಲಿ ಅವರು ಸಿನಿಮಾ ಶೂಟ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು.

ಶಸ್ತ್ರಚಿಕಿತ್ಸೆಗೆ ಒಂದು ದಿನ ಮೊದಲಷ್ಟೇ ಅಕ್ಷಯ್ ಕುಮಾರ್ ಅವರು ಕೇರಳದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ‘ಸುಂದರವಾದ ಜಾಗದಲ್ಲಿ ಒಳ್ಳೆಯ ಜನರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವ. ನಿರ್ದೇಶಕ ಅನೀಸ್ ಬಾಜ್ಮಿ, ವಿದ್ಯಾ ಬಾಲನ್, ರಾಶಿ ಖನ್ನಾ ಮತ್ತು ಇಡೀ ತಂಡಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದರು.

ತಮ್ಮ ಶಿಸ್ತುಬದ್ಧ ಜೀವನಶೈಲಿಯ ಬಗ್ಗೆ ಮಾತನಾಡಿರುವ ಅಕ್ಷಯ್ ಕುಮಾರ್, ಕಳೆದ 15 ವರ್ಷಗಳಿಂದ ತಾವು ಸಮೋಸಾವನ್ನೇ ತಿಂದಿಲ್ಲ ಎಂಬ ಕುತೂಹಲಕಾರಿ ವಿಷಯವನ್ನು ಬಿಚ್ಚಿಟ್ಟಿದ್ದರು. ಇದು ಅವರು ತಮ್ಮ ಫಿಟ್ನೆಸ್​​ಗೆ ಎಷ್ಟು ಒತ್ತು ಕೊಡುತ್ತಾರೆ ಎಂಬುದಕ್ಕೆ ಕೊಡಬಹುದಾದ ಒಳ್ಳೆಯ ಉದಾಹರಣೆ.

ಇದನ್ನೂ ಓದಿ: ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಿದ್ದಾರೆ. ಅವರ ಬಳಿ ‘ವೆಲ್ಕಮ್ ಟು ದಿ ಜಂಗಲ್’, ‘ಹೈವಾನ್’ ಮತ್ತು ‘ಗೋಲ್‌ಮಾಲ್ 5’ ಚಿತ್ರಗಳು ಇವೆ. ಇತ್ತೀಚೆಗೆ ಅವರು ಬ್ಯಾಕ್​ ಟು ಬ್ಯಾಕ್ ಸೋಲು ಕಂಡಿದ್ದರು. ಅವರಿಗೆ ‘ಭೂತ್ ಬಂಗ್ಲಾ’ ಸಿನಿಮಾ ಕೊಂಚ ರಿಲೀಫ್ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:03 am, Thu, 7 May 26

Source link

ಸೋಲಿನ ನಡುವೆ ಹೊಸ ಚರಿತ್ರೆ ಬರೆದ ಕೂಪರ್ ಕೊನೊಲಿ! – Kannada News | Cooper Connolly Creates New History in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸೋಲಿನ ನಡುವೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಬ್ಯಾಟರ್ ಎಂಬ ದಾಖಲೆ ಪಂಜಾಬ್ ಕಿಂಗ್ಸ್​ ತಂಡದ ಯುವ ದಾಂಡಿಗ ಕೂಪರ್ ಕೊನೊಲಿ (Cooper Connolly) ಪಾಲಾಗಿದೆ. (PC: IPL)

ಹೈದರಾಬಾದ್​​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ  ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. (PC: IPL)

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೂಪರ್ ಕೊನೊಲಿ ಎಸ್​ಆರ್​​​ಹೆಚ್​ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ್ದರು. ಈ ಮೂಲಕ 57 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಆಟಗಾರ ಎಂಬ ದಾಖಲೆ ಕೊನೊಲಿ ಪಾಲಾಯಿತು. (PC: IPL)

ಇದಕ್ಕೂ ಮುನ್ನ ಈ ದಾಖಲೆ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿತ್ತು. 2016 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿದಿದ್ದ ಡಿಕಾಕ್ ಆರ್​ಸಿಬಿ ವಿರುದ್ಧ ಶತಕ ಸಿಡಿಸಿದ್ದರು. ಈ ವೇಳೆ ಅವರ ವಯಸ್ಸು 23 ವರ್ಷ, 122 ದಿನಗಳು. ಈ ಮೂಲಕ ಐಪಿಎಲ್​​ನಲ್ಲಿ ಸೆಂಚುರಿ ಬಾರಿಸಿದ ಅತೀ ಕಿರಿಯ ವಿದೇಶಿಗ ಎನಿಸಿಕೊಂಡಿದ್ದರು. (PC: IPL)

ಇದೀಗ 10 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಆಸ್ಟ್ರೇಲಿಯಾ ದಾಂಡಿಗ ಯಶಸ್ವಿಯಾಗಿದ್ದಾನೆ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 57 ಎಸೆತಗಳಲ್ಲಿ ಸೆಂಚುರಿ ಪೂರೈಸಿ 22 ವರ್ಷದ ಕೂಪರ್ ಕೊನೊಲಿ ಐಪಿಎಲ್​ನಲ್ಲಿ ಶತಕ ಸಿಡಿಸಿದ ಅತೀ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಈ ದಾಖಲೆಯ ಹೊರತಾಗಿಯೂ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಸೋಲನುಭವಿಸಿದೆ. ಎಸ್​ಆರ್​ಹೆಚ್ ನೀಡಿದ 236 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ 59 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 202 ರನ್​ಗಳಿಸಿ ಪಂಜಾಬ್ ಕಿಂಗ್ಸ್ 33 ರನ್​​ಗಳಿಂದ ಸೋಲೊಪ್ಪಿಕೊಂಡಿದೆ. (PC: IPL)

Published On – 8:52 am, Thu, 7 May 26

Source link