Category Archives: Blog

Your blog category

ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಸುನಾಮಿ; ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ – Kannada News | Assembly Election Results 2026: BJP Wins West Bengal, Vijay’s TVK Storms Tamil Nadu, UDF Wins Kerala Full details here with numbers

ಪ್ರಧಾನಿ ಮೋದಿ ಹಾಗೂ ವಿಜಯ್Image Credit source: PTI

ನವದೆಹಲಿ, ಮೇ 5: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ (Assembly Election Results 2026) ಪ್ರಕಟವಾಗಿದ್ದು, ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯ ಹಾಡಿರುವ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇತ್ತ ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ಪುಡಿಗಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ.

ಪಶ್ಚಿಮ ಬಂಗಾಳ: ದೀದಿ ಕೋಟೆ ಧೂಳೀಪಟ

ಬಂಗಾಳದ ರಣಕಣದಲ್ಲಿ ಮೋದಿ-ಶಾ ಜೋಡಿಯ ತಂತ್ರಗಾರಿಕೆಗೆ ಮಮತಾ ಬ್ಯಾನರ್ಜಿ ಸೋತು ಸುಣ್ಣವಾಗಿದ್ದಾರೆ. ಒಟ್ಟು 293 ಸ್ಥಾನಗಳಲ್ಲಿ ಬಿಜೆಪಿ 206 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ದ್ವಿಶತಕ ಬಾರಿಸಿದೆ. ಆಡಳಿತಾರೂಢ ಟಿಎಂಸಿ ಕೇವಲ 81 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ ಮೂಲಕ ಅಧಿಕಾರ ಕಳೆದುಕೊಂಡಿದೆ.

  • ಒಟ್ಟು ಸ್ಥಾನಗಳು: 293
  • ಬಿಜೆಪಿ: 206 ಸ್ಥಾನಗಳು (ಸ್ಪಷ್ಟ ಬಹುಮತ)
  • ಟಿಎಂಸಿ: 81 ಸ್ಥಾನಗಳು
  • ಕಾಂಗ್ರೆಸ್: 02 ಸ್ಥಾನಗಳು
  • ಇತರೆ: 03 ಸ್ಥಾನಗಳು
  • ವಿಶೇಷ: ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸೋಲು ಎದುರಾಗಿದೆ.

ತಮಿಳುನಾಡು: ದಳಪತಿ ವಿಜಯ್ ಆರ್ಭಟ

ದ್ರಾವಿಡ ನಾಡಿನಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುಂಟರಗಾಳಿ ಎಬ್ಬಿಸಿದೆ. 234 ಕ್ಷೇತ್ರಗಳ ಪೈಕಿ ಟಿವಿಕೆ 107 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಬಾಬು ವಿರುದ್ಧ ಸೋಲೊಪ್ಪಿಕೊಂಡಿರುವುದು ಡಿಎಂಕೆ ಪಾಲಿಗೆ ಭಾರಿ ಹಿನ್ನಡೆಯಾಗಿದೆ.

  • ಒಟ್ಟು ಸ್ಥಾನಗಳು: 234
  • ಟಿವಿಕೆ (ವಿಜಯ್): 107 ಸ್ಥಾನಗಳು
  • ಡಿಎಂಕೆ: 60 ಸ್ಥಾನಗಳು
  • AIADMK: 47 ಸ್ಥಾನಗಳು
  • ಕಾಂಗ್ರೆಸ್: 05 ಸ್ಥಾನಗಳು
  • ಇತರೆ: 04 ಸ್ಥಾನಗಳು
  • ವಿಶೇಷ: ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಕೊಳತ್ತೂರು ಕ್ಷೇತ್ರದಲ್ಲಿ ಸೋಲಿನ ಆಘಾತವಾಗಿದೆ.

ಕೇರಳದಲ್ಲಿ ಕಾಂಗ್ರೆಸ್‌ ಜಯಭೇರಿ: ಎಲ್​ಡಿಎಫ್​ನ 21 ಸಚಿವರಿಗೇ ಸೋಲು!

ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್​ಡಿಎಫ್ ಆಡಳಿತಕ್ಕೆ ಮತದಾರರು ಬ್ರೇಕ್ ಹಾಕಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ.

  • ಒಟ್ಟು ಸ್ಥಾನಗಳು: 140
  • ಯುಡಿಎಫ್ (ಕಾಂಗ್ರೆಸ್ ಮೈತ್ರಿ): 102 ಸ್ಥಾನಗಳು
  • ಎಲ್​ಡಿಎಫ್ (ಎಡಪಕ್ಷಗಳು): 35 ಸ್ಥಾನಗಳು
  • ಎನ್​ಡಿಎ (ಬಿಜೆಪಿ ಮೈತ್ರಿ): 03 ಸ್ಥಾನಗಳು
  • ವಿಶೇಷ: ಕೇರಳ ಸಂಪುಟದ 21 ಸಚಿವರಿಗೆ ಈ ಚುನಾವಣೆಯಲ್ಲಿ ಸೋಲಾಗಿದೆ.

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್

ಅಸ್ಸಾಂನಲ್ಲಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. 126 ಕ್ಷೇತ್ರಗಳ ಪೈಕಿ ಬಿಜೆಪಿ 82 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

  • ಒಟ್ಟು ಸ್ಥಾನಗಳು: 126
  • ಬಿಜೆಪಿ: 82 ಸ್ಥಾನಗಳು
  • ಕಾಂಗ್ರೆಸ್: 19 ಸ್ಥಾನಗಳು
  • ಇತರೆ: 22 ಸ್ಥಾನಗಳು

ಪುದುಚೇರಿಯಲ್ಲಿ ಎನ್​ಡಿಎಗೆ ಮತ್ತೆ ಅಧಿಕಾರ

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಎನ್​ಡಿಎ ಮಿತ್ರಕೂಟ 16 ಸ್ಥಾನಗಳೊಂದಿಗೆ ಮತ್ತೆ ಅಧಿಕಾರ ಹಿಡಿದಿದೆ.

  • ಒಟ್ಟು ಸ್ಥಾನಗಳು: 30
  • ಬಿಜೆಪಿ+ (ಎನ್​ಡಿಎ): 16 ಸ್ಥಾನಗಳು
  • ಡಿಎಂಕೆ: 05 ಸ್ಥಾನಗಳು
  • ಕಾಂಗ್ರೆಸ್: 03 ಸ್ಥಾನಗಳು
  • ಟಿವಿಕೆ: 02 ಸ್ಥಾನಗಳು

ಚುನಾವಣಾ ಫಲಿತಾಂಶದ ಹೈಲೈಟ್ಸ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ದೇವರ ಮನೆಯಲ್ಲಿ ಯಾವಾಗಲೂ ದೀಪ ಉರಿಯುತ್ತಿರಬೇಕು ಯಾಕೆ? – Kannada News | Akhanda Jyoti: Puja room should always be lit up, know why

ದೇವರ ಮನೆಯಲ್ಲಿ ಯಾವಾಗಲೂ ದೀಪ ಉರಿಯುತ್ತಿರಬೇಕು ಯಾಕೆ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿಯೊಬ್ಬರ ಮನೆಯಲ್ಲಿಯೂ ದೇವರ ಕೋಣೆ ಅಥವಾ ಪೂಜಾ ಸ್ಥಳವು ಸಕಾರಾತ್ಮಕ ಶಕ್ತಿಗಳ ಆಗರವಾಗಬೇಕೆಂಬ ಆಶಯವಿರುತ್ತದೆ. ಈ ನಿಟ್ಟಿನಲ್ಲಿ ಅಖಂಡ ಜ್ಯೋತಿ ಅಥವಾ ನಿರಂತರ ದೀಪಕ್ಕೆ ನಮ್ಮ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವಿದೆ. 24 ಗಂಟೆಯೂ ದೀಪ ಉರಿಯುವುದರಿಂದ ಮನೆಯಲ್ಲಿ ಧನಾತ್ಮಕ ಭಾವನೆಗಳು ಹೆಚ್ಚಿ, ಯಾವುದೇ ಕಷ್ಟಗಳಿದ್ದರೂ ಅವುಗಳ ತೀವ್ರತೆ ಕಡಿಮೆಯಾಗುತ್ತದೆ ಎಂದು ನಂಬಲಾಗಿದೆ.

ಆದರೆ, ಎಣ್ಣೆ ದೀಪ ಅಥವಾ ತುಪ್ಪದ ದೀಪಗಳನ್ನು ನಿರಂತರವಾಗಿ ಉರಿಸುವುದು ಅಷ್ಟು ಸುಲಭವಲ್ಲ. ಅವು ಕೆಲವು ಗಂಟೆಗಳ ನಂತರ ಆರಿಹೋಗಬಹುದು. ಹೀಗಾಗಿ, ದೀಪಾರತಿ ಮಾಡುವಾಗ ಎಣ್ಣೆ ದೀಪದ ಜೊತೆಗೆ ದೇವರ ಮನೆಯಲ್ಲಿ ಮಂದವಾದ ಜೀರೋ ಕ್ಯಾಂಡಲ್ ಬಲ್ಬ್ ಅನ್ನು ನಿರಂತರವಾಗಿ ಉರಿಸುವುದು ಉತ್ತಮ ಪರಿಹಾರವಾಗಿದೆ ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 5, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಚೌತಿ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಈ ಮಂಗಳವಾರವು ಸಂಕಷ್ಟ ಚತುರ್ಥಿಯ ವಿಶೇಷ ದಿನವಾಗಿದೆ. ವಿನಾಯಕನ ಪೂಜೆ ಮತ್ತು ಆರಾಧನೆಗಳಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ ಎಂದು ಗುರೂಜಿ ತಿಳಿಸಿದ್ದಾರೆ. ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯ ಜೇಷ್ಠ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ ಎಂದು ಗುರೂಜಿ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

 

 

 

Source link

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಒತ್ತಡದ ಕಾರ್ಯವನ್ನು ನಿರ್ವಹಿಸಲು ಅಸಾಧ್ಯ – Kannada News | Horoscope May 05 Tuesday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿದರೆ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಇದು ನಿಮಗೆ ಬೇಸರ ತರಿಸುವ ಕೆಲಸವಾಗಿರುತ್ತದೆ. ಹೊಸ ಯೋಜನೆಗಳು ಸಿಗಲಿದೆ. ಸಂಬಂಧಗಳು ಸುಧಾರಿಸುವ ಹಂತಕ್ಕೆ ಹೋಗಲಿವೆ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ.

ವೃಷಭ ರಾಶಿ:

ಅತಿಯಾದ ದೇಹಾಲಸ್ಯದಿಂದ ಕಾರ್ಯಗಳು ಸಮಯಕ್ಕೆ ಸರಿಯಾಗಿ ಆಗದೇ ವಿಳಂಬವಾಗಲಿದೆ. ನಿಮ್ಮ‌ಅಜ್ಞಾನವನ್ನು ನೀವೇ ಪ್ರದರ್ಶಿಸುವಿರಿ‌. ನೀವು ನಿರ್ಮಿಸಿಕೊಂಡ ನೂತನ ಗೃಹದಲ್ಲಿ ವಾಸವು ಆರಂಭವಾಗಲಿದೆ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ದಾಂಪತ್ಯದಲ್ಲಿ ಕೆಲವು ಕಹಿ ಮಾತುಗಳು ಬರಬಹುದು. ನೀವು ಇಂದು ಕೈಲಾಗದೇ ಇರುವ ಅಬಲರು.

ಮಿಥುನ ರಾಶಿ :

ನಿಮಗೆ ಸುಳ್ಳನ್ನು ಆಡುವವರು ಎನ್ನುವ ಹಣೆಪಟ್ಟಿ ಬೀಳಲಿದೆ. ನಿಮ್ಮ ಮಾತಿಗೆ ಬಿಡಿಗಾಸಿನಷ್ಟೂ ಬೆಲೆ ಇಲ್ಲದೇ ಕಡಿಮೆಯಾಗಬಹುದು. ನೀರಿಗೆ ಸಂಬಂಧಿಸಿದ ಉದ್ಯೋಗಾವಕಾಶಗಳು ಹೆಚ್ಚು ಸಿಗಬಹುದು. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ಊರಿನಿಂದ ಹೊರಹೋಗುವ ಸಾಧ್ಯತೆ ಇದೆ. ಕಲಾವಿದರು ಹೆಚ್ಚಿನ ಪ್ರಶಂಸೆಯನ್ನು ಗಳಿಸುವರು.

ಕರ್ಕಾಟಕ ರಾಶಿ:

ಪ್ರಭಾವೀ ವ್ಯಕ್ತಿತ್ವವನ್ನು ಜನಕ್ಕೆ ತಿಳಿಸುವಿರಿ. ನೀವಿಡುವ ಹೆಜ್ಜೆಯು ಗುರುತಾಗಲಿದೆ. ಎಂತಹ ಹೆಜ್ಜೆಗಳನ್ನು ಇಡಬೇಕು ಎನ್ನುವುದನ್ನು ತೀರ್ಮಾನಿಸಿಕೊಳ್ಳಿ. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ. ಆಡಿದ ಮಾತನ್ನು ತಿರುಚುವ ಕೆಲಸ ಮಾಡುವುದು ಬೇಡ. ಬಂದಿದ್ದನ್ನು ಬಂದಂತೆ ಸ್ವೀಕರಿಸಲು ಕಷ್ಟವಾಗದು. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು.

ಸಿಂಹ ರಾಶಿ:

ಉದ್ವೇಗಕ್ಕೆ ಒಳಗಾಗದೇ ತಾಳ್ಮೆಯಿಂದ ವರ್ತಿಸುವುದು ಉಚಿತ. ಕಬ್ಬಿಣಕ್ಕೆ ಸಂಬಂಧಿಸಿದ ಕಾರ್ಯದಲ್ಲಿ ಹೆಚ್ಚು ಒತ್ತಡ. ದಾಂಪತ್ಯದಲ್ಲಿ ಮಾತಿನ ಸಣ್ಣ ಬಿಸಿ ಉಂಟಾಗಬಹುದು. ಮನಸ್ಸಿನಲ್ಲಿ ಒಡಕುಗಳು ಮೂಡಬಹುದು. ಆದಷ್ಟು ಮುಂದುವರಿಯದೇ ನಿಲ್ಲಿಸಲು ಪ್ರಯತ್ನಿಸಿ. ಮುಂದೆ ಅದು ವಿಚ್ಛೇದನಕ್ಕೆ ಕಾರಣವಾಗಬಹುದು. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು.

ಕನ್ಯಾ ರಾಶಿ:

ಕೆಲವರು ನಿಮ್ಮೆದುರು ಮಾತನಾಡದೇ ಹಿಂಬದಿಯಿಂದ ಮಾತನಾಡಲಿದ್ದಾರೆ. ಗುರುವಿನ ಅನುಗ್ರಹದಿಂದ ಉದ್ಯಮಕ್ಕೆ ಬಲ ಸಿಗಲಿದೆ. ಕೃಷಿಯ ಬಗ್ಗೆ ಆಸಕ್ತಿ ಇರುವ ನೀವು ಕೃಷಿಯನ್ನು ಮಾಡಿ ಸ್ವಲ್ಪಮಟ್ಟಿನ ಲಾಭವನ್ನು ಗಳಿಸುವಿರಿ. ತಂದೆಯು ನಿಮ್ಮ ಕೆಲಸಕ್ಕೆ ಧನಸಹಾಯವನ್ನು ಮಾಡಲಿದ್ದಾರೆ. ಕೆಲವರ ಸಹವಾಸದಿಂದ ನಿಮ್ಮ ದಿಕ್ಕು ತಪ್ಪಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ಅಲ್ಪಾವಧಿಯಲ್ಲಿ ಅಧಿಕ ಲಾಭಕ್ಕಾಗಿ ಹೂಡಿಕೆ ಮಾಡುವಿರಿ.

ತುಲಾ ರಾಶಿ:

ಒತ್ತಡಗಳನ್ನು ನಿವಾರಿಸುವ ಉಪಾಯವು ಕರಗತವಾಗಿದ್ದು ಅನಾಯಾಸದಿಂದ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಮಾತುಗಾರಿಕೆಯಿಂದ ಆಗದ ಕೆಲಸವನ್ನೂ ಆಗಿಸಿಕೊಳ್ಳುವಿರಿ. ಹೊಸ ಕೆಲಸವನ್ನು ಆರಂಭಿಸುವವರು ಆರಂಭಿಸಲು ಯೋಗ್ಯವಾದ ಸಮಯವಾಗಿದೆ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ.

ವೃಶ್ಚಿಕ ರಾಶಿ:

ನೀವು ಬಹಳ ದಿನಗಳಿಂದ ಮಾಡುತ್ತಿರುವ ಕಾರ್ಯಗಳು ಮುಂದೆ ಹೋಗುತ್ತಿದ್ದು ಇಂದು ಅದನ್ನು ಪೂರೈಸುವಿರಿ. ಇಂದು ಮನಸ್ಸು ನಿರಾಳವಾಗಿ ಯಾವದೇ ಒತ್ತಡಕ್ಕೆ ಸಿಲುಕದೇ ಇರುವುದು. ನಿಮ್ಮ ಯಾರಾದರೂ ಕೆಣಕಬಹುದು. ಸರ್ಕಾರದ ಕಾರ್ಯದಲ್ಲಿ ಸರಿಯಾದ ಮಾಹಿತಿ ಕೊರತೆ. ದುರಭ್ಯಾಸವು ಮನೆಯವರಿಗೆ ಗೊತ್ತಾಗಲಿದೆ. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ.

ಧನು ರಾಶಿ:

ಇಂದು ನಿಮ್ಮ ಅನಗತ್ಯ ಕಾರ್ಯಗಳ ಪಟ್ಟಿಯೇ ದೊಡ್ಡದಾಗುವುದು. ಅವಶ್ಯಕತೆಗಳನ್ನು ಮಾತ್ರ ನೀಗಿಸಿಕೊಳ್ಳುವ ಪ್ರಯತ್ನವನ್ನು ಮಾಡಿ. ಯಾವುದೇ ಸಾಹಸಕ್ಕೆ ಕೈ ಹಾಕಲು ಹೋಗುವುದು ಬೇಡ‌. ವಿದೇಶದ ವಿದ್ಯಾಭ್ಯಾಸಕ್ಕೆ ಅವಕಾಶ ಸಿಗಲಿದೆ. ನಿಮಗೆ ಭವಿಷ್ಯದ ಚಿಂತೆ‌ ಇರಲಿದೆ. ಮಕ್ಕಳ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವೈದ್ಯಕೀಯ ವೃತ್ತಿಯಲ್ಲಿ ತುರ್ತು‌ ಕಾರ್ಯಗಳು ಬರುವುದು. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು.

ಮಕರ ರಾಶಿ:

ಕಛೇರಿಯಲ್ಲಿ ನಿಮ್ಮನ್ನು ಹಿಮ್ಮೆಟ್ಟಿಸಲು ಕಾಯುತ್ತಿರುವರು. ಅವರಿಗೆ ನೀವು ಆಹಾರವಾಗಲಿದ್ದೀರಿ. ಇಂದು ನಿಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವಿರಿ. ಎದೆಗುಂದುವ ಸ್ಥಿತಿ ಇಂದು ಬರಬಹುದು. ನಿಮ್ಮ ಅನಂತರ ಕೆಲಸ ಮಾಡುವವರಿಂದ ನಿಮಗೆ ಕೆಲವು ಮಾತುಗಳು ಸಿಗಬಹುದು. ಯಾವ ಬಲವನ್ನು ನಂಬದೇ ಸ್ವಪ್ರಯತ್ನದಿಂದ ಎಲ್ಲವನ್ನೂ ಮಾಡಲು ಬಯಸುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು.

ಕುಂಭ ರಾಶಿ:

ನಿಮಗೆ ಸಿಗಬೇಕಾದ ಜವಾಬ್ದಾರಿ ಮತ್ತೊಬ್ಬರಿಗೆ ಸಿಗಲಿದೆ. ದೂರದ ಊರಿಗೆ ವೈಯಕ್ತಿಕ ಕಾರ್ಯದ ನಿಮಿತ್ತ ಪ್ರಯಾಣ ಮಾಡಲಿದ್ದೀರಿ. ಸ್ನೇಹಿತ ಮಾತುಗಳು ನಿಮಗೆ ಕಸಿವಿಸಿ ವಾತಾವರಣವನ್ನು ಉಂಟುಮಾಡಲಿದೆ. ಉನ್ನತ ವಿದ್ಯಾಭ್ಯಾಸವನ್ನು ಮಾಡುವವರಿಗೆ ವಿದೇಶಗಳಲ್ಲಿ ಅವಕಾಶವು ದೊರೆಯಲಿದೆ. ರಾಜಕೀಯದಲ್ಲಿ ಬದಲಾವಣೆಯನ್ನು ತರಿಸುವುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ.

ಮೀನ ರಾಶಿ:

ಖುಷಿಯಾಗಿರಲು ಕೆಲವು ಸಂಗತಿಗಳು ನಿಮ್ಮ ಪಾಲಿಗೆ ಬರಲಿವೆ. ವಿನಾಕಾರಣ ಸಂಗಾತಿಯ ನಡುವೆ ಸಣ್ಣ ಕಲಹಗಳು ಹುಟ್ಟಿಕೊಳ್ಳಬಹುದು. ಅನಿವಾರ್ಯವಾಗಿ ಹೊರಗಿನ ತಿಂಡಿಯನ್ನು ತಿನ್ನಬೇಕಾದೀತು. ಉದರಕ್ಕೆ ಸಂಬಂಧಿಸಿದ ರೋಗವು ಬಂದು ಆರೋಗ್ಯವು ಕೆಡುವುದು. ನಿಮಗೆ ಕೆಲವು ಶುಭ ಶಕುನಗಳು ಕಾಣಿಸಿಕೊಳ್ಳಲಿದ್ದು ಅದರಂತೆ ನಿಮ್ಮ ನಡಿಗೆ ಇರಲಿ. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಮೂಲಾ, ಯೋಗ : ಶಿವ, ಕರಣ : ಬವ, ಸೂರ್ಯೋದಯ – 06 – 01 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:31 – 17:06, ಯಮಗಂಡ ಕಾಲ 09:11 – 10:46, ಗುಳಿಕ ಕಾಲ 12:21 – 13:56

-ಲೋಹಿತ ಹೆಬ್ಬಾರ್ – 8762924271 (what’s app only)

Source link

MI vs LSG: ರೋಹಿತ್, ರಿಕಲ್ಟನ್ ಅಬ್ಬರಕ್ಕೆ ಮಂಡಿಯೂರಿದ ಲಕ್ನೋ – Kannada News | MI Break Losing Streak at Wankhede: Beat LSG in IPL 2026 Match 47, Dim Playoff Hopes

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 47 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಲಕ್ನೋ ತಂಡವನ್ನು ಮಣಿಸಿದ ಮುಂಬೈ ತಂಡ ತನ್ನ ತವರಿನಲ್ಲಿ ಸೋಲುಗಳ ಸರಮಾಲೆ ಮುರಿದಿದೆ. ಇದು ಈ ಆವೃತ್ತಿಯಲ್ಲಿ ಮುಂಬೈ ತಂಡದ ಮೂರನೇ ಗೆಲುವಾದರೆ, ಇತ್ತ ಇದು ಲಕ್ನೋ ತಂಡದ 7ನೇ ಸೋಲಾಗಿದೆ. ಈ ಸೋಲಿನೊಂದಿಗೆ ಮುಂಬೈನಂತೆ ಲಕ್ನೋ ತಂಡದ ಪ್ಲೇ ಆಫ್ ಕನಸು ಕೂಡ ಭಾಗಶಃ ಭಗ್ನವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ 228 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ರಿಕಲ್ಟನ್ ಹಾಗೂ ರೋಹಿತ್ ಅವರ ಅಬ್ಬರದ ಬ್ಯಾಟಿಂಗ್​ನಿಂದಾಗಿ ಗೆಲುವು ದಾಖಲಿಸಿತು.

Source link

ದಳಪತಿ ವಿಜಯ್ ಮನೆ ಎದುರು ಜಮಾಯಿಸಿದ ಅಭಿಮಾನಿಗಳು; ಧನ್ಯವಾದ ತಿಳಿಸಿದ ನಟ – Kannada News | Thalapathy Vijay waves at fans gathered in front of his house after TVK win

ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡು ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಅವರ ಟಿವಿಕೆ (TVK) ಪಕ್ಷ ಬರೋಬ್ಬರಿ 107 ಸ್ಥಾನಗಳನ್ನು ಗೆದ್ದಿದೆ. ಈ ಗೆಲುವಿಗಾಗಿ ಎಲ್ಲರೂ ದಳಪತಿ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ವಿಜಯ್ ನಿವಾಸದ ಎದುರು ಜಮಾಯಿಸಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಪೋಷಕರ ಮನೆಯ ಹೊರಗೆ ಜಮಾಯಿಸಿದ್ದ ಜನಸಮೂಹವನ್ನು ನೋಡಿ ವಿಜಯ್ ಅವರು ಕೈಬೀಸಿ ಧನ್ಯವಾದ ತಿಳಿಸಿದರು. ತಮಿಳುನಾಡು ಚುನಾವಣೆಯಲ್ಲಿ ಅವರ ಪಕ್ಷವು ಗರಿಷ್ಠ ಮುನ್ನಡೆ ಸಾಧಿಸಿದೆ. ಮೊದಲ ಪ್ರಯತ್ನದಲ್ಲೇ ದಳಪತಿ ವಿಜಯ್ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ವಿಜಯ್ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಬಂಗಾಳದಲ್ಲಿ ಟಿಎಂಸಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ – Kannada News | TMC party office set ablaze amid clashes with BJP workers in West Bengal

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಸರ್ಕಾರ ರಚಿಸುವ ಹಂತದಲ್ಲಿರುವಾಗ ಘರ್ಷಣೆಯ ನಡುವೆ ಟಿಎಂಸಿ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಸನ್ಸೋಲ್‌ನ ಗೋಧೂಲಿ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯ ಸೋಲನ್ನು ಕಂಡಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದರ ನಡುವೆ ಟಿಎಂಸಿ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಟಿಎಂಸಿ ಕಚೇರಿಯ ಆವರಣವು ತೀವ್ರವಾಗಿ ಹಾನಿಗೊಳಗಾಗಿದ್ದು, ಪೀಠೋಪಕರಣಗಳು, ಧ್ವಜಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹರಿದುಹೋಗಿವೆ. ಕಟ್ಟಡಕ್ಕೆ ಬೆಂಕಿಯನ್ನೂ ಹಚ್ಚಲಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs LSG: ಅಪರೂಪಕ್ಕೆ ಸಿಕ್ಕಿತ್ತು ವಿಕೆಟ್; ಬುಮ್ರಾ ಮಾಡಿದ್ರ ಎಡವಟ್ಟು..! ವಿಡಿಯೋ ನೋಡಿ – Kannada News | IPL 2026: Jasprit Bumrah’s Poor Form & No Balls Cost Mumbai Indians Dearly

2026 ರ ಐಪಿಎಲ್‌ನಲ್ಲಿ (IPL 2026) ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಬ್ಯಾಟಿಂಗ್‌ ವಿಭಾಗದ ಪಾತ್ರ ಎಷ್ಟಿದೆಯೋ, ಬೌಲಿಂಗ್ ವಿಭಾಗದ್ದು ಅಷ್ಟೇ ಕೊಡುಗೆ ಇದೆ. ಅದರಲ್ಲೂ ಮುಂಬೈ ತಂಡದ ಬೌಲಿಂಗ್ ವಿಭಾಗದ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಆವೃತ್ತಿಯಲ್ಲಿ ವಿಕೆಟ್ ಬರ ಎದುರಿಸುತ್ತಿದ್ದಾರೆ. ಇದು ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎನ್ನಬಹುದು. ಇದುವರೆಗೆ ಬುಮ್ರಾ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದ್ದಾರೆ. ಈ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ.

ನೋ ಬಾಲ್ ಎಸೆದ ಬುಮ್ರಾ

ಇಂದು ನಡೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇನಲ್ಲಿ ಎರಡು ಓವರ್​ಗಳನ್ನು ಬೌಲ್ ಮಾಡಿದ ಬುಮ್ರಾ ದುಬಾರಿಯಾಗಿದ್ದರು. ಇದರ ಜೊತೆಗೆ ವಿಕೆಟ್ ಕೂಡ ಪಡೆದಿರಲಿಲ್ಲ. ಆ ನಂತರ ಡೆತ್ ಓವರ್​ನಲ್ಲಿ ಬೌಲಿಂಗ್​ಗೆ ಬಂದ ಬುಮ್ರಾಗೆ ವಿಕೆಟ್ ಪಡೆಯುವ ಅವಕಾಶ ಸಿಕ್ಕಿತು. ಲಕ್ನೋ ಪರ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ ಹಿಮ್ಮತ್ ಸಿಂಗ್, ಬುಮ್ರಾ ಬೌಲ್ ಮಾಡಿದ 14ನೇ ಓವರ್​ನಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಆದರೆ ದುರಾದೃಷ್ಟವೆಂಬಂತೆ ಬುಮ್ರಾ ಆ ಎಸೆತವನ್ನು ನೋ ಬಾಲ್ ಮಾಡಿದ್ದರು. ಹೀಗಾಗಿ ಹಿಮ್ಮತ್​ಗೆ ಜೀವದಾನ ಸಿಕ್ಕಿತು.

 2 ರನ್​ಗೆ ಸಿಕ್ಕಿತು ಜೀವದಾನ

ಹಿಮ್ಮತ್​ಗೆ ಜೀವದಾನ ಸಿಕ್ಕಾಗ ಅವರು ಕೇವಲ 2 ರನ್ ಮಾತ್ರ ಗಳಿಸಿದ್ದರು. ನೋ ಬಾಲ್ ಎಸೆದು ಎದುರಾಳಿ ಬ್ಯಾಟರ್​ಗೆ ಜೀವದಾನ ಮಾಡಿದ್ದು ಮಾತ್ರವಲ್ಲದೆ ಬುಮ್ರಾ, ಅದೇ ಓವರ್​ನಲ್ಲಿ ಎರಡನೇ ನೋ ಬಾಲ್ ಮಾಡಿದರು. ಒಟ್ಟಾರೆ ಈ ಪಂದ್ಯದಲ್ಲಿ ಬುಮ್ರಾ ಬರೋಬ್ಬರಿ 3 ನೋ ಬಾಲ್​ಗಳನ್ನು ಎಸೆದರು. ಮಾತ್ರವಲ್ಲದೆ ಬುಮ್ರಾ ಈ ಆವೃತ್ತಿಯಲ್ಲಿ ಈಗಾಗಲೇ ಒಂಬತ್ತು ನೋ-ಬಾಲ್‌ಗಳನ್ನು ಎಸೆದಿದ್ದಾರೆ. ಬುಮ್ರಾ ಈ ರೀತಿಯಾಗಿ ಲಯ ತಪ್ಪಿರುವುದನ್ನು ನೋಡುವುದು ತುಂಬಾ ವಿರಳ ಆದರೆ ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಬುಮ್ರಾ ಲಯ ಕಳೆದುಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

40 ರನ್ ಬಾರಿಸಿದ ಹಿಮ್ಮತ್

ಇನ್ನು ಬುಮ್ರಾರಿಂದ ಜೀವದಾನ ಪಡೆದ ಹಿಮ್ಮತ್ 31 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 40 ರನ್​ಗಳ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಮಾರ್ಕ್ರಾಮ್ ಅವರೊಂದಿಗೆ 6ನೇ ವಿಕೆಟ್​ಗೆ ಅಜೇಯ ಅರ್ಧಶತಕದ ಜೊತೆಯಾಟವನ್ನು ಕಟ್ಟಿ ಲಕ್ನೋ ತಂಡವನ್ನು 228 ರನ್​ಗಳಿಗೆ ಕೊಂಡೊಯ್ದರು. ಅಂದರೆ ಬುಮ್ರಾ ಮಾಡಿದ ಎಡವಟ್ಟು ಮುಂಬೈ ತಂಡಕ್ಕೆ 38 ರನ್​ಗಳ ದಂಡವಾಗಿ ಪರಿಣಮಿಸಿತು.

MI vs LSG: 6,6,6,6,6,6,6.. 2ನೇ ವೇಗದ ಅರ್ಧಶತಕ ಬಾರಿಸಿದ ಪೂರನ್

ಬುಮ್ರಾಗೆ ವಿಕೆಟ್ ಬರ

ನಿರ್ಣಾಯಕ ವಿಕೆಟ್ ಟೇಕಿಂಗ್ ಪ್ರದರ್ಶನಕ್ಕೆ ಹೆಸರುವಾಸಿಯಾದ ಜಸ್ಪ್ರೀತ್ ಬುಮ್ರಾ ಈ ಆವೃತ್ತಿಯಲ್ಲಿ ವಿಕೆಟ್ ಪಡೆಯಲು ಕಷ್ಟಪಡುತ್ತಿದ್ದಾರೆ. ಈ ಆವೃತ್ತಿಯಲ್ಲಿ ಆಡಿರುವ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ, 100 ಕ್ಕಿಂತ ಹೆಚ್ಚು ಬೌಲಿಂಗ್ ಸರಾಸರಿ ಹೊಂದಿದ್ದಾರೆ. ತವರು ಮೈದಾನವಾದ ವಾಂಖೆಡೆಯಲ್ಲಿ, ಬುಮ್ರಾ ತಮ್ಮ ಮೊದಲ ಆರು ಪಂದ್ಯಗಳಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದಾರೆ. ಈ ಆವೃತ್ತಿಯಲ್ಲಿ ಬುಮ್ರಾ ಅವರ ಎಕಾನಮಿ ರೇಟ್​ ಕೂಡ ಪ್ರತಿ ಓವರ್‌ಗೆ ಸುಮಾರು 9 ರನ್‌ಗಳಷ್ಟಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:07 pm, Mon, 4 May 26

Source link

West Bengal Election 2026 Result: ಬಂಗಾಳದ ಭವಾನಿಪುರದಲ್ಲಿ ಸುವೇಂದು ಅಧಿಕಾರಿ ಎದುರು ಸಿಎಂ ಮಮತಾ ಬ್ಯಾನರ್ಜಿ ಹೀನಾಯ ಸೋಲು – Kannada News | West Bengal Election Results Mamata Banerjee Loses Bhabanipur To Suvendu Adhikari

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ 4ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಉತ್ಸಾಹ ಮತ್ತು ವಿಶ್ವಾಸದಲ್ಲಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ಭಾರೀ ಮುಖಭಂಗವಾಗಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಬಿಜೆಪಿ ಬಹುಮತದ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಆದರೂ ಧೃತಿಗೆಡದ ಮಮತಾ ಬ್ಯಾನರ್ಜಿ ಸೂರ್ಯಾಸ್ತವಾಗುವಷ್ಟರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಡಿಯೋ ಮೂಲಕ ತಮ್ಮ ಬೆಂಬಲಿಗರಿಗೆ ಧೈರ್ಯ ತುಂಬಿದ್ದರು. ಸಂಜೆ ಟಿಎಂಸಿ ಭಾರೀ ಸೋಲನ್ನು ಅನುಭವಿಸುತ್ತಿದ್ದಂತೆ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಆರೋಪ ಮಾಡಿದ್ದರು. ಇದೀಗ ತಮ್ಮ ತವರು ಕ್ಷೇತ್ರವಾದ ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಎದುರು ಹೀನಾಯವಾಗಿ ಸೋತಿದ್ದಾರೆ.

ಸುವೇಂದು ಅಧಿಕಾರಿ ಬಂಗಾಳದ ಭವಾನಿಪುರ ಸ್ಥಾನವನ್ನು ಗೆದ್ದಿದ್ದಾರೆ. ಅವರು 20ನೇ ಸುತ್ತಿನ ಎಣಿಕೆಯ ನಂತರ 73,463 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ 58,349 ಮತಗಳನ್ನು ಪಡೆದರು. ಹೀಗಾಗಿ, ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಅವರನ್ನು 15,114 ಮತಗಳಿಂದ ಸೋಲಿಸಿದರು. ಮಮತಾ ಬ್ಯಾನರ್ಜಿಯವರ ರಾಜಕೀಯ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಈ ಕ್ಷೇತ್ರದಲ್ಲಿ ಈ ಬಾರಿ ಮತದಾರರು ಬಿಜೆಪಿಗೆ ಅಧಿಕಾರ ನೀಡಿದ್ದಾರೆ. ಇದು ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನಕ್ಕೆ ದೊಡ್ಡ ಹೊಡೆತ ನೀಡಿದೆ.

ಕಳೆದ ಚುನಾವಣೆಯಲ್ಲೂ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಸೋತಿದ್ದರು ಎಂಬುದು ಗಮನಾರ್ಹ. ಆದರೆ, ಆ ಚುನಾವಣೆಯಲ್ಲಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ಸೋತಿದ್ದರು. ಈ ಬಾರಿ ಭವಾನಿಪುರ ಕ್ಷೇತ್ರದಿಂದ ಸೋತಿದ್ದಾರೆ.

ಇದನ್ನೂ ಓದಿ: West Bengal CM: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ?

ಏಳನೇ ಸುತ್ತಿನ ಅಂತ್ಯದ ವೇಳೆಗೆ ಮಮತಾ ಬ್ಯಾನರ್ಜಿ 17,000ಕ್ಕೂ ಹೆಚ್ಚು ಮತಗಳ ಮುನ್ನಡೆಯನ್ನು ಹೊಂದಿದ್ದರು. ಆದರೆ ನಂತರದ ಸುತ್ತುಗಳಲ್ಲಿ ಅಂತರ ಕಡಿಮೆಯಾಯಿತು. 14 ನೇ ಸುತ್ತಿನ ವೇಳೆಗೆ 4,000ಕ್ಕಿಂತ ಕಡಿಮೆಯಾಯಿತು. ದಕ್ಷಿಣ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಈ ಸ್ಥಾನವು ಇಬ್ಬರೂ ನಾಯಕರ ನಡುವಿನ ಪ್ರತಿಷ್ಠೆಯ ಸ್ಪರ್ಧೆಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಸದಾ ಇತರರ ಮಾತನ್ನು ಕೇಳುವುದರಿಂದ ಜೀವನದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತವೆ ಗೊತ್ತಾ? – Kannada News | Chanakya Niti: What are the effects on life of always listening to others?

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸು, ಶ್ರೀಮಂತಿಕೆ, ಸಂಬಂಧಗಳು ಮಾತ್ರವಲ್ಲ ನಮಗೆ ಸರಿಯಾದ ಮಾರ್ಗವನ್ನು ತೋರಿಸುವ ಅನೇಕ ಜೀವನ ಪಾಠಗಳನ್ನು ಹೇಳಿಕೊಟ್ಟಿದ್ದಾರೆ. ಜೊತೆಗೆ ಇತರರನ್ನು ಕುರುಡಾಗಿ ನಂಬಿದಾಗ ಉಂಟಾಗುವ ಕೆಲವು ಅಪಾಯಗಳ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಇತರರನ್ನು ಕುರುಡಾಗಿ ನಂಬುವ, ಸದಾ ಇತರರ ಮಾತನ್ನೇ ಕೇಳುವ ಅಭ್ಯಾಸ ಒಬ್ಬ ವ್ಯಕ್ತಿಗಿದ್ದರೆ, ಅವನು ವೇಗವಾಗಿ ವಿನಾಶದತ್ತ ಸಾಗುತ್ತದೆ ಎಂಬುದನ್ನು ಸಹ ಎಚ್ಚರಿಸಿದ್ದಾರೆ. ಹಾಗಿದ್ರೆ ಈ ಒಂದು ತಪ್ಪಿನಿಂದ ಜೀವನದಲ್ಲಿ ಏನೆಲ್ಲಾ ಅಪಾಯಗಳು ಎದುರಾಗುತ್ತವೆ ಎಂಬುದನ್ನು ವಿವರವಾಗಿ ತಿಳಿದುಕೊಳ್ಳೋಣ.

ಇತರರ ಮಾತನ್ನು ಕೇಳುವುದರಿಂದ ಜೀವನ ಹೇಗೆಲ್ಲಾ ಹಾಳಾಗುತ್ತದೆ ಗೊತ್ತಾ?

ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ: ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಇತರರನ್ನು ಕುರುಡಾಗಿ ನಂಬಿದಾಗ, ಆತ ಬೇಗನೆ ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾನೆ. ಕೆಲವೊಮ್ಮೆ, ಜನರು ತಮ್ಮ ಮಾತುಗಳ ಹಿಂದೆ ಸ್ವಾರ್ಥ, ಕೆಟ್ಟ ಉದ್ದೇಶಗಳನ್ನು ಇಟ್ಟುಕೊಂಡಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಅವರ ಮಾತುಗಳನ್ನು ನಂಬಿ ತಪ್ಪು ದಿಕ್ಕಿನಲ್ಲಿ ಮುಂದುವರಿದರೆ, ಅದರಿಂದ ನಿಮ್ಮ ಸಂಪೂರ್ಣ ಜೀವನವೇ ಹಾಳಾಗುತ್ತದೆ.

ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ದುರ್ಬಲಗೊಳ್ಳುತ್ತದೆ: ಆಚಾರ್ಯ ಚಾಣಕ್ಯರು ಹೇಳುವಂತೆ, ಒಬ್ಬ ವ್ಯಕ್ತಿಯು ಇತರರ ಸಲಹೆಗೆ ಮಣಿದು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿದಾಗ, ಆತ ಸಣ್ಣ ಕೆಲಸಗಳಿಗೂ ಇತರರನ್ನು ಅವಲಂಬಿಸಲು ಪ್ರಾರಂಭಿಸುತ್ತಾನೆ. ಇದು ಆತನ ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು   ದುರ್ಬಲಗೊಳಿಸುತ್ತದೆ.  ನೀವು ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ, ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸುವುದು ತುಂಬಾನೇ ಮುಖ್ಯ.

ಇದನ್ನೂ ಓದಿ: ಗಂಡನಾದವನು ತನ್ನ ಹೆಂಡತಿಯ ಬಳಿ ಆಡುವ ಮಾತುಗಳು ಸುಂದರ ಸಂಬಂಧವನ್ನೇ ಹಾಳು ಮಾಡುತ್ತದೆ

ಆತ್ಮವಿಶ್ವಾಸದ ನಷ್ಟ: ಚಾಣಕ್ಯ ನೀತಿಯ ಪ್ರಕಾರ, ಒಬ್ಬ ವ್ಯಕ್ತಿಯು ಎಲ್ಲದಕ್ಕೂ ಇತರರನ್ನು ಅವಲಂಬಿಸಲು ಪ್ರಾರಂಭಿಸಿದಾಗ, ಇತರರ ಮಾತನ್ನೇ ಕೇಳಿ ಮುಂದೆ ಸಾಗಿದಾಗ ಆತನ ಆತ್ಮವಿಶ್ವಾಸವು ಬೇಗನೆ ಕುಸಿಯುತ್ತದೆ. ಒಂದು ನಿರ್ದಿಷ್ಟ ಹಂತದ ನಂತರ, ಆತ ತನ್ನಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಾನೆ ಮತ್ತು ಜೀವನದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಇತರರ ಅಭಿಪ್ರಾಯಗಳನ್ನು ಮಾತ್ರ ಅವಲಂಬಿಸಲು ಪ್ರಾರಂಭಿಸುತ್ತಾನೆ. ಈ ಅಭ್ಯಾಸವು ಕೊನೆಗೆ ವ್ಯಕ್ತಿಯ ವ್ಯಕ್ತಿತ್ವವನ್ನೇ ದುರ್ಬಲಗೊಳಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link