Headlines

IPL 2026: ನೋಡುವವರಿಲ್ಲ, ಟಿಆರ್​ಪಿಯೂ ಇಲ್ಲ..! ಕಳೆಗುಂದಿದ ಐಪಿಎಲ್ ಜನಪ್ರಿಯತೆ – Kannada News | IPL 2026 Popularity Decline: TRP and Viewership Drop, Advertisers Lose Interest

2026 ರ ಐಪಿಎಲ್‌ನಲ್ಲಿ (IPL 2026) ಈಗಾಗಲೇ 47 ಪಂದ್ಯಗಳು ಮುಗಿದಿವೆ. ಅಂದರೆ ಐಪಿಎಲ್​ನ ಅರ್ಧ ಪ್ರಯಾಣ ಮುಗಿದಂತ್ತಾಗಿದೆ. ಆರಂಭದಲ್ಲಿ ಐಪಿಎಲ್​ಗೆ ಸಿಕ್ಕ ಬೆಂಬಲ ಪಂದ್ಯಗಳು ಮುಂದುವರೆದಂತೆ ಕಳೆಗುಂದಿದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಕಳೆದ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಬರಿ ಬ್ಯಾಟರ್​ಗಳ ಪಾರುಪತ್ಯವೇ ಹೆಚ್ಚಾಗಿರುವುದು. ಇದರ ಜೊತೆಗೆ ಇನ್ನು ಅನೇಕ ಕಾರಣಗಳು ಐಪಿಎಲ್​ ಮೇಲೆ ಅಭಿಮಾನಿಗಳು ಉತ್ಸಾಹ ಕಳೆದುಕೊಳ್ಳುವಂತೆ ಮಾಡುತ್ತಿವೆ. ಇದೀಗ ಅದಕ್ಕೆ ಪೂರಕವೆಂಬಂತೆ ಹೊರಬಿದ್ದಿರುವ ವರದಿಯೊಂದು ಐಪಿಎಲ್ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ,…

Read More

Free Online Courses: 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎನ್‌ಸಿಇಆರ್‌ಟಿಯಿಂದ ಉಚಿತ ಆನ್‌ಲೈನ್ ಕೋರ್ಸ್ ಆರಂಭ! – Kannada News | NCERT SWAYAM Free Online Courses for 11th and 12th Graders: Boost Exam Prep

11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಸರಳಗೊಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) ಈಗ ಮಹತ್ವದ ಉಪಕ್ರಮವನ್ನು ಕೈಗೊಂಡಿದೆ. ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ‘ಸ್ವಯಂ’ (SWAYAM) ಪೋರ್ಟಲ್ ಮೂಲಕ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ. ಈ ಉಪಕ್ರಮವು ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ನೀಡುವುದಲ್ಲದೆ, ಮನೆಯಿಂದಲೇ ತಮ್ಮ ಪರೀಕ್ಷಾ ಸಿದ್ಧತೆಯನ್ನು ಬಲಪಡಿಸಲು ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಲು…

Read More

ಡಿಎಂಕೆಗೆ ಭರ್ಜರಿ ಶಾಕ್: ಭದ್ರಕೋಟೆಯಲ್ಲೇ ಹಾಲಿ ಸಿಎಂ ಸ್ಟಾಲಿನ್​​ ಮಣಿಸಿದ ಟಿವಿಕೆ

ಚೆನ್ನೈ, ಮೇ 04: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಭ್ಯರ್ಥಿ ಎಂ.ಕೆ. ಸ್ಟಾಲಿನ್ ಉತ್ತರ ಚೆನ್ನೈನ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿ ವಿ.ಎಸ್​.ಬಾಬು ವಿರುದ್ಧ ಸೋಲುಂಡಿದ್ದು, ಆಡಳಿತಾರೂಢ ಪಕ್ಷಕ್ಕೆ ನಟ ದಳಪತಿ ವಿಜಯ್​​ ಶಾಕ್​​ ಮೇಲೆ ಶಾಕ್​​ ನೀಡಿದ್ದಾರೆ. ಉಭಯ ಅಭ್ಯರ್ಥಿಗಳ ನಡುವೆ ಆರಂಭದಿಂದಲೂ ಭಾರಿ ಪೈಪೋಟಿ ಇತ್ತಾದರೂ ಅಂತಿಮವಾಗಿ ಎಂ.ಕೆ. ಸ್ಟಾಲಿನ್ ಟಿವಿಕೆ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ. ಭಧ್ರ ಕೋಟೆಯಲ್ಲಿಯೇ ಡಿಎಂಕೆಗೆ…

Read More

ಭಾರತದ ‘ಪ್ಯಾಡ್‌ಮ್ಯಾನ್’ಗೆ ನೋಬೆಲ್ ಗೌರವ: 2026ರ ಶಾಂತಿ ಪ್ರಶಸ್ತಿಗೆ ಅರುಣಾಚಲಂ ಮುರುಗಾನಂದಂ ನಾಮನಿರ್ದೇಶನ! – Kannada News | Arunachalam Muruganantham: India’s Padman Eyes 2026 Nobel Peace Prize for Hygiene Work

ದೆಹಲಿ, ಮೇ.4: ಕೊಯಮತ್ತೂರಿನ ಸಾಮಾಜಿಕ ಉದ್ಯಮಿ ಹಾಗೂ ‘ಪ್ಯಾಡ್‌ಮ್ಯಾನ್’ ಖ್ಯಾತಿಯ ಅರುಣಾಚಲಂ ಮುರುಗಾನಂದಂ ಅವರು 2026ರ ನೋಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ನಾಮನಿರ್ದೇಶನದ ಸುದ್ದಿ ಕೇಳಿ ತಮಗೆ ಮೊದಲು ನಂಬಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ನೋಬೆಲ್ ಪ್ರಶಸ್ತಿಗೆ ನಾವಾಗಿಯೇ ಹೆಸರು ಸಲ್ಲಿಸಲು ಅಥವಾ ಕುಟುಂಬದವರು ಶಿಫಾರಸು ಮಾಡಲು ಸಾಧ್ಯವಿಲ್ಲ, ಇದನ್ನು ಮೂರನೇ ವ್ಯಕ್ತಿಗಳೇ ಮಾಡಬೇಕು ಎಂದು ಹೇಳಿದ್ದಾರೆ. ಪಾಂಡಿಚೇರಿಯ ಅರವಿಂದ್ ಕಣ್ಣಿನ ಆಸ್ಪತ್ರೆಯ ಡೀನ್ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ…

Read More

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ,…

Read More

West Bengal Election Results: ಮಧ್ಯಾಹ್ನದೊಳಗೆ ದೀದಿ ಟಾಟಾ ಬೈ-ಬೈ ಹೇಳ್ತಾರೆ; ಚುನಾವಣೆಗೂ ಮೊದಲೇ ಭವಿಷ್ಯ ನುಡಿದಿದ್ದರು ಅಮಿತ್ ಶಾ – Kannada News | By 1 o clock Didi Tata Bye Bye Amit Shah Prediction Old Video on West Bengal Election results goes Viral

ನವದೆಹಲಿ, ಮೇ 4: ಪಶ್ಚಿಮ ಬಂಗಾಳದ (West Bengal Assembly Elections Results) ಮಹಾರಾಣಿಯಾಗಿ ಮೆರೆದ ಮಮತಾ ಬ್ಯಾನರ್ಜಿ (Mamata Banerjee) ಅವರ ಯುಗಾಂತ್ಯವಾಗಿದೆ. 15 ವರ್ಷಗಳಿಂದ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಈ ಬಾರಿ ತೀವ್ರ ಮುಖಭಂಗ ಅನುಭವಿಸಿದೆ. ಬದಲಾವಣೆ ಬಯಸಿರುವ ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಸರಿ ಧ್ವಜ ಹಾರಿಸಲೇಬೇಕೆಂದು ಹಠ ತೊಟ್ಟಿದ್ದ ಬಿಜೆಪಿ ಈ ಬಾರಿ ಭಾರೀ ಪ್ರಚಾರ ಕಾರ್ಯ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕೇಂದ್ರ…

Read More

ಟಿವಿಕೆ ಭರವಸೆಗಳು: ಗೃಹಿಣಿಯರಿಗೆ 2,500 ರೂ, ವೃದ್ಧರಿಗೆ 3,000 ರೂ, ಉಚಿತ ಗ್ಯಾಸ್, ವಧುವಿಗೆ ಚಿನ್ನ ಇತ್ಯಾದಿ ಕೊಡುಗೆ – Kannada News | Vijay’s TVK Tamilaga Vettri Kazhagam Tamil Nadu election manifesto, poll promises highlights

ಟಿವಿಕೆ ಗೆಲುವನ್ನು ಸಂಭ್ರಮಿಸುತ್ತಿರುವ ಮಹಿಳೆImage Credit source: PTI ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸಿನಿಮಾ ಸ್ಟಾರ್ ದಳಪತಿ ವಿಜಯ್ (Thalapathi Vijay) ನೇತೃತ್ವದ ಟಿವಿಕೆ ಪಕ್ಷ ಅಚ್ಚರಿ ಗೆಲುವು ದಾಖಲಿಸಿದೆ. ಇತ್ತೀಚೆಗಷ್ಟೇ ಆರಂಭಗೊಂಡ ಟಿವಿಕೆ ಪಕ್ಷ ಈ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಯುವಕರಿಗೆ ಹೊಸ ಆಡಳಿತದ ಭರವಸೆ ಮೂಡಿಸಿದ ಜೊತೆಗೆ ಪ್ರಣಾಳಿಕೆ ಮೂಲಕ ಹಲವು ಭರವಸೆಗಳನ್ನೂ ಟಿವಿಕೆ ನೀಡಿತ್ತು. ಮನೆಯ ಯಜಮಾನ್ತಿಗೆ ಮಾಸಿಕ 2,500 ರೂ…

Read More

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ – Kannada News | West Bengal Election Result 2026: How BJP Defeated Mamata Banerjee; Analysis of Muslim and Women Vote Shifts

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ. Source link

Read More

Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader

ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ: ಜೂನ್…

Read More

Tamil Nadu Election Result: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ, ಕಾಂಗ್ರೆಸ್​​​ಗೆ ಬಿಗ್ ಆಫರ್ – Kannada News | Tamil Nadu Assembly Election Result: TVK Invites Congress For Alliance In Tamil Nadu As Party Falls Short Of Majority

ಚೆನ್ನೈ, (ಮೇ 04): ತಮಿಳುನಾಡು  ರಾಜಕೀಯದಲ್ಲಿ (Tamilnadu Politics) ದಳಪತಿ ಸಂಚಲನ ಮೂಡಿಸಿದ್ದಾರೆ. ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನು ಮುರಿದ ದಳಪತಿ ವಿಜಯ್ (Vijay) ನೇತೃತ್ವದ ತಮಿಳಗಾ ವೆಟ್ರಿ ಕಲಗಂ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ (Election) ಭರ್ಜರಿ ಸಾಧನೆ ಮಾಡಿದೆ. ಇದರೊಂದಗೆ ತಮಿಳುನಾಡಿನಲ್ಲಿ ದಶಕಗಳಿಂದ ನಡೆಯುತ್ತಿರುವ ದ್ರಾವಿಡ ರಾಜಕೀಯದ ಲೆಕ್ಕಾಚಾರವನ್ನೇ ವಿಜಯ್ ಉಲ್ಟಾ ಮಾಡಿದ್ದಾರೆ. ಇನ್ನು ಟಿವಿಕೆ ಗಮನಾರ್ಹ ಸಾಧನೆ ಬಗ್ಗೆ ವಿಜಯ್ ತಂದೆ ಎಸ್​.ಎ.ಚಂದ್ರಶೇಖರ್ ಫುಲ್ ಖುಷ್ ಆಗಿದ್ದು, ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ…

Read More