Category Archives: Blog

Your blog category

ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಖಡಕ್ ಸ್ಪಷ್ಟನೆ – Kannada News | Speeker UT Khader Reacts On BJP Allegations about DN Jeevaraj oath Taking

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಸ್ಪೀಕರ್ ಯುಟಿ ಖಾದರ್ (UT Khader) ಪ್ರಮಾಣವಚನ ಬೋಧಿಸಿದರು. ಬಳಿಕ ಬಿಜೆಪಿ ಆರೋಪಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ ತಮ್ಮ ಮೇಲೆ ಬಿಜೆಪಿ ಮಾಡಿದ್ದ ಆರೋಪದ ಬಗ್ಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಆಯೋಗ ಪ್ರಮಾಣಪತ್ರ ನೀಡಿದ ಬಳಿಕ ಪ್ರಮಾಣವಚನ ಬೋಧಿಸಬೇಕು. ಹೀಗಾಗಿ ಆಯೋಗ ಪ್ರಮಾಣಪತ್ರ ನೀಡಿದ್ದರಿಂದ ಪ್ರಮಾಣವಚನ ಬೋಧಿಸಿದ್ದೇನೆ. ಒಂದು ವೇಳೆ ಕೋರ್ಟ್ ತಡೆಯಾಜ್ಞೆ ಕೊಟ್ಟರೆ ಡಿ.ಎನ್.ಜೀವರಾಜ್​ ಶಾಸಕ ಸ್ಥಾನ ರದ್ದಾಗಲಿದೆ. ನಂತರ ಟಿ.ಡಿ.ರಾಜೇಗೌಡರಿಗೆ ಪ್ರಮಾಣವಚನ ಬೋಧಿಸಬೇಕಾಗಬಹುದು. ಕಾನೂನು ಇರುವುದೇ ಹಾಗೆ, ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್

Source link

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್: ಹೊಸ ಹುದ್ದೆ ಸೃಷ್ಟಿದ ಸರ್ಕಾರ – Kannada News | IPS officer Dr Ramachandra Rao suspension revoked By Karnataka Governmnet

ಡಾ. ಕೆ.ರಾಮಚಂದ್ರ ರಾವ್

ಬೆಂಗಳೂರು, (ಮೇ 6): ಮಹಿಳೆಯರೊಂದಿಗಿನ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ (dr ramachandra rao )ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ.  ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.  ಕಚೇರಿಯಲ್ಲಿ ಮಹಿಳೆಯರೊಂದಿಗೆ ಕೆ.ರಾಮಚಂದ್ರ ರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿತ್ತು. ದೃಶ್ಯಗಳು ಎಡಿಟ್​​ ಆಗಿಲ್ಲ. ಅವು ಡೀಪ್‌ಫೇಕ್ ಮತ್ತು AI ನಿರ್ಮಿತ ಅಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೂ ಸಹ ಅಮಾನತು ಹಿಂಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

  • ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ವಿಡಿಯೋ ಪ್ರಕರಣ
  • ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್
  • ಅಮಾನತು ಆದೇಶ ಹಿಂಪಡೆದು ತಕ್ಷಣದಿಂದಲೇ ಕೆ.ರಾಮಚಂದ್ರ ರಾವ್ ಸೇವೆಗೆ ನಿಯೋಜನೆ
  • ರಾಮಚಂದ್ರ ರಾವ್ ಗೆ ಡಿಜಿಪಿ (ಪೊಲೀಸ್ ಮಾನ್ಯುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿ ನಿಯೋಜಿಸಿದ ಸರ್ಕಾರ

ವಿಡಿಯೋ ವೈರಲ್ ಬೆನ್ನಲ್ಲೇ ಸಸ್ಪೆಂಡ್ ಆಗಿದ್ದ ರಾಮಚಂದ್ರ ರಾವ್

ಡಾ. ಕೆ.ರಾಮಚಂದ್ರ ರಾವ್ ಅವರು ಪೊಲೀಸ್ ಸಮವಸ್ತ್ರ ಧರಿಸಿ, ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸರ್ಕಾರಿ ಕಚೇರಿಯಲ್ಲಿ, ಉನ್ನತ ದರ್ಜೆಯ ಅಧಿಕಾರಿಯೊಬ್ಬರು ಇಂತಹ ಕೃತ್ಯವೆಸಗಿರುವುದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಇಲಾಖೆಗೆ ಮುಜುಗರವನ್ನುಂಟು ಮಾಡಿತ್ತು. ಇದರ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ಜನವರಿ 19ರಂದು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿತ್ತು. ಬಳಿಕ ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನ ಪ್ರಾರಂಭಿಸಲಾಗಿತ್ತು.

ಇದನ್ನೂ ಓದಿ: ರಾಮಚಂದ್ರ ರಾವ್ ಕೇಸ್​​​​: ವೈರಲ್​ ಆಗಿರುವ ವಿಡಿಯೋ ಅಸಲಿ ಎಂದ ತನಿಖಾ ತಂಡ

ವಿಡಿಯೋ ಬಗ್ಗೆ ರಾಮಚಂದ್ರ ರಾವ್​ ಅಂದು ಹೇಳಿದ್ದೇನು?

ಕಳೆದ ತಿಂಗಳು ಏಪ್ರಿಲ್​ 27 ರಂದು ರಾಮಚಂದ್ರರಾವ್​ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಇದೇ ವೇಳೆ ಅಶ್ಲೀಲ ವಿಡಿಯೋ ಕೇಸ್​​ನಲ್ಲಿ ಸಿಲುಕಿರುವ ರಾಮಚಂದ್ರ ರಾವ್​ ಅವರು ವಿಡಿಯೋ ವೈರಲ್ ಆದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದರು. ನನ್ನ ಸಸ್ಪೆನ್ಶನ್ ಬಗ್ಗೆ ಮಾತಾಡಿದ್ದೇನೆ. ತನಿಖೆ ನಡೆಯುತ್ತಿದೆ ಅದರ ಬಗ್ಗೆ ಮಾತಾಡಲ್ಲ, ನನ್ನ ಮೇಲೆ ಯಾವುದೂ ಕೇಸ್ ಇಲ್ಲ, ಈಗಲೇ ಸಾಕಷ್ಟು ಸಫರ್ ಆಗಿದ್ದೇನೆ ಬೇಡ ಪ್ಲೀಸ್​ ಎಂದಿದ್ದರು.

ವಿಡಿಯೋಗಳು ವೈರಲ್ ಆಗಿ ಪ್ರಕರಣ ಗಂಭೀರವಾಗಿದ್ದರೂ ಸಹ ರಾಜ್ಯ ಸರ್ಕಾರ ಇದೀಗ ಏಕಾಏಕಿ ಅವರ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಅಲ್ಲದೇ ಸರ್ಕಾರದ ಈ ನಡೆದ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್​ಗೆ ಹೊಸ ತಲೆನೋವು; ಸರ್ಕಾರ ರಚನೆಗೆ ಒಂದಾಗುತ್ತಾರಾ ಬದ್ಧ ವೈರಿಗಳಾದ ಡಿಎಂಕೆ- ಎಐಎಡಿಎಂಕೆ? – Kannada News | DMK and AIADMK Tie Up Rumours spark buzz in Tamil Nadu to form government

ಚೆನ್ನೈ, ಮೇ 6: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿದೆ. ಯಾವ ಪಕ್ಷವೂ ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸದ ಹಿನ್ನೆಲೆಯಲ್ಲಿ ರಾಜ್ಯಪಾಲರು ನಾಳೆ ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಸಮಾರಂಭವನ್ನು ಮುಂದೂಡಿದ್ದರು. ಬಹುಮತ ಸಾಬೀತುಪಡಿಸುವವರೆಗೂ ಸರ್ಕಾರ ರಚನೆಗೆ ಅನುಮತಿ ನೀಡುವುದಿಲ್ಲ ಎಂದು ವಿಜಯ್ ಅವರನ್ನು ವಾಪಾಸ್ ಕಳುಹಿಸಿದ್ದರು. ಇದೆಲ್ಲದರ ನಡುವೆ ಬದ್ಧ ವೈರಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ತಮಿಳುನಾಡಿನಲ್ಲಿ ಸರ್ಕಾರ ರಚಿಸಿದೆಯಾ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು, ಡಿಎಂಕೆ ಮತ್ತು ಎಐಎಡಿಎಂಕೆ ನಾಯಕರು ತೆರೆಮರೆಯಲ್ಲಿ ರಹಸ್ಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಒಟ್ಟಾಗಿ ಸರ್ಕಾರ ರಚಿಸಲು ಮಾತುಕತೆ ಆರಂಭಿಸಿವೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ಈ ಮಾತುಕತೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್

ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತಮಿಳುನಾಡಿನಲ್ಲಿ ಮಿತ್ರಪಕ್ಷಗಳನ್ನು ಭದ್ರಪಡಿಸಿಕೊಳ್ಳಲು ಮತ್ತು ಸರ್ಕಾರ ರಚಿಸಲು ಹರಸಾಹಸ ಪಡುತ್ತಿದೆ. ಇದರ ನಡುವೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತನ್ನ ದೀರ್ಘಕಾಲದ ಪ್ರತಿಸ್ಪರ್ಧಿ ಎಐಎಡಿಎಂಕೆ ಜೊತೆ ರಹಸ್ಯವಾಗಿ ಮಾತುಕತೆಗಳನ್ನು ಪ್ರಾರಂಭಿಸಿದೆ ಎನ್ನಲಾಗುತ್ತಿದೆ.

ಯಾವುದೇ ಪ್ರಗತಿಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಚರ್ಚೆಗಳು ನಡೆದಿವೆ ಎಂದು ಎಐಎಡಿಎಂಕೆ ಮೂಲಗಳು ದೃಢಪಡಿಸಿವೆ. ಏಪ್ರಿಲ್ 23ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ 59 ಸ್ಥಾನಗಳನ್ನು ಪಡೆದರೆ, ಎಐಎಡಿಎಂಕೆ 47 ಸ್ಥಾನಗಳನ್ನು ಗಳಿಸಿತು. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿದರೂ ಅವರ ಒಟ್ಟು ಶಾಸಕರ ಸಂಖ್ಯೆ 106 ಆಗುತ್ತದೆ. ಬಹುಮತ ಪಡೆಯಲು ಇನ್ನೂ ಸಾಕಷ್ಟು ಶಾಸಕರ ಅಗತ್ಯವಿರುತ್ತದೆ. ಬಹುಮತಕ್ಕೆ ಬೇಕಾಗುವ ಸಂಖ್ಯೆ 118. ಹೀಗಾಗಿ, ಬೇರೆ ಪಕ್ಷಗಳ ಬೆಂಬಲದ ಅಗತ್ಯವಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SRH vs PBKS: ಭಾರತದಲ್ಲಿ ವಿಶೇಷ ತ್ರಿಶತಕ ಪೂರೈಸಿದ ಅಭಿಷೇಕ್ ಶರ್ಮಾ – Kannada News | Abhishek Sharma Smashes 300 T20 Sixes in India, Joins Elite Club in IPL 2026

ಐಪಿಎಲ್ 2026 ರ49ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 35 ರನ್ ಬಾರಿಸಿದರು. ಇದರಲ್ಲಿ 4 ಸಿಕ್ಸರ್ ಮತ್ತು 2 ಬೌಂಡರಿಗಳು ಸೇರಿದ್ದವು. ಈ ನಾಲ್ಕು ಸಿಕ್ಸರ್​ಗಳ ಮೂಲಕ ಅಭಿಷೇಕ್ ಭಾರತದಲ್ಲಿ ಟಿ20 ಕ್ರಿಕೆಟ್​ನಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಐದನೇ ಕ್ರಿಕೆಟಿಗ ಎಂಬ ಸಾಧನೆಯನ್ನು ಮಾಡಿದರು.

ಅಭಿಷೇಕ್​ಗೂ ಮೊದಲು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಭಾರತದಲ್ಲಿ ಟಿ20 ಕ್ರಿಕೆಟ್​ನಲ್ಲಿ 300 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಸಾಧನೆ ಮಾಡಿದ್ದಾರೆ. ಭಾರತದಲ್ಲಿ 320 ಟಿ20 ಪಂದ್ಯಗಳಲ್ಲಿ 388 ಸಿಕ್ಸರ್ ಬಾರಿಸಿರುವ ರೋಹಿತ್ ಎಲೈಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಭಿಷೇಕ್ ಭಾರತದಲ್ಲಿ ಕೇವಲ 153 ಪಂದ್ಯಗಳಲ್ಲಿ ಟಿ20ಯಲ್ಲಿ 300 ಸಿಕ್ಸರ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

Source link

ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ – Kannada News | Yash shared his bad experience with a star actor

ನಟ ಯಶ್ (Yash) ಈಗ ಸ್ಟಾರ್ ನಟ. ಅವರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಒಂದು ಸಮಯದಲ್ಲಿ ಯಶ್ ಸಹ ಸ್ಟಾರ್ ನಟರುಗಳ ಅಭಿಮಾನಿ ಆಗಿದ್ದವರು. ಯಶ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು, ಸ್ಟಾರ್ ನಟನ ಆಟೋಗ್ರಾಫ್ ಒಮ್ಮೆ ಕೇಳಿದ್ದು, ಆ ನಟ, ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡರು ಎಂದು ಹೇಳಿದ್ದಾರೆ. ಆದರೆ ಆ ನಂತರ ಆ ನಟನ ಸಿನಿಮಾ ನೋಡುವುದೇ ಬಿಟ್ಟಿದ್ದಾಗಿ ಯಶ್ ಹೇಳಿಕೊಂಡಿದ್ದಾರೆ. ಹಾಗಾಗಿ, ಯಶ್, ಯಾರೇ ಅಭಿಮಾನಿಗಳು ಬಂದರು ಅವರನ್ನು ಪ್ರೀತಿಯಿಂದ ಕಾಣುತ್ತಾರಂತೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತನಿಗೆ ವಂಚನೆ: ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ! – Kannada News | Haveri: Byadagi Chilli Farmer Cheated, Produce Worth 50 Lakh Sold from Cold Storage

ಬ್ಯಾಡಗಿ ಮೆಣಸಿನಕಾಯಿImage Credit source: tv9 kannada

ಹಾವೇರಿ, ಮೇ 06: ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ (Byadagi Chilli) ಮಾರುಕಟ್ಟೆಯಲ್ಲಿ ರೈತನೊಬ್ಬನಿಗೆ (Farmer) ದಲ್ಲಾಳಿಯೊಬ್ಬ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರೈತ ಮಹಾದೇವಪ್ಪ ಎಂಬುವವರ ಮೋಸಕ್ಕೊಳಗಾದವರು. ಬೆಳೆದ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂಬ ಕಾರಣಕ್ಕೆ, ದಲ್ಲಾಳಿ ನಾಗಪ್ಪ ಹಡಗಲಿ ಎಂಬಾತನ ಸಹಾಯದಿಂದ 2023ರಲ್ಲಿ ತಮ್ಮ 363 ಚೀಲ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗ ಮಾರಾಟ ಮಾಡಲು ಬಂದ ರೈತನಿಗೆ, ಅತ್ತ ಮೆಣಸಿನಕಾಯಿಯೂ ಇಲ್ಲ, ಹಣವೂ ಇಲ್ಲದಂತಾಗಿದೆ. ದಲ್ಲಾಳಿ ನಮ್ಮ ಗಮನಕ್ಕೆ ಬಾರದೆ ಮೆಣಸಿನಕಾಯಿಯನ್ನು ಮಾರಾಟ ಮಾಡಿದ್ದಾನೆ ಎಂದು ರೈತ ಕುಟುಂಬ ಆರೋಪಿಸಿದೆ.

ಮುಖ್ಯಾಂಶಗಳು

  • 2023ರಲ್ಲಿ ದಾಸ್ತಾನು ಮಾಡಿದ್ದ 363 ಚೀಲ ಮೆಣಸಿನಕಾಯಿ ನಾಪತ್ತೆ
  • ಅಂದಾಜು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿ ಮಾರಾಟ ಮಾಡಿ ವಂಚನೆ ಆರೋಪ
  • ಸಂತ್ರಸ್ತ ರೈತನಿಂದ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಡೆದಿದ್ದೇನು?

ರೈತ ಮಹಾದೇವಪ್ಪ ಅವರು 2023ರಲ್ಲಿ ದರ ಕಡಿಮೆ ಇದ್ದಿದ್ದರಿಂದ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟು ಹೋಗಿದ್ದರು. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಬಂದಿದ್ದರಿಂದ, ಅದನ್ನು ಮಾರಾಟ ಮಾಡಲು ಬಂದಾಗ ಮೆಣಸಿನಕಾಯಿ ಚೀಲಗಳು ನಾಪತ್ತೆಯಾಗಿರುವುದು ಕಂಡು ಶಾಕ್​​ ಆಗಿದ್ದಾರೆ.

ಇದನ್ನೂ ಓದಿ: ಬ್ಯಾಡಗಿ ಮೆಣಸಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ: ರಫ್ತಿನ ದರದಲ್ಲಿ ಗಣನೀಯ ಏರಿಕೆ

ತಿಪ್ಪೇಸ್ವಾಮಿ ಮೆಣಸಿನಕಾಯಿ ಏಜೆನ್ಸಿಯವರು ರೈತನಿಗೆ ಆರಂಭದಲ್ಲಿ ಕೂಲಿ ಕಾರ್ಮಿಕರಿಗೆ ನೀಡುವ ನೆಪದಲ್ಲಿ ಸ್ವಲ್ಪ ಹಣ ನೀಡಿದ್ದರೂ, ನಂತರದ ದಿನಗಳಲ್ಲಿ ರೈತನ ಹೆಸರಿನಲ್ಲಿರುವ ಸುಮಾರು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿಯನ್ನು ರೈತನ ಅನುಮತಿಯಿಲ್ಲದೆ ಮಾರಾಟ ಮಾಡಿದ್ದಾರೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಮೂಲ ದಾಖಲೆಗಳನ್ನ ತೆಗೆದುಕೊಂಡು ನಮಗೆ ಮೋಸ ಮಾಡಿದ್ದಾರೆ. ನ್ಯಾಯ ಬೇಕು ಅಂತಾ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ರೈತ ಮಹಾದೇವಪ್ಪ ಪ್ರಕರಣ ದಾಖಲಿಸಿದ್ದಾರೆ.

ಹಾವೇರಿ ಎಸ್​​​ಪಿ ಯಶೋಧಾ ವಂಟಗೋಡಿ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಾವೇರಿ ಎಸ್​​​ಪಿ ಯಶೋಧಾ ವಂಟಗೋಡಿ, ಈ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ರೈತ ನೀಡಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣವು ತನಿಖಾ ಹಂತದಲ್ಲಿದ್ದು, ತಪ್ಪು ಮಾಡಿದವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಸದ್ಯ ರೈತನಿಗೆ ನ್ಯಾಯ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:33 pm, Wed, 6 May 26

Source link

ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ – Kannada News | Suvendu Adhikari says every TMC goon will be held accountable under BJP government for their atrocities

ಕೊಲ್ಕತ್ತಾ, ಮೇ 6: ಪಶ್ಚಿಮ ಬಂಗಾಳದ ಭವಾನಿಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು (Mamata Banerjee) ಸೋಲಿಸಿದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟಿಎಂಸಿ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಬಿಜೆಪಿ ಸರ್ಕಾರ ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. “ಮಮತಾ ಬ್ಯಾನರ್ಜಿ ಅವರ ರಾಜೀನಾಮೆಯನ್ನು ರಾಜ್ಯಪಾಲರು ನಿರ್ಧರಿಸುತ್ತಾರೆ. ಅವರು ಬಂಗಾಳದಲ್ಲಿ ರಾಜಕೀಯ ಪ್ರಸ್ತುತತೆಯನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

World Athletics Day 2026: ವಿಶ್ವ ಅಥ್ಲೆಟಿಕ್ಸ್‌ ದಿನವನ್ನು ಯಾವ ಕಾರಣಕ್ಕಾಗಿ ಆಚರಿಸಲಾಗುತ್ತದೆ ಗೊತ್ತಾ? – Kannada News | World Athletics Day 2026: Why is World Athletics Day celebrated on May 7? Know its purpose

ವಿಶ್ವ ಅಥ್ಲೆಟಿಕ್ಸ್ ದಿನImage Credit source: vecteezy

ಇಂದಿನ ಈ ಡಿಜಿಟಲ್‌ ಯುಗದಲ್ಲಿ ಜನ ದೈಹಿಕ ಚಟುವಟಿಕೆಯಲ್ಲಿ (Physical activity) ತೊಡಗಿಕೊಳ್ಳುವುದು ಕಡಿಮೆಯಾಗಿದೆ. ಅದರಲ್ಲೂ ಯುವಕರು ಮತ್ತು ಮಕ್ಕಳು ಕ್ರೀಡೆ ಇತ್ಯಾದಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೆ ಮೊಬೈಲ್‌ ನೋಡುತ್ತಾ ಕಾಲಹರಣ ಮಾಡುತ್ತಾರೆ. ಇದು ಆರೋಗ್ಯಕ್ಕೂ ಹಾಳು. ಅದೇ ಕ್ರೀಡೆಗಳು ಜನರು ಹೆಚ್ಚು ಸಕ್ರಿಯರಾಗಲು, ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಹೆಚ್ಚು ಚಲನಶೀಲರನ್ನಾಗಿರುವಂತೆ ಪ್ರೋತ್ಸಾಹಿಸಲು ಸಹಾಯ ಮಾಡುತ್ತದೆ. ಇದು ವಿವಿಧ ಕಾಯಿಲೆಗಳನ್ನು ನಿವಾರಿಸಲು ಮತ್ತು ಹೆಚ್ಚು ಸದೃಢ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಹೊಂದಲು ನಮಗೆ ಸಹಾಯ ಮಾಡುತ್ತದೆ. ಹಾಗಾಗಿ ಯುವಕರು ಮತ್ತು ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು, ಫಿಟ್ನೆಸ್‌ ಬಗ್ಗೆ ಜಾಗೃತಿಯನ್ನು ಮೂಡಿಸಲು, ಅಥ್ಲೆಟಿಕ್ಸ್‌ ಆಟಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ಮೇ 7 ರಂದು ವಿಶ್ವ ಅಥ್ಲೆಟಿಕ್ಸ್‌  ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಅಥ್ಲೆಟಿಕ್ಸ್‌ ದಿನದ ಇತಿಹಾಸವೇನು?

ಪ್ರತಿ ವರ್ಷ ಮೇ 7 ರಂದು ‘ವಿಶ್ವ ಅಥ್ಲೆಟಿಕ್ಸ್ ದಿನ’ವನ್ನು ಆಚರಿಸಲಾಗುತ್ತದೆ. ಮಕ್ಕಳು ಮತ್ತು ಯುವಕರಲ್ಲಿ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅಥ್ಲೆಟಿಕ್ಸ್ ಆಟಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಇಂಟರ್ನ್ಯಾಷನಲ್ ಅಮೆಚೂರ್ ಅಥ್ಲೆಟಿಕ್ ಫೆಡರೇಶನ್’ (IAAF) ಈ ದಿನದ ಆಚರಣೆಯನ್ನು ಪ್ರಾರಂಭಿಸಿತು. ಈ ದಿನವನ್ನು ಮೊದಲ ಬಾರಿಗೆ 1996 ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಪ್ರತಿವರ್ಷ ಐಎಎಎಫ್‌ ಸಂಸ್ಥೆ ಈ ವಿಶೇಷ ದಿನವನ್ನು ಆಚರಿಸುತ್ತಾ ಬರುತ್ತಿದೆ.

ಇದನ್ನೂ ಓದಿ:  ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವುದರ ಉದ್ದೇಶವೇನು ಗೊತ್ತಾ?

ವಿಶ್ವ ಅಥ್ಲೆಟಿಕ್ಸ್‌ ದಿನದ ಮಹತ್ವವೇನು?

  • ಯುವಕರಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವುದು, ಶಾಲಾ-ಕಾಲೇಜುಗಳಲ್ಲಿ ಅಥ್ಲೆಟಿಕ್ಸ್ ಅನ್ನು ಪ್ರಾಥಮಿಕ ಕ್ರೀಡೆಯಾಗಿ ಉತ್ತೇಸುವುದು, ಕ್ರೀಡೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವುದು ಈ ದಿನದ ಉದ್ದೇಶವಾಗಿದೆ.
  • ಕ್ರೀಡೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಕ್ರೀಡೆಯ ಮಹತ್ವದ ಬಗ್ಗೆ ಯುವಕರಿಗೆ ಶಿಕ್ಷಣ ನೀಡುವುದು ವಿಶ್ವ ಅಥ್ಲೆಟಿಕ್ಸ್ ದಿನದ ಉದ್ದೇಶವಾಗಿದೆ.
  • ಈ ದಿನದಂದು, ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಶನ್‌ಗಳ ಸಂಘವು ದೈಹಿಕ ಚಟುವಟಿಕೆಯ ಮಹತ್ವವನ್ನು ಉತ್ತೇಜಿಸಲು ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದುವೆಯಾಗುವುದಾಗಿ ನಂಬಿಸಿ ಮೋಸ; ಮೊಹಮ್ಮದ್ ಶಮಿ ಸಹೋದರನ ಮೇಲೆ ಗಂಭೀರ ಆರೋಪ – Kannada News | Mohammed Kaif Fraud Allegations: Shami’s Brother Accused of Marriage Deceit and Betrayal

ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ( Mohammed Shami) ಅವರ ವೃತ್ತಿಜೀವನದ ಜೊತೆಗೆ ವೈಯಕ್ತಿಕ ಜೀವನವೂ ಹಳಿತಪ್ಪಿದೆ. ಶಮಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಇತ್ತ ಶಮಿ ಅವರ ವೈವಾಹಿಕ ಜೀವನವೂ ಮುರಿದುಬಿದ್ದಿದೆ. 2014 ರಲ್ಲಿ ಶಮಿ, ಹಸಿನ್ ಜಹಾನ್ ಅವರನ್ನು ವಿವಾಹವಾಗಿದ್ದರು. ಆದರೆ 2018 ರಲ್ಲಿ ಹಸಿನ್ ಜಹಾನ್, ಶಮಿ ಮತ್ತು ಅವರ ಕುಟುಂಬದ ವಿರುದ್ಧ ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ ಮತ್ತು ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಘಟನೆಯು ಶಮಿ ಅವರ ವೃತ್ತಿಜೀವನದ ಮೇಲೂ ಪರಿಣಾಮ ಬೀರಿತ್ತು. ಇದೀಗ ಶಮಿ ಅವರ ಸಹೋದರ ಮೊಹಮ್ಮದ್ ಕೈಫ್ ವಿರುದ್ಧವೂ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಮೋಸ

ವಾಸ್ತವವಾಗಿ ಮೊಹಮ್ಮದ್ ಶಮಿ ಅವರ ಕಿರಿಯ ಸಹೋದರ ಮೊಹಮ್ಮದ್ ಕೈಫ್ ವಿರುದ್ಧ ಮಹಿಳೆಯೊಬ್ಬರು ವಂಚನೆ ಮತ್ತು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವುದಾಗಿ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಈ ಬಗ್ಗೆ ಯೂಟ್ಯೂಬ್ ಚಾನೆಲ್​ವೊಂದಕ್ಕೆ ಸಂದರ್ಶನ ನೀಡಿರುವ ಮಹ್ವಿಶ್ ಎಂಬ ಮಹಿಳೆ, ‘ಆರಂಭದಲ್ಲಿ ನಮ್ಮಿಬ್ಬರ ನಡುವೆ ಸ್ನೇಹವಿತ್ತು, ಅದು ಕ್ರಮೇಣ ಪ್ರೀತಿಯಾಗಿ ಬದಲಾಯಿತು. ಆದರೆ ಮದುವೆಯ ವಿಷಯ ಬಂದಾಗ, ಕೈಫ್ ನಾನಾ ನೆಪಗಳನ್ನು ಹೇಳಲು ಪ್ರಾರಂಭಿಸಿದರು. ಕಾಮನ್ ಗೆಳೆಯನಿಂದ ನಾವಿಬ್ಬರು ಪರಸ್ಪರ ಪರಿಚಿತರಾದೆವು.

ಆ ನಂತರ ನಾವಿಬ್ಬರು ಇನ್ಸ್ಟಾಗ್ರಾಮ್ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದೆವು. ನಮ್ಮಿಬ್ಬರ ಸ್ನೇಹ ಸಂಬಂಧವಾಗಿ ಅರಳಿತು. ಹೀಗಾಗಿ ನಾನು ಕೈಫ್ ಅವರನ್ನು ಮದುವೆಯಾಗಲು ಬಯಸಿದ್ದೆ. ಆದರೆ ಕೈಫ್ ಬಳಿ ನಾನು ಈ ಬಗ್ಗೆ ಹೇಳಿದಕ್ಕೆ ಅವರು ನಾನಾ ಕಾರಣಗಳನ್ನು ನೀಡಲಾರಂಭಿಸಿದರು. ಈ ವಿಚಾರವನ್ನು ನಾನು ಕೈಫ್ ಅವರ ಅಣ್ಣ ಮೊಹಮ್ಮದ್ ಶಮಿ ಅವರೊಂದಿಗೂ ಮಾತನಾಡಿದ್ದೇನೆ. ಆದರೆ ಶಮಿ ಕೂಡ ಆ ನಂತರ ನನ್ನ ಫೋನ್‌ಗೆ ಉತ್ತರಿಸುವುದನ್ನು ನಿಲ್ಲಿಸಿದ್ದಾರೆ ಎಂಬ ಆರೋಪಗಳನ್ನು ಹೊರಿಸಿದ್ದಾರೆ.

SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಸಮನ್ಸ್

ಮೊಹಮ್ಮದ್ ಕೈಫ್ ಯಾರು?

ಮೊಹಮ್ಮದ್ ಕೈಫ್ ಡಿಸೆಂಬರ್ 10, 1996 ರಂದು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಜನಿಸಿದರು. ಬಂಗಾಳ ತಂಡದ ಪರ ದೇಶೀಯ ಕ್ರಿಕೆಟ್ ಆಡುವ ಕೈಫ್ ಬಲಗೈ ಬ್ಯಾಟ್ಸ್‌ಮನ್ ಮತ್ತು ಮಧ್ಯಮ ವೇಗದ ಬೌಲರ್ ಆಗಿದ್ದಾರೆ. ಇದುವರೆಗೆ ಅವರು 14 ಪ್ರಥಮ ದರ್ಜೆ ಪಂದ್ಯಗಳು, 9 ಲಿಸ್ಟ್ ಎ ಪಂದ್ಯಗಳು ಮತ್ತು 1 ಟಿ20 ಪಂದ್ಯವನ್ನು ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 43 ವಿಕೆಟ್‌ಗಳನ್ನು ಮತ್ತು ಲಿಸ್ಟ್ ಎ ಪಂದ್ಯದಲ್ಲಿ 12 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆದಾಗ್ಯೂ, ಅವರು ಇನ್ನೂ ಐಪಿಎಲ್‌ನಲ್ಲಿ ಆಡಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುದ್ಧ ಕೊನೆಗೊಳಿಸಲು ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಟ್ರಂಪ್ – Kannada News | Only fair conditions will be accepted Iran on US proposal to ending war

ವಾಷಿಂಗ್ಟನ್, ಮೇ 5: ಅಮೆರಿಕದ ಅಧ್ಯಕ್ಷ ಟ್ರಂಪ್ (Donald Trump) ಇರಾನ್ ಅನ್ನು ಮಂಡಿಯೂರುವಂತೆ ಮಾಡಿರುವುದಾಗಿ ಹೇಳಿಕೊಳ್ಳುತ್ತಿದ್ದರೂ ಅವರು ಒಪ್ಪಂದಕ್ಕಾಗಿ ಇರಾನ್‌ಗೆ ಹೊಸ ಪ್ರಸ್ತಾಪಗಳನ್ನು ಕಳುಹಿಸುತ್ತಿದ್ದಾರೆ. ಅಮೆರಿಕ ಇರಾನ್‌ಗೆ ಮತ್ತೊಂದು ಪ್ರಸ್ತಾಪವನ್ನು ಕಳುಹಿಸಿದೆ. ಇದರಲ್ಲಿ ಯುದ್ಧವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಷರತ್ತುಗಳು ಸೇರಿವೆ. ಈ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಲು ಅಮೆರಿಕ ಇರಾನ್‌ಗೆ 48 ಗಂಟೆಗಳ ಕಾಲಾವಕಾಶ ನೀಡಿದೆ.

ಶಾಂತಿ ಮಾತುಕತೆ ಆರಂಭವಾದಾಗಿನಿಂದ ಇರಾನ್ ತನ್ನ ಷರತ್ತುಗಳಿಂದ ಹಿಂದೆ ಸರಿದಿಲ್ಲ. ಇರಾನ್ ಅಮೆರಿಕದ ಹಿಂದಿನ ಪ್ರಸ್ತಾಪಗಳನ್ನು ಸ್ವೀಕರಿಸಲು ನಿರಾಕರಿಸಿರುವುದರಿಂದ ಎಲ್ಲರ ಕಣ್ಣುಗಳು ಈ ಪ್ರಸ್ತಾವನೆಯ ಮೇಲಿವೆ. ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆ, ಈ ಪ್ರದೇಶದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ (ಯುಎಸ್) 14 ಅಂಶಗಳ ಪ್ರಸ್ತಾವನೆಯನ್ನು ಪರಿಶೀಲಿಸುತ್ತಿರುವುದಾಗಿ ಇರಾನ್ ಹೇಳಿದೆ. ಇರಾನ್ ‘ನ್ಯಾಯಯುತ’ವಾದ ಷರತ್ತುಗಳನ್ನು ಮಾತ್ರ ಸ್ವೀಕರಿಸಲಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್?

ಮುಂದಿನ ಎರಡು ದಿನಗಳಲ್ಲಿ ಇರಾನ್ ಕುರಿತು ಪ್ರತಿಕ್ರಿಯಿಸುತ್ತದೆ ಎಂದು ಅಮೆರಿಕ ನಿರೀಕ್ಷಿಸುತ್ತಿದ್ದರೂ, ಎರಡೂ ಕಡೆಯವರ ನಡುವೆ ಇನ್ನೂ ಅಂತಿಮ ಒಪ್ಪಂದಕ್ಕೆ ಬರಲಾಗಿಲ್ಲ. ಆಕ್ಸಿಯಾಮ್ ಪ್ರಕಾರ, ಫೆಬ್ರವರಿ 28ರಂದು ಯುದ್ಧ ಪ್ರಾರಂಭವಾದ ನಂತರ ಎರಡೂ ದೇಶಗಳ ನಡುವೆ ನಡೆಯುತ್ತಿರುವ ಮಾತುಕತೆಗಳು ಇದೀಗ ಒಂದು ಹಂತಕ್ಕೆ ಬರುವಂತೆ ಕಾಣುತ್ತಿದೆ.

ಇದನ್ನೂ ಓದಿ: ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮೋದಿಗೆ ಟ್ರಂಪ್ ಅಭಿನಂದನೆ

ಇದರ ನಡುವೆ ಟೆಹ್ರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಹೆಚ್ಚಿನ ಬಾಂಬ್ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಇರಾನ್‌ಗೆ ಬೆದರಿಕೆ ಹಾಕಿದ್ದಾರೆ. ಟ್ರೂತ್ ಸೋಶಿಯಲ್ ಮೂಲಕ ಪೋಸ್ಟ್ ಮಾಡಿರುವ ಅವರು, ಇರಾನ್ ಒಪ್ಪಂದವನ್ನು ಒಪ್ಪಿಕೊಳ್ಳುವುದನ್ನು ಅವಲಂಬಿಸಿ ಈ ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಲಿದೆಯೇ ಇಲ್ಲವೇ ಎಂಬುದು ನಿರ್ಧಾರವಾಗುತ್ತದೆ ಎಂದು ಬರೆದಿದ್ದಾರೆ. “ಅವರು ಒಪ್ಪದಿದ್ದರೆ ಬಾಂಬ್ ದಾಳಿ ಪ್ರಾರಂಭವಾಗುತ್ತದೆ” ಎಂದು ಟ್ರಂಪ್ ಬರೆದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link