Category Archives: Blog

Your blog category

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ! – Kannada News | Valentine’s Day: Youth, Love and Navigating Modern Relationships Responsibly

ಪ್ರೀತಿಯಲ್ಲಿ ಹಾಗೂ ಯುದ್ದದಲ್ಲಿ ಎಲ್ಲವೂ ಸರಿ, Everything is fair in Love & War ಅಂತಾ ಅದ್ಯಾವ ಪುಣ್ಯಾತ್ಮ ಈ ಸಾಲುಗಳನ್ನು ಗೀಚಿದನೋ ಗೊತ್ತಿಲ್ಲ. ಇದನ್ನು ಬರೆದವ ಇದನ್ನು ಅದೆಷ್ಟೋ ಗಂಭೀರವಾಗಿ ತೆಗೆದುಕೊಂಡಿದ್ದನ್ನೋ ? ಇಲ್ಲವೋ ? ಗೊತ್ತಿಲ್ಲ ಆದ್ರೆ ನಮ್ಮ ಯುವ ಪೀಳಿಗೆ, ದ ಜೆನ್ಸಿಸ್ ಮಾತ್ರ ಇದನ್ನೇ ವೇದ ವಾಕ್ಯದಂತೆ ಪಾಲಿಸುತ್ತಿದ್ದಾರೆ. ಅದರಲ್ಲೂ ಪ್ರೀತಿ ವಿಚಾರ ಬಂದರೆ ಅವರಿಗೆ ಇದೇ ಭಗವದ್ಗೀತೆ, ಇದೇ ಕುರಾನ್, ಬೈಬಲ್ ಎಲ್ಲವೂ ಆಗಿದೆ. ಪ್ರೀತಿಯ ಮೋಡಿಗೊಳಗಾದವರಿಗೆ ತಾವು ಮಾಡಿದ್ದೇ ಸರಿ. ತಮ್ಮ ಪ್ರೀತಿ ಬಗ್ಗೆ ಕೊಂಚ ಚಕಾರ ಎತ್ತುವ ಅದ್ಯಾರೇ ಆಗಲಿ ಅವರು ತಪ್ಪು. ಅದು ಅಪ್ಪ, ಅಮ್ಮ, ಅಣ್ಣ, ಅಕ್ಕ, ತಮ್ಮ, ತಂಗಿ, ಅತ್ತೆ, ಮಾವ, ಸ್ನೇಹಿತರು ಇತ್ಯಾದಿ ಇತ್ಯಾದಿ ಎಲ್ಲರೂ ತಪ್ಪೇ. ಅಷ್ಟೇ ಅಲ್ಲ ಅವರೆಲ್ಲಾ ಇವರ ಪ್ರೀತಿ ಕಂಡು ಹೊಟ್ಟೆ ಕಿಚ್ಚು ಪಟ್ಟವರು ಅನ್ನೋದು ಅವರ ಭಾವನೆ. ಅವರ ಆ ಹುಚ್ಚು ಪ್ರೀತಿಯ ಹೊಳೆಯ ಮುಂದೆ ಅಂಡು ತೊಳೆದು ಮುದ್ದು ಮಾಡಿ ತುತ್ತು ತಿನ್ನಿಸಿದ ಹೆತ್ತವ್ವ, ತಲೆ ಮೇಲೆ ಹೊತ್ತು ಮರೆಸಿ ಯಾವುದಕ್ಕೂ ಬೇಸರಿಸದೆ ರಕ್ತವನ್ನು ಬಸಿದು ಬೆವರಾಗಿಸಿ ದುಡಿದ ಅಪ್ಪ ಲೆಕ್ಕಕ್ಕೇ ಇರುವುದಿಲ್ಲ. ಇನ್ನು ಜೊತೆಗೆ ಬೆಳೆದವರೆಲ್ಲಾ ನಗಣ್ಯ. ಇಂತಹ ಮನಸ್ಥಿತಿಯ ಇಂದಿನ ಯುವಕ ಯುವತಿಯರಿಗಾಗಿ ಒಂದಷ್ಟು ಕಟು ಸತ್ಯವನ್ನು ಮನದಟ್ಟು ಮಾಡಿಸಲು ಈ ಬರಹವನ್ನು ಬರೆದಿದ್ದೇನೆ.

ಹೆತ್ತವರನ್ನು ಗೌರವಿಸಿ – ಎತ್ತಾಡಿಸಿದವರನ್ನು ಆದರಿಸಿ

ಬಿಸಿ ರಕ್ತದ ಯುವಕ ಯುವತಿಯರಲ್ಲಿ ಕಳಕಳಿಯ ಮನವಿ ಯಾರನ್ನಾದರೂ ಪ್ರೀತಿಸಿ, ಯಾರನ್ನಾದರೂ ಮದುವೆಯಾಗಿ ಸಂಸಾರ ನಡೆಸಿ. ಆದರೆ ನಿಮ್ಮನ್ನು ಹೆತ್ತವರ, ನೆಮ್ಮದಿಯ ಸಮಾಧಿಯ ಮೇಲೆ ಮಾತ್ರ ನಿಮ್ಮ ಪ್ರೀತಿಯ ಮಹಲ್ ಕಟ್ಟಬೇಡಿ. ಆ ಮಹಲ್ ಐಶಾರಾಮಿಯಾಗಿರಬಹುದು ಆದರೆ ಬಂಧಗಳಿಲ್ಲದೆ ಬರಡಾಗಿರುತ್ತದೆ. ಹೆತ್ತವರ ಸುಡುವ ನಿಟ್ಟುಸಿರು ನಿಮ್ಮನ್ನು ಎಂದಿಗೂ ದಹಿಸದೆ ಬಿಡುವುದಿಲ್ಲ. ಇದು ಶಾಪ ಅಲ್ಲ ಕಟು ಸತ್ಯ. ಎಲ್ಲರೂ ಅರಿಯಬೇಕಾದ ಒಂದು ವಿಷಯ ಅಂದ್ರೆ ಎಲ್ಲಾ ತಂದೆ ತಾಯಿಯಂದಿರಿಗೆ (ಕೆಲ ಅಪರೂಪದ ಪ್ರಕರಣಗಳನ್ನು ಹೊರತುಪಡಿಸಿ ) ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ಮಕ್ಕಳ ಹಿತ ಮುಖ್ಯವಾಗಿರುತ್ತದೆಯೇ ಹೊರತು ಬೇರೆ ಏನು ಅಲ್ಲ. ಮಕ್ಕಳ ಹಿತಕ್ಕಾಗಿ ತಮ್ಮ ಎಲ್ಲಾ ಸುಖವನ್ನು ಒತ್ತೆಯಿಡುವ ಬಡಪಾಯಿಗಳು ಕೊನೆಗೆ ಹುಚ್ಚು ಮಕ್ಕಳ ನಿರ್ಧಾರದ ಮುಂದೆ ಮಂಡಿಯೂರಲೇಬೇಕಾದ ಅನಿವಾರ್ಯ ಪರಿಸ್ಥಿತಿ ಬರುತ್ತದೆ ಅನ್ನೋದು ಗೊತ್ತಿದ್ದರೂ ತಮ್ಮ ಅಷ್ಟು ದಿನದ ಶ್ರಮ, ಪ್ರೀತಿ, ಕಾಳಜಿ ಗಾಳಿಗೆ ತೂರಿ ಹೋಗಲಿದೆ ಅನ್ನೋ ಅರಿವಿದ್ದರೂ ಅಷ್ಟು ದಿನ‌ ಕಾಪಾಡಿಕೊಂಡು ಬಂದಿದ್ದ ತಮ್ಮ ಸರ್ವಸ್ವವೂ ನಶಿಸಿ‌ ಹೋಗಲಿದೆ ಅನ್ನೋದು ತಿಳಿದಿದ್ದರೂ ಅವೆಲ್ಲವನ್ನೂ ಲೆಕ್ಕಿಸದೆ ನಿಮ್ಮ ನಿರ್ಧಾರದ ವಿರುದ್ದ ಹೋರಾಡುವ ವಿಫಲ ಯತ್ನ ನಡೆಸುವುದು ನಿಮ್ಮ ಭವ್ಯ, ಭವಿಷ್ಯಕ್ಕಾಗಿ ಅನ್ನೋದನ್ನು ಪ್ರೀತಿಗಾಗಿ ಪೋಷಕರ ವಿರುದ್ದ ಸೆಟೆದು ನಿಲ್ಲುವ ಪ್ರತಿಯೊಬ್ಬರು ಅರಿಯಲೇ ಬೇಕು.

ಪ್ರೀತಿಯ ಗೊಂದಲಕ್ಕೆ ಸಿಲುಕಿ ಪ್ರಾಣ ಬಿಟ್ಟ ನಂಜನಗೂಡಿನ 17ರ ಬಾಲೆ

ನಾನು ನನ್ನ 22 ವರ್ಷದ ಮಾಧ್ಯಮದ ಪಯಣ ಹಾಗೂ ಟಿವಿ9ನ ಇಷ್ಟು ವರ್ಷದ ಕೆಲಸದಲ್ಲಿ ಅದೆಷ್ಟೋ ಪ್ರೀತಿ, ಪ್ರೇಮದ ಸ್ಟೋರಿಗಳನ್ನು ಮಾಡಿದ್ದೇನೆ. ಪ್ರೀತಿಯಿಂದ ಮೋಸ ಹೋದ ಕಥೆಗಳನ್ನ ಬಿಚ್ಚಿಟ್ಟಿದ್ದೇನೆ. ಪೋಷಕರನ್ನು ವಿರೋಧಿಸಿ ಮದುವೆಯಾಗಿ ಬದುಕಿದ ಹಾಗೂ ಬೇರೆಯಾದ ಜೋಡಿಗಳನ್ನು ಕಂಡಿದ್ದೇನೆ. ಆದರೆ ನಂಜನಗೂಡಿನ 17ರ ಸುಂದರ ಬಾಲೆ ಪ್ರೀತಿಯೆಂಬ ಮಾಯಾಜಾಲದಲ್ಲಿ ಸಿಲುಕಿ ಅನುಭವಿಸಿದ ನೋವು, ಹಿಂಸೆ, ತೊಳಲಾಟ, ವೇದನೆ ಕಣ್ಣೀರು ಕೊನೆಗೆ ಆಕೆಯ ಸಾವು, ಇದು ನನ್ನನ್ನು ಬಹುವಾಗಿ ಬಾಧಿಸಿತು. ಅದಕ್ಕೂ ಮಿಗಿಲಾಗಿ ಕ್ಯಾಮೆರಾ ಮುಂದೆ ನಿಂತು ತಮ್ಮ ಮಗಳ ಕಥೆ ಹೇಳಿದ ಆ ಬಾಲೆಯ ತಂದೆಯ ಸ್ಥಿತಿ ನನ್ನನ್ನು ಬಹುವಾಗಿ ಕಾಡಿತು. ನಾನು ಒಬ್ಬ ಹೆಣ್ಣು ಮಗಳ ತಂದೆ ಅಂತಾ ಆ ರೀತಿ ಆಯ್ತೋ ಅಥವಾ ಎಲ್ಲರಿಗೂ ಅದೇ ರೀತಿ ಆಗುತ್ತೋ ಗೊತ್ತಿಲ್ಲ. ಆದ್ರೆ ಈಗಲೂ ಆ ತಂದೆಯ ನೋವು, ಅಸಹಾಯಕತೆ, ಅವರ ಕಣ್ಣೀರು ತುಂಬಿದ ಆ ಕಣ್ಣುಗಳು ನನ್ನ‌ ಕಣ್ಮುಂದೆ ಬರುತ್ತದೆ.

ಘಟನೆಯ ವಿವರ

ಅದು ಮಧ್ಯಮ ವರ್ಗದ ಕುಟುಂಬ. ಇಬ್ಬರು ಮುದ್ದಾದ ಹೆಣ್ಣು ಮಕ್ಕಳು. ಯಾವುದಕ್ಕೆ ಕೊರತೆಯಿದ್ದರು ಅಲ್ಲಿ ಪ್ರೀತಿ, ಮಮತೆ, ಕಾಳಜಿಗೆ ಕೊರತೆಯಿರಲಿಲ್ಲ. ಸುಂದರ, ಸರಳ ಕುಟುಂಬ. ದೊಡ್ಡ ಮಗಳಿಗೆ 20 ವರ್ಷ . ಚಿಕ್ಕವಳಿಗೆ 17 ವರ್ಷ. ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಅದೇನೋ ಅಂತಾರಲ್ಲ ಎಲ್ಲವೂ ಚೆನ್ನಾಗಿದ್ದು, ಎಲ್ಲವೂ ನಾವು ಅಂದುಕೊಂಡಂತೆ ಆದರೆ ಅದು ಜೀವನವೇ ಅಲ್ಲ. ಈ ಸುಂದರ ಕುಟಂಬದಲ್ಲೂ ಆಗಿದ್ದು ಅದೇ. ಆ ಕುಟಂಬದ ಮೇಲೆ ಅದ್ಯಾವ ಪಾಪಿಗಳ ಕಣ್ಣು ಬಿತ್ತೋ ? ಅದ್ಯಾವ ಮಾಟಗಾತಿಯ ದೃಷ್ಟಿಗೆ ಆ ಮುದ್ದಾದ ಹೆಣ್ಣು ಮಕ್ಕಳು ಸಿಲುಕಿದ್ರೋ ಗೊತ್ತಿಲ್ಲ. ನೆಮ್ಮದಿಯ ಕೊಳದಲ್ಲಿ ಪ್ರೀತಿಯೆಂಬ ಬರ ಸಿಡಿಲು ಬಡಿದು ಆತಂಕದ ತರಂಗಗಳು ಎದ್ದಿದ್ದವು. ಕೊಳವನ್ನು ತಿಳಿಗೊಳಿಸಲು ಪಾಪ ಆ ಅಪ್ಪ ಅಮ್ಮ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾಗಿ ಹೋದವು. ಕೊಳದಲ್ಲಿ ಎದ್ದ ಪ್ರೀತಿಯ ತರಂಗ ಸುಳಿಯಾಗಿ ಮ‌ನೆಯ ನಂದಾದೀಪವನ್ನೇ ಆರಿಸಿಬಿಟ್ಟಿತು. ಇಬ್ಬರು ಹೆಣ್ಣು ಮಕ್ಕಳಲ್ಲಿ 17 ವರ್ಷದ ಕಿರಿಯ ಮಗಳು‌ ಪ್ರೀತಿಯೆಂಬ ಮಾಯಾ ಜಾಲಕ್ಕೆ ಸಿಲುಕಿ ಬಿಟ್ಟಳು. ಓದುವ ವಯಸ್ಸಿ‌ನಲ್ಲಿ ಕಾಲು ಜಾರಿ ಪ್ರೀತಿಯ ಸಾಗರಕ್ಕೆ ಬಿದ್ದು ಬಿಟ್ಟಿದ್ದಳು. ಏನು ಅರಿಯದ ಕಂದಮ್ಮಳ ಪರಿಸ್ಥಿತಿ ಕಂಡ ಅಪ್ಪ ಅಮ್ಮ ಸಹಜವಾಗಿ ಆಕೆಗೆ ಅರ್ಥ ಮಾಡಿಸಲು ಮುಂದಾದರೂ, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಬೆದರಿಸಿ, ಹೆದರಿಸಿದರು‌. ಅತ್ತು ಕರೆದು ಅಲವತ್ತುಕೊಂಡರು, ಹೂ‌… ಹೂಂ ಅಪ್ಪ, ಅಮ್ಮನ ಮಾತು ಮಗಳ ಮನಸಿಗೆ ತಲುಪಲೇ ಇಲ್ಲ. ತನ್ನ ಪ್ರೀತಿಯಲ್ಲಿ ಕಿವುಡಾಗಿದ್ದ ಆಕೆಗೆ ಅಪ್ಪನ ಕಾಳಜಿಯ ಕೂಗು ಕೇಳಿಸಲಿಲ್ಲ. ಪ್ರೀತಿಯಲ್ಲಿ ಕುರುಡಾಗಿದ್ದ ಆಕೆಗೆ ತನ್ನ ಬಗ್ಗೆಯೇ ಚಿಂತಿಸಿ ಮುಖದಲ್ಲಿ ಮೂಡಿದ್ದ ಅಮ್ಮನ ಆತಂಕದ ಗೆರೆಗಳು ಕಾಣಿಸಲೇ ಇಲ್ಲ. ಪ್ರೀತಿಯೇ ಸರ್ವಸ್ವ ಅಂದುಕೊಂಡವಳು ಅದಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿಬಿಟ್ಟಳು. ತನ್ನ ಮ‌ನೆಯಲ್ಲಿ ನೇಣಿಗೆ ಕೊರಳಡ್ಡಿ ಇಹಲೋಕ ತ್ಯಜಿಸಿದಳು.

17ರ ಬಾಲೆ ಪ್ರೀತಿಯ ಗೊಂದಲ‌, ಅಪ್ಪ ಅಮ್ಮನ ಗೋಳಾಟ – ಪ್ರೀತಿಸಿದವನ ತೊಳಲಾಟ

ಎಸ್ ಆಕೆಯೇನೋ ಪ್ರೀತಿ ಸಿಗದ ಕಾರಣಕ್ಕೆ ಸತ್ತು ಹೋದಳು. ಆದ್ರೆ ಬದುಕಿರುವ ತಂದೆ ತಾಯಿಯನ್ನು ಜೀವಂತ ಶವವಾಗಿಸಿ ಹೊರಟು ಹೋದಳು. ಹೌದು ಪ್ರೀತಿಯ ಪುತ್ರಿಯನ್ನು ಕಳೆದುಕೊಂಡ ಅಪ್ಪ ಅಮ್ಮ ಅಕ್ಷರಶಃ ಜೀವಂತ ಹೆಣವಾಗಿದ್ದಾರೆ. ಆಕೆಯ ಬಗ್ಗೆ ಮಾತನಾಡಿದರೂ ಅವರ ದುಃಖ ಉಮ್ಮಳಿಸಿ ಬರುತ್ತಿದೆ. ಅದರಲ್ಲೂ ಆಕೆಯ ಅಪ್ಪನ ಸ್ಥಿತಿ ಆ ದೇವರಿಗೆ ಪ್ರೀತಿ. ನನ್ನ ಮಗಳು….. ಅಂದವರ ಗಂಟಲು ಉಬ್ಬಿತು, ಕಣ್ಣುಗಳಲ್ಲಿ ಗಳ ಗಳ ನೀರು ಸುರಿಯಿತು. ಅಷ್ಟೇ ನನಗೂ ಮುಂದೆ ಏನು ಕೇಳಬೇಕು ಅನಿಸಲಿಲ್ಲ. ಆದ್ರೆ ಒಂದಂತೂ ಅರ್ಥವಾಗಿತ್ತು. ಆತ್ಮಹತ್ಯೆಗೆ ಶರಣಾದ ಮಗಳಿಗಿಂತ, ಅಪ್ಪ ಅಮ್ಮನ ಪರಿಸ್ಥಿತಿ ನರಕ ಸದೃಶ್ಯವಾಗಿತ್ತು. ಇನ್ನು ನನ್ನನ್ನು ಬಹುವಾಗಿ ಕಾಡಿದ್ದು ಆಕೆ ಆತ್ಮಹತ್ಯೆಗೂ ಮು‌ನ್ನ ತಾನು ಪ್ರೀತಿಸಿದ ಯುವಕನ ಜೊತೆ ಮೊಬೈಲ್‌ನಲ್ಲಿ ಆಡಿದ ಕೊನೆಯ ಮಾತುಗಳು. ಆ ಆಡಿಯೋವನ್ನು ಆ ಹುಡುಗನೇ ಬಿಡುಗಡೆ ಮಾಡಿದ್ದ ಜೊತೆಗೆ ಅವರಿಬ್ಬರ ಒಂದಷ್ಟು ಖಾಸಗಿ ಪೋಟೋಗಳು ಮತ್ತು ವಿಡಿಯೋ ಮೂಲಕ ತನ್ನ ತಪ್ಪಿಲ್ಲ ಅನ್ನೋ ಸ್ಪಷ್ಟನೆ. ಬಾಲೆಯ ಆ ಮಾತುಗಳಲ್ಲಿ ಆತಂಕವಿತ್ತು, ನೋವಿತ್ತು, ಮುಂದೆನೂ ಎಂಬ ಭಯವಿತ್ತು. ಅದು ಸಹಜ. ಆದ್ರೆ ಆಕೆಯ ಮಾತುಗಳಲ್ಲಿ ಸ್ಪಷ್ಟವಾದ ಗೊಂದಲವಿತ್ತು. ತಾನು ಏನು ಮಾಡುತ್ತಿದ್ದೇನೆ ಎಂಬ ಅರಿವು ಆಕೆಗೆ ಇರಲಿಲ್ಲ ಅನ್ನೋದು ಆಕೆಯ ಮಾತುಗಳು ಸಾರಿ ಸಾರಿ ಹೇಳುತ್ತಿದ್ದವು. 17 ವರ್ಷದ ಬಾಲೆಗೆ ಅದು ಸಹಜ ಕೂಡಾ. ಓದುವ ವಯಸ್ಸಲ್ಲಿ ಪ್ರೀತಿ ಪ್ರೇಮ ಅನ್ನೋ ಭ್ರಮೆಗೆ ಸಿಲುಕಿದ ಬಾಲೆ ಪ್ರಾಣವನ್ನೇ ಕಳೆದುಕೊಂಡಿದ್ದಳು.

ಕೊನೆ ಮಾತು

ಇಲ್ಲಿ ತಪ್ಪು ಯಾರದು ಅನ್ನುವುದು ಮುಖ್ಯವಲ್ಲ. ನಮ್ಮ ಯುವ ಪೀಳಿಗೆ ಎತ್ತ ಸಾಗುತ್ತಿದೆ ಅನ್ನೋದು ಮುಖ್ಯ. ಪ್ರೀತಿಸುವುದು ತಪ್ಪಲ್ಲ ಆದ್ರೆ ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿಸುವುದು, ಅಮೂಲ್ಯ ಜೀವನ ಬಲಿ ಕೊಟ್ಟು ಪ್ರೀತಿಸುವುದು, ಮಕ್ಕಳೇ ಪ್ರಾಣ ಅಂದುಕೊಂಡು ಎಲ್ಲವನ್ನೂ ತ್ಯಾಗ ಮಾಡಿ ಸಾಕಿದ ಅಪ್ಪ ಅಮ್ಮನ ಮನಸು ನೋಯಿಸಿ ಪ್ರೀತಿಸುವುದು ಖಂಡಿತಾ ತಪ್ಪೇ. ಯಾಕಂದ್ರೆ ಅಷ್ಟೇಲ್ಲಾ ಹೊಡೆದಾಡಿ, ಬಡಿದಾಡಿ, ಹೋರಾಡಿ, ಸಾಧಿಸಿ, ಹಠ ಹಿಡಿದು ಮದುವೆಯಾದವರು ಮುಂದೆ ಹೇಗಾದರೂ ಅನ್ನೋ ಉದಾಹರಣೆ ಎಲ್ಲರ ಕಣ್ಣ ಮುಂದಿದೆ. ಅಷ್ಟಕ್ಕೆ ಇಷ್ಟೆಲ್ಲಾ ಬೇಕಾ ? ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ. ಜೀವನದಲ್ಲಿ ಒಂದಂತೂ ಸತ್ಯ ಎಲ್ಲಕ್ಕಿಂತ ಮುಖ್ಯ ಜೀವನ. ಆ ಕ್ಷಣಕ್ಕಾಗಿ ಅಮೂಲ್ಯ ಜೀವವನ್ನು ಬಲಿ ಕೊಡಬಾರದು. ಇನ್ನು ಈ ಘಟನೆಯಲ್ಲಿ ಮತ್ತೊಂದು ಪ್ರಮುಖವಾಗಿ ನಾನು ಹೇಳಲೆ ಬೇಕಾಗಿರುವುದು. ಬಾಲೆ ತನ್ನ ಬದುಕು ಕೊನೆಗಾಣಿಸಿಕೊಂಡಿದ್ದರಿಂದ ಸಮಸ್ಯೆ ಬಗೆಹರಿಯಲಿಲ್ಲ. ಬದಲಾಗಿ ಅದು ಬದುಕಿದವರ ನೆಮ್ಮದಿ ಹಾಳು ಮಾಡಿತು. ತಾನು ಯಾರ ಜೊತೆ ಬಾಳಿ ಬದುಕಬೇಕೆಂದು ಬಯಸಿದ್ದಳೋ ಯಾರಿಗಾಗಿ ಪ್ರಾಣವನ್ನೇ ಆಹುತಿ ಮಾಡಿಕೊಂಡಳೋ ಆತ ಆಕೆಯ ಸಾವಿಗೆ ಕಾರಣನಾದ ಹೊಣೆ ಹೊತ್ತಿದ್ದಾನೆ. ಮನೆಯ ನಂದಾದೀಪವಾಗಿ ಬೆಳಗಿದ ಅಪ್ಪ ಅಮ್ಮನಿಗೆ ತಾವೇ ತಮ್ಮ ಮನೆಯ ನಂದಾದೀಪ ಆರಲು ಕಾರಣವಾದೆವಾ ? ಅನ್ನೋ ಚಿಂತೆ ಬಿಡದೆ ಕಾಡುತ್ತಿದೆ. ಹೀಗಾಗಿ ಯುವ ಹೃದಯಗಳೇ, ಪ್ರೀತಿಸುವ ಮುನ್ನ ಯೋಚಿಸಿ. ಪ್ರೀತಿಸಿದ ನಂತರ ಪ್ರೀತಿಗಾಗಿ ಪ್ರಯತ್ನಿಸಿ. ಆಗಲಿಲ್ಲವಾ ನಿಮಗಾಗಿ ಜೀವಿಸಿ. ಯಾಕಂದ್ರೆ ಬದುಕು ದೊಡ್ಡದು. ಪ್ರಿಯ ಪೋಷಕರೇ ಮಕ್ಕಳ ಪ್ರೀತಿ ಗೌರವಿಸಿ, ಸರಿಯಿಲ್ಲವಾ ? ಅವರಿಗೆ ತಿಳಿಸಿ, ಮನದಟ್ಟು ಮಾಡಲು ಪ್ರಯತ್ನಿಸಿ. ಆಗಲಿಲ್ಲವಾ ? ಪ್ರೀತಿಸಿದವನ ಜೊತೆ ಕಳುಹಿಸಿ. ಈ ಮೂಲಕ ಅಮೂಲ್ಯ ಜೀವಗಳ ಉಳಿಸಿ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು – Kannada News | Horoscope 14 February 2026; Dina Rashi Bhavishya Today, Checkout the details here

ಮೇಷ ರಾಶಿ:

ನೀವು ನೆಟ್ಟ ಗಿಡಕ್ಕೆ ಎಲ್ಲ ರೀತಿಯ ಆರೈಕೆ ಬೇಕು. ಸಹಜವಾಗಿ ಇರುವುದುದಕ್ಕೆ ಅದು ಬೇಡ. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ಮನೆಯನ್ನು ಬದಲಿಸಬೇಕಾಗುವುದು. ಕೆಲವನ್ನು ನೀವು ಮನಃಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು.

ವೃಷಭ ರಾಶಿ:

ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳುವಿರಿ. ಸಮುದ್ರದಲ್ಲಿ ಅಲೆ ನಿಂತಮೇಲೆ ಸ್ನಾನವೆಂದರೆ ಆಗದು. ಸಹಾವಾಸದಿಂದ ನಿಮಗೆ ಅಪವಾದವು ಬರಬಹುದು. ಕುಟುಂಬದ ಜೊತೆ ಬಹಳ ದಿನಗಳ ಅನಂತರ ಸಂಯೋಷದ ಸಮಯವನ್ನು ಕಳೆಯುವಿರಿ. ಉನ್ನತ ವ್ಯಾಸಂಗದಲ್ಲಿ ಆಸಕ್ತಿಯು ಕಡಿಮೆ ಆಗುವುದು. ನಿಮ್ಮನ್ನು ಹಿಮ್ಮೆಟ್ಟಿಸುವ ಕಾರ್ಯವು ಗೌಪ್ಯವಾಗಿ ಸಾಗುವುದು. ಮನೆಯ ಕೆಲಸದಿಂದ ಆಯಾಸವಾಗಬಹುದು.

ಮಿಥುನ ರಾಶಿ:

ನಿಮ್ಮ ಅಶಿಸ್ತಿನ ವರ್ತನೆಯಿಂದ ಸಹೋದ್ಯೋಗಿಗಳ ನಡುವೆ ಮಾತುಕತೆಗಳು ಆಗಬಹುದು. ನಿಮ್ಮ ಬಗ್ಗೆ ಆಶಾದಾಯಕ‌ ಬೆಳವಣಿಗೆ ಇರುವುದು. ನಿಮ್ಮನ್ನು ಯಾರೋ ಗಮನಿಸುತ್ತಿದ್ದಾರೆ ಎಂಬ ಭಯವು ಕಾಡುವುದು. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ. ಮಹಿಳೆಯರು ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ಮಾಡಬೇಕಾಗುವುದು. ಮಿತ್ರರ ನಡುವೆ ವೈಮನಸ್ಯ ಬರಬಹುದು.

ಕರ್ಕಾಟಕ ರಾಶಿ:

ನಿಮ್ಮ ಬಗ್ಗೆ ನಿಮಗೇ ಸರಿಯಾದ ಸ್ಥಿರತೆಯನ್ನು ಕಂಡುಕೊಳ್ಳಲಾಗದು. ಕಡ್ಡಿ ಮುರಿದಂತೆ ಮಾತನ್ನು ಹೇಳುವುದು ಬೇಡ. ಎಲ್ಲ ತಪ್ಪುಗಳಿಗೂ ನಿಮ್ಮನ್ನೇ ಬೆರಳು ಮಾಡಿ ತೋರಿಸಬಹುದು. ಸರಿಯಾದ ಉತ್ತರವನ್ನು ನೀಡಬೇಕಾಗುತ್ತದೆ. ಅಲ್ಪ ಲಾಭಕ್ಕೆ ನೀವು ತೃಪ್ತಿ ಪಡಬೇಕಾಗುವುದು. ಸ್ತ್ರೀಯರ ವಿಚಾರದಲ್ಲಿ ನೀವು ಜಾಗರೂಕತೆಯಿಂದ ಇರಬೇಕಾಗುವುದು. ನಿಮಗೆ ಬರಬೇಕಾದ ಹಣವು ನಿಮ್ಮ ಕೈಗೆ ಸಿಗದು. ಸಂಗಾತಿಯ ಮೇಲೆ ಬೇಸರದ ಭಾವವೂ ಮೂಡುವ ಸಾಧ್ಯತೆ ಇದೆ.

ಸಿಂಹ ರಾಶಿ:

ನಿಮಗೆ ಇಂದು ಶುಭವಾರ್ತೆಯು ಬರುವುದು. ಚರ್ಮಕ್ಕೆ ಸಂಬಂಧಿಸಿದಂತೆ ಏನಾದರೂ ಕಾಣಿಸಿಕೊಳ್ಳಬಹುದು. ನಿಶ್ಚಲವಾದ ಮನಸ್ಸನ್ನು ಯಾರಾದರೂ ಕಲಕಿ ಹಾಳು ಮಾಡಬಹುದು. ಆಪ್ತರ ಸಹಕಾರದಿಂದ ಸ್ಪರ್ಧೆಗಳನ್ನು ಗೆಲ್ಲುವಿರಿ. ಎಲ್ಲರನ್ನೂ ನಿಮ್ಮ ಪರವಾಗಿ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಲಲಿತಕಲೆಗಳು ನಿಮ್ಮನ್ನು ಸೆಳೆಯಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಲ್ಲಿ ಪೂರ್ಣ ತೃಪ್ತಿ ಇರದು. ಯಾರ ಜೊತೆಯಾದರೂ ಬೆರೆಯಬೇಕು ಅನ್ನಿಸುವುದು.

ಕನ್ಯಾ ರಾಶಿ:

ನೀವು ಮಾಡಿದ ಕಾರ್ಯಾಚಾರಣೆ ಸಫಲವಾಗಲಿದೆ. ನಿಮ್ಮ ಇಂದಿನ ವರ್ತನೆಯಿಂದ ಬಂಧುಗಳಿಗೆ ಅಸಮಾಧಾನವಾಗುವುದು. ಸಂಗಾತಿಯ ಜೊತೆ ಪ್ರೀತಿಯ ಮಾತೆಕತೆಯು ಆರಂಭವಾಗಿ ಕಲಹದಲ್ಲಿ ಮುಕ್ತಾಯವಾಗುವುದು. ಕಾರ್ಯಗಳಿಗೆ ಅಡೆತಡೆ ಉಂಟಾಗುವ ಶಂಕೆಯು ದೂರವಾಗುವುದು. ಹಿರಿಯರಿಂದ ನಿರೀಕ್ಷಿತ ಲಾಭವು ಸಿಗಲಿದ್ದು ಸಂತೋಷವಾಗುವುದು. ಎಲ್ಲ ತೊಂದರಗಳಿಗೂ ಯಾರನ್ನೋ ಬೈಯುತ್ತಾ ಕುಳಿತಿರುವುದರಲ್ಲಿ ಅರ್ಥವಿರದು.

ತುಲಾ ರಾಶಿ:

ನಿಮಗೂ ಅದು ಅನಿವಾರ್ಯವಾದೀತು. ನಿಮ್ಮ ಪೊರ್ವಯೋಜಿತ ಕಾರ್ಯಗಳನ್ನು ಕ್ರಿಯಾರೂಪಕ್ಕೆ ತರಲು ನಿಮಗೆ ಸಾಧ್ಯವಾಗದು. ಏನಾದರೂ ಅಡೆತಡೆಗಳು ಬರಬಹುದು. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಸಿಗುವುದು. ನೌಕರರು ನಿಮ್ಮ ಮೇಲೆ ಅಪನಂಬಿಕೆಯನ್ನು ಇಡಬಹುದು. ನಿಮಗೆ ಯಾರೂ ಸ್ಪಂದನೆ ಕೊಡದೇ ಹೋಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ಅನುಮಾನದ ಬುದ್ಧಿಯಿಂದಲೇ ಅವಕಾಶಗಳನ್ನು ಕಳೆದುಕೊಳ್ಳುವಿರಿ.

ವೃಶ್ಚಿಕ ರಾಶಿ:

ಇಂದು ಕಾರ್ಯಗಳನ್ನು ಪರೀಕ್ಷಿಸಿಕೊಂಡು ಮುಂದೆಸಾಗಿರಿ. ಇಲ್ಲವಾದರೆ ಕುರುಡನು ಹಗ್ಗವನ್ನು ಹೊಸೆದಂತೆ ಆದೀತು. ನಿಮ್ಮ ಕಾರ್ಯವನ್ನು ಕೆಲವರು ಆಡಿಕೊಳ್ಳಬಹುದು. ಸರ್ಕಾರದಿಂದ ಆಗಬೇಕಾದ ಕಾರ್ಯಗಳಲ್ಲಿ ಹಿನ್ನಡೆಯಾಗುವುದು. ಹಳೆಯ ರಹಸ್ಯ ವಿಚಾರವು ಪುನಃ ಬೆಳಕಿಗೆ ಬರಬಹುದು. ಸಂಗಾತಿಯ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ಮತ್ತೆ ಮತ್ತೆ ನಿಮಗೆ ಅನಾರೋಗ್ಯವು ಕಾಣಿಸಿಕೊಂಡಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯಿರಿ.

ಧನು ರಾಶಿ:

ನಿಮ್ಮ ಮಕ್ಕಳ ಮಾತಿಗೆ ಕೊಡುವ ಬೆಲೆಯಿಂದ ಅವರಿಗೆ ಸಂತೋಷವಾಗಿ ನಿಮ್ಮನ್ನು ಹೆಚ್ಚು ಇಷ್ಟಪಡುವರು. ನಿಮಗೆ ಇಂದು ಜಲಾಭಾವ ಕಾಣಿಸೀತು. ನ್ಯಾಯಾಲಯದಲ್ಲಿ ನಿಮ್ಮ ಕಾರ್ಯಗಳು ವಿಳಂಬವಾಗಿ ನಿಮ್ಮ ಮುಂದಿನ ಕಾರ್ಯಗಳಿಗೆ ತೊಂದರೆ ಆಗುವಂತೆ ತೋರುವುದು. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗಬಹುದು. ಕಛೇರಿಯ ಒತ್ತಡದಿಂದ ಬೇರೆ ಯೋಚನೆಯ ಕಡೆ ಮನಸ್ಸು ಹೋಗದು.

ಮಕರ ರಾಶಿ:

ಕರ್ತವ್ಯದ ಕಡೆ ಗಮನ ಕೊಡಿ. ಹಣಕಾಸಿನ ವಹಿವಾಟುಗಳನ್ನು ತಪ್ಪಿಸಿ ಮತ್ತು ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿ. ನೀವು ಮಾಡುವ ಕೆಲಸಕ್ಕೆ ನಿಮ್ಮ ಸುತ್ತಲೇ ವಿರೋಧವಿರುತ್ತದೆ. ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾಗುತ್ತದೆ. ಜೊತೆಗಾರರನ್ನು ಆತ್ಮೀಯವಾಗಿ ಕಾಣುವಿರಿ. ಕುಟುಂಬಕ್ಕೆ ನಿಮ್ಮಿಂದ ಆಗಬೇಕಾದ ಕಾರ್ಯಗಳ ಬಗ್ಗೆ ತಿಳಿದುಕೊಳ್ಳುವಿರಿ. ನಿಮ್ಮ ವಿದೇಶ ಪ್ರವಾಸವು ಕಾರಣಾಂತರಗಳಿಂದ ರದ್ದಾಗುವುದು.

ಕುಂಭ ರಾಶಿ:

ಬೇಡದ ವಿಚಾರಗಳನ್ನು ಮಾತನಾಡುತ್ತ ಇರುವುದನ್ನು ಬಿಟ್ಟು ನಿಮ್ಮ ಕೆಲಸದಲ್ಲಿ ತೊಡಗಿ. ಪಾಲದಾರಿಕೆಯಲ್ಲಿ ಒಬ್ಬರನ್ನೊಬ್ಬರು ಬಿಟ್ಟುಕೊಡಲಾರಿರಿ. ಕಲಾವಿದರು ತಮ್ಮ ಸಂಪಾದನೆಗೆ ಹೊಸ ಯೋಜನೆ ಹಾಕಿಕೊಳ್ಳುಬರು. ಪ್ರೀತಿಯಿಂದ ಹೇಳಿದರೆ ನಿಮ್ಮ ಕಾರ್ಯವು ಸಲೀಸಾಗಿ ಆಗುವುದು. ಸಂತಾನದ ಬಗ್ಗೆ ಸಂಗಾತಿಯ ಜೊತೆ ಮಾತನಾಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆಯು ಇಲ್ಲದೇ ಹೋಗಬಹುದು. ಮಕ್ಕಳಿಗೆ ಭವಿಷ್ಯದ ಬಗ್ಗೆ ಕಲ್ಪನೆಯನ್ನು ಕೊಡುವಿರಿ.

ಮೀನ ರಾಶಿ:

ಹೊಸದಾಗಿ ಸೇರಿದ ವೃತ್ತಿಯಲ್ಲಿ ಗೊಂದಲವಾಗಬಹುದು. ಸಕ್ರಿಯ ವಿರೋಧಿಗಳು ಸಹ ಸೋಲಿಸಲ್ಪಡುತ್ತಾರೆ. ನಿರ್ಮಾಣ ಕಾರ್ಯದ ಅಗತ್ಯವನ್ನು ಅನುಭವಿಸಲಾಗುವುದು. ಕೆಲವು ಒಳ್ಳೆಯ ಸುದ್ದಿಗಳು ನಿಮ್ಮ ಉತ್ಸಾಹವನ್ನು ಹೆಚ್ಚಿಸುತ್ತವೆ. ಮೌಲ್ಯಯುತವಾದ ವಸ್ತುವೊಂದನ್ನು ಖರೀದಿಸುವಿರಿ. ನಿಮ್ಮ ಹೊಸ ಪ್ರಯತ್ನಕ್ಕೆ ಕುಟುಂಬದ ಬೆಂಬಲವು ಸಿಗುವುದು. ಅಲ್ಪಾವಧಿಯಲ್ಲಿ ಹೆಚ್ಚು ಪಡೆಯಬೇಕು ಎನ್ನುವ ಅತಿಯಾದ ಆಸೆ ಬೇಡ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಶ್ರವಣ, ಯೋಗ : ಹರ್ಷಣ, ಕರಣ : ಬಾಲವ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 27 pm, ಇಂದಿನ ಶುಭಾಶುಭ ಕಾಲ : ರಾಹು 09:44 – 11:11, ಯಮಗಂಡ ಕಾಲ 14:06 – 15:33, ಗುಳಿಕ ಕಾಲ 06:50 – 08:15

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

ಹಿರಿಯರಿಗೆ ಅಗತ್ಯ ಇರುವಂಥ ಕೆಲಸ ಮಾಡಿಕೊಡುವುದರಿಂದ, ಅವರ ಆಶೀರ್ವಾದ ದೊರೆಯಲಿದ್ದು ಅದರ ಮೂಲಕವಾಗಿ ನಿಮ್ಮನ್ನು ಕಾಡುತ್ತಿರುವ ಸಂಬಂಧಗಳಲ್ಲಿನ ಗೊಂದಲ ದೂರವಾಗಲಿದೆ. ಇನ್ನು ಹೊಸ ಆರ್ಡರ್, ಪ್ರಾಜೆಕ್ಟ್ ಗಳು ದೊರೆಯಲಿವೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಒಂದು ಸಮಯಕ್ಕೆ ಒಂದೇ ವಿಷಯದ ಮೇಲೆ ಗಮನ ಕೇಂದ್ರೀಕರಿಸಿ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮಗೆ ದೊರೆಯುತ್ತವೆ, ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಹ ಸಿಗಲಿದೆ. ಕುಟುಂಬದ ಅಗತ್ಯಗಳನ್ನು ಪ್ರತ್ಯೇಕವಾಗಿ ನೋಡಿದರೆ ಉತ್ತಮ. ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲವೂ ಪಡೆಯಬಹುದು. ಹಣಕಾಸಿನ ವಿಷಯದಲ್ಲಿ ಜಾಗ್ರತೆ ವಹಿಸಿ; ಬ್ಯಾಂಕ್ ಬ್ಯಾಲೆನ್ಸ್ ಆತ್ಮವಿಶ್ವಾಸ ಹೆಚ್ಚಿಸುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಕುಟುಂಬದಲ್ಲಿ ಸಣ್ಣ ಅಸಮಾಧಾನ ಕಂಡರೂ ಮಾತನಾಡುವ ಮೂಲಕ ಪರಿಹಾರ ಸುಲಭವಾಗುತ್ತದೆ. ಸಂಗಾತಿಯೊಂದಿಗೆ ಕಳೆದ ಸಮಯ ಭಾವನಾತ್ಮಕವಾಗಿ ಬಲವನ್ನು ನೀಡುತ್ತದೆ. ವಿಶ್ರಾಂತಿ ಮತ್ತು ನೀರಿನ ಸೇವನೆ ಮುಖ್ಯ. ದಿನಾಂತ್ಯದಲ್ಲಿ ಮಾಡಿದ ಕಾರ್ಯಗಳಿಗೆ ತೃಪ್ತಿ ದೊರೆಯುತ್ತದೆ. ಇಂದು ಕೈಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಕೆ ಮಾಡಿ, ಯಾವುದು ನಿಮಗೆ ದೀರ್ಘಕಾಲದ ಬೆಳವಣಿಗೆ ನೀಡುತ್ತದೆ ಎಂಬುದನ್ನು ಆಲೋಚಿಸುವುದು ಒಳಿತು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಓದು- ಬರಹ, ಸಂಶೋಧನೆ ಇಂಥವುಗಳಲ್ಲಿ ಮುಳುಗಿ ಹೋಗುತ್ತೀರಿ. ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಮಾಡುವುದನ್ನು ಮರೆಯವಷ್ಟು ಕೆಲಸಗಳನ್ನು ಮೈ ಮೇಲೆ ಹಾಕಿಕೊಳ್ಳಬೇಡಿ. ಉದ್ಯೋಗ ಸ್ಥಳದಲ್ಲಿ ಹೊಸ ಕಲಿಕೆಗಳ ಅಗತ್ಯವು ಸ್ಪಷ್ಟವಾಗಿ ಕಾಣಿಸಲಿದೆ ಮತ್ತು ಹಿರಿಯರ ಮಾರ್ಗದರ್ಶನ ವಿಶ್ವಾಸ ಹೆಚ್ಚಿಸುತ್ತದೆ. ಹಣಕಾಸಿನ ವಿಷಯದಲ್ಲಿ ಅನವಶ್ಯಕ ಖರ್ಚು ತಪ್ಪಿಸುವುದು ಉತ್ತಮ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ಗಣಪತಿ ದೇವಸ್ಥಾನಕ್ಕೆ ದೂರ್ವಾ ಅಂದರೆ ಗರಿಕೆಯನ್ನು ಸಮರ್ಪಿಸುವುದರಿಂದ ಒತ್ತಡ, ಜಗಳ- ಕಲಹದಿಂದ ದೂರ ಇರುವುದಕ್ಕೆ ಅನುಗ್ರಹ ಆಗುತ್ತದೆ. ಇದು ಸಾಧ್ಯವಾದಲ್ಲಿ ಮನೆಯಲ್ಲಿ ಸಹ ಮಾಡಬಹುದು. ದೇವರ ಮನೆಯಲ್ಲಿ ಗಣಪತಿ ಚಿತ್ರದ ಎದುರು ಇಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸ್ವತಂತ್ರ ಆಲೋಚನೆಗಳು ನಿಮ್ಮ ಸಹೋದ್ಯೋಗಿಗಳಿಗಿಂತ ಪ್ರತ್ಯೇಕವಾಗಿ ನಿಲ್ಲುವಂತೆ ಮಾಡುತ್ತವೆ. ಪ್ರಾಡಕ್ಟ್ ಅಥವಾ ಪ್ರಾಜೆಕ್ಟ್ ಗಳನ್ನು ನೀವು ನೋಡುವ ರೀತಿ, ಪ್ಲಾನಿಂಗ್ ನಲ್ಲಿ ಅದನ್ನು ಕಟ್ಟುತ್ತಾ ಹೋಗುವ ಪರಿಗೆ ಮೇಲಧಿಕಾರಿಗಳು ಮೆಚ್ಚುಗೆ ಮಾತುಗಳನ್ನು ಆಡಲಿದ್ದಾರೆ. ಕೆಲಸ- ಕಾರ್ಯಗಳನ್ನು ತೊಡಗುವ ಮುನ್ನವೇ ನಿಮ್ಮ ಆದ್ಯತೆಗಳ ಪಟ್ಟಿಯೊಂದನ್ನು ಮಾಡಿಕೊಳ್ಳಿ. ಅದರಂತೆ ಒಂದೊಂದೇ ಕಾರ್ಯಗಳನ್ನು ಪೂರ್ಣಗೊಳಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮ ವೈಯಕ್ತಿಕ ಬದುಕಿನಲ್ಲಿ ಆಗುವ ಬೆಳವಣಿಗೆಗಳು ಗಮನ ಒಂದೆಡೆ ಕೇಂದ್ರೀಕರಿಸಲು ಅವಕಾಶ ಕೊಡುವುದಿಲ್ಲ. ಅದರಲ್ಲಿ ಮುಖ್ಯವಾಗಿ ನೀವು ಪ್ರೀತಿಸುವ ವ್ಯಕ್ತಿ ಅಥವಾ ಸಂಗಾತಿ ತಮ್ಮ ಸಿಟ್ಟನ್ನು ನಿಮ್ಮ ಮೇಲೆ ಹಾಕುತ್ತಿದ್ದಾರೆ ಎಂದೆನಿಸಲಿದೆ. ಈ ಯೋಚನೆಯಿಂದಾಗಿ ಪರಿಸ್ಥಿತಿ ಸಂಭಾಳಿಸುವುದಕ್ಕೆ ಶ್ರಮ ಪಡುವಂತೆ ಆಗಲಿದೆ. ನಿಮ್ಮ ಮಾನಸಿಕ ಸ್ಥೈರ್ಯವು ಎಲ್ಲವನ್ನೂ ಮೀರಿ ನಿಂತು, ಕೀರ್ತಿ- ಅವಕಾಶಗಳನ್ನು ತಂದುಕೊಡಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗ್ರಹಿಸಲಿದ್ದೀರಿ. ಇತರರ ನಿರೀಕ್ಷೆಗಳಿಗೆ ಸ್ಪಂದಿಸುವ ನಿಮ್ಮ ಗುಣ ಎಲ್ಲರಿಗೂ ಇಷ್ಟವಾಗಲಿದೆ. ಉದ್ಯೋಗ ಸ್ಥಳದಲ್ಲಿ ಒತ್ತಡ ಇದ್ದರೂ ಅದನ್ನು ನಿಮ್ಮ ಮೇಲೆ ಹಾಕಿಕೊಳ್ಳಲಿದ್ದೀರಿ. ಇಂದು ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಸಮತೋಲನ ಅಗತ್ಯ. ಕುಟುಂಬದವರೊಂದಿಗೆ ಮಾತನಾಡುವಾಗ ಸಂಯಮ ಕಾಪಾಡಿದರೆ ಅನಗತ್ಯ ವಾದವಿವಾದ ತಪ್ಪಿಸಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಜಾಗ್ರತೆ ಅನಿವಾರ್ಯ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ತಾಮ್ರದ ತಂಬಿಗೆಯಲ್ಲಿ ನೀರು ಹಾಗೂ ಅದರೊಳಗೆ ನಾಣ್ಯವೊಂದನ್ನು ಹಾಕಿ, ದಾನ ಮಾಡಿ. ಅಥವಾ ಒಂದು ಲೋಟದಲ್ಲಿ ಹಾಲನ್ನು ಹಾಕಿ, ಅದನ್ನು ದಾನ ಮಾಡುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜೊತೆಗೆ ಆಸ್ತಿ ವ್ಯಾಜ್ಯಗಳು ದೂರವಾಗುತ್ತವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಿಗುತ್ತದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗುತ್ತದೆ. ಸಂಬಂಧಗಳಲ್ಲಿ ಮಾತಿನಲ್ಲಿ ಮೃದುತ್ವ ಮುಖ್ಯ; ಸಂಗಾತಿಯ ಭಾವನೆಗಳನ್ನು ಗೌರವಿಸಿದರೆ ಸಣ್ಣ ಅಸಮಾಧಾನಗಳು ನಿವಾರಣೆಯಾಗುತ್ತವೆ. ಇಂದು ಪಡೆದ ಅನುಭವಗಳು ಮುಂದಿನ ನಿರ್ಧಾರಗಳಲ್ಲಿ ಹೆಚ್ಚಿನ ಸ್ಪಷ್ಟತೆ ನೀಡುತ್ತವೆ. ಸಮತೋಲನದಿಂದ ಮುಂದುವರಿಯುವ ಕಡೆಗೆ ಗಮನ ನೀಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಬ್ರ್ಯಾಂಡೆಡ್ ವಸ್ತುಗಳತ್ತ ಇಂದು ನಿಮ್ಮ ಮನಸ್ಸು ಹೆಚ್ಚು ಸೆಳೆಯುತ್ತದೆ. ಡಿಸ್ಕೌಂಟ್ ಅಥವಾ ಆಫರ್ ಕಂಡ ತಕ್ಷಣ ಯೋಚಿಸದೆ ಖರೀದಿ ಮಾಡುವ ಪ್ರವೃತ್ತಿ ಹೆಚ್ಚಾಗಬಹುದು. ಕ್ರೆಡಿಟ್ ಕಾರ್ಡ್ ಬಳಕೆ ಮಾಡುವವರಾದರೆ ಅಂದುಕೊಂಡಿದಕ್ಕಿಂತ ಹೆಚ್ಚು ಖರ್ಚಾಗಿ, ಬಜೆಟ್ ಮೀರಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಖರ್ಚಿನಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನೀಡಲಿದ್ದಾರೆ

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸ್ನೇಹಿತರ ಸಹಕಾರದಿಂದ ಕೆಲವು ಕೆಲಸಗಳು ಸುಗಮವಾಗುತ್ತವೆ. ಆರೋಗ್ಯದಲ್ಲಿ ಸಣ್ಣ ತೊಂದರೆ ಕಂಡರೂ ದಿನಾಂತ್ಯಕ್ಕೆ ಸುಧಾರಣೆ ಕಾಣುತ್ತದೆ. ಹೊಸ ಅವಕಾಶಗಳು ನಿಮ್ಮ ಮುಂದೆ ತೆರೆದುಕೊಳ್ಳುವ ಸೂಚನೆ ಇದೆ, ಆದರೂ ಶೀಘ್ರವಾಗಿ ತೀರ್ಮಾನಿಸಲು ಯತ್ನಿಸಬೇಡಿ. ನಿಮ್ಮ ಸಾಮರ್ಥ್ಯವನ್ನು ಗುರುತಿಸುವವರು ಇಂದು ಎದುರಾಗುವರು, ಇದು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ದಿನದ ಅಂತ್ಯದ ವೇಳೆಗೆ ಮಾನಸಿಕ ಶಾಂತಿ ದೊರೆಯತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ – Kannada News | Siddaramaiah Slams Fake Transfer Letter Scandal: Police Probe Karnataka Misinformation

ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (transfer) ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (Siddaramaiah) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಇನ್ನು ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​

ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್, ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

Source link

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಸಾಂಪ್ರದಾಯಿಕ ಡೊಳ್ಳು ಮತ್ತು ನಗಾರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ಮುಖ್ಯಮಂತ್ರಿಗಳು ಮತ್ತು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಒಲಿಂಪಿಕ್ ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ ಸಂದೇಶವನ್ನು ವಿಶ್ವಕ್ಕೆ ಸಾರಲಿದೆ. ಸಾರ್ವಜನಿಕರನ್ನು ತಮ್ಮ ಮೊಬೈಲ್ ಫೋನ್ ಟಾರ್ಚ್‌ಗಳನ್ನು ಆನ್ ಮಾಡುವ ಮೂಲಕ ಬೆಳಕಿನ ಉದ್ಘಾಟನೆಯಲ್ಲಿ ಭಾಗಿಯಾಗುವಂತೆ ಕೋರಲಾಯಿತು. ಈ ಉತ್ಸವವು ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮರುಕಳಿಸುವ ಮತ್ತು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಕರ್ನಾಟಕದ ಪ್ರಗತಿಯನ್ನು ದೇಶಾದ್ಯಂತ ಸಾರುವ ಉದ್ದೇಶವನ್ನು ಹೊಂದಿದೆ. ನಗಾರಿ ಮತ್ತು ಬೆಳಕಿನ ಸಮಾಗಮವು ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಭವ್ಯ ಕ್ಷಣಕ್ಕೆ ಸಾಕ್ಷಿಯಾಯಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ: ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು – Kannada News | Gajanoor Horror: Man Stripped, Stoned to Death by Friends in Shivamogga

ಗೆಳೆಯನ್ನು ಕೊಲೆ ಮಾಡಿದ ಸ್ನೇಹಿತರು

ಶಿವಮೊಗ್ಗ, ಫೆ.13: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (Shivamogga) ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ ಮತ್ತು ಅವರ ಇಬ್ಬರು ಸ್ನೇಹಿತರು ಸೇರಿ ಮದ್ಯದ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಶುರುವಾಗಿದೆ.

ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ವಿಕೃತವಾಗಿ ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ಹಂತಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದರು. ಇಂದು ಬೆಳಿಗ್ಗೆ ಶ್ರೀನಿವಾಸ್ ಹೆಣವಾಗಿ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಎಸ್ಪಿ ನಿಖಿಲ್ ಬಿ. ಹಾಗೂ ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಒಡಿಶಾದಲ್ಲಿ ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಗಲ್ಲು ಶಿಕ್ಷೆ

ನನ್ನ ತಮ್ಮನನ್ನು ಅವನ ಸ್ನೇಹಿತರೇ ಕೊಂದಿದ್ದಾರೆ, ಅವರಿಗೆ ತಕ್ಕ ಶಿಕ್ಷೆಯಾಗಬೇಕು” ಎಂದು ಮೃತನ ಸಹೋದರಿ ಸುಮಾ ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ. ಶ್ರೀನಿವಾಸ್‌ನನ್ನು ವಿವಸ್ತ್ರಗೊಳಿಸಿ ಹತ್ಯೆ ಮಾಡಿರುವುದು ಪ್ರಕರಣಕ್ಕೆ ಬೇರೆಯದೇ ಆಯಾಮ ನೀಡಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ . ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ – Kannada News | India vs Pakistan T20 WC 2026 Colombo: Rain Threatens Super 8 Decider and Pitch Challenge

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ 2026 (T20 World Cup 2026) ಪಂದ್ಯವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಈ ಹಿಂದೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆಯುತ್ತವೆ. ಇದರ ಜೊತೆಗೆ ಕ್ರಿಕೆಟ್​ನಲ್ಲಿ ಉಭಯ ತಂಡಗಳ ನಡುವಿನ ಪಂದ್ಯವೆಂದರೆ ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಆದ್ದರಿಂದ, ಈ ಪಂದ್ಯವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಆದರೆ ಶ್ರೀಲಂಕಾದ ಹವಾಮಾನ ಇಲಾಖೆ ನೀಡಿರುವ ಹವಾಮಾನ ವರದಿ ಅಭಿಮಾನಿಗಳ ಆಸೆಗೆ ತಣ್ಣೀರೆರಚಿದೆ.

ಗುಡುಗು ಸಹಿತ ಮಳೆ

ಶ್ರೀಲಂಕಾದ ಹವಾಮಾನ ಇಲಾಖೆ ನೀಡಿರುವ ಹವಾಮಾನ ವರದಿಯ ಪ್ರಕಾರ, ಫೆಬ್ರವರಿ 15 ಮತ್ತು 16 ರಂದು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಅಲ್ಲದೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ದಿನದಂದು ಸುಮಾರು ನಾಲ್ಕು ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ, ಬಿರುಗಾಳಿ ಬೀಸುವ ಸಾಧ್ಯತೆ ಶೇ. 26 ರಷ್ಟು ಇದೆ. ಇದರಿಂದಾಗಿ ಪಂದ್ಯ ವಿಳಂಬವಾಗಬಹುದು ಅಥವಾ ರದ್ದಾಗಬಹುದು.

ಕೊಲಂಬೊ ಪಿಚ್ ಹೇಗಿದೆ?

ಭಾರತ ತಂಡದ ತಂಡ ಯಾವಾಗಲೂ ಬ್ಯಾಟ್ಸ್‌ಮನ್‌ಗಳ ಮೇಲೆ ಅವಲಂಬಿತವಾಗಿದೆ. ಆದರೆ ಕೊಲಂಬೊ ಪಿಚ್ ಹಾಗೆ ಇರುವುದಿಲ್ಲ. ಏಕೆಂದರೆ ಈ ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡಲಿದೆ. ಆದ್ದರಿಂದ ಭಾರತ ಈ ಪಂದ್ಯ ಗೆಲ್ಲಲು ಸಾಕಷ್ಟು ಬೆವರು ಹರಿಸಬೇಕಿದೆ. ಏಕೆಂದರೆ ಪಾಕಿಸ್ತಾನ ಉತ್ತಮ ಸ್ಪಿನ್ ದಾಳಿಯನ್ನು ಹೊಂದಿದೆ. ಆದ್ದರಿಂದ ಈ ಪಿಚ್ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಒಂದು ಪರೀಕ್ಷೆಯಾಗಲಿದೆ. ಈ ಪಂದ್ಯದಲ್ಲಿ ಭಾರತ ಚೆನ್ನಾಗಿ ಬ್ಯಾಟಿಂಗ್ ಮಾಡಿದರೆ ಗೆಲುವು ಖಚಿತ. ಆದ್ದರಿಂದ, ಟಾಸ್ ಗೆದ್ದ ನಂತರ ಮೊದಲು ಬ್ಯಾಟಿಂಗ್ ಮಾಡುವುದು ಪ್ರಯೋಜನಕಾರಿಯಾಗಿದೆ. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿ ನೆರವು ಸಿಗಲಿದೆ.

T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ

ಭಾರತದ್ದೇ ಮೇಲುಗೈ

ಭಾರತ ಮತ್ತು ಪಾಕಿಸ್ತಾನ ತಂಡಗಳು ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಎಂಟು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 7 ಪಂದ್ಯಗಳನ್ನು ಭಾರತ ಗೆದ್ದಿದ್ದರೆ, ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಮುಖಾಮುಖಿ ದಾಖಲೆಯು ಭಾರತೀಯ ತಂಡದ ಪರವಾಗಿದ್ದರೂ, ಪಾಕ್ ತಂಡವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಈ ಪಂದ್ಯದಲ್ಲಿ ಭಾರತ ತನ್ನ ತಂತ್ರದ ಪ್ರಕಾರ ಆಡಬೇಕಾಗುತ್ತದೆ. ಏಕೆಂದರೆ ಪಿಚ್ ಸ್ಪಿನ್‌ಗೆ ಅನುಕೂಲಕರವಾಗಿರುತ್ತದೆ. ಇದರ ಜೊತೆಗೆ ಇದಕ್ಕೂ ಮೊದಲು, ಶ್ರೀಲಂಕಾದಲ್ಲಿ ಆಡುವಾಗ ಭಾರತ ತಂಡವು ಸಮಸ್ಯೆಗಳನ್ನು ಎದುರಿಸಿತ್ತು. ಆದ್ದರಿಂದ, ಭಾರತ ಜಾಗರೂಕವಾಗಿರಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link