Headlines

ಪ್ರತಿನಿತ್ಯ ಬ್ರಷ್ ಮಾಡಿದ್ರೂ ಕ್ಯಾವಿಟಿ ಉಂಟಾಗುತ್ತಿದ್ದರೆ ಈ ಸಮಸ್ಯೆ ತಡೆಯಲು ಸಿಂಪಲ್ ಐಡಿಯಾ ಇಲ್ಲಿದೆ – Kannada News | Tooth Decay Explained: Early Cavity Symptoms You Shouldn’t Ignore

ಪ್ರತಿದಿನ ಹಲ್ಲುಗಳನ್ನು ಬ್ರಷ್ (Brushing) ಮಾಡುತ್ತಿದ್ದರೂ ಕ್ಯಾವಿಟಿ ಸಮಸ್ಯೆ (Cavity) ಕಾಣಿಸಿಕೊಳ್ಳುವುದು ಹಲವರಲ್ಲಿ ಸಾಮಾನ್ಯವಾಗಿದೆ. ದಂತ ಆರೋಗ್ಯದ ಬಗ್ಗೆ ಜಾಗೃತಿ ಇದ್ದರೂ ಈ ಸಮಸ್ಯೆ ಉಂಟಾಗುವುದಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ತಜ್ಞರು ಸ್ಪಷ್ಟನೆ ನೀಡಿದ್ದಾರೆ. ದಂತ ವೈದ್ಯರ ಪ್ರಕಾರ, ಕ್ಯಾವಿಟಿ ಎಂದರೆ ದಂತದ ಮೇಲ್ಭಾಗದಲ್ಲಿ ಹಾನಿ ಉಂಟಾಗುವುದು. ಇದು ಬ್ಯಾಕ್ಟೀರಿಯಾ ಬೆಳವಣಿಗೆಯಿಂದ ಉಂಟಾಗಿ, ನಿಧಾನವಾಗಿ ದಂತದಲ್ಲಿ ಕುಳಿ ಉಂಟುಮಾಡುತ್ತದೆ. ಪ್ರತಿದಿನ ಬ್ರಷ್ ಮಾಡುವುದು ಮಾತ್ರ ಸಾಕಾಗುವುದಿಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ಮಾಡುವುದು ಕೂಡ ಅತ್ಯಗತ್ಯವಾಗುತ್ತದೆ. ಹಾಗಾದರೆ ಯಾವ…

Read More

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ? – Kannada News | PM Narendra Modi to Visit Bengaluru on May 10, Says R Ashok

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಅಧಿಕಾರ ಹಾಗೂ ಕೇರಳ ರಾಜ್ಯದ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ HAL ಏರ್​ಪೋರ್ಟ್ ಪ್ರವೇಶದ್ವಾರ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 10ರಂದು ಬೆಳಿಗ್ಗೆ 9 ಗಂಟೆಗೆ ಮೋದಿ ಅವರು HAL ಏರ್‌ಪೋರ್ಟ್‌ಗೆ ಆಗಮಿಸಲಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ…

Read More

IPL 2026: ‘ನಿರಾಶೆಯಾಗಿದೆ’.. ಕೈತಪ್ಪಿದ ಫೈನಲ್ ಆತಿಥ್ಯ; ಹೇಳಿಕೆ ಬಿಡುಗಡೆ ಮಾಡಿದ ಕೆಎಸ್​ಸಿಎ – Kannada News | BCCI Shifts IPL 2026 Playoffs/Final from Bengaluru; KSCA Expresses Disappointment

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಐಪಿಎಲ್ 2026 (IPL 2026) ರ ಪ್ಲೇಆಫ್‌ ಹಾಗೂ ಫೈನಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಬಿಸಿಸಿಐ (BCCI) ಕೂಡ ಐಪಿಎಲ್ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ನಡೆಸಲು ನಿರ್ಧರಿಸಿತ್ತು. ಇತ್ತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಐಪಿಎಲ್ ಫೈನಲ್​ಗೆ ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ ಲೀಗ್ ಪಂದ್ಯಗಳು ಮುಗಿಯುವುದಕ್ಕೂ ಮುನ್ನ ಪ್ಲೇಆಫ್‌ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇಆಫ್‌ ಹಾಗೂ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಿದೆ….

Read More

‘ಗುರು’ವಿಗೆ ವಿದಾಯ ಹೇಳಿದ ವಿಜಯ್, ಗೆಳೆಯನ ನೋವಿಗೆ ಜೊತೆ – Kannada News | Thalapathy Vijay pay his last respects to producer RB Choudary Express condolences to family

ದಳಪತಿ ವಿಜಯ್ (Thalapathy Vijay) ಇತಿಹಾಸ ಬರೆದಿದ್ದಾರೆ. ತಮ್ಮ ಅಭೂತಪೂರ್ವ ಸ್ಟಾರ್​​ಡಮ್, ಅಭಿಮಾನಿ ಬಳಗವನ್ನು ಬಳಸಿಕೊಂಡು ಇದೀಗ ತಮಿಳುನಾಡು ವಿಧಾನಸಭೆ ಚುನಾವಣೆ ಗೆದ್ದಿದ್ದು, ಸಿಎಂ ಆಗಲಿದ್ದಾರೆ. ಆದರೆ ಇಂಥಹಾ ಖುಷಿಯ ಸಮಯದಲ್ಲಿಯೇ ವಿಜಯ್ ಅವರ ಚಿತ್ರರಂಗದ ಗುರುಗಳಲ್ಲಿ ಒಬ್ಬರಾದ ಆರ್​​ಬಿ ಚೌಧರಿ ಅವರು ನಿಧನ ಹೊಂದಿದ್ದಾರೆ. ಖ್ಯಾತ ನಿರ್ಮಾಪಕ ಆರ್​​ಬಿ ಚೌಧರಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದು, ವಿಜಯ್, ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ಅವರ ಅಂತಿಮ ದರ್ಶನ ಪಡೆದಿರುವುದಲ್ಲದೆ, ಗೆಳೆಯನಿಗೆ ಸಾಂತ್ವನ ಸಹ ಹೇಳಿದ್ದಾರೆ….

Read More

ನೀವು ಮಾಡುವ ಈ ತಪ್ಪುಗಳು ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು – Kannada News | These mistakes you make can cause your pressure cooker to explode‌

ಈಗಂತೂ ಪ್ರತಿ ಮನೆಯಲ್ಲೂ ಕುಕ್ಕರ್‌ (pressure cooker) ಬಳಕೆ ಮಾಡಲಾಗುತ್ತದೆ. ಅನ್ನ ಬೇಯಿಸುವುದರಿಂದ ಹಿಡಿದು ಸಾರು, ಸಾಂಬಾರ್‌ ಮಾಡುವವರೆಗೆ ಪ್ರತಿಯೊಂದು ಅಡುಗೆಯನ್ನೂ ಹೆಚ್ಚಿನವರು ಕುಕ್ಕರ್‌ನಲ್ಲಿಯೇ ಮಾಡುತ್ತಾರೆ. ಕುಕ್ಕರ್‌ನಲ್ಲಿ ಅಡುಗೆ ಮಾಡುವುದರಿಂದ ಸಮಯ ಉಳಿತಾಯವಾಗುವುದಲ್ಲದೆ ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ವಿಷಯ ಏನೆಪ್ಪಾ ಅಂದ್ರೆ ಅನೇಕರಿಗೆ  ಕುಕ್ಕರ್‌ ಹೇಗೆ ಬಳಸಬೇಕು ಎಂಬ ಅರಿವಿಲ್ಲ. ಈ ಸಣ್ಣ ನಿರ್ಲಕ್ಷ್ಯ, ಅಜಾಗರೂಕತೆ ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು. ಆದ್ದರಿಂದ ಕುಕ್ಕರ್‌ನಲ್ಲಿ ಅಡುಗೆ ಮಾಡುವಾಗ ಈ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯ. ನಿಮ್ಮ ಈ…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ…

Read More

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ? – Kannada News | 1 year for Operation Sindoor How India delivered maximum damage with minimal impact

ನವದೆಹಲಿ, ಮೇ 6: ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆದು ಒಂದು ವರ್ಷವಾಗಿದೆ. ಮಿಲಿಟರಿ ಕಾರ್ಯಾಚರಣೆಯನ್ನು ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಕ್ಷಣವೆಂದು ಪರಿಗಣಿಸಲಾಗುತ್ತದೆ. ಕಾಶ್ಮೀರದ ಕಣಿವೆ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಇದೇ ಸಮಯದಲ್ಲಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಾಚೆಗಿನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾದ ಈ ಕಾರ್ಯಾಚರಣೆಯಲ್ಲಿ ಭಾರತ ನಾಗರಿಕರು ಯಾರೂ ಸಾವನ್ನಪ್ಪದಂತೆ…

Read More

ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್ – Kannada News | Shringeri Assembly Result: BJP DN Jeevaraj Finally Take oath as MLA after Won In Recounting

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಕಾಂಗ್ರೆಸ್​​ ಶಾಸಕ ಸಂಖ್ಯೆಯಲ್ಲಿ  ಒಂದು ಕಡೆಮೆಯಾದಂತಾಗಿದೆ, ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ,…

Read More

IND vs PAK: ಪಾಕ್ ಕ್ರಿಕೆಟ್ ತಂಡಕ್ಕೆ ಭಾರತದಲ್ಲಿ ಅಡಲು ಅವಕಾಶ ನೀಡಿದ ಕೇಂದ್ರ ಸರ್ಕಾರ – Kannada News | India Allows Pak Players for Multi Nation Tournaments, No Bilateral Cricket

ಪಹಲ್ಗಾಮ್​ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಅಮಾಯಕ ಭಾರತೀಯರ ಪ್ರಾಣ ಹರಣ ಮಾಡಿದ ಬಳಿಕ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಗಳಿಗೂ ಭಾರತ ಅಂತ್ಯ ಹಾಡಿದೆ. ಇದರಿಂದಾಗಿ ಎರಡೂ ದೇಶಗಳ ಕ್ರಿಕೆಟ್ ತಂಡಗಳ ನಡುವಿನ ಪಂದ್ಯಕ್ಕೂ ಬ್ರೇಕ್ ಬಿದ್ದಿದೆ. ಮಾತ್ರವಲ್ಲದೆ ಭಾರತ ತಂಡ ಪಂದ್ಯವನ್ನಾಡಲು ಪಾಕಿಸ್ತಾನಕ್ಕೆ (India vs Pakistan) ಪ್ರಯಾಣಿಸಲು ಒಲ್ಲೆ ಎಂದರೆ, ಇತ್ತ ಪಾಕಿಸ್ತಾನ ತಂಡ ಕೂಡ ಭಾರತಕ್ಕೆ ಬರುವುದಕ್ಕೆ ಹಿಂದೇಟು ಹಾಕುತ್ತಿದೆ. ಏತನ್ಮಧ್ಯೆ, ಭಾರತ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಪಾಕಿಸ್ತಾನಿ ಆಟಗಾರರು ಭಾರತಕ್ಕೆ ಪ್ರಯಾಣಿಸಲು ಅವಕಾಶ…

Read More

ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯ ಜಯಭೇರಿ: ದೇಶದ ಜಿಡಿಪಿ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೂಡೀಸ್ ಮತ್ತು ಎಡಿಬಿ – Kannada News | Moodys adb laud indias economy strong growth stable outlook global investment hub

ನವದೆಹಲಿ, ಮೇ 6: ಜಾಗತಿಕವಾಗಿ ಅನೇಕ ಪ್ರಮುಖ ದೇಶಗಳ ಆರ್ಥಿಕತೆಗಳು ಮಂದಗತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಭಾರತದ ಆರ್ಥಿಕತೆಯು ಅತ್ಯಂತ ಸದೃಢವಾಗಿ ಮುನ್ನಡೆಯುತ್ತಿರುವುದನ್ನು ಜಾಗತಿಕ ರೇಟಿಂಗ್ ದೈತ್ಯ ಸಂಸ್ಥೆಯಾದ ‘ಮೂಡೀಸ್’ (Moody’s Ratings) ಮತ್ತು ‘ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್’ (ADB) ಮುಕ್ತಕಂಠದಿಂದ ಶ್ಲಾಘಿಸಿವೆ. ಭಾರತದ ಜಿಡಿಪಿ (GDP) ಪ್ರಗತಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಎರಡೂ ಜಾಗತಿಕ ಸಂಸ್ಥೆಗಳು ಜಂಟಿಯಾಗಿ ವಿಶ್ವಾಸ ವ್ಯಕ್ತಪಡಿಸಿವೆ. ಮೂಡೀಸ್ ಸಂಸ್ಥೆಯು ಭಾರತದ ಆರ್ಥಿಕತೆಯ ಸ್ಥಿರತೆಯನ್ನು ಗುರುತಿಸಿ ತನ್ನ ಮುನ್ಸೂಚನೆಯನ್ನು ಸಕಾರಾತ್ಮಕವಾಗಿ…

Read More