ಸುಳ್ಳು ಆರೋಪ ಮಾಡುವುದೇ ಕಾಂಗ್ರೆಸ್ ಕೆಲಸ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ವಿಎಚ್ಪಿ ಅಧ್ಯಕ್ಷ ಅಲೋಕ್ ಕುಮಾರ್ ತಿರುಗೇಟು – Kannada News | VHP International President Alok Kumar hits back to Priyank Kharge open letter on RSS
ನವದೆಹಲಿ, ಜೂನ್ 16: ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಬರೆದಿದ್ದ ಬಹಿರಂಗ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ನವದೆಹಲಿಯಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಆರ್ಎಸ್ಎಸ್ನ ನೋಂದಣಿ ಮತ್ತು ಆದಾಯದ ಮೂಲಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ಪ್ರಶ್ನೆಗಳಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನಾಯಕ ಅಲೋಕ್ ಕುಮಾರ್ ಉತ್ತರಿಸಿದ್ದಾರೆ. “ದೇಶದ ಎಲ್ಲಾ ಸಂಸ್ಥೆಗಳೂ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು…